ಒಟ್ಟು 221 ಕಡೆಗಳಲ್ಲಿ , 57 ದಾಸರು , 218 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂದಾ ಸುಂದರವದನ ಮಂದಹಾಸದಿ ರಘು ನಂದನ ಧನು ಬಳಿಗೆ ಪ ವಂದಿಸಿ ಕೌಶಿಕಗೆ ತಂದೆಯ ನೆನೆದು ಆ ನಂದ ಮನದಲಿ ಮುಂದೆ ಮುಂದಕೆ ನಡೆದು ಚಂದದಿ ಬರುತಿಹ ಅಂದನೋಡಿ ಮುನಿ ವೃಂದ ಮನದೊಳಾನಂದವ ಪೊಂದುತ ಇಂದಿರೇಶನಿವನೆಂದು ತಿಳಿದು ಭೂ ನಂದನೆ ಇವನವಳೆವಂದು ಪೇಳುತಿರೆ ಅ.ಪ. ಸಿಂಧುಶಯನ ಭಜಕ ಮಂದಾರ ಮುನಿಜನ ವೃಂದ ಕುಮುದ ಚಂದ್ರ ಮಂದಜಾಸನ ವಂದ್ಯ ಸಿಂಧುಸುತಾಲೋಲ ಸಿಂಧೂರ ಪರಿಪಾಲ ಸಿಂಧೂರ ಗಮನದಿ ಸಿಂಧೂ ಗಂಭೀರ ಬರೆ ಇಂದುವದನೆಯರು ಚಂದವ ನೋಡುತ ಇಂದೀವಗೇ ಜಯವೆಂದು ನುಡಿಯುತಿರೆ ಇಂದುಧರನ ಧನು ಬಂಧನ ಮಾಡಲು ಇಂದಿರೇಶ ಶ್ರೀ ಕರಿಗಿರಿ ಮಂದಿರ 1
--------------
ವರಾವಾಣಿರಾಮರಾಯದಾಸರು
ಬಲು ಬಲು ಬೆರಗಾದ ಬಲರಾಮನು ನೋಡಿ ಹಲವು ಚಿತ್ರದ ದ್ವಾರ ವೀರ ಪ. ಕುಂದ ಮಂದಾರವು ಸುಂದರ ಉದ್ಯಾನ ಅಂದವಾಗಿ ಬೆಳೆದ ತುಳಸಿಯ ಅಂದವಾಗಿ ಬೆಳೆದ ವೃಂದಾವನ ಚಂದ ತೋರುವುದೊ ಜನಕೆಲ್ಲ1 ಕಾರಂಜಿ ಜ¯ ಹಾರಿವೆ ಗಗನಕ್ಕೆ ನೀರೆ ವರ್ಣಿಸಲು ವಶವಲ್ಲನೀರೆ ವರ್ಣಿಸಲು ವಶವಲ್ಲ ಕಲ್ಪತರು ವೀರ ಪಾಂಡವರ ವನವಿದು2 ಹಸಿರು ಪಚ್ಚದ ಕಲ್ಲು ಕುಸುರಾದ ಗಿಳಿಬೋದ ಎಸೆವೊ ಮಾಣಿಕದ ಚೌಕಟ್ಟುಎಸೆವೊ ಮಾಣಿಕದ ಕಳಸಗಳು ದೆಸೆಗೆಲ್ಲ ಬೆಳಕು ಎಸೆವೋದು 3 ಮೇಲಾದ ದ್ವಾರಕ್ಕೆ ಮ್ಯಾಲೆ ಕನ್ನಡಿಗಳು ಸಾಲು ಕಿಡಕಿಗಳು ಧ್ವಜಗಳುಸಾಲು ಕಿಡಕಿಗಳು ಒಳಗಿದ್ದಬಾಲೆರಿನೆÀ್ನಂಥ ಚಲುವರು 4 ಮುತ್ತು ಮಾಣಿಕ್ಯ ರತ್ನತೆತ್ತಿಸಿದ ಅರಮನೆಗಳುಜತ್ತು ತೋರುವ ಜನಕೆಲ್ಲಜತ್ತು ತೋರುವ ಜನಕೆಲ್ಲ ಒಳಗಿದ್ದಮಿತ್ರೇರಿನ್ನೆಂಥ ಚಲುವರು 5 ಬರಿಯ ಮಾಣಿಕದ ಗೋಡೆ ಸರಿಯಾದ ಕನ್ನಡಿಪರಿಪರಿ ರತ್ನ ಹೊಳವೋವೆಪರಿಪರಿ ರತ್ನ ಹೊಳೆವವು ಒಳಗಿದ್ದದೊರೆಗಳಿನ್ನೆಂಥ ಚಲುವರು6 ವೀರರ ಮನೆ ಮುಂದೆ ಧೀರ ರಾಮೇಶ ಇಳಿದ ನಾರಿಯರ ಸಹಿತ ಹರುಷದಿ ನಾರಿಯರ ಸಹಿತ ಹರುಷದಿ ಹೇಳಲುತೀವ್ರ ಒಬ್ಬಳನ ಕಳಿಸೆಂದ7
--------------
ಗಲಗಲಿಅವ್ವನವರು
ಬಾಗಿ ಬೇಡುವೆ ಪಿಡಿಯೊ ಬೇಗ ಕೈಯಾ ಭಾಗವತ ಜನಪ್ರೀಯ ಭಾಗಣ್ಣದಾಸಾರ್ಯ ಪ ದ್ವಿಜ ಕುಲಾಬ್ಧಿಗೆ ಪೂರ್ಣ | ದ್ವಿಜರಾಜನೆಂದೆನಿಪ ವಿಜಯವಿಠಲದಾಸರೊಲುಮೆ ಪಾತ್ರ || ನಿಜಮನದಿ ನಿತ್ಯದಲಿ | ಭುಜಗಶಯನನಪಾದ ಭಜಿಪ ಭಾಗ್ಯದಿನಲಿವ | ಸುಜನರೊಳಿಡು ಎಂದು 1 ನೀನೇವೆ ಗತಿಯೆಂದ | ದೀನರಿಗೆ ನಾನೆಂಬ ಹೀನಮತಿ ಕಳೆದು ಪವಮಾನ ಪಿತನ | ಧ್ಯಾನಗೈಯ್ಯುವ ದಿವ್ಯ ಜ್ಞಾನ ಮಾರ್ಗವ ತೋರಿ | ಸಾನುರಾಗದಿ ಪೊರೆವ | ದಾನಿ ದಯಾವಾರಿಧಿಯೆ 2 ಮಂದಜನ ಸಂದೋಹ | ಮಂದಾರ ತರುವಿಜಿತ || ಕಂದರ್ಪ ಕಾರುಣ್ಯಸಿಂಧು ಬಂಧೋ || ಕಂದನಂದರಿದೆನ್ನ | ಕುಂದು ಎಣಿಸದೆ ಹೃದಯ ಮಂದಿರದಿ ಶ್ರೀ ಶಾಮಸುಂದರನ ತೋರೆಂದು 3
--------------
ಶಾಮಸುಂದರ ವಿಠಲ
ಬಾರಯ್ಯ ಬಾ ಬಾ ಯದುಕುಲರಾಯ | ಹೇ ಭಾಗವತಪ್ರಿಯ ಪ ಸಾರಸಾಕ್ಷ ಕರುಣಾರಸಪೂರಿತ ಮಾರಜನಕ ಭವತಾರಕ ಮುರಹರ ಅ.ಪ. ಬೃಂದಾರಕ ಬೃಂದ ಸುವಂದಿತ ಚರಣ | ಭುಜಗೇಂದ್ರಶಯನ ವಿಹಗೇಂದ್ರಗಮನ ಮಂದಹಾಸ ಬಲುಸುಂದರವದನಾ | ಶುಭಗಣಪೂರ್ಣ ಮಂದರಧರ ಗೋವಿಂದ ಭಜಕ ಜನ ಮಂದಾರನೆ ಮುಚುಕುಂದವರದ ರಾ ಕೇಂದುಕುಲಜಲಧಿ ಚಂದಮನೆನಿಸುವ ಇಂದಿರೆಯರಸ ಶ್ರೀ ಕರಿಗಿರೀಶನೇ 1
--------------
ವರಾವಾಣಿರಾಮರಾಯದಾಸರು
ಬಾರೊ ನೀಯನ್ನಮನಿಗೆ ಗೋಪಾಲಕೃಷ್ಣ ಪ ಅಂದದಿ ಚಂದದಿ ಆಡುತ ಪಾಡುತ ಧಿ ಮಿಧಿಮಿಯನ್ನುತ ದಿನ ದಿನ ಕುಣಿಯುತ 1 ಅಂದುಗೆ ಗೆಜ್ಜೆಗಳಿಂದ ಶೋಭಿತನಾಗಿ ಮಂದಾರ ಕೂಡಿಕೊಂಡು ಗಜಗು ಭೊಗರಿಯಾಡುತ 2 ಬಾಲಕನಾಗಿ ನೀ ಲೀಲೆಯ ತೋರುತ ಲಾಲಿಯ ನಾಡುವ ಬಾಲಕರ ಕೂಡ 3 ಕುಡಿಯಲು ನಿನಗೆ ಕೊಡುವೆನು ನೊರೆಹಾಲ ಹುಡುಗರ ಕೂಡಿಕೊಂಡು ಶಿಡಿಗುಡಿನಾಡುತ 4 ಪತಿ ಹೆನ್ನೆ ವಿಠಲ 5
--------------
ಹೆನ್ನೆರಂಗದಾಸರು
ಬೃಂದಾವನಾನಂದ ಬಾ | ಬೃಂದಾರಕಾನಂದ ಬಾ ಪ ಮಂದಾಕಿನೀಪಾದ ಗೋಪೀಜನಾನಂದ ನಂದಾತ್ಮ ಗೋವಿಂದ ಬಾ ಅ.ಪ ನಂದನ ವನದಲ್ಲಿ ಬೆಳೆದ ಮಂದಾರಾ ಸುಂದರಿಯ ತಲೆಯ ಜಡೆಯ ಬಂಗಾರ ಮಂದಮಾರುತನಿಂದ ನಲಿವು ಶೃಂಗಾರ ಸಾರ 1 ಕತ್ತಲೆಯಲಿ ಹೊಳೆವ ರನ್ನದ ದೀಪ ಮತ್ತಗಾಮಿನಿಯರ ಸರಸ ಸಲ್ಲಾಪ ಎತ್ತೆತ್ತ ಸಡಗರ ಸೊಗದ ಪ್ರತಾಪ ತಾಪ 2 ಗೋಪಾಲ ಘನಲೀಲ ಬಾ ಮುರಹರ ತಾಪತ್ರಯಕಾಲ ಬಾ ಪರಂಧಾಮ ದಿತಿಸುತಭೀಮಾ ಆಪತ್ಸಖಾ ಭಕ್ತಪಾಲಾ ಮಾಂಗಿರಿನಾಥ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಭಕ್ತ ಪ್ರಹ್ಲಾದಗೆ ಆರುತಿ ಮಾಡುವೆನಾ ಪ ಆರುತಿ ಮಾಡುವೆ ನಾರಿಯ ಗರ್ಭದಿ ನಾರದ ಮುನಿಯಿಂದ ನಾರವ ಪಡೆದಗೆ ಅ.ಪ ಶಾಲೆಯೊಳಗೆ ದೈತ್ಯ ಬಾಲಕರಿಗೆ ಸಿರಿ ಲÉೂೀಲನೆ ಪರನೆಂದು ಪೇಳಿದ ಬಾಲಕಗೆ 1 ನಂದತೀರ್ಥರ ಮತಸಿಂಧುವಿಗೆ ಪೂರ್ಣ ಚಂದ್ರನೆಂದೆನಿಸಿದ ಚಂದ್ರಿಕಾರ್ಯರಿಗೆ 2 ವಂದಾರು ಜನರಿಗೆ ಮಂದಾರನೆನಿಸಿದ ನಂದದಾಯಕ ಸುಧೀಂದ್ರಕುಮಾರಗೆ 3 ವೃಂದಾವನದೊಳಗೆ ನಿಂದು ಶೇವಕಜನ ವೃಂದಾಪಾಲಕ ರಾಘವೇಂದ್ರಯತೀಂದ್ರಗೆ 4 ಧರೆಯೊಳು ಶರಣರ ಪೊರೆವ ಕಾರ್ಪರ ನರಹರಿ ಯ ನೊಲಿಸಿದಂಥ ಪರಿಮಳಾಚಾರ್ಯರಿಗೆ5
--------------
ಕಾರ್ಪರ ನರಹರಿದಾಸರು
ಭಕ್ತ ಮಂದಾರಿಣಿ ಭವಭಯನಿವಾರಿಣಿ ಭಕ್ತಿಮುಕ್ತಿ ಪ್ರದಾಯಿನಿ ತ್ರಿಭುವನೈಕ ಜನನಿ ಪ. ಭುವನತ್ರಯಮೋಹಿನಿ ಭಾನುಕೋಟಿಪ್ರಕಾಶಿನಿ ಭೂರಿಭೂಭುಜ ಸೌಭಾಗ್ಯದಾಯಿನಿ ಪಾಹಿಮಾಂ ಜನನಿ ಅ.ಪ. ಸಾಮಜಾಧಿಪಗಾಮಿನಿ ಕಾಮಿತಾರ್ಥಪ್ರದಾಯಿನಿ ರಾಮಣೀಯ ಸ್ವರೂಪಿಣಿ ಕಾಮಜನನಿ ಕಲುಷವಿಭಂಜಿನಿ 1 ಕನಕವಸನೆ ಕವಿಮನೊಲ್ಲಾಸಿನಿ ಸುಮನಸವರ ಪರಿತೋಷಿಣಿ ಕೋಮಲತರ ಕೋಕಿಲ ಮೃದುಭಾಷಿಣಿ 2 ಕಮಲ ಬಾಂಧವ ವಂಶ ಸಂಭವ ರಾಮಚಂದ್ರ ಸುಪ್ರೇಮಾಕಾಂಕ್ಷಿಣಿ 3 ವನಜ ಸಂಭವ ಸನ್ನುತೆ ಕನಕಭೂಷಣ ಭೂಷಿತೆ ಅನಿಲನಂದನ ಸೇವಿತೇ ಘನಕರುಣಾರಸಾನ್ವಿತೇ 4 ಅನಘ ಸದ್ಗುಣಭೂಷಿತೆ ಅನಿಮಿಷಾಧಿಪ ಪೂಜಿತೆ ಜನಕ ಭೂಪತಿ ಪೋಷಿತೇ ಘನಶೇಷಾದ್ರೀಶ ದಯಿತೆ5
--------------
ನಂಜನಗೂಡು ತಿರುಮಲಾಂಬಾ
ಭಕ್ತಜನ ಪಾಲಕ - ಭಕ್ತಿಸುಖದಾಯಕ ಮುಕ್ತೀಶ ದೀನಬಂಧು ಕೃಷ್ಣ ಪ ಯುಕ್ತಿಯಲಿ ನಿನ್ನಂಥ ದೇವರನು ನಾಕಾಣೆ ಸತ್ಯವತಿ ಸುತÀನೆ ಕಾಯೋ ಕೃಷ್ಣ ಅ.ಪ. ಆನಂದತೀರ್ಥ ಮುನಿಯ ಧ್ಯಾನಿಪರ ಸಂಗ | ಆನಂದದಲಿ ನಿಲಿಸೊ ಕೃಷ್ಣ || ದೀನಜನ ಮಂದಾರ ನೀನೆಂದು ನಂಬಿದೆನೊ | ಸಾನುರಾಗದಲಿ ಕಾಯೋ ಕೃಷ್ಣ 1 ಕೆಟ್ಟ ಜನರ ಸಂಗ ಇಷ್ಟು ದಿನವೂ ಮಾಡಿ | ಭ್ರಷ್ಟನಾಗಿ ಪೋದೆನೋ ಕೃಷ್ಣ || ಬೆಟ್ಟದೊಡೆಯನೆ ನಿನ್ನ ಮುಟ್ಟಿ ಭಜಿಸುವ ಭಾಗ್ಯ | ಇಷ್ಟಗಳ ಎನಗೆ ಕೊಡಿಸೋ ಕೃಷ್ಣ 2 ಅಜಜನಕ ಗಜವರದ ಭುಜಗಶಯನನೆ ನಿನ್ನ | ಭಜಿಪ ಭಾಗ್ಯವನೆ ಕೊಡಿಸೊ ಕೃಷ್ಣ || ನಿಜವಾಗಿ ನಿನ್ಹೊರುತು ಸಲಹುವರ ನಾ ಕಾಣೆ |ವಿಜಯವಿಠ್ಠಲರೇಯ ಕೃಷ್ಣ 3
--------------
ವಿಜಯದಾಸ
ಭಕ್ತವತ್ಸಲನೆಂಬ ಬಿರುದು ನಿನಗಿರಲು ಭಕ್ತಜನಾಪತ್ತಿಗ್ಯಾಕೆ ನೀ ಬರದಿರುವಿ ಪ ಮುಕ್ತಿದಾಯಕನೆಂಬ ಯುಕ್ತ ಬಿರದ್ಹೊತ್ತಿರುವಿ ಚಿತ್ತಜಪಿತ ಭಕ್ತರ್ಹೊತ್ತಿಗ್ಯಾಕಿಲ್ಲೋ ನಿತ್ಯ ಬಿಡದ್ಹೊಗಳುವ ಸತ್ಯ ವೇದೋಕ್ತಿಗಳು ವ್ಯರ್ಥವೇನಯ್ಯಾ 1 ದೋಷನಾಶನೆ ನಿನ್ನ ಸಾಸಿರನಾಮಗಳಿಂ ಘೋಷಿಪರು ಮನುಮುನಿ ಬೇಸರಿಲ್ಲದಲೆ ದಾಸಜನರಾಶಕ್ಕೆ ಬೇಸತ್ತ ಬಳಿಕ ನಿನ ಗೀಸು ಬಿರುದುಗಳಿರ್ದು ಲೇಶವೇನಯ್ಯಾ 2 ಪರಮ ಕರುಣಾಕರ ಶರಣಜನಮಂದಾರ ಚರಣಸ್ಮರಿಪರ ಘೋರದುರಿತಪರಿಹಾರ ಖರೆಯಿರ್ದರಿಗೆನ್ನ ದುರಿತಮಂ ಪರಿಹರಿಸಿ ಕರುಣದಿಂ ರಕ್ಷಿಸೈ ಧರೆಗಧಿಕ ಶ್ರೀರಾಮ 3
--------------
ರಾಮದಾಸರು
ಭಜಿಸಿದ್ಯಾ ಈ ಭಾಗ್ಯನಿಧಿಯಾ ನೋಡು ಸುಜನರ ಹೃದಯ ಪಂ ರಜತಮೋ ದೂರನ್ನ ಪ ಮನ ಸೋಲಿಸುವ ಲಲಾಟ ಫಣಿ ನಮ್ಮನು ನೋಡುವ ವಾರೆ ನೋಟಾ ಹಾಹಾ ಮಕರ ಕುಂಡಲ ಕರ್ಣ ಕದಪು ಆವಿನ ಸೋಲಿಸೆ ನಿತ್ಯಾ 1 ಭೃಂಗ ಕುಂತಳ ಕೇಶಾ ಪುಬ್ಬು ಅಂಗಜ ಚಾಪಾ ವಿಲಾಸ ಉ ತ್ತುಂಗ ಚಂಪಕ ಕೋಶಾ ನಾಸಾರಸಾ ರಂಗುದುಟಿಯ ಮಂದಹಾಸಾ ಹಾಹಾ ತಿಂಗಳ ಎಳೆ ಬೆಳ ದಿಂಗಳಾ ಮೀರೆ ಭೂ ಮಂಗಳಾಕೃತಿ ತಿರುವೆಂಗಳ ಸ್ವಾಮಿಯ 2 ಪರಿಮಳ ವೀಳ್ಯೆ ಕರ್ಪುರಾ ವಿಟ್ಟಾ ಜಲಧಿ ಗಂಭೀರಾ ದಂತ ಪರಿಪಙË್ತ ಸಮ ವಿಸ್ತಾರ ಹಾಹಾ ಮಿರುಗುವಾನಂತ ಚಂ ಚರಿಸುವ ಚತುರನ್ನ 3 ಪನ್ನೇರು ಸಂಪಿಗೆ ಪೊಂಗೇ ಜಾಜಿ ಇರುವಂತಿಗೆ | ಹಾಹಾ | ಮಕರಂದಾ ಮಾರಂದೋದಕ ಸುರಿಯಲಿಂದು4 ನಿಡಿದೋಳು ಕಕುಭುಜಾ ಕೊರಳಾ ಸ್ಕಂಧಾ ಮಣಿ ಹರಳಾ | ಹಾಹಾ| ಒಡನೆ ತಾಯಿತ ಕೀರ್ತಿ ವಡಿವೇಲಿ ಮೆರೆವನ್ನ 5 ಸುರವಿ ಮಯೂಖಾ ಮೇಲು ಧರಿಸಿದ ಚಕ್ರಾದಿ ಶಂಖಾ | ಹಾಹಾ | ಕೌಸ್ತುಭ ಮಣಿ ಸಿರಿವತ್ಸ ವನಮಾಲಾ ಉರವೈಜಯಂತಿ ಮಂದಾರ ಹೀರ ಹಾರನ್ನ6 ಮುತ್ತು ವೈಢೂರ್ಯ ಪ್ರವಳಾ ಪಚ್ಚ್ಚೆ ಕೆತ್ತಿದ ಪದಕ ನ್ಯಾವಳಾ ಸ್ತುತಿಪ ಜನಕೆ ಜೀವಾಳಾ | ಹಾಹಾ | ಪ್ರತ್ಯೇಕವಾಗಿ ತೂಗುತಿಹ ಸರಗಳು ತತ್ತುಲಸಿಧಾಮ ಚಿತ್ರವಾಗಿರೆ ಬಲು 7 ನಖ ಚಂದನಾ ಅಗರಾ ಪಚ್ಚೆ ಘನ ಪರಿಮಳ ಗಂಧ ಸಾರಾ | ಹಾಹಾ | ತನುವಿಗೆ ತನುವು ಲೇಪನವಾದಾ ಸೊಗಸು ವಾ ಸನೆ ಸುತ್ತ ಘಮಘಮ ತನರು ಹಾವಳಿ ತಿಳಿ 8 ತ್ರಿವಳಿ ಉಪಗೂಢ ಜಠರಾ ಅಖಿಳಾವನಿ ಧರಿಸಿದ ಧೀರಾ ನಾಭಿ ಕುಸುಮ ಮೃಗ ದೇವ ಉಡಿ ಉಡದಾರಾ | ಹಾಹಾ | ಭವಕಿಂಕಿಣಿ ತಳಲಾವಿ ವಸನ ಬಿರು ತೊಡರು ದೈತ್ಯಾವಳಿ ಹರನನ್ನಾ 9 ಊರು ಜಾನು ಜಂಘೆ ಗುಲ್ಫಾ ವಿಚಾರಿಸೆ ಕ್ರಮಾತು ಅಲ್ಪಾ ತನ್ನ ಸಂಕಲ್ಪಾ | ಹಾಹಾ| ವಾರಣಾ ಕರದಂತೆ ಹಾರೈಸುಯಿಂತು ನೂ ಚಾರು ಚರಣ ಪೆಂಡೆ10 ನಖ ವಜ್ರಾಂಕುಶ ಚಕ್ರ ಸುಧಿಯಾ ಸುರಿವ ಪೀಠ ಸರಸಾ | ಹಾಹಾ | ತ್ರಿದಶನಾಯಕ ಶಿವ ವಿಧಿಗಳ ಮುಕುಟ ಪಾದದಲಿ ಸಮ್ಮರ್ದವಾದುದು ನೋಡಿ ತರುವಾಯಾ 11 ದಹಿಸುವ ಪಾದಾ ಕಾಮ ಕಾನನ ದಹಿಸುವ ಪಾದಾ | ಹಾಹಾ | ಅನಂತ ದಿನಕ್ಕೊಮ್ಮೆ ನೀನೇ ಗತಿಯೆಂದಾ ಮಾನವಗೆ ಬಂದು ಕಾಣಿಸಿಕೊಂಬನ್ನ12 ಅಪದಕ್ಷ ಸಾರಾಧ್ಯಕ್ಷ ಸರ್ವವ್ಯಾಪಕ ಕರುಣಿಕಟಾಕ್ಷ ಜಾಗ್ರತ್ ಸ್ವಪ್ನದಲ್ಲಿ ಪ್ರಾಜ್ಞಾದಕ್ಷ ನಿಜ ಆಪನ್ನರಿಗೆ ದಾವಾ ವೃಕ್ಷ | ಹಾಹಾ | ರೂಪ ರೂಪಾಂತರ ವ್ಯಾಪಾರ ಮಾಳ್ಪನ್ನ ಆಪಾದ ರತುನ ಮೌಳಿಪರಿಯಂತರಾ13 ಸಂಪಾದಿಸು ಜ್ಞಾನಾ ಭಕ್ತಿ ಕೊಂಡಾಡು ಮುನ್ನಿನಾ | ಹಾಹಾ | ಬಂಧನ ಹರಿಸಿ ಆನಂದವ ಕೊಡುವ ಮು ಕುಂದ ಅನಿಮಿತ್ತ ಬಂಧು ವೆಂಕಟನ್ನ 14 ನಿತ್ಯ ಭಜಿಸುವ ಜನರಿಗೆ ಶೀಲಾ ಪುಣ್ಯ ನಿಜರೊಳಗಿಡುವ ಈ ಕೂಲಾ | ಹಾಹಾ | ವ್ರಜದಲಿ ಪುಟ್ಟಿದಾ ಸುಜನಾಂಬುಧಿ ಸೋಮ ವಿಜಯವಿಠ್ಠಲರೇಯಾ ಗಜರಾಜವರದನ್ನಾ 15
--------------
ವಿಜಯದಾಸ
ಭಾವಿ ಅಜನಂಘ್ರಿಯುಗವ ಭಜಿಸಬಾರದೆ ಪ ಭಜಕ ಮಾನವರ ವೃಜಿನಘನಸಮೀರ ಕುಜನವನಕುಠಾರ ಸುಜನರಿಗೆ ಮಂದಾರನೆಂದು ಭಜಿಸಬಾರದೆಅ.ಪ ಭೂತಳದಿ ಶ್ರೀರಾಮ ದೂತನೆನಿಸಿ ಭಕುತ ವ್ರಾತಕೆ ಸಕಲೇಷ್ಟದಾತನೆಂದು ಪ್ರೀತಿಯಿಂದ 1 ಪುಂಡ ಕೌರವರ ಹಿಂಡುಗೆಲಿದು ರಮೆಯ ಗಂಡನೊಲಿಸಿದ ಮಧ್ಯ ಪಾಂಡವನ ಪದ ಪಂಡರೀಕ 2 ಶ್ರೀನರಸಿಂಹನೆ ಜಗನಿರ್ಮಾಣ ಕಾರಣನೆಂದು ಜ್ಞಾನದಾಯಕ ಮಧ್ವ ಮೌನಿಯೆನಿಸಿದ ಪ್ರಾಣಪತಿಯ 3
--------------
ಕಾರ್ಪರ ನರಹರಿದಾಸರು
ಭೃಗುವಂಶಸಂಭೂತ ಜಗತ್ರಯ ವಿಖ್ಯಾತ ಅಘದೂರ ಪರಶುಧರ ಧೈರ್ಯಸಾರ ಪರಿಹಾರ ಭಕ್ತಜನಮಂದಾರ ಭೂಭುಜತರುಕುಠಾರ ಅನುಸಾರ ರುಚಿಕನಂದನ ಬಾಲ ಶೌಚ ಸತ್ಯಸುಶೀಲ ದ್ವಿಜಸಂಘ ಪರಿಪಾಲ ದಾನಶೀಲ ಸಹಸ್ರಭುಜ ವಿದಾರ ಅಹಿತಜನ ಮದಹರ ವಿಹಿತಪಥ ಸಂಚಾರ ಪಾಹಿಸುಕರ ಕೃಪಾರ್ಣವ ಭಾರ್ಗವ ಸುಪ್ರಭಾವ ಕೋಪಜಿತ ಭೂಪಾಲ ದೇವದೇವ ತಾಪಹರ ಶೇಷಾದ್ರಿ ನಿಲಯ ಸದಯ ಶ್ರೀಪರಂಧಾಮ ಸತ್ಕೀರ್ತಿ ಕಾಮ
--------------
ನಂಜನಗೂಡು ತಿರುಮಲಾಂಬಾ
ಮಂಗಲಂ ಮಂಗಲಂ ಭವತು ತೇ ಮಂಗಲಂ ಪ. ವಿಜ್ಞಾನಶಕ್ತಿ ಪ್ರಕಾಶಗೆ ಈಶಗೆ ಸಜ್ಜನನಿವಹಾರಾದಿತಗೆ ಅಜ್ಞಾನತಿಮಿರಮಾರ್ತಾಂಡ ಪ್ರಚಂಡಗೆ ಮೂಜದೊಡೆಯ ಮನೋಜ್ಞ ಮೂರುತಿಗೆ 1 ಚಂದ್ರಶೇಖರಸುಕುಮಾರಗೆ ಮಾರನ ಸುಂದರರೂಪ ಪ್ರತಾಪನಿಗೆ ನಿಂದಿತ ಖಲಜನವೃಂದವಿದಾರಗೆ ಸ್ಕಂದರಾಜ ಕೃಪಾಸಿಂಧು ಪಾವನಗೆ 2 ತಾರಕದೈತ್ಯಸಂಹಾರಗೆ ಧೀರಗೆ ಶೂರಪದ್ಮಾಸುರನ ಗೆಲಿದವಗೆ ಸೇರಿದ ಭಕ್ತರ ಸುರಮಂದಾರಗೆ ನಾರದಾದಿ ಮುನಿವಾರವಂದಿತಗೆ 3 ವಲ್ಲೀವಲ್ಲಭನಿಗೆ ಒಲಿದರ್ಗೆ ವರದಗೆ ಎಲ್ಲ ಭೂತಾಶ್ರಯ ಬಲ್ಲವಗೆ ಖುಲ್ಲದಾನವರಣಮಲ್ಲ ಮಹೇಶಗೆ ಬಿಲ್ಲುವಿದ್ಯಾಧೀಶ ಭೀಮವಿಕ್ರಮಗೆ 4 ಕಂಜಾಕ್ಷ ಲಕ್ಷ್ಮೀನಾರಾಯಣ ತೇಜಗೆ ಮಂಜುಳಕಾಂತಿ ವಿರಾಜನಿಗೆ ನಂಜುಂಡನ ಕರಪಂಜರಕೀರ ಪಾ- ವಂಜೆ ಕ್ಷೇತ್ರಾದಿವಾಸ ಸುರೇಶನಿಗೆ 5
--------------
ತುಪಾಕಿ ವೆಂಕಟರಮಣಾಚಾರ್ಯ
ಮಂಗಳಂ ನರಶಿಂಗ ಮೂರುತಿಗೆ ಲಕ್ಷ್ಮೀಸಮೇತಗೆ ವಿಹಂಗ ವಾಹನಗೆ ಅಂಗಜನಪಿತಗೆ ಅಂಗುಟದಿ ಗಂಗೆಯನು ಪಡೆದವಗೆ ಮಾ ತಂಗವರದಗೆ ಪ ವಾರಿಜಾಸನ ಮುಖ್ಯಸುರನುತಗೆ ಉ- ದಾರ ಚರಿತಗೆ ಸೇರಿದವರಘದೂರ ಮಾಡುವಗೆ ಕಾರ್ಪರ ಋಷಿಗೆ ಘೋರ ತಪಸಿಗೆ ಒಲಿದು ಬಂದವಗೆ ಅಶ್ವತ್ಥ ರೂಪಗೆ 1 ಕುಕ್ಷಿಯೊಳು ಜಗವಿಟ್ಟು ರಕ್ಷಿಪಗೆ ಕರುಣಾಕ- ಟಾಕ್ಷಗೆ ವಕ್ಷದೊಳು ಶ್ರೀ ವತ್ಸಲಾಂಛನಗೆ ದ್ರೌಪದಿ ದೇವಿಗೆ ಅಕ್ಷಯಾಂಬರವಿತ್ತು ಸಲಹಿದಗೆ ಲಕ್ಷ್ಮೀನೃಸಿಂಹಗೆ 2 ಕೃಷ್ಣವೇಣಿ ತಟವಿರಾಜಿತಗೆ ಸೃಷ್ಟ್ಯಾದಿ ಕರ್ತಗೆ ಶ್ರೇಷ್ಠತರು ಪಿಪ್ಪಲದಿ ಪ್ರಕಟಿತಗೆ ದುಷ್ಟನಿಗ್ರಹಗೆ ದ್ಯಷ್ಟ ಬಾಹುಗಳಿಂದ ಭಜಕರಿಗೆ ಇಷ್ಟಾರ್ಥಗರಿವಗೆ 3 ಹಿಂದೆ ಗೋರೂಪದಲಿ ಬಂದವಗೆ ಬಹುಸುಂದರಾಂಗಗೆ ವಂದಿಸುವೆ ಶೀ ವೇಂಕಟೇಶನಿಗೆ ಮಂದರೋದ್ಧರಗೆ ಭವ ಬಂಧ ಬಿಡಿಸುವಗೆ ಆನಂದವೀವಗೆ 4 ತರುಳ ಪ್ರಹ್ಲಾದನ್ನ ಕಾಯ್ದವಗೆ ಸುರಸಾರ್ವಭೌಮಗೆ ಶರಣು ಜನ ಮಂದಾರನೆನಿಸುವಗೆ ಭೂಸುರರ ಪೊರಿವಗೆ ಧರಣಿಯೊಳು ಕಾರ್ಪರ ಸುಮಂದಿರಗೆ ಶಿರಿನಾರಶಿಂಹಗೆ 5
--------------
ಕಾರ್ಪರ ನರಹರಿದಾಸರು