ಒಟ್ಟು 1531 ಕಡೆಗಳಲ್ಲಿ , 112 ದಾಸರು , 1197 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆನಂದವಾಯಿತು ಬ್ರಹ್ಮ ಆನಂದವಾಯಿತುಆನಂದದೊಳು ಆನಂದವೇ ಆಗಿಸ್ವಾನಂದ ಸುಖ ಶರೀರ ವ್ಯಾಪಿಸೆ ಪ ಬಂಧತ್ರಯಾಭ್ಯಾಸದ ಬಂಧವ ಪಿಡಿಯುತನಿಂದು ನಾಸಿಕಗೊನೆ ನಿಟಿಲವ ನೋಡುತಛಂದ ಛಂದದ ಪುಷ್ಟ ಚದುರಲಿ ಕಾಣುತಸುಂದರನಾದ ಕೇಳಿ ಸುಖಿಸುವರ ಕಂಡು 1 ಎಡಬಲ ಹಾದಿಯ ಎಡಬಲಕಿಕ್ಕುತನಡುವಿನ ಮಾರ್ಗವ ನೇರದಿ ಪೊಕ್ಕುನಡೆದು ಸುಷುಮ್ನದ ನಾಳನೆಲೆಯ ನೋಡಿಕುಡಿದಮೃತವ ಸೊಕ್ಕಿ ಕುಳಿತಿಹರ ಕಂಡು 2 ಕುಂಡಲಿ ನಿದ್ರೆಯ ತಿಳಿಪುತಮುದ್ರಿಸಿ ನವಬಾಗಿಲನೆಲ್ಲವ ಮುಚ್ಚುತಭದ್ರ ಮಂಟಪದೊಳು ಭಾಸದಿ ಬೆಳಗಿ ಸ-ಮುದ್ರ ಗುರು ಚಿದಾನಂದ ಬೆರೆದವರ ಕಂಡು3
--------------
ಚಿದಾನಂದ ಅವಧೂತರು
ಆರ ನಂಬುಗೆ ಜಗದೆನಗಿಲ್ಲ ಹರಿಯೆ ಕಾರುಣ್ಯನಿಧಿ ನೀನೆ ಗತಿಯೆನಗೆ ಪೊರೆಯೈ ಪ ತಿಂಡಿಗ್ಹಾಕುವತನಕ ಹೆಂಡತಿಯು ನುಡಿಯುವಳು ಗಂಡನೇ ಗತಿಯೆಂದು ಮಂಡೆಯನು ಬಾಗಿ ತಿಂಡಿತಪ್ಪಿದ ಕ್ಷಣದಿ ಕಂಡಕಂಡತೆ ಕೂಗಿ ಬಂಡುಮಾಡುವಳಿಹ್ಯದಿ ಷಂಡನೆಂದಭವ 1 ಬಂಧುಬಾಂಧವರೆಲ್ಲ ಸಂದುಬಿಡಿದಡಿಗಡಿಗೆ ವಂದಿಸಿ ನುಡಿಯುವರು ತಿಂದುಡುವನತಕ ಸಂಧಿಸಲು ಬಡತನವು ವಂದಿಸಿದವರೆ ಮನ ಬಂದಂತೆ ನಿಂದಿಪರು ಕುಂದ್ಹೊರಿಸಿ ದೇವ 2 ಭೂಮಿಯ ಜನರೆಲ್ಲ ಕ್ಷೇಮ ನೀ ಕೊಟ್ಟಿರಲು ತಾಮಸವ ಬಿಟ್ಟು ಬಲು ಪ್ರೇಮ ಬಳಸುವರು ಸ್ವಾಮಿ ಶ್ರೀರಾಮ ನಿಮ್ಮ ಪ್ರೇಮ ತುಸು ತಪ್ಪಿದರೆ ಭೂಮಿಯೊಳಗಿನ ಕೇಡು ನಾ ಸ್ಮರಿಸಲಾರೆ 3
--------------
ರಾಮದಾಸರು
ಆರಮ್ಮ ಮುರಲಿಯನೂದುವನುಮಾರ ಸುಂದರ ಸುಖ ಸಾರುವ ಜಗಕೆ ಪ ಪುಂಡರೀಕಾಕ್ಷನು ಹಿಂಡುಗೋವ್ಗಳ ಕಾಯ್ದುಕಂಡ ಕಂಡವರನ್ನು ಕರೆಯುತಾನೆಚೆಂಡು ಬಗರಿ ಗೋಲಿ ಗುಂಡುಗಳನೆ ಕಟ್ಟಿತಂಡ ತಂಡವಾಗಿ ಪೋದನಮ್ಮ 1 ತಾಯಿ ಕಟ್ಟಿರುವಂಥಾ ತೋರ ಬುತ್ತಿಯ ಗಂಟುತೂಗುತ ಯಮುನೆಯ ತೀರದಲ್ಲೇತೋರ ಉಪ್ಪಿನಕಾಯಿ ಬುತ್ತಿಗಳನೆ ತಿಂದುತೀರಿದವರಿಗೆಲ್ಲಾ ತಾ ಕೊಡುವಾ 2 ಇಂದಿರೇಶನು ಕೊಟ್ಟ ತಿಂದ ಉಪ್ಪಿನಕಾಯಿಆನಂದಬಟ್ಟರು ಗೋಪನಂದನರುಹಿಂದಿನ ಪುಣ್ಯವು ಬಂದೊದಗಿತು ಎಂದುತಿಂದ ಎಂಜಲನಿಟ್ಟ ಇಂದಿರೇಶ3
--------------
ಇಂದಿರೇಶರು
ಆರಿಗ್ಯಾತಕೆ ಮೊರೆಯಿಡಲಿ ಸಾರಿದವರನ ಪೊರೆವ ಶ್ರೀರಮಣ ನೀನಿರಲು ಪ ಬೆಳಸಿಗೊಬ್ಬನ ಕೇಳೆ ಮಳೆಗೆ ಮತ್ತೊಬ್ಬನೆ ಅಳತಿಗೆ ಇನ್ನೊಬ್ಬನೆ ಹಾಗೆವೆ ವಳತಿಗೊಬ್ಬರು ದೊರೆಗಳೆ ಮ್ಯಾಲೆನ್ನ ಪ್ರಳಯಕೆ ಮತ್ತೊಬ್ಬನೆ ಪರಿಪರಿ ಖಳರ ಮಾತುಗಳೇ ಸ್ವಾಮಿ 1 ಆಕಾಲ ನೀನೆವೆ ಈ ಕಾಲದಲಿ ನೀನೆ ಸಾಕುವನು ಇನ್ನೊಬ್ಬನೆ ಸ್ಥಿರವಾಗಿ ತಾಕು ತಗಲಿಲ್ಲದೆಲೆ ಬೊಮ್ಮಾದಿ ಲೋಕಪತಿಗಳ ಒಡಿಯನೇ ಈ ವ್ಯಾಳ್ಯ ಲೋಕರನ ಕಾಯಬೇಕೊ ಸ್ವಾಮಿ 2 ಕಾಸು ಒಬ್ಬರಿಗಿಲ್ಲ ಲೇಸು ತೋರದಲೇವೆ ದೇಶಕೊಬ್ಬರು ಪೋದರೋ ಪೊಟ್ಟಿಗೆ ಕೂಸುಗಳ ಮಾರುಂಡರೋ ಈ ಜನರ ಕ್ಲೇಶಬಡಸದಲೆ ಪೊರಿಯೊ ಕರುಣದಲಿ ವಾಸುದೇವವಿಠಲ ಸ್ವಾಮಿ 3
--------------
ವ್ಯಾಸತತ್ವಜ್ಞದಾಸರು
ಆರು ಬಂದರು ಸಖಿ ತೇರಿನ ಬೀದಿಲೆಮಾರಜನಕನ ಸಾರುತ ಹೊಗಳುವರಾರೆ ಕರಿಪುರದಲಿ ಬಂದವರಾರೆ ಪ. ದುಷ್ಟ ದೈತ್ಯರ ಶಿರವ ಕುಟ್ಟಿ ತಮಸ್ಸಿಗೆ ಹಾಕಿಅಟ್ಟಹಾಸದಿಂದ ಭೇರಿ ಘಟ್ಯಾಗಿ ಹೊಯಿಸುವರಾರೆ1 ಕ್ರೂರ ದೈತ್ಯರ ಶಿರವ ಸೇರಿಸಿ ತಮಸ್ಸಿಗೆ ಭೋರೆಂಬೊ ತುತ್ತೂರಿ ಕಾಳಿ ಹಿಡಿಸುವರಾರೆ 2 ವೆಂಕಟನ ದ್ವೇಷಿಗೆ ಸಂಕಟ ಬಿಡದೆಂದುಡಂಕರದಿಂದಲೆ ಡಂಕಿಯ ಹೊಯಿಸುವರಾರೆ 3 ಖೂಳ ದೈತ್ಯರ ಶಿರವ ಸೀಳಿ ತಮಸಿಗೆ ಹಾಕಿಭಾಳಾ ರೌಸದಿಂದ ಕಾಳಿಯ ಹಿಡಿಸುವರಾರೆ4 ಭಾಗವತರ ಸುಖ ಹೀಗೆ ಉನ್ನತ ಎಂದು ಈಗ ತೋರುತ ಭರದಿ ನಾಗಸ್ವರ ಹಿಡಿಸುವರಾರೆ5 ಅಂಬುಜನಾಭನ ನಂಬಲು ಸುಖವಿತ್ತು ಬಂಬಂಬೆನುತ ಶಂಖವ ಸಂಭ್ರಮದಿ ಹಿಡಿಸುವರಾರೆ 6 ನಿರ್ಜರ ಹಂಸನೀ ಹೌದೆಂದು ಸಂಶಯ ಬಿಡಿಸುತ ಕಂಸಾಳೆ ಹೊಯ್ಸುವರಾರೆ7 ಎಷ್ಟೆಷ್ಟು ಕಾಲಕ್ಕೂ ಕೃಷ್ಣಗೆ ದೊರೆ ಎಂದುಶ್ರೇಷ್ಠಾದ ಜಾಂಗುಟಿ ಫಟ್ಯಾಗಿ ಹೊಯಿಸುವರಾರೆ8 ಕಬ್ಬು ಬಿಲ್ಲಿನಯ ಒಬ್ಬ ಜಗದೀಶನೆಂದುಅಬ್ಬರದಿ ಕರಣೆ ನಿರ್ಭಯದಿ ಹಿಡಿಸುವರಾರೆ9 ಮಿತಿಯಿಲ್ಲದೆ ಶೃತಿ ಸಾರುವ ಮಧ್ವಮvವೆÉ ಅಧಿಕವೆಂದು ಶೃತಿಯನೆÉ ಹಿಡಿಸುವರಾರೆ 10 ತಂದೆ ರಾಮೇಶನ ಹೊಂದಲು ಸುಖವೆಂದು ಸುಂದರ ಕೊಳಲನೆ ಮುಂದೆ ಊದಿಸುವರಾರೆ 11
--------------
ಗಲಗಲಿಅವ್ವನವರು
ಆರು ಬಾಳಿದರೇನು ಆರು ಬದುಕಿದರೇನುನಾರಾಯಣನ ಸ್ಮರಣೆ ನಮಗಿಲ್ಲದನಕ ಪ ಉಣ್ಣ ಬರದವರಲ್ಲಿ ಊರೂಟವಾದರೇನುಹಣ್ಣುಬಿಡದ ಮರಗಳು ಹಾಳಾದರೇನುಕಣ್ಣಿಲ್ಲದವಗಿನ್ನು ಕನ್ನಡಿಯಿದ್ದು ಫಲವೇನುಪುಣ್ಯವಿಲ್ಲದವನ ಪ್ರೌಢಿಮೆ ಮೆರೆದರೇನು 1 ಅಕ್ಕರಿಲ್ಲದವಗೆ ಮಕ್ಕಳಿದ್ದು ಫಲವೇನುಹೊಕ್ಕು ನಡೆಯದ ನಂಟತನದೊಳೇನುರೊಕ್ಕವಿಲ್ಲದವಗೆ ಬಂಧುಗಳು ಇದ್ದರೇನುಮರ್ಕಟನ ಕೈಯೊಳಗೆ ಮಾಣಿಕ್ಯವಿದ್ದರೇನು 2 ಅಲ್ಪ ದೊರೆಗಳ ಜೀತ ಎಷ್ಟು ಮಾಡಿದರೇನುಬಲ್ಪಂಥವಿಲ್ಲದವನ ಬಾಳ್ವೆಯೇನುಕಲ್ಪಕಲ್ಪಿತ ಕಾಗಿನೆಲೆಯಾದಿಕೇಶವನಸ್ವಲ್ಪವೂ ನೆನೆಯದ ನರನಿದ್ದರೇನು 3
--------------
ಕನಕದಾಸ
ಆರೂ ಸಂಗಡ ಬಾಹೋರಿಲ್ಲ ಪ ನಾರಾಯಣ ನಾಮ ನೆರೆ ಬಾಹೋದಲ್ಲದೆ ಅ ಪರಿಯಂತ ಗರ್ಭದಲಿಹೆತ್ತು ಅತ್ಯಂತ ನೋವು ಬೇನೆಗಳಿಂದಲಿತುತ್ತು ವಸ್ತ್ರವನಿಕ್ಕಿ ಸಲಹಿದಾ ತಾಯ್ತಂದೆಹೊತ್ತುಗಳೆವರಲ್ಲದೆ ಬೆನ್‍ಹತ್ತಿ ಬಹರೆ 1 ಹರಣ ದಾರು ಗತಿಯೆಂದಳುವಳು2 ಮನೆ ಮಕ್ಕಳು ತಮ್ಮ ಧನಕೆ ಬಡಿದಾಡುವರುಧನಕಾಗಿ ನಿನ್ನನೆ ನಂಬಿದವರುಅನುಮಾನವೇಕೆ ಜೀವನು ತೊಲಗಿದಾಕ್ಷಣದಿಇನ್ನೊಂದು ಅರಗಳಿಗೆ ನಿಲ್ಲಗೊಡರು 3 ಸುತ್ತಲು ಕುಳ್ಳಿರ್ದ ಮಿತ್ರ ಬಾಂಧವರೆಲ್ಲಹೊತ್ತು ಹೋದೀತು ಹೊರಗೆ ಹಾಕೆನುವರುಹಿತ್ತಲಾ ಕಸಕಿಂತ ಅತ್ತತ್ತ ಈ ದೇಹಹೊತ್ತುಕೊಂಡೊಯ್ದು ಅಗ್ನಿಯಲಿ ಬಿಸುಡುವರು 4 ಹರಣ ಹಿಂಗದ ಮುನ್ನು ಹರಿಯ ಸೇವೆಯ ಮಾಡಿಪರಗತಿಗೆ ಸಾಧನವ ಮಾಡಿಕೊಳ್ಳೊಕರುಣನಿಧಿ ಕಾಗಿನೆಲೆಯಾದಿಕೇಶವರಾಯನನಿರುತದಲಿ ನೆನೆನೆನೆದು ಸುಖಿಯಾಗೊ ಮನುಜ5 * ಈ ಕೀರ್ತನೆ ಪುರಂದರಾಸರ ಅಂಕಿತದಲ್ಲೂ ಇದೆ.
--------------
ಕನಕದಾಸ
ಆರೂ ಸಮಯಕ್ಕೊದಗಲಿಲ್ಲಮೋರೆ ನೋಡುತ ಸುಮ್ಮನಿಹರೆಲ್ಲ ಪ ಮಗಳು ಮಹಲಕುಮಿ ಮೊಮ್ಮಗನು ಸರಸಿಜಭವನುಖಗರಾಜವಾಹನನು ತನ್ನಳಿಯನುಅಗಜನಂದು ತನ್ನೊಡಲೊಳಿಂಬಿಟ್ಟು ಮೂ-ರ್ಬೊಗಸೆ ಮಾಡಿದ ಮುನಿಯ ಬಿಡಿಸಲಿಲ್ಲ1 ಶ್ರೀದೇವಿ ಭೂದೇವಿ ಮಾತೆಯರು ತಾವಿರಲುಯಾದವರಾಯ ಮೋಹದ ತಂದೆಯುವೇದಮುಖದಣ್ಣನಿರೆ ಉರಿ ನಯನದಿಂದ ಸ್ಮರಬೂದಿಯಾಗುವಾಗ ಬಿಡಿಸಲಿಲ್ಲವೇಕೆ2 ಬೊಮ್ಮ ಮನ್ಮಥರಿರಲಾಗಿಕ್ಷಿತಿಯೊಳಗೆ ಶಶಿ ಕ್ಷೀಣವಾಗುವ ಸಮಯದಿ 3 ತೆತ್ತೀಸ ಕೋಟಿ ದೇವರ್ಕಳು ತಾವಿರಲುಒತ್ತಿನಲಿ ಇಂದ್ರ ಉಪೇಂದ್ರರಿರಲುಮತ್ತೆ ಪಾರ್ವತಿ ಪುತ್ರ ವೀರೇಶ ದಕ್ಷನನೆತ್ತಿ ಹರಿಗಡಿವಾಗ ನೋಡುತಿಹರೆಲ್ಲ 4 ಇಂಥಿಂಥ ದೊಡ್ಡವರು ಈ ಪಾಡು ಪಡಲಾಗಿಭ್ರಾಂತ ಮನುಜರಿಗೆ ಪೇಳಲಿನ್ನೆಷ್ಟುಕಂತುಪಿತ ಕಾಗಿನೆಲೆಯಾದಿಕೇಶವನಸಂತೋಷದಿಂ ನೆನೆದು ಸುಖಿಯಾಗೊ ಮನುಜ5
--------------
ಕನಕದಾಸ
ಆರೋಗಣೆಯ ಮಾಡೋ ಮುಕುಂದಾ ಪ ಆರೋಗಣೆಯ ಮಾಡೋ ವಾರಿಜರಮಣಾ ಸಾರಿದವರಿಗೆ ಭಯನಿವಾಕರದಿ 1 ಪೊಂಬ್ಹರಿವಾಣದಿರನ್ನ ಬಟ್ಟಲುಗಳು ಅಂಬುಜಾನನಸಿರಿ ಲಕುಮಿಯವೇರಿಸಿ 2 ಶಾಲ್ಯೋದನಸೂಪಘೃತ ಪರಿಪರಿಯಾ ಶಾಲ್ಯಾಶಾಖಂಗಳಸವಿಯನೆ ಕೊಳುತಾ3 ಪಂಚಭಕ್ಷವು ಕೆನೆಹಾಲು ಸೀಖರಿಣಿಯಾ ಮುಂಚೆ ಪಾಯಸಪರಿಪರಿಶರ್ಕರದಲಿ4 ದದ್ಯೋದನದಲುಪಗಾಯಿಸ್ವಾದಿಸುತ ದಮನ ಕಲ್ಪಿತರುವೆಲ್ಲಾ5 ಪತ್ರಸುಮನತೋಯ ಭಕ್ತರು ಕೊಟ್ಟು ದರ್ಥಲಿ ಕೊಂಬ ದಯಾಳುತನದಲಿ6 ತಂದೆ ಮಹಿಪತಿ ನಂದನ ಸಾರಥಿ ಎಂದೆಂದು ಸ್ಮರಣೆ ಗೊದಗಿ ಮುದ್ದು ಮುಖದಿ7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆವ ಜನುಮದ ಪಾಪ ವೊದಗಿತೋ ಎನಗಿಂದು | ದೇವ ಗಂಗೆಯ ನೋಡಿದೆ ಪ ದೇವಕೀಸುತ ಒಲಿದು ಕರೆತಂದು ಎನ್ನನು | ಪಾವನ್ನ ಮಾಡಿದನು ಇನ್ನೂ-ಮುನ್ನೂ ಅ.ಪ ಗುರುಗಳನು ವಹಿಸಿ ಭೂಸುರರಿಗೆ ಕಠಿಣ | ಉ- ತ್ತರ ಪೇಳಿಸಾಗಿದ್ದನೊ | ವರ ಬ್ರಾಹ್ಮಣರ ತಪ್ಪು ಬಲು ಇರಲು ಇಲ್ಲದೇ | ಸರಿಯೆಂದು ಸ್ಥಾಪಿಸಿದೆನೊ | ಮುರಿವ ಲಗ್ನಕೆ ಪೋಗಿ ಪುಸಿ ದ್ರವ್ಯವನೆ ಪೇಳಿ | ಮರಳಿ ಪೂರ್ತಿಸಿ ಇದ್ದೆನೊ | ವರ ವಿಪ್ರರಿಗೆ ವಧೆಯು ಬರಲು ಸಾಕ್ಷಿಯಾಗಿ | ಪರಿಹರಿಸಿ ಬಂದಿದ್ದನೋ ಏನೋ 1 ಘನ ತೀರ್ಥಯಾತ್ರೆಗೆ ಪೋಗುವಾಗ-ಲು | ವಂ ಕರ್ಮ ಮಾಡಿದ್ದೆನೊ | ಜನಪತಿಗಳ ಮಾತು ಕೇಳದೆ ಧರ್ಮಕ್ಕೆ | ಅನುಕೂಲನಾಗಿದ್ದೆನೊ | ಮನೆಗೆ ಬಂದತಿಥಿಗಳು ಜರಿದು ಪಿತ್ರಾದ್ಯರಿಗೆ | ಉಣಿಸಿ ಸುಖಪಡಿಸಿದ್ದೆನೊ | ವನಗಳನು ಕಡಿದು ದೇವಾಲಯವ ಕಟ್ಟಿಸಿ | ಕ್ಷಣ ಕ್ಷಣಕೆ ಅರ್ಚಿಸೆದೆನೋ ಏನೊ 2 ಉತ್ತಮನು ಮನೆಗೆ ಬಂದಾಗ ಮಾಡುವಂಥ | ಸತ್ಕರ್ಮ ತೊರೆದಿದ್ದೆನೋ | ಹೆತ್ತವರ ಬಾಂದವರ ಧನದಿಂದ ಕೆರೆ ಭಾವಿ | ಹತ್ತೆಂಟು ಕಟ್ಟಿಸಿದೆನೊ | ದತ್ತಾಪಹಾರವನು ಮಾಡಿ ಅದರಿಂದನಗ್ನಿ- ಹೋತ್ರವನು ಸಾಧಿಸೆದೆನೊ | ಇತ್ತ್ಯಧಿಕ ನಿರ್ಬೀಜ ಪಾಪಗಳನೆಸಗಿ | ಕೃ- ತಾರ್ಥನಾದೆನೊ ವಿಜಯವಿಠ್ಠಲನ್ನ ಕರುಣದಲಿ3
--------------
ವಿಜಯದಾಸ
ಆವ ತಾ ಸುಖವೊ ಮತ್ತಾವನಂದವೊ | ಈ ಉಡುಪಿ ಯಾತ್ರಿ ಮಾಡಿದ ಮನುಜಗೆ ಪ ಮನದೊಳಪೇಕ್ಷಿಸೆ ಅವನೀಗ ಹದಿನಾಲ್ಕು | ಮನುಗಳು ಭೂಮಿ ಆಳುವ ತನಕಾ | ಕನಕ ರಜತಪೀಠ ಗೋಕುಲದಿಂದ | ಸ | ಜ್ಬನ ಮಾರ್ಗದಲ್ಲಿ ಗುಣವಂತ ನೆನೆಸುವ 1 ಒಂದು ಹೆಜ್ಜೆಯನಿಟ್ಟು ಸಾಗಿ ಬರುತಲಿರೆ | ಅಂದೆ ಸುರರೊಳು ಗಣನೆ ಎನ್ನಿ | ಒಂದಕ್ಕೆ ನೂರಾರು ಯಾಗ ಮಾಡಿದ ಫಲ | ತಂದು ಕೊಡುವ ಅಜನಾದಿ ಕಲ್ಪ ಪರಿಯಂತ2 ಅರ್ಧ ಮಾರ್ಗವು ಬರಲು ಬಂದೆ ದಿವಸದಲ್ಲಿ | ಸಾಧರ್À ತ್ರಿಕೋಟಿ ದೇವತೆಗಳಲಿ | ಊಧ್ರ್ವರೇತಸನಾಗಿ ಮಿಂದ ಫಲವಕ್ಕು | ಪರಿಯಂತ 3 ಕ್ಷೇತ್ರದ ಬಳಿಗಾಗಿ ಬರಲು ಅವನ ಏಳು | ಗೋತ್ರ ನೂರೊಂದು ಕುಲದವರು | ಗಾತ್ರವ ಮರೆದು ರೋಮಾಂಚನದಿಂದಲಿ | ಪಾತ್ರವನಾಡೋರು ಮೋಕ್ಷಮಾರ್ಗವ ಸಾರಿ4 ಕರವ ಜೋಡಿಸಿ ನಿಂದು | ಸನ್ನುತಿಸಿ ದರ್ಶನ ಮಾಡಲು | ಕರವ ತಿಳಿದು ಜ್ಞಾನ ಭಕುತಿ ಸಂ | ಪನ್ನ ವಿರುಕುತಿಲಿ ಗತಿಗಭಿಮುಖನಾಹ 5 ಮಧ್ವ ಸರೋವÀರದಲ್ಲಿ ಸ್ನಾನವಗೈದು | ಸಿದ್ಧಾಂತ ಕರ್ಮಗಳನನುಸರಿಸೀ | ಶುದ್ಧಾತ್ಮ ಕೃಷ್ಣನ ದೇವಾಲಯವ ಸಾರೆ | ಪೊದ್ದಿದಾ ಸತ್ಯಲೋಕದ ಸಭೆಯೊಳಗೆ 6 ಕೃಷ್ಣ ಕೃಷ್ಣ ಯೆಂದು | ನವ ವಿಧ ಪೂಜೆಯನ್ನು | ದೃಷ್ಟಿಯಿಂದಲಿ ನೋಡೆ ಅವನೆ ಮುಕ್ತಾ | ಮುಟ್ಟಿ ಪೂಜಿಸುವರ ಸತ್ಪುಣ್ಯ ವಿಜಯ | ವಿಠ್ಠಲ ತಾ ಬಲ್ಲ ನರರೆಣಿಸಲಳವಲ್ಲಾ 7
--------------
ವಿಜಯದಾಸ
ಆವದಿದು ಜ್ಞಾನ ಪ ಆವದಿದು ಜ್ಞಾನಾ ಬಲ್ಲವಿಕೆ ಜಾಣಾ | ಭಾವದುಗಮ ವರಿಯದೆವೆ ಜರಿದಿ ನಿಜ ಖೂನಾ 1 ಅರಹು ಆಗಲೆಂದು ಕುರುಹ ದೋರಿದೊಂದು | ಕುರುಹವಿಡದ ಕೊಡ ತಿರುಗಿ ಅರಹು ಮರದಿಂದ 2 ಕಲಿತು_ವಾಡುದು ಸೊಲ್ಲಾ ಗುಣಕ ಬಾಹುದಲ್ಲಾ | ಕಳೆದು ಅನುಮಾನ ಶಾಂತಿ ಸುಖವ ಪಡೆಯಲಿಲ್ಲಾ 3 ಅರಿಯದಿದ್ದರ ಕೀಲು ಸಾಧು ಸಂತರು ಕೇಳು | ಗರುವತನವ ನೀಗಿ ಯಲ್ಲರ ಕಿರಿಯನಾಗಿ ಬಾಳು 4 ಸಾರಥಿ | ಹೊಂದಿದವರ ನೋಡಿ ಕೊಡುವ ಮತಿ ಸ್ಫೂರ್ಥಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆವಧನ್ಯರೋ ಸುಖಿಸುವರು ಗೋಕುಲದವರು | ಗೋವಿಂದನೊಳು ಕ್ರೀಡಿಸುವರು ಗೋಗೋವಳರು ಧ್ರುವ ಭಾವಿಸೆ ಮಖದಲ್ಲಿದಾವ ಸಾರಾಯ ಕೊಂಬಾ | ದೇವಗೋಪಾಲಕರ ಕರಿಸಿ | ಬುತ್ತಿಯ ತರಿಸಿ | ಸವಿಸವಿದುಂಬುವರ ವೆರಸಿ | ಕೈಯೊಳಿರಿಸಿ | ಅವರತನ್ನಂಜಲೆಂಬ ದೂರಿಸಿ ನಲುವಾದರಿಸಿ 1 ಸಿರಿರಮಣಿಯ ಕೂಡ ಸರಸದಿ ಕುಚವಿಡಿದಾ | ಕರದಿನವೀನ ತೃಣವಾ ಕಡಿದು ಕವಳವಿಡಿದು | ಕರೆದು ಆವಿನ ಪೆಸರಾ ನುಡಿದು ಕುಡವಾವಿ ನಡೆದು | ಕರುಣದಿ ಚಪ್ಪರಿಸುವಾ ಜಡಿದು ಮೈಯನಡದು 2 ಅನಂದಿನ ಧ್ಯಾಯಿಸುವಾ ಮುನಿಮನದಲ್ಲಿ ಹೊಳೆಯಾ | ಚಿನುಮಯ ಗೋಪಿಯರಾವಳಿಯಾ ಯೋದ್ಧುಳಿಯಾ | ಅನುವಾಗಿದೋವರ್ತನಕಳಿಯಾ ವರ ಬಳಿಯಾ | ಘನಮಹಿಪತಿ ಸ್ವಾಮಿ ನೆಲಿಯಾ ಬೊಮ್ಮತಾ ತಿಳಿಯಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಆವುದು ಸ್ಥಿರವೆಲೋ ಮನವೆ ಇದು ಮಾಯವು ಕಾಣೆಲೊ ಪ ಆವದು ಸ್ಥಿರವೆಲೋ ಮಾಯವಿದೆಲ್ಲವು ಭಾವದಿ ಕುದಿಯುತ ನೋಯುವಿ ಯಾಕೆಲೊ ಅ.ಪ ಅರ್ಥವೆಂಬುವುದೆಲ್ಲ ವ್ಯರ್ಥವು ಮೃತ್ಯು ತಿಳಿಯೆ ನಿಖಿಲ ಅರ್ತುವಿಚಾರಿಸು ಸಾರ್ಥಕವಾವುದು ಮರ್ತುಕೆಡದೆ ಭವನಿರ್ತದಿಂ ಗೆಲೆಯೆಲೊ 1 ಸತಿಸುತರಿವರೆಲ್ಲ ಹಿತವಿರಲತಿ ಸೇವಿಪರೆಲ್ಲ ಗತಿಸಲು ಭಾಗ್ಯವು ಹಿತದೋರಿದವರೇ ಅತಿಜರೆಯುತ ನಿನ್ನ ವ್ಯಥೆಯ ಬಡಿಪರೆಲೊ 2 ಒಂದಿನ್ಹೋಗ್ವುದಂತು ತಪ್ಪದು ನೋಯುವುದ್ಯಾಕಿಂತು ಇಂದು ನಾಳೆನ್ನದೆ ತಂದೆ ಶ್ರೀರಾಮನ ಬಂಧುರಂಘ್ರಿಗಳಿಗ್ಹೊಂದಿ ನೀ ಸುಖಿಯಾಗೊ 3
--------------
ರಾಮದಾಸರು
ಆವುದೊಳ್ಳೆಯದೊ ನಿನ್ನಂಗ - ಚೆಲುವದೇವ ಬಂಕಾಪುರದ ಲಕುಮಿ ನರಸಿಂಗ ಪ ಜಗದೊಳಗೆ ತಾನು ತಂದೆಯ ಮಾತು ಕೇಳದಾಮಗನು ಇಹ ಪರಕೆ ಸಲುವ ಪ್ರಾಜ್ಞನೆ ?ಬಗೆಗೊಳಿಸಿ ಪ್ರಹ್ಲಾದ ಪಿತನೊಡಲ ನಿನ್ನ ಕೂ-ರುಗುರಿನಿಂ ಬಗೆಸಿದಾತಂಗೆ ಮುಕುತಿಯನೀವೆ 1 ಪೊಡವಿಯೊಳು ಅಣ್ಣನಾಜ್ಞೆಯ ಮೀರಿ ನಡೆಯುತಿಹಒಡಹುಟ್ಟಿದವಗೆ ಕೈವಲ್ಯವುಂಟೆ ?ದೃಢದಲಿ ವಿಭೀಷಣಾಗ್ರಜನನ್ನು ಬಾಣದಲಿಕೆಡಹಿಸಿದ ಬಳಿಕವಗೆ ಸ್ಥಿರಪಟ್ಟ ಕಟ್ಟಿದೆ2 ರೂಢಿಯಲಿ ಗುರುದ್ರೋಹವನು ಮಾಡಿದವನ ಮೊಗನೋಡಿದಾಗಲೆ ಪ್ರಾಯಶ್ಚಿತ್ತವುಂಟುನೋಡಿದಾಗಲೆ ಬೃಹಸ್ಪತಿಸತಿಗೆ ಅಳುಪಿದನಸೂಡಿದಾತನ ಸ್ನೇಹವನು ಮಾಡಿಕೊಂಡಿರ್ಪೆ 3 ದೇಶದೊಳು ವಂಶಕಂಟಕರೆನಿಸಿದವರೊಳಗೆಭಾಷಣವ ಮಾಡಬಪ್ಪುದೆ ಪ್ರಾಜ್ಞರು ?ಬೇಸರಿಸದೆ ಕೌರವರ ಕೊಂದ ಪಾಂಡವರ ಸಂ-ತೋಷದಲಿ ಪಕ್ಷಿಕರ ಮಾಡಿಕೊಂಡಿರ್ಪೆ 4 ಪೊಡವಿಪತಿ ಕೇಳು ಶ್ರೀ ಆದಿಕೇಶವನೆ ಹಿಂ-ಗಡೆಯಲ್ಲಿ ಮನೆಯ ಕಟ್ಟಿಸಬಾರದೆ ?ಬಿಡೆಯವಿಲ್ಲದೆ ಸಭಾಮಧ್ಯದಲಿ ಹೆಂಡತಿಯತೊಡೆಯ ಮೇಲ್ಕುಳ್ಳಿರಿಸಿಕೊಂಡಿರ್ಪ ಹಿರಿಯತನ 5
--------------
ಕನಕದಾಸ