ಒಟ್ಟು 323 ಕಡೆಗಳಲ್ಲಿ , 64 ದಾಸರು , 298 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿತ್ಯ ನಿಜಾನಂದನಿರ್ಲೇಪ ನಿಗಮಾಂತವೇದ್ಯ ನರಸಿಂಹ 1ವಿಶ್ವನಿರ್ಮಾಣಾದಿ ವಿವಿಧ ಶಕ್ತ್ಯಾತ್ಮಕವಿಧಿಹರ ರೂಪ ಶ್ರೀ ವೀರನರಸಿಂಹ 2ಪರಿಭ್ರಾಜಮಾನಾರ್ಕ ಪಾವಕ ಶಶಿಯುಕ್ತಪದ್ಮ ಮಹಾಯೋಗಪೀಠ ನರಸಿಂಹ 3ಸಮ ಕಾಲೋದಿತ ಸೂರ್ಯಶಶಿಕೋಟಿಸಂಕಾಶಸರಸಿಜಜಾತಾಯುತೋತ್ಸಂಗ ಸಿಂಹ 4ಬ್ರಹ್ಮಾಮರೇಂದ್ರಾದಿ ಬೃಂದ ಕಿರೀಟಾಗ್ರಮಣಿ ನೀರಾಜಿತ ಪಾದಪದ್ಮ ನರಸಿಂಹ 5ಧೃತ ಶಂಖ ಚಕ್ರಾಬ್ಜ ದಿವ್ಯ ಚತುರ್ಭುಜಧರಣೀಧರಾಚ್ಯುತ ದೇವ ನರಸಿಂಹ 6ಪ್ರಹ್ಲಾದಖೇದಾಪಹಾರಕ ಪರಿಪೂರ್ಣಆಹ್ಲಾದ ಸುಕೃತಾಟ್ಟಹಾಸ ನರಸಿಂಹ 7ಆಂತ್ರಮಾಲಿಕಾಕಂಠ ಅಮಿತ ನಖಾಯುಧಅಂಕಾರೋಪತ ದೈತ್ಯಕಾಯ ನರಸಿಂಹ 8ಮಕುಟಮಂಡಿತ ಶುಭ ಮಕರಕುಂಡಲ ಧರಪ್ರಕಟಿತಕರುಣಾಕಟಾಕ್ಷ ನರಸಿಂಹ 9ಕೇಯೂರ ಹಾರ ಕೌಸ್ತುಭಮಣಿ ಭೂತಕಾಂಚನಚೇಲ ಕಲುಷಹರ ಸಿಂಹ 10ಸಕಲ ಲೋಕಾಧೀಶ ಸಾಧು ಸಂರಕ್ಷಕಸುರ ಸಿದ್ಧ ಮುನಿ ವಂದ್ಯ ಶ್ರೀ ನರಸಿಂಹ 11ತೂಲನಾಮಕ ಗ್ರಾಮ ನಿಕಟಾದ್ರಿ ಸ್ಥಿರವಾಸಪಾಲಿತಬಹುಭುವನೇಶ ನರಸಿಂಹ 12ದ್ವಿತೀಯ ಶ್ರೀ ತಿರುಪತಿ ಕ್ಷೇತ್ರಸಮಾನಾದ್ರಿ ವೆಂಕಟಪತಿ ಪ್ರತಿವೇಷ ನರಸಿಂಹ 13ಓಂ ಅನಾದಿ ಬ್ರಹ್ಮಚಾರಿಣೇ ನಮಃ
--------------
ತಿಮ್ಮಪ್ಪದಾಸರು
ನಿತ್ಯ ನಿಜಾಲಂಕಾರ ಶರೀರಾ | ಕ | ಳಂಕ ಮತಿದೂರಾ ಪ ವಿಭುವೆ ಇಭರಾಜಾ ವರದಾ ಸಾರಾ | ನಭರತುನ ತೇಜಾ | ಅಭಯ ಮೂರುತಿ ಸು | ಲಭ ದಾಯಕ | ವಿಬುಧವಂದಿತ ಸರ್ವಾ | ಶುಭಗುಣಶೀಲಾ 1 ಹೂವ್ವಿನಂಗಿಯ ತೊಟ್ಟು ಮೆರೆವಾ ಶ್ರೀವರ ಗಿರಿಯಾ | ಭಾವಕ್ಕೆ ಬಿಗಿದಪ್ಪಿ ತಾ ವೊಪ್ಪುತಿಹ | ಲೋಕ ಪಾವನ ಸ್ವತಂತ್ರ ಗೋವುಗಳ ಕಾಯ್ದಾ2 ವರಪರ್ವತ ವಾಸಾ ವಾಸುದೇವಾ | ಮಂಗಳವೀವ ವಿಜಯವಿಠ್ಠಲರೇಯಾ | ಗರುವ ದೇವರ ದೇವ ಜ್ಞಾನಾನಂದ ಪರಿಪೂರ್ಣ 3
--------------
ವಿಜಯದಾಸ
ನಿತ್ಯ ಪರಿಪೂರ್ಣ ಕಾಮ ಪಟ್ಟಾಭಿರಾಮ ತನ್ನ ಸ್ಮರಿಸುವ ಜನಕೀವನು ಕ್ಷೇಮ ಪ ಭಾಸ್ಕರವಂಶ ಭೂಷಣ ತರಣಿಜಮಿತ್ರ ಭವ್ಯ ಚರಿತ್ರ | ದಾಶರಥಿ ಕರುಣಾಳು ಸರೋಜನೇತ್ರ ಅ.ಪ ಜಡಮತಿಯಾದರೂ ಇವನ | ಮರೆಯಾ ಇನ್ನು ಧೃಢಮತಿಗೆ ತನ್ನನೇ ಕೊಡುವೆನೈಯ್ಯಾ 1 ತಮ್ಮೋಳು ತಾವು ತಿಳಿದು | ಭಜಿಸುವರು ಇನ್ನು ಹೆಮ್ಮೆಯ ಮಾತುಗಳು ಬಿಡಿರಿ ಜನರು 2 ರಾಮನು ನರನೆಂಬ ಪಾಮರನ ಬಾಯಲಿ ಮಣ್ಣು ಸೋಮಶೇಖರ ತನ್ನ ಸತಿಗೆ | ಪೇಳಿದ ಇವನ ನಾಮದ ಮಹಿಮೆ ಕುಣಿಕುಣಿದು 3 ನಿರುತಾ ಪೊಗಳುವವಿವನ ವೇದ | ಇವನಾ ಚರಣೆ ಸಜ್ಜನರಿಗೆ ಬಲುಸ್ವಾದ 4 ಸೇತುವೆ ಕಟ್ಟುವುದುಂಟೆ ಕೋತಿದಂಡುಗಳೆಲ್ಲಾ ವ್ರಾತ ರಹಸ್ಯವೇತಕೆ ಚಿಂತೆ 5 ಹೊರಗಿನ ಕಣ್ಣಿಂದ ಅರಿಯಲು ಸಾಧ್ಯವಲ್ಲಾ ನೆರೆ ಒಳಗಣ್ಣಲಿ ನೋಡಬೇಕು | ಸ ದ್ಗುರು ಕಟಾಕ್ಷವಾದವಗೆ ಜೋಕು 6 ಪ್ರತ್ಯಕ್ಷವಾದಿಗಳಿಗೆ ಮೃತ್ಯುವಿನ ಬಾಯೊಳು ಸತ್ತು ಹುಟ್ಟುವುದು ತಪ್ಪುವುದಿಲ್ಲಾ | ಆ ಪತ್ತು ಇದೇ ದುರ್ಜನಿರಿಗೆಲ್ಲಾ 7 ಮಗನು ಬ್ರಹ್ಮನು ಮೊಮ್ಮಗನು ರುದ್ರನು ಮೂ ಜಗವನಾಳುವ ನಾರಾಯಣನಿವನು | ತಾನು ಮಗುವಾಗಿ ದಶರಥಗುದಿಸಿದನು 8 ಮುನಿ ಯಾಗವ ಪಾಲಿಸಿ ವನಿತೆಯ ಶಾಪ ಬಿಡಿಸಿ ತನ್ನೊಳಗಿಟ್ಟು ತಾ ಹುಡುಕಿದನು 9 ನರನಾಗಿ ದೈತ್ಯರ ಮುರಿದು ದೇವತೆಗಳಿಗೆ ಗರಸನಾಗಿ ಸಾಕೇತಪುರದಿ ಪೊಳೆದ 10 ನರನು ಪಾಮರನು ಹ್ಯಾಗೆ ತಿಳಿಯುವನು | ಸಂಸೃತಿ ಶರಧಿಯೊಳು ಬಿದ್ದು ಬಳಲುವನು11
--------------
ಗುರುರಾಮವಿಠಲ
ನಿತ್ಯ ಸುಪ್ರೀತ ಸರ್ವೋತ್ತಮ ಹರಿಯೆ ಚಿತ್ತಜನಯ್ಯ ಚಿನ್ಮಯ ಎನ್ನ ದೊರೆಯೆ ಪ. ಅರಿಯೆ ನಾನಾ ವಾಹನಾದಿ ವಿಧಿಯನು ಮರಿಯೆನು ಮನದಲ್ಲಿ ಮಂದಭಾವವನು ವರದೇಶ ನಿನ್ನಯ ಚರಣಾರವಿಂದವ ನೆರೆನಂಬಿದವನೆಂಬ ಪರಿಯಿಂದ ದಯವಾಗು 1 ಇಂದಿರಾವರವಿಧಿವಂದ್ಯ ಸರ್ವೇಶಾ- ನಿತ್ಯ ಸುಂದರ ವೇಷಾ ಮಂದ ಬುದ್ಧಿಯೊಳೆಂತು ಒಲಿಸುವೆ ಶ್ರೀಶಾ ತಂದೆ ನೀ ಕರುಣದಿ ಸಲಿಸಭಿಲಾಷಾ 2 ಅಣುರೇಣು ತೃಣಕಾಷ್ಠ ಪರಿಪೂರ್ಣ ನಿನ್ನ ನೆನೆದು ವಂದಿಸುವೆ ಚಂದನ ಮೂರ್ತಿಯನ್ನ ಸನಕಾದಿ ವಂದ್ಯ ಶೇಷಾಚಲನಾಯಕ ಅನಿಮಿಷ ಪತಿಯೆನ್ನ ಮನೆಯಲ್ಲಿ ನೆಲೆಯಾಗು 3
--------------
ತುಪಾಕಿ ವೆಂಕಟರಮಣಾಚಾರ್ಯ
ನಿನಗಿನಿತು ಮಮಕಾರವಿರಲೆನಗೆ ಭಯವೇನು ಚಿನುಮಯನೆ ಧನ್ಯ ನಾನು ಪಜನಕ ನೀನೆನಗಾದೆ ತನುಜ ನಾ ನಿನಗಾದೆ ಘನಮಹಿಮ ಕಾಮಧೇನು ನೀನು ಅ.ಪಜನ್ಮಕೋಟಿಗಳಲ್ಲಿ ಪುಣ್ಯಕರ್ಮಗಳನ್ನು ಮುನ್ನ ಮಾಡಿಸಿದೆ ನೀನುಮುನ್ನಿನಾ ದೇಹಗಳು ಭಿನ್ನವಾಗಲು ಕರ್ಮವಿನ್ನುಳಿವ ಬಗೆಯದೇನುಚಿನ್ಮಯನೆ ತನುಕರಣ ಭಿನ್ನವಾದರು ಸಾಕ್ಷಿ ನಿನ್ನೊಳಿಂಬಿಟ್ಟೆಯವನುಸನ್ನುತನೆ ಬಾಲಕನಿಗುಣ್ಣ ಕಲಿಸುವ ತೆರದಿ ನಿನ್ನನಿತ್ತುದೇನೆಂಬೆನು ನಾನು 1ದುಷ್ಟಸಂಗವ ಬಿಡಿಸಿ ದುರ್ಬುದ್ದಿಯನು ಕೆಡಿಸಿ ಶಿಷ್ಟರೊಳು ತಂದು ನಿಲಿಸಿಕಷ್ಟಸಾಧನಗಳನು ಮುಟ್ಟಲೀಸದೆ ಸುಲಭ ನಿಷ್ಠೆಯಲಿ ಚಿತ್ತವಿರಿಸಿಹುಟ್ಟುಹೊಂದುಗಳನ್ನು ಕೊಟ್ಟು ಮೋಹಿಸುತಿರುವ ಪುಟ್ಟ ಫಲಗಳ ತೇಲಿಸಿಮುಟ್ಟಿ ನಿನ್ನಯ ಪದವನಿಟ್ಟು ಹೃದಯಾಂಬುಜದಲಿಷ್ಟಮೋಕ್ಷವ ತೋರಿಸಿ ನಿಲಿಸಿ 2ವಿದ್ಯವಿಸ್ತರವಾದರದ್ದುವದು ಗರ್ವದಲಿ ಬುದ್ಧಿ ನಿಲ್ಲದು ನಿನ್ನಲಿಇದ್ದು ವೃದ್ಧರ ಪಥದಿ ಹೊದ್ದಿ ಶುದ್ಧತ್ವವನು ಶ್ರದ್ಧೆ ಸೇರದು ನಿನ್ನಲಿಉದ್ದುರುಟುತನದಿಂದ ಬಿದ್ದು ವಾದದ ಮಡುಹವದ್ದು ಸುಕೃತವ ಕಾಲಲಿಇದ್ದ ನಿಜಸ್ಥಿತಿುವಗೆ ಸಿದ್ಧವಾಗದುಯೆಂದು ನಿರ್ಧರಿಸಿ ನೀನೆ ದಯದಿ ಇಲ್ಲಿ 3ಅನಿಮಿತ್ತ ಬಂಧು ನೀನೆಂಬುದನು ಫಲುಗುಣನು ಮನದೊಳೆಣಿಸಿದುದಿಲ್ಲವೆಅಣುಮಾತ್ರದುಪಕಾರ ಜನರಿಂದ ನಿನಗುಂಟೆ ಮನಕೆ ದೂರ ನೀನಲ್ಲವೆವನಜಭವ ದಿಕ್ಪಾಲ ಮನುಗಳೈಶ್ವರ್ಯಗಳು ನಿನಗೆ ಗಣನೆಗೆ ಬರುವವೆಇನಿತು ಬ್ರಹ್ಮಾಂಡಗಳ ನೆನದು ನಿರ್ಮಿಸಿ ಬಳಿಕ ಕ್ಷಣದೊಳಳಿಸುವದಿಲ್ಲವೆ ನಿಜವೆ 4ನಿನ್ನ ಭಜಿಸುವ ಭಾವವಿನ್ನುಂಟೆ ಜಡಮತಿಗೆ ಅನ್ಯವಿಷಯದಿ ಮೋಹಿಸೆತನ್ನ ಮರೆದತಿದುಃಖದುನ್ನ ತದ ಸಂಸಾರ ವೆನ್ನದೆನ್ನುತ ದುಃಖಿಸೆನಿನ್ನ ನೆನಯದೆ ಬಹಳ ಜನ್ಮವೇಗದ ನದಿಯಲುನ್ನಿಸುವ ಕರ್ಮ ಹೊದಿಸೆಭಿನ್ನ ಬುದ್ಧಿಯಲೊಂದಿ ತನ್ನ ತಾನರಿಯದಿರೆ ನಿನ್ನಿಂದ ಮುಕ್ತನೆನಿಸೆ ನಿಲಿಸೆ 5ಚಲಿಸದಂದದಿ ಮನವ ನಿಲಿಸಿ ನಿನ್ನೊಳು ಬಾಹ್ಯವಳಿವ ಬಗೆುಲ್ಲವಲ್ಲನಳಿನನಾಭನೆ ನೀನು ಸುಲಭನೇ ಯೋಗಿಗಳು ಬಳಲುವರು ಕಾಣರಲ್ಲನಿಲುವೆ ಮನದಲಿ ನೀನೆ ಸಲಹೆಂದು ಭಜಿಸಿದರೆ ಗೆಲರೆ ಸಂಸೃತಿಯನೆಲ್ಲತಿಳುಹಿ ಸುಲಭದ ದಾರಿಯೊಳಗೆನ್ನ ನೀನಿರಲು ಬಳಲುವಿಕೆುಲ್ಲವಲ್ಲಾ ಲಲ್ಲಾ 6ಬಿನುಗು ಭೋಗವನುಂಡು ಜುಣುಗಿ ಮತ್ತದರಲ್ಲಿ ಮನವೆರಗಿ ಮುಳುಗುತಿಹುದುತನುವಿನಭಿಮಾನದಲಿ ನೆನಹು ತಗ್ಗದು ಮತ್ತೆ ಕನಲಿ ಮುರಿದೇಳುತಿಹುದುಅನುವರಿಯದಂಧತಮದಲಿ ತಾನು ನೆರೆಹೊಕ್ಕು ಘನದುಃಖಬಡುತಲಿಹುದುಇನಿತವಸ್ಥೆಯಲಿರುವ ಮನಕೆ ಸಿಕ್ಕಿರಲೆನ್ನ ದಿನಕರನೆ ಕೈವಿಡಿವುದು ಸೆಳೆದು 7ಧ್ಯಾನ ಧಾರಣೆುಂದ ನಿನ್ನ ಮೂರ್ತಿಯ ನಿತ್ಯ ಮಾನಸದಿ ನಿಲಿಸಬೇಕುಧ್ಯಾನಾಂಗ ನಿಯಮಗಳನಭ್ಯಾಸವಂ ಮಾಡಿ ತಾನು ತಾನಾಗಬೇಕುಏನೊಂದ ಕಂಡರೂ ನಾಮರೂಪವ ಬಿಟ್ಟು ನೀನೆಂದು ನಿಲ್ಲಬೇಕುಏನೆಂಬೆನಿವನೆಲ್ಲ ನೀನೆ ಸಾಧಿಸಿಕೊಟ್ಟು ದೀನನನು ಸಲಹಬೇಕು ಸಾಕು 8ಪರಮ ಕರುಣಾನಿಧಿಯೆ ಪರಿಪೂರ್ಣ ಪರಮೇಶ ಪರಮಸಂವಿದ್ರೂಪನೇಶರಣಜನಸುರಧೇನು ದುರಿತಭೂಧರಕುಲಿಶ ಕರಿವರನ ರಕ್ಷಿಸಿದನೇಮರೆಯೊಕ್ಕೆ ನಿನ್ನಡಿಯ ಮರವೆಯನು ಪರಿಹರಿಸು ಅರಿವಿನೊಳು ಪೊಗಿಸು ನೀನೆತಿರುಪತಿಯ ನೆಲೆವಾಸ ವರದ ವೆಂಕಟರಮಣ ಅರವಿಂದದಳನೇತ್ರನೆ ಅಜನೆ 9ಓಂ ಜಲಕ್ರೀಡಾಸಮಾಸಕ್ತಗೋಪೀವಸ್ತ್ರಾಪಹಾರ ಕಾಯ ನಮಃ
--------------
ತಿಮ್ಮಪ್ಪದಾಸರು
ನಿನ್ನ ಪೂಜೆಯೊ-ರಾಮ ಪ ನಿನ್ನ ಪೂಜೆ ಹೊರತಿಲ್ಲಎನ್ನ ವ್ಯಾಪಾರವೆಲ್ಲ ಸ್ನಾನ ಸಂಧ್ಯಾವಂದನ ಹೋಮ ಮೌನ ಜಪ ಸದ್ಗ್ರಂಥ ವ್ಯಾ-ಖ್ಯಾನ ಯಜ್ಞಸಾಧನ ಸಂಪಾದನ ಅಧ್ಯಯನನಾನಾ ರಸ ನೈವೇದ್ಯ ಭೋಜನ ತಾಂಬೂಲಚರ್ವಣಮಾನಿನಿ ಮೊದಲಾದ ಸ್ಯಂದನ ಗಾನದ ಭೋಗಗಳೆಲ್ಲ1 ಸರ್ವೇಂದ್ರಿಯಗಳಲಿಹ ಶರ್ವಾದಿ ದೇವರ್ಕಳಿಗೆಸರ್ವಚೇಷ್ಟಾಪ್ರದನಾದ ಪ್ರಾಣಗೆ ನಿರ್ವಾಹಕನಾಗಿಸರ್ವ ಜೀವರ ಕೈಯಿಂದ ಸರ್ವಜ್ಞಾನ ಕರ್ಮಗಳನುಸರ್ವದಾ ಮಾಡಿಸಿ ಅವರ ಸರ್ವಶುಭಭೋಕ್ತನಹೆ 2 ಸುರರು ಕಂಗಳಲ್ಲಿ ಭಾಗ್ಯಲಕ್ಷ್ಮಿಉಂಗುಷ್ಠದಿ ಲೋಕಪಾವನೆ ಗಂಗಾದೇವಿಯುಹಿಂಗದೆ ನಿನ್ನಲ್ಲಿರಲು ತುಂಗಗುಣ ಪರಿಪೂರ್ಣರಂಗವಿಠಲ ನೆಲೆಯಾಗಿ ಮಂಗಳಾಂಗನೆ ಮನ್ನಿಸುವೆಯೊ3
--------------
ಶ್ರೀಪಾದರಾಜರು
ನಿನ್ನ ಪೋಲುವ ಕರುಣಿಗಳನಾರ ಕಾಣೆ ಪ್ರ ಪನ್ನ ತಾ ಪಾಪಹರನೇ ಪ ಎನ್ನಪರಾಧಗಳ ಎಣಿಸದಿರು ಅಜಭವಶ ರಣ್ಯ ಪರಿಪೂರ್ಣೇಂದಿರಾಗಾರ ಅ ಶುದ್ಧಾಖ್ಯ ದ್ವಿಜನು ದಾರಿದ್ರ್ಯದಲಿ ನೆರೆ ನೊಂದು ಸದ್ಧರ್ಮ ತೊರೆದು ಮರೆದು ಶ್ರಾದ್ಧಾದಿ ದುಷ್ಟನ್ನ ಮೆದ್ದು ನಿಂದಿತನಾಗಿ ಬಿದ್ದಿರಲು ಸತಿಯು ಮತಿಯು ತಿದ್ದಿ ಪೇಳಲು ಕೇಳಿ ಶುದ್ಧ ಭಾವದಿ ತವ ಪ ದದ್ವಯಕ್ಕೆರಗಿ ಮರುಗಿ ಪದ್ಮೇಶ ಸಲಹೆನಲು ಸಿದ್ಧಿಸಿ ಮನೋರಥವ ಉದ್ಧಾರವನು ಮಾಡ್ದೆ ನೋಡ್ದೆ 1 ವಿಧಿಯ ಸಂಸ್ತುತಿ ಕೇಳಿ ಮಧ್ವಜಾಕಾರಿ ಮದಡತಮನುದರ ಬಗೆದೇ ಉದಧಿ ಮಥನದಲುದಿಸಿದಮೃತ ದೇವತೆಗಳಿಗೆ ಮುದದಿಂದಲೆರೆದೆ ಪೊರೆದೆ ಹೇಮ ಲೋಚನನ ನೀ ದೌಂಷ್ಟ್ರ ತುದಿಯಿಂದ ಕೊಂದೆÀ ತಂದೆ ಬೆದರದಲೆ ಕರೆದರ್ಭಕನ ನುಡಿಗೆ ಅವನಯ್ಯ ನುದರ ರಕ್ತವನು ಸುರಿದೇ ಮೆರೆದೇ 2 ವೈರೋಚನಿಯ ಭೂಮಿ ದಾನವನು ಬೇಡಿ ಭಾ ಗೀರಥಿಯ ಪಡದಿ ಪದದಿ ಧಾರಿಣಿಯ ದಿವಿಜರಿಗೆ ದಾನವಿತ್ತವನಿಪರ ಗಾರು ಮಾಡಿದೆ ಸವರಿದೇ ನೀರಧಿಯ ಬಂಧಿಸಿ ದಶಾಸ್ಯನ ಬಲವನು ಸಂ ಹಾರ ಮಾಡಿದೆ ರಣದೊಳು ಕಾರಗೃಹದೊಳಗಿಪ್ಪ ಜನನಿ ಜನಕರ ಬಿಡಿಸಿ ತೋರಿಸಿದೆ ವಿಶ್ವರೂಪಾ ಶ್ರೀಪಾ 3 ಆದಿತೇಯರು ಮಾಳ್ಪ ಸಾಧುಕರ್ಮಗಳ ಶುದ್ಧೋದನಾಚರಿಸೆ ತಿಳಿದು ವೇದ ಶಾಸ್ತ್ರಾರ್ಥ ಪುಸಿಯೆಂದರುಪಿ ಜಿನನತಿ ಭೇದಗೈಸಿದೆ ಸಹಿಸಿದೇ ಭೇದಗೊಳಿಸುವ ಕಲಿಯ ಕೊಂದು ಶೀ ಘ್ರದಿ ತಮಸಿಗೈಸಿದೆ ಕಲ್ಕಿ ಭಳಿರೇ ನಿಖಿಳ ಲೋಕವನೆಲ್ಲ ಧರಿಸಿ ಪ್ರಳ ಯೋದಕದಿ ಮಲಗಿ ಮೆರೆದೇ ಪೊರೆದೇ 4 ಹಂಸರೂಪದಲಿ ಕಮಲಾಸನಗೆ ತತ್ವೋಪ ದೇಶಮಾಡಿದೆ ಕರುಣದೀ ವ್ಯಾಸಾವತಾರದಲಿ ದೇವ ಋಷಿ ಪಿತೃಗಳಭಿ ಲಾಷೆ ಪೂರೈಪ ನೆವದೀ ಭಾಷ್ಯತ್ರಯಗಳಿಂದ ಭಗವದ್ಗುಣಂಗಳ ಪ್ರ ಭಾಷ್ಯತ್ರಯಗಳಿಂದ ಭಗವದ್ಗುಣಂಗಳ ಪ್ರ ಕಾಶÀ ಮಾಡಿದೆ ಮೋದದಿ ವಾಸವಾನುಜ ಜಗನ್ನಾಥವಿಠಲ ನಿನ್ನವರ ಸಲ ಹೋ ಸಮರ್ಥಾ ಕರ್ತಾ 5
--------------
ಜಗನ್ನಾಥದಾಸರು
ನಿನ್ನ ಪ್ರೇಮದ ಭೋಗ ಇನ್ನಿಲ್ಲದ ಮನುಜ ಘನ್ನ ಭೂ ಭಾರನವ ಭವನಮಿತ್ರ ಪ ಬನ್ನಬಟ್ಟೆನೊ ಬಹಳ ಬಲುಹೀನ ವೃತ್ತಿಯಲಿ ಮಾನ್ಯರಲಿ ತಲೆಯೆತ್ತಿ ಇರುವಂತೆ ಎಂದಿಡುವಿ ಅ.ಪ. ಏನು ಕೊಟ್ಟರು ಕೊಡು ದಾನವಂತಕ ಎನ್ನ ಜ್ಞಾನದಲಿ ನೀನಿತ್ಯ ನೆಲಸಿ ನಲಿಯೊ ಧೇನುವತ್ಸದ ತೆರದಿ ನೀನೆನಗೆ ಹಿತತೋರು ನಾನೊಲ್ಲೆ ಸುರಲೋಕ ನಿನ್ನೊಲಿಮೆ ಇಲ್ಲದಿರೆ 1 ಮರುವೆಂಬ ಮಾರಿಯನು ಪರಿಹರಿಸು ಪರಿಪೂರ್ಣ ಸುರಿ ನಿನ್ನ ಕರುಣರಸ ಪ್ರಾಣನಾಥ ಸರ್ವೇಶ ನೀನೆಂದು ಪರತಂತ್ರ ನಾ ಸತತ ಶರಣನ್ನ ದಣಿಸುವದು ಘನವೇನೊ ಹರಿಯೆ 2 ಕೋಟಿಕಾಲ ನರಕವಾಸಿಯಾದರು ಎನಗೆ ನೀಟುಗತಿ ದೊರೆವುದೇ ನೀನೊಲಿಯದಿರಲು ಸಾಟಿಯಿಲ್ಲದ ದೈವ ಜಯೇಶವಿಠಲ ನಾಟಿ ಹಿರಿಯರ ಕರುಣ ನೀನಾಗಿ ಕೃಪೆಮಾಡು 3
--------------
ಜಯೇಶವಿಠಲ
ನಿನ್ನ ಬಿಟ್ಟಿರಲಾರೆ ನೀರಜಾಕ ್ಷ ಪ ಘನ್ನ ಮಹಿಮನೆ ನಿನ್ನ ಸನ್ನಿಧಾನವನೀಯೊ ಅ.ಪ. ಸರ್ವಧರ್ಮಗಳಿಗೆ ನೀನಿಲ್ಲದಿನ್ನಿಲ್ಲ ಉರ್ವಿಕರಿಗೆ ನೀನೆ ಉರ್ವೀಶನೆ ನಿರ್ವಿಕಾರ ಮಹಾತ್ಮ ನಿಖಿಲಾಂತರಾತ್ಮಕನೆ ಪಾದ ಸೇವೆಯೆನಗೀಯೊ 1 ತಡವ್ಯಾಕೆ ಬರಲಿನ್ನು ಪೊಡವೀಶ ಯನ್ನೊಡನೆ ತಡೆಯಲಾರೆನು ನಿನ್ನ ವಿರಹವನ್ನು ನುಡಿಯಬೇಡವೋ ಎನ್ನ ನೀ ಪೋಗು ಎಂದೆನುತ ಕಡು ದಯಾನಿಧಿ ನಿನ್ನ ನಾ ಬಿಡೆನೊ 2 ಆನಂದ ಪರಿಪೂರ್ಣ ಶ್ರೀನಾಥ ನಿನಗೇಕೆ ಕಾನನಾ ವಾಸವು ಕಮಲನಯನ ಜ್ಞಾನದಾಯಕ ನಿನ್ನ ಚರಣ ಶರಣನೊ ನಾನು ದೀನರಕ್ಷಕ ಸ್ವಾಮಿ ಶ್ರೀ ಕರಿಗಿರೀಶ 3
--------------
ವರಾವಾಣಿರಾಮರಾಯದಾಸರು
ನಿಮ್ಮಿಂದ ಗುರು ಪರಮ ಕಲ್ಯಾಣವು ನಿಮ್ಮಿಂದಲೆನಗೆ ಘನ ಪರಿಪೂರ್ಣವು ದ್ರುವ ಹುರಿದು ಭವಬೀಜ ಧರೆಯೊಳುದಯ ಕರುಣದಲಿ ಪರಮ ಆನಂದ ಸುಖ ಮಳೆಯಗರೆದು ಕರ್ಮ ಪಾಶಗಳೆಂಬ ಕರಿಕಿ ಬೇರವು ಕಿತ್ತಿ ಹರಗಿ ಬಿತ್ತಲು ನಾಮ ತಾರಕುಪದೇಶದಲಿ 1 ತುಂಬಿ ತುಳುಕುವ ಸಿರಿಯು ಸರ್ವಮಯವೆಂಬ ತೆನೆಗಳು ತುಂಬಿ ಏರಿ ಸುಷಮ್ನನಾಳದ ಮಂಚಿಕಿಯ ಮೆಟ್ಟಿ ಪರಿಪರಿ ಅವಸ್ಥೆ ಹಕ್ಕಿಗಳು ಹಾರಿಸಲಾಗಿ2 ಮುರಿದು ಭೇದಾಭೇದವೆಂಬ ಗೂಡಲೊಟ್ಟಿ ಅರಿವು ಕಣದಲಿ ಥರಥರದಲಿಕ್ಕಿ ಙÁ್ಞನ ವೈರಾಗ್ಯವೆಂಬೆರಡೆತ್ತುಗಳ ಹೂಡಿ ಸರ್ವಗುಣ ತೆನೆ ತೆಗೆದು ತುಳಿದು ರಾಸಿಮಾಡಿಸಲಾಗಿ 3 ಸರ್ವಮಯವೆಂಬ ರಾಶಿಯು ಒಬ್ಬುಳಿಯ ಮಾಡಿ ತೂರಿ ತರ್ಕ ಭಾಸ ಗಳೆದು ಮಿಥ್ಯಾಪ್ರಪಂಚವೆಂಬ ಕಾಳವು ಕಡೆಮಾಡಿ ಸಫಲ ಸಹಕಾರದಲಿ ಸುಗ್ಗಿ ಮಾಡಿಸಲಾಗಿ 4 ಏಕೋ ಬ್ರಹ್ಮದ ಗತಿ ನಿಧಾನ ರಾಶಿಯುದೋರಿ ಜನ್ಮ ಮರಣವು ಕೊಯಿಲಿಯ ಸುಟ್ಟು ಉರುಹಿ ಸದ್ಗತಿ ಮುಕ್ತಿ ಸುಕಾಲ ಸಾಧನವಿತ್ತು ಮೂಢ ಮಹಿಪತಿ ಪ್ರಾಣ ಸದ್ಗೈಸಲಾಗಿನ್ನು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೀ ಕಾಯೊ ಎನ್ನ ಎನಗೆ ನೀ ಬಂಧುಎಂದೆಂದೂ ದಯಾಸಿಂಧುಪ. ತಮನ ಕೊಂದೆ ಶೃತಿತತಿಯ ನೀ ತಂದೆಕೂರ್ಮನಾಗಿ ಗಿರಿಯನೆತ್ತಿದೆಕ್ಷಮೆಯ ಪೊತ್ತೆ ಹಿರಣ್ಯಕನ ಕಿತ್ತೆ ತ್ರಿ-ವಿಕ್ರಮನಾಗಿ ಬೆಳೆದೆ ತ್ರೈಲೋಕವನಳೆದೆ 1 ರಾಯರಾಯರ ಗೆಲಿದೆ ರಾವಣ ಬಲವನು ಮುರಿದು-ಪಾಯದಿ ಗೋವಳನಾದೆಸ್ತ್ರೀಯರ ಕೆಡಿಸಿದೆ ಕಲಿಯಾಗಿ ಕೊಲಿಸಿದೆಕಾಯಜನ ತಾತ ಕಾಮಿತಫಲದಾತ 2 ಸುರರ ಶಿರೋರನ್ನ ಕರುಣಾಸಂಪನ್ನಸರುವ ಮಾನವರ ಮಾನ್ಯಸಿರಿಹಯವದನ್ನ ಪರಮಪಾವನ್ನಪರಿಪೂರ್ಣ ಶಶಿವರ್ಣ ನಿರುತ ನೀಲವರ್ಣ 3
--------------
ವಾದಿರಾಜ
ನೀ ಬುದ್ಧಿ ಕೊಡದಿರಲು ಮನುಜ ಪಶುವೊ ಜೀವ ಪಶುವೊ ಪ ಶ್ರೀ ಭೂಮಿ ದುರ್ಗೇಶ ಗೋವಿಂದ ಪರಿಪೂರ್ಣ ಅ.ಪ ಜಡಜನ್ಮದಿಂದಲೆ ದ್ವಿಜ ಜನ್ಮ ಬಂದಿಹುದು ಒಡೆಯಾ ನಮ್ಮೆತ್ನವೇ ಸತ್ಯ ಪೇಳೊ ಕಡುನಿದ್ರೆಯಲಿ ಜೀವ ನಿಶ್ಚೇತನಾಗಿರಲು ಬಿಡದೆ ದಿನದಿನದಲ್ಲಿ ಎಚ್ಚರಿಕೆ ಯಾರಿಂದ 1 ಸೃಷ್ಟಿಗೆ ಬರಲಿನ್ನು ಜೀವ ಯತ್ನವು ಉಂಟೆ ಸೃಷ್ಟಿ ಸ್ಥಿತಿ ಲಯ ಕರ್ತ ನೀನೆ ತಿಳಿಯೊ ಮೊಟ್ಟ ಮೊದಲಿಗೆ ನಿನ್ನ ವಶನಾಗಿ ನಾನಿರಲು ಸೃಷ್ಟಿಯಲಿ ನಮ್ಮೆತ್ನ ಕಲ್ಪಿಸುವುದುಂಟೆ 2 ಇಂತಿರಲು ನಿಜತತ್ವ ಎಂಥ ಶಕ್ತಿಯು ನಮಗೆ ಸ್ವಾಂತ ಮಂಗಳ ಸುಗುಣ ನಿಧಿಯೆ ಪೇಳೊ ಭ್ರಾಂತಿ ಜೀವನ ಬಿಡಿಸಿ ಜಯೇಶವಿಠಲ ಶಾಂತಿ ಪಾಲಿಸು ನಮಗೆ ಅಂತರಾತ್ಮಕ ದೇವ3
--------------
ಜಯೇಶವಿಠಲ
ನೀನೇ ಅನಾಥ ನಾನೇ ಸನಾಥ ಪ ಜ್ಞಾನಿಗಳಾಡುವರು ಯೀಪರಿ ಮಾತಾ ಅ.ಪ ನಂಬಿರುವುದೆ ಸುಳ್ಳು ನಂಬಿದಿರುವದೆ ನಿಜ ಹಂಬಲಿಸಿದರೇನು ತುಂಬುವುದಿಲ್ಲ 1 ಇಲ್ಲಾ ಎಂಬೋದುಂಟು ಉಂಟೂ ಎಂಬೋದಿಲ್ಲ ಬಲ್ಲರು ಸರ್ವರು ಬಾಯಿಮಾತಲ್ಲ 2 ಮಾನಾಭಿಮಾನ ನಿನ್ನಧೀನವು ಹರಿಯೇ 3 ಕಾಣೋದು ಕೇಳೋದು ಮಾಣಾದೆ ಮಾಡೋದು ನೀನೆ ಯನ್ನೊಳಗಿದ್ದು ನಡೆಸುತ್ತಲಿರುವೆ 4 ಎನಗೇ ನೀನೆ ತಂದೆ ನಿನಗೇ ತಂದೆ ಕಾಣೆ ಸಿರಿನಲ್ಲ 5 ನಿನ್ನೊಳಗೆ ಜಗವು ಜಗದೊಳಗೆ ನೀನೆ ಪನ್ನಗ ಶಯನಾ ಪಾವನ ಚರಿತನೆ 6 ಸರುವಾರೊಳಗೂ ಗುರುರಾಮ ವಿಠ್ಠಲ ಪರಿಪೂರ್ಣನೆಂಬೋದು ಪ್ರಹ್ಲಾದ ಬಲ್ಲ7
--------------
ಗುರುರಾಮವಿಠಲ
ನೋಡಿದರೆ ತನ್ನೊಳಗದೆ ಗೂಢವಾಗದೆ ಧ್ರುವ ಸೋಹ್ಯ ತಿಳಿಯಗೊಡದೆ ಮಾಯ ಮರಿ ಆಗ್ಯದೆ ಕಾಯದೊಳಗೆ ತಾನಾದೆ ಗುಹ್ಯವಾಗ್ಯದೆ 1 ಅಡಿ ಮೇಲು ತಿಳಿಯದೆ ಬಿಡದೆ ಸೂಸುತಲ್ಯದೆ ಹಿಡಿದೇನೆಂದರೆ ಬಾರದು ಇಡದು ತುಂಬ್ಯದೆ 2 ತೋರಿಕೆ ತೋರಿಸದೆ ಪರಿಪೂರ್ಣ ತಾನಾಗ್ಯದೆ ಮೂರುಗುಣಕೆ ಮೀರ್ಯದೆ ಬ್ಯಾರೆ ತಾನದೆ 3 ಕರುಣಿಸಿ ನೋಡುತದೆ ಕರೆದರೋ ಎನುತದೆ ಬ್ಯಾರೆ ನಿರಾಶೆವಾಗ್ಹಾದೆ ಹೊರೆಯುತಲ್ಯದೆ 4 ನೀಲವರ್ಣದೊಳದೆ ಥಳಥಳಗುಡುತದೆ ಮ್ಯಾಲೆ ಮಂದಿರದೊಳದೆ ಲೋಲ್ಯಾಡುತದೆ 5 ಗುರುತ ಕಂಡವಗದೆ ಗುರುಸ್ವರೂಪವಾಗ್ಯದೆ ಗುರು ಕೃಪೆ ಆದವಂಗದೆ ಸಾರಿ ಚಲ್ಯದೆ 6 ದಾಸ ಮಹಿಪತಿಯೊಳದೆ ವಾಸವಾಗ್ಯದೆ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೋಡಿದ್ಯಾ ಈ ದೇಹಕೆ ಬಂದು | ನೋಡಿದ್ಯಾ ನೋಡಿದ್ಯಾ |ನೋಡದವನ ನೀ ನೋಡುವೆ ಎಂದರೆ | ನೋಡುವಿ ಎಂದಿಗೆ ನೋಡಿದ್ಯಾ ಪ ಒಬ್ಬವರ್ಯಾರೂ ತೋರುವದಲ್ಲ | ತೋರಿಸಿಕೊಂಡರದು ತಾನಲ್ಲ | ತೋರಡಗುವದಕೆ ಮೀರಿರುವದು ಎಂದು | ಸಾರುತಿಹುದು ಶ್ರುತಿಸಾರವೆಂದು 1 ರೂಪವನ್ನು ಕಲ್ಪಿಸಲಿಲ್ಲಾ | ಚಿದ್ರೂಪವನು ಸರ್ವರೊಳೆಲ್ಲಾ | ಪಾಪ ಪುಣ್ಯಕೆ ವ್ಯಾಪಕನಾದ | ದೀಪ ಪ್ರಕಾಶನ ಬೋಧಿಪ ಬಲ್ಲಾ 2 ಕರೆದರೆ ಎತ್ತೆತ್ತ ಬಾರ ಮತ್ತೆ | ಮರೆದರೆ ಎತ್ತೆತ್ತ ಹೋಗನು ದೂರ | ಗುರು ಭವತಾರಕ ಶಿರದೊಳು ಕರವಿಟ್ಟು | ವರದ್ಹೇಳಿದ ವಸ್ತು ಪರಿಪೂರ್ಣವಾಗೆ 3
--------------
ಭಾವತರಕರು