ಒಟ್ಟು 2143 ಕಡೆಗಳಲ್ಲಿ , 112 ದಾಸರು , 1724 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶರಣನ್ನ ಮಾತು ಲಾಲಿಸೊ ಪ ಭವ ಕರವ ಪಿಡಿದು ಪೊರೆ ಎಂದು ನಿನ್ನ ನಾ ಕರೆವೆ ಬಾಯ್ದೆರೆವೆ ಆಲ್ವರಿವೆ ನತಜನ ಸುರತರುವೆ ಅ.ಪ ಮಧ್ವಮುನಿ ಸುಮತೋದ್ಧಾರಕ ಯತಿಕುಲ ತಿಲಕ ಪಾವಕ | ವಿದ್ವತ್ ಜನತತಿ ಪಾದ ಪದ್ಮಕೆ ನಮಿಸುವೆ ಶುದ್ಧ ಸುಜ್ಞಾನವ ನೀಡೊ ಅಘದೂಡೋ ಕೃಪೆ ಮಾಡೋ | ಸುತನೆಂದು ನೋಡೋ 1 ವಿರಚಿಸಿ ಗ್ರಂಧತ್ರಯವ | ಬೋಧಿಸಿ ಭೇದ ಪೊರೆದಿ ದ್ವಿಜ ಪರಿವಾರವ | ನೆರೆನಂಬಿದ ಭೂಪಗೆ ಧಾವಿಸುತ ಭರದಿ ಬರುವ ಕುಹಯೋಗ ಕಂಟಕವ ದಯದಿ ನೀತರಿದಿ | ಸುಖಗರೆದಿ ಧಾರುಣಿಯೊಳು ಮೆರಿದಿ 2 ವಂದಿಪೆ ಸುಸುಗತಿದಾಯಕ ಶ್ರೀವರ ಶಾಮ ಸುಂದರ ಕೃಷ್ಣೋಪಾಸಕ ತಂದೆ ಎಂದು ನಿನ್ನ ಪೊಂದಿ ಪ್ರಾರ್ಥಿಸುವೆ ಬಂದು ಜವದಿ ಪುರಂದರದಾಸರ ಪ್ರಿಯಾ 3
--------------
ಶಾಮಸುಂದರ ವಿಠಲ
ಶರಣರ ಪರಿಪಾಲಾ ಶ್ರೀಲೋಲಾ ಪರಮ ಸುಂದರ ಬಾಲಾ ಪ. ರುಕ್ಮಿಣಿ ರಮಣಾ ರಕ್ಕಸ ಹರಣಾ ಶಕ್ರಾದಿನುತ ಚರಣಾಭರಣಾ 1 ಮಧ್ವ ಮುನೀಶಾ ಶುದ್ಧ ಪ್ರಕಾಶಾ ಪದ್ಮನಾಭ ಮನಶುದ್ಧಿಯ ನೀಡೋ 2 ಕಾಮಿತ ಫಲದಾ ಕೋಮಲ ಪಾದಾ ಶ್ರೀ ಮನೋಹರ ಸುರ ಕಾಮ್ಯ ಪ್ರದಾತಾ 3 ಮೃಡ ಸುರ ಪ್ರೀಯಾ ಧೃಡಮನ ಕೊಡು ನಿನ್ನಡಿಯಲಿ ಜೀಯಾ 4 ಗೋಪಿಯ ತನಯಾ ನೀ ಪಿಡಿ ಕೈಯ್ಯಾ ಗೋಪಾಲಕೃಷ್ಣವಿಠ್ಠಲ ಹೇ ಜೀಯ್ಯಾ 5
--------------
ಅಂಬಾಬಾಯಿ
ಶರಣಾಗತ ರಕ್ಷಕ ಕರುಣಾಂಬುಧೆ ಪರಿಪಾಲಿಸುವ ಮೊರೆ ಪಂಕಜಾಕ್ಷ ಪೊರೆವುದು ಲೇಸು ನಿರಾಕರಿಸದೆ ಹರಿ ನಿನ್ನ ಚರಣಕಮಲವನು ಸ್ಮರಿಸುತಲಿರುವೆನು ಪ ನಂದನಂದನ ಮುನಿವೃಂದ ವಂದಿತ ರಾಕೇಂದುವದನ ಗೋ ವಿಂದ ಕೃಷ್ಣಾ ಮಂದರಧರ ಮುಚುಕುಂದವರದ ಸಂ- ಕುಂದರದನ ಶ್ರೀ ಮುಕುಂದ ಶೌರಿ ಬಂಧನ ಮೋಚನ ಆಪದ್ಭಾಂಧವ ಶೌರೇ 1 ವೇಣುಗೋಪಾಲ ಪುರಾಣಪುರುಷ ಸುಮ- ಬಾಣಜನಕ ಸಾಮಗಾನ ಲೋಲ ಮಾಧವ ಚತು- ವಿನುತ ವiಹಾನುಭಾವ ಶ್ರೀನಿ- ವಾಸಾಚ್ಯುತಾಶ್ರೀತ ಕಲ್ಪತರು ಚಕ್ರಪಾಣಿ ಪದ್ಮೋದರ ಘೋರರೂಪ ಭಂಜನ ದೇವಾದಿದೇವ ವಿಷ್ವಕ್ಸೇನ ಜನಾರ್ದನ ಶ್ರೀ ವತ್ಸಲಾಂಛನ 2 ಹರಿಸರ್ವೋತ್ತಮ ಮರುತಾಂತರ್ಗತ ಪರಮಾತ್ಮ ಗರುಡವಾಹನ ಶುಭಕರಚರಿತ ಮುರಸೂದನಾನಂತ ಮುಕ್ತಿದಾಯಕ ಜಗದ್ಭರಿತ ಕೇಶವ ಕೌಸ್ತುಭಾಲಂಕೃತ ವರದ ಅಹೋಬಲ ಗಿರಿವಾಸ ವಸುಧೇಶ ಭಾಸುರ ಕೀರ್ತಿಸಾಂದ್ರ 3
--------------
ಹೆನ್ನೆರಂಗದಾಸರು
ಶರಣಾಗತ ರಕ್ಷಾಮಣಿಯೆ ಶ್ರೀ ಹರಿಯೆ ಪ ಶರಣಾಗತ ಜನ ವರ ರಕ್ಷಾಮಣಿಯೆಂಬ ಬಿರುದಿನಿಂದಲಿ ಮೆರೆವ ಕರುಣಾ ಭರಣ ಕಾಮಿತ ವರಪ್ರದಾಯಕ ಅ.ಪ. ಜನನ ಮರಣ ರಹಿತ ಜಗದ ಜನ್ಮಾದಿ ಕರ್ತ ಜನುಮ ಜನುಮದಲ್ಲಿ ಜಗದ ಜೀವರಿಗೆಲ್ಲಾ ಅನಿಮಿತ್ತ ಬಂಧುವೆಂದು ನಿನ್ನಯ ಪಾದ ವನಜಗಳನು ನಾವಿಂದು ನಂಬಿಹೆವಿನ್ನು ವನಜನಾಭನೇ ನೀ ಬಂದು ಕಾಯಬೇಕೆಂದು ತನುಮನಂಗಳ ನಿನಗೆ ಒಪ್ಪಿಸಿ ಅನುನಯದಿ ಶಿರ ಮಣಿದು ಬೇಡುವೆ ಅನಘ ಅನುಪಮ ಗುಣಗಣಾಂಬುಧಿ ಅನಿಮಿಷೋತ್ತಮ ಅಪ್ರಮೇಯನೆ 1 ಕಾಮಜನಕ ಪೂರ್ಣಕಾಮ ಆಶ್ರಿತ ಜನ ಕಾಮಧೇನುವೆ ಕೋಟಿ ಕಾಮಲಾವಣ್ಯನೆ ಶ್ರೀ ಮನೋಹರ ಗಂಭೀರ ಸುರುಚಿರ ಘನ ಸನ್ನುತ ಮಹಿಮ ಸಾಮಜನರ ಉದ್ಧಾರ ಭಕ್ತ ಮಂದಾರ ಸಾಮಗಾನ ಪ್ರೇಮ ಜಗದಭಿ ರಾಮ ರಾಕ್ಷಸ ಭೀಮ ಮಂಗಳ ನಾಮ ಸುರಮುನಿ ಸ್ತೋಮ ಸನ್ನುತ ಸ್ವಾಮಿದೇವ ಲಲಾಮ ನಮೊ ನಮೊ 2 ಮಾಧವ ಅರ ವಿಂದಲೋಚನ ಪೂರ್ಣಾನಂದ ಸ್ವರೂಪನೆ ಎಂದೆಂದು ನೀನಲ್ಲದೆ ಗತಿ ಎಮಗಿಲ್ಲ ವೆಂದು ನಿನ್ನನು ಬಿಡದೆ ಕರಿಗಿರೀಶನೆ ತಂದೆ ಯೆಮ್ಮಯ ಕುಂದುಗಳ ನೀ ನೊಂದನೆಣಿಸದೆ ಬಂದು ಸಲಹುವು ಇಂದು ಕರುಣಾ ಸಿಂಧು ನತಜನ ಬಂಧು ನರಹರಿ3
--------------
ವರಾವಾಣಿರಾಮರಾಯದಾಸರು
ಶರಣು ಕೃಷ್ಣವೇಣಿ ಶರಣು ಪುಣ್ಯಾಭರಣಿ ಶರಣು ಇಹಪರದಾಯಿನೀ ಪ ಸರ್ವವ್ಯಾಪಕನಿರಂಜನನೆನಿಪ ಶ್ರೀವಿಷ್ಣು ಉರ್ವಿಯೊಳು ದ್ರವರೂಪದೀ ಹರ್ವಿತಿಹಸಂದೇಹವಿಲ್ಲದಕೆ ಭಕುತಿಯಲಿ ಅರ್ವವನೆ ಗತಿಯ ಪಡದಾ ಮುದದಿ 1 ಅಚ್ಯುತನು ಕೃಷ್ಣನದಿ ಹರಿವುತಿಹನೆಂದು ಮೆಚ್ಚಿವೇಣಿಯ ನಾಮದಿ ನಿಚ್ಚ ಸತ್ಸಂಗವೆಂದರಿತು ಕೂಡಿದ ಶಿವನು ಸಚ್ಚರಿತನಾಮಮಹಿಮಾನೇಮಾ 2 ನಿನ್ನ ಪೂರೆಲುದಿತ ಪವನದಿ ದುರಿತವೋಡಿದವು ಇನ್ನು ಮಿಂದವನ ಗತಿಯಾ ಬಣ್ಣಿಸುವ ನಾವನೆಲೆ ಜನನೀತಾರಿಸುಯನ್ನ ಮನ್ನಿಸು ಗುರುವಿನಾಸುತನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಗಿರಿಯ ತಿಮ್ಮಾ | ಶರಣು ಪುರುಷೋತ್ತಮಾ | ಶರಣು ಮಹಾ ಮಹಿಮ | ಶರಣು ಪರಬೊಮ್ಮಾ | ಪರಿಹರಿಸುವದು ಹಮ್ಮಾ ಪ ವರೇಣ್ಯ | ಭಂಗ | ಹರಿಸಿದ ಶಿರಿ ರಂಗ | ವಿಹಂಗ | ತುರಗ ತುರಗ ವದನ | ಸದನ ಕರ ಮುಗಿವೆನೈಯಾ | ಕರದ ಮಾತಿಗೆ ಜೀಯಾ | ಭರದಿಂದ ಕೊಡು ಮತಿಯಾ 1 ಪಾದದಲಿ ಪೆಣ್ಣಾ | ಮೋದದಲಿ ಪೆತ್ತ ಚಿಣ್ಣಾ | ನಾದ ಬಲು ಪಾವನ್ನಾ | ಭೇದಾರ್ಥ ಜ್ಞಾನ | ಆದರಿಸೆ ಅನುದಿನಾ | ನೀ ದಯದಲಿ ಕೊಡು | ಈ ದೇಹ ನಿನ್ನ ಬೀಡು | ಯಾದುದೆ ಇತ್ತ ನೋಡು 2 ಜಲದೊಳಗಾಡಿದೆ | ಚಲಕೆ ಬೆನ್ನ ನೀಡಿದೆ | ನೆಲ ಬಂದು ನೆಗಹಿದೆ | ಖಳನನ್ನ ಕೆಡಹಿದೆ | ಇಳಿಯ ಮೂರಡಿ ಮಾಡಿದೆ | ಕುಲವ ಕೂಡಲಲಿ ಹಾರ | ಜಾರ ಚೋರ | ಅಳಿದೆ ಮುಪ್ಪುರು ಶೂರಾ | ವಿಜಯವಿಠ್ಠಲ ಪಾರಾ | ಫಲವೀವೆ ಧರಣೀಧರಾ 3
--------------
ವಿಜಯದಾಸ
ಶರಣು ಚಿನ್ಮಯರೂಪ ಅತ್ರಿಮುನಿ ಕುಲದೀಪ ಶರಣು ವಿಶ್ವಂಭರನೇ ದತ್ತ ದಿಗಂಬರನೆ ಶರಣು ನೆನುವರ ಸಾರಿ ಸುಳಿದು ಹೊರೆವ ಉದಾರಿ ಶರಣು ದುರಿತಾಪಹಾರಿ ಶರಣು ಸಿಂಹಾದ್ರೀಶ ಯೋಗ ಮಾರ್ಗ ಪ್ರಕಾಶ ಶರಣು ಸರ್ವರ ಗುರುವೆ ಎನಿಸಿ ಲೋಕದಿ ಮೆರೆವೆ ಶರಣು ಮಹಿಪತಿ ನಂದನನ ನೋಡದವೆ ಕುಂದಾ ಸಲಹು ಪದ ದೋರಿ ದ್ವಂದ್ವಾ 1
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ವೆಂಕಟ ರಮಣ ಭಕ್ತ ಸಂಕಟ ಹರಣ ಶರಣು ಶೇಷಾದ್ರೀಶ ಪರಿಹೃತನೆ ಭವಪಾಶ ಶರಣು ಸರ್ವರಿಗಾದ್ಯ ಅಜಭವಸುರಾರಾಧ್ಯ ಶರಣು ವೇದಾಂತ - ವೇದ್ಯ ಪ ದುರಿತ ನಾಮ ವಿಶ್ವಂಭರಿತ ಶರಣು ಘನಕಾರುಣಿಯೆ ದೇವ ಚೂಡಾಮಣಿಯೆ ಶರಣು ಮಹಿಪತಿ ನಂದ ನೋಡಿಯ ಪರಮಾನಂದ ಶರಣು ಶ್ರೀ ಹರಿಮುಕುಂದಾ 1
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಶರಣು ಶ್ರೀ ದತ್ತಾತ್ರೇಯಾ ಶರಣು ಸಕಲಾ ಭುವನಾಶ್ರಯಾ ಶರಣೆಂಬೆ ಸಿಂಹಾಚಲ ನಿಲಯಾ ಸುರಜನ ರೇಯಾ ಸಲಹಯ್ಯಾ 1 ವನರುಹ ಸಂಭವ ತ್ರಿಲೋಚನ ಸನಕಾದಿ ಮುನಿ ವಂದಿತ ಚರಣ ಜನವನ ವಿಜನ ವ್ಯಾಪಕ ಘನ ಅನಸೂಯಾ ನಂದನ ಯೋಗೀಶಾ 2 ತತ್ವಯೋಗ ಸಿದ್ಧಿ ಬುದ್ಧಿ ದಾತಾರಾ ಸತ್ವ ಗುಣಾಲಂ ಕೃತ ಜ್ಞಾನ ಸಾಗರಾ ಸತ್ಯ ಸನಾತನೇ ಮುನಿ ದಿಗಂಬರಾ ಭಕ್ತ ಸಹಕಾರಾ ಅವಧೂತಾ 3 ಕಂದರ್ಪ ಕೋಟಿ ಸುಂದರಾಕಾರಾ ಹೊಂದಿದಾಭರಣಾನೇಕ ಶೃಂಗಾರಾ ಇಂದು ಸೂರ್ಯಾನಳ ತೇಜ ವ್ಯಾಪಾರಾ ಎಂದೆಂದೆಚ್ಚರಾ ಕಂಡು ನಿನ್ನಾ 4 ಮಂದಮತಿ ಬಾಲನ ಬಿನ್ನಾಹದ ಸ್ತುತಿ ಬಂದು ಅರ್ಪಿಸಿಕೋ ದುದಿ ಶ್ರೀಪತಿ ಇಂದು ಮೊರೆ ಹೊಕ್ಕೆನು ಅನನ್ಯಾಗತಿತಂದೇ ಮಹಿಪತಿ ಸುತ ಸ್ವಾಮೀ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಶರಣು ಹರ ಸುಂದರ ಶಂಕರ | ಹೊರೆಯೋ ನಾ ನಿಮ್ಮ ಬಾಲನು ಪ ಪತಿ - ಧರ | ಸರ್ವ ಜನರ ಸಹಕಾರೀ || ಅಘ ಕುಲಿಶ ನೆ | ಪರ್ವತ ಸುತೆ ಮನೋಹಾರಿ 1 ಭವ ಭ್ರಮ | ಪಂಚಾಕ್ಷರ ಸುಖದಾತಾ || ವಂಚನಿಲ್ಲವದರ ವಾಂಛಿತ ಪೂರಿತ | ಅಂಚೆ ಗಮನೆ ಸನ್ಮತಾ 2 ಮಹಿತಳ ವ್ಯಾಪಕ ಮಹಿಮನು - ಪಮ್ಯನೆ | ಮಹಿಪತಿ ನಂದನ ಪ್ರಭೋ | ಅಹಿಯಾ ಭರಣನೆ ಅಹವರಾನಳವಿದು | ವಿಹಿತಾಂಬಕ ತೃಯ ಶಂಭೋ || 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ಶರಣುಪ. ಶರಣು ಸಕಲೋದ್ಧಾರ ಅಸುರಕುಲ ಸಂಹಾರಅರಸು ದಶರಥಬಾಲ ಜಾನಕಿಯ ಲೋಲವಾಲಿಸಂಹಾರ ವಾರಿಧಿಗೆ ನಟುಗಾರಏಕಪತ್ನಿಯಶೀಲ ತುಲಸಿವನಮಾಲ ಅ.ಪ. ಬಂಟ ಈ ಭಾಗ್ಯಇನ್ಯಾವದೇವರಿಗುಂಟು ಮೂರ್ಲೋಕದೊಳಗೆ1 ಉಟ್ಟಪೀತಾಂಬರವು ಉಡಿಗಂಟೆವೊಡ್ಯಾಣತೊಟ್ಟ ನವರತ್ನದಾಭರಣ ರಸಕರುಣಕೊಟ್ಟ ನಂಬಿಕೆ ತಪ್ಪ ಕರುಣದಲಿ ರಕ್ಷಿಸುವಸೃಷ್ಟಿಯೊಳಗೆಣೆಗಾಣೆ ಕೌಸಲ್ಯರಾಮ 2 ಭಾವಿಸಲು ಅಯೋಧ್ಯಪಟ್ಟಣದ ಪುರವಾಸಬೇಡಿದವರಿಗೆ ವರವÀ ನೀಡುವೆನೆಂದುರೂಢಿಯೊಳಧಿಕ ಚುಂಚನಕಟ್ಟೆಯಲಿ ನೆಲೆಸಿದಸ್ವಾಮಿ ಶ್ರೀ ಹಯವದನ ಪಾಲಿಸೊ ನಿಸ್ಸೀಮ 3
--------------
ವಾದಿರಾಜ
ಶರಣು ಶರಣುರಾಯಾ | ಸರಸಿ-ಜಾಲಯ ಪ್ರೀಯಾ | ಶರಣು ಪಾವನಕಾಯಾ | ಸಲಹುನಮ್ಮಾ ಪ ಸ್ತುತಿಯ ಮಾಡಲರಿಯೇ | ಯತಿ ಛಲಗುಣ ವರಿಯೇ | ಪಾವನ ದೇವ ದಯಾನಿಧಿಯೇ 1 ಶಿರಿವಧು ರಮಣನಾ ಚರಿತವ ಪೇಳುವೆ | ಕರುಣದಿ ಶ್ರೀಹರಿ ನುಡಿಸಿದಂತೆ | ಕೇಳಿ | ಧರಿಯೊಳು ಭಾಗವತರು ಯಲ್ಲಾ 2 ಬನ್ನಿ ಸಾತ್ವಿಕ ಗುಣ ಸಂಪನ್ನ ಮುತ್ತೈದೇರು | ಅನ್ಯ ಭಾವನೆಗಳಿಗೆ ತೊಡಕದೇ | ಯನುತಲಿ | ಉನ್ನತ ಸಂಭ್ರಮದಿ ನೆರೆದರು 3 ದಿವ್ಯಾಂಬರವನುಟ್ಟು ದಿವ್ಯಾಭರಣನಿಟ್ಟು | ದಿವ್ಯಾಕೃತಿಯಲಿ ವಪ್ಪುತಿಹಾ | ಮುನಿ | ಮದನ ಲಾವಣ್ಯನು 4 ಅನಾದಿ ಮಹಿಮ ಮೋಹನನಾದ ಕೃಷ್ಣನು | ಜ್ಞಾನಾಂಗನೇ ರುಕ್ಮಣಿ ವಧುವಿನಾ | ಈರ್ವರಾ | ಅನುಭವ ದೂಟಣಿಯನ್ನು ಮಾಡಲಾರಿ 5 ಸಡಗರದಿಂದಾ ಹೃದಯಾ ಪೊಡವಿಯೊಳೊಪ್ಪುದಾ | ದೃಢ ವಜ್ರದಿಂದಲಿ ರಚಿಸಿದಾ | ಜಗದಲಿ | ಒಡನೆ ರತಿ ರತ್ನಾಸನ ಹಾಕಿ 6 ಮ್ಯಾಲ ಭಾವಕಿಯರು ಮೂಲೋಕವಂದ್ಯರಾ | ಲೋಲವಧು ವರರನು ಕುಳ್ಳಿರಿಸಿ | ಹರುಷದಿ | ಮೇಲೆನಿಸಿ ಊಟಣಿಯ ಮಾಡಿಸಲು 7 ಶುದ್ಧ ಮತಿವಂತಿಯರು ಅಧ್ಯಕ್ಷರತರಾಗಿ | ಸಿರಿ | ಮುದ್ದು ಶ್ರೀ ಕೃಷ್ಣನು ವಲಿವಂತೇ 8 ನಾನಾ ಗಂಟಗಳುಳ್ಳಾ ಕಠಿಣವಾದಾ ಅಭಿ | ಮಾನ ಅರಿಷಿಣವನು ಸಣ್ಣ ಮಾಡೀ | ಈಗಾ | ಏನುಳಿಯದ್ಹಾಂಗ ವಿವೇಕದಿಂದ 9 ಹಮ್ಮಿನರಿಷಿಣವನು ಸಮ್ಯಜ್ಞಾನದ ಕದಿ | ಕಮ್ಯ ದೋರುವಂತೆ ಕಲಿಸುತಾ | ಶ್ರೀವರ | ಬ್ರಹ್ಮನ ಪಾಪಕ ಅರ್ಪಿಸಿದರು 10 ತ್ವರಿತ ಲಕ್ಷ್ಮೀ ಕಾಲಾ ಪರವಾ ವಪ್ಪಿಲೆ ಹಚ್ಚಿ | ಭರದಿಂದಾಕ್ಷಣ ಕ್ಷಣಕ ರುಕ್ಮಣಿ ಯಾಮುಖದಿಂದ | ಹರಿಯಾ ನಾಮಗಳನು ನುಡಿಸುತಾ 11 ಭಾವನಿಂದ ರಂಜಿಸುವ ಕುಂಕುಮ ಮ್ಯಾಲೆ | ಆ ವಿಮಲ ಮುಕ್ತಿಯ ಶೇಶೇ ನಿಟ್ಟು ಧ್ಯಾನಾ | ಲೇವಿಗಂಧವಾ ಲೇಪಿಸಿದರು 12 ಪರಿಮಳ ಸುವಾಸನೆಯ ಬೇರದ ಸುಮನ ಸರವಾ | ಕೊರಳಿಗೆ ಹಾಕಿದೆ ಪರಿಯಿಂದಾ ಕೃಷ್ಣನಾ | ಕರದಿ ನೇಮಿಸಿದರು ರುಕ್ಮಣಿಗೆ 13 ಆರ್ತ ಜಿಜ್ಞಾಸನು ಧನಾರ್ಥಿಯು ಬೈಲಿ ಘಳಿಗೆ | ಅರ್ತು ಮುಖದಲಿ ಕೊಟ್ಟು ಬಿಸುಡಿದರು ಬುಧರು | ನಿರ್ತದಿಂದಲಿ ನೋಡಿ ಇಬ್ಬರಿಂದ 14 ಮಗುಳೆ ಸಂಕಲ್ಪಾದಾ ಬಗೆದಾ ಕುಪ್ಪಸಿನ | ಬಿಗಿ ಬಿಗಿದು ಕಟ್ಟಿದಾ ಗಂಟವನು ಒಂದೇ | ಜಗದೀಶನಾ ಕೈಯಿಂದ ಬಿಡಿಸಿದರು 15 ಹರಿಯಾ ತೊಡೆಯ ಮ್ಯಾಲ ನಿಂದಿರಿಸಿ ರುಕ್ಮಿಣಿಯನು | ಕರದಿ ಶಾಂತಿ ಅಂಬಿ ಬಿಂಬಿಸಿದರು | ನೋಡಿ | ಧರಿಯೊಳಾನಂದವ ತೋರುವಂತೆ 16 ತನುವಿನಾರತಿಯೊಳು ಘನದೆಚ್ಚರ ದೀಪದಿ | ಮನದಿಂದಾ ಜಯಾ ಜಯಾವೆಂದೂ ಬೆಳಗೀ | ಮರಹು | ಅನುವಾಗಿ ತಾವು ನಿವಾಳಿಸಿದರು 17 ಮರೆವಾ ಪ್ರಕೃತಿ ಪುರುಷರ ಶರಗಂಗಳಾ ಯರಡಾ | ಭರದಿಂದ ಕಟ್ಟಿ ಸುವೃತ್ತಿಂದಾ | ಬಳಿಕಾ | ತ್ವರಿತ ನಿಜ ಮಂದಿರವ ಸಾರಿದರು 18 ಇಂತಿ ಪರಿಯಾಗಿಹ ಅಂತರನು ಭವದಾ | ಕಂತುಪಿತ ಲಕ್ಷ್ಮಿಯ ಚರಿತವನು | ನೋಡಿ | ಸಂತತ ಸುಖವನು ಪಡೆದರೆಲ್ಲಾ 19 ಇನಿತು ಸುಖ ಕರವಾದಾ ಅನುಭವ ದೂಟಣಿಯನು | ಅನುವಾಗಿ ನುಡಿಸಿದಾ ಯನ್ನ ಮುಖದೀ | ಈಗಾ | ಘನ ಗುರು ಮಹಿತಪಿ ಸುತ ಸ್ವಾಮಿ 20 ತಂದೆ ತಾಯಿ ಮಿತ್ರ ಬಂಧು ಬಳಗನಾದಿ | ಎಂದೆಂದೂ ಶರಣರ ಸಲಹುವಾ | ದೇವನೇ | ಇಂದೆನ್ನ ನುದ್ಧರಿಸು ದತ್ತಾತ್ರೇಯಾ 21
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಧಿ ಗಂ ಭೀರ ದಯಾಸಾರ ವಾರಿಜಾಕ್ಷ ಮುರಹರ ಸಖನಾಗಿಹ ಚಾರುಮಹಿಮ ನಿಟಿಲಾಂಬಕ ಪರಶಿವ ಪ ಸಿಂಧು ಮಥನದೊಳಗೆ ಕೈಲಾಸ ದಿಂದ ಬಂದನಿಳೆಗೆ ನಂದಿವಾಹನ ಗರಳವನೆಲ್ಲ ಭುಂಜಿಸಿ ಮಾರ 1 ವ್ಯೋಮಕೇಶ ದೇವಾ ಸುಜನರ ಸ್ತೋಮವನು ಕಾವಾ ಕಾಮಿತಾರ್ಥ ವರಗಳನಿತ್ತು ಸಲಹುವ ಸೋಮಶೇಖರ ಕರ್ಪೂರಧಲಾಂಗಾ 2 ಸುರನರೋರಗ ಪಾಲಾ ಸಜ್ಜನ ಪೊರೆವ ಪುಣ್ಯಶೀಲಾ ಗುರುವಿಮಲಾನಂದ ಭರಿತ ಕುಶಸ್ಥಳ ಪುರನಿವಾಸ ಶ್ರೀ ಮಹಾಂಗಿರೀಶ ಮಹಾರುದ್ರ 3
--------------
ಭಟಕಳ ಅಪ್ಪಯ್ಯ
ಶರಧಿ ಸುಖಾತ್ಮಜೆ ಪ ಶರಣು ತವ ಚರಣಾರವಿಂದಕೆ ಶರಣು ಸುರನುತ ಜಂಘಕೇಶರಣು ಕರಿಕರಭೋರು ಯುಗಳಕೆ ಶರಣು ಸುಟೊಂಕಕೆ1 ಕರ ಕಣ್ಣು ಮೂಗು ಭ್ರೂಲತೆ ಕರಣಾಭರಣಕೆ 2 ಶರಣು ಸಾಲಕ ಬಿಂಬ ಫಾಲಕೆ ಶರಣು ಕುಸುಮಿತ ವೇಣಿಗೆಶರಣು ಮಾಧವನಂಕ ಬಿಂಬದಿ ಮೆರೆವ ಸುಖ ಮುತ್ತೈದಿಗೆ 3 ಕಾಲ ಸ್ವಭರ್ತೃಸುಮಜಿತೆ ಭಕ್ತಪೋಷಣೆಕೃತ್ಯ ಕರುಣಾ ಸಾರಸಾಂಡ ಸುಪಾಸ್ತ ಸಂಸಿತಳೆ ನೀ4 ಸೊಲ್ಲು ಪೇಳುವೆ ಸ್ನೇಹದಿಂದಲಿಪುಲ್ಲನಾಭನ ಪರಿಚಿಸೀ ಈಗವನಲ್ಲಿ ನೀ ಪೇಳೆ 5 ದೇವಶರ್ಮನು ನಿನ್ನ ಚರಣಾಧ್ಯಾನದಲಿ ಸನ್ನುತಿಸಿ ಕರುಣತೋಯಜಾಕ್ಷನ ಕಂಡು ಸುಖಿಸಿದುಪಾಯವ ಬಲ್ಲವನು 6 ಸುಂದರಾಂಗಿಯೆ ಸಾರಸಾಕ್ಷಿಯೆ ಮಂದಹಾಸಿನಿ ಮಾರಮೋಹಿನಿಇಂದಿರೇಶನ ಮಾನಿನಿಯೆ ತವಕದಿಂದ ನಿಂತಿಹೆನು 7
--------------
ಇಂದಿರೇಶರು
ಶಾಂತಿಯ ಕರುಣಿಸೊ ಈ ಮನಸಿಗೆ ಶಾಂತಿಯ ಕರುಣಿಸೊ ಪ ಶಾಂತಿಕರುಣಿಸಿ ನಿನ್ನಂತರಂಗದಿ ನಿಮ್ಮ ಚಿಂತೆ ಇರಿಸು ಕರುಣಾಂತರಂಗ ಹರಿಅ.ಪ ವಿಲಸಿತಮತಿ ಕೊಡೊ ಮನವು ಚಲಿಸದಪದ ನೀಡೋ ಸುಲಭದಿ ತವಪಾದ ಒಲಿಸಿ ನಲಿಯುವ ದಾಸರೊಳಗೆ ಕೂಡಿಸಿ ಎನ್ನ ನೊಲಿದು ರಕ್ಷಣೆಮಾಡೊ 1 ಹಲುಬಾಟ ದೂರಮಾಡೊ ಎನ್ನಯ ಪ್ರಳಯ ಗುಣೀಡ್ಯಾಡೊ ಗಲಿಬಿಲಿ ಸಂಸಾರದೊಲಿಮಿಲಿ ಬಳಲುವ ಹೊಲೆಮತಿ ಕಳೆದೆನ್ನ ಸಲಹೆಲೊ ಜ್ಞಾನದಿ 2 ಮರೆಯ ಬೇಡ ಎನ್ನ ಕರುಣಾ ಭರಣ ಭಕ್ತಪ್ರಾಣ ಹರಿವ ಜಗದಿ ಎನ್ನ ಪರಿಪರಿ ನೋಯ್ಸದೆ ಪರಮಮುಕ್ತಿಯನಿತ್ತು ಪೊರೆಯೊ ಶ್ರೀರಾಮ3
--------------
ರಾಮದಾಸರು