ಒಟ್ಟು 342 ಕಡೆಗಳಲ್ಲಿ , 73 ದಾಸರು , 276 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಪ್ಪು ತಪ್ಪು ತಪ್ಪು ತಪ್ಪಪರಾಧ ಕೋಟಿಯಸರ್ವಂ ತಪ್ಪನ್ನೆಲ್ಲಾ ಕ್ಷ'ುಸಿ ಒಪ್ಪಿಕೊಳ್ಳಯ್ಯ ಗುರುವೆ ಪದೇಹ ತನ್ನದೆಂಬ ಅಹಂಕಾರದ ತಪ್ಪು ತನ್ನಗೇಹ ಸತಿಸುತರ ಮಮತೆ ಪಾಶದ ತಪ್ಪುಮೋಹ ಮದ ಮಾತ್ಸರ್ಯವ ಭ್ರಮೆಗೊಂಬೊ ತಪ್ಪುಓಹೋ! ವ್ಯರ್ಥಕಾಲವ ಕಳೆದೆನಹುದಯ್ಯ 1ಬಕವೃತ್ತಿಯ ಸೇಮೆಂದ ಮುಕುತನೆಂಬೆನೋ ಹರಿ'ಕಳಮತಿಗಳ ಕೂಡಿ ಯೋಗ್ಯನೆಂಬೆನೋಸಕಲ 'ಷಯಸುಖವನುಂಡು ವೈರಾಗಿಯೆಂಬೆನೋ ಹರಿಭಕ್ತರ ಸಂಗವ ಬಿಟ್ಟು ಜ್ಞಾನಿಯೆಂಬೆನೋ 2ಬರಿಯ ಬ್ರಹ್ಮಜ್ಞಾನದಿಂದ ಮರುಳು ಮಾಡಿದೆಪರಿಪರಿಯ ಭಾವಭೇದಗಳನು ತೋರಿದೆಅರಿಯದ್ಹೋದೆನಯ್ಯ ಶ್ರೀಮದ್ಗುರುವೆ ವಾಸುದೇವಾರ್ಯ ನರಸಾರ್ಯ ಅಮರಗಿರಿನಿಲಯ ಸಕಲ ತಪ್ಪು ಮರೆಯಯ್ಯಾ * 3
--------------
ವೆಂಕಟದಾಸರು
ತಪ್ಪು ಮಾಡಿದ್ದು ಸತ್ಯ ನಾನಪ್ಪ ಮಿಥ್ಯಲ್ಲ ತಿಮ್ಮಪ್ಪ ತಪ್ಪು ಮಾಡಿದ್ದು ಸತ್ಯ ನಾನಪ್ಪ ಪ ತಪ್ಪು ಎನ್ನದು ಗಪ್ಪು ಮಾಡಿ ಪರರೊಪ್ಪುವಂತೆ ಮಂದಿ ತಪ್ಪು ತೋರಿಸಿ ತಪ್ಪು ಒಪ್ಪಿಸುತಿಪ್ಪ ಮೃತ್ಯುಗೆ ಕಷ್ಟವಾಗ್ವುದ ತಪ್ಪಿಸೋ ತಪ್ಪ ಅ.ಪ ಪರರ ದುರ್ಗಣ ಗಿರಿಯು ಪರ್ವತಪ್ಪ ಬೆಳಸಿ ಎನ್ನಯ ಪರಮದುರ್ಗುಣ ತೃಣಕೆ ಸಮನಪ್ಪ ಮಾಡಿತೋರಿಸಿ ಜರೆದು ಬೀಳುವೆ ನರಕಗುಂಟಪ್ಪ ದುರಿತಶೇಷಪ್ಪ ಹರಿದುಕೊಳ್ಳದೆ ಮರವೆಲಿ ಮತ್ತು ಪರರ ಜರಿಯುತ ದುರಿತದಿಂದೆಮಪುರವ ಸಾಧಿಪೆ ತಿರುಗಿ ನೋಡದೆ ಅರಿವು ಕರುಣಿಸು ಶರಣರ್ಹೊನ್ನಪ್ಪ 1 ಎಷ್ಟೋ ಎಷ್ಟೋ ಪಾಪಕೋಟೆಪ್ಪಾ ಆಚರಿಸಿ ನಾನು ಕೆಟ್ಟು ಭ್ರಷ್ಟನಾದೆ ಕಲ್ಲಪ್ಪ ದುಷ್ಟತನದಿ ನಷ್ಟಮಾಡಿದೆ ಪರರ ಮಾನಪ್ಪ ಮುಷ್ಟಿದಾನಪ್ಪ ಹುಟ್ಟಿದಂದಿನಿಂದ ಕೊಟ್ಟು ಪಡಿಲಿಲ್ಲ ಶಿಷ್ಟರೊಲುಮೆಯ ನಿಷ್ಠೆಯಿಂ ನಾ ಸೃಷ್ಟಿಕರ್ತ ದೃಷ್ಟಿಲಿಂದಿನ್ನು ಹುಟ್ಟಿಸೆನ್ನಗೆ ನಿಷ್ಠ ಜ್ಞಾನಪ್ಪ 2 ಎಲ್ಲ ಪಾಪಕ್ಹೆಚ್ಚು ನಂದಪ್ಪ ಜಗದಿ ಎಲ್ಲ ಖುಲ್ಲರಿಗೆ ನಾನ್ಹಿರಿಯ ಬಾಲಪ್ಪ ಕೇಳಲೇನು ಕಳ್ಳ ಸುಳ್ಳತನದಿ ವೀರಪ್ಪ ಕಾಲಯಮನಪ್ಪ ಅಲ್ಲ ಅಹುದೆನ್ನುವುದನೆಲ್ಲ ಬಲ್ಲೆ ನೀ ಇಲ್ಲವೆನಿಪ ಸಾಧ್ಯವೆಲ್ಲಿದೆ ಎನಗೆ ಪುಲ್ಲನಯನ ಕ್ಷಮೆ ಪಾಲಿಸು ಸಿರಿಯರ ನಲ್ಲ ಶ್ರೀರಾಮ ಗೊಲ್ಲ ಕೃಷ್ಣಪ್ಪ 3
--------------
ರಾಮದಾಸರು
ತಪ್ಪುಗಳೆಲ್ಲವು ಒಪ್ಪುಗೊಳ್ಳಯ್ಯ ಶ್ರೀ ಚಪ್ಪರ ಶ್ರೀನಿವಾಸಪ. ಸರ್ಪರಾಜಗಿರಿಯಪ್ಪ ತಿಮ್ಮಪ್ಪನೆ ದರ್ಪಕತಾತನೆ ತಾ ಸಜ್ಜನಪ್ರೀತಅ.ಪ. ಮಾಧವ ನಿನ್ನಯ ಮಹಿಮೆ ತಿಳಿಯದಪ- ರಾಧವ ಮಾಡಿದೆ ದಾರಿದ್ರ್ಯದ ಪಾದ ದರುಶನದ ಗಾದಿಯ ಕಾಣದಾದೆ ನಾ ದ್ರೋಹಿಯಾದೆ1 ತ್ರಾಣವಿರುವಾಗ ಕಾಣಿಕೆ ಹಾಕಿದೆ ದೀನದಾರಿದ್ರ್ಯದ ಹೊತ್ತಿನಲಿ ಮೇಣದರಿಂದಲಿ ತೆಗೆದು ತೆಗೆದು ಪಂಚ ಪ್ರಾಣಕ್ಕಾಹುತಿಯ ಕೊಟ್ಟೆ ಅಪರಾಧ ಪಟ್ಟೆ2 ಮಂದವಾರದಿಕ್ಕೊಂದೂಟವ ಸತ್ತ್ವ ದಿಂದಿರುವಾಗ ನಾ ನೇಮಗೈದೆ ಮಂದಭಾಗ್ಯ ಜ್ವರದಿಂದ ಪೀಡಿತನಾದ- ರಿಂದೆರಡೂಟವನೂ ಮಾಡಿದೆ ನಾನು3 ಶನಿವಾರಕ್ಕೊಂದಾಣೆ ಕಾಣಿಕೆ ಹಾಕುತ್ತ ಮಿನುಗುವ ಡಬ್ಬಿಯ ನಾ ಮಾಡಿದೆ ಎನಗೆ ದಾರಿದ್ರ್ಯವ ಕೊಟ್ಟ ಕಾರಣದಿಂದ ಹಣವೆಲ್ಲ ಗುಣ ನುಂಗಿತು ಪಾದಕೆ ಗೊತ್ತು4 ದೊಡ್ಡದಾರಿದ್ರ್ಯದ ಗುಡ್ಡೆ ಬಿದ್ದುದರಿಂದ ದುಡ್ಡೆಲ್ಲ ತೆಗೆದೆ ನಾ ದಡ್ಡನಾಗಿ ಅಡ್ಡಬಿದ್ದು ಕೈಯೊಡ್ಡಿ ಬೇಡುವೆ ಸ್ವರ್ಣ ಗುಡ್ಡೆಯ ಮೇಲಿರುವ ಮಹಾನುಭಾವ5 ಭಂಡಾರದ್ರೋಹ ಬ್ರಹ್ಮಾಂಡಪಾಪಾಗ್ನಿಯು ಮಂಡೆಯೊಳುರಿವುದು ಖಂಡಿತದಿ ಪುಂಡರೀಕಾಕ್ಷನೆ ಕರುಣಾಮೃತರಸ ಕುಂಡದೊಳ್ ಮೀಯಿಸಯ್ಯ ವೆಂಕಟರಾಯ6 ದೃಢಭಕ್ತಿಯನು ಕೊಟ್ಟು ಸಲಹಬೇಕಲ್ಲದೆ ಕೆಡುಕು ಮಾಡುವುದೇನು ಜಡಜನಾಭ ಕಡಲಶಯನ ಲಕ್ಷ್ಮೀನಾರಾಯಣ ನ- ಮ್ಮೊಡೆಯ ಪಡುತಿರುಪತೀಶ ರವಿಕೋಟಿಭಾಸ7
--------------
ತುಪಾಕಿ ವೆಂಕಟರಮಣಾಚಾರ್ಯ
ತಪ್ಪೇನು ಮಾಡಿದೆನೋ ಬ್ರಹ್ಮಣ್ಯ ಗುರು ಪ ಅಪ್ಪಾ ನಿನ್ನಯ ಮನಕೊಪ್ಪದೇ ಇಪ್ಪಂಥ ಅ.ಪ ತಂದೆ ತಾಯಿಯು ನೀನೇ ಬಂಧು ಬಳಗ ನೀನೆ ಸಂದೇಹವಿಲ್ಲವೋ ಕಂದನೆಂದೆನ್ನದಂಥ1 ಒಂದೂ ತಿಳಿಯದಂಥ ಮಂದಮತಿಯು ನಾನು ಛಂದದಿಂದಲಿ ಬುದ್ಧಿ ಮುಂದೆ ಹೇಳಾದಂಥ 2 ಸಂದೇಹ ಕಳೆದಿನ್ನ ಬಂಧವಾಗಹ ಅಘ ವೃಂದ ಕ್ಷಮಿಸಿ ಬೇಗ ಮುಂದೆ ಕರೆಯದಂಥ 3 ದುರುಳರೆಲ್ಲರು ಸೇರಿ ಮರುಳುಗೊಳಿಸಿ ಎನ್ನ ಕರುಣಸಾಗರ ನಿನ್ನ ಕರುಣ ಪಡೆಯದಂಥÀ 4 ಶಾಂತ ಶ್ರೀ ನರಹರಿ ಪಂಥಾದಿಚರಿಸದೇ ಭವ ಕಾಂತಾರ ದಾಟಿಸದಂಥ 5
--------------
ಪ್ರದ್ಯುಮ್ನತೀರ್ಥರು
ತಾಳು ತಾಳೆಲೊ ಕೋಪ ಜಾಲಮಾಡದೆ ಭೂಪ ಕೇಳಿಕೊಂಬೆನು ನಿನ್ನ ಕಾಲಪಿಡಿವೆನೊ ಪ. ಫಾಲಲೋಚನನುತ ಶ್ರೀಲೋಲ ನಿನ್ನನೇ ಕೇಳಿಕೊಂಬೆನು ಮಾತಕೇಳೋ ಕಾಳುಮಾಡದೆ ಮಾತ 1 ದುರುಳತನದಲಿ ನಿನ್ನ ತೆರೆದಕಣ್ಣಳನೆಂದು ಜರಿದು ಪೇಳಿದೆನೋ ತಿರುಗಿ ನಾ ನಿನ್ನ ಗಿರಿಯ ಬೆನ್ನೊಳು ಪೊತ್ತು ಮೆರೆಯುವ ದಡ್ಡನೆಂದೊರೆದ ಕಾರಣದಿಂದ 2 ಕೋರೆಯೊಳ್ ಕೊರೆದು ಕೊನ್ನಾರಿಗೆಡ್ಡೆಯ ತಿಂದು ಳೀರಡಿ ಮಾಡಿದೆ ಘೋರವಿಕ್ರಮನೆಂದು ದೂರಿದೆನದರಿಂದ3 ಹೆತ್ತತಾಯಿಯ ಕೊಂದು ಮತ್ತೆ ಕಪಿಗಳ ಕೂಡಿ ಚಿತ್ತವಸೆರೆಗೈದ ಮತ್ತನೆಂದೆನಲಾಗಿ 4 ಉತ್ತಮಸತಿಯರ ಚಿತ್ತವ ಕಲಕಿದ ಮತ್ತನೆಂದಾಡಿದೆನೋ ಮತ್ತೆ ಕುದುರೆಯನೇರಿ ಕತ್ತಿಯ ಪಿಡಿದೆತ್ತಿ ಸುತ್ತುವನಿವನುನ್ಮತ್ತನೆಂದುದರಿಂದ 5 ಪಿತ್ತವು ತಲೆಗೇರಿ ಮತ್ತೆ ಮತ್ತೆ ನಾನಿನ್ನ ಒತ್ತೊತ್ತಿಜರಿದೆನೊ ಚಿತ್ತಜಪಿತನೆ ಮತ್ತೊಮ್ಮೆ ಬೇಡುವೆ ಗತಿನೀನೆ ನಮಗೆಂದು ಪತಿಕರಿಸೆನ್ನಪರಾಧವ ಮನ್ನಿಸಿ 6 ಕಂದನಿವಗೈದ ಕುಂದುಗಳೆಣಿಸದೆ ತಂದೆ ಸಲಹಯ್ಯ ಶ್ರೀ ಶೇಷಗಿರಿವರ 7
--------------
ನಂಜನಗೂಡು ತಿರುಮಲಾಂಬಾ
ತುದಿಯ ನಿಗಮವ ಕೇಳು ತಂದೆ ಶ್ರೀ ಹರಿಯೆಹುದುಗಿಹವು ಮಂತ್ರಗಳು ಹೊರೆವೆ ನೀ ದೊರೆಯೆ ಪಮೂರು ವೇದಗಳಿಂದ ಮಾಡಿ ಕ್ರತುಗಳ ಜನರುಸೇರಿ ಭೂಸ್ವರ್ಗಗಳ ಸವಿದು ಭೋಗ್ಯಗಳಾಭೂರಿ ಜನ್ಮಗಳೆತ್ತಿ ಬಳಲುತಿರೆ ಜಗವನ್ನುತೋರಲೋಸ್ಕರ ಮಂತ್ರತತಿಗಳಿಹವಾಗಿ 1ಮಂತ್ರಂಗಳಲಿ ಸ್ವಾಮಿಮೂರ್ತಿವತ್ತಾಗುತಿರೆ ಯಂತ್ರ ಪೀಡಿತ ಜನರನೆತ್ತಿ ಬದುಕಿಸಲುತಂತ್ರವಿದ ಮಾಡಿದೆ ನೀ ತಂದೆ ಲೋಕಕ್ಕೆ ಸ್ವಾತಂತ್ರನಾಗಿಹನೆಂದು ತಿಳುಹಿಕೊಡೆ ದೇವ 2ಈ ರೀತಿಯಲಿ ನೀನು ಯಜ್ಞಕಧಿಪತಿಯಾಗಿಸೇರಿ ಮಂತ್ರಂಗಳಲಿ ಸದ್ರೂಪನೆನಿಸಿಕೋರಿದರ್ಥವ ಕೊಟ್ಟು ಕಾಯುತ್ತ ಸಂಸಾರಪಾರ ತಿರುಪತಿಯನ್ನು ಪಡೆದ ವೆಂಕಟಪತಿಯೆ 3ಓಂ ಮಧುರಾಕೃತಯೇ ನಮಃ
--------------
ತಿಮ್ಮಪ್ಪದಾಸರು
ತೆರಳೆ ನೀ ಮಧುರೆಗೆ ಗೋಕುಲದಲಿ ನಾವುಇರಲಾರೆ ಇರಲಾರೆವೋ ಗೋಪಾಲ ಪ ತರಳತನದಿ ನೀ ಆಡಿದ ಆಟಗಳ ಸ್ಮರಿಸಿಸ್ಮರಿಸಿ ನಾವು ಮರುಗುವುದೆಲೋ ದೇವಅ.ಪ. ವ್ರಜದ ಒಳಗೆ ನೀನು ಇದ್ದದ್ದು ಕೇಳಿಭರದಿ ಪೂತನಿಯ ಕಳುಹಿ ಕೊಟ್ಟರೆತೊಡೆಯ ಒಳಗೆ ಇಟ್ಟು ಸ್ತನಕೊಡುತಿರಲವಳಹುಲಿಯಂತೆ ಹೀರಿ ಹಿಪ್ಪೆಯಮಾಡಿದೆಯೊ ದೇವ ತೃಣದ ಅಸುರನ ಕೊರಳಮಿಸುಗುತ್ತ ಅವನ ಕೆಡಹಿದಿಭರದಿ ಬಂಡಿಯ ಒದ್ದು ಶಕಟನ ಪುಡಿಯಮಾಡಿದ ಪರಮ ಪುರುಷನೆ 1 ಕೊಲ್ಲಕಂಸನು ಭಾಳ ಯೋಚಿಸಿ ಮನದಿಕೊಲ್ಲಬೇಕೆಂದೆನುತ ಸೂಚಿಸೆಬಿಲ್ಲನೆ ಮುರಿದು ಆ ನಲ್ಲೆಯ ಕರಪಿಡಿದುಒಳ್ಳೆ ಪುರಕೆ ಹೋಗಿ ಎಲ್ಲ ಕಾರ್ಯವ ನಡೆಸಿಮೆಲ್ಲನೆ ಏಕಾಂತ ಗೃಹದಲ್ಲಿಸೊಲ್ಲ ಕೇಳುತ ಅವನನು ಕೋಪಿಸೆಅಲ್ಲಿಯನುಜನ ತರಿದು ಅವನಕೊಲ್ಲ ಕಳುಹಿದ ಕಠಿನ ಹೃದಯನೆ2 ಎಲ್ಲ ಹಿಂದಿನ ಸುದ್ದಿ ಬಲ್ಲೆವೊ ನಾವುಇಲ್ಲಿ ಮರೆತೀಯೆಂದು ತಿಳಿದೆವೋಬಲ್ಲ ಅಕ್ರೂರನು ಬಂದು ಇಲ್ಲಿಗೆ ನಮ್ಮಇಲ್ಲದ ಮಾತ ಕೇಳಿ ಮೆಲ್ಲನೆ ಕರೆದೊಯ್ದಅಲ್ಲಿ ರಥವನೆ ಕಾಣುತ ಎದೆಝಲ್ಲೆನಿಸಿ ನಡುಗಿದೆವೊಪುಲ್ಲನಾಭನೆ ಜ್ಞಾನ ಭಕುತಿ ನ-ಮ್ಮೆಲ್ಲರಿಗೆ ನೀನಿತ್ತು ಪೋಗೆಲೊ 3 ಹೆಂಡತಿಯ ಕೂಡಿ ಕದನ ಮಾಡಿಮುಂದೆ ಮೂವರು ತೆರಳಿದಿರಿಬಂದು ಋಷಿಯಾಶ್ರಮದಿ ನಿಂತು ಗ್ರಾಸವ ಬೇಡೆಮಂದಗಮನೆ ನೋಡಿ ಚೆಂದಾಯಿ -ತೆಂದೆ ತಂದು ಕಲಶೋದಕವ ಚೆಲ್ಲಲುಕಂದರುಗಳು ನೀವಾದಿರೊ ತಂದ ಹಲಸಿನ ದೊನ್ನೆ ಪಾಲನುಚೆಂದದಿಂದಲಿ ಕುಡಿದ ದೇವನೆ4 ಮಂದಗಮನೇರಿಂದ ನಿಮಗೆ ಮತ್ತೆಒಂದುಪಕಾರವ ಕಾಣೆವೊಚೆಂದಾಗಿ ಮಾನದಿ ಮಂದಿರದಲಿ ಇರದೆಗಂಡರ ಬಿಟ್ಟು ನಿಮ್ಹಿಂದೆ ತಿರುಗಿದೆವೊಇಂದಿರೆಯು ಕಾರಣಗಳಲ್ಲವೊನಿಂಗೆ ನೀನೆ ಸ್ವರಮಣನಂಮಂಗಳಾಂಗನೆ ಮಾರಜನಕನೆರಂಗವಿಠಲನೆ ರಾಜೀವಾಕ್ಷನೆ5
--------------
ಶ್ರೀಪಾದರಾಜರು
ತೋರಬಾರದೆ ನಿಮ್ಮ ಚರಿತೆಯನು ನರರೊಳು ನಗೆಗೀಡು ಮಾಡದ ಹಾಗೆ ಪ. ಕಲ್ಲೊಳು ಕಾಂತೆಯ ಮಾಡಿದವನೆಂ- ದೆಲ್ಲರು ಜಗÀದೊಳು ಪೇಳುವರು ಅಲ್ಲಿ ಮಾಡಿದ ಹಾಗೆ ಇಲ್ಲಿ ತೋರಿಸಿದರೆ ಬಲ್ಲಿದನೆನ್ನೊಡೆಯ ದೊಡ್ಡವನೆಂದು ಸಾರುವೆ 1 ಅಹಹ ಕುಬುಜೆಯಳ ತನುವನ್ನೆತ್ತಿ ಮಹಿಯೊಳು ಯುವತಿಯ ಮಾಡಿದೆಯೆಂಬರು ಬಹು ಪರಾಕ್ರಮವನ್ನು ಈಗ ತೋರಿಸಿದರೆ ಅಹುದೋ ಎನ್ನೊಡೆಯ ದೊಡ್ಡವನೆಂದು ಸಾರುವೆ 2 ನೀನೆ ಗತಿಯೆಂದು ಬಂದ ಭಕ್ತನ ಕ- ಣ್ಣುನವ ತಿದ್ದಿ ನಿಜವ ತೋರಿಸಯ್ಯ ದೀನದಯಾಳು ಹೆಳವನಕಟ್ಟೆ ರಂಗಯ್ಯ ದಾನಿ ಎನ್ನೊಡೆಯ ದೊಡ್ಡವನೆಂದು ಹೊಗಳುವೆ 3
--------------
ಹೆಳವನಕಟ್ಟೆ ಗಿರಿಯಮ್ಮ
ದಯವಿರಲಿ ದಯವಿರಲಿ ದಾಮೋದರ ಪ. ಸಯವಾಗಿ ಬಿಡದೆನ್ನ ಸಾಕುವ ಶ್ರೀಕೃಷ್ಣಅ.ಪ. ಹೋಗಿ ಬರುವೆನಯ್ಯ ಹೋದಹಾಂಗೆಲ್ಲಸಾಗುವವನಲ್ಲ ನಾ ನಿನ್ನ ಬಿಟ್ಟುತೂಗಿ ತೊಟ್ಟಿಲು ಕೊನೆಗೆ ಸ್ಥಳದಲ್ಲೆ ನಿಲ್ಲುವುದುಹ್ಯಾಗೆ ನೀ ನಡೆದಂತೆ ಹಾಗೆ ನಾ ನಡಕೊಂಬೆ 1 ಇದ್ದಲ್ಲೆ ಎನ್ನನುದ್ಧರಿಪ ಶಕ್ತಿ ಅ-ಸಾಧ್ಯ ನಿನಗೆಂದು ನಾ ಬಂದವನಲ್ಲನದ್ಯಾದಿ ಕ್ಷೇತ್ರಮೂರ್ತಿಗಳಲ್ಲಿ ನಿಜ ಜ್ಞಾನ-ವೃದ್ಧಜನರ ಹುಡುಕಿ ನಿನ್ನ ತಿಳಿಯಲು ಬಂದೆ 2 ಸತತ ಇದ್ದಲ್ಲೆ ಎನ್ನ ಸಲಹೊ ಅದರೊಳಗಾಗಿಅತಿಶಯವು ಉಂಟು ವಿಭೂತಿಯಲ್ಲಿಗತಿಯು ಸಾಧನಕೆ ಅಭಿವ್ಯಕ್ತ ಸಂದರ್ಶನದಿಸ್ಮøತಿಗೆ ವಿಶೇಷ ಮಾರುತಿರಮಣ ನಿನ್ನ 3 ನೋಡಿದೆನೆ ನಾ ನಿನ್ನ ನೋಡದೆ ಎಂದೆಂದುಪಾಡಿದೆನೆ ಆರಾರು ಪಾಡದೊಂದುಮಾಡಿದೆನೆ ಅರ್ಚನೆಯ ಮೀಸಲಾದುದು ಒಂದುಮೂಢಮತಿಯಲಿ ಮುಂದೆ ನಿಂದೆ ಕೈಮುಗಿದು 4 ಬಂದೆನೊ ನಾನಿಲ್ಲಿ ಬಹುಜನ್ಮದ ಸುಕೃತ-ದಿಂದ ನಿನ್ನ ಬಳಿಗೆ ಇಂದಿರೇಶಒಂದು ಮಾತ್ರವು ಇಟ್ಟು ಸಕಲವು ಅರ್ಪಿಸಿದೆಬಂಧನ ಕಡಿವ ಭಕುತಿಯು ಜ್ಞಾನ ನೀಡುವುದು 5 ಬಿನ್ನಪವ ಕೇಳು ಸ್ವಾಮಿ ಎನ್ನನ್ನೊಬ್ಬನ್ನೆ ಅಲ್ಲಎನ್ನ ಹೊಂದಿ ನಡೆವ ವೈಷ್ಣವರನಇನ್ನವರಿಗೆ ಬಾಹೊ ದುಷ್ಕರ್ಮಗಳ ಕೆಡಿಸಿಘನಗತಿಗೈದಿಸುವ ಭಕುತಿ ಕೊಡು ಕರುಣದಿ 6 ರಾಜರಾಜೇಶ್ವರ ರಾಜೀವದಳನಯನಮೂಜಗದೊಡೆಯ ಮುಕುಂದಾನಂದಈ ಜೀವಕೀದೇಹ ಬಂದದ್ದಕ್ಕು ಎನಗತಿ ನಿ-ವ್ರ್ಯಾಜದಿ ಸುರಗಂಗೆ ಸ್ನಾನವನು ಮಾಡಿಸೊ 7 ಎನಗೆ ಆವುದು ಒಲ್ಲೆ ಎಲ್ಲೆಲ್ಲಿ ಪೋದರುಕ್ಷಣ ಬಿಡದೆ ನಿನ್ನ ನೋಳ್ಪ ಜ್ಞಾನವ ಕೊಡೊಚಿನುಮಯಮೂರುತಿ ಗೋಪಾಲವಿಠಲಘನಕರುಣಿ ಮಧ್ವಮುನಿಮನಮಂದಿರನಿವಾಸ8
--------------
ಗೋಪಾಲದಾಸರು
ದಾಸರಾಯಾ ಎನ್ನ | ಬೆಂಬಿಡದಲೆ ಕಾಯೋ ಬಹು ಪರಿಯಿಂದ ದಾಸರಾಯಾ ಪ ಈರೇಳು ವರುಷವಾರಂಭಿಸಿ ಪ್ರತಿದಿನ | ದಾಸರಾಯ ಜಾವು ಮೂರುಗಳಲ್ಲಿ ಮುಕುಂದನ ಚರಣವ | ದಾಸರಾಯಾ | ಚಾರು ಮನಾಬ್ಜದಿ ಬಹಿರದಿ ಬಗೆ ಬಗೆ | ದಾಸರಾಯಾ | ಭೂರಿ ಭಕುತಿ ಭರಿತನಾಗಿ | ದಾಸರಯ್ಯಾ1 ಪುಂಗವ ಸುಮತೀಂದ್ರ ರಾಯ ಕರೆದ ನಿನ್ನ | ದಾಸರಾಯಾ | ಸಂಗೀತ ರಸನ ಪಾನಮಾಡಿ ಹರುಷದಿ | ದಾಸರಾಯಾ | ಹರಿ | ಡಿಂಗರೊಳುತ್ತುಂಗನೆನಿಸಿಕೊಂಡೆ ದಾಸರಾಯ 2 ಕುಶಲಗಾನವ ಕೇಳಿ ಗುರುಸತ್ಯ ಪೂರ್ಣರು | ದಾಸರಾಯಾ | ಪರಾ ವಸುನಾಮ ಗಂಧರ್ವನವತಾರ ನೀನೆಂದು | ದಾಸರಾಯಾ | ಪೆಸರಿಟ್ಟರಂದು ವಿದ್ವಜ್ಜನ ಮೆಚ್ಚಲು ದಾಸರಾಯಾ | ಎನ ಗೊಶವಹುದೇ ನಿಮ್ಮ ಮಹಿಮೆ ಕೊಂಡಾಡಲು |ದಾಸರಾಯಾ | 3 ಚರಿಸಿದೆ ಪುಣ್ಯಕ್ಷೇತ್ರಗಳ ಭಕುತಿಯಿಂದ | ದಾಸರಾಯಾ | ಪ್ರತಿ | ವರುಷ ಬಿಡದೆ ಶೇಷಗಿರಿಯವಾಸನ | ದಾಸರಾಯಾ | ಪರಿಯಂತ | ದಾಸರಾಯಾ | ಪರಿ ಚರಿಯವ ಕೈಕೊಂಡು ಪಡೆದೆ ಮಂಗಳಗತಿ ದಾಸರಾಯ 4 ಮುನಿಯು ಉಪೇಂದ್ರರಾಯರು ನಿಮ್ಮ ಚರಿತೆಯ | ದಾಸರಾಯಾಕೇಳಿ ಸಾನುರಾಗದಿ ಸರ್ವ ಮಂತ್ರೋಪದೇಶವ | ದಾಸರಾಯಾ | ಆನುಪೂರ್ವಕಮಾಡಿ ಅತಿ ಸಂತೋಷದಿ | ದಾಸರಾಯಾ | ಕೊಟ್ಟರು ಶ್ರೀ ನರಸಿಂಹ ಪ್ರತಿಮೆ ಸಾಲಿಗ್ರಾಮ | ದಾಸರಾಯಾ | 5 ಕಿಂಕರನೆನಿಸಿ ಪರಂದರದಾಸರೆ | ದಾಸರಾಯಾ | ಅವರಿಂ ದಂಕಿತ ವಹಿಸಿ ನಿಶ್ಯಂಕೆಯಿಂದ ನೀನು ದಾಸರಾಯಾ | ಪೊಂಕವ ಪೊಗಳುತ ಪೊಡವಿಯೊಳು ಚರಿಸಿದೆ | ದಾಸರಾಯಾ|ಭವ ಪಂಕವ ದಾಟ ಪರೇಶನನೈದಿದೆ | ದಾಸರಾಯಾ 6 ಪರಿಯಂತ ಕರ ಒಡ್ಡಲೊಲ್ಲೆನೆಂಬುವ ಛಲ | ದಾಸರಾಯಾ | ನಿನಗೆ ಸಲ್ಲಿತು ನಿಜ ಭಾಗವತರ ಪ್ರಿಯ | ದಾಸರಾಯಾ | ನಿಮ್ಮಾ ಅನುಭವೋಪಾಸನೆ ಏನು ತಿಳಿಯದು ದಾಸರಾಯಾ 7 ಕಮಲ ಧ್ಯಾನ ದಾಸರಾಯಾ | ಸ್ನಾನ ವರ ಮಂತ್ರ ಜಪ ತಪ ವಿಹಿತಾಚರಣೆಗಳು | ದಾಸರಾಯಾ ಪೆರತೊಂದು ಸಾಧನ ಮನ ವಾಕ್ಕಾಯಗಳಲಿ | ದಾಸರಾಯಾ | ನಾನೊಂದರಿಯೆ ದಯಾಬ್ಧಿ ಉದ್ಧರಿಸೆನ್ನ ಭವದಿಂದ ದಾಸರಾಯಾ 8 ನಾರಾಯಣಾತ್ಮಜ ಅನಂತಾರ್ಯರುದರದಿ ದಾಸರಾಯಾ |ಪುಟ್ಟಿ | ನೂರೊಂದು ಕುಲಗಳುದ್ಧಾರ ಮಾಡಿದೆ | ದಾಸರಾಯಾ | ಕಾರುಣ್ಯನಿಧಿ ಜಗನ್ನಾಥವಿಠಲ | ದಾಸರಾಯಾ | ನಿಮ್ಮ ಚಾರು ಚರಿತ್ರೆಯ ತುತಿಸಿ ಪಾವನನಾದೆ | ದಾಸರಾಯಾ 9
--------------
ಜಗನ್ನಾಥದಾಸರು
ದೀನಬಂಧೋ ಹೇ ಭಲಾ ನೀನೆ ಸೈ ಸೈಯಲಾ ಪ ಪಾಸಲೆ ಶರಣರ ಪೊರೆವದಕಿನ್ನು ಬ್ಯಾಸರೇನಿಲ್ಲಲಾ 1 ದುಷ್ಟರ ದಂಡಿಸಲಾ ಮನಸಿಗೆ ಹುಟ್ಟಿದೆ ಕಲಕಲಾ 2 ಬಿಡದೆ ಶ್ರೀವಿಠಲಾ ಎನ್ನೊಳು ಮಾಡಿದೆಲೋ ಛಲಾ 3
--------------
ಶ್ರೀದವಿಠಲರು
ದೇವ ನೀನುಪಕಾರ ಅಪಾರ ಮಾಡಿದೆ ಕಾವ ಕರುಣಾ ಸ್ವಭಾವ ಕೇಳು ಪೇಳುವೆ ಪ ನವಯುವತಿ ಶಿಲೆ ಕೊರಳಿಗೆ ಕಟ್ಟಿಕೊಂಡು ಭವ ಸಾಗರದೊಳು ಮುಳುಗಿ ಪೋಗುವ ನಾ ಅವಸರಕೊದಗಿ ಪಿಡಿದು ದಡ ಸೇರಿಸಿ ದವನಾಗಿ ಎಚ್ಚರಿಕೆ ತಂದಿತ್ತೆ ದಯಾಳೊ 1 ಭಾರ ತಾಳದು ಎಂದು ಸೂತ್ರವೂ ಶಿಖಿಯೊ ನಿ ವಾರಿಸಿ ತನುವಿಗೆ ಲಘುವು ಮಾಡಿದೇಯೆ ಭಾರಮಯತಾ ರಜ್ಜು ಮನಕೆ ಸುತ್ತಿದೆ ಆಶಾಂ- ಕುರ ಕೇಶಗಳು ಬೆಳದಿವೆ ಪರಿಹರಿಸು 2 ಲಕ್ಷ್ಯವಿಲ್ಲದೆ ಅನ್ನ ಮೊದಲಾಗಿ ಕೊಡುವಂಗೆ ಶಿಕ್ಷಿಸಿ ಗರ್ವವು ಕಳೆದು ಈಗ ಭಿಕ್ಷುಕನ ಮಾಡಿದೆ ನಿನ್ನದೆ ಬೇಡುವೆ ಲಕ್ಷ್ಮೀಪತಿಯೆ ಅಂತರಂಗದ ಗೃಹಸ್ಥ 3 ಏಳು ಮನೆಗಳನ್ನು ಕೇಳೋದು ಯತಿಧರ್ಮ ಏಳಲಾರಿನೊ ವೃದ್ಧ ಕೇಳಲಾರೆ ಕೇಳುವೆ ನಿನ್ನನೇ ಏಳು ಭಿಕ್ಷವ ನೀಡು ಬಾಳುವೆ ಬಹುಕಾಲ ನಿನ್ನ ಕೊಂಡಾಡುತ 4 ಶ್ರೋತ್ರಕ್ಕೆ ನಿನ್ನ ಕಥೆ ನಾಸಕೆ ನಿನ್ನ ಗಂಧ ನೇತ್ರಕ್ಕೆ ನಿನ್ನ ರೂಪ ರಸನಿಗೆ ನಾಮಾಮೃತ ಗಾತ್ರಕ್ಕೆ ನಿನ್ನ ಪಾದಸ್ಪರುಷ ಮನೋಬುದ್ಧಿ ಮಾತ್ರಕ್ಕೆ ಗುಣಕರ್ಮ ಕೊಡು ವಾಸುದೇವವಿಠಲ5
--------------
ವ್ಯಾಸತತ್ವಜ್ಞದಾಸರು
ದ್ರೋಹಿಯೋ ನಾನಿನಗೆ ದ್ರೋಹಿಯೋ ಪ ಪಾಹಿ ಬ್ರಹ್ಮಜವಂಶ ಪಾಪ ಬ್ರಾಹ್ಮಣ ಪ್ರಿಯ ಅ.ಪ ಸ್ವಪ್ನ ಜಾಗ್ರತೆ ನಿದ್ರೆ ಮೋಕ್ಷಾವಸ್ಥೆಯಲ್ಲಿ ತೈಜಸ ವಿಶ್ವ ಅಪ್ಪತುರೀಯನಾಗಿ ದಾತ ನಿನ್ನನ್ನು ಬಿಟ್ಟು ಬೆಪ್ಪನಂದದಿ ನರರ ಯೆಂಜಲ ಬಯಸುವೆ 1 ಬಿಂಬ ಮೂರ್ತಿಯು ನೀನು ಪ್ರತಿ ಬಿಂಬನಾನಿನಗೆ ತುಂಬಿ ಅಂತರ್ಬಹಿ ಮೆರೆವ ವಿಷ್ಣುವೆ ನಿನ್ನ ನಂಬಿದೆ ದೃಢದಿಂದ ಬರಿದೆ ಹಂಬಲಿಸುವೆ ಬೆಂಬಲನಾಗಿದ್ದು ತುಂಬೊ ನಿನ್ನಯ ಭಕ್ತಿ 2 ಸತಿ ಸುತ ಪಿತರಲ್ಲಿ ತಿಳಿಯದೆ ನಿನ್ನಿರವ ಹಿತರವರು ಬರಿದೆಂಬ ಭ್ರಾಂತಿಯ ನೀಗದೆ ಖತಿಯ ಪಡುವೆನು ಭವದಿ ಕುಮತಿಯನಗೆಮುಂದೆ ಗತಿಯೇನು ಜಗದೀಶ ಮರೆತು ನಿನ್ನನು ದೇವ 3 ಕಸವ ರಸವೆಂದು ಬಯಸುವೆ ವಿಷಯವ ರಸವ ವಿಷವೆಂದು ತೊರೆದು ಜೀವಿಸುತಿರ್ಪೆ ಅಸಮವಿಷಣವಿಷ್ಣು ಆತ್ಮಾಖ್ಯಾತನ ನಿನ್ನ ತುಸಸಹ ನೆನೆಯದೆ ಹುಸಿಯ ದಾಸನಾಗಿ 4 ನನ್ನದಲ್ಲದ ಒಡವೆ ನನ್ನದೆಂದು ತಿಳಿವೆ ನಿನ್ನ ಸ್ವಾಮಿತ್ವವ ಮರದು ಮೆರೆಯುತಿರ್ಪೆ ನನ್ನದೇ ಸ್ವಾತಂತ್ರವೆಂದು ತಿಳಿದು ಭವದಿ ಹುಣ್ಣು ತಿಂದೆನು ದೊರೆಯೆ ಕೊಡದೆ ನಿನ್ನದುನಿನಗೆ 5 ವೇದ ವೋದುವ ನಾನು ನಾನೆನೀನೆಂಬುವೆ ಭೇದವ ತಿಳಿಯದೆ ಭಜಿಸುವೆ ಕುವಿದ್ಯೆ ಬಾದರಾಯಣಗುದರ ಭೇದವ ನುಡಿಯುವೆ ಮಧ್ವಮಂದಿರ ಕೃಷ್ಣ ನೀನಿಲ್ಲ ವೆನ್ನುತ6 ಪೂರ್ಣ ಗುಣದವ ನಿನ್ನ ನಿರ್ಗುಣನೆಂಬುವೆನು ಪೂರ್ಣರಲ್ಲದ ಸುರರ ಸಾಟಿ ನಿನಗೆಂಬುವೆನು ಪೂರ್ಣಬೋಧರ ಕರುಣ ಕೊಡಿಸದ್ದಿದರೆಯಿನ್ನು ಜ್ಞಾನ ಮಾರ್ಗವ ಕಾಣೆ ಸ್ವಾಮಿ ಜಗಜ್ಜನಕ 7 ಜನನ ಮರಣ ರಹಿತ ಜನಿಸುವೆ ನಮ್ಮೊಡನೆ ಕ್ಷಣ ಬಿಟ್ಟಗಲದಲೆಮಗೆ ಉಂಡುಣಿಸುತಿಪ್ಪೆ ಅನಿಮಿತ್ತ ಬಂಧುವೆ ಮರೆತು ನಿಮ್ಮುಪಕಾರ ದನುಜರ ಸೇವಿಸುತ ಹಾಳು ಮಾಡಿದೆ ಬಾಳು 8 ನಿರಯ ಭಾಜನ ನಾದೆ ದೂರವಾಯಿತು ಮುಕುತಿ ದಾರಿಕಾಯುವರ್ಯಾರೊ ಧೀರ ಜಯತೀರ್ಥ ವಾಯು ಅಂತರದಿರ್ಪ ನೀರಜಾಕ್ಷನಮ್ಮ ಶ್ರೀ ಕೃಷ್ಣವಿಠಲನೆ 9
--------------
ಕೃಷ್ಣವಿಠಲದಾಸರು
ನಗುವರಲ್ಲವೊ ರಂಗ ನಾಚಿಕೆ ಇಲ್ಲವೊನಿನಗೆ ಹಗೆಯ ಮಾಡಿದವಳ ಬಗೆಯ ಕಾಣೆರಂಗ ಪ. ಅನ್ಯಾಯ ನ್ಯಾಯವೆಂಬುದಿನ್ನು ನೀ ಅರಿಯೆಲೊಮನ್ನೆಯಳ ವೀಳ್ಯ ಹಿಡಿದೆಯಲ್ಲೊನೀ ಹಿಡಿದೆಯಲ್ಲೊ ರಂಗ1 ಭರದಿ ಕೋಪಿಸಿ ಭೀಷ್ಮ್ಮೆ ತಿಳುವಳಿಕೆ ನಿನಗಿಲ್ಲಹರದೆಯರಿಬ್ಬರು ಎನಗೆ ಸರಿಯರಲ್ಲಎನಗೆ ಸರಿಯರಲ್ಲ ಭೀಷ್ಮ್ಮೆ ದೂರುವರೇನೆ2 ಹೀಂಗೆ ಯಾರೂ ನಗರೇನ ಭೀಷ್ಮ್ಮೆಇರುವೆಗಿಂತ ಕಡಿ ಮಾಡಿದೆಲ್ಲಎನ್ನ ಕಡಿಮಾಡಿದೆಲ್ಲ 3 ಅತಿ ಕೋಪದಿಂದ ಭೀಷ್ಮೆ ಸ್ಮøತಿಯಿಲ್ಲ ನಿನಗಿನ್ನುಸತಿಯರಿಬ್ಬರು ಎನಗೆ ಸರಿಯರಲ್ಲಎನಗೆ ಸಮರಲ್ಲ4 ಅಕ್ಕ ತಂಗಿಯರೆಂಬೊ ದಿಕ್ಕಿನ ಮೂಲೆಗೆ ಬೆಕ್ಕಿನಕಿಂತ ಕಡಿ ಮಾಡಿದೆಲ್ಲೊಎನ್ನ ಮಾಡಿದೆಲ್ಲೊ ರಂಗಾ 5 ವಾರಿಜಾಮುಖಿ ಎನಗೆ ಯಾರು ಹಿರಿಯರು ಹೇಳೆನಾರಿಯರಿಬ್ಬರು ಎನಗೆ ಪೊರರಲ್ಲಎನಗೆ ಪೊರರಲ್ಲ್ಲ 6 ಹುಡುಗಿಯರೆಂಬುವನುಡಿಯ ಕೇಳುತ ಭೀಷ್ಮಿಕಡುಹರುಷ ಬಡುತಲೆ ಮನದೊಳಗೆತನ್ನ ಮನದೊಳಗೆ7 ಕೃಷ್ಣನ ಮಡದಿಯರು ಎಷ್ಟು ಗುಣವಂತರೆಂದುಅಷ್ಟ್ಟೂರಕ್ಕಿಂತ ಮೊದಲೆ ಮದಿವ್ಯಾದೆನಿಮ್ಮನ್ನು ಮದುವ್ಯಾದೆ8 ಸಿಟ್ಟು ಬಿಟ್ಟಿಬ್ಬರು ಕೃಷ್ಣ ನಮ್ಮವನೆನ್ನಿಧಿಟ್ಟಿ ರಾಮೇಶ ಸಕಲೇಷ್ಟವೆನ್ನಿಸರ್ವೇಷ್ಟವೆನ್ನಿ9
--------------
ಗಲಗಲಿಅವ್ವನವರು
ನಮೋ ನಮೋ ನಾರಾಯಣ ನಮೋ ಶ್ರುತಿ ನಾರಾಯಣ ನಮೋ ಬಾದರಾಯಣ ನರನ ಪ್ರಾಣ ಪ ಶಿವನ ಮೋದದಲಿ ಪಡೆದೆ ಶಿವರೂಪದಲಿ ನಿಂದೆ ಶಿವನೊಳಗೆ ಏರಿದೆ ಶಿವನಿಗೊಲಿದೆ ಶಿವಗೆ ನೀ ಮಗನಾದೆ ಶಿವ ತಾತನೆನೆಸಿದೆ ಶಿವನ ಮಗನಾ ಪಡೆದೆ ಶಿವನ ಕಾಯ್ದೆ1 ಶಿವಗೆ ಸಹಾಯಕನಾದೆ ಶಿವನ ಕಂಗಡಿಸಿದೆ ಶಿವನ ಧನುವನು ಮುರಿದೆ ಶಿವನೊಲಿಸಿದೆ ಶಿವನ ಜಡ ಮಾಡಿದೆ ಶಿವನ ಒಡನೆ ಬಂದೆ ಶಿವಮುನಿಗೆ ಉಣಿಸಿದೇ ಕೇಶವನೆನಿಸಿದೇ 2 ಶಿವನ ಜಡೆಯೊಳಗಿದ್ದ ಶಿವಗಂಗೆಯ ಪೆತ್ತೆ ಶಿವನ ಕೂಡಲಿ ಕಾದಿದವನ ಭಾವ ಶಿವ ಭಕ್ತನ್ನ ನಿನ್ನವನಿಂದ ಕೊಲ್ಲಿಸಿದೆ ಶಿವನ ಶೈಲವನೆತ್ತಿದವನ ವೈರಿ3 ಶಿವ ನುಂಗಿದದ ನುಂಗಿದವನ ಒಡನಾಡುವ ಶಿವ ಪರಾಶಿವ ನಿನ್ನ ಶಿವ ಬಲ್ಲನೇ ಯವೆ ಇಡುವನಿತರೊಳಗೆ ಧವಳ ಹಾಸಾ4 ಶಿವನ ಮೇಲಿದ್ದ ಸಹಭವೆ ರಮಣ ಸರ್ವದಾ ಶಿವನೊಳಗಿಳಿದ ಶಿಷ್ಯನಿವ ಹರಾತೀ ತಲ್ಪ ಶಿವ ಸಮಾನಿಕ ರೂಢ ಶಿವನ ಮನೆ ತೊಲಗಿಸುವ ಶಿವ ಬಾಂಧವಾ 5 ಶಿವನ ಧೊರಿಯೆ ಜ್ಞಾನ ಶಿವ ಹಚ್ಚುವದೆ ಕೊಡು ಶಿವಮಣಿ ಎನಿಸುವ ಸ್ತವ ಪ್ರಿಯನೇ ವಾಹನ ವೈರ ಶಿರವ ತರಿಸಿದೆ ದೇವ ಶಿವ ಪ್ರತಿಷ್ಠಿಸಿದೆ ಶಿವಗೆ ಕಾಣಿಸದಿಪ್ಪೆ6 ಶಿವನ ಸೋಲಿಸಿದವನ ಜವಗೆಡಿಸಿದೆ ಶಿವನು ಕುದರಿಯ ಹೆರವ ಅವನು ಕಾಯಿದ ಗೋವ ಶಿವನವತಾರ ಶಸ್ತ್ರವನು ಹಳಿದೆ 7 ಶಿವನಧರ್Àನಾಗಿ ದಾನವನು ಕೊಂದ ಮಹಿಮಾ ಶಿವಋಷಿ ಪೇಳಿದ ಯುವತಿ ರಮಣಾ ಶಿವನ ವೀರ್ಯವ ಧರಿಸಿದವನ ಮುಖದಲಿ ಉಂಬ ಅವರ ಬೆಂಬಲವೇ ಯಾದವಕುಲೇಶಾ 8 ಶಿವಗೆ ತ್ವಂಚ ಬಾಹುಯೆಂದು ಪೇಳಿ ಮೋಹ ದಿವಿಚಾರಿಗಳ ತಮಸಿಗೆ ಹಾಕುವೆ ಶಿವಮೂರುತಿ ನಮ್ಮ ವಿಜಯವಿಠ್ಠಲರೇಯ ಶಿವನಾಳು ಮಾಡಿ ಆಳುವ ದೈವವೇ9
--------------
ವಿಜಯದಾಸ