ಒಟ್ಟು 362 ಕಡೆಗಳಲ್ಲಿ , 54 ದಾಸರು , 335 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಧನ್ಯನಾದೆನೀದಿನ ನಿನ್ನ ಕಂಡ ಕಾರಣ ಪ. ಪನ್ನಗಾದ್ರಿವಾಸ ಸುಪ್ರಸನ್ನನಾದ್ದರಿಂದ ನಾ ಅ.ಪ. ವ್ರತನೇಮ ಜಪ ತಪ ಹಿತಮಾದುದೈ ಸುತಪ ಕೃತಿಪತಿ ತವ ಕೃಪಾಶತಧೃತಿಲೋಲುಪಾ 1 ವಿದಿಭವಾದಿಗಳಿಂದ ವಿನಮಿತ ವಿಶ್ವಾನಂದ ಪದುಮನಾಭ ಗೋವಿಂದ ಪವನನಯ್ಯ ಮುಕುಂದ 2 ಪ್ರೀಯ ತಪೋವಾಸನನೀಯುವ ದೇವರ ದಾನ ತೋಯಜಾಕ್ಷ ಲಕ್ಷ್ಮೀನಾರಾಯಣ ಪರಾಯಣ 3
--------------
ತುಪಾಕಿ ವೆಂಕಟರಮಣಾಚಾರ್ಯ
ನಡೀರೇ ನೋಡುವಾ ಗುರುಮೂರ್ತಿಯಾ | ಮಹಿಪತಿಯಾ | ತಡೆಯದೇ ಸಖಿಯರು ಪ ಪೊಡವಿಯೊಳಾನಂದ ಸ್ಥಿತಿಯಾ | ವರ ಯತಿಯಾ | ಅಡಿ ಕಮಲವ ಪಿಡಿದು | ಜಡಿದಿಟ್ಟು ಸದ್ಭಾವರತಿಯಾ | ಕರ ಮುಗಿದು 1 ಷೋಡಶ ಪರಿಸೇವೆ ಮಾಡುವಾ | ಪಾಡುವಾ | ನೋಡದೆಲೆ ಎಡ ಬಲವಾ | ಪಡ ಕೊಂಬಷ್ಟು ಸುಖವಾ 2 ಶರಣ ಬಂದ ವರಂಗೀಕಾರವಾ |ಮಾಡಿ ಹೊರವಾ | ದೋರಿ ಸನ್ಮಾರ್ಗ ಪೂರ್ಣಾ | ವರನಿಗಮದರ್ಥ ಸಾರವಾ | ನೋಡಿ ಬೀರುವಾ | ಕರುಣಿಪ ಕೃಷ್ಣನ ಪ್ರೀಯನಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಂದಿವಾಹನಾ ಪಾಲೀಸೊ ನೀ | ಕಂದ ನೆಂದನಾ ಪ ಕಂದು ಗೊರಳ ಮೌ | ಳೆಂದು ಶಿಖರ ಅಮರೇಂದ್ರ ಮುಖರು ಸುರ | ವೃಂದ ವ್ಯಂದ್ಯ ಪದಅ.ಪ. ನಂದ - ನಂದನಾ - ಪ್ರಿಯ ಸಖ | ಮಂದಜಾಸನಾಕಂದ ನೆನಿಸಿ ದುರ್ | ವೃಂದ ತ್ಯಜಿಸಿ ತವತಂದೆ ಯಾಜ್ಞೆಯಲಿ | ನಿಂದು ಸರಿದ ಹರ 1 ದಿತಿಸುತ | ಸ್ತೋಮ - ಪ್ರೀಯನೇ ||ಶಾಮ ಸುಂದರ ಹರಿ | ಪ್ರೇಮಾನ್ವಿತ ಸುತಕಾಮಾರಿಯೆ ಹರ | ಸಾಮಜವಾಸಾ 2 ಸೇವ್ಯ ನಂಘ್ರಿ ದಶದಿವ್ಯ ಕಲ್ಪ ತಪ | ಗೈಯ್ಯೆ ಶಯ್ಯನಾದೆ 3 ಯೋಗಿ ರೂಪ ಭವರೋಗ ವೈದ್ಯ ಹೃ | ದ್ರೋಗ ಕಳೆಯೊ ಶಿವ4 ಗೌರಿ ಮನೊ - ಹರಾ - ಕೈಲಾಸವಾಸ | ಕೈರಾತಾ ಕೃತಿಧರಾ ||ಗಿರಿ ಇಂದ್ರ ಕೀಲದಿ | ಘೋರ ತಪಸಿ ನರಸಾರೆ ನಿನ್ನ ಪದ | ಶೂರ ಪಡೆದ ಶರ 5 ಶುಕ | ಲಿಂಗಾಕಾರನೇ ||ತುಂಗ ಮಹಿಮ ನಿ | ಸ್ಸಂಗ ಹರಿಯ ದ್ವಿತಿಯಂಗ ಡಮರು ಶೂ | ಲಿಂಗಳ ಪಿಡಿದಿಹ 6 ತೈಜಸ - ತಾಮಸ | ಸಾಕಾರಿ - ಓಜಸಾ ||ನೀ ಕುಶಾಸ್ತ್ರದಲಿ | ಭೀಕರರನು ಅವಿವೇಕರ ಮಾಡ್ದೆ | ಪಿ | ನಾಕಿ ಧರ ಹರ 7 ರುಂಡ - ಮಾಲನೇ - ಮುನಿಜ ಮೃ | ಕಂಡ - ಪಾಲನೇ ||ಅಂಡಜ ಮಹ ಬ್ರ | ಹ್ಮಾಂಡ ದೊಡೆಯ ಪದಪುಂಡರೀಕದೊಳು | ಬಂಡುಣಿ ಎನಿಸಿಹೆ 8 ಶಂಭೊ - ಶಂಕರ - ಧೂರ್ಜಟೆಯೆ | ಅಂಚೆ - ಮನೋಹರಾ ||ಕಂಬು ಪಾಣಿ ಪದ | ಹಂಬಲಿಸುವೆ ಹೃದಯಾಂಬರದೊಳು ಎನ | ಬಿಂಬನ ತೋರಿಸು 9 ಸೋಮರ್ಕಾನಲ - ಈಕ್ಷಣಾ | ಭೀಮ - ಕೈಕಪಾಲ ||ಭೀಮ ಭವಾಟವಿ | ಧೂಮಕೇತು ಸಿರಿರಾಮ ಪದಾಶ್ರಿತ | ವೈಮನ ಕಳೆಯೊ 10 ಭಾವ - ಜಾರಿಯೇ - ಮುರುಹರ | ರಾವಣಾದಿ - ಪ್ರಿಯಾ ||ಸಾವಧಾನದೊಳು | ಭಾವ ಶುದ್ಧಿಸುತತೋರ್ವುವೆನಗೆ ಗುರು | ಗೋವಿಂದ ವಿಠಲನ 11
--------------
ಗುರುಗೋವಿಂದವಿಠಲರು
ನಂಬಿ ತುತಿಸಿರೋ ರಾಘವೇಂದ್ರ ಧ್ವರಿಯಾ ಸನ್ಮುನಿ ಕುಲವರಿಯಾ ಪ ಅಂಬುಜನಾಭನಿಗತಿ ಪ್ರೀಯಾ ಸಜ್ಜನರಿಗೆ ಸಹಾಯ ಅ.ಪ ಕನಕಶಯ್ಯನ ತನುಜನಾಗಿ ಜನಿಸಿ ನರಹರಿಯನ್ನೆ ಒಲಿಸಿ ಅನುಜರಿಗನುದಿನ ತತ್ತ್ವವ ತಾಕಲಿಸಿ ಮನದಲಿ ಶ್ರೀಹರಿ ಪದವನ್ನೇ ಭಜಿಸಿ ವರ ಕರುಣವನೇ ಸಲಿಸಿ ವನಜಭವಾಂಡದಿ ಬಹು ಬಲ್ಲಿದನೆನಿಪ ನತಜನರಿಗೆ ಸುರÀ 1 ಕಾಮಧೇನು ಸುರತರುವಿಗೆ ಸಮನೀತ ಕಾಮಿತ ಫಲ ದಾತಾ ರಾಮ ನರಹರಿ ಕೃಷ್ಣರ ಪದ ದೂತ ಲೋಕದಿ ಬಹು ಖ್ಯಾತ ಕಾಮಿನಿ ಸುತ ಧನ ಧಾನ್ಯದ ವ್ರಾತ ನೀಡುವೊನತಿ ಪ್ರೀತ ಪ್ರೇಮದಿ ನಿಜಜನಸ್ತೋಮಕೆ ಬಹು ದಾತ ಯತಿವರ ಕುಲನಾಥ 2 ಪಾತಕವನಕುಲ ವೀತಿಹೋತ್ರನೆನಿಸಿ ಭೂತಪ್ರೇತ ಮಹ ಭೀತಿಯನೇ ಬಿಡಿಸಿ ರೋಗವಪರಿಹರಿಸಿ ಮಾತಪಿತರ ತೆರ ದೂತರ ರಕ್ಷಿಸಿ ಮನೋಚಿಂತೆಯನೆ ಬಿಡಿಸಿ ದಾತಗುರುಜಗನ್ನಾಥವಿಠÀಲ ಪದದೂತ ದಾತ 3
--------------
ಗುರುಜಗನ್ನಾಥದಾಸರು
ನಂಬಿಭಜಿಸೊ ನಿರಂತರ | ನೆರೆ ನಂಬಿ ಭಜಿಸಿ ಮನವೆÉ ಪ ಕುಂಭಿಣಿನಾಥ ದಾಸಾರ್ಯ | ಸಹ್ಲಾದರಾ | ಶಲ್ಯಾಖ್ಯರಾ ಅ.ಪ ಆದಿಯುಗದಿ ಪ್ರಹ್ಲಾದನನುಜ | ಸಹ್ಲಾದನೆಂದೆನಿಸಿದರಾಯರ 1 ದ್ವಾಪರದಲ್ಲಿ ಶರಚಾಪಧಾರಿ | ಶಲ್ಯಭೂಪರೆನಿಸಿದ ರಾಯರು 2 ಭಾವಿ ಮರುತರಾಜರ ಪ್ರೀಯ ದೂತರ 3 ಪಾಲದಾಸರ ದಯಷಾತ್ರರ 4 ರಂಗವಲಿದ ಗುರುರಾಯರ 5 ದೀನಜನರಾಮರಧೇನುವೆಂದೆನಿಸಿದ ಮಾನವಿಕ್ಷೇತ್ರ ನಿವಾಸರ 6 ಬುಧರಿಗೆರೆದ ರಾಯರ 7
--------------
ಶಾಮಸುಂದರ ವಿಠಲ
ನಂಬುಗೆ ಪಡಿಯಿರೋ ದೇವರ ದೇವನಾ ಪ ಧಾಮ ಸಾರ್ವಭೌಮ ತಾಮರಸ ಸಖ ಆ ಮಹಾಕುಲೋದ್ದಾಮ ಆಹವ ಭೀಮ| ಸ್ವಾಮಿ ಸಕಲರ ಕಾಮಿತಾರ್ಥವ ನೇನಿ ಮುನಿಜನ ಪ್ರೇಮಿ| ಚರಿತ ನಿಸ್ಸೀಮಿಯಾ1 ಧಾಟಿಯಲಿ ನರನಾಟಕ ವಿಡಿದ ಆಟವಾಡಲು ನೀಟಾ| ಕೋಟಿ ಕೋಟಿ ನಿಶಾಟ ದರ್ಪೋಚ್ಚಾಟ ಮಾಡಿದ ಸ್ಪೋಟಾ| ನೀಟ ಶರಣ ಮುಕುಟಿಗಿತ್ತನು ಪೀಠಾ| ಧೀಟ ಶ್ರೀ ಜಟೆ ಜೂಟ ವಂದಿತ ಪಾಟರಹಿತ ಸ್ಪರಾಟನಾ 2 ಅಂದು ಇಂದೇ-ನೆಂದಿಗಾದರ ವಂದೇ ದಯದಿಂದ| ಛಂದ ಛಂದದ-ಲಿಂದ ಭೋಕ್ತರ ಬಂಧು ಭಕ್ತರ ವೃಂದ| ಸುಂದರಾನನ ಕುಂದರದನ ಸುಮಂದ ಹಾಸಾನಂದ| ಇಂದಿರೈರಸ ತಂದೆ ಮಹಿಪತಿ ಕಂದ ಪ್ರೀಯ ಮುಕುಂದನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಮಿಸುವೆನು ವ್ಯಾಸಾರ್ಯ | ಸುಮನಸರಿಗತಿ ಪ್ರೀಯ ವಿಮಲಕೀರ್ತಿ ಸುಶಯ್ಯ ಯತಿವರಾರ್ಯ ಪ ಅಮಮ ನಿಮ್ಮಯ ಕೀರ್ತಿ ಪೊಗಳಲಳವೇ ಎನಗೆಸುಮನಸ ಮುನಿಯನುಗ್ರಹೀತಾ - ಖ್ಯಾತಾ ಅ.ಪ. ಕನಕ ಕಶ್ಯಿಪು ಸುತನೆ | ಧನಕನಕ ತೃಣಗಣನೆಅಣು ಘನನ ಶ್ರೀ ಚರಣ | ವನಜ ಭ್ರಮರಾ |ಮನುಜಮೃಗ ವೇಷ | ಶ್ರೀ ನರಹರಿಯ ಮೂರ್ತಿಯನುಘನವಾದ ಸ್ತಂಭದೊಳು | ಕರೆದು ತೋರಿಸಿದೇ 1 ಮತ್ತೆ ನೀ ತ್ರೇತೆಯಲಿ | ಹತ್ತು ತಲೆ ರಾವಣನಭ್ರಾತೃವಾಗವತರಿಸಿ | ಕೀರ್ತಿಯಲಿ ಮೆರೆದೇ |ಭೃತ್ಯ ಭಾವದಿ ನಮಿಸಿ | ಸತ್ಯಾತ್ಮ ಶ್ರೀಹರಿಯವಿಸ್ತರದ ಕೀರ್ತಿಯಲಿ | ಲಂಕ ಪತ್ತನವಾಳ್ದ 2 ನರಪ ಪ್ರತೀಪನಾ | ಪರಸೂನು ವೆಂದೆನಿಸಿ ಕುರುಪತಿಯ ಋಣಸೇವೆ | ಸರಿಯಾಗಿ ಸಲಿಸೀ |ಮರುತಾತ್ಮ ಭೀಮನಿಂ | ವರವನೇ ಪಡೆಯುತ್ತವರ ಕಲೀಯಲಿಯತಿ | ವರನೆನಿಸಿ ಮೆರೆದೇ 3 ಬ್ರಹ್ಮಣ್ಯಯತಿ ಕರಜ | ಬ್ರಹ್ಮ ಬ್ರಾಹ್ಮಣ ಪ್ರೀಯಬ್ರಹ್ಮಣ್ಯ ಪ್ರೀಯ ಸು | ಬ್ರಹ್ಮಣ್ಯನಾವೇಶನೇ |ಬ್ರಹ್ಮಾಸ್ಮಿ ಎಂದೆನಿಪ | ಬ್ರಹ್ಮದ್ವೇಷಿಯ ನಿಕರಬ್ರಹ್ಮಾಂಡದಲಿ ತರಿದೇ | ಬ್ರಾಹ್ಮಣರ ಪೊರೆದೇ 4 ಭಾಗವತ ಪ್ರೀಯ 5
--------------
ಗುರುಗೋವಿಂದವಿಠಲರು
ನಮೊ ಶ್ರೀ ರಮಣಿ ಜಯ ತ್ರಿಭುವನ ಜನನೀ ಪ ನಾಭ ಪ್ರೀಯೇ ಗುಣ ಸದನೀ | ಜಾಂಬೂನದಾಂಬರ ವರಣೀ | 1 ಸುರಮನಿ ವಂದ್ಯ ಪದದ್ವಯ ಪಾವನೀ ನರಸೀರುಹದಳ ನಯನೀ2 ಗುರುವರ ಮಹಿಪತಿ ನಂದನೋದ್ದರಣೀ ಶರಣ ರಕ್ಷಕ ಘನ ಕರುಣೀ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಮೋ ನಮೋ ಭೀಮಾ | ಜೀವೋತ್ತುಮಾಪ್ತ ಜನ ಪ್ರೇಮಾ ಪ ಕುಮಾನ ಜನ ಸುಪ್ರಮೋದ ವಿನಾಶಕ ಶಮಾದಿ ಗುಣನಿಧೆ | ಕ್ಷಮಾಪಣಂ ಕುರು ಅ.ಪ. ಕಾನನ ಸುಕುಠಾರ ||ಭ್ರಾಂತ ದುಶ್ಯಾಸನ | ಅಂತ್ಯವ ಕಾಣಿಸಿಕಾಂತಾ ಮಣೀಯನು | ಸಂತೋಷ ಪಡಿಸಿದೆ 1 ಗೋಪಿ | ನಂದಾನಗತಿ ಪ್ರೀಯವಂದೀಸಿ ಬೇಡುವೆ | ಕುಂದೂಗಳೆನ್ನಯನೊಂದಾನು ಎಣಿಸಿದೆ | ನಂದನ ಪಾಲಿಸೊ 2 ಕಾಯ ಭವ ಮುಖಾದಿ ಗೇಯ ||ಅವಿರತದಿ ಗುರು | ಗೋವಿಂದ ವಿಠಲನಸ್ತವನ ಗೈವನ | ಭವವ ಕಳೆಯುವ 3
--------------
ಗುರುಗೋವಿಂದವಿಠಲರು
ನಮೋ ನಮೋ ಮುಖ್ಯ ಪ್ರಾಣ ನಾಥನೇ ನಮೋ ಜಗದೊಳು ಪ್ರಖ್ಯಾತನೇ ಪ ಧರಣಿ ಸುತೆಯ ಮುಖ ಚಂದ್ರಚಕೋರನಾ ಸಿರಿ ಚರಣಾಂಬುಜ ಭೃಂಗಾ ಸುರವರರಿಯ ತಂದೆಯ ಮಾವನ ಸಂ ಹರಿಸದೆ ವಾನರ ತುಂಗಾ1 ದುರ್ಯೋಧನಾದಿ ನೂರೊಂದು ಮಂದಿಯ ತನು ಪರ್ವತ ವಜ್ರದಂಡಾ ಕರಿ ಏರಿ ಬಹ ಭಗದತ್ತನ ಗದೆಯಿಂದ ಹರಿಸದೆ ಭೀಮ ಪ್ರಚಂಡಾ2 ಧರಿಯೊಳುತಾನವ ಗುಣ ಕರಿಯಾವಳ ನರಸಿಂಹನು ಮಧ್ವರೇಯ ಪರಮರೂಪವ ಮೂರಾಗಿ ದೊರಿದೆ ಗುರು ಮಹಿಪತಿ ಪ್ರಭು ಪ್ರೀಯಾ || 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಮೋ ನಮೋ ಶ್ರೀ ರಾಘವೇಂದ್ರ | ಸದ್ಗುಣ ಸಾಂದ್ರ ಕಮಲ ನಾಭನ ದಾಸ ಕಮಲಾಪ್ತ ಭಾಸಾ ಪ ಶೇಷ ಜನರಿಗಳಿಗಿಷ್ಟ ಸಲ್ಲಿಸುವ ವಿಶಿಷ್ಟಾ ಭಾಸುರ ಚರಿತನೆ ಭಜಿಸುವೆನು ಅನವರತ 1 ಭೂರಿ ಬಲತರತರ್ಕ ವಾದಿಶೈಲ ಕುಲಶ ವರಹಸುತೆ ವಾಸಾ ಅಘ ಜೀರ್ಣ ಮಾಡು ಗುರುವರ ಪೂರ್ಣ ಭೂರಿ ಪ್ರಖ್ಯಾತ 2 ನತಜನಾಶ್ರಯ ಪ್ರೀಯ ನೆರೆ ನಂಬಿದೆನೋ ಮಾಯ ಕದಳಿ ಗಜೇಂದ್ರ ವಿಬುಧಾಬ್ದಿ ಚಂದ್ರ ಕ್ರತು ಭುಕು ಜಗನ್ನಾಥ ವಿಠಲನ ನಿಜದೂತ ತುತಿಸಲಾಪೆನೆ ನಿನ್ನ ಯತಿಶಿರೋರನ್ನ 3
--------------
ಜಗನ್ನಾಥದಾಸರು
ನರ್ತನಗೋಪ ಕೃಷ್ಣ | ವಿಠಲ ಪೊರೆ ಇವನಾ ಪ ಅರ್ತು ನಿನ್ನಂಘ್ರಿಯಲಿ | ದಾಸ್ಯ ಕಾಂಕ್ಷಿಪನಾ ಅ.ಪ. ಪತಿ ಸುಪ್ರೀಯ | ಮಧ್ವಾಂತರಾತ್ಮಸದ್ಧರ್ಮರತಿಯಿತ್ತು | ತಿದ್ದಿ ಸಂಸ್ಕತಿಗಳನುಶ್ರದ್ಧಾಳು ವೆಂದಿನಿಸು | ಸಿದ್ಧಾಂತ ಸಥದೀ 1 ಬೋಧ ಓದಗಿಸಿಕಾಯೋ | ಬಾದರಾಯಣದೇವಮೋದದಿಂ ಪ್ರಾರ್ಥಿಸುವೆ | ಹೇ ದಯಾಪೂರ್ಣ 2 ಧ್ಯಾನುಪಾಸನವಿತ್ತು | ಶ್ರೀನಿವಾಸನಮನದಿಕಾಣುವ ಸುವಿಜ್ಞಾನ | ನಿನಾಗಿ ಕೊಡುತಾಮೌನಿಕುಲ ಸನ್ಮಾನ್ಯ | ಜ್ಞಾನದಾಯಕ ಹರಿಯೆದೀನಜನ ಮಂದಾರ | ನೀನಾಗಿ ಪೊರೆಯೊ 3 ಪಿತೃ ಮಾತೃ ಪರಿವಾರ | ವ್ಯಾಪ್ತ ಹರಿಮೂರ್ತಿಯನುಅರ್ಥಿಯಿಂದಲಿ ಭಜಿಪ | ಮತಿಯ ಪಾಲಿಸುತಾಕರ್ತೃತ್ವ ಭ್ರಾಂತಿಯನು | ಹತಮಾಡಿ ಶ್ರೀಹರಿಯೆಕೀರ್ತಿವಂತನ ಗೈಯ್ಯೋ | ಆರ್ತರುದ್ಧರಣಾ 4 ಮುನ್ನವೇ ತ್ಯೆಜಸನು | ನನ್ನೆಯಿಂ ಸೂಚಿಸಿಹಚೆನ್ನ ಅಂಕಿತವನ್ನೆ | ಇನ್ನು ಸ್ಥಿರಪಡಿಸೀಘನ್ನ ಉಪದೇಶವನು | ಚಿತ್ಗಾನಿಗೆ ಇತ್ತಿಹೆನೋಮನ್ನಿಸೀಕೃತ್ಯ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ನಲಿ ನಲಿದು ಒಲಿದು ಮೊಗವ ತೋರೆ ಬಾ ಪ ಜಲಜಾಕ್ಷ ನಾರಾಯಣ ಪ್ರೀಯೆ 1 ಸಾಕವ್ವ ನೀ ಬಂದು ಬೇಗನೇ 2 ಪ್ರೀತೆ ನೀನೆಮಗೊಲಿದು ಬಾ | ಬೇಗನೆ 3
--------------
ಸದಾನಂದರು
ನಾರಸಿಂಹನೆ ಎನ್ನ | ದುರಿತೌಘಗಳನು ದೂರಕೈದಿಸಿ ಘನ್ನ | ಕರುಣಾವಲೋಕನ ಭವ ಭಯವನ್ನ | ಬಿಡಿಸಯ್ಯ ಮುನ್ನ ಪ ಧೀರ ಸುಜನೋದ್ಧಾರ ದೈತ್ಯ ವಿ ದೂರ ಘನಗಂಭೀರ ಶೌರ್ಯೋ ಧಾರ ತ್ರಿಜಗಾಧಾರ ಎನ್ನಯ ಭಾರ ನಿನ್ನದೊ ಹೇ ರಮಾವರ ಅ.ಪ. ಏನು ಬಲ್ಲೆನೊ ನಾನು | ಸುಜ್ಞಾನ ಮೂರುತಿ ಮಾನಸಾಬ್ಜದಿ ನೀನು | ನೆಲೆಯಾಗಿ ನಿಂತು ಏನು ನುಡಿಸಲು ನಾನು | ಅದರಂತೆ ನುಡಿವೆನು ಜ್ಞಾನದಾತನೆ ಇನ್ನು | ತಪ್ಪೆನ್ನೊಳೇನು ಸ್ನಾನ ಜಪತಪ ಮೌನ ಮಂತ್ರ ಧ್ಯಾನಧಾರಣ ದಾನ ಧರ್ಮಗ- ಳೇನು ಮಾಡುವುದೆಲ್ಲ ನಿನ್ನಾ- ಧೀನವಲ್ಲವೆ ಶ್ರೀನಿವಾಸನೆ ದಾನವಾಂತಕ ದೀನರಕ್ಷಕ ಧ್ಯಾನಿಪರ ಸುರಧೇನುವೆನ್ನುವ ಮಾನವುಳ್ಳವರೆಂದು ನಂಬಿದೆ ಸಾನುರಾಗದಿ ಕಾಯೊ ಬಿಡದೆ 1 ತಂದೆತಾಯಿಯು ನೀನೆ | ಗೋವಿಂದ ಎನ್ನಯ ಬಂಧು ಬಳಗವು ನೀನೆ | ಮು- ಕುಂದ ಗುರುಸಖ ವಂದ್ಯದೈವವು ನೀನೆ ನೀನೆ | ಆನಂದ ನೀನೆ ಹಿಂದೆ ಮುಂದೆಡಬಲದಿ ಒಳಹೊರ- ಗೊಂದು ಕ್ಷಣವಗಲದಲೆ ತ್ರಿದಶರ ವೃಂದ ಸಹಿತದಿ ಬಂದು ನೆಲಸಿ ಬಂದ ಬಂದಘಗಳನು ಹರಿಸಿ ನಂದವೀಯುತಲಿರಲು ಎನಗಿ- ನ್ನೆಂದಿಗೂ ಭಯವಿಲ್ಲ ತ್ರಿಕರಣ- ಕರ್ಮ ನಿನ್ನರು ಎಂದು ಅರ್ಪಿಸುವೆನು ನಿರಂತರ 2 ಪ್ರೀಯ ನೀನೆನಗೆಂದು | ಮರೆಹೊಕ್ಕು ಬೇಡುವೆ- ನಯ್ಯ ಗುಣಗಣಸಿಂಧು | ಮೈಮರೆಸಿ ವಿಷಯದ ಹುಯ್ಲಿಗಿಕ್ಕದಿರೆಂದು | ಶರಣನ್ನ ಬಿನ್ನಪ ಇಂದು | ಕೈಬಿಡದಿರೆಂದು ತಾಯನಗಲಿದ ತನಯನಂದದಿ ಬಾಯ ಬಿಡಿಸುವರೇನೊ ಚಿನ್ಮಯ ನ್ಯಾಯ ಪೇಳುವರ್ಯಾರೊ ನೀನೊ ಸಾಯಗೊಲುತಿರೆ ಮಾಯಗಾರನೆ ತೋಯಜಾಸನ ಮುಖ್ಯ ಸುಮನಸ ಧ್ಯೇಯ ಶ್ರುತಿ ಸ್ಮøತಿ ಗೇಯ ಕವಿಜನ ಗೇಯ ಚತುರೋಪಾಯ ಭಕ್ತ ನಿ- ಕಾಯ ಪ್ರಿಯ ಶ್ರೀಕಾಂತ ಜಯ ಜಯ
--------------
ಲಕ್ಷ್ಮೀನಾರಯಣರಾಯರು
ನಾರಾಯಣ ವಿಠ್ಠಲನೆ ನೀನಿವನ ಕಾಪಾಡೊ ಹರಿಯೆ ಪ ನೀರಜಾಸನವಂದ್ಯ ಪೋರ ನಿನ್ನವನೆಂದುಕಾರುಣ್ಯದಲಿ ಕೈಪಿಡಿದು ಕಾಪಾಡೊ ಹರಿಯೇ ಅ.ಪ. ಜ್ಞಾನಾಯು ರೂಪಕ ಸು | ವಾಯುದೇವನೊಳಿದ್ದುನೀನಿವಗೆ ಜ್ಞಾನಾಯು ಸಂಪದವನೀಯೋ |ಮೌನಿಕುಲ ಸನ್ಮಾನ್ಯ ಪೂರ್ಣಪ್ರಜ್ಞರ ಮತದಿ ಜ್ಞಾನಿ ಎಂದೆನಿಸಿವನ ಕಾಪಾಡೊ ಹರಿಯೆ 1 ಗೋವುಗಳೊಳುದ್ಗೀಥ ಕಾವ ಕರುಣಿಯೆ ದೇವಭಾವದಲಿ ನೀನಿದ್ದು ಉದ್ಧರಿಸೊ ಹರಿಯೇ |ಆವ ಭವವನಧಿ ಲಕ್ಷ್ಮೀ ನರಹರಿಯೇನೋವುಗಳ ಪರಿಹರಿಸೊ ಪವನ ಪ್ರೀಯ 2 ಹೆಂಚು ಹಾಟಕದಲ್ಲಿ ಸಮಬುದ್ಧಿ ನೀನಿತ್ತುಪಂಚ ಪಂಚಿಕೆ ತತ್ವ ತರತಮವ ತಿಳಿಸುತ್ತಮಿಂಚಿನಂತಿವನ ಹೃತ್ಪಂಕಜದಿ ಪೊಳೆಯೊವಾಂಛಿತ ಪ್ರದನೆ ಗುರು ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು