ಒಟ್ಟು 2736 ಕಡೆಗಳಲ್ಲಿ , 100 ದಾಸರು , 1962 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಾಮ ನಿನ್ನ ಭಜನೆಗೈಯುವೆ ಕಾಮಾರಿಮಿತ್ರ ರಾಮ ನಿನ್ನ ಭಜನೆಗೈಯುವೆ ಪ ರಾಮ ನಿನ್ನ ಭಜನೆಯನ್ನು ಪ್ರೇಮದಿಂದ ಮಾಳ್ಪ ಜನಕೆ ಕಾಮಿತಾರ್ಥವಿತ್ತು ಸುಖವ ಪ್ರೇಮದಿಂದಕರುಣಿಸುವವನೆ 1 ಜಾನಕಿಯರಮಣ ನಿನ್ನ ಧ್ಯಾನಮಾಳ್ಪೆನಯ್ಯ ಸತತ ಸಾನುರಾಗದಿಂದ ಸಲಹು ಭಾನುವಂಶ ಜಲಧಿಚಂದ್ರ 2 ಇಂದಿರೇಶ ನಿನ್ನ ಪಾದವಿಂದು ಪೂಜೆಗೈವೆ ನಾನು ತಂದೆ ಸಲಹೊ ರಾಗದಿಂದ ಸುಂದರಾಂಗ ಸುಪ್ರಸನ್ನ 3 ಹಾರ ಕುಂಡಲಾದಿಭೂಷ ಚಾರುಮಕುಟಧರಸುಶೋಭ ಸಾರಸಾಕ್ಷ ರವಿಜವರದ ತೋರೋ ಮುಖವ ರಾಘವೇಂದ್ರ 4 ರಾವಣಾದಿ ಸಕಲದನುಜ ಜೀವಹರಣ ರಘುಕುಲೇಶ ಪಾವಮಾನಿ ಪೂಜಿತಾಂಘ್ರಿ ಧೇನುಪುರನಿವಾಸ ದೇವ 5
--------------
ಬೇಟೆರಾಯ ದೀಕ್ಷಿತರು
ರಾಮ ನಿನ್ನಯ ದಿವ್ಯ ನಾಮವೇ ಗತಿಯೆಂಬೆ ಪಾಮರನೆಂದೆನ್ನ ಪಾಲಿಸು ತಂದೆ ಪ. ಸುರರಾಜನಂಗಸಂಗವಗೈದು ಶಿಲೆಯಾದ ವರಮುನಿ ಗೌತಮನರಸಿಯು ನಿನ್ನ ಚರಣಾರವಿಂದ ಸಂಸ್ಪರ್ಶಮಾತ್ರದಿ ದಿವ್ಯ ತರುಣಿಯಾಗಿಹಳೆಂಬ ಪರಿಯ ನಂಬಿದೆನು 1 ಪ್ರಥಮ ವರ್ಣವು ಪಾಪ ತತಿಗಳ ತರಿವುದು ಜತನ ಮಾಡುವುದನ್ಯ ವರ್ಣವೆಂದೆನುತ ನಿತ್ಯ ಸಂಸ್ತುತಿಮಾಳ್ಪವದರಿಂದಾ- ಶ್ರಿತ ಕಲ್ಪತರು ನೀನೆ ಗತಿಯೆಂಬೆ ನಿರತಾ 2 ನಿತ್ಯ ನಿರ್ನಾಮಗೊಳಿಸು ಪನ್ನಗಾಚಲನಾಥ ಪರಿಪೂರ್ಣ ಕೃಪೆಯಿಂದ ಮನ್ನಿಸಿ ಮನಸನ್ನು ನಿನ್ನಲ್ಲಿ ಇರಿಸು 3
--------------
ತುಪಾಕಿ ವೆಂಕಟರಮಣಾಚಾರ್ಯ
ರಾಮ ರಾಮ ರಾಮ ಎಂದು ಸ್ಮರಿಸೊ ನೀ ಮನಾ ಪ್ರೇಮದಿಂದ ಜಾನಕಿಪತಿಯ ಅನುದಿನಾ ಪ ಇಂದು ಶೇಖರ ವಂದ್ಯ ಗೋವಿಂದ ದೇವನಾ ಮಂದರಾದ್ರಿ ಗಿರಿಯನೆತ್ತಿದ ಮಹಾಮಹಿಮನ ಕಂದ ಕೂಗಲು ಕಂಬದಿ ಬಂದ ಕರುಣಾ ಸಾಗರನ ಚಂದದಿಂದ ಚಲನೆಯಿಲ್ಲದೆ ಚೆಲುವ ಕೃಷ್ಣನಾ 1 ಕುಲಸತಿಯ ಕುಚದಲ್ಲಿಟ್ಟ ಕೋಮಲಾಂಗನ ಒಲಿದು ಧ್ರುವಗೆ ಪಟ್ಟವನಿತ್ತ ವಾರಿಜನಾಭಾನಾ ಜಲದಿ ಬಂಧಿಸಿ ದೈತ್ಯರನ ಛೇದಿಸಿದಾತನಾ ಸುಲಭದಿಂದ ಹೃದಯದಲ್ಲಿ ಸ್ತುತಿಸೊ ನೀ ಇನ್ನಾ 2 ಸಿಂಧುಶಯನ ಶ್ರೀನಿವಾಸ ಸಕಲಕರ್ತನಾ ನಂದದಿಂದ ಹೆನ್ನ ವಿಠ್ಠಲ ಇಂದಿರೇಶನ ಪಾದ ದ್ವಂದ್ವ ಭಜಿಸಿ ಹರುಷದಿ ಮನಾ ಕುಂದುಯಿಲ್ಲದೆ ಕಾಯ್ವ ಭಾನುಕೋಟಿ ತೇಜನಾ 3
--------------
ಹೆನ್ನೆರಂಗದಾಸರು
ರಾಮಕೃಷ್ಣವಿಠಲ | ಪೊರೆಯ ಬೇಕಿವಳಾ ಪ ಸನ್ನುತ ಹರಿಯೆ | ಪ್ರಾರ್ಥಿಸುವೆ ಧೊರೆಯೇ ಅ.ಪ. ಮೋದ ತೀರ್ಥರ ಮತದಿ | ಉದುಭವಿಸಿ ಇರುತಿರ್ಪಸಾಧು ಕನ್ನಿಕೆ ಇವಳಾ | ವೇದಾಂತ ವೇದ್ಯಾ |ಮೋದದಾಯಕನಾಗಿ | ಶ್ರೀಧರನೆ ತರತಮವಭೇಧ ಪಂಚಕ ತಿಳಿಸಿ | ಕಾದುಕೋ ಬಿಡದೆ 1 ಅಹಿಕ ಪಾರತ್ರಿಕದಿ | ಬಹುಸಖ್ಯಗಳ ಕೊಟ್ಟುಮಹಿತ ನಿನ್ನಯ ನಾಮ | ರೂಪಕ್ರಿಯ ಗುತಾಮವಿಹಿತ ಮಾರ್ಗದಿ ತುತಿಸಿ | ತವಚರಣಕರ್ಪಿಸುವಮಹಭಾಗ್ಯ ಇವಳೀಗೆ | ಓದಗಿಸೋ ಹರಿಯೇ 2 ಅಡಿಗಡಿಗೆ ಬರುತಿರ್ಪ | ಕಡುವಿಘ್ನ ಪರಿಹರಿಸೊಕಡುದಯಾ ಪರಿಪೂರ್ಣ | ಕರಿವರದ ಕೃಷ್ಣಾ ಬಡವಿಪ್ರಗೊಲಿದಂತೆ | ಭಕುತ ಜನ ಪರಿಪಾಲಪಿಡಿಯುವುದು ಕೈ ಇವಳ | ಬಾಲ ಗೋಪಾಲ 3 ಕಲಿಯುಗದಿ ಸಾಧನವು | ಬಲುಕಷ್ಟವೆನಿಸಿಹುದುಕಲಿಮಲಾಪಹಗಂಗೆ | ಪಿತನ ಚರಣಾಬ್ಜಾಓಲುಮೆಯಿಂ ಭಜಿಪರ್ಗೆ | ಭವಭಂಧ ಪರಿಹಾರಅಳವಡಿಸೊ ಇವಳೀಗೆ | ತವನಾಮಕವಚಾ 4 ಕೋವಿದರ ಪರಿಪಾಲ | ಪಾವಮಾನಿಯ ಪ್ರೀಯನೋವು ಸುಖ ದ್ವಂದ್ವಗಳ | ಸಮತೆಯಲಿಯುಂಬಾಭಾವವನೆ ಕರುಣಿಸುತ | ಭವವ ನುತ್ತರಿಸೆಂದುದೇವ ಗುರು ಗೋವಿಂದ | ವಿಠಲ ಪ್ರಾರ್ಥಿಸುವೇ 5
--------------
ಗುರುಗೋವಿಂದವಿಠಲರು
ರಾಮಚಂದ್ರ ಹರಿ ವಿಠಲ | ನೀನಿವನ ಸಲಹೋ ಪ ಕರ ಪಿಡಿದು | ಕಾಮಿತವನಿತ್ತುಅ.ಪ. ಕರ ಪಿಡಿಯಯ್ಯ | ಪ್ರಹ್ಲಾದ ವರದಾಮರುತ ಮತ ದೀಕ್ಷೆಯಲಿ | ದೃಢವಾದ ಮತಿಯಿತ್ತುವರಗಳನೆ ನೀಡುವುದು | ಮರುತಾಂತರಾತ್ಮಾ 1 ತಾರತಮ್ಯವ ತಿಳಿಸೊ | ಪಂಚ ಭೇಧವ ತಿಳಿಸೋಕಾರ್ಯ ಕಾರಣ ನೀನೇ | ಬೇಡುವೆನು ನಿನ್ನಾಹರಿಯು ಸರ್ವೋತ್ತಮನು | ಮರುತ ಜೀವೋತ್ತಮನುನಿರುತ ನೀ ಸುಜ್ಞಾನ | ಅರಿವನೀಯುತ ಸ್ವಾಮೀ2 ನಾನು ನನ್ನದು ಎಂಬ | ಸಂಸ್ಕಾರವನೆ ಕಳೆದುನೀನು ನೀನೇ ಎಂಬ | ಉಪಾಯ ಒಲಿಸೇಕಾಣಿಸೋ ಹೃದ್ಗುಹದಿ | ಗಾನಲೋಲನೆ ದೇವಕೊನೇರಿ ವಾಸ ಹರಿ | ಪ್ರಾರ್ಥಿಸುವೆ ನಿನ್ನಾ 3 ಪತಿ ಅದ್ವೈತ ಸಿರಿ ಜಾನಕೀ ಪತಿಯೇ 4 ಕರ | ಪಿಡಿದು ಉದ್ಧರಿಸುತಲಿಪೊರೆಯೊ ಗುರು ಗೋವಿಂದ | ವಿಠಲ ಕಾರುಣ್ಯ 5
--------------
ಗುರುಗೋವಿಂದವಿಠಲರು
ರಾಮಚಂದ್ರವಿಠ್ಠಲನೆ ನೀನಿವನ ಕಾಮಿತಾರ್ಥಗಳಿತ್ತು ಕಾಪಾಡೊ ಹರಿಯೇ ಪ ಭೂಮಿಜೆಯ ರಮಣ ಸುರಸಾರ್ವಭೌಮನೆ ದೇವಪ್ರೇಮ ಈಕ್ಷಣದಿಂದ ನೋಡೊ ದಯಾಸಾಂದ್ರ ಅ.ಪ. ಗುರುದ್ವಾರವಿಲ್ಲದಲೆ | ಗರುಡವಾಹನ ಕರುಣದೊರಕಲಾರದು ಎಂಬ | ಸ್ಥಿರಮತಿಯನಿತ್ತೂಗುರುಭಕ್ತಿ ಹರಿ ಭಕ್ತಿ | ಕರುಣಿಸುತ ವೈರಾಗ್ಯಸ್ಥಿರಮಾಡಿ ಪಾಲಿಪುದು | ತರತಮದ ಜ್ಞಾನಾ 1 ಪತಿ ಪ್ರೀಯಪ್ರಾಕ್ಕುಕರ್ಮವ ಕಳೆದು ಕಾಪಾಡಬೇಕೋ 2 ಮಧ್ವಮತ ಸಿದ್ಧಾಂತ ಪದ್ಧತಿಯ ತಿಳಿಸುತ್ತಬುದ್ಧಿಪೂರ್ವಕ ನಿನ್ನ ಗುಣರೂಪ ಕ್ರಿಯೆಗಳಾಶ್ರದ್ಧೆಯಿಂದಲಿ ಭಜಿಪ ಸದ್ಬುದ್ಧಿ ಪಾಲಿಸುತಮಧ್ವೇಶ ಇವನ ಹೃನ್ಮಧ್ಯದಲಿ ಪೊಳೆಯೋ 3 ಶರ್ವಾದಿ ದಿವಿಜೇಡ್ಯ ದುರ್ವಿಭಾವ್ಯನೆ ದೇವಸರ್ವತ್ರ ಸರ್ವದಾ ತವಸ್ಮøತಿಯನಿತ್ತೂನಿರ್ವಿಘ್ನತೆಯಲಿವನ ಸಾಧನವ ಪೂರೈಸಿಅಸ್ವತಂತ್ರನ ಬಂಧ ಪರಿಹರಿಸಿ ಕಾಯೋ 4 ಭಕ್ತವತ್ಸಲನೆಂಬೊ ಬಿರಿದುಳ್ಳ ಶ್ರೀಹರಿಯೆಭೃತ್ಯನಿಗೆ ಬಪ್ಪ ಅಪಮೃತ್ಯು ಪರಿಹರಿಸೀಸತ್ಯ ಗುರು ಗೋವಿಂದ ವಿಠ್ಠಲನೆ ನೀನಿವಗೆನಿತ್ಯಾಯು ಪ್ರದನಾಗು ಎಂದು ಪ್ರಾರ್ಥಿಸುವೆ 5
--------------
ಗುರುಗೋವಿಂದವಿಠಲರು
ರಾಮತಾರಕ ಮಂತ್ರ ಜಪಿಸಿ | ಸರ್ವಕಾಮಗಳ ಪಡೆದವನೆ ನಮಿಸಿ | ಬೇಡ್ವೆಕಾಮದುಷ್ಟಗಳ ಪರಿಹರಿಸಿ | ಹೃದ್‍ಧಾಮೆ ಹರಿ ತೋರೊ ಕರುಣಿಸೀ ಪ ಗಜ ಅಜಿನ ಧರಿಸಿ | ಮತ್ತೆಕರ್ಪರವ ಕೈಯಲ್ಲಿ ಇರಿಸಿ | ನೀನುಅಪವಿತ್ರ ಅಶಿವ ನೆಂದೆನಿಸೀ | ವರಮಸಫಲ ಶಿವ ಅಮಂಗಳವ ಹರಿಸೀ 1 ಪರಮ ಸದ್ಭಾಗವತ ಮೂರ್ತೇ | ಲಕ್ಷ್ಮೀನರಹರಿಯ ಆಣತಿಯ ಪೊತ್ತೇ | ವಿಷಯನಿರತರನು ಹರಿವಿಮುಖ ಶಕ್ತೆ | ಕಾಯೊಹರ ಸದಾಶಿವ ಭಾವ ಮೂರ್ತೇ 2 ತಪದಿಂದ ಹರಿಯೊಲಿಸೆ ನೀನು | ಹತ್ತುಕಲ್ಪ ಲವಣಾಂಭುದಿಯಲಿನ್ನು | ಗೈದೆತಪ ಉಗ್ರದಲಿ ಪೇಳ್ವುದೇನು | ನೀನು`ತಪ` ನೆಂದು ಕರೆಸಿದೆಯೊ ಇನ್ನು 3 ಶುಕಿಯಾಗಿ ಬಂದ ಅಪ್ಸರೆಯ | ಕೂಡ್ಡಅಕಳಂಕ ವ್ಯಾಸಾತ್ಮ ಧೊರೆಯ | ಮಗನುಶುಕನಾದೆ ಶಿವನೆ ಇದು ಖರೆಯ | ನುತಿಪೆಪ್ರಕಟ ಭಾಗವತಕ್ಕೆ ಧೊರೆಯ 4 ಮಾರುತನು ನಿನ್ನೊಳಗೆ ನೆಲಿಸಿ | ಗೋಪ್ಯದೂರೆಂಬ ನಾಮವನೆ ಧರಿಸಿ | ಇರಲುದೂರ್ವಾಸನೆಂಬ ಕರೆಸಿ | ಮೆರೆವಭೂ ಭೃತರ ಮಾನವನೆ ಕೆಡಿಸಿ 5 ಪತಿ ಸಂಗ ರಹಿತೆ | ಎನಿಸೆಭಾರತಿಯ ದೇಹದಲಿ ಜಾತೆ | ಇರಲುಪ್ರಾರಬ್ಧ ಭೋಗಿಸುವ ಮಾತೆ | ಎನಿಸಿವೀರ ಅಶ್ವತ್ಥಾಮ ಕೃಪೆ ಜಾತೆ 6 ಧಾಮ ಈಶಾನ್ಯದಲಿ ಇದ್ದು | ನಿನ್ನವಾಮದಲಿ ವಾಸುದೇವಿದ್ದು | ನೀನುವಾಮದೇವನ ಪೆಸರು ಪೊದ್ದು | ಧರಿಪೆಸ್ವಾಮಿ ಪೂಜಕನೆಂಬ ಮದ್ದು 7 ಕಾಲಾತ್ಮ ನಿನ್ನೊಳಗೆ ನೆಲಸಿ | ಪ್ರಳಯಕಾಲದಲಿ ಜಗವ ಸಂಹರಿಸಿ | ನಿನ್ನಕಾಲಾಖ್ಯ ನೆಂತೆಂದು ಕರೆಸಿ | ಮೆರೆವಲೀಲಾತ್ಮ ನರಹರಿಯು ಎನಿಸಿ 8 ಶಫರ ಹರಿದ್ವೇಷಿಗಳು ಎನಿಪ | ದೈತ್ಯತ್ರಿಪುರಸ್ಧರನು ಸಂಹರಿಪಾ | ಶಿವನೆವಪು ಧರಿಸಿ ಅಘೋರ ನೆನಿಪಾ | ಗೈದಅಪವರ್ಗದನ ಸೇ5ರೂಪ 9 ಹೃದ್ಯ ಹರಿಸೇವೆಂi5Àು ಗೈವಾ | ಮನದಿಬದ್ಧ ದ್ವೇಷಿಗಳೆಂದು ಕರೆವಾ | ದೈತ್ಯಕ್ರುದ್ಧರ ತಪಕೆ ಸದ್ಯ ವರವಾ | ಇತ್ತುಸಧ್ಯೋಜಾತನೆನಿಸಿ ಮೆರೆವ 10 ಹರಿಯಂಗ ಸೌಂದರ್ಯ ನೋಡಿ | ನೋಡಿಪರಮಾನಂದವನೆ ಗೂಡೀ | ಇಂಥಹರಿಪದ ದೊರಕೆ ಚಿಂತೆ ಗೂಡಿ | ಅತ್ತೆಹರುಷದಿ ಊರು ಸುತ ಪಾಡಿ 11 ಊರು ನಾಮಕ ರುದ್ರನಿಂದ | ಜಾತಕಾರಣ ಔರ್ವಭಿಧದಿಂದ | ಕರೆಸಿಉರ್ವರಿತ ರೋದನದಲಿಂದ | ಮೆರೆದೆಮಾರಾರಿ ಔರ್ವಭಿಧದಿಂದ 12 ವಿಷಯದಲಿ ಆಸಕ್ತರಾದ | ಮುಕ್ತಿವಿಷಯಕೆ ಬಹುಯೋಗ್ಯರಾದ | ಜನರವಿಷಯಾನುಕಂಪಿತನು ಆವ | ರುದ್ರಹಸನಾಗಿ ರೋದಿಸಿದಗಾಢ 13 ಕಮಲಾಕ್ಷಿ ದಕ್ಷಸುತೆ ತನ್ನ | ದೇಹವಿಮಲಯೋಗಾಗ್ನಿಯಲಿ ಭಗ್ನ | ಮಾಡಿಹಿಮದಾದ್ರಿ ಯೊಳಗೆ ಉತ್ಪನ್ನ | ವಾಗೆವಿಮಲ ಶಿವಗೊಂಡ ವ್ರತ ಕಠಿಣ 14 ಆದ್ಯಕಾಲದಲಿಂದ ಊಧ್ರ್ವ | ರೇತಬುದ್ಧಿಮಾಡುತ ತಪವು ಶುದ್ಧ | ಗೈದುಸಿದ್ಧನಾಗಿರುತಿರಲು ರುದ್ರ | ಕೇಳಿಊಧ್ರ್ವ ನೆಂಬಭಿಧಾನ ಪೊದ್ದ 15 ಕಾಮಹರ ತಪದಿಂದಲೆದ್ದು | ಬಹಳಪ್ರೇಮದಲಿ ಅದ್ರಿಸುತೆ ಮುದ್ದು | ಮಾಡಿಕಾಮಲಂಪಟನೆಂಬ ಸದ್ದು | ಗಳಿಸಿನಾಮ ಲಂಪಟ ನೆಂದು ಪೊದ್ದು 16 ಹರಪೊತ್ತ ಹನ್ನೆರಡು ನಾಮ | ದಿಂದಹರಿಮುಖ್ಯನಿಹನೆಂಬ ನೇಮ | ತಿಳಿದುಹರನ ಪೂಜಿಸೆ ಈವ ಕಾಮ | ನೆಂದುಗುರು ಗೋವಿಂದ ವಿಠ್ಠಲನ ನೇಮ17
--------------
ಗುರುಗೋವಿಂದವಿಠಲರು
ರಾಮಾ ಕೃಷ್ಣಾ ಗೋವಿಂದಾ ಗೋಪಾಲ ಕೇಶವಾ | ಭವ ಪಾಶವಾ ಪ ಅಹಂಮಮತಾವೆಂಬಾ ಸಂಚಾರ ವಾಯಿತು | ಸೋಹಂವೆಂಬಾ ತಿಳಿವಾದೆಚ್ಚರ ಹೋಯಿತ್ತು | ನಾಹಂಕರ್ತಾನೆಂದು ಸುವಿಚಾರ ಸೇರಿದಾ | ಸೋಹಂ ಎಂದು ನುಡಿಯದಾ ಕುಮತಿ ಮೀರಿದಾ 1 ಅನಾತ್ಮದಲ್ಲಿ ಆತ್ಮ ಭಾವನೆ ಮೂಡಿದೇ | ಸನಾತನ ಚೈತನ್ಯ ತಾನೆಂದು ನೋಡದೆಲ | ಮನದಿಂದ ಈ ಕ್ಷಣ ತ್ರಯವಕೂಡಿದೇ | ಕನಸಿನಂದದಿ ಸಂಸಾರ ದೊಳಾಡಿದೇ2 ಮರಹು ಬಿಡಿಸಿ ನಿನ್ನೆಚ್ಚರ ದೋರಿಸೀ | ಚರಣದ ಭಜನೆಗೆ ಕಣ್ಣ ದೆರೆಸೀ | ಗುರುಮಹಿಪತಿ ಪ್ರಭು ದಯಬೀರಿಸೀ | ಹೊರೆವದೆನ್ನಯ ಅಪರಾಧ ಕ್ಷಮಿಸಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ರಾಮಾ ರಕ್ಷಿಸೋ ಎನ್ನ ಪ್ರೇಮಾ ಸಂಪೂರ್ಣಕಾಮಾ ಪ ಸ್ವಾಮಿ ಜಗನ್ನಾಥ ಸರ್ವಾಂತರ್ಯಾಮಿ ರಾಮಿಯ ರಮಣ ಶ್ರೀ ರಘುಕುಲಭೂಷಣ ಅ.ಪ ಅಂಗಜ ಜನಕಯ್ಯ ಮೋಹನಾಂಗ ಜಗದಂತರಂಗ ಶೃಂಗಾರ ಪರಿಮಳ ಭೂಷಿತಾಂಗಾ ಒಪ್ಪಿರುವೊ ರಂಗಾ ಗಂಗೆಯ ಜನಕ ತುರಂಗನೇರಿದಾ ಮಂಗಳ ಮಹಿಮ ಕುರಂಗಲೋಚನಾ ಅಂಗನೆಯರೆಡಬಲ ಸಂಗಡದಲಿ ಮೋಹಂಗಳ ಮಾಡುತ ಶೃಂಗಾರದಲಿ ರಂಗ ಮಂಟಪ ಮಧ್ಯರಂಗಲಿರುವ ರಾಮಂಗಾರ --- ಹೆನ್ನರಂಗನಾಯಕ 1 ಚಂದದಿಂದಾದಿ ವೇಣು -----ನಂದದಿ ಮೋದ ಮಂದಾರಧರ ಮಾಧವನಾದ ಗೋವಿಂದ ನಿ ನೋಡಾ ಸಿಂಧು ಶಯನ ಮುನಿ ವಂದಿತ ಚರಣಾರವಿಂದ ಭಜಿಸುವ ಕಂದನ ತೋರದಯ ದಿಂದ ಪಾಲಿಸುವ ತಂದೆಯು ನೀನೆ ಎಂದು ತಿಳಿದು ಈ ಪಾದ ಹೊಂದಿ ಭಜಿಸುವೆನು 2 ಚಂಡಶಾಸನ ಬಿರುದಿನಾ ದೇವಾದಿದೇವ ಮಂಡಲಾಧಿಪ ಮಹಾನುಭಾವ ಭಕ್ತರ ಕಾಯುವ ಪುಂಡರೀಕ ವರದಂಡ-----ಕುಂಡಲಿಶಯನ ಕೋ ದಂಡಧರ ಬಲೋದ್ದಂಡ ವಾನರದಂಡನೆ ಕೂಡಿಸಿ ಪುಂಡ ರಕ್ಕಸರ ಹಿಂಡನೆ ಹಿಡಿದು ಮಂಡಿಗಳನು ಬಿಡದೆ ಚಂಡಿಸಿದಂಥಾ ಗಂಡರಗಂಡ `ಶ್ರೀ ಹೆನ್ನೆವಿಠ್ಠಲಾ ' 3
--------------
ಹೆನ್ನೆರಂಗದಾಸರು
ರಾಮಾನಂದ ವಿಠಲ | ಪ್ರೇಮದಲಿ ಪೊರೆಯೋ ಪ ಭಾಮಿನಿಯ ಮೊರೆ ಕೇಳಿ | ಪ್ರಾರ್ಥಿಸುವೆ ಹರಿಯೇ ಅ.ಪ. ಅನುವಂಶಿಕವಾಗಿ | ಗಾನಕಲೆಯುಳ್ಳವಳುಮೇಣು ಸಂಸ್ಕಾರಗಳು | ಹೊಂದಿಕೊಳ್ಳುತಲೀಈ ನಾರಿ ಯಂಕಿತವ | ಕಾಂಕ್ಷಿಸುತ್ತಿಹಳಯ್ಯಶ್ರೀನಿವಾಸನೆ ಇವಳ | ಬಿನ್ನಪವ ಸಲಿಸೋ 1 ಪತಿಸುತರು ಹಿತರಲ್ಲಿ | ವ್ಯಾಪ್ತ ನೀನೆಂಬ ಸ-ನ್ಮತಿಯನೇ ಕರುಣಿಸುತ | ಕಾಪಾಡೊ ಹರಿಯೆಗತಶೋಕ ಗತಿಪ್ರದನೆ | ಹತಮಾಡಿ ಗರ್ವಗಳಸ್ಮøತಿಗೆ ವಿಷಯನು ಆಗಿ | ಸತತ ಪೊರೆ ಇವಳಾ 2 ಮೋದ ಕೊಡು ದೇವಾ 3 ಭವವೆನಿಪ ಅಂಬುಧಿಗೆ | ಪ್ಲವವೆನಿಪ ತವನಾಮಸ್ತವನ ಸಂತತಗೈವ | ಹವಣೆಯಲಿ ವಜ್ರಾಕವಚವನೆ ತೊಡಿಸುತ್ತ | ಭವತಾರ ಕೆಂದಿನಿಸೋಧ್ರುವವರದ ಕರಿವರದ | ಕಾರುಣ್ಯಮೂರ್ತೇ 4 ಛಲದ ಮುನಿ ಅನುಸರಿಸಿ | ಶಿಲೆಯ ಸತಿಯಳ ಮಾಡಿಜಲಜಾಕ್ಷಿ ಜನಕಜೆಯ | ಕೈಯನೇ ಪಿಡಿದೂಇಳೆಯ ಭಾದಕ ಕಳೆದ | ಚೆಲುವಂಗದವ ಸೂರ್ಯಕುಲ ತಿಲಕನೇ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ರುಕ್ಮಿಣೀಶ ವಿಠಲ | ಕಾಪಾಡೊ ಇವನಾ ಪ ವಿಖನ ಸಾಂಡದ ದೊರೆಯೆ | ಅಖಳಂಕ ಮಹಿಮಾ ಅ.ಪ. ಸುಪಥದಲಿ ನಡೆವಂತ | ನಿಪುಣತರ ನಿವನೀಗೆಉಪದೇಶವಿತ್ತಿಹೆನೊ | ಅಪವರ್ಗದಾತಾ |ಕೃಪಣ ವತ್ಸಲ ನಿನ್ನ | ಕೃಪೆ ದೃಷ್ಟಿಯಲಿ ನೋಡಿಅಪೇಕ್ಷಿತವನಿತ್ತು | ನೀ ಪೋಷಿಸಿವನಾ 1 ಜ್ಞಾನವಿಜ್ಞಾನದಲಿ | ನೀನಿರುವ ತತ್ವವನುನೀನಾಗಿ ತಿಳಿಸುತ್ತ | ಕಾಪಾಡೊ ಹರಿಯೇ |ಶ್ರೀನಿವಾಸನೆ ದಯಾ | ಪೂರ್ಣ ನೀನಾಗುತ್ತಜ್ಞಾನಭಕ್ತಿಯನಿತ್ತು | ಕಾಪಾಡೊ ಹರಿಯೆ 2 ಎಲ್ಲೆಲ್ಲು ನೀನಿರುವೆ | ಸೊಲ್ಲನ್ನು ಅನುಭವಕೆಉಲ್ಲಾಸದಲಿ ಇತ್ತು | ಬಿಲ್ಲಾಳು ಎನಿಸೋಬಲ್ಲಿದರ ಕೂಟದಲಿ | ಬಿಲ್ಲಿ ನಂತರಿಸುತ್ತಮಲ್ಲಮರ್ದನಕೃಷ್ಣ | ಕಾಪಾಡೊ ಇವನ 3 ಸತಿಸುತರು ಹಿತರಲ್ಲಿ | ವ್ಯಾಪ್ತ ನೀನೆಂದೆಂಬಮತಿಯನೇ ಕರುಣಿಸುತ | ಅತಿಶಯವ ತೋರೀಮತಿಮತಾಂವರರಂಘ್ರಿ | ರತಿಯನ್ನೆ ಕರುಣಿಸುತಮತಿವಂತ ನೆನಸಿವನ | ಮಾರುತನ ಮತದೀ 4 ದೇವತವ ಮಹಿಮೆಗಳು | ಭಾವದಲಿ ಪೊಳೆಯಲ್ಕೆಕೋವಿದರ ಸಂಗವನು | ನೀ ವೊಲಿದು ಈಯೋ |ನೀ ವೊಲಿಯದಿನ್ನಿಲ್ಲ | ಗೋವುಗಳ ಪರಿಪಾಲದೇವ ದೇವೇಶ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಲಕ್ಷುಮಿ ನಾರಾಯಣ ಸಂರಕ್ಷಿಸು ಎನ್ನನು ಬೇಗ ಪ. ಪಕ್ಷ್ಮ(?)ಗಳಕ್ಷಿಗಳನು ಕಾವಂದದೊಳಕ್ಷಯ ನಿಧಿಯ ಸ- ಮಕ್ಷದಿ ತೋರುತ ಅ.ಪ. ಅರ್ಭಕನಾ ಮೋರೆ ಕೇಳಿ ಕರ್ಬುರ ಚರ್ಮನ ಸೀಳಿ ಗರ್ಭೀತ ಕರುಳ ಮಹಾರ್ಭಟದಿಂ ತೆಗದುರ್ಬಿಗೆ ಬೀರಿದ ನಿರ್ಭಯಕಾರಿ 1 ಮಣಿಗರ್ಭ ಮೂರ್ತಿಗೆ ನೀ ಎಣೆಯಾಗಿಲ್ಲಿಗೆ ಬಂದು ಕುಣಿಯಲು ನಿಧಿ ಸಂದಣಿಗೊಳದಿರೆ ಲಕ್ಷಣಕೆ ಕೊರತೆಯಂ- ದೆಣಿಸರೆ ಸುಜನರು 2 ಶಕ್ರ ಚತುಷ್ಕರ ಸಿರಿಯು ಚಕ್ರಗದಾಬ್ಜರ ಪರಿಯು ವಕ್ರ ಮತಿಯ ರಿಪುಚಕ್ರವ ತರಿವ ಪರಾಕ್ರಮ ಕರುಣೋ- ಪಕ್ರಮ ತೋರುತ 3 ಅಂಬುಜನಾಭನೆ ನಿನ್ನ ನಂಬಿದ ಭಾವನೆಯೆನ್ನ ತುಂಬಿದ ಜಗದೊಳಗಿಂಬುಗೊಂಡಿಹ ನಿನಗೆಂಬುದೇನು ಪೀ- ತಾಂಬರ ಧಾರಿ4 ಎರಡೊಂದು ಋಣಬಂಧ ಪರಿಹರಿಸೊ ಗೋವಿಂದ ಸುರತರು ಕರುಣಾರಸವಿರಿಸು ಶೇಷಗಿರಿ- ವರ ತ್ವರೆಯಿಂದ 5
--------------
ತುಪಾಕಿ ವೆಂಕಟರಮಣಾಚಾರ್ಯ
ಲಕ್ಷುಮೀನಾರಾಯಣ ಜಯಲಕ್ಷುಮೀ ನಾರಾಯಣ ಲಕ್ಷುಮೀನಾರಾಯಣ ಜಯ ಲಕ್ಷುಮೀ ನಾರಾಯಣ ಪ. ಪಾದ ದಾನವ ಗರ್ವಹರಣ ಗದಾದಿ ಧಾರಣ ಪರ್ವತಾರಿ ವರ ಪ್ರದ 1 ನಂಬಿಕೊಂಡಿಹೆ ನಿನ್ನ ದಿವ್ಯ ಪದಾಂಬುಜಗಳನು ಸರ್ವಕಾಲದಿ ಮನದೊಳಗಿಂಬುಗೊಳು ಕಮಲಾಂಬಕ 2 ಆರು ಸಂಖ್ಯೆಯ ಕಳ್ಳರೆನ್ನನು ಗಾರುಮಾಡುವರಾದರಿಂದತಿ ಧೀರ ನಿನ್ನ ಪದಾರವಿಂದಕೆ ದೂರುವೆನು ರಘುವೀರನೆ 3 ದುರ್ಮತಿಗಳಾದಸುರಹರಣಕೆ ಭರ್ಮಗರ್ಭನು ಬಂದು ಸ್ತುತಿಸಲು ಧರ್ಮಸಂಸ್ಥಾಪಿಸುತ ಬಹು ಶುಭಕರ್ಮ ತೋರುವ ಕರುಣಿಯೆ 4 ಸಪ್ತ ಋಷಿಗಳ ಕೂಡಿಕೊಂಡತಿ ಭಕ್ತಿಯಿಂದಲಿ ನಿನ್ನ ಭಜಿಸಿದ ಸತ್ಯವ್ರತನಿಗೆ ಸಕಲ ಶ್ರುತಿಗಳ ತತ್ವ ತಿಳಿಸಿದ ಮತ್ಸ್ಯನೆ 5 ಮುಳುಗಿಕೊಂಡಿಹ ಅಮಿತಗುರು ಮಂದರವ ಧರಿಸುತ ಅಮೃತರಸ ತೆಗೆದಿತ್ತನೆ 6 ದೈತ್ಯನ ತರಿದು ಬಿಸುಟು ವಿ- ಜನಿತ ಪವಿತ್ರ ಯಜ್ಞ ವರಾಹನೆ 7 ಘಡುಘಡಿಸಿ ಕಂಬದೊಳು ಬಂದ ಸಿಡಿಲಿನಂತಿಹ ನಖದಿ ದೈತ್ಯನ ಒಡಲ ಬಗೆದನು ಕೋಪದಿಂದ 8 ದಾನಕೊಂಡನಾನೆವನದಿ ದಾನವಾಹೃತ ಧರೆಯ ಕಸ್ಯಪಸೂನುಗಳಿಗೊಲಿದಿತ್ತನೆ 9 ದುಷ್ಟಭೂಭುಜಭಾರದಿಂದತಿ ಕಷ್ಟಪಡುತಿಹ ಧರೆಯ ಕರುಣಾ ನೃಪರ ಕಡಿದ 10 ನೀರಜಾವದನಾರವಿಂದ ಮಹಾ ರಸಾಸ್ವಾದನ ಪದ ಕಪಿವೀರನಿಗೆ ಸ್ವಾರಾಜ್ಯ ನೀಡಿದ ಮಾರುತಿಗೆ ದಯ ಮಾಡಿದ 11 ಬಾಲ ಲೀಲೆಯ ತೋರಿ ಗೋಪಕ ಬಾಲೆಯರ ಕೂಡಾಡಿದೆ ಖೂಳಕಂಸನ ಕೆಡಹಿ ದಾನವಮೂಲ ಕಿತ್ತು ಬಿಸಾಡಿದೆ 12 ಜೈನರನು ಮೋಹಿಸುವೆನೆಂದನುಮಾನವಿಲ್ಲದೆ ನಗ್ನನಾಗಿ ಹೀನ ಬುದ್ಧಿಯ ತಿಳಿಸಿ ತ್ರಿಪುರವ ಹಾನಿಗೈಸಿದ ಬೌದ್ಧನೆ 13 ಸುಧೆಯನು ಕರೆದು ಶಿರದಲಿ ತುಂಗ ವಿಷಯ ತರಂಗ ತಪ್ಪಿಸು ಅಂಗಭಂಗವ ಶಿಂಗನೆ 14 ಮಿಂಚಿನೊಡ್ಡಿದ ಮೇಷನಂದದಿ ಪಂಚವರ್ಣದ ತುರಗವೇರಿ ಸಂಚರಿಸಿ ಮ್ಲೇಂಛರನು ಕೊಲ್ಲಿಸಿ ಲಾಂಛಜೀವನ ವರದನೆ 15 ಮಂದಿರದಿ ನೀ ಬಂದು ರಕ್ಷಿಪೆ ಎಂದು ಸಕಲಾನಂದಗೊಂಡಿಹೆ ಇಂದಿರೇಶನೆ ಎಂದಿಗೂ ಈ ಅಂದದಿಂದಲಿನಿಂದ ಸಲಹು 16 ಕೇಶವಾದಿ ದ್ವಿದಶರೂಪವು ಮಾಸಗಳಿಧಿಷ್ಠಾನನಿಗೆ ಪ- ರೇಶ ಕಡೆಯಲಿರುವ ಕಾರ್ತಿಕವಾಸ ದಾಮೋದರ ಹರನೆ 17 ಬಳಲಿ ಕರ್ಮವ ಮಾಡಲಾರೆ ನಳಿನಜಾರ್ಜಿತ ನಿನ್ನ ಪಾದದ ನೆಳಲನಂಬಿ ಸುಮ್ಮನಿರುವೆ 18 ಅಖಿಳದೋಷ ನಿವಾರಣಾದ್ಭುತ ಸಕಲಸದ್ಗುಣಧಾರಣಾ ಕುಂಡಲ ಧಾರಿ ವೆಂಕಟಶಿಖರ ವರ ಸುಖಕಾರಣಾ 19
--------------
ತುಪಾಕಿ ವೆಂಕಟರಮಣಾಚಾರ್ಯ
ಲಕ್ಷ್ಮಿ ನರಹರಿ ವಿಠಲ | ರಕ್ಷಿಸೋ ಇವಳ ಪ ತ್ರ್ಯಕ್ಷ ಬಿಂಬನೆ ಸ್ವಾಮಿ | ಪಕ್ಷಿವಹ ಕರುಣಾಕಟಾಕ್ಷ ದಿಂದೇಕ್ಷಿಸುತ | ಕಾಪಾಡೊ ಹರಿಯೇ ಅ.ಪ. ಅಕ್ಷಿ ಮೂರುಳ್ಳ ನಿಟಿ | ಲಾಕ್ಷನೈ ರೂಪದಲಿಅಕ್ಷಿ ಗೋಚರನಾಗಿ | ಸ್ವಚ್ಛ ತೈಜನನೇದೀಕ್ಷೆ ದಾಸತ್ವದಲಿ | ಲಕ್ಷ್ಯವಿಟ್ಟಿಹಳ ಉ-ಪೇಕ್ಷಿಸದೆ ದಯತೋರ್ದೆ | ಲಕ್ಷ್ಮಿ ನರಸಿಂಹಾ 1 ಮನ್ಯು ಸೂಕ್ತದಿಂ ಬ | ಹ್ಪನ್ನ ಭೊಕ್ತøವಿನಿಂದಚೆನ್ನಾಗಿ ಸೇವಿತನೆ | ಅನ್ನಂತ ಮಹಿಮಾಬಿನ್ನವಿಪೆ ನಿನಗೆ ಕಾ | ರುಣ್ಯ ಮೂರುತಿ ಹರಿಯೆಕನ್ಯೆಗಭಯದನೆ ಆ | ಪನ್ನ ಪರಿಪಾಲಾ 2 ಲೌಕಿಕದಿ ಬಹುಪರಿಯ | ಸೌಖ್ಯಗಳ ನೀನಿತ್ತುಪ್ರಾಕ್ಕು ಕರ್ಮವ ಕಳೆದು | ಕಾಪಾಡೊ ಹರಿಯೇ |ಚೊಕ್ಕ ಭಕ್ತಿ ಜ್ಞಾನ | ಅಕ್ಕರದಿ ತವಪದದಿಉಕ್ಕುವ ಪರಿಮಾಡು | ರಕ್ಕಸಾಂತಕನೇ 3 ನೀಚೋಚ್ಚ ತರತಮವು | ಪಂಚ ಬೇದವನರುಹಿಸಂಚಿತವ ದಹಿಸೂವ | ಹಂಚಿಕೆಯನಿತ್ತೂಅಂಚೆವಹಪಿತನೆ ಹೃ | ತ್ಪಂಕಜದಿ ನಿನಕಾಂಬಸಂಚಿಂತನೆಯ ನೀಯೊ | ಪಂಚ ಪ್ರಾಣಾತ್ಮಾ 4 ಪಾವಮಾನಿಯ ಪ್ರೀಯ | ಸಾರ್ವಕಾಲದಿ ನಿನ್ನಪಾವನ ಸ್ಮøತಿಯಿತ್ತು | ಭಾವದಲಿ ತೋರೋ |ನೀವೊಲಿಯುತಿವಳಿನ್ನ | ಕಾವುದೆನೆ ಬಿನ್ನೈಪೆಗೋವಿದಾಂಪತಿಯೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಲಕ್ಷ್ಮೀ ನಾರಾಯಣ ವಿಠಲ | ಪೊರೆಯ ಬೇಕಿವಳಾ ಪ ವಾಹನ ದೇವ | ಲಕ್ಷುಮಿಯ ರಮಣಾ ಅ.ಪ. ಸೃಷ್ಟಿ ಸ್ಥಿತಿ ಸಂಹಾರ | ಅಷ್ಟಕ್ಕು ಕಾರಣನೆಕಷ್ಟಗಳ ಪರಿಹರಿಸಿ | ಕಾಪಾಡೊ ಹರಿಯೇ |ಶಿಷ್ಟ ಸದಾಚಾರ | ನಿಷ್ಠೆಯಲಿ ಗೈಯ್ಯುವಳುಶಿಷ್ಟೇಷ್ಟ ಹರಿಯೆ ಸದ | ಭೀಷ್ಟಗಳಗರೆಯೋ 1 ವಿೂಸಲೆಂದೆನಿಸಿರುವ | ದಾಸತ್ವದಾಕಾಂಕ್ಷೆಸಾಸಿರಕ್ಕೋರ್ವರಿಗೆ | ಲೇಸು ಪುಟ್ಟವುದೋಈ ಸಮಯದಲ್ಲೀಕೆ | ಆಶಿಸುತ್ತಿಹಳಯ್ಯಕೇಶವನೆ ಒಲಿದಿವಳ | ದಾಸ್ಯ ಸ್ವೀಕರಿಸೋ 2 ಶುದ್ಧ ತರತಮ ಜ್ಞಾನ | ಮಧ್ವೇಶನಲಿ ಭಕುತಿಇದ್ವದಕೆ ತೃಪ್ತಿಯಿಂ | ಬದ್ಧ ವೈರಾಗ್ಯಾಸಿದ್ಧಿಸುತ ಸಾಧನದಿ | ಬದ್ಧ ಕಂಕಣಳೆನಿಸೊಅದ್ವಿತೀಯನೆ ಹರಿಯೆ | ಮಧ್ವಾಂತರಾತ್ಮಾ 3 ಮುಪ್ಪುರದ ವೈರಿನುತ | ಸರ್ಪಶಯನನೆ ದೇವಾಸ್ವಪ್ನ ಸೂಚನೆಯಂತೆ | ಗೋಪ್ಯದಂಕಿತವಾಸುಪ್ತೀಶ ಇತ್ತಿಹೆನೊ | ಒಪ್ಪಿ ಕೈಪಿಡಿ ಇವಳಗುಪ್ತ ಮಹಿಮನೆ ದೇವ | ಆಪ್ರಕಟ ಹರಿಯೇ 4 ಶರ್ವಾದಿ ದಿವಿಜೇಡ್ಯ ಶಾರ್ವರೀಕರ ಪಾಲದುರ್ವಾದಿ ತಿಮಿರಕ್ಕೆ ಮಾರ್ತಾಂಡ ರೂಪೀದರ್ವಿ ಜೀವಿಯ ಕಾವ | ನಿರ್ವಹಣೆ ನಿನ್ನದೋಗುರ್ವಂತರಾತ್ಮ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು