ಒಟ್ಟು 385 ಕಡೆಗಳಲ್ಲಿ , 76 ದಾಸರು , 341 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಾಸನೆನಿಸು ಜೀಯಾ ಶ್ರೀ ವರದೇಶ ವಿಠಲರಾಯಾ ದಾಸರಥಿಯೆ ಯನ್ನಾಶೆ ತಳೆದು ನಿರ್ದೋಷನೆನಿಸಿ ಬಹು ಮೀಸಲು ಮನವಿತ್ತು ಪ ವರದೇಂದ್ರರ ಆಜ್ಞಾದಿಂದಲಿ ಗುರುವರ ಮಹಾಪ್ರಾಜ್ಞಾ ವರದೇಶ ವಿಠಲೆಂಬ ಗುರುತಿನ ಮುದ್ರಿಕೆ ಪರಮ ಪಾಮರಗೆ ತ್ವರ ಕರುಣಿಸಿದಕೆ 1 ಶೂನ್ಯ ನಾನು ಸರ್ವದ ಹೀನ ವಿಷಯ - ರತನು ವಾನರನ ತರದಿ ಮಾಣಿಕೆಂಬ ತೆರ ಹೀನನೆನಿಸದಲೆ ಪೋಣಿಸು ಸನ್ಮತಿ2 ಏಸು ಪೇಳಲಿನ್ನಾ ಶ್ರೀ ವರ- ದೇಶ ವಿಠಲ ನಿನ್ನಾ ದಾಸರ ವಚನಕೆ ದೋಷ ಬಾರದಂತೆ ಲೇಸು ಭಕುತಿ ಜ್ಞಾನ ದಾಸ್ಯವಿತ್ತು ತವ 3
--------------
ವರದೇಶವಿಠಲ
ದಿಮ್ಮಾಕ ನಿನಗ್ಯಾಕೆ ಎಲೆ ಎಲೆ ಜಮ್ಮಾಸಿ ಜರ ತಿಳಿಕೊ ಪ ದಿಮ್ಮಾಕ ನಿನಗ್ಯಾಕೆ ಛೀಮಾರಿ ನಿನ್ನ ದಿಮ್ಮಾಕ ಮುರಿಲಿಕ್ಕೆ ಗುಮ್ಮವ್ವ ನಿಂತಾಳೆ ಅ.ಪ ಸೊಕ್ಕಿನಿಂದ ನಡೆವಿ ಮುಂದಿಂದು ಲೆಕ್ಕಕ್ಕೆ ತರದಿರುವಿ ಫಕ್ಕನೊಯ್ದೆಮನವರು ಉಕ್ಕಿನ ಪ್ರತಿಮೆಯ ತೆಕ್ಕೆಯೊಳಾನಿಸಿ ನಿನ್ನ ಒಕ್ಕಲಿಕ್ಕುವರವ್ವ 1 ತಾರತಿಗಡಿ ತುಸು ವಿ ಚಾರಮಾಡಿನೋಡು ಘೋರ ಯಮದೂತರು ಹಾರೆ ಕಾಸಿ ಯೋನಿ ದ್ವಾರದಿ ಸೇರಿಸಿ ಘೋರ ಬಡಿವರವ್ವ 2 ಪಾಮರಳಾದಲ್ಲೆ ಮುಂದಿನ ಕ್ಷೇಮವ ಮರೆತಲ್ಲೇ ಭೂಮಿಸುಖಕೆ ಮೆಚ್ಚಿ ತಾಮಸದಲಿ ಬಿದ್ದು ಸ್ವಾಮಿ ಶ್ರೀರಾಮನ ಪ್ರೇಮಕ್ಕೆ ದೂರಾದಿ 3
--------------
ರಾಮದಾಸರು
ದೀನ ಪರಿವಾರ ಪಾಹಿ ದಾತಾರ ಮಾಂ ದೇಹಿಮೇ ಚರಣಸೇವಾಂ ಪ ಬೃಂದಾವನಶೈಲವಾಸ ಪರಮಕೃಪಾಕರ ಪಾಪನಾಶ ಸುಧೀಂದ್ರ ವಿಭೂಷ ಹೃದಯೋಲ್ಲಾಸ ಅ.ಪ ಸರ್ವೇಶ ವೆಂಕಟೇಶ ಗುರುವರ ಸುಖಧಾಮ ಸುರರಂಜನ ಅಖಿಲ ಬೃಂದಾಳಿಭೀಮ ಶ್ರೀರಾಮ ಪರಿಭಾಷಾ ಮನಿವೇಶ ಜಿತಸೋಮ 1 ಪ್ರಾಣೇಶಸುತ ಭಜನ ಸತತ ವಿರಾಜ ಪರಿ ಪೂರ್ಣದರ್ಶನ ನಿರಂತರದಾಯಕ ಮುನಿಪುಂಗವ ಹರಿಣ ಸಾರಾಂಗ 2 ಮಂಗಳ ಚರಣ ತುರಂಗ ಗಂಗಾಮೃತ ಪೂರ್ಣತೀರ್ಥ [ತುಂಗಾತೀರ ನಿವಾಸಿನೀಂ] ಮಾಂಗಿರಿರಂಗ ಸಂಪ್ರೀತ ಮಾಂ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ದೃಢತರದ ಭಕುತಿಯಾ ತವದ್ವಾರದಿಂದಲಿ ದೊರಕುವುದು ನಿಶ್ಚಯಾ ತರಿ ಎನ್ನ ಮಾಯಾ ಪರಿಹರಿಸೋ ಈ ಭವತಾಪವ ಪರಿಹರಿಸದಲೇ ಭರದಿ ಬಂದೆನು ಪರಮ ಪಾವನ ಸತ್ಯಜ್ಞಾನ ಶ್ರೀ ಗುರುವರನೇ ತವ ಚರಣಕೆರಗುವೆ ಪ ಕರ್ಮಗಳೊಂದು ನಾನರಿಯೇ ನಿನ್ನಯ ಪಾಲಿಗೆ ಇಂದು ಚರಣಗಳ ದ್ವಂದ್ವಕೆ ಮಾಡದಲೆ ಸಲಹೋ ಆನಂದತೀರ್ಥರ ಪೀಠಪೂಜನೇ 1 ಭ್ರಷ್ಟನಾದವ ನಾನು ಸೃಷ್ಟಿಸಿದ ಹರಿಯನು ಮರೆತು ದಿನಗಳೆದನು ಪಡ್ಡೆರಧೊಟ್ಟಿ(ಪಡ್ಡೆರದು+ಹೊಟ್ಟಿ) ಹೊರಕೊಂಡೆನು ಪಾಪಿಷ್ಟ ನಾನು ಇಷ್ಟದಾಯಕ ಮುಟ್ಟಿ ಭಜಿಸುವೆ ಸುದೃಷ್ಟಿಯಲಿ ನೋಡಿ ಎನ್ನಯ ಕೆಟ್ಟ ಮನವನು ಕಳೆದು ಜ್ಞಾನದ ದೃಷ್ಟಿ ಕೊಡುವುದು ಶ್ರೇಷ್ಠ ಮಹಿಮನೆ 2 ದಾನಧರ್ಮಗಳನ್ನು ಈ ಕರಗಳಿಂದಲಿ ಮಾಡಲಿಲ್ಲವೊ ನಾನು ಹನುಮೇಶವಿಠಲನ ಸ್ಮರಣೆ ಎಂಬುವುದನ್ನು ಧನವನಿತೆಸುತರಾ ಮೋಹದೊಳು ಮರೆತೆನು ಗುರುವರನೆ ನೀನು ಜ್ಞಾನವಿಲ್ಲದ ದೀನದಾಸನ ಹೀನಗುಣ ಎಣಿಸದಲೆ ಪಾಲಿಸೊ ದೀನಜನ ಮಂದಾರನಿಲಯನೆ ಕಾಮಿತಾರ್ಥವನೀವ ದಾತನೇ 3
--------------
ಹನುಮೇಶವಿಠಲ
ದೇವರ ದಿವ್ಯಗುಣಗಳ ಪೊಗಳುವದು ಜೀವರಿಗಿದುವೆ ಪ್ರಯೋಜನವು ಪ ಭಾವದಿ ತೋರುವ ವಿಷಯಗಳೆಲ್ಲವು ಭಕ್ತಿಯೊಳರಿತು ಸಮರ್ಪಿಸುತಂ ಅ.ಪ ನಡೆವದು ನುಡಿವದು ಕೊಡುವದು ಬಿಡುವದು ಒಡೆಯ ಹರಿಯ ಪ್ರೇರಣೆಯೆಂದು ದೃಢಮನದಲಿ ತಿಳಿದಾವಾಗಲು ತಾ ಮೃಢ ಸಖನಡಿ ಧ್ಯಾನಕೆ ತಂದು 1 ಅರಿಯದೆ ಪಾಮರರೊರಲುವ ಬೋಧೆಯ ತರತರದಿ ತಿರಸ್ಕರಿಸುತಲೀ ಭವ ಭಯಗಳನೀಡಾಡುತಲಿ 2 ಜನನ ಮರಣ ದೂರ ಪರಾತ್ಪರ ಪಾ- ವನ ಚರಿತ್ರ ಭಾಸುರ ಗಾತ್ರಾ ವನಜನಯನ ಗುರುರಾಮವಿಠಲ ಎಂ- ದನುದಿನ ಭಜಿಸುವನೆ ಪವಿತ್ರ 3
--------------
ಗುರುರಾಮವಿಠಲ
ದೇಶಾಧಿಪತಿ ನರಹರಿಯೆ ನಿನ್ನಯ ಪಾದದಾಸರ ದಾಸನೆಂದೆನಿಸಬೇಕೆನ್ನ ಪ ರಜತಮೋಗುಣ ಪ್ರವರ್ತಕ ಮೂಲಾಂತರದಿಂಯಜಮಾನತನದಹಂಕಾರವನು ಒಲ್ಲೆಭುಜ ಚಕ್ರ ಧರಿಸಿ ಸಾತ್ತ್ವಿಕರ ಪಾದಾಂಬುಜರಜ ಭಜಕರ ಭಜಕನೆಂದೆನಿಸೆನ್ನ1 ಸಿರಿಗಂಧ ಕುಂಕುಮ ಸಾದು ಜವ್ವಾಜಿ ಕ-ಸ್ತೂರಿ ತಿಲಕವನಿಡುವುದ ನಾನೊಲ್ಲೆಸಿರಿ ಊಧ್ರ್ವಪುಂಡ್ರ ದ್ವಾದಶನಾಮವಿಡುವವರಪರಿಚಾರಕರ ಪರಿಚಾರಕನೆನಿಸೆನ್ನ 2 ಸ್ವಾದು ಕಲ್ಪಿತವಾದ ಭಕ್ಷ್ಯ ಭೋಜ್ಯಗಳನುಆದರದ ಅಮೃತಾನ್ನ ಉಣುವುದನೊಲ್ಲೆಬೋಧೆಯನು ಹೇಳುವ ಕೇಳುವ ಹರಿದಾಸರಪಾದತೀರ್ಥ ಪ್ರಸಾದವನುಣಿಸೆನ್ನ3 ಕಾಲ ಕರ್ಮದೊಳುಪೇಕ್ಷೆಯ ಮಾಡಿ ಹರಿಭಕುತಿಶೀಲರಹಿತ ಬ್ರಾಹ್ಮಣನಾಗಲೊಲ್ಲೆಕೀಲನರಿತು ಹರಿಭಕುತಿಯನು ಮಾಳ್ಪ ಪರಚಾಂ-ಡಾಲನ ಮನೆ ಬಾಗಿಲ ಕಾಯಿಸೆನ್ನ 4 ಕ್ರೂರಶಾಸ್ತ್ರವನೋದಿ ಕುರಿ ಕೋಣವನೆ ಕಡಿದುಘೋರ ನರಕದಿ ಬೀಳುವುದನು ನಾನೊಲ್ಲೆವಾರಿಜಾಕ್ಷ ನಿನ್ನ ಚರಣ ಸೇವಕರ ಮನೆಯದ್ವಾರಪಾಲಕನೆಂದೆನಿಸೆನ್ನ 5 ಪಟ್ಟೆಪಟ್ಟಾವಳಿ ದಿವ್ಯ ದುಕೂಲ ಮಿಂ-ಚಿಟ್ಟ ವಸ್ತ್ರ ಉಡುವುದನೊಲ್ಲೆನೆಟ್ಟನೆ ಕಾವಿ ಕಾಷಾಯಾಂಬರಗಳನುಉಟ್ಟವರ ಬಂಟನೆಂದೆನಿಸೆನ್ನ 6 ಅರ್ಥ ವಿಷಯಂಗಳ ಫಲಾಪೇಕ್ಷೆಯಿಂ ಪುಣ್ಯತೀರ್ಥಯಾತ್ರೆಯ ಮಾಡಲೊಲ್ಲೆದೈತ್ಯ ಮರ್ದನ ಬಾಡದಾದಿಕೇಶವ ನಿನ್ನಕೀರ್ತನಗೈವರ ಸ್ತುತಿಕನೆನಿಸೆನ್ನ 7
--------------
ಕನಕದಾಸ
ದೊರಕಿಸಬಹುದು ತಂದೆ ತಾಯಿಗಳ ಜನ್ಮ ಜನ್ಮದಲಿದೊರಕಿಸಲಾಗದು ಸದ್ಗುರುನಾಥನ ಆವ ಜನ್ಮದಲಿ ಪ ತಂದೆ ತಾಯ್ಗಳ ಋಣವ ಜನ್ಮಾಂತರದಲಿ ತೀರಿಸಬಹುದುಗುರು ಋಣವು ತೀರುವುದದೆಂತೋ 1 ತಂದೆತಾಯಿ ಋಣಗಳಿಂದ ಜಾತನಾಗುವೆಮುಂದೆ ಗುರು ಋಣಗಳಿಂದ ಅಜಾತನಾಗುವೆ 2 ಗುರುವಿನ ಋಣವನು ತೀರಿಸಲಾಗದುಗುರು ಚಿದಾನಂದನ ಕೃಪೆಯಿಂ ತೀರುವುದು 3
--------------
ಚಿದಾನಂದ ಅವಧೂತರು
ದ್ರೋಹಿಯೋ ನಾನಿನಗೆ ದ್ರೋಹಿಯೋ ಪ ಪಾಹಿ ಬ್ರಹ್ಮಜವಂಶ ಪಾಪ ಬ್ರಾಹ್ಮಣ ಪ್ರಿಯ ಅ.ಪ ಸ್ವಪ್ನ ಜಾಗ್ರತೆ ನಿದ್ರೆ ಮೋಕ್ಷಾವಸ್ಥೆಯಲ್ಲಿ ತೈಜಸ ವಿಶ್ವ ಅಪ್ಪತುರೀಯನಾಗಿ ದಾತ ನಿನ್ನನ್ನು ಬಿಟ್ಟು ಬೆಪ್ಪನಂದದಿ ನರರ ಯೆಂಜಲ ಬಯಸುವೆ 1 ಬಿಂಬ ಮೂರ್ತಿಯು ನೀನು ಪ್ರತಿ ಬಿಂಬನಾನಿನಗೆ ತುಂಬಿ ಅಂತರ್ಬಹಿ ಮೆರೆವ ವಿಷ್ಣುವೆ ನಿನ್ನ ನಂಬಿದೆ ದೃಢದಿಂದ ಬರಿದೆ ಹಂಬಲಿಸುವೆ ಬೆಂಬಲನಾಗಿದ್ದು ತುಂಬೊ ನಿನ್ನಯ ಭಕ್ತಿ 2 ಸತಿ ಸುತ ಪಿತರಲ್ಲಿ ತಿಳಿಯದೆ ನಿನ್ನಿರವ ಹಿತರವರು ಬರಿದೆಂಬ ಭ್ರಾಂತಿಯ ನೀಗದೆ ಖತಿಯ ಪಡುವೆನು ಭವದಿ ಕುಮತಿಯನಗೆಮುಂದೆ ಗತಿಯೇನು ಜಗದೀಶ ಮರೆತು ನಿನ್ನನು ದೇವ 3 ಕಸವ ರಸವೆಂದು ಬಯಸುವೆ ವಿಷಯವ ರಸವ ವಿಷವೆಂದು ತೊರೆದು ಜೀವಿಸುತಿರ್ಪೆ ಅಸಮವಿಷಣವಿಷ್ಣು ಆತ್ಮಾಖ್ಯಾತನ ನಿನ್ನ ತುಸಸಹ ನೆನೆಯದೆ ಹುಸಿಯ ದಾಸನಾಗಿ 4 ನನ್ನದಲ್ಲದ ಒಡವೆ ನನ್ನದೆಂದು ತಿಳಿವೆ ನಿನ್ನ ಸ್ವಾಮಿತ್ವವ ಮರದು ಮೆರೆಯುತಿರ್ಪೆ ನನ್ನದೇ ಸ್ವಾತಂತ್ರವೆಂದು ತಿಳಿದು ಭವದಿ ಹುಣ್ಣು ತಿಂದೆನು ದೊರೆಯೆ ಕೊಡದೆ ನಿನ್ನದುನಿನಗೆ 5 ವೇದ ವೋದುವ ನಾನು ನಾನೆನೀನೆಂಬುವೆ ಭೇದವ ತಿಳಿಯದೆ ಭಜಿಸುವೆ ಕುವಿದ್ಯೆ ಬಾದರಾಯಣಗುದರ ಭೇದವ ನುಡಿಯುವೆ ಮಧ್ವಮಂದಿರ ಕೃಷ್ಣ ನೀನಿಲ್ಲ ವೆನ್ನುತ6 ಪೂರ್ಣ ಗುಣದವ ನಿನ್ನ ನಿರ್ಗುಣನೆಂಬುವೆನು ಪೂರ್ಣರಲ್ಲದ ಸುರರ ಸಾಟಿ ನಿನಗೆಂಬುವೆನು ಪೂರ್ಣಬೋಧರ ಕರುಣ ಕೊಡಿಸದ್ದಿದರೆಯಿನ್ನು ಜ್ಞಾನ ಮಾರ್ಗವ ಕಾಣೆ ಸ್ವಾಮಿ ಜಗಜ್ಜನಕ 7 ಜನನ ಮರಣ ರಹಿತ ಜನಿಸುವೆ ನಮ್ಮೊಡನೆ ಕ್ಷಣ ಬಿಟ್ಟಗಲದಲೆಮಗೆ ಉಂಡುಣಿಸುತಿಪ್ಪೆ ಅನಿಮಿತ್ತ ಬಂಧುವೆ ಮರೆತು ನಿಮ್ಮುಪಕಾರ ದನುಜರ ಸೇವಿಸುತ ಹಾಳು ಮಾಡಿದೆ ಬಾಳು 8 ನಿರಯ ಭಾಜನ ನಾದೆ ದೂರವಾಯಿತು ಮುಕುತಿ ದಾರಿಕಾಯುವರ್ಯಾರೊ ಧೀರ ಜಯತೀರ್ಥ ವಾಯು ಅಂತರದಿರ್ಪ ನೀರಜಾಕ್ಷನಮ್ಮ ಶ್ರೀ ಕೃಷ್ಣವಿಠಲನೆ 9
--------------
ಕೃಷ್ಣವಿಠಲದಾಸರು
ದ್ರೌಪದಿ ಸುಳಾದಿ ಪುರಂದರ ಗುರು ನಾಗೇಶಾವೇಶ ಗುರು ಶ್ರೀಪಾದ ರಾಯ ಗುರು ಯೋಗಿ ಟೀಕಾರ್ಯ ಗುರು ಶ್ರೀಮದಾಚಾರ್ಯ ಗುರು ನಾಗಶÀಯನ ನೀನು ಸಕಲ ಜಗದ್ಗುರು ಈತ ಗುರು ಸಂತತಿಗೆ ವಂದೀಸಿ ತಾತ್ವಿಕರ ಜಾಗು ಮಾಡದೆ ನಮಿಪೆ ಜ್ಞಾನ ಪ್ರದಾತರೆಂದು ಆಗಮ ಪೌರಾಣ ಶೃತಿ ತತಿಗಳೊಳೆಲ್ಲ ಆಗುವಳಭಿಮಾನಿ ಭಾರತೀದೇವಿ ಎಂದು ಈಗ ಈ ಮಹಿಮಳ ಚರಿತೆ ಬುದ್ಧಿಗೆ ದೇವಿ ತಾಗಿಸಿದಂದದಿ ಸಾಗಲಿ ನುಡಿವುದು ನಾಗರಾಜನ ಜನನಿ ಸ್ವಪ್ನದಿ ಸುಳಿದಳು ಕೂಗಿದೆ ಅಯೋನಿಜೆ ದುಃಖರಹಿತಳೆಂದು ಭಾಗವತರ ಕಾಯ್ವ ಭಾಗ್ಯ ಸಂಪನ್ನದೇವಿ ಯೋಗಿ ಜನರಿಗೆಲ್ಲ ಗುರುಪತ್ನಿ ಎಂದೆನಿಪೆ ಆಗಾಗ ಅವತರಿಸಿ ಅನಿಲನ ಕಾರ್ಯಕ್ಕೆ ಆಗುವೆ ಸಹಕಾರಿ ಅಸುರರ ಸಂಹಾರಿ ಶ್ರೀ ಗುರೋರ್ಗುರು ಹರಿ ಗೋಪಾಲಕೃಷ್ಣವಿಠಲ ಭಾಗವತರ ಕಾಯ್ವ ನಿನ್ನದ್ವಾರದಿ ಸ್ಮರಿಸೇ 1 ಕೃತಿಸುತೆ ಕೊಂಡದಿ ಉದಿಸಿ ಸುತೆ ಎನಿಸಿದೆ ದ್ರುಪದನಿಗೆ ಚ್ಯುತರಹಿತ ಯೌವನಯುತೆ ಐವರಿಗರಸಿಯು ಆದೆ ಪ್ರತಿಯಿಲ್ಲದ ಪತಿವ್ರತೆ ಸುರತತಿ ಜನನಿಯು ನೀನೌ ಮಾ- ರುತ ಸುತನಲ್ಲದೆ ನಿನಗಿನ್ನಿತರರ ಸಂಗವು ಉಂಟೆ ಸುತರಂದದಿ ನಾಲ್ವರ ತಿಳಿದತಿಶಯದಲಿ ಅವರವರಾ ಸತಿಯರ ನಿನ್ನೊಳಗಡಿಗಿಸಿ ರತಿ ಕಾಲದಲೊಲಿದಿತ್ತೆ ಮತಿವಂತರಿಗಲ್ಲದೆ ಪ್ರತಿ ಜನರಿಗೆ ಮೋಹಕವು ಕ್ಷಿತಿಯೊಳು ನೀನವತರಿಸೀ ಕ್ಷಿತಿಗೇ ತೋರಿದ ಲೀಲೆ ಅತಿ ಸೌಭಾಗ್ಯದಿ ಮೆರೆದೆ ಕ್ಷಿತಿಪತಿಸೂಯಾಗದಲಿ ಖತಿಗೊಳ್ಳಲು ಖಳ ಜನರು ಸ್ಥಿತ ಸಾಮ್ರಾಜ್ಯವ ಕಂಡು ಕ್ಷಿತಿಭಾರವನಿಳುಹಲು ಶ್ರೀಪತಿ ಪತಿಮನವರಿಯುತ ಕುರು ಪತಿಸಭೆಯಲಿ ಭ್ರಮಿಸುತ ಜಾರುತ ಸರಸಿಯೋಳ್ ಬೀಳುತಿರೆ ಪತಿ ಶ್ರೀಪತಿ ಮೊಗವೀಕ್ಷಿಸಿ ಅತಿ ಹಾಸ್ಯದಿ ನೀ ನಗಲು ಖತಿಗೊಳ್ಳಲು ಕುರುಪತಿ ಕಲಕಿತು ದ್ವೇಷದ ಭಾವಗಳು ಪತಿ ಭಾರದ ಹರಣಕೆ ಮೂಲಾಯಿತು ನಿನ್ನಯ ನಗೆ ಕಿಡಿ ತಾ ಕಾತುರಕ್ಕಸ ತರುಗಳಿಗೆ ಸೋಕಿತು ಕಾಮನ ಬಿಸಿಯು ಮತಿಹೀನರು ನಿನ್ನನು ಬಯಸುತ ಬರೆ ದ್ವೇಷಾಗ್ನಿ ಜ್ವಲಿ ಸುತ ವಾಯು ಸಹಾಯದಲಿ ಹುತಗೈಸಿದೆ ಖಳತತಿಯ ಪತಿಯಂತರ್ಗತ ಕೃಷ್ಣನ ನುತಿಸುತ ಭಕ್ತ್ಯಾಜ್ಯಾಹುತಿ ಕ್ಷಿತಿ ಭಾರವನಿಳುಹಿಸಿದೆ ಹಿತತಂಗಿಯೆ ಗೋಪಾಲಕೃಷ್ಣವಿಠ್ಠಲಗೇ ನೀ ಪ್ರತಿಯುಂಟೆ ನಿನಗೆ ಈ ಕ್ಷಿತಿಯೊಳು ನಾಕಾಣೆ 2 ಮಡಿಯದೆ ದುರ್ಯೊüೀಧನನು ಮುಡಿಯನು ಕಟ್ಟೆನು ಎಂಬ ದೃಢ ಸಂಕಲ್ಪಳೆ ಪುಷ್ಪ ಮುಡಿಯಲಪೇಕ್ಷಿಸಿದೆ ನೀ ಒಡೆಯುವರುಂಟೇ ಇದರ ಒಡಲಿನ ಮರ್ಮವ ದೇವಿ ಒಡೆಯ ವೃಕೋದರ ನಿನ್ನ ನುಡಿ ಕೇಳುತ ವನ ಪೊಕ್ಕು ಮಡುಹುತ ಯಕ್ಷರ ತಂದು ಮುಡಿಸಿದ ಸೌಂಗಂಧಿಕವ ಪೊಡವಿಯೊಳ್ಹರಡಿತು ವಾರ್ತೆ ಒಡಲರಿಯದೆ ಜನತತಿಗೆ ಪಿಡಿಯುತ ಕರದಲಿ ಪುಷ್ಪ ಒಡೆಯನ ಪ್ರೇಮದಿ ನೋಡಿ ಮುಡಿಸಿದೆ ಸಿರಿಹರಿ ಮುಡಿಗೆ ಕಡು ಭಕ್ತಿಯೊಳಂತರದಿ ಬಿಡುಬಿಡು ಬಿಂಕವ ಲೀಲೆ ಕೊಡು ಕೊಡು ಭಕ್ತಿಯ ಬಾಲೆ ಪಡಿಸಾನಂದವ ಶೀಲೆ ನುಡಿಸಡಿಗಡಿಗ್ಹರಿ ಲೀಲೆ ಒಡಗೂಡತ ಪತಿಯೊಡನೆ ನಡೆಸಿದ ಚರಿತೆಗಳೆಲ್ಲ ಕಡು ಮೋಹವು ರಜ ತಮರಿಗೆ ಕೊಡುವುದು ಸುಖ ಸುಜನರಿಗೆ ಪೊಡವಿಪತಿ ಗೋಪಾಲಕೃಷ್ಣವಿಠಲ ನಿನ್ನ ನಡೆನುಡಿ ಮೆಚ್ಚುತ ನಡೆಸಿದ ಭಾರತ ನಾಟಕವÀ 3 ಆನಂದ ಜ್ಞಾನಪೂರ್ಣೆ ಆಗಾಗ ಒದಗಿದ ಹೀನ ದುಃಖದ ಸÉೂೀಂಕು ಉಂಟೆ ನಿನಗೆ ಇನ್ನು ಪ್ರಾಣಪತಿಗಳೈವರೆದುರಲಿ ಖಳ ನಿನ್ನ ಮಾನ ಹಾನಿಯ ಗೈಸೆ ಜಗವೆ ತಲ್ಲಣಿಸಿತು ಮಾನಾಭಿಮಾನ ಬಿಟ್ಟು ಶ್ರೀನಿಧಿ ಗತಿ ಎನ್ನೆ ಅಕ್ಷಯ ವಸನವು ಪ್ರಾಣಪಂಚಕ ಹರಿಯಾಧೀನವೆಂಬುವ ತತ್ವ ಪ್ರಾಣಕ್ಕೆ ಪ್ರಾಣಬಿಂಬ ಸ್ವಾಮಿ ಎಂಬುವ ತತ್ವ ಮಾನಾಭಿಮಾನ ತೊರೆದು ಪ್ರಾಣೇಂದ್ರಿಯವ ಜರಿದು ಮಾನಸದಲಿ ಹರಿಯ ಸ್ಮರಿಸಿದರಕ್ಷಯ ಸ್ಥಾನಪ್ರಾಪ್ತಿಯು ಎಂಬ ತತ್ವರಹಸ್ಯಗ- ಳಾನು ಸೂಚಿಸೆ ನಿನ್ನ ಕೃತಿಯಲ್ಲದಿನ್ನಿಲ್ಲ ದಾನವರೆಲ್ಲ ನಿನ್ನ ಕಾಮಿಸಿ ನೋಡಲವರು ಏನೆಂಬೆ ಮಾಡಿದಂಥ ಅಲ್ಪಸ್ವಲ್ಪದ ಪುಣ್ಯ ಕ್ಷೀಣಗೈಸುತ ಸೆಳೆದು ಹೀನ ಪಾಪದಿ ನೂಕಿ ಹಾನಿಗೈಸಿದೆ ಪವಮಾನಸುತನಿಂದಲಿ ಮಾನುನಿಮಣಿ ಸರ್ವಕ್ಷೇಮ ಪಾಲಿಪ ಭಕ್ತ- ರಾನನದಲಿ ನೋಡೆ ಜ್ಞಾನಾನಂದವನಿತ್ತು ಹೀನ ನರಕದಿ ಬಿದ್ದ ಭ್ರಾತೃಸಹಿತದಿ ಕುರುಪ ಕಾಣದೆ ನಿನ್ನ ಮಹಿಮೆ ಜ್ಞಾನರಹಿತನಾಗಿ ಜಾಣೆ ಶ್ರೀ ಗೋಪಾಲಕೃಷ್ಣವಿಠ್ಠಲನ ನಿಜ ಜ್ಞಾನ ಪಾಲಿಸಿ ಕಾಯೆ ಭೀಮಸೇನನ ಜಾಯೆ 4 ಮುಕ್ತರ ಬಂಧುವೆ ನೀನು ಭಕ್ತಿಯದಾತಳÉ ನೀನು ತತ್ವ ತಿಳಿಸುವೆ ನೀನು ಚಿತ್ತದೆ ನೆಲಸುವೆ ನೀನು ಹತ್ತದು ದುಃಖವು ನಿನಗೆ ಸುತ್ತದು ಶೋಕವು ನಿನಗೆ ಮುಕ್ತಾರ್ಥವ ಕೊಡುವವಳೆ ಮತ್ತೆ ಅಯೋನಿಜಹಳೆ ಮುತ್ತು ಮಾಣಿಕ್ಯವು ನವರತ್ನದ ಆಭರಣಗಳ ಕಂಚುಕ ನೆತ್ತಿಲಿ ಮಕುಟವನಿಟ್ಟು ಚಿತ್ತದೊಲ್ಲಭನಂಕದಲಿ ಹತ್ತಿ ಸಿಂಹಾಸನದಲಿರೆ ಸುತ್ತಲು ಸೌಪಣ್ರ್ಯಾದಿ ಸುರಸ್ತ್ರೀಯರು ಓಲೈಸೆ ಚಿತ್ತದಿ ಸಿರಿಹರಿಯನು ಭಕ್ತಿಲಿ ಭಜಿಸುತ ಮುಕ್ತಾ- ಮುಕ್ತರ ಕೃಪಪಾಂಗದಲಿ ಸುತ್ತಲೀಕ್ಷಿಸಿ ಕಾವೆ ಭಕ್ತಿಲಿ ದ್ರೌಪದಿ ಎಂದು ಎತ್ತಿದ ಸ್ವರದಲಿ ಕೂಗೆ ಚಿತ್ತದೊಲ್ಲಭನೊಡನೆ ಚಿತ್ತೈಸೆನ್ನಯ ಮನಕೆ ಹತ್ತಿಕಾಡುವ ಎನ್ನ ದುಷ್ಕøತ ಕರ್ಮಗಳೆಲ್ಲ ಕತ್ತರಿಸುತ ಕಾಯಮ್ಮ ಸತ್ಯಾಪ್ರಿಯನನು ತೋರೆ ಆರ್ತಜನರ ಪಾಲ ಗೋಪಾಲಕೃಷ್ಣವಿಠ್ಠಲನ್ನ ಅರ್ಥಿಯಿಂದಲಿ ಎನ್ನ ಚಿತ್ತದಿ ತೋರೆಲೆ ಜನನಿ 5 ಜತೆ ತತ್ವದೇವತೆಗಳ ಜನನಿ ತತ್ವಾರ್ಥ ತಿಳಿಸೇ ಆಪ್ತ ಗೋಪಾಲವಿಠ್ಠಲನೆಂದೆನಿಸೇ
--------------
ಅಂಬಾಬಾಯಿ
ಧರ್ಮೇಂದ್ರಿಯಕ್ಕೆ ದಟ್ಟಡಿಯನಿಡಲೊಲ್ಲೆ ದುಷ್ಕರ್ಮೇಂದ್ರಿಯಕ್ಕೆ ಕಾಲ್ಗೆರಗುತ್ತಲಿಹೆ ಮರುಳೆ ಪ ಪುಸ್ತಕವ ಬಿಚ್ಚಿ ಪೌರಾಣ ಶಾಸ್ತ್ರಂಗಳಿಂವಿಸ್ತರಿಸಿ ಹರಿಯ ಕಲ್ಯಾಣಗುಣ ಕಥೆಯನ್ನುಸ್ವಸ್ಥದಿಂ ಕುಳ್ಳಿರ್ದು ಕೇಳೆಂಬ ಠಾವಿನಲಿಮಸ್ತಕಕೆ ವ್ಯಥೆಯೆಂದು ಮನೆಯತ್ತ ನೀ ನಡೆವೆಹಸ್ತದಿಂ ಹಣ ಭತ್ತ ಹಚ್ಚಡಂಗಳ ಕೊಟ್ಟುಕುಸ್ತರಿಸಿ ಬಿನಗು ಚಾರಿತ್ರ್ಯವಂ ಲಾಲಿಸುತದುಸ್ತರದ ಲೆತ್ತ ಚದುರಂಗ ಪಗಡೆಯನು ಉದಯಾಸ್ತದವರೆಗಾಡುತ ಮೇಲೇಳದಿಹೆ ಮರುಳೆ 1 ಸುರಭಿ ಸೇವಂತಿ ಮಲ್ಲಿಗೆ ಮೊಲ್ಲೆ ಬಕುಳ ಪಾದರಿ ಚಂಪಕಾ ಕಂಜ ಕಣಿಗಲು ಶ್ರೀ ತುಳಸಿಪರಿಮಳದ ಪಚ್ಚೆತೆನೆ ಹರಿಪಾದಕರ್ಪಿಸುತೆನಿರುಮಾಲ್ಯ ಪರಿಮಳವನಾಘ್ರಾಣಿಸೆನೆ ಒಲ್ಲೆಬಿರಿದ ಕೆಂಜಾಜಿ ಪುಷ್ಪಂಗಳಂ ವನಿತೆಯರಸಿರಿ ಮುಡಿಗೆ ಮುಡಿಸಿ ಕುಂತಳ ಸೌರಭವ ಕಂಡುಹರುಷದಿಂ ರೋಮ ಪುಳಕಿತನಾಗುತಡಿಗಡಿಗೆಪರಮ ಸಂತೋಷಮಂ ನೀ ಪಡೆಯುತಿಹೆ ಮರುಳೆ 2 ಭಾಗವತ ನೃತ್ಯವಂ ನೋಡುತತಿಶಯದ ಹರಿದಿನವ್ರತದಲ್ಲಿ ಜಾಗರವ ಮಾಡದಲೆ ನಿದ್ರೆಗೈವೆಕೃತಕ ಪಣ್ಯಾಂಗನೆಯ ಚತುರ ನೃತ್ಯಕೆ ಮನೋ-ರಥ ಸಿದ್ಧಗೊಳಿಸಿ ಈಕ್ಷಿಪೆನೆಂದು ಕುಜನ ಸಂ-ಮತವೆರಸಿ ಬೆಳತನಕ ಕುಳ್ಳಿರುತ ನಿದ್ರಾ ವ-ರ್ಜಿತನಾಗಿ ಪರಮ ಸಂತಸ ಪಡೆಯುತಿಹೆ ಮರುಳೆ 3 ಗಂಧ ಶಾಲ್ಯಾನ್ನ ನವಘೃತ ತೋಯ ಪಳಿದ್ಯ ನಲ-ವಿಂದ ಪರಮಾನ್ನ ಮಹಶಾಕ ಸೀಕರಣೆಯನುಒಂದೆರಡು ಪರುಠವಿಸಿ ದ್ವಾದಶಿ ದಿನದಂದು ಮು-ಕುಂದಾರ್ಪಣವ ಮಾಡಿ ಮನೆಯೊಳಗೆ ಉಣ್ಣದಿಹೆಬಂದಾವನಾದೊಡಂ ಕರೆಯೆ ದೇಹದ ಪುಣ್ಯವೆಂದವರ ಮನೆಗಳಿಗೆ ಹೋಗಿ ನೀ ಕುಳ್ಳಿರ್ದುಚಂದದಿಂ ಬಣ್ಣಿಸುತ ಮಿಂಚುಕೂಳುಗಳನ್ನುತಿಂದೊಡಲ ಪೊರೆದು ಕಾಲವ ಕಳೆಯುತಿಹೆ ಮರುಳೆ4 ಸಿರಿ ವೈಕುಂಠ ಪದವಿಯನು ಪಡೆ ಮರುಳೆ 5
--------------
ಕನಕದಾಸ
ಧೇನಿಸೂ ಶ್ರೀಹರಿಯ ಮಹಿಮೆ ನೀ ಧೇನಿಸೊ ಪ ಧೇನಿಸು ಶ್ರೀಹರಿಯ ಲೀಲಾ ಸೃಷ್ಟಿ ಮಾನಸದಲಿ ನೆನೆಯೋ ಪರಿಯಾ ||ಆಹಾ|| ತಾನೆ ತನ್ನಯ ಲೀಲಾಜಾಲತನದಿ ತನ್ನ ಆನಂದದೊಳಿಪ್ಪ ಶ್ರೀ ಮುಕುಂದ ನನ್ನ ಅ.ಪ ಮೂಲ ನಾರಾಯಣ ದೇವ ತಾನು ಆಲದೆಲೆಯೊಳು ಲೀಲಾ ತೋರಿ ಬಾಲತನದಿ ತಾ ನಲಿವಾ ಅನೇಕ ಕಾಲ ಪರ್ಯಂತರದಿ ಸರ್ವ ||ಆಹಾ|| ಎಲ್ಲ ಜಗವ ತನ್ನ ಒಡಲೊಳಡಗಿಸಿ ಲೋಲನಾಗಿ ಬಾಲಕ್ರೀಡೆಯಾಡುವಪರಿಯಾ 1 ಇಂತು ಶಯನಗೈದ ಹರಿಯ ಅ- ನಂತ ವೇದಗಳಿಂದ ತ್ವರಿಯಾ ದುರ್ಗ ಸಂತಸದಿಂದ ಸಂಸ್ತುತಿಯ ಮಾಡೆ ಕಂತುಪಿತÀನು ತಾನೆಚ್ಚರಿಯ ||ಆಹಾ|| ಅಂತೆ ತÉೂೀರ್ದ ವಾಸುದೇವಾದಿ ಚತುರಾ- ಸಿರಿ ರೂಪಗಳ ಸಹಿತ 2 ಸಕಲ ರೂಪಗಳ ತನ್ನೊಳೈಕ್ಯಾ ಮಾಡಿ ಸಕಲ ಲಕುಮಿ ರೂಪಗಳಲಿ ಐಕ್ಯಾ ಇಟ್ಟು ಸಕಲ ಮರುತರ್ಗೆ ತನುಮುಖ್ಯಾ ಇತ್ತು ಸಕಲ ಕ್ರೀಡೆಯೊಳು ಸೌಖ್ಯಾ ||ಆಹಾ|| ಲಕುಮಿಯ ಸ್ತುತಿಗೆ ಒಲಿದು ತಾನೇತ- ನ್ನ ಕಡೆಗಣ್ಣಿಂದ ಪಂಚಜೀವರ ನೋಡಿದಾ 3 ಶುದ್ಧಸೃಷ್ಟಿಯೆಂಬುದೊಂದು ಪರಾ- ಧೀನ ವಿಶೇಷವು ಎಂದು ಮತ್ತೆ ಒಂದು ಮಿಶ್ರ ಸೃಷ್ಟಿಯೆಂದು-ಒಂದು ಕೇವಲ ಸೃಷ್ಟಿಯೆಂದೂ ||ಆಹಾ|| ತಮಾಂಧಕಾರವ ಪ್ರಾಶಿಸಿದ ವಿವರಾ 4 ತನ್ನೊಳೈಕ್ಯವಾಗಿದ್ದ ಮಹ ತಾನೆ ಪ್ರಕಟನಾಗಿ ನಿಂದ ಆಗ ಉನ್ನಂತ ಚತುರ ನಾಮದಿಂದ ||ಆಹಾ|| ಜನುಮ ಸ್ಥಿತಿ ಮೃತಿ ಮೋಕ್ಷದನಾಗಿರ್ಪ ಅನಿರುದ್ಧಾದಿ ಚತುರಮೂರ್ತಿಗಳ ವ್ಯಾಪಾರ5 ಪುರುಷನಾಮಕ ಪರಮಾತ್ಮ ತಾ ತರವರಿತು ಘನಮಾಡ್ದ ಮಹಿಮಾ ಸೃಷ್ಟಿ ತರತರ ಮಾಡ್ದ ಮಾಹಾತ್ಮ ||ಆಹಾ|| ಪ್ರಾಕೃತ ವೈಕೃತ ದೇವತೆ ಸುಮಾನ ಈ ಮೂರುವಿಧ ಸೃಷ್ಟಿಯಾನೆಸಗಿದ ಪರಿಯ ನೀ 6 ಮಹದಹಂಕಾರ ತತ್ವ ಪಂಚ ಮಹಭೂತಗಳು ಮನಸ್ತತ್ವ ಇನ್ನು ಮಹದಶೇಂದ್ರಯಗಳ ತತ್ವ ಮತ್ತೆ ಮಹತಾಮಿಶ್ರಾಂಧ ತಾಮಸ ತತ್ವ ||ಆಹಾ|| ಇಹುದು ಈ ಪರಿಯಲ್ಲಿ ಪ್ರಾಕೃತ ಸೃಷ್ಟಿಯು ಮುಹುರ್ಮುಹು ಇದನೆ ಆಲಿಸಿ ನಿನ್ನೊಳು 7 ವೈಕೃತದೋಳು ಸಕಲ ವೃಕ್ಷಾ ತಿರ್ಯಕ್ ಸಕಲ ಪ್ರಾಣಿಗಳ್ ಮನುಜ ಕಕ್ಷಾ ಎಲ್ಲ ವಿಕೃತ ಸೃಷ್ಟಿಯ ಮಾಡ್ದ ಅಧ್ಯಕ್ಷಾ ಇನ್ನು ಸುರಸಮಾನ ಸೃಷ್ಟಿಯ ಅಪೇಕ್ಷಾ ||ಆಹಾ|| ಸಕಲ ಸುರಾಸುರಪ್ಸರ ಗಂಧರ್ವರು ಪಿತೃಗಳು ಯಕ್ಷರಾಕ್ಷಸರ ಪರಿಯವರಾ 8 ಪುನ್ನಾಮ ವಿರಂಚಿ ಬ್ರಹ್ಮಾನು ಅಂದು ಘನ್ನವಾಸುದೇವ ತಾನು ಸೃಷ್ಟಿ ಯನ್ನ ಪ್ರಕಟಮಾಡಿದನು ಮುಂದೆ ಅನಿಲದೇವನು ಸಂಕರುಷಣನ ||ಆಹಾ|| ಅನಿಲನೆ ಸೂತ್ರನಾಮಕವಾಯುವಾಗಿಹ ಭಾವೀ ಬ್ರಹ್ಮನೀತನೆ ನಿತ್ಯಗುರುವೆಂದು 9 ಪ್ರದ್ಯುಮ್ನನಿಂದ ಸರಸ್ವತಿ ಇನ್ನು ಶ್ರಧ್ದಾನಾಮಕಳು ಭಾರತಿ ಸೃಷ್ಟಿ- ಯಾದ ವಿವರ ತಿಳಿಯೊ ಪೂರ್ತೀ ಇದೇ ಪ್ರದ್ಯುಮ್ನನ ಸೃಷ್ಟಿಯ ಕೀರ್ತಿ ||ಆಹಾ|| ಶ್ರದ್ಧಾದೇವಿಯೊಳು ಸೂತ್ರನ ವೀರ್ಯದಿಂ- ದುದ್ಭವಿಸಿದ ಜೀವ ಕಾಲನಾಮಕನು 10 ಈರ ಬ್ರಹ್ಮರಸೃಷ್ಟಿ ಚರಿತ್ರೆ ಚಿತ್ರ ಗಾತ್ರ ತರವೆಲ್ಲ ವಿಚಿತ್ರ ||ಆಹಾ|| ವಿರಂಚಿ ಬ್ರಹ್ಮ ಸರಸ್ವತಿಯಿಂದ ವೈ- ಕಾರಿಕ ರುದ್ರ ಶೇಷಗರುಡರ ನೀ 11 ಸೂತ್ರ ಶ್ರದ್ಧಾ ದೇವೇರಿಂದ ಪವಿ ತ್ರತೈಜಸ ರುದ್ರ ಬಂದಾ ಪ- ಪುತ್ರರಾಗಿಹರತಿ ಚೆಂದಾ ||ಆಹಾ|| ಪುತ್ರನಾದ ತಾಮಸ ರುದ್ರ ಶೇಷಗೆ12 ಪ್ರದ್ಯುಮ್ನ ಸೂಕ್ಷಶರೀರ ಕೊಟ್ಟು ಉದ್ಧಾರ ಮಾಡಿದ ಜೀವರ ಅನಿ ರುದ್ಧನ ಕೈಲಿ ಕೂಡಲವರಾ ಅನಿ ರುಧ್ದನು ಮಾಡ್ದ ವಿಸ್ತಾರಾ ||ಆಹಾ|| ತದಪೇಕ್ಷ ಮೂಲಪ್ರಕೃತಿಯಿಂದ ಗುಣತ್ರಿ- ವಿಧ ಕೊಂಡು ಮಹತ್ತತ್ವ ನಿರ್ಮಿಸಿದಾ 13 ಮಹತ್ತತ್ವದಿಂದಹಂಕಾರ ತತÀ್ತ ್ವ ಮಹದಹಂಕಾರವು ಮೂರುತರ ಇದ- ರೊಳು ಬ್ರಹ್ಮವೈಕಾರಿಕ ಶರೀರವಾಗಿ ಪರಿ ಈ ರೂಪ ವಿವರಾ ||ಆಹಾ|| ಅಹುದು ತೈಜಸದಿಂದ ಶೇಷನ ದೇಹವು ತಾಮಸದಿಂದಲಿ ರುದ್ರ ತಾನಾದನು 14 ಎರಡನೆಯ ಸಾರಿ ಪ್ರದ್ಯುಮ್ನ ಅರ್ಧ ನಾರೀ ರೂಪನಾಗಿ ಇನ್ನು ಎಡದಿ ಸ್ರೀರೂಪ ಜೀವರುಗಳನ್ನು ಬಲದಿ ಪುರುಷ ಜೀವರೆಲ್ಲರನ್ನು ||ಆಹಾ|| ಧರಿಸಿ ಅವರ ದೇಹಗಳನಿತ್ತು ಅ ನಿರುದ್ಧನ ಕೈಯೊಳಿತ್ತ ಪರಿಯನ್ನು 15 ಅದರಂತೆ ಅನಿರುಧ್ದದೇವ ತಾ ನದಕಿಂತ ಸ್ಥೂಲದೇಹವ ಮೂಲ ಪ್ರಕೃತಿಯಿಂದ ಗುಣವಾ ಕೊಂಡು ಅದುಭುತ ಮಹತ್ತತ್ವತೋರ್ವ ||ಆಹಾ|| ಅದುಭುತ ಮಹತ್ತತ್ವದಿಂದಹಂಕಾರ ಉದಿಸಿದ ಪರಿಯನು ಮುದದಿಂದಲಿ ಅರಿತು 16 ಪರಮ ಕರುಣೆಯಲೀ ರುದ್ರನು ಅರ್ಧ ನಾರೀರೂಪ ತಾಳಿ ಇನ್ನೂ ಎಡದಿ ಸುರರಸ್ತ್ರೀಗಳನ್ನು ಬಲದೀ ಸುರಪುರಷರನ್ನೂ ||ಆಹಾ|| ಭರದಿ ಪುಟ್ಟಿಸಿ ಪ್ರದ್ಯುಮ್ನನ ಕೈಲಿತ್ತ ಪರಿಪರಿ ಸೃಷ್ಟಿಯ ಕ್ರಮವರಿತು ನೀನೀಗ 17 ಅನಿರುಧ್ದ ದೇವನು ಜೀವರ ಸ್ಥೂಲ ತನುವ ಕೊಟ್ಟು ಪಾಲಿಪ ತದಭಿ- ಮಾನಿ ಶ್ರೀ ಭೂ ದುರ್ಗಾ ಮಾಡಿ ತಾನೆಲ್ಲರ ಸತತ ಪೊರೆವಾ ||ಆಹಾ|| ಮಹತ್ತತ್ತಾ ್ವಭಿಮಾನಿಗಳೆನಿಸಿದ ದೇವನ18 ಅಹಂಕಾರ ತತ್ತಾ ್ವಭಿಮಾನಿ ಅದಕೆ ಅಹಿಗರುಡರು ಅಭಿಮಾನಿ ಇನ್ನು ಅನಿರುದ್ಧಾದಿ ರೂಪತ್ರಯವು ಇದಕೆ ಇನ್ನು ನಿಯಾಮಕನು ಎನ್ನು ||ಆಹಾ|| ಮಹತ್ತತ್ವಾ ನಿಯಾಮಕ ವಾಸುದೇವನಿಂದ- ನವರತ ಈ ಸೂಕ್ಷ್ಮಪ್ರಮೇಯ ಗ್ರಹಿಸಿ ನೀನು 19 ಮನಸ್ತತ್ವಾಭಿಮಾನಿ ಸುರರಾ ಸೃಷ್ಟಿ ಯನ್ನೆ ವೈಕಾರಿಕದಿಂದಲವರಾ ಮಾಡಿ ಘನ್ನ ತೈಜಸದಿಂದಲಿಂದ್ರಿಯ ತತ್ಪವೆ- ಲ್ಲನೆಸಗಿದಂಥ ವಿವರಾ ||ಆಹಾ|| ಉನ್ನಂತ ತನ್ಮಾತ್ರ ಭೂತಪಂಚಕಗಳ ತಾಮಸದಿಂದಲಿ ಉದಿಸಿದ ಪರಿಯನು 20 ಯುಕ್ತಸ್ಥಾನಾದಿಗಳನ್ನು ಕೊಡೆ ಉತ್ತಮೋತ್ತಮನನ್ನು ತಾವು ಸುತ್ತಿ ಸ್ತುತಿಸಲು ಇನ್ನೂ ||ಆಹಾ|| ತತ್ವದೇವತೆಗಳ ಭಕ್ತಿಗೆ ಒಲಿದು ತತ್ವರೆಲ್ಲರ ತೋರೆ ರೂಪದಿ ಧರಿಸಿಟ್ಟನು21 ರಜಸುವರ್ಣಾತ್ಮಕವಾದ ಘನ ನಿಜ ಐವತ್ತು ಕೋಟಿ ಗಾವುದ ಉಳ್ಳ ಅಜಾಂಡವನ್ನು ತಾ ತೋರ್ದ ತನ್ನ ನಿಜಪತ್ನಿ ಉದರದಿ ಮಾಡ್ದ ||ಆಹಾ|| ಸೃಜಿಸಿ ಬ್ರಹ್ಮಾಂಡದಿ ತತ್ವಗಳೊಡಗೂಡಿ ನಿಜವಾಗಿ ತಾನೊಳ ಪೊಕ್ಕ ವಿರಾಟನ್ನ 22 ಪಾತಾಳಾದಿ ಸಪ್ತಲೋಕ ಕಡೆ ಪರಿಯಂತ ರೂಪ ತಾ ತಾಳಿದ ಆದ್ಯಂತ ಇಂತು ನಿರತನು ಸಚ್ಚಿದಾನಂದ ||ಆಹಾ|| ಇಂತು ವಿರಾಟ ತನ್ನಂತರದೊಳು ತತ್ವರೆಲ್ಲರ ತತ್‍ಸ್ಥಳದೊಳಿಟ್ಟು ಪೊರೆದನ್ನ23 ಸಕಲ ಉದಕ ಶುಷ್ಕದಿಂದ ಇರಲು ತಕ್ಕ ಮುಕ್ತಾಮುಕ್ತರ ಭೇದದಿಂದ ತಕ್ಕ ಸ್ಥಾನವೆ ಕಲ್ಪಿಸಿದ ಚೆಂದಾ ||ಆಹಾ|| ಅಕಳಂಕ ಪುನ್ನಾಮಕನು ಧಾಮತ್ರಯ ಮೊದಲಾದ ನರಕ ಪಂಚಕಗಳ ಮಾಡಿದ 24 ಉದಕ ಶೋಷಣೆಯನ್ನು ಮಾಡಿ ಇನ್ನುಮ- ಹದಹಂಕಾರವ ಕೂಡಿ ಭೂತ ಪಂಚಕವ ಮಿಳನ ಮಾಡಿ ಆಗ ಹದಿನಾಲ್ಕೂದಳಾತ್ಮಕ ಪದ್ಮತೋರಿ ||ಆಹಾ|| ಅದುಭುತ ಪದುಮದಿ ಉದಿಸಿದ ಬ್ರಹ್ಮನು ಚತುರ ನಾಲ್ಕುದಿಕ್ಕು ಮುದದಿಂದ ನೋಡಿದ 25 ಪದುಮದಲಿ ಚತುರಾಸ್ಯನಾಗಿ ಅದು ಭುತÀ ಮಹಿಮೆ ನೋಡುತ ತಾನೆ ಮುದದಿಂದ ಮೊಗತಿರುಗಿಸುತಾ ಅದ ಅದುಭುತ ಶಬ್ದಕೇಳುತ್ತಾ ||ಆಹಾ|| ತದಪೇಕ್ಷ ತಪವನಾಚರಿಸಿ ನಾಳದಿ ಬಂದು ಪದುಮನಾಭನು ತಾನು ಮುದದಿಂದ ನೋಡಿದ 26 ಪರಮಪುರುಷ ಉಕ್ತಿ ಲಾಲಿಸಿ ಮೆಚ್ಚಿ ವರವ ಕೊಟ್ಟು ಪಾಲಿಸಿ ಸೃಷ್ಟಿ ನಿರುತ ಮಾಡಲು ತಾ ಬೆಸಸೀ ತಾನು ಅವನಂತರದೊಳು ನೆಲೆಸೀ ||ಆಹಾ|| ಹೊರಗೂ ಒಳಗೂ ನಿಂತು ಸೃಷ್ಟಿಲೀಲೆಯ ತೋರ್ವ ಉರಗಾದ್ರಿವಾಸವಿಠಲ ವೇಂಕಟೇಶನ್ನ 27
--------------
ಉರಗಾದ್ರಿವಾಸವಿಠಲದಾಸರು
ಧ್ಯಾನಿಸು ಮನವೆ ನೀ ಧ್ಯಾನಿಸು ಪ. ಧ್ಯಾನಿಸು ಮನವೆ ಶ್ರೀಹರಿಯ ಪಾದಧ್ಯಾನನಿರುತ ಈ ಪರಿಯ ಆಹಾಪ್ರಾಣಾಪಾನವ್ಯಾನೋದಾನಸಮಾನರ್ಗೆ ಪ್ರಾಣನಾಗಿಪ್ಪ ಮುಖ್ಯ ಪ್ರಾಣಾಂತರ್ಗತನ ನೀ ಅ.ಪ. ಪರಮಾಣು ಪ್ರದೇಶದಲ್ಲಿ ಪ್ರಾಣರಾಶಿ ಅನಂತುಂಟಲ್ಲಿ ಹೀಗೆಒರಲುತಿದೆ ವೇದದಲ್ಲಿ ದೃಷ್ಟಾಂತವ ಪೇಳ್ವೆ ಕೇಳು ದೃಢದಲ್ಲಿ ಆಹಾಪರಮಸೂಕ್ಷ್ಮ ವಟಮರನಾಗಿ ಅದರಲ್ಲಿಪರಿಮಿತಿಲ್ಲದರ ಫಲದಬೀಜವನರಿತು ನೀ 1 ನಿರುತ ಸುವರ್ಣಬ್ರಹ್ಮಾಂಡದಲ್ಲಿ ಹರಿ ಪೂರ್ಣವ್ಯಾಪ್ತ ಅಖಂಡನಾಗಿಮಿರುವುತಲಿಪ್ಪ ಮಾರ್ತಾಂಡ ತೇಜೋಕಿರಣದಂತಿರುವ ಪ್ರಚಂಡ ಆಹಾಹೊರಗೆ ಒಳಗೆ ಸರ್ವತ್ತರದಲ್ಲಿ ಹರಿಮಯ-ವರಿತು ನಿನಗೆ ಎಲ್ಲಿ ದೊರಕಿದ ಸ್ಥಳದಿಂದ 2 ಸಲಿಲಭೂಗಿರಿಲತೆ ನಾನಾವೃಕ್ಷಫಲಖಗಮೃಗ ಕಾನನತೃಣ ಪೊಳೆವಪಾವಕತರುಪವನ ಮುಕ್ತಸ್ಥಳ ಅವ್ಯಾಕೃತ ಗಗನ ಆಹಾಒಳಗೆ ಹೊರಗೆ ಹರಿ ಚಲಿಸದೆ ಇರುತಿಪ್ಪಸ್ಥಳದ ನಿಲುವಿನಂತೆ ತಿಳಿದು ನೀ ಅದರಂತೆ 3 ತೈಜಸ ನಿತ್ಯ 4 ಸಪ್ತಾವರಣ ಶರೀರದಿ ದಶಸಪ್ತದ್ವಿಸಹಸ್ರ ನಾಡಿಯಲಿ ದಶ-ಸಪ್ತದ್ವಿಸಹಸ್ರ ರೂಪದಲ್ಲಿ ಹರಿವ್ಯಾಪ್ತ ನಿರ್ಲಿಪ್ತಸ್ಥಾನದಲ್ಲಿ ಆಹಾಆಪ್ತನಂತಿರುವ ಸುಷುಪ್ತಿ ಸ್ವಪ್ನ ಜಾಗ್ರದಿತಪ್ತಕಾಂಚನದಂತೆ ದೀಪ್ತಿಸುತಿಪ್ಪನ 5 ಜೀವರಿಂದತ್ಯಂತ ಭೇದ ಪ್ರತಿಜೀವಾಂತರದಲಿ ಪ್ರಮೋದನಾಗಿಆವಾಗ ಚರಿಸುವ ವೇದ ಪೇಳುವುದು ಸತ್ಯಂಭಿದಾ ಆಹಾಈ ವೇದಾರ್ಥವು ಸಾವಧಾನದಿ ತಿಳಿದುಶ್ರೀವಾಯುಮತವ ಕೋವಿದರೊಡಗೂಡಿ6 ಶ್ರೀ ಕೇಶವನೆ ಮೂಲಾಸಿ ಶ್ರುತಿ ಏಕೋನಾರಾಯಣಾಸಿ ನಾನಾಲೋಕ ಸೃಷ್ಟಿಪದ ತಾನಾಸಿ ತಾರಕಮಂತ್ರ ಉಪದೇಶಿ ಆಹಾನೀ ಕೇಳು ನಿಗಮಾರ್ಥ ನೀಕರಿಸು ಸಂಶಯಏಕಮೇವಾದ್ವಿತೀಯನೆಂಬೊ ಕೃಷ್ಣನಂಘ್ರಿಯ 7 ಗಂಗಾಜನಕ ಸಿರಿರಂಗ ಉತ್ತುಂಗಗುಣಗಣತರಂಗ ಕಾ-ಳಿಂಗಸರ್ಪನ ಮದಭಂಗ ಭುಜಂಗಶಯನ ಅಮಲಾಂಗ ಆಹಾಪಿಂಗಳ ಇಡಾ ಮಂಗಳ ಸುಷುಮ್ನ ಸುಸಂಗಮ ಮಧ್ಯದಿ ತಿಮಿಂಗಿಲಂತಿಪ್ಪನ 8 ಮೂರ್ತಿ ಬಲು ಅದುಭುತದಿವ್ಯಕೀರ್ತಿಅದೆ ಪದುಮಜಾಂಡದಿ ಪರಿಪೂರ್ತಿ ದೊರೆವುದಕೆ ಬೇಕು ವಾಯುಸಾರ್ಥಿ ಆಹಾಅದೆ ಬಿಂಬಮೂರ್ತಿ ಜೀವದಾಕಾರವಾಗಿ ತಾಪದುಮಜಾಂಡದಲಿಪ್ಪ ಸದಮಲಾತ್ಮಕನ 9 ಧರೆಯನಳೆದ ದಿವ್ಯಚರಣ ಅದು ಮೆರವುತಿಪ್ಪುದು ಕೋಟಿ ಅರುಣನಂತೆಪರಿಪೂರ್ಣಭರಿತವು ಕಿರಣ ತನ್ನ ಸ್ಮರಿಸುವರಿಗೆ ಮಾಳ್ಪ ಕರುಣ ಆಹಾತರುಣಿಯಂದದಿ ನಖದಿ ಸುರನದಿಯ ಪೆತ್ತ ನೂ-ಪುರ ಗೆಜ್ಜೆಪೆಂಡೆಯ ಎರಡೈದು ಬೆರಳನು 10 ಹರಡು ಜಂಘೆಯುಗಜಘನ ಸುರುಚಿರ ರೇಖಧ್ವಜವಜ್ರ ನಾನಾ ದಿವ್ಯ ವರರೇಖೆಯಿಂದಲೊಪ್ಪುವನ ಜಾನು ಪರಮಶೋಭಿಸುವ ಸುಂದರನ ಆಹಾಉರುಟುಕದಳಿಸ್ತಂಭದಂತಿರುವೊ ಊರುದ್ವಯಸರಿಗಾಣೆ ಹರಿ ಉಟ್ಟ ವರಪೀತಾಂಬರವನು 11 ಕುಕ್ಷಿ ನಿಜ ಸುಖಪೂರ್ಣನ 12 ವೈಜಯಂತಿ ಮಂದಾರವನ್ನು ಮುದದಿಂದ ಧರಿಸಿದ ಧೀರ ಆಹಾಪದುಮಜಭವರಿಂದ ತ್ರಿದಶರು ತಿಳಿದಿನ್ನುಸದಾಕಾಲ ಧೇನಿಪರು ಹೃದಯಾಂಬರದಲ್ಲಿ 13 ಕಂಬುಕಂಧರ ಅತಿಗುರುತರ ಭುಜವು ಚತುರ ಆಹಾಮರಿ ಆನೆ ಸೊಂಡಿಲಂತಿರುವ ಬಾಹುಕೀರ್ತಿ ಕೇತಕಿಬೆರಳು ನಕ್ಷತ್ರದರಸಿನಂದದಿ ನಖ14 ಸಿರಿ ಭುಜಕೀರುತಿ15 ಕಂಬು ಅಗಣಿತ ಮಹಿಮನ16 ಮುಗುಳು ಮಲ್ಲಿಗೆ ಮೊಗ್ಗೆ ದಂತಪಂಕ್ತಿ ಜಗವಮೋಹಿಸುವ ಸುಶಾಂತ ಜಿಹ್ವೆನಿಗಮಕ್ಕೆ ವೇದ್ಯವಾದಂಥ ಬಹು ಬಗೆಯಲ್ಲಿ ಮೆರೆವ ಸುಪಂಥ ಆಹಾನಗುವ ವದನ ಝಗಝಗಿಸುವ ಕುಂಡಲಕರ್ಣಮಿಗೆ ಕೂರ್ಮಕದಪು ಸಂಪಿಗೆನಾಸಿಕವನ್ನು 17 ಕರುಣಶಾಂತಶುಭನೋಟ ಕಂಗಳೆರಡರ ಚೆಲ್ವಿಕೆ ಮಾಟ ಇನ್ನುಅರವಿಂದದಳವೆನ್ನು ದಿಟ ಇನ್ನು ತರಣಿಚಂದ್ರಮರ ಕೂಟ ಆಹಾಶರಣಜನರ ಮನೋಹರ್ಷವಾರ್ಧಿಗೆ ಚಂದ್ರದುರುಳ ದಿತಿಜತಿಮಿರಕ್ಕೆ ಭಾಸ್ಕರನ 18 ಚಾಪ ತಲೆಯ ತಗ್ಗಿಸುವಂಥಾ ರಚನಾಫಾಲದಲಿಟ್ಟ ತಿಲಕ ಸುಂದರ ಲೋಕ ಕಳವಳಗೊಳಿಸುವ ಸುಗುಣ ಆಹಾನಳಿನವದನದಲ್ಲಿ ಅಳಿಗಳಂತೊಪ್ಪುವಸುಳಿಗುರುಳಿನ ಮ್ಯಾಲೆ ಒಲೆವ ಅರಳೆಲೆಯನ್ನು 19 ನಿತ್ಯ ನಖ ಲಲಾಟ ಪರಿಯಂತ್ರನೋಟದಿಂದಲಿ ಈಶಕೋಟಿ ಸಹಿತನ 20 ನಿತ್ಯ 21
--------------
ಗೋಪಾಲದಾಸರು
ಧ್ಯಾನಿಸು ಶ್ರೀಹರಿಯ ಧ್ಯಾನಿಸು ಪ ಧ್ಯಾನಿಸು ಮನವೆ ಶ್ರೀ ಹರಿಯ ಪಾದ ಧ್ಯಾನವಂತರ್ಯಾಮಿ ಹರಿಯ, ಆಹ ಪ್ರಾಣಾಪಾನ ವ್ಯಾನೋದಾನ ಸಮಾನರ್ಗೆ ಪ್ರಾಣನಾಗಿಹ ಮುಖ್ಯ ಪ್ರಾಣಾಂತರ್ಗತನ ಅ.ಪ ಪರಮಾಣು ಪ್ರದೇಶದಲ್ಲಿ, ಪ್ರಾಣಿ ರಾಸಿ ಅನಂತವುಂಟಲ್ಲಿ ಹೀಗೆ ವರಲುತಿದೆ ವೇದದಲ್ಲಿ ದೃಷ್ಟಾಂ ತರವ ಪೇಳುವೆ ದೃಢದಲ್ಲಿ-ಆಹ ಪರಮ ಸೂಕ್ಷ್ಮ ವಟತರು ಫಲದಲ್ಲಿಹ ನಿತ್ಯ 1 ನಿರುತ ಸುವರಣ ಬ್ರಹ್ಮಾಂಡದಲ್ಲಿ ಪರಿಪೂರ್ಣವಾಗಿ ಅಖಂಡವಾಗಿ ಮೆರೆವುತಲಿಪ್ಪ ಮಾರ್ತಾಂಡ ದಿವ್ಯ ಕಿರಣದಂತಿರುವ ಪ್ರಚಂಡ-ಆಹ ಹೊರಗೆ ಒಳಗೆ ಹರಿ ಚರಿಸುವ ಪರಿಯ ನೀ ನರಿತು ಆವಾಗಲು ದೊರಕಿದ ಸ್ಥಳದಲ್ಲಿ 2 ಸಲಿಲ ಭೂಗಿರಿ ಲತೆ ನಾನಾ-ವೃಕ್ಷ ಮೃಗ ಪಕ್ಷಿ ಕಾನನ-ಮುಕ್ತ ಸ್ಥಳಗಳವ್ಯಾಕೃತ ಗಗನ, ತೃಣ- ಪಾವಕ ತರು ಪವನ-ಆಹ ಒಳಗೆ ಹೊರಗೆ ಎಲ್ಲ ಸ್ಥಳದಲ್ಲಿ ಹರಿಮಯ ನೆಲೆಯ ನೀ ನಲವಿಂದ ತಿಳಿದು ಆವಾಗಲು3 ವಿಶ್ವ ಮತ್ಸ್ಯಾದಿ, ತೇಜೊ ರಾಶಿ ಹಯಗ್ರೀವಾದಿ, ಜೀವ ರಾಶಿಯೊಳಿದ್ದು ಅನಾದಿ ಸರ್ವ ದೇಶ ಭೇದಿಸುವಂಥ ವೇದಿ-ಆಹ ಮೂರ್ತಿ ಶ್ರೀಶ ರಂಗನೆಂದು ನಿತ್ಯ 4 ಸಪ್ತಾವರಣ ದೇಹದಲ್ಲಿ, ದಶ ಸಪ್ತ ದ್ವಿಸಹಸ್ರ ನಾಡಿಯಲಿ, ದಶ ಸಪ್ತ ದ್ವಿಸಹಸ್ರ ರೂಪದಲಿ ಹರಿ ವ್ಯಾಪ್ತ ನಿರ್ಲಿಪ್ತ ಸ್ಥಾನದಲಿ-ಆಹ ಆಪ್ತನಂತಿಪ್ಪ ಸುಷುಪ್ತಿ ಜಾಗರದೊಳು ತಪ್ತ ಕಾಂಚನದಂತೆ ದೀಪ್ತಿಸುತಿಪ್ಪನ್ನ5 ಜೀವರಿಂದತ್ಯಂತ ಭೇದ, ಪ್ರತಿ ಜೀವಾಂತರದಲ್ಲಿ ಮೋದನಾಗಿ ಯಾವಾಗಲಿರುತಿಹ ವೇದ-ದಲ್ಲಿ ಪೇಳುವುದು ಸತ್ಯಂಭಿದಾ-ಆಹ ಈ ವಿಧ ವೇದಾರ್ಥ ಸಾವಧಾನದಿ ತಿಳಿದು ಶ್ರೀ ವಾಯುಮತದ ಸುಕೋವಿದರೊಡಗೂಡಿ 6 ಶ್ರೀಕೇಶವನೆ ಮೂಲರಾಶಿ, ಶ್ರುತಿ- ಏಕೋ ನಾರಾಯಣ ಆಸೀತ್ ನಾನಾ ಲೋಕ ಸೃಷ್ಟಿಪ ಧಾತನಾಸೀತ್, ಜಗ ದೇಕತಾರಕ ಉಪದೇಶೀ-ಆಹ ನೀ ಕೇಳಿ ನಿಗಮಾರ್ಥ ನೀಕರಿಸು ಸಂಶಯ ಏಕಮೇವ ದ್ವಿತಿಯ ಶ್ರೀಕೃಷ್ಣನಂಘ್ರಿಯ 7 ಗಂಗಾಜನಕ ಸಿರಿರಂಗ ಉ- ತ್ತುಂಗ ಗುಣಾಂತರಂಗ, ಕಾ ಳಿಂಗ ಸರ್ಪನ ಮದಭಂಗ, ಭು ಜಂಗಶಯನ ಅಮಲಾಂಗ-ಆಹ ಮಂಗಳ ಇಡಾ ಪಿಂಗಳ ಸುಷುಮ್ನ ಸಂಗಡ ಮಧ್ಯದಿ ತಿಂಗಳಂತಿಪ್ಪನ್ನ 8 ಹೃದಯಸ್ಥಾನದಲಿದ್ದ ಮೂರ್ತಿ, ಬಲು ಅದುಭುತಾತನ ದಿವ್ಯಕೀರ್ತಿ, ಅದು ಪದುಮುಜಾಂಡದಿ ಪರಿಪೂರ್ತಿ ತರು ವುದಕೆ ಬೇಕು ವಾಯು ಸಾರಥಿ-ಅಹಾ ಅದು ಬಿಂಬಮೂರ್ತಿ ಜೀವದಾಕಾರಾವಾಗಿದ್ದ ಪದುಮಕೋಶದಲ್ಲಿ ಸದಮಲಾತ್ಮಕನನ್ನು 9 ಧರೆಯನಳೆದ ದಿವ್ಯ ಚರಣ, ಅದು ಮೆರೆವುತಿಹುದು ಕೋಟಿ ಅರುಣನಂತೆ ಪರಿಪೂರ್ಣ ಭರಿತವು ಕಿರಣ, ಸ್ಮರಿ- ಪರಿಗೆ ಮಾಡುವುದು ಕರುಣ-ಆಹ ತರಣಿಯಂಥ ನಖದಿ ಸುರನದಿಯನು ಹೆತ್ತ ಎರಡೈದು ಬೆರಳಲ್ಲಿ ಕಿರುಗೆಜ್ಜೆ ಪೆಂಡೆಯು 10 ಪೆರಡು ಜಾನು ಜಂಘೆ ಘನ್ನ ಸುರು- ಚಿರ ವಜ್ರಾಂಕುಶ ಧ್ವಜ ನಾನಾ, ದಿವ್ಯ ವರ ರೇಖೆಯಿಂದಲೊಪ್ಪುವನ, ಜಘನ ಪರಮ ಶೋಭಿತ ಸುಂದರನ-ಆಹ ಕದಳಿ ಕಂಬ ಇರುವೂರು ಶೋಭಿಸೆ ಸರಿಗಾಣೆ ಹರಿವುಟ್ಟ ವರ ಪೀತಾಂಬರವನ್ನು 11 ಗಜವೈರಿಯಂತಿಪ್ಪ ಮಧು ಬಲು ವಿಜಯ ವಡ್ಯಾಣ ಅಚ್ಛೇದ್ಯ, ಭೇದ್ಯ ನಿಜಘಂಟೆ ಘಣರೆಂಬೊ ವಾದ್ಯ, ಕು ಬುಜೆ ಡೊಂಕ ತಿದ್ದದನಾದ್ಯ-ಆಹ ಅಜ ಜನಿಸಿದ ನಾಭ್ಯಂಬುಜದಳ ಚತುರ್ದಶ ಕುಕ್ಷಿ ನಿಜಪೂರ್ಣ ಸಖನನ್ನು 12 ಉದರ ತ್ರಿವಳಿ ನಾನಾ ಹಾರ ದಿವ್ಯ ಪದಕ ಪವಳದ ವಿಸ್ತಾರ ರತ್ನ ಮುದದಿಂದ ಧರಿಸಿದ ಧೀರ ಸುಂದರ ವಾದ ಕಂಬುಕಂಧರ-ಆಹಾ ಪದುಮಜ ಭವರಿಂದ ತ್ರಿದಶರು ತಿಳಿಯುತ್ತ ಸದಾಕಾಲ ಧ್ಯಾನಿಪ ಹೃದಯಾಂಬರವನ್ನು 13 ಸಿರಿವತ್ಸ ಕೌಸ್ತುಭಹಾರ, ಮೇಲೆ ಸರಿಗೆ ನ್ಯಾವಳದ ವಿಸ್ತಾರ ಅಲ್ಲಿ ವೈಜಯಂತಿ ಮಂದಾರ, ಗುರು ತರವಾದ ಭುಜ ಚತುರ-ಆಹ ಮರಿಯಾನೆ ಸೊಂಡಿಲಂತಿರೆ ಬಾಹು ಕೇತಕಿ ಬೆರಳು ನಕ್ಷತ್ರದ ಅರಸಿನಂತೆ ನಖ14 ಕರಚತುಷ್ಟಯದಲ್ಲಿ ಶಂಖ, ಚಕ್ರ ವರಗದೆ ಪದುಮು ನಿಶ್ಶಂಕನಾಗಿ ಧರಿಸಿ ಮೆರೆವೊ ಅಕಳಂಕ, ದುರು ಳರ ದಂಡಿಸುವ ಛಲದಂಕ ಆಹ ಬೆರಳು ಮಾಣಿಕದುಂಗುರ ಕಡಗ ಕಂಕಣ ಬಿರುದಿನ ತೋಳ್ಬಂದಿ ವರ ಭುಜಕೀರ್ತಿಯ15 ಅಗರು ಚಂದನ ಗಂಧÀಲೇಪ, ಕಂಬು ಸೊಗಸಾದ ಕಂಠಪ್ರತಾಪ, ಮಾವು ಚಿಗುರಲೆ ಕೆಂದುಟಿ ಭೂಪ, ನಸು ನಗುವ ವದನ ಸಲ್ಲಾಪ-ಆಹ ಮಗನಾಗಿ ತಾನು ಗೋಪಿಗೆ ವದನದೊಳು ಅಗಣಿತ ಮಹಿಮನ್ನ 16 ಮುಗುಳು ಮಲ್ಲಿಗೆ ಮೊಗ್ಗೆ ದಂತ ಪಙÂ, ಜಗವ ಮೋಹಿಸುವ ಸುಶಾಂತ ಜಿಹ್ವೆ ನಿಗಮಕೆ ವೇದ್ಯವಾದಂಥ ಬಲು ಬಗೆಯಿಂದ ನಡೆಸುವ ಪಂಥ-ಆಹ ಪೊಗಳಲಾರದು ವೇದ ಖಗವಾಹನನ ಮಹಾ ಅಗಣಿತ ಮಹಿಮೆ ಸಂಪಿಗೆಯ ನಾಸಿಕನನ್ನು 17 ಪೊಳೆವೊ ವಿದ್ಯುತ ಕಪೋಲ, ನೀಲೋ- ತ್ಪಲದಳ ನೇತ್ರ ವಿಶಾಲ, ದಿವ್ಯ- ತಿಲಕವನಿಟ್ಟ ಸುಫಾಲ, ನೀಲಾ- ಚಲಕಾಂತಿ ತನುರುಹ ಜಾಲ-ಆಹ ಕುಂಡಲ ಕರ್ಣದೊಲುಮೆಯ ಚೆಲುವಿಕೆ ಇಳೆಯೊಳಗೆಣೆಗಾಣೆ ಇಂದಿರಾಲೋಲನ್ನ 18 ಶುಭ ನೋಟ, ಕಂಗ- ಳೆರಡ ಚೆಲುವಿಕೆ ಮಾಟಕಿನ್ನು ಅರವಿಂದ ಸರಿಯಿಲ್ಲ ದಿಟ ಅಲ್ಲಿ ತರಣಿ ಚಂದ್ರಮರ ಕೂಟ-ಆಹ ಶರಣ ಜನರ ಮನೋಹರುಷ ವಾರ್ಧಿಗೆ ಸುಧಾ ಕರ ದುಷ್ಟಜನರ ತಿಮಿರಕ್ಕೆ ಭಾಸ್ಕರನ್ನ 19 ಹೊಳೆವ ಹುಬ್ಬುದ್ವಯ ಸ್ಮರನ ಚಾಪ- ತಲೆ ತಗ್ಗಿಸುವಂಥ ರಚನ ಫಾಲ- ದಲ್ಲಿಟ್ಟು ತಿಲಕ ಸುಂದರನ ಲೋಕ- ಕಳವಳಗೊಳಿಸುವ ಸುಗುಣ-ಆಹ ನಲಿವ ವದನದಲ್ಲಿ ಅಳಿಗಳಂತೊಪ್ಪುವ ಸುಳಿಗುರುಳಿನ ಮೇಲೆ ವಲಿವಾರಳೆಲೆಯನ್ನು 20 ರೂಪ ಶೃಂಗಾರ ವಿಲಾಸ ಉಡು- ಭೂಪ ನಾಚುವ ಮುಖಹಾಸ ವಿಶ್ವ ರೂಪ ಧೃತ ಸ್ವಪ್ರಕಾಶ ಸರ್ವ ವ್ಯಾಪಕಾಖಿಳ ಜಗದೀಶ-ಆಹ ತಾಪಸರಿಗೆ ಕರುಣಾಪಯೋನಿಧಿ-ಅಣು ರೂಪಿನೋಳ್ ಪರಮಾಣು ರೂಪನಾಗಿಪ್ಪನ್ನ21 ಕೋಟಿಮಾರ್ತಾಂಡ ಸಂಕಾಶ ಕಿ ರೀಟಕ್ಕೆ ಅಸಮ ಪ್ರಕಾಶ ಎಲ್ಲು ಸಾಟಿಗಾಣೆನು ಲವಲೇಶ ಕಪಟ- ನಾಟಕ ಶ್ರೀ ಲಕುಮೀಶ-ಆಹ ನಖ ಲಲಾಟ ಪರಿಯಂತ ನೋಟದಿಂದಲೆ ಈಶ ಕೋಟಿ ಸಹಿತನಾಗಿ 22 ಕಾಮಾದಿಗಳನೆಲ್ಲ ತರಿದು ಮುಕು- ತೀ ಮಾರ್ಗವನ್ನೆ ನೀನರಿದು ಅತಿ- ಪ್ರೇಮದಿ ಗುರುಗಳ ನೆನೆದು ಹೇಮ ಭೂಮಿ ಕಾಮಿನಿಯರ ಜರಿದು-ಆಹ ಸಾಮಜ ವರದ ಶ್ರೀ ವಿಜಯವಿಠ್ಠಲನಂಘ್ರಿ ಯುಗ್ಮ ನಿತ್ಯ 23
--------------
ವಿಜಯದಾಸ
ಧ್ರುವತಾಳ ಹಿಂದಿನ ಜನ್ಮಜನ್ಮಾಂತರದಿ ಮಾಡಿದಘವ ನಿವಾರಿಸುವರು ನಿನ್ನ ದಾಸರು ದುರಿತ ದುರ್ಜಯ ದುಃಖವ ದೂರ ಮಾಡುವರು ನಿನ್ನ ದಾಸರು ಮುಂದಣ ಅಪಾರ ಆನಂದ ಸುಖವ ಅನವರತ ಈವರು ನಿನ್ನ ದಾಸರು ಯೆಂದು ಇಲ್ಲದಿರೆ ಬ್ಯಾರೆಗತಿಯುಂಟೆ ನಿನ್ನನರಿವ ಬಗೆ ಮತ್ತುಂಟೆ ಎಲೆದೇವ ನಂದನಂದನ ನಿನ್ನವರೆ ಜೀವನ ಅಚಲಾನಂದವಿಠಲರೇಯ ಬ್ಯಾರೆಗತಿ ಮತ್ತುಂಟೆ 1 ಮಠ್ಯತಾಳ ಭೂತದಯಾಪರ ನರನಾಥ ದೇವತೆಯೆಂಬರು ಭೂತವಿರೋಧ ಮಾಡಿ ಕೈಯ್ಯಾತು ಬೇಡುವ ದೈವವ ಸಾತ್ವಿಕವೆಂದು ಬಗೆವರು ಜನರು ಈ ರೀತಿಯೇನೆಂಬೆ ಅಜಾತ ಸಕಲದೇವರ ದಾತನೆ ಅಚಲಾನಂದವಿಠಲ ನೀನಿರೆ ಸಾತ್ವಿಕವೆಂದು ಅನ್ಯದೈವವ ಈ ಭೂತಳದ ಜನರು ಬಗೆವರು ಪ್ರತಿದಿನ 2 ತ್ರಿಪುಟತಾಳ ಮಾನವನೆ ಕೇಳು ಕಬ್ಬಿಣ ಸೋಸಿ ಕಾಸಿ ಬಡಿಯಲು ತಾನು ಪರುಷ ಸೋಕದೆ ಸುವರ್ಣ ಅಪ್ಪುದೇ ಅನಾದಿ ಅವಿದ್ಯ ತಾಪದಿಂದ ಬೆಂದು ತಾನು ನೀರೊಳು ಮಿಂದರೇ ಹೋಹುದೇನೊ ಅನಾದಿದೈವ ಅಚಲಾನಂದವಿಠಲನ ಧ್ಯಾನಮಾಳ್ಪರ ಪಾದಪರುಷ ಸೋಕದನಕ 3 ಅಟ್ಟತಾಳ ಎನ್ನ ಹಳಿಯಲಿ ಉಗುಳಲಿ ಬಂಧುಗಳೆನ್ನ ಮನ ರಂಗ ನಿನ್ನನೆ ನೆಚ್ಚಿಹ್ಯದೆನ್ನಮನ ಕೃಷ್ಣ ನಿನ್ನನೆ ನಂಬಿಹ್ಯದೆನ್ನ ಮನ ಅಚಲಾನಂದವಿಠಲರೇಯ ನಿನ್ನವರೊಲುಮೆಯ ಸಾರಿತೆನ್ನ ಮನ 4 ಆದಿತಾಳ ಹಲವು ಮಾತೇನು ಹಲಧರನನುಜನ ಚೆಲುವಿಕೆಯನೆ ಕಂಡು ಮನಸೋತೆನವ್ವ ಕೆಲಬಲದಾ ಕುಲದವರೆನ್ನ ಹಳಿಯಲಿ ಚಲಿಸದು ಚಿತ್ತ ಚಂಚಲವಾಗದೆನ್ನ ಮನ ಕೆಲಚಿತಿ ವೆಂಣೆಲ್ಲ (?) ತಾನೊಲಿವಂತೆ ಮಾಡಿದ ನಿಲುಕುವನಚಲಾನಂದವಿಠಲರೇಯ ಕ್ಯಲಬಲದ ಕುಲದವರೆನ್ನ ಹಳಿಯಲಿ 5 ಜತೆ ಬೆಂದ ಸಂಸಾರದಿ ಬಂದು ಬಂದು ಹೋದೆನೊ
--------------
ಅಚಲಾನಂದದಾಸ
ನಡತೆ ನನ್ನದು ಕೇಳಿರಯ್ಯ ಪ ಒಡೆಯ ವಲಿವ ಹ್ಯಾಗೆ ಪೇಳಿರಯ್ಯ ಅ.ಪ. ಒಡವೆ ತರದಿಹನೆಂದು ಕೋಪ ಮಡದಿನಟಿಸುತ ಹೆದರೀ ಒಡನೆ ಸ್ನಾನವ ಮಾಡಿತಂದು ಕೊಡುವ ಪ್ರಸನ್ನ ಗೈಯ್ಯಲವಳಾ ಆಹಾ ಒಡಿಯ ದೇವಗೆ ಹರಕೆ ನಡಿಸಬೇಕೆನ್ನಲು ಭೂರಿ ನೋಡುವೆನೆಂತೆಂಬೆ 1 ಒರಿಸೆ ಸಾಲಿಗ್ರಾಮ ಗೃಹದಿ ಅರಿವೆ ಹರಕು ಸಹ ಇಲ್ಲವೆನ್ನೇ ತರುವೆನೆನುತ ತಿಂಗಳಾರು ಕಾಲ ಬರಿದೇ ಆಹಾ ತರಲು ಸೂಳೆಗೆ ಸೀರೆ ಭರದಿ ಕೂಡಿಯೆ ಅವಳ ಪುರವ ಪೇಟೆಪೇಟೆಗಳೆಲ್ಲ ತಿರುಗಿ ತಿರುಗುವೆ ಮುದದೀ 2 ಹರಿಗೆ ದೀಪವ ಹಚ್ಚೆ ತೈಲ ಇರದು ತಾರೆನೆ ಹಡೆದ ತಾಯಿ ಬರಲಿ ಸಂಬಳ ತರುವೆ ಕೊಡುವಿ ಉರಿವ ಕಾಟವನೆಂದು ನುಡಿವೆ ಆಹಾ ಪರಮ ಸಂಭ್ರಮದಿಮದ ತಿಂಡಿ ಅಂಗಡಿಯಲಿ ಹರಕು ಜಿಹ್ವೆಂiÀi ಚಪಲ ಪೂರ್ಣಮಾಡುವೆ ನಿರುತ 3 ವೃತ್ತಪತ್ರಿಕೆಯಲ್ಲಿ ಹೆಸರು ಎತ್ತಿಹಾಕುವರೆನೆ ಒಡನೆ ವಿತ್ತದಾನವಗೈವೆ ಬರಿ ಉ- ನ್ಮತ್ತಕಾರ್ಯಕಾದರು ಸರಿಯೇ ಆಹಾ ಉತ್ತಮಭಕ್ತರು ಅರಸುತ್ತ ಬರ್ಪುದ ಕಂಡು ವತ್ತಿ ಬಾಗಿಲು ಕೊಂಡಿ ಸ್ವಸ್ಥವಿಲ್ಲೆಂಬೆ4 ಕಂಡು ಕರೆಯುತ ಭಾರಿ ಊಟ ತೊಂಡನಂದದಿ ನೀಡಿ ಮನದಿ ಉಂಡು ಹರುಷವ ನೆನೆವೆ ಧನ್ಯ\ ಆಹಾ ಕೆಂಡ ಬಿಸಿಲಲಿ ಬಡವ ಕಂಡು ಮಹಡಿಯ ಬರಲು ಪಿಂಡ ಪಿಡಿಯನು ಹಾಕೆ ತಂಡುಲವಿಲ್ಲೆಂಬೆ5 ದಾನಗೈದರು ಒಮ್ಮಿಂದೊಮ್ಮೆ ಮಾನಪಡೆಯಲು ಊರ ಒಳಗೆ ನಾನೆಂಬ ಹಂಕಾರ ಬಿಡದೆ ಶ್ರೀನಿಧಿ ಸ್ವಾಮಿತ್ವ ನೆನೆಯೆ ಆಹಾ ಸ್ವಾನುಭವ ಕಾಣದೆಲೆ ಜ್ಞಾನ ಭಾಸ್ಕರನಂತೆ ಪು- ರಾಣಪೇಳುತ ನನ್ನ ಸಮಾನ ವಿಲ್ಲಂತೆಂಬೆ6 ನೂರಿತ್ತು ಸಂಬಳ ಹಿಂದೆ ಮನದಿ ಊರಿತ್ತು ಹರಿಭಕ್ತಿ ಎಲ್ಲಿ ಈಗ ನೂರ್ಹತ್ತು ಕೊಟ್ಟರು ದೇವ ಬೆ- ನ್ಹತ್ತಿದೆ ತಾಪತ್ರಯ ಬಹಳ ಆಹಾ ಸಿರಿ ಕೃಷ್ಣವಿಠಲನೆ ದೃಷ್ಟಿ ವಾರುಗಾಣೆನು ಕಾಣೆನು ಸತ್ಯ ಪೊರೆಯೋ ಶರಣೆಂತೆಂಬೆ7
--------------
ಕೃಷ್ಣವಿಠಲದಾಸರು