ಒಟ್ಟು 2628 ಕಡೆಗಳಲ್ಲಿ , 111 ದಾಸರು , 1885 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಾಸುದೇವಯನ್ನ ಸಲಹೋ ವಾರಿಜಾಸನ ಈಶವಾಸವಾರ್ಚಿತ ಚರಣ ವನಜೋದರ ಭಾಸುರಾಂಗ ಕೋಟಿ ಪ್ರಭಾಕರ ಪ್ರಕಾಶ ಮಂದಹಾಸ ಕಮಲಾಚಲನಿವಾಸ ಶ್ರೀ ಜಗದೀಶ ಪ ತಾಪಸೋತ್ತಮ ಸತಿಗೆ ಕೋಪದಿಂದ ಪಾಷಾಣರೂಪವಾಗಿ ಬಿಟ್ಡೆನುತ ಶಾಪಕೊಡಲು ಕೋಪನಾಮಣಿ ಬಲು ಪ್ರಲಾಪಿಸುತ ಮನದಿ ನಿಷ್ಪಾಪರರ ನುಡಿಯಂತೆ ಧರಿಯಲಿಬಿದ್ದಿರಲು ಪಾದ ಸ್ಪರ್ಶಿಸಲಾಕ್ಷಣ ಸೀತಾಪತಿಯ ಸೇವೆಯಿಂದ ಸುಂದರಿಯಾದಳು ತ್ವರದಿ 1 ಪಾಪಗಳು ಮಾಡಿದವನಂತ್ಯ ಕಾಲದಲಿ ಸುತನ ನಾರಗೆಂದು ಕರಿಯೇ ಗತಿ ತೋರಿದಿ ಹಿತದ ಲಾಮರಾಮರೆಂಬ ನಿನ್ನ ಹರುಷದಲಿ ಪೊರೆದೆ ಕ್ಷಿತಿ ನಾಥ ಹರಿ ಮಹೋನ್ನತ ಚರಿತನೆ ಪತಿತ ಪಾವನ ಬಿರುದು ಪರಮಾತ್ಮ ನಿನಗಿರಲು ಸ್ತುತಿಸುವೆನು ಗೋವಿಂದ ಶುಭಕರ ಶ್ರೀ ಮುಕುಂದ 2 ಶರಧಿ ಗಂಭೀರ ಹಾಟಕಾಂಬರ ಶೋಭಿತ ಪುರುಷೋತ್ತಮಾನಂತ ಮುರವೈರಿ ಮುರಲೀರವ ವಿನೋದ ಗರುಡಗಮನ `ವರ ಹೆನ್ನೆಪುರನಿಲಯ' ಪರಮಪಾವನ ನೃಹರೆ ಉರಗೇಂದ್ರಶಯನ ಮಂದರಧರ ಕೃಪಾಂಬುಧೆ3
--------------
ಹೆನ್ನೆರಂಗದಾಸರು
ವಿಘ್ನೇಶ ಪಾಹಿಮಾಂ ವಿಘ್ನ ನಿವಾರಕ ನಿರ್ವಿಘ್ನದಾಯಕ ಪ ಭಗ್ನದಂತಾಕಾಶಾಭಿಮಾನಿ ಮಗ್ನಂ ಕೃತ್ವಾವೋ ಮನ ಅಗ್ನಿ ನೇತ್ರಸುತ ತವ ಪದದೆ ಅ.ಪ ಕುಕ್ಷಿ ಮಹಾಲಂಬೋದರ ಇಕ್ಷುಚಾಪಹರ ಅಕ್ಷತ ಶೋಭಿತ ಗಜಪಾಲ ರಾಕ್ಷಸ ಮದಹರ ಅಂಕುಶಪಾಶ ಕಿನ್ನರ ವಂದಿತ ಚರಣ 1 ಗಜಾನನ ಮನೋಹರ ಗಾತ್ರ ಅಜಿನ ಬದ್ಧ ಪ್ರಲಂಬ ಪವಿತ್ರ ಭಜಕೇಷ್ಟದ ಪರಮ ಸೂತ್ರ ಸುಜನ ಪಾಪ ಪರ್ವತ ವೀತಿ ಹೋತ್ರ 2 ಮೂಷಕ ಗಮನ ವಾಯಭುಗ್ ಭೂಷ ಆದಿಪೂಜ್ಯ ವಿತತ ಮಹಿಮ ಏಕದಂತ ಗಂಧಲೇಪಿತ ವಕ್ಷ ಪತಿತ ಪಾವನ ವಿಶ್ವೋಪಾಸ್ಯ 3 ವ್ಯಾಸೋಕ್ತ ಪುರಾಣ ಲಿಖಿತನೆ ಶೂರ ವಿಂಶತ್ಸೇಕ ಮೋದಕ ಭಕ್ಷ ಕಟಿ ವಿರಾಜಿತ ಕ್ಲೇಶನಾಶನ ಸುಂದರ ಆಶಾಪಾಶ ರಹಿತ ಭೂತ ಗಣೇಶ 4 ಹಾಟಕ ಮಣಿಮಯ ಮಕುಟ ತಟಿತ್ತೇಜ ನಿತ್ಯವಹಿರೂಪ ಪಟಪಟ ಶಬ್ದಘಟಿತ ಗಜಕರ್ಣ ನಿಟಿಲಾಕ್ಷ್ಯವಂದ್ಯ ವಿಜಯರಾಮಚಂದ್ರ ವಿಠಲ ಪೂಜಕ ಶತಸ್ಥ 5
--------------
ವಿಜಯ ರಾಮಚಂದ್ರವಿಠಲ
ವಿಜಯ ದಾಸರ ಭಜಿಸಿರೋ | ಸುಜನರೆಲ್ಲ ನೀವೂ ಪ ವಿಜಯ ದಾಸರ ಭಜಿಸೇ | ಕುಜನ ಮರ್ದನ ನಮ್ಮವಿಜಯ ವಿಠಲ ತಾನೇ | ನಿಜವ ತೋರುವ ಮನದೀ ಅ.ಪ. ಮುನ್ನ ಸುರಲೀಲಾ ನೆನಿಸಿ ತಾ |ಜನಿಸಿದ ತ್ರೇತಾಯುಗದಿ |ವನಧಿಜೆ ರಮಣ ಶ್ರೀ | ಹನುವ ಸೇವಿತನಾದಶ್ರೀನಿವಾಸನ ಚರಣ | ವನಜವ ಸೇವಿಸಿದಾ 1 ಸಕಲ ಸದ್ಗುಣ ಆಕರಾ |ನಿಖಿಲ ಲೋಕದ ಧಾರಕಾ |ಪಾಕಶಾಸನ ಪೂಜ್ಯ | ಗೋಕುಲರೊಡೆಯನನಿಕಂಪಾನೆನಿಸಿ ಜನಿಸಿ | ಕೃಷ್ಣನ್ನ ಪೂಜಿಸಿದ 2 ಸುರ ಪುರ ಮುನಿ ನಾರದಾ |ವರಕಲಿಯಲ್ಲಿ ಜನಿಸೇ |ತುರುಕರುವಾಗಿ ಅವರಾ | ಚರಣವ ಸೇವಿಸಿದಮರಳಿ ಅವರ ಪುತ್ರಾ | ಗುರುಮಧ್ವಪತಿ ಭೃಗುವಾ 3 ಪದಪಂಚ ಲಕ್ಷ ಗ್ರಂಥಕೇ |ಪಾದವೇ ನ್ಯೂನವಿರಲೂ | ಪದಪದ್ಯ ಸುಳ್ಹಾದಿಯಲಿ |ಪಾದ ಪೂರ್ತಿಯ ಮಾಡೆಮೋದದಲುದಿಸಿದಾ | ಬುಧನು ದಾಸಪ್ಪ ನೆನಿಸೀ 4 ಪರಮ ಕಾರುಣ್ಯ ಗುರುವೇ |ಕರವ ಪಿಡೀರಿ ಎನ್ನಾ |ಮರುತಾಂತಾರಾತ್ಮಾ ಗುರು | ಗೋವಿಂದ ವಿಠ್ಠಲನಚರಣವ ತೋರಿಸೀ | ಕರುಣದಿ ಪೋಷಿಸಿ5
--------------
ಗುರುಗೋವಿಂದವಿಠಲರು
ವಿಜಯರಾಯ ಭಜಿಸೋ ಹೇ ಮನುಜಾ ನೀ ಪ ಪಾದ ಭಜಿಸುವ ಮನುಜರ ವೃಜಿನ ವಾರಿಧಿಗೆ ಕುಂಭಜರೆನಿಸಿದ ಗುರು ಅ.ಪ ಮೊದಲು ಬೃಗುಮುನಿರೂಪದಿ ಶೀ- ಘ್ರದಿ ಪೋಗಿ ಬರಲು ಶ್ರೀಹರಿ ಲೋ- ವಿಧಿ ವಿಷ್ಣು ಶಿವರೊಳು ಪದುಮನಾಭನಕಿಂತ ಅಧಿಕರಿಲ್ಲೆಂದು ನಾ ರದ ಮುನಿಗರುಹಿದ 1 ಜಗದೊಳು ಸಕಲ ಕ್ಷೇತ್ರ ತೀರ್ಥಗಳ ಮಹಿಮೆಯ ವರ್ಣಿಸುತ ಖಗರಾಜ ಗಮನ ಶ್ರೀ ಭಗವದ್ಗುಣಗಳನ್ನು ಬಗೆ ಬಗೆ ಪದಸುಳಾದಿಗಳಿಂದ ತುತಿಸಿದ 2 ಕಾಶಿಯೊಳಗೆ ಸಂಪ್ರಾಪ್ತ ಪುರಂದರ ದಾಸರಿಂದಲಿ ಅಂಕಿತ ಶೇಷಶಯನ ಶ್ರೀನಿವಾಸ 'ಕಾರ್ಪರನರ- ಕೇಸರಿ ' ಗತಿ ಪ್ರಿಯ ದಾಸರೆಂದೆನಿಸಿದ 3
--------------
ಕಾರ್ಪರ ನರಹರಿದಾಸರು
ವಿಜಯರಾಯರ ಚರಣ ನಿಜವಾಗಿ ನಂಬಲುಅಜನ ಪಿತನು ತಾನೆ ಒಲಿವಾ ಪ ದ್ವಿಜಕೇತನ ಗುಣವ್ರಜವ ಕೊಂಡಾಡುವಾಸುಜನ ಮಂದಾರನೀತ - ಪ್ರಖ್ಯಾತ ಅ.ಪ. ವಿ ಎಂದು ನುಡಿಯಲು ವಿಷಯ ಲಂಪಟ ದೂರಜ ಎಂದು ನುಡಿಯಲು ಜನನ ಹಾನಿಯ ಎಂದು ಕೊಂಡಾಡೆ ಯಮಭಟರು ಓಡುವರುರಾಯ ಎಂದೆನಲು ಹರಿಕಾವಾ - ವರವೀವಾ 1 ಇವರ ಸ್ಮರಣೆಯೆ ಸ್ನಾನ ಇವರ ಸ್ಮರಣೆಯೆ ಧ್ಯಾನಇವರ ಸ್ಮರಣೆಯೆ ಅಮೃತಪಾನಇವರ ಸ್ಮರಣೆಯ ಮಾಡೆ ಯುವತಿಗಕ್ಷಯವಿತ್ತತ್ರಿವಿಕ್ರಮನು ಮುಂದೆ ನಲಿವಾ - ಒಲಿವಾ 2 ವಾರಣಾಸಿಯ ಯಾತ್ರೆ ಮೂರು ಬಾರಿ ಮಾಡಿಮಾರಪಿತನೊಲುಮೆಯನು ಪಡೆದುಮೂರವತಾರದಾ ಮಧ್ವಮುನಿರಾಯರಾಚಾರು ಚರಣವನು ಭಜಿಪಾ - ಮುನಿಪಾ 3 ಪುರಂದರದಾಸರಾ ಪರಮಾನುಗ್ರಹ ಪಾತ್ರಗುರು ವಿಜಯರಾಯನೀತಾಸಿರಿ ವಿಜಯ ವಿಠಲನ್ನ ಶ್ರೀನಿವಾಸಾರ್ಯರುಹರಿಯಾಜ್ಞೆಯಿಂದ ಕೊಟ್ಟರೂ - ದಿಟ್ಟರೂ 4 ದಾನಧರ್ಮದಿ ಮಹಾ ಔದಾರ್ಯಗುಣದ ಶೌರ್ಯಶ್ರೀನಿವಾಸನ ಪ್ರೇಮಕುಮಾರಾಮಾನವೀ ಸೀಮೆ ಚೀಕನಪರಿ ನಿವಾಸ ಮೋ-ಹನ ವಿಠಲನ್ನ ನಿಜದಾಸಾ - ಉಲ್ಲಾಸಾ 5
--------------
ಮೋಹನದಾಸರು
ವಿಠಲ ಓಡಿ ಬಾರೊ ತೊಟ್ಟಿಲನೇರೊ ಪುಟ್ಟ ಕಮಲದಂಥ ಬಟ್ಟ ಮುಖವ ತೋರೊ ಪ. ಜಟ್ಟಿಯಂದದಿ ಭುಜ ತಟ್ಟಿ ಹುಂಕರಿಸುತ ಅ- ರಿಷ್ಟ ವೃಷಭನನ್ನು ಮೆಟ್ಟಿ ಮಡುಹಿದಂಥ 1 ಹೇಷಿಕ ಭೀಷಣ ಕೇಶಿಯಂಬಸುರನ ಘಾಸಿಮಾಡಿದ ತೋಳ ಬೀಸುತ ಭರದಿಂದ 2 ಮಂದಹಾಸದಿ ಶರದಿಂದು ಕಾಂತಿಯ ಗೆಲ್ವ ಸುಂದರ ಮುಖ ಪೂರ್ಣಾನಂದ ಗೋಪಿಯ ತಂದ 3 ಮೀಸಲ ನೊರೆಹಾಲ ಕಾಸಿ ಸಕ್ಕರೆ ಕೂಡಿ ವಾಸ ಚೂರ್ಣವನಿಕ್ಕಿ ಶ್ರೀಶನಿನ್ನೊಶಕೀವೆ 4 ನಿತ್ಯ ಸುಖಾಂಬುಧೆ ನಿರವಧಿ ಫಲದ ಸ- ರ್ವೋತ್ತಮ ಶೇಷಾದ್ರಿ ಶಿಖರೀಶ ಶ್ರೀನಿವಾಸ 5
--------------
ತುಪಾಕಿ ವೆಂಕಟರಮಣಾಚಾರ್ಯ
ವಿತ್ತ ವನಿತಾದಿ ವಿಷಯವೆಂಬಕನಸಿನ ಸಿರಿಯ ನೆಚ್ಚಿ ತೊನೆದುಕೊಂಬರಲ್ಲದೆ 1ಪೊಲೆಯ ಬೊಂಬೆಯೊಳು ತುಂಬಿದ ಕೀವುಮಲಮೂತ್ರಸಂದೋಹ ತೊಗಲು ರೋಮಎಲು ಮಜ್ಜೆ ಮಾಂಸದವ್ಯೂಹ ಎಷ್ಟು ತೊಳೆದರೂಹೊಲಸು ನಾರುವ ಚೋಹ ಮತ್ತಿದಕೊಂದುಕುಲಗೋತ್ರ ನಾಮರೂಪು ಚಲುವ ಚೆನ್ನಿಗನಿವ ಸಲೆ ಜಾಣನೆಂದು ಮೂಢರುಗಳಹಿಕೊಂಬರಲ್ಲದೆ 2ಮಡದಿಯಾದರಿಲ್ಲ ಮಕ್ಕಳು ಮಕ್ಕಳಾದರೆಒಡಮೆಲ್ಲವದು ಬರಲು ಸತಿಸುತರುಮಡಿದು ಹೋಗುವ ದುಃಖಂಗಳು ಗಳಿಸಿದರ್ಥಕೆಡುವಾ ಸಂಕ್ಲೇಶಂಗಳು ತನಗೆ ಮುಂಚಿಅಡಸಿ ಬರುವದೊ ಮೃತಿ ಜಡರು ಈ ಬದುಕನೆಚ್ಚಿಸಡಗರ ಬಡುತ ಹಿಗ್ಗಿ ಕೊಡಹಿಕೊಂಬರಲ್ಲದೆ 3ಬಾಲಕನಾಗ್ಯೊಂದು ಕ್ಷಣವು ಪ್ರಾಯದಿ ಕಾಮಲೋಲುಪನಾಗ್ಯೊಂದು ಕ್ಷಣವು ಧನಾಢ್ಯನೆಂಬಮೂಳ ಹೆಮ್ಮೆ ಒಂದು ಕ್ಷಣವು ದಾರಿದ್ರ್ಯ ಮುಪ್ಪುಜೋಲುವ ತನುವೊಂದು ಕ್ಷಣವು ನಾನಾವೇಷದಾಳಿದ ನಟನಂತಾಡಿ ಕಾಲನ ಬಾುಗೈದುವಬಾಳುವೆಗೆ ಖೂಳಜನರು ವೋಲಾಡಿಕೊಂಬರಲ್ಲದೆ 4ನೆರೆ ಭೋಗಕೆ ರೋಗಭಯ ಸುತ ಸಂಬಂಧಿನೆರವಿಗೆ ವಿಯೋಗ ಭಯ ದ್ರವ್ಯಕ್ಕೆ ಭೂಪರ ಭಯವು ಚೋರ ಭಯ ಕಾಯಕೆ ಭಯಂಕರನಾದ ಕೃತಾಂತ ಭಯ ತಾಪತ್ರಯವೀಪರಿಯನೇಕ ಚಿಂತೆಯಲ್ಲಿ ಕೊರಗುತುರಿವ ಮನೆಯೊಳಗಿರುವೆ ಸುಖದಲೆಂಬರು ಮೂಕೊರೆಯಮೊಂಡರಲ್ಲದೆ * 5
--------------
ಗೋಪಾಲಾರ್ಯರು
ವಿದ್ಯಾ ಪ್ರಸನ್ನ ಶ್ರೀ ಯತಿಕುಲ ಗುರುರನ್ನ ಸದ್ವ್ಯೆಷ್ಣವ ಘನ್ನ ಪ. ಸಿದ್ಧಸಾಧನ ಮಧ್ವಮುನಿಯ ಚಿನ್ಹ ಧರಿಸಿದ ಬಹುಮಾನ್ಯ ಅ.ಪ. ವಿದ್ಯಾರತ್ನಾಕರ ಯತಿ ಕರಕಮಲದಿ ಜಾತ ಮುದ್ದು ಕುವರನೀತ ವಿದ್ಯಾವಾರಿಧಿ ಮುನಿಕರ ಸಂಜಾತ ಯತಿವರನಾದಾತ ಮಧ್ವಗ್ರಂಥಗಳ ಮನನ ಮಾಡಿದಾತ ಬಹುಮತಿಯುತನೀತ ಬುದ್ಧಿಕುಶಲದಿ ಬುಧರನು ಪೊರೆವಾತ ಸುಜನರ ಮನದಾತ 1 ವ್ಯಾಸತೀರ್ಥನ ಆಸ್ಥಾನಕೊಡೆಯರಾಗಿ ದುರ್ಗುಣಗಳ ನೀಗಿ ಆಸೆಯಿಂದ ಶ್ರೀ ಕೃಷ್ಣನ ಚನ್ನಾಗಿ ಪೂಜಿಸುತಲಿ ಬಾಗಿ ದಾಸತ್ವದ ಲಕ್ಷಣ ತಿಳಿದವರಾಗಿ ವಿಷಯ ಸಂಗ ತ್ಯಾಗಿ ಪಸನ್ನ ಕೃಷ್ಣನೆಂಬಂಕಿತವನೆ ಇಟ್ಟು ಪದರಚಿಸಿದ ಗುಟ್ಟು 2 `ವಿ' ಎನ್ನಲು ನರವಿಷಯ ಸಂಗದೂರ `ಧ್ಯಾ' ಎನೆ ಧ್ಯಾನವರ `ಪ್ರ' ಎನಲು ಸದ್ಗುಣನು `ನ್ನ' ಎನ್ನಲು ಶ್ರೀ ನರಹರಿ ತಾನೊಲಿವ `ತೀ' ಎನೆ ತೀರ್ವ ಭವ `ರ್ಥಾ' ಎನ್ನಲು ಪುರುಷಾರ್ಥ ಪಡೆದ ಭೋಗಿ `ರು' ಎನೆ ರುಜುಮಾರ್ಗಿ 3 ವಿದ್ಯಾಪ್ರಸನ್ನತೀರ್ಥರು ಎಂದೆನ್ನುತಲಿ ಸ್ಮರಿಪರ ಸಲಹುತಲಿ ಮುದ್ದುಕೃಷ್ಣ ಪಟ್ಟಾಭಿರಾಮನಂಘ್ರಿ ಸಚ್ಚರಿತ ಪ್ರಸಂಗಿ ಸದ್ವಿದ್ಯಗಳಿಗೆ ಗರ್ವರಹಿತ ಭಾವ ಬಹು ಸರಳ ಸ್ವಭಾವ ಹೃದ್ವನಜಸÀ್ಥನ ಕಾಂಬ ಮುನಿವರೇಣ್ಯ ಸದ್ಭಕ್ತ ಶರಣ್ಯ 4 ಮಂದ ಮತಿಯು ನಾನು ಕ್ಷಮಿಸು ತಂದೆ ನೀನು ಕುಂದನೆಣಿಸದೆ ಗುಣಗ್ರಹಿಸುತಲಿನ್ನು ಶ್ರೀ ಹರಿ ನುಡಿಸಿದನು ತಂದೆ ಮುದ್ದುಮೋಹನರ ಕೃಪೆಯಿಂದ ರಚಿತ ಪದದಂದ ಮಂದರಧರ ಗೋಪಾಲಕೃಷ್ಣವಿಠ್ಠಲ ಗರ್ಪಿತ ಗುಣಮಾಲ 5
--------------
ಅಂಬಾಬಾಯಿ
ವಿಧಿ ಭವ ಸುರಾರ್ಚಿತಪಂಕಜಾಂಘ್ರಿ ಸುಪೋಷಾ | ಲಕ್ಷ್ಮೀ ನಿವಾಸಾ ಪ ಶಂಖ ಚಕ್ರ ವರಾಭಯಕರ ಶ | ಶಾಂಕ ವದನ ಕಳಂಕ ರಹಿತನೆಕಿಂಕರನ ಅವಗುಣಗಳೆಣಿಸದೆ | ಪಂಕಜಜ ಪರಿಪಾಲಕನೆ ಶ್ರೀ ಅ.ಪ. ಶುಭ ಭಾರ ಕಾರುಣಿಕ ಪರಿ | ವಾರ ಮಾಮನೊಹಾರ ಮೂರುತಿ1 ಭವ ಕೈಟಭಾರಿ ಮಹಾಮಹಿಮ ಗುಣ ||ಕೂಟದಿಂದಲಿ ಜಗವ ನಿರ್ಮಿಸಿ | ಹಾಟಕೋದರ ಹರ ಪ್ರಮುಖ್ಯರನೀಟು ಸೂತ್ರದಿ ಈಟದಿಂದದಿ | ಚೂಟದಲಿ ಚೆಲ್ಲಾಟವಾಡಿದ 2 ಪರ ಕಲುಷ ಕಾ | ನನವ ಖಂಡಿಸೊ ವ್ಯಾಸ ವಿಠ್ಠಲಮನ ವಚನ ಕಾಯದಲಿ ನಮಿಸುವೆ | ಘನ ಮಹಿಮ ಗಜವರದ ಸುಂದರ 3
--------------
ವ್ಯಾಸವಿಠ್ಠಲರು
ವಿನುತ ಪದ ಪ ಭವ ಸರ್ವಜೀವ ಹೃದ್ವನಜ ನಿವಾಸಿ ಅ.ಪ ಕಾನನ ಗಂಭೀರ ಸುಗುಣದಾರ ಸುವಿಚಾರಧೀರ | ರಘು ಧರಣಿಜಾ ಕರುಣಾಕರ ದಿನಕರ ಕುಲಮಣಿ ಜನ ವರ ಶುಭಕರ1 ಖರವಿದಾರ ಕಲಿ ಕಲ್ಮಷನಾಶನ ನಾಮ ಶ್ರೀಕರ ಸುಂದರ ಶ್ಯಾಮ ಭಾಸುರ ಶರೀರ ಸಂಪೂರ್ಣ ಕಾಮ ತುಳ- ಸೀದಳಧಾಮ ವಿಭೀಷಣ ಪ್ರೇಮ 2 ಕಮಠ ಕಿಟ ನರಹರಿ ವಾಮನರೂಪ ಭಾರ್ಗವ ಕರಧೃತ ಚಾಪ ಸುಜ್ಞಾನದೀಪ ವಸುದೇವ ತನಯ ಜಿನ ಜಾತ ಕಲ್ಕಿ ಗುರುರಾಮ ವಿಠಲ 3
--------------
ಗುರುರಾಮವಿಠಲ
ವಿಬುಧ ಪ್ರಿಯ ವಿಠಲ | ಶುಭದ ಪೊರೆ ಇವನಾ ಪ ಅಬುಜ ಜಾಂಡೋದರನೆ | ಕುಬುಜೆ ಸದ್ ವರದಾ ಅ.ಪ. ದಾಸನಾಗಲು ಇವಗೆ | ಆಶೆ ಪ್ರೇರಕನಾಗಿವಾಸು ದೇವಾಖ್ಯ ತೈ | ಜಸನೆ ಕಾರ್ಯರೂಪಿಸೂಸಿತವ ರೂಪವನು | ಲೇಸಾಗಿ ತೋರಿಸೆಹೆಕೇಶವನೆ ಅದನೆ ಉಪ | ದೇಶಿಸಿಹೆ ಹರಿಯೆ 1 ಪ್ರೀಯ ಅಪ್ರೀಯ ಉ | ಭಾಯಾನು ಭವದಲ್ಲಿಆಯುತನು ನೀನಾಗಿ | ಉದ್ವೇಗ ಕೊಡದೇನಿಯುತಕರ್ಮದಿ ರತನ | ದಯದಿಂದ ನೀಮಾಡಿಹಯಮೊಗಾಖ್ಯ ಹರಿಯೆ | ಕೈಯಪಿಡಿ ಇವನಾ 2 ಲೋಕವಾಕ್ಯದಿ ವಿರಸ | ಲೋಕೈಕನಾಥನುವಾಕ್ಯದೊಳು ರತಿಯನ್ನೆ | ನೀ ಕೊಟ್ಟಿ ಕಾಯೋ |ಮಾಕಳತ್ರನದಾಸ | ಸಂಕುಲದಿ ಸದ್‍ಭಕ್ತಿಶ್ರೀಕರನೆ ನೀನಿತ್ತು | ಸಾಕ ಬೇಕಿವನಾ 3 ಮಧ್ವಮತದಲಿ ದೀಕ್ಷೆ | ಶುದ್ಧ ಹರಿ ಗುರುಭಕ್ತಿಅದ್ವೈತ ಕ್ರಯವರಿಯೆ | ವಿದ್ಯೆ ಸಂಘಟಿಸೀಕೃದ್ಧಖಳ ನಿವಹಗಳ | ಪ್ರಧ್ವಂಸಗೈಯುತಲೀಉದ್ದರಿಸೋ ಇವನನ್ನು | ಮಧ್ವಾಂತರಾತ್ಮ 4 ವೇದ ಕದ್ದೊಯ್ದವನ | ಬಾಧೆ ನೀ ಪರಿಹರಿಸಿಸಾದುಗಳ ಪೊರೆದಂತೆ | ಆದರಿಸಲಿವನಾಮೋದಿ ಗುರು ಗೋವಿಂದ | ವಿಠಲನೆ ಬಿನ್ನವಿಪೆಮೈದೊರಿ ಸಲಹುವುದು | ಸಾಧುವಂದಿತನೇ 5
--------------
ಗುರುಗೋವಿಂದವಿಠಲರು
ವಿಶೇಷ ಸಂದರ್ಭದ ಹಾಡು ಶ್ರೀ ವರದೇಂದ್ರಾಖ್ಯಾನ ಉತ್ಸವ ವರ್ಣನೆ 39 ಇರುಳುಹಗಲು ತವಸ್ಮರಿಸುತಲಿಹ ಭಕು - ತರಿಗಿಹ ಪರಸುಖಸುರಿಸುವ ಶ್ರೀ ಗುರು ಪ ಲಿಂಗಸುಗುರುನಿವಾಸ ಭಕ್ತ ಜಂಗುಳಿ ದುರಿತವಿನಾಶ ಮಂಗಳ ಚರಿತ ಮೌನೀಶ ವಿಹಂಗವಾಹನ ನಿಜದಾಸ 1 ಸಿರಿ ವಸುಧಿಜಾಪತಿ ಪದದೂತ ವಸುಧಿಯೊಳಗೆ ವಿಖ್ಯಾತ ಸುಮನಸರ ಸುವಂಶಜನೀತ 2 ಸುದರುಶನ ಮಾಲಾ ಕಲುಷ ನಿರ್ಮೂಲಾ 3 ವಾಯುಮತಾಬ್ಧಿವಿಹಾರಾ ಕಾಷಾಯ ಕಮಂಡಲಧಾರಾ ಮಾಯಿ ಜಲಜ ಚಂದಿರ ಗುರುರಾಯರ ಮಹಿಮೆಯಪಾರಾ 4 ಪಂಡಿತಮಂಡಲಭೇಶ ಪಾಖಂಡಿಮತೋರುಗವೀಶ ಕುಲಿಶ ತನ್ನ ತೊಂಡನೆಂದವರಘನಾಶ 5 ತಿಮಿರ ತರಣಿಯೊ ಕನಳನೀ ಮುನಿಯೋ 6 ಸುರನದಿಪತಿಯೊ ಧೈರ್ಯದಿ ಭೂಭತ್ಪತಿಯೊ ಚಾತುರ್ಯದಿ ವರಬ್ರಹ್ಮಸ್ಪøತಿಯೊ 7 ದಾನದಿರವಿಜನೆನಿಪನು ಸುವಿಧಾನದಿ ಕ್ಷಿತಿಯ ಪೋಲುವನು ಮೌನದಿ ಶುಕಮುನಿವರನು ಅಸಮಾನಯೋಗಿ ಎನಿಸುವನು 8 ಹರಿಸ್ಮರಣಿಯಲಿರುತಿರುವ ನರಹರಿನಿಂದಿಪ ಮತತರಿವ ಹರಿಪನೆಂಬರೆ ಪೊರೆವ ಶ್ರೀ ಹರಿಯಿವರಗಲದಲಿರುವ9 ಪ್ರಾಣೇಶ ದಾಸರೆನಿಪರು ಶ್ರೀ ಶ್ರೀನಿವಾಸನ ವಲಿಸಿಹರು ಜ್ಞಾನಿಗಳಿಗೆಅತಿ ಪ್ರೀಯರು ಅಸಮಾನದಾಸರೆನಿಸುವರು 10 ವರಕÀವಿ ಶ್ರೀ ಜಗನ್ನಾಥಾರ್ಯರ ಕರುಣ ಪಡೆದನವರತ ಧರಣಿಯೊಳಗೆ ವಿಖ್ಯಾತ ನರಹರಿ ಯಸ್ಮರಿಸುತಿಹ ನಿರುತ 11 ಹಿಂದಿನಸುಕೃತದಿ ಫಲದಿ ವರದೆಂದ್ರಾರ್ಯರು ವಂದಿನದಿ ಚಂದದಿ ದಾಸಗೃಹದಿ ನಡೆತಂದರು ಬಹುಸಂಭ್ರಮದಿ12 ಬಿನ್ನೈಸಿದ ಭಕುತಿಂದ ಮುನಿಮಾನ್ಯದರುಶನದಿಂದ ಧನ್ಯಧನ್ಯನಾನೆಂದ ಪಾವನ್ನವಾಯ್ತು ಕುಲವೆಂದ 13 ದಾಸಾರ್ಯರ ಭಕುತಿಯನು ನಿರ್ದೋಷವಾದ ಙÁ್ಞನವನು ತೋಷಬಡುತ ಮುನಿವರನು 14 ಶ್ರೇಷ್ಠನಾದಯತಿವರನು ಉತ್ಕøಷ್ಟವಾದಸ್ಥಳವನ್ನು ನಮಗೆನುತಿಹನು15 ದೇಶಕರಿಂಗಿತವರಿದು ವರದಾಸಾರ್ಯರು ಕೈಮುಗಿದು ಈ ಶರೀರತಮ್ಮದೆಂದು ಮಧ್ವೇಶಾರ್ಪಣವೆಂತೆಂದು 16 ತಪ್ಪದೆ ಸರ್ವದೇಶದಲಿ ತಾಕಪ್ಪವ ಕೊಳುತಲ್ಲಲ್ಲಿ 17 ಸಿರಿ ನಿಲಯನಂಘ್ರಿ ಸ್ಮರಿಸುತಲಿ ಕಳೇವರ ತ್ಯಜಿಸಿದರಲ್ಲಿ ಆಬಳಿಕ ಲಿಂಗಸುಗೂರಲ್ಲಿ 18 ತುಲಸಿ ವೃಕ್ಷರೂಪದಲ್ಲಿ ಇಲ್ಲಿನೆಲೆಸಿಹವೆಂದು ಸ್ವಪ್ನದಲಿ ಗಂಜಿಯ ಮರಡಿಯಲಿ ಇದ್ದಶಿಲೆ ತರಿಸೆಂದು ಪೇಳುತಲಿ 19 ಬಣವಿಯ ತ್ವರ ತೆಗೆಸುತಲಿ ತರುಮನುಜನಸರಿನೋಡುತಲಿ ಮುನಿ ವಚನವನಂಬುತಲಿ ಶಿಲೆಯನು ತಂದಿರಿಸಿದರಿಲ್ಲಿ 20 ಪುರುದಲಾಗಯಿರುತಿಹನು ತ್ವರದಿಂದಲಿ ಕಳುಹಿದನು ನರಹರಿ ಸಾಲಿಗ್ರಾಮವನು 21 ವರಪುಣ್ಯ ಕ್ಷೇತ್ರದಲಿಂದ ಮುನಿವರ ತಾನಿಲ್ಲಿಗೆ ಬಂz ಶರಣರ ಪಾಲಿಪೆನೆಂದ ಸುಖಗರೆಯುತ ಅಲ್ಲಿಯೆ ನಿಂದ 22 ಸುಂದರಪಾದುಕೆಗಳನು ಪುಣೆಯಿಂದಿಲ್ಲಿಗೆ ತರಿಸಿದನು ವಂದಿಸುವವರ ಘಗಳನ್ನು ತ್ವರದಿಂದ ತರಿದು ಪೊರೆಯುವನು 23 ದಾಸಕುಲಾಗ್ರಣಿಯನಿಪ ಪ್ರಾಣೇಶ ಕರಾರ್ಚಿತ ಮುನಿಪ ದೇಶಿಕ ವರರೆಂದೆನಿಪ ರಘುಜೇಶ ಪದಾಂಬುಜ ಮಧುಪ 24 ವೃಂದಾವನದಿ ನಿಂದಿರುವ ರಾಘವೇಂದ್ರರ ಧ್ಯಾನದಲಿರುವ ಅಂದಣೇರಿ ತಾಮೆರೆವ ಭಕ್ತವೃಂದವ ಕಾದುಕೊಂಡಿರುವ 25 ಪ್ರತಿಗುರುವಾಸರದಲ್ಲಿ ಜನತತಿ ಸಂಭ್ರಮದಿಂದಿಲ್ಲಿ ಮಿತಿಯಿಲ್ಲದೆ ಭಕುತಿಯಲಿ ನಲಿಯುತ ವಾಲ್ಗೈಸುವರಿಲ್ಲಿ 26 ಪ್ರತಿ ಪ್ರತಿ ವತ್ಸರದಲ್ಲಿ ಗ್ರೀಷ್ಮಋತು ಆಷಾಢಮಾಸದಲ್ಲಿ ತಿಥಿ ಷಷ್ಟಿಯ ದಿವಸದಲಿ ದ್ವಿಜತತಿ ಸುಭೋಜನ ವಿಲ್ಲಿ 27 ಮರುದಿವಸದ ಸಂಭ್ರಮವು ಶ್ರಿಂಗರಿಸಿದ ರಥದುತ್ಸವವು ಪರಿಪರಿ ಜಸಂದಣಿಯು ಇದು ವರಣಿಪುದಕೆ ದುಸ್ತರವು 28 ಯತಿವರ ಪರಮಾನಂದದಿಂದ ರಥವೇರಿ ಬರುವದು ಚಂದ ಅತಿಹರುಷದಿ ಜನವೃಂದಗುರು ಸ್ತುತಿಮಾಳ್ಪದು ಮುದದಿಂದ 29 ಝಾಂಗಟಿ ದಮ್ಮುಡಿಯು ಕಾಲುಗೆಜ್ಜೆಕಟ್ಟಿದಡಿಯುದಿವ್ಯ ಮೇಲು ಸರದ ಪದನುಡಿಯು 30 ಭೇರಿ ಭಜಂತ್ರಿ ತುತ್ತೂರಿಗಂಭೀರದಿ ಹೊಡೆವನಗಾರಿ ಅಂಬರ ಮೀರಿ 31 ಪರಿ ಪರಿಧೂಪಗಳು ಫಲÀಗಳನೈವೇದ್ಯಗಳು ಮಂಗಳ ಕರ್ಪೂರ ದೀಪಗಳು 32 ಥಳಿಪ ಪತಾಕಿ ಬೆತ್ತಗಳು ಮಿಗಿಲು 33 ಸಂತಜನರ ಜಯಘೋಷ ಅತ್ಯಂತ ಮನಕೆ ಸಂತೋಷ ಕುಣಿಯುತಿಹ ಶೀಶ 34 ಕಂತುಪಿತನದಯದಿಂದ ಇಲ್ಲಿ ನಿಂತಿಹ ಸುರರಾನಂದ ಎಂತೊರಣಿಪೆ ಮತಿಮಂದ ದುರಂತ ನಿಮ್ಮಯ ಗುಣವೃಂದ 35 ಸುವಿನಯದಿಂದ ನಮಿಸುವರು ಭಯವನು, ಈಡಾಡುವರು ತಮ್ಮಬಯಕೆ ಪೂರೈಸಿಕೊಳ್ಳುವರು 36 ಜ್ವರಛಳಿ ವ್ಯಾಧಿ ಪೀಡಿತರು ಮತ್ತುರಗವೃಶ್ಚಿಕದಂಶಿಕರು ಕುಂಟರು ಬಧಿರÀರು 37 ಪರಿಪರಿಗ್ರಹಪೀಡಿತರು ಬಹುಪರಿ ಶುಭಕಾಮಿಪ ಜನರು ಪೊರೈಸಿಕೊಂಬುವರು 38 ಸಾಷ್ಟಾಂಗದಿ ವಂದಿಪರು ಅಭಿಷ್ಟೇಯ ಪಡೆದುಕೊಳ್ಳುವರು ಕಷ್ಟಗಳನು ನೀಗುವರು ಸಂತುಷ್ಟರಾಗಿ ತೆರಳುವರು 39 ಇದುಪುಣ್ಯಕ್ಷೇತ್ರ ವೆನಿಸಿತು ಶ್ರೀಪದುಮೇಶಗಾವಾಸಾಯ್ತು ಮುದದಿಂದನಲಿಯುವರಾಂತು 40 ಈಸುಪದ ಪೇಳ್ವನೆಧನ್ಯ ಜಗದೀಶನ ತುತಿಸಿದ ಪುಣ್ಯ ದೇಶಿಕಪತಿ ಮುನಿಮಾನ್ಯ ವರದೇಶ ವಿಠಲಾಗ್ರಗಣ್ಯ 41
--------------
ವರದೇಶವಿಠಲ
ವಿಶ್ವ 50 ವಿಶ್ವ ರಮೇಶ | ಪಾಲಿಸೆನ್ನನು ದಕ್ಷಿಣಾಕ್ಷಿನಿವಾಸ | ರೂಪಾಂತರದಿ ನೀ | ವಾಮನಯನದಿ ಕಾಶ | ಶರಣು ಶರಣು | ಸರ್ವೇಶ | ಜಾಗೃತ ಕಾಲದಿ ಸರ್ವ ವ್ಯಾಪಾರಗಳ ಮಾಡಿಸುವಂಥ ಸೌಭಾಗ್ಯ ದಾತನೇ ಪ ಯಾಜ್ಯ ಸ್ವರೂಪದಿಂದ ನೀ ಯರ್ಜು ನಾಮ | ಉತ್ಥಾಪಕೊತ್ತ ನಾಮ ಸರ್ವಪಾಪೋಜ್ಜಿತ ಉನ್ನಾಮನೇ ದೀಪ್ತ ಇಂಧನ ವಾಮ ಮಂಗಳ | ಸರ್ವ ವೇದಗಳಿಂದ ಸರ್ವದಾ ವಾಣಿ ಪ್ರಾಣ ಸಂಸ್ತುತ್ಯ ಶ್ರೀಶನೇ ದಿವ್ಯದೃಷ್ಟಿ ಗೋಚರ ವಿರಾಜನೇ ಶ್ರೀ ರಮಾ ಸಮೇತನಾಗಿಹ ಅಮೃತ ಜಯ ಜಯ 1 ಭಯ ವಿವರ್ಜಿತ ಅಭಯ | ಗುಣಪೂರ್ಣ ಬ್ರಹ್ಮ ಪುರುಷ ಸರ್ವ ಉದಕಾದ್ಯ ಅಖಿಳವಸ್ತು ಅಸಂಗವಾಗಿವೆ ಎನ್ನ ಕಂಣ್ಗಳು | ಸರ್ವದಾ ಸೌಂದರ್ಯ ರೂಪ ಶ್ರೀವಾಮನನೆ ಎನ್ನ ಎಡದ ಕಣ್ಣಲಿ ಸರ್ವ ನಿಜ ಸದ್ಭÀ್ಭಕ್ತಭಾಮನ ದಕ್ಷಿಣಾಕ್ಷಿಗತ ನಿಯಾಮಕ | 2 ವಿಶ್ವ ಶರಣು ಶುಭಾಂಗ | ಎರಡು ಪಾದವು ನಾಲ್ಕು ಹಸ್ತವು ಏಕ | ಕುಂಡಾದಂಡ ಹೀಗೆ ಜ್ಞಾನ ಸುಖ ಸಪ್ತಾಂಗ ಪಾಹಿಮಾಂ ಮಂಗಳಾಂಗ ಹತ್ತು ಮೇಲೊಂಬತ್ತು ಮುಖಗಳು ಮಧ್ಯ ಗಜಮುಖ ಮಂಗಳಪ್ರದ | ಮೋದಮಯ ನರಮುಖ ಒಂಬತ್ತು ಬಲದ ಪಾಶ್ರ್ವದಿ ಹಾಗೂ ಎಡದಿ | ವಿಶ್ವ ಚಕ್ಷುಸ | ಪದ್ಮಜನ ಪಿತ ಶ್ರೀ ಪ್ರಸನ್ನ ಶ್ರೀನಿವಾಸ ವಿಶ್ವನೇ ಶರಣು ಸಂತತ | 3
--------------
ಪ್ರಸನ್ನ ಶ್ರೀನಿವಾಸದಾಸರು
ವಿಷ್ಣು ತೀರ್ಥರಪಾದ | ನಿಷ್ಠೆಯಿಂದಲಿ ಭಜಿಸೆಇಷ್ಟಾರ್ಥ ಸಲಿಸೂವರ್ | ಕೃಷ್ಣಪೂಜಕರೂ ಪ ಜಿಷ್ಣುಸಖ ಶ್ರೀ | ಕೃಷ್ಣ ಭಕುತರುಶ್ರೇಷ್ಠ ದಂಪತಿ | ಗರ್ಭಜಾತರುಸುಷ್ಠಜಯಮುನಿ | ಸೇವೆಯಿಂದಲಿಇಷ್ಟವರದಿಂ | ದುದಯರಾದರು 1 ಬಾಲ್ಯದಲ್ಲು ಪನೀತ | ಆರ್ಯರಿಂದು ಪದಿಷ್ಟಆರ್ಯ ಐಜೀವರ್ಯ | ಗುರುಕುಲವಸಿತ |ಕ್ರೌರ್ಯ ಹರಿಜಪ | ದೈರ್ಯದಿಂದಲಿವೀರ್ಯವತ್ತರ | ಜಪಿಸಿ ಗುರುಸುತವರ್ಯನಪಮೃತಿ | ಕಳೆದು ಗುರುವಿಂಮಾನ್ಯವಂತನು | ಎನಿಸಿ ಮೆರೆದ 2 ಮಲದ ಅಪಹಾರಿಯ | ಜಲಪ್ರವಾಹದಿ ನಿಂದುಘಳಿಗೆ ಇರಲು ಉದಯ | ವಲಿಸಿ ಮಧ್ವವಿಜಯಒಲಿಮೆಯಿಂದಲಿ | ಸೂರ್ಯನಘ್ರ್ಯವಕಾಲಮೀರದೆ | ತಾನು ಕೊಡುತಲಿಮೂಲಗ್ರಂಥವ | ತಿಳಿಯ ಬೋಧವಇಳೆಯ ಸುರರಿಗೆ | ಪೇಳ್ದ ಮಹಿಮಾ 3 ಅವಧೂತ ಚರ್ಯದಿ | ಅವನಿಯೊಳ್ಚರಿಸುತ್ತಭುವನ ಪಾವನ ಸುಧೆ | ದಿವಿಜರಿ ಗುಣಿಸೀ |ಶ್ರವಣ ಗೈಸುತ | ಸುಧೆಯ ಗ್ರಂಥವಅವನಿಯೊಳು | ತತ್ವಾರ್ಥಬೋಧಿಸಿಪ್ರವರ ಭೂಸುರ | ಮುಕ್ತಿಮಾರ್ಗದಹವಣೆ ಗೈದಿಹ | ಭುವಿಯದಿವಿಜ 4 ವನವನಚರಿಸುತ್ತ | ಮುನಿವಳ್ಳಿಯಲಿಮುನಿಯೋಗ್ಯವೆನಿಸುವ | ವಾನಪ್ರಸ್ಥಾಶ್ರಮದಿ |ಘನಸುವ್ರತವನೆ | ಅಸಿಯಪತ್ರದಿಮನವನಿರಿಸುತ | ಗಣ್ಯನಾದೆಯೊಅನಘ ಹರಿಕಾ | ರುಣ್ಯ ನಿನ್ನಲಿಗಣನೆಗೈಯ್ಯಲು | ಮನುಜಗಸದಳ 5 ಯತಿ ಸತ್ಯವರರಿಂದ | ಯತಿ ಆಶ್ರಮವ ಪೊಂದಿಕ್ಷಿತಿಯ ಸಂಚರಿಸುತ್ತ | ಅನ್ನಾಳಿಗಾಗಮೀಸೀ |ಹಿತನು ದೇಶಾದಿ | ಪತಿಯ ರೋಗವಹತಗೈದು ಅನ್ನವ | ಜೊತೆಲುಂಬುವಯತನ ಸಾಧಿತ | ಪ್ರಾಪ್ತಕ್ಷಾಮವಹತವ ಗೈಸಿದೆ | ರಮೆಯನೊಲಿಸೀ 6 ಬೋಧ | ಗ್ರಂಥಗಳ್ರಚಿಸೀ |ಮೋದದಿಂ ವೃಂದಾವನಸ್ಥರುಸಾದು ಸೇವೆಗೆ ಅಭಯನೀಡುತನಾದಗುರು ಗೋವಿಂದ ವಿಠಲನಮೋದ ಧ್ಯಾನಾಸಕ್ತರಾಗಿಹ7
--------------
ಗುರುಗೋವಿಂದವಿಠಲರು
ವೀಳ್ಯವ ಕೈಕೊಳ್ಳೊ ನಿನ್ನರಸಿಯೊಳು ನೀ ಸರಸದಿಂದಲಿ ಪ. ಯಾಲಕ್ಕಿ ಲವಂಗ ಬಾಲ ಮೆಣಸು ಸಹ ಲೋಲಾಕ್ಷಿ ತಂದಿಹ ವೀಳ್ಯವ ಬಾಲಕೃಷ್ಣನೇ ಶೃಂಗಾರದಿ 1 ರತ್ನದ ತಟ್ಟೆಯಲಿ ಮುತ್ತಿನ ಸುಣ್ಣವು ಬುತ್ತಿ ಚಿಗುರಿನ ವೀಳ್ಯವ ಹಸ್ತಿ ವರದನೇ ಶೃಂಗಾರದಿ 2 ಶ್ರೀಶ ಶ್ರೀ ಶ್ರೀನಿವಾಸ ವಾಸುಕಿಶಯನ ತಡವ್ಯಾಕೊ ಶೃಂಗಾರದಿ 3
--------------
ಸರಸ್ವತಿ ಬಾಯಿ