ಒಟ್ಟು 179 ಕಡೆಗಳಲ್ಲಿ , 49 ದಾಸರು , 155 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶಿಖರಪುರ ದಾಸಾರ್ಯ ವಂಶದಿ ಶಶಿಯಂತೆ ಉದಿಸಿದ ಶ್ರೀನಿವಾಸಾರ್ಯರೆಂಬ ಪ್ರಚಲಿತ ನಾಮದ ದಾಸಾರ್ಯರ ಚರಿತೆ ಗುರುಗಳ ದಯದಿಂದ ಅರಿತಷ್ಟು ಪೇಳುವೆ ಬುಧ ಜನರು ನಿಷ್ಕಪಟ ಭಾವದಿಂದಲಿ ಕೇಳಿ ಸಿರಿಗುರುತಂದೆವರದಗೋಪಾಲವಿಠ್ಠಲನ ಭಕ್ತರೊಳಗಿವರೊಬ್ಬರು ಕಾಣಿರೊ 1 ಶ್ರೀ ರಮೇಶಕೃಷ್ಣನು ತನ್ನ ಪರಿವಾರ ಸಹಿತಾಗಿ ಓಲಗದಿ ಕುಳಿತಿರಲು ಸಾವಧಾನದಿ ತಾನು ಶ್ರೀದೇವಿ ಋಷಿಯಾಜ್ಞೆಯಿಂದಲಿ ಬಂದು ಶಿರಬಾಗಿ ಧರಣಿಯೊಳು ಭಾಗವತರ ಮಹಿಮೆತಿಳಿದು ಸಾಧನೆಗೈಯ್ಯಬೇಕೆಂಬ ಕುತೂಹಲದಿಂದ ದೇವಾಂಶರ ಬಿಡದೆ ಅವತಾರ ಮಾಡಿದ ಪವಿತ್ರವಂಶದಿ ಬಹುಕಾಲ ಪುತ್ರಾಪೇಕ್ಷೆಯಿಂದಲಿ ಶ್ರೀನಿವಾಸನ ಸೇವೆಗೈದ ಮಾತೆ ಶ್ರೀ ರುಕ್ಮಿಣೀದೇವಿ ಪಿತ ರಾಘವೇಂದ್ರರ ಉದರದಿಂದಲಿ ಜನಿಸಿ ಬಾಲತ್ವ ಕೆಲಕಾಲ ಕಳೆದು ತದನಂತರದಿ ಭೂವೈಕುಂಠಪುರದಲ್ಲಿ ದ್ವಿಜತ್ವವನೆ ಪಡೆದು ಲೌಕಿಕ ವಿದ್ಯೆಗಳನೆಲ್ಲ ಕಲಿಸಿ ಬಳಿಕ ಸಂಗೀತ ವಿದ್ಯೆಯ ಸಾಧನಕೆ ಮಿಗಿಲೆಂದು ಸಾಧಿಸಿ ಬಿಡದೆಲೆ ಪ್ರಾವೀಣ್ಯತೆಯ ಪಡೆದು ಅತಿ ಗೌಪ್ಯದಿಂದಲಿ ಶಿರಿಗುರು ತಂದೆವರದಗೋಪಾಲವಿಠ್ಠಲನ ಸ್ತುತಿಸಿ ಮನದಿ ಅತಿ ಹಿಗ್ಗುತಲಿರ್ದ ಬಗೆ ಕೇಳಿ 2 ಗುರು ಕಾಳಿಮರ್ದನ ಕೃಷ್ಣಾಖ್ಯದಾಸರ ಸಹವಾಸದಿಂದಲಿ ಲೌಕಿಕದಿ ಹುರುಳಿಲ್ಲವೆಂಬ ಮರ್ಮವ ತಿಳಿದು ಮನದಿ ವಿಚಾರಿಸುತಿರಲು ಕಾಲವಶದ ಸೋತ್ತುಮ ರಾಜ್ಯದಿ ಸ್ವರೂಪ ಕ್ರಿಯೆಗಳಾಚರಣೆಗೆ ಮನಮಾಡುತಲಿಹ ಓರ್ವ ದ್ವಿಜನ ಮರ್ಮವ ತಿಳಿಯದೆ ನಿಂದಿಸುವ ಮನವ ಮಾಡೆ ಶ್ರೀವದ್ವಿಜಯರಾಯರುತಮ್ಮ ವಂಶಜನಿವನೆಂದು ಶ್ರೀಮತ್ ರಾಘವೇಂದ್ರ ಮುನಿಗೆ ಬಹು ವಿಧ ಪ್ರಾರ್ಥಿಸಿ ಫಲ ಮಂತ್ರಾಕ್ಷತೆಯನಿತ್ತು ಧ್ಯಾನಕ್ಕೆ ತೊಡಗಿಸಿ ಶ್ರೀಮದ್ ಭಾವಿ ಸಮೀರ ಪದರಜವೇ ಬಹು ಭಾಗ್ಯವೆಂದು ಧೇನಿಪ ಭಕ್ತವರ್ಯರಾದ ತಂದೆವರದಗೋಪಾಲ ವಿಠಲದಾಸರಾಯರ ಪದಪದ್ಮಂಗಳಿಗೊಪ್ಪಿಸಿ ಅಪರಾಧಗಳನ್ನೆಲ್ಲ ದೃಷ್ಟಿ ಮಾತ್ರದಿ ದಹಿಸಿ ಫಣಿಗೆ ಮೃತ್ತಿಕೆ ತಡೆದು ಗುರುಗಳನೆ ಅರುಹಿ ನಿಜ ಮಾರ್ಗದಿಂದ ಶಿರಿಗುರುತಂದೆವರದಗೋಪಾಲವಿಠ್ಠಲನ ಕರುಣಿ ಪಡೆವ ಮಾರ್ಗವನೆ ಪಿಡಿದರು ಜವದಿ 3 ಭವದೊಳು ಬಳಲುವ ಭೌತಿಕ ಜೀವಿಗಳ ಬಹು ಬೇಗದಿಂದಲಿ ಉದ್ಧರಿಸಲೋಸುಗ ಬೋಧಮುನಿ ಕೃತ ಗ್ರಂಥಸಾರವ ಬೋಧಿಪ ಮುನಿಗಳ ದರ್ಶನಗೋಸುಗ ಪೊರಟ ಸಮಯದಲಿ ಶ್ರೀಗುರು ವಾದಿರಾಜ ಮುನಿವರ್ಯ ತನ್ನಯ ಪುತ್ರನ ಮೊರೆಕೇಳಿ ಶ್ರೀಲಕ್ಷ್ಮೀಹಯವದನನ ಮೂರ್ತಿಯ ಪ್ರಾರ್ಥಿಸೆ ರೌಪ್ಯಪೀಠ ಪುರವಾಸಿ ಶ್ರೀಕೃಷ್ಣನ ಕರದಿ ಶೋಭಿಪ ವಸ್ತುವಿನ ಪುರದಿ ಸ್ವಪ್ನದಿ ಬಂದು ತಂದೆವರದವಿಠ್ಠಲನೆಂಬ ಅಂಕಿತವನಿತ್ತು ಅದೇ ಸುಂದರ ರೂಪವ ತೋರಿ ನೈಜಗುರುಗಳ ದ್ವಾರಾ ಭಜಿಸೆಂದು ಬೋಧಿಸಿದ ನಂತರದಿ ಬಹು ಸಂಭ್ರಮದಿಂದಲಿ ಉಬ್ಬುಬ್ಬಿ ತನ್ನ ತನುಮನಧನ ಮನೆ ಮಕ್ಕಳನೆಲ್ಲ ನಿನ್ನ ಚರಣಾಲಯಕೆ ಅರ್ಪಿತವೆಂದು ಅರ್ಪಿಸಿ ಗುರುಗಳ ದ್ವಾರಾ ಸಿರಿಗುರು ತಂದೆವರದಗೋಪಾಲಗೆ ಸದಾ ಧೇನಿಸುತ ಮೈಮರೆತಿರ್ದನೀ ದಾಸವರ್ಯ 4 ಪಾದ ಕರವ ಮುಗಿದು ಸ್ವಾಮಿ ಶ್ರೀಗುರುರಾಜಾತ್ವದ್ದಾಸವರ್ಗಕೆಸೇರಿದ ಬಾಲಕ ದಾಸನೀತಾ ಕರುಣದಿಂದಲಿ ಜವದಿ ಕರುಣ ಕಟಾಕ್ಷದಿ ಈಕ್ಷಿಸಿ ಉದ್ಧರಿಸಬೇಕೆಂದು ಬಹುವಿಧ ಪ್ರಾರ್ಥಿಸಲು ಪರಮ ಕರುಣಾನಿಧಿ ಋಜುವರ್ಯ ಶ್ರೀ ವಾದಿರಾಜಾರ್ಯ ತನ್ನ ಹಂಸರೂಪಿಣಿ ಶ್ರೀ ಭಾವೀ ಭಾರತಿಯಿಂದೊಡಗೂಡಿ ಬಹು ಆನಂದದಿಂದಲಿ ಪಂಚ ಬೃಂದಾವನ ರೂಪದಿ ಮೆರೆವ ತನ್ನಯ ರೂಪವ ತೋರಿ ತುತಿಸಿಕೊಂಡು ಬಹು ಆನಂದಭರಿತರಾಗಿ ಬಹು ಬೇಗ ಸಾಧಿಸುವ ಗೈಸಲೋಸುಗ ಶಿರಿಗುರು ತಂದೆವರದಗೋಪಲವಿಠಲನ ಪ್ರಾರ್ಥಿಸಿ ಸಕಲ ಉತ್ಸವಗಳ ತೋರಿ ಶ್ರೀಮದ್ವಿಶ್ವೇಂದ್ರರ ದ್ವಾರಾ ತವ ಪಾದರೇಣು ಫಲ ಮಂತ್ರಾಕ್ಷತೆಯನಿತ್ತು ಬಗೆಯನೆಂತು ವರ್ಣಿಸಲಿ ಪಾಮರ ನರಾಧಮನು ನಾನು 5 ಕೇವಲ ಲೌಕಿಕ ಜನರಂತೆ ಆಧುನಿಕ ಪದ್ಧತಿಗನುಸರಿಸಿ ದಿನಚರ್ಯವನೆ ತೋರುತಲಿ ಭಾರತೀಶನ ಪ್ರಿಯವಾಗಿಹ ಕರ್ಮಗಳನೊಂದನೂ ಬಿಡದೆ ತಿಳಿದು ಮನದಿ ಮಾಡುತಲಿ ಮಂಕುಗಳಿಗೆ ಮೋಹಗೊಳಿಸಿ ಮಮಕಾರ ರಹಿತನಾಗಿ ದಿನಾಚರಣೆಗೈದು ಶ್ರೀ ಶುಕಮುನಿ ಆವೇಶಯುತರಾದ ಸದ್ವಂಶಜಾತ ಶ್ರೀಕೃಷ್ಣನ ಸೇವೆಗೋಸುಗ ಅವತರಿಸಿದ ವಾಯುದೇವ ಪೆಸರಿನಿಂದಲಿ ಶೋಭಿಪ ಕುಲಪುರೋಹಿತರ ಬಳಿಯಲಿ ಬಹು ವಿನಯದಿಂದಲಿ ಶ್ರೀ ನಿಜತತ್ವಗಳ ಮರ್ಮಗಳ ಕೇಳಿಕೊಂಡು ಮನದಿ ವಿಚಾರಿಸಿ ದೃಢೀಕರಣ ಪೂರ್ವಕ ಪಕ್ವವಾದ ಮನದಿಂದಲಿ ಶ್ರೀಶಶ್ರೀ ಮಧ್ವಮುನಿ ಶ್ರೀಗುರುಗಳ ಕರಣವನೆ ಕ್ಷಣಕ್ಷಣಕೆ ಬಿಡದೆ ಸ್ಮರಿಸುತಾನಂದ ಭಾಷ್ಯೆಗಳ ಸುರಿಸುತ ಭಾಗವತರ ಸಮ್ಮೇಳನದಿ ತತ್ವಗಳ ವಿಚಾರಿಸುತ ಶ್ರೀ ದಾಸಾರ್ಯರಾ ಉಕ್ತಿಗಳ ಆಧಾರವನೆ ಪೇಳುತಲಿ ಮನದಿ ಗುರುಗಳ ಸನ್ನಿಧಿಗೆ ಅರ್ಪಿಸಿ ತತ್ವದ್ವಾರ ತಿಳಿದುಪೂರ್ಣ ಸಾಧನವಗೈದು ಶ್ರೀ ಪ್ರಲ್ಹಾದ ಬಲಿ ಮಾಂಧಾತ ಕರಿರಾಜ ಶಿಬಿಮೊದಲಾದ ಚಕ್ರವರ್ತಿಗಳಲಿ ಬಹುಬೇಗ ಸಾಧನವ ಗೈದರು ಇವರಾರೊ ನಾ ಕಾಣೆ ಶಿರಿ ಗುರುತಂದೆವರದ-ಗೋಪಾಲವಿಠಲನ ಆಣೆ 6 ಸತಿ ವತ್ಸರ ವತ್ಸರ ಸತಿ ಮಾಯಾ ಶುಭ ದಿನದಿ ಸಂಖ್ಯಾ ಕಾಲದಿ ಪ್ರಥಮ ಯಾಮವೆಮಿಗಿಲೆಂದು ಮನದಿ ಲಯ ಚಿಂತನೆಯ ಬಿಡದೆ ಮಾಡುತದೇವತೆಗಳ ದುಂದುಭಿ ವಾದ್ಯಗಾಯನಗಳ ರಭಸದಿಶ್ರೀ ಲಕುಮಿ ದೇವಿಯ ಸೌಮ್ಯ ದುರ್ಗಾ ರೂಪಕೆನಮೋ ನಮೋ ಎಂದು ಶಿರಿಗುರುತಂದೆವರದಗೋಪಾಲ ವಿಠಲನಪುರಕೆ ಪುಷ್ಪಕ ವಿಮಾನ ರೋಹಿಣಿಯನೆ ಮಾಡಿನಲಿನಲಿದಾಡುವ ತೆರಳಿ ಪೋದಾರಿವರು 7 ಜತೆ :ಸತಿದೇವಿ ರಮಣನ ಭಕ್ತನೇ ನಿನ್ನಯಸುಖತನವೆಂದಿಗೂ ಕೊಡಲೆಂದು ಬೇಡಿಕೊಂಬೆಸಿರಿಗುರುತಂದೆವರದಗೋಪಾಲ ವಿಠಲನಿಗೆ 8
--------------
ಸಿರಿಗುರುತಂದೆವರದವಿಠಲರು
ಶ್ರೀ ಗುರುಕರುಣವು ಸೋಜಿಗವು ಕೌತುಕವು ಧ್ರುವ ಗುರುಹಸ್ತ ಪರುಷಸದೃಶ ನಿದರುಶÀದೋರುತಿಹ್ಯ ಅಗಣಿತ ತೇಜೋಮಯ ಪ್ರಕಾಶ ಇದು ಅನಿಮಿಷ ನೇತ್ರಲಿ ನೋಡುವದು ನೋಡುವದು ಘನ ಮಹಿಮೆಯೊಳು ಬೆರದಾಡುವದು ಬೆರದಾಡುವದು ತನ್ನೊಳು ತಾ ನಲಿದಾಡುವದು ನಲಿದಾಡುವದು ಅನುಭವ ಸುಖ ಸೂರ್ಯಾಡಿ ಸದ್ಗತಿ ಮುಕ್ತಿಯನೆ ಪಡೆವದು ಶ್ರೀಗುರುದಾಸರು 1 ಗುರುವುಪದೇಶ ಜ್ಞಾನಪ್ರಕಾಶ ಅತಿಸಂತೋಷ ಛೇದಿಸುವುದು ಭವಪಾಶ ಇದು ನಿದ್ರಸ್ಯ ಕರ್ನಲಿ ಕೇಳ್ವದು ನಿದ್ರಸ್ಯ ಕರ್ನಲಿ ಕೇಳ್ವದು ಲಯ ಲೀಲೆಯೊಳು ಆಲಿಸುವದು ಆಲಿಸುವದು ಪರಿಪರಿ ಶ್ರುತಿಗ್ಹೇಳೆನಿಸುವದು ಹೇಳೆನಿಸುವದು ಪತಿತಜೀವನ ಪಾವನಗೈಸುವದು ಸದ್ಗುರು ಮಹಿಮೆಯ ತಿಳಿಯದು ತಿಳಿಯದೀ ಶ್ರೀಗುರು ದಾಸರು 2 ಗುರು ನಿಜಬೋಧ ಬಲು ಅಗಾಧ ಪರಮ ಆಹ್ಲಾದ ತಿಳಿದವ ಜನ್ಮಕ ವಿರಹಿತವಾದ ಇದು ಅತಿಸೂಕ್ಷ್ಮಗತಿ ಭೇದಿಸುವದು ಭೇದಿಸುವದು ಗುರುಪಾದವೆಗತಿ ನಿಶ್ಚೈಸುವದು ನಿಶ್ಚೈಸುವದು ಸಮ್ಯಕಙÁ್ಞನವು ಸಾಧಿಸಿ ಆತ್ಮದಿ ಜೀವನ್ಮುಕ್ತನಾಗುವದು ಸದ್ಗುರು ಪಾದವು ಸಾಧಿಸಿ ಸಾಧಿಸಿ ಶ್ರೀಗುರುದಾಸರು 3 ಗುರುಕೃಪೆಜ್ಞಾನನ ಅಳಿವುದಙÁ್ಞನ ತಿಳಿವದು ಯಾತನ ಕಳೆವದು ಜನ್ಮ ಜರಾಮರಣ ಇದು ಪೂರ್ವ ಕಲ್ಪನೆಯು ಕಲ್ಪನೆಯು ಆತ್ಮಙÁ್ಞನದ ವರ್ತನೆಯು ವರ್ತನೆಯು ಸಾಯಸವಳಿದು ಯತ್ನವು ಪ್ರಯತ್ನವು ಶ್ರೀಗುರು ಭಕ್ತಿಯು ಮಾಡಿರಯ್ಯ ಮಾಡಿರಯ್ಯ ಸದ್ಗುರುದಾಸರು4 ಗುರುಙÁ್ಞನ ದೀಕ್ಷಾ ಕರುಣಾ ಕಟಾಕ್ಷ ಸದ್ಗತಿಮೋಕ್ಷ ತೋರುತಿಹ್ಯ ಗುರುತಾನೆ ಪ್ರತ್ಯಕ್ಷ ಇದು ಭಾಸ್ಕರ ಗುರು ಕೃಪಾದೃಷ್ಟಿಯು ಅಮೃತದ ದೃಷ್ಟಿಯು ಜೀವನ ಸಂತುಷ್ಟಿಯು ಮುರಿಯಿತು ಮಹಿಪತಿ ಹುಟ್ಟುವ ಹೊಂದುವ ಬಟ್ಟೆಯು ತ್ರಾಹಿ ತ್ರಾಹಿ ಗುರುನಾಥ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶ್ರೀ ಮಧ್ವಾಚಾರ್ಯರು ಮಧ್ವೇಶಾರ್ಪಣಮಸ್ತು ಮಹಾಪ್ರಭು ಮಧ್ವೇಶಾರ್ಪಣಮಸ್ತು ಪ ಎದ್ದು ಕೂತು ಮಲಗೆದ್ದು ಮಾಡುವ ಕರ್ಮಮಧ್ವೇಶಾರ್ಪಣಮಸ್ತು ಅ.ಪ. ಕರ್ಮ ಮಧ್ವೇಶಾರ್ಪಣಮಸ್ತುದುಷ್ಟರಾಡುತಿಹ ಕೆಟ್ಟ ನುಡಿಗಳು ಮಧ್ವೇಶಾರ್ಪಣಮಸ್ತುಮೆಟ್ಟಿ ಹೆಜ್ಜೆ ಇಟ್ಟದಾಡುವುದು ಮಧ್ವೇಶಾರ್ಪಣಮಸ್ತುಶಿಟ್ಟಿಲಿ ಜನರಿಗೆ ನಿಷ್ಠುರಾಡುವುದು ಮಧ್ವೇಶಾರ್ಪಣಮಸ್ತು 1 ಮಾಳ್ಪದು ಓಲಗ ಮಾಳ್ಪದು ಕ್ಲೇಶ ಬಡುವುದು ಮಧ್ವೇಶಾರ್ಪಣಮಸ್ತುಹೇಸಿಕೆ ವಿಷಯಗಳಾಶೆ ಮಾಡುವುದು ಮಧ್ವೇಶಾರ್ಪಣಮಸ್ತು 3 ಬಗೆ ಬಗೆ ವಸ್ತ್ರಗಳಗಲದೆ ಹೊದಿವುದು ಮಧ್ವೇಶಾರ್ಪಣಮಸ್ತುಝಗ ಝಗಿಸುವ ಹೊಸ ನಗಗಳನಿಡುವುದು ಮಧ್ವೇಶಾರ್ಪಣಮಸ್ತುಸೊಗಸಿಂದುತ್ತರಗಳ ಸೇವಿಸುವುದು ಮಧ್ವೇಶಾರ್ಪಣಮಸ್ತುಹಗಲಿರುಳಲಿ ಮಾಳ್ಪಗಣಿತ ಕರ್ಮವು ಮಧ್ವೇಶಾರ್ಪಣಮಸ್ತು 4 ರಮಣಿಯರಿಂದಲಿ ರಮಣ ಮಾಡುವುದು ಮಧ್ವೇಶಾರ್ಪಣಮಸ್ತುಕ್ರಮದಿಂ ದಶೇಂದ್ರಿಯ ಕರ್ಮಗಳೆಲ್ಲವು ಮಧ್ವೇಶಾರ್ಪಣಮಸ್ತುಭ್ರಮಿಸಿ ಗುರುಗಳ ಮನ ಸ್ತೋಷಿಸುವುದು ಮಧ್ವೇಶಾರ್ಪಣಮಸ್ತುರಮಾಪತಿ ವಿಠಲನ ಮನದಿ ಧ್ಯಾನಿಸುವುದುಮಧ್ವೇಶಾರ್ಪಣಮಸ್ತು 5
--------------
ರಮಾಪತಿವಿಠಲರು
ಶ್ರೀ ವಧುರಮಣನ ಚರಿತಾಮೃತವನು ಸೇವಿಸಬಾರದೆ ಜಿವ್ಹೆ| ಆವಾಗು ವಿಷಯಾಸಕ್ತಿಲಿ ಬಾಳುವ ದಾವರಸಜ್ಞದ ಗುಣವೇ ಪ ಆರತಿಯಿಂದಲಿ ಷಡರಸದನ್ನದ ಸಾರಾಯಕ ಮರುಳಾದೆ ನೀ| ನರೆರಧರಕ್ಕೊಲಿದೇ ಸುಧಾರಸವೆಂದು ಬಗೆದೇ| ಧಾರಣಿ ಕಳ್ಳಿಯ ಹಾಲೆಂದೆನಿಸಲು ಗೋರಸದ್ಹಂಬಲ ಮರೆದೆ 1 ಜ್ಞಾನವ ಸಾಧಿಸಿ ಬಹು ಸಾಯಾಸದಿ ನಾನು ಶಾಸ್ತ್ರವ ನೋಡಿ| ಮಾನದ ಕಾಂಕ್ಷಿಯ ಕೂಡಿ| ಪರಿ ಕುಣಿದಾಡುವ ಹೀನ ಮನುಜರಾ ಪಾಡಿ2 ಸ್ಮರಿಸಲು ಶ್ರೀಹರಿಯಾ ಲೋಹ| ಪರಸವ ಮುಟ್ಟಿದ ಪರಿಯಾ ಧನ್ಯರು ತಮನೆನಿಸುವನರಿಯಾ| ಗುರುವ್ಕ ಮಹಿತಪಿ ನಂದನು ಸಾರಿದ ಮೊರೆ ಹೋಗು| ಮೂಜಗ ಧೊರಿಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶ್ರೀ ಹರಿ ಸೇವೆಯ ಮಾಡುವ ಬನ್ನಿ ಮಹಾ ಮಹಿಮೆಯ ಕೊಂಡಾಡು ಬನ್ನಿ ಸಹಕಾರದ ಸುಖ ನೋಡುವ ಬನ್ನಿ ಪರದೊಳು ನಲಿದಾಡುವ ಬನ್ನಿ 1 ನೋಡುವ ಬನ್ನಿ ಸದ್ಗುರು ಪಾದ ಬೇಡುವ ಬನ್ನಿ ನಿಜ ಹಿತವಾದ ಕೂಡುವ ಬನ್ನಿ ನಿಜಬೋಧ ಮಾಡುವ ನಿಜ ಭಕ್ತಿಯು ನವವಿಧ 2 ಜಯ ಜಯಕಾರ ಮಾಡುವ ಬನ್ನಿ ಕೈಮುಗಿದು ವರ ಬೇಡುವ ಬನ್ನಿ ಮಹಿಪತಿಸ್ವಾಮಿಯ ನೋಡುವ ಬನ್ನಿ ದಯಾನಿಧಿಯ ಕೊಂಡಾಡುವ ಬನ್ನಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಕಲ ದಿವಿಜಾರಾಧ್ಯ ಚರಣ ಪ ಕಂದರ್ಪ ಕೋಟಿ ಮೋಹನ್ನ ಕಾಯಾ | ಕಂಸ ಚಾಣೂರ ಮರ್ದನಕಾಲಿಯ ವಿಷಕಲಿಲ ಸಲಿಲಯಾನಕಲಪ್ರಾಣ ಗೋಗೋಪ ಜೀವನಾ | ಈಯ್ಯಾ ಈಯ್ಯಾ || ಗೋಕುಲದಿ ಗೋಪಿಯರ ಮನೆಗಳಲಿ ಗೋರಸ ಚೌರ್ಯ ಸಂಪನ್ನಾ |ಮಧುರ ಮುರಲಿ ನಿನಾದದಿಂದ ಮೋಹಿಪ್ಪ ||ಮೌನಿಗಳ ಮಾನಸಗಳಲ್ಲಿ | ಸಸ ಸಾನಿಸಾನಿ ನಿಸನಿ |ನಿಸನಿ ಸಾಸನಿನಿ ಸರಿಗರಿ ಮಗಗರಿಸ ನಿಧನಿಧ ನಿಧಪಮ || ಧಿಕ್ಕತಾ ಧಿಕ್ಕತಾ ಧಿಮಿ ಧಿಮಿಕಿತಾ ಧಿಮಿಕಿತಾ ಗಿಕಿಟ ತೋಂ |ಗಿಕಿಟ ತೋಂ ಗಿದಿಗದಿಗ ಥೈಯಾ ಥೈಯಾ || ಪರಿ ನಂದನಂಗಳದಲ್ಲಿ ಕುಣಿಕುಣಿದಾಡುವ ಶ್ರೀವಿಠ್ಠಲನಪಾದಾಂಬುಜದ ಭಜನದಿಂದೆ ತರಿಸುವೆನೆಂದು ಪಾಡುವೆನುಗೀತ ಪ್ರಬಂಧ ಬರೆಹಗಾರ ರುಕ್ಮಾಂಗದನು ||
--------------
ರುಕ್ಮಾಂಗದರು
ಸಮಾಜ ಚಿಂತನೆ :ನೀತಿಬೋಧನೆ ಅಜ್ಞಾನಿಗಳ ಕೂಡೆ ಅಧಿಕ ಸ್ನೇಹಕ್ಕಿಂತಸುಜ್ಞಾನಿಗಳ ಕೂಡೆ ಜಗಳವೇ ಲೇಸು ಪ ಉಂಬುಡುವುದಕಿಲ್ಲದರಸಿನೋಲಗಕಿಂತತುಂಬಿದೂರೊಳಗೆ ತಿರಿದುಂಬುವುದೆ ಲೇಸುಹಂಬಲಿಸಿ ಹಾಳ್ಹರಟೆ ಹೊಡೆವುದಕಿಂತ - ಹರಿಯೆಂಬ ದಾಸರ ಕೂಡೆ ಸಂಭಾಷಣೆಯೆ ಲೇಸು1 ಒಡನೆ ಹಂಗಿಸುವನೋಗರವನುಂಬುದಕಿಂತಕುಡಿನೀರು ಕುಡಿದುಕೊಂಡಿರುವುದೇ ಲೇಸುಬಿಡದೆ ಬಾಂಧವರೊಡನೆ ಕಡಿದಾಡುವುದಕಿಂತಅಡವಿಯೊಳಗಜ್ಞಾತ ವಾಸವೇ ಲೇಸು2 ಮಸೆಯುತಿಹ ಮತ್ಸರದ ನೆರೆಯೊಳಿರುವುದಕಿಂತಹಸನಿಲ್ಲದ ಹಾಳುಗುಡಿಯೇ ಲೇಸುಬಿಸಜಾಕ್ಷ ಕಾಗಿನೆಲೆಯಾದಿಕೇಶವರಾಯವಸುಮತಿಯೊಳು ನಿನ್ನ ದಾಸತ್ವವೇ ಲೇಸು 3
--------------
ಕನಕದಾಸ
ಸವಿಲೀಲೆ ದೋರುತಿದೆ ಬಗೆಬಗೆನುಭವ ಬೀರುತಿದೆ ಧ್ರುವ ತುಂಬಿ ತುಳುಕ್ಯಾಡುತಿದೆ ಝಳಝಳನೆ ಥಳಗುಡುತಿದೆ ಬಲು ಸೂಸುತಿದೆ ಹೇಳಲಿನ್ನೇನದ ತಿಳಿಯಲಗಾಧವು ತನುಮನಕ್ಹರುಷಗಡುತಿದೆ 1 ಸುರಿಸುರಿದಾಡುವ ಸಾರಸವಿಯ ಸುಧಾರಸ ಭೋರ್ಗರೆಯುತಿದೆ ಇರುಳ್ಹಗಲೆನದ್ಯಾವಾಗನುದಿನ ಸದ್ಘನಸುರಿಮಳೆ ಧಾರಿಡುತಿದೆ ಪಾರಿಲ್ಲದ ಪರಾತ್ಪರ ದುರ್ಗಮಿದು ಪರಮಪಾವನ ಗೈಸುತಿದೆ ಪರಿಪರಿ ಸವಿದುಂಬುವ ಸುಜನರ ಸುಮುಖಕೆ ತಾನಿದಿರಿಡುತಿದೆ 2 ಪ್ರಭಕೆ ಪ್ರಭಾಕರವಾಗಿಹ ಭಾಸ್ಕರಕೋಟಿ ಪ್ರಕಾಶಿಸುತಿದೆ ಶುಭಕರವಾದ ಸದಾನು ಮಂಗಳ ನೆಲೆ ನಿಭವಾಗಿ ತೋರುತಿದೆ ಅಭಯಕರವ ಪಡೆದವಗೆನ್ನೊಡೆಯನ ಸುಖ ಸುಲಭಗುಡುತಿದೆ ಭಾಸುತಿದೆ ಗುರುಮಹಿಮೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಾಧನಕ್ಕೆ ಬಗೆಗಾಣೆನೆನ್ನಬಹುದೆ ಸಾದರದಿ ಗುರುಕರುಣ ತಾ ಪಡೆದ ಬಳಿಕ ಪ ಕಂಡಕಂಡದ್ದೆಲ್ಲ ಕಮಲನಾಭನ ಮೂರ್ತಿ ಉಂಡು ಉಟ್ಟದ್ದೆಲ್ಲ ವಿಷ್ಣು ಪೂಜೆ ತಂಡತಂಡದ ವಾರ್ತೆ ವಾರಿಜಾಕ್ಷನ ಕೀರ್ತಿ ಹಿಂಡು ಮಾತುಗಳೆಲ್ಲ ಹರಿಯ ನಾಮ 1 ವಾಗತ್ಯಪಡುವದೆ ವಿಧಿನಿಷೇಧಾರಚರಣೆ ರೋಗಾನುಭವವೆಲ್ಲ ಉಗ್ರತಪವು ಆಗದವರಾಡಿಕೊಂಬುವುದೆ ಆರ್ಶೀವಾದ ಬೀಗುರುಪಚಾರವೇ ಭೂತದಯವು 2 ಮೈಮರೆತು ಮಲಗುವುದೆ ಧರಣಿ ನಮಸ್ಕಾರ ಕೈಮೀರಿ ಹೋದದ್ದೆ ಕೃಷ್ಣಾರ್ಪಣ ಮೈ ಮನೋವೃತ್ತಿಗಳೆ ವಿಷಯದಲಿ ವೈರಾಗ್ಯ ಹೋಯ್ಯಾಲಿತನವೆಲ್ಲ ಹರಿಯ ವಿಹಾರ 3 ಹಿಡಿದ ಹಟ ಪೂರೈಸಲದು ಹರಿಯ ಸಂಕಲ್ಪ ನಡೆದಾಡುವೋದೆಲ್ಲ ತೀರ್ಥಯಾತ್ರೆ ಬಡತನವು ಬರಲದೇ ಭಗವದ್ಭಜನೆಯೋಗ ಸಡಗರದಲ್ಲಿಪ್ಪುದೆ ಶ್ರೀಶನಾಜ್ಞಾ 4 ಬುದ್ಧಿಸಾಲದೆ ಸುಮ್ಮನಿರುವುದೇ ಸಮ್ಮತವು ಯದೃಚ್ಛಾಲಾಭವೇ ಸುಖವುಯೆನಲು ಮಧ್ವಾಂತರ್ಗತ ಶ್ರೀ ವಿಜಯವಿಠ್ಠಲರೇಯ ಹೃದ್ಗತಾರ್ಥವ ತಿಳಿದು ಒಪ್ಪಿಸಿಕೊಳನೆ 5
--------------
ವಿಜಯದಾಸ
ಸಿಕ್ಕಿದನೆಲೆ ಜಾಣೆ ಶ್ರೀ ವೇಣುಗೋಪಾಲಭಕ್ತವತ್ಸಲ ದೇವನು ಪ ಮಕ್ಕಳ ಚೆಂಡಿಕೆ ಮರದ ಕೊನೆಗೆ ಕಟ್ಟಿಘಕ್ಕನೆ ಕೈ ಚಪ್ಪಾಳಿಕ್ಕಿ ನಗುವ ರಂಗ ಅ.ಪ. ಹೆಣ್ಣುಮಕ್ಕಳು ಬಚ್ಚಲೆಣ್ಣೆ ಮಂಡೆಯೊಳುಬಣ್ಣ ವಸ್ತ್ರವ ಬಿಟ್ಟು ಬರಿಮೈಯೊಳಿರಲುಚೆನ್ನಿಗ ಬಿಸಿನೀರ ಚೆಲ್ಲಿ ಸೀರೆಗಳೊಯ್ದುಉನ್ನಂತವಾದ ವೃಕ್ಷವೇರಿ ಕಾಡುವನಮ್ಮ 1 ಪರಿ ಎಷ್ಟೆಂತೆ ಪೇಳಲೆ2 ಸಡಗರದೊಳು ಸೋಳಸಾಸಿರ ಗೋಪೇರಒಡಗೂಡಿ ಕೊಳಲನು ಪಿಡಿದು ತಾ ಮೊಸರಕಡೆವೊ ಗೊಲ್ಲತಿಯರ ಕೈ ಪಿಡಿದಾಡುವಒಡೆಯನೆ ಇವನಮ್ಮ ಉಡುಪಿನ ಶ್ರೀಕೃಷ್ಣ3
--------------
ವ್ಯಾಸರಾಯರು
ಸುಮ್ಮನೆ ದೂರಿದರೆ ನಾನೆಂಬೆನು ರಂಗಂ ಗುಮ್ಮ ಬಂದನು ಎಂದರಂಜುವನು ಪ ಸುಳ್ಳು ಸಟೆಯನಾಡಬೇಡಿರೇ ಜಾತಿ ಗೊಲ್ಲತಿ ಯರು ನೀವಾದರೆ ಎಲ್ಲನಾರಿಯರೊಂದು ಗೂಡಿರೆ ಕಟ್ಟಿ ಕಳ್ಳ ಕೃಷ್ಣನ ತಂದು ತೋರಿರೆ 1 ಮುತ್ತಿ ಚಂಡಾಟವಾಡುವ ನಂದ ನೊತ್ತಿಲಿ ಪಾಲ್ಬೆಣ್ಣೆ ಮೆಲ್ಲುವ ಪಣಿಗೆ ವತ್ತು ಪೊಂಗಳಲ ನುಡಿಸುವ 2 ಕಾಲೊಳಂದಿಗೆ ಗಜ್ಜೆ ಧ್ವನಿ ಮಾಡುವ ತನ್ನ ತಾಳ ಗತಿಗೆ ತಾನೆ ಕುಣಿದಾಡುವ ನಂದ ನೋಲಗವನ್ನು ಕ್ಷಣ ಬಿಡದಿರುವ ಲಕ್ಷ್ಮೀ ಲೋಲ ತನ್ನೊಳು ತಾನೆ ನಲಿದಾಡುವ 3
--------------
ಕವಿ ಪರಮದೇವದಾಸರು
ಸುಮ್ಮನೇಕೆ ಪರದಾಡುವೆಯೊ ಪರ ಬೊಮ್ಮನ ಚರಣಕೆ ಶರಣು ಹೊಡಿ ನಮ್ಮನು ಸೃಜಿಸುವ ಪೊರೆಯುವ ಕೊನೆಯಲಿ ನಮ್ಮನೇ ನುಂಗುವ ಗುಮ್ಮನಿವ ನಮ್ಮ ಶರೀರದೊಳಿರುವ ಯಂತ್ರಗಳು ನಮ್ಮಧೀನವೆ ಯೋಚಿಸೆಲೊ ವಾತ ನಮ್ಮಾಕಾಂಕ್ಷೆಯೆ ಯೋಚಿಸೆಲೊ 1 ಮೂರಂತಸ್ಥಿನ ನೂರು ಸದನಗಳು ನೂರು ರೂಪಗಳು ನಿನಗಳವೆ ಚಾರು ಮನೋಹರ ಸತಿಯಳಿರಲು ಮನ ಕೋರಿಕೆಯವಳಲಿ ಶಾಶ್ವತವೆ ನೂರು ಎಕರೆ ಹೊಲ ಗದ್ದೆ ತೋಟಗಳು ಮೂರು ಲಕ್ಷಗಳು ಬೆಲೆಯಿರಲು ಮೂರು ಚಟಾಕಿನ ಅನ್ನ ಹೊರತು ಅದ ಮೀರಿ ನುಂಗುವುದು ನಿನಗಳವೇ 2 ಶೂರನು ನಾ ಬಲುಧೀರನು ನಾ ಅಧಿ ಕಾರಿಯು ನಾ ಈ ಜಗದೊಳಗೆ ಕೋರಿದ ಜನರನು ಸದೆಬಡಿಯುವೆ ಎನ ಗಾರು ಸಮರು ಈ ಧರೆಯೊಳಗೆ ಕೋರುವ ಸುಖಗಳನನುಭವಿಸುವ ಮಮ ಕಾರದ ಗತಿಯನು ಯೋಚಿಸೆಲೊ ಹೇರಳ ಗಜತುರಗಾದಿ ವಾಹನಗ ಳೇರಿದ ನೀ ಹೆಗಲೇರಿ ಹೋಗುವಿಯೊ 3 ಸಾಸಿರ ಸಾಸಿರ ಬಡ್ಡಿ ಬಾಚಿಗಳ ಬೇಸರವಿಲ್ಲದೆ ಗಳಿಸಿದೆಯೊ ಕಾಸಿನ ಲೋಭಕೆ ಮೂಸಲು ಬಾರದ ಕಾಸಕ್ಕಿ ಅನ್ನವ ನುಂಗಿದೆಯೊ ಲೇಶವು ಗಮನಕೆ ತರಲಿಲ್ಲ ಈ ಸವಿನುಡಿ ಬಲು ಹಳೆಯದೆಂದು ಆಕ್ರೋಶವ ಮಾಡದೆ ಯೋಚಿಸೆಲೊ 4 ಮಾಯವು ತಾ ಈ ಜಗತ್ತಿನ ಜೀವನ ರುಚಿ ತೋರುವುದು ಕಾಯವು ಶಾಶ್ವತವೆಂಬ ಭ್ರಾಂತಿಯಲಿ ಹೇಯ ವಿಷಯಗಳನುಣಿಸುವುದು ಪ್ರಾಯಶರೆಲ್ಲರು ಬಲ್ಲರಿದನು ಬರಿ ಬಾಯಲಿ ನುಡಿಯುವರೊ ಸತತ ಕಾಯವಚನಮನದಿಂದ ಪ್ರಸನ್ನನ ಮಾಯವನರಿತಾಚರಿಪರು ವಿರಳ 5
--------------
ವಿದ್ಯಾಪ್ರಸನ್ನತೀರ್ಥರು
ಸುಲಭ ನೀನೆನಗಲ್ಲ ತಿಳಿವೆ ಶ್ರೀನಲ್ಲ ಪ ಸುಲಭನೆಂದಾಡುವರು ಹರಿದಾಸರೆಲ್ಲ ಅ.ಪ. ದರುಶನವು ಸಿಗಲೆಂದು ಪಂಢರಿಗೆ ನಾ ಬಂದೆಪರಮಪಾವನ ನಿನ್ನ ಮೂರುತಿಯ ಮುಂದೆತ್ವರದಿನಿಲೆ ಬರಲು ಬಹುಭಕ್ತಿಯಿಂದೆತೆರೆಯಲಿಲ್ಲವೊ ದ್ವಾರ ಏನೆಂದೆ ತಂದೆ 1 ಶಿಲೆಯ ಪ್ರತಿಮೆಯನೀಗ ತೋರದವ ನೀ ಮುಂದೆಬಲು ನಿಜದ ರೂಪವನು ತೋರುವುದು ಹೇಗೆಂದೆಜಲಜಾಕ್ಷ ಭರವಸೆಯ ನೀಡಲೆಂತು ಮನ ಗುಂದೆಸಲಹು ವಿಠ್ಠಲರಾಯ ಕೈ ಮುಗಿಯುವೆನು ತಂದೆ 2 ಸುಲಭದೊಳು ಸುಲಭನೈ ಪಂಢರಿಯ ವಿಠಲಾಬಲು ಪಾಪಿಗಳನು ಉದ್ಧರಿಪ ಸಕಲಬಲುಹಿ ನೀ ನುಡಿಯು ನನಗೆಲಾಸುಲಭ ಗದುಗಿನ ವೀರನಾರಾಯಣನು ಅಚಲ 3
--------------
ವೀರನಾರಾಯಣ
ಸೋಮಶೇಖರ ತಾನೆ ಬಲ್ಲ ಶ್ರೀ-ರಾಮನಾಮಾಮೃತ ಸವಿಯನೆಲ್ಲ ಪ ಮದನಪಿತಾಯೆಂದು ಕುಣಿಕುಣಿದಾಡಲುಕೆದರಿದ ಕೆಂಜೆಡೆಗಳ ಪುಂಜದಿಒದಗಿದ ಗಂಗೆ ತುಂತುರು ಹನಿಗಳ ಕಂಡುಪದಮಜಾಂಡಹಿತ ರಾಮರಾಮಾ ಎಂಬ 1 ಆನಂದ ಜಲದ ಸೋನೆಗೆ ಲಲಾಟ-ದಾನೇತ್ರ ಬಡಬಾನಲನಂತಿರೆ ಏನೆನ್ನಲಿಬಹುದು ಸುಖ ಸಾಗರದೊಳುತಾನೆದ್ದು ಮುಳುಗುತ ರಾಮ ರಾಮಾಯೆಂಬ2 ಶಿರದ ಗಂಗೆಯ ವರ ಅಗ್ಗಣಿಯಾಗಿರೆಸರಸಿಜ ಬಾಂಧವ ಚೆಂದಿರ ದೀಪಉರಿಗಣ್ಣಿನ ಹೊಗೆ ಧೂಪವನೇರಿಸಿಕರಣವೆ ನೈವೇದ್ಯಯೆಂದು ರಾಮ ಎಂಬ 3 ಚಂದದ ಸ್ಫಟಿಕದ ಕರಡಿಗೆಯಲ್ಲಿಪ್ಪಇಂದ್ರನೀಲದ ಚೆನ್ನಪುತ್ಥಳಿಯಂತೆಚಂದದಿ ತನ್ನಯ ಹೃದಯ ಮಧ್ಯದಿ ರಾಮ-ಚಂದ್ರ ಹೊಳೆಯೆ ಶ್ರೀ ರಾಮ ರಾಮ ಎಂಬ4 ಫಣಿ ಮಣಿಯಾಘಾತನಾದ ತಾಳವಾಗೆ ರಾಮ ರಾಮ ಎಂಬ 5 ಒಮ್ಮೆ ಹರಿಯ ಗುಣ ಅಜಪೇಳಲಾಯೆಂಬಒಮ್ಮೆ ನಾರದ ಪಾಡೆ ತತ್ಥೈಯೆಂಬಒಮ್ಮೆ ರಾಣಿಗೆ ಪೇಳಿ ಶಿರವನೊಲಿದಾಡುವಒಮ್ಮೆ ತನ್ನೊಳು ನೆನೆಸಿ ರಾಮ ರಾಮ ಎಂಬ6 ಅರಸಂಚೆಯ ಕಂಜ ಪುಂಜಗಳಲಿಪ್ಪಅರೆ ಮುಚ್ಚಿದ ಹದಿನೈದು ನೇತ್ರಗಳಿಂಹರಿಯ ಕೊಂಡಾಡುತ ಪಂಚ ಮುಖಗಳಿಂದಸಿರಿಕೃಷ್ಣ ಮುಕುಂದ ನರಹರಿ ರಾಮ ಎಂಬ7
--------------
ವ್ಯಾಸರಾಯರು
ಸ್ವಾಮಿ ಸೀತಾರಾಮ ಪತಿತ ಪಾವನ ನಾಮ ಧ್ರುವ ಅಮಿತವಾದ ಗುಣ ನಿರ್ಮಳಾಚರಣಿ ಕಮಲಭವಾರ್ಚಿತ ಕಾರ್ಮುಕಪಾಣಿ ನೇಮದಿಂದಾಡುವ ಅಮೃತವಾಣಿ 1 ಸಮಸ್ತ ಹೃದಯಾಂತ್ರ ವಿಮಲಸುಚರಿತ್ರ ಸುಮನ ಸುಗಾತ್ರ ಅಮರಜ ನೇತ್ರ ಸೋಮಶೇಖರಪ್ರಿಯ ಪುಣ್ಯಪವಿತ್ರ 2 ಸಾಹ್ಯಸಹಕಾರ ಬಾಹ್ಯಾಂತ್ರ ಸ್ಥಿರ ಸ್ವಹಿತದಾಗರ ಮಹಿಪತಿ ಮನೋಹರ ಮಹಾಮಹಿಯನ್ನುಳ್ಳನಹುದೋ ಉದಾರ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು