ಒಟ್ಟು 1352 ಕಡೆಗಳಲ್ಲಿ , 79 ದಾಸರು , 814 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರಿಗಿರಿ ದುರ್ಗ ನಿವಾಸಾ | ದಯಾಪರಿಪೂರ್ಣ ಪೊರೆಯನ್ನ ಅನಿಶ ಪ ಶಿರಿ ಅಜಭವ ವಿಪಗೇಶಾ | ಹೃತ್‍ಸರಸಿಜ ವಾಸ ಲಕ್ಷ್ಮೀಶಾ ಅ.ಪ. ಗಜ ಬಿಸಜ ಕಿಂಜಲ್ಕದ ಯಸಳು ರಜವ ಶಿರಸಿಯೊಳಗೆ ನೀನಿರಿಸೋ 1 ಮೇಶ ಬ್ರಹ್ಮೇಶ ನಾಶವ ಗೈವೆ ಸಶೇಷಶೇಷಶಯ್ಯ ಜೀವಾದ್ಯರ ಪೋಷಾಈ ಸಮಸ್ತ ಜಗ ನಿನ್ನುದರದಿ ವಾಸಾಕೇಶಾಸುರಪಾದೀಶ ಪರೇಶನೆ ವ್ಯಾಸಾಈಶಿತವ್ಯ ತವ ದಾಸರಿಗೆಲ್ಲ ಉಪದೇಶಿಸು ಶಾಸ್ತ್ರ ವಿಶೇಷ ರಹಸ್ಯ ಮಹಿದಾಸ ಕುಶೇಶಯ ವಿಷಯ ವಿಲಾಸದಿಪೋಷಿಸು ಮನ ಮಧ್ವೇಶ ಮಹಾಪ್ರಭೋ 2 ಕರಿವರ ವರ ಶರಣಾಗತ ಪಾಲಾತರಳೆಗಿತ್ತೆ ನವ ನವ ಸೀರೆಯ ಜಾಲಾವರಸ್ತಂಭೋದಿತ ಹರಿಭಕ್ತಿ ಸುಪಾಲಾಗುರು ಗೋವಿಂದ ವಿಠ್ಠಲಾ ಕಾಲಾಸುರಪಾದಿಯ ತನು ವರ ರಥ ರೂಢ ಪು-ರಾರಿ ಭಯಹರ ಮುರಾರಿ ಮಹ ಭವತರಿ ಎನಿಸಿಹ ಸುಖ ತೀರಥ ಸನ್ಮತಧರಿಸಿಹೆ ಕಣ್ಣೆದುರಿಲಿ ನೀ ಕುಣಿಯೋ 3
--------------
ಗುರುಗೋವಿಂದವಿಠಲರು
ಕರಿವರದ ಗೋಪಾಲ ವಿಠಲ ಸಲಹೋ ಪ ತರಳನನು ನಿನ್ನಡಿಗೆ ಒಪ್ಪಿಸಿಹೆ ಹರಿಯೇ ಅ.ಪ. ಸ್ವಾಪದಲಿ ನರಸಿಂಹ ರೂಪದಲಿ ಕರವೆತ್ತಿಶ್ರೀಪತಿಯೆ ಅನುಗ್ರಹಿಸಿ ಕರುಣಿಸಿರುವೇಈ ಪರಿಯ ಮಹಿಮೆಗಳ ನಾ ಪೇಳಲಳವಿಲ್ಲಕೈಪಿಡಿದು ತರಳನ್ನ ಕಾಪಾಡೊ ಹರಿಯೇ 1 ಸಿದ್ಧಾಂತ ಜ್ಞಾನಗಳು ಸಿದ್ಧಿಯಾಗಲಿ ಇವಗೆಮಧ್ವ ಮತ ದೀಕ್ಷೆಯಲಿ ಶುದ್ಧವಾಗಿರಲೀಶುದ್ಧಭಕ್ತಿಯಲಿಂದ ವೃದ್ಧರನು ಸೇವಿಸಲಿಮಧ್ವ ವಲ್ಲಭ ನಿನ್ನ ಪ್ರಾಧ್ಯಾನ ವಿರಲೀ 2 ನಿತ್ಯ ಮಂಗಳದಾ 3 ಪರಿಪರಿಯ ಮಹಿಮೆಗಳ | ತೋರುತಲಿ ಇವನಲ್ಲಿಧರೆಯ ಜನಗಳಿಗೆಲ್ಲ | ತೋರಿ ಕೌತುಕವಾಮೆರೆವ ಸಂಪದವಿತ್ತು | ಮರೆಸಿದೆ ತವಸ್ಮøತಿಯಪೊರೆಯ ಬೇಕೆಂದೆನುತ | ಮೊರೆ ಇಡುವೆ ಹರಿಯೇ 4 ಅಷ್ಟ ಸೌಭಾಗ್ಯಗಳು | ಅಷ್ಟು ಸ್ಥಿರವಲ್ಲೆಂಬಸುಷ್ಠು ಮತಿಯಿಲ್ಲವಗೆ | ನಿಷ್ಠೆ ಇರಲೆಂಬಶೇಷ್ಠ ಭಿನ್ನಪಕೃಷ್ಣ | ದ್ವೈಪಾಯ ನಾತ್ಮಕನೆಕೃಷ್ಣ ಗುರು ಗೋವಿಂದ ವಿಠ್ಠಲನೆ ಸಲಿಸೋ 5
--------------
ಗುರುಗೋವಿಂದವಿಠಲರು
ಕರುಣ ಪಡೆಯಬೇಕು ಮನುಜ ಗುರುಗಳಾ ಪ. ಕರುಣ ಪಡೆಯಿರೊ ಗುರು ಮಧ್ವರಾಯರ ಹರುಷದಿ ಹರಿಯನು ನಿರುತದಿ ಸ್ಮರಿಸುವ ಗುರು ಅ.ಪ. ಸ್ಮರಿಸಿದ ಮಾತ್ರದಿ ಶರಧಿಯ ದಾಟುತ ವರಪ್ರದ ರಾಮನ ತÀರುಣಿಗುಂಗುರವಿತ್ತು ಹರಿ ಕರುಣಾಮೃತವೆರಡು ರಾಮರ ಚರಣ ಸ್ಮರಣೆಯನು ನಿರುತ ಕೊಡುವ ಗುರು 1 ಕಂತುಜನಕನ ಅಂತರವರಿತು ನಿಂತು ಕೌರವ ಕುಲ ಸವರುತಲೆ ಅಂತಕಗಿತ್ತಾ ಕಾಂತೆ ದ್ರೌಪದಿಯ ಪಂಥವ ಸಲಿಶಿದ ಕುಂತಿತನುಜ ಗುರು 2 ಮಧ್ವ ಮುನಿಗಳಾಧ್ವರ ಪಾಲಕ ಮುದ್ದು ಕೃಷ್ಣನ ಹೃದ್ಗಮಲದೊಳಿಟ್ಟ ಅದ್ವೈತಿಗಳ ಸುವಾದಿಸಿ ಗೆದ್ದು ಶುದ್ಧ ಶ್ರೀ ಶ್ರೀನಿವಾಸನ ಭಕ್ತರ ಗುರು 3
--------------
ಸರಸ್ವತಿ ಬಾಯಿ
ಕರುಣಾಮೃತವ ಸಿರದಿ ಸುರಿಯೊ ವರದ ಧನ್ವಂತರಿಯೆ ಚರಣಯುಗಳ ಕಮಲವನ್ನು ಕರುಣಿಸೆನಗೆ ದೊರೆಯೆ ಪ. ಶ್ರವಣ ನಯನ ಚಿತ್ತ ಜಿಹ್ವೆಗನುಕೂಲವಾಗಿರುವ ಲೀಲಾ ಪ್ರವರ ಕಾಂತಿ ಸ್ಮರಣ ನಾಮಗಳನು ಪಾಲಿಸಿ ಭವಜನೀತ ಭ್ರಮಣ ನಿಲಿಸಿ ಕುವರನಂತೆ ರಕ್ಷಿಸೆನ್ನ ಕವಿಭಿರೀಡ್ಯ ಕಂಜಜಾತಶಿವರ ಸೌಖ್ಯಗೊಳಿಸದವನೆ 1 ಕಲಿಕೃತ ಕಲ್ಮಶಗಳಿಂದ ಬಳಲುವಂಥ ಬಾಧೆಯನ್ನು ನಿಲಿಸಿಕೊಳ್ಳಲು ಅನ್ಯಮಾರ್ಗಂಗಳನು ಕಾಣೆನು ನಳಿನನಾಭ ನಿನ್ನ ಪಾದಗಳನೆ ನಂಬಿಕೊಂಡಿರುವೆನು ಬಲಿಯ ಕಾಯ್ವ ಭೂಮಿಜೇಶ ಘಳಿರನೆ ಬಂದೊದಗಿ ಬೇಗ 2 ನಿಖಿಳ ಭೋಗಗಳನನುಭವಿಸುತ ಶ್ರೀಗುರು ಮಧ್ವಾಂತರಾತ್ಮ ನಾಗಗಿರಿನಾಥ ರಾಗ ರೋಗ ದೋಷಗಳನು ನೀಗಿ ನಿನ್ನ ನಂಬಿ ಸ್ತುತಿಪ ಭಾಗವತರ ಭಕ್ತನೆನಿಪ ಭಾಗ್ಯವಿರಿಸೋ ಭೀಮವರದ 3
--------------
ತುಪಾಕಿ ವೆಂಕಟರಮಣಾಚಾರ್ಯ
ಕರುಣಾಸಾಗರ ಬಂದೆಯ ಸುದಿನವಿಂದಾನಂದ ಸಂದೋಹನೆವರ ಸಿಂಹಾಸನವೀವೆ ಮಂಡಿಸು ಪದಾಂಭೋಜಂಗಳಂ ಪಾಲಿಸೈಸುರಸಿಂಧೂದಕದಿಂದ ಮುಟ್ಟಿ ತೊಳೆವೆಂ ಹಸ್ತಂಗಳಂ ನೀಡಬೇಕರವಿಂದಾಕ್ಷನೆ ತೋಯವಘ್ರ್ಯವಿದಕೋ ಶ್ರೀ ವೆಂಕಟಾದ್ರೀಶನೇ 1ಮೂರಾವರ್ತಿಯಲಾಚಮಾನಕಿದಕೋ ಕ್ಷೀರಂ ಜಗನ್ನಾಥನೇಸ್ಮೇರಾಸ್ಯಾಂಘ್ರಿ ಕರಂಗಳನ್ನೊರಸುವೆಂ ದಿವ್ಯಂಬರ ಕ್ಷೌಮದಿಂದಾರಿದ್ರ್ಯಾರ್ತಿನಿವಾರಣಾರ್ಥಕೊಲವಿಂ ಮಧ್ವಾಜ್ಯದಧ್ಯಾದಿುಂಪಾರಾವಾರಶಯನ ನಿನ್ನ ಭಜಿಪೆಂ ಶ್ರೀ ವೆಂಕಟಾದ್ರೀಶನೇ 2ಮಧುಪರ್ಕಂ ಮಧುಸೂದನಂಗೆ ನಿನಗೈ ಮತ್ತಾಚಮನೋದಕಂಬುಧರಿಂ ಪೂಜಿಪ ಪಾದಪದ್ಮಯುಗಳಕ್ಕೀ ಪಾದುಕಾಯುಗ್ಮಮಂವಿಧಿುಂದಿತ್ತೆನು ಮೆಟ್ಟಿ ದೇವ ಬಿಜಯಂಗೈ ಮಜ್ಜನಸ್ಥಾನಕಂಸುಧೆಯಂ ನಿರ್ಜರರಿಂಗೆ ಕೊಟ್ಟ ವಿಭುವೇ ಶ್ರೀ ವೆಂಕಟಾದ್ರೀಶನೇ 3ಸ್ನಾನಂ ಶುದ್ಧಜಲಂಗಳಿಂ ದಧಿಮದುಕ್ಷೀರಾಜ್ಯದಿಂ ಶರ್ಕರಾಸ್ನಾನಂ ಪೌರುಷಸೂಕ್ತ ಮಂತ್ರವಿಧಿುಂ ಸ್ನಾನಂ ರಮಾಸೂಕ್ತದಿಂಸ್ನಾನಂ ಸಾಗರ ನಾಲ್ಕರಿಂ ಶ್ರುತಿಗಳಿಂ ವಸ್ತ್ರದ್ವಯಂ ಪಾದುಕಾಶ್ರೀನಾಥಂಗುಪವೀತಯುಗ್ಮವಿದಕೋ ಶ್ರೀ ವೆಂಕಟಾದ್ರೀಶನೇ 4ಶ್ರೀಗಂಧಾಗುರು ಲೇಪನಂ ಮೃಗಮದಂ ಯೋಗೀಂದ್ರ ವಂದ್ಯಾಂಘ್ರಿಯೇಭೋಗದ್ರವ್ಯವಿದೀಗ ಭೂಷಣಚಯಂ ಕಂಠಾಂಗುಲೀಶ್ರೋತ್ರಕುಂಶ್ರೀ ಗೌರೀಪ್ರಿಯಮಿತ್ರ ದಿವ್ಯ ಮಕುಟಂ ಪುಷ್ಪಂಗಳಿಂ ಪೂಜಿಪೆಂಬೇಗಾನಂದವನಿತ್ತು ನಮ್ಮ ಸಲಹೈ ಶ್ರೀ ವೆಂಕಟಾದ್ರೀಶನೇ 5ಓಂ ಬಲಭದ್ರಪ್ರಿಯಾನುಜಾಯ ನಮಃ
--------------
ತಿಮ್ಮಪ್ಪದಾಸರು
ಕರುಣಿಸಿ ಪಿಡಿಯಾ ಕೈಯ್ಯಾ | ಗುರುರಂಗವೊಲಿದರಾಯ ಪ ನಂಬಿದೆ ನಿನ್ನ ಚರಣ | ಬೆಂಬಿಡದೆ ಕಾಯೋ ಸತತ ಸ್ತಂಭದಲಿ ನೆಲಸಿದಂಥ | ಕುಂಭಿಣಿಪ | ದಾಸವರ್ಯ 1 ದೀನರ್ಗೆ ದಿವಿಜಧೇನು | ನೀನೆಂದು ಕ್ಷೋಣಿ ತಳದಿ ಜ್ಞಾನಿಗಳು ಪೇಳಿದಂಥ ವಾಣಿಯನು ಸತ್ಯಮಾಡೊ 2 ನಿನ್ನ ಸ್ಥಳವು ಪುಣ್ಯಕ್ಷೇತ್ರ | ನಿನ್ನಲ್ಲಿ ಸಕಲ ತೀರ್ಥ ನಿನ್ನ ಕವನ ಮಧ್ವಶಾಸ್ತ್ರ | ನಿನ್ನವನು ನಿಜಕೃತಾರ್ಥ3 ಹರಿದಾಡುವಂಥ ಮನಸು | ಹರಿಯಲ್ಲಿ ಸ್ಥಿರವಗೊಳಿಸೊ ಹರಿನಾಮ ಸುಧೆಯ ಕುಡಿಸೊ | ಹರಿವರನ ಮತವ ಪಿಡಿಸೊ 4 ಮತಿಭ್ರಷ್ಟನಾಗಿ ನಿನ್ನ ಕೃತಿಗಳನು ಪಾಡದ್ಹೋಗಿ ಕ್ಷಿತಿ ಭಾರನಾದೆ ಮುಂದೆ ಗತಿ ತೋರಿ ಸಲಹೊ ತಂದೆ 5 ಹೆತ್ತವರು ಸುತನ ದೋಷ | ಕೃತ್ಯಗಳ ಕ್ಷಮಿಸದಿಹರೆ ಚಿತ್ತೈಸು ಎನ್ನ ಮಾತ | ಉತ್ತಮರ ಸಂಗವಿತ್ತು 6 ತಳೆದೇಳು ಜನುಮಗಳಲಿ | ಇಳೆಯೊಳಗೆ ಚರಿಪ ಸಮಯ ಸುಳಿದಾಡು ಮತ್ತೊಮ್ಮೆ ಘೋರ ಕಲಿಬಾಧೆ ತಪ್ಪಿಸಯ್ಯ 7 ಮಾನವಿಯ ಸ್ಥಾನದಲ್ಲಿ | ನೀನಿರಲು ನಿನ್ನ ಮರೆದು ಮೋದ 8 ಕಂದರ್ಪಜನಕ ಶಾಮಸುಂದರ ಮೂರ್ತಿಹೃದಯ ಮಂದಿರದಿ ತೋರೋದಾತ ವಂದಿಸುಎ ನಿನ್ನ ಪದಕೆ 9
--------------
ಶಾಮಸುಂದರ ವಿಠಲ
ಕರುಣಿಸೈ ಗುರುರಾಯ ಚರಣತೀರ್ಥವನು ಹರಣ ಭಯದೊಳು ಲಕುಮೀರಮಣನೊಲಿವಂದದಲಿ ಪ ದೇಶ ದೇಶವ ತಿರುಗಿ ಬೇಸರದು ಈ ಚರಣ ಭೂಸುರವ ಪೂಜಿಸುವದು ಈ ದಿವ್ಯ ಚರಣ ಕ್ಲೇಶವೆನಿಸದೆ ತೀರ್ಥದಾಸೆಯ ಬಿಡದ ಈ ಚರಣ ಕಾಶಿ ರಾಮೇಶ್ವರಕೆ ನಡೆದ ಚರಣ1 ಹಾವಿಗೆಯನೊಲ್ಲದೆ ಹಾದಿ ನಡೆದಿಹ ಚರಣ ದೇವಿ ಭಾಗೀರಥಿಗೆ ಇಳಿದ ಚರಣ ಕಾವಿ ವಸ್ತ್ರವನುಟ್ಟ ಕಾಶಿವಾಸಿಯ ಚರಣ ಕೋವಿದರು ವಂದಿಸುವ ದಿವ್ಯ ಚರಣ2 ಗಟ್ಟಿ ಬೆಟ್ಟವ ತಿರುಗಿ ಕಷ್ಟಬಟ್ಟಿಹ ಚರಣ ಸೃಷ್ಟಿಗುತ್ತಮ ನದಿಯ ಮಿಂದ ಚರಣ ಇಷ್ಟಗಳನೆಲ್ಲ ತಾ ಪಡೆದುಕೊಂಡಿಹ ಚರಣ ಕೃಷ್ಣಮೂರ್ತಿಯ ಬಳಿಗೆ ಬಂದ ಚರಣ 3 ಶುದ್ಧ ವೈಷ್ಣವರೆಲ್ಲ ಉಜ್ಜಿ ತೊಳೆವ ಚರಣ ಬದ್ಧ ಮುಕ್ತರಿಗೆಲ್ಲ ಸಿದ್ಧಿಯಹ ಚರಣ ಮಧ್ವರಾಯನ ಮತದಿ ಎದ್ದು ತಿರುಗುವ ಚರಣ ವಿದ್ಯೆನಿಧಿ ಗುರುರಾಯ ಬಾಳ್ದ ಚರಣ 4 ಧರಣಿಯನು ಬಲವಂದು ದಣಿದು ಬಂದಿಹ ಚರಣ ಕೈವಲ್ಯ ಪಡೆದ ಚರಣ ವರಾಹತಿಮ್ಮಪ್ಪನಿಹ ಗಿರಿಯನೇರಿದ ಚರಣ ಸ್ಥಿರವಾಗಿ ಉಡುಪಿಯೊಳು ನಿಂದ ಚರಣ 5
--------------
ವರಹತಿಮ್ಮಪ್ಪ
ಕರುಣೆ ತೋರೋ ಕಣ್ಣ ತೆರೆದು ಗುರುವು ನೀನೆ ಗತಿಯು ನೀನೆ ಪ ತ್ವರದಿ ಜಪವ ಪೂರ್ಣ ಮಾಡಿ ಕರವ ಶಿರದಲಿಡುತ ಅ.ಪ. ಸಿರಿಯ ವರನ ಪರಮ ಭಕುತ ಸಿರಿದಮಣಿಗಳಲ್ಲಿ ನೀನು ಹಿರಿಯ ಅಹುದೊ ಜಗದ ಗುರುವೆ ಪರಮ ಕರುಣಾಕರನೆ ದೇವ 1 ಹರಿಯ ಆಜ್ಞದಂತೆ ನೀನು ಸರುವ ಪ್ರಾಣಿಗಳಲಿ ನಿಂದು ಹಿರಿದು ಜಪವನಾಚರಿಸಿ ಅವರು ಅರಿಯದಂತೆ ನಿರುತ ಪೊರೆವೆ 2 ಶರಧಿ ಮಥನದಿಂದ ಬಂದ ಗರಳನಂದು ಭುವನಗಳನು ಉರುಹುತಿರಲು ಹರಿಯ ಮನವ ಅರಿತು ನೀನು ಭರದಿ ಕುಡಿದೆ 3 ಪೊಗಳಲವೆ ನಿನ್ನ ಮಹಿಮೆ ಸುಗುಣಮಣಿ ಭಾರತಿಯ ಪತಿಯೆ ಅಗಜೆಯರಸನನ್ನು ಪೆತ್ತ ನಗಧರನ ಪ್ರೀತಿ ಪಾತ್ರ 4 ಅಜನಪದಕೆ ಅರುಹನಾದೆ ದ್ವಿಜ ಫಣೀಶಾದಿಗಳ ಗುರುವೆ ಭಜನೆಗೈವೆನೆಂತು ನಿನ್ನ ತ್ರಿಜಗವಂದ್ಯ ತ್ರಿಜಗಪೂಜ್ಯ 5 ತ್ರೇತೆಯಲಿ ಅಂಜನಿಯಳ ಪೂತ ಗರ್ಭದಿಂದ ಬಂದು ಪೋತನಾದ ರವಿಜನನ್ನು ಪ್ರೀತಿಯಿಂದ ಸಲಹಿದೆಯ್ಯ 6 ಅಂದು ಕಪಿಯ ವೃಂದವೆಲ್ಲ ಬಂದು ಶರಿಧಿ ತಟದಿ ನಿಂದು ಮುಂದೆ ದಾರಿ ಕಾಣದಿರಲು ಸಿಂಧುವನ್ನು ದಾಟಿ ಬಂದೆ 7 ಮಂಗಳಾಂಗಿ ಸೀತೆಯನ್ನು ಕಂಗಳಿಂದ ನೋಡಿ ಹಿಗ್ಗಿ ಅಂಗನೆಯ ಪಾದಕೆರಗಿ ಉಂಗುರವನಿತ್ತ ಧೀರ 8 ಫಲವ ಸವಿವ ನೆವದಿ ನೀನು ನಲಿದು ವನವ ಮುರಿದು ತುಳಿದೆ ಕಲಹಕಿಳಿದು ಬಂದ ಅಕ್ಷನ ಬಲಿಯಹಾಕಿ ಕುಣಿಯುತಿರ್ದೆ9 ಕುಲಿಶಧರನ ಗೆಲಿದ ವೀರ ಜಲಜಭವನ ಶರವ ಬಿಡಲು ಛಲದಿ ನೀನು ಅದನು ತಡೆದು ಮಲೆತು ನಿಂತ ಮಹಿಮಯುತನೆ 10 ವನಜಭವ ನಾಮನ ಕೇಳಿ ಕನಲಿ ಬಂದಾ ಶರಕೆ ಸಿಲುಕಿ ದನುಜ ಸಭೆಗೆ ಬಿಜಯಮಾಡಿ ಅನುವ ತಿಳಿದು ಬಂದ ದೇವ 11 ರಕ್ಕಸನ ಲೆಕ್ಕಿಸದೆ ಧಿಕ್ಕರಿಸಿ ಮಾತನಾಡಿ ಪಕ್ಕಿರಥನ ಬಲುಮೆಯನ್ನು ಹೆಕ್ಕಳಿಸಿ ನೀ ಪೊಗಳಿ ನಿಂದೆ 12 ಉಕ್ಕಿ ಬಂದ ರೋಷದಿಂದ ರಕ್ಕಸನು ಚರರ ಕರೆದು ಇಕ್ಕಿರಿವನ ಬಾಲಕುರಿಯ ತಕ್ಕ ಶಿಕ್ಷೆ ಮಾಡಿರೆನಲು 13 ಸುಟ್ಟಬಾಲ ನೆಗಹಿಕೊಂಡು ದಿಟ್ಟ ನೀನು ಪುರವನೆಲ್ಲ ಅಟ್ಟಹಾಸದಿಂದ ಮೆರೆದೆ 14 ಶರಧಿ ಹಾರಿ ಬಂದು ಸತ್ಯಸಂಧ ರಾಮಗೆರಗಿ ಇತ್ತು ಚೂಡಾಮಣಿಯನವನಾ ಚಿತ್ತ ಹರುಷಗೈದ ಧೀರ 15 ಹರಿಯು ತನ್ನ ಬೆರಳಿನಲ್ಲಿ ಗಿರಿಯನೆತ್ತಿ ನಿಂತನೆಂದು ಸರುವ ಗಿರಿಗಳನ್ನು ನೆಗಹಿ ಶರಧಿಗೊಡ್ಡಿ ಸೇತುಗೈದೆ 16 ಸುರರಿಗಮೃತವಿತ್ತನೆಂದು ಅರಸಿ ಸಂಜಿವನವ ನೀನು ಭರದಿ ತಂದು ಒರಗಿ ಬಿದ್ದ ಹರಿಯ ವೃಂದಕೆರೆದು ಮೆರೆದೆ 17 ಮಂದರಾದ್ರಿಯನ್ನು ಒಡೆಯ ಅಂದು ಬೆನ್ನಲಿ ಪೊತ್ತು ನಿಂದು ಸಿಂಧುವನ್ನು ಗೆಲಿದನೆಂದು ಬಂದೆ ಹಾರಿ ಲಂಕಪುರಿಗೆ 18 ಧರಣಿಧವಗೆ ನೆರಳಿನಂತೆ ಕಾಲ ಚರಿಸಿ ನೀನು ಅರಸಿನಂತೆ ಬಂಟನೆಂಬ ಕರೆಯವಾರ್ತೆ ಖರೆಯಗೈದೆ 19 ಕಾಲನೇಮಿ ಯತಿಯ ರೂಪ ಜಾಲದಿಂದ ವೇಳೆ ಕಳೆಯೆ ಶೀಲವಂತ ಅವನ ಸೀಳಿ ಬಾಲದಿಂದ ನಗವ ತಂದೆ 20 ವ್ಯಾಸಮುನಿಯ ಯಂತ್ರದಲ್ಲಿ ವಾಸವೆಂದು ತೂರಿಕೊಳುತ ದಾಸ ಜನರ ಆಸೆಗಳನು ಬೇಸರಾದೆ ನೀ ಸಲಿಸುವೆ 21 ನೀನು ಒಲಿಯೆ ರಾಮನೊಲಿವ ನೀನು ಮುನಿಯೆ ರಾಮ ಮುನಿವ ನಾನು ನಿನಗೆ ಅನ್ಯನಲ್ಲ ಸೂನುವಲ್ಲೇ ತಿಳಿದು ನೋಡೊ 22 ನಿನ್ನ ನಂಬಿ ಸರಮೆಯರಸ ಪನ್ನಗಾರಿರಥನ ಒಲುಮೆ- ಯನ್ನು ಪಡೆದು ಹರುಷವಾಂತು ಧನ್ಯನಾದ ಧರೆಯೆ ಮೇಲೆ 23 ನಿನ್ನ ಜರೆದ ಅವನ ಅಣ್ಣ ತನ್ನ ಬಂಧು ದೇಶ ಕೋಶ- ವನ್ನು ನೀಗಿಕೊಂಡು ಕೊನೆಗೆ ಮಣ್ಣುಗೂಡಿ ಪೋದನಯ್ಯ 24 ದಂತಿಪುರದ ದೊರೆಯೆ ಮಡದಿ ಕುಂತಿದೇವಿ ಕುವರನಾಗಿ ಕಂತುಪಿತನ ಮತವ ತಿಳಿದು ನಿಂತು ಖಳರ ಸದೆದ ಶೂರ 25 ಏಕಚಕ್ರ ನಗರದಲ್ಲಿ ಶೋಕ ಪಡುತಲಿರ್ದ ಜನರ ಕಾಕು ಬಕನ ಏಕಮುಷ್ಠಿಯಿಂದ ಕೊಂದೆ 26 ಕೀಚಕಾರಿ ನಿನ್ನ ಮಹಿಮೆ ಯೋಚನೆಗೆ ನಿಲುಕದಯ್ಯ ಯಾಚಿಸೂತಿ ದೀನನಾಗಿ ಮಾಚದಂತೆ ಸಲಹೊ ಸ್ವಾಮಿ 27 ಜರೆಯ ಸುತನ ಗರುವ ಮುರಿದು ಭರದಿ ಅವನ ತನುವ ಸೀಳಿ ಧರಣಿಧವರ ಸೆರೆಯ ಬಿಡಿಸಿ ಪರಮ ಹರುಷಗರೆದ ಧೀರ 28 ದುರುಳ ದುಶ್ಶಾಸನನ ಅಂದು ಧುರದಿ ಕೆಡಹಿ ಉರವ ಬಗೆದು ತಿರೆಯ ಹೊರೆಯ ಹರಿಸಿದಂಥ ಸರುವ ಪುಣ್ಯ ಹರಿಗೆ ಇತ್ತೆ 29 ಮಲ್ಲಯುದ್ಧದಲ್ಲಿ ನೀನು ಖುಲ್ಲ ದುರ್ಯೋಧನನ ತೊಡೆಗ ಸುರರು ನೋಡಿ ಫುಲ್ಲ ಮಳೆಯಗರೆದರಾಗ 30 ಸೃಷ್ಟಿಕರ್ತ ಕೃಷ್ಣ ನಿನ್ನ ಇಷ್ಟದೈವವೆಂದು ಅವನ ನಿಷ್ಠೆಯಿಂದ ಭಜಿಸಿ ಇಳೆಯ ಶಿಷ್ಟ ಜನರ ಕಷ್ಟ ಕಳೆದೆ 31 ಖಲರು ನಿನ್ನ ಬಲುಮೆ ನೋಡಿ ಗೆಲುವು ತಮಗೆ ಆಗದೆಂದು ಕಲಿಯುಗದಿ ವಿಪ್ರರಾಗಿ ಇಳೆಯ ಧವನ ಹಳಿಯುತಿರಲು 32 ಜಡಜನೇತ್ರ ನಿನ್ನ ಕರೆದು ಅಡಗಿಸಿವರವಾದವೆನಲು ನಡುವೆ ಮನೆಯು ಎಂಬ ದ್ವಿಜನ ಮಡದಿ ಗರ್ಭದಿಂದ ಬಂದೆ 33 ಯತಿಯು ನೀನೆಂದೆನಿಸಿಕೊಂಡು ಚ್ಯುತಿ ರಹಿತ ಪ್ರೇಕ್ಷರಿಂದ ಶ್ರುತಿಪುರಾಣ ವೇದಮಂತ್ರ ತತಿಗಳನು ಪಠಣಗೈದೆ 34 ಹರಿಯೆ ಹರನು ಹರನೆ ಹರಿಯೆಂ- ದುರುಳ ಖಳರ ಕರೆದು ಕರೆದು ಜರೆದು ಭರದಿ ಹರಿಯೆ ಶರಣೆಂದರುಹಿ ಮೆರೆದೆ 35 ಮಾಯ ಮತವ ಧಿಕ್ಕರಿಸಿ ನ್ಯಾಯ ಶಾಸ್ತ್ರವನ್ನು ರಚಿಸಿ ಕಾಯಭವನ ಪಿತನ ಹಳಿದ ನಾಯಿಗಳನು ಬಡಿದು ನಿಂದೆ 36 ಕೃತಕಭಾಷ್ಯ ರಚಿಸಿದಂಥ ದಿತಿಜರನ್ನಾನತರ ಮಾಡಿ ಗತಿಯ ತೋರಿ ಜನಕೆ ಸತ್ಯಾ- ವತಿಯ ಸುತನ ಒಲುಮೆ ಪಡೆದೆ 37 ಮಧ್ವಮತವ ಉದ್ಧರಿಸಿ ಶುದ್ಧವಾದ ಬುದ್ಧಿಗಲಿಸಿ ಹದ್ದುವಾಹನ ಮುದ್ದುಕೃಷ್ಣನ ಶ್ರದ್ಧೆಯಿಂದ ಬದ್ಧಗೈದೆ 38 ಅಷ್ಟಮಠವ ರಚನೆ ಮಾಡಿ ಶಿಷ್ಟಜನರ ಬಾಧೆ ಕಳದೆ ತುಷ್ಟರಾದ ದ್ವಿಜರು ನಿನ್ನ ಎಷ್ಟು ಪೊಗಳಿ ತೀರದಯ್ಯ 39 ದಾನಧರ್ಮವ ಮಾಡಲಿಲ್ಲ ಜ್ಞಾನಮಾರ್ಗ ಹಿಡಿಯಲಿಲ್ಲ ದೀನತನದ ಭವಣೆಯಿಂದ ನಾನು ಮರುಗಿ ಬಂದೆನೀಗ 40 ವಚನ ಮಾರ್ಗದಲ್ಲಿ ನಿನ್ನ ಪ್ರಚನೆ ಮಾಳ್ಪೆ ಕೇಳೊ ದೇವ ರಚಿಸಲಾರೆ ನಿಯಮಗಳನು ಉಚಿತ ತೋರಿದಂತೆ ಮಾಡೊ 41 ನಾರಸಿಂಹ ರಾಮಕೃಷ್ಣ ನಾರಿ ಸತ್ಯವತಿಯ ಮಗನ ಮೂರುತಿಗಳ ಹೃದಯದಲ್ಲಿ ಸೇರಿ ಭಜಿಪ ಭಾವಿ ಬ್ರಹ್ಮ 42 ವಾಯು ಹನುಮ ಭೀಮ ಮಧ್ವ ರಾಯ ನಿನ್ನ ನಂಬಿ ಬಂದೆ ಮಾಯ ಪಾಶದಿಂದ ಬಿಡಿಸಿ ಕೃಪಣ ಬಂಧು 43 ಜನುಮ ಜನುಮದಲ್ಲಿ ನೀನೆ ಎನಗಿ ಜನನಿ ಜನಕನಾಗಿ ಕನಸು ಮನಸುನಲ್ಲಿ ನಿನ್ನ ನೆನೆಸುವಂತೆ ಮತಿಯ ನೀಡೊ 44 ತುಂಗಭದ್ರ ತೀರ ವಾಸ ಭಂಗಬಾಳನು ಹೊರೆಯಲಾರೆ ಮಂಗಳಾಂಗ ಕಳುಹೊ ಎನ್ನ ರಂಗಈಶವಿಠಲ ಪುರಿಗೆ 45
--------------
ರಂಗೇಶವಿಠಲದಾಸರು
ಕಾಗಿಣಿ ತೀರದ ಯೋಗಿವರ್ಯ ಗುರುವೇ | ನಿನ್ನಲಿ ಮೊರೆಯಿಡುವೆ ಪ ಭೋಗಿಶಯನ ಗುಣ ಯೋಗದಿಂದ ಭಜಿಪಾ | ಹರಿ ಪದಾಬ್ಜ ಮಧುಪಾ ಅ.ಪ. ಸಿಂಗರವೆನಿಸಿದ ಮಂಗಳವೇಡಿಯಲಿ |ನೀನುದಿಸುತಲಲ್ಲೀಸಿಂಗರಿಸಿಹ ಬಲು ರಂಗ ಕುದುರೆ ನೇರಿ | ರಾವುತರೊಡಸೇರೀ ||ಕಂಗೆಡುತಲಿ ಬಲು ತುಂಗೆ ಕಾಗಿಣೀಯಾ | ಸಾರುತ ತನಹಯಾ ಹಿಂಗದೆ ನದಿಯಲಿ ಮಂಗಳ ಹಯವೇರಿ | ನೀರ್ಗುಡಿದ ಬಾಯಾರಿ 1 ಆಚೆ ತಟದಿ ಅಕ್ಷೋಭ್ಯಮುನಿಪ ನೋಡಿ | ಸ್ವಪ್ನದರ್ಥ ಮಾಡೀಸೂಚಿಸಿದನು ತವ ಶಿಷ್ಯನ ಕೈಯಲ್ಲೀ | ಬಂದ ಸಾದಿ ಅಲ್ಲೀ ||ಯಾಚಿಸಿದನು ಮುನಿ ಪದಕೇ ಬಾಗೀ | ತುರ್ಯಾಶ್ರಮಕಾಗೀಖೇಚರ ವಹನಾಜ್ಞೆಯೆಂದು ತ್ವರ್ಯಾ | ಮಾಡ್ದ ಸಾದಿ ಯತಿಯಾ 2 ತಂದೆ ಬಹು ಕೋಪದಿಂದ ಬಂದೂ | ಯತಿಯ ನಿಂದಿಸ್ಯಂದೂತಂದು ಮಗನ ಏಕಾಂತ ಗೃಹಕೆ ಆಗ | ಸತಿಯನು ಕೂಡಿಸಿ ವೇಗ ||ಅಂದು ಕಂಡು ಸರ್ಪಾಕೃತಿ ಪತಿಯಾ | ಚೀರಿದಳ್ ಬಲ್ಪರಿಯಾತಂದೆ ಕೊಂಡು ಮಗನರ್ಪಿಸಿದನುಯತಿಗೇ | ಕ್ಷಮೆ ಬೇಡಿದನಾಗೇ 3 ತ್ರ್ಯಕ್ಷನಂಶ ಅಕ್ಷೋಭ್ಯ ಮುನಿಪ ಆಗ | ಸನ್ಯಾಸ ವೇಗಭಿಕ್ಷುಕ ಮಧ್ವರ ಗ್ರಂಥ ಪೊತ್ತ ವೃಷಭ | ಎನುತೀತನ ಪ್ರಭಾ ||ಲಕ್ಷಿಸಿವರ ಕರೆದನೂ ನಾಮಾನ್ವರ್ಥ | ಯತಿಯನೆ ಜಯತೀರ್ಥಕುಕ್ಷಿಲಿ ಮೆರೆವರಗೋಳ ಗುಹೆಯು ಅಲ್ಲೀ | ರಚಿಸಿದ ಟೀಕೆಗಳಲ್ಲೀ4 ಮಧ್ವಭಾಷ್ಯಕೇ ರಚಿತ ಟೀಕಾ ಗ್ರಂಥಾ | ನೋಡಿದ ಮುನಿ ಮತ್ತವಿದ್ಯಾರಣ್ಯರ ಗೆದ್ದ ಆರ್ಯ ಧೀರಾ | ಅಕ್ಷೋಭ್ಯರ ಕುವರ ||ಅದ್ವೈತಾದಿಗಳೇಕವಿಂಶ ಪಂಥ | ಗೆಲ್ಲುತ ಸುಧೆ ಗ್ರಂಥಅದ್ವಿತೀಯ ಗುರುಗೋವಿಂದ ವಿಠ್ಠಲಗೇ | ಅರ್ಪಿಸಿದನು ಆಗೇ 5
--------------
ಗುರುಗೋವಿಂದವಿಠಲರು
ಕಾಮಿತವನು ಪಡಿಯೋ ಪ ಈ ಮಹಿಯೊಳು ರಘುವೀರ ತೀರ್ಥರ ಕರ- ತಾಮರಸೋದ್ಭವರೆನಿಸಿ ಮೆರೆದ ಗುರು ಅ.ಪ ಧರೆಸುತ ಮಂಡಿತ ಸುರಪುರದಲಿ ದ್ವಿಜ ವರ ಕುಲದಲಿ ಜನಿಸಿಯಳಿಮೇ- ಲಾರ್ಯರ ಬಳಿಯಲಿ ಶಬ್ದಾವಳಿ ಶಾಸ್ತ್ರವ ಪಠಿಸಿ ಇಳಿಸುರನುತ ಕರ ಜಲಜೋದ್ಭವ ರೆನಿಸಿ ಕಲಿತು ಗುರುಮುಖದಿ ಮರುತ ಶಾಸ್ತ್ರವನು ತಿಳಿಸುತ ಬುಧಜನ ರೊಲಿಸಿದಂಥ ಗುರು 1 ಹೇಮಮಂಟಪದಿ ಭೂಮಿ ಸುತಾನ್ವಿತ ರಾಮನ ಪೂಜಿಸು ತಾ ಶ್ರೀಮನ್ಮಧ್ವಕ ರಾಬ್ಜಾದಾಗತ ಸೌಮಿತ್ರಿಯ ಸಹಿತ ಸಾಮವ ಪಠಿಸುವ ಭೂಮಿಸುರಜನ ಸ್ತೋಮದಿ ಶೋಭಿಸುತ ಧೀಮಜನರಿಗೆ ಪ್ರೇಮದಿಂದ ಮೃಷ್ಟಾನ್ನದಾನ ಸನ್ಮಾನ ಮಾಡುತಿಹ 2 ಭೂತಳದಲಿ ಸುಕ್ಷೇತ್ರ ಬಹು ಆರ್ಥ ಯಾತ್ರಿಗಳಾ ಚರಿಸಿ ಭೂತಬಾಧೆ ರೋಗಾತುರ ಜನಗಳ ಭೀತಿಯ ಪರಿಹರಿಸಿ ಶಾಸ್ತ್ರಸುಧಾರಸ ಸತ್ಯಮೋದ ಯತಿ- ನಾಥರಿಂದ ಗ್ರಹಿಸಿ ಖ್ಯಾತ ಕಾರ್ಪರ ಕ್ಷೇತ್ರದಿ ನರಮೃಗನಾಥನ ಪ್ರೀತಿಗೆಪಾತ್ರರೆನಿಸಿರುವ 3
--------------
ಕಾರ್ಪರ ನರಹರಿದಾಸರು
ಕಾಯ ಪಾದ ಪದುಮ ದಾಸ್ಯವನಿತ್ತು ಪ ಕಂಸಾರಿ ತವ ಪಾದಪಾಲಿಸುವನೆ ಶಿರದೊಳಗಸಂಶಯದಿ ಧರಿಸೀ |ವಿಂಶತಿಯ ಮತ್ತೊಂದು ಭಾಷ್ಯ ದೂಷಕ ಮರು-ತ್ತಂಶ ಸಂಭೂತ ಶ್ರೀ ಮಧ್ವ ಮತದವನಾ 1 ಆವ ಭವರೋಗ ಹ | ಭಾವ ಕ್ರಿಯ ದ್ರವ್ಯಾಖ್ಯಅದ್ವೈತ ತ್ರಯಗಳನು ಸಂಧಾನವಿತ್ತೂ |ದೇವ ದತ್ತದಿ ತೃಪ್ತಿ ಭಾವವನೆ ನೀನಿತ್ತುಭಾವದಲಿ ತವರೂಪ ಓವಿ ತೋರುವುದೂ 2 ಆಗಮಸುವೇದ್ಯ ಭವರೋಗ ವೈದ್ಯನೆ ದೇವನಾಗಾರಿ ವಾಹನನೆ | ಯೋಗಿಧ್ಯೇಯಾಆಗು ಹೋಗುಗಳೆರಡು | ನೀನಿತ್ತುದೆಂಬಂಥಜಾಗ್ರತೆಯ ನೀನಿತ್ತು ಕಾಪಾಡು ಹರಿಯೇ 3 ಕುಡುತೆ ಪಾಲನು ಭಕ್ತ ಕೊಡಲದನು ಕುಡಿಯುತ್ತಕಡಲಂತೆ ಹಾಯಿಸಿದೆ ಬಡವರಾಧಾರೀ |ಧೃಡಭಕ್ತಿ ಸುಜ್ಞಾನ ವೈರಾಗ್ಯ ಭಾಗ್ಯಗಳಕಡು ಕರಣಿ ನೀನಿತ್ತು ಕಡೆಹಾಯ್ಸು ಭವವಾ 4 ಸರ್ವಜ್ಞ ಸರ್ವೇಶ ಸರ್ವಾಂತರಾತ್ಮಕನೆದರ್ವಿಜೀವನ ಕಾಯೊ ದುರ್ವಿಭಾವ್ಯಾ |ಗುರ್ವಂತರಾತ್ಮ ಮತ್ಪ್ರಾರ್ಥನೆಯ ಸಲಿಸಯ್ಯಶರ್ವವಂದ್ಯನೆ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಕಾರ್ಕಳದ ವೆಂಕಟರಮಣದೇವರ ಲಕ್ಷದೀಪೋತ್ಸವ ಪೀಠಿಕೆ ಉತ್ತಮರು ಕೇಳಿರೈ ಉಲ್ಲಾಸದಿಂದ ವರ- ಪೃಥ್ವಿಯೊಳು ಮೂಲಕಾಪುರದೊಳಗಿಹ ವಿಶ್ವಾ ಪ್ರವರವೆತ್ತ ವೆಂಕಟಕೃಷ್ಣನ ಪುತ್ರ ಲಕ್ಷ್ಮೀನಾರಾಯಣನು ಹರಿಪದಕಮಲ ಚಿತ್ತದೊಳ್ ಧ್ಯಾನಿಸುತ ಪೇಳ್ದನೀ ಕಾವ್ಯಮಂ ಪ್ರವರ್ತಿಸುವುದೆಲ್ಲ ಜನರು 1 ಧರೆಯೊಳುತ್ತಮವೆನಿಪ ವರ ಕಾರ್ಕಳಾಖ್ಯ ಪುರ- ದರಸ ಶ್ರೀವೆಂಕಟೇಶ್ವರನ ಲೀಲಾಭಿವಿ ಸ್ತರದ ದೀಪೋತ್ಸವದ ಪರಿವಿಲಾಸಕ ಕಾವ್ಯರಚನಾಗುಣಗಳಿಂದ ಸುರನಾರಿಯರು ಪೇಳ್ದ ಸಂವಾದ ತೆರನಂತೆ ವಿರಚಿಸಿದೆನೀ ಕೃತಿಯ ದೋಷವಿದ್ದರೆ ತಿದ್ದಿ ಸರ್ವ ಜನರು 2 ಶ್ರೀ ವಿಷ್ಣುನಿಗಮಾರ್ಗಮಾರ್ಚಿತ ಪದಂ ಪೀತಾಂಬರಾಲಂಕೃತಂ ಸೇವ್ಯಂ ಸದಾ ತತ್‍ಪದಂ ದೂರ್ವಾದಲಶ್ಯಾಮಲಂ ಶ್ರೀವತ್ಸಾಂಕಮುದಾರ ಮಂಗಲಕರಂ ಶ್ರೀ ಶ್ರೀನಿವಾಸಂ ಭಜೇ 3 ಆದಿಗುರು ವೇದವ್ಯಾಸರನು ವಂದಿಸುತ ಸಾದರದಿ ಮಧ್ವಯತಿವರರರ ನುತಿಸುತ ಭೂದಿವಿಜರಿಂಗೆರಗಿ ಬಳಿಕ ಕೂರ್ಮೆಯೊಳು ಮಾಧವನ ರಾಣಿ ಲಕ್ಷ್ಮಿಯನು ಮನಸಿನೊಳು 1 ಧ್ಯಾನಿಸುತ ಏಕದಂತನ ಪದವ ಭಜಿಸಿ ಮಾನದಿಂ ಶಾರದೆಯನೊಲವ ಸಂಗ್ರಹಿಸಿ ಶ್ರೀನಿವಾಸನ ಪುಣ್ಯಚರಿತೆಯನನುಸರಿಸಿ ನಾನಾ ಲೀಲೆಗಳನು ಕಾವ್ಯರಚನೆಯಲಿ ನಾನೊರೆವೆ 2 ಪರಮ ಪುರುಷನು ಪ್ರಥಮ ದಿನದಿ ಕಟ್ಟೆಯಲಿ ವರಪೂಜೆಗೊಂಡು ಮಂಟಪದಿ ವಿನಯದಲಿ ಚರಣವನು ತೋರಿ ಹನುಮ ಗರುಡನಲಿ ಪರಿವಿಲಾಸಕರ ಸೇವೆಗೊಂಡು ಕರುಣದಲಿ 3 ಭೋಗಿಪತಿಯಲಿ ಮಂಡಿಸಿದ ಲೀಲೆಗಳನು ನಾಗತೀರ್ಥದ ಗಂಭೀರೊತ್ಸಾಹಗಳನು ಭಾಗವತ ಯೋಗವನು ಭೋಜನಾಧಿಕವ ಭಾಗ್ಯೋದಯದ ಚೂರ್ಣೋತ್ಸವದ ವಿಲಾಸಕವನು 4 ಶ್ರೀ ನಾರಾಯಣನ ಕರುಣದಲಿ ವೇಣುಮತಿ ಪ್ರಾಸಯತಿಗಳ ಯುಕ್ತಿಯೆಲ್ಲ ನಾನರಿಯೆ ದೋಷವಿದ್ದರೂ ತಿದ್ದಿ ಬಲ್ಲಭಿ ಮಾನನಿಧಿಗಳನು ಮೆರೆಸುವದು ಭೂತಳದೊಳು ಶ್ರೀನಿವಾಸನು ಪಾಲಿಸುವನು ನಿತ್ಯದೊಳು5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕಾರ್ಕಳದ ವೆಂಕಟರಮಣದೇವರ ಲಕ್ಷದೀಪೋತ್ಸವ ಪೀಠಿಕೆ ಉತ್ತಮರು ಕೇಳಿರೈ ಉಲ್ಲಾಸದಿಂದ ವರ- ಪೃಥ್ವಿಯೊಳು ಮೂಲಕಾಪುರದೊಳಗಿಹ ವಿಶ್ವಾ ಪ್ರವರವೆತ್ತ ವೆಂಕಟಕೃಷ್ಣನ ಪುತ್ರ ಲಕ್ಷ್ಮೀನಾರಾಯಣನು ಹರಿಪದಕಮಲ ಚಿತ್ತದೊಳ್ ಧ್ಯಾನಿಸುತ ಪೇಳ್ದನೀ ಕಾವ್ಯಮಂ ಪ್ರವರ್ತಿಸುವುದೆಲ್ಲ ಜನರು 1 ಧರೆಯೊಳುತ್ತಮವೆನಿಪ ವರ ಕಾರ್ಕಳಾಖ್ಯ ಪುರ- ದರಸ ಶ್ರೀವೆಂಕಟೇಶ್ವರನ ಲೀಲಾಭಿವಿ ಸ್ತರದ ದೀಪೋತ್ಸವದ ಪರಿವಿಲಾಸಕ ಕಾವ್ಯರಚನಾಗುಣಗಳಿಂದ ಸುರನಾರಿಯರು ಪೇಳ್ದ ಸಂವಾದ ತೆರನಂತೆ ವಿರಚಿಸಿದೆನೀ ಕೃತಿಯ ದೋಷವಿದ್ದರೆ ತಿದ್ದಿ ಸರ್ವ ಜನರು 2 ಶ್ರೀ ವಿಷ್ಣುನಿಗಮಾರ್ಗಮಾರ್ಚಿತ ಪದಂ ಪೀತಾಂಬರಾಲಂಕೃತಂ ಸೇವ್ಯಂ ಸದಾ ತತ್‍ಪದಂ ದೂರ್ವಾದಲಶ್ಯಾಮಲಂ ಶ್ರೀವತ್ಸಾಂಕಮುದಾರ ಮಂಗಲಕರಂ ಶ್ರೀ ಶ್ರೀನಿವಾಸಂ ಭಜೇ 3 ಆದಿಗುರು ವೇದವ್ಯಾಸರನು ವಂದಿಸುತ ಸಾದರದಿ ಮಧ್ವಯತಿವರರರ ನುತಿಸುತ ಭೂದಿವಿಜರಿಂಗೆರಗಿ ಬಳಿಕ ಕೂರ್ಮೆಯೊಳು ಮಾಧವನ ರಾಣಿ ಲಕ್ಷ್ಮಿಯನು ಮನಸಿನೊಳು 1 ಧ್ಯಾನಿಸುತ ಏಕದಂತನ ಪದವ ಭಜಿಸಿ ಮಾನದಿಂ ಶಾರದೆಯನೊಲವ ಸಂಗ್ರಹಿಸಿ ಶ್ರೀನಿವಾಸನ ಪುಣ್ಯಚರಿತೆಯನನುಸರಿಸಿ ನಾನಾ ಲೀಲೆಗಳನು ಕಾವ್ಯರಚನೆಯಲಿ ನಾನೊರೆವೆ2 ಪರಮ ಪುರುಷನು ಪ್ರಥಮ ದಿನದಿ ಕಟ್ಟೆಯಲಿ ವರಪೂಜೆಗೊಂಡು ಮಂಟಪದಿ ವಿನಯದಲಿ ಚರಣವನು ತೋರಿ ಹನುಮ ಗರುಡನಲಿ ಪರಿವಿಲಾಸಕರ ಸೇವೆಗೊಂಡು ಕರುಣದಲಿ3 ಭೋಗಿಪತಿಯಲಿ ಮಂಡಿಸಿದ ಲೀಲೆಗಳನು ನಾಗತೀರ್ಥದ ಗಂಭೀರೊತ್ಸಾಹಗಳನು ಭಾಗವತ ಯೋಗವನು ಭೋಜನಾಧಿಕವ ಭಾಗ್ಯೋದಯದ ಚೂರ್ಣೋತ್ಸವದ ವಿಲಾಸಕವನು 4 ಶ್ರೀ ನಾರಾಯಣನ ಕರುಣದಲಿ ವೇಣುಮತಿ ಪ್ರಾಸಯತಿಗಳ ಯುಕ್ತಿಯೆಲ್ಲ ನಾನರಿಯೆ ದೋಷವಿದ್ದರೂ ತಿದ್ದಿ ಬಲ್ಲಭಿ ಮಾನನಿಧಿಗಳನು ಮೆರೆಸುವದು ಭೂತಳದೊಳುಶ್ರೀನಿವಾಸನು ಪಾಲಿಸುವನು ನಿತ್ಯದೊಳು 5
--------------
ತುಪಾಕಿ ವೆಂಕಟರಮಣಾಚಾರ್ಯ
ಕಾವಿಯ ಕಲ್ಲಿನ ತಿಲುಕವಿಡಕ್ಕ ಕಾವಿಯ ಕಲ್ಲಿನ ತಿಲುಕ ಪ. ಕಾವಿಯ ಕಲ್ಲಿನ ತಿಲುಕವನಿಟ್ಟರೆ ಕಾಯುವ ಶ್ರೀಹರಿ ಸತತ ಕಾಣಕ್ಕ ಅ.ಪ. ಕಾವಿಯ ತಿಲುಕವು ಕಲುಷವ ಕಳೆವುದು ಕಾವಿಯ ತಿಲುಕವು ಕಲಿಬಾಧೆ ಕಳೆವುದು ಕಾವಿಯ ತಿಲುಕವು ಕೋಪತಾಪಗಳನ್ನು ಜೀವನ ಬಳಿಯಲ್ಲಿ ಬರಲೀಸದಕ್ಕ 1 ಕಾವಿಯ ತಿಲುಕವು ಕವಿತೆಯ ಮಾಳ್ಪರಿಗೆ ಭಾವಶುದ್ಧಿಯನಿತ್ತು ಭಕ್ತಿ ಹೆಚ್ಚಿಸುವುದು ಕಾವಿಯ ಮಹಿಮೆಯ ಪಾವನ ಗುರು ಮಧ್ವರಾಯರೆ ಬಲ್ಲರಕ್ಕ 2 ಕಾವಿಯ ತಿಲುಕವು ಗುರುಭಕ್ತಿ ಕೊಡುವುದು ಕಾವಿಯ ತಿಲುಕವು ವೈವಿಧ್ಯ ಕಳೆವುದು ಕಾವಿಯ ತಿಲುಕವು ಕಳೆಯ ಹೆಚ್ಚಿಸುವುದು ಶ್ರೀ ವರನನು ಮನದಿ ತೊರುವುದಕ್ಕ 3 ಕಾವಿಯ ತತ್ವ ದಾಸರೆ ಬಲ್ಲರು ಕಾವಿಯೆ ಭೂಷಣ ದಾಸ ಶಿರಸಿಗೆ ಕಾವಿ ಇಲ್ಲದ ವ್ಯಾಸ ದಾಸಕೂಟವು ಇಲ್ಲ ಕಾವಿಯೆ ಸಂಸಾರ ನಾವೆಯಕ್ಕ 4 ಕಾವಿಯ ಮಹಿಮೆ ತಂದೆ ಮುದ್ದುಮೋಹನ ಗುರು ಭಾವಿಸಿ ಪೇಳಲು ಅರಿತು ಧರಿಸಿಹೆನು ಪಾವನ ಗೋಪಾಲಕೃಷ್ಣವಿಠ್ಠಲ ವ್ಯಾಸ ಕಾವಿಯ ಧರಿಸಿ ಮುನಿಯಾದ ಬದರಿಯಲಿ 5
--------------
ಅಂಬಾಬಾಯಿ
ಕಾವುದೆÉಮ್ಮನು ಜಗವ ಕಾವ ಕರುಣಿಯೆ ಪ. ಈವುದೆಮಗೆ ಸಕಲಸುಖವÀ ದೇವ ಲಕುಮಿನಾರಾಯಣ ಅ.ಪ. ಕಮಲಕರ್ಣಿಕಾ ಮಧ್ಯದಲ್ಲಿ ವಿಮಲ ವಿಹಂಗಪತಿಯ ಶಿರದಿಕಮಲಭವನು ಬಿಡದೆ ಪೂಜಿಪ ಅಮರಕುಲಲಲಾಮ ವಿಭುವೆ 1 ಮಧ್ವಮುನಿಯ ಕರಗಳೆಂಬೊ ಪದುಮಗಳಿಂದ ಪೂಜಿತ ಚರಣಗೆದ್ದು ಕುಜನತತಿಯ ಸುಜನರುದ್ಧರಿಸುವ ಗುಣನಿಧಿಯೆ 2 ಶಂಖಚಕ್ರ ಗದಾಪದುಮ ಆಂಕಗಳಿಂದ ಶೋಭಿತ ಕರಪಂಕಜಾಕ್ಷ ಪಯೋಧಿಶಯನ ಶಂಕೆಯಿಲ್ಲದೆ ಹಯವದನ3
--------------
ವಾದಿರಾಜ