ಒಟ್ಟು 1538 ಕಡೆಗಳಲ್ಲಿ , 110 ದಾಸರು , 1166 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರುತಿ ಮಾಡುವೆ ನಾ ಪ್ರಲ್ಹಾದಗೆ ಪ ಆರುತಿ ಮಾಡುವೆ ಧಾರುಣಿಯೊಳು ರಘುವರನರ್ಚಿಪ ಯತಿವರ ವಂದಿಪಗೆ ಅ.ಪ. ಸಾಲಿಯೊಳಗೆ ಕೂತು ಬಾಲಕರಿಗೆ ಹರಿಲೀಲೆ ಪೇಳಿದ ಭಕ್ತ ಲೋಲನಾದವಗೆ 1 ಪಾದ ಕಂಡವಗೆ 2 ಬಂದು ಭೂಮಿಲಿ ರಾಘವೇಂದ್ರ ನಾಮದಿ ಪೂಜಿಸಿಂದಿರೇಶ ಪುಟ್ಟ ಬೃಂದಾವನದಿ ಕೂತ3
--------------
ಇಂದಿರೇಶರು
ಆರುತಿ ಮಾಡುವೆನಾ ಕೃಷ್ಣಮೂರುತಿಗೆ ಪ ಆರುತಿ ಮಾಡುವೆ ನಾರಿ ದ್ರೌಪದಿಗೆ ಸೀರಿಗಳುಡಿಸಿದ ಮಾರಪಿತಗೆ ಸಖಿ ಅ.ಪ ಅಂಗುಟಾಗ್ರದಿಂದ ಗಂಗೆಯ ಪಡೆದಂಥ ಮಂಗಳಪ್ರದ ಶಿರಿರಂಗನ ಚರಣಕೆ1 ಭವ ಬಂಧವ ಬಿಡಿಸುವ ನಂದಗೋಪನ ಮುದ್ದು ಕಂದ ಶ್ರೀಕೃಷ್ಣಗೆ 2 ಆರಾದಿಸುವ ರಘ ದೂರಮಾಡುವ ಶÀುಭ ಕಾರಿ ಕೊಪ್ಪರ 'ಸಿರಿನಾರಶಿಂಹಗೆ ' ಬೇಗ 3
--------------
ಕಾರ್ಪರ ನರಹರಿದಾಸರು
ಆರೇನು ಮಾಡುವರು ಅವನಿಯೊಳಗೆ | ಕರ್ಮ ಫಣಿಯಲ್ಲಿ ಬರೆದುದಕೆ ಪ ಮಾಡಿದಡಿಗಿಯು ಕೆಡಲು ಮನಿಯ ಗಂಡನು ಬಿಡಲು | ಸತಿ ತನ್ನ ಕುಣಿಸ್ಯಾಡಲು ನಿಜದಿ || ಗೋಡೆಗೆ ಬರೆದ ಹುಲಿ ಘಡಘಡನೆ ತಿನಬರಲು | ಆಡಿದ ಮತುಗಳು ಅಖಿಳಿರು ನಿಜವೆನಲು 1 ಹೊಲ ಬೇಲಿ ಮೆಯ್ದರೆ ಮೊಲ ಇರಿಯ ಬಂದರೆ | ತಲೆಗೆ ತನ್ನ ಕೈ ಪೆಟ್ಟು ತಾಕಿದರೆ || ಹೆರಳು ಹಾವಾದರೆ ಗೆಳೆಯ ರಿಪುವಾದರೆ | ಕಲಿಸಿದ ಅವಲಕ್ಕಿ ಕಲಪರಟಿ ನುಂಗಿದರೆ 2 ಹೆತ್ತ ತಾಯಿ ಹಿಡಿದು ಮಕ್ಕಳಿಗೆ ವಿಷ ಹಾಕಿದರೆ | ಪೆತ್ತ ತಂದೆಯು ಹೊರಗೆ ಮಾಡಿದರೆ || ತೊತ್ತು ಅರಸಿಗೆ ಪ್ರತ್ಯುತ್ತರವನಾಡಿದರೆ | ಕತ್ತಲೆ ಬೆನ್ನಟ್ಟಿ ಕರಡ್ಯಾಗಿ ಬಂದರೆ 3 ಕಣ್ಣವೊಳಗಿನ ಗೊಂಬಿ ಕಾದ ಬಂದರೆ | ಹೆಣ್ಣಿನ ಹರಟೆ ಹೆಚ್ಚಾದರೆ | ಅನ್ನವನು ಉಣ್ಣಲು ಅಜೀರ್ಣವಾದರೆ | ಪುಣ್ಯಕ್ಷೇತ್ರಗಳಲ್ಲಿ ಪಾಪ ಅಟ್ಟಿಸಿದರೆ 4 ಏರಿ ಕುಳಿತ ಕುಂಬಿ ಎರಡಾಗಿ ಮುರಿದರೆ | ವಾರಿಧಿಗಳು ಮೇರೆ ಮೀರಿದರೆ || ಆರಿದ ಇದ್ದಲಿಗಳು ಅಗ್ನಿಯಾದರೆ | ನಮ್ಮ ವಿಜಯವಿಠ್ಠಲನಿರುವ ತನಕ 5
--------------
ವಿಜಯದಾಸ
ಆರೋಗಣೆಯ ಮಾಡು ಸಾರಸುಖದೊಡೆಯ ಪ. ಸತ್ಯವಾದ ಜಗಕೆ ಕರ್ತುಕಾರಣ ನೀನೆ ಮುಕ್ತಿದಾಯಕ ನಿತ್ಯತೃಪ್ತನಹುದೈ ಸತ್ಯವಾದವತಾರ ಸಕಲಗುಣ ಪರಿಪೂರ್ಣ ಸಿರಿ ಪರಮ ದಯಾಳು1 ಅಣುರೋಮಕೂಪದಲಿ ಅಂಡಜಾಂಡಗಳಿರಲು ಘನಕೃಪಾಂಬುಧಿ ನಿಮ್ಮ ಪೊಗಳಲಳವೆ ಫಣಿಶಾಯಿಯಾಗಿದ್ದ ಭುವನವ್ಯಾಪಕ ಹರಿಯ ಘನಭಕುತಿಲ್ಯಜಭವರು ಪೂಜೆಮಾಡುವರು 2 ಗಂಗೆಗೋದಾವರಿ ತುಂಗಭದ್ರೆ ಯಮುನೆ ರÀಂಗಸನ್ನಿಧಿಯಾದ ಕಾವೇರಿಯು ಮಂಗಳ ಭೀಮರಥಿ ನಿಮಗೆ ಮಜ್ಜನಕೆ ಅಣಿಮಾಡಿ ಅಂಗಜನಯ್ಯ ಭಾಪೆಂದು ಪೊಗಳೆ 3 ರನ್ನಮಯವಾಗಿರ್ದ ಹೊನ್ನಮಂಟಪದೊಳಗೆ ಸ್ವರ್ಣಪಾತ್ರೆಗಳಲ್ಲಿ ಸ್ವಯಂಪಾಕವು ನಿನ್ನ ಸೊಸೆ ವಾಣಿ ಭಾರತಿದೇವಿ ಕಡುಜಾಣೆ ಚೆನ್ನಾಗಿ ನೈವೇದ್ಯವನ್ನೆ ಮಾಡುವರು 4 ಗಂಧ ಕಸ್ತೂರಿ ಪುನುಗು[ಚಂದನ] ಜವ್ವಾಜಿ ಮುಂದೆ ಕುಂಕುಮದ ಕೇಸರಿಯ ಲೇಪ ಚೆಂದದ ಕೇದಿಗೆ ಮುಡಿವಾಳ ಸಂಪಿಗೆ ಕಂದರ್ಪನಯ್ಯಗೊಪ್ಪಿತು ಮಲ್ಲಿಗೆ 5 ದೆಸೆದೆಸೆಗೆ ಪರಿಮಳಿಪ ಕುಶಲದ ಚಿತ್ರಾನ್ನ ಬಿಸಿದೋಸೆಗೆ ಬೆಣ್ಣೆ ಲೇಹ್ಯಪೇಯ ಬಸಿರೊಳಗೆ ಈರೇಳು ಜಗವನಿಂಬಿಟ್ಟವಗೆ ನಸುನಗುತ ಇಂದಿರಾದೇವಿ ಬಡಿಸೆ 6 ನೂರು ಯೋಜನದಗಲ ಸರಸಿಜ ಬ್ರಹ್ಮಾಂಡ ಹದಿ ನಾರು ಬಣ್ಣದ ಚಿನ್ನದ್ಹರಿವಾಣವು ಸಾರೆಯಲಿ ಪೊಂಬಟ್ಟಲೆಂಬ ಸಾಗರದೊಳಗೆ ಮೇರುಗಿರಿಯೆಂಬೊ ದೀಪಗಳು ಬೆಳಗೆ 7 ಘೃತ ಸೂಪ ಲೋಕಪತಿಗನುವಾದ ದಿವ್ಯಾನ್ನವು ಬೇಕಾದ ಪಂಚಭಕ್ಷ್ಯ ರಸಾಯನವ ಏಕಾಂತದಲ್ಲಿ ನಿಮ್ಮ ದೇವಿ ಬಡಿಸೆ 8 ಖಳರಕುಲವೈರಿಗೆ ತಿಳಿನೀರುಮಜ್ಜಿಗೆ ಎಳನೀರು ಪಾನಕ ಸೀತಳುದಕ ಬಳಲಿದಿರಿ ಬಳಲಿದಿರಿ ಎನುತ ಹಯವದನಗೆ ನಳಿನಾಕ್ಷಿ ಕರ್ಪೂರವೀಳ್ಯವನೆ ಕೊಡಲು 9
--------------
ವಾದಿರಾಜ
ಆವ ಕಾರಣ ಮೊಗವ ತಿರುಗಿಹಿದ್ಯೊ ಪೇಳು ಭೂವರಹ ಸ್ವಾಮಿ ಪುಷ್ಕರಣಿ ತೀರಗನೆ ಪ ರಥ ಸಮೂಹಗಳೇರಿ ನೀ ಪ್ರಕಾಶಿಪ ಬಗೆಯೇ ಸತಿಯ ಲಾವಣ್ಯಾತಿಶಯವ ನೋಡುವ ಬಗೆಯೋ ಮಿತಿಯಿಲ್ಲದಸುರರ ಉಪೇಕ್ಷೆ ಮಾಡುವ ಬಗೆಯೋ ಪತಿತ ಪಾವನ ಪೂರ್ಣಕಾಮ ನಿನಗೆ ನುತಿಸಿ ಬಿನ್ನೈಸುವೆನು ಪೇಳೋ ಗುಣಧಾಮಾ 1 ಭಜಕರೆನ್ನನು ಬಿಡರೆಂಬ ಮನಸಿನಾ ಬಗೆಯೇ ಅಜಭವಾದಿಗಳ ಸಂಸ್ತುತಿಗಳಾಲಿಪ ಬಗೆಯೋ ರಜನೀಚರರ ಸದೆಯ ನಾಟ್ಯವಾಡುವ ಬಗೆಯೇ ಭುಜಗ ಭೂಷಣ ಪೂಜ್ಯ ಚರಣ ತ್ರಿಜಗದ್ವಿ ಲಕ್ಷಣ ಸುರೂಪಾ ನಿರ್ಲೇಪ 2 ಅನುಗರೊಶ ನೀನಾದಡೆಮ್ಮನ ಮರೆವರೆಂದು ವನತಿಗಾರರಿಯದಂತುಪದೇಶಿಸು ಬಗೆಯೋ ಘನಲಕ್ಷಣ ಮುಖಾಬ್ಜವನು ಚುಂಬಿಸುವ ಬಗೆಯೋ ವನಜ ಸಂಭವನ ನಾಸಜನೆ ಜಗ ಜ್ಜನಕ ಜಗನ್ನಾಥವಿಠ್ಠಲ ಕೃಪಾಸಾಂದ್ರಾ 3
--------------
ಜಗನ್ನಾಥದಾಸರು
ಆವ ಜನುಮದ ಪಾಪ ವೊದಗಿತೋ ಎನಗಿಂದು | ದೇವ ಗಂಗೆಯ ನೋಡಿದೆ ಪ ದೇವಕೀಸುತ ಒಲಿದು ಕರೆತಂದು ಎನ್ನನು | ಪಾವನ್ನ ಮಾಡಿದನು ಇನ್ನೂ-ಮುನ್ನೂ ಅ.ಪ ಗುರುಗಳನು ವಹಿಸಿ ಭೂಸುರರಿಗೆ ಕಠಿಣ | ಉ- ತ್ತರ ಪೇಳಿಸಾಗಿದ್ದನೊ | ವರ ಬ್ರಾಹ್ಮಣರ ತಪ್ಪು ಬಲು ಇರಲು ಇಲ್ಲದೇ | ಸರಿಯೆಂದು ಸ್ಥಾಪಿಸಿದೆನೊ | ಮುರಿವ ಲಗ್ನಕೆ ಪೋಗಿ ಪುಸಿ ದ್ರವ್ಯವನೆ ಪೇಳಿ | ಮರಳಿ ಪೂರ್ತಿಸಿ ಇದ್ದೆನೊ | ವರ ವಿಪ್ರರಿಗೆ ವಧೆಯು ಬರಲು ಸಾಕ್ಷಿಯಾಗಿ | ಪರಿಹರಿಸಿ ಬಂದಿದ್ದನೋ ಏನೋ 1 ಘನ ತೀರ್ಥಯಾತ್ರೆಗೆ ಪೋಗುವಾಗ-ಲು | ವಂ ಕರ್ಮ ಮಾಡಿದ್ದೆನೊ | ಜನಪತಿಗಳ ಮಾತು ಕೇಳದೆ ಧರ್ಮಕ್ಕೆ | ಅನುಕೂಲನಾಗಿದ್ದೆನೊ | ಮನೆಗೆ ಬಂದತಿಥಿಗಳು ಜರಿದು ಪಿತ್ರಾದ್ಯರಿಗೆ | ಉಣಿಸಿ ಸುಖಪಡಿಸಿದ್ದೆನೊ | ವನಗಳನು ಕಡಿದು ದೇವಾಲಯವ ಕಟ್ಟಿಸಿ | ಕ್ಷಣ ಕ್ಷಣಕೆ ಅರ್ಚಿಸೆದೆನೋ ಏನೊ 2 ಉತ್ತಮನು ಮನೆಗೆ ಬಂದಾಗ ಮಾಡುವಂಥ | ಸತ್ಕರ್ಮ ತೊರೆದಿದ್ದೆನೋ | ಹೆತ್ತವರ ಬಾಂದವರ ಧನದಿಂದ ಕೆರೆ ಭಾವಿ | ಹತ್ತೆಂಟು ಕಟ್ಟಿಸಿದೆನೊ | ದತ್ತಾಪಹಾರವನು ಮಾಡಿ ಅದರಿಂದನಗ್ನಿ- ಹೋತ್ರವನು ಸಾಧಿಸೆದೆನೊ | ಇತ್ತ್ಯಧಿಕ ನಿರ್ಬೀಜ ಪಾಪಗಳನೆಸಗಿ | ಕೃ- ತಾರ್ಥನಾದೆನೊ ವಿಜಯವಿಠ್ಠಲನ್ನ ಕರುಣದಲಿ3
--------------
ವಿಜಯದಾಸ
ಆವ ಭಯವಿಲ್ಲ ಪರಾವರೇಶನ ಸಕಲ ಪ ಭಾವಜ್ಞ ಜನರಿಗಿನ್ನು ಅ.ಪ. ದೇಶಕಾಲೋಚಿತ ಧರ್ಮ ಗಿರ್ಮಗಳು ಸ ನ್ಯಾಸ ಮೊದಲಾದಾಶ್ರಮೋಚಿತ ಸುಕರ್ಮಗಳು ಮಾಸೋಪವಾಸ ವ್ರತ ನೇಮ ಗೀಮಗಳು ಸದ್ ಪ್ರದೋಷನ ಧ್ಯಾಯಗೀಯ ಶ್ವಾಸ ಬಂಧನ ಉಪನ್ಯಾಸ ತೀರ್ಥಾಟನೆ ರ ಮೇಶನ ಗುಣಗಳಟ್ಟಹಾಸದಲಿ ನೆನೆವುತ ನಿ ರಾಶೆಯಿಂದಿಪ್ಪ ಹರಿದಾಸ ದಾಸರಿಗೆ 1 ಸ್ನಾನ ಜಪ ದೇವತಾರ್ಚನೆ ವೈಶ್ಯದೇವ ಬಲಿ ವಿಧಿ ನಿಷೇಧಗಳು ವಿ ಸಂಹನನ ವೈರಾಗ್ಯ ಶಕ್ತಿ ಶ್ರೀನಿವಾಸನ ಪರಮ ವಿಮಲ ಲೋಕೈಕ ಕ ಲ್ಯಾಣ ಗುಣ ರೂಪ ಕ್ರಿಯೆಗಳನು ಜಡ ಚೇತನದಿ ಧೇನಿಸುತ ಮನದಿ ಹಿಗ್ಗುತ ತುತಿಸಿ ನಲಿವ ಸುಮ ಹಾನು ಭಾವರಿಗೆ ಈರೇಳು ಲೋಕದೊಳು ಇನ್ನು2 ಮಲಿನರಾಗಿಹರು ನೋಳ್ಪರಿಗೆ ಪ್ರತಿ ದಿನದಲ್ಲಿ ಸುಲಭರಂತಿಹರು ದುರ್ಗಮರಾಗಿ ತೋರುವರು ಅಳುವರೊಮ್ಮೊಮ್ಮೆ ಪರವಶರಾಗಿ ಮೈ ಮರೆದು ನಲಿವರೊಮ್ಮೊಮ್ಮೆ ನಗುತಾ ಜಲಜಾಕ್ಷನಮಲ ಮಂಗಳ ಗುಣವ ಕೇಳಿ ಗಂ ಟಲ ಶಿರಗಳುಬ್ಬಿ ಚಪ್ಪಳೆಗಳಂ ಬಾರಿಸುತ ಮುಳುಗಿ ಸುಖ ವನಧಿಯೊಳು ತನು ಪುಳಕೋತ್ಪವದಿ ಇಳೆಯೊಳಗೆ ಸಂಚರಿಪ ಕಲುಷವರ್ಜಿತಂಗೆ 3 ನೋಡುವುದೆ ಹರಿಮೂರ್ತಿ ಕೇಳುವುದೆ ಹರಿಕೀರ್ತಿ ಆಡುವುದೆ ಹರಿವಾರ್ತೆ ಮಾಡುವುದೆ ಹರಿಪೂಜೆ ನೀಡುವುದೆ ಅವಧಾನ ಬೇಡುವುದೆ ಪುರುಷಾರ್ಥ ಕೂಡುವುದೆ ಸಾಯುಜ್ಯವು ದಾಡಿಯಿಂದಲಿ ದನುಜರಳಿದು ಧರಣಿಯನು ತಂದ ಕ್ರೋಢರೂಪನೆ ಲೋಕಕ್ಕೆಲ್ಲ ಆನಂದ ನಾಡಾಡ ದೈವದಂತಿವನಲ್ಲವೆಂದು ಕೊಂ ಡಾಡುತವನಿಯೊಳು ಸಂಚರಿಸುವ ವಿಪಶ್ಚಿತರಿಗೆ 4 ಕುಟಿಲರಹಿತನು ಧರ್ಮಾರ್ಥ ಮುಕುತಿ ಸಂ ಸುರನದಿ ಮುಖ್ಯ ತೀರ್ಥ ವೆಂ ಕಟ ಶೈಲ ಮೊದಲಾದ ಕ್ಷೇತ್ರದಲಿ ಸತ್ಕರ್ಮ ಹಟದಿಂದ ಮಾಳ್ಪರೆಲ್ಲಾ ವಟ ಪತ್ರಶಯನನೊಲುಮೆಯನೆ ಬಯಸುವ ಜಾಂಡ ಕಟಹದ್ಭಹಿವ್ರ್ಯಾಪ್ತನಾದ ಶ್ರೀ ಜಗನ್ನಾಥ ವಿಠಲನಾವ ದೇಶದಿ ಕಾಲದಲ್ಲಿ ಪಾ ಸಟೆಯಿಲ್ಲವೆನುತ ಲಾಲಿಸುತಿಪ್ಪರಿಗೆ5
--------------
ಜಗನ್ನಾಥದಾಸರು
ಆವದೆನೆಗೆ ಪ್ರೀತಿ ಎಂದೆಂಬಿಯಾ | ದೇವ ದೇವಕಿ ತನುಜ ಬಿನ್ನಪವ ಮಾಡುವೆನೊ ಪ ದೊರೆತನವಲ್ಲೆ ಧನವಲ್ಲೆ ಒಬ್ಬರ ಬಳಿಯ | ಹಿರಿಯತನವಲ್ಲೆ ಹಿಗ್ಗುವುದು ವಲ್ಲೆ | ಹರಿ ನಿನ್ನ ಚರಣಗಳ ಸ್ಮರಿಸುವ ಭಾಗವತರ | ಅರಮನೆಯ ಬೀದಿಯಲಿ ಹೊರಳುವ ಭಾಗ್ಯವ ಕೊಡು 1 ಪಂಡಿತನಾಗಲಿವಲ್ಲೆ ಫಲವಲ್ಲೆ ನಾವು ಪ್ರ | ಚಂಡ ಯೋಗಗಳೊಲ್ಲೆ ಯಾಗವಲ್ಲೆ | ಥಂಡ ಥÀಂಡದಿ ನಿನ್ನ ಕೊಂಡಾಡುವರ ಬಳಿಯ | ಕೊಂಡರಾಗಿಪ್ಪವರ ಸೇರುವ ಭಾಗ್ಯವ ಕೊಡು 2 ಅಂದಣವೇರಲಿವಲ್ಲೆ ಆತ್ಮಸುಖವಲ್ಲೆ ನಾ | ನೆಂದು ಪೇಳುವರ ಸಂಗತಿಯವಲ್ಲೆ | ನಿತ್ಯ | ನಿಂದಂಗಳದೊಳಗೆ ಯಿಪ್ಪ ಭಾಗ್ಯವ ಕೊಡು 3 ರಸ ರಸಾಯನ ವಲ್ಲೆ ಹಸನಾದ ಪಟ್ಟಿ ರಂ | ಜಿಸುವದುವಲ್ಲೆ ರಾಗಗಳುವಲ್ಲೆ | ವಸುದೇವ ಸುತ ನಿನ್ನ ಪೆಸರು ಎಣಿಸುವವರ | ಶಿಶುವಾಗಿ ಬದಕುವ ಕುಶಲ ಭಾಗ್ಯವ ಕೊಡು 4 ಪುಣ್ಯ ತೀರ್ಥಗಳು ನಿನ್ನ ಮನಸಿಗೆ ಬಂದ | ವನ್ನು ಮಾಡಿಸು ಬಿಡದೆ ಮನ್ನಿಸೆನ್ನ | ಚನ್ನ ಮೂರುತಿ ಚೆನ್ನ ವಿಜಯವಿಠ್ಠಲರೇಯ | ಎನ್ನ ವಂದನೆಯನ್ನು ಮುನ್ನು ನೀ ಕೈಕೊಂಡು5
--------------
ವಿಜಯದಾಸ
ಆವಾವ ಬಗೆಯಿಂದ ಹರಿಗರ್ಪಿಸೊ ಭಾವ ಶುದ್ಧನಾಗಿ ಮುಖ್ಯತ್ವ ವಹಿಸದೆ ಪ ನೋಡುವ ನೋಟಗಳು ಹರಿಯೆ ನೋಡಿದನೆನ್ನಿ ಆಡುವ ಮಾತುಗಳು ಹರಿಯೆ ಆಡಿದನೆನ್ನಿ 1 ನಡಿವ ನಡಿಗೆ ಎಲ್ಲ ಹರಿಯೆ ನಡೆದನೆನ್ನಿ ಕೊಡುವ ದಾನಗಳು ಹರಿಯೆ ಕೊಟ್ಟನೆನ್ನಿ ಒಡನಾಡುವ ಲೀಲೆ ಹರಿಯೆ ಆಡಿದನೆನ್ನಿ ಪಿಡಿವ ಚೇಷ್ಟೆಗಳೆಲ್ಲ ಹರಿಯೆ ಪಿಡಿದನೆನ್ನಿ 2 ಕೇಳುವ ಶಬ್ದಗಳು ಹರಿಯೆ ಕೇಳಿದನೆನ್ನಿ ಹೇಳುವ ವಿಧವನಿತು ಹರಿಯೆ ಎನ್ನಿ ಮಾಲೆ ಧರಿಸುವುದು ಹರಿಯೆ ಧರಿಸಿದನೆನ್ನಿ ಮೇಲು ಸುಖ ಬಡುವುದು ಹರಿಯೆ ಎನ್ನಿ3 ಕೊಂಡ ಎನ್ನಿ ಭೂಷಣವಿಡುವುದು ಹರಿಯೆ ಎನ್ನಿ ಲೇಸು ಬಯಸುವುದು ಹರಿಯೆ ಬಯಿಪನೆನ್ನಿ ಗ್ರಾಸ ಮೆಲುವದೆಲ್ಲ ಹರಿಯೆ ಎನ್ನಿ 4 ಸತಿಯ ಕೂಡುವದೆಲ್ಲ ಹರಿಯೆ ಕೂಡಿದನೆನ್ನಿ ಹಿತವಾಗಿಪ್ಪದು ಹರಿಯೆ ಎನ್ನಿ ಸುತರ ಪಡೆದಾದಲ್ಲಿ ಹರಿಯೆ ಪಡೆದನೆನ್ನಿ ಪ್ರತಿಕೂಲವಾಗುವುದೆ ಹರಿಯೆ ಎನ್ನಿ 5 ಬಳಗ ಸಾಕುವುದೆಲ್ಲ ಹರಿಯೆ ಸಾಕಿದನೆನ್ನಿ ಸುಲಭನಾದರೆ ಹರಿಯಾದನೆನ್ನಿ ಗಲಭೆ ಮಾಡುವುದೆಲ್ಲ ಹರಿಯೆ ಮಾಡಿದನೆನ್ನಿ ಸುಳಿದಾಡುವುದೆಲ್ಲ ಹರಿಯೆ ಎನ್ನಿ 6 ಏನೆಂಬೆ ಹರಿ ಲೀಲೆ ನಿರ್ದೋಷ ನಿಸ್ಸಂಗ ಅನಂತಕಾಲಕ್ಕೂ ಎಲ್ಲಿದ್ದರು ಕಾಯ ವಿಜಯವಿಠ್ಠಲರೇಯ ನಾನಾ ವ್ಯಾಪಾರಗಳ ಮಾಳ್ಪನೆನ್ನಿ 7
--------------
ವಿಜಯದಾಸ
ಆಶಾ ಪಾಶದಲಿ ಬಿದ್ದು ಘಾಸಿಯಾಯಿತು ಜೀವ ವಾಸುದೇವನೆ ನಿಮ್ಮ ಆಶೆಗೆನ್ನ ಮನವಿಲ್ಲ ಪ ಮಡದಿಯಾಗಲು ಮತ್ತೆ ಮನೆಯಾ ಮಾಡುವದಾಶಾ ಒಡಗೂಡಲದು ಮಕ್ಕಳಾಗುವಾಶಾ ಬಿಡದೆ ಕುಟುಂಬ ಪೋಷಣೆಯಾಗುವಾದಾಶಾ ಕಡಲ ಶಯನಾ ನಿಮ್ಮ ಆಶೆಗೆನ್ನ ಮನವಿಲ್ಲ 1 ಅನ್ನವಾಗಲು ವಸ್ತ್ರ ಅಲಂಕಾರದಾಶಾ ಇನ್ನು ಮಕ್ಕಳ ಮುಂಜಿ ಮದುವಿಯಾಶಾ ತನ್ನ ನೆಂಟರಸರಿಯಾ ಮಾಡುವದಾಶಾ ಪನ್ನಗಾಶನವಾಹನಾಶೆಗೇ ಮನವಿಲ್ಲ 2 ನಡೆವಕಾಲಕೆ ದೊಡ್ಡ ಕುದುರೆ ಏರುವದಾಶಾ ಅಡರಲು ರಥದಿಂದ ಆಂದಣಾಶಾ ಕಡಿಗೆ ತೀರದ ಹೊನ್ನು ಹಣದ ಸಂಗ್ರಹದಾಶಾ ಪೊಡವಿಧರನೇ ನಿಮ್ಮ ಆಶೆಗೆ ಮನವಿಲ್ಲ 3 ಒಂದೊದಗಲು ಮತ್ತೆ ಒಂದು ಬಯಸುದಾಶಾ ಎಂದಿಗೇ ಸರಿಯದು ವಿಷಯದಾಶಾ ಕುಂದಿದ ತನುವಿನ ಬಲವಾಗುವದಾಶಾ ಇಂದಿರೇಶನ ಆಶೆಗೆನ್ನ ಮನವಿಲ್ಲ 4 ಆಶೆಯೆಂಬಾ ನದಿಯ ಸುಳಿಯ ಬಿಡಿಸಿ ನಿಜ ದಾಸರಾ ಸಂಗ ಮನವ ತಿದ್ದೀ ಲೇಸಾಗಿ ಮಹಿಪತಿ ಸುತ ಪ್ರಭು ಭಕುತಿಯಾ ಆಶೆ ಹೆಚ್ಚಿಸಿ ಎನ್ನ ದಯದಿ ಪಾಲಿಸೋ ದೇವಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂತಾ ಸಾಟಿಗಳೆಷ್ಟೊ ಜಗದೊಳಗಿಂತಾ ಸಪ್ಪಳೆಷ್ಟೊ ಪ ಅಂತರವರಿಯದೆ ಅಧಮನು ತಾನಾ ಗಿಂತಿದರೊಳು ಬೊಗಳುವ ಕಂತೆ ಅ.ಪ ಕುಂತರೆ ನಿಂತರೆ ಸುಜನರ ದೂಷಿಸೆ ಅಂತಕನಿಗೆ ಸಿಲ್ಕುವೆಯಹುದೊ ಪಂಥವಿಲ್ಲ ಪರೀಕ್ಷಿಸಿ ನೋಡೆಲೊ ಸಂತೆಯೊಳಗೆ ನೀಮಾಡುವ ಡಂಬದ 1 ಮಸ್ತಿಯೊಳಾಡಲು ಮಥನಿಪುದಹುದೆಲೊ ದುಸ್ತರವೆಲೊ ದುರಿತಾಂಬುಧಿಯು ನಿಸ್ತರಂಗನಿಗೆ ನಿಜಸುಖವೆನ್ನುತ ಶಿಸ್ತೊಡೆಯುವನಂಥಡಿಯನು ಅರಿಯದ 2 ಆಗದು ಅನುಭವ ನೀಗದು ಕತ್ತಲೆ ಹ್ಯಾಗೆಂಬುವ ಸಂಶಯ ನಿನಗೇ ನಾಗರೀಯೆ ನಿಜ ತುಲಸೀ ರಾಮ ಮದ್ಗುರುವಿ ನಪ್ಪಣೆಯ ಬಿಟ್ಟಿರೆ ಬೊಗಳುವ 3
--------------
ಚನ್ನಪಟ್ಟಣದ ಅಹೋಬಲದಾಸರು
ಇಂಥಾ ಗುರುಗಳ ಕಾಣೆನೋ ಈ ಜಗದೊಳು ನಾ ಪ ಇಂಥಾ ಗುರುಗಳನೆಂದು ಕಾಣೆನಾ ನಂತ ಚೇತನರಂತರ ಬಹಿರದಿ ನಿಂತು ಕರ್ಮವವರಂತೆ ಮಾಳ್ಪಾ - ನಂತ ಮಹಿಮಾನಂತನಾಂಶಜರಿಂಥಾಅ.ಪ ತುಂಗಾತೀರದಿ ನಿವಾಸಾ ಮಂತ್ರಾಲಯಕೀಶ ತುಂಗ ವಿಕÀ್ರಮ ಜಗದೀಶಾ ಶ್ರೀಹರಿ ದಾಸಾ ಮಂಗಲ್ಮಾತಕ ವೃಂದಾವನ ದೇಶಾ ಸಾರಿದ ವ್ರತೀಶಾ ಮಂಗಲ ಮಹಿಮ ರಂಗನ ಕರುಣಾಪಾಂಗ ಪಡೆದ ಕೃ - ಪಾಂಗ ಯತಿಕುಲೋತ್ತುಂಗ ಮಾಯಿ ಮಾ - ತಂಗ ಸಂಘಕೆ ಸಿಂಗ ದುಷ್ಟ ಭು - ವಿಹಂಗ ಸ್ವಮತೋ - ಭೃಂಗ ಮನ್ಮನೋ - ರಂಗ ಬಿಂಬನ ಇಂಗಿತಙ್ಞರ ಸಂಗ ನೀಡಿ ಕಂಗಳಿಗೆ ತಾವು ಕಂಗೊಳಿಪರಿಂಥಾ 1 ಮೇದಿನಿ ತಳದಲಿ ಜನಿಸೀ ಸುಖತಿರ್ಥರ ಭಜಿಸೀ ಭೇಧಮತವನೆ ಸಾಧಿಸೀ ವಾದದಿ ಜೈಸಿ ಮಾಧವನೆ ಸರ್ವೋತ್ತಮನೆನಿಸಿ ಸ್ವಮತವ ಸ್ಥಾಪಿಸಿ ಭೋಧಿಸಿ ತತ್ತ್ವವ ಭೇಧಿಸಿ ಪರಮತ ಛೇಧಿಸಿ ಕುಮತಿಯ ಶೋಧಿಸಿ ತತ್ತ್ವದ ಹಾದಿಯ ಹಿಡಿಸಿ - ಮೋದಕೊಡುವ ಪಂಚ ಭೇದವ ತಿಳಿಸೀ ಸಾದರ ತನ್ನಯ ಪಾದಸೇವೆಯ ಮೋದವ ನೀಡುವ ಮೇದಿನೀ ದಿವಿಜಾರಾಧಿತ ಪದಯುಗ ಶೋಧಿಸಿ ಜನಮನೋ ಖೇದಗೊಳಿಪ ಭ - ವೋಧಧಿ ದಾಟಿಸಿ ಶ್ರೀದÀನ ತೆರದಲಿ ಮೇದಿನಿಯಾಳುವರಿಂಥಾ 2 ಧಿಟ್ಟ ಗುರು ಜಗನ್ನಾಥ ವಿಠಲದೂತಾ ಸೃಷ್ಟಯೊಳಗತಿ ವಿಖ್ಯಾತಾನೆನಿಸಿದ ಯತಿನಾಥಾ ಕುಷ್ಟಾದಿ ರೋಗದ ಘಾತಾ ಮಾಡುವೊದಾತಾ ಇಷ್ಟಾರ್ಥವಾ ತಾ ಸೃಷ್ಠಿಗೆ ಬೀರುವ ಶಿಷ್ಟಜನರನುತ್ನøಷ್ಟದಿ ಪಾಲಿಪ ಎಷ್ಟು ಪೇಳುವುದೋ ಉತ್ಕøಷ್ಟನ ಗುಣಗಳ ಭ್ರಷ್ಟರರಿಯರೆಲೆ ಶಿಷ್ಟರು ಬಲ್ಲರು ಇಷ್ಟೇ ಅಲ್ಲವೀತನ ವಿಶಿಷ್ಟ ಮಹಿಮೆಗ - ಳೆಷ್ಟು ಪೇಳಲವಶಿಷ್ಟವೆನಿಪವೋ ದೃಷ್ಟಿಹೀನರಿಗೆ ದೃಷ್ಟಿ ನೀಡುವ ದೃಷ್ಟಿ ಮಾತ್ರದಿ ತುಷ್ಟಿಬಡಿಸುವೊರಿಂಥಾ 3
--------------
ಗುರುಜಗನ್ನಾಥದಾಸರು
ಇಂದಿನ ದಿನ ಸುದಿನ ನಾಳೆಗೆಂದರೆಂದು ಕಠಿಣ ಮಂದಮತಿಯು ನೀನಾಗದೆ ಈಗ ಮುಕುಂದನ ನಾಮ ಕೀರ್ತನೆಯ ಮಾಡುವುದಕೆ ಪ ಯೋಗಿಗಳೊಡನಾಡು ವಿಷಯದ ಭೋಗವ ನೀಡಾಡು ನಿನ್ನ ನೀ ತಿಳಿವುದಕೆ 1 ಅಸ್ಥಿರ ದೇಹವಿದುನಾನಾವಸ್ಥೆ ಬಾಧಿಸುತಿಹುದು ಬಿಡನೊಡನಾಡುವುದಕೆ 2 ಸಾಧು ಸಂಗತಿಯಿಂದ ಪಾಪವಿಚ್ಛೆದನವದರಿಂದ ಲಕ್ಷ್ಮೀರಮಣನ ಪೂಜಿಸಲಿಕೆ 3
--------------
ಕವಿ ಪರಮದೇವದಾಸರು
ಇಂದಿನಾಜನ್ಮದಲಿ ದರಿದ್ರನು ಇಂದು ಕೊಡಲಿಕೆ ಇಲ್ಲ ಎಂದೆಂದಿಗೂ ಹುಟ್ಟು ದರಿದ್ರನು ಪ ಅನ್ನವನು ಅತಿಥಿಗಿಕ್ಕದಕಾರಣ ಕೈಯಾರೆ ಮಾಡದಕಾರಣ 1 ಇಲ್ಲದ ಕಾರಣ ದರಿದ್ರವದುಕಾರಣ 2 ಮಾಡುವುದು ಕೋಪವನು ಅದು ಕಾರಣ ರೂಢಿಯೊಳು ದರಿದ್ರವದುಕಾರಣ 3 ಬಂಗಾರವಿಲ್ಲದು ಕಾರಣ ಮುನ್ನದಾನವನು ಮಾಡದಿಹಕಾರಣ 4 ನೆರೆಮಾಡಿ ಭಕ್ತೀಯೊಳುದಾರಿದ್ರವ ಪರಿಹರಿಸಿ ನೊಲಿದವರಿಗೆ ಭಾಗ್ಯ ಬಹುದದುಕಾರಣ 5
--------------
ಕವಿ ಪರಮದೇವದಾಸರು
ಇಂದಿರೆ ನಿನ್ನ ಪೂಜೆ ಛೆಂದಾಗಿ ಮಾಡುವೆ ನಾನು ಪ ಮಂದಹಾಸದಿ ಮೋದದಿಂದಲೇ ನೋಡು ದಯದಿ ಅ.ಪ. ಜರದ ಪೀತಾಂಬರ ಕರದೊಳು ಧರಿಸಿರುವೆನೆಎರಕೋ ಹರಿಯ ಕೂಡ ಸರಸಿಜದಳ ನೇತ್ರಿಯೇ 1 ಮಂದಾರ ಮಲ್ಲಿಗೆ ಕುಂದದ ಚಂಪಕ ಜಾಜಿತಂದು ನಿಂತಿಹೆ ಹರಿಸುಂದರಿ ಸರಸದಿ ಮುಡಿಯೇ 2 ಭುಂಜಿಸು ಬೇಗ 3 ಹರಡಿ ಕಂಕಣ ದುಂಡು ಹೆರಳು ಭಂಗಾರಗಳನುಹರುಷದಿಂದಲಿ ಕೃಷ್ಣನರಸಿ ತಂದಿಹೆ ನಿನಗೆ4 ಚಂದ್ರಶೇಖರ ಸುರವೃಂದಾದಿ ವಂದಿತ ಚರಣೆಇಂದಿರೇಶನ ಸಹ ಬಂದಿಲ್ಲಿ ತೋರಿಸು ಮುಖವಾ 5
--------------
ಇಂದಿರೇಶರು