ಒಟ್ಟು 392 ಕಡೆಗಳಲ್ಲಿ , 62 ದಾಸರು , 361 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾಮರಸಾಯನಂ ಪಿಬ ಹೇ ಮಾನಸ ಶ್ರೀಹರಿನಾಮ ಪ. ರಾಮನಾಮ ರಸಾಯನಂ ಸಂಸಾರರೋಗ ನಿವಾರಣಂ ಸಂಚಿತಪಾಪ ವಿಧ್ವಂಸನಂ ನಾಮಸಂಕೀರ್ತನಂ 1 ಭಕ್ತಾರ್ತಿವಾರಣಂ ಭವಭಯಾಬ್ಧಿತಾರಣಂ ಭಕ್ತಿ ಮುಕ್ತಿ ಸಾಧನಂ ನಾಮಸಂಕೀರ್ತನಂ2 ಕ್ಲೇಶಪಾಶ ವಿಮೋಚನಂ ಕಲಿಕಲ್ಮಷ ಭಂಜನಂ ಶೇಷಾದ್ರೀಶ ಸ್ಮರಣಂ ಸರ್ವೋಪದ್ರವಾರಣಂ 3
--------------
ನಂಜನಗೂಡು ತಿರುಮಲಾಂಬಾ
ನಾರಾಯಣ--------ಜಾಯನಮ: ಪ ಸರ್ವವಾರಿಜೋದ್ಭವ ಹರಿ ನೀ ಪೊತ್ತ ಶಿರಲೋಕ ಎರಡೇಳಾರೊಳಾನೇಕ ದ್ವಾದಶಾದಿ-- ಶಾಸನ ಆದಿದಿಕ್ಪಾಲರಾ ಬೇಕಾದ ಹಾಗೆ ಪತಿ ¨್ರಹ್ಮನೀನೆ 1 ಜಗದೊಳು ಹುಟ್ಟಿದ ಪ್ರಾಣಿಗಳಿಗೆ ಎಲ್ಲ ಬಗೆ ಬಗೆ ಸಂಹಾರ ಕರ್ತನಾಗಿ ಅಗಣಿತ ಮಹಿಮ ತಾಮಸಯುಕ್ತನಾದಂಥ ಮೃಗ ಚರ್ಮಾಂಬರಧರ ಮಹಾದೇವನೀನೆ 2 ಸಕಲ ಚರಾಚರ ಸಲಹುತಲಿರುವಂಥ ನಿಕರಾದಿ ಸಾತ್ವಿಕ ನಿಜಧರ್ಮಾದಿ ಅಕಲಂಕ ಮಹಿಮ ಶ್ರೀಹರಿ 'ಹೊನ್ನ ವಿಠ್ಠಲ’ ಸಕಲ ಸ್ವತಂತ್ರನಾದ ಸರ್ವೋತ್ತಮ ನೀನೆ 3
--------------
ಹೆನ್ನೆರಂಗದಾಸರು
ನಿಖಿಲಾತ್ಮ ನಿಖಿಲಾತ್ಮ ಅಖಿಲಬ್ರಹ್ಮಾಂಡಪತಿ ಸಲಹು ಸರ್ವೋತ್ತಮ ಪ ಮಂದರಧರ ಎನ್ನ ಮಂದಮತ್ಯಳಿದಾ ನಂದ ಮತಿಯಿತ್ತು ಚೆಂದದಿಂ ರಕ್ಷಿಸು 1 ನಿತ್ಯನಿರುಪಮ ಸತ್ತು ಚಿತ್ತ ನಿಮ್ಮ ಭಕ್ತಿ ಭಜನೆ ಎನ್ನ ಚಿತ್ತಕ್ಕೆ ದಯಮಾಡು 2 ಬಗೆದು ಎನ್ನಂತರಂಗzಗಲದೆ ನಿಂತು ನಿಜ ಸುಗುಣವಿತ್ತು ಪೊರೆ ಸುಗುಣಾಂಬುಧಿ 3 ಕಾಮಿತಜನಕಲ್ಪ ಕಾಮಧೇನು ಎನ್ನ ಕಾಮ ಪೂರೈಸಿ ನಿನ್ನ ನಾಮವಿತ್ತು ಕಾಯೊ 4 ಭಕ್ತಿದಾಯಕ ನಿನ್ನ ಭಕ್ತಿಯಿಂ ಭಜಿಸುವೆ ಸತ್ಯ ಶ್ರೀರಾಮ ನಿತ್ಯಮುಕ್ತಿಯಿತ್ತು ಪೊರೆ 5
--------------
ರಾಮದಾಸರು
ನಿಗಮ ಗೋಚರಾನಂತ ಮಹಿಮ ಶ್ರೀದೇವ ಸಗುಣ ನಿರ್ಗುಣನಾಗಿ ತೋರುವ ಸುಗಮಲಿಹ್ಯ ಸುಖದಾಯಕ ಧ್ರುವ ಅಗಣಿತ ಗುಣಗಮ್ಯನುಪಮ ಶ್ರೀನಾಥ ನಿಗಮ ತಂದು ನೀ ಪ್ರಕಟದೋರಿದೆ ನಗವು ಬೆನ್ನಿಲಿ ತಾಳಿದೆ ಮಣಿ ಮಾಧವ ಶ್ರೀ ಕಾಂತ ಜಗವನುಳಹಿದೆ ನೆಗಹಿದಾಡಿಲೆ ಭಗತಗೊಲಿದು ನೀ ಕಾಯಿದೆ 1 ಹರಿ ಸರ್ವೋತ್ತಮ ಪರಮಪುರಷ ಶ್ರೀ ವೇಷ ಧರಿ ಮೂರಡಿ ಮಾಡಿದೆ ನೀ ಪರಶುಧರನಾಗ್ಯಾಡಿದೆ ಪರಿಪರ್ಯಾಡುವಾ ನಂದಸ್ವರೂಪ ಶ್ರೀಧರ ಶರಣ ರಕ್ಷಕನಾಗಿ ನೇಮದಿ ತುರುಗಳನ ನೀ ಕಾಯಿದೆ 2 ಸಾಮಜ ಪ್ರಿಯ ಶ್ರೀನಿಧೆ ಹಯವನು ತೋರುವೆ ಸರಸಿಜೋಧ್ಬವನುತ ಸಿರಿಲೋಲ ಎನ್ನಯ ಅನುದಿನ ಸೂರ್ಯಕೋಟಿ ಪ್ರಕಾಶನೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿತ್ಯ ಸುಪ್ರೀತ ಸರ್ವೋತ್ತಮ ಹರಿಯೆ ಚಿತ್ತಜನಯ್ಯ ಚಿನ್ಮಯ ಎನ್ನ ದೊರೆಯೆ ಪ. ಅರಿಯೆ ನಾನಾ ವಾಹನಾದಿ ವಿಧಿಯನು ಮರಿಯೆನು ಮನದಲ್ಲಿ ಮಂದಭಾವವನು ವರದೇಶ ನಿನ್ನಯ ಚರಣಾರವಿಂದವ ನೆರೆನಂಬಿದವನೆಂಬ ಪರಿಯಿಂದ ದಯವಾಗು 1 ಇಂದಿರಾವರವಿಧಿವಂದ್ಯ ಸರ್ವೇಶಾ- ನಿತ್ಯ ಸುಂದರ ವೇಷಾ ಮಂದ ಬುದ್ಧಿಯೊಳೆಂತು ಒಲಿಸುವೆ ಶ್ರೀಶಾ ತಂದೆ ನೀ ಕರುಣದಿ ಸಲಿಸಭಿಲಾಷಾ 2 ಅಣುರೇಣು ತೃಣಕಾಷ್ಠ ಪರಿಪೂರ್ಣ ನಿನ್ನ ನೆನೆದು ವಂದಿಸುವೆ ಚಂದನ ಮೂರ್ತಿಯನ್ನ ಸನಕಾದಿ ವಂದ್ಯ ಶೇಷಾಚಲನಾಯಕ ಅನಿಮಿಷ ಪತಿಯೆನ್ನ ಮನೆಯಲ್ಲಿ ನೆಲೆಯಾಗು 3
--------------
ತುಪಾಕಿ ವೆಂಕಟರಮಣಾಚಾರ್ಯ
ನಿನ್ನ ಪಾದವ ನಂಬಿ ಅನ್ಯರಾಶ್ರಯವ್ಯಾಕೆಚನ್ನ ಗುರು ವಿಜಯರಾಯ ಪ ಇನ್ನೇನು ಯಿನ್ನೇನು ಯೆನ್ನ ಕುಲಕೋಟಿ ಪಾ-ವನ್ನವಾದುದು ನಿಶ್ಚಯಾ ಜೀಯ ಅ.ಪ. ಪಂಚ ಮಹ ಪಾತಕರೊಳಗೆ ಮೂರನೆ ಕಕ್ಷಿಕಾಂಚನ ದ್ರೋಹಿ ನಾನು ಯೆನ-ಮುಂಚೆ ಬಂದಾಗ ಕೈ ಬಿಡದೆ ಪ್ರಾ-ಪಂಚವನೆ ಬಿಡುಯೆಂದು ನುಡಿದೆ ಯೆನ್ನಸಂಚಿತಾಗಮವೆಲ್ಲ ತೊಡದೆ ಯೆನ್ನ ||ಕಂಚು ಕಟ್ಬುಳಿ ಕಲ್ಲೊತ್ತಿನ ಮೇಣ್ ಕಾಶಿಗೆ ||ಪಂಛೇರು ಮಾಡಿ ನಡದೆ ಬಿಡದೆ 1 ವ್ಯಾಸರಾಯರ ಗುಹೆಯೊಳಗೆ ನವ ಸಂ-ನ್ಯಾಸಿಗಳ ಸಮಕ್ಷಮದಲಿ ಯೆನ್ನದಾಸನಾಗೆನುತ ನೀ ಪೇಳ್ದೆ ಯೆನ್ನವಾಸಿ ಪಂಥಗಳೆಲ್ಲ ತಾಳ್ದೆವೊಲಿದುದೋಷಾಂಕುರಗಳೆಲ್ಲ ಸೀಳ್ದೆ ಸ್ವಾಮಿ ||ಶ್ರೀಶ ಸರ್ವೋತ್ತಮನೆಂದು ನೀ ಪೇಳಿ ಸಂ-ತೋಷದಿಂದೆನ್ನ ಪೊರದೆ ಬಿಡದೆ 2 ನಿತ್ಯ ಮೆರೆವೆ ಯೆನ್ನ ||ಪೂಜಾ ಫಲವೆಂದು ಆವಾಗೆ ನಿನ್ನ ಪದರಾಜೀವ ಧ್ಯಾನಿಸುವೆ ಸ್ವಾಮಿ 3 ಪುಶಿಯು ಜಗವೆಲ್ಲ ದೈವವು ತಾನೆನುತಅಸಮ ವೇದ ಪೌರುಷ ಯೆಂಬಂಥಭಸುಮಧಾರಿಯನೆ ಕರದೆ ಅವನಅಸುರ ಭಾವವನೆಲ್ಲ ಮುರಿದೆ ನಮ್ಮಬಿಸಜಾಕ್ಷ ಪರನೆಂದು ಪೊರೆದೆ ಸ್ವಾಮಿ ||ಎಸೆವ ದ್ವಾದಶನಾಮ ಪಂಚಮುದ್ರಿಯನಿಡಿಸಿನಸುನಗುತಲವನ ಪೊರದೆ ಬಿಡದೆ 4 ವಾಕು |ಅನ್ಯಥಾ ಮಾಡುವುದು ಸಲ್ಲ ಮೋ-ಹನ್ನ ವಿಠ್ಠಲ ಯಿದನು ಬಲ್ಲ ಮುನ್ನಾಪನ್ನಗಶಯನ ಪ್ರಸನ್ನನಾದದಕೆ ಯಿದುಎನ್ನ ಮನೋರಥ ಸಿದ್ಧಿಯೊ ಸ್ವಾಮಿ 5
--------------
ಮೋಹನದಾಸರು
ನಿರವದ್ಯ ಪ ಸದ್ಗುಣಪೂರ್ಣ ನೀನೇನೊ ಮೂಢ ಅ.ಪ ಬ್ರಹ್ಮಜಿಜ್ಞಾಸದ ಕ್ರಮವ | ನಿರ- ಸಮ್ಯಕ್ ಶೋಧಿಸದೇ ಅಹಂ ಬ್ರಹ್ಮಾಸ್ಮಿ ಎಂಬುವ ಆಮ್ನಾಯ ವಾಕ್ಯಕೆ ಅರ್ಥವ ತಿಳಿಯದೆ 1 ಕಾಕುಮಾಡುತಲರ್ಥ ಪೇಳ್ವುದಧರ್ಮ ಏಕವಾವುದು ಇನ್ನು ಏಕವಾವುದು ಎಂದು ನೀಕಳವಳಿಸುತ ನಿಜತತ್ವವರಿಯದೆ 2 ಆತ್ಮನಾತ್ಮಗಳೆಂದರೇನೊ | ಪರ- ಮಾತ್ಮ ಜೀವಾತ್ಮರೊ ಜೀವದೇಹಗಳೊ ಸ್ವಾತ್ಮಾನುಸಂಧಾನದಿಂದಲಿ ನೋಡ- ಧ್ಯಾತ್ಮ ವಿದ್ಯಾಭ್ಯಾಸ ಮಾಡದೆ ಬಾಯೊಳು 3 ರವಿ ಗಣಪತಿ ಶಿವ ಶಕ್ತಿ | ಭೈ- ರವ ವಿಷ್ಣು ಎಂಬುವ ಷಣ್ಮತಯುಕ್ತಿ ಎವೆ ಮಾತ್ರ ಸ್ವಾತಂತ್ರ್ಯವಿಲ್ಲ ಕೇಳ್ ಸರ್ವಶ- ಬ್ದವುಯಾವನಲ್ಲಿ ಸಮನ್ವಯವರಿಯದೆ 4 ಜೀವ ಜೀವರಿಗೆಲ್ಲ ಭೇದ | ವಿದುಸ್ವ ಭಾವವಾಗಿರುವುದು ಯಾತಕೀವಾದ ಜೀವರೂಪದಿ ಸರ್ವಜೀವರೊಳಗಿದ್ದು ದೇವಸಕಲ ಕರ್ಮಗಳ ಮಾಡಿಸುವನು 5 ಕರ್ಮವೆಂಬುದು ಅವನಿಗೆ ಲೋಪವಿಲ್ಲ ನಿರ್ಮಲ ಸಚ್ಚಿದಾನಂದ ಬ್ರಹ್ಮ ಎಂದು ನೀನೆ ಪೇಳುವೆಯಲ್ಲ ನಿನಗೆ ನಿಜವಿಲ್ಲ 6 ಸೂರ್ಯ | ಚಂದ್ರ ಕಿನ್ನರ ಸಿದ್ಧ ಸಾಧ್ಯ ನರತಿರ್ಯಕ್ ಪಶುಪಕ್ಷಿ ಕೀಟಾದಿ ನಾಮಗಳು ಪರಮಾತ್ಮನಲಿ ಸಮನ್ವಯವರಿಯದೆ 7 ಮಾಯಾ ಪ್ರಪಂಚವಿದೆನ್ನುತ | ನಿ- ಮಾಯೆಯಧಿಷ್ಠಾನದೊಳನಂತ ಜೀವನಿ- ಕಾಯವು ಗುಣಗಳಿರುವ ಮರ್ಮವರಿಯದೆ 8 ಸಾರ ಭೇದವಬದ್ಧ ಅಭೇದ ನಿಶ್ಚಯವೆಂದು ವಾದಿಸುವುದಕೇನಾಧಾರ ನಿನಗುಂಟೊ 9 ಜೀವಬ್ರಹ್ಮೈಕ್ಯವೆ ಮುಕ್ತಿ | ವೇ- ದಾವಳಿಗಳ ಪರಮಾರ್ಥದ ಉಕ್ತಿ ಜೀವನಿಂದೇನಾಗುವುದೆಂಬುದರಿಯದೆ 10 ದ್ವಾಸುಪರ್ಣವೆಂಬುವುದಕೆ | ವಿಷ- ಯಾಸಕ್ತ ಜೀವ ಆತ್ಮನು ಸಾಕ್ಷಿಯದಕೆ ನೀಸರ್ವೋತ್ತಮನಾದರೆ ಇನ್ನು ಮಹದಾದಿ ಈ ಸೃಷ್ಟಿ ಸ್ಥಿತಿಲಯವೇತಕೆ ತಿಳಿ ಜೋಕೆ 11 ಅಂಧ ಪರಂಪರವಾದ | ಬಿಟ್ಟು ಚಂದಾಗಿ ಪರಿಶೋಧಿಸು ಭÉೀದಾಭÉೀದ ತಂದೆತಾಯಿಗು ಮಗನಿಗೂ ಎಷ್ಟು ಭÉೀದ ಆ- ಪರಿ ತಿಳಿದರೆ ನಿರ್ವಾದ 12 ಪೂರ್ವೋತ್ತರ ವಿರೋಧವಿಲ್ಲ | ದಂತೆ ಸರ್ವಶೃತಿಗಳರ್ಥ ತಿಳಿದು ನುಡಿಸೊಲ್ಲ ಗರ್ವವೇತಕೆ ನಿನಗಿದರೊಳೇನಿಲ್ಲ ನೀ ಸರ್ವಜ್ಞನೊ ಕಿಂಚಜ್ಞನೊ ನೋಡು ದೃಢಮಾಡು 13 ಯೋಗ ಒದಗಿದಾಗ ಒಂದೆ ಎಂಬುವರೆ ಈಗೇನು ಆಗೇನು ಇಲ್ಲೇನು ಉಂಟೆ ನಾ- ವಾಗಲು ಜೀವರಿಗೆ ಹರಿಕರ್ತನಾಗಿರೆ 14 ಕಾಲಕರ್ಮ ಸ್ವಭಾವ ಜೀವ | ಹರಿಯ ಆಲಸ್ಯ ಬಿಟ್ಟು ಅವನಿಗೆ ದಾಸನಾಗದೆ 15 ಆಲೋಚಿಸಿದರರ್ಥ ನಿಜವಾಗಿ ತಿಳಿಯದೆ 16 ಜ್ಞಾನವೆ ನಾನು ಕರ್ಮವೆ ಮಿಥ್ಯವೆಂದು ನೀನಾಡುವುದಕೇನು ನೆಲೆ ಮೂಲ ಯಾವುದು ಸ್ವಾನುಭವವೋ ಶಾಸ್ತ್ರವೊ ಮನಕೆ ತೋರಿದ್ದೊ 17 ಹೋಮ ಜಪವು ಸ್ನಾನ ದಾನ | ನಿತ್ಯ ಭೃತ್ಯ ನ್ಯಾಯವರಿಯದವನು ಶುದ್ಧ ತತ್ವಾರ್ಥಿ ಎನಿಸುವನೆ 18 ಕರ್ತನು ನೀನೆಂದು ಭೃತ್ಯನು ನಾನೆಂದು ತೀರ್ಥಪಾದನ ದಿನದಿನದಿ ಸಂಸ್ತುತಿಸದೆ 19 ಪಾದ ವನಜಕೊಪ್ಪಿಸಿ ಸಂಸಾರದ ಕರಕರೆಯ ಮನದಿ ಲೆಕ್ಕಿಸದೆ ಚಿಂತನಗೈದು ಸರ್ವತ್ರ ಘನಮಹಿಮನ ದಿವ್ಯಗುಣರಾಶಿ ಪೊಗಳದೆ 20 ಹೊರಗಣ್ಣ ಮುಚ್ಚಿ ಮೋದದಲಿ | ಒಳ- ಗಿರುವಾಧಾರಾದಿ ಚಕ್ರಗಳ ಸ್ಥಾನದಲಿ ಸರಸಿಜಭವ ಶಂಕರಾದಿ ಸುರರ ನೋಡಿ ತರತಮವಾಗಿ ಮುಂದಿನ ಪರಿಯ ತಿಳಿಯದೆ 21 ಮಂಗಳ ಮೂರ್ತಿಯ ನೋಡಿ ಕೊಂಡಾಡಿ ಅ- ನಂಗಗೆ ಸಿಲುಕದೆ ಅರ್ಥಿಯ ಪೊಂದದೆ 22 ಎಪ್ಪತ್ತೆರಡು ಸಹಸ್ರನಾಡಿ | ಗಳೊ- ಳೊಪ್ಪುವ ಭಗವದ್ರೂಪಗಳನು ನೋಡಿ ಅಪ್ಪ ನೀನೆಂದು ಭಕ್ತಿಯಲಿ ಕೊಂಡಾಡಿ ಪುನ- ರಾವರ್ತಿರಹಿತ ಶಾಶ್ವತ ಸುಖಿಯಾಗನೆ 23 ವಿಪರೀತ ಮತಿಪುಟ್ಟದಂತೆ | ಧ್ಯಾನ- ಗುಪಿತವಾಗಿರುತ ಜನರಿಗೆ ಹುಚ್ಚನಂತೆ ಅಪವರ್ಗಾಪೇಕ್ಷಯಿಂ ನಿಷ್ಕಾಮಿಯಾಗದೆ24 ಆಪಾದಮಸ್ತಕ ದೇಹ | ದಿಸು ರಾಪದಜನಕ ಶ್ರೀಗುರುರಾಮವಿಠಲ ವ್ಯಾಪಾರವೆಲ್ಲ ಮಾಡಿಸುವನೆಂದರಿತರೆ ಸಾಫಲ್ಯನಾಗಿ ಜೀವನು ಧನ್ಯನಾಗುವ 25
--------------
ಗುರುರಾಮವಿಠಲ
ನಿಷ್ಠೆಯಿಂದ ನಿಂತ ಈ ಪುಟ್ಟ ಕಪಿಯ ನೋಡೆ ಪ. ಎಷ್ಟು ಮೌನ ಧರಿಸಿದಂಥ ಪುಟ್ಟ ಕಪಿಯ ನೋಡೆ ಅ.ಪ. ವಾರಿಧಿಯ ದಾಟಿದಂಥ ಪುಟ್ಟ ಕಪಿಯ ನೋಡೆ ಹೀರಿದ ಕುರುಪರ ರಕ್ತ ಪುಟ್ಟ ಕಪಿಯ ನೋಡೆ 1 ತೂರಿದ ಅನ್ಯರ ಮತ ಪುಟ್ಟ ಕಪಿಯ ನೋಡೆ ಸಾರಿ ಹರಿ ಸರ್ವೋತ್ತಮನೆಂದ ಪುಟ್ಟ ಕಪಿಯ ನೋಡೆ2 ಶೌರ್ಯವೆಲ್ಲ ಉಡುಗಿದಂಥ ಪುಟ್ಟ ಕಪಿಯ ನೋಡೆ ಹಾರಿ ಯಂತ್ರದಲ್ಲಿ ಶಿಲ್ಕಿದ ಪುಟ್ಟ ಕಪಿಯ ನೋಡೆ 3 ಮಾನ ಉಳಿಸಿಕೊಳ್ಳಲು ಮೌನದ ಪುಟ್ಟ ಕಪಿಯ ನೋಡೆ ಧ್ಯಾನ ಮುದ್ರಾಂಕಿತದಿ ಶೋಭಿಪ ಪುಟ್ಟ ಕಪಿಯ ನೋಡೆ 4 ಯೋಗಾಸನದಿ ಪದ್ಮಾಸನವು ಪುಟ್ಟ ಕಪಿಯ ನೋಡೆ ವಾಗೀಶನ ಪದಕ್ಹೋಗುವ ತಪದ ಪುಟ್ಟ ಕಪಿಯ ನೋಡೆ 5 ವ್ಯಾಸರಿಗೊಲಿದ ವೇಷಧಾರಕ ಪುಟ್ಟ ಕಪಿಯ ನೋಡೆ ಮೋಸವೊ ಧ್ಯಾನವೊ ಅರಿಯೆ ಪುಟ್ಟ ಕಪಿಯ ನೋಡೆ 6 ಕಷ್ಟದ ಭವಕಟ್ಟು ಬಿಡಿಸುವ ಪುಟ್ಟ ಕಪಿಯ ನೋಡೆ ಕಟ್ಟಿನೊಳ ಸಿಲ್ಕಿ ಗುಟ್ಟು ತಿಳಿಸದ ಪುಟ್ಟ ಕಪಿಯ ನೋಡೆ 7 ಸಿದ್ಧ ಸಾಧನ ಬುದ್ಧಿ ಬಲಿದ ಪುಟ್ಟ ಕಪಿಯ ನೋಡೆ ಉದ್ಧಾರಕ ಪ್ರಸಿದ್ಧ ಪುರುಷ ಪುಟ್ಟ ಕಪಿಯ ನೋಡೆ 8 ಸ್ವಾಪರೋಕ್ಷಿ ಜಗದ್ವ್ಯಾಪಕನಾದ ಪುಟ್ಟ ಕಪಿಯ ನೋಡೆ ಗೋಪಾಲಕೃಷ್ಣವಿಠ್ಠಲನ ದಾಸನೀ ಪುಟ್ಟ ಕಪಿಯ ನೋಡೆ 9
--------------
ಅಂಬಾಬಾಯಿ
ನೀ ಕರುಣದಿಂದ ಪಾಲಿಸದಿದ್ದರೆ ಇನ್ನುನಾ ಕಾಣೆ ಮನ್ನಿಸುವರ ಪ. ಸಾಕಾರ ಮೂರುತಿ ಸರ್ವೋತ್ತಮನೆನೀ ಕಾಯೊ ಪರಾಕುಮಾಡದೆ ಎನ್ನನು ದೇವ ಅ.ಪ. ಗುರುಹಿರಿಯರನು ಕಂಡು ತರಳತನದಲಿ ನಾನುಚರಣಕೆರಗದೆ ತಿರುಗಿದೆವರ ಸಕಲ ಸಂಪದವ ಬೇಡಿ ಬಯಸುತ ನಿನ್ನಸ್ಮರಣೆಯನು ಮರೆತಿದ್ದೆನೊಸ್ಮರನ ಬಾಣಕೆ ಸಿಲುಕಿ ಪರಸತಿಗೆ ಮರುಳಾಗಿದುರ್ಗತಿಗೆ ನೆಲೆಯಾದೆನೊಸಿರಿಯರಸನೆ ನಿನ್ನ ಚರಣವನು ನಂಬಿದೆನೊಕರುಣದಿಂ ಕಡೆಹಾಯಿಸೊ 1 ಆರುಮಂದಿಗಳೆಂಬ ಕ್ರೂರವೈರಿಗಳಿಂದಗಾರಾದೆನವರ ದೆಸೆಗೆಮಾರಿಹಬ್ಬದÀ ಕುರಿಯು ತೋರಣವ ಮೆಲುವಂತೆತೋರುತಿದೆ ಎನ್ನ ಮತಿಗೆಘೋರ ಸಂಸಾರವೆಂಬೋ ವಾರಿಧಿಯ ದಾಟಿಸುವಚಾರುತರ ಬಿರುದು ನಿನಗೆಮಾರನಯ್ಯನೆ ನಿನ್ನ ಚರಣವನು ನಂಬಿದೆನುಪಾರಗಾಣಿಸೊ ಎನ್ನನು 2 ಹಲವು ಜನ್ಮಗಳಲ್ಲಿ ಬಲುನೊಂದು ಬಾಯಾರಿತೊಳತೊಳಲಿ ಬಳಲುತಿಹೆನುಸಲೆ ಉದರ ಪೋಷಣೆಗೆ ತಲೆಹುಳುಕ ನಾಯಂತೆಹಲವು ಮನೆ ತಿರುಗುತಿಹೆನೊಜಲದ ಮೇಲಿನ ಗುಳ್ಳೆಯಂತಿಪ್ಪ ಈ ದೇಹನೆಲೆಯೆಂದು ನೆಚ್ಚುತಿಹೆನೊಜಲಜನಾಭನೆ ನಿಮ್ಮ ಮಹಿಮೆಯನು ಪೊಗಳುವೆನುಚೆಲುವ ಶ್ರೀ ಹಯವದನ ರನ್ನ 3
--------------
ವಾದಿರಾಜ
ನೀ ಕರುಣಿಸದಿರೆ ಸಾಕುವರ್ಯಾರು ದಯಾಕರ ಮೂರುತಿ ರಾಘವೇಂದ್ರ ಪ ಪಾರು ಮಾಡೊ ಸಂಸಾರಭವದಿ ಅ- ಪಾರ ಮಹಿಮ ಗುರು ರಾಘವೇಂದ್ರಾ ದೂರ ನೋಡಿದರೆ ಬಿಡಿಸೋ ತವ ಚರ- ಣಾರವಿಂದಕೆ ಕೊರಳನು ಕಟ್ಟಿಸೊ 1 ಒಡವೆ ವಸ್ತುಗಳ ಮಡದಿ ಮಕ್ಕಳ ಕೊಡು ಎನುತಲಿ ಬೇಡುವುದಿಲ್ಲ ಒಡೆÉಯನೆ ನಿನ್ನಯ ಅಡಿಗಳಲಿ ದೃಢ ಭಕುತಿಯ ಕೊಡದಿರೆ ಬಿಟ್ಟವನಲ್ಲ 2 ನರರ ಸೇವೆಯಾ ಬಿಡಿಸೋ ಹರಿವಾಯುಗಳ ಸೇವೆಯಾ ಹಿಡಿಸೊ ವರದ ಹನುಮೇಶವಿಠಲನಾ ಸರ್ವೋತ್ತಮನೆಂದು ಕರೆದವನೆ 3
--------------
ಹನುಮೇಶವಿಠಲ
ನೀನೆ ನಮ್ಮ ಕುಲದೈವ ಅನುದಿನಾರಾಧಿಸುವ ಮುನಿಜನರೊಂದಿಸುವ ಘನಗುರು ದೇವಾದಿ ಶ್ರೀದೇವ 1 ಮಾಡಲರಿಯೆ ನಿಮ್ಮ ನಿಜಭಕ್ತಿ ಕೂಡಿಕೊಳ್ಳಯ್ಯ ಸೇವೆ ಶ್ರೀಪತಿ 2 ಮಾತಿಗಿಲ್ಲವೊ ಅನ್ಯಥಾ ಸ್ವಾಮಿ ನೀನೆವೆ ನಮ್ಮ ದೈವತ ಬ್ರಹ್ಮಾದಿಗಳಿಗೆ ಸನ್ನತ 3 ಅಯ್ಯ ನಿಜಬಾಲಕ ನಾ ನಿಮ್ಮ ತಾಯಿತಂದೆಯು ನೀನೆ ನಮ್ಮ ಸಾಹ್ಯಮಾಡುವ ಸರ್ವೋತ್ತಮ 4 ದೈವ ನೀನಹುದೊ ಸಾಕ್ಷಾತ ಕೈವಲ್ಯನಿಧಿಯು ಶ್ರೀನಾಥ ಭಾವಿಸುವರ ಭಾವಪೂರಿತ ಮಹಿಪತಿಯ ಪ್ರಾಣನಾಥ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೀನೇ ದಯಾಸಂಪನ್ನ ಭಕ್ತ ಪ್ರಸನ್ನಾ ಪ ಕಂದನಿನ್ನಯ ದಿವ್ಯಾನಂದ ಮೂರುತಿಯ ನಾ ಕುಂದದೇ ಭಜಿಸಲು ಮರುಗಿ ಬೇಗಾ ಇಂದಿರೇ ಅಜಭವರೆಂದೂ ಕಾಣದ ನಿಜ ವೆಂದೆಂಬೋ ರಾಜ್ಯದೊಳಿದ್ದ ಕಾರಣದಿಂದ 1 ಹರಿಸರ್ವೋತ್ತಮನೆಂದು ಪಿತನಾಜ್ಞೆಯ ಮೀರಲು ಹರಿರೂಪತಾಳ್ದು ದೈತ್ಯನ ಶಿರವಾ ಹರಿದು ಬಾಲನನೆತ್ತಿ ಸಲಹಿದ ಬಗೆಯಿಂದ ಕರುಣಾಕರನೆಂದು ಶ್ರುತಿಯು ಪೇಳುತ್ತಿರಲೂ 2 ಪಾತಕದಿಂದ ಗೌತಮಸತಿ ಶಿಲೆಯಾಗೆ ಭೂತಳದೊಳು ಪರಬೊಮ್ಮನೆಂಬೋ ಸೀತಾರಾಮಾವತಾರರಿಂದ ಸೌಂದರ್ಯ ನೂತನಪದ ಸೋಕಲು ನಿಜಸತಿಯಾದಳೋ 3 ಗುರುತನೂಜನ ಮಂತ್ರಶಕ್ತಿ ವೇದನೆ ತಡೆದೆ ಹರಿಯೆಂದು ಕರೆದ ಉತ್ತರೆಗೆ ಬೇಗಾ ವರಚಕ್ರವನು ಮರೆಮಾಡಿ ಪರೀಕ್ಷಿತನ ಪೊರೆಯೆ ತ್ರಿಜಗದೊಳು ಕೀರ್ತಿಯಾಹುದರಿಂದ 4 ಹರನಿಂದ ಉರಿಯ ಹಸ್ತವ ಪಡೆದು ಭಸ್ಮಾ ಸುರನು ಫಾಲಕ್ಷನ ಖತಿಗೊಳಿಸೆ ಸಿರಿವೇಲಾಪುರ ಚನ್ನಕೇಶವನಾವೇಶದಿಂ ಪರಿದಸುರನ ಕೊಂದು ಸ್ಥಿರವಾದಕಾರಣ 5
--------------
ಬೇಲೂರು ವೈಕುಂಠದಾಸರು
ನೀನೇನ ಮಾಡಲಾಪಿಯೋ ಲಕುಮೀಶಾ | ನಾನೀಗ ಪಡೆದದ್ದು ಉಣದಲೆ ಪೋಗುವದೆ | ಪ ಲೋಕದೊಳಗೆ ನಿನ್ನ ಕೊಂಡಾಡಿ ಪ್ರತಿದಿನ ಏಕ ಭಕುತಿಲಿ ಸರ್ವೋತ್ತಮನೆಂದು ಏಕಾಂತ ಭಜಿಪÀ ಮನುಜಗಾದರು ಬರೆದ ವಾಕು ತಪ್ಪುವದೇನೋ ಅಜನು ನಿರ್ನೈಸಿದ1 ಮುಂದೆ ಕೊಡುವ ಫಲಕೆ ಕರ್ತ ನೀನಲ್ಲದೆ ಹಿಂದಣಿಂದಲಿ ಬರುವ ಕಾಲಾಖ್ಯಕೆ ಒಂದು ಬಿಂದು ಮಾತ್ರ ತೊಲಗಿಪ ನಡತಿ ಕಾಣೆ ಅಂದಲ್ಲಿ ಏನು ಫಲ ಎನ್ನ ಕರ್ಮವಷ್ಟೇ 2 ಇದ್ದದೊಂದು ಮರಿ ಅಡಗಾಣಿಸಿ ಬಂದು ಹದ್ದು ತಾ ವೈಯಲು ಆ ಕುರುಬ ಯೆಲ್ಲಿ ಇದ್ದರೇನು ಭಯ ವಿಜಯವಿಠ್ಠಲ ನಿನ್ನ ಪೊದ್ದಿದವಗಾದರು ಅನುಭವಿಸದೆ ಬಿಡದು3
--------------
ವಿಜಯದಾಸ
ನೆರೆನಂಬಿದವರನ್ನ ಪರಿವೆಮಾಡದೆ ಇನ್ನು ಪೊರೆಯದಿರುವರೆ ಪರಮಪುರುಷನೆ ನರಹರೆ ನಿಮ್ಮ ಚರಣ ಕಮಲವ ಹಾಗೆ ಸ್ಮರಿಸುತಿರುವಂಥ ಪರಮಪುಣ್ಯ ಭಕ್ತಜನ ರನು ಪಾಲಿಸದೆ ಇನ್ನು ಇರುವದುಚಿತವೆ ಪ ಅಮಿತ ಪರಾಕ್ರಮ ಕುಂಡಲಶಯನ ಅಕ್ರೂರ ವಂದ್ಯಾ ಪುಂಡರೀಕಾಕ್ಷನೆ ಪುಣ್ಯ ಪ್ರಭಾವನೆ ಕುಂಡಲಾಧಿಪ ದೇವ ಮಹಾನುಭಾವ ದಂಡಿದಾನವ ಖಂಡಗರ್ವ ಅಖಂಡಮುನಿಮನ ಮಂಡಲ ನಿಲಯ ಕೋದಂಡಧರನೆ ಅಂಡಜ ಗಿರಿವಾಸ ಹರಿಗೋವಿಂದನೆ 1 ಭೂಮಿಜರಮಣ ಸಂಪೂರ್ಣಾನಂದನೆ ಸಾಮಗಾನಲೋಲ ಸರ್ವೇಶನೆ ಕಾಮತಾರ್ಥಗಳೀವ ಕರುಣಾಸಾಗರ ದೇವಾ ಸ್ವಾಮಿ ಜಗನ್ನಾಥ ಸರ್ವೋತ್ತಮನೆ ಕಾಮ ಜನಕ ಸುದಾಮ ರಕ್ಷಕ ಪ್ರೇಮ ಸೀತಾರಾಮ ಜಗತ್ಪತಿ ಶೌರಿ ಶ್ರೀಹರಿ ಕೋಮಲಾಂಗ ಕೃಷ್ಣ ಮೂರುತಿ 2 ಅಖಿಲಾಂಡಕೋಟಿ ಬ್ರಹ್ಮಾಂಡ ನಾಯಕನಾಗಿ ಸಕಲಭಾರಕರ್ತ ಶ್ರೇಷ್ಠನೆ ನಿಕರದಿ ಸಲಹುವ ನಿಜನಿತ್ಯಾನಂದಾನೆ ಪ್ರಕೃತಾದಿ ಪಾಲಿಸುವ ಪರಮಾತ್ಮನೆ ಸಕಲ ವೈಭವ ಚಿದ್ವಿಲಾಸನೇ ನಿಖರಾರೈ ನಿನ್ನಲಿ ನಮೋ ಭಕುತವತ್ಸಲ ಮುಕುತಿದಾಯಕ ರುಕ್ಮಣಿಯವರ 'ಹೆನ್ನವಿಠ್ಠಲಾ’ 3
--------------
ಹೆನ್ನೆರಂಗದಾಸರು
ನೋಡಿ ನೋಡಿ ನಿಮ್ಮೊಳು ನಿಜಘನವ ಧ್ರುವ ಆಧಾರ ದೃಢದಿಂದ ಆರು ಸ್ಥಳವ ಮುಟ್ಟಿ ಆದಿ ಅನಾದಿಯ ಪಥವು ನೋಡಿ 1 ಭೂಚರ ಖೇಚರಚಾಚರ ಗೋಚರ ಅಲಕ್ಷ ಮುದ್ರೆಯ ಸ್ಥಾನ ನೋಡಿ 2 ಪರಾಪಶ್ಯಂತಿಯು ಮಧ್ಯಮ ವೈಖರಿ ಸಾರ ನೋಡಿ3 ಪಂಚತತ್ವದ ಗತಿ ಪಂಚಪ್ರಾಣವದ ಸ್ಥಿತಿ ಪಂಚಕರುಣಾಕೃತಿ ಗತಿ ನೋಡಿ 4 ಸ್ಥೂಲ ಸೂಕ್ಷ್ಮಕಾರಣ ಮಹಾಕಾರಣ ನೋಡಿ ಆನಂದಗತಿಯಲಿ ಬೆರೆದಾಡಿ 5 ಶೂನ್ಯ ಮಹಾ ಶೂನ್ಯ ನಿಶ್ಯೂನ್ಯ ನೋಡಿ 6 ಮಹಿಪತಿಸ್ವಾಮಿ ಶ್ರೀಗುರು ಸರ್ವೋತ್ತಮ ನೋಡಿ ಆನಂದಗತಿಯಲಿ ಬೆರೆದಾಡಿ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು