ಒಟ್ಟು 183 ಕಡೆಗಳಲ್ಲಿ , 38 ದಾಸರು , 152 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಿಶ್ವ ಜ್ಞಾನರೂಪವಿಶ್ವದೊಳ ಹೊರಗು ನೀನಲ್ಲದೆ ಬೇರೆವಿಶ್ವನಾಟಕ ಸೂತ್ರಧಾರರುಂಟೆ ಹರಿಯೆ ಪ ಮುಕುಟ ಮಂಡೆಯಲಿ ಧ್ರುವಲೋಕ ಭುವನಾವಳಿಯುನಿಖಿಲ ಶ್ರುತಿ ನವರತುನ ನಿಟಿಲದಲ್ಲಿಮುಖದಲಿಂದ್ರರು ಅಗ್ನಿ ಸಪ್ತ ಋಷಿಗಳು ದ್ವಿಜರುಮುಖದ್ವಾರದುಸುರಿನಲಿ ಶ್ರುತಿ ಮರುತರುದೃಕುಯುಗದಿ ರವಿ ಶಶಿಯು ಎವೆಯಲ್ಲಿ ನಕ್ಷತ್ರಪ್ರಕಟ ಜಿಹ್ವೆಯ ವಾಣಿ ಕರ್ಣದ್ವಯದಿವಿಕಟ ಕಿವಿಯಲಿ ಅಶ್ವಿನಿದೇವತೆಗಳೆಲ್ಲಸಕಲ ಧರ್ಮವ ಪಡೆದೆಯೆಲೊ ಹರಿಯೆ 1 ಸ್ಕಂಧದಲಿ ಅತಿಥಿಗಳು ವಿದ್ಯಾತತಿಗಳು ಮಹಾಚಂದದರಸುಗಳು ಭುಜ ತೋಳಿನಲ್ಲಿಮುಂದುರದಿ ವಿಷ್ಣು ಹರ ಬ್ರಹ್ಮ ಸಹಿತುದರದಲಿಹಿಂದಿನ ಮಗ್ಗುಲಲಿ ಮನುಮುನಿಗಳುಮುಂದಿನ ಮಗ್ಗುಲಲಿ ಗಿರಿನಿಚಯಂಗಳುಸಂಧಿಯಲಿ ಮಕರಂದ ದೇವತೆಗಳುಮುಂದೊರೆದಿಹ ರೋಮಕೂಪದಗ್ರದಳತೆಯುವೃಂದಗಳ ಶೋಭಿಪ ರೀತಿಯ ಪಡೆದೆಯೆಲೊ ಹರಿಯೆ2 ಬೆನ್ನಿನಲಿ ವಸುನಿಕರ ಸ್ಮರನು ಲಿಂಗದಲಿ ಈ ಭು-ವನವೆಲ್ಲವು ಚೆಲುವ ನಾಭಿಯಲ್ಲಿಮುನ್ನ ಕೈಯಲಿ ವಿಶ್ವದೇವತೆಗಳು ವೈಶ್ಯಉನ್ನತ ಜಾನುವಿನ ಸಕ್ತಿಯಲಿಭಿನ್ನ ನದಿಗಳು ಸನ್ಮೋಹನ ಶಕ್ತಿ ಪ್ರ-ಸನ್ನ ಪಾದಾಬ್ಜದಿಂ ಶೂದ್ರರುನಿನ್ನ ಅವಯವದಲ್ಲಿ ಸಕಲವಂ ಪಡೆದ ಪ್ರ-ಸನ್ನ ಕಾಗಿನೆಲೆಯಾದಿಕೇಶವರಾಯ 3
--------------
ಕನಕದಾಸ
ಶ್ರೀ ಮಹಾಲಕ್ಷ್ಮೀ ಮಾತೆ ತ್ರಿಭುವನ ಜನನಿಶ್ರೀಮಂತ ವಿಷ್ಣುವಾಮಾಂಕಸದನಿ ಪ. ತಾಮರಸಾಸನ ವ್ಯೋಮಾಳಕ ಸುರ-ಸ್ತೋಮ ವಿನುತೆ ಹೇ ಸೋಮ ಸಹೋದರಿಅ.ಪ. ಕರ್ಮ ಇಂಧನ ಕಾಲವೆ ಮಹಾಅನಳ ಜನರ ಸಾಧನವೆಂಬ ದರ್ವಿಲಿಇನಿತು ಪಾಕವ ಮಾಡಿ ಘನಮಹಿಮನ ಭೋ-ಜನಕನುಕೂಲ ಮಾಡ್ದ ವನರುಹನಯನೆ 1 ಕಳೇವರ ಕೊಳುತಲಿಹಲವು ವಿಧಾರ್ಚನೆಗಳಲಿ ಪತಿಯನುಒಲಿಸಿ ವಲ್ಲಭನ ತೋಳಲಿ ಬಿಗಿದಪ್ಪಿದಬಲುಸುಖಜಲನಿಧೆ ಸಲಹೆ ನಮಿಸುವೆ 2 ಹೇಮಾಂಬರ ಚಾರು ಶ್ರೋಣಿಅಮಿತ ಸುಗುಣೆ ಶೋಭಿತ ಅಬ್ಜಸದನೆತಮಹಾರಿ ಗೋಪಾಲವಿಠಲನರ್ಧಾಂಗಿಯೆಸಮರೂಪ ಸಮಕಾಲ ಸಮದೇಶ ವ್ಯಾಪುತೆರಮೆ ಅನುಪಮೆ ಸಮೆ ನಮಿಸುವೆ ಎನ್ನ ಭವ-ಶಮಲವಳಿದು ಹೃತ್ಕಮಲದಿ ಹರಿತೋರೆ 3
--------------
ಗೋಪಾಲದಾಸರು
ಶ್ರೀಕಾಮಕೋಟಿ ಲಾವಣ್ಯಮೋಹನ ರೂಪಿನ ಶ್ರೀಕಾಂತ ಮಂಗಳ ಮೂರುತಿ ವರದೇವಾ ಪ ಶ್ರೀಮಣಿಮೌಳಿ ಮಸ್ತಕದ ಕಸ್ತುರಿಯ ಲ ಲಾಮವೆಸೆವ ವರ ಫಣಿಯಾ ಭ್ರೂಮಧ್ಯದೊಳೆಳೆವರೆಯಂತೊಪ್ಪುವ ನಾಮದ ಪಿರಿನೊಸಲಾ1 ತಾಮರಸಾಯತನೇತ್ರದಾನತಸು ಕ್ಷೇಮಾಂಕುರದ ನೋಟದ ಚಾಮೀಕರ ಕುಟ್ಮಲ ನಾಸಿಕದಭಿ ರಾಮ ಸುಮೌಕ್ತಿಕದಾ2 ಮಾ ಮನೋಹರ ಚುಬುಕಾಗ್ರದ ನವಪಲ್ಲ ವಾ ಮಿಳಿತಾಧರದ ಸೋಮವದನದೆಳನಗೆಯೂ ಪೊಳೆವಟ್ಟ ಕೌಮುದಿಯಾ ಸೊಗಸಿನಾ 3 ರಾಮಣೀಯಕವದನ ಮಕರಕುಂಡಲದ ಸು ರಾಮಯದ ಕದಪಿನ ಕಾಮನೀಯ ಕಂಬುಕಂಠದ ಸಿರಿತುಳ ಸೀ ಮಂದಾರಮಾಲೆಯ 4 ಜೀಮೂತ ಸವಿಯನೆ ರಂಜಿಪ ಸು ಶ್ಯಾಮಲ ರುಚಿರಾಂಗದ ಕಮಲ ಕಂಬು ನಿ ಸ್ಸೀಮ ಚಕ್ರಾಯುಧಂಗಳಾ 5 ಶ್ರೀಮೆರೆವುರದ ಶ್ರೀವತ್ಸಕೌಸ್ತುಭ ದಿ ವ್ಯಾಮೋದ ಗಂಧ ಲೇಪದ ಸೌಮಾನಜಂ ತಾಳ್ದುಪವೀತದ ಮಣಿ ಸ್ತೋಮಾಭರಣಂಗಳಾ 6 ಸಾಮಾಜಿಕರ ಸನ್ನಿಭ ರಂಜನದು ದ್ದಾಮ ಸುಬಾಹುಗಳಾ ನೇಮಿತಾಂಗದ ತೋಳಬಂದಿ ಕಂಕಣಮುಂ ಗೈಮುರಾರಿ ಮುದ್ರೆಯಾ 7 ಐಮೊಗದಹಿಯ ತೆರದ ಕರಕಮಲದ ಸೈಮಿರುಪಂಗುಲಿಗಳಾ ರೋಮಾವಳಿಯ ಪೊಳೆವ ಪೊಡೆವಲರ ಪಿ ತಾಮಹಮುದಿತ ನಾಭಿಯಾ 8 ಹೇಮಾಂಬರದಸಿಮಧ್ಯದ ಕಾಂಚೀ ಧಾಮದ ಕಟಿತಟದ ಪ್ರೇಮಿತ ಊರುಗಳ ಸಜಾನುಗಳ ಮುದದಿಂ ತಾಳ್ದ ವಾಮಜಂಫೆಯ ತೊಡರಿನ ಪೊಂಗೆಜ್ಜೆಗಳ9 ಭೂಮಿ ಪಾವನ ಗಂಗೆಯುದಿಸಿದುಂಗುಟದ ಯ ಶೋ ಮಹಿಮೆಯ ಚೆಲ್ವಿನಾ ಪ್ರೇಮದೊಳಾನತರಂ ಸಲಹುವ ಸುರಪುರ ಮ - ಹಾಮಾತೆ ಲಕ್ಷ್ಮೀಪತಿ ಪಾದಪದ್ಮದ 10
--------------
ಕವಿ ಲಕ್ಷ್ಮೀಶ
ಸಡಿಲ ಬಿಡದೆ ಕೈಯ ಪಿಡಿದು ಉದ್ಧರಿಸಯ್ಯ ಬಡವನು ನಾನೈಯ್ಯ - ಕೊಡು ನಿನ್ನ ಸೇವೆಯ ಪ ಒಡಲಿಗೋಸುಗ ಪರರಡಿಗಳ ಪಿಡಿಯುತೆ ಭವ ಕಡಲಿನೊಳಗೆ ಅ.ಪ. ಪಡೆದು ವರಗಳನು ಕಡು ಖೂಳ ರಾವಣ ನಡುಗಿಸಿ ಸುರನರ ಭುಜಗರೊಡೆಯರನ್ನು ಹಿಡಿದು ಮುನೀಶರ ಹೊಡೆದು ಬಡಿದು ಹಿಂಸೆ - ಪಡಿಸುತ್ತ ಯುವತೇರ ದುಡುಕು ಮಾಡುತ್ತಲಿರೆ ಗಡಣೆಗಾರದೆ ಪಾಲ ಕಡಲ ತಡಿಗೆ ಬಂದು ದೃಢ ಭಕ್ತಿಯಲಿ ನಿಂದು ಜಡಜ ಭವಾದ್ಯರು ಪೊಡಮಟ್ಟು ಬೇಡಲು ಕೊಡುತೆ ಅಭಯವನು ಮಡದಿಯನೊಡಗೂಡಿ ಪೊಡವಿಗಿಳಿದು ಬಂದೆ 1 ಸತಿ ಕೌಸಲ್ಯದೇವಿಯ ಬಸುರೊಳು ಸಂಜನಿಸಿ ದಶದಿಶದೊಳು ಯಶ ಪಸರಿಸಿ ಅಸುರೆಯ ಅಸುವನು ಹಾರಿಸಿ ಕುಶಿಕ ಸುತನ ಯಜ್ಞ ಹಸನಾಗಿ ಪಾಲಿಸಿ ನಸುನಗುತಲಿ ಪದಸರಸಿಜ ಸೋಕಿಸಿ ಅಶಮವಾಗಿದ್ದ ಮುನಿಸತಿಯನುದ್ಧರಿಸಿ ಪಶುಪತಿ ಧನುಭಂಗವೆಸಗಿ ಸೀತೆಯ ಕರ ಬಿಸಜವ ನೊಶಗೈದ ಅಸಮ ಸಮರ್ಥ 2 ಚಂದದಿಂ ಶಾಙ್ರ್ಞವನೊಂದಿ ಅಯೋಧ್ಯೆಗೆ ಬಂದು ಪತ್ನಿಯಗೂಡಿ ನಂದದಿಂದಿರುತಿರ್ದು ಬಂದ ಕಾರ್ಯಕೆ ನೆವ ತಂದು ವನಕೆ ಬಂದು ನಿಂದಿರೆ ಜಾನಕಿ ಲಕ್ಷ್ಮಣರೊಡಗೊಂಡು ನೊಂದು ನೃಪನು ದಿನವನ್ನು ಹೊಂದಲು ಕರೆ- ತಂದು ಭರತನಿಗೆ ಅಂದು ರಾಜ್ಯವನೀಯೆ ಬಂದೊಲ್ಲದೆ ಬೇಗ ಬಂದು ವಂದಿಸೆ ಪದ ದ್ವಂದ್ವದ ಪಾದುಕವಂದದಿಂದೊಲಿದಿತ್ತೆ 3 ಚಿತ್ರಕೂಟಾದ್ರಿಯಿಂದತ್ತ ನಡೆದು ನೆಲ ಕೊತ್ತಿ ವಿರಾಧನ್ನ ವತ್ಸ ಲಕ್ಷ್ಮಣ ಸೀತಾ ಯುಕ್ತನು ನೀನಾಗಿ ಪೊರೆಯಲು ಇತ್ತು ಅಭಯವನ್ನು ಉತ್ತಮ ದಂಡಕದಿ ಸ್ತುತ್ಯ ಕುಂಭಜ ಮುನಿಯಿತ್ತ ಧನುವನಾಂತು ಕುತ್ಸಿತ ದನುಜೆಯ ಶಿಕ್ಷಿಸಿ ಖರ ಬಲ ಕತ್ತರಿಸುತೆ ಬೆನ್ಹತ್ತಿ ಮಾರೀಚನ್ನ ತುತ್ತು ಮೂರಾಗಿಸಿದತ್ಯಂತ ಶಕ್ತ 4 ಮೈಥಿಲಿಯಾಡಿದ ಮಾತಿಗೆ ಸೌಮಿತ್ರಿ ಪಾತಕಿ ದಶಮುಖ ಸಾತ್ವೀಕ ವೇಷದಿ ಸೀತೆಯ ನೊಯ್ದೆನೆಂದು ಆರ್ತ ಸ್ವರದಿ ಪೇಳಿ ಮೃತಿಯೊಂದೆ ಖಗಪತಿ ಆತಗೆ ಸದ್ಗತಿಯಿತ್ತು ನಡೆದು ಖಳ ಪೋತಕ ಬಂಧನ ತೋಳ್ಗಳ ಖಂಡಿಸಿ ಪ್ರೀತಿಲಿ ಶಬರಿಗೆ ಮುಕ್ತಿಯ ಪಾಲಿಸಿ ವಾತಸುತನ ಮನ ಪ್ರಾರ್ಥನೆ ಸಲಿಸಿದೆ 5 ಚರಣದಿಂದೊಗೆದು ದುಂದುಭಿಯ ಶರೀರವನ್ನು ತರುಗಳೇಳನು ಒಂದೇ ಸರಳಿನಿಂದುರುಳಿಸಿ ತರಣಿಸುತನ ಭಯ ಹರಿಸಿ ವಾಲಿಯ ಗರ್ವ ಮುರಿಸಿ ವಾನರ ರಾಜ್ಯ ದೊರೆತನ ಸಖಗಿತ್ತೆ ತರುಚರ ತತಿಗಳ ಕೆರಳಿಸಿ ಹರುಷದಿ ಪರನು ಭಕುತನನ್ನು ಕರೆದು ಕುರುಹುಗಳ ನೊರೆದು ಮುದ್ರಿಕೆಯಿತ್ತೆ ಕರುಣವಾರಿಧಿಯೆ 6 ತಿಂಗಳು ಮೀರಿತೆಂದು ಅಂಗದ ಪ್ರಮುಖರು ಕಂಗೆಟ್ಟು ಕುಳಿತಿರೆ ಭಂಗನ ಕಳೆದು ತ - ರಂಗಿಣಿ ಪತಿಯನ್ನು ಲಂಘಿಸಿ ಹನುಮನು ಕಂಗೊಳಿಸುವ ಲಂಕಾ ಪ್ರಾಂಗಣದಲಿ ನಿಂದು ಭಂಗಿಸಿ ಲಂಕಿಣಿಯನು ಸೀತಾಂಗನೆ - ಗುಂಗುರವಿತ್ತುತ್ತಮಾಂಗದ ಮಣಿಯಾಂತು ಕಂಗೆಡಿಸ್ಯಸುರರ ಜಂಗುಳಿಯನು ಭಕ್ತ ಪುಂಗವ ಬರೆ ನಿನ್ನಂಗ ಸಂಗವನಿತ್ತೆ 7 ಹರಿವರರನು ಕೂಡಿ ಶರಧಿಗೆ ಪಯಣಮಾಡಿ ಶರಣ ವಿಭೀಷಣನಿಗೆ ಸ್ಥಿರ ಪಟ್ಟವನು ನೀಡಿ ಭರದಿ ಸೇತುವೆಗಟ್ಟಿ ಅರಿಯ ಪಟ್ಟಣ ಮುಟ್ಟಿ ಧುರಕೆ ದೂತನ್ನ ಅಟ್ಟಿ ಪರಬಲವನು ಕುಟ್ಟಿ ಪುರಕೆ ಉರಿಯನಿಕ್ಕಿ ಶರವರ್ಷಂಗಳ ಕರಿ ರಥಾ ತುರಗ ಪದಾತಿಗ- ಳುರುಳಿಸಿ ದಶಶಿರನುರವನು ಇರಿದು ಪರಮ ಸಾಧ್ವಿಯ ಕರಸರಸಿಜ ಪಿಡಿದೆ 8 ಭಕ್ತ ವಿಭೀಷಣಗೆ ದೈತ್ಯಾಧಿಪತ್ಯವಿತ್ತು ಕೃತ್ತಿವಾಸನ್ನ ಸೇತು ಹತ್ತಿರ ಸ್ಥಾಪಿಸಿ ಪತ್ನಿ ಸಹೋದರ ಮಿತ್ರ ಭೃತ್ಯರ ಕೂಡಿ ಉತ್ತಮ ಪುಷ್ಪಕದಿ ಚಿತ್ರಕೂಟಕೆ ಬಂದೆ ಭಕ್ತನ ಕಳುಹಿ ಸದ್ವøತ್ತವ ಭರತಗೆ ಬಿತ್ತರಿಸಿ ಮಹದುತ್ಸವದಿ ಪುರ ಮತ್ತೆ ಪ್ರವೇಶಿಸಿ ರತ್ನ ಸಿಂಹಾಸನ ಹತ್ತಿ ಶ್ರೀಕಾಂತನೆ ನಿತ್ಯದಿ ಸಲಹುವೆ 9
--------------
ಲಕ್ಷ್ಮೀನಾರಯಣರಾಯರು
ಸಾರ ಬಂದೆ ಪ ಚಕ್ರಧರ ಧುರಧೀರ ನಾರಸಿಂಹ ನಾನು ಬಂದೆ ನಾನು ಬಂದೆ ಅ ಕಲ್ಲೊಳು ವಿಷಯ ಪುಟ್ಟಿಸಿದನಾ ಶುಭವಲ್ಲದ ದಿವಸದೊಳಿರಾ ನೋಡಿಇಲ್ಲದ ಬಯಲ ನಿಂದೆಯ ಪೊತ್ತು ಶುಕಾಮಲ್ಲರೊಡನೆ ಕಾದಿ ಮಲೆತ ಸಾಲ್ವರ ಕೊಂದುಮಡದಿಗೆ ರತ್ನ ತಂದುದರಿಂದ 1 ಮಡದಿಯ ಮನೆಯ ಅರ್ಭಕನಾಗಿ ಬಲುಗಡಿಯ ದಾನವನ ಕೊಂದನ ಸೂನುಬಡನಡುವಿನ ಠಾವಿಗೆ ಸಿಲ್ಕಿ ಸುಖಪಡದಿರೆ ರಾಯನಾ ಹಿಡಿದು ತೋಳು ಕಟ್ಟಿದುದರಿಂದ 2 ಮೂಲ ವೃಕ್ಷದಾಲಾರ ಮುಂದೆಯ ದಾನವರಿರ್ದಾಲಯ ದಹಿಪನೆಂಬುದಯ್ಯನಬಲಮಾಡಿ ಬಲಗೆ ಇಂದುರುಹಿದೆ ಕಾಗಿನೆಲೆಯಾದಿ ಕೇಶವ ಖಳನ ಗರ್ಭವಿಚ್ಛನ್ನಪ್ರಹ್ಲಾದಗೆ ಪ್ರಸನ್ನವಾದುದರಿಂದ 3
--------------
ಕನಕದಾಸ
ಸಿರಿದೇವಿ ಹರಿಯ ದಯವು | ಆವಾವ ಪರಿ ಪಾಲಿಸೆ ಪ ಆಲದೆಲೆಯಲಿ ಅಂದು | ನಿನ್ನಯ ಮ್ಯಾಲೆ ಮಲಗಿಪ್ಪ ಹರಿಯ ತೋಳು ಬಿಗಿದಾಲಂಗಿಸಿ | ಸೃಷ್ಟಿಯ ಲೀಲೆಯನು ಮಾಡಿಸಿದ ತಾಯೆ 1 ವಕ್ಷವಾಲಯವ ಮಾಡಿದೆ | ಆವಾಗ ದಕ್ಷಣಾದೇವ್ಯೆನಿಸಿದೆ ಲಕ್ಷ್ಯವಿಲ್ಲದೆ ಭಾಗ್ಯವ | ಭಕ್ತರಿಗೆ ವೀಕ್ಷೆಯಿಂದಲ್ಲಿ ಈವೆ 2 ದೇವತಾಜನ ಸ್ತುತಿಸೆ | ನೀ ಎನ್ನ ಭಾವ ಹರಿಯಲಿ ನಿಲ್ಲಿಸೆ ಕಾವ ಭಾರವು ನಿನ್ನದೆ | ಶ್ರೀ ವಾಸು ದೇವವಿಠಲನ್ನ ರಾಣಿ 3
--------------
ವ್ಯಾಸತತ್ವಜ್ಞದಾಸರು
ಹರಿಹರರಿಬ್ಬರು ಒಲಿದು ಮಾತಾಡಲು ಕೊಳವ ಕಂಡಲ್ಲಿ ಎಲೆತೋಟ ಕೊಳವ ಕಂಡಲ್ಲಿ ಎಲೆತೋಟದೊಳಗಾಡುವ ಹೆಣ್ಣಿನ ಕಂಡು ಹರ ಮರುಳಾದ ಪ. ತೆಂಗಿನ ತಿಳಿಗೊಳ ನಿಂಬೆ ಕಿತ್ತಲೆ ಬಾಳೆ ಹೊಂಬಾಳೆ ಅಡಿಕೆ ಬನಗಳು ಹೊಂಬಾಳೆ ಅಡಿಕೆ ಬನದೊಳಗಾಡುವ ರಂಭೆಯ ಕಂಡು ಹರ ಮರುಳಾದ 1 ಅರಿಸಿನ ತಿಳಿಗೊಳ ಹಲಸು ಕಿತ್ತಲೆ ಬಾಳೆ ಬೆರಸಿ ಮಲ್ಲಿಗೆಯ ಬನದೊಳು ಬೆರಸಿ ಮಲ್ಲಿಗೆಯ ಬನದೊಳಗಾಡುವ ಸರಸಿಜಾಕ್ಷಿಯ ಕಂಡು ಹರ ಮರುಳಾದ 2 ಮೊಲ್ಲೆ ಮಲ್ಲಿಗೆ ಜಾಜಿ ಅಲ್ಲೆ ಪಾರಿಜಾತ ನಿಲ್ಲದೆ ನುಡಿವೊ ಗಿಳಿಗಳು ನಿಲ್ಲದೆ ನುಡಿವೊ ಗಿಳಿಗಳು ನುಡಿಗಳ ಚೆಲುವೆಯ ಕಂಡು ಹರ ಮರುಳಾದ 3 ಸೋಗೆ ನವಿಲುಗಳು ಗಿಳಿಹಿಂಡು ತುರುಗಳು [ಕೋಗಿಲೆ ನಲಿಯೊ ಪಂಸೆಗಳು] [ಕೋಗಿಲೆ ನಲಿಯೊ ಪಂಸೆಯೊಳಾಡುವ] ಸೊ- ಬಗಿಯ ಕಂಡು ಹರ ಮರುಳಾದ 4 ಚೆಲುವ ಚರಣಗಳು ಜಂಘೆ ಜಾನೂರು ಕಟಿ ವಳಿಪಂಙÂ್ತ ಜಠರ ವಕ್ಷಸ್ಥಳವು ವಳಿಪಂಙÂ್ತ ಜಠರ ವಕ್ಷಸ್ಥಳಗಳ ಹೆಣ್ಣಿನ ಸ್ತನವ ವರ್ಣಿಸಲಾರಿಗಳವಲ್ಲ 5 ಕಾಲುಂಗುರ ಅಕ್ಕಿ ಪಿಲ್ಯ ಜೋಡುಮೆಂಟಿಕೆಗಳು ವೀರಮುದ್ರಿಕೆಯು ಕಿರುಪಿಲ್ಯ ವೀರಮುದ್ರಿಕೆಯು ಕಿರುಪಿಲ್ಯ ನಿಟ್ಟಿದ್ದ ಬಾಲೆಯ ಕಂಡು ಹರ ಮರುಳಾದ 6 ನಡು ಬಳುಕಿ ಮುಡಿ ಸಡಲಿ ಉಡಿಗಂಟೆ ಹೊಳೆಯುತ ಕೊರಳ ಪದಕ ಹಾರ ಒಲೆಯುತ ಕೊರಳ ಪದಕ ಹಾರ ಒಲೆಯುತ ಹೆಣ್ಣಿನ ಇರವ ವರ್ಣಿಸಲಾರಿಗಳವಲ್ಲ 7 ಹಸಿರು ಕುಪ್ಪಸಗಳು ಮುಂಗೈನಗಗಳು ನಳಿತೋಳುಬಂದಿ ಬಳೆಗಳು ನಳಿತೋಳುಬಂದಿ ಬಳೆಗಳು ಹೆಣ್ಣಿನ ಥಳುಕು ವರ್ಣಿಸಲಾರಿಗಳವಲ್ಲ8 ಹಾರ ಹೀರಾವಳಿ ಕೇಯೂರ ಕಂಕಣ ತೋಳ ಭಾಪುರಿ ಭುಜಕೀರ್ತಿ ತೋಳ ಭಾಪುರಿ ಭುಜಕೀರ್ತಿನಿಟ್ಟಿಹ ಇಂದುಮುಖಿಯ ಕಂಡು ಹರ ಮರುಳಾದ 9 ಅರಳೋಲೆ ಮೂಗುತಿ ಹಣೆಯ ಹಚ್ಚೆಯ ಬೊಟ್ಟು ಕದಪು ಕನ್ನಡಿಯು ಕುಡಿಹುಬ್ಬು ಕದಪು ಕನ್ನಡಿಯು ಕುಡಿಹುಬ್ಬು ಹೆಣ್ಣಿನ ಬೆಳಕÀ ವರ್ಣಿಸೆ ಹರಗಳವಲ್ಲ 10 ನೊಸಲು ಕಸ್ತೂರಿಗಳು ಎಸೆವ ಬೈತಲೆಗಳು ಕುರುಳು ಕೂದಲುಗಳು ಕುಂತಲಗಳು ಕುರುಳು ಕೂದಲುಗಳು ಕುಂತಲಗಳು ಹೆಣ್ಣಿನ ಜಡೆಯ ವರ್ಣಿಸಲಾರಿಗಳವಲ್ಲ 11 ಕುಂಭಕುಚದ ಮೇಲೆ ಗಂಧವ ಪೂಸಿದಳೆ ಅಂದಕೆ ಹಿಡಿದಳೆ ಕಮಲವ ಅಂದಕೆ ಹಿಡಿದಳೆ ಕಮಲವ ಕಡೆಗಣ್ಣ ಚಂದ ಬಂದ್ಹರನ ಕಂಗೆಡಿಸಿತು 12 ತÉೂೀರ ಕುಚದ ಮೇಲೆ ಸಾದು ಗಂಧವ ಪೂಸಿ ಆಯಕೆ ಹಿಡಿದಳೆ ಕಮಲವ ಆಯಕೆ ಹಿಡಿದಳೆ ಕಮಲವ ಕಡೆಗಣ್ಣ ಢಾಳ ಬಂದ್ಹರನ ಕಂಗೆಡಿಸಿತು 13 ಕಕ್ಕಸ ಕುಚದಮೇಲೆ ಅಷ್ಟಹಾರಗಳು ಹೊಳೆಯೆ ಹಸ್ತಕಟ್ಟುಗಳು ಹೊಳೆಯುತ ಹಸ್ತಕಟ್ಟುಗಳು ಹೊಳೆವುತ್ತ ಹೆಣ್ಣಿನ ದೃಷ್ಟಿ ಬಂದ್ಹರನ ಕಂಗೆಡಿಸಿತು 14 ಅಮ್ಮಾಲೆ ಆಡೋಳು ಒಮ್ಮೊಮ್ಮೆ ನೋಡೋಳು ತÀನ್ನೊಳಗೆ ತಾನು ನಗುವೋಳು ತÀನ್ನೊಳಗೆ ತಾನು ನಗುವೋಳು ಬೊಮ್ಮನ ಮಗನ ಮರುಳು ಮಾಡಿ ನಡೆದಳು 15 ನೋಡಳು ನುಡಿಯಳು ಹರನ ಕೂಡೆ ಮಾತಾಡಳು ಓಡುತ್ತ ಚೆಂಡ ಹೊಯ್ವಳು ಓಡುತ್ತ ಚೆಂಡ ಹೊಯ್ವವೇಗವ ಕಂಡು ಮೂರುಕಣ್ಣವನು ಮರುಳಾದ 16 ಕೆದರಿದ ಕೆಂಜೆಡೆ ಕೊರಳ ರುದ್ರಾಕ್ಷಿ ಕರದಿ ತ್ರಿಶೂಲ ಹೊಳೆಯುತ ಕರದಿ ತ್ರಿಶೂಲ ಹೊಳೆಯುತ ಹೆಣ್ಣಿನ ನುಡಿಸುತ್ತ ಹಿಂದೆ ನಡೆದನು 17 ರೂಢಿಗೊಡೆಯನ ಕೂಡೆ ಆಡುವ ವನಿತೆ ನೋಡೆ ನೀ ಎನ್ನ ಕಡೆಗಣ್ಣ ನೋಡೆ ನೀ ಎನ್ನ ಕಡೆಗಣ್ಣ ಹೆಣ್ಣಿನ ಕಾಡುತ ಹಿಂದೆ ನಡೆದನು 18 ಪೀತಾಂಬರದ ಮುಂಜೆರಗನು ಕಾಣುತ್ತ ಸೋತೆ ಬಾರೆಂದು ಕರೆದನು ಸೋತೆ ಬಾರೆಂದು ಕರೆದ ಧ್ವನಿಯ ಕೇಳಿ ಕಾಂತೆ ಬನದೊಳು ಮರೆಯಾದಳು 19 ಮಂಗಳ ಮಹಿಮಗೆ ಅಂಜಿಕೆ ಇಲ್ಲದೆ ಗಂಗೆ ಪೊತ್ತವನ ತಿರುಗಿಸಿದ ಗಂಗೆಪೊತ್ತವನ ತಿರುಗಿಸಿದ ತನ್ನಯ ಮುಂದಣ ಅಂದವೆಲ್ಲ ಇಳುಹಿದ 20 ಸೃಷ್ಟಿಯನೆಲ್ಲ ಹೊಟ್ಟೆಯೊಳಿಂಬಿಟ್ಟು ವಟಪತ್ರ ಶಯನನಾಗಿ ಮಲಗಿದ ವಟಪತ್ರ ಶಯನನಾಗಿ ಮಲಗಿದ ಉಡುಪಿನ ಕೃಷ್ಣನೆಂದ್ಹರನು ತಿಳಿದನು 21 ಭೂಮಿಯನೆಲ್ಲ ಈರಡಿ ಮಾಡಿದ ಆಲದೆಲೆ ಮೇಲೆ ಮಲಗಿದ ಆಲದೆಲೆ ಮೇಲೆ ಮಲಗಿದ ಶ್ರೀಹಯ- ವದನನೆಂದು ಹರ ತಿಳಿದನು 22
--------------
ವಾದಿರಾಜ
ಹರಿಹರರು ಸರಿಯೆಂಬ ಮರುಳು ಜನರುಹರಿಹರರ ಚರಿತೆಯನು ತಿಳಿದು ಭಜಿಸುವುದು ಪ ಸುರರು ಮುನಿಗಳು ಕೂಡಿ ಪರದೈವವಾರೆಂದುಅರಿಯಬೇಕೆಂದೆರಡು ವರಧನುಗಳಹರಿಹರರಿಗಿತ್ತು ಸಂಗರವ ಮಾಡಿಸಿ ನೋಡೆಮುರಹರನು ಪುರಹರನ ಗೆಲಿದುದರಿಯಾ 1 ಕರವ ಶಿರದ ಮ್ಯಾಲಿರಿಸಿ ಖಳ-ನುರುಹಿ ಹರನನು ಕಾಯಿದ ಕಥೆಯ ನೀನರಿಯಾ 2 ದೂರ್ವಾಸರೂಪ ಹರನಂಬರೀಷನ ಮುಂದೆಗರ್ವವನು ಮೆರೆಸಿ ಜಡೆಯನು ಕಿತ್ತಿಡೆಸರ್ವಲೋಕದೊಳವನ ಚಕ್ರನಿಲಲೀಯದಿರೆಉರ್ವೀಶನನು ಸಾರಿ ಉಳಿದನರಿಯಾ 3 ಹರನಂಶ ದ್ರೋಣಸುತನು ಪಾಂಡವಾ ಎಂದುಉರವಣಿಸಿ ನಾರಾಯಣಾಸ್ತ್ತ್ರವನು ಬಿಡಲು ಹರಿ ಬಂದು ಬೇಗ ತನ್ನಸ್ತ್ರವನು ತಾ ಸೆಳೆದುಶರಣಾಗತರ ಕಾಯಿದ ಕಥೆಯನರಿಯಾ 4 ನರನಾರಾಯಣರು ಬದರಿಕಾಶ್ರಮದಲಿರೆಹರನು ಹರಿಯೊಡನೆ ಕದನವನು ಮಾಡೆಹರಿ ಹರನ ಕಂಠವನು ಕರದಲಿ ಪಿಡಿದು ನೂಕೆಕೊರಳ ಕಪ್ಪಾದ ಕಥೆ ಕೇಳಿ ಅರಿಯಾ 5 ಹರಿ ಸುರರಿಗಮೃತವನು ಎರೆದ ರೂಪವನೊಮ್ಮೆಹರ ನೋಡುವೆನೆಂದು ಸಂಪ್ರಾರ್ಥಿಸೆಪರಮ ಮೋಹನ ರೂಪಲಾವಣ್ಯವನು ಕಂಡುಹರ ಮರಳುಗೊಂಡ ಕಥೆ ಕೇಳಿ ಅರಿಯಾ 6 ಹರಿಯ ಮೊಮ್ಮನ ಬಾಣಾಸುರನು ಸೆರೆವಿಡಿಯೆಗರುಡವಾಹನನಾಗಿ ಕೃಷ್ಣ ಬಂದುಹರನ ಧುರದಲಿ ಜಯಿಸಿ ಅವನ ಕಿಂಕರನ ಸಾ-ವಿರ ತೋಳುಗಳ ತರಿದ ಕಥೆಯ ನೀನರಿಯಾ 7 ಸುರತರುವ ಕಿತ್ತು ಹರಿ ಸುರಲೋಕದಿಂದ ಬರೆಹರನು ಹರಿಯೊಡನೆ ಕದನವನು ಮಾಡೆತರಹರಿಸಲಾರದೋಡಿದ ಕಥೆಯ ನೀನೊಮ್ಮೆಹಿರಿಯರ ಮುಖದಿ ಕೇಳಿ ನಂಬು ಹರಿಯಾ 8 ಹರಸುತನು ತಪದಿಂದ ಹರಿಯ ಚಕ್ರವ ಬೇಡೆಪರಮ ಹರುಷದಲಿ ಚಕ್ರವನೀಯಲುಭರದಿಂದ ಧರಿಸಲಾರದೆ ಚಕ್ರವನಂದುಹರನು ಭಂಗಿತನಾದನೆಂದರಿಯಲಾ 9 ರಾವಣಾಸುರ ಕುಂಭಕರ್ಣ ನರಕಾದಿಗಳುಶೈವತಪವನು ಮಾಡಿ ವರವ ಪಡೆಯೆಅವರುಗಳನು ವಿಷ್ಣು ನರರೂಪಿನಿಂದರಿದುದೇವರ್ಕಳನು ಕಾಯಿದ ಕಥೆಯ ನೀನರಿಯಾ 10 ಗಂಗಾಜನಕನÀ ಸನ್ಮಂಗಲ ಚರಿತ್ರ್ರೆಗಳಹಿಂಗದಲೆ ಕೇಳಿ ಸುಖಿಸುವ ಜನರಿಗೆಭಂಗವಿಲ್ಲದ ಪದವನಿತ್ತು ಸಲಹುವ ನಮ್ಮರಂಗವಿಠ್ಠಲರಾಯನ ನೆರೆ ನಂಬಿರೋ11
--------------
ಶ್ರೀಪಾದರಾಜರು
ಹೆಳೆಲೆ ಸಖಿ ಘಮ್ಮನೆ ಸುಳಿದವನಾರೇ | ಕೇಳಮ್ಮ ಒಮ್ಮಿಂ ದೊಮ್ಮೆಲೆ ಕಂಡೆ ನಾನೀರೆ | ಒಲಿದು ಕರೆ ತಂದೆನಗಿನ್ನೊಮ್ಮೆ ದೋರೇ | ಚಲುವಿಕೆಯವನ ಉಸುರಲಾರೆ ಪ ಪದುಮ ಶಂಖ ಚಕ್ರಾಂಕಿ ತರುಣ ತಳದಾ | ಬಿದಿಗೆ ಚಂದ್ರಮನ ನೀಲಮಣಿಯಂತೆ ಹರಡಿನ ಪಾದಾ | ಚದುರ ನೂಪುರ ಗೆಜ್ಜೆ ರವದಾ 1 ಜಾನೂರು ಪೋಂಬಾಳೆ ಕಟಿ ತಟಾ | ಸುನಾಭಿ ತ್ರಿವಳಿಯ ಕೂಟಾ 2 ಕಿರಿಡೊಳ್ಳು ಮಧ್ಯ ಯಳೆ ವಾಸೆ ಹೃದಯಲಿ ಪದಕಾ | ಸಿರಿವತ್ಸ ಗ್ರೀವ ಕರ ಕಡಗ ತೋಳ ಬಂದಿ ಕುಂಡಲ ರನ್ನನೇಕಾ 3 ಕುರು ಮರಿಯಂದದಿ ಕದಪಿನಮುಖಾ | ಕಿರುನಗೆ ದಂತಾರ ನಯನ ಭ್ರೂತಿಲಕಾ | ನೊಸಲು ಕಸ್ತೂರಿ ತಿಲಕಾ 4 ತೆರಳಿದ ಬೆರಳುಂಗುರ ಸನ್ನೆ ಮಾಡುತಾ | ಗುರು ಮಹಿಪತಿ ನಂದನ ಪ್ರಭುನಿವಸತ್ಯ | ಧರಿಯೋಳಳಿವನ ಗಾಣಿ ಪರತಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
211ಶೃಂಗಾರವಾಗಿದೆ ಸಿರಿರಂಗನ ಮಂಚಅಂಗನೆಮಹಲಕುಮಿಯರಸ ಮಲಗುವ ಮಂಚಪಬಡಿಗ ಮುಟ್ಟದ ಮಂಚ | ಮಡುವಿನೊಳಿಹ ಮಂಚ |ಮೃಡನ ತೋಳಲಿ ನೆಲಸಿಹ ಮಂಚ ||ಹೆಡೆಯುಳ್ಳ ಹೊಸಮಂಚ ಪೊಡವಿ ಹೊತ್ತಿಹ ಮಂಚ |ಕಡಲ ಶಯನ ಶ್ರೀ ರಂಗನ ಮಂಚ 1ಕಣ್ಣು-ಮೂಗಿನ ಮಂಚ ಬೆನ್ನು ಬಾಗಿದ ಮಂಚ |ಹುಣ್ಣಿಮೆಯ ಚಂದ್ರಮನ ಅಡ್ಡಗಟ್ಟುವ ಮಂಚ ||ಬಣ್ಣ ಬಿಳುಪಿನ ಮಂಚ ಹೊನ್ನು ಕಾದಿಹ ಮಂಚ |ಚೆನ್ನಿಗ ಪರೀಕ್ಷೀತನ ಪ್ರಾಣವಕೊಂಡಮಂಚ2ಕಾಲಿಲ್ಲದೋಡುವ ಮಂಚ | ಗಾಳಿ ನುಂಗುವ ಮಂಚ |ನಾಲಗೆಯೆರಡುಳ್ಳ ವಿಷದ ಮಂಚ ||ಏಳು ಹೆಡೆಯ ಮಂಚ | ಮೂಲೋಕದೊಡೆಯನ ಮಂಚ |ಕಾಳಗದಲಿ ಕಿರೀಟಿಯ ಮುಕುಟಕೊಂಡಮಂಚ3ಹಕ್ಕಿಗೆ ಹಗೆಯಾದ ಮಂಚ | ರೊಕ್ಕ ಮುಟ್ಟದ ಮಂಚ |ರಕ್ಕಸರೆದೆದಲ್ಲಣನ ಮಂಚ ||ಸೊಕ್ಕು ಪಿಡಿದ ಮಂಚ | ಘಕ್ಕನೆ ಪೋಗುವ ಮಂಚ |ಲಕ್ಕುಮಿ ರಮಣ ಶ್ರೀ ಹರಿಯ ಮಂಚ 4ಅಂಕುಡೊಂಕಿನ ಮಂಚ | ಅಕಲಂಕ ಮಹಿಮ ಮಂಚ |ಸಂಕರುಕ್ಷಣನೆಂಬ ಸುಖದ ಮಂಚ |ಶಂಕರನ ಕೊರಳಿಗೆ ಪದಕವಾಗಿಹ ಮಂಚ |ವೆಂಕಟಪುರಂದರವಿಠಲ ರಾಯನ ಮಂಚ5
--------------
ಪುರಂದರದಾಸರು
ಆರೆನ್ನ ಉಳುಹುವರೈ ರಂಗಘೋರಾರಣ್ಯ ಭವದಿ ಸಿಕ್ಕಿದೆ ರಂಗ ಪ.ಎಂಟು ಕಾಡಾನೆ ಎಂಟು ಕಡೆಯಲಿ ನಿಂತಿವೆಗಂಟನಿಕ್ಕಿವೆ ಮೂರು ದಳ್ಳುರಿಯಸುಂಟರಗಾಳ್ಯೆಬ್ಬರಿಸಲು ಗಿಡಗಂಟಿಲಿ ಬಿದ್ದೆ ನೀನಲ್ಲದೆನ್ನ 1ಹುಲಿಯೊಂದು ಗುಡುಗುಡಿಸುತಿದೆ ಭಯಂಕರಬಲು ತೋಳೆರಡು ಕೆಕ್ಕರಿಸುತಿವೆಸಲುಗೆಯ ಕೋತಿಯೊಂದಣಕಾಡುತಲಿದೆಮೇಲೆ ಕರಡಿಯು ಹತ್ತೆಳವುತಿದೆ 2ಕಾಳುರಗನ ಕಟ್ಟು ಮೈತುಂಬ ನನ್ನನಾಲಿಗೇಳದು ನಿನ್ನ ಕರೆಯಲಿಕೆ ನಿನ್ನಾಳಟ್ಟಿ ಕರೆಸಿಕೊಳ್ಳೆಲೆ ತಂದೆ ನಾಗೋಳಿಟ್ಟೆ ಪ್ರಸನ್ನವೆಂಕಟ ಬಂಧು 3
--------------
ಪ್ರಸನ್ನವೆಂಕಟದಾಸರು
ಆವ ಪುಣ್ಯವೊ ಗೋಪಿಗಾವ ಪುಣ್ಯವೊ ಪ.ಆವ ಪರಬೊಮ್ಮನಾವಾವ ಪರಿಯಲಾಡಿಸುವ ಅ.ಪ.ಮಾರನನ್ನ ಪೆತ್ತನ ಕುಮಾರನೆಂದು ಕರೆದು ತನ್ನಮಾರಬೀಸಿ ಬಿಗಿದಪ್ಪಿ ಮೋರೆ ನೋಡಿ ಮೊಲೆಯ ಕೊಡುವ1ಕಾಲನಾಗಿ ಜಗವ ತತ್ಕಾಲದಲ್ಲಿ ನುಂಗುವಂಗೆಕಾಲಮೇಲೆ ಮಲಗಿಸಿ ತ್ರಿಕಾಲದಲ್ಲಿ ಹಾಲನೆರೆವ2ನೀತ ಪ್ರಭು ವಿಶ್ವಕೆ ವಿನೀತನಾಗಿ ಕೈಯ ಒಡ್ಡೆನೀತಿ ಹೇಳಿ ನವನವನೀತವಿತ್ತು ರಂಜಿಸುವ 3ಆನೆಗೊಲಿದು ಎಂಟುದಿಕ್ಕಿನಾನೆಯಾಳ್ದ ಅಪ್ರತಿಮ ದಯಾನಿಧಿಯ ಕುಳ್ಳಿರಿಸಿ ಆನೆ ಬಂತಂತಾನೆಯೆಂಬ 4ತೋಳನೋಡುಧೈರ್ಯದೀರ್ಹತ್ತು ತೋಳಿನವನ ಹೋರುವ ನಳಿತೋಳವಿಡಿದು ವಾರಂವಾರ ತೋಳನ್ನಾಡೊ ಮಗನೆ ಎಂಬ 5ತಾರಕೋಪದೇಶಕಗೆತಾರಕರಂಗನಳಲುತಾರಕಪತಿಯ ತೋರಿ ತಾರಕ್ಕ ಬಿಂದಿಗೆಯೆಂಬ 6ದಟ್ಟವಾದ ಜೀವಜಾಲದಅಟ್ಟುಳಿನಿವಾರಣಂಗೆದಟ್ಟು ದಟ್ಟು ಎಂದು ರಂಗನ ದಟ್ಟ ಸಾಲನಿಕ್ಕಿಸುವ 7ಚಿನ್ಮಯಾತ್ಮ ಮುಕ್ತಾಮುಕ್ತ ಚಿನ್ನರನಾಡಿಸುವಂಗೆಚಿನ್ನ ತಾ ಹೊನ್ನ ಗುಬ್ಬಿ ಚಿನ್ನ ಗುಬ್ಬಿಯಾಡಿಸುವ 8ದೃಷ್ಟಾದೃಷ್ಟದೇಹಿಗಳದೃಷ್ಟ ನಿಯಾಮಕಂಗೆದೃಷ್ಟಿ ತಾಕಿತೆಂದು ತೆಗೆದು ದೃಷ್ಟಿ ದಣಿಯೆತುಷ್ಟಿಬಡುವ9ಅನ್ನಮಯನು ಬ್ರಹ್ಮಾದ್ಯರಿಗೆ ಅನ್ನಕಲ್ಪತರುಪರಮಾನ್ನ ಚಿನ್ನಿಪಾಲಿನಿಂದ ಅನ್ನಪ್ರಾಶನ ಮಾಡಿಸುವ 10ನಿತ್ಯತೃಪ್ತ ನಿತ್ಯಾನಂದ ನಿತ್ಯಭೋಗಿ ನಿತ್ಯತಂತ್ರನಿತ್ಯಕರ್ಮನ್ನೆತ್ತಿಕೊಂಡುನೆತ್ತಿಮೂಸಿ ಮುದ್ದಿಸುವ11ಆ ಲಯದಲ್ಲಾಲದೆಲೆ ಆಲಯಗೆ ತೊಟ್ಟಿಲು ಉಯ್ಯಾಲೆಯಿಟ್ಟು ಮುದ್ದು ಮಾತನಾಲಿಸಿ ಜೋಗುಳವ ಪಾಡುವ 12ಅಂಜಲಿಪುಟದಿ ಸುರರಂಜಿಕೆಯ ಬಿಡಿಸುವ ನಿರÀಂಜನಗಭ್ಯಂಜನಿಸಿ ಅಂಜನಿಟ್ಟುಅಮ್ಮೆಕೊಡುವ13ಸಪ್ತ ಸಪ್ತಭುವನಜನಕೆಸುಪ್ತಿಎಚ್ಚರೀವನಿಗೆಸುಪ್ತಿಕಾಲವೆಂದು ತಾನು ಸುಪ್ತಳಾಗಿ ಸ್ತನವ ಕೊಡುವ14ತನ್ನ ಮಗನ ನಡೆಯ ನುಡಿಯ ತನ್ನ ಪತಿಗೆ ಹೇಳಿ ಹಿಗ್ಗಿತನ್ನ ಭಾಗ್ಯ ಲಕ್ಷ್ಮೀಶ ಪ್ರಸನ್ನವೆಂಕಟ ಕೃಷ್ಣಯೆಂಬ 15
--------------
ಪ್ರಸನ್ನವೆಂಕಟದಾಸರು
ಎಂಥ ಗಾಡಿಕಾರನೆ ಯಶೋದೆ ನಿನ್ನ ಮಗ ಏಕಾಂತಕಾಂತೆರೊಳಾಡುವ ಕೊಂಕು ನೋಡುವ ಪ.ಮುಗುಳುನಗೆಗಳಿಂದ ಮಡದೇರ ಕಂಚುಕದಬಿಗುಹಿನ ಮಲಕ ಬಿಟ್ಟ ಬಹಳ ದಿಟ್ಟಉಗುರೊತ್ತಿ ಗುರುತು ಪೊಂಬುಗುರಿಗಳೆಮ್ಮವೆಮೊಗ್ಗು ಮೊಲೆಗಳ ಪಿಡಿದು ಮೊನೆ ನೋಡಿದ 1ತೋಳೆರಡನು ತಳಕಿಕ್ಕಿ ಇವಿಗೋ ದುಂಡುಮೊಲೆ ಎನಗಂದವೆಂದು ಮೋಹನಸಿಂಧುತಾಳಿದ್ದ ಕೊರಳೊಳು ತನ್ನ ಪದಕದೊಳುಮೇಲದೆಯೆಂದಪ್ಪಿದ ಬಿಗಿದಪ್ಪಿದ 2ರಾಕೇಂದುಮುಖಿಗೆರಾಹುಬಂದು ತೊಡರಿತುಈಕೆಗೆ ಮೋಸವೆಂದು ಎತ್ತಿದ ಬಂದುಜೋಕೆ ಮಾಡುವೆನೆಂದುಜಡಿದುಮಾರವೇಣಿಯಸಾಕಿ ಉಪಕಾರವೆಂದಸಚ್ಚಿದಾನಂದ3ಎಲೆಲೆ ನಾಭಿ ಒಲ್ಪಕಾಯಳೆ ನಾವು ಮುಟ್ಟಿ ಕೆಂಪಿನಾಮೊಲೆ ಮೊಗ್ಗು ಕಪ್ಪಾದವೆಂದು ಮುಟ್ಟಿ ಅಹುದೆಂದುಅಲಕದ ಪೆಳಲ ಬಿಟ್ಟು ಅಹಿರಿಪು ನವಿಲುಥರಅಲರ್ಗಳಾರ್ಮುಡಿಗಟ್ಟಿದ ಅಂಜಬ್ಯಾಡೆಂದ 4ಚದುರೇರೆನ್ನ ವಂಚಿಸಿ ಚಿನ್ನಿಪಾಲು ತನಿವಣ್ಣುಇದೀಗ ಬಚ್ಚಿಟ್ಟರೆಂದು ಯದುಕುಲೇಂದುಮುದ್ದು ಬಟುಗಲ್ಲದಿ ಮೊನೆವಲ್ಗಳ ನಾಟಿಸಿಅಧರಾಮೃತ ಪೀರಿದ ಅತಿಕೊಬ್ಬಿದ 5ಮುಡಿಯ ತೋರಕ ಕೊಡ ಮಲಿ ಭಾರಕಬಡನಡು ಮುರಿವದೆಂದು ನಗೆಯಲ್ಲವೆಂದುಜಡಿತದೊಡ್ಯಾಣವ ಜಾಣೆ ಕಟಿಗೆ ಬಿಗಿದುಡಿಗೆ ಕರವನಿಡಿದ ದುಡುಕು ಮಾಡಿದ 6ಮೃಗಮದಬಾವನ್ನ ಮಘಮಘಿಪ ಪೂಮಾಲೆಝಗಝಗಿಪ ಭೂಷಣವ ಜಾತಿ ಮೌಕ್ತಿಕವಮುಗುದೇರಿಗಿತ್ತ ಮೋಹಿಪ ಪ್ರಸನ್ನವೆಂಕಟಜಗಕೊಬ್ಬ ಚೆಲುವನಮ್ಮ ಜಯಿಸಿದ ನಮ್ಮ 7
--------------
ಪ್ರಸನ್ನವೆಂಕಟದಾಸರು
ಎಂಥ ಬಾಲಕೃಷ್ಣ ಗೋಪೇರಂತಃಚೋರಾನಂತನೆಕಂತುಪಿತ ಕೋಟಿ ಕಾಂತಿಯಲ್ಲಿ ಭ್ರಾಂತ ಮಾಡಿದನಿವ ಪ.ಬಾಲನಾದರೊಳಿತು ಒಳ್ಳೆ ಬಾಲೆಯರಮೊಳೆಮೊಲೆಗಾಲದ ಹಣ್ಣೆಂದು ನಖದಲಿ ಸೀಳಿ ನೋಡುವರೆಹೇಳಲೇನೆಂತೆನ್ನ ನಳಿತೋಳಲಪ್ಪಿ ತೊಂಡೆಹಣ್ಣಿಗ್ಹೋಲುವದೆಂದಧರನುಂಡ ತಾಳಬಹುದೇನಮ್ಮ 1ನಿಚ್ಚಟಮೈಯೊಳು ನಾವುನಿಚ್ಚಮೈಯ ತೊಳೆಯುವಾಗಬಚ್ಚಲೊಳು ಬಂದು ಕಣ್ಣಮುಚ್ಚಿ ಅಟ್ಟಹಾಸದಿಸಚ್ಚಿದಾನಂದಗೋಪಾಲ ವಚ್ಚೆರೆಗಂಗಳೆಯರಹುಚ್ಚುಮಾಡಿ ಹೋದನಿವನ ನೆಚ್ಚಬಹುದೇನಮ್ಮ 2ಹತ್ತಿಲಿದ್ದ ಸುಪ್ತ್ತಪುರುಷನ್ನೊತ್ತಿ ರತಿಕಳೆದೋರಿಚಿತ್ತ ಸೂರೆಗೊಂಬುದಾವ ಕೃತ್ಯವಮ್ಮ ರಂಗಗೆಸುತ್ತಿನವರರಿಯರೆಂದು ಚಿತ್ತವಾಯಿತಲ್ಲದೆಅತ್ತೆ ಮಾವ ಕಂಡರೆಮ್ಮ ತೊತ್ತು ಮಾಡಿ ಬಡಿವರೆ 3ಹಟನೆಂದು ಬಾಯೊಳು ಬಾಯಿಟ್ಟು ಮುದ್ದನಿಡಲುಬಟ್ಟಕುಚವಿಡಿದೆಮ್ಮ ರಟ್ಟು ಮಾಡಬಹುದೆದಿಟ್ಟ ಜಾರನಿಗೆ ಕೈಯ ಕಟ್ಟುವೆವೆಂದರೆ ಚೆಲ್ವಬಟ್ಟಗಲ್ಲ ಕಚ್ಚಿ ಕ್ಷತವಿಟ್ಟೋಡಿದ ನಮ್ಮಯ್ಯ 4ಚಿನ್ನನಾದರೇನು ಚೊಕ್ಕ ಚಿನ್ನದಂಥ ಗುಣವುಳ್ಳಚೆನ್ನಿಗನ ರೂಪಕೊಲಿದ ಕನ್ಯೆಯರು ಪೂರ್ವದಪುಣ್ಯವಂತರಲ್ಲದುಳಿದಿನ್ನಾರಿಗೆಲ್ಲಿ ಎಂದೂ ಪ್ರಸನ್ವೆಂಕಟೇಶ ಸಿಕ್ಕ ಇನ್ನು ಸುಖ ದಕ್ಕೀತೆ 5
--------------
ಪ್ರಸನ್ನವೆಂಕಟದಾಸರು
ಕಂಡೆನಾ ಕನಸಿನಲಿ ಗೋವಿಂದನ ಪಕಂಡೆನಾ ಕನಸಿನಲಿ ಕನಕರತ್ನದ ಮಣಿಯ |ನಂದನ ಕಂದ ಮುಕುಂದನ ಚರಣವ ಅ.ಪಅಂದುಗೆಕಿರುಗೆಜ್ಜೆ ಘಲಿರೆಂಬ ನಾದದಿಬಂದು ಕಾಳಿಂಗನ ಹೆಡೆಯನೇರಿ ||ಧಿಂಧಿಮಿ ಧಿಮಿಕೆಂದು ತಾಳಗಳಿಂದಾನಂದದಿ ಕುಣಿವ ಮುಕುಂದನ ಚರಣವ 1ಉಟ್ಟ ಪೀತಾಂಬರ ಉಡಿಯ ಕಾಂಚಿಯದಾಮತೊಟ್ಟ ಮುತ್ತಿನ ಹಾರ ಕೌಸ್ತುಭವು ||ಕಟ್ಟಿದವೈಜಯಂತಿತುಲಸಿಯ ವನಮಾಲೆಇಟ್ಟ ದ್ವಾದಶನಾಮ ನಿಗಮಗೋಚರನ 2ಕಿರುಬೆರಳಿನ ಮುದ್ರೆಯುಂಗುರ ಮುಂಗಡೆಕರದಲಿ ಕಂಕಣ ನಳಿತೋಳುಗಳ ||ವರಚತುರ್ಭುಜ ಶಂಖಚಕ್ರದಿ ಮೆರೆವನನಿರುತದಿ ಒಪ್ಪುವ ಕರುಣಾ ಮೂರುತಿಯ 3ಬಣ್ಣದ ತುಟಿ ಭಾವರಚನೆಯ ಸುಲಿಪಲ್ಲಸಣ್ಣ ನಗೆಯ ನುಡಿ ಸವಿಮಾತಿನ ||ಪುಣ್ಯ ಚರಿತ್ರನ ಪೊಳೆವ ಕಿರೀಟನಕಣ್ಣು ಮನ ತಣಿಯದಕಂಸಾರಿಕೃಷ್ಣನ4ಮಂಗಳ ವರತುಂಗಭದ್ರದಿ ಮೆರೆವನಅಂಗಜಪಿತಶ್ರೀ ಲಕ್ಷ್ಮೀಪತಿಯ ||ಶೃಂಗಾರ ಮೂರುತಿಪುರಂದರವಿಠಲನಕಂಗಳಿಂದಲಿ ಕಂಡೆ ಹಿಂಗಿತು ಭವಭಯ 5
--------------
ಪುರಂದರದಾಸರು