ಒಟ್ಟು 1821 ಕಡೆಗಳಲ್ಲಿ , 103 ದಾಸರು , 1474 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹಿತದಿಂದ ಪೊರೆಯೆನ್ನ | ವಿತತ ಮಹಿಮ ಹರಿಯೇ ಹಿತ ಅಹಿತವೆರಡನ್ನು | ಸಹಿಸುವಂತೇ ಪ ಅತಿ ದಯಾಪರನೆಂದು | ಖತಿದೂರನೆಂದೆನುತಶ್ರುತಿ ನಿಚಯ ಸಾರುತಿದೆ | ಗತಿ ಪ್ರದನೆ ದೇವಾ ಅ.ಪ. ವೇದ ವೇದ್ಯನೆ ದೇವ | ಆದ್ಯಂತ ರಹಿತನೇಕಾದುಕೋ ಎನ್ನನು | ಮೋದಗಳನಿತ್ತೂ ||ಸಾಧನ ಸುಮಾರ್ಗದಲಿ | ಹಾದಿಯನು ಕಾಣದಲೆಬಾಧೆಗೊಳಗಾಗಿಹನ | ಆದರಿಸು ದಯವನಧೀ 1 ಪ್ರಾಣಪತಿಯೇ ಎನ್ನ | ಪ್ರಾಣಗಳು ವಶವಿಲ್ಲಧ್ಯಾನ ಮಾಡುವೆನೆನ್ನ | ಮನನಿಲ್ಲಧ್ಹರಿಯೇ ||ಜ್ಞಾನ ಕರ್ಮೇದ್ರಿಗಳು | ಏನೊಂದು ನಿನ್ನಯಾಧೀನವಿರಲೂ ನಾನು | ಏನು ಮಾಡಲು ಸಾಧ್ಯ 2 ಗೋವರ್ಧನೋದ್ಧರನೆ | ಗೋವುಗಳ ಪರಿಪಾಲಕಾವ ಕರುಣೀ ನಮ್ಮ | ದೇವರ ದೇವಾ ||ಗೋವಿದಾಂಪತಿ ಗುರು | ಗೋವಿಂದ ವಿಠಲನೆನೀವೊಲಿಯದಿನ್ನಾರು | ಕಾವರನು ಕಾಣೆನಯ್ಯಾ 3
--------------
ಗುರುಗೋವಿಂದವಿಠಲರು
ಹುರುಡು ನಿನಗೆ ಥರವೇನೊ ಸ್ವಾಮಿ ಗರುಡವಾಹನ ಸುರಧೇನು ಪ. ಕುರುಡ ಕಾಣದೆ ಕೂಪದಲಿ ಬಿದ್ದರೆತ್ತದೆ ಮೊರಡುತನದಿ ಮುಖ ನೋಡುತ ನಗುವಂಥ ಅ.ಪ. ಜ್ಞಾನಮಾರ್ಗವ ಕಾಣದಿರುವ ದೀನ ಮಾನವನಿಗೆ ಮೋಹಭರವ ತಾನೆ ಕಲ್ಪಿಸಿ ತತ್ವದಿರುವ ಮುಚ್ಚಿ ನಾನಾ ಯೋಗಿಗಳಲ್ಲಿ ತರುವ ಮಾನವು ಸರಿಯೆ ಮಹಾನುಭಾವ ನಿನ್ನ ದೀನ ಬಂಧುತ್ವಕೆ ಹಾನಿ ಬಾರದೆ ಕೃಷ್ಣ 1 ಇಂದ್ರಿಯಾರ್ಥ ಸನ್ನಕರ್ಷವೆಂಬ ಬಂಧನದಲ್ಲಿ ಸಿಕ್ಕಿ ಬೀಳ್ವ ನಾನಾ ತಂದ್ರ ಸಾಗರ ಮುನಿಗಳ ಬಹು ಮಂಜನು ಮಾಯೆಯ ಗೆಲ್ವ ಹೊಂದಿಕೆಯನು ಸುಖ ಸಾಂದ್ರ ನೀನರಿಯೆಯ ಇಂದ್ರಾದಿಗಳನು ಎಂದೆಂದಿಗೂ ಸಲಹುವಿ 2 ಅದರಿಂದ ಸರ್ವಕಾಲದಲಿ ನೀನೆ ಒದಗಿ ಪೊಳೆವುತ್ತ ಮನದಲಿ ಪದಯುಗವಿರಿಸಿ ಶಿರದಲಿ ದಾಸಪದವ ಪಾಲಿಸು ಕರುಣದಲಿ ಭವ ವಂದ್ಯ ವೆಂಕಟಗಿರಿನಾಯಕ ಪದುಮಾಲಯೆ ಕೂಡಿ ಸದನದಿ ನೆಲೆಯಾಗು 3
--------------
ತುಪಾಕಿ ವೆಂಕಟರಮಣಾಚಾರ್ಯ
ಹೆಜ್ಜೆ ತೋರೆ ಕಾಲಗೆಜ್ಜೆ ತೋರೆ ಸಾರಥಿ ಪಟ್ಟದ ರಾಣಿ ಹೆಜ್ಜೆ ತೋರೆ ಪ ಕಾಲಲಂದಿಗೆ ನೂಪುರವಿಟ್ಟ ಹೆಜ್ಜೆ ತೋರೆ ಕಾಳಿಮರ್ದನ ಕೃಷ್ಣನರಸಿಯೆ ಹೆಜ್ಜೆ ತೋರೆ ಕಾಲಸರವು ಪಾಡಗನಿಟ್ಟ ಹೆಜ್ಜೆ ತೋರೆ ಕಾಳಿಂದಿ ರಮಣನ ಸತಿಯೆ ಹೆಜ್ಜೆ ತೋರೆ 1 ಬಡವರ ಮನೆಗೆ ನಡದು ಬರುವ ಹೆಜ್ಜೆ ತೋರೆ ಬಡನಡು ಬಳುಕುತ ನಡೆಯುವ ಪುಟ್ಟ ಹೆಜ್ಜೆ ತೋರೆ ಸಡಗರದಲಿ ಹರಿಯೊಡನೆ ಬರುವ ಹೆಜ್ಜೆ ತೋರೆ ಪೊಡವಿಗೊಡೆಯ ಶ್ರೀ ಕೃಷ್ಣನರಸಿಯೆ ಹೆಜ್ಜೆ ತೋರೆ2 ಲುಲ್ಲುರುಳಿ ಪೈಜನಗಳು ಹೊಳೆವ ಹೆಜ್ಜೆ ತೋರೆ ಉಲ್ಲಾಸದಿ ಸುರರೆಲ್ಲರು ಸ್ತುತಿಪ ಹೆಜ್ಜೆ ತೋರೆ ಫುಲ್ಲಾಕ್ಷನ ಒಡಗೂಡುತ ಬರುವ ಹೆಜ್ಜೆ ತೋರೆ3 ಪದ್ಮ ರೇಖೆಗಳಿಂದ ಶೋಭಿಪ ಹೆಜ್ಜೆ ತೋರೆ ಪದ್ಮನಾಭನ ಕೂಡಿ ಬರುವ ಹೆಜ್ಜೆ ತೋರೆ ಪದ್ಮದೊಳು ಪುಟ್ಟಿರುವ ಪುಟ್ಟ ಹೆಜ್ಜೆ ತೋರೆ ಪದ್ಮಮುಖಿಯೆ ಶ್ರದ್ಧೆಲಿ ಭಜಿಪರು ಹೆಜ್ಜೆ ತೋರೆ4 ವಿರೋಧಿಕೃತ ಸಂವತ್ಸರ ಬರುತಿರೆ ಹೆಜ್ಜೆ ತೋರೆ ವಿರೋಧಿಗಳ ದೂರೋಡಿಪ ದಿವ್ಯ ಹೆಜ್ಜೆ ತೋರೆ ಸರೋಜದಳದೊಳು ಶೋಭಿಪ ದಿವ್ಯ ಹೆಜ್ಜೆ ತೋರೆ ಸುರರೆಲ್ಲರು ಕೊಂಡಾಡುತ ಸ್ತುತಿಪ ಹೆಜ್ಜೆ ತೋರೆ5 ನಿಗಮವೇದ್ಯಳೆ ನಿನ್ನ ಪೊಗಳುವೆ ಹೆಜ್ಜೆ ತೋರೆ ಅಗಣಿತ ಮಹಿಮನ ಗುಣಗಳ ಪೊಗಳುವೆ ಹೆಜ್ಜೆ ತೋರೆ ಬಗೆ ಬಗೆ ಭಕುತರು ಪೂಜಿಪ ನಿನ್ನ ಹೆಜ್ಜೆ ತೋರೆ ಖಗವಾಹನನೊಡಗೂಡುತ ಬರುವ ಹೆಜ್ಜೆ ತೋರೆ6 ಕಮಲ ಮುಖಿಯೆ ಕರುಣವ ಮಾಡಿ ಹೆಜ್ಜೆ ತೋರೆ ಕಮಲನಾಭ ವಿಠ್ಠಲನ್ನ ರಾಣಿ ಹೆಜ್ಜೆ ತೋರೆ ಕಮಲಾಕ್ಷಿಯರಿಂದ ಪೂಜೆಗೊಳ್ಳುವ ಹೆಜ್ಜೆ ತೋರೆ ಸುಮನಸವಂದ್ಯನ ಸತಿಯೆ ನಮಿಪೆ ಹೆಜ್ಜೆ ತೋರೆ7
--------------
ನಿಡಗುರುಕಿ ಜೀವೂಬಾಯಿ
ಹೆದರಿಕೆ ಬರುತದೆಲೋ ಪದುಮಾಕ್ಷ ನಿನ್ನ ಮುಂದೆ ಹೇಳಿಕೊಳ್ಳಲು ಎನಗೆ ಪ ಹೆದರಿಕೆ ಬರುತಿದೆ ಜಗದ ಜನರು ನಿನಗೆ ವಿಧವಿಧದಾಡುವ ಸುದ್ದಿಯ ಪೇಳಲು ಅ.ಪ ಹಳಿವರು ಹೆಳವನೆಂದು ಅಂಜದೆ ನಿನಗೆ ತಲೆಯಿಲ್ಲದವನೆನುವರು ಇಲ್ಲದೆ ಹೊಟ್ಟಿಗೆ ಹುಲ್ಲುಮೆದ್ದವನೆಂದು ಹಲವು ಬಗೆಯಲಿ ಹೀಯಾಳಿಪುದ್ಹೇಳಲು 1 ದೃಢದಿ ಭಕುತಜನರು ಬೇಡಿದ ವರವು ಕೊಡಬೇಕಾಗುವುದೆನುತ ಓಡಿ ಹಾವಿನಮೇಲೆ ಪವಡಿಸಿದ ಮಹ ಕಡುಲೋಭಿಯೆಂದೆಂಬ ನುಡಿನಿನ್ನೊಳ್ಪೇಳಲು 2 ಒದೆಸಿಕೊಂಡ್ವೊಯ್ಕುಂಠದಿ ಶೇಷಾಚಲದಿ ಸದನಗೈದನುಯೆಂಬರು ಇದು ಅಲ್ಲದತಿ ವಿಧವಿಧ ಲೋಕ ಸುಲಿದರ್ಥ ನಿಧಿಗಳಿಸಿದ ಚಿನಿವಾರೆಂಬದ್ಹೇಳಲು 3 ಕುದುರೆಮಾವುತನೆಂಬರು ಎಲವೋ ರಂಗ ಕದನಗಡಕನೆನುವರು ಹದಿನಾರು ಸಾವಿರ ಸುದತಿಯರೊಶನಾದ ಸುಧೆಗಳಜಾರನೆಂಬ ವಿಧಿಯನ್ನು ಪೇಳಲು 4 ವಿಪಿನವಾಸಿಕನೆನುವರು ನಿಷ್ಕರುಣದಿ ನೀ ಕಪಿವರನ ತರಿದೆನುವರು ಕಪಟ ತಿಳಿಯುವರಾರು ಅಪರೂಪಮಹಿಮನೆ ಕೃಪಾನಿಧಿ ಶ್ರೀರಾಮ 5
--------------
ರಾಮದಾಸರು
ಹೊಡೆಯಿರೋ ನಗಾರಿ ಗಡಗಡನೆ ಮೂರು ಬಾರಿ ಪ ದೃಢಭಕ್ತ ಸಮೂಹವ ಸಿರಿ ಯೊಡೆಯನು ಕೈಬಿಡನೆಂದು ಅ.ಪ ವಿಧಿಸೃಷ್ಟಿಯೊಳಿಲ್ಲದರೂ- ಪದಿ ಬಂದು ನಖದಿ ಅಸುರನ ಉದರ ಬಗೆದು ಕರುಳ ತೆಗೆದು ಮುದದಿ ಗಳದಿ ಧರಿಸಿದನೆಂದು 1 ಪರರು ತನ್ನ ಹಿಂಸೆಗೈ ದರು ಸಹಿಸಿ ಸಮಾಧಾನದಿ ಸಿರಿಯರಸನ ನೆನೆವಗೆ ಭಯ ವಿರದಿರದಿರದಿರದೆಂದು 2 ದ್ವೇಷಿಗಳನುದಿನ ಯೋಚಿಪ ಮೋಸಗಳನು ತಿಳಿಯುತ ಲ- ಕ್ಷ್ಮೀಶನು ಪರಿಹರಿಸಿ ತನ್ನ ದಾಸರಿಗೊಶವಾಗುವನೆಂದು 3 ತಿಳಿಯಗೊಡನು ಸತ್ಯವಿದೆಂದು 4 ಕಾಮಾದಿಗಳನು ಗೆದ್ದು ಮ- ಹಾಮಹಿಮರೆನಿಸುವರ ಯೋಗ- ಕ್ಷೇಮವನ್ನು ವಹಿಸಿಹ ಗುರು- ರಾಮವಿಠಲ ನರಹರಿಯೆಂದು 5
--------------
ಗುರುರಾಮವಿಠಲ
ಹೊಯ್ಯಂದ ಡಂಗುರವ ಪರಂಜ್ಯೋತಿ ಪ್ರಭೆಯ ಭಾಸಿಸುವದು ನೋಡಿ ಹೊ ಅರವ್ಹೆ ಅಂಜನವಾಗಿ ದೋರುತಲದಕೊ ಹೊ ಪರಮ ಪ್ರಕಾಶವು ಪರಿಣಾಮಿಸಿ ನೋಡಿ ಹೊ 1 ಅನಿಮಿಷನೇತ್ರವು ಬಾಗಿಸುವದು ನೋಡಿ ಹೊ ಮನವಿಗೆ ಆರುವಾಗಿ ದೋರುತಲದಕೊಹೊ ನೆನವ ಘನವಾಗಿ ಸೂಸೂತಲಿದಕೊ ಹೊ ಕನಸು ಕಥೆ ಅಲ್ಲ ಕಣ್ಣಾರ ಕಾಂಬೋದು ಹೊ 2 ನಿದ್ರಸ್ಯಕರ್ಣದ ಸಾದ್ಯಶ್ಯ ನೋಡೆಂದು ಹೊ ದ್ವಾದಶ ನಾದವು ಸಾಧಿಸಿ ಕೇಳುದು ಹೊ ಗಾದೆಯ ಮಾತಲ್ಲ ಭೇದಿಸಿ ತಿಳಿಯುದು ಹೊ ಓದುವ ಒಂಕಾರ ನಾದವು ತಿಳಿವದು ಹೊ 3 ಪ್ರಣಮ್ಯ ಮಂತ್ರದ ಪ್ರಚೀದಿನೋಡೆಂದು ಹೊ ಹನ್ನೊಂದು ಹತ್ತುಸಾವಿರದ ನೂರೆಂದು ಹೊ ಕಣ್ಣು ಮುಚ್ಚು ಕುಳಿತು ಮಣಿಯೆಣಿಸುವದಲ್ಲ ಹೊ ಪುಣ್ಯಗತಿಗೈದಿಸುವ ಜಪವಿದು ಹೊ 4 ವಿಶ್ವಹೊಳಗಲ್ಲ ಭಾಸ್ಕರ ಗುರುತಾನೆ ಹೊ ಆಶಿಗೈವವಗಿನ್ನು ಭಾಸಿಸಲರಿಯನು ಹೊ ಮೋಸ ಮುಕುರವಲ್ಲ ಭಾಸಿವ ಪಲ್ಲಟವಲ್ಲ ಹೊ ಹೊಯ್ಯೆಂದ ಡಂಗುರವ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹ್ಯಾಂಗೆ ಉದ್ದರಿಸುವಿ ಎನ್ನ ಕೃಷ್ಣ ಕರುಣ ಸಂಪನ್ನ ಪ ಹೋಗಿ ಹೊಗಿ ವಿಷಯ ಕೂಪದಲ್ಬೀಳ್ವವನಾಅ.ಪ. ದಾಸನು ಎಂದೆನಿಸಿ ಮೆರೆವೆ ಮನದೀ ಲೇಶಾ ಭಕುತಿಯನಾನೊಂದರಿಯೇ ವೇಷಹಾಕಿದೆ ಧನಕೆ ಬರಿದೇ ಆಶೆ ಇಟ್ಟು ಭವದಿ ವಂಚಕನೆನಿಸಿದವನಾ1 ಮಂದಿ ಜನರ ಮುಂದೆ ವೈರಾಗ್ಯನಟನೆ ಮಂದಿರದೊಳು ಬಹು ಕಾಮದ ಭಜನೆ ಬಂಧು ಬಳಗ ಕೂಡೆ ಬಹಳ ಭಕ್ತಿ ಇಂದಿರೇಶನ ಧ್ಯಾನ ದೋಳ್ವಿರಕ್ತಿ2 ಗುರುಹಿರಿಯರ ಜರಿವೊದೆ ಜಪವು ದುರುಳರ ಸಂಗ ದೋಳ್ಮೆರೆವೋದೆ ವ್ರತವು ಪರಿಸರನ ಶಾಸ್ತ್ರದೋಳ್ಮೌನ ನರನಾರಿ ಸ್ತವ ದೋಳ್ಧ್ಯಾನ 3 ವೇದ ಓದಿದೆ ನಾನು ಆದರೇನು ಮೋದತೀರ್ಥರ ಮರ್ಮ ಸಿಗಲಿಲ್ಲವು ಇನ್ನು ವಾದಕ್ಕನುಕೂಲ ವಾಯ್ತದು ಅಷ್ಟೆ ಖೇದ ತೊಲಗದೆ ಮನದಿ ಬಹುಕಷ್ಟಪಟ್ಟೇ 4 ಭುಕ್ತಿ ಪಡೆಯೆ ಕಾಲಕಳೆದೆನಲ್ಲಾ ಯುಕ್ತಿಯಿಂದಲಿ ನೀನು ಒಲಿವೋನು ಅಲ್ಲಾ ಭಕ್ತ ಜನರ ಸಂಗ ನಾ ಪಿಡಿಯಲಿಲ್ಲ ಮುಕ್ತಿಗಾಗುವ ಭಾಗ್ಯ ಎನ್ನಲಿಲ್ಲವಲ್ಲಾ 5 ಸ್ವೋತ್ತುಮರ ನೋಡೆ ಮಾತ್ಯರ್ಯ ಎನಗೇ ವಾತ್ಯಲ್ಯ ತೋರೆನು ಸ್ಧಾವರ ಜನಕೇ ಕುತ್ಸಿತ ಪಾವಡ ಬೀರುವೆ ಜಗಕೆ ತಾತ್ಸಾರ ತೋರುವೆ ಭಕ್ತರ ಗುಣದೀ6 ಈಷಣ ತ್ರಯಗಳ ಬಿಡಲಿಲ್ಲ ಲೇಶಾ ಭಾಷಣದಿ ತೋರ್ಪೆಜ್ಞಾನ ಪ್ರಕಾಶ ಈಶ ನೀನೊಬ್ಬನೆ ಸರಿಯೆಂಬೆ ಹರಿಯೆ ದಾಸನಾಗಿ ಬಾಳ್ವೆ ಬಹು ನೀಚ ಜನಕೆ 7 ನಾನು ನಾನೆಂಬುದು ತುಂಬಿದೆ ಮನದಿ ನೀನು ನಿನ್ನಾಧೀನ ವೆಂತ್ಹೇಳಿ ದೃಢದಿ ಜ್ಞಾನವಿದ್ದರು ಇಲ್ಲ ಎನಚರ್ಯೆ ನೋಡೆ ಮಾನಿನಿಯರ ಬೊಂಬೆ ಗುಣಗಣನೆ ಮಾಡೆ 8 ಮೂರೊಂದು ಹರಿತ್ಯಾಗ ತೊರೆಯಲಿಲ್ಲ ವೈರಿ ಆರರ ಬೇರು ನಾಕೀಳಲಿಲ್ಲ ವೀರ ವೈಷ್ಣವನಾಗಿ ಬಾಳಲಿಲ್ಲಾವಲ್ಲ ಗಾರು ಮನ್ನಿಸದಿರೆ ಗತಿಯೊಬ್ಬರಿಲ್ಲಾ 9 ವ್ರತನೇಮ ಉಪವಾಸ ಸಾಧನೆಯಿಲ್ಲ ರತಿಯಿಂದ ಸಲಹೆಂದು ನಾಕೂಗಲಿಲ್ಲ ಮತಿ ಮತದಿ ಪುಟ್ಟಿದರು ಫಲವಾಗಲಿಲ್ಲ ಗತಿ ನೀನೆ ಕೈ ಪಿಡಿಯೊ ಕೇಳುತ ಸೊಲ್ಲ 10 ಡಂಭಕ ತನದಿಂದ ಬಹುಕಾಲ ಕಳೆದೇ ತುಂಬಿ ಭಕ್ತಿಯ ಬೇಗ ನೀ ಕಾಯೋಮುಂದೆ ಜಂಭಾರಿ ಜಯತೀರ್ಥ ವಾಯ್ವಾಂತರ್ಗತನಾದ ಕಂಬುಕಂಧರಧಾರಿ “ಶ್ರೀ ಕೃಷ್ಣವಿಠಲ” 11
--------------
ಕೃಷ್ಣವಿಠಲದಾಸರು
ಹ್ಯಾಗೆ ಮರೆತೆಯೋ ತಾಯಿ ಎನ್ನ ಶ್ರೀಹರೆ ಜಾಗು ಮಾಡದೆ ನಾಗಶಯನ ಬ್ಯಾಗ ಬಂದೆನ್ನೀಗಳೆ ಪೊರೆ ಪ ನಿರ್ಜರ ವಂದಿತ ಚೋರಾ ಸುರಸ್ತೋಮ ಮಥsÀನ ಶೇರಿಗೆ ನಿನ್ನಂಘ್ರಿಗಳಲಿ ಘೋರ ದುರಿತ ಹೀರಿ ಕಾಯಿ ಎನ್ನನಾ ಮುರಾರಿ 1 ಸನ್ನುತ ನಿನ್ನ ನಾಮ ಪಾಡುವೆ- ನೆನ್ನ ವಿಷಯನ್ಹಾರೈಸದೆ ಪಾದವೆ ಎನಗೆ ಗತಿಯೋ ಕಾಯಿ ನೀನೇ ಅನ್ಯರನೇಕೆ ಹುಡುಕಲಿ ಸುರಕಾಮಧೇನು 2 ವಿರಸತಾಗಿ ಹೋದೆನಾ ಸಂಸಾರದಿ ಭರದಿ ನಿನ್ನ ಮರೆಹೊಕ್ಕೆನು ಮುದದಿ ನರಸಿಂಹವಿಠ್ಠಲ ಕಾಯೋ ಅನಾದಿ 3
--------------
ನರಸಿಂಹವಿಠಲರು
(ಒರಳುಕಲ್ಲು ಪೂಜೆಯ ಪದ)ಜಯ ಹನುಮಂತ ಭೀಮ | ಜಯ ಸರ್ವಜ್ಞಾಚಾರ್ಯ |ಜಯ ಭಾರತೀಶಾ ನಿರ್ದೋಷಾ || ನಿರ್ದೋಷ ಶ್ರೀ ವ್ಯಾಸಲಯನೆ ನಿನ್ನಂಘ್ರೀಗೆರಗೂವೆ | ಸುವ್ವಿ ಸುವ್ವೀ ಸುವ್ವಾಲಾಲೆ ಪಮುದದಿಂದಾ ಶ್ರೀ ಹರಿಯಾ | ಮದಿವಿ ಹಮ್ಮೀಕೊಂಡು |ಪದುಮಾಕ್ಷಿಯರೆಲ್ಲಾ ಒರಳೀಗೇ || ಒರಳಿಗಕ್ಕಿ ಹಾಕಿಪದ ಪಾಡಿದದನೂ ಬಣ್ಣೀಪೇ1ದೇವಕಿ ಯಶೋದೆ ಶ್ರೀ | ದೇವಭೂತೇ ಕೌಸಲ್ಯ ಸ- |ತ್ಯವತಿ ನೀವೆಂಥ ಧನ್ಯರೇ || ಧನ್ಯಾರೆ ಪಡದು ಶ್ರೀ |ದೇವೇಶಗೆ ಮೊಲಿಯಾ ಕೊಡುವೀರಿ 2ಅಕ್ಷರಳೆ ಪರಮಾತ್ಮನ | ವಕ್ಷ ಸ್ಥಳ ಮಂದಿರೆ |ಲಕ್ಷೂಮಿದೇವಿ ಜಯಶೀಲೆ || ಜಯಶೀಲೆ ಎಮ್ಮನು |ಪೇಕ್ಷಿಸಿದೆ ಕಾಯೇ ವರವೀಯೇ 3ಅಚ್ಛಿನ್ನ ಭಕ್ತರು ನೀವಚ್ಯುತಗೆ ಮುಕ್ತಿಯಾ |ತುಚ್ಛವೆಂಬುವಿರೆ ಸರಸ್ವತೀ || ಸರಸ್ವತಿಭಾರತಿ|ನಿಶ್ಚೈಸಿ ಒರಳೀಗೊದಗೀರೆ 4ಅಕ್ಕಿ ಥಳಿಸಲಿ ಬಾರೆ | ಅಕ್ಕ ಸೌಪರಣಿ ಶ್ರೀ |ರಕ್ಕಸಾ ವೈರೀ ಮದುವೀಗೇ || ಮದುವೀಗೆವಾರುಣಿತಕ್ಕೊಳ್ಳೆ ಕೈಲಿ ಒನಕೀಯಾ 5ಕೂಸಾಗಿ ಇದ್ದಾಗ ಆ ಶಿವನೆ ಬರಲೆಂದು |ಪೋಷಿಸಿದೆ ದೇಹಾ ತಪಸೀದೆ || ತಪಸೀದೆ ಪಾರ್ವತಿನೀ ಶೀಘ್ರ ಬಾರೇ ಒರಳೀಗೆ6ಇಂದ್ರ ಕಾಮನಸತಿಯಾರಿಂದು ಬನ್ನಿರಿ ನಮ್ಮ |ಮಂದರೋದ್ಧರನಾ ಮದಿವೀಗೇ || ಮದುವೀಗೆ ಒರಳಕ್ಕಿ |ಛಂದದಿಂದಲಿ ಪಾಡಿ ಥಳಿಸೀರೇ 7ಶತರೂಪಿ ನೀ ಪ್ರೀಯ ವ್ರತ ಮೊದಲಾದವರನ್ನ |ಪತಿಯಿಂದ ಪಡದೂ ಅವನೀಯಾ || ಅವನೀಯ ಪಾಲಿಸಿದಪತಿವ್ರತೀ ಒನಕೀ ಕೈಕೊಳ್ಳೇ8ದೇವರಂಗನಿಯರಿಗೆ ಸಾವಧಾನದಿ ಜ್ಞಾನ |ನೀ ವರದೇ ಎಂಥಾ ಗುಣವಂತೇ || ಗುಣವಂತೆ ಕರುಣಾಳೆಪ್ರಾವಹೀ ಪಿಡಿಯೇ ಒನಕೀಯಾ 9ಅರುವತ್ತು ಮಕ್ಕಳನಾ ಹರುಷದಿಂದಲಿ ಪಡದು |ವರನೋಡಿ ಕೊಟ್ಟೀ ಪ್ರಸೂತೀ || ಪ್ರಸೂತಿ ನೀನುಹಂದರದ ಮನಿಯೊಳೂ ಇರಬೇಕೂ 10ಗಂಗಾದೇವಿ ಯಂಥ ಇಂಗಿತಜÕಳೆ ನೀನು |ಹಿಂಗಿಸಿದೆ ವಸುಗಳಪವಾದಾ || ಅಪವಾದ ತ್ರಯ ಜಗ-ನ್ಮಂಗಳೇ ಪಿಡಿಯೇ ಒನಕೀಯಾ 11ಅನಿರುದ್ಧಾಶ್ವಿನಿ ಚಂದ್ರ ಇನಕಾಲಾ ಸುರಗುರು |ವನತಿಯರೆ ಉಳಿದಾ ನವಕೋಟೀ || ನವಕೋಟಿ ಸುರರಮಾನಿನಿಯೇರು ಬಂದೂ ಥಳಿಸೀರೇ 12ಅನ್ಯರನ ಪಾಡಿದರೆಬನ್ನಬಡಿಸುವ ಯಮನು |ವನ್ನಜಾಂಬಕನಾಶುಭನಾಮಾ || ಶುಭನಾಮ ಪಾಡಿದರೆಧನ್ಯರಿವರೆಂದೂ ಪೊಗಳೂವಾ13ಈ ವ್ಯಾಳ್ಯದಲಿ ನೋಡಿ ನಾವು ಥಳಿಸೀದಕ್ಕಿ |ಪಾಪನ್ನವಾಗೀ ತ್ವರದಿಂದಾ || ತ್ವರದಿಂದ ನಮ್ಮ ಶ್ರೀಗೋವಿಂದನ ಶಾಸೀಗೊದಗಲೀ 14ಹೆಚ್ಚಿನಂಬರ ಉಟ್ಟು ಅಚ್ಚಿನ ಕುಪ್ಪುಸ ತೊಟ್ಟು |ಪಚ್ಚಾದಿ ರತ್ನಾಭರಣಿಟ್ಟೂ || ಇಟ್ಟು ಸುಸ್ವರಗೈದುಅಚ್ಯುತನ ಪಾಡೋರಿನಿತೆಂದೂ 15ಲಕ್ಕೂಮಿ ಪತಿಯಾಗಿ ಬಹು ಮಕ್ಕಳನ ಪಡದಿದ್ದಿ |ಇಕ್ಕೊಳ್ಳಿ ಈಗಾ ಮದುವ್ಯಾಕೇ || ಯಾಕೊನತರಾನಂದಉಕ್ಕೀಸುವದಕೆ ರಚಿಸೀದ್ಯಾ16ಎಂಂದಾಗೆದೊ ಶ್ರೀ ಮುಕುಂದ ನಿನ್ನಾ ಮದುವಿ |ಹಿಂದಿನಾ ಬ್ರಹ್ಮರರಿತಿಲ್ಲಾ || ರರಿತಿಲ್ಲಅವಿಯೋಗಿಎಂದು ಕರಸುವಳು ಶೃತಿಯೋಳೂ 17ಶೀಲಿ ಸುಂದರಿ ನಿನ್ನ ಆಳಾಗಿ ಇರುವಳು |ಶ್ರೀ ಲಕ್ಷ್ಮೀ ನೀನು ಸ್ವರಮಣಾ || ಸ್ವರಮಣನಾಗೆವಳಮ್ಯಾಲೆ ಮದುಪ್ಯಾಕೊ ಭಗವಂತಾ18ಆರು ಮಹಿಷಿಯರು ಹದಿನಾರು ಸಾವಿರ ಮ್ಯಾಲೆ |ನೂರು ನಾರಿಯರೂ ಬಹುಕಾಲಾ || ಬಹುಕಾಲ ಬಯಸಿದ್ದುಪೂರೈಸಿ ಕೊಟ್ಯೋ ದಯಸಿಂಧು 19ವೇದನೆಂಥಾ ಪುತ್ರ ವೇದನಂತಾ ಬಲ್ಲ |ವೋದುವಾ ನಿರುತಾ ನಿನ ಪೌತ್ರಾ || ಪೌತ್ರೌ ನಿಮ್ಮಣ್ಣ ಸ್ವ-ರ್ಗಾಧಿಪತಿ ಎಂದೂ ಕರಸೂವ 20ಜಗವ ಪಾವನ ಮಾಳ್ಪ ಮಗಳೆಂಥ ಗುಣವಂತಿ |ಅಗಣಿತಜ್ಞಾನವಂತಾರೊ || ಜ್ಞಾನವಂತರೊ ನಿನ್ನಯುಗಳಸೊಸಿಯರೂ ಪರಮಾತ್ಮಾ21ಈ ವಸುಧಿಯೊಳಗೆಲ್ಲಾ ಆವಶುಭಕಾರ್ಯಕ್ಕೂ |ದೇವೇಶ ನಿನ್ನಾ ಸ್ಮರಿಸೋರೋ || ಸ್ಮರಿಸುವರೊ ನಿನ ಮದುವಿ-ಗಾಂವೀಗ ನಿನ್ನೇ ನೆನೆವೇವೊ 22ಅಕ್ಲೇಶಾ ಅಸಮಂಧಾ ಶುಕ್ಲಶೋಣಿತದೂರಾ |ಹಕ್ಲಾಸುರಾರೀ ದುರಿತಾರೀ || ದುರಿತಾರಿ ಅಸಮ ನಿ-ನ್ನೊಕ್ಲಾದವರಗಲೀ ಇರಲಾರೀ 23ವೇದವೆಂಬದು ಬಿಟ್ಟು ಭೂ ದಿವಿಜಾರಮರಾರು |ಮಾಧವನ ಗುಣವಾ ಪೊಗಳೂವಾ || ಪೊಗಳುವಾ ಸುಸ್ವರವಾಶೋಧಿಸೀ ಕೇಳೂತಿರುವಾರೂ 24ಕಾಮಾದಿಗಳ ಬಿಟ್ಟು ಸೋಮಪರ ರಾಣಿಯರು |ಸ್ವಾಮಿಯ ವಿವಾಹಾ ನಾಳೆಂದೂ || ನಾಳೆಂದರಿಷಿಣದಕ್ಕೀಹೇಮಾಧರಿವಾಣಕ್ಕಿರಿಸೋರೂ25ಜಯ ಮತ್ಸ್ಯಾ ಕೂರ್ಮಾಕಿಟಿಜಯ ನರಸಿಂಹಾ ಋಷಿಜ |ಜಯ ರಾಮಕೃಷ್ಣಾ ಶ್ರೀ ಬುದ್ಧಾ || ಶ್ರೀಬುದ್ಧಕಲ್ಕಿ ಜಯಜಯ ದತ್ತಾತ್ರಯಶುಭಕಾಯಾ 26ಆನಂದಾದಿಂದಾ ಸುರ ಮಾನಿನಿಯಾರಾಡೀದ |ಈ ನುಡಿಯಾ ಪಾಡೀದವರೀಗೆ || ಅವರಿಗಿಹಪರದಲ್ಲಿಪ್ರಾಣೇಶ ವಿಠಲಾ ಒಲಿವೋನೂ 27
--------------
ಪ್ರಾಣೇಶದಾಸರು
(ಕೇಶವಾಯ ನಮಃ ದಿಂದ ಆರಂಭವಾಗುವ ಆಚಮನ ಸ್ತುತಿ)ಶ್ರೀನಿವಾಸಾಯ ನಮೋ ಪ.ಶ್ರೀನಿವಾಸಾಯ ಶತಭಾನುಪ್ರಕಾಶಾಯಶ್ರೀನಿವಾಸಾಯ ನಿಜ ಭಕ್ತಜನಪೋಷಾಯಶ್ರೀನಿವಾಸಾಯ ಪರಮಾನಂದಘೋಷಾಯ ಅ.ಪ.ದೋಷಗಂಧವಿದೂರ ಕೇಶಿಮುಖದಾನವ ವಿ-ನಾಶವಿಧಿಭವಸುಖನಿವಾಸ ವಾಸುಕಿಶಯನವಾಸವಾದ್ಯಮರಗಣಪೋಷ ಪಾವನವೇಷ ಶ್ರೀಶ ನಿರ್ಗತವಿಶೇಷದಾಸಜನಹೃದಯಾಬ್ಧಿಭೇಶ ಕೌಸ್ತುಭಮಣಿವಿ-ಭೂಷ ಭೂತಾತ್ಮ ಭವಪಾಶಹರ ಪರತರ ದ-ಯಾ ಸಮುದ್ರ ವಿನಿದ್ರ ಭೂಶಯನ ಭೂರಿಪ್ರದಕೇಶವಾಯ ನಮೋನಮಃ 1ಕ್ಷೀರಸಾಗರವಾಸ ಶ್ರೀರಮಾಪ್ರಾಣೇಶಸಾರಭೋಕ್ತøಸ್ವತಂತ್ರ ಚಾರುಷಡ್ಗುಣಭರಿತನಾರದಾದಿಮುನೀಂದ್ರವಾರಸನ್ನುತಪಾದನೀರರುಹದ್ವಂದ್ವನೆವಾರಿಜಾಸನಮುಖ್ಯಸುರರುತಿಳಿಯರು ನಿನ್ನಭೂರಿಮಹಿಮೆಗಳ ಸಾಕಾರವನು ಬಣ್ಣಿಸುವಧೀರನಾವನು ಮಹಾ ವೀರ ವಿಶ್ವಾಧಾರನಾರಾಯಣಾಯ ನಮೋ 2ವೇದವೇದ್ಯನೆ ದುರಿತಶೋಧನೆ ದೈತ್ಯಗಣ-ಛೇದಕನೆ ಸುರಸುಪ್ರಸಾದಕನೆ ಭಕ್ತಜನ-ಮೋದದಾಯಕ ಸ್ವಗತ ಭೇದವರ್ಜಿತಸಮಾನಾಧಿಕ್ಯರಹಿತ ಸತತಆದಿತ್ಯ ಶತಕೋಟಿತೇಜೋವಿರಾಜ ಮಹ-ದಾದಿಕಾರಣ ಮಧುವಿರೋಧಿ ಮಂಗಲಸುಖಾಂ-ಬೋಧಿ ಪದ್ಮಾಲಯವಿನೋದಿ ರಾಧಾರಮಣಮಾಧವಾಯ ನಮೋನಮಃ 3ಇಂದಿರಾಹೃದಯಾಬ್ಧಿ ಚಂದ್ರ ಚಾರ್ವಂಗ ಮುಚು-ಕುಂದಾಪ್ತ ಸರ್ವಶ್ರುತಿವೃಂದಪ್ರತಿಪಾದ್ಯ ಸಾ-ನಂದ ಭರಿತ ಕಾಳಿಂದೀರಮಣ ರಾಮಚಂದ್ರಸನ್ನುತಮಹೇಂದ್ರವಂದಾರುಜನತ್ರಿದಶಮಂದಾರ ಕೋಮಲಿತವೃಂದಾವನವಿಹಾರ ಕಂದರ್ಪಜನಕ ಬಾ-ಳೇಂದುಶೇಖರಸಖ ಸನಂದನಾರ್ಚಿತ ಶ್ರೀಗೋವಿಂದಾಯತುಭ್ಯಂ ನಮಃ 4ಜಿಷ್ಣುರಥಸಾರಥಿ ತ್ರಿವಿಷ್ಟಪಸಭಾಧ್ಯಕ್ಷಮುಷ್ಟಿಕಾಸುರವೈರಿ ಮುನಿಜನಮನೋಹಾರಿಮುಟ್ಟಿ ಭಜಿಪರ ಮನೋಭೀಷ್ಟವ ಸಲ್ಲಿಸುವ ಶ್ರೇಷ್ಠ ಪೂರ್ಣಬ್ರಹ್ಮನೇಭ್ರಷ್ಟಸಂಸಾರದೊಳು ನಷ್ಟ ಬುದ್ಧಿಗಳಿಂಗೆತುಷ್ಟಿಯನು ನೀನಿತ್ತು ಸಲಹೊ ಸಾಮಜವರದಬೆಟ್ಟದೊಡೆಯನೆ ಕೃಪಾದೃಷ್ಟಿಯಿಂದಲಿನೋಡುವಿಷ್ಣವೇತುಭ್ಯಂ ನಮೋ 5ವಿಧಿಭವಾದಿ ಸಮಸ್ತ ತ್ರಿದಶಜನಸುಖದಾತಬುಧಜನಪ್ರಿಯ ಭೂತಭಾವನ ಜಗನ್ನಾಥಪದುಮಾಕ್ಷ ಪಾಂಡವಪ್ರತಿಷ್ಠಾಪನಾಚಾರ್ಯಮದನಕೋಟಿಸ್ವರೂಪವಿದುರನಾಲಯದಲ್ಲಿ ಪಾಲುಂಡ ಬ್ರಹ್ಮಾಂಡ-ಕಧಿಪತಿ ಕಲಿಮಲನಾಶ ಕವಿಜನಮನೋಲ್ಲಾಸವಿಧುಮಂಡಲಸ್ಥ ಸದ್‍ಹೃದಯಪಂಕಜವಾಸಮಧುಸೂದನಾಯ ನಮೋ 6ಅಕ್ರೂರವರದ ಸದತಿಕ್ರಮರ ಗೆಲಿದ ಹಯ-ವಕ್ತ್ರವೈಕುಂಠಾಖ್ಯ ಪುರವಾಸ ಜಗದೀಶಶುಕ್ರ ಶಿಷ್ಯರನೆಲ್ಲ ಪರಿಹರಿಸಿ ಪಾಲಿಸಿದೆ ಶಕ್ರಾದಿಸುರಗಣವನುಚಕ್ರ ಶಂಖ ಗದಾಬ್ಜಧರ ಚತುರ್ಭುಜ ದೇವ-ಚಕ್ರವರ್ತಿಯನಂತಕೀರ್ತಿ ಪಾವನಮೂರ್ತಿನಕ್ರಮದಹರನಾದ ಬ್ರಹ್ಮ ಗಂಗಾಪಿತತ್ರಿವಿಕ್ರಮಾಯ ನಮೋನಮಃ 7ರಾಮಣೀಯಕ ವಪು ನಿರಾಮಯ ನಿರಾಶ್ರಯ ಸು-ದಾಮಸಖ ಪರಿಪೂರ್ಣಕಾಮ ಕೈರವದಳ-ಶ್ಯಾಮ ಕಲ್ಯಾಣ ನಿಸ್ಸೀಮ ಮಹಿಮನೆಸುಜನಸ್ತೋಮಸುರಕಾಮಧೇನುಗೋಮಿನೀಪತಿ ಗೋಗಣಾನ್ವಿತನೆ ಗೋಪೀಲ-ಲಾಮ ಗೋವರ್ಧನೋದ್ಧಾರ ಗೋವಿದಾಂಪತಿ ವಿ-ರಾಮ ವಿಷ್ವಕ್ಸೇನ ವಿಶ್ವತೈಜಸಪ್ರಾಜÕವಾಮನಾಯ ನಮೋನಮಃ8ಆದಿಮಧ್ಯಾಂತವಿರಹಿತ ನಿಖಿಲಸಾರ್ಚಿತ ವಿ-ರಾಧಭಂಜನ ಭವಾಂಬೋಧಿಕುಂಭಜ ಭಜಕ-ರಾದವರನುದ್ಧರಿಪ ಬೋಧರೂಪನೆಚತುಷ್ಟಾದ ಪಾವನಚರಿತನೆಗಾಧಿಜಾಧ್ವರಪಾಲ ಗರುಡಧ್ವಜ ದಯಾಳುನಾದಬಿಂದು ಕಲಾತೀತ ರುಕ್ಮಿಣಿನಾಥಬಾದರಾಯಣನೆ ನಿರುಪಾಧಿ ಮಾಯಾತೀತಶ್ರೀಧರಾಯ ನಮೋನಮಃ 9ಪಾಶಧರನುತ ವೆಂಕಟೇಶ ಸರ್ವೇಂದ್ರಿಯಪ್ರ-ಕಾಶ ಪಾಲಿತನಿಖಿಳಭೂಸುರವ್ರಜ ಮಂದ-ಹಾಸಮುಖ ನವಕುಂದಭಾಸರದನವಿರಾಜದೂಷಣಾದ್ಯ ಸುರಹರನೆಈಶಪತಿಸೇವ್ಯಾಂಬರೀಶನೃಪವರದ ಪರ-ಮೇಶ ಕೋವಳಪೀತವಾಸ ಕರ್ದಮಶುಕಪ-ರಾಶರಾದ್ಯಮಿತಯೋಗೀಶರಕ್ಷಕಹೃಷೀಕೇಶಾಯ ತುಭ್ಯಂ ನಮೋ 10ಶುದ್ಧ ತ್ರಿಗುಣಾತೀತ ತ್ರಿವ್ರತ ತ್ರಿಜಗತ್ಪಾಲಪ್ರದ್ಯುಮ್ನ ಪ್ರಥಮಾಂಗದೊಡೆಯ ಪರಮಾತ್ಮ ಸುರ-ಸಿದ್ಧ ಪೂಜ್ಯ ಪುಂಡರೀಕದಳಾಕ್ಷಬುದ್ಧಬುಧಜನಸುಲಭಮಧ್ವವಲ್ಲಭ ಮಂತ್ರಮೂರ್ತಿ ಕ್ಷೀರಾಬ್ಧಿ ಶ್ವೇತದ್ವೀಪವೈಕುಂಠಮಂದಿರತ್ರಯ ಸಾಧು-ಹೃದ್ಯ ಭಕ್ತದ್ವೇಷಭಿದ್ಯ ನಿತ್ಯಾತ್ಮ ಶ್ರೀಪದ್ಮನಾಭಾಯ ನಮಃ11ಸಾಮಗಾನವಿನೋದ ಸಾಧುಜನಸುಖಬೋಧಕಾಮಿತಾರ್ಥಪ್ರದಾತ ಕಪಿಲಋಷಿ ಪ್ರಖ್ಯಾತವ್ಯೋಮಯಾನವರೂಥ ಓಂಕಾರಭರಿತ ರಘುರಾಮಸಮರಂಗ ಭೀಮನಾಮಧಾರಕರ ಪರಿಣಾಮರೂಪಕ ಸುಜನ-ಕ್ಷೇಮಪ್ರಾಪಕ ನೀಲಜೀಮೂತನಿಭವರ್ಣಭೌಮಪುರುಷೋತ್ತಮ ನಿಯಾಮಕನೆ ರಕ್ಷಿಸೈದಾಮೋದರಾಯ ನಮೋ 12ಶಂಕರಾಂತರ್ಯಾಮಿ ಶಾಙ್ರ್ಗಪಾಣಿ ಶರಣ್ಯವೆಂಕಟಾಚಲಸದಾಲಂಕಾರ ಶೇಷಪರಿ-ಯಂಕ ಪ್ರವಿತತನಿಷ್ಕಳಂಕಚಾರಿತ್ರ ಸುಸಂಕುಲಾರ್ಚಿತ ಪದಯುಗಲಂಕಾಧಿಪತ್ಯವ ವಿಭೀಷಣನಿಗೊಲಿದಿತ್ತಓಂಕಾರನಿಧನ ಸಾಮಕಭಕ್ತರಾನೇಕಸಂಕಟವ ಪರಿಹರಿಪ ಸತ್ಯ ಸಂಕಲ್ಪ ಶ್ರೀಸಂಕರ್ಷಣಾಯ ನಮೋ13ಈ ಸಮಸ್ತ ಜಗತ್ತು ನಿನ್ನುದರದೊಳಗಿಹುದುಈ ಸಕಲಜೀವರೊಳಗಿಹ ನಿತ್ಯನಿರ್ಮುಖ್ಯಸೂಸಿಬಹ ಸಂಸಾರಸಾಗರದಿ ಮುಳುಗಿದೆನುನೀ ಸಲಹೊ ದೇವದೇವಭೂಸಲಿಲಪಾವಕಾಕಾಶಾದಿ ಭೂತಾಧಿ-ವಾಸ ರಾಕ್ಷಸವನಹುತಾಶ ನಾನಾ ರೂಪ-ವೇಷಧಾರಕ ನರಾವೇಶ ಪಾಲಿಸು ಎನ್ನವಾಸುದೇವಾಯ ನಮೋ 14ಅದ್ವಿತೀಯನೆಯಮಿತವಿಕ್ರಮನೆ ಗುಣಕಾಲವಿದ್ಯಾಪ್ರವರ್ತಕನೆ ವಿಶ್ವಾದಿ ಸಾಹಸ್ರಸಿದ್ಧನಾಮ ನರನಾರಾಯಣಪರಾಯಣನೆ ಬುದ್ಧಿಪ್ರೇರಕಪ್ರೇರ್ಯನರುದ್ರರೂಪಪ್ರತಾಪ ಋಗ್ಯಜುಸ್ಸಾಮಶ್ರುತಿ-ವೇದ್ಯ ಬ್ರಹ್ಮಾಂಡಕೋಟಿಗಳ ಸಲೆ-ಬದ್ಧಕಮನೀಯರೂಪಸುತಪದುರಾಪಪ್ರದ್ಯುಮ್ನಾಯ ತುಭ್ಯಂ ನಮಃ 15ಉದ್ಧವಾದಿ ಸಮಸ್ತ ಭಾಗವತಜನಕಮಲ-ಮಧ್ಯಚರರಾಜಹಂಸಾಯ ಮಾನಸದಶ್ರದ್ಧೆಯಂ ಕೊಟ್ಟು ರಕ್ಷಿಸು ಧೊರೆಯೆಶ್ರೀಹರಿಯೆ ವೈದ್ಯನಾಥವಿಧಾತನೆಬದ್ಧನಾದೆನು ಕರ್ಮಪಾಶದಿಂದ ದೊರೆ ಸಿಕ್ಕಿ-ಬಿದ್ದೆ ಕೈಪಿಡಿದೆಬ್ಬಿಸೆನ್ನನೆಲೆದೇವ ಮರೆಹೊದ್ದಿದೆನು ಮೈದೋರು ಚಿನುಮಯಾತ್ಮಕನೆಅನಿರುದ್ಧಾಯ ತುಭ್ಯಂ ನಮಃ 16ಕ್ಷರ ಪುರುಷರೆಲ್ಲ ಬ್ರಹ್ಮಾದಿ ಜೀವರು ರಮಾಕ್ಷರಪುರುಷಳೆನಿಸುವಳು ನೀನೆ ಉತ್ತಮ ಪರುಷಪರತರಾವ್ಯಯಲೋಕಭರಿತಮಂಗಲರಿತ ಗುರುತಮ ಗುಣಧ್ಯಕ್ಷನೆಶರಧಿಸೇತುನಿಬದ್ಧ ಶಬರಿ ಹಣ್ಣನು ಮೆದ್ದಶರಭಂಗಮುನಿಪಾಲ ಶಮಿತದಾನವಜಾಲಧುರವಿಜಯ ವಿಜಯಮೈದುನ ಕೃಷ್ಣ ರಕ್ಷಿಸೈಪುರುಷೋತ್ತಮಾಯನ್ನಮೋ 17ಅಕ್ಷಯಾತ್ಮನೆ ವಿಶ್ವರಕ್ಷಕನೆ ವಿಶ್ವಭುಗ್-ವಿಶ್ವತೋಮುಖ ವಿಶ್ವತೋಬಾಹು ಕರುಣಾಕ-ಟಾಕ್ಷದಿಂ ನೋಡೆನ್ನಮ್ಯಾಲೆದಯಮಾಡು ಶ್ರೀವಕ್ಷಸ್ಥಲನಿವಾಸನೆಲಕ್ಷ್ಮಣಾಗ್ರಜನೆ ಸುವಿಲಕ್ಷಣನೆ ಸುಜ್ಞಾನ-ಮೋಕ್ಷದಾಯಕ ಯಜÕಮೂರ್ತಿ ರೂಪತ್ರಯ ಮ-ಹೋಕ್ಷಧ್ವಜನಂ ಮೋಹಿಸಿದ ಮೋಹಕಲ್ಪಅಧೋಕ್ಷಜಾಯ ನಮೋನಮಃ 18ಕ್ರೂರಕರ್ಮಿ ಹಿರಣ್ಯಕಶಿಪುವಂ ಕೊಂದ ದು-ರ್ವಾರದುರಿತಾಬ್ಧಿಬಾಡಬ ಭಕ್ತವತ್ಸಲ ಮ-ಹಾರವಕುಲಿಶ ಶತಕೋಟಿಸದೃಶನಶಿರಪ್ರಕರಧೀರ ಪ್ರಹ್ಲಾದಾಭಿವರದಭೂರೀಕರರೂಪ ಭೂಮಕೀರ್ತಿಕಲಾಪಸಾರವಜ್ರಸ್ತಂಭದಿಂ ಬಂದ ನಂದ ಸುಕು-ಮಾರಮಾರ್ಕಾಂಡೇಯವರದ ಲೋಕಶರಣ್ಯನಾರಸಿಂಹಾಯ ನಮೋ 19ನಿಶ್ಚಲಾತ್ಮ ನಿರೀಹ ನಿರ್ವಿಕಾರಾನಂತಪ್ರೋಚ್ಛ ಸರ್ವಗ ಸದಾನಂದ ಪರಿಪೂರ್ಣ ತ-ನ್ನಿಚ್ಛೆಯಿಂದಲಿ ಜಗವ ಪಾಲಿಸುವನಿರ್ಮಿಸುವ ಆಶ್ಚರ್ಯಕೃತಸಲೀಲಮುಚ್ಚುಮರೆ ಯಾಕಿನ್ನು ಮುಗಿದು ಬೇಡುವೆ ಕೈಯಸ್ವಚ್ಛತರ ಭಕ್ತಿಭಾಗ್ಯವನಿತ್ತು ಸಲಹೊ ಮಹ-ಕಚ್ಛಪನೆ ಕಾಳೀಯಮರ್ದನಮಹಿತಶ್ರೀಮದಚ್ಯುತಾಯ ನಮೋನಮಃ 20ಚೈದ್ಯಮಥನ ಮನೋಜÕಶುದ್ಧಾತ್ಮ ಸರ್ವಜÕಯುದ್ಧದಲಿ ಸೈಂಧವನ ಶಿರವ ಕೆಡಹಿಸಿ ಜಯವಹೊದ್ದಿಸಿದ ಪಾರ್ಥನಿಂಗೆಇದ್ದು ನೀ ಹೃದಯದೊಳು ತಿದ್ದೆನ್ನ ಮತಿಯ ಸ್ಮರ-ವಿದ್ದ ಮಾನಸವ ಪಾದದ್ವಯದೊಳಿರಿಸೈ ದ-ಯಾದ್ರ್ರಚಿತ್ತ ಸ್ವಭಕ್ತಸಂಸಾರಿ ಕಾಯೆಜನಾರ್ದನಾಯ ನಮೋನಮಃ 21ಮಂದಾಕಿನಿಯ ಪಡೆದ ಮಾತೆಯ ಶಿರವ ಕಡಿದನಂದಗೋಪನ ಕಂದನೆನಿಸಿ ಬಾಲಕತನದಚಂದಮಂ ತೋರಿಸಿದ ಕುಬುಜೆಗಂಧಕೆ ಒಲಿದಸುಂದರೀರಮಣ ಜಯತುತಂದೆತಾಯಿಯು ಸರ್ವ ಜೀವರ್ಗೆ ನೀನೆ ನಿಜ-ವೆಂದು ತಿಳಿಯದೆ ಮಾಯೆಯಿಂದ ಮಮಕರಿಸಿ ಪರ-ನಿಂದಾದಿ ದೋಷಗಳ ಮಾಡಿ ಬಳಲುತ್ತಿಹರ್ಉಪೇಂದ್ರಾಯ ತುಭ್ಯಂ ನಮಃ 22ಸ್ಥಿರಚರಾತ್ಮಕ ಧೇನುಚರ ದೇವಕೀಜಠರ-ಶರಧಿಗುರುರಾಜ ಭಾಸ್ಕರಮಂಡಲಾಂತಸ್ಥಪರಮತೇಜೋಮಯ ಪುರಾಣಪುರುಷೇಶ್ವರನೆದುರಿತದೂರ ಗಭೀರನೆನಿರತಿಶಯನಿಜನಿರ್ವಿಕಲ್ಪ ಕಲ್ಪಾಂತಸಾ-ಗರದಿ ವಟಪತ್ರಪುಟಶಯನ ಪುಣ್ಯಶ್ರವಣಪುರುಷನಾಮಕ ಪುಷ್ಕರಾಕ್ಷ ಶ್ರೀಕರನೆ ಜಯಹರಯೇ ನಮೋನಮಸ್ತೇ 23ವೃಷ್ಟಿಕುಲತಿಲಕ ಸರ್ವೇಷ್ಟದಾಯಕ ನಿಮಿತ-ಶಿಷ್ಟಜನಪರಿಪಾಲ ಶಿವಗೌರೀ ಗಣಪಗುಹ-ಸೃಷ್ಟಿಶಕ್ತಿಯನೀವ ಗೋವರ್ಧನಾಚಲವ ಬೆಟ್ಟಿನಿಂದೆತ್ತಿದ ಮಹಾದುಷ್ಟ ನರಕಾದಿದಾನವರ ಮರ್ದಿಸಿದ ಜಗ-ಜಟ್ಟಿ ಜನಿಮೃತಿಭಯವಿದೂರ ವಿಷಮಯಸರ್ಪ-ಶ್ರೇಷ್ಠನಂ ಘಾತಿಸಿದ ರಾಮಾನುಜನೆಹರೇ ಕೃಷ್ಣಾಯ ತುಭ್ಯಂ ನಮಃ 24ಅಕ್ಷೀಣ ಬಲಶಾಲಿಯಾಂಜನೇಯನಿಗಿತ್ತೆಅಕ್ಷಯದ ಬ್ರಹ್ಮಪದವಿಯ ಲೋಕದೊಳಗ್ಯಾವ-ದಕ್ಷಮರ್ದನ ನಿನಗೆ ಸರ್ವತಂತ್ರಸ್ವತಂತ್ರ ಪಕ್ಷೀಂದ್ರಭುಜವಿರಾಜಸಾಕ್ಷಿಚೈತನ್ಯರೂಪನೆ ಕಮಲನಾಭನೆ ಮು-ಮುಕ್ಷುಜನಧ್ಯಾನಗಮ್ಯನೆ ಗದಾಧರ ದನುಜ-ಶಿಕ್ಷಕ ಪರೀಕ್ಷಕನೆ ಪವನವಾಹನಲಕ್ಷ್ಮೀನಾರಾಯಣಾಯ ನಮೋ25
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
(ಗ್ರಾಮ ಭಾಷೆಯಲ್ಲಿ)ದಂಗೈನಿ ಗೋಪಮ್ಮ ನಿಮ್ಮ ಮಗನೊಂಚುಮನಿಗೆ |ಹಂಗರೀಸು ಬುದ್ಧಿ ಹೇಳುಗಾಗ್ದ ಕೃಷ್ಣೈಯ್ಯಂಗೆ ||ವಂಗಲ್ಸೀ | ಕೇಣ್ಗತಾಯೆ | ಹೇಳ್ಕುತೀನಿಂಪಾದ್ದಂಗೆಂ |ರಂಗಯ್ಯಾನ ಲೂಟಿ ತಡ್ಕಂಬುಕಾತ್ತಿಲ್ಯೇ ನಮ್ ಕೈಯ್ಯಂಗೇ ಪಮೋಳ್ ಬೆಕ್ಕಿನಾಂಗ ಬಂದು ನಮ್ಮ ನೆಂಗಿದ್ದೆಲ್ಲಾ |ಹಾಲ್ ಮೊಸರ್ ಕುಡ್ಕ ಹ್ವಾರ್ | ಕೊರ್ಲಾಣಿ ಸುಳ್ಳಲ್ಲಾ ||ಮಾಳ್ಗಿಲದ್ ತುಪ್ಪ ನೊಂದ್ ಚಿಪ್ಪಾರ್ ಬೆಚ್ಲಿಲ್ಲೇ |ಅಳ್ಗಿಲಿದ್ ಬೆಣ್ಣೆ ಬರ್ಚಿ | ಬಾಯ್ಮೇಲ್ ಹ್ಯಾಕ ಹೋರಲೆ 1ಗೊಲ್ಲರೆಣ್ಗಳ್ ಮನಿಯಂಗಿ ವೃದ್ | ಗುಲ್ಲೆ ಗುಲ್ಲ್ ತಾಯಿ |ಎಲ್ ಗಂಟಿಂ ಕೇಂಡ್ರು ಬರು ಹೈಲೇ ಹೈಲ್ |ಮುಲ್ಲಿಂದ್ ಮುಲ್ಲಿ | ಗ್ ವಾಂಜಿಲಾಡುದೆಂತ್ ಚಲ್ಲೇಚಲ್ಲ್ ||ಮೆಲ್ಲಂಕ್ಯಾಂಡ್ರ ಹೇಳುದ್ ಪೂರ ಸುಳ್ಳೇ ಸುಳ್ಳ್ 2ಶಣ್ಣರಂತ್ರಿ ನಿಮ್ ಮಗ ಪೂತನೀನ್ ಹ್ಯಾಂಕೊಂದ್ರು ||ಶಂಣ್ ಕಾಲಂಗೆ ತೊಳ್ದಿ | ಕಿದಡ್ ಗಾಡಿನ್ಯಾಂಗೆ ಮುರದ್ರ್ |ಮಣ್ ತಿಂದ್ ಬಾಯಾಂಗೆಲ್ಲ | ಲೋಕನ್ಯಾಂಗೆ ತೋರ್ಸ್ರ್|ಕಣ್ ಮಾಯಾಕ ಮಾಡಿ | ಹಾರ್ಸರೆ ತಿರ್ಣವರ್ತನ ತೀರ್ಸರ್ 3ಜಿಡ್ಡಿ ಒರ್ಲಿಗ ಕಟ್ರಕಾಣಿ | ಅಡ್ದೆ ಹ್ಯಾಕ ಎಳ್ದ್ರ್ |ದಡ್ ದಡ್ ಮತ್ತಿಮರು | ಎಯ್ಡ್ ಮುರ್ದುಕೆಡ್ದ್ರು |ಕಡ್ಡಿದೊಣ್ಣೆ ಹಿಡ್ಕ ಆಡೋ ಮಕ್ಕಳಂತ್ರಿ ಕಾಂತ್ |ಗಡ್ಡ ಹಣ್ಣಾದ್ಯತಿಗಳ್‍ವ್ರಿಗಡ್ಡ ಬದ್ದಿಕಿ ಹೋತ್‍ರಿ 4ಸಿಟ್ ಗಂಡಳ್‍ಂದ್ ನನ್ನ ತೊಟ್‍ಕಾ ಮುತ್ ಕೊಟ್ರು |ಹೊಟ್ಟೆ ಮೇಲ್ ಹೊಟ್ಟೆ ಬೆಚ್ಚಿ | ಲೊಟ್ಟಿಂಗ್ ಪಟ್ಟಂಗ್ ಕುಟ್ರು |ಕೆಟ್ಟಾರ್ ಬೈದನನಗಂಡ| ಕೇಂಡ್ರೆ ವಿರಾಣ ಬೆಚ್ಚ್ರೆ |ಸಿಸ್ಟಿಪತಿ ಗೋವಿಂದ್ಮೂರ್ತಿದಾಸರ್‍ಗೆಲ್ಲಾ ಶ್ರೇಷ್ಟ್ರ್5
--------------
ಗೋವಿಂದದಾಸ
(ಮೂಲ್ಕಿಯ ಮಹಾಲಿಂಗೇಶನನ್ನು ನೆನೆದು)ಪಿಡಿಯೆನ್ನ ಕೈಯ ಜಗನ್ಮಯಪಿಡಿಯೆನ್ನ ಕೈಯ ಪ .ಪಿಡಿಯೆನ್ನ ಕೈಯ ನಿನ್ನಡಿದಾವರೆಯಲ್ಲಿದೃಢವಾದ ಮನವ ಬೆಂಬಿಡದೆನಗೀಯಯ್ಯ ಅ.ಪ.ಪಾಮರಮತಿಯ ಪಾಪಾತ್ಮರ ಸೀಮಾಧಿಪತಿಯಕಾಮುಕಪರದಾರಭ್ರಾಮಕತಾಮಸ-ಧಾಮನ ಕಪಟವಿಶ್ರಾಮ ಕುಧೀಮನವ್ಯೋಮಕೇಶಭಗತ್ಪದಾಶ್ರಿತನ ಮಮಕಾರದಲಿ ಪಾಲಿಸುಹೈಮವತಿಪತಿ ಕಾಮಹರ ಸುತ್ರಾಮವಂದಿತ ಸೋಮಶೇಖರ 1ದುಷ್ಟದುರ್ಜನನ ದುರಾಚಾರ ಭ್ರಷ್ಟಜೀವನನಮೆಟ್ಟಿದ ನೆಲಮುನಿಯುವನ ಕೃತಘ್ನ ಕ-ನಿಷ್ಟಕಾಯುಷ್ಯದ ಘಟ್ಟಿಚೇತನನೆನ್ನತಟ್ಟನೆ ದಯವಿಟ್ಟು ಸರ್ವಾಭೀಷ್ಟದಾಯಕನಾಗಿ ಕರುಣಾ-ದೃಷ್ಟಿಯಿಂದಲಿನೋಡುಸನ್ಮನವಿಷ್ಟರಸ್ಥ ಶಿವಾಷ್ಟಮೂರುತಿ2ಸತ್ಯಬಾಹಿರನ ಪ್ರಪಂಚ ಪ್ರ-ವೃತ್ತಿಯೊಳಿಹನಅತ್ಯಂತ ಪಾಪಿ ಕುಚಿತ್ತ ಮದಾಂಧನು-ನ್ಮತ್ತ ಮಾತಂಗವಿರಕ್ತಿವಿಹೀನನಎತ್ತಿ ಎನ್ನತ್ತಿತ್ತ ನೋಡದೆ ಮತ್ತೆಕಾವಸಮರ್ಥರಾರೈಸತ್ತ್ವನಿಧಿಸುರಮೊತ್ತ ಪೂಜಿತ ಮೃತ್ಯುಹರ ಶ್ರೀಕೃತ್ತಿವಾಸನೆ 3ಎಣಿಸಲು ಬೇಡ ಎನ್ನಪರಾಧ ಗಣಿತಕ್ಕೆ ಕೂಡಗುಣಗಣನಿಧಿ ಲಕ್ಷ್ಮೀನಾರಾಯಣಸಖದಣಿಯಲೊಲ್ಲೆ ದಯಮಾಡೆನಗೀಗಲೆಫಣಿಪಕುಂಡಲ ಪಾರ್ವತೀಪತಿ ಪ್ರಣತಜನಮಂದಾರ ನಿರ್ಮಲಪ್ರಣವರೂಪನೆ ಮೌಕ್ತಿಕಾಪುರ ಮಣಿಮಹಾಲಿಂಗೇಶ ಬೇಗನೆ4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
(ಶ್ರೀಹರಿಯ ಷಣ್ಮಹಿಷಿಯರ ಸ್ತುತಿ)ಹರಿಮಾನಿನಿಯರಾರು ಮಂದಿಸುಪ್ರವೀಣೆ ಲಕ್ಷಣೆ ಕಾಳಿಂದಿಜಾಣೆ ಸಖಿವಿಂದೆ ಜಾಂಬವತಿಯರಿಗೆನಾ ನಮಿಸುವೆ ಮನದೊಳಗೆ 1ತಮ್ಮ ಪತಿಯರಿಂದೊಡಗೂಡಿಮನ್ಮಾನಸಮಂ ಮನೆಮಾಡಿನಿರ್ಮಲ ಬುದ್ಧಿಯ ಪ್ರೇರೇಪಿಸಲಿಸುಮ್ಮಾನಪಾಲಿಸಲಿ2ಭಕ್ತಿ ವಿರಕ್ತಿ ಜ್ಞಾನ ಮ-ಚ್ಚಿತ್ತದೊಳಿರಲಿ ಧ್ಯಾನಕರ್ತಲಕ್ಷ್ಮೀನಾರಾಯಣನ ನಾಮ-ಕೀರ್ತನೆಗೈವುದೆ ನೇಮ 3ದುರ್ಗಾದೇವಿಯ ಸ್ತುತಿ
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
139-2ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ವಿಜಯದಾಸರಲಿ ಗೋಪಾಲದಾಸರಲಿನಿಜ ಗುರುಭಕ್ತಿ ವರ್ಧಿಸಿ ಹರಿದಾಸನಿಜಪಂಥದಿ ತನ್ನ ಸೇರಿಸೆ ಅನುಗ್ರಹಿಸೆನಿಜಭಾವದಲಿ ಆಚಾರ್ಯ ಬೇಡಿದರು 1ನರಸಿಂಹ ದಾಸರಾಗಿಹ ತಂದೆಮುಖದಿಂದವರಗಾಯತ್ರಿ ಮಂತ್ರ ಉಪದಿಷ್ಟರಾಗಿವರದೇಂದ್ರರಲಿ ಮೂಲಟೀಕಾದಿ ಗ್ರಂಥಗಳುಮಂತ್ರೋಪದೇಶವು ಕೊಂಡವರು ಮೊದಲೇ 2ಶ್ರೀನಿವಾಸಾಚಾರ್ಯರ ಕೋರಿಕೆಯಮನ್ನಣೆಮಾಡಿದರು ದಾಸಾರ್ಯರುಘನಮಹಾಸಚ್ಛಾಸ್ತ್ರ ತತ್ತ್ವ ವಿಷಯಗಳಕನ್ನಡಮಾತಲ್ಲಿ ಬೋಧಿಸಿದರು 3ಪ್ರಣವಹರಿ ಜಾಗ್ರದಾದ್ಯವಸ್ಥಾ ಪ್ರಣಯನಕೃಷ್ಣರಾಮ ನಾರಸಿಂಹವರಾಹವಿಷ್ಣು ಪರಂಜ್ಯೋತಿ ಪರಂಬ್ರಹ್ಮವಾಸುದೇವಏನೆಂಬೆ ಶ್ರೀಶ ಗುಣಕ್ರಿಯಾ ರೂಪಮಹಿಮೆ 4ಗಾಯತ್ರಿ ನಾಮಆಮ್ನಾಯಗಾಯನ ಮಾಡಿದಯದಿ ಜಗವೆಲ್ಲ ರಕ್ಷಿಸುವ ಸ್ವಾಮಿಹಯಗ್ರೀವ ಗಾಯತ್ರಿ ಮಂತ್ರ ಪ್ರತಿಪಾದ್ಯನುನಾರಾಯಣವಾಸುದೇವವೈಕುಂಠ5ತ್ರಾತಹಯ ಶೀರ್ಷನೆ ಗಾಯತ್ರಿ ನಾಮನುಭೂತಪೂರ್ಣ ವಾಗ್ವಶಿ ಶರೀರವ್ಯಾಪ್ತಪೃಥ್ವಿ ಆಶ್ರಯ ಪ್ರಾಣಾಧಾರ ಹೃದಯನುತ್ರಿಧಾಮ ಪಾದತ್ರಯ ಜಗತ್ಪಾದ ಸದೃಶ 6ಜ್ಞಾನ ಸುಖಬಲಪೂರ್ಣ ಸರ್ವ ಆಧಾರನುದಿನಪತೇಜಃ ಪುಂಜಚೇಷ್ಟಕ ಸ್ಫೂರ್ತಿದನುವನಜಜಾಂಡದ ಸರ್ವಕರ್ತನೂ ದೇವಭಜನೀಯ ಧ್ಯಾತವ್ಯ ಶ್ರೀ ನಾರಾಯಣನು 7ವರ್ಣಗಳು ನಿತ್ಯವು ವರ್ಣಾಭಿಮಾನಿಗಳೊಳ್ವರ್ಣಪ್ರತಿಪಾದ್ಯಹರಿ ಶ್ರೀ ಸಹ ಇಹನುಪೂರ್ಣ ಸುಗುಣಾರ್ಣವನುನಿರ್ದೋಷಸರ್ವಜಗತ್ಜನ್ಮಾದಿ ಕರ್ತನು ನಿಗಮೈಕವೇದ್ಯ 8ಶಬ್ದಗಳು ಸರ್ವವೂ ಮುಖ್ಯ ವೃತ್ತಿಯಲಿಮಾಧವನ್ನಲ್ಲಿಯೇ ವಾಚಕವಾಗಿವೆಯುವೈದಿಕ ಶಬ್ದಗಳು ಹರಿಗೇವೆ ಅನ್ವಯವುಸಂಸ್ತುತ್ಯ ದ್ರಷ್ಟವ್ಯ ಅನುಪಮೈಕಾತ್ಮ 9ಸತ್ಯಜ್ಞಾನಾನಂತಆನಂದಮಯಹರಿಯೆಶ್ರೋತವ್ಯ ಮಂತವ್ಯ ನಿಧಿ ಧ್ಯಾಸಿತವ್ಯವ್ಯಾಪ್ತನು ಸರ್ವತ್ರ ಸರ್ವದಾ ಸರ್ವಕ್ಕೂಆಧಾರ ಅಕ್ಷರನು ಕ್ಷರಾಕ್ಷರೋತ್ತಮನು 10ರಾಜಿಸುತಿಹ ನಮ್ಮ ದೇಹಾಖ್ಯ ರಥದಲ್ಲಿರಾಜರಾಜೇಶ್ವರನು ಶ್ರೀ ಹ್ರೀ ಸಮೇತಯುವರಾಜ ವಾಯುದೇವನ ಸೇವೆಕೊಳ್ಳುತಿಹರಾಜೀವೇಕ್ಷಣಹರಿಪ್ರಾಣನಾಮ11ಪ್ರಸ್ಥಾನತ್ರಯ ವೈದಿಕಶಾಸ್ತ್ರ ವಿಷಯಗಳುಇತಿಹಾಸಭಾಷಾತ್ರಯಪುರಾಣಗಳುಪ್ರತಿರಹಿತ ಸರ್ವೋತ್ತಮ ಸ್ವಾಮಿ ಶ್ರೀಶನ್ನಚಿಂತಿಸಿ ಕಾಣಲುಬಗೆ ತೋರಿಸುತಿವೆ 12ಆಚರಿಸಿ ಜ್ಞಾನ ಪೂರ್ವಕವಿಹಿತಕರ್ಮಅಚ್ಚಭಕ್ತಿಯಿಂದ ಚಿಂತಿಸಿ ಸ್ತುತಿಸೆಅಚ್ಚುತ ಸ್ವತಂತ್ರನು ಮುಖ್ಯ ಕಾರಣ ವಿಷ್ಣುಪ್ರೋಚ್ಯ ಸುಖವೀವನು ತೋರಿತಾ ಒಲಿದು 13ಮಧ್ವಮತ ಸಿದ್ಧಾಂತ ಪದ್ಧತಿ ಅನುಸರಸಿಸದನು ಸಂಧಾನ ಭಕ್ತಿ ಉನ್ನಾಹದಿಮಾಧವನ ಗುಣಕ್ರಿಯಾ ರೂಪಗಳ ಕೊಂಡಾಡಿಪದವಾಕ್ಯ ಶ್ಲೋಕ ಪದ್ಯಗಳ ನುಡಿಯುವುದು 14ಒಂದೊಂದು ಕೀರ್ತನೆ ಪದ್ಯ ಗ್ರಂಥಗಳಲ್ಲೂಇಂದಿರೇಶನು ತತ್ತತ್ ಪ್ರತಿಪಾದ್ಯ ಇಹನುಪದ್ಯ ಕೀರ್ತನೆ ಗ್ರಂಥ ವಿಷಯ ಶ್ರೀಹರಿಯಮಂತ್ರ ಚಿಂತಿಸಿ ಅರ್ಪಿಸಬೇಕು ರಚನೆ 15ಬೃಹತೀ ಸಹಸ್ರಸ್ವರ ವ್ಯಂಜನಾಕ್ಷರ ವಾಚ್ಯಶ್ರೀಹರಿಅಹರ್ನಿಶಿಕಾಯುವ ದಯಾಳುಅಹರಹ ಸದುಪಾಸ್ಯ ಬ್ರಹ್ಮ ಶಿವ ಈಡ್ಯನುದೇಹ ಒಳಹೊರಗಿಪ್ಪ ಸರ್ವಾಂತರ್ಯಾಮಿ 16ಸ್ವತಃ ಅವ್ಯಕ್ತನು ಸರ್ವದಾ ಸರ್ವತ್ರಸ್ವತಂತ್ರ ಪೂರ್ಣಜ್ಞಾನ ಆನಂದರೂಪಸ್ವಪ್ರಯತ್ನದಿ ಅಲ್ಲ ಮುಮುಕ್ಷುಗಳಿಗಪರೋಕ್ಷಮೋದಮಯ ಶ್ರೀಹರಿಯ ಪ್ರಸಾದದಿಂದಲೇ 17ಜ್ಞಾನಿಗೆ ಪ್ರತ್ಯಕ್ಷ ಹರಿಯ ಅವ್ಯಕ್ತತ್ವಅನ್ಯರಿಗೆ ವೇದ್ಯ ಸೂಕ್ಷ್ಮತ್ವಾನುಮಾನದಿತನ್ಮಾತ್ರ ತೇಜಸ್ಸು ಭೌತಿಕವು ಎಂಬಂಥಅಗ್ನಿಯ ಸೂಕ್ಷ್ಮತ್ವ ಸ್ಥೂಲತ್ವವೋಲ್ಲ 18ಎಲ್ಲೆಲ್ಲೂ ಎಂದೆಂದೂ ಏಕಪ್ರಕಾರದಲ್ಲಿಳಾಳಕನು ಅವ್ಯಕ್ತರೂಪ ಇರುತಿಹನುಇಲ್ಲ ಇವಗೆ ಎಂದೂ ಎಲ್ಲೂ ಪ್ರಾಕೃತರೂಪಒಲಿದು ಕಾಣುವ ತನ್ನ ಇಚ್ಛೆಯಿಂದಲೇ 19ಮೂಲರೂಪದಿ ಸೂಕ್ಷ್ಮತ್ವ ಅವತಾರಗಳಲಿಸ್ಥೂಲತ್ವವೆಂಬುವ ವಿಶೇಷವು ಇಲ್ಲಇಳೆಯಲ್ಲಿ ಕೃಷ್ಣಾದಿ ರೂಪಗಳ ಕಂಡದ್ದುಮಾಲೋಲನಿಚ್ಛೆಯೇ ಪುರುಷಯತ್ನದಿ ಅಲ್ಲ 20ಅರೂಪಮ ಕ್ಷರಂಬ್ರಹ್ಮ ಸದಾವ್ಯಕ್ತಂಆತ್ಮಾವರೇ ದ್ರಷ್ಟವ್ಯ ಎಂದುಈ ರೀತಿ ಅವ್ಯಕ್ತತ್ವ ಅಪರೋಕ್ಷತ್ವಎರಡು ಪೇಳುವಶ್ರುತಿವಿರೋಧವು ಇಲ್ಲ21ಆರಾಧನಾದಿ ಪ್ರಯತ್ನಕ್ಕೂ ಅವ್ಯಕ್ತಉರುಸುಖಮಯಅಪ್ರಾಕೃತಅವಿಕಾರಿಪರಮಪುರುಷ ಹರಿಯ ಇಚ್ಛಾಪ್ರಸಾದದಿಂಅಪರೋಕ್ಷಮೋಕ್ಷಗಳು ಲಭ್ಯಯೋಗ್ಯರಿಗೆ22ವನಜನಾಭನರೂಪಗುಣಮಹಿಮೆಕೇಳಿಅನುಭವಕೆ ಬರುವಂಥ ಮನನ ಸುಧ್ಯಾನಅನಘಹರಿಯಲಿ ಭಕ್ತಿ ಸುಖಬಾಷ್ಪ ಸುರಿಸೆತನ್ನಿಚ್ಚೆಯಿಂದಲೆ ಅಪರೋಕ್ಷವೀವ 23ಬ್ರಹ್ಮಪುರವನರುಹವೇಷ್ಮವ್ಯೋಮಸ್ಥದೇಹ ಸರ್ವಾಂಗಸ್ಥ ಸರ್ವನಾಡಿಸ್ಥಬಹಿರಂತರ ಸರ್ವಮೂರ್ತಾ ಮೂರ್ತಸ್ಥಮಹಾಮಹಿಮ ಹರಿಯು ಸರ್ವತ್ರ ಪ್ರಸಿದ್ಧ 24ಸರ್ವತ್ರ ವ್ಯಾಪ್ತನು ಸತ್ತಾದಿ ದಾತನುಸರ್ವದೊಳು ಸದಾಪೂರ್ಣಅಖಿಳಸಚ್ಛಕ್ತಸರ್ವೇಶ ಸರ್ವಾಧಾರನಾಗಿಹ ಸ್ವಾಮಿದೇವಿ ಲಕ್ಷ್ಮೀರಮಣ ವಿಷ್ಣು ನರಸಿಂಹ 25ಉಗ್ರವೀರನು ಮಹಾವಿಷ್ಣು ತೇಜಃಪುಂಜಸುಪ್ರಕಾಶಿಪ ಸರ್ವತೋಮುಖ ನೃಸಿಂಹಅರಿಗಳಿಗೆ ಭೀಷಣನು ಭಕ್ತರಿಗೆ ಇಷ್ಟಪ್ರದಸಂರಕ್ಷಕ ನಮೋ ಮೃತ್ಯುಗೇ ಮೃತ್ಯು 26ಪ್ರೋದ್ಯರವಿನಿಭದೀಪ್ತ ವರ್ತುಲ ನೇತ್ರತ್ರಯಹಸ್ತದ್ವಯ ಆಜಾನು ಮಹಾಲಕ್ಷ್ಮಿಯುತನುಸುದರ್ಶಿನಿ ಶಂಖಿಯುತ ಕೋಟ್ಯಾರ್ಕಾಮಿತತೇಜಉತ್ಕøಷ್ಟಅಖಿಳಸಚ್ಛಕ್ತ ನರಸಿಂಹ27ಇಂಥಾ ವಿಷಯಗಳ ಜಿಜ್ಞಾಸ ಉಪದೇಶಹಿತಮಾತ ಗೋಪಾಲದಾಸಾರ್ಯರಿಂದಮುದದಿಂದ ಶ್ರೀನಿವಾಸ ಆಚಾರ್ಯರು ಕೊಂಡುಪಾದಕೆರಗಿಹರಿಅಂಕಿತ ಬೇಡಿದರು28ವಾರಿಜಾಸನ ಪಿತನ ಪೂರ್ಣ ಪ್ರಜÕರ ಹೃತ್‍ಸ್ಥಶಿರಿ ಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 29- ತೃತೀಯ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
139-4ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಗುರುಗಳು ಏಕಾಂತದಲ್ಲಿ ಇತ್ತ ಉಪದೇಶಮರೆಯದೇ ಅನುಸರಿಸಿ ಭೀಮರತಿಯನ್ನುಸೇರಿ ವಿಹಿತದಿ ಸಂಕಲ್ಪಾದಿಗಳ ಮಾಡಿನೀರಲ್ಲಿ ಇಳಿದರು ಶ್ರೀನಿವಾಸಾಚಾರ್ಯ 1ಸರ್ವ ಜಗತ್ಪಾಲ ಶ್ರೀ ಪಾಂಡುರಂಗವಿಠ್ಠಲನುಪ್ರವಾಹ ಸುಳಿಯಿಂದ ಬಡುಗಾತ್ರ ಭಕ್ತನ್ನಕಾಯ್ವುದಕೆ ಗಂಡಾ ಶಿಲಾ ನಿರ್ಮಿಸಿದ ಅಲ್ಲಿದೇವಗುರುಸ್ಮರಣೆಯಿಂ ಇಳಿದರಾಚಾರ್ಯ2ನರಸಿಂಹ ವಿಠ್ಠಲದಾಸರು ತಂದೆಯಗುರುಗಳು ಗೋಪಾಲ ವಿಠ್ಠಲ ದಾಸರಪರಮಗುರುಗಳುವಿಜಯವಿಠ್ಠಲ ದಾಸರಪುರಂದರದಾಸರಾಜರ ಸ್ಮರಿಸಿದರು3ತೀರ್ಥಾಭಿಮಾನಿಗಳ ಭಾರತೀಪತಿಯಪದುಮೆ ಪದ್ಮೇಶ ಫಂಡರಿ ನಾಥ ಹರಿಯಮೋದಚಿನ್ಮಯ ಜಗನ್ನಾಥನ ಸ್ಮರಿಸುತ್ತಉದಕಪ್ರವಾಹದೊಳು ತನುವ ಅದ್ದಿದರು4ಸೀನಪ್ಪ ಶ್ರೀನಿವಾಸ ಶ್ರೀನಿವಾಸಪ್ಪ ಈಶ್ರೀನಿವಾಸಾಚಾರ್ಯ ಒಂದು ಸಲ ಮುಳುಗೇಳೆತನುಗತ ಒಳ ಹೊರಗಿನಕಲುಷಕಳೆದವುಪುನಃ ಮುಳಗೇಳಲು ಸುಪವಿತ್ರರಾದರು 5ಪುನಃ ಮುಳುಗಿ ಎದ್ದು ಅ ಘ್ರ್ಯವ ಅರ್ಪಿಸಲುಇನನ ಮಂಡಲದಿ ವರವಾಯು ಅಧಿಷ್ಠಾನದಲಿಶ್ರೀ ನಾರಾಯಣ ಸರ್ವಜನ ಹಿತಕರನಆನಂದ ಚಿನ್ಮಾತ್ರ ವಪುಷನ್ನ ಸ್ಮರಿಸಿದರು 6ಋಕ್ಸಾಮ ವೇದಗಳಿಂದ ವಾಣೀವಾಯುಸುಖಪೂರ್ಣ ನಾರಾಯಣನ ಸ್ತುತಿಸುವರುಆಕಳಂಕ ಉನ್ನಾಮಸಾಮನಾಮ ಹೀಂಕಾರಶ್ರೀಕೃತಿಪತಿ ಪ್ರದ್ಯುಮ್ನಾದಿ ಸ್ವರೂಪ 7ಸಪ್ತಕಾಲದಿ ಸಪ್ತಸಾಮ ಪ್ರತಿಪಾದ್ಯನುಸಪ್ತಸ್ವರೂಪನು ಆದಿತ್ಯಾಂತಸ್ತಪ್ರದ್ಯುಮ್ನವಾಸುದೇವವರಾಹನಾರಾಯಣಅನಿರುದ್ಧ ನರಸಿಂಹ ಸಂಕರುಷಣ 8ಪರಮಗುರುವಿಜಯದಾಸಾರ್ಯರ ಪ್ರೇರಣೆಯಿಂದಗುರುಗಳು ಗೋಪಾಲದಾಸಾರ್ಯರುಅರುಪಿದಅನುಸಂಧಾನಕ್ರಮದಿಂದಲೇಗುರುತಮ ಸಮೀರನಲಿ ಹರಿಯ ಸ್ಮರಿಸಿದರು 9ಸೂರ್ಯನೊಳಿಪ್ಪಸಮೀರಅಧಿಷ್ಠಾನಸ್ಥಸೂರಿಜನ ಪ್ರಾಪ್ಯ ಋಕ್ ಸಾಮಾದಿಸ್ತುತ್ಯಸೂರ್ಯತೇಜಃ ಪುಂಜ ಸ್ಫೂರ್ತಿದ ಜಗತ್ಕರ್ತ ಶ್ರೀಶ್ರೀನಾರಾಯಣಗಘ್ರ್ಯ ಅರ್ಪಿಸಲು ಒಲಿದ 10ಝಗಝಗಿಪ ತೇಜಸ್ಸು ಶಿರೋಪಕಂಡರುಮೂಗಿನಿಂದೊಂದಡಿ ಶಿರದ ಮೇಲೆಜಗನ್ನಾಥವಿಠ್ಠಲ ಎಂದು ಪ್ರಜ್ವಲಿಸಿತುಹೇಗೆ ವರ್ಣಿಸುವೆ ಆ ಅದ್ಭುತ ದೃಶ್ಯ 11ಸರ್ವ ಜಗದ್ರಕ್ಷಕ ವಿಠ್ಠಲನು ತತ್ಕಾಲಪ್ರವಾಹವ ತಡೆಯಲು ನಿರ್ಮಿಸಿದ ಶಿಲೆಯುಪ್ರಜ್ವಲಿಪ ಈ ದಿವ್ಯ ಹರಿನಾಮ ಅಂಕಿತಕ್ಕೆಐವತ್ತು ಅಂಗುಲ ಹಿಂದೆ ನಿಂತಿತ್ತು 12ಕ್ಷಣಮಾತ್ರದೊಳಗೆ ಈತಟಿತ್ಕೋಟಿನಿಭಜ್ಯೋತಿಫಣೆಮುಂದೆ ನಿಂತಿತು ಆಗ ಆಚಾರ್ಯಚೆನ್ನಾಗಿ ನೋಡಿದರುಹರಿಇಚ್ಛಾಶಕ್ತಿಯಿಂಶ್ರೀನಿವಾಸವಿಜಯಗೋಪಾಲ ವಿಠ್ಠಲನ13ಶ್ರೀ ಶ್ರೀನಿವಾಸನೇವಿಜಯವಿಠ್ಠಲನಾಗಿಶ್ರೀ ಶ್ರೀನಿವಾಸ ಗೋಪಾಲ ವಿಠ್ಠಲನಾಗಿಶ್ರೀ ಶ್ರೀನಿವಾಸ ಶ್ರೀ ಜಗನ್ನಾಥ ವಿಠ್ಠಲನಾಗಿಶಿರಿ ಜಗನ್ನಾಥ ದಾಸಾರ್ಯರು ನೋಡಿದರು 14ಶ್ರೀ ಶ್ರೀನಿವಾಸನೆ ಪ್ರಸನ್ನನು ಆಗಿತೋರಿಹನು ಜಗನ್ನಾಥ ವಿಠಲನೆನಿಸಿತಿರುಪತಿ ಶ್ರೀನಿಧಿಯೇ ಪಂಡರಿ ವಿಠ್ಠಲನುಸೂತ್ರನೋಡಿ ನಸ್ಥಾನ ತೋಪಿ15ಶ್ರೀ ರುಕ್ಮಿಣೀಪತಿ ಪರಂಜ್ಯೋತಿ ಪರಂಬ್ರಹ್ಮಉರುಅಖಿಳಸಚ್ಛಕ್ತ ಜಗನ್ನಾಥ ವಿಠ್ಠಲಶಿರಿ ಜಗನ್ನಾಥದಾಸರ ಹೃದಯ ¥ದ್ಮದೊಳುಸೇರಿದನು ಜ್ವಲಿಸುತಿಹ ಸರ್ವೋತ್ತಮ ಅಲ್ಲಿ 16ಎಂಟುಅಕ್ಷರಮೂಲಮಂತ್ರದಿ ನಾರಾಯಣನವಿಠ್ಠಲ ಹಯಗ್ರೀವ ವೆಂಕಟೇಶಾದಿಷಡಕ್ಷರಿ ವಿಷ್ಣು ರಾಮ ಕೃಷ್ಣಾದಿಗಳಕ್ರೋಡನರಸಿಂಹಾದಿಗಳನು ಜಪಿಸಿದರು17ಗುರುಪರಮಗುರುಪೇಳ್ದ ರೀತಿಯಲಿ ಜಪಚರಿಸಿಶ್ರೀ ರುಕ್ಮಿಣಿ ವಿಠ್ಠಲ ಮಂದಿರಕೆ ಪೋಗಿಪುರಂದರಾರ್ಯರ ನಮಿಸಿಗುರುಪರಮಗುರುಗಳಸ್ಮರಿಸಿ ಒಳಪೊಕ್ಕರು ವಿಠ್ಠಲನ್ನ ನೋಡೆ 18ಶ್ರೀ ಮಧ್ವರಮಣ ನಿನ್ನ ಅದ್ವಿತೀಯ ಮಹಿಮೆಈ ಮಹೋತ್ತಮಕೃತಿಪುರಂದರದಾಸರದುಅಮಲ ಭಕ್ತಿಯಲ್ಲಿದನ್ನ ಅರ್ಥ ಅರಿತು ಪಠಿಸಿಶ್ರೀಮಂದಿರದೊಳು ಪ್ರವೇಶ ಮಾಡಿದರು 19ತ್ರಿಜಗದೀಶನಪಾದಪದ್ಮಗಳ ನೋಡುತ್ತನಿಜಭಕ್ತಿ ಭಾವದಲಿ ಸಾಷ್ಟಾಂಗ ನಮಿಸಿಅಜಭವೇಂದ್ರಾದಿ ಸುರವಂದ್ಯನ್ನ ಕೇಶಾದಿರಾಜೀವಪಾದಾಂತ ದರುಶನ ಮಾಡಿದರು20ಜ್ವಲಿಸುವ ಕಿರೀಟ ಸುಳಿಗುರುಗಳು ಫಣಿಯ ತಿಲಕಬಿಲ್ಲುವೋಲ್ ಸುಂದರ ಭ್ರೂ ಮುಖಕಮಲಜಲಜೇಕ್ಷಣ ಮುಗುಳುನಗೆಯು ತಟಿದಂದಿಪೊಳೆವ ಕುಂಡಲಕರ್ಣ ಕಂಬುಗ್ರೀವ 21ವನಮಾಲೆ ಎಳೆ ತುಳಸಿದಳ ಹಾರ ಕೊರಳಲ್ಲಿಘನಬಾಹು ವಿಸ್ತಾರವಕ್ಷ ಶ್ರೀವತ್ಸಸ್ವರ್ಣಮಣಿ ಗ್ರೈವೇಯಕೌಸ್ತುಭರತ್ನವುಕಣ್ಣಾರ ಕಾಣಲಾನಂದ ಸೌಂದರ್ಯ 22ಮೂರುಗೆರೆ ಉದರದಲಿವನರುಹನಾಭಿಯುಕರಗಳು ಕಟಿಯಲ್ಲಿ ಶಂಖಾರವಿಂದಪುರುಟಮಣಿ ಗಣಸೂತ್ರ ಪೀತಾಂಬರ ಉಡಿಸ್ಫುರದ್ರತ್ನ ನೂಪುರ ಸಮಪಾದದ್ವಯವು 23ತಟಿತ್ಕೋಟಿನಿಭ ತನ್ ಕಾಂತಿಯಲಿ ಜ್ವಲಿಸುವಸಾಟಿಯಿಲ್ಲದ ಸುಂದರಾಂಗ ಶ್ರೀರಮಣವಿಠ್ಠಲ ಕೃಪಾನಿಧಿ ಶರಣಜನ ಪಾಲನ್ನಹಾಡಿ ಸ್ತುತಿಸಿದರು ಜಗನ್ನಾಥ ದಾಸಾರ್ಯ 24ಫಣಿಪಶಾಯಿಯ ಅನಂತ ಪದ್ಮನಾಭನು ತನ್ನಆನಂದಲೀಲೆಯಲಿ ಜಗವ ಪಡೆಯುವನುಆನಂದಲೀಲೆಯಲಿ ಅವತಾರ ರೂಪಗಳತಾನೇ ಪ್ರಕಟಿಸಿ ಸಜ್ಜನರ ಪಾಲಿಸುವ 25ದೇಶಗುಣಕಾಲ ಅಪರಿಚ್ಛಿನ್ನನು ಅನಂತನುಶ್ರೀಶಸರ್ವೇಶ ಚಿನ್ಮಯನುಅನಘಐಶ್ವರ್ಯ ಪೂರ್ಣಜಗದೇಕ ಪಾಲಕನುಅಸಮ ಸರ್ವೋತ್ತಮನು ಸುಖಮಯನು ಸುಖದ 26ಮೀನಕೂರ್ಮಸ್ತ್ರೀ ಅಜಿತ ಧನ್ವಂತರಿಕ್ರೋಢಶ್ರೀನಾರಸಿಂಹ ವಟುಭೃಗು ರಾಮರಾಮಕೃಷ್ಣ ಜಿನಸುತ ಕಲ್ಕಿ ಠಲಕ ವೆಂಕಟರಮಣಆನಂದಚಿತ್ತನು ಅನಂತ ಅವತಾರ 27ದಾಸೋಹಂ ತವ ದಾಸೋಹಂ ಎಂದುದಾಸವರ್ಯರು ಬಿನ್ನೈಸಿ ಸ್ತುತಿಸಿದರುನಸುನಗುತ ವಾತ್ಸಲ್ಯದಿಂದ ವಿಠ್ಠಲನುವಿಶೇಷಾಪರೋಕ್ಷ ಅನುಗ್ರಹಿಸಿದನುದಯದಿ 28ಸೌದಾಮಿನಿಗಮಿತ ವಿದ್ಯುತ್ ಕಾಂತಿಯಿಂದದಿಕ್ಕು ವಿದಿಕ್ಕುಗಳ ರಂಜಿಸುವರೂಪದಿಂದ ಪಾಲ್ಗಡಲಲಿ ಆವಿರ್ಭವಿಸಿದ ಶ್ರೀಇಂದಿರೆಯೆ ರುಕ್ಮಿಣಿ ಸೌಂದರ್ಯಪೂರ್ಣೆ 29ಮಾಯಾಜಯಾಕೃತಿಶಾಂತಿ ಸೀತಾಲಕ್ಷ್ಮಿತೋಯ ಜಾಲಯ ಚಿತ್ಪ್ರಕೃತಿ ಭೂದುರ್ಗಾತೋಜಯಾಕ್ಷಿವೇದವತಿದಕ್ಷಿಣಾ ಶ್ರೀಜಯಂತಿ ಸತ್ಯಾರುಕ್ಮಿಣಿ ಸುಂಧುಕನ್ಯಾ 30ಸರ್ವ ಜಗಜ್ಜನನಿಯು ಸರ್ವ ವಿಧದಲಿ ಹರಿಯಸೇವಿಸುತಿಹಳು ಸದಾ ನಿತ್ಯಾವಿಯೋಗಿನಿದೇವದೇವೋತ್ತಮ ರಾಜರಾಜೇಶ್ವರನು ವಿಠ್ಠಲನುದೇವಿ ಶ್ರೀ ರಾಜರಾಜೇಶ್ವರಿಯು ರುಕ್ಮಿಣಿಯು 31ಜ್ವಲಿಸುವ ಮುತ್ತು ನವರತ್ನದಿ ಕಿರೀಟಒಳ್ಳೆ ಪರಿಮಳ ಹೂವು ಮುಡಿದಂತ ತುರುವುಫಾಲದಲಿ ಶ್ರೇಷ್ಠತಮ ಕಸ್ತೂರಿ ತಿಲಕವುಪೊಳೆವ ಪೂರ್ಣೇಂದು ನಿಭ ಮೂಗುಬೊಟ್ಟು 32ಅಂಬುಜಾಕ್ಷಿ ದಿವ್ಯ ಮುತ್ತಿನ ತೋಡುಗಳುಗಂಭೀರ ಸೌಭಾಗ್ಯದ ಕೃಪಾನೋಟಕಂಬುಕಂಠದಿ ಮಂಗಳಸೂತ್ರಕರಯುಗದಿಅಂಬುಜವರಕೊಡುವಅಭಯಹಸ್ತಗಳು33ಕಂಧರದಲಿ ಪರಿಮಳಕಮಲಮಾಲಾಪೀತಾಂಬರ ದಿವ್ಯ ಕುಪ್ಪಸ ಮೇಲ್ಪಟ್ಟೆವಸ್ತ್ರವು ಸ್ವರ್ಣಸರ್ವಾಭರಣ ಭೂಷಣವುಪಾದಉಂಗುರ ಪೆಂಡೆ ಕಂಡು ನಮಿಸಿದರು34ಜಗನ್ನಾಥ ವಿಠ್ಠಲನೂ ಜಗನ್ಮಾತೆ ರುಕ್ಮಿಣಿಯೂಜಗನ್ನಾಥದಾಸರಿಗೆ ಔತಣ ಮಾಡಿದ್ದುಜಗತ್ತಲ್ಲಿ ಭಕ್ತಜನರೆಲ್ಲ ಪೇಳ್ತಿಹರುಜಗದೀಶ ಪಂಢರೀ ವಿಠ್ಠಲನ ಮಹಿಮೆ 35ಕೇಶವ ನಾರಾಯಣಮಾಧವಗೋವಿಂದಶ್ರೀಶ ವಿಷ್ಣು ಮಧುಸೂದನ ತ್ರಿವಿಕ್ರಮಈಶ ವಾಮನ ಶ್ರೀಧರ ಹೃಷಿಕೇಶರಮೆಯರಸಪದ್ಮನಾಭದಾಮೋದರ36ಸಂಕರುಷಣ ವಾಸುದೆವ ಪ್ರದ್ಯುಮ್ನ ನಮೋಅಕಳಂಕ ಅನಿರುದ್ಧ ಪುರುಷೋತ್ತಮನಿಷ್ಕಳಅಧೋಕ್ಷಜನರಸಿಂಹಅಚ್ಯುತಶ್ರೀಕರ ಜನಾರ್ದನ ಉಪೇಂದ್ರ ಹರಿಕೃಷ್ಣ 37ರಮಾಪತಿ ರಮಾಯುತನು ಶ್ರೀಹರಿಯ ರೂಪಗಳಬ್ರಹ್ಮವಾಯು ವಾಣೀಭಾರತಿ ಉಮೇಶಉಮಾ ತತ್ವದೇವದಿಕ್ಪಾಲಕರು ಗಂಗಾಕರ್ಮಮಾನಿ ಪುಷ್ಕರಾದಿಗಳೊಳ್ ತಿಳಿದರು 38ಭೋಜನ ಪದಾರ್ಥದಲು ತದ್ಗತ ಶಬ್ದಂಗಳಲುಭೋಜ್ಯಗಳ ಬಡುಸುವರಲ್ಲೂ ಕ್ಷೇತ್ರದಲ್ಲೂಭೋಜಭಿಮಾನಿಗತ ಖಂಡಾಖಂಡಗನುಭಜನೀಯ ಸ್ಥೂಲಭುಕ್ ಅವ್ಯಯನ ಕಂಡರು 39ಕರುಣಾಬ್ಧಿ ಶ್ರೀ ಹರಿಯ ಔದಾರ್ಯ ಏನೆಂಬೆಶ್ರೀ ಶ್ರೀನಿವಾಸನು ಅಂದು ತಿರುಪತಿಯಲ್ಲಿಶಿರಿ ವಿಜಯಾರ್ಯರ ರೂಪದಿ ಪ್ರೇರಿಸಿಧಾರೆಯೆರಿಸಿದ ಆಯಸ್ ಗುರುಗಳ ಕೈಯಿಂದ 40ಶ್ರೀ ಶ್ರೀನಿವಾಸನ ಮಹಾದ್ವಾರಕೆದುರಾಗಿಹಾರೆ ಕಲ್ಲುಮಂಟಪ ಆಗ್ನೇಯ ದಿಕ್ಕುಎರಡನೆಯದೋ ಮೂರನೆಯದೋ ಅಂಕಣದ ಖೋಲಿಹರಿದಾಸರು ಇದ್ದ ಮುಖಾಮಿ ಬಿಡಾರ 41ಎಳೆಕೆಂಪು ರೋಜ ಊದಾವರ್ಣದಿ ಅಂಚುಬಿಳಿರೇಷ್ಮೆ ವಸ್ತ್ರವ ಮೇಲ್ ಹೊದ್ದುಕೊಂಡುಮಲಗಿ ಚಲಿಸದೆ ನಿತ್ರಾಣನಾಗಿದ್ದವಗೆಒಲಿದು ಆಯುರ್ದಾನ ಮಾಡಿಸಿದ ಕರುಣಿ 42ಗುರುಗಳು ಗೋಪಾಲದಾಸರ ರೂಪದಿಂದ ಬಂದುಶಿರಿವರನು ತಾನೇನೆ ಅನ್ನಪ್ರಸಾದಕರದಲ್ಲಿ ಇತ್ತನು ಅವನೇವೆಇಂದುಶಿರಿಸಹ ಅಮೃತಾನ್ನ ಔತಣವನ್ನಿತ್ತ 43ಶಿರಿಯ ವಾತ್ಸಲ್ಯ ದಯೆ ಏನೆಂದು ಪೇಳಲಿಚಾರುದೇಷ್ಣಾಹ್ವಯ ತನ್ನಸುತ ಈಗವರಗೋಪಾಲದಾಸರುಅವರಶಿಷ್ಯರಿವರೆಂದು ಪ್ರೀತಿಯಲಿ ಔತಣ ಮಾಡಿಹಳು 44ಈ ರೀತಿ ಹರಿಶಿರಿ ಇತ್ತ ಔತಣ ಮತ್ತುಹರಿಯ ಕೈಯಿಂದ ಹರಿಗರ್ಪಿತ ಮಾಲಾದಿಹರಿಪ್ರಸಾದವ ಕೊಂಡು ಫಂಡರಿಪುರದಿಂದಹೊರಡಲಾದರು ಜಗನ್ನಾಥದಾಸಾರ್ಯ 45ನರಸಿಂಹಾದಾಸಾರ್ಯರಾದ ತನ್ನ ತಂದೆಗೆಗುರುಗಳುಪುರಂದರದಾಸಾರ್ಯರೆಂದುಪರಮಗುರುವಿಜಯದಾಸಾರ್ಯರ ಗುರುಯೆಂದುಚರಣವಂದಿಸಿ ಹೊರಡೆ ಅಪ್ಪಣೆ ಕೊಂಡರು46ಪರಮಗುರು ವಿಜಯದಾಸಾರ್ಯರ ಸ್ಥಳಕೆಸ್ಮರಣೆ ಪೂರ್ವಕ ಮನಸಾ ಪೋಗಿ ಸನ್ನಮಿಸಿಗುರುಗಳಚರಣಆಕಾಂಕ್ಷಿಗಳು ತ್ವರಿತದಿಹೊರಟರು ಶ್ರೀ ಜಗನ್ನಾಥನ್ನ ಸ್ಮರಿಸುತ್ತ 47ವಾರಿಜಾಸನ ಪಿತನು ಪೂರ್ಣ ಪ್ರಜÕರ ಹೃತ್‍ಸ್ಥಶಿರಿ ಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 48- ಇತಿ ಪಂಚಮ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು