ಒಟ್ಟು 1195 ಕಡೆಗಳಲ್ಲಿ , 99 ದಾಸರು , 977 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂಥ ಸುಂದರವಾದ ವೃಂದಾವನಾನಿಂತು ನೋಡಲು ಮನಕೆ ಸಂತೋಷವಾಗುವದು ಪಶ್ರೀ ರಾಘವೇಂದ್ರ ಗುರುಸಾರ್ವಭೌಮರ ದಿವ್ಯಧೀರ ಗಂಭೀರ ಸುಮನೋಹರ ಸುಮೂರ್ತಿರಾರಾಜಿಸುತಿಹುದು ಮುಗಳುನಗೆ ಮುಖದಿಂದಾಶರಣಾಗತರಿಗೆಲ್ಲ ಅಭಯ ಹಸ್ತವ ನೀಡಿ 1ಪ್ರೇರಕರು ತಾವಾಗಿ ಪ್ರೇರ್ಯರೊಬ್ಬನ ಮಾಡಿಕಾರಾಗಿರನ ಕನಸು ಮನಸಿನಲಿ ಪೋಗಿಇರಬೇಕು 'ೀಗೆಂಬ ವೃಂದಾವನದಿ ಚಿತ್ರತೋರಿಸುತ ಅಂತರಂಗದಿ ನಿಂದು ಮಾಡಿಸಿದ 2ಅಡಿಗಡಿಗೆ ಮ'ಮೆಯನು ತೋರಿಸುತ ಗಲಗಲಿಗೆನಡೆತಂದು ಶ್ರೀ ಮಠವ ಹ'್ಮುಕೊಂಡಿಹರುಸಡಗರದಿ ಭಕುತರಿಂ ಸೇವೆಕೊಳ್ಳುತಲಿಹರುಬಡವರಿಗೆ ಭಾಗ್ಯ ನಿಧಿಯು ಬಂದಂತೆ ಆಯ್ತು 3ಅಲ್ಲಿ ಮಂತ್ರಾಲಯವು ಇಲ್ಲಿ ಗಾಲವಕ್ಷೇತ್ರಅಲ್ಲಿ ತುಂಗಾ ಇಲ್ಲಿ ಕೃಷ್ಣವೇಣಿಅಲ್ಲಿ ಪ್ರಹ್ಲಾದರಾಜ ಯೋಗ ಮಾಡಿದನು ಇಲ್ಲಿತಪವ ಗೈದಿಹರು ಗಾಲವ ಮರ್ಹಗಳು 4ಅಲ್ಲಿ ರಾಯರಬಂಡಿ ಇಲ್ಲಿ ಋಗಳ ಬಂಡಿಅಲ್ಲಿ ಮಂಚಾಲೆಮ್ಮಾ ಇಲ್ಲಿ ಜಗದಂಬಾಅಲ್ಲಿ ಹೊಳೆದಾಟಿದರೆ ಪಂಚಮುಖಿಪ್ರಾಣೇಶಇಲ್ಲಿ ಹೊಳೆ ದಾಟಿದರೆ ಸಂಜೀವ ಪ್ರಾಣೇಶ 5ಕಲಿಯುಗದ ಸುರಧೇನು ಕಲ್ಪತರು ಗುರುರಾಯಗಲಗಲಿಯ ಭಾಗ್ಯ'ದು ಬಂದು ನಿಲಿಸಿಹನುಕಲುಷವರ್ಜಿತರಾಗಿ ದರುಶನವ ಮಾಡಿದರೆಕರೆದು ಈಪ್ಸಿತವ ಕೊಡುವ ಪರಮ ಕರುಣಾಳು 6ಪಾಪಿ ಕೋಪಿಷ್ಠರಿಗೆ ಸೇವೆ ದಕ್ಕುವದಿಲ್ಲಮಾಂ ಪಾ' ಪಾ' ಎಂಬುವ ಭಕುತರಾತಾಪತ್ರಯವ ಕಳೆದು ಸುಪ'ತ್ರರನು ಮಾಡಿಭೂಪತಿ'ಠ್ಠಲನ ಅಪರೋಕ್ಷ ಮಾಡಿಸುವ 7
--------------
ಭೂಪತಿ ವಿಠಲರು
ಎಂಥಾ ದಯಾ ನಿಧಿಯೇ | ಸಂತತ ಭಕ್ತಿ ವಿಶ್ರಾಂತಿಯ ದೋರಿದ ಪ ಜ್ಞಾನಾಂಜ ನುಡಿದಾ | ಕಾಣಿಸಿ ಇದರ್ಹಿಡಿದಾ 1 ಮೂಲ ಮಂತ್ರದಳುದಿಂದಾ | ಹೇಳಲಿನ್ನೇನದ ಸ್ವಾನುಭವದ ಘೋಷಾ | ಫೇಳಗುಡಿಸಿ ನೋಡಿದಾ2 ಮುಂದತಿಯೊಳು ನೀಡಿದಾ | ಇಂದು ಧನ್ಯನ ಮಾಡಿದಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂದು ಕಾಂಬೆನೊ ರಾಘವೇಂದ್ರ ಗುರುಗಳನಾ | ಕಾಯ ಆನಂದ ನಿಧಿಯ ಪ ತಾಯಿಯಂದದಿ ನಮ್ಮ ಕಾಯುವ ಧಣಿಯಾ ನ್ಯಾಯ ಸದ್ಗುಣ ಪೂರ್ಣ ಮಾಯಿ ಜಗ ಹರಿಯಾ 1 ಮಾಯಾ ರಮಣನ ನಾಮ ಗಾಯನ ಪರನ ದಾಯಾದಿ ಕುಲವೈರಿ ಶ್ರೇಯ ಬಲಯುತನಾ2 ನರರೂಪ ಧರಿಸಿ ವಾನರÀ ಭಕ್ತವರನಾ ನರಶೌರಿ ಪ್ರೀಯ ದೀನರ ಕಾಯುತಿಹರಾ 3 ಜನರನ ಪೊರೆವನೆಂದೆನುತ ಭೂಮಿಯಲಿ ಜನಿಸಿದ ತನ್ನವನ್ನ ವನುತಿ ಸಹಿತದಲಿ 4 ದುರಿತ ವರೆಕೆ ತಾಮುರುತನಾಗಿಪ್ಪ ಗುರುವೆಂಬ ಸಿರಿಗೆ ಇವ ನಿರಂತರದಿ ಸುರಪಾ 5 ಭಕ್ತರ ಬಯಕೆ ಪೂರೈಪಾ ಸುರತರುವೇ ಶಕ್ತ ವಿರಕ್ತ ಹರಿಭಕ್ತ ಮದ್ಗುರುವೆ 6 ಭುವನದಿಂ ದಾಟಿಸೆ ನೌಕವಾಗಿಹಿನಾ ನವ ಭಕುತಿಯನೀವ ಕುವಿಕುಲ ವರನಾ 7 ಇವನೇ ಗತಿಯೆನೆ ಜ್ಞಾನ ತವಕದಿ ಕೊಡುವಾ 8 ನಿಂದಿಪ ಜನರಲ್ಲಿ ಪೊಂದಿಪ ಪ್ರೇಮ ವಂದಿಪ ಜನರಿಗೆ ಸತತ ಶ್ರೀ ರಾಮ 9 ಶ್ರೀನಿವಾಸ ಪುತ್ರ ಪರಮ ಪವಿತ್ರಾ ಜ್ಞಾನಿ ಜನರ ಮಿತ್ರ ವಿಹಿತ ಚರಿತ್ರಾ 10 ನಷ್ಟ ತುಷ್ಟಿಗೆ ಅಂಜಾ ದುಷ್ಟ ಶೇರಾ ಕಷ್ಟ ಕಳೆಯುವ ನಮ್ಮ ಕೃಷ್ಣ ಪಾರಿಜಾತ 11 ಪೊಳಲುರಿ ಸಖನಾ ಘನಪೊಳಿಯುವ ಪಾದಯುಗವಾ ಘಳಿಗಿ ಬಿಡದಲೆ ನೋಡುತ ನಲಿಯುತಿರುವಾ 12 ಅರಿದು ಈತನೇಯನ್ನ ಗುರುವೆಂಬಗೆ ರುದ್ರಾ ಧುರದೊಳು ಭೀಮ ಗುರುವಿಗತಾ ದಾರಿದ್ರ್ಯಾ 13 ಅನಿಮಿತ್ತ ಬಂಧು ಬ್ರಾಹ್ಮಣ ವಂಶಜಾ ಭವ ತ್ರಾತಾ 14 ತಪ್ಪು ನೋಡದಲೆ ಕಾಯುತಿಪ್ಪ ನಮ್ಮಪ್ಪ ಸರ್ಪ ತಲ್ಪನ ಧ್ಯಾನದಿಪ್ಪ ನಿಪ್ಪ 15 ಅರುಣಾಭಿ ಚರಣ ತಲೆಬೆರಳು ಪಂಕ್ತಿಗಳಾ ಸರಸಿಜ ಪೋಲ್ವ ಮೃದುತರ ಪಾದಯುಗಳಾ 16 ವಲಿದ ಭಕ್ತರಿಗಿಷ್ಟ ಸಲಿಸುವ ಪಾದ17 ಸಕಲ ರೋಗವ ಕಳೆವ ಅಕಳಂಕ ಪಾದ ಪಾದ 18 ಹರಿಯಂತೆ ಹರನೊಲ್ ಸಾಸಿರ ನಯನನಂತೆ ಶಿರಿಯಂತೆ ತೋರ್ಪ ಭಾಸ್ಕರ ನರನಂತೆ 19 ಸುಳಿರೋಮಗಳುಳ್ಳ ಚಲುವ ಜಾನುಗಳಾ ಎಳೆಬಾಳೆ ತೆರ ಊರು ಹೊಳೆವ ಸುಚೈಲ 20 ತಟಿತ ಸನ್ನಿಭವಾದ ಕಟಿಗಿಪ್ಪ ಸೂತ್ರ ನಟ ಶೇವಸಿವಲಿ ತಾನು ಪುಟಿಯು ಉದರಾ 21 ಎದೆಯಲಿಪ್ಪುದÀು ನಮ್ಮ ಪರಮೇಶನ ಮನೆಯೊ ವದಗಿ ಭಕ್ತರಿಗೆ ಕರುಣದಿ ಕಾಯ್ವ ಖಣಿಯೂ 22 ಹುತವಾಹನನಂತೆ ಭಾರತೀಕಾಂತನಂತೆ ಚತುರಾಶ್ಯ ಈ ಕ್ಷಿತಿಯಂತೆ ಇಹನಂತೆ23 ಹಸುವಿನಂದದಲಿ ಪಾಗಸನೊಳಿಹನ ವಸುಧಿಯೊಳಿಂತಿದೊಮ್ಮೆ ಪಸುಯನಿಸಿದನಾ 24 ಭೂಧರತನಂತೆ ವಸುಧರನಂತೆ ಭೂಧರನಂತೆ ಸೋದರನಂತೆ 25 ಚರ್ಚಿತ ಸುಂದರ ರೂಪ ಕಂಬು ಲೋಕ ಕಂಧರಾಯುತನ 26 ಕರೆದು ಭಕ್ತರಿಗಿಷ್ಟಗರಿಯುವ ಚೆಲ್ವಾ ವರ ರೇಖೆಯುತ ಶಿರಕರದಾ ವೈಭವನಾ 27 ಮಂಗಳದಾಯಕ ಅಂಗೈಯಿಯುಗಳಾ ಭಂಗಾರ ದುಂಗಾರ ಇಟ್ಟಿಪ ಬೆರಳು 28 ಕೆಂದುಟಿ ಮೊದನಾಗಿ ಇಂದಿಪ್ಪ ವದನಾ ಪೊಂದಿದ ದಂತಗಳಿಂದ ಸ್ವಾರಚನಾ29 ಹಸನಾದ ದೊಕರದಂತೆಸೆವ ಗಲ್ಲಗಳಾ ಬಿಸಜದಂತೆ ರಾಜಿಸುವ ನೇತ್ರಗಳಾ 30 ನಾಸಿಕದಲಿಪ್ಪ ಮೀಸಿ ದ್ವಂದ್ವಗಳಾ ದೇಶಾದಿ ಪಾಲ್ಮೂರು ವಾಸಿ ಕರ್ಣಗಳಾ 31 ಗಿಳಿಗೆ ವಾಚ್ಯಾಪದೊಳ ಹೊಳೆವಾ ಪುಚ್ಛಗಳಾ ತಿಲಕಾ ಮುದ್ರೆ ಪುಂಡ್ರಗಳುವುಳ್ಳ ಫಾಲಾ 32 ಹರಿಪಾದ ಜಲವನ್ನು ಧರಿಸಿದ ಶಿರವಾ ಶಿರಿಗೋವಿಂದ ವಿಠಲನ್ನಡಿಗೆಯರಗುವಾ ಶಿರವಾ33
--------------
ಅಸ್ಕಿಹಾಳ ಗೋವಿಂದ
ಎದೆ ಒಡೆದು ಏಕೆ ನೀ ಹೆದರುತಿ ಮನವೆ ಪಾದ ಭಜನೆ ಹೃದಯದಲಿರೆ ಪ ಅಖಿಲ ಜನಗಳ ಪೊರೆವ ಹರಿಯು ಕರ್ತನಾಗಿರಲು ಸಕಲ ಜಗಬೋಧಗುರು ಸನ್ನಿಧಿ ಇರಲೂ ಸಕಲ ಬ್ರಹ್ಮಾದಿ ದೇವತೆ ಬಂಧು ಬಳಗಿರಲು ನಿಖಿರವಿಲ್ಲದೆ ಚಿತ್ತ ನೀನು ಈ ಪರಿಯಿಂದಾ 1 ಮುದದಿಂದ ಶ್ರೀ ಲಕ್ಷ್ಮೀ ಮಹಾತಾಯಿ ತಾ ----- -----ದಮಲ ಜ್ಞಾನಿಗಳ ಸಂಬಂಧ ವಿರಲೂ ಕುದುರೆಯಂದದಿ ಮನಸು ಕ್ರೂರರಾರ್ವರಕೂಡಿ ಒದರಿ ಪರಿಪರಿಯಲ್ಲಿ ಚಿಂತೆಯೊಳಗಾಗಿ 2 ಪರಮಾತ್ಮ ಪರಬ್ರಹ್ಮ ಪರಲೋಕ ಬಾಂಧವನು ಪರಿಪರಿಯ ಷೋಷಿಸುವ ಭಾರಕನು ಇರಲು ಅರಿತು ನೀ ಚನ್ನಾಗಿ ಹರಿ ಹೊನ್ನ ವಿಠ್ಠಲನ ಸ್ಮರಣೆಯಲಿ ನಿರುತ ಇರೆ ಸಕಲ ಸಂಭ್ರಮವು 3
--------------
ಹೆನ್ನೆರಂಗದಾಸರು
ಎಂದೆಂದೆನ್ನ ಮನದಿಂದ ಅಗಲದಿರೋನಂದ ನಂದನನೆ ಆನಂದ ಮೂರುತಿಯೆ ಪ ಬಹುಕಾಲ ನಿನ್ನ ಶ್ರವಣವೆಂಬ ಹೊನ್ನೋಲೆಯಬಹುಮಾನದಿಂದೆನ್ನ ಕಿವಿಯೊಳಿಟ್ಟುಮಹಿತ ಮಂಗಳಸೂತ್ರವೆಂಬೊ ದಾಸ್ಯವನ್ನು ಮಹದಾನಂದದಿ ಎನ್ನ ಕೊರಳೊಳ್ ಕಟ್ಟಿದೆಯಾಗಿ1 ಸುಲಲಿತ ಸೈರಣೆಯೆಂಬ ಭೂಷಣವಿತ್ತುಸಲಹಿದೆ ಬಹು ಪ್ರೀತಿ ಸಖಿಯೆಂದೆನ್ನಬೆಲೆಯಿಲ್ಲದ ಸುಜ್ಞಾನ ನಿಧಿಯನಿತ್ತುಜಲಜಾಕ್ಷ ಎನ್ನನು ಒಲಿದು ಆಳಿದೆಯಾಗಿ 2 ಎಲ್ಲಿ ನೀ ನಿಲಿಸಿದರೆನಗೇನು ಭಯವಿಲ್ಲಬಲ್ಲೆನೊ ವಿಶ್ವವ್ಯಾಪಕನೆಂಬುದಸಲ್ಲದೊ ಈ ಮುನಿಸೆನ್ನೊಳು ಸಿರಿಕೃಷ್ಣಒಲ್ಲದಿದ್ದರೆ ನಿನ್ನ ಸೆರಗಪಿಡಿದೆಳೆವೆ 3
--------------
ವ್ಯಾಸರಾಯರು
ಎನಗೆ ನೀನೇ ಬಂಧು ಎಲೆಲೆ ಕರುಣಾಸಿಂಧುಎನ್ನ ಮನವೇ ನಿನ್ನ ಮನೆಯೆಂದು ನೆನೆದು ಬಾರೊ ತಂದೆ ಪ. ಮಕ್ಕಳ ಕೊಡುವೆ ಕಂಡ ಸುಜನರ್ಗೆ ಮಗ ನಾನುಅಕ್ಕರಿಂದ ಬೇಡುವವರ ರಕ್ಷಿಸಿಕೊಂಡು ತಂದೆಅಕ್ಷಿಹೀನರಿಗೆ ಪೊಸಚಕ್ಷುವನೀವೆ ಎನಗಿರ್ದಅಕ್ಷಿದೋಷವ ಕಳೆದು ರಕ್ಷಿಸಿಕೊಡು ತಂದೆ 1 ಪೋದ ಗಂಟ ತರಿಸಿಕೊಡುವುದು ನಿನ್ನ ಬಿರುದು ನಿನ್ನಬೋಧನೆಂಬ ಧನದ ಗಂಟು ನಾನು ನನ್ನ ರಕ್ಷಿಸಿಕೊಈ ಧರೆಯ ಕುಂಟರ ಬಲುಬಂಟರ ಮಾಡಿ ನಡೆಸಿದೆಮೋದನಿಧಿ ನಿನ್ನ ಭಕ್ತನ ಕುಂಟುತನವ ಬಿಡಿಸೊ 2 ಸಿರಿಹಯವದನ ತಿಮ್ಮ ನೀ ನಿಧರ್Àನರ್ಗೆ ಧನವಿತ್ತುಕರುಣಿ ಎನ್ನ ಧೈರ್ಯಧÀನವನು ಕೊಡೆಯದೇಕೆಧರೆಯೊಳೆನ್ನಾಜ್ಞೆಯನು ನಿಲಿಸಿಕೊಳಬೇಕಾದರೆಧುರದಿ ಅನನ್ಯಾಶ್ಚಿಂತಯೆಂತೋ ಎಂದ ಮಾತ ಸಲಿಸೋ 3
--------------
ವಾದಿರಾಜ
ಎಲ್ಲಮ್ಮ ದಯಮಾಡಮ್ಮ ಕಾಡಬೇಡ ಎನ್ನಮ್ಮ ಪ ಇಲ್ಲದೆ ಪೋದರೆ ನಿಲ್ಲದೆ ಏನನು ಬಲ್ಲಿದನ ಕರೆತಂದು ಕೊಲ್ಲಿಸಿಬಿಡುವೆನೆ ಅ.ಪ ಕೊಡಲಿ ಹೊತ್ತು ಬರುತಾನ ತಾಯಿ ಗಡನೆ ಹೊರಳಿ ನೋಡಿನ್ನ ಬಡವರ ದಯಾನಿಧಿ ಕಡುಬಾಧೆ ಕಂಡರೆ ತಡೆಯದೆ ನಿನ್ನನು ಕಡಿಯದೆ ಬಿಡನವ್ವ 1 ತಂದೆವಚನ ಪರಿಪಾಲನು ಅವ ಬಂದರೆ ನಿನ್ನನು ಕೊಂದಾನು ಕಂದನ ಬಂಧನ ಚಂದದಿ ಕಳೆದಾ ನಂದವ ಕೊಡು ಕೊಡು ಸುಂದರಮುಖಿಯೆ 2 ಕಾರ್ತವೀರ್ಯ ತಂದಾನೇ ಈ ವಾರ್ತೆ ಕೇಳಲು ನಿನ್ನ ಬಿಟ್ಟಾನೇ ಅರ್ತುಭಜಿಪೆ ನಿನ್ನ ಗುರ್ತಿಟ್ಟೀಬಾಧೆ ತುರ್ತು ಕಳೆಯೆ ತಾಯಿ ಅರ್ತು ಶ್ರೀರಾಮನ 3
--------------
ರಾಮದಾಸರು
ಎಲ್ಲಿ ಮತಿಯು ಎಲ್ಲಿ ಗತಿಯು ಎಲ್ಲವೀಗ ಹುಸಿಯು ಕಂಡ್ಯಎಲ್ಲವಿಹುದು ಬಹುದು ಬಹಳ ಸಂಸ್ಕಾರಿಯೊಬ್ಬಗೆ ಪ ಭಕ್ತಿಯನ್ನು ಮಾಡುವರು ಹಲವು ಮಂದಿ ನೋಡಲಿಕೆಭಕ್ತಿಯಿಹುದು ತಾನೀಗ ಅದರೊಳೊಬ್ಬಗೆಮುಕ್ತಿಮಾತ ಕೇಳುವರು ಮುಗಿದ ಕೈಗಳಿಂದಮುಕ್ತಿ ಮೇಲೆ ಚಿತ್ತವಿಹುದು ಅದರೊಳೊಬ್ಬಗೆ1 ಕಣ್ಣುಗಳ ಮುಚ್ಚಿಕೊಂಡು ನೋಡವರು ಆತ್ಮನಕಣ್ಣು ಕುಳಿತು ಕಾಣಬಹುದದರೊಳೊಬ್ಬಗೆಹುಣ್ಣಿಮೆಯ ಬೆಳಕಿನಂತೆ ಹರಹಿಯಿಹುದು ಎಂಬರುತಣ್ಣನೆಯ ಕಳೆಯು ತೋರುವುದದರೊಳೊಬ್ಬಗೆ2 ಜ್ಞಾನಗಳ ಹೇಳುವರು ಜ್ಞಾನಿಗಳೊ ಎಂಬಂತೆಜ್ಞಾನ ನಿಶ್ಚಯಹುದು ತಾನು ಅದರೊಳೊಬ್ಬಗೆಮಾನನಿಧಿ ಚಿದಾನಂದ ತಾನೀಗ ಎನುತಲಿಹರುತಾನೆ ತಾನಾದ ನಿಜವು ಅದರೊಳೊಬ್ಬಗೆ 3
--------------
ಚಿದಾನಂದ ಅವಧೂತರು
ಎಲ್ಲಿರುವನೋ ರಂಗ ಎಂಬ ಸಂಶಯ ಬೇಡ ಪ ಎಲ್ಲಿ ಭಕ್ತರು ಕರೆಯೆ ಅಲ್ಲಿ ಬಂದೊದಗುವನುಅ ತರಳ ಪ್ರಹ್ಲಾದ ಹರಿ ವಿಶ್ವಮಯನೆಂದುಬರೆದೋದಲವನ ಪಿತ ಕೋಪದಿಂದಸ್ಥಿರವಾದಡೀ ಕಂಬದಲಿ ತೋರು ತೋರೆನಲುಭರದಿಂದ ಬರಲದಕೆ ವೈಕುಂಠ ನೆರೆಮನೆಯೇ1 ಪಾಪ ಕರ್ಮವ ಮಾಡಿದಜಮಿಳನ ಯಮಭಟರುಕೋಪದಿಂದೆಳೆಯುತಿರೆ ಭೀತಿಯಿಂದತಾ ಪುತ್ರನನು ಕರೆಯೆ ಕೇಳಿ ರಕ್ಷಿಸೆ ಶ್ವೇತದ್ವೀಪವೀ ಧರೆಗೆ ಸನಿಹದಲ್ಲಿಹುದೆ 2 ನೆಗಳು ನುಂಗುತಿರೆ ಭಯದಿಂದಮೊರೆಯಿಡಲು ಕೇಳಿ ತ್ವರಿತದಲಿ ಬಂದುಕರುಣದಲಿ ಬಂಧನವ ಪರಿಹರಿಸೆ ಗಜರಾಜನಿರುವ ಸರಸಿಯು ಅನಂತಾಸನಕೆ ಮುಮ್ಮನೆಯೆ 3 ಕುರುಪತಿಯು ದ್ರೌಪದಿಯ ಸೀರೆಯನು ಸೆಳೆಯುತಿರೆತರುಣಿ ಹಾ ಕೃಷ್ಣ ಎಂದೊದರೆ ಕೇಳ್ದುಭರದಿಂದ ಅಕ್ಷಯಾಂಬರವೀಯೆ ಹಸ್ತಿನಾಪುರಿಗೆ ದ್ವಾರಾವತಿಯು ಕೂಗಳತೆಯೆ 4 ಅಣು ಮಹತ್ತಿನೊಳೆಲ್ಲ ಪರಿಪೂರ್ಣ ವಿಶ್ವಮಯಗಣನೆಯಿಲ್ಲದ ಮಹಾಮಹಿಮನೆನಿಪಘನ ಕೃಪಾನಿಧಿ ಕಾಗಿನೆಲೆಯಾದಿಕೇಶವನುನೆನೆದವರ ಮನದೊಳಿಹನೆಂಬ ಬಿರುದುಂಟಾಗಿ5
--------------
ಕನಕದಾಸ
ಏಕಿಷ್ಟು ಕರುಣವೊ ಶ್ರೀಕೃಷ್ಣದೇವ ಪ ನಾಲ್ಕ್ಹತ್ತು ಲೋಕದಲಿ ಸುಖ ಸೂರೆ ಮಾಳ್ಪೊ ಹರಿ ಅ.ಪ ಮುಕ್ತಗಣ ನೋಡಯ್ಯ ನಿತ್ಯಮುಕ್ತಳ ನೋಡು ಶಕ್ತವಿಧಿ ವಾಣೀಶ ಭಕ್ತಿ ದೇವ ಫಣಿ ರುದ್ರ ಇವರ ಸತಿಯರ ನೋಡು ಉತ್ತಮೋತ್ತಮ ಸುಖವ ಸೂರೆಗೊಂಬರೊ ಹರಿಯೆ 1 ನಿನ್ನಾರು ಮಹಿಷಿಯರ ಸುರಪ ಸುರಗಣ ನೋಡು ಪುಣ್ಯತಮ ಸುರಮನಿಯ ಭೃಗುವ ನೋಡು ಚಿಣ್ಣ ಪ್ರಹ್ಲಾದನನ್ನ ಬಲಿ ಧ್ರುವ ಭೀಷ್ಮನ್ನ ಇನ್ನು ದ್ರೌಪದಿ ಶುಕನ ಆನಂದ ನೋಡಂiÀi್ಯ 2 ಅಂಬರೀಷನ ನೋಡು ರಾವಣಾನುಜ ಜನಕ ಪರೀಕ್ಷಿತ ವೃತ್ತ ಶಬರಿ ತುಂಬಿದ ಸದ್ಭಕ್ತ ಋಷಿಪತ್ನಿಯರ ನೋಡು ಕಂಬನಿಯ ಸುರಿಸುವೆನೊ ಕರುಣಿಸೊ ಹೃದ್ಗøಹದಿ 3 ನೀಯೆನ್ನ ಸತ್ವ ನೀಯೆನ್ನ ಜ್ಞಾನ ನೀಯೆನ್ನ ಮನ ಬುದ್ಧಿ ಕರುಣ ನಿಧಿಯೆ ನೀಯೆನ್ನ ಪ್ರಾಣರತಿ ನೀಯೆನ್ನ ಸತ್ಕರಣ ನೀಯೆನ್ನ ಧೃತಿ ಶಾಂತಿ ನೀಯೆನ್ನ ಸರ್ವನಿಧಿ 4 ನೀ ಮಾಡೆ ನಾ ಮಾಳ್ಪೆ ನೀನಾಡಿಸಿದರಾಡ್ವೆ ಕಾಮದನೆ ಕಾಮಪಿತ ಜಯೇಶವಿಠಲ ಶ್ರೀ ರಮಣ ಸರ್ವೇಶ ಈ ಮನಸು ನಿನ್ನಲ್ಲಿ ಪ್ರೇಮದಿ ನೆಲಸಿ ಇರುವಂತೆ ಕೃಪೆಮಾಡು 5
--------------
ಜಯೇಶವಿಠಲ
ಏನನಿತ್ತಪೆ ನಿನಗೆ ಶ್ರೀನಿವಾಸ ಶ್ರೀನಿಧಿಯು ನೀನಾಗಿರಲು ಸರ್ವೇಶ ಪ. ಅನುದಿನದಿ ನಿನ್ನ ಪದ ಅನುವಿನಲಿ ಸ್ತುತಿಪೆನೆನೆ ಅನುದಿನದಿ ನಿನ್ನಾದಿಶೇಷ ಸ್ತುತಿಪ ಘನಮಹಿಮ ನಿನ್ನನರ್ಚಿಪೆನೆಂದೊಡೆ ಆ ಘನ ಮಹಾ ಶ್ರೀದೇವಿ ನಿನ್ನರ್ಚಿಸಿ ಮೆಚ್ಚಿಸಿಹಳರಿಯೆ 1 ಭಕ್ತಿರಸವನು ಭಕ್ತ ಪ್ರಹ್ಲಾದ ನಿನಗಿಂತಧಿಕ ಭಕ್ತಿಯನು ಮಾಡಲರಿಯನೋ ದೇವ ದೇವ ಯುಕ್ತಿಯಲಿ ನಿನ್ನ ಸ್ತುತಿ ಮಾಳ್ಪೆನೆಂದರೆ ನಿನ್ನ ಭಕ್ತ ನಾರದ ಮಾಳ್ಪ ಸ್ತುತಿಗಧಿಕವೇ ಕೃಷ್ಣ 2 ನಿನ್ನ ಪದ ಸೇವಿಪೆನೆನೆ ನಿನ್ನ ಭಕ್ತ ಹನುಮ ಇನ್ನು ನಿನ್ನಡಿ ಬಿಡನೊ ನಿನ್ನರಿವತನಕ ಪನ್ನಗಾದ್ರಿನಿವಾಸ ಸಂಪನÀ್ನ ಶ್ರೀ ಶ್ರೀನಿವಾಸ ನಿನ್ನ ಕೃಪೆಯನೆ ತೋರೋ ಶ್ರೀ ರಮೇಶ 3
--------------
ಸರಸ್ವತಿ ಬಾಯಿ
ಏನಾದರೇನಲ್ಲಿ ಇರಕೂಡದು ಹೋಗಿ ಆನಂದ ಕಾನನದೊಳಿರೆ ಸುಖವದು ಪ ನರಮನುಜರೊಳಗಿಲ್ಲಿ ಜನಿಸಿಭೂತಳಕೆಲ್ಲ ದೊರೆಯೆನಿಸಿ ಭೋಗ ಪಡಿಸುವುದರಿಂದಲು ಮಣಿ ಕರ್ಣಿಕೆಯ ಸರಸಿಯೊಳು ಚರಿಸಿ ಮಡಿದರೆ ಮುಕ್ತಿಯಹುದು 1 ಕೊಕ್ಕದಲಿ ವನಿತೆ ಮನೆಮಕ್ಕಳಲಿ ಪಶುಗಳಲಿ ಹೆಕ್ಕಳದೊಳಿಲ್ಲಿ ಸಾವುದರಿಂದಲು ಹೊಕ್ಕು ಮನೆ ಮನೆ ಬಿಡದೆ ಕಾಶಿಯಲಿ ತಿರಿದುಂಡು ಡೊಕ್ಕೆಯನು ಬಿಡೆ ಮೋಕ್ಷ ಪದವಿಯಹುದು 2 ಹರಿ ಸುತನ ಕೋಣೆ ಲಕ್ಷ್ಮೀಪತಿಯ ಪಾದ ಸರಸಿರುಹದಲಿ ಜನಿಸಿರ್ದ ಜಾಹ್ನವಿಯಲಿ ನರ ಮುಳುಗಿ ಕಾಶಿ ವಿಶ್ವೇಶ್ವರನ ಸನ್ನಿಧಿಯೊಳೊರಗಿದರೆ ಮರಳೆ ಜನ್ಮಕೆ ಬಾರೆನೋ 3
--------------
ಕವಿ ಪರಮದೇವದಾಸರು
ಏನು ಕರುಣವೊ ಸ್ವಾಮಿ | ಧೇನುಕ್ಹನನಾ ಪ ಮಾನ ನಿಧಿ ತೈಜಸನೆ | ಕಾಣಿಸಿದೆ ಪುಷ್ಕರವಾಅ.ಪ. ಮಾಧವ | ತ್ರಿವೇಣಿಯನೆ ಮೀಯುತ್ತಅಜ ಜನಕ ಶ್ರೀವ್ಯಾಸ | ಕಾಶಿ ನೋಡಿದೆವೋ 1 ವ್ರಜ ಸಾರಿ | ದೆಹಲಿ ಪುರವನು ಸೇರಿಭಯ ರಹಿತ ಕುರುಕ್ಷೇತ್ರ | ಸೇರಿ ಚಿಂತಿಸದೇ 2 ರೊಕ್ಕ ರೂಪನು ಹರಿಯ | ಅಕ್ಕರವ ಕಾಣದಲೆಪುಷ್ಕರ್ವೊರ್ಜಿತ ಮನದಿ | ಚಕ್ರಿಧ್ಯಾನದಿ ಮಲಗಿರೇ |ಚೊಕ್ಕ ತೈಜಸನನ್ನ | ಚಿಕ್ಕ ಲಿಂಗವು ಸ್ತಂಭಪುಷ್ಕರದಿ ಪೂಜಿಸುತ | ಸ್ನಾನ ಸೂಚಿಸಿದೇ 3 ಕಾಳಗ ಗೈದು | ವೀರ ಸ್ವರ್ಗವ ಸೇರ್ದೆಸ್ಮಾರಕಗಳಂ ತೋರ್ದೆ | ಶ್ರೀರಮಾಪತಿಯೇ 4 ಸೂರ್ಯ ಕುಂಡದಿ ಪಿತರ | ಕಾರ್ಯಗಳ ನಿರ್ವಹಿಸಿಆರ್ಯರುಕ್ತಿಯಗೊಂಡು | ಕಾರ್ಯ ಮುಂಬರಿಸೇ |ಪ್ರೇರ್ಯ ಪ್ರೇರಕ ಗುರು | ಗೋವಿಂದ ವಿಠ್ಠಲನ ವೀರ್ಯಗಳ ಸ್ತುತಿಸಿ ಮನ | ಸ್ಥೈರ್ಯ ಸಾಧಿಸಿದೇ 5
--------------
ಗುರುಗೋವಿಂದವಿಠಲರು
ಏನು ಕರುಣೆಗೈದೆ ನಳಿನಾಕ್ಷ ಪ ಈ ನಿನ್ನ ಭಕ್ತನೊಳೇನು ಮಮತೆಯೋ ನಿನಗೆ ಅ.ಪ. ಹಿಂದೆ ಬಲಿಯು ತಾ ಯಜ್ಞವ ಮಾಡಲು ಇಂದ್ರ ಪದವು ಪ್ರಾಪ್ತಿ ನಿನ್ನಿಂದಲ್ಲದೆ ಇಂದು ಆ ಪದವಿಯನತಿಯುಕ್ತಿಯಿಂದಲಿ ಸಂದೇಹವಿಲ್ಲದೆ ಸೂರೆಗೈದವ ನೀನೆ 1 ಪರಮ ವಿದ್ವಾಂಸರನು ಧೈರ್ಯಶೀಲರನು ನೆರೆಮೋಹಗೊಳಿಸುವುದೈಹಿಕ ಭಾಗ್ಯವು ಪರಮ ಕಾರುಣ್ಯದಿಂದೊಲಿದು ನೀನಿವನನು ಸಿರಿಮೋಹದಿಂದಲಿ ಪಾರುಮಾಡಿದೆ ದೇವ 2 ನೀನಿಂದು ಗೈದುದು ಪರಮೋಪಕಾರವು ನಾನದರೊಳು ಲೇಶದೋಷವೆಣಿಸನಯ್ಯಾ ಶ್ರೀನಿಧಿ ಕರಿಗಿರೀಶನೆ ನಿನ್ನ ಚರಣಕ್ಕೆ ಆನಮಿಸುವೆನಿಂದು ದೀನವತ್ಸಲ ಸ್ವಾಮಿ 3
--------------
ವರಾವಾಣಿರಾಮರಾಯದಾಸರು
ಏನು ಧನ್ಯನೋ ನಾನೇನು ಮಾನ್ಯನೋ ಪ ದೀನಪಾಲಗಿರಿಯಪರಮಕರುಣಾನಿಧಿಯಕನಸೊಳ ಕಂಡೆನು ಅ.ಪ ಬಾಲನಾಗಿ ಮುದ್ದುಮುಖದೆ ಶ್ರೀಲತಾಂಗಿಯೊಡನೆಬಂದು ಲೋಲತೆಯಿಂ ಮುಗಳುನಗೆಯ ಲೀಲೆಯನ್ನು ತೋರಿಸಿದನ 1 ನಿನ್ನ ತಂದೆ ತಾಯ್ಗಳಾರು ಎನ್ನಲಾಗ ನೀನುಪಿತನು ಎನ್ನ ತಾಯಿಜಗನ್ಮಾತೆ ಸನ್ನುತಕೇಳ್ ಪ್ರವರವೆಂದೆ2 ದುರಿತದೂರ ಶ್ರೀನಿವಾಸ ಶರಣಜನರ ಪೊರೆವ ತ್ರಾಣ ಕರವ ಮುಗಿದು ಧ್ಯಾನಿಸಿದೆನು 3
--------------
ಶಾಮಶರ್ಮರು