ಒಟ್ಟು 8009 ಕಡೆಗಳಲ್ಲಿ , 129 ದಾಸರು , 4271 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜೋಜೋ ಶ್ರೀ ಗೋಪಾಲಕೃಷ್ಣ ಮೂರುತಿಯೆ ಪತಿ ಲೋಕ ದೊರೆಯೆ ಜೋಜೋ ಈ ಲೋಕದೊಳು ನಿನಗಿನ್ನು ಸರಿಯೆ ಜೋಜೋ ಶ್ರೀ ಗುರುಕರಾರ್ಚಿತದಿ ಬಂದ್ಹರಿಯೆ ಪ. ತಂದೆ ಮುದ್ದುಮೋಹನರು ಕೊಟ್ಟ ಅಂಕಿತದಿ ಪೊಂದಿದ್ದ ರೂಪ ಗ್ರಹದಲ್ಲಿ ಹೊಂದಿ ಮುಂದೆಂಟು ವತ್ಸರಕೆ ಎನ್ನೊಡನೆ ಬಂದಿ ತಂದೆ ಮುದ್ದುಮೋಹನರ ಕರಸ್ಪರ್ಶ ಪೊಂದಿ 1 ನಮ್ಮ ಹಿರಿಯರ ಪೂಜೆ ಒಮ್ಮೊಮ್ಮೆ ಎಂದು ಒಮ್ಮೆ ದುರುಳನು ಮುಟ್ಟೆ ಮಲಿನಾದೆನೆಂದು ನಮ್ಮ ಗುರು ಕರಸ್ಪರ್ಶದಿಂ ಪುನಃ ಬಂದು ಪತಿ ಎನ್ನ ಕರಪೂಜೆ ಬೇಕೆಂದು 2 ಘನ್ನ ಗುಣರು ನಿನ್ನ ಪೂಜಿಸಿ ಪೋಗಲಂದು ಮನೆ ಪೆಟ್ಟಿಗೆಯೊಳ್ ಸುಮ್ಮನಿರಲಾರೆನೆಂದು ಮನಕೆ ಪ್ರೇರಿಸೆ ದುರುಳರಿಗೆ ಕದ್ದು ಒಯ್ದು ಘನ ಮೂರ್ತಿಗಳು ಪೋಗೆ ನೀನೊಬ್ಬ ಬಂದು 3 ಬಹುದಿವಸ ಮಲಿನವಾಗಿರುತಿರಲು ನೀನು ಮಹಮಹಿಮೆ ಅರಿಯಲಿಲ್ಲಾಗ ನಾನಿನ್ನು ಅಹಹ ನಮ್ಮ ಗುರುಗಳೆರೆಯಲು ಜ್ಞಾನವನ್ನು ಮಹಿಯೊಳೆನ್ನ ಪೂಜೆಯನು ಬಯಸಿದೆಯೊ ನೀನು 4 ಮನದಲ್ಲಿ ಪ್ರೇರಿಸಲು ಘನವಲ್ಲವೆಂದು ಕನಸಿನಲಿ ಎನ್ನ ಹಸ್ತದೊಳ್ ಬಂದು ನಿಂದು ಸನುಮತದಿ ಹರುಷದಲಿ ನಿನ್ನ ನಾ ತಂದು ಘನ ಮಹಿಮ ಗುರುಗಳಿಗೆ ಒಪ್ಪಿಸಲು ಅಂದು 5 ಅಂತರಾತ್ಮನ ಗುರುವು ವಿಗ್ರಹದೊಳಿಟ್ಟು ಸಂತೋಷದಿಂದ ಮನಮುಟ್ಟಿ ಕೊಡಲಷ್ಟು ಅಂತಾಯ್ತು ಮಲಿನ ಕುಂದಿತು ತೇಜವೆಷ್ಟು ನಿಂತೆನ್ನ ಕೈಲಿ ಪೂಜೆಯಗೊಂಬ ಗುಟ್ಟು 6 ದಿನದಿನಕೆ ಭಜನೆ ಪೂಜೆಯನೆಗೊಂಬ ಚಂದ ಘನಭಕ್ತರನು ಪೊರೆವ ಬಿರುದು ಆನಂದ ಮುನಿಜನರ ಮೋಹಕನೆ ಸಚ್ಚಿದಾನಂದ ಎನಗೊಲಿದೆ ಗೋಪಾಲಕೃಷ್ಣ ಗೋವಿಂದ 7 ರಮೆ ಬ್ರಹ್ಮ ಸುರರಿಗೆ ಸರಿ ಪೂಜಿಸುವೆನೆ ಕಮಲಾಕ್ಷ ಅಣು ನಾನು ನಿನ್ನ ಒಲಿಸುವೆನೆ ರಮಣೀಯವಾದ ವಸ್ತುಗಳ ನಾ ತಹೆನೆ ಕ್ಷಮಿಸು ನಿನ್ನ ದಾಸಿ ನನ್ನಪರಾಧಗಳನೆ 8 ಅಂತರಂಗದಲಿಪ್ಪ ಬಿಂಬ ಮೂರುತಿಯೆ ನಿಂತು ಈ ವಿಗ್ರಹದಿ ಈ ರೀತಿ ಮೆರೆಯೆ ಸಂತೋಷ ನೋಳ್ಪರಿಗೆ ಕೊಡು ಭಕ್ತಿ ಹರಿಯೆ ಕಂತುಪಿತ ಕಮಲಾಕ್ಷ ಕಾಯೊ ಸಿರಿದೊರೆಯೆ 9 ಪೂಜ್ಯಪೂಜಕನೆಂದು ಪೂಜೆ ಮಾಡುವೆನೊ ಮೂರ್ಜಗತ್ಪತಿ ನಿನ್ನ ಲಾಲಿ ಪಾಡುವೆನೊ ಪೂಜ್ಯ ಶ್ರೀ ಗೋಪಾಲಕೃಷ್ಣವಿಠ್ಠಲ ನೀನು ಗೋಜು ಬೇಡನ್ಯರದು ಪೊರೆಯೊ ದಾಸರನು 10
--------------
ಅಂಬಾಬಾಯಿ
ಜ್ಞಾನ ಸಖೀಕೇಳೆ ಜ್ಞಾನಿಗಳಾರಾಧಿಸುವಾ | ಶ್ರೀನಿವಾಸನಾ ತಂದುತೋರೆ ತನುವಿನೋಳು ಪ ಹಲವು ಸಾದಿನದಿಂದ ಬಳಲಿ ಹಂಬಲಿಸಿದೆ | ಜಲ ಜಾಕ್ಷ ಮೈಯ್ಯ ದೋರನೇ 1 ಕಣ್ಣಿಗೆ ಕಣ್ಣಾಗದನಕಾ ಬಣ್ಣ ಬಣ್ಣದ ಚಿತ್ಸುಖಾ | ಕನ್ನಿಕಾ ರನ್ನಳೆ ತಂದು ತೋರೇ 2 ಸೋಹ್ಯ ಸೊನ್ನಿಯ ದೋರಿಸಿ ಬಾಹ್ಯರಂಗ ಮರೆಸಿ | ಸಹ ಜಾನಂದದ ಕೂಡಿಸೇ 3 ಗುರು ಮಹಿಪತಿ ಸ್ವಾಮಿ ಸ್ಮರಿಸುವರಂತರ್ಯಾಮಿ | ನೆರೆದು ತಾನೇ ತಾನಾದನೇ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜ್ಞಾನಗಮ್ಯ ಶ್ರೀರಾಘವೇಂದ್ರ ದೀನಪಾಲ ಶರಣ ಶರಣ್ಯ ಯೋಗ ಪ ದಾನವೇಶ್ವರಾಂತಕ ವಂಶೋದ್ಭವಾ ಪೂರ್ಣಾವತಾರಾ ವ್ಯಾಸರಾಯರೂಪಾ ಅ.ಪ ಸರ್ವಜನ ಹಾಸ | ಬೃಂದಾವನ ನಿವಾಸ ಭುವನೈಕ ನೇತ್ರಾ | ಸಕಲಾರ್ಥದಾತ ತವಚರಣಂ ಮಾಂಗಿರೀಶ ಪ್ರೀತ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಜ್ಞಾನಪ್ರದ ನರಸಿಂಹ ವಿಠಲ ನೀ ಸಲಹೊ ಪ ಧೇನು ವತ್ಸದ ಧ್ವನಿಗೆ ತಾನೇವೆ ಬರುವಂತೆ ಅ.ಪ. ಕರ್ಮ ಪೂರ್ವಾರ್ಜಿತವ ನಿರ್ಮಲವ ಗೊಳಿಸುತ್ತಭರ್ಮ ಗರ್ಭನ ಜನಕ ಪೇರ್ಮೆಯಲಿ ಇವನಧರ್ಮ ಮಾರ್ಗದಿ ನಡೆಸು ಸುಜ್ಞಾನ ಮತಿಯಿತ್ತುಕರ್ಮನಾಮಕ ಹರಿಯೆ ಶರಣಜನ ಧೊರೆಯೆ 1 ಹರಿಯು ಸರ್ವೋತ್ತಮನು ಶಿರಿಯು ಆತನರಾಣಿಗುರು ವಾಯು ಸುರರೆಲ್ಲ ಹರಿಭೃತ್ಯರೆಂಬವರಮತಿಯನಿತ್ತವಗೆ ಸಂಸ್ಕøತಿಯ ಕ್ಲೇಶಗಳಪರಿಹರಿಸಿ ಪಾಲಿಪುದು ಪರಮ ಕರುಣಿಕಾ 2 ಪತಿ ಇರುವೆ ಮೂಕ ಪುರುಷರ ನೀನು ವಾಕ್ಪತಿಯ ಮಾಳ್ಪೆನಾಕೇಳ್ಪುದರಿದೇನೊ ಪಂಚ ಮುಖ ಭವವಂದ್ಯತೋಕನಿವ ಶರಣಗಿಹ ವ್ಯಾಕುಲವ ಕಳೆಯೋ 3 ಮಗುವಿನೊಚನವ ಕೇಳಿ ಜಿಗಿವೆ ಕಂಬದಲಿಂದನಗೆ ಮೊಗನೆ ತರಳೆಯಾ ಹಗರಣವ ಕಳೆದೇಖಗವರಧ್ವಜ ನಿನ್ನ ಬಗೆಬಗೆಯ ಲೀಲೆಗಳಮಿಗಿಲಾಗಿ ತೋರಿವಗೆ ನಗಧರನೆ ಹರಿಯೇ 4 ನಿತ್ಯತವ ಸ್ಮøತಿಯಿತ್ತು ಭೃತ್ಯನತಿ ಕಷ್ಟಗಳಕಿತ್ತೊಗೆದು ಮಧ್ವಮತ ತತ್ವ ತಿಳಿಸುತ್ತಾಗುಪ್ತ ಮಹಿಮನೆ ಗುರುಗೋವಿಂದ ವಿಠ್ಠಲನೆಭಕ್ತನುದ್ಧರಿಸೆಂದು ಪ್ರಾರ್ಥಿಸುವೆ ನಿನ್ನಾ 5
--------------
ಗುರುಗೋವಿಂದವಿಠಲರು
ಜ್ಞಾನವಂತರ ಸಂಗವಿರಲು ಸ್ನಾನವ್ಯಾತಕೆ ಪ ನಾನು ಎಂಬುದ ಬಿಟ್ಟ ಮೇಲೆ ನರಕವ್ಯಾತಕೆ ಅ.ಪ. ಮೃತ್ತಿಕೆ ಶೌಚ ಮಾಡದವನ ಆಚಾರವ್ಯಾತಕೆಸತ್ಯವಾದಿ ಆಗದವನ ನಂಬಿಗೆ ಯಾತಕೆ ||ಚಿತ್ತಶುದ್ಧಿ ಇಲ್ಲದವನ ವೈರಾಗ್ಯವ್ಯಾತಕೆಉತ್ತಮ ಹಿರಿಯರಿಲ್ಲದಂಥ ಸಭೆಯು ಯಾತಕೆ 1 ಪತಿಯ ಆಜ್ಞೆ ಮೀರಿದವಳ ವ್ರತಗಳ್ಯಾತಕೆಸತಿಗೆ ಅಳುಕಿ ನಡಿಯುವವನ ಸಾಹಸವ್ಯಾತಕೆ ||ಯತಿಯ ನಿಂದೆ ಮಾಡುವವನ ಮತಿಯು ಯಾತಕೆಅತಿ ವಿರೋಧ ಬಡಿಸುವಂಥ ಅಣ್ಣನ್ಯಾತಕೆ 2 ಹರಿಕಥೆಯ ಕೇಳದವನ ಕಿವಿಯು ಯಾತಕೆಮುರಹರನ ಮೂರ್ತಿಯ ನೋಡದಂಥ ಕಂಗಳ್ಯಾತಕೆ ||ಮರುತ ಮತವ ಪೊಂದದವನ ಬಾಳ್ವೆ ಯಾತಕೆಎರಡಾರು ನಾಮವಿಡದ ಶರೀರವೇತಕೆ3 ತಂದೆ ತಾಯಿ ಮಾತು ಕೇಳದ ಮಕ್ಕಳ್ಯಾತಕೆಬಂಧು ಬಳಗ ಉಳ್ಳದವನ ಭಾಗ್ಯವ್ಯಾತಕೆ ||ಬಂದ ಅತಿಥಿಗನ್ನವನಿಕ್ಕದ ಸದನವೇತಕೆ ಗೋ-ವಿಂದನಂಘ್ರಿ ಸ್ಮರಿಸದಂಥ ನಾಲಿಗ್ಯಾತಕೆ 4 ಮಕ್ಕಳನ್ನ ಮಾರಿಕೊಂಬ ತಂದೆಯಾತಕೆರೊಕ್ಕಕಾಗಿ ಬಡಿದಾಡುವ ತಮ್ಮನ್ಯಾತಕೆ ||ಕಕ್ಕುಲಾತಿ ಬಡುವ ಸಂನ್ಯಾಸವ್ಯಾತಕೆಠಕ್ಕು ಭಕುತಿ ಮಾಡುವಂಥ ದಾಸನ್ಯಾತಕೆ 5 ಆಗಿ ಬರದವರ ಅನ್ನ ಉಣ್ಣಲ್ಯಾತಕೆರೋಗವಾದ ನರಗೆ ಹೆಣ್ಣಿನ ಭೋಗವ್ಯಾತಕೆ ||ಯೋಗಿಯಾದ ಮೇಲೆ ದ್ರವ್ಯದ ಆಶೆಯಾತಕೆಭಾಗೀರಥಿಯ ಮಿಂದ ಮೇಲೆ ಪಾಪವ್ಯಾತಕೆ 6 ವೇದವನ್ನು ಓದದಂಥ ವಿಪ್ರನ್ಯಾತಕೆಕಾದೊ ರಣಕೆ ಅಂಜುವಂಥ ಕ್ಷತ್ರಿಯನ್ಯಾತಕೆ ||ವಾದವನ್ನು ಮಾಡುವಂಥ ಬಂಟನ್ಯಾತಕೆಸಾಧುಗಳಿಗೆ ಎರಗದವನ ಶಿರವಿದ್ಯಾತಕೆ 7 ಯಾತ್ರೆ ತೀರ್ಥ ಮಾಡದಂಥ ಪಾದವ್ಯಾತಕೆಪಾತ್ರರ ಸಂಗವಾಗದವನ ಜನ್ಮವ್ಯಾತಕೆ ||ಸ್ತೋತ್ರಕೆ ಮರುಳಾಗುವವಗೆ ಸಾಧನ್ಯಾತಕೆಪಾರ್ಥ ಸಖನ ತಿಳಿಯದವನ ಜ್ಞಾನವ್ಯಾತಕೆ 8 ಗುರೂಪದೇಶವಿಲ್ಲದಂಥ ಮಂತ್ರವ್ಯಾತಕೆಅರಿತು ವಿದ್ಯ ಪೇಳದ ಉಪಾಧ್ಯನ್ಯಾತಕೆ ||ಹರುಷವನ್ನು ತಾಳದಂಥ ಜ್ಞಾನಿ ಯಾತಕೆಕರಣ ಶುದ್ಧಿ ಇಲ್ಲದವನ ಸ್ನೇಹವ್ಯಾತಕೆ 9 ಗಾಣ ಕಟ್ಟಿದೆತ್ತಿಗೆ ಗೆಜ್ಜೆಯಾತಕೆ ||ರಾಣಿ ಇಲ್ಲದವನು ಮಾಡುವ ಬದುಕು ಯಾತಕೆತಾನು ಉಣ್ಣದೆ ಪರರಿಗಿಕ್ಕದ ಧನವಿದ್ಯಾತಕೆ 10 ಧರ್ಮವಿಲ್ಲದೆ ರಾಜ್ಯ ಆಳುವ ಪ್ರಭುವಿದ್ದ್ಯಾತಕೆಮರ್ಮವರಿತು ನಡೆಯದಂಥ ಹೆಣ್ಣು ಯಾತಕೆ ||ನಿರ್ಮಲಾಂಗನಾದ ಮೋಹನ ವಿಠಲನ ಗುಣಕರ್ಮ ಕ್ರಿಯಾ ತಿಳಿದ ಮ್ಯಾಲೆ ನಿರ್ಣಯವ್ಯಾತಕೆ 11
--------------
ಮೋಹನದಾಸರು
ಜ್ಞಾನವಾವುದು ಅಜ್ಞಾನವಾವುದು ಮಾನವಾವುದು ದುಮ್ಮಾನವಾವುದು ಪ ಹರಿಯ ಸ್ಮರಣೆಯಿರಲದೊಂದು ಜ್ಞಾನವಲ್ಲವೆ ಕೊರಳ ಸೆರೆಯ ಕಾಣದಿಪ್ಪುದಜ್ಞಾನವಲ್ಲವೆ ಪರರ ಸತಿಯ ತೊರೆವುದೊಂದು ಮಾನವಲ್ಲವೆ ಪರರ ಸೇವೆಗಿರುವದವಮಾನವಲ್ಲವೆ 1 ಧನ್ಯರನ್ನು ಮನ್ನಿಸುವುದು ಜ್ಞಾನವಲ್ಲವೆ ಹೊನ್ನ ಹುದಿದು ಅನ್ನ ತೊರೆವುದಜ್ಞಾನವಲ್ಲವೆ ಅನ್ಯರೊಡವೆ ಕಳುವುದವಮಾನವಲ್ಲವೆ 2 ಹಸಿದವರನು ಕಂಡು ಯಿಕ್ಕಲು ಜ್ಞಾನವಲ್ಲವೆ ಹುಸಿಕನಾಗಿ ಅಸತ್ಯ ಮಾಳ್ಪುದು ಅಜ್ಞಾನವಲ್ಲವೆ ಹಸನವಾಗಿ ನಡೆವ ಕೃತ್ಯ ಮಾನವಲ್ಲವೆ ಎಸೆವ ಜೂಜು ತಪ್ಪಲವಮಾನವಲ್ಲವೆ 3 ಸ್ಥಿರವಿದಲ್ಲವೆಂಬ ಜೀವಿ ಜ್ಞಾನಿಯಲ್ಲವೆ ನರಕ ಭಯವ ಮರೆವ ಜಡನಜ್ಞಾನಿಯಲ್ಲವೆ ಹಿರಿಯರಿಂದ ಅನಿಸಿಕೊಂಬುದು ಮಾನವಲ್ಲವೆ ಬರಿಯ ಕ್ಷುದ್ರವೆಸಗಲವಮಾನವಲ್ಲವೆ 4 ಕ್ರೋಧವನ್ನು ತೊರೆದ ಮನುಜ ಜ್ಞಾನಿಯಲ್ಲವೆ ವೇದವನ್ನು ಜರೆದ ನರನಜ್ಞಾನಿಯಲ್ಲವೆ ಸೋದರರು ಕೂಡಿಯಿರಲು ಮಾನವಲ್ಲವೆ ಮಾದಿಗರ ಸಂಗವದವಮಾನವಲ್ಲವೆ 5 ಗುರು-ಹಿರಿಯರನುಸರಿಸೆ ಜ್ಞಾನವಲ್ಲವೆ ಸಿರಿಯ ವೇಶ್ಯಸ್ತ್ರೀಗೆ ಕೊಡಲಜ್ಞಾನವಲ್ಲವೆ ದೊರೆಯು ಕರೆದು ಉಚಿತವೀಯೆ ಮಾನವಲ್ಲವೆ ತಿರುಕರಂತೆ ತಿರಿವುದು ಅವಮಾನವಲ್ಲವೆ 6 ವರಾಹತಿಮ್ಮಪ್ಪ ಒಲಿದರದು ಜ್ಞಾನವಲ್ಲವೆ ಮರೆದು ಕ್ಲೇಶಕೆರಗುವುದಜ್ಞಾನವಲ್ಲವೆ ಕರೆದು ಪರರಿಗಿಕ್ಕುವುದು ಮಾನವಲ್ಲವೆ ಕರೆಕರೆಯ ಮಾತು ಅವಮಾನವಲ್ಲವೆ 7
--------------
ವರಹತಿಮ್ಮಪ್ಪ
ಜ್ಞಾನಾನಂದ ಸ್ವರೂಪ ಭಾನುಕೋಟಿ ಪ್ರದೀಪ ನಾನಾದೋಷ ನೀರ್ಲೇಪ ಮೀನ ರೂಪ ಪ ಏನು ಅರಿಯದ ದೀನ ಭಕುತನಿಗೆ ಸಾನುರಾಗದಿ ಜ್ಞಾನವನೀಯೋ ಅ.ಪ ನಿಗಮಗಳೆಲ್ಲವು ಬಗೆ ಬಗೆಯಿಂದ ನಿನ್ನ ಅಗಣಿತ ಗುಣಗಳ ಪೊಗಳುತಲಿದ್ದರು ಸಿಗದ ನಿನ್ನ ನಾನು ಪೊಗಳಲಳವೆ ಪೇಳೊ ಸಿರಿಯರಸನೆ ನಿನ್ನ ಚರಣಕಮಲದಲಿ ಪರತರ ಭಕುತಿಯ ದೊರಕಿಸೆಲೊ ಸರಸಿಜ ಜನಕನೆ ಮರೆತಪರಾಧವ ಕರುಣದಿಂದಲಿ ಎನ್ನ ಕರಗಳ ಪಿಡಿಯೋ 1 ಒಂದು ದಿನವು ಸುಖ ಗಂಧವನರಿಯದೆ ಭವ ಸಿಂಧುವದನನೆ ತೊಂದರೆ ಪಡುತಿಹೆ ಸುಂದರ ವದನನೆ ತಂದೆ ಎನಗೆ ನೀನೆ ಬಂಧುವೆನಗೆ ನೀನೆ ಮಂದ ಬುದ್ಧಿಯಲಿ ನಿಂದ್ಯನಾದೆನಗೆ ಕುಂದು ಸಹಸ್ರವು ಸಂಧಿಸಿತು ಇಂದು ಮನಕೆ ಆದ ತಂದುಕೊಳ್ಳದೆಲೆ ಮಂದಹಾಸದಲಿ ಬಂದೆನ್ನ ಪೊರೆಯೋ 2 ಹಿತವೆಂದು ಭವವನು ಅತಿ ಮೋಸಹೋದೆನು ಮತಿಗೆಟ್ಟು ನಿನ್ನನು ಸ್ತುತಿಸಲಿಲ್ಲವೊ ನಾನು ಮಿತಿಮೀರುತಿರಲೆನ್ನ ಸ್ಥಿತಿಯ ನೀನರಿಯುತ ಮತಿ ಬೇರೆ ಮಾಡಿ ಮರೆತೆಯೇನೊ ಶ್ರೀಪತೆ ಕ್ಷಿತಿಯೊಳೆನಗೆ ಗತಿ ಇತರರ ಕಾಣೆನÉೂೀ ಪತಿ ನೀನಿರೆ ವಸುಮತಿಯೊಳಗೆ ಪತಿತಪಾವನನೆ ಪ್ರಸನ್ನನಾಗಿ ದಿವ್ಯ ಸತತ ಸುಖಕೆನಗೆ ಪಥವನು ತೋರೊ 3
--------------
ವಿದ್ಯಾಪ್ರಸನ್ನತೀರ್ಥರು
ಝಣ ಝಣ ಝಣರೆಂದು ಕುಣಿವುದ ನೋಡೆ ಫಣಿಪತಿ ಶಯನನು ಕಾಣುವ ನೋಡೆ |ನಾಡೆ ಪ ಕಿಣಿ ಕಿಣಿ ಕಿಂಕಿಣಿ ಕಿಣಿರವ ಕೇಳೇ ಮಣಿ ಮಣಿದಾತನ ನಾಮವ ಪಾಡೇ ಅ.ಪ ನೋಡುವ ನಲಿಯುವ ಹೊಂಗೊಳಲೂದುವ ಪಾಡುವ ಕರೆಯುವ ನಗಿಸುವ ನಗುವಾ ಮಾಡೆ ವಂದನೆಗಳ ಸಂತಸಗೊಳುವಾ ಬೇಡುವರಿಷ್ಟವ ಕರುಣದಿ ಕೊಡುವಾ 1 ಬೃಂದಾವನದಾನಂದದ ನೋಟಾ ಮಂದಗಮನೆಯರ ನಲವಿನ ಕೂಟಾ ಇಂದಿರೆಯರಸ ಮಾಂಗಿರಿಪತಿಯಾಟಾ ಸಂದಪುದೆಮಗೆ ಬಾ ಕೃಷ್ಣನೊಳಾಟಾ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಟೀಕಾಚಾರ್ಯರ ಸ್ತೋತ್ರ ದಯದಿ ಪಾಲಿಸೋ ಜಯತೀರಥ ರಾಯಾ | ಅಕ್ಷೋಭ್ಯರ ತನಯಾ ಪ ಅತ್ಯಂತ್ಹರುಷದಿ ಎತ್ತಾಗಿರುತಿರಲೂ ಶ್ರೀ |ಆನಂದ ತೀರಥರೂನಿತ್ಯ ಪಠಿಸುವೋ ಪುಸ್ತಕ ಹೊರುತಿರಲೂ |ಗುರುರಾಯರು ಪೇಳಿದತತ್ವ ಗ್ರಂಥವನೆ ಕಿವಿಯಲಿ ಕೇಳುತಲೀ | ತಲೆಯನು ತೂಗುತಲೀಮತ್ತೆ ಪುಟ್ಟಿದ್ಯೋ ಮಂಗಳವೇಡೆಯಲೀ | ಅತಿ ಮತಿವಂತರಲೀ 1 ದೇಶಪಾಂಡೆರಾ ಕೂಸಾಗಿ ಜನಿಸೀ | ಘನ ರಾವುತನೆನಿಸೀದೇಶ ದೇಶದೋಳ್ ಸೈನ್ಯವನೇ ಚರಿಸೀ | ಹಣವನ್ನೇ ಗಳಿಸೀವಾಸುಕಿಯೆಂಬೋ ಗುರುತನೆ ತಪ್ಪಿಸೀ | ನದಿಗೇ ನೀರಡಿಸೀಶ್ರೀಶನಾಜ್ಞೆಯೊಳಿವರನೆ ಕರೆತರಿಸೀ |ಶಿಖೆ ಸೂತ್ರವ ತೆಗೆಸೀ2 ಹಿಂಡು ಜನ ಅಂಡಲಿಯುತ ಬದೂ | ಅಕ್ಷೋಭ್ಯ ತೀರಥರಾಕಂಡು ಭೇಟಿಯಾ ಮಾಡುತಲೇ ನಿಂದೂ | ಧೋಂಡೋ ರಘುನಾಥನಹೆಂಡತಿ ಗಂಡನ ಕೂಡಿಸಬೇಕೆಂದೂ | ಸುಮ್ಮನೆ ಕರೆತಂದೂ - ಪ್ರಚಡ ಸರ್ಪನಾ ರೂಪವ ತಾಳ್ದಂದೂ ಭಯವ ಪಟ್ಟರಂದೂ 3 ಮಧ್ವ ಶಾಸ್ತ್ರಗಳನುದ್ಧರಿಸುತಲದನಾ | ಟೀಕೆಯನೇ ಮಾಡೀವಿದ್ವಜ್ಜನರಿಗೆ ತಿದ್ದಿಯೆ ಪೇಳುತಲೀ |ನಾನಾ ಬಗೆಯಿಂದಲಿಪದ್ಧತಿ ತಿಳಿಸಿದ ಗುರುರಾಯರು ನೀವು | ಯತಿವರ ಸುರಧೇನುಅದ್ವೈತರ ಗುರು ವಿದ್ಯಾರಣ್ಯರ | ಗೆದ್ದ ಸಿಂಹ ನೀನೂ 4 ಆಷಾಢ ಬಹುಳ ಪಂಚಮಿಯೂ ಬರುತಾ ಕಳೆಬರವನೆ ಬಿಡುತಾವ್ಯಾಸ ವಿಠ್ಠಲನ ಪಾದದಲೇ ನಿರುತಾ | ಮಳಖೇಡದೊಳುವಾಸಿಪನೆಂಬೋ ಬಲು ಪ್ರಖ್ಯಾತಾ |ನಿಜಗುಣ ಗಣನೀತಾಬ್ಯಾಸರದಲೆ ಕೊಂಡಾಡಿದರೆ ನಿತ್ಯಾ | ಇಷ್ಟಾರ್ಥವನಿತ್ತಾ 5
--------------
ವ್ಯಾಸವಿಠ್ಠಲರು
ಟೀಕಾರ್ಯ - ಟೀಕಾರ್ಯ ಪ ಕಾಕು ಮತಗಳ ವಿ | ವೇಕದಿ ಖಂಡನ ಅ.ಪ. ಎತ್ತಾಗಿರುತಿರೆ | ಶಾಸ್ತ್ರಬೋಧ ಶ್ರುತಉತ್ತಮ ಸಂಸ್ಕøತಿ | ಪೊತ್ತು ಜನಿಸಿದೆ 1 ಲಕ್ಷವಿತ್ತನೀ | ಲಕ್ಷಿಸದಲೆ ಮುನಿತ್ರ್ಯಕ್ಷನಂಶರಿಂ | ಭಿಕ್ಷುಕನಾದವ 2 ಮಧ್ವಶಾಸ್ತ್ರ ದು | ಗ್ದಾಬ್ಧಿ ಮಥಿಸಿ ಬಹುಶುದ್ಧ ಸುಧೆಯ ನೀ | ಮೆದ್ದು ಉಣಿಸಿದೆ 3 ಮೌನಿ ಮಧ್ವಕೃತ | ಮಾನ ಲಕ್ಷಣಕೆಗಾನ ಮಾಡ್ದೆ ಪ್ರ | ಮಾಣ ಪದ್ಧತಿಯ 4 ಪದ್ಧತಿಯಿಂದಲಿ | ವಿದ್ಯಾರಣ್ಯರಸದ್ದಡಗಿಸಿದೆಯೊ | ಬುದ್ಧಿ ಚಾತುರ್ಯ 5 ಯೋಗಿ ವರೇಣ್ಯನೆಕಾಗಿನಿ ತೀರಗ ಭಾಗವತರ ಪ್ರಿಯ 6 ಮಾವಿನೋದಿ ಗುರು | ಗೋವಿಂದ ವಿಠಲನಭಾವ ಕುಸಮದಿಂ | ದೋವಿ ಪೂಜಿಸುವ 7
--------------
ಗುರುಗೋವಿಂದವಿಠಲರು
ಡಂಕವ ಸಾರಿದನೋ ಯಮ ತನ್ನ ನಗರದಿ ಘಂಟೆಯ ನುಡಿಸಿದನು ಪ ಡಂಕಸಾರಿದ ತನ್ನ ತುಂಟದೂತರಿಗ್ವೊ ಯ್ಕುಂಠನ ದಾಸರ ತಂಟೆಯು ಬೇಡೆಂದು ಅ.ಪ ಕಾಲಕಾಲದಿ ಹರಿಯಕಥೆ ಕೀರ್ತ ನಾಲಿಸುವರ ನೆರೆಯು ತಾಳದಮ್ಮಡಿ ಸಮ್ಮೇಳದೊಡನೆ ಆ ನೀಲಶ್ಯಾಮನ ಭಜಿಪರಾಳಿನಾಳನುಕಂಡು ಕಾಲನಾಲುಗಳೆಂದ್ಹೇಳದೆ ಬನ್ನಿರೆಂದು 1 ಮಂದಿರಂಗಳದಿ ವೃಂದಾವನ ದಂದ ಕಂಡಾಕ್ಷಣದಿ ಸಿಂಧುಶಯನ ಬಂಧುಭಕ್ತರ ಮಂದಿರವಿದೆಂದು ಹಿಂದಕ್ಕೆ ನೋಡದೆ ಸಂದ್ಹಿಡಿದೋಡಿ ಪುರ ಬಂದು ಸೇರಿರೆಂದು 2 ಪರರಂಗನೆಯರ ಸ್ಮರಿಸುವ ಪರಮ ನೀಚರನ್ನು ನರಹರಿ ಸ್ಮರಣೆಯ ಅರಿಯದ ಆಧಮರ ಕರುಣಿಸದೆ ತುಸುಮುರಿದು ಮುಸುಕಿಕಟ್ಟಿ ದರದರನೆಳೆತಂದು ಉರಿಯೊಳ್ಪೊಯಿರೆಂದು 3 ಪರದ್ರವ್ಯವಪಹರಿಸಿ ಲಂಚದಿಂದ ಸರುವ ತನ್ನದೆನಿಸಿ ನಿರುತ ಮಡದಿಮಕ್ಕಳೊರೆವ ದುರಾತ್ಮನರ ಗುರುತಳನೆಳತಂದು ಕರಿಗಿದಸೀಸಬಾಯೊಳ್ ವೆರಸಿ ಜನಕಕೊಂಡದುರುಳಿಸಿಬಿಡಿರೆಂದು 4 ವೇಣು ಕರದಿ ಪಿಡಿದು ಬಾಣಾರಿ ಧ್ಯಾನದೊಳಗೆ ಬರೆದು ಜಾನಕೀಶನ ಲೀಲೆ ಗಾನದಿಂ ಪಾಡುತ ಆನಂದಿಪ ಮಹಜ್ಞಾನಿಗಳನು ಕಂಡು ಕಾಣದಂತೆ ಸಿಕ್ಕ ಜಾಣ್ಣುಡಿದೋಡಿರೆಂದು 5 ಇಂದಿರೇಶನದಿನದಿ ಅನ್ನವನು ತಿಂದ ಮೂಢರ ಭರದಿ ತಂದು ಒದೆದು ಮಹಗಂಧಮದು ರ್ಗಂಧನಾರುವ ಮಲತಿಂದು ಬದುಕಿರೆಲೊ ಎಂದು ಮನೆಹೊರಗಿನ ಮಂದಿರದಿಡಿರೆಂದು 6 ವಿಮಲ ತುಳಸೀಮಣಿಯ ಧರಿಸಿ ಅಮಿತ ಮಹಿಮನ ಚರಿಯ ವಿಮಲಮನಸರಾಗಿ ಕ್ರಮದಿ ಬರುವ ಶ್ರೀ ರಾಮದಾಸರ ಪಾದಕಮಲಗಳನು ಕಂಡು ಯಮದೂತರೆನ್ನದೆ ನಮಿಸಿ ಬನ್ನಿರೆಂದು 7
--------------
ರಾಮದಾಸರು
ಡಂಕಿ ಹೊಯ್ಸಿದ ನಮ್ಮ ವೆಂಕಟರಾಯನು ಪಂಕಜಾಕ್ಷರ ಮುಯ್ಯ ತಿರುಗಿಸಿ ಅಸಂಖ್ಯ ರಾಜರು ಬರಬೇಕೆಂದುಪ. ಸುರರು ಮೊದಲೆ ತೀವ್ರದಿಂದ ಬರಬೇಕೆಂದುಭೇರಿನಾದವ ಮಾಡಿದ ಕೃಷ್ಣಬಾರೆ ಬಾರೆ ಭಾಗ್ಯನಿಧಿಯೆ1 ಬೊಮ್ಮಮೊದಲಾದ ಸುರರುತಮ್ಮ ತಮ್ಮ ಸತಿಯರಿಂದ ಝಮ್ಮನೆ ಮುಯ್ಯಕ್ಕೆ ಬರಬೇಕೆಂದುರಮ್ಯಕಾಳಿ ಹಿಡಿಸಿದ ಕೃಷ್ಣ2 ಇಂದ್ರ ಮೊದಲಾದ ಸುರರುಚಂದ್ರ ಸೂರ್ಯರೊಡಗೂಡಿತಂದೆ ರಾಮೇಶನರಮನೆಗೆಒಂದು ಕ್ಷಣದಿ ಬರಬೇಕೆಂದು3
--------------
ಗಲಗಲಿಅವ್ವನವರು
ಡಂಗುರ ಹೊಡಿಸಿದ ಯಮನು | ಪಾಪಿ ಹೆಂಗೆಳೆಯವರ ತಂದು ಭಂಗಪಡೆಸಿದರೆಂದು ಪ ಮೃತಿಕೆ ಶೌಚÀದ ಗಂಧ ಪೋಗುವಂತೆ | ನಿತ್ಯದಲ್ಲಿ ಸ್ನಾನ ಮಾಡದೆ ಸುಮ್ಮನೆ || ತೊತ್ತು ಒಡತಿಯಾಗಿ ಮುಖವ ತೊಳಿಯದಿಪ್ಪ | ಕತ್ತೆ ಹೆಂಗಸರನು ಕಡಿದು ಕೊಲ್ಲಿರೊ ಎಂದು 1 ಪತಿಗೆರಗದೆ ಗೃಹಕೃತ್ಯ ಮಾಡುವಳ | ಮತಿವಿರದೆ ಚಂಚಲದಿಪ್ಪಳ || ವ್ರತಗೇಡಿ ಅನ್ಯರ ಮಾತಿಗೆ ಸೋಲುವ | ಪತಿತಳ ಎಳೆತಂದು ಹತವ ಮಾಡಿರೆಂದು 2 ಒಬ್ಬರಿಬ್ಬರ ಕೂಡ ಸಖತನ ಮಾಡುವಳ | ಒಬ್ಬೊಬ್ಬರಿಗೆ ಮೈಯಿತ್ತು ಪಾಡುವಳೆ || ಅಬ್ಬರದ ಸೊಲ್ಲನು ವಿಸ್ತರಿಸುವಳ | ದಬ್ಬಿರೊ ವೃಶ್ಚಿಕದ ಕುಂಡದೊಳಗೆ ಎಂದು 3 ವಸನವಿಲ್ಲದೆ ಮೈಯ ತೊಳಕೊಂಬೊ ಪಾಪಿಯ | ಅಶನ ಭಕ್ಷಿಸುವಾಗ ಅಳಲುವ ದುಃಖಿಯ ಪೆಸರಿಯ ತರೆ ಕೆಳಗಾಗಿ ಬಾಧಿಸರೆಂದು 4 ಬಿಗಿದು ಪುಟವ ಹಾಕಿ ಬದಿ ಬಗಲ ಮುಚ್ಚದೆ | ನಗುವಳು ಅವರಿವರೆಂದರಿಯದೆ || ಬಗೆ ಬಗೆ ವಯ್ಯಾರ ನಿಜವಾಗಿ ತೋರುವ | ಅಧಮ ನಾರಿಯೆ ತಂದು ಅರಿದು ಕೊಲ್ಲಿರೊ ಎಂದು 5 ಪಾಕದ ಪದಾರ್ಥ ನೋಡಿ ಇಡದವಳ | ಲೋಕವಾರ್ತೆಗೆ ಮನೆಯ ಜರಿದು ಪತಿಗೆ || ಬೇಕಾದವರ ಜರಿದು ಬಹುಪುಷ್ಪ ಮುಡಿದಿಪ್ಪ ಕಾಕಿಯ ಎಳೆತಂದು ಕಣ್ಣು ಕಳಿಚಿರೆಂದು 6 ಪಂಕ್ತಿ ಭೇದವ ಮಾಡಿ ಬಡಿಸುವ ಪಾಪಿಯ | ಕಾಂತ ಕರೆದಾಗ ಪೋಗದವಳ || ಸಂತರ ನೋಡಿ ಸೈರಿಸದಿಪ್ಪ ನಾರಿಯ | ದಂತಿಯ ಕೆಳಗೆ ಹಾಕಿ ತುಳಿಸಿ ಕೊಲ್ಲಿರೊ ಎಂದು 7 ವಿಧವೆಯ ಸಂಗಡ ಇರಳು ಹಗಲು ಇದ್ದು | ಕದನ ತೆರೆದು ನೆರಳು ನೋಡುವಳ || ಕದದ ಮುಂದೆ ಕುಳಿತು ತಲೆ ಬಾಚಿ ಕೊಂಬುವಳ | ಕುದಿಸಿ ಕಟಾಹದೊಳು ಮೆಟ್ಟಿ ಸೀಳಿರೊ ಎಂದು 8 ಆವದಾದರು ತೊರೆದು ಪತಿದೈವವೆಂದರಿದು | ಸೇವೆಯ ಮಾಡಿ ಸುಜನರಿಗೆ ಬೇಗ || ದೇವೇಶ ವಿಜಯವಿಠ್ಠಲ ತಿರುವೆಂಗಳ | ಕೈವಲ್ಯ ಕಲ್ಪಿಸಿ 9
--------------
ವಿಜಯದಾಸ
ಡಂಬವಿಲ್ಲದೆ ಹರಿಯ ಭಜಿಸಿ ನಂಬಿ ಮನದಲಿ ಪ ಹಂಬಲಿಸದೆ ದುರ್ವಿಷಯವ ಹರುಷ ಪಡುತಲಿ ಅ.ಪ ಸಮಚಿತ್ತದಿ ವರ್ತಿಸಿ ಸಜ್ಜನರ ಕೂಡುತ 1 ಮನುಮಥನಾಟಕೆ ಸಿಲುಕದೆ ಮಮತೆಯ ಬಿಡುತ 2 ಕಾಮ ಮಖ್ಯರಿಪುಗಳನ್ನು ಕಡೆಗೆ ನೂಕಲು ಸ್ವಾಮಿ ಶ್ರೀ ಗುರುರಾಮವಿಠಲ ತೋರ್ಪನವರೊಳು 3
--------------
ಗುರುರಾಮವಿಠಲ
ಡಿಂಬದಲ್ಲಿ ಇರುವ ಜೀವ ಕಂಬಸೂತ್ರ ಗೊಂಬೆಯಂತೆಎಂದಿಗಿದ್ದರೊಂದು ದಿನ ಸಾವು ತಪ್ಪದು ಪ ಬಟ್ಟೆ ಕಾಣದು1 ಹತ್ತು ಎಂಟು ಲಕ್ಷ ಗಳಿಸಿ ಮತ್ತೆ ಸಾಲದೆಂದು ಪರರಅರ್ಥಕಾಗಿ ಆಸೆಪಟ್ಟು ಸುಳ್ಳು ನ್ಯಾಯ ಮಾಡ್ವರುಬಿತ್ತಿ ಬೆಳೆದು ತನ್ನದೆಂಬ ವ್ಯರ್ಥಚಿಂತೆಯನ್ನು ಮಾಡೆಸತ್ತು ಹೋದ ಮೇಲೆ ಅರ್ಥ ಯಾರಿಗಾಹುದೊ 2 ಹೊನ್ನು ಹೆಣ್ಣು ಮಣ್ಣು ಮೂರು ತನ್ನಲಿದ್ದು ಉಣ್ಣಲಿಲ್ಲಅಣ್ಣತಮ್ಮ ತಾಯಿ ತಂದೆ ಬಯಸಲಾಗದುಅನ್ನ ವಸ್ತ್ರ ಭೋಗಕಾಗಿ ತನ್ನ ಸುಖವ ಕಾಣಲಿಲ್ಲಮಣ್ಣುಪಾಲು ಆದಮೇಲೆ ಯಾರಿಗಾಹುದೊ 3 ಬೆಳ್ಳಿ ಬಂಗರಿಟ್ಟುಕೊಂಡು ಒಳ್ಳೆ ವಸ್ತ್ರ ಹೊದ್ದುಕೊಂಡುಅಳ್ಳಾಚಾರಿ ಗೊಂಬೆಯಂತೆ ಆಡಿ ಹೋಯಿತುಹಳ್ಳ ಹರಿದು ಹೋಗುವಾಗ ಗುಳ್ಳೆ ಬಂದು ಒಡೆಯುವಂತೆಉಳ್ಳೆ ಪೊರೆಯಂತೆ ಕಾಣೊ ಸಂಸಾರದಾಟವು 4 ವಾರ್ತೆ ಕೀರ್ತಿಯೆಂಬುವೆರಡು ಸತ್ತ ಮೇಲೆ ಬಂದವಯ್ಯವಸ್ತು ಪ್ರಾಣನಾಯಕನು ಎಲ್ಲಿ ದೊರಕ್ಯಾನುಕರ್ತೃ ಕಾಗಿನೆಲೆಯಾದಿಕೇಶವನ ಚರಣಕಮಲನಿತ್ಯದಲ್ಲಿ ಭಜಿಸಿ ಸುಖಿಯಾಗಿ ಬಾಳೆಲೊ 5
--------------
ಕನಕದಾಸ