ಒಟ್ಟು 8186 ಕಡೆಗಳಲ್ಲಿ , 130 ದಾಸರು , 4775 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುಪಾದಕೆ ಮನಮಗ್ನವಾಗುವದೆ ಖೂನ ಧ್ರುವ ಗುರು ತನ್ನೊಳಗದೆ ಗುರ್ತು ನರದೇಹ್ಯದ ಭಾವನೆತಾಮರ್ತು ಅರಿಯಲಿಕ್ಕೆ ಘನ ಬೆರ್ತು ಧರೆಯೊಳು ನಿಜನಿರ್ತ 1 ಗುರುಶಿಷ್ಯತ್ವದ ನಿಜಖೂನ ಮರಜನಗಳಿದು ಬಲ್ಲವೇ£ À ವಿರಳಾಗತ ವಿಹ್ಯದೀ ಙÁ್ಞನ ಸುರಜನ ಪಾವನ 2 ಭಾವದೊಳ ನಿಜಗುರು ಸಧ್ಬಕ್ತಿ ಠಾವಿಲಿರಬೇಕಿದು ಸಂಗತಿ ನಿಚ್ಚ ಮಹಿಪತಿ ಭವಹರ ಗುರುಮೂರ್ತಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರುಬೋಧ ಪರಮಸುಖಕಾರಿ ಬಾರಿ ಬಾರಿಗೂ ಕೇಳೈ ಭವರೋಗೀ ಪ ಬಿಡು ಬಾಳಿನ ಭ್ರಮೆಯ ಸಂಸಾರಿ ದುಃಖದ ಬಾಳಿದು ವಿನಾಶಕಾರಿ ಇದರೊಳು ಸಿಗುತಿಹ ಸುಖವು ವಿಕಾರಿ ತಿಳಿಯೈ ಮುಕ್ತನಾಗಲಿದು ದಾರಿ 1 ಆರಿ ನಿನ್ನಯ ನಿಜವಾ ಸುವಿಚಾರಿ ಅರಿವೇ ನಿನ್ನಯ ಈ ಭವತಾರಿ ಬೇರಾವುದು ನಿನಗಾಗದು ದಾರಿ ಈ ನುಡಿ ಪೇಳುತಿಹುದು ಶೃತಿಸಾರಿ 2 ಜಾಗರಾ ಕನಸು ನಿದ್ರೆಯ ಮೀರಿ ಅಮರವಾಗಿರುವ ಪದವನೆ ತೋರಿ ಅದೆ ನೀನೆನ್ನುತ ಪರಿಪರಿ ಸಾರಿ ಶಂಕರಭೋಧವಿದುವೆ ಭವಹಾರಿ3
--------------
ಶಂಕರಭಟ್ಟ ಅಗ್ನಿಹೋತ್ರಿ
ಗುರುಮಧ್ವಮುನಿರಾಯಾ ಎನಗೊಂಬೊದಗಿದಾನು ಸಹಾಯ ಪ ಕತ್ತಲೆ ಕವಿದಿತ್ತು ಸುತ್ತಲೆ ಕಾಣದಂತೆ ಇತ್ತು ಬಟ್ಟೆ ದೃಶ್ಯವಿತ್ತು ಮತ್ತುರೆ ಭವತಮ ಸುತ್ತಲೆ ಮುಸುಕಿರೆ ಉತ್ತಮಾನಂದತೀರ್ಥ ಬಿಡು ಉದಯಸಿದಾ 1 ಹರಿಬೀಜಾವರಿ ಅಲ್ಲಾ ಧರೆಯೊಳು ಸದ್ಗತಿ ದೊರಿಲಿಲ್ಲಾ ಗುರುವೇ ಇರಲಿಲ್ಲಾ ಧರೆಯೊಳು ಹರಿಯನಾವ ಬಲ್ಲ ಸುರರೊಳು ಸುರತರುವರ ವಾಡ ಸೂನು ಧರೆಯೊಳವತರಿಸಿ ಹರಿಪಥ ತೋರಿದಾ 2 ಎಲ್ಲ ರೋಗಕೆ ಮದ್ದು ಸಲ್ಲುವದಿವರ ನಾಮ ಮುದ್ದು ಹುಲ್ಲಜನರ ಸದ್ದು ನಿಲ್ಲದೆ ಪೋದಿ ತಡವಿ ಬಿದ್ದು ಬಲ್ಲಿದ ನರಸಿಂಹ ವಿಠಲನ ನೆನೆಯಲು ಎಲ್ಲ ಕಾಮಿತಫಲ ನಿಜವೆಂದರುಹದಾ 7
--------------
ನರಸಿಂಹವಿಠಲರು
ಗುರುರಾಘವೇಂದ್ರ ಶರಣರ ಸುರ ತರುವೆ ಕರುಣಸಾಂದ್ರ ಪ ಧರೆಯೊಳು ನಿನ್ನ ಶ್ರೀ ಚರಣಕಮಲ ಪ್ರಭೆ ಪರಿ ಉದ್ಧರಿಸು ಈ ಶರಣನ್ನ ಅ.ಪ. ಸುಕೃತ ಸ್ವರೂಪ ದರುಶನ ಮಾತ್ರದಿ ಭವ ಶ್ರಮ ಹರಿಸುವ ಪ್ರತಾಪ ರಮೆ ಅರಸನ ಗುಣ ಸಮುದಾಯದೊಳು ಮಗ್ನ ಭ್ರಮೆರಹಿತ ಸ್ಥಿರಚಿತ್ತ ನಮೋ ನಮೋ ನಿನಗೆ ಅಮಿತ ಮತಿಯ ಕರುಣ ಕವಚವ ಅಮಿತಕಾಲದಿ ಕೊಟ್ಟು ಮೆರೆಯುವ ಅಮಿತ ಮಂಗಳದಾಯಿ ತತ್ವದ ಕಮಲ ವೈಭವ ಸಲಹಲೆನ್ನನು 1 ಪಾವನ ಸುಯತಿ ರನ್ನ ಲಾಲಿಸು ವಾಕು ಸಾವಧಾನದಿ ಘನ್ನ ಭವ ಭವಣೆ ದಾವಾಗ್ನಿಯೊಳು ನೊಂದೆ ಶ್ರೀ ವರನ ದಾಸ ಕಾವ ದೃಷ್ಟಿಯಲಿ ನೋಡೊ ನಿತ್ಯ ಮಂಗಳ ಭಾವರೂಪ ಗುಣತ್ರಯಗಳ ಆವ ಕಾಲಕು ಬಿಡದೆ ನೋಡುವ ಭೂವಿ ಬುಧಮಣಿ ಪಾಲಿಸೆನ್ನನು 2 ತುಂಗಾತೀರ ನಿವಾಸ ರಾಘವೇಂದ್ರ ಗುರು ತುಂಗ ಮಹಿಮ ನಿರ್ದೋಷ ಮಂಗಳಾಸಮಹರಿ ಗಂಗಾಪಿತನ ಕೂಡಿ ತುಂಗಪೂಜೆಯ ಕೊಂಡ್ವರಂಗಳ ಬೀರುವ ಪಾದ ತೀರ್ಥದಿ ಭವ ಭಂಗ ಬಗೆಯನು ಬಲ್ಲ ಮಹಾತ್ಮ ರಂಗ ಜಯೇಶವಿಠಲ ದೇವನ ಸಂಗ ನೀಡುವ ಕೃಪೆಯ ಮಾಳ್ಪ 3
--------------
ಜಯೇಶವಿಠಲ
ಗುರುರಾಜ ಕರುಣದಿ ನೋಡಯ್ಯ ಪ ಸುರಗಣ ಒಡೆಯನೆ ಕರವೆತ್ತಿ ಮುಗಿಯುವೆ ಕರೆಕರೆ ಮಾಡದೆ ಚರಣವ ತೋರಿಸು ಅ.ಪ. ಭವ ಮೋಚಕನ ಬಿಟ್ಟು ಭವಣೇಗಳನೆಪಟ್ಟು ನಾ ಒದ್ದಾಡುವೆ ಇಂದು ಅವನಿಯ ಜನರೊಳು ಅವಗುಣ ಪ್ರತಿಮೆಯ ತವಕದಿ ಪೊರೆಯದೆ ಜವನಡಿಕಳಿಸೊದೇ 1 ಅನುದಿನದೀ ನಾನು ಅನುಮಾನದಿಂದಲಿ ನೊಂದೆ ಅನಿಲನ ಹಾದಿಯ ಬಿಟ್ಟು ಅನ್ಯರಾನಂಬೀ ಕೆಟ್ಟೆ ತನುಮನ ನಿನ್ನಡಿ ಅರ್ಪಿಸಿನಂಬಿದೆ ದಿನದಿನ ದಯದಿಂ ನಿನ್ನವರೊಳು ಸೇರಿಸೊ 2 ಕಾಮಕೇಳಿಯಲಿ ಮುಳುಗಿ ಕಾಮಿನಿಯರ ಬರೆದೆ ಕಾಮಜನಕನ ಮರೆತೆ ಸೋಮಶೇಖರ ಪ್ರಿಯನೆ ಶಮದಮಪಾಲಿಸಿ ತಾಮಸ ಓಡಿಸಿ ಸಾಮಜವರದನ ಪ್ರೇಮವ ಕೊಡಿಸೋ 3 ಜ್ಞಾನಶೂನ್ಯನು ಆಗಿ ಶ್ವಾನಂದದಿ ಇರುವೆ ಮಾನಾಭಿಮಾನವನ್ನು ನಿನಗೆ ಅರ್ಪಿಸಿದೆನೊ ಅನಿಲನಶಾಸ್ತ್ರದಿ ಜ್ಞಾನವ ನೀ ನೀಡಿ ಮನದಲಿ ನಲಿನಲಿ ಮುನಿಗಳ ಒಡೆಯಾ 4 ವಿಧವಿಧ ಟೀಕೆಗಳನು ಮುದದಿಂದಲಿ ಮಾಡಿ ಮೋದವಂತದ ತತ್ವಗಳ ಮುಂದಕ್ಕೆ ತಂದೆಯೋ ಸದಯದಿ ಜಯಮುನಿ ವಾಯ್ವಾಂತರ್ಗತ ಮಾಧವ ಕೃಷ್ಣವಿಠಲನ ತೋರುತ 5
--------------
ಕೃಷ್ಣವಿಠಲದಾಸರು
ಗುರುರಾಜ ಗುರುಸಾರ್ವಭೌಮ ಪ ಗುರುರಾಜ ತವ ಪಾದ ಸರಸಿಜಯುಗಲಕ್ಕೆ ಮೊರೆಪೊಕ್ಕ ಜನರನ್ನ ಪೊರೆ ಎಂದೇ ಅ.ಪ ಶರಣ ಪಾಲಕನೆಂಬೊ - ಬಿರುದು ಬೀರುತಲಿದೆ ಶರಣರ ಮರೆವೊದು ಥರವೇನೋ 1 ಸಾರಿದಜನರ‌ಘ ದೂರಮಾಡುವೆನೆಂಬೊ ಧೀರರ ವಚನವು ಸಾರುತಿದೆ 2 ದೂರದೇಶದಿ ಜನ - ಸಾರಿ ಬಂದರೆ ವಿ - ಚಾರಿಸಿ ಹರಕೆ ಪೊರೈಸುವೀ 3 ಕುಷ್ಟಾದಿ ಮಹರೋಗ ನಷ್ಟಮಾಡುತಲ - ಭಿಷ್ಟೇಯ ಪೂರ್ತಿಪ ಮಹ ಶ್ರೇಷ್ಠನೆ 4 ಆದಿವ್ಯಾಧಿ ಉ-ಪಾಧಿ ಸಂಘಗಳನ್ನು ಮೋದ ಸಲಿಸುವಿ 5 ಸತಿಜನರಿಗೆ ಅತಿ ಹಿತದಿಂದ ಸುತರನ್ನ ಸತತ ನೀಡುವಿ ಯತಿ ಕುಲನಾಥ 6 ಮತಿ ಹೀನ ಅತಿ ಮೂರ್ಖ ತತಿನಿನ್ನ ಭಜಿಸಲು ವಿತತ ಭಕುತಿ ಜ್ಞಾನ ನೀಡುವೀ 7 ಮೂಕ - ಬಧಿರ - ಪಂಗು - ಏಕೋಭಾವದಿ ಸೇವೆ ಏಕಮನದಿ ಮಾಡೆ ರಕ್ಷೀಪಿ 8 ಅವರ ಮನೋ ಬಯಕೆ ಹವಣಿಸಿ - ನೀಡುತ ಅವನಿಯೊಳಗೆ ನೀ ಮೆರೆಯುವೀ 9 ಅಂಧಜನಕೆÀ ಚಕ್ಷು - ವಂಧ್ಯಜನಕೆ ಸುತರು ಬಂದ ಬಂದವರರ್ಥ ಪೂರೈಸುವೀ 10 ಪರಮಂತ್ರ ಪರಯಂತ್ರ ಪರಕೃತ್ಯಪರಮಾಹಿ ಪರಿಪರಿ ವ್ಯಥೆಗಳ ಹರಿಸುವೀ 11 ದುರುಳಜನರ ಬಾಧೆ ಮೊರಳುಮಾಯದ ಮೊದ್ದು ಕಿರಳುಪದ್ರಗಳೆಲ್ಲ ಕಳೆಯುವೀ 12 ಕಾಮಿತ ಫಲಗಳ - ಕಾಮಿಪ ಜನರಿಗೆ ಪ್ರೇಮದಿ ನೀಡುವೊ ಧ್ವರಿ ನೀನೇ 13 ಅನ್ನ ವಸನ ಧನ - ಧಾನ್ಯ ಹೀನರಗಿನ್ನು ಮನ್ನಿಸಿ ನೀನಿತ್ತು ಸಲಹುವೀ 14 ಅಧಿಕಾರ ಕಳಕೊಂಡು ಬದಕಲಾರದ ಜನ ವದÀಗಿ ನಿನ್ನನು ಭಜಿಸೆ ಕರುಣಿಪೀ 15 ಮಾನವ ನಿನ್ನ ಸೇವೆ ಮಾಡುವನವ ಕೋವಿದನಾಗುವ ನಿಶ್ಚಯಾ 16 ಇನಿತೆ ಮೊದಲಾದ ಘನತರ ಮಹಿಮವು ಜನರಿಗೆ ಶಕ್ಯವೆ ಗುರುರಾಯಾ 17 ಸುರತರು ಸುರಧೇನು ವರಚಿಂತಾಮಣಿ ನೀನೆ ಶರಣವತ್ಸಲ ಬಹು ಕರುಣೀಯೇ 18 ದಿನ ದಿನ ಮಹಿಮವು ಘನ ಘನ ತೋರೋದು ಬಿನಗು ಮಾನವರಿಗೆ ತಿಳಿಯಾದೋ 19 ಕರುಣಾನಿಧಿಯೆ ನೀನು ಶರಣ ಮಂದಾರನೆ ಶರಣ ವತ್ಸಲ ನಿನಗೆ ಶರಣೆಂಬೆ 20 ವಸುಧಿತಳದಿ ನೀನೆ ವಶನಾಗೆ ಜನರಿಗೆ ವ್ಯಸನಗಳುಂಟೇನೊ ಪೇಳಯ್ಯಾ 21 ದುರಿತ ದುಷ್ಕøತವೆಲ್ಲ ದೂರದಲೋಡೋವು ಕರಿಯು ಸಿಂಹನ ಕಂಡತೆರನಂತೆ 22 ನಿನ್ನ ನಾಮದ ಸ್ಮರಣೆ ಘನ್ನ ರೋಗಗಳನ್ನು ಚೆನ್ನಾಗಿ ನಾಶನ ಮಾಳ್ಪೋದೋ 23 ರಾಘವೇಂದ್ರ ಗುರು ಯೋಗಿಕುಲಾಗ್ರಣಿ ವೇಗಾದಿ ಪೊರೆದೆನ್ನ ಪಾಲಿಪೆ 24 ಜನನಿ ಜನಕರು ತಮ್ಮ ತನಯರ ಪೊರೆದಂತೆ ದಿನದಿನ ನೀನೇವೆ ಸಲಹೂವಿ 25 ಅನಿಮಿತ್ತ ಬಾಂಧವ ಅನುಗಾಲ ನೀನಿರೆ ಜನರು ಮಾಡುವ ಬಾಧೆÉ ಎನಗೇನೋ 26 ಮನಸಿನೊಳಗೆ ನಿತ್ಯ ನೆನೆಯುತ ತವ ಪಾದ ವನಜ ಯುಗಳ ಮೊರೆ ಪೊಂದಿದೆ 27 ನಿನ್ನ ಮಹಿಮ ಶ್ರವಣ ನಿನ್ನ ಗುಣಕೀರ್ತನ ನಿನ್ನ ಮೂರ್ತಿಧ್ಯಾನ ನೀಡೈಯ್ಯಾ 28 ನಿನ್ನ ಉಪಾಸನ ನಿನ್ನ ದಾಸತ್ವವ ಚನ್ನಾಗಿ ಎನಗಿತ್ತು ಸಲಹೈಯ್ಯಾ 29 ನಿನ್ನನುಳಿದು ಈಗ ಮನ್ನಿಸಿ ಪೊರೆವಂಥ ಘನ್ನ ಮಹಿಮರನ್ನ ಕಾಣೆನೋ 30 ದಾತ ಗುರು ಜಗ ನ್ನಾಥ ವಿಠಲಗತಿ ಪ್ರೀತಿ ಪಾತ್ರನು ನೀನೆ ನಿಜವಯ್ಯೊ 31
--------------
ಗುರುಜಗನ್ನಾಥದಾಸರು
ಗುರುರಾಜಾ ಗುರು ಸಾರ್ವಭೌಮ ಪ ಗುರುರಾಜಾ ಗುರಸಾರ್ವಭೌಮ ನಿನ್ನಯ ಪಾದ ಸರಸಿಜಯುಗಕಭಿ ನಮಿಸುವೇ ಅ.ಪ ಕರುಣ ಸಾಗರನೆಂದು ಚರಣವ ನಂಬಿದೆ ಶರಣನ ಪಾಲಿಸು ಕರುಣಿಯೇ 1 ಅನ್ಯರ ಭಜಿಸದೆ ನಿನ್ನನ್ನೆ ಭಜಿಸುವೆ ಎನ್ನ ಮರೆವೊದಿದು ನ್ಯಾಯವೇ 2 ಪರಮ ಪುರುಷನೆ ನಿನ್ನನು ಚರನೆನಿಸಿ ಧರೆಯೋಳು ನರರÀನ್ನ ಬೇಡೊದು ಘನತೆಯೆ 3 ಸುರನು ಮನೆಯಲ್ಲಿ ಸ್ಥಿರವಾಗಿ ಇರಲಿನು ತಿರಕ ತಕ್ರಕೆ ಬಾಯಿ ತೆರೆವೋರೇ 4 ಬೇಡಿದ ಮನೋರಥ ನೀಡುವ - ನೀನಿರೆ ಬೇಡೆನೆ ನರರನ್ನ ನೀಡೆಂದೂ 5 ಸಂತತ ಎನ ಕಾರ್ಯ ವಂತರಿಲ್ಲದೆ ನೀ - ನಿಂತು ಮಾಡುವದು ಪುಶಿಯಲ್ಲ 6 ಕಾಲಕ್ಕೆ ಸುಖದುಃಖ - ಮೇಲಾಗಿ ಬರುತಿರೆ ಪೇಳಿ ಎನ್ನನು ನೀ ಪಾಲಿಸುವಿ 7 ನಿನ್ನ ಸೇವಿಪರಿಗೆ ಇನ್ನುಂಟೆ ಭಯ ಶೋಕ ಉನ್ನತ ಸುಖದೊಳಗಿರುವರೋ 8 ಭವ ಬನ್ನ ಬಡುವದಿದು ಎನ್ನಪರಾಧವದೇನಯ್ಯಾ 9 ಕುಚ್ಛಿತ ಜನರನ್ನ - ತುಚ್ಛ ಮಾಡದÀಲವರ ಇಚ್ಛೆಕಾರ್ಯವ ಮಾಡಿ ಸಲಿಸುವಿ 10 ಜನನಿ ಪುತ್ರಗೆ ವಿಷsÀ - ವಿನಯದಿ ನೀಡಲು ಜನಕ ತನಯನ ತಾ ಮಾರಲು 11 ವಸುಧೀಶ ವೃತ್ತಿಯ - ಕಸಕೊಂಡ ವಾರ್ತೆಯ ವ್ಯಸನದಿ ಆರಿಗೆ ಉಸರೋದೋ12 ಇದರಂತೆ ನೀ ಮಾಡು - ವದು ಏನು ನ್ಯಾಯವೊ ಪದುಮನಾಭನ ಪ್ರಿಯ ಗುರುರಾಯ 13 ಮೂಕ ಬಧಿರ ಕುರುಡಾ - ನೇಕ ಜನಕೆ ಕಾರ್ಯವಿ - ವೇಕ ಮಾಡಿ ನೀ ಸಲಹಿದಿ 14 ಬಂದು ಬೇಡಿದ - ಮಹ - ವಂಧ್ಯಜನರಿಗೆ ಸು - ಕಂದರ ನೀನಿತ್ತು ಸಲಹುವೀ 15 ಭೂತಾದಿ ಬಾಧವ - ನೀತರಿದು ಸುಖಗಳ ವ್ರಾತವ ಸಲಿಸೀ ಪಾಲಿಸುವಿ 16 ಹಿಂದಿನ ಮಹಿಮ - ದಿಂದೇನು ಎನಗಯ್ಯ ಇಂದು ಮಹಾ ಮಹಿಮೆ - ತೋರಿಸೋ 17 ಯಾತಕೆ ಈ ತೆರ ಮಾಡಿದೀ 18 ಎಲ್ಲೆಲ್ಲಿ ನಾ ಪೋದ - ರಲ್ಲಲ್ಲೆ ನೀ ಬಂದು ಎಲ್ಲ ಕಾರ್ಯಗಳನ್ನು ಮಾಡಿದೀ 19 ಇತರರಿಗಸಾಧ್ಯ ಅತಿಶಯ ಚರ್ಯವ ಯತನಿಲ್ಲದಲೆ ನೀ ಮಾಡಿದಿ 20 ಪೇಳಲೆನ್ನೋಶವಲ್ಲ ಭಾಳ - ನಿನ್ನಯ ಚರ್ಯ ಕೀಳುಮಾನವ ನಾ ಬಲ್ಲೇನೆ 21 ಜ್ಞಾನಿಗಳರಸನೆ ಮೌನಿ ಶಿರೋಮಣಿ ಧ್ಯಾನವ ಸಂತತ ನೀಡಯ್ಯಾ 22 ಸಂತತ ಎನ ಮನೊ - ಅಂತರದಲಿ ನೀ ನಿಂತು ಪಾಲಿಸೊ ಎನ್ನ ಮಹರಾಯಾ 23 ಎಂತೆಂಥ ಭಯ - ಬರೆ - ನಿಂತು ತಳೆದ್ಯೊ ದಯ - ವಂತ ನಿನಗೆಣೆಗಾಣೆನಯ್ಯಾ 24 ನಿನ್ನಲ್ಲಿ ಹರಿ ದಯ - ಉನ್ನತ ಇರಲಿನ್ನು ಎನ್ನಲ್ಲಿ ನಿನ ದಯ ಇರಲಯ್ಯ 25 ದಾತಗುರು ಜಗನ್ನಾಥ ವಿಠಲ ನಿನ್ನ ಮಾತು ಲಾಲಿಸಿದಂತೆ ಪೊರೆ ಎನ್ನಾ 26
--------------
ಗುರುಜಗನ್ನಾಥದಾಸರು
ಗುರುರಾಯ ನೀ ಎನ್ನ ತವರ ಮನಿ | ಶರಣರಿಗೆ ಕೈವಲ್ಯದಾನಿ ಪ ಗುರುವೆ ಎನ್ನ ಬಂಧು | ಬಂದು ಪೇಳಿರಿ ವಾಕ್ಯ ಎನಗೊಂದು | ಬಿಡಿಸೀದಿ ಈ ಜೀವಶಿವ ಸಂದು | ನಿಜರೂಪ ತೋರಿದಿ ಕೃಪಾಸಿಂಧು 1 ಶಮ ದಮವು ಕೊಡುತಾನೆ |ಅಂತರ ಬಾಹ್ಯದಲಿ ತಾ ತುಂಬ್ಯಾನೆ 2 ಇರಲಾರೆನು ಬಿಟ್ಟು ಅರಕ್ಷಣಾ | ಗುರುರಾಯ ಎನ್ನಜೀವದ ಪ್ರಾಣ | ದೊರಕಿದಿ ಪರಮವೇ ದಾನಸಾರಿ ಪೇಳುವ ಜ್ಞಾನಬೋಧ ಪೂರ್ಣ 3
--------------
ಜ್ಞಾನಬೋದಕರು
ಗುರುರಾಯ ಪಾಲಿಸುವುದು ನೀ ಎನ್ನ ಪ ಅನ್ಯರೊಬ್ಬರನಾ ನಾ ಕಾಣೆ ಮನ್ನಿಸಿ ಸಲಹುವರನಾ ನಿನ್ನವನೊ ನಾನು ಅನುದಿನದಲಿ ನಿನ್ನ ನೆನೆದು ನೆನೆದು ಇಂದಿನವರೆಗೆ ನಾ ದಿನಗಳೆದೆನೋ ಅ.ಪ. ಇಷ್ಟುದಿನ ಪಟ್ಟ ಕಷ್ಟವು ಸಾಕೋ ಇಷ್ಟಕೆ ನೀ ದಯಾದೃಷ್ಟಿ ಇಟ್ಟು ಜ್ಞಾನವ ಕೊಡಬೇಕೊ ಕಪಟ ಬುದ್ಧಿಯನಷ್ಟು ಕಳೆದಿಷ್ಟವ ಪೂರೈಸಬೇಕೊ ಬಿಟ್ಟವನಲೊ ್ಲನಾ ಕೊಟ್ಟವರು ಪರಿಕರ ಬಿಟ್ಟವರು ಸರಿ ನಾ ಕಟ್ಟಿಕೊಳ್ವೆ ತವ ಚರಣವ ಕೊರಳಿಗೆ 1 ಅಷ್ಟದಿಕ್ಕುಗಳಿಗೆ ಪರಿಹರಿಸಿಹುದೊ ಇಷ್ಟೆಲ್ಲ ಕೇಳಿ ನಾ ಇಟ್ಟೆ ಮನವನು ತವ ಪಾದದಿ ತಿಳಿದು ಸಂತುಷ್ಟನೆ ಎನ್ನ ಬಿಟ್ಟರೆ ಮುಂದಿನ ಬಟ್ಟೆಯ ಕಾಣದೇ ಕೆಟ್ಟು ನಾ ಮೂರಾಬಟ್ಟೆಯಾಗುವೆನೋ 2 ತವ ಪಾದದಿ ತುಳಿದು ಮೆಟ್ಟಿ ಎನ್ನ ಶಿರ ಥಟ್ಟನೆ ಭೂಮಿಯಲಿ ಕೆಡಹುವುದು ಹುಟ್ಟಿದರೆ ದಯವು ಅಟ್ಟಿ ಅಜ್ಞಾನವ ಕಟ್ಟಿ ಸುಜ್ಞಾನವ ಘಟ್ಟಿ ಭಕುತಿಯನು ಕೊಟ್ಟು ನೀ ಪಾಲಿಸೊ 3
--------------
ಹನುಮೇಶವಿಠಲ
ಗುರುರಾಯನಂಥ ಕರುಣಾಳು ಕಾಣೆನು ಜಗದೊಳಗೆ ಪ ಏನೆಂದರಿಯದ ಪಾಮರ ನಾನು | ತಾನೊಲಿದೀಗೆನ್ನ ನುದ್ಧರಿಸಿದನು1 ತನ್ನನುಭವ ನಿಜ ಮಾತಿನ ಗುಟ್ಟು | ಎನ್ನೊಳುಸುರಿ ಘನ ತೋರಿಸಿ ಕೊಟ್ಟು | ಧನ್ಯನ ಮಾಡಿದಸೇವೆಯಲಿಟ್ಟು 2 ಮಾಡುವ ಘನ ತುಸು ತಪ್ಪನೆ ಹಿಡಿಯಾ | ಬೇಡಿಸಿಕೊಳ್ಳದೆ ನೀಡುತ ಪಡಿಯಾ | ರೂಢಿಗಾದನು ಇಹಪರದೊಡೆಯಾ3 ತನ್ನವನೆನಿಸಿದ ಮಾತಿಗೆ ಕೂಡಿ | ಮನ್ನಣೆಯಿತ್ತನು ಅಭಯವ ನೀಡಿ | ಇನ್ನೇನ ಹೇಳಲಿ ಸುಖ ನೋಡಿ4 ತಂದೆ ತಾಯಿ ಬಂಧು ಬಳಗೆನಗಾಗಿ | ನಿಂದೆ ಸದ್ಗುರು ಮಹೀಪತಿ ಮಹಾಯೋಗಿ | ಕಂದನ ಸಲಹುವ ಲೇಸಾಗಿ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗುರುರಾಯರ ತೂಗೋ ಬಾಗೋ ಪರಿಪರಿಯ ರತ್ನಗಳ ಪೆಚ್ಚೇಮುತ್ತುಗಳ ಹಚ್ಚೆ ತೊಟ್ಟಿಲು ಕಟ್ಟೇವ | ಮೆಟ್ಟಲು ಮಾಡೇದ ಮಟ್ಟಲು ಮಾಡೇದ ತರತರದ ಹೂಗಳು ಸುತ್ತ | ತರ ತರದ ಹೂಗಳು ಸುತ್ತ ಸುವಾಸನೆ ಮತ್ತ | ತುಂಬ ಇಡಗಿತ್ತ ಪರಿಮಳಾರ್ಯರ ಬಳಿ ಸಾಗೇದ 1 ವರಮಧ್ವಶಾಸ್ತ್ರ ವಿಸ್ತರಿಸಿ | ವರಮಧ್ವಶಾಸ್ತ್ರ ವಿಸ್ತರಿಸಿ ಜರಿದ ಮಾಯ್ಗಳಾಗ ಮೆರೆದ ಭೂಮಿಯೊಳಗ ಮೆರದ ಭೂಮಿಯೊಳಗ | ತರತಮ ಸ್ಥಾಪಿಸುತ್ತ | ತರತಮ ಸ್ಥಾಪಿಸುತ್ತ ಮರುತ ನಿದ್ಧಾಂತ ತ್ವರಿತ ಗುಣವಂತ ಭರದಿ ಗುರು ಚರಣಕೆ ಬಾಗೋ2 ನಮಿಸುತಲಿ ಸಾಗೋನೀ ಬೇಗ | ನಮಿಸುತಲಿ ಸಾಗೋನೀ ಬೇಗ | ವರವ ಬೇಡೀಗ ವರವ ಬೇಡೀಗ ನಾಮಾಮೃತವ ಸವಿಯುತ್ತ | ನಾಮಾಮೃತವ ಸವಿಯುತ್ತ ಕುಣಿಯೋ ಮತ್ತೆ | ಮಣಿಯ ಬಾಗುತ್ತ ಬಾಗುತ್ತ | ಮೆಣಿಯೆ ಬಾಗುತ್ತ ಶಾಮಸುಂದರನ ಪ್ರಿಯಗೀಗ 3
--------------
ಶಾಮಸುಂದರ ವಿಠಲ
ಗುರುರಾಯಾ | ಶರಣಾಶ್ರಯಾ | ಪರಮಾ ನಂದೋದಯಾ | ಗರಿಯೋ ನಿಮ್ಮದಯಾ | ಚರಣಕ ನಂಬಿಹೆನಯ್ಯಾ | ತರಳನು ನಾನತಿ ಜೀಯಾ | ಅರಿಯೆನು ಅನ್ಯೋಪಾಯಾ | ಪಾವನ ಕಾಯಾ 1 ಅಘಹಾರಿ | ಭಕುತಿಯ ದೋರಿ | ಸುಗಮವ ತೋರಿ | ನಿಗಮಾರ್ಥ ಸಾರಿ | ಉಗಮದ ಬೋಧವ ಬೀರಿ | ಪರಿ | ಬಗೆವದು ದೀನೋದ್ಧಾರಿ | ಭಕುತರ ನಿಜ ಸಹಕಾರಿ2 ನಿನ್ನವನಾ | ಮುನ್ನಗಾಯ್ದನಾ | ಎನ್ನೊಳಿಹನ್ಯೂನಾ | ಇನ್ನಾರಿಸುದೇನಾ | ಬೆನ್ನವ ಬಿದ್ದಿಹದೀನಾ | ಬನ್ನ ಬಡಿಸದನುದಿನಾ | ಚನ್ನಾಗಿ ಕಾಣಿಸಿ ಖೂನಾ | ಮನ್ನಿಸು ಹಿಡಿದಭಿಮಾನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗುರುವರನನು ಭಜಿಪೆ ಶ್ರೀ ಶೃಂಗೇರಿ ಗುರುವರನನು ಭಜಿಪೆ ಪಪರಮ ಪಾವನನಾದ ಗೂಢತತ್ವವನೊರೆವನರಸಿಂಹಭಾರತಿ ಗುರುವರನನು ಭಜಿಪೆ ಅ.ಪಸ್ವರ್ಣಪೀಠದಿ ಕುಳಿತು ಸ್ವರ್ಣಾಂಬರವ ಪೊದ್ದುಚಿನ್ಮುದ್ರೆಯನು ಧರಿಸಿ ಪನ್ನಗಭೂಷಣ ಪರಶಿವನಂದದಿತನ್ನ ಭಕ್ತರ ಕರೆದು ಛಿನ್ನಸಂಶಯರಮಾಳ್ಪ 1ಮಣಿಮಯ ಮಕುಟವ ಮಸ್ತಕದೊಳಗಿಟ್ಟುಮಣಿಮಾಲಿಕೆಯ ಧರಿಸಿ ದಿನಮಣಿಶತತೇಜವನು ಬೆಳಗುತ್ತ ತಾನುಘನ ಶಾಸ್ತ್ರಮಾರ್ಗವನನುವದಿಸುತಲಿಹ 2ಚಂದ್ರಗಾ'ಯನುಟ್ಟು ಚಂದ್ರಮೌಳೀಶ್ವರನಛಂದದಿ ಪೂಜಿಸುತ ಸಿಂಧುಜಾ ಧವನಾದ ತಂದೆ ವೇಂಕಟಪತಿಯಂದದಿ ದಾಸಗಾನಂದವನಿತ್ತು ಪೊರೆವ 3
--------------
ನಾರಾಯಣದಾಸರು
ಗುರುವಾದಿರಾಜ ತವ | ಚರಣಗಳಿಗಭಿನಮಿಪೆದೊರಕಿಸೆನಗ್ಹರಿಪಾದ | ಸರಸಿರುಹ ಗುರುವೇ ಅ.ಪ. ಯತಿ ಕುಲಾಗ್ರಣಿ ದ್ವೈತ | ಮತ ಜನರ ಉದ್ಧಾರಸತತ ನೀ ನೆಸಗುತಲಿ | ಪ್ರತಿರಹಿತ ನೆನಿಸೀ |ಮತ ಗ್ರಂಥ ವಿಸ್ತರಿಸಿ | ಯುಕ್ತಿಗಳ ಬೋಧಿಸುತಹಿತದಿಂದ ಸಜ್ಜನಕೆ | ಗತಿ ತೋರಿ ಮೆರೆದ 1 ಪಾದ ಪೂಜೆಯನುಹವಣೆಗಳ ತಿಳಿಯೊ ನಾ | ದೈವಗತಿಯಂತೋ 2 ಭಾವಿ ಮಾರುತ ನಿಮ್ಮ | ಭಾವ ತಿಳಿವರು ಯಾರುಓವಿ ನಿಮ್ಮಡಿಗಳನು | ಸ್ತವನ ಗೈದೂ |ಗೋವಳರ ಪ್ರೀಯ ಗುರು | ಗೋವಿಂದ ವಿಠ್ಠಲನಭಾವದಲಿ ಕಾಣ್ವಂಥ | ಭಾವ ಕೊಡು ಸಂತ 3
--------------
ಗುರುಗೋವಿಂದವಿಠಲರು
ಗುರುವಿನ ಕಾಣದೆ ಪರಗತಿ ದೊರೆಯದು ಪ ವೇದ ಶಾಸ್ತ್ರಗಳ ನೋದಿ ಭೇದಿಸದೆ | ವಾದದಿಂದ ಜನಗೆದ್ದನು | ಕೊಂಡ ಗಾದಿಯಂತೆ ನಿಜ | ಸಾಧುರ್ಹಾದಿಯನೆ ಮರೆತನು 1 ಕರ್ಮ ಧರ್ಮ ಸಾರಯಜ್ಞದಿ | ಭೂರಿಯಶವನೆ ಪಡೆದನು | ಏರಿ ಸ್ವರ್ಗದಿ ಜಾರಿ ಬಿದ್ದ ಸಂ | ಸಾರ ವಾರಿಧಿಯ ಸೇರಿದನು 2 ರಂಜನಿಂದ ವಣಭಂಜನ್ಯಾತರೆದು | ಕಂಜನಾಭನ ನೆರೆ ನಿಲುಕನು | ಅಂಜಲೆತ್ತಿದರ ಗುರು ಮಹಿಪತಿ | ಪ್ರಾಂಜಳಾಗಿ ಘನದೋರುವನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು