ಒಟ್ಟು 1576 ಕಡೆಗಳಲ್ಲಿ , 102 ದಾಸರು , 1214 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಂಸಾರ ಕನಸಣ್ಣ ಸಕಲರಿಗೆ ಹೇಳುವೆನಣ್ಣಸಂಸಾರ ಸತ್ಯವೆಂಬುವನ ಬಾಯಲ್ಲಿ ಹೊರೆ ಮಣ್ಣಣ್ಣಪಹೆಂಡತಿಯು ಕನಸಣ್ಣ ಗಂಡನೂ ಕನಸಣ್ಣಗಂಡು ಮಗ ಸೊಸೆ ಸಹೋದರರು ಬಂಧುಗಳು ಕನಸಣ್ಣ1ದನಕರು ಕನಸಣ್ಣ ದವಲತ್ತು ಕನಸಣ್ಣಮನೆ ಮದುವೆ ಮಂಟಪ ಮಹಾಲಕ್ಷ್ಮೀ ಕನಸಣ್ಣ2ವೈಯ್ಯಾರ ಕನಸಣ್ಣ ವಸ್ತುಗಳು ಕನಸಣ್ಣಮೈಯಲ್ಲಿಹ ಬಲವದು ಮತ್ತೆ ಮುರಿ ಮೀಸೆ ಕನಸಣ್ಣ3ನಾನಿಹುದು ಕನಸಣ್ಣ ನೀನಿಹುದು ಕನಸಣ್ಣಶಾಣೆತನ ಮಾನಾಪಮಾನಗಳು ಸೈನ್ಯ ಕನಸಣ್ಣ4ಸಂಸಾರ ಮಾಡಿದರಣ್ಣ ಸಾಕ್ಷಿಯಾಗಿರಬೇಕಣ್ಣಹಂಸ ಚಿದಾನಂದ ಸದ್ಗುರು ಹೊಂದಲು ಸರಿವುದು ಜನನವಣ್ಣ 5
--------------
ಚಿದಾನಂದ ಅವಧೂತರು
ಸಾಕು ಸಾಕಿನ್ನು ಸಂಸಾರಸುಖವು |ಶ್ರೀಕಾಂತ ನೀನೊಲಿದು ಕರುಣಿಸೈ ಹರಿಯೆ ಪಉದಿಸಿದುವು ಪಂಚಭೂತಗಳಿಂದ ಔಷಧಿಗ-|ಳುದಿಸಿದುವು ಔಷಧಿಗಳಿಂದನ್ನವು ||ಉದಿಸಿದುವು ಅನ್ನದಿಂ ಶುಕ್ಲ-ಶೋಣಿತವೆರಡು |ಉದಿಸಿದುವು ಸ್ತ್ರೀ-ಪುರುಷರಲ್ಲಿ ಹರಿಯೆ 1ಸತಿಪುರುಷರೊಂದಾಗಿ ರತಿಕ್ರೀಡೆಗಳ ಮಾಡೆ |ಪತನವಾದಿಂದ್ರಿಯವು ಹೊಲೆ-ರುಧಿರವು ||ಸುದತಿಯುದರದೊಳೆರಡು ಏಕದಲಿ ಸಂಧಿಸಲು |ಬುದಬುದನೆ ಮಾಸಪರ್ಯಂತರದಿ ಹರಿಯೆ 2ಮಾಸವೆರಡರಲಿ ಶಿರಮಾಸಮೂರರಲಂಗ |ಮಾಸನಾಲ್ಕರಲಿ ಚರ್ಮದ ಹೊದಿಕೆಯು ||ಮಾಸವೈದರೊಳುನಖರೋಮ ನವ ರಂಧ್ರಗಳು |ಮಾಸವೇಳಲಿ ಧಾತು ಹಸಿವು ತೃಷೆಯು 3ತಿಂಗಳೆಂಟರಲಿ ಪೂರ್ವಾನುಭವ ಕರ್ಮಗಳ |ಭಂಗವನು ಪಡಲಾರೆ ಭವಭವದೊಳು ||ಅಂಗನೆಯ ಉದರಕಿನ್ನೆಂದಿಗೂ ಬರೆನೆಂದು |ಹಿಂಗದಲೆ ಧ್ಯಾನಿಸುತ ಕಳೆದೆನೈ ದಿನವ 4ಇನಿತು ಗರ್ಭದೊಳು ನವಮಾಸ ಪರಿಯಂತರದಿ |ತನು ಸಿಲುಕಿ ನರಕದಲಿ ಆಯಾಸಗೊಂಡು ||ಘನಮರುತವೇಗದಿಂ ಅರುಹನಲ್ಲಿಯೆ ಮರೆತುಜನಿಸುವಲಿ ಮೃತಭಾವದೊಳು ನೊಂದೆ ಹರಿಯೆ 5ಧರೆಯಮೇಲುದಿಸಿ ಬಹು ವಿಷ್ಣುಮಾಯೆಗೆ ಸಿಲುಕಿ |ಪರವಶದೊಳಿರಲು ನೀರಡಿಸಲಾಗ ||ಹೊರಳಿ ಗೋಳಿಡುತ ಕಣ್ದೆರೆಯ ಹರಿಯನು ಮರೆವ |ದುರಿತರೂಪದ ತನುವ ಧರಿಸಿದೆನೊ ಹರಿಯೆ 6ಶಿಶುತನದೊಳಿರಲು ನೊಣ ಮುಸುಕಲಂದದಕಳಲು |ಹಸಿದನಿವನೆಂದು ಹಾಲನೆ ಎರೆವರು ||ಹಸು-ತೃಕ್ಷೆಗಳಿಂದಳಲು ಹಾಡಿ ತೂಗುವರಾಗ |ಪಶುವಂತೆ ಶಿಶುತನದೊಳಿರಲಾರೆ ಹರಿಯೆ 7ನಡೆಯಲರಿಯದ ದುಃಖ ಮನಸಿನೊಳು ಬಯಸಿದುದ |ನುಡಿಯಲರಿಯದ ದುಃಖ ವಿಷಮದಿಂದ ||ಅಡಿಯಿಡುತ ಮೆಲ್ಲನೇಳುತ ಬೀಳುತಲಿ ತೊದಲು-|ನುಡಿಯೊಳಿಹ ಬಾಲ್ಯದೊಳಗಿಲಾರೆ ಹರಿಯೆ 8ಬಾಲ್ಯದೊಳು ಕೆಲವು ದಿನ ಬರಿದೆ ಹೋಯಿತು ಹೊತ್ತು |ಗೋಳಿಡುತವಿದ್ಯೆಕರ್ಮಗಳ ಕಲಿತು ||ಮೇಲೆ ಯೌವನದುಬ್ಬಿನೊಳು ಮದುವೆಯಾಗಿ ನಾಬಾಲೆಯರ ಬಯಸಿ ಬಹು ಮರಳಾದೆ ಹರಿಯೆ | 9ಜ್ವರದ ಮೇಲತಿಸಾರ ಬಂದಂತೆ ಯೌವನದಿ |ತರುಣಿಯೊಡನಾಡಿಕೂಡಿದವಿಷಯದಿ ||ತರುಣಿ-ಸುತರ್ಗನ್ನ ವಸ್ತ್ರಾಭರಣವೆಂದೆನುತ |ಪರರ ಸೇವೆಯಲಿ ನಾ ಕಡುನೊಂದೆ ಹರಿಯೆ 10ನೆತ್ತರವು ತೊಗಲು ಮಾಂಸದ ಹುತ್ತು ಜೊತ್ತುಗಳ |ಹತ್ತು ಇಂದ್ರಿಯದ ಬಹುರೋಗದಿಂದ ||ಮತ್ತೆ ಕಾಲನ ಬಾಯತುತ್ತು ಬಹುವಿಧ ಕರ್ಮ-||ಕತ್ತಲೆಯೊಳೀ ದೇಹ ಕರಕಾಯ್ತು ಹರಿಯೆ 11ದಿಟ್ಟತನದಲಿ ಗಳಿಸಿ ತರುವಾಗ ಸತಿಸುತರು |ಕಟ್ಟಿಕಾದಿಹರು ಮುಪ್ಪಡಸಲಾಗ ||ತಟ್ಟನೇ ಕೆಟ್ಟನುಡಿಗಳ ಬಯ್ಯುತಳಲುವರು |ಮುಟ್ಟಿನೋಡರು ಸರಕುಮಾಡರೈ ಹರಿಯೆ 12ಎಷ್ಟವಜೆÕಯ ಮಾಡೆ ಮತ್ತವನಿಗಳಲುತಿರೆ |ಕಟ್ಟಳೆಯ ದಿನತುಂಬಿಮೃತನಾಗಲು ||ಕುಟ್ಟಿಕೊಂಡಳುತ ಹೋಯೆನುತ ಬಂಧುಗಳೆಲ್ಲ |ಮುಟ್ಟದಲೆ ಹೆಣನೆಂದು ದೂರದೊಳಗಿಹರು 13ಸತ್ತ ಹೆಣಕಳಲೇತಕೆಂದು ಬಂಧುಗಳೆಲ್ಲ |ಸುತ್ತಿರ್ದು ಹೊತ್ತು ಹೋಯಿತು ಎನ್ನುತ ||ಹೊತ್ತು ಕೊಂಡಗ್ನಿಯಲಿ ತನುವ ಬೀಸಾಡುವರು |ಮತ್ತೆ ಧರಣಿಯಲಿ ನಾ ಜನಿಸಬೇಡವೊ ಹರಿಯೆ 14ಇನ್ನು ಈ ಪರಿಪರಿಯ ಯೋನಿಮುಖದಲಿ ಬಂದು |ಬನ್ನವನು ಪಡಲರೆ ಭವಭವದೊಳು ||ಜನ್ಮ-ಮರಣಾದಿ ಕ್ಲೇಶಗಳನ್ನು ಪರಿಹರಿಸಿ |ಸನ್ಮತಿಯೊಳಿರಿಸೆನ್ನ ಪುರಂದರವಿಠಲ 15
--------------
ಪುರಂದರದಾಸರು
ಸಾಕು ಸಾಕು ಸಂಸಾರ ಸಂಖ್ಯಾಗಿಲ್ಲ ಒಲ್ಲೆ ಒಗೆತನವ ಪ.ಆರುಮಂದಿ ಗಂಡರಾಳುವರು ಎನ್ನಆರುಮಂದಿಗೆ ಮೂರು ಸುತರೆನಗೆಆರು ಮೂರೇಳ್ಪರುಭಾವ - ಮೈದುನರೆಲ್ಲಆರರೆಂದರೆ ಬಿಡರು ಆರಿಗುಸುರಲಮ್ಮ 1ಹತ್ತುಮಂದಿ ಬೆನ್ನ ಮುತ್ತಿಕೊಂಡರೆಮತ್ತೆ ಬಿಟ್ಟೆನೆಂದೆ ಬಿಡಗೊಡರುಅತ್ತಿಗೆ ನಗೆಹಣ್ಣಿ ಹೊತ್ತು ಹೊತ್ತನೊಳೆಮ್ಮನೆತ್ತಿಯೊಳು ಹಸ್ತವಿಟ್ಟೆನ್ನ ಸಲುವರಮ್ಮ 2ಪಂತರೈವರು ಎನ್ನ ತೊಂತ ಹಂತಯೆಂದುಸಂಚಿತದ ಕರ್ಮವನುಣಿಸುವರುವಂಚನೆಯಳಿದ ಪ್ರಪಂಚವನು ಕಳೆದಿಹಮಿಂಚಿನ ಪರಿಯವಿರಿಂಚಿಬರೆದಿಹನಮ್ಮ3ಜೇಷ್ಠನಾಗಿಹ ಪುತ್ರ ಧರ್ಮನ ಅಗಲಿಸಿಭ್ರಷ್ಟ ಆತ್ತೆಯು ಮೈತ್ಯುವಾಗಿಹಳುಮೆಟ್ಟಿಲಿನ ಹೊರಗೆ ಕಣ್ಣಿಟ್ಟು ಸಾಧುಗಳನುದೃಷ್ಟಿಸಿ ನೋಳ್ಪನೆಂದರೆ ಕ್ಷಣ ಬಿಡರಮ್ಮ 4ಒಂಬತ್ತು ಬಾಗಿಲ ಊಳಿಗವನು ಮಾಳ್ಪಕುಂಬತದ ನರತ ಕಾವರ ದಾಳಿಢಂಭಕವನು ಬಿಟ್ಟು ಇಂಬಿನೊಳಟ್ಟು ವಿಶ್ವಂಭರ ಪುರಂದರವಿಠಲ ಧ್ಯಾನದಗುಟ್ಟು5
--------------
ಪುರಂದರದಾಸರು
ಸಾಂಖ್ಯತಾರಕ ಅಮನಸ್ಕಾ ಬಿರುದಂತಾಗಿತೆಗೆವುದುಮಾಯೆಮುಸುಕುಪಜೀವನು ನೀನಲ್ಲವೆಂದು ನನಗಾವ ಪ್ರಪಂಚವು ಕಾರಣವಿಲ್ಲೆಂದುಇವ ಬ್ರಹ್ಮವು ನೀ ಸತ್ಯವೆಂದು ಗುರುದೇವನಿಂದಲಿಬೋಧಿಪುದೇ ಸಾಂಖ್ಯ ಎಂದು1ತನ್ನಲ್ಲಿಯೆ ಇಟ್ಟು ಕಣ್ಣು ಒಳಗೊಳಗೆ ತಾಕುಳಿತುಥಳಥಳಿಸುತಲಿನ್ನು ಭಿನ್ನವೆಂಬುದ ಕಳೆದಿನ್ನುಸಂಪನ್ನ ಸುಖವನು ಎಂಬುವುದ ತಾರಕವೆನ್ನು2ಮರತೆ ಮನದ ಎಚ್ಚರದು ಏನು ಕರುಹಿಲ್ಲದವಳಹೊರಗೆಂಬುದನು ಬರೆತುಂಬಿಹ ತೇಜದೊಳ್ ಸದ್ಗುರು ಚಿದಾನಂದನ ಮನವೆಯಿದು3
--------------
ಚಿದಾನಂದ ಅವಧೂತರು
ಸಾಧು ಸಾಧುಗಳೆಂದು ಎಂಬರೆ ನಿಮ್ಮನುಸಾಧುಗಳೇ ನೀವು ಸಾಧುಗಳೇಸಾಧುಗಳಾದರೆ ವಂದಿಸೆ ಎಲ್ಲರುಸಾಧುಗಳೇ ನೀವು ಸಾಧುಗಳೇಪನೀಚನು ಮೇಲಕೆ ಹೊಲಸನೆಸದರೂಚಲಿತನಾಗದವ ಸಾಧುಇನ್ನು ಕೃತಾರ್ಥನು ಪಾವನನಾದೆನುಎನ್ನುತಲಿರುವನೆ ಸಾಧು1ತಾಯಿ ಹತ್ಯವ ಮಾಡೆ ತಾನು ಕಣ್ಣಲ್ಲಿನೋಡೆತಳ್ಳಿಹೋಗದಿಹನೆ ಸಾಧುರಾಯ ಸದ್ಗುರು ಲೀಲೆಯಿದೆನ್ನುತಶಾಂತನಾಗಿರೆ ಸಾಧು2ತನ್ನ ಸತಿಯಳು ತನ್ನಯ ಮುಂದೆ ರಮಿಸಲುತಯಾರಾಗಿಹನವ ಸಾಧುಇನ್ನು ನಾ ಪುರುಷಲ್ಲಸ್ತ್ರೀಯು ತಾನಲ್ಲೆಂದುಸುಮ್ಮನಿರುವನೆ ಸಾಧು3ದೇಹವ ಕೊಯಿದು ಕೊಡೆಂದೆನೆದೇಹವ ಕೊಯ್ದಿಕ್ಕುವನೆ ಸಾಧುಮಹಾ ಸದ್ಗುರುನಾಥನು ದೃಢವನೋಡುವೆನೆಂದು ಮನಮಿಸುಕದಿಹನೆ ಸಾಧು4ಎತ್ತೆತ್ತ ಏಕೋ ದೇವನು ಆಗಿನೋಡುವನು ಸಾಧುಸತ್ಯ ಚಿದಾನಂದ ಸಾಕ್ಷಾತ್ಕಾರಾಗಿಹೆಸತ್ಯದಿಂದಿರುತಿಹ ಸಾಧು5
--------------
ಚಿದಾನಂದ ಅವಧೂತರು
ಸಾಮಜಗಮನೆ ಕೇಳೀ ಮನ ನಿಲ್ಲದುಸ್ವಾಮಿಯ ಕರೆತಾರೆ ನೀರೆ ಪ.ಯಾತರ ಜನುಮ ಇನ್ಯಾತರ ಬಾಳುವೆಪ್ರೀತಿಯಿಲ್ಲವೆ ಎನ್ನಲ್ಲಿ ಅಗಲಿಧಾತುಗುಂದಿಹ್ಯದು ಮತ್ಯಾತಕೆ ಸಲ್ಲವಮ್ಮನಾಥನಿದಿರಿನಲ್ಲಾಸೆ ಉದಿಸೆ 1ಕಣ್ಣಕಜ್ಜಲನಿಲ್ಲದಿನ್ನೇನು ತರವಮ್ಮರನ್ನದುಡುಗೆಭಾರತೋರಪನ್ನಗವಾದವು ಎನ್ನ ಹೂವಿನಹಾರಮನ್ನಿಸಿ ಬರಲೊಲ್ಲನೆ ಎನ್ನೊಲ್ಲನೆ 2ಕೂಡಿದವಳ ಹೀಗೆ ಕಾಡಬಹುದೇನಕ್ಕಬ್ಯಾಡ ಕಠಿಣ ಮನಸುಮುನಿಸುನೋಡೆ ಪ್ರಸನ್ನವೆಂಕಟ ಗಾಡಿಕಾರನು ನೆರದುಆಡಿದನೆ ಕಾಂತೆ ಏಕಾಂತ 3
--------------
ಪ್ರಸನ್ನವೆಂಕಟದಾಸರು
ಸಿಕ್ಕಿದನೆಲೆ ಜಾಣೆ ಶ್ರೀ ವೇಣುಗೋಪಾಲ |ಭಕ್ತವತ್ಸಲ ದೇವನು ಪಮಕ್ಕಳ ಚೆಂಡಿಕೆ ಮರದ ಕೊನೆಗೆಕಟ್ಟಿ|ಗಕ್ಕನೆ ಕೃಷ್ಣ ಚೆಪ್ಪಾಳಿಕ್ಕಿದನಮ್ಮ ಅ.ಪಹೆಣ್ಣು ಮಕ್ಕಳು ಬಚ್ಚಲೊಳಗೆಣ್ಣೆ ಮಂಡೆಯೊಳು |ಬಣ್ಣವಸ್ತ್ರವ ಬಿಚ್ಚಿ ಬರಿಮೈಯಲಿರುತಿರೆ ||ಕಣ್ಣಿಗೆ ಬಿಸಿನೀರ ಚೆಲ್ಲಿ ಸೀರೆಯನೊಯ್ದು |ಉನ್ನತವಾದ ವೃಕ್ಷವನೇರಿದನೆ ರಂಗ 1ಪಟ್ಟೆಮಂಚದ ಮೇಲೆ ಪತಿಯಂತೆ ಕುಳಿತಿರುವ |ಎಷ್ಟು ಸ್ವಾತಂತ್ರ್ಯವೆಗೋಪಿ||ಉಟ್ಟ ಸೀರೆಯನೆಳೆದು ಬಟ್ಟಕುಚವ ಪಿಡಿದು |ಅಷ್ಟು ಮಂದಿಗಳೊಳಗೆ ಗಟ್ಟಿ ಅಪ್ಪಿಕೊಂಡನೆ 2ಸಡಗರದಿಂದ ಗೋವಳಿತಿಯರೊಡಗೂಡಿ |ನುಡಿಸುತ ಕೊಳಲನು ಪುರದೊಳಗೆ ||ಕಡೆವ ಮಡದಿಯರ ಕೈ ಪಿಡಿದಾಡುವ |ಒಡೆಯನೆ ನಮ್ಮ ಶ್ರೀಪುರಂದರವಿಠಲ 3
--------------
ಪುರಂದರದಾಸರು
ಸಿಕ್ಕಿದನೆಹರಿಅಕ್ಕಕ್ಕ ಸುಖದಕ್ಕಿಸಿ ಕೊಳಬನ್ನ್ಯಕ್ಕಕ್ಕಚಿಕ್ಕವನಿವನಲ್ಲಮ್ಮಮ್ಮ ಬಿಡೆಪುಕ್ಕಟೆ ಜಾರುವನಮ್ಮಮ್ಮ ಪ.ಚಲ್ಲಿದ ಹಾಲ್ಮೈಯೆಲ್ಲಾಗಿದೆ ಹೊನ್ಚಲ್ಲಣ ತೊಯಿದಿದೆ ನೋಡವ್ವೆಅಳ್ಳೆದೆಗಾರನು ಅಳುಕುವನೆ ಹಗಲ್ಗಳ್ಳನ ಮಾಟವ ನೋಡವ್ವೆ 1ಮುಂಗುರುಳಿಗೆ ಮೆತ್ತಿದೆ ಕೆನೆಮೊಸರುಕಂಗಳುತುಪ್ಪಾಗಿದೆ ತಂಗಿ ರತ್ನದುಂಗುರ ಬೆರಳು ಮುಂಗೈಯ ಮತ್ತಂಗೈ ಬೆಣ್ಣ್ಯಾಗಿದೆ ತಂಗಿ 2ಪಡಗೊಡಿದು ಬಿಸಳಿಗೆ ನುಗ್ಗಲ್ಲೆಅಡಗ್ಯಡಗ್ಯಾಡುವನಿವನಂತೆಬಡಗಣ ಮೂಡಣ ಪಡು ತೆಂಕಣದಿತುಡುಗನ ಹುಯ್ಯಲು ಘನವಂತೆ 3ಗೋಡೆಯನೇರುವ ಧುಮುಕುವ ತಾ ಸಿಡಿದೋಡುವನಂಜದೆ ಅಲ್ಲಲ್ಲೆನೋಡಲು ಬಾಲಕ ಬಾಲೆಯರ ಪಿಡಿದಾಡ್ಯಾಲಂಗಿಪನಲ್ಲಲ್ಲೆ 4ಈಗಲೆ ಕಟ್ಟುವ ಬಿಟ್ಟರೆ ಇನ್ನಾವಾಗಲಿ ಸಿಕ್ಕುವನೆ ಬಾಲೆಹ್ಯಾಗಾದರೆ ಪ್ರಸನ್ವೆಂಕಟಗಿರಿಭೋಗಿಯ ಹೊಂದುವ ಬಾಲೆ 5
--------------
ಪ್ರಸನ್ನವೆಂಕಟದಾಸರು
ಸಿದ್ಧಿ ಗಣವರ ಬುದ್ಧಿ ನೀಡೆನ್ನನುದ್ಧಾರಮಾಡು ಬೇಗನೆಬದ್ಧಗುಣಗಳ ತಿದ್ದಿ ಎನಗೆ ಶುದ್ಧಮತಿ ನೀಡು ಬೇಗನೆ ಪವಿಮಲಮನ ಸನಮಿತ ತವಪಾದಕಮಲ ಭಜಿಸುವೆನಭನೆವಿಮಲವಿದ್ಯವ ಕ್ರಮದಿಂ ಪಾಲಿಸು ಹಿಮಜೆಸುತ ಕರಿವರದನೆ 1ಸೋಮಶೇಖರ ಪ್ರೇಮದ ಸುಕುಮಾರ ಸುಮನಸಚಂದ್ರನೆಕಾಮಿತಜನ ಶಾಮಪೂರಿತ ಕೋಮಲಗುಣಸಾಂದ್ರನೆ 2ಕೋಮಲಾಂಗನೆ ಕರ್ಣಕುಂಡಲ ಹೇಮಕಂಕಣಧಾರನೆತಾಮಸದಿ ಗಹಗಹಿಸಿದಾ ಮಹ ಸೋಮನಿಗೆ ಶಾಪವಿತ್ತನೆ 3ಪಾರಬುಧ್ಧಿಲಿ ಸಾರವಿದ್ಯದಧಿಕಾರ ಕುಶಲದಿ ಪಡೆದನೆಗೌರಿಶಂಕರರ್ವಾದ ನಿವಾರಿಸಿದ ಮಹಚದುರನೆ 4ತ್ರಿಕ್ಷೆಯರೊಡಗೂಡಿಭುವನರಥಮಾಡಿಮಣಿಯದ್ಹೋಗ್ವುದು ಕಂಡನೆಘನಕೋಪಾಗ್ರಾದಿ ರಥವನಿಲ್ಲಿಸಿ ತ್ರಿಣಯರಿಂ ಪೂಜೆಗೊಂಡನೆ5ವಿಘ್ನನಾಯಕ ಪ್ರಾಜÕಮೂರುತಿ ಸೂಜÕ ಜನರಾರಾಧನೆಸಂಜೆÕದ್ಹೊಗಳುರ್ವಿಘ್ನ ಛೇದಿಸಿಪ್ರಾಜÕಪದವೀವ ಪ್ರೌಢನೆ6ವರುಷಕೊಂದುಮಾಸಧರೆಯೊಳಿಳಿಯುತಪರಮಪೂಜೆಯ ಕೈಕೊಂಬನೆನರರ ದುರ್ಮತಿ ತರಿದು ಸುಗತಿಯ ನಿರುತಪಥದೋರ್ವ ಧುರೀಣನೆ 7ತಂದೆ ನಿನ್ನನು ಹೊಂದಿ ಭಜಿಪರ ಮಂದಮತಿನಿವಾರನೆಬಂದ ದುರ್ಭವದಂದುಗಂಗಳ ಚಂದದಿಂ ಪರಿಹಾರನೆ 8ಶರಣು ಶರಣು ಶರಣು ಗಣವರ ಶರಣುಕರುಣಾಭರಣನೆಸಿರಿಯರಾಮನ ಚರಿತಪೊಗಳುವ ಪರಮಮತಿದೇ ಗಣಾರ್ಯನೆ 9
--------------
ರಾಮದಾಸರು
ಸುಮ್ಮನಿರು ಬೇಡಿಕೊಂಬೆ ಕಾಡದಿರು ಕೃಷ್ಣ |ಉಮಾಪತಿಯೆಂಬ ಗುಮ್ಮ ಬಂದಿದೆಕೊ ಪಐದು ಮುಖ ಐದು ಈರೈದು ಕಣ್ಣುಗಳಿಂದ |ಐದು ಪಣೆಯೊಳಗಗ್ನಿ ಕಿಡಿಯುದುರುತ ||ಐದೆರಡು ತೋಳು ಭುಜಗಳ ಒಲೆದಾಡಿಸುತ |ಐದು ಬಾಣಗೆ ಮುನಿದ ಗುಮ್ಮ ಬಂದಿದೆಕೊ 1ಬಾಲಚಂದ್ರನ ಪೊತ್ತುಕೊಂಡು ತ್ರಿಶೂಲದಿ |ಮೇಲೆ ಒರಲುವ ಭೂತಗಣ ಸಹಿತದಿ ||ಕಾಲಭೈರವನ ಕಾವಲಿಗಿರಿಸಿ ಮರುಳ್ಗಳ |ಸಾಲುಸಹಿತನಾಗಿ ಬಾಗಿಲಿಗೆ ಬಂದಿದೆಕೊ 2ಲಂಡದಾನವರ ಶಿರಗಳ ತರೆದು ಬಿರುದಿನ |ರುಂಡಮಾಲೆಯ ಧರಿಸಿ ಆರ್ಭಟಿಸುತ ||ಅಂಡಲೆದು ಅಷ್ಟದಿಕ್ಕುಗಳೆಲ್ಲ ಬೆದರಿಸುತ |ಪುಂಡರೀಕಾಕ್ಷನ ತೋರು ತೋರೆನುತ 3ಕರಿಚರ್ಮವ ಪೊದ್ದು ಕರದಿ ಒಡನೆ ಪಿಡಿದು |ಕರಿಜಡೆಗಳನೆಲ್ಲ ಕೆದರಿಕೊಳುತ ||ಹರಿವ ನೀರನು ನೆತ್ತಿಯೊಳು ಹೊತ್ತು ಹಾವುಗಳಾ-|ಭರಣಸಹಿತಾಗಿ ಬಾಗಿಲಿಗೆ ಬಂದಿದೆಕೊ4ಮುದಿಯೆತ್ತನೇರಿ ಮೈಯೆಲ್ಲ ಬೂದಿಯ ಪೂಸಿ |ಮದನಾರಿಯೆಂಬಂಥ ಬಲಭೂತವು ||ಹೃದಯದಲಿ ನಿನ್ನ ನೋಳ್ಪೆನೆಂಬ ಧ್ಯಾನದಲಿ |ಒದಗಿ ಬಂದಿಹನಿದೊ ಪುರಂದರವಿಠಲ 5
--------------
ಪುರಂದರದಾಸರು
ಸುಮ್ಮನೆ ದೊರಕುವುದೇ ಶ್ರೀರಾಮನ ದಿವ್ಯನಾಮವು |ಜನ್ಮಜನ್ಮಾಂತರದ ದುಷ್ಕರ್ಮ ಹೋದವಗಲ್ಲದೆ ಪ.ಕಂತುಪಿತನ ಮೂರುತಿಯ ತನ್ನಂತರಂಗದೊಳಿಟ್ಟು |ಚಿಂತೆ ಎಲ್ಲ ಬಿಟ್ಟು ನಿಶ್ಚಿಂತನಾದವಗಲ್ಲದೆ 1ಭಕ್ತಿರಸದಲಿ ತನ್ನ ಚಿತ್ತಪರವಶನಾಗಿ |ಅಚ್ಯುತನ ನಾಮವನು ಬಚ್ಚಿಟ್ಟು ಕೊಂಡವಗಲ್ಲದೆ 2ತನ್ನೊಳಗೆ ಇದ್ದ ಮೂರುತಿಯ ಕಣ್ಣೊಳಗೆ ತಂದರೆ |ಆನಂದ ಪೂರ್ಣ ಪುರಂದರವಿಠಲನ ನೋಡಿದವಗಲ್ಲದೆ 3
--------------
ಪುರಂದರದಾಸರು
ಸುರತಟನೀಧರನರಸೀ |ಪೊರೆಪಾರ್ವತಿ ದೇವಿಯೇ |ಕರುಣಾಕರೇ ದುರಿತಹರೇ | ಶರಣರ ಸಂಜೀವಿಯೆ 1ಕಂಕಣಕರೆ ಕುಂಕುಮಧರೆ | ಪಂಕಜದಳ ನೇತ್ರೆಯೆ |ಶಂಕರಿ ಭವಬಿಂಕಹರೇ | ಕಿಂಕರನುತಿ ಪಾತ್ರೆಯೇ 2ಚಂಡಿಯೆ ಚಾಮುಂಡಿಯೇ | ಪ್ರಚಂಡಿಯೆ ಓಂಕಾರಿಯೆ |ಚಂಡನ ಖಳಮುಂಡನ ಶಿರÀ | ಖಂಡನೆ ಹ್ರೀಂಕಾರಿಯೇ 3ಜ್ವಾಲಿನಿ ಮಹಮಾಲಿನಿ ದಯೇ | ಶೀಲೆ ನೀ ಶರ್ವಾಣಿಯೆ |ಕಾಳಿನಿ ಮಹಾ ಕಾಳಿನಿರಣ| ಶೂಲಿನೀ ರುದ್ರಾಣಿಯೆ 4ಸುಂದರಿ ಗುಣಮಂಜರಿ ಪೂರ್ಣೇಂದು ಸಂಕಾಶಿಯೇ |ಚಂದದಿ ಗೋವಿಂದನ ದಾಸ| ವಂದಿತೆ ಅಘನಾಶಿಯೆ 5
--------------
ಗೋವಿಂದದಾಸ
ಸುರತಸುಖಕೆ ಅಂಗನೆಯರ ಮೇಳದಲಿಇಹಗೆ ಆಧ್ಯಾತ್ಮದಗೊಡವೆಏತಕೆಪಭಂಗಿ ಮಧ್ಯದಿ ಕೂಡಿ ಇಹಗೆ ಭಜನೆ ಸಾಧನೆಗಳೇತಕೆರಂಗುರಾಗದಿ ಮುಳುಗುವವನಿಗೆ ರೇಚಕ ವಿದ್ಯೆಯಾತಕೆಶೃಂಗಾರದ ಪದವಿಡಿದ ಮನುಜಗೆ ಸುಷುಮ್ನದ ಮಾರ್ಗವಿದೇತಕೆ1ನಲ್ಲೆಯರ ನುಡಿಯಿಂದ ಕೇಳುವಗೆ ನಾದಧ್ವನಿ ತಂಪೇತಕೆಚೆಲ್ಲೆಗಣ್ಣರ ಕುಚದಲೊರಗುವಗೆ ಚಿತ್ಕಳ ವಿಷಯವೇತಕೆಜೊಲ್ಲು ಕುಡಿಯುತಲಿಹ ಜಡನಿಗೆ ಜ್ವಲಿಸುತಿಹ ಅಮೃತವದೇತಕೆಹಲ್ಲು ತೆರೆವಹೊತ್ತಿಲಿರುವನಿಗೆ ಹಂಸದ ಕೂಟವದೇತಕೆ2ಭಾಮಿನಿಯರ ಸಭೆಯಲಿದ್ದವನಿಗೆ ಭ್ರೂಮಧ್ಯದ ಸದರೇತಕೆವಾಮಲೋಚನೆಯ ಅಂಗಸಂಗಗೆ ಹೃನ್ಮನ ಚಿಂತನವೇತಕೆಕಾಮಿನಿಯ ಕಣ್ಬಲೆಗೆ ಬಿದ್ದವಗೆ ಕಡೆಹಾಯುವ ಚಿಂತನೆಯೇತಕೆಸ್ವಾಮಿ ಚಿದಾನಂದ ಗುರುವಿನ ಸ್ಮರಣೆಯದು ಅವಗೇತಕೆ3
--------------
ಚಿದಾನಂದ ಅವಧೂತರು
ಸುಳಾದಿಧ್ರುವತಾಳಬಾಲ ಸೂರ್ಯನಿಭಮಣ್ಯಾಂಕಮೌಳಿಹೀಲಿಯ ಪಿಂಛಪ್ರವಾಳಗುಚ್ಛಮ್ಯಾಲಲರದಂಡೆ ಝೇಂಕರಿಪಾಳಿಬಾಲರಯ್ಯನ ಮೊಗದ ಶೋಭೆಭ್ರೂಲತೆ ವಿಲಾಸ ನೋಟದಿಮಕರಕುಂಡಲವಿಶಾಲೇರಿ ಸಿರಿವತ್ಸಕೌಸ್ತುಭನೀಲಮಾಣಿಕ ವಜ್ರವಲಯ ವೈಜಂತಿವನಮಾಲೆ ತುಲಸಿ ಗಂಧ ಮೌಕ್ತಿಕ ಸರಗಳನೀಲನದ ರತುನದಾಮಪೊನ್ನಚೇಲನೂಪುರ ಕಿರುಗೆಜ್ಜೆಯ ಗೋಪಾಲ ಪರಸನ್ನವೆಂಕಟ ಕೃಷ್ಣ ಶಾಮಲಕಾಯ 1ಮಠ್ಯತಾಳನಂದವ್ರಜದ ಗೋವರ ವೃಂದಾಂಬುಧಿಗೆ ಪೂರ್ಣೇಂದು ನÀಂದಸೂನು ಲಾಸ್ಯವಾಡೆಒಂದೊಂದು ಲಯದಗತಿಹೊಂದ್ಯಮರದುಂದುಭಿಗಳ್ದಂ ಧಳಧಂ ಧಂದಳೆನ್ನೆಗಂಧರ್ವ ತುಂಬುರರು ನಾರಂದ ಮಹತೀಗೀತ ಪ್ರಬಂಧ ಹೇಳೆ ನಂದರಸದಿಂದಾಡುತಿರೆ ಗೋವಿಂದ ದಂದಂ ದಂದಂ ಧಿಮಿಕೆನ್ನಲಂದದಿ ಮದ್ದಳೆ ತಾಳಬಂದಿಮೊಗ ? ತುತ್ತುರಿ ಕಹಳೆ ಕಂಬುವೇಣುಗೂಡಿಅಂದಾಡಿದ ಪ್ರಸನ್ವೆಂಕಟ ಕೃಷ್ಣ ನಲವಿಂದ 2ತ್ರಿವಿಡಿ ತಾಳಶ್ರೀಕಮಲ ಭಭೂರ್ವಪಿನಾಕಿವಿಪಾಹಿಪನಾಕಜಾದ್ಯರ ಚೇಷ್ಟಕಶ್ರೀಕರ ಪ್ರಸನ್ನವೆಂಕಟ ಕೃಷ್ಣಆಕಳಕಾವರ ವಶಗ ಹಾಹಾ 3ಅಟ್ಟತಾಳಅನಂತನಿಗಮನಿಕರಕೆ ನಿಲುಕದಅನಂತಾನಂತ ಗುಣಪರಿಪೂರ್ಣಗೆಧÉೀನುಕಾವರ ಪಳ್ಳಿ ಗೋಟಲೆತೀಯಂ ತೀಯಂ ವೈಯ್ಯ ಅಯ್ಯಾಧೇನುಕಾವರ ಪಳ್ಳಿ ಗೋಟಲೆಜ್ಞಾನಿಜನಕೆಮೋದಹಾನಿ ಖಳರ್ಗೀವಜ್ಞಾನಾನಂದ ಬಾಲ ಪ್ರಸನ್ನವೆಂಕಟ ಕೃಷ್ಣಗೆ 4ಏಕತಾಳವೈಕುಂಠ ವಾರಿಜಾಕ್ಷ ಲೋಕರಕ್ಷತೋಕವೇಷಧರಮುರಹರಶ್ರೀಧರಶ್ರೀಕರ ಗುಣನಿಧೆ ಪುರಾಣಪುರುಷ ಹರೇ ಹರೇಗೋಕುಲಪತೆ ಗೋವರ್ಧನಧರಪಾಕಹ ಮದನಿಕಾರಕರ ಪ್ರಸನ್ವೆಂಕಟ ಕೃಷ್ಣನೆಲೊ ಭಕ್ತವತ್ಸಲ 5ಜತೆಶುಭಕೀರ್ತನೆ ಜಿಹ್ವೆಗೆ ಶುಭಕಥೆ ಕಿವಿಗಳಿಗೆಶುಭಮೂರ್ತಿ ಕಣ್ಗೀಯಯ್ಯ ಪ್ರಸನ್ವೆಂಕಟಕೃಷ್ಣಯ್ಯ
--------------
ಪ್ರಸನ್ನವೆಂಕಟದಾಸರು
ಸುಳ್ಳು ಮಾತಿನ ನಿನ್ನಾಚಾರವು ತಿಳಿವಿಕೆ ಏನೇನಿಲ್ಲಎಲ್ಲ ಡಂಭವು ನಡತೆಯ ವಿವರವು ಗತಿಗೆನೀ ದೂರಾದೆಯಲ್ಲಪಮಂಡೆಯ ಬೋಳಿಸಿ ಕಣ್ಣನೆ ಮುಚ್ಚುವಿಪಿಟಿಪಿಟಿ ಏನದು ಮಂತ್ರದಂಡವೇತಕೆ ಮನಸದು ಚಂಚಲಏತಕೆ ಮಾಡುವಿ ತಂತ್ರ1ಕೈಯಣ ಗಿಂಡಿಯ ಕಂಕುಳ ಪೆಟ್ಟಿಗೆಕಟ್ಟಿಯಿಹುದು ತಲೆಗಟ್ಟುಬೈಗಳೆಂಬುವು ಪರಿಪರಿ ನೋಡಲುಕೋತಿ ಹಾರಿಕೆಯಳವಟ್ಟು2ಜ್ಞಾನವದಿಲ್ಲವು ಪುಸ್ತಕ ಮನೆಯೊಳುಹೋಳಿಗೆ ತುಪ್ಪದ ಗಬಕುಧ್ಯಾನವಿಲ್ಲವು ಮೌನವಿಲ್ಲವು ಯಮನಕೈಯಿಂದ ದುಬುಕು3ನಿರಿವಿಡಿದುಟ್ಟಿಹ ಪಂಚೆಕಚ್ಚೆಯಧೋತ್ರನಾಮ ವಿಭೂತಿಯ ಬೆಳಕುಪರಮಾನ್ನವ ಸಕ್ಕರೆಯನು ಕಲಸಿನುಂಗುವೆ ಗುಳುಕು ಗುಳುಕು4ಮುಂದೆ ಹೇಳುವನ ಮೆಟ್ಟಿಕೊಂಡುಂಬುದುಇಂತಿದು ನಿನ್ನಯ ಬದುಕುಸುಂದರ ಚಿದಾನಂದ ಸ್ವರೂಪವ ತಿಳಿವುದುಎಂದುಎಂದಿಗೆ ಬಲುಧಡಕ5
--------------
ಚಿದಾನಂದ ಅವಧೂತರು