ಒಟ್ಟು 266 ಕಡೆಗಳಲ್ಲಿ , 48 ದಾಸರು , 143 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸರ್ವ ವಿದ್ಯದಾಗರಾ | ಪಾರ್ವತಿ ಕುಮಾರಾ | ದೋರ್ವ ವಿಘ್ನ ಸಂಹಾರಾ | ಶ್ರೀಗಣ ನಾಯಕನೇ | ಊರ್ವಿಲಿ ನಿನ್ನ ಬಲಗೊಂಬೆ 1 ತರುವಾಣಿ ಕರುಣಾ ಸಾಗರೆ | ಶರಣು ಶರಣು ಕಲ್ಯಾಣಿ 2 ಸಾರಸ ಲೋಚನ | ಕಾರುಣ್ಯ ನಿಧಿಯೇ ಸಲಹಯ್ಯಾ 3 ಮೂರಾವ ತಾರಿ ಸಹಕಾರೋ | ಶ್ರೀ ಹನುಮಂತಾ | ತಾರಿಸೋ ಭವದಿಂದಾ 4 ರಜನೀಶ ಮೌಳಿ | ನಿಜ ದೋರಿ ಎನ್ನ ಸಲಹಯ್ಯಾ 5 ಛಂದಾಗಿ ಸಲಹು ತಂದೆ ಗುರು ಮಹಿಪತಿ ರಾಯಾ 6 ಇಂದು ನಮ್ಮನಿಯಲಿ ಮುಂದಾಗಿ ನೀವು ವದಗೀರೇ 7 ಬನ್ನಿ ಭಾವಕಿಯರು ಮುನ್ನಿನಾಗುಣಬಿಟ್ಟು | ಅನ್ಯ ಕೆಲಸಕೆ ತೊಡಗದೇ | ನೈವೇದ್ಯಕೀಗ | ಸನ್ನೆಲ್ಲಕ್ಕಿ ಮಾಡೀರೇ 8 ಸೇರಲಿ ಅನುಮಾನಾ ತವಕದಿ ನೀವು ಕುಳ್ಳಿರೆ 9 ಉರ್ವಿಲಿ ನೀವು | ಕುಟ್ಟರೆ | ಜ್ಞಾನ ವಿಜ್ಞಾನದಿ | ಮೆರ್ವ ವನರೆಯಾ ಧರಿಸೀಗಾ 10 ಅಮೃತ ನಾಮವಾ ನೀವು ಬೆರೆಯಿರೇ 11 ಸಮಭಾವ ಯಾರಿಯಾ ಕ್ರಮಗೊಂಡು ಹಾಕುತಾ | ದಮಿಸಿ ಕ್ರಮ ಈಡ್ಯಾಡಿ ಕುಟ್ಟಿರೆ 12 ಕೆಟ್ಟ ಹೊಟ್ಟವ ಹಾರಿಸಿ | ಶುದ್ಧ ಅಕ್ಕಿಯ ನೆಟ್ಟನೆ ನೀವು ವಡಗೂಡೀ 13 ಏಕೋ ದೇವಗೆ ಅರ್ಪಿಸ | ದಯದಿಂದ ದೇವ | ಬೇಕಾದ ಸುಖ ಕೊಡುವನು 14 ಸಾರಥಿ ಬಂಧು ಬಳಗವು ಯನಗಾಗಿ | ಸಲಹುವಾ ನಮ್ಮ ಎಂದೆಂದು ಸಿಂಹಾದ್ರೀಶನು 15
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಾರಿದ ಡಂಗುರ ಯಮನು ಪ ಅಘ ನಾರೇರ ಎಳತಂದು ನರಕದಲ್ಲಿಡಿರೆಂದು ಅ.ಪ. ಹೊತ್ತಾರೆ ಎದ್ದು ಪತಿಗೆ ಎರಗದವಳ ಮೃತ್ತಿಕೆ ಶೌಚ ಮಾಡದೆ ಇಪ್ಪಳಾ ಬೆತ್ತಲೆ ಕುಳಿತು ಮೈದೊಳೆವಳ ನಾದಿನಿ ಅತ್ತೆ ಮಾವನ ಬೈವವಳೆಳೆದು ತನ್ನೀರೆಂದು 1 ತಿಲಕಾಯುಧವ ಬಿಟ್ಟು ಕುಂಕುಮವಿಡುವಳ ಬೆಳಗಾದ ಕಾಲಕ್ಕೂ ಮಲಗಿಪ್ಪಳ ಮಲಿನ ವಸ್ತ್ರದಲಿ ಪತಿಯ ಬಳಿಗೆ ಪೋಗುವಳ ಕಲಹಕಾರಿಯ ಹಿಡಿದೆಳೆದು ತನ್ನಿರಿಯೆಂದು 2 ಉತ್ತಮ ಗುರುಹಿರಿಯರನು ನಿಂದಿಸುವಳ ಪೆತ್ತ ಮಕ್ಕಳ ಮಾರಿ ಬದುಕುವಳ ಪ್ರತ್ಯೇಕ ಶಯ್ಯದಿ ಮಲಗಿ ಇಪ್ಪಳ ಪಿಡಿ ದೆತ್ತ ಎಳೆದು ತಂದು ನರಕದಲ್ಲಿಡಿರೆಂದು 3 ಜಲ ಜಕ್ಕಿ ಸಾಳಿ ಕಂಬಳಿ ಬೋಳಿ ಬಕ್ಕಿ ಗೊಂ ಡಳಿ ಮೊದಲಾದವು ದೈವವೆಂದು ತಿಳಿದು ಪಿಶಾಚಿ ಎಂಜಲ ಉಂಡು ಹಿಗ್ಗುವ ಲಲನೇರಾ ಸೆಳೆದು ತನ್ನಿರೋ ಎಂದು 4 ನಾಗೇಂದ್ರ ಶಯನನ ದಿನದುಪವಾಸದ ಜಾಗರ ಮಾಡದೆ ಮಲಗಿಪ್ಪಳಾ ಭಾಗವತ ಸಚ್ಛಾಸ್ತ್ರ ಕೇಳದೆ ಉನ್ಮತ್ತ ಳಾಗಿರುವಳ ಎಳೆದು ತನ್ನಿರೆಂದು 5 ಗಂಡ ನಿರ್ಧನಿಕನೆಂದಪಮಾನ ಮಾಳ್ಪಳ ಉಂಡ ಶೇಷಾನ್ನುವನುಣಿಸುವಳಾ ಕೊಂಡೆ ಮಾತುಗಳಾಡಿ ಕಳವಳಗೊಳಿಪಳ ಮಂಡೆಗೊದಲು ಹಿಡಿದು ಎಳೆದು ತನ್ನಿರಿ ಎಂದು6 ಉಡಲಿಲ್ಲ ಉಣಲಿಲ್ಲ ಇಡಲಿಲ್ಲ ತೊಡಲಿಲ್ಲ ಸುಡಲಿಗಂಡನ ಒಗೆತನವೆನ್ನುತಾ ಹಡೆದವರನು ನುಡಿನುಡಿಗೆ ಬಯ್ಯುತಿಪ್ಪಂಥ ಕಡು ಪಾಪಿಗಳ ಹೆಡ ಮುಡಿಗಟ್ಟಿ ತನ್ನಿರಿ ಎಂದು7 ಸಾಲೆಡೆಯಲಿ ಭೇದ ಮಾಡಿ ಬಡಿಸುವಳ ನೀಲಾಂಬರವನುಟ್ಟು ಮಡಿಯೆಂಬಳ ಬಾಲಕರ ಬಡಿದಳಿಸುತಿಪ್ಪಳ ಹಿಂ ಗಾಲ ತೊಳೆಯದವಳ ಎಳೆದು ತನ್ನಿರೋ ಎಂದು8 ಪತಿಗೆ ಬೇಕಾದವರ ಅಪಮಾನ ಮಾಳ್ಪಳ ಮೃತವತ್ಸ ಗೋವಿನ ಪಾಲುಂಬಳಾ ಹುತವಾದ ಅಗ್ನಿ ತೊಳೆದು ನಂದಿಸುವಳ ಮತಿಗೇಡಿಯ ಬಿಡದೆಳೆದು ತನ್ನಿರೋ ಎಂದು 9 ಒಲಿವ ಔಷಧ ಮಾಡಿ ಪತಿಯ ಬಳಲಿಸುವಳ ಮಲಮಕ್ಕಳೊಳು ಮತ್ಸರಿಸುತಿಪ್ಪಳಾ ಕಳವಿಲಿ ಕಾಂತನ ಧನವ ವಂಚಿಸುವಳ ಗಳಕೆ ಪಾಶವ ಕಟ್ಟ ಎಳೆದು ತನ್ನಿರೋ ಎಂದು 10 ಮಿಥ್ಯಾವಾದಿಯ ಕೂಡ ಸ್ನೇಹ ಮಾಳ್ಪಳಾ ವೃತ್ತಿಲಿ ಬದುಕುವಳೆಳೆದು ತನ್ನಿರೋ ಎಂದು 11 ಲಶನು ವೃಂತಕಾದಿಗಳನು ಭಕ್ಷಿಸುವಳಾ ಸೊಸೆಯರೊಡನೆ ಮತ್ಸರಿಸುತಿಪ್ಪಳಾ ಹಸಿದು ಬಂದವರಿಗೆ ಅಶನವಿಲ್ಲೆಂಬಳಾ ಉಸಿರು ಬಿಡದಂತೆ ಎಳೆದು ತನ್ನಿರೊ ಎಂದು 12 ತುಲಸಿ ವೃಂದಾವನಕಭಿನಮಿಸದವಳ ಜಲವ ಸೋಸದೆ ಪಾನವ ಮಾಳ್ಪಳಾ ಫಲ ಧಾನ್ಯಾದಿಗಳ ನೋಡದೆ ಪಾಕ ಮಾಳ್ಪಳ ಮಳೆ ಗಾಳಿ ನಿಂದಿಪಳ ಎಳೆದು ತನ್ನಿರೋ ಎಂದ 13 ಮೀಸಲು ಮಡಿ ಎನ್ನದೆ ಭಕ್ಷಿಸುವಳ ಕೇಶಿಯೊಡನೆ ಗೆಳೆತನ ಮಾಳ್ಪಳ ದಾಸೆರಿಂದಲಿ ಪಾಕ ಪಾತ್ರೆ ಮುಟ್ಟಿಸುವಳ ನಾಸಿಕ ಬಂಧಿಸಿ ಎಳೆ ತನ್ನಿರೋ 14 ಬಾಲಕರನು ತೊಟ್ಟ್ಟಿಲೊಳಿಟ್ಟು ತೂಗುತ ಪಾಲೆರೆವುತ ಬೀಸುತ ಕಟ್ಟುತಾ ಆಲಯದೊಳು ಕೆಲಸಗಳ ಮಾಡುತ ಲಕ್ಷ್ಮೀ ಲೋಲನ ಗುಣವ ಪಾಡುವರ ಮುಟ್ಟದಿರೆಂದು15 ಅರಿಷಣ ಕುಂಕುಮ ಪುಷ್ಟಾಂಜನ ವಸ್ತ್ರಾ ಸರಸವಾಡುತ ಸುಖ ಹರಿಗೆ ಅರ್ಪಿತವೆಂಬ ಹರಿದ್ದೇರಿದೆಡೆಗೆ ಕೈಮುಗಿದು ಬನ್ನಿರಿ ಎಂದು16 ಅಗಣಿತ ಮಹಿಮ ಶ್ರೀ ಜಗನ್ನಾಥ ವಿಠಲನ್ನ ಬಗೆಬಗೆಯಿಂದ ಪಾಡುತಲೀ ಹೊಗಳುವ ದಾಸರ ಬಗೆಯ ನೇಮಿಸಿ ಕಾಯ್ವ ಸುಗುಣೇರಿದ್ದೆಡೆಗೆ ಕೈಮುಗಿದು ಬನ್ನಿರೆಂದು 17
--------------
ಜಗನ್ನಾಥದಾಸರು
ಸಿರಿಯು ಬರುವ ಸೊಬಗ ನೋಡಿರೆ ಭರದಿ ಬನ್ನಿರೆ ಶಿರವಬಾಗಿ ಚರಣಕೆರಗಿ ವರವಬೇಡಿರೆ ಪ. ಕಾಲೊಳಂದಿಗೆ ಗೆಜ್ಜೆ ಪಿಲ್ಲಿ ಘಲಿರುಘಲಿರೆನೆ ಬಾಲೆಯರ ಬಳಿಗೆ ಬರುವಳೊಲಿದಳೆಂಬೆನೇ 1 ಮಾತೆಗೆನಿತೋ ಪ್ರೀತಿಯೆಮ್ಮೊಳಗೈತಂದಳೀದಿನಂ ಪೂತುದರರೆ ಪೂರ್ವಪುಣ್ಯ ತರವಿದೆಂಬೆನಾಂ 2 ಪರಮಪುರುಷ ಶೇಷಶೈಲವರದನರಸಿಯಿಂ- ದರರೆ ಒಲಿದಳೆಮಗೆ ಧರೆಯೊಳರಿದುದಿನ್ನದೇನ್ 3
--------------
ನಂಜನಗೂಡು ತಿರುಮಲಾಂಬಾ
ಸುಗ್ಗಿ ಮಾಡುವ ಬನ್ನಿ ಸುಜ್ಞಾನದ ಧ್ರುವ ಬೆಳೆದ ಘನಸುಖ ಬೇಕಾದ್ಹಾಂಗೆ ತಿಳಿದವರುಂಡುಟ್ಟು ದೇಗುವ್ಹಾಂಗೆ 1 ಬಯಸುವ ಬಯಕಿಗೆ ಉಂಟಾಗ್ಯದೆ ಶ್ರೇಯಸುಖ ರಾಶಿರಾಶಿಯು ಒಟ್ಟೈದೆ 2 ಸಾರುತ ಶ್ರುತಿ ಸವಿಪೊಗಳುತಲ್ಯದೆ ಬೀರುತ ಜನಮಯ ಸಾರಿ ಚೆಲ್ಯದೆ 4 ದೀನ ಮಹಿಪತಿಗಾನಂದವ್ಯಾಗದೆಮನದಿರಗಿ ಉನ್ಮನವಾಗ್ಯನೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸುಂದರ ಕೃಷ್ಣನು ಕರೆಯುವ ಬನ್ನಿರೆ ಇಂದುಮುಖಿಯರೆಲ್ಲ ಪ ಚಂದದಿ ವಿಹರಿಸುವ ಬನ್ನಿರಿ ಇಂದುಮುಖಿಯರೆಲ್ಲ ಅ.ಪ ಭಾಸುರಾಂಗನ ಕೂಡಿ ನಾವು ರಾಸಕ್ರೀಡೆಯಲಿ ಈ ಸಂಸಾರದ ಕ್ಲೇಶಗಳನು ಪರಿ ಹಾಸ ಮಾಡುವ ಬನ್ನಿ 1 ಪರಿಮಳ ಕುಸುಮಗಳ ಸೊಗಸಿನ ತರುಲತೆ ಬುಡದಲ್ಲಿ ಮುರಹರ ಕೃಷ್ಣನ ಮುರಳಿಯನೂದುವ ತರಳೆಯ ಅಂಬನ್ನಿ 2 ನಂದಕುಮಾರನಿಗೆ ನಾವು ಮಂದಹಾಸದಲ್ಲಿ ಗಂಧ ತಾಂಬೂಲಗಳಂದದಿ ನೀಡುತಾ ನಂದಪಡುವ ಬನ್ನಿ 3 ಯಮುನಾ ತೀರದಲಿ ನಾವು ಸುಮಬÁಣನ ಸೊಲ್ಲನು ಮುರಿಯುವ ಬನ್ನಿ ಕಮಲಾಕ್ಷಿಯರೆಲ್ಲಾ 4 ಪನ್ನಗವೇಣಿಯರೇ ಈಗ ಪ್ರ ಸನ್ನವದನ ಕೃಷ್ಣ ತನ್ನ ಇಂಗಿತವನರುಹಲು ಎಮ್ಮನು ಸನ್ನೆಯ ಮಾಡುತಿಹ 5
--------------
ವಿದ್ಯಾಪ್ರಸನ್ನತೀರ್ಥರು
ಸುಶಿಲೇಂದ್ರತೀರ್ಥರ ವೈಭವವನು ನೋಡ ಬನ್ನಿರೆ ಜನರು ಹೊಸರಿತ್ತಿ ಧೀರೇಂದ್ರರ ಬಳಿಯಲಿ ಹಸನಾಗಿರುವವರು ಪ. ವರದಾ ತೀರದಿ ನೆಲಸುತ ಹರುಷದಿ ವರಗಳ ಕೊಡುತಿಹರು ಪರಿಪರಿಯಿಂದಲಿ ಸೇವಿಪ ಭ- ಕ್ತರ ಕರುಣದಿ ಪೊರೆಯುವರು 1 ವೃಂದಾವನದಲಿ ದ್ವಾದಶ ವರ್ಷಗ ಳಿಂದಲಿ ನಿಂದಿಹರು ಕುಂದದೆ ಶ್ರೀ ರಾಘವೇಂದ್ರರ ದಯವನು ಚಂದದಿ ಪಡೆದಿಹರು 2 ಕುಷ್ಟಾದಿಗಳನು ದುಷ್ಟ ಗ್ರಹಗಳ ಥಟ್ಟನೆ ತೊಲಗಿಪರು ಇಷ್ಟ ಭಕ್ತರನು ಸಲಹುವ ಗೋಪಾಲಕೃಷ್ಣವಿಠ್ಠಲ ಪ್ರಿಯರು 3
--------------
ಅಂಬಾಬಾಯಿ
ಸೂರ್ಯಾಡುವ ಬನ್ನಿ ಹರಿಯ ನಾಮಾಮೃತವ ಪೂರ್ಣ ಧ್ರುವ ಸುರಿ ಸುರಿದು ಸಾರಾಯ ತರುತರುವಾಯ ಸೇವಿಸಿ ಥರಥರಲಿಡುವ ಬನ್ನಿ ಸುವಾಡವ ಕೊಂಡು 1 ಸಾರ್ಥಕ ಮಾಡುವದಿದೆ ಗುರ್ತಕ ಬಂದಿಹ ಜನಮ ತಾ ಕರ್ತು ಸದ್ಗುರು ಮಹಿಮೆ ಪ್ರಾರ್ಥಿಸಿ ಪರಿಪೂರ್ಣ 2 ಸವಿಸವಿ ಮಾಡಿಕೊಂಡು ಸೇವಿಸಿ ಮಹಿಪತಿ ನೋಡಿ ಪಾದ ನಿಜಗೂಡಿ ಭವಪಾಶೀಡ್ಯಾಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸೃಷ್ಟೀಶ ಕೃಪೆದೋರಿದ ಬಾಲನಮಾನನಷ್ಟವ ಜಾರಿಸಿದ ಪ ನ್ಯಾಯಕೆ ಪೋಪಕಾಲದಿ ಪುಟ್ಟಯಾಖ್ಯನ ಸ್ವಪ್ನದಲಿ ತಾಂ- ಬಿಟ್ಟು ಬನ್ನಿರಿಯೆನುತಪೇಳ್ದಾ ಅ.ಪ ಎಲ್ಲಾರ ನಿನ್ನೊಳಗೆ ಸೇರಿಸಿ ಮುಂದೆ- ಉಲ್ಲಾಸಕೊಡುವೆ ನಿನಗೆ ಕಲ್ಲಿನಂದದಿ ಮೌನಧರಿಸುತ- ಖುಲ್ಲಮನುಜರ ಸಂಗವರ್ಜಿಸಿ ನಿಲ್ಲಿಸು ಮನವನೆನುತಲಿ 1 ಗುರುತು ಕಾಣುವದೆಂದಿಗೆ ಪರಮ ತಿರುಮಂತ್ರಾರ್ಥ ಅಷ್ಟಾ- ಕ್ಷರಿಯ ಜಪತಪಧ್ಯಾನಮಾಡುವ ದೊರಯದೆಂದಿಗು ಕೀರ್ತಿ ಎನುತಲಿ 2 ಮತಧರ್ಮಜ್ಞಾನಿಗಳು ಪೇಳಿರುವಂತ ಮತಶಾಸ್ತ್ರವೀಕ್ಷಿಸದೆ ಸತತದೂಷಣೆಗೈದು ಸುಜನರ - ಕ್ಷಿತಿಯ ಭೋಗವನಂಬಿ ಗರ್ವದಿ ಹಿತವತಪ್ಪಿಸಿ ಕರವಪಿಡಿಯುತ 3 ಸ್ಥಿರವಲ್ಲಕಾಯವೆಂದು ಸಾತ್ವಿಕಶೃತಿಯೊ- ಳಿರುವ ಸತ್ಯ ನೋಡೆಂದು ನಿರುತಬೋಧಿಸಿ ಜನನಮರಣವ ತರಿದು ಎನ್ನನೆ ಯಜಿಸು ಯೆನುತಲಿ- ಹರಸಿ ಮೋಕ್ಷವನಿತ್ತ ಆರ್ಯನು 4 ಬಿಟ್ಟು ಸತಿಸುತರೆಲ್ಲರ ಎನ್ನೊಳುಮನವ ನಿಟ್ಟುನಂಬಿದಭಕ್ತರ ಬಿಟ್ಟುಕೊಡೆನಾನೆಂದು ಹೃದಯಾ- ಧಿಷ್ಟಿತನು ತಾನಾಗಿ ಅಭಯವ ಇಷ್ಟಶ್ರೀಗುರುರಂಗನೀಕ್ಷಿಸಿ 5
--------------
ರಂಗದಾಸರು
ಸೇವಿಸುವ ಬನ್ನಿರೋ ಭಾವಿಕರೆಲ್ಲ ಸವಿಸುಖವಾದ ಸದ್ಗುರುವಿನ ಸೊಲ್ಲ ಧ್ರುವ ತುಂಬಿ ಬಡಿಸ್ಯದ ಕೊಂಬವರಿಗೆ ಸಂಭ್ರಮವಾಗ್ಯದ 1 ಅರ್ತವರಿಗ್ಯದ ಅರ್ಥಿ ತಾನಾಗ್ಯದ ಕರ್ತು ಸದ್ಗುರು ಕೃಪೆ ಪಡೆದವಗದ 2 ಸವಿಸವಿದುಂಬುವ ಭಾವಿಸಿಕೊಂಬುವಆವಾಗ ಮಹಿಪತಿಸ್ವಾಮಿ ನೆನೆವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸೋಬಾನವೆನ್ನಿರೆ ಶ್ರೀದೇವಿ ಅರಸಗೆ ನಾಭಿಯಲೆ ಅಜನ ಪಡೆದವಗೆ ಪ. ಬರಿಯ ಮಾಣಿಕದ ಹಸೆಗೆ ಕಿರಿಯ ಚನ್ನಿಗ ಬಾರೊಸರಿಯವರು ನೋಡಿ ನಗುವಂತೆ ಸರಿಯವರು ನೋಡಿ ನಗುವಂತೆ ಎನುತಲೆ ದೊರೆಗಳು ನುಡಿದು ಕರೆದರು1 ಮುತ್ತು ಮಾಣಿಕದ ಹಸೆಗೆ ಭಕ್ತವತ್ಸಲ ಬಾರೋಹತ್ತು ದಿಕ್ಕುಗಳ ಬೆಳಗುತ ಹತ್ತು ದಿಕ್ಕುಗಳ ಬೆಳಗುತ ಎನುತಲಿಮಿತ್ರಿ ಸುಭದ್ರಾ ಕರೆದಳು2 ಚದುರ ರಾಮೇಶನ ಮುದಿಮಾರಿವನಿತೆಯರು ಬದಿಯಲಿ ಬನ್ನಿ ಹಸೆಮ್ಯಾಲೆ ಬದಿಯಲಿ ಬನ್ನಿ ಹಸೆಮ್ಯಾಲೆ ಎನುತಲಿ ಸುದತೆÉ ಸುಭದ್ರಾ ಕರೆದಳು3
--------------
ಗಲಗಲಿಅವ್ವನವರು
ಸ್ವಾಮಿಯ ನೋಡುವ ಬನ್ನಿ ನಮ್ಮ ಸುಪ್ರೇಮೀಯ ನೋಡುವ ಬನ್ನಿ ಪ ಎಂಟು ಮೈಯವನಂತೆ ಎಸೆವೈದು ಮುಖವಂತೆ ಯರ್ದಾಂಗಿಯ ಪಡೆದಿಹನಂತೆ ಅಂತ ಸ್ವಾಮಿಯ ನೋಡುವ ಬನ್ನಿ 1 ಮಾಧವನೆ ಶರವಂತೆ ಭೂಧರನೆ ಧನುವಂತೆ ಭೂಮೀಯೇ ರಥವಂತೆ ಸೊಮ ಸೂರ್ಯರೇ ಗಾಲಿಗಳಂತೆ ಅಂತ ಸ್ವಾಮಿಯ ನೋಡುವ ಬನ್ನಿ 2 ವಾಜಿ ವೇದಗಳಂತೆ ಒದನೊದಗಿ ಬಹವಂತೆ ಅಮೃತ ಶರಧಿಯ ಅಲ್ಲಿ ಬತ್ತಳಕೆಯಂತೆ ಅಂತ ಸ್ವಾಮಿಯ ನೋಡುವ ಬನ್ನಿ 3 ಹರಿಯವರ ಶರವಂತೆ ಅಜನು ಸಾರಧಿಯಂತೆ ದುರುಳ ತಾರಕ ಸುತರ ಪುರವ ಮುರಿದಿಹನಂತೆ ಅಂತ ಸ್ವಾಮಿಯ ನೋಡುವ ಬನ್ನಿ 4 ಇದುವೆ ಭೂ ಕೈಲಾಸವೆಂದು ತೋಷದಿ ಬಂದು ಸಾಕಾರವಾಗಿಲ್ಲ ನೆಲಸಿಹರಂತೆ ಮುದದಿ ಲೋಕಗಳೆಲ್ಲ ಕೈವಶವಂತೆ ಅಂತಸ್ವಾಮಿಯ ನೋಡುವಬನ್ನಿ 5
--------------
ಕವಿ ಪರಮದೇವದಾಸರು
ಹಣ್ಣು ಕೊಂಬುವ ಬನ್ನಿರಿ - ಹರಿದಾಸರುಹಣ್ಣು ಕೊಂಬುವ ಬನ್ನಿರಿ ಪ ಚೆನ್ನ ಬಾಲಕೃಷ್ಣನೆಂಬಕನ್ನೆಗೊನೆ ಬಾಳೆಹಣ್ಣುಅ ಸುರರು ಬಿತ್ತಿದ ಹಣ್ಣುಭಕ್ತರ ಬಾಯೊಳು ನೆನೆವ ಹಣ್ಣುಅರ್ತಿಯುಳ್ಳವರೆಲ್ಲ ಕೊಳ್ಳಿ ಬೇಕಾದರೆನಿತ್ಯ ಮಾಧವನೆಂಬ ಅಚ್ಚ ಮಾವಿನ ಹಣ್ಣು 1 ಅಜನ ಪಡೆದ ಹಣ್ಣು ಗಜವ ಕಾಯ್ದ ಹಣ್ಣುನಿಜಮುನಿಗಳಿಗೆ ತೋರಿಸಿದ ಹಣ್ಣುತ್ರಿಜಗವಂದಿತ ಪಾಲ್ಗಡಲೊಡೆಯನ ಹಣ್ಣುಸುಜನ ಭಕ್ತರೆಲ್ಲ ಕೊಳ್ಳ ಬನ್ನಿರಿ ಹಣ್ಣು 2 ತುರುವ ಕಾಯ್ದ ಹಣ್ಣು ಉರಗನ ತುಳಿದ ಹಣ್ಣುಕರೆದರೆ ಕಂಬದೊಳು ಓಯೆಂಬ ಹಣ್ಣುಮರುಗುವ ಧ್ರುವನಿಗೆ ಪಟ್ಟಗಟ್ಟಿದ ಹಣ್ಣುಕರುಣಾಳು ಕಾಗಿನೆಲೆಯಾದಿಕೇಶವ ಹಣ್ಣು 3
--------------
ಕನಕದಾಸ
ಹರಿ ಹರಿ ಎನ್ನಿ ಸಿರಿಲೋಲ ಎನ್ನಿ ಧ್ರುವ ಹರಿ ಹರಿ ಎನ್ನಿ ಹರಿ ಹರಿ ಎನ್ನಿ ಹರಿ ಎಂದು ಮನದೊಳು ಸ್ಮರಿಸುವ ಬನ್ನಿ 1 ಹರಿ ಎಂದು ಪಡೆದ ಪ್ರಹ್ಲಾದ ಪ್ರತ್ಯಕ್ಷ ಹರಿ ಎಂದು ಪಾಂಡವರಿಗಾದ ಸುಪಕ್ಷ 2 ಹರಿ ಎಂದು ಉಪಮನ್ಯು ಪಡೆದ ಸುಕಾಲ ಹರಿ ಎಂದು ಧ್ರುವ ಏರಿದ ಅಢÀಳ 3 ಹರಿ ಎಂದು ಮುನಿಜನರಾದರು ಧನ್ಯ ಹರಿ ಎಂದವರಿಗೆ ಸರ್ವವು ಮಾನ್ಯ 4 ಹರಿ ಹರಿ ಎಂದು ಕೊಂಡಾಡುವ ಬನ್ನಿ ಹರಿ ಮಹಿಪತಿ ಗುರು ತಾಯಿ ತಂದ್ಯೆನ್ನಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
(ಒರಳುಕಲ್ಲು ಪೂಜೆಯ ಪದ)ಜಯ ಹನುಮಂತ ಭೀಮ | ಜಯ ಸರ್ವಜ್ಞಾಚಾರ್ಯ |ಜಯ ಭಾರತೀಶಾ ನಿರ್ದೋಷಾ || ನಿರ್ದೋಷ ಶ್ರೀ ವ್ಯಾಸಲಯನೆ ನಿನ್ನಂಘ್ರೀಗೆರಗೂವೆ | ಸುವ್ವಿ ಸುವ್ವೀ ಸುವ್ವಾಲಾಲೆ ಪಮುದದಿಂದಾ ಶ್ರೀ ಹರಿಯಾ | ಮದಿವಿ ಹಮ್ಮೀಕೊಂಡು |ಪದುಮಾಕ್ಷಿಯರೆಲ್ಲಾ ಒರಳೀಗೇ || ಒರಳಿಗಕ್ಕಿ ಹಾಕಿಪದ ಪಾಡಿದದನೂ ಬಣ್ಣೀಪೇ1ದೇವಕಿ ಯಶೋದೆ ಶ್ರೀ | ದೇವಭೂತೇ ಕೌಸಲ್ಯ ಸ- |ತ್ಯವತಿ ನೀವೆಂಥ ಧನ್ಯರೇ || ಧನ್ಯಾರೆ ಪಡದು ಶ್ರೀ |ದೇವೇಶಗೆ ಮೊಲಿಯಾ ಕೊಡುವೀರಿ 2ಅಕ್ಷರಳೆ ಪರಮಾತ್ಮನ | ವಕ್ಷ ಸ್ಥಳ ಮಂದಿರೆ |ಲಕ್ಷೂಮಿದೇವಿ ಜಯಶೀಲೆ || ಜಯಶೀಲೆ ಎಮ್ಮನು |ಪೇಕ್ಷಿಸಿದೆ ಕಾಯೇ ವರವೀಯೇ 3ಅಚ್ಛಿನ್ನ ಭಕ್ತರು ನೀವಚ್ಯುತಗೆ ಮುಕ್ತಿಯಾ |ತುಚ್ಛವೆಂಬುವಿರೆ ಸರಸ್ವತೀ || ಸರಸ್ವತಿಭಾರತಿ|ನಿಶ್ಚೈಸಿ ಒರಳೀಗೊದಗೀರೆ 4ಅಕ್ಕಿ ಥಳಿಸಲಿ ಬಾರೆ | ಅಕ್ಕ ಸೌಪರಣಿ ಶ್ರೀ |ರಕ್ಕಸಾ ವೈರೀ ಮದುವೀಗೇ || ಮದುವೀಗೆವಾರುಣಿತಕ್ಕೊಳ್ಳೆ ಕೈಲಿ ಒನಕೀಯಾ 5ಕೂಸಾಗಿ ಇದ್ದಾಗ ಆ ಶಿವನೆ ಬರಲೆಂದು |ಪೋಷಿಸಿದೆ ದೇಹಾ ತಪಸೀದೆ || ತಪಸೀದೆ ಪಾರ್ವತಿನೀ ಶೀಘ್ರ ಬಾರೇ ಒರಳೀಗೆ6ಇಂದ್ರ ಕಾಮನಸತಿಯಾರಿಂದು ಬನ್ನಿರಿ ನಮ್ಮ |ಮಂದರೋದ್ಧರನಾ ಮದಿವೀಗೇ || ಮದುವೀಗೆ ಒರಳಕ್ಕಿ |ಛಂದದಿಂದಲಿ ಪಾಡಿ ಥಳಿಸೀರೇ 7ಶತರೂಪಿ ನೀ ಪ್ರೀಯ ವ್ರತ ಮೊದಲಾದವರನ್ನ |ಪತಿಯಿಂದ ಪಡದೂ ಅವನೀಯಾ || ಅವನೀಯ ಪಾಲಿಸಿದಪತಿವ್ರತೀ ಒನಕೀ ಕೈಕೊಳ್ಳೇ8ದೇವರಂಗನಿಯರಿಗೆ ಸಾವಧಾನದಿ ಜ್ಞಾನ |ನೀ ವರದೇ ಎಂಥಾ ಗುಣವಂತೇ || ಗುಣವಂತೆ ಕರುಣಾಳೆಪ್ರಾವಹೀ ಪಿಡಿಯೇ ಒನಕೀಯಾ 9ಅರುವತ್ತು ಮಕ್ಕಳನಾ ಹರುಷದಿಂದಲಿ ಪಡದು |ವರನೋಡಿ ಕೊಟ್ಟೀ ಪ್ರಸೂತೀ || ಪ್ರಸೂತಿ ನೀನುಹಂದರದ ಮನಿಯೊಳೂ ಇರಬೇಕೂ 10ಗಂಗಾದೇವಿ ಯಂಥ ಇಂಗಿತಜÕಳೆ ನೀನು |ಹಿಂಗಿಸಿದೆ ವಸುಗಳಪವಾದಾ || ಅಪವಾದ ತ್ರಯ ಜಗ-ನ್ಮಂಗಳೇ ಪಿಡಿಯೇ ಒನಕೀಯಾ 11ಅನಿರುದ್ಧಾಶ್ವಿನಿ ಚಂದ್ರ ಇನಕಾಲಾ ಸುರಗುರು |ವನತಿಯರೆ ಉಳಿದಾ ನವಕೋಟೀ || ನವಕೋಟಿ ಸುರರಮಾನಿನಿಯೇರು ಬಂದೂ ಥಳಿಸೀರೇ 12ಅನ್ಯರನ ಪಾಡಿದರೆಬನ್ನಬಡಿಸುವ ಯಮನು |ವನ್ನಜಾಂಬಕನಾಶುಭನಾಮಾ || ಶುಭನಾಮ ಪಾಡಿದರೆಧನ್ಯರಿವರೆಂದೂ ಪೊಗಳೂವಾ13ಈ ವ್ಯಾಳ್ಯದಲಿ ನೋಡಿ ನಾವು ಥಳಿಸೀದಕ್ಕಿ |ಪಾಪನ್ನವಾಗೀ ತ್ವರದಿಂದಾ || ತ್ವರದಿಂದ ನಮ್ಮ ಶ್ರೀಗೋವಿಂದನ ಶಾಸೀಗೊದಗಲೀ 14ಹೆಚ್ಚಿನಂಬರ ಉಟ್ಟು ಅಚ್ಚಿನ ಕುಪ್ಪುಸ ತೊಟ್ಟು |ಪಚ್ಚಾದಿ ರತ್ನಾಭರಣಿಟ್ಟೂ || ಇಟ್ಟು ಸುಸ್ವರಗೈದುಅಚ್ಯುತನ ಪಾಡೋರಿನಿತೆಂದೂ 15ಲಕ್ಕೂಮಿ ಪತಿಯಾಗಿ ಬಹು ಮಕ್ಕಳನ ಪಡದಿದ್ದಿ |ಇಕ್ಕೊಳ್ಳಿ ಈಗಾ ಮದುವ್ಯಾಕೇ || ಯಾಕೊನತರಾನಂದಉಕ್ಕೀಸುವದಕೆ ರಚಿಸೀದ್ಯಾ16ಎಂಂದಾಗೆದೊ ಶ್ರೀ ಮುಕುಂದ ನಿನ್ನಾ ಮದುವಿ |ಹಿಂದಿನಾ ಬ್ರಹ್ಮರರಿತಿಲ್ಲಾ || ರರಿತಿಲ್ಲಅವಿಯೋಗಿಎಂದು ಕರಸುವಳು ಶೃತಿಯೋಳೂ 17ಶೀಲಿ ಸುಂದರಿ ನಿನ್ನ ಆಳಾಗಿ ಇರುವಳು |ಶ್ರೀ ಲಕ್ಷ್ಮೀ ನೀನು ಸ್ವರಮಣಾ || ಸ್ವರಮಣನಾಗೆವಳಮ್ಯಾಲೆ ಮದುಪ್ಯಾಕೊ ಭಗವಂತಾ18ಆರು ಮಹಿಷಿಯರು ಹದಿನಾರು ಸಾವಿರ ಮ್ಯಾಲೆ |ನೂರು ನಾರಿಯರೂ ಬಹುಕಾಲಾ || ಬಹುಕಾಲ ಬಯಸಿದ್ದುಪೂರೈಸಿ ಕೊಟ್ಯೋ ದಯಸಿಂಧು 19ವೇದನೆಂಥಾ ಪುತ್ರ ವೇದನಂತಾ ಬಲ್ಲ |ವೋದುವಾ ನಿರುತಾ ನಿನ ಪೌತ್ರಾ || ಪೌತ್ರೌ ನಿಮ್ಮಣ್ಣ ಸ್ವ-ರ್ಗಾಧಿಪತಿ ಎಂದೂ ಕರಸೂವ 20ಜಗವ ಪಾವನ ಮಾಳ್ಪ ಮಗಳೆಂಥ ಗುಣವಂತಿ |ಅಗಣಿತಜ್ಞಾನವಂತಾರೊ || ಜ್ಞಾನವಂತರೊ ನಿನ್ನಯುಗಳಸೊಸಿಯರೂ ಪರಮಾತ್ಮಾ21ಈ ವಸುಧಿಯೊಳಗೆಲ್ಲಾ ಆವಶುಭಕಾರ್ಯಕ್ಕೂ |ದೇವೇಶ ನಿನ್ನಾ ಸ್ಮರಿಸೋರೋ || ಸ್ಮರಿಸುವರೊ ನಿನ ಮದುವಿ-ಗಾಂವೀಗ ನಿನ್ನೇ ನೆನೆವೇವೊ 22ಅಕ್ಲೇಶಾ ಅಸಮಂಧಾ ಶುಕ್ಲಶೋಣಿತದೂರಾ |ಹಕ್ಲಾಸುರಾರೀ ದುರಿತಾರೀ || ದುರಿತಾರಿ ಅಸಮ ನಿ-ನ್ನೊಕ್ಲಾದವರಗಲೀ ಇರಲಾರೀ 23ವೇದವೆಂಬದು ಬಿಟ್ಟು ಭೂ ದಿವಿಜಾರಮರಾರು |ಮಾಧವನ ಗುಣವಾ ಪೊಗಳೂವಾ || ಪೊಗಳುವಾ ಸುಸ್ವರವಾಶೋಧಿಸೀ ಕೇಳೂತಿರುವಾರೂ 24ಕಾಮಾದಿಗಳ ಬಿಟ್ಟು ಸೋಮಪರ ರಾಣಿಯರು |ಸ್ವಾಮಿಯ ವಿವಾಹಾ ನಾಳೆಂದೂ || ನಾಳೆಂದರಿಷಿಣದಕ್ಕೀಹೇಮಾಧರಿವಾಣಕ್ಕಿರಿಸೋರೂ25ಜಯ ಮತ್ಸ್ಯಾ ಕೂರ್ಮಾಕಿಟಿಜಯ ನರಸಿಂಹಾ ಋಷಿಜ |ಜಯ ರಾಮಕೃಷ್ಣಾ ಶ್ರೀ ಬುದ್ಧಾ || ಶ್ರೀಬುದ್ಧಕಲ್ಕಿ ಜಯಜಯ ದತ್ತಾತ್ರಯಶುಭಕಾಯಾ 26ಆನಂದಾದಿಂದಾ ಸುರ ಮಾನಿನಿಯಾರಾಡೀದ |ಈ ನುಡಿಯಾ ಪಾಡೀದವರೀಗೆ || ಅವರಿಗಿಹಪರದಲ್ಲಿಪ್ರಾಣೇಶ ವಿಠಲಾ ಒಲಿವೋನೂ 27
--------------
ಪ್ರಾಣೇಶದಾಸರು
ಎಷ್ಟು ಸುಖಿಗಳೊ ಗೋವು ಗೊಲ್ಲತಿ ಗೋಪರು ಶ್ರೀಕೃಷ್ಣನೊಡನೆ ಹಗಲಿರುಳು ಕ್ರೀಡೆಯಲಿ ಕಾಲವ ಕಳೆವರು ಪ.ಕೋಹೋ ಕೋಹೋ ತೃವ್ವೆ ತೃವ್ವೆ ಅಂಬೆ ಅಂಬೆ ಬಾರೆ ಎಂದುಮೋಹದಿಂದ ಕರೆಸಿಕೊಂಡು ಓಡಿ ಓಡಿ ಬಂದುಶ್ರೀಹರಿಯ ಹೆಗಲ ಮೇಲೆ ಗಳಗಳಿಟ್ಟುಕದಪುಕಂಠಲೇಹಿಸಿ ಮೊಗದಿರುದಿರುಹಿ ಸಿರಿನಖದಿಂ ತುರಿಸಿಕೊಂಬರು 1ತುಡುಗನೆಂದು ತುಡುವಿಡಿದು ಅಡಿಗಡಿಗೆ ಅಪ್ಪಿ ಚುಂಬಿಸಿಪಿಡಿಪಿಡಿದು ಗೋಪಿಯಡಿಗೆ ಒಪ್ಪಿಸಿ ಒಪ್ಪಿಸಿಮಡದೆರೆಲ್ಲ ಮಧುವೈರಿಯ ಸಂಗ ಸೊಬಗಿಲೋಲಾಡುತಲಿಒಡನೊಡನೆ ಗೋಪಾಲ ಮೂರುತಿಯ ಕಣ್ಣುಮನದಲಿಟ್ಟು ಸುಖಿಪರು 2ಸಣ್ಣವರಾಡಲೊಲ್ಲೆನೆನಲು ಗದ್ದವಿಡಿದು ಮುದ್ದಿಸಿ ನಮ್ಮಣ್ಣ ತಮ್ಮಗಳಿರಾ ಗೆಳೆಯರಿರಾ ಬನ್ನಿರೆಂದುಅಣ್ಣೆಕಲ್ಲೊಡ್ಡಿ ಗಜಗವಾಡಿ ಸೋಲಿಸಿಕೊಂಡಳುವಚಿಣ್ಣರ ಮನ್ನಿಪ ಪ್ರಸನ್ವೆಂಕಟೇಶನ ಉಣ್ಣುವೆಂಜಲಸೆಳೆದುಂಬುವರು 3
--------------
ಪ್ರಸನ್ನವೆಂಕಟದಾಸರು