ಒಟ್ಟು 229 ಕಡೆಗಳಲ್ಲಿ , 59 ದಾಸರು , 194 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮೂರ್ತಿ ಪ ಲೋಕದ ಜನರಘವನು ತೊಳೆಯಲಿಕೆ ತ್ರೈ ಲೋಕ ದೊಡೆಯ ಚದಂಬರನಾಗಿ ಭೂಕಾಂತೆಯೊಳಗೆ ಮೂರ್ತಿ ದಯಾಪರ ಮೂರುತಿ 1 ಮಾಡಿಕೊಂಡ ಪಾಪದ ರಾಶಿಯು ದಿನ ದಿನ ಉರಿಗೊಂಡು ಸುಟ್ಟುದು ಮರೆಹೊಕ್ಕೆನೀಗಳು ಪಾದ ಪುಂಡರೀಕವನು ಚಿದಂಬರಮೂರ್ತಿ 2 ಹೊನ್ನು ಹಣವ ಚಿನ್ನ ಚಿಗುರು ಬೇಡುವನಲ್ಲ ಪಾದ ಪದ್ಮದ ಸ್ಮರಣೆಯನು ಸಂಪೂರ್ಣವಾಗಿರುವ ನಿತ್ಯ ಸುಖಾರ್ಣವಾನಂದ ಚಿದಂಬರಮೂರ್ತಿ 3 ಬೇಡುವೆನೊಂದು ವರವ ಕೊಡುವರೆ ಈ ಗೂಡಿರುವತನಕ ಕೃಪೆಮಾಡಿ ಸಲಹೋ ಎನ್ನ ನೋಡಿ ಬಡವನ ಚಿದಂಬರಮೂರ್ತಿ 4 ಪ್ರಾಕುನುಡಿದ ಪುಣ್ಯದಿಂದ ನಿಮ್ಮಯಪಾದ ಸೇರೆ ನಾ ಕೃತ ಕೃತ್ಯನಾದೆ ನಿಂದಿನ ಜನ್ಮ ಸಾರ್ಥಕ ವಾಯ್ತು ಪರಾಕೆ ಚಿದಂಬರ ನೀ ಕರುಣಿಸೋ ಎನಗಭಯವಿತ್ತು 5
--------------
ಕವಿ ಪರಮದೇವದಾಸರು
ಯಾಕೆ ಪುಟ್ಟಿಸಿದಿ ಇನ್ನು ಎಲೊ ಹರಿಯೆ | ಲೋಕ ದೊಳಗನುಗಾಲ ತಿರಿದು ತಿಂಬುವಂತೆ ಮಾಡಿ ಪ ಒಡಲಿಗಾಗಿ ಒಬ್ಬನ ಸಂಗಡ ಹೋಗಲು | ಕೊಡುವವನು ಇಲ್ಲೆಂದು ಪರಿಹರಿಸುವ || ಸುಡು ಈ ಶರೀರವ ಬಳಲಲಾರೆನೊ ವಿಷದ, ಮಡುವನಾದರು ಧುಮುಕಿ ಮರಣವಾಗುವೆ ರಂಗಾ 1 ಪ್ರತಿದಿನವೂ ಅನ್ನ ಕೊಡುವವನ ಬಾಗಿಲಿಗ್ಹೋಗೆ | ಹುತವಾಗುವನು ಎನ್ನ ನೋಡುತಲಿ || ಪರಿ ಬದುಕಿ ಇಹೋದಕಿಂತ | ಹತವಾಗಬಹುದಂಬಿನ ಮೊನೆಗೆ ಬಿದ್ದು ರಂಗಾ 2 ಎಲ್ಲಿ ಬೇಡಿದಲ್ಲವೆಂಬೋ ಸೊಲ್ಲಿಲ್ಲಿದೇ | ಒಲ್ಲೆನೋ ಸಾಕು ಈ ನರ ಜನ್ಮವು ಸಿರಿ ವಿಜಯವಿಠ್ಠಲ ನಿ- | ನ್ನಲ್ಲಿ ದೂತರ ಸಂಗದಲ್ಲಿ ಸುಖಬಡಿಸೊ 3
--------------
ವಿಜಯದಾಸ
ಯಾಕೆ ಮರುಳಾದೆ ಹೀಂಗೆ ಎಲೆ ಮನವೆ ಕಾಕು ಬುದ್ಧಿಯ ಬಿಡು ಬಿಡು ಸುಮ್ಮನೆ ಪ. ಧನದಾಸೆಯನು ಮರಿ ಮನುಮಥನ ಬಾಣಕಳುಕದಿರು ತೊಳಲದಿರು ನೆಲದಾಸೆಗೆ ನೀನದರ ಅನುವರಿತು ಹರಿಯ ಸ್ಮರಿಸು ಮನವೆ 1 ಅನ್ಯರಾಗುಣ ದೋಷಯಣಿಸದಲೆ ನಿನ್ನಿರವ ನೋಡು ಕಂಡ್ಯಾ ಮನವೆ ಬಂಣಗಾರಿಕೆಯು ಬರಿದೆ ಔದಂಬ್ರ- ಹಣ್ಣಿನಂತೀ ಕಾಯವು ಮನವೆ 2 ತಮ್ಮ ಬುದ್ದಿ ತಲೆಗೆ ಸುತ್ತಿ ಸಂಸಾರ ಭ್ರಮೆಗೊಂಡು ಬಳಲಾದಿರೋ ಕಮಲಪತ್ರಕ್ಕೆ ಒಳಗಿನ ಜಲದಂತೆ ನೆಲಕೆ ನಿರ್ಲೇಪನಾಗೋ ಮನವೆ 3 ಈ ದೇಹ ಸ್ಥಿರವಲ್ಲವೊ ಕಾಲನಾ ಬಾಧೆಗೋಳಗಾಗದಿರೋ ಮನವೆ ಭೇದ ದುರ್ಗುಣವ ತ್ಯಜಿಸು ನೀ ಗೇರುಬೀಜದಂದದಿ ತಿಳಿಯೊ ಮನವೆ 4 ಮಾಡು ಹರಿಸೇವೆಯನ್ನು ಮನದಣಿಯೆ ಬೇಡು ಹರಿಭಕ್ತಿಯನ್ನು ಕೂಡು ಹೆಳವನಕಟ್ಟೆಯ ವೆಂಕಟನ ಬೇಡಿ ಮುಕ್ತಿಯನು ಪಡೆಯೊ ಮನವೆ 5
--------------
ಹೆಳವನಕಟ್ಟೆ ಗಿರಿಯಮ್ಮ
ರಕ್ಷಿಸು ಮಹಮಾಯೆ ಕರುಣ ಕ- ಟಾಕ್ಷದಿಂದಲಿ ತಾಯೆ ಪ. ದಾಕ್ಷಾಯಿಣಿ ದೈತ್ಯಾಂತಕಿ ವರ ನಿಟಿ- ಲಾಕ್ಷನ ರಾಮಿ ನಿರೀಕ್ಷಿಸು ಜನನೀಅ.ಪ. ವಾಸವಮುಖವಿನುತೆ ರವಿಸಂ- ಕಾಶೆ ಸುಗುಣಯೂಥೇ ಭಾಸುರಮಣಿಗಣಭೂಷೆ ತ್ರಿಲೋಕಾ- ಧೀಶೆ ಭಕ್ತಜನಪೋಷೆ ಪರೇಶೆ1 ಗುಹಗಣಪರಮಾತೆ ದುರಿತಾ- ಪಹೆ ದುರ್ಜನ ಘಾತೆ ಬಹುಕಾಮಿತಪ್ರದೆ ಭಜಕಜನೋರ್ಜಿತೆ ಮಹಿತೆ ಯೋಗಿಹೃದ್ಗುಹನಿವಾಸಿನಿಯೆ2 ಶುಂಭಾಸುರಮಥಿನಿ ಸುರನಿಕು- ರುಂಬಾರ್ಚಿತೆ ಸುಮನಿ ರಂಭಾದಿಸುರನಿತಂಬಿನೀ ಜನಕ- ದಂಬಸೇವಿತಪದಾಂಬುಜೆ ಗಿರಿಜೆ3 ಅಷ್ಟಾಯುಧಪಾಣಿ ಸದಾಸಂ- ತುಷ್ಟೆ ಸರಸವಾಣಿ ಸೃಷ್ಟಿಲಯೋದಯಕಾರಿಣಿ ರುದ್ರನ ಪರಾಕು ಕಲ್ಯಾಣಿ4 ನೇತ್ರಾವತಿ ತಟದ ವಟಪುರ- ಕ್ಷೇತ್ರಮಂದಿರೆ ಶುಭದಾ ಸುತ್ರಾಣಿ ಲಕ್ಷ್ಮೀನಾರಾಯಣಿ ಸ- ರ್ವತ್ರ ಭರಿತೆ ಲೋಕತ್ರಯನಾಯಕಿ5
--------------
ತುಪಾಕಿ ವೆಂಕಟರಮಣಾಚಾರ್ಯ
ರಾಜೀವ ನಯನೆಯ ಪೂಜೆ ಮಾಡುವ ಬನ್ನಿರೆ ಪ. ಪೂಜೆ ಮಾಡುವ ಬನ್ನಿ ಮೂಜಗದಂಬೆಯ ರಾಜರಾಜೇಶ್ವರಿಯ ಪದರಾಜೀವಗಳಿಗೆರಗಿ ವಿನಯದಿ ಅ.ಪ. ಸನ್ನುತಾಂಗಿಯರೆಲ್ಲರೂ ಬನ್ನಿರೆ ಸಂ ಪನ್ನ ಗುಣಯುತರು ಚಿನ್ನದ ಕಲಶದೋಳ್ ತುಂಬಿದ ಪನ್ನೀರಿಂ ಸೆನ್ನಿಯಂ ತೊಳೆದು ಸಿರಿಪದ ವನ್ನು ಸಂಸ್ಮರಿಸಿ ಹರಿಯನು 1 ಪ್ರೇಮಗೌರವವೆಂಬ ಹೇಮಾಂಬರವ ಭಾಮಿನಿಗಳವಡಿಸುವ ಭಾವರಾಗದ ಕುಂಕುಮ ತಿದ್ದಿಫಾಲದೆ ಭಾವನಾಯೋಗದೊಳ್ ನಲಿಯುತ 2 ಗುರುಗಳಾಣತಿಯಂದದಿ ಶ್ರೀಪಾದದಿ ಶರಣು ಬೇಡಿರೆ ಮೋದದಿ ವರಶೇಷಗಿರೀಶನ ಕರುಣಾರೂಪಿಣಿಯೆನಿಪ ಭರಿತ ಮಾನಸರಾಗಿ ಸಂತತೆ 3
--------------
ನಂಜನಗೂಡು ತಿರುಮಲಾಂಬಾ
ರಾಮಾ ರಘುಕುಲರಾಮ ಪ ಸುರ ಸಾರ್ವಭೌಮ ಪಾಹಿ ಗುಣಧಾಮಾ ಅ.ಪ. ವಾಹನ ಫಣೀಂದ್ರಶಯನ ವರ ದೇಂದ್ರನುತ ರಾಮಚಂದ್ರಾ 1 ಚಂಡಬಾಣ ಕೋದಂಡಾ ವಿಧೃತ ದೋ ರ್ದಂಡಾ ಲೋಕೈಕ ಶುಂಡಾ 2 ಗೋಪ್ತಾ ಮೂಜಗದ್ವ್ಯಾಪ್ತಾ ದೋಷನಿ ರ್ಲಿಪ್ತಾ ವಿಬುಧಜನರಾಪ್ತಾ 3 ಘನ್ನಾ ಸೌಪರಿಛಿನ್ನ ಕಾಲಾತಿ ಭಿನ್ನ ಜಗದ ಮೋಹನ್ನಾ 4 ಅಂಬಾವಲ್ಲಭ ಬಿಂಬಾಸುರ ಮುನಿಕ ದಂಬಾ ಸೇವೆ ಕೈಕೊಂಬಾ 5 ಗಣ್ಯಾಗಣ್ಯನೆ ಶರಣ್ಯ ಸಲಹೋ ನಿ ರ್ವೀಣ್ಣ ಸುರವರವರೇಣ್ಯ 6 ಜ್ಞಾನಾನಂದಾದಿ ನಾನಾ ಗುಣಪೂರ್ಣ ಶ್ರೀ ನಾರಾಯಣ ಸಮಾನಾ 7 ಕಪಿಲಾ ಭಕ್ತರಿಗೆ ಸುಫಲಾದಾಯಕ ಚಪಲಚಿತ್ತರಿಗೆ ಉಪಲಾ 8 ಸೀತಾಪತೆ ಜಗನ್ನಾಥ ವಿಠಲ ಖ್ಯಾತಾ ಭವವನನಿಧಿ ಪೋತಾ 9
--------------
ಜಗನ್ನಾಥದಾಸರು
ರುದ್ರ ದೇವರು ಕಂಟಕವ ಪರಿಹರಿಸೊ ಶ್ರೀ ಕಂಠಮೂರುತಿಯೇ ಪ ಬಂಟನೆಂದೆನಿಸೆನ್ನ ವೈಕುಂಠಮೂರುತಿಗೇ ಅ.ಪ ತಂಟೆಸಂಸಾರದ ಲಂಪಟದಲೆನ್ನ ಮನ ಮರ್ಕಟದÀ ತೆರದಿ ಪರ್ಯಟನ ಮಾಡೆ ಅಂಟಿಕೊಂಡಿಹ ಈ ಭವಾಟವಿಯ ದಾಂಟಿಸುವೆ ನೆಂಟ ನೀನಹುದಯ್ಯ ಶಿತಿಕಂಠದೇವಾ 1 ನಿರ್ಜರೇಶನ ಬಿಂಬ ಮೂರ್ಜಗದೊಳಗೆಲ್ಲ ಧೂರ್ಜಟಯೆ ನೀನೆ ಭವವರ್ಜಿತನ ಮಾಡೋ ದುರ್ಜಯವು ಎನ್ನ ಮನ ಆರ್ಜಿಸದೆ ಹರಿಭಕುತಿ ಪತಿ ಜನಾರ್ದನನೊಳ್ ಮನ ನಿಲ್ಲಿಸೋ2 ತ್ರ್ಯಂಬಕನೆ ಎನ್ನ ಮನದಂಬರದೋಳ್ ಹರಿಪಾದ ಅಂಬುರುಹ ತೋರಯ್ಯ ಶಂಭೋ ಮಹಾದೇವಾ ಕುಂಭಿಣಿಯೊಳು ಒಂದೆ ಇಂಬುತೋರದು ಎನಗೆ ವೈರಿ ಭವಭಯ ಹಾರೀ 3 ವಾಮದೇವನೆ ಕಾಯೊ ತಾಮಸಮತಿ ಹರಿಸಿ ಶ್ರೀ ಮನೋಹರನಲ್ಲಿ ಸನ್ಮನವ ನೀಡೋ ಸೋಮಶೇಖರ ಸುರಸ್ತೋಮದಲಿ ನಿನ್ನಂಥ ಪ್ರೇಮಿಗಳ ನಾ ಕಾಣೆ ಉಮೆಯರಸ ಸಲಹಯ್ಯ 4 ಶಿಕ್ಷಕನು ನೀ ಜ್ಞಾನಚಕ್ಷುವ ನೀಡು ವಿರೂ ಪಾಕ್ಷಮೂರುತಿ ಶ್ರೀ ವೇಂಕಟೇಶನ ಭಕ್ತ ಈ ಕ್ಷಿತಿಯೊಳ್ ಉರಗಾದ್ರಿವಾಸವಿಠಲನ ಪ್ರ ತ್ಯಕ್ಷದಲಿ ನೋಳ್ಪ ಶ್ರೀ ತ್ರ್ಯಕ್ಷಮೂರುತಿಯೇ 5
--------------
ಉರಗಾದ್ರಿವಾಸವಿಠಲದಾಸರು
ಲಕ್ಷ್ಮೀದೇವಿ ಅಂಬೋರುಹೇಕ್ಷಣೆ ಅಂಬಾಲತೇ ಜಗ ದಂಬಾ ಪೊರೆಯೆ ಸತತ ಗಂಭೀರ ಗಜಗಮನೆ ಪ ನಂಬಿದೆ ನಿನ್ನ ಪದಾಂಬುಜಯುಗಳವ ಕಂಬು ಕಂಧರಿ ಕನಕಾಂಬರ ಧಾರಿಣಿ ಬೆಂಬಲವೀಯೆ ವಿಳಂಬವ ಮಾಡದೆ ಅ.ಪ `ಯಂಕಾಮಯೇ'ತ್ಯಾದಿ ಶೃತಿಗಳೆಲ್ಲಾ ಪಂಕಜಭವಮುಖ ಸುಮನಸರು ಕಿಂಕರರೆನ್ನುತ ಪೊಗಳುತಿರೆ ಶಂಕೆಯುಂಟೆ ನಿನ್ನ ಮಹಿಮೆಗಳಲ್ಲಿ ಶ ಶಾಂಕ ಸೋದರಿ ಆತಂಕವ ಬಿಡಿಸೆ 1 ನೀರಜಾತಗಣ ಕೃತ ನಿಲಯೇ ಮಾರಜನಕ ಹರಿ ಪ್ರಿಯ ಜಾಯೆ ಕೋರುವೆ ನಿನ್ನಯ ಪರಮದಯೆ ಸಾರಸಾಕ್ಷಿ ಸರಿಯಾರು ನಿನಗೆ ಕರು ಣಾರಸಮಯೆ ಸುವಿಶಾರದೆ ಜನನಿ 2 ಕನ್ಯೆ ನಿಖಿಲ ಸುರನರರೊಳಗೆ ಮಾನ್ಯೆ ನಿನ್ನ ಪೋಲುವರನ್ಯರುಂಟೆ ನಿನ್ನ ದಾಸನಾದ ಎನ್ನ ಮನೋರಥ ವನ್ನು ತಿಳಿಸೆ ಪ್ರಸನ್ನ ಶ್ರೀ ಹರಿಯಲಿ 3
--------------
ವಿದ್ಯಾಪ್ರಸನ್ನತೀರ್ಥರು
ಲಕ್ಷ್ಮೀದೇವಿ ನಂಬಿದೆ ನಿನ್ನ ಪಾದಾಂಬುಜಯುಗಳವ- ಶಂಬರಾರಿ ಜನನಿಪ ಬೆಂಬಿಡದೆನ್ನಹೃದಂಬುಜದೊಳಗವಲಂಬಿಸಿ- ಸಲಹುಮದಂಬೆ ಸನಾತನಿ ಅ.ಪ ಅಂಬುಜಮುಖಿ....ಚಿಕುರೆ ಶರ ದಂಬುಜದಳನಯನೆ ಬಿಂಬಫಲಾಧರೆ 1 ಕರ್ಣದೊಳೆಸೆವಸು ವರ್ಣವಿಡಿದ ಪೊಸರನ್ನದೊಡವೆಗಳ ರನ್ನೆ ಗುಣಾರ್ಣವೆ 2 ಮಾಲತಿಮಲ್ಲಿಗೆ ಮಾಲೆಯಿಂದೊಪ್ಪುವ ನೀಲಭುಜಗವೇಣಿ ಗೈದಲಮೇಲಮಂಗಾಮಣಿ 3
--------------
ಸರಗೂರು ವೆಂಕಟವರದಾರ್ಯರು
ಲಕ್ಷ್ಮೀದೇವಿ ನಮಿಸುವೆ ನಮ್ಮಮ್ಮ ಅಮಿತ ಮಹಿಮಳೇ ಆದಿ ಲಕುಮಿಯೇ ಅನುದಿನ ಸಲಹಮ್ಮ 1 ಅಜತ ನಾಮಕನೆ ಆದಿ ದೈವವೆಂದು ತ್ರಿಜಗಮ ತಿಳಿವಂತೆ ನಿಜ ಪುರುಷನಿಗೆ ವನಮಾಲೆಯ ಹಾಕಿ ಭಜಿಸಿದೆ ಬಲವಂತೆ 2 ಕಮಲಜ ಮೊದಲಾದ ಸುಮನಸರಿಂದಲಿ ಕ್ರಮದಿ ಪೂಜೆಗೊಂಬೆ ಸಮನಿಲ್ಲದ ಸೌಭಾಗ್ಯವ ಕೊಡು ನೀ ಮಹ ಜಗದಂಬೆ 3 ಕಮಲವಾರಿಧೆ ಕಮಲಲೋಚನೆ ಕರವೀರ ಪುರಧೀರೆ ವರ ಕದರುಂಡಲಗಿ ಹನುಮಯ್ಯನೊಡೆಯನಉರದೊಳು ಸ್ಥಿರವಾಸೆ 4
--------------
ಕದರುಂಡಲಗಿ ಹನುಮಯ್ಯ
ವಾಣಿ ಪರಮಕಲ್ಯಾಣಿ ನಮೋ ನಮೋ ಅಜನರಾಣಿ ಪಂಕಜಪಾಣಿ ಪ. ಭಳಿರೆ ಭಳಿರೆ ಅಂಬೆ ಭಕ್ತಜನಸುಖದಂಬೆಸುಳಿದಾಡು ಶುಭನಿತಂಬೆ ಅಮ್ಮ ನಿಮ್ಮಹೊಳೆ ಹೊಳೆವ ಮುಖ ಮುಕುರ ಬಿಂಬೆಇಳೆಯೊಳಗೆ ಸರಿಗಾಣೆ ಶಾರದಾಂಬೆ ಪುತ್ಥಳಿಬೊಂಬೆ 1 ವಾಗ್ದೇವಿ 2 ಜಯಜಯತು ಜಗನ್ಮಾತೆ ಜಗದೊಳಗೆ ಪ್ರಖ್ಯಾತೆದಯಮಾಡು ಧವಳಗೀತೆ ಸತತ ಶ್ರೀಹಯವದನ ಪದಕೆ ಪ್ರೀತೆ ಇಳೆಯೊಳಗೆನಯದಿ ಗೆಲಿಸೆನ್ನ ಮಾತೆ ವಿಧಿಕಾಂತೆ 3
--------------
ವಾದಿರಾಜ
ವಾಣಿ ಬಾರೆ ಬೇಗ ವದನದಿ ವಾಣಿ ಬಾರೆ ಬೇಗ ಪ. ಜಾಣೆ ಕಲ್ಯಾಣಿ ಬ್ರಹ್ಮನ ರಾಣಿ ಭಾರತಿ ವಾಣಿ ಅ.ಪ. ಹೃದಯ ಮಂದಿರದಿಲಿದು ಸುವರ್ಣದ ಪದುಮ ಮಂಟಪಕೆ ಮುದವ ಬೀರುತೆನ್ನ ವದನದಿ ಸೇರುತ ಮುದ ಸುವಾಣಿಯ ಚದುರೆ ನುಡಿಸುವ ಶುಕವಾಣಿ 1 ಮಂಗಳ ಮಹಿಮನ ಅಂಗುಟದಿಂ ಬಂ ದಂಬರದಿಂದುದಿಶಿದಾಮರ ತರಂಗಿಣಿ ಗಂಗಾಸ್ನಾನವ ಮಾಡಿಶಿ ನಿನಗೆ ರಂಗನ ದಯಸೈತ ಪೀತಾಂಬರನುಡಿಸುವೆ ವಾಣಿ 2 ಭಕ್ತಿಯರಿಶಿಣ ಯುಕ್ತಿಯ ಕುಂಕುಮ ಶಕ್ತಿಯ ಗಂಧವ ಪರಶಕ್ತಿಯ ಪೂವನು ಮುಕ್ತಿದಾತೆ ಪೂಜಿಪೆ ಶ್ರೀ ಶ್ರೀನಿವಾಸ ಮುಕ್ತಿಪಥದಪೂರ್ವ ಮುತ್ತಿನರಗಿಣಿ ವಾಣಿ 3
--------------
ಸರಸ್ವತಿ ಬಾಯಿ
ವಿಜಯದಾಸರ | ದಿವ್ಯ ವಿಜಯ ನೆನೆವರ ಪ ವಿಜಯಸಾರಥಿಯ ಮನದಿ ಭಜಿಪ ಸತ್ವರ ಅ.ಪ. ಆದಿದೇವನ | ಒಲುಮೆ ಸಾಧಿಸಿದನ ಮೋದ ಭರಿತನ 1 ಮನದಿ ಹರಿಯನು | ಸತತ ಕುಣಿಸಿ ನಲಿವನು ಅಮೃತ ಖಣಿ ವಿಶಿಷ್ಟನು 2 ಭಕ್ತಿಯುಕ್ತಿಯ | ಮಹಾವಿರಕ್ತಿ ಉಕ್ಕುತ ಭಕ್ತ ಜನರಿಗೆ ಬಿಂಬ ವ್ಯಕ್ತಿ ಮಾಡಿದ 3 ತುಂಬಿ ವೈಭವ ಕದಂಬ ಸಲಹುವ 4 ಭಾರತೀಪತಿ | ಇವರ ವೀರಸಾರಥಿ ಸಾರಿ ಭಜಿಪರ ಸಕಲ ಭಾರವಹಿಸುವ 5 ಅಪರೋಕ್ಷ ಕೊಡುವನು ತ್ರಕ್ಷವಲ್ಲಭಾ ಇವರ ದಕ್ಷರೆನಿಸಿಹ 6 ದಾಸರತ್ನನಾ | ದಯವ ಲೇಸು ಪಡೆಯಲು ಸೂಸಿ ಬರುವನು ಶ್ರೀ ಜಯೇಶವಿಠಲ 7
--------------
ಜಯೇಶವಿಠಲ
ವೆಂಕಟಾಚಲನಿವಾಸ ಸಲಹಯ್ಯ ಪಂಕಜಾಕ್ಷನೆ ಶ್ರೀನಿವಾಸ ಪ ವಾರಿಯೊಳು ಮುಳುಗಾಡಿದೆ, ಮಂದರದ ಮೇರು ಬೆನ್ನೊಳು ತಾಳಿದೆ ಕಾರಡವಿಯೊಳು ಚರಿಸಿದೆ, ಕಂಬದೊಳು ಘೋರ ರೂಪವ ತೋರಿದೆ 1 ವಟುವಾಗಿ ಧರೆಯನಳೆದೆ, ಕೊಡಲಿಯೊಳು ನೃಪರ ಗೆಲಿದೆ ವಾಸವ ಮಾಡಿದೆ, ರಣದೊಳಗೆ ಚಟುಳ ವಾಜಿಯ ನಡೆಸಿದೆ 2 ಅಂಗದಂಬರವ ಮರೆದೆ, ಕಡೆಯೊಳು, ತು ರಂಗವನು ಏರಿ ನಲಿದೆ ಬಂಗಾರದದ್ರಿಯೊಳು ಮೆರೆದೆ, ವರಾಹ ರಂಗ ತಿಮ್ಮಪ್ಪ ಒಲಿದೆ 3
--------------
ವರಹತಿಮ್ಮಪ್ಪ
ಶಂಕರ ಗಂಡನ ಹಾಡು ಸರಸ್ವತಿಗಭಿವಂದಿಸುವೆ ಒಡೆಯನು ಎನ್ನ ಮನದೊಡೆಯ 1 ಸಂಭ್ರಮ[ದಾ] ಕೇಳಿ ಸಜ್ಜನರು 2 ವಿಶಾಲ ವಿಲಾಸ ಪಟ್ಟಣದಿ ಖಚಿತ ಮಂದಿರದಿ 3 ಮಂದಮಾರುತ ತಂಪೆÉಸೆಯೆ ಗಂಧ ಕಸ್ತೂರಿ ಕದಂಬವನೇರಿಸಿ ಆನಂದವಾಗಿದ್ದ ಮನ್ಮಥನು4 ಮಯೂರ ಪಕ್ಷಿಗಳು ನಳಿನ ನಾಭನ ಓಲಗವು 5 ನಿರ್ಭಯದಲಿನಲ್ಕಾವತಿಯು ಪಾಲಿಸುತ್ತ 6 ಮರಿಹಾವುಗಳ ನೆರೆಹುವಳು ಗೊಂಬೆಯಾಟವನೆ ಆಡುವಳು 7 ಕೂಡಿದ್ದ ಗೆಳತಿಯರ ಒಡನೆ ನೋಡಿದ ನವಯೌವನೆಯನು 8 ಕುಚವು ತೋರಿದವು ಚಿತ್ತದೊಳಗೆ ಚಿಂತಿಸುತ್ತಿದ್ದ 9 ಚೆನ್ನಿಗನು ಮನ್ಮಥನು ಉದಯಕ್ಕೆ ಕರೆತನ್ನಿರೆಂದ 10 ಬಂದು ವಿಲಾಸ ಪಟ್ಟಣದೊಳು ಮದನಗೆ ಪ್ರೀತಿಲಿ ನಿಂದು ಕೈ ಮುಗಿದರು ಹೋ ಗ್ಯೆಂದು ಶಂಕರಗಂಡ ಕಳುಹಿದ ನಿಮ್ಮನೆಗೈತಂದೆವೆನಲು 11 ಮಾತಾಡಿ ನಗುತ ಭೂ ಕೇಳಿದ ಮನ್ಮಥನ 12 ರಾಜ್ಯವು ಕ್ಷೇಮವೆನ್ನಲು ಬ್ರಹ್ಮಾನಂದದಲಿದ್ದ ಶಂಕರಗಂಡನು 13 ವಿವಾಹ ಮಾಡಲಿಚ್ಛಿಸುವೆ ಚಂದ್ರಮುಖಿಯು 14 ಸಂಭ್ರಮದಿಂದ ಕುಳಿತರು ತಂದಿಡುವರು ಮನ್ಮಥಗೆ 15 ಅಂಗಜ ಅತಿ ದೈನ್ಯ ಉಕ್ತಿಯಿಂದಲಿ ಬಹು ಮಂಗಳ ಮೃದು ವಾಕ್ಯವನ್ನು ಪ್ರ ತಂಗಿಯನೆನಗೀಹುದೆಂದ 16 ಮಲ್ಲಿಗಿಸರ ಕಬ್ಬು ಬಿಲ್ಲು ಹಿರಿಯರು ಹೇಳುವರು 17 ಒಬ್ಬಳೇ ರತಿ ನಮ್ಮ ತಂಗಿ ಹಬ್ಬ ಹುಣ್ಣಿಮೆಗೆ ಕಳಿಸದೆ ನಮ್ಮನೆಗೆ ನಿರ್ಬಂಧ ಮಾಡುವಿರೆಂದ 18 ಕಡುಮೋಹದಿಂದ ಸಾಕಿದೆನು ಕೊಡಲಾರೆ ತಂಗಿಯನೆಂದ 19 ಅವಳಿಗೆ ಸ್ವತಂತ್ರವಿಲ್ಲೇನು ನುಡಿದ ದೈನ್ಯದಲಿ 20 ಭಾಗ್ಯದಿಂದಲಿ ನೋಡಿದರು ಮದನ ನೇಮವನೆ ಮಾಡಿದರು 21 ಪ್ರತಿಬಿಂಬ[ದಂದ]ದಲಿ ಎಣಿಕೆಯಿಲ್ಲದ ಬಂಧು ಜನರ 22 ಎಲ್ಲರು ನೆರೆದು ಸಂಭ್ರಮದಿ ಮಲ್ಲಿಗೆ ಸರದಿ ಮದನರತಿದೇವಿಗೆ ಕಲ್ಯಾಣವನೆ ಮಾಡಿದರು 23 ಬಟ್ಟಲು ಗಿಂಡಿಗಳನ್ನು ಬಳುವಳಿ ತಂಗಿಗೆ ಇತ್ತ 24 ಸಾಸಿರ ಗೋವು ಗಜವು ತುರಗವು ಬ್ಯಾಸರಿಯದೆ ತಂಗಿಗಿತ್ತ ವಿಲಾಸಪಟ್ಟಣಕೆ ಕಳಿಸಿದ 25 ದಿನ ಬಾಳುತಿರಲು ತಾನೇ ಯೋಚಿಸಿದ 26 ಬಿಗಿದ ನಾಡಗಂಬಳಿಯ ನಗುವಂತೆ ಮಾಡಿ ರೂಪವನು 27 ಕುಡಗೋಲು ಕÀವಣೆಯ ಪಿಡಿದು ಮಾಡುವೆನೆನುತ 28 ರೂಢಿಯೊಳಗೆ ಅತಿಚೆಲುವ ಸತಿಗೆ ತೋರಿದನು 29 ಒಡಹುಟ್ಟಿದಣ್ಣ ತಾ ಮುನಿಯೆ ನಮಗೆ ಬೇಡವೆಂದ್ಲು 30 ಕಾರಣವ ಹೇಳದಂತೆ ದಿನÀಕರ ನಂತೆ ಹೊಳೆಯುತ ಸಭೆಯಲಿತವಕದಿಂದಲಿ ಬಂದು ಕುಳಿತು31 ಗೆಲುವಿನಿಂದ ಮಾತಾಡಲಿಲ್ಲ ಜುಲ್ಮಿಂದ ತಾನೆ ಕೇಳಿದನು 32 ನಮ್ಮನೆಯಲಿ ನಾವೀಗ ಕಳಿಸುವೋರಲ್ಲ 33 ತೌರುಮನೆಯ ಹಾರೈಸುವರು ಉಂಡು ಸಂಭ್ರಮದಿಂದ ಬಾಹೋಳೆಂದ 34 ಕರುವ ಕಾಯಿ ನಮ್ಮ ಮನೆಯ ಮರೆಯದೆ ಹೊಯ್ಸುವೆಂನೆಂದ 35 ಜೋಳವ ಕೊಂಡು ಹೋಗೆನಲು ಬೇಡೆಲವೊ ಕಾಮ ನಿನ್ನ ಐಶ್ವರ್ಯವ ಹಾಳು ಮಾಡುವೆನೊಂದÀು ಗಳಿಗೆಯಲಿ 36 ಗಮಕದಿಂದಲಿ ಬೆಳೆವೆನೆಂದು ಚಮತ್ಕಾರದಿಂದ ಮಾಯವಾದ 37 ಅಟ್ಟ ಅಡಿಗೆ ಮನೆಂiÉ
--------------
ಹೆಳವನಕಟ್ಟೆ ಗಿರಿಯಮ್ಮ