ಒಟ್ಟು 2071 ಕಡೆಗಳಲ್ಲಿ , 115 ದಾಸರು , 1458 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರು ಹಿತವರು ಮನವೆ ಮೂರು ಮಂದಿಗಳೊಳಗೆನಾರಿಯೋ ಧಾರಿಣೀಯೊಧನದಬಲು ಸಿರಿಯೊ ?ಪ.ಅನ್ಯರಲಿ ಜನಿಸಿರ್ದ ಅಂಗನೆಯ ಕರೆತಂದುತನ್ನ ಮನೆಯಲ್ಲಿ ಯಜಮಾನಿಯೆನಿಸಿಭಿನ್ನವಿಲ್ಲದೆ ಅರ್ಧ ದೇಹವೆನಿಸುವ ಸತಿಯುಕಣ್ಣಿನಲಿ ನೋಡಲಂಜುವಳು ಕಾಲನೊಯ್ವಾಗ 1ಮುನ್ನ ಶತಕೋಟಿ ರಾಯರುಗಳಾಳಿದ ನೆಲನತನ್ನದೆಂದು ಶಿಲೆಯ ಶಾಸನವ ಬರೆಸಿಬಿನ್ನಾಣದಿ ಮನೆಗಟ್ಟಿ ಕೋಟೆ - ಕೊತ್ತಳಿವಿಕ್ಕಿಚೆನ್ನಿಗನೆ ಅಸುವಳಿಯ ಊರ ಹೊರಗಿಕ್ಕುವರು 2ಉದ್ಯೋಗ - ವ್ಯವಹಾರ ನೃಪಸೇವೆ ಮೊದಲಾಗಿಕ್ಷುದ್ರತನ ಕಳವು ಪರದ್ರೋಹದಿಂದಬುದ್ಧಿಯಿಂದಲಿ ಧನವ ಗಳಿಸಿಕ್ಕಿ ಅಸುವಳಿಯಸದ್ಯದಲಿ ಆರುಂಬವರು ಹೇಳು ಮನುಜಾ 3ಶೋಕಗೈದಳುವವರುಸತಿ - ಸುತರು ಭಾಂದವರುಜೋಕೆ ತಪ್ಪಿದ ಬಳಿಕ ಅರ್ಥವ್ಯರ್ಥಲೋಕದಲಿ ಸ್ಥಿರವಾದ ಕೀರ್ತಿ ಅಪಕೀರ್ತಿಗಳುಸಾಕಾರವಾಗಿ ಸಂಗಡ ಬಾಹುವಲ್ಲದೇ ? 4ಅಸ್ಥಿರದ ದೇಹವನು ನೆಚ್ಚಿ ನೀ ಕೆಡಬೇಡಸ್ವಸ್ಥದಲಿ ನೆನೆಕಾಣೊ ಪರಮಾತ್ಮನಚಿತ್ತಶುದ್ದಿಯಲಿ ಶ್ರೀ ಪುರಂದರವಿಠಲನಭಕ್ತಿಯಿಂದಲಿ ನೆನೆದು ಮುಕ್ತಿಪಡೆ ಮನವೆ 5
--------------
ಪುರಂದರದಾಸರು
ಆರೆನ್ನ ಉಳುಹುವರೈ ರಂಗಘೋರಾರಣ್ಯ ಭವದಿ ಸಿಕ್ಕಿದೆ ರಂಗ ಪ.ಎಂಟು ಕಾಡಾನೆ ಎಂಟು ಕಡೆಯಲಿ ನಿಂತಿವೆಗಂಟನಿಕ್ಕಿವೆ ಮೂರು ದಳ್ಳುರಿಯಸುಂಟರಗಾಳ್ಯೆಬ್ಬರಿಸಲು ಗಿಡಗಂಟಿಲಿ ಬಿದ್ದೆ ನೀನಲ್ಲದೆನ್ನ 1ಹುಲಿಯೊಂದು ಗುಡುಗುಡಿಸುತಿದೆ ಭಯಂಕರಬಲು ತೋಳೆರಡು ಕೆಕ್ಕರಿಸುತಿವೆಸಲುಗೆಯ ಕೋತಿಯೊಂದಣಕಾಡುತಲಿದೆಮೇಲೆ ಕರಡಿಯು ಹತ್ತೆಳವುತಿದೆ 2ಕಾಳುರಗನ ಕಟ್ಟು ಮೈತುಂಬ ನನ್ನನಾಲಿಗೇಳದು ನಿನ್ನ ಕರೆಯಲಿಕೆ ನಿನ್ನಾಳಟ್ಟಿ ಕರೆಸಿಕೊಳ್ಳೆಲೆ ತಂದೆ ನಾಗೋಳಿಟ್ಟೆ ಪ್ರಸನ್ನವೆಂಕಟ ಬಂಧು 3
--------------
ಪ್ರಸನ್ನವೆಂಕಟದಾಸರು
ಆರೇ ರಂಗನ ಆರೇ ಕೃಷ್ಣನಆರೇ ರಂಗನ ಕರೆಯಬಂದವರು ಪಗೋಪಾಲಕೃಷ್ಣನ ಪಾಪವಿನಾಶನ |ಈ ಪರಿಯಿಂದಲಿ ಕರೆಯ ಬಂದವರು 1ವೇಣುವಿನೋದನ ಪ್ರಾಣಪ್ರಿಯನ |ಜಾಣೆಯರಸನ ಕರೆಯ ಬಂದವರು 2ಕರಿರಾಜವರದನ ಪರಮಪುರಷನ |ಪುರಂದರವಿಠಲನ ಕರೆಯ ಬಂದವರು 3
--------------
ಪುರಂದರದಾಸರು
ಆರೇನ ಮಾಡುವರು ಭುವನದೊಳಗೆ |ಪೂರ್ವಜನ್ಮದಕರ್ಮ ಪಣೆಯಲ್ಲಿ ಬರೆದುದಕೆಪಮಾಡಿದಡಿಗೆಯದು ಕೆಡಲು ಮನೆಯ ಗಂಡನು ಬಿಡಲು |ಕೊಡಿ ಇದ್ದಾಸತಿಯ ಕುಣಿಸಾಡಲು ||ಗೋಡೆಯಲಿ ಬರೆದ ಹುಲಿ ಘುಡುಘುಡಿಸಿ ತಿನಬರಲು |ಆಡದಂತಹ ಮಾತ ಅಖಿಳರೂ ನಿಜವೆನಲು 1ಹೆತ್ತಾತಾಯ್ ಕರೆದು ಮಕ್ಕಳಿಗೆ ವಿಷ ಹಾಕಿದರೆ |ಮತ್ತೆ ತಂದೆಯ ಕರೆದು ಹೊರಗೆ ಮಾರಿದರೆ ||ತೊತ್ತು ಅರಸಿಗೆಪ್ರತಿ - ಉತ್ತರವ ನಡೆಸಿದರೆ |ಕತ್ತಲೆ ಕರಡಿಯಾಗಿ ಬೆನ್ನಟ್ಟಿ ಕಟ್ಟಿದರೆ 2ಹೊಲಬೇಲಿ ಮೇದರೆ - ಮೊಲ ಎದ್ದು ಇರಿದರೆತಲೆಗೆ ತನ್ನಯ ಕೈಯ ಪೆಟ್ಟು ತಾಗಿದರೆ ||ಹೆಳಲು ಹಾವಾದರೆ - ಗೆಳೆಯ ರಿಪುವಾದರೆ |ಕಲಿಸಿದ್ದ ಅವಲಕ್ಕಿ ಕಲಪರಟಿ ನುಂಗಿದರೆ 3ಕಣ್ಣೊಳಗಿನಾ ಬೊಂಬೆ ಕಚ್ಚಾಡ ಬಂದರೆ |ಹೆಣ್ಣಿನಾ ಹೋರಾಟ ಹೆಚ್ಚಾದರೆ ||ಅನ್ನ ಉಣ್ಣದ ಮನುಜಗಜೀರ್ಣವಾದರೆ |ಪುಣ್ಯತೀರ್ಥಂಗಳಲಿ ಪಾಪ ಘಟಿಸಿದರೆ 4ಏರಿ ಕುಳಿತಾ ಕುಂಬೆ ಎರಡಾಗಿ ಬಿಚ್ಚಿದರೆ |ವಾರಿಧಿಗಳು ಉಕ್ಕಿ ಮೇರೆ ಮೀರಿದರೆ ||ಆರಿದಾ ಇದ್ದಲಿಯು ಅಗ್ನಿಯಾಗುರಿದರೆ |ಧೀರಪುರಂದರ ವಿಠಲನ ದಯವು ತಪ್ಪಿದರೆ5
--------------
ಪುರಂದರದಾಸರು
ಆರೋಗಣೆಯ ಮಾಡೇಳಯ್ಯ ಶ್ರೀಮನ್ನಾರಾಯಣಭೋಗ ಸ್ವೀಕರಿಸಯ್ಯಪ.ಸರಸಿಜಭವಾಂಡದ ಮೇರು ಮಂಟಪದಿ ದಿನಕರಕರ ದೀಪ್ತ ಜ್ಯೋತಿಶ್ಚಕ್ರವು ||ತರಣಿ ಮಂಡಲ ಪೋಲುವ ರತುನದ ಹೊನ್ನಹರಿವಾಣದಲಿ ದೇವಿ ಬಿಡಿಸಿಹಳಯ್ಯ 1ಅಲ್ಲ ಹೇರಳೆ ಲಿಂಬೆ ಯಾಲಕ್ಕಿ ಮೆಣಸು ಕಾಯ್ನೆಲ್ಲೆ ಅಂಬಟೆಕಾಯಿ ಚೆಲ್ವ ಮಾಂಗಾಯಿ ||ಬೇಲ ಮಂಗರೋಳಿ ಹುಣಸೆ ಪಾಪಟೆಕಾಯಿಎಲ್ಲ ಧರಾದೇವಿ ಅಣಿಗೊಳಿಸಿಹಳಯ್ಯ 2ಹಪ್ಪಳ ಸಂಡಿಗೆ ವಿವಿಧ ಶಾಕಂಗಳುತುಪ್ಪ ಸಕ್ಕರೆ ಹಣ್ಣು-ಹಂಪಲವು ||ಕರ್ಪೂರ ಕಸ್ತೂರಿ ಬೆರಸಿದ ಸಿಖರಿಣಿಒಪ್ಪದಿ ಶ್ರೀದೇವಿ ಬಡಿಸಿಹಳಯ್ಯ 3ಎಣ್ಣೂರಿಗತಿರಸ ಚೆನ್ನಾದ ಮಂಡಿಗೆಅನ್ನಕ್ಷೀರಾನ್ನ ಪರಮಾನ್ನಗಳು ||ಸಣ್ಣ ಸೇವೆಗೆ ಶಾಲ್ಯನ್ನವ ನಿಮಿಷದಿಚೆನ್ನೆ ದುರ್ಗಾದೇವಿ ಬಡಿಸಿಹಳಯ್ಯ 4ನೀ ನಿತ್ಯತೃಪ್ತನಹುದು ನಿನ್ನ ಉದರದೊಳುನಾನಾ ಜನರು ಬಂದು ಉಣ್ಣಬೇಕೋ ||ಶ್ರೀನಾಥ ಗದುಗಿನ ವೀರನಾರಾಯಣಅನಾಥ ಬಂಧು ಶ್ರೀ ಪುರಂದರವಿಠಲ 5
--------------
ಪುರಂದರದಾಸರು
ಆವ ಪುಣ್ಯವೊ ಗೋಪಿಗಾವ ಪುಣ್ಯವೊ ಪ.ಆವ ಪರಬೊಮ್ಮನಾವಾವ ಪರಿಯಲಾಡಿಸುವ ಅ.ಪ.ಮಾರನನ್ನ ಪೆತ್ತನ ಕುಮಾರನೆಂದು ಕರೆದು ತನ್ನಮಾರಬೀಸಿ ಬಿಗಿದಪ್ಪಿ ಮೋರೆ ನೋಡಿ ಮೊಲೆಯ ಕೊಡುವ1ಕಾಲನಾಗಿ ಜಗವ ತತ್ಕಾಲದಲ್ಲಿ ನುಂಗುವಂಗೆಕಾಲಮೇಲೆ ಮಲಗಿಸಿ ತ್ರಿಕಾಲದಲ್ಲಿ ಹಾಲನೆರೆವ2ನೀತ ಪ್ರಭು ವಿಶ್ವಕೆ ವಿನೀತನಾಗಿ ಕೈಯ ಒಡ್ಡೆನೀತಿ ಹೇಳಿ ನವನವನೀತವಿತ್ತು ರಂಜಿಸುವ 3ಆನೆಗೊಲಿದು ಎಂಟುದಿಕ್ಕಿನಾನೆಯಾಳ್ದ ಅಪ್ರತಿಮ ದಯಾನಿಧಿಯ ಕುಳ್ಳಿರಿಸಿ ಆನೆ ಬಂತಂತಾನೆಯೆಂಬ 4ತೋಳನೋಡುಧೈರ್ಯದೀರ್ಹತ್ತು ತೋಳಿನವನ ಹೋರುವ ನಳಿತೋಳವಿಡಿದು ವಾರಂವಾರ ತೋಳನ್ನಾಡೊ ಮಗನೆ ಎಂಬ 5ತಾರಕೋಪದೇಶಕಗೆತಾರಕರಂಗನಳಲುತಾರಕಪತಿಯ ತೋರಿ ತಾರಕ್ಕ ಬಿಂದಿಗೆಯೆಂಬ 6ದಟ್ಟವಾದ ಜೀವಜಾಲದಅಟ್ಟುಳಿನಿವಾರಣಂಗೆದಟ್ಟು ದಟ್ಟು ಎಂದು ರಂಗನ ದಟ್ಟ ಸಾಲನಿಕ್ಕಿಸುವ 7ಚಿನ್ಮಯಾತ್ಮ ಮುಕ್ತಾಮುಕ್ತ ಚಿನ್ನರನಾಡಿಸುವಂಗೆಚಿನ್ನ ತಾ ಹೊನ್ನ ಗುಬ್ಬಿ ಚಿನ್ನ ಗುಬ್ಬಿಯಾಡಿಸುವ 8ದೃಷ್ಟಾದೃಷ್ಟದೇಹಿಗಳದೃಷ್ಟ ನಿಯಾಮಕಂಗೆದೃಷ್ಟಿ ತಾಕಿತೆಂದು ತೆಗೆದು ದೃಷ್ಟಿ ದಣಿಯೆತುಷ್ಟಿಬಡುವ9ಅನ್ನಮಯನು ಬ್ರಹ್ಮಾದ್ಯರಿಗೆ ಅನ್ನಕಲ್ಪತರುಪರಮಾನ್ನ ಚಿನ್ನಿಪಾಲಿನಿಂದ ಅನ್ನಪ್ರಾಶನ ಮಾಡಿಸುವ 10ನಿತ್ಯತೃಪ್ತ ನಿತ್ಯಾನಂದ ನಿತ್ಯಭೋಗಿ ನಿತ್ಯತಂತ್ರನಿತ್ಯಕರ್ಮನ್ನೆತ್ತಿಕೊಂಡುನೆತ್ತಿಮೂಸಿ ಮುದ್ದಿಸುವ11ಆ ಲಯದಲ್ಲಾಲದೆಲೆ ಆಲಯಗೆ ತೊಟ್ಟಿಲು ಉಯ್ಯಾಲೆಯಿಟ್ಟು ಮುದ್ದು ಮಾತನಾಲಿಸಿ ಜೋಗುಳವ ಪಾಡುವ 12ಅಂಜಲಿಪುಟದಿ ಸುರರಂಜಿಕೆಯ ಬಿಡಿಸುವ ನಿರÀಂಜನಗಭ್ಯಂಜನಿಸಿ ಅಂಜನಿಟ್ಟುಅಮ್ಮೆಕೊಡುವ13ಸಪ್ತ ಸಪ್ತಭುವನಜನಕೆಸುಪ್ತಿಎಚ್ಚರೀವನಿಗೆಸುಪ್ತಿಕಾಲವೆಂದು ತಾನು ಸುಪ್ತಳಾಗಿ ಸ್ತನವ ಕೊಡುವ14ತನ್ನ ಮಗನ ನಡೆಯ ನುಡಿಯ ತನ್ನ ಪತಿಗೆ ಹೇಳಿ ಹಿಗ್ಗಿತನ್ನ ಭಾಗ್ಯ ಲಕ್ಷ್ಮೀಶ ಪ್ರಸನ್ನವೆಂಕಟ ಕೃಷ್ಣಯೆಂಬ 15
--------------
ಪ್ರಸನ್ನವೆಂಕಟದಾಸರು
ಇಕ್ಕಲಾರೆ ಕೈಯಂಜಲು - ಚಿಕ್ಕಮಕ್ಕಳು ಅಳುತಾವೆ ಹೋಗೋ ದಾಸಯ್ಯ ಪ.ಮಡಿಕೆ ತೊಳೆಯುತೇನೆ ಮನೆಯ ಸಾರಿಸುತ್ತೇನೆಒಡೆಯರಿಲ್ಲ ಕಾಣೋ ಹೋಗೋ ದಾಸಯ್ಯತೊಡೆಯ ಮೇಲಣ ಕೂಸು ಮೊಲೆ ಹಾಲನುಣಿಸುತಿದೆನಡೆನಡೆ ಕರಕರೆ ಮಾಡದೆ ದಾಸಯ್ಯ 1ಅಟ್ಟದ ಮೇಲಿನ ಅಕ್ಕಿ ತೆಗೆಯಲಾರೆಹೊಟ್ಟೆನೋವು ಕಾಣು ಹೋಗೋ ದಾಸಯ್ಯಮುಟ್ಟಾಗಿ ಕುಳಿತೇನೆ ಮನೆಯವರಿಲ್ಲವೊಕಟ್ಟುಗ್ರ ಮಾಡದೆ ಹೋಗೋ ದಾಸಯ್ಯ 2ವೀಸದ ಕಾಸಿದ ದವಸವ ತಂದಾರೆಕೂಸಿಗೆ ಸಾಲದು ಹೇಗೋ ದಾಸಯ್ಯಆಸೆ ಮಾಡಲು ದೋಷಕಾರ್ತಿ ಬೇಡ ನಾನುಶೇೀಷಾದ್ರಿ ಪುರಂದರವಿಠಲದಾಸಯ್ಯ 3
--------------
ಪುರಂದರದಾಸರು
ಇಕ್ಕೊಳ್ಳಕ್ಕೊ ಸಿಕ್ಕ ರಂಗನೋಡುಈಠಕ್ಕ ಮಾಡಿಹ ಬಹು ಕೇಡು ಪಪೆಟ್ಟಿಗೆಯೊಳು ದೇವರುಗಳು ಗಂಡಸ- |ರಿಟ್ಟಿರಲವ ಅಂಜದಾಲೆ ||ಮುಟ್ಟಿ ಮನೆಗೊಂದೊಂದೊಗೆದು ಮುರು-ಬಟ್ಟಿ ಮಾಡಿಬಿಟ್ಟನಲ್ಲೆ 1ತಾ ಕೆಡಿಸಿ ಒಡೆದಡಕಲಿ ಗಡಿಗೆಗಳನು |ಆಕಳ ಒಳಘೊಗಿಸಿಹ್ಯನೂ ||ಈ ಕರಕರೆಯರಿಯಳು ನಮ್ಮತೆಯೆಂ-ಬಾಕೆನ್ನನು ಕೊಲ್ಲುವಳಲ್ಲೆ 2ಅಡಕಲಿಯೊಳು ದೇವರ ತಾಳಿಯ ಸರ |ತುಡುಗು ಮಾಡಿ ತಕ್ಕೊಂಡು ||ಗಡಬಿಡಿ ಮಾಡೆಲ್ಲೊಗೆದನೊ ನಾ ಎ- |ಷ್ಠುಡುಕಿದರೂ ಸಿಗವಲ್ಲೆ3ನೆಲವಿಗೇರಿಸಿದ ಚಟ್ಟಿಗಿಗಳು ಒಂ- |ದಳುಕದೆ ಮೊದಲಂತಿಹವೆ ||ಇಳುಕಲು ಒಂದಕ್ಕೊಂದಕೆ ತೂತು |ಪಾಲ್ಗಳು ಈಸನಿಲ್ಲವಲ್ಲೆ 4ಅಡವಿಯ ದೇವರ ಹೆಸರಿಲಿ ತುಪ್ಪವ |ಮಡಿಯ ಮಾಡಿ ತುಂಬಿರಲು ||ಕುಡಿದು ಮುಚ್ಚಿ ಮೊದಲಪ್ಪಂದಿಟ್ಟಿಹ |ಕೊಡದೊಳು ಬರಿ ನೀರಲ್ಲೇ 5ಅಂಡಜವಾಹನಓಕಳಿ ಚಲ್ಲಿಹ |ಪುಂಡತನದಿ ಮಂಚದ ಮೇಲೆ ||ಭಂಡಿದು ಏನೆಂಧೇಳಲಿ ಮನೆಯೊಳು |ಗಂಡನ ಸಿಟ್ಟು ನೀ ಬಲ್ಲೆಲ್ಲೆ 6ಏನೆನರಿಯದವಳಿಗಿದು ಬಂದಿತು |ಕ್ಷೋಣಿಯೊಳಗೆ ಒಣಹರಲೆ ||ಮಾನನೀಯಳೆ ಈಪರಿಮಾಡಿ- |ದನಿಕೋ ಪ್ರಾಣೇಶ ವಿಠಲನೀಗ 7
--------------
ಪ್ರಾಣೇಶದಾಸರು
ಇಂಥ ಬುದ್ಧಿಯಲ್ಲಿ ಸೇರಿತೊ ಕೃಷ್ಣ ಗೋಕುಲದೊಳುಎಂಥವರೂ ನಿನ್ನ ದೂರು ಹೇಳುತಿಪ್ಪರೊ ಹೀಗಾದರೆ ನಿಲ್ಲರೋ ಪಗಂಡನುಳ್ಳ ನಾರಿಯರಾ ಮಂದಿಯೆಲ್ಲ ನೋಡ ಬಲು ಉ-ದ್ದಂಡತನದಲ್ಲಿ ಸೀರೆ ಸೆರಗ ಪಿಡಿವರೇ ಇಂಥ ದುಡುಕು ಮಾಡುವರೇ ||ಚಂಡಾಡುವಾಗೆನ್ನವಸನ ಮರೆತೆ ಕೊಂಡು ಪೋಗಲವಳು |ಕಂಡು ಕೊಸರಿಕೊಂಡರಿಂಥ ಸುದ್ದಿ ಹುಟ್ಟಿಸಿ ಪೇಳುವಳಮ್ಮ ಹೊಂದಿಸಿ 1ಹಿರಿಯರುಳ್ಳಾ ಸೊಸೆಯ ಕೂಡ ಒಗೆತನವ ಕೆಡಿಸುವಂತೆ |ಸರಸವಾಡುವದು ನಿನಗೆ ಸಲ್ಲುವದೇನೋ ಯನಗೆ ಭೂಷಣವೇನೋ ||ನಿರುತ ಅವಳ ತಾಯಿ ನಂದಗೋಪಗಣ್ಣಾಯೆಂದು ಕರೆಯ- |ಲರಿತೆನತ್ತೆ ದುಗಳು ನಾದಿನಿಯೆಂದು ಮನಸಿಗೆ ಚರ್ಚೆ ಮಾಡಿದೆನೀ ಬಗೆ2ಕುಲದೇವತೆಯ ಮೀಸಲು ತುಪ್ಪ ನೆಲವಿನ ಮೇಲಿಟ್ಟಿರಲು ಮದ್ದು |ಕಲಶವ ಒಡೆದು ಬಾಹುವದೆಲ್ಲ ಚಿನ್ನಾಟವೇನೋ, ಅವರು ಮುದ್ದಿಸುವರೇನೋ ||ತಿಳಿಯದೆ ನೆಳಲಿದುಯೆಂದು ಕಳ್ಳನ ಒಳಗಿರಿಸಿಹಳೇಕೆಂದು ವಡದೆ |ನೆಲಖರಿಧೋಗುವಘೃತನೋಡಲೆ ತಿಂದೆನಮ್ಮಯ್ಯ ತಪ್ಪಿರೆ ಕಟ್ಹ್ಯಾಕು ಕಯ್ಯ 3ಚಿನ್ನನಂತೆಯಾಗಿಯವರ ಮಗ್ಗುಲೊಳು ಮಲಗಿಯೆಂಥ |ಸಣ್ಣ ಕೃತ್ಯ ಮಾಡಿ ಬಾಹುವೆಂತಲ್ಲೋ ಕಂದ ಕೇಳುವರಿಗೇನುಛಂದ||ನಿನ್ನ ಸಲಿಗೆ ಬಹಳ ಕಂಡು ಇಲ್ಲದ್ದೊಂದೆ ಹುಟ್ಟಿಸುವರು |ಯನ್ನ ದಿಸವಕ್ಕೀ ಜಾರತ್ವ ಕಲಿತಿದ್ದೇನೇನೇ ನಿನಗೇನೂ ತಿಳಿಯದೇನೇ 4ಕದ್ದು ಮೊಲೆಯುಂಡು ಕರು ಬಿಟ್ಟು ಹರಕೊಂಡಿತು ನೋಡಿರಿ ಎಂಬೆಯಂತೆ |ದುಗ್ಧವೆಮಾರಿಬಾಳಿವೆ ಮಾಡುವರೆಂತು ತಾಳುವರೋ ಹೀಗಾದರೆ ನಿಲ್ಲರೋ ||ಇದ್ದಾ ಮನೆಯವರಿಗೆ ನಂಬವು ಅಂಥಾಲಾಳ ಮೊಲೆಯ ನಾನುಂಡರೆ ಮೋರೆಗೆ |ಒದ್ದರೆ ರೋದನ ಮಾಡುತ ನಿನ್ನ ಬಳಿಗೊಂದಿನ ಬಾರೆನೇ ಹುಡುಗರಿಗಂಬುವ ಮಾತೇನೇ 5ಇಡಲುದಕವ ಬೆರಸಿ ಮಜ್ಜನಕೆ ಛಲದಿಂದಲಿ ಚಲ್ಲಿ ಬಾಹುವರೇ |ಬಡಿವೆನೊ ನಾ ತಾಳದೆ, ಮುದ್ದಾದರೆ ಮತ್ತೊಮ್ಮೆಯುಣಬೇಕು ಆಡುತ ಮನೆಯೊಳಗಿರಬೇಕು ||ಹುಡುಗರ ಸಂಗಡ ಅಣ್ಣನೂ ನಾನೂ ಇದ್ದೆವೆ, ಅಲ್ಲಾಕೆಯ ಮೊಮ್ಮಗನು |ಗಡಿಗೆಯ ಉರುಳಿಸೆ ನಾ ಕಂಡವರಿಗೆ ಹೇಳಿದೆನೆ ಇಷ್ಟಾ ಯನ್ನನು ಕಾಡುವದದೃಷ್ಟಾ 6ಎದೆಗಳ ಮುಟ್ಟುವದೇಕೋ ಎರಕೊಂಬುವರಲ್ಲಿಗೆ ಪೋಗಿಯಿನ್ನನ್ನಾ |ಹದದಿಂದಲೆ ಯಿರು ಶಿಕ್ಷೆಯ ಮಾಳ್ಪೆ ಎಚ್ಚರಿಕೆಯಿರಲಿ ಕಾಲ್ಪಡಿದರೆ ಬಿಡೆನೋ ಮರಳಿ ||ಮುದದಿಂದಲಿ ಚಂಡೊಗೆಯಲು ಅವಳಾ ಬಚ್ಚಲಿಯೊಳು ಬಿತ್ತು ತಕ್ಕೊಂಡೇ |ಹದ ತಪ್ಪಿದರೀ ಹೆಂಗಸರೆಲ್ಲಾ ಪ್ರಾಣೇಶ ವಿಠಲನಾಣೇ ಸುಳ್ಳಲ್ಲವು ಕಾಣೇ 7
--------------
ಪ್ರಾಣೇಶದಾಸರು
ಇದು ಏನಂಗ ಮೋಹನಾಂಗ |ಮದನಜನಕ ತೊರವೆಯ ನರಸಿಂಗ ಪ.ಸುರರುತುತಿಸಿ ಕರೆಯೆ ತುಟಿಯ ಮಿಸುಕದವತೆರೆದೆ ಏತಕೆ ಬಾಯ ತೆರನ ಪೇಳೊಮ್ಮೆ 1ವರನೀಲರತುನ ಮಾಣಿಕದ ಹಾರಗಳಿರೆ |ಕೊರಳೊಳು ಕರುಳ ಮಾಲೆಯ ನಿಟ್ಟು ಮೆರೆವುದು 2ಸಿರಿಮುದ್ದು ನರಸಿಂಹ ಪುರಂದರವಿಠಲ |ಸಿರಿಯಿಪ್ಪ ತೊಡೆಯಲಿ ಅರಿಯ ತಂದಿಡುವುದು 3
--------------
ಪುರಂದರದಾಸರು
ಇನ್ನೇಕೆ ಯಮನ ಬಾಧೆಗಳು? |ಎನ್ನ ಜಿಹ್ವೆಯೊಳಗೆ ಹರಿನಾಮವಿರಲು ಪಪತೀತ ಪಾವನನೆಂಬ ನಾಮ-ಸಕಲ |ಶ್ರುತಿತತಿಗಳಿಗೆಲ್ಲ ನಿಲುಕದೀ ನಾಮ ||ಕ್ರುತುಕೋಟಿ ಫಲ ಒಂದೇ ನಾಮ-ಸದ್ |ಗತಿಗೆ ಸಂಗಡ ಬಾಹೋದಲೆ ದಿವ್ಯನಾಮ1ಮುನ್ನ ಪ್ರಹ್ಲಾದನೆ ಸಾಕ್ಷಿ - ನಮ್ಮ |ಕನ್ಯಾಶಿರೋಮಣಿ ದ್ರೌಪದಿ ಸಾಕ್ಷಿ ||ಚೆನ್ನ ಅಜಮಿಳನೊಬ್ಬ ಸಾಕ್ಷಿ ಆ |ಉನ್ನಂತ ಲೋಕವಾಳುವ ಧ್ರುವ ಸಾಕ್ಷಿ 2ಹದಿನಾಲ್ಕು ಲೋಕವಾಳುವ - ನಮ್ಮ |ಮದನಜನಕನಾಗಿ ಮಹಿಮೆ ತೋರುವ ||ಪದುಮನಾಭನಾಗಿ ಮೆರೆವ- ನಮ್ಮ |ಪುರಂದರವಿಠಲನ ಹರುಷದಿ ಕರೆವ 3
--------------
ಪುರಂದರದಾಸರು
ಇರಬೇಕು ಇರದಿರಬೇಕು ಶ್ರೀ - |ಹರಿದಾಸರು ಸಂಸಾರದೊಳು ಪ.ಕುಲಸತಿಯಾದರೆ ಕೂಡಿರಬೇಕು |ಸುಲಭದಿಂದ ಸ್ವರ್ಗ ಸೂರಾಡಬೇಕು ||ಕಲಹ ಗಂಟಿಸತಿ ಕರ್ಕಶೆಯಾದರೆ |ಹಲವು ಪರಿಯಿಂದಲಿ ಹೊರಗಾಗಬೇಕು 1ಮಕ್ಕಳು ತಾವು - ಮತಿವಂತರಾದರೆ |ಅಕ್ಕರೆಯಿಂದಲಿ ಕೂಡಿರಬೇಕು ||ಚಿಕ್ಕತನದಿ ಬುಧ್ಧಿ ತೇರುಂಡರಾದರೆ |ಗಕ್ಕನೆ ಅಲ್ಲಿಂದ ಹೊರಗಾಗಬೇಕು 2ದುಷ್ಟರ ಕಂಡರೆ ದೂರವಿರಬೇಕು |ಶಿಷ್ಟರ ಕಂಡರೆ ಕೈಮುಗಿಯಬೇಕು ||ದಿಟ್ಟ ಶ್ರೀ ಪುರಂದರವಿಠಲರಾಯನ |ಗಟ್ಟಿಯಾಗಿ ಆತನ ನೆರೆನಂಬಬೇಕು 3
--------------
ಪುರಂದರದಾಸರು
ಇಲ್ಲೆ ಕರೆಯ ಬ್ಯಾಡ ಕ್ಷುಲ್ಲಕರ ತಾಸುನಿಲ್ಲಿಸಿ ಹಾಸ್ಯ ಮಾಡಿ ಅಕ್ಕಯ್ಯ ಪ.ನಲ್ಲೆ ದ್ರೌಪತಿ ನಿನ್ನ ನಿಲ್ಲಿಸಿದವಗುಣಎಲ್ಲಮನಕೆತಾರೆ ಅಕ್ಕಯ್ಯ 1ವÀಂಚಕ ಗುಣದವರ ಮುಂಚೆ ನಿಲ್ಲಿಸಬೇಕುಪಾಂಚಾಲಿಬೇಡಿಕೊಂಬೆ ಅಕ್ಕಯ್ಯ 2ಬೂಟಕಗುಣದವರಪಾಟುಬಡಿಸುವಿ ತಾಸÀುಕೋಟಿ ಜನರು ನೋಡ ಅಕ್ಕಯ್ಯ 3ಗರುವಿನ ಗೊಂಬೆಯರ ಹಿರಿಯತನ್ಹಾಂಗಿರಲಿಕರವಮುಗಿಯೋಣವಂತೆ ನಾಳೆಗೆ ಅಕ್ಕಯ್ಯ4ಕೃಷ್ಣನ ಮಡದಿಯರ ಶ್ರೇಷ್ಠತನ ಹಾಂಗಿರಲಿಸಾಷ್ಟಾಂಗಕ್ಕೆರಗೋಣವಂತೆ ನಾಳಿಗೆ ಅಕ್ಕಯ್ಯ 5ನಿಂದಕರನ ತಾಸು ನಿಂದಿಸೋದುಚಿತವಂದಿಸುವೆನು ನಿನಗೆ ಅಕ್ಕಯ್ಯ 6ಸಿರಿರಮಿ ಅರಸನು ಭರದಿ ನಗುವಂತೆಇವರ ಗರವು ಮುರಿಯಬೇಕು ಅಕ್ಕಯ್ಯ 7
--------------
ಗಲಗಲಿಅವ್ವನವರು
ಈ ಪರಿಯ ಅಧಿಕಾರ ಒಲ್ಲೆ ನಾನು |ಶ್ರೀಪತಿಯೆ ನೀನೊಲಿದು ಏನ ಕೊಟ್ಟುದೆ ಸಾಕು ಪಚಿರಕಾಲ ನಿನ್ನ ಕಾಯ್ದು ತಿರುಗಿದುದಕೆ ನಾನು |ಕರುಣದಲಿ ರಚಿಸಿ ನೀ ಈ ದುರ್ಗದಿ ||ಇರ ಹೇಳಿದುದಕೆ ನಾ ಹೊಕ್ಕು ನೋಡಿದೆ ಒಳಗೆ |ಹುರುಳ ಲೇಶವು ಕಾಣೆ ಕರಕರೆಯು ಬಲುನೋಡು 1ದಾರಿಯಲಿ ಹೋಗಿ ಬರುವವರಉಪಟಳಘನ|ಚೋರರಟ್ಟುಳಿಗಂತೂ ನೆಲೆಯೆ ಇಲ್ಲ ||ವೈರಿವರ್ಗದ ಜನರು ಒಳಗೆ ಬಲು ತುಂಬಿಹರು |ಮಿರಿ ನಿನ್ನಲಿ ಮನವನೂರಿ ನಿಲಗೊಡರು 2ಸರಿಬಂದ ವ್ಯಾಪಾರ ಮಾಡಿ ತಾವೆನ್ನನ್ನು |ಬರಿಯ ಲೆಕ್ಕಕೆ ಮಾತ್ರ ಗುರಿಯ ಮಾಡಿ ||ಕರಕರೆಯ ಬಡಿಸಬೇಕೆಂದು ಯೋಚಿಸುತಿಹರು |ಕರೆದು ವಿಚಾರಿಸಿ ನ್ಯಾಯ ಮಾಡಿಸು ದೊರೆಯೇ 3ನಾಮಾಂಕಿತಕೆ ಮಾತ್ರ ಅಧಿಕಾರವೆನಗಿತ್ತೆ |ಸ್ವಾಮಿತ್ವವೋನೋಡುಮನೆಮನೆಯಲಿ ||ಭೀಮ ವಿಕ್ರಮರವರು ದುರ್ಬಲಾಗ್ರಣಿ ನಾನು |ಗ್ರಾಮ ಒಪ್ಪಿಸೆ ನಮಿಪೆ ಸಂಬಂದ ತೆರಮಾಡು 4ಕಾಲಕ್ಕೆ ಕರೆಯ ಬಂದವರಿಗೆ ಒಳಗಾಗಿ |ಪಾಳೆಯವನೊಪ್ಪಿಸಿ ಕೊಡುವೆವೆಂದು ||ಆಲೋಚಿಸಿಹರಯ್ಯ ಈಗಲೆನಗೆ ನಿನ್ನ |ಆಳುಗಳ ಬಲಮಾಡಿ ಎನ್ನ ರಕ್ಷಿಸು ದೊರೆಯೆ 5ಕ್ಷಣಕೆ ನೂರುಪಟಳ ಈ ಕೋಟೆಗೆಲೊ ರಾಯ |ಅನುವಾದ ದಿವಸವೊಂದಾದರಿಲ್ಲ ||ಮೊನೆಗಾರ ಜನವಿಲ್ಲ ಇದ್ದವರು ವಶವಿಲ್ಲ |ಕೊನೆಗೊಂಡು ಗ್ರಾಮ ಕಾಪಾಡುವ ತೆರನೆಂತೊ 6ಎನಗೆ ಈ ಬಹುನಾಯಕರ ಕೊಂಪೆಯೊಳು ವಾಸ-|ವನು ಬಿಡಿಸಿ ನಿನ್ನ ನಿಜ ಪಟ್ಟಣದೊಳು ||ಮನೆ ಮಾಡಿಕೊಡಲು ನಾನಿನ್ನ ನೋಡಿಕೊಳುತ |ಅನುಗಾಲಬದುಕುವೆನೊ ಪುರಂದರವಿಠಲ7
--------------
ಪುರಂದರದಾಸರು
ಈ ಪರಿಯ ಅಧಿಕಾರ ಒಲ್ಲೆ ನಾನುಶ್ರೀಪತಿಯೆ ನೀನೊಲಿದು ಏನು ಕೊಟ್ಟುದೆ ಸಾಕುಚಿರಕಾಲ ನಿನ್ನ ಕಾದು ತಿರುಗಿದುದಕೆ ನೀನುದಾರಿಯಲ್ಲಿ ಹೋಗಿ ಬರುವುದಕ್ಕೆಉಪಟಳಘನ್ನನಾಮಾಂಕಿತಕೆ ಮಾತ್ರ ಅಧಿಕಾರವೆನಗಿತ್ತೆಸರಿಬಂದ ವ್ಯಾಪಾರ ತಾವು ಮಾಡಿ ಎನ್ನಕಾಲಕ್ಕೆ ಕರೆಯ ಬಂದವರಿಗೆ ಒಳಗಾಗಿಕ್ಷಣಕೆ ನೂರುಪಟಳ ಈ ಕೋಟೆಗೆಲೊ ರಾಯಇನಿತನಾಯಕದ ಕೊಂಪೆ ಒಳಗಿನವಾಸ-
--------------
ಗೋಪಾಲದಾಸರು