ಒಟ್ಟು 957 ಕಡೆಗಳಲ್ಲಿ , 100 ದಾಸರು , 770 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನಾಗುವುದು ತಾನಾಗಿದೆ ಜಗ ನೀನ್ಯಾಕದರೋಳ್ಪಾಲಿಡುವ್ಯೋ ಪ ಕಾಣುಕಾಣುತಲಿ ಶೂನ್ಯವೆನಿಪುದೆಲ್ಲ ಜಾಣನಾಗಿ ಭವಗೆಲಿಯೆಲವೋ ಅ.ಪ ಸತತದಿ ಸತಿಸುತರ್ಹಿತಕಾಗಿ ಬಲು ಮತಿಗೆಟ್ಟತಿಯಾಗ್ವ್ಯಥೆಬಡುವ್ಯೋ ಪೃಥಿವಿ ಮೇಲೆ ನಿನ್ನ ಮತಿಯಲಿಂದ ಮಣ್ಣು ಪ್ರತಿಮೆಮಾಡಿ ಸೃಷ್ಟಿಗೊಳಿಸಿದೆಯೋ 1 ಹಲವುವಿಧದಿ ನಾನೆ ದುಡಿದು ಧಾನ್ಯಧನ ಗಳಿಸಿದೆನೆಂದು ಬಲು ಭ್ರಮಿಸುವೆಯೋ ತಿಳಿದುನೋಡೆಲೆ ಬೀಜದೊಳಗೆ ಮೊಳಕೆ ತಿದ್ದಿ ಬೆಳೆಯ ಬೆಳೆಸಿ ಸ್ಥಿತಿಮಾಡಿದೆಯೋ 2 ಎಷ್ಟುದಿನಿರ್ದರು ಬಿಟ್ಟು ಹೋಗುವುದನು ಗಟ್ಟಿಮಾಡ್ಯಾಕೆ ಭ್ರಷ್ಟನಾಗುವೆಯೋ ಸೃಷ್ಟಿಸ್ಥಿತಿಲಯಕರ್ತ ಶ್ರೀರಾಮನ ನಿಷ್ಠೆಯಿಂ ಪಾಡಿ ಮುಕ್ತಿಸುಖ ಪಡೆಯೋ 3
--------------
ರಾಮದಾಸರು
ಏನಾಯ್ತು ಹರಿಪಾದ ನೆನೆವಲ್ಲಿ ಮನವೆ ದೀನನೆ ನಿನ್ನ ಬಾಯಿಗ್ಹುಣ್ಣ್ಹುಟ್ಟಿತೇನೋ ಪ ನಿಷ್ಠೆಯಿಂ ಕೈತಾಳವಿಟ್ಟು ಉಲ್ಲಾಸದಿ ಕಷ್ಟಹರನಂಘ್ರಿ ಮನಮುಟ್ಟಿ ಪಾಡುವಲ್ಲಿ ಕೆಟ್ಟಾಸೆಯಿಂ ಪರರಲ್ಹೊಟ್ಟ್ಹೊಟ್ಟ್ಹೊಡಕೊಂಡು ಬೇಡ್ದ ಪೆಟ್ಟಿಗೆ ಕರವರೆಡು ಮುರಿದಿರುವವೇನೋ 1 ವನಜನಾಭನ ದಿವ್ಯ ವನರುಹಂಘ್ರಿಯ ಚರಿತ ಘನವಾಗಿ ಪೊಗಳುತ ಕುಣಿದಾಡವಲ್ಲಿ ಮೊಣಕಾಲು ಕೀಲ್ಮುರಿದು ನೆಲಕಿ ಬಿದ್ದಿಹ್ಯವೆ 2 ನೀಲಶಾಮನ ವಿಮಲಲೀಲೆಗಳು ಶೀಲಮನದಾಲಸಾನಂದೊಳು ಲೋಲ್ಯಾಡವಲ್ಲಿ ಹಾಳು ಸಂಸಾರದ ಗೋಳಾಟ ಕೇಳಿ ಕೇಳಿ ಶೂಲೆಯೆದ್ದೆರಡು ಕಿವಿ ಕಿವುಡಾದವೇನು 3 ಸಾಗರನಿಲಯನ ನೀಗದ ಮಹಿಮೆಗಳ ಜಾಗರದಿಂ ಪಾಡಿ ಭವರೋಗ ಗೆಲಿವಲ್ಲಿ ಸೋಗಿನ ಸೂಳೆಸುದ್ದಿ ರಾಗದ್ಹಾಡ್ಹ್ಯಾಡಿ ಭವ ಜಿಹ್ವೆ ಕಳಕೊಂಡಿದ್ಯೇನೋ 4 ದಾಸನುದಾಸರ ವಾಸದಿಗೂಡಿಯನು ಮೇಷನು ವಿಚಾರದಿಂ ಶ್ರೀಶನ ಚರಣ ಧ್ಯಾಸದೊಳಗಿರ್ದು ಯಮಪಾಶವನು ಗೆಲಿದು ದಯ ಭೂಷ ಶ್ರೀರಾಮನ ಮುಕ್ತಿ ಪಡಿವಲ್ಲಿ 5
--------------
ರಾಮದಾಸರು
ಏನಿದು ಎಲೆ ಮನ ಏನು ಇದು ನೆನೆಸಿದರೆದೆ ಝಲ್ಲೆನುವುದು ಪ ನಾನು ಯಾರೆಂಬುವ ಖೂನವ ತಿಳಿಯದೆ ಶ್ವಾನನಂದದಿ ಕೆಟ್ಟ ಹೀನಭವಕೆ ಬಿದ್ದು ಅ.ಪ ಏತಕ ಬಂದದ್ದೀ ಜನುಮಕ್ಕೆ ತಲೆಯೆತ್ತಿ ನೋಡದೆ ಕೂತಿಮುಂದಕೆ ನೀತಿಗೇಡಿ ಮಹಪಾತಕನು ಯಮ ದೂತರು ನಿಂತಾರೊ ಎಳಿಲಿಕ್ಕೆ 1 ಬೀಳಬೇಡೋ ಮಾಯದ ಜಾಲಕ್ಕೆ ಘಳಿಲನೆ ತಿಳಿತಿಳಿ ಸುಲಭದಿ ಸಮಯವು ಬಲಿಸಿ ಹರಿಯ ಧ್ಯಾನ ಕಾಲನ ನೂಕೋ 2 ಹುಟ್ಟಿಬಂದಿ ಶಿಷ್ಟಪದ ಪಡಿಲಿಕ್ಕೆ ಮರ್ತುಬಿಟ್ಟಿ ನಿಂತಿ ಬಿಟ್ಟಗಂಟ್ಹೊರಲಿಕ್ಕೆ ಭ್ರಷ್ಟಗುಣವ ಬಿಟ್ಟು ದಿಟ್ಟರಾಮನ ಗಟ್ಟ್ಯಾಗಿ ನಂಬಿ ಮುಟ್ಟು ಮುಕ್ತಿಪದಕೆ3
--------------
ರಾಮದಾಸರು
ಏನಿದೇನಿದನ್ಯಾಯ ಕೇಳಲಾಗದಯ್ಯ ಧ್ಯಾನದಿಂದಾನೆಂಬ ಹೀನ ಜನರ್ವಚನ ಪ ಪರಮಪುರುಷರ ಚರಿತ ಪರಮ ಭಕ್ತಿಯಲಿಂದ ಬರೆದೋದಿಕೇಳಿದರೆ ಪರಮಪದವೆನುತ ವರವೇದ ಸ್ಮøತಿವಾಕ್ಯ ಅರಿದರಿದು ಸಚ್ಚರಿತ ಬರೀಬಾರದೆನ್ನುವ ನರಗುರಿಗಳ ವಚನ 1 ಕನಸುಮನಸಿನೊಳೊಮ್ಮೆ ಜನಕಜೆಯವರನಂಘ್ರಿ ನೆನೆವರ್ಗೆ ಭವಬಂಧವಿನಿತಿಲ್ಲವೆನುತ ಮನುಮುನಿಗಳ್ಬರೆದಿಟ್ಟ ಘನತರದ ವಚನಗಳನು ಮನನ ಮಾಡಳಿವ ಬಿನಗುಜನರ್ವಚನ 2 ಬೀಳುತೇಳುತಲೊಮ್ಮೆ ನೀಲಶ್ಯಾಮನ ದಿವ್ಯ ಮೇಲು ಮಹಿಮೆಯ ಮನದಾಲಿಸಲು ಜವನ ದಾಳಿ ಸೋಂಕದು ಎಂದು ಶೀಲದೊರೆದ್ವಚನಗಳ ಕೇಳಿ ತಿಳಿಯದ ಮಹ ಕೀಳುಜನರ್ವಚನ 3 ಹರಿನಾಮ ಕೀರ್ತನೆಯಿಂ ಜರಾಮರಣ ಕಂಟಕª À ಕಿರಿದು ಮಾಡಿ ದಾಟಿದರು ಗುರುಹಿರಿಯರೆಲ್ಲ ನಿರುತ ನಿಜ ತಿಳಿಯದೆ ಹರಿಸ್ಮರಣೆ ಸ್ಮರಿಸದೆ ಬರಿದೆ ಬ್ರಹ್ಮೆಂಬ ಮಹನರಕಿಗಳ ವಚನ 4 ಪರಮ ಶ್ರೀಗುರುರೂಪ ವರದ ಶ್ರೀರಾಮನಂ ನೆರೆನಂಬಿ ಒಲಿಸದೆ ಗುರುವಾಗಿ ಜಗದಿ ಅರಿವಿತ್ತು ಆತ್ಮನ ಕರುಹು ತೋರಿಸಿ ಪರಮ ಪರತರದ ಮೋಕ್ಷಮಂ ಕರುಣಿಸುಯೆಂತು 5
--------------
ರಾಮದಾಸರು
ಏನು ಕೆಟ್ಟೆಯಲ್ಲೋ ಮನುಜ ಹಾನಿಯಾದೆಯಲ್ಲೋ ಪ ಕಾಣದೆ ಏನೇನು ಗಾಣದೆತ್ತಿನಂತೆ ನಾನಾ ಯೋನಿಗಳು ಖೂನವಿಲ್ಲದೆ ತಿರುಗಿ ಅ.ಪ ಕಾಲ ಕಳೆದೆಯಲ್ಲ ಕಾಲದ ಮೂಲ ತಿಳಿಯಲಿಲ್ಲ ಮೂಳನಾದೆಯಲ್ಲ ಭವದ ಮಾಲ ಗೆಲಿಯಲಿಲ್ಲ ಕಾಳುಕತ್ತಲೆಂಬ ಹಾಳು ಸಂಸಾರ ಮಾಯಾ ಜಾಲದಿ ಬಿದ್ದೆಮಧಾಳಿಗೀಡಾದೆಯಲ್ಲ 1 ನಾರಿ ನಿನ್ನವಳಲ್ಲ ಹುಟ್ಟಿದ ಪೋರ ನಿನಗಿಲ್ಲ ಯಾರಿಗೆಯಾರಿಲ್ಲ ನಿನ್ನ್ಹಿಂದೆ ಯಾರು ಬರುವುದಿಲ್ಲ ಧಾರುಣಿಸುಖವಿದು ಸಾರಮಯ ಸುವಿ ಚಾರದೆ ನೋಡದೆ ಘೋರನರಕಿಯಾದೆ 2 ಮನೆಮಾರು ನಿನಗಿಲ್ಲ ಗಳಿಸಿದ ಧನವು ನಿನ್ನದಲ್ಲ ಕ್ಷಣಿಕವಾದದ್ದೆಲ್ಲ ಜಗಸುಖ ನಿನಗೊಂದು ಸ್ಥಿರವಿಲ್ಲ ವನಜನಾಭ ನಮ್ಮ ಜನಕ ಶ್ರೀರಾಮನ ವನರುಹಂಘ್ರಿ ನಂಬಿ ಘನಮುಕ್ತಿ ಪಡೀಲಿಲ್ಲ 3
--------------
ರಾಮದಾಸರು
ಏನು ಪೇಳಲಮ್ಮಯ್ಯಾ ರಂಗನ ಕ್ರೀಡಾ ಏನು ದಂಡಿಸಲಮ್ಮಯ್ಯಾ ಶ್ರೀ ಕೃಷ್ಣನ್ನ ಪ ಪಿಡಿದು ನಿಂದಾ ದುರುಳ ದೈತ್ಯನ್ನೆಳದೊಡಲವೆ ಸೀಳಿದಾ ಬಲಿಯಲ್ದೈನ್ಯದಿ ದಾನಬೇಡಿ ತಾಯ ಶಿರವ ಕಡಿದು ತೋರಿದಾ ಕಲೆವೆಣ್ಣೈದ್ಮೊಲೆಯುಂಡು ಕಳದ್ವಟ್ಟೆ ಹಯವೇರಿದಾ 1 ಕಾನನದಾ ವರಹನಾದಾ ಆಗಲು ಪಂಚಾನನ ರೂಪನಾದಾ ಸೂನು ಪರಶುರಾಮನಾಗಿ ಜಾನಕಿವರನಾಗಿ ರಾವಣನಾಗಿ ಮಾನಬಿಟ್ಟು ವಾಜಿಯನೇರ್ದಾ 2 ನಿಗಮ ತೋರ್ದಾ ಬೆನ್ನಲಿ ಬೆಟ್ಟವಿರಿಸಿ ಸುರರಾ ಪೊರೆದಾ ಧರಾಲಲನೆಯನೆತ್ತಿ ತಂದಾ ದೈತ್ಯನ ಶೀಳಿ ತರಳನಳಲನು ಕಳೆದಾ ಸುರತಟಿನಿಯಂಗುಟದಿ ಜನಿಸೆ ಧರೆಯ ಪಾವನಗೊಳಿಸೆ ನರಲೋಕವುದ್ಧಾರ ಜನಕ ಸಿರಿಪಾವನ ನರಸಿಂಹವಿಠಲನ 3
--------------
ನರಸಿಂಹವಿಠಲರು
ಏನು ಬರೆದೆಯೊ ಬ್ರಹ್ಮನೆ ನನ್ನಣೆಯಲರಿಯದು ಸುಮ್ಮನೇ ಪ ನೋನವನು ಹೋಗಾಡಿ ಜನರೊಳು ಹೀನವಾಗುವ ಹಾಂಗೆ ಹಣೆಯೊಳು ಅ.ಪ ಹಿಂದೆ ಮಾಡಿದ ಕರ್ಮವು ಯಿದ ಕ್ಕೊಂದು ಪಾಯದ ಮರ್ಮವೂ ತಂದೆ ನೀನೆನಗಿಂದು ತೋರಲು ನಿಂದು ಭಜಿಸುವೆ ಮಂದರೋದ್ಧರ 1 ಪಾಪಗಳ ಹರನ್ಯಾರೆಲೊ ಭೂಪದಶ ಅವತರಾನೇ ಕೋಪಮಾಡದೆ ದಾಸಮಾಡಿದ | ಪಾಪಗಳ ಪರಹರಿಸೊ ಬೇಗದಿ 2 ಲೋಕನಾಯಕ ಭವಹಾರೀ ಕಾಕು ಬುದ್ಧಿಗಳನ್ನು ಬಿಡಿಸಲು ಏಕ ಮನದೊಳು ನೆನೆವೆ ನಿಮ್ಮನೂ 3 ಗುರುವು ತುಲಸೀರಾಮನೇ ಪರನು ಗುರುವೆ ತ್ರಾಹಿತ ಪ್ರೇಮನೆ ಧರೆಯೊಳಧಿಕ ಚೆನ್ನಪುರಿಯಾ ದೊರೆಯ ಲಕ್ಷ್ಮೀನಾರಾಯಣಾ 4
--------------
ಚನ್ನಪಟ್ಟಣದ ಅಹೋಬಲದಾಸರು
ಏನು ಭಾಗ್ಯವೋ ತಾಯೆ ಲಕುಮಿ ನಿನ್ನದೂ ಸಾನು ರಾಗದಿ ಹರಿಯ ಸೇವಿಸುತಲಿರುವಿ ಪ. ಕಂಕಣವು ನೀನಾಗಿ ಹರಿಗೆ ಭುಜಕೀರ್ತಿ ನೀನಾಗಿ ಶಂಕುಚಕ್ರ ಗದಾ ಪದ್ಮ ನೀನಾಗಿ ಶಂಕೆ ಇಲ್ಲದೆ ಕಿಂಕರಳು ನೀನಾಗಿ ಹರಿಸೇವೆಗೆ ಪಂಕಜಾನಾಭನ್ನ ಸೇವಿಸುತಲಿರುವಿ 1 ಅಕ್ಷರಳು ನೀನಾಗಿ ಹರಿಯ ವಕ್ಷಸ್ಥಳವನೇ ಸೇರಿ ಈ ಜುತ ಹರಿಯ ಪರಮ ಸಂತೋಷದಿಂದ ಲಕ್ಷ ಕೋಟಿ ಕೋಟಿ ಬ್ರಹ್ಮಾಂಡರೂಪದಲ್ಲಿರುವ ಪಕ್ಷಿವಾಹನನ ನೋಡಿ ವೆರಗಾಗುತಲಿರುವಿ 2 ರಾಮನಾ ಸತಿಯಾಗಿ ಪ್ರೇಮದಿಂದಲಿ ಈಗ ಕಾಮನಯ್ಯನ ಕಾರುಣ್ಯದಿಂದ ರಮಾವಲ್ಲಭವಿಠಲನ ತೊಡೆಯ ಮೇಲೆ ಕುಳಿತು ಸ್ವಾಮಿಗೆ ಸತಿಯಾಗಿ ಸೇವಿಸುತಲಿರುವಿ 3
--------------
ಸರಸಾಬಾಯಿ
ಏನುಂಟು ನಿನ್ನೊಳಗೆ-ನಾಬೇಡಲು-ಏನು ಕೊಡುವೆ ಯನಗೆ ಪ ಬೇಡಿದೆಮಾನವನೋಡದೆ ಅ.ಪ. ಹಾರುವನಿಗೆ ಗುರಿಮಾಡಿದೆ ಗರಳನಹಾಸಿನೊಳೆರಗಿದೆ ಕೃಷ್ಣ 1 ನೀಗಣಿಸುವೆಯಾ ಅನುವಾದ ಮನೆಯಿರೆ ಮುನಿಮನವೇತಕೆ ಮನೆವಾರ್ತೆ ಯುಳ್ಳರೆವನವಾಸ ವೇಕೆ 2 ಚಿಂತಾಮಣಿಗಳನು ಸುತ್ರಾಮನಿಗಿತ್ತು ನೀ ದಾಮೋದರನಾದೆ ತಾಮರಸಾಕ್ಷ 3 ಜಾತಿ ನೋಡದೆ ಜಾಂಬವತಿಗೂಡಿದೆ ಮಾತು ನೋಡದೆ ಬರಿಮಾಯೆಯ ಪಿಡಿದೆ 4 ಸ್ಮøತಿಯೊಂದಿತ್ತರೆಸಾಕೆನೆಗೆ ಪಾಲಿಸು ವರದ ವಿಠಲರಾಯ 5
--------------
ಸರಗೂರು ವೆಂಕಟವರದಾರ್ಯರು
ಏನುಧನ್ಯನೊ ಇವನು ಎಂಥ ಪುಣ್ಯನೊ ದೀನದಯಾಳು ಜಾನಕೀಶನ ಧ್ಯಾನ ಮಾಳ್ಪ ಮಾನವನು ಪ ಜ್ಞಾನದಿಂದ ತಿಳಿದು ಜಗ ಶೂನ್ಯವೆಂದು ಊಹಿಸಿ ಮನದಿ ದಾನವಾಂತಕನಾದ ಹರಿಯ ಧ್ಯಾನವೊಂದೇ ಕಾರಣೆಂದು ಜ್ಞಾನಬೆಳಗಿನೊಳಗೆ ನೋಡಿ ಆನಂದಿಸುತಲ್ಹಿಗ್ಗುವವ 1 ಆಶಪಾಶಗಳನು ನೀಗಿ ಈ ಮೋಸಮಯ ಸಂಸಾರದೊಳು ವಾಸನಾರಹಿತನಾಗಿ ಸದಾ ದಾಸಸಂಗಸುಖಪಡೆದು ಈಶ ಭಜನೆಯೊಳ್ಮನವಿಟ್ಟು ಈಸಿಭವಾಂಬುಧಿ ಪಾರಾಗುವವ 2 ನಂಬಿಗಿಲ್ಲದ ದೇಹವಿದನು ನಂಬಿನೆಚ್ಚಿ ಸಂಭ್ರಮಿಸದೆ ಕಂಬುಕಂಧರ ಶಂಭುವಿನುತ ಅಂಬುಜಾಕ್ಷ ಶ್ರೀರಾಮನ ನಂಬಿ ಗಂಭೀರಸುಖದೊಳಿರುವವ 3
--------------
ರಾಮದಾಸರು
ಏನೆಂದೀದೇಹ್ಯವನು ನಂಬಿದಿ ಮನವೆ ನೀ ಏನೆಂದೀ ದೇಹ್ಯವನು ನಂಬಿದಿ ಪ ಏನೆಂದು ನಂಬಿದ್ಯೋ ಆನಂದದ್ಹಿಗ್ಗುತ ಕ್ಷೀಣವಾಗೊಂದುದಿನ ಮಣ್ಣು ಗೂಡುವುದರಿತು ಅ.ಪ ತಳಕ್ಹಾಕಿ ಜೋಡಿಸಿ ಹಲವು ನರಗಳಿಂದ ಬಲವಾಗಿಬಿಗಿದ ಈ ಎಲುವಿನ ಹಂದರ 1 ರೋಗಕ್ಕೆ ಇದು ತವರಾಗಿ ಒಂದಿನ ನಾಶ ವಾಗಿ ತಾ ಕೈಬಿಟ್ಟು ಪೋಗುವ ಮಂಟಪ 2 ಹಲವು ವಿಧದಿ ಮಜ್ಜ ಮಲ ಮೂತ್ರ ಬಲುಹೇಯ ಕುಂಡಲ 3 ಬಿಲದ್ವಾರ ಒಂಬತ್ತು ತುಳುಕಿತುಂಬ್ಹರಿಯುತ ತೊಳೆಯದಿರಲು ನಿಮಿಷ ಹೊಲಸಿಕ್ಕಿ ನಾರುವುದು 4 ತಂದೆ ಶ್ರೀರಾಮನಂ ಹೊಂದಿ ಭಜಿಸದೆ ಗಾಢ ಅಂಧಕಾರದಿ ಬಿದ್ದು ನಂದಿಪೋಗುವ ತನು 5
--------------
ರಾಮದಾಸರು
ಏನೆಂದು ಕರೆದರೆ ಬರುವಿ ನಿನ್ನ ಧ್ಯಾನಿಸಿ ಕರೆದರೆ ಬಾರದೆ ಇರುವಿ ಪ ದೀನದಯಾಳು ಶ್ರೀ ಅನಂತ ಮಹಿಮೆಂದು ಗಾನದಿಂ ಪಾಡಲು ಕೇಳದೆ ಇರುವಿಅ.ಪ ಸೊಪ್ಪಮೆದ್ದವನೆಂದೆನಲೆ ನಿನ್ನ ತಿಪ್ಪೆತಿರುಕನೆಂದು ಗೌಪ್ಯದಿಂ ಕರಿಲೇ ಕಪ್ಪುಮೈಯವನೆನ್ನಲೊಪ್ಪಿಕೊಂಡು ಬಂದು ಅಪ್ಪಿಕೊಂಡ್ವರವೀವ್ಯೋ ಮುಪ್ಪುರಾಂತಕನೆ 1 ಏಸುಕಾಲದ ಮುದುಕನೆನಲೇ ನಿನ್ನ ಆಸೆಕಾರನೆಂದು ಆಶಿಸಿ ಕರಿಲೇ ಹಾಸಿಕೆ ಕಾಣದೆ ಶೇಷನಮೇಲೇರಿ ವಾಸಿಸುವಿಯೆನಲು ಪೋಷಿಸುವೆಯೋ ಬಂದು 2 ಬಲುಬಲು ಕಪಟಿಯೆಂದೆನಲೇ ನೀ ಕಳವಿನೋಳ್ ಪ್ರವೀಣನೆಂದು ಕೂಗಲೇ ಕುಲಗೆಟ್ಟು ಭಕ್ತರ ಕಲೆಸಿ ಗುಪ್ತದಿಂದ ಕುಲದಿ ಬಿದ್ದವನೆನಲು ಒಲಿದು ಕಾಯುವೆಯೋ 3 ಆಲಯ ಕಾಣದೆ ಹೋಗಿ ನೀನು ಪಾಲಸಾಗರವಾಸನೆಂದು ಕರಿಲೇ ಬಾಲೆಯರುಡವ ದುಕೂಲ ಚೋರನೆಂದು ಮೇಲಾಕೂಗಲು ಪಾಲಿಸುವೆಯೋ ಒದಗಿ 4 ಅರಣ್ಯವಾಸಿಯೆಂದೆನಲೇ ನೀನು ನಾರಿಯಳ ಕಳಕೊಂಡನೆಂದು ಸಾರಲ್ಯೋ ಕೋರಿದವರ ಮನಸಾರ ವರನ ನೀಡ್ವ ಧೀರ ಶ್ರೀರಾಮನೆಂದ್ಹಾರೈಸಿ ಕರೆಯುವೆ 5
--------------
ರಾಮದಾಸರು
ಏನೆಂದು ಕೊಂಡಾಡಿ ಸುತ್ತಿಸೆಲೊ ನಿನ್ನಾ ಪ ದಾನವಾಂತಕ ಕೃಷ್ಣ ಆನಂದ ಗುಣ ಪೂರ್ಣ ಅ.ಪ. ಮತ್ಸರೂಪಿಯೆ ನಿನ್ನ ಉತ್ಸಹದಿ ಕರೆಯಲಾಕುತ್ಸಿತನ ಸೊಲ್ಲ ನೀನೆತ್ತ ಕೇಳುವಿಯೋ |ಮತ್ಸ್ಯಕೇತನ ಜನಕ | ಮತ್ಸರವ ಕಳೆಯಯ್ಯಸಚ್ಚಿದಾನಂದಾತ್ಮ | ಚಿತ್ಸುಖಪದನೇ 1 ಕೂರ್ಮರೂಪಿಯೆಂದು | ಪೇರ್ಮೆಯಲಿ ಕರೆಯಲಾಭರ್ಮ ಗರ್ಭನ ಪಿತನೆ | ಗಿರಿಯ ಧರಿಸಿರುವೇ |ನಿರ್ಮಲಾತ್ಮಕನೆ ಯೆನಗೆ | ನಿರ್ಮಮತೆ ನೀಡಯ್ಯಾ ಊರ್ಮಿಳಾಪತಿ ಭ್ರಾತೃ | ಪರಮ ಮಂಗಳನೇ 2 ವರಹ ರೂಪಿಯೆ ನಿನ್ನ | ಕರೆಯುವುದು ಹೇಗಯ್ಯಾ ಕೋರೆ ದಾಡಿಯ ಮೇಲೆ | ಧರೆಯೆ ಧರಿಸಿರುವೇ | ವಾರೆ ನೋಟದಿ ಯೆನ್ನ | ಪರಿಕಿಸೀ ಪೊರೆಯಯ್ಯಾಧೀರ ಭೂವರಹ ವರ | ಧರಣಿ ಪರಿಪಾಲಾ 3 ನಾರಸಿಂಹನೆ ನಾನು | ಕರೆಯಲಾಪನೆ ನಿನ್ನಘೋರರೂಪವ ನೋಡಿ | ದೂರ ಸಾರುವರೋವಾರಿಜಾಕ್ಷಿಯು ಬಂದು | ಘೋರ ಪ್ರಹ್ಲಾದನ್ನಚಾರು ತವ ಚರಣದಲಿ | ಇರಿಸಬೇಕಾಯ್ತು 4 ದಧಿ | ವಾಮನನೆ ಬಾರೆಂದುಸಾಮಸನ್ಮುತ ನಿನ್ನ | ನಾಮಗಳ ನೆನೆಯೆಲಾ |ಭೂಮಿ ಬೇಡುವ ನೆವದಿ | ಬಲಿಯ ಭೂಮಿಗೆ ತುಳಿದೆಸೀಮೆ ಮೀರಿದ ಮಹಿಮ | ಮರ್ಮವಿನ್ನೆಷ್ಟೋ | 5 ಪರಶುರಾಮನೆ ನಿನ್ನ | ಕರೆಯಲಾರೆನು ನಾನುದುರುಳ ಕ್ಷತ್ರಿಯರ | ಶಿರಗಳನೆ ತರಿದೂ |ಭಾರಿ ಪರಶುವಿನಿಂದ | ವರಮಾತೆ ಶಿರ ತರಿದಿಸರಿ ಕಾಣೋ ಇದು ನಿನಗೆ | ಪರಮ ಪಾವನ್ನಾ 6 ರಾಮ ರೂಪಿಯೆ ನಿನ್ನ | ಆ ಮಹಾ ಮಹಿಮೆಗಳಸೀಮೆಗಾಣಳು ಲಕುಮಿ | ಪಾಮರನಿಗಳವೇ |ಆ ಮರಾ ಈ ಮರಾನೆಂದ ಆ | ಪಾಮರನ ಪೊರೆದುಆ ಮಹಾತ್ಮನ ಗೈದ | ಪರಿಯೆನ್ನ ಮಾಡೋ 7 ಕೃಷ್ಣ ಕೃಷ್ಣಾ ಎಂದು ಕರೆಯುವೆನೆ ನಾ ನಿನ್ನಕಷ್ಟದೊಳು ಸಿಲುಕಿರುವೆ | ಗಿರಿಯನ್ನೆ ಪೊತ್ತು |ವೃಷ್ಟಿಕುಲ ಸಂಪನ್ನ | ಕೃಷ್ಣ ಮೂರುತಿ ನೀನುಇಷ್ಟ ಭಕುತರ ಮನೋ | ಭೀಷ್ಟ ಸಲಿಸುವಿಯಾ 8 ಬುದ್ಧ ದೇವನೆ ಎನಗೆ ಸ | ದ್ಭುದ್ಧಿ ಕೊಡು ಎಂದುಬುದ್ಧಿ ಪೂರ್ವಕವಾಗಿ ನಿನ್ನ ಕರೆಯಲಾ |ಬುದ್ಧಿಯಿಂದಲಿ ನೀ | ಭೋಧಿಸಿದೆ ದುಶ್ಯಾಸ್ತ್ರಬೌದ್ಧ ನಿನ್ನನು ಪೊದ್ದು | ಬುಧರ ಪಾಡೇನೊ 9 ಕಲ್ಕಿ ಕಲ್ಕೀ ಎಂದೇ ಕರೆಯಲಾಪೆನೆ ದೇವಾಶುಲ್ಕ ಮೇಲಾಗಿಹುದು ಕಲಿಯುಗದೊಳು |ಉಲ್ಕ ಮುಖ ಮೊದಲಾದ | ಕಲ್ಕಿರಾಜರು ನಿನ್ನಕಲ್ಕ್ಯಾತ್ಮ ಸತ್ಯ ತವ | ವ್ರತವ ಮಾಳ್ಪರು ಬಿಡದೆ 10 ಸರ್ವರೂಪಾತ್ಮಕನೆ | ಸರ್ವ ವ್ಯಾಪಕ ಸ್ವಾಮಿಸರ್ವಜಿತು ಸರ್ವಾತ್ಮ ಸರ್ವೇಶನೇ |ಶರ್ವಾರಿ ವಂದ್ಯ ಗುರು | ಗೋವಿಂದ ವಿಠಲನೇಗುರು ಹೃದಂಬರದಲ್ಲಿ | ತೋರಿ ಪೊರೆಯನ್ನ 11
--------------
ಗುರುಗೋವಿಂದವಿಠಲರು
ಏನೆಂದೆ ಏನೆಂದೆ ಪ ನಾನೇನೆಂದೆನೆ ಗಾನಲೋಲಗವ ಮಾನದ ಮಾತಿಂಥ ಜೀನನ ಕಾಣೆನೆಂದೆ ಅ.ಪ ಕಾಲು ಇಲ್ಲದ ಹೆಳವನೆಂದೆ ತಲೆಯ ಕಾಣದ ಕುರೂಪಿಯೆಂದೆ ಚೆಲುವಿಕಿಲ್ಲದ ಕಾಡು ಹೀನಮೃಗವೆಂದೆ ಬಲಿಯ ಬಾಗಿಲ ಕಾಯ್ವ ಕೂಲಿಕಾರನೆಂದೆ1 ನಾಲಗೆ ಚಾಚಿ ರಕ್ತ ಕುಡಿದನೆಂದೆ ತಿಳಿದು ಜನನಿತಲೆ ಕಡಿದವನೆಂದೆ ಲಲನೆಯೊಡನೆ ವನವಾಸಕೆ ಪೋಗಿ ಬಳಲಿ ಬಳಲಿ ಬಾಯಾರಿದನೆಂದೆ 2 ಗೊಲ್ಲರ ಕುಲದಲಿ ಹುಟ್ಟಿದನೆಂದೆ ಗುಳ್ಳೆ ಗುಳ್ಳೆ ಬೆಣ್ಣೆ ಕದ್ದವನೆಂದೆ ಗೊಲ್ಲರ ಅಕಳ ಕಾಯುವ ಚರನೆಂದೆ ಫುಲ್ಲನಲನೆಯರ ವಸ್ತ್ರಗಳ್ಳನೆಂದೆ 3 ಬತ್ತಲೆ ಕುಣಿಕುಣಿದಾಡಿದನೆಂದೆ ಸತ್ಯಭ್ರಷ್ಟ ಮಹಕಲಿಯು ಈತನೆಂದೆ ಮತ್ತೆ ವೈಕುಂಠದಿ ಒದೆಸಿಕೊಂಡು ಇವ ವಿತ್ತದಾಸೆಗೆ ಮತ್ರ್ಯಲೋಕಕಿಳಿದವನೆಂದೆ 4 ಕುದುರೆ ನಡೆಸಿ ಒಬ್ಬನುಳಿಸಿದನೆಂದೆ ಕದನದ್ವೊಂಚಿಸಿ ಒಬ್ಬನಳಿದವನೆಂದೆ ಕುದುರೆ ಕಟ್ಟಿದ ವೀರ ತಾಮ್ರಧ್ವಜಗೆ ಸೋತು ಮುದುಕನಾಗಿ ಭಿಕ್ಷದಶ್ವ ತಂದವನೆಂದೆ 5 ಸೋದರಮಾವನ ಕೊಂದವನೆಂದೆ ಸೋದರಳಿಯರ ಜೀವ ಹೊಡೆಸಿದನೆಂದೆ ಭೇದದಿಂದ ಸಾಧು ಹನುಮನ ಸೋಲಿಸಿ ಸಾಧಿಸ್ವರೂಪಕ್ಕೆ ಪತಾಕೆನಿಸಿದನೆಂದೆ 6 ಜಾರ ಸಿರಿ ಸೊರೆಗೊಂಡವನೆಂದೆ ಮೀರಿದಂಥ ಮಹಮಾಯದ ಹೆಣ್ಣೆಂದೆ ಈರೇಳುಲೋಕದ ಕಪಟನಾಟಕನೆಂದೆ 7 ಮೊಚ್ಚೆಗಾರ ಕೈಯೊಳುಂಡವನೆಂದೆ ಉಚ್ಚಿಷ್ಟನಾಗಿ ಬಹಿಷ್ಕಾರ್ಹೊಂದಿದನೆಂದೆ ವೆಚ್ಚಮಾಡಿ ಮತ್ತು ಕುಲದಿ ಬಿದ್ದವನೆಂದೆ ನಿಶ್ಚಲ ಭಕ್ತರಿಗ್ಹುಚ್ಚ್ಹಿಡಿಸಿದನೆಂದೆ 8 ಪುಲ್ಲನಯನ ಸಿರಿರಾಮನ ಮುಂದೆ ಅಲ್ಲದ ಮಾತುಗಳ್ನಾನೇನೆಂದೆ ಬಲ್ಲಿದ ಹದಿನಾಲ್ಕು ಲೋಕ ಪೊತ್ತವನೆಂದೆ ಉಲ್ಲಾಸದಿ ನಿಮ್ಮ ಬಿರುದು ಸಾರುತ ಬಂದೆ 9
--------------
ರಾಮದಾಸರು
ಏನೋ ಒಂದಿಹುದೂ ಕೋಠಿಬಾಳುವ ನುಂಗಿಹುದೂ ಪ ದೀನನಾಗಿ ಗುರುಧ್ಯಾನಮಾಡಿ ಆಸೆಯೋಳಿ ಬಹು ಮಾನದಿ ಕಾಣುವದೇನೋ ಅ.ಪ ನಮ್ಮಯನಮ್ಮೊಳಿರುತಿಹುದೂ ಹಮ್ಮುಗಳೆಂಬುವ ಹೆಮ್ಮೆಯನಳಿಯಲು ಸುಮ್ಮನೆಗಮ್ಮನೆ ಕಾಣಬರುತ್ತಿಹುದೇನೊ 1 ಅದನು ಗುರುಸೇವಕ ಬಲ್ಲಾ ಮದÀನಜನಕ ಶ್ರೀ ತುಲಸೀರಾಮನ ಪದ ಭಜನೆಯೊಳು ಉದಯಿಸಿ ತಾನೇ 2
--------------
ಚನ್ನಪಟ್ಟಣದ ಅಹೋಬಲದಾಸರು