ಒಟ್ಟು 1674 ಕಡೆಗಳಲ್ಲಿ , 110 ದಾಸರು , 1352 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗೋವಿಂದ ಗೋವಿಂದ ಗೋವಿಂದಾ | ನಮೋ||ಗೋವಿಂದ ಗೋವಿಂದ ಗೋವಿಂದಾ ಪಗೋವಿಂದ ಗೋಪೀಕಂದ | ಗೋವಿಂದನತಿಚಂದ |ಗೋವಿಂದ ಗುಣವೃಂದ | ಗೋವಿಂದ ಸಚ್ಚಿದಾನಂz À 1ಗೋವಿಂದ ಸದಾನಂದ | ಗೋವಿಂದ ಪರಮಾನಂದ |ಗೋವಿಂದ ನಲಿದುಬಂದ | ಗೋವಿಂದ ಇಂದ್ರವಂದ್ಯ 2ಗೋವಿಂದ ಯಾದವೇಂದ್ರ | ಗೋವಿಂದ ದಯಾಸಾಂದ್ರ |ಗೋವಿಂದ ಕುಲಚಂzÀ್ರ| ಗೋವಿಂದ ದಾಸನಿಂದ್ರ 3
--------------
ಗೋವಿಂದದಾಸ
ಚಿಣ್ಣರೊಡನಾಡನಡೆದ ಮುದ್ದುರಂಗ ಮುದ್ದು ಕೃಷ್ಣ ಪ.ಇಟ್ಟು ಹಣೆಯೊಳು ಉಗುರು ನಾಮವ ಗೋವಗಟ್ಟಿಗೆಯನು ಕರದೊಳು ಪಿಡಿದುಪುಟ್ಟ ಕಂಬಳಿ ಹೊದ್ದು ಪದಕೆ ಪಾದುಕೆಮೆಟ್ಟಿ ಅಣ್ಣ ಬಲರಾಮ ನಡೆಯೆಂದು 1ಆಡಲೊಲ್ಲೆನೆಂಬ ಮಕ್ಕಳ ಮನ್ನಿಸಿಕೂಡಿಕೊಂಡು ಅಣ್ಣ ತಮ್ಮನೆಂದುಹಾಡುತ ಕುಣಿದು ಚಪ್ಪಾಳೆ ಹೊಯಿದಾಡುತಓಡ್ಯಾಡಿ ಅಮ್ಮನ ಮಾತ ಕೇಳದೆ ಕೃಷ್ಣ 2ಚಿಣ್ಣಿ ಪೊಂಬಗರ್ಚೆಂಡು ಗುಮ್ಮ ಗುಸಕು ಹಬ್ಬೆಅಣ್ಣೆಕಲ್ಲು ಹÀಲ್ಲೆ ಗಜಗ ಗೋಲಿಕಣ್ಣುಮುಚ್ಚಾಲೆ ಮರನೇರಾಟ ನೀರಾಟಸಣ್ಣರೊಳಾಡಿ ಸೋಲಿಪೆನೆಂಬ ತವಕದಿ 3ರಾಜಿಪ ರಾಜಬೀದಿಲಿನಿಂದುನೋಡುವರಾಜಮುಖಿಯರೊಳು ಸೆಣಸ್ಯಾಡುತರಾಜಕುಲಾಗ್ರಣಿ ಸರ್ವಭೂಷಣದಿ ವಿರಾಜಿತನಾಗಿ ಗೋಳಿಡುತ ಮುರಾರಿ 4ಜಗವ ಪುಟ್ಟಿಸಿ ನಲಿದಾಡುವಾಟವು ತನಗೆ ಸಾಲದೆಂದು ಆವಹಳ್ಳಿಲಿಬಗೆ ಬಗೆ ಲೀಲೆಯ ತೋರಿ ಗೋಗಾವರ್ಗೆಸುಗತಿನೀವೆನೆಂದು ಪ್ರಸನ್ವೆಂಕಟ ಕೃಷ್ಣ 5
--------------
ಪ್ರಸನ್ನವೆಂಕಟದಾಸರು
ಚೆಂಡನಾಡುತ ಬಂದ ಪುಂಡ ಕೃಷ್ಣನು ತನ್ನ |ಹಿಂಡುಗೋಪಾಲಕರ ಕೊಂಡು ಯಮುನೆಯ ತಡಿಗೆಪಓರೆ ತುರುಬನೆಕಟ್ಟಿಗೀರುನಾಮವನಿಟ್ಟು |ಹಾರ ಕಂಕಣ ತೋಳಬಂದಿ ಘುಂಗುರ ಘನ-|ಸಾರಕುಂಕುಮ ಕೇಸರಿಗಂಧ ಕೂಡಿಸಿ |ಸೇರಿಸುತ ನಡುವಿಗೆ ಕಾಸಿದಟ್ಟಿಯನುಟ್ಟು |ಹಾರಾಡುತಲಿ ಬಂದ-ತೊಡರಗಾಲ |ತೋರ ಚಿನ್ಮಣಿಗಳಿಂದ. ಮುತ್ತಿನ ಚೆಂಡು |ಧಾರಿಣಿಗೆ ಪುಟಿಸಿ ನಿಂದ-ವಜ್ರದಖಣಿ|ತೋರಿ ಗೆಳೆಯರ ಕೂಡ ಬಂದರಾ ಮನೆಯಿಂದ 1ಕೊಂಡಾಲ ತಿಮ್ಮನು ಚೆಂಡನೆ ಹೊಡೆದನು |ಮಿಂಡೆಯರ ಮೊಲೆಗಾಗಿ ಹಾರಿಹರಿದು ಬೀಳೆ |ಹಿಂಡುನಾರಿಯರೆಲ್ಲ ಸುತ್ತಿಕೊಂಡಿರೆಅವರ|ಮುಂಡೆಗೆ ತಗುಲಿಸಿ ಪುರದ ಬಾಗಿಲ ಬಿಟ್ಟು |ಕಿಂಡಿಯಿಂದಲಿ ಬಂದನು-ನಾರಿಯರ |ಮಂಡೆಗೆ ಚೆಂಡಿಟ್ಟನು-ತೋರಿಸುವರ |ಕಂಡು ತಾ ನಗುತಿದ್ದನು-ಕೌತುಕವೆಂದು |ದಿಂಡೆಯರುಮಡುವಿನೊಳಗೆ ಹಾಕಿ ನಡೆದರು2ಗೆಳೆಯರೆಲ್ಲರು ಕೂಡಿ ಚೆಂಡು ತಾ ಎನಲಾಗಿ |ಗುಳುಗುಳಿಸುವ ವಿಷದ ಯಮುನಾ ತಡಿಯಲಿನಿಂದು|ಬಳಿಯ ವೃಕ್ಷದ ಮೇಲೇರಿ ತಾ ಧುಮುಕಲು |ಕಳಕಳಿಸುವ ಗೋಪಾಲರಳುತಿರೆ |ಇಳಿದ ನೀರೊಳಗಾಗಲು-ನಾಗರಫಣಿ|ತುಳಿದು ಕುಣಿಕುಣಿಯುತಿರಲು-ಬ್ರಹ್ಮನು ಬಂದು |ತಿಳಿದು ಮದ್ದಲೆ ಹೊಯ್ಯಲು-ಇಂದ್ರಾದ್ಯರು |ನಲಿದು ತಾಳವನಿಟ್ಟು ಕೊಂಡಾಡುತಿದ್ದರು 3ಮಗನ ಸುದ್ದಿಯಕೇಳಿಹರಿದು ಬಂದಳುಗೋಪಿ|ನಗರದ ಹೊರಗಾಗಿ ಬಾಯ ನಾದದಿಂದ |ವಿಗಡೆಯರು ಬಿಟ್ಟ ಮಂಡೆಯ ಜುಂಜು ಕೆದರುತ |ತೆಗೆದು ಮಣ್ಣನೆ ತೂರಿ ಕುಳಿತಲ್ಲಿಂದಲೆ ನಮ್ಮ-|ನ್ನಗಲಿ ಹೋಗುವರೆ ಹೀಗೆ-ರಂಗ ನಮ್ಮ |ಮೊಗವ ನೋಡುವುದೆಂದಿಗೆ-ನೋಡಿದ ಕಣ್ಣ |ತೆಗೆದು ಕೀಳುವೆನಿಂದಿಗೆ-ಪಡೆದ ಪೊಟ್ಟೆ |ದಗದಗಿಸಲು ಕೊಟ್ಟು ಮುನಿಯದೆ ಬಾ ಬೇಗ 4ಏನನೆಂಬೆನು ಕೃಷ್ಣ ನಿನ್ನ ಕಾಣದೆ ಪುರದ |ಮಾನಿನಿಯರು ಬೆರಗಾಗಿ ಬೀಳುತ ಕರುವ |ಕಾಣದಿರೆತ್ತಿಗೆ ಕರುವನು ಬಿಡುವರು |ಆ ನಾಸಿಕದ ಮೂಗುತಿ ಕಿವಿಗಿಡುವರು |ಧೇನುಮೇವನೆ ತೊರೆದುವು-ಗೋವುಗಳನ್ಯ-|ರಾಮನೆಗೋಡಿದುವು-ವತ್ಯಗಳೆಲ್ಲ |ಮೌನದಿ ಮೊಲೆ ತೊರೆದುವು ಕೃಷ್ಣಯ್ಯನ |ವೇಣುನಾದದ ಧ್ವನಿ ಕೇಳದೆ ಮೆಚ್ಚವು 5ದ್ವಾರಕಿ ಕೃಷ್ಣ ನೀ ಬಾಯೆಂದು ಕರೆವೆನೊ |ತೋರುವ ಸಮಪಾದ ವಿಠಲನೆಂಬೆನೊ |ಶ್ರೀರಮಣ ವೆಂಕಟನೆಂದು ಒದರುವೆನೊ |ಶ್ರೀರಂಗಶಯನನೆಂದೆನಲ್ಲದೆ ನಿನ್ನ |ಚೋರ-ಜಾರನೆಂದೆನೆ-ಹದ್ದಿನ ಮೇಲೆ |ಏರಿ ತಿರುಗುವನೆಂದೆನೆ-ಬೆಣ್ಣೆಯ ಕದ್ದು |ಸೂರೆ ಮಾಡುವನೆಂದೆನೆ-ಕೃಷ್ಣಯ್ಯ ನೀ |ಬಾರಯ್ಯ ಬಾರದಿದ್ದರೆ ಪ್ರಾಣ ನೀಗುವೆ 6ಕಣ್ಣೆತ್ತಿ ನೋಡಿದನೆಂದೆನೆ ಕಡೆಗೋಲ |ಬೆನ್ನಲಿ ಪಿಡಿದನೆಂದೆನೆ ಹಲ್ಲಳನೂರಿ |ಮಣ್ಣ ಕಚ್ಚಲು ಬಾಯ ತೆರೆಯುವನೆಂದೆನೆ |ಮಣ್ಣ ಬೇಡಲು ನಾ ಕೊಡಲಾರೆನೆಂದೆನೆ |ಎನ್ನ ಕುತ್ತಿಗೆ ಕೊಯ್ವರೆ-ಮಾತೆಯ ಮಾತು |ಮನ್ನಿಸಿ ವನಕೆ ಪೋಪರೆ-ಬಲಭದ್ರ |ಅಣ್ಣನಿಗೆ ಮುಖವ ತೋರೆ-ಕೃಷ್ಣಯ್ಯ ನೀ |ಸಣ್ಣವನೆನ್ನದೆ ಹರಿಯ ಕೊಂಡಾಡಿದೆ 7ಎಂದ ಮಾತನು ಕೇಳುವಾ ಸಮಯ ನಾಗಿಣಿ-|ವೃಂದವೆಲ್ಲವು ತಮ್ಮ ಕಂಠಭೂಷಣರಾಗಿ |ಅಂದದ ಮೇಲುದ ಸುತ್ತಿಕೊಂಡಿರೆ ಅರ-|ವಿಂದನಾಭಾಚ್ಯತ ಕೇಶವಮುರಹರ|ಮಂದರಧರಹರಿಯೆ-ನಿನಗೆ ನಾವು |ಮಂದಾಕಿನಿಯ ಸರಿಯೆ-ಮಾಂಗಲ್ಯದ |ಚೆಂದ ಕಾಯೈ ದೊರೆಯೆ-ಹರಿಯ ಕೃಪೆ-|ಯಿಂದ ಕರೆದು ನಮ್ಮ ಕಾಯಬೇಕೆಂದರು 8ಇಂತಿಂತು ಸ್ತವನವ ಮಾಡೆ ಕಾಳಿಂಗನ |ಕಾಂತೆಯರ ಸ್ತೋತ್ರಕ್ಕೆ ಮೆಚ್ಚಿ ನಾಗನ ಬಿಟ್ಟು |ಕಂತುಕ ಸಹಿತ ಪಂಕಜನಾಳವನೆ ಕೊಂಡು |ಸಂತಸದಲಿ ಇಕ್ಕುತ-ಶೋಕದಿ ನೀವು |ಭ್ರಾಂತಿ ಬಿಡಿರಿ ಎನ್ನುತ-ಬರಿದೆ ಎಲ್ಲ |ಸಂತೆ ಕೂಡಿದೆ ಎನ್ನುತ-ನಾ ಹಸಿದೆನು |ಪಂತಿಭೋಜನ ಕೊಂಡು ನಡೆಯಿರಿ ಮನೆಗೆಂದ 9ಸುರರಿಗೆಸುಧೆಮುಂಚೆ ಉಣಿಸಿದ ಪರಬ್ರಹ್ಮ |ಪರಿಪರಿ ಭೋಜನ ಮಾಳ್ಪ ಕಂಡುವರಾರು? |ಸುರದುಂದುಭಿ ಪೊಡೆದು ಪಾರಿಜಾತದ ಮಳೆ |ಸುರಿಸಿದರಾಕ್ಷಣಕೆ-ಬ್ರಹ್ಮನು ತಾನು |ತೆರಳಿದನಾಶ್ರಮಕೆ-ಪುರಂದರವಿಠಲ |ತಿರುಗಿದ ನಿಜಧಾಮಕೆ-ಕೃಷ್ಣನ ಲೀಲೆ |ಗುರುದಯೆಯಲಿ ನಮ್ಮ ಹರಿಯ ಕೊಂಡಾಡಿದೆ 10
--------------
ಪುರಂದರದಾಸರು
ಚೆಂದವ ನೋಡಿರೆ-ಗೋಕುಲಾ-|ನಂದನ ಮೂರುತಿಯ ಪಅಂದುಗೆಪಾಡಗ ಗೆಜ್ಜೆಯ ಧರಿಸಿ |ಧಿಂ ಧಿಂ ಧಿಮಿಕೆಂದು ಕುಣಿವ ಕೃಷ್ಣನ ಅ.ಪಕೊರಳ ಪದಕಹಾರ ಬಿಗಿದು |ತರಳರೆಲ್ಲರ ಕೂಡಿಕೊಂಡು ||ಕುರುಳುಗೂದಲ ಅರಳೆಲೆತಿಯು |ಮಿರು-ಮಿರುಗುತ ಮೆರೆವ ಕೃಷ್ಣನ 1ಉಡೆಯ ಗಂಟೆ ಘಣಘಣೆನುತ |ನುಡಿಯೆ ಮೆಲ್ಲನೆ ಪಿಡಿದುಕೊಂಡು ||ನಡೆದಾಡುತ ಸಡಗರದಲಿ |ಬೆಡಗ ಮಾಡಿ ಆಡುವ ರಂಗನ 2ಬಲುಬಲು ಆಶ್ಚರ್ಯದಿಂದ |ನಲಿವ ಪುರಂದರವಿಠಲರಾಯ ||ಹಲವು ಸುಖವ ನಮಗೆ ಇತ್ತ |ಜಲಜಲೋಚನಬಾಲಕೃಷ್ಣನ3
--------------
ಪುರಂದರದಾಸರು
ಛೀ ಛೀ ಛೀ ಛೀಕಂಡೆಯ ಮನವೇ ಇಂಥ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ನೀಚ ವೃತ್ತಿಗಳನು ಬಿಡುಕಂಡೆಯಮನವೆಪ.ಕಿವಿಗೊಟ್ಟು ಮಧುರನಾದಕೆ ಹುಲ್ಲೆಯುರವದ ಬಲೆಗೆ ಸಿಕ್ಕಿಬಿದ್ದುದನರಿಯನವಮೋಹನಾಂಗಿಯರ ಕೋಕಿಲಾಪದಸವಿ ಕೇಳದಾತನ ಕಥೆ ಕೇಳು ಮನವೇ 1ನಲಿದೆದ್ದುಕರಿ ಎಳೆಯ ತೃಣ ಸ್ಪರುಷನಕಾಗಿಕುಳಿಗೆ ಬಿದ್ದಿರುವುದ ಕಂಡು ಕಂಡರಿಯನಳಿನಾಕ್ಷಿಯರಂಗಸಂಗವ ಮೆಟ್ಟಿ ಕೆಡದೆ ಶ್ರೀಲಲನೇಶನಂಘ್ರಿಯಾನಪಿವೇಕೋ ಮನವೇ 2ಗಾಣದ ತುದಿಯ ಮಾಂಸವ ಮೆಲುವ ಮತ್ಸ್ಯವುಪ್ರಾಣವ ಬಿಡುವುದ ಕಂಡು ಕಂಡರಿಯ ?ಮಾನಿನಿಯ ಬಯಸದೆ ಶ್ರೀ ನಾರಾಯಣನಧ್ಯಾನಾಮೃತವನು ಸವಿದುಣ್ಣೋ ಮನವೆ 3ಪಣ್ಣೆಂದು ಭ್ರಮಿಸಿ ಪತಂಗ ದೀಪದಿ ಬಿದ್ದುಕಣ್ಣುಗೆಡುವುದನು ಕಂಡು ಕಂಡರಿಯ ?ಬಣ್ಣರ ಬಾಲೆಯರ ರೂಪಕೆ ಮರುಳಾಗಿಮಣ್ಣು ತಿನ್ನದೆ ಮಾರನಯ್ಯನ ನೆನೆ ಮನವೆ 4ಅಳಿ ಪರಿಮಳನಾಗಿ ಕಮಲದೊಳಗೆ ಸಿಲುಕಿಅಳಿದು ಹೋಹುದನು ಕಂಡ ಕಂಡರಿಯ ?ಬಳಲದೆ ವರಪುರಂದರ ವಿಠಲನಂಘ್ರಿಯತುಳಸಿ ನಿರ್ಮಾಲ್ಯವಾಫ್ರಾಣಿಸು ಮನವೆ 5
--------------
ಪುರಂದರದಾಸರು
ತದಿಗೆಯ ದಿವಸ(ಶೇಷ ದೇವರನ್ನು ಕುರಿತು)ರಂಭೆ :ನ್ಯಾರೆಂಬುದನೆನಗೆ ಪೇಳೆಕ್ರೂರತನದಿ ತಾ ತೋರುವನೀಗ ಮ-ಹೋರಗನೆನ್ನುತ ಕೋರಿಕೆ ಬರುವದು 1ಒಂದೆರಡು ಶಿರವಲ್ಲ ಬಹುಹೊಂದಿಹವು ಸಟೆಯಲ್ಲಕಂಧರದಲಿ ಕಪ್ಪಂದದಿ ತೋರ್ಪವುಚಂದಿರಮುಖಿ ಯಾರೆಂದೆನಗರುಹೆಲೆ 2ಊರ್ವಶಿ : ಕೋಮಲಗಾತ್ರೆ ಮಹಾಮಹಿಮನು ಇವನ-ಸಾಮಾನ್ಯನೆ ಕಾಣೆಭೂಮಿಯ ಪೊತ್ತ ನಿರಾಮಯನಾದಸುಧೀಮನಿವನು ಜಾಣೆ 1ವಾಸುದೇವಗೆ ಈತ ಹಾಸಿಗೆಯವ ನಿ-ರ್ದೋಷನಿವನು ಜಾಣೆಸಾಸಿರಮುಖದ ವಿಲಾಸನಾಗಿಹ ಮಹಾ-ಶೇಷನಿವನು ಕಾಣೆ 2ಅದರಿಂದಲಿ ಕೇಳ್ ತದಿಗೆಯ ದಿವಸದಿಮಧುಸೂದನನಿವನಅಧಿಕಾನಂದದಿ ಒದಗಿಸಿ ಬರುವನುಇದೆಯಿಂದಿನಹದನ3ಎಂದಿನಂತೆ ಪುರಂದರವಂದ್ಯ ಮುಕುಂದಸಾನಂದದಲಿಅಂದಣವೇರಿ ಗೋವಿಂದ ಬರುವನೊಲ-ವಿಂದತಿ ಚಂದದಲಿ 4ಕಂಟಕಗಳು ಎಲ್ಲುಂಟೆಂಬಂತೆ ನೃಪ-ಕಂಠೀರವಗೈದಘಂಟಾನಾದದಿ ಮಂಟಪದೊಳು ವೈ-ಕುಂಠನು ಮಂಡಿಸಿದಾ 5ಕಾಂತಾಮಣಿ ಕೇಳಿಂತೀಪರಿ ಶ್ರೀ-ಕಾಂತ ನತತಂಡಸಂತವಿಸುತ ಮಹಾಂತಮಹಿಮನೇ-ಕಾಂತಸೇವೆಯಗೊಂಡ 6* * *ಪರಶಿವನನ್ನು ಕುರಿತುರಂಭೆ : ಯಾರಮ್ಮಾ ಮಹಾವೀರನಂತಿರುವನುಯಾರಮ್ಮಾ ಇವನ್ಯಾವ ಶೂರ ಯಾವಊರಿಂದ ಬಂದ ಪ್ರವೀರ ಆಹಾಮಾರಜನಕನ ವಿಸ್ತಾರಪೂಜೆಯ ವೇಳ್ಯಧೀರನಂದದಿ ತಾ ವಿಚಾರ ಮಾಡುವನೀತ 1ಕರದಿ ತ್ರಿಶೂಲವ ಧರಿಸಿ ಮತ್ತೆವರಕೃಷ್ಣಾಜಿನವನುಕರಿಸಿಹರಿಚರಣಸನ್ನಿಧಿಗೆ ಸತ್ಕರಿಸಿ ಆಹಾಜರಿಯ ದುಕೂಲವ ನಿರಿದುಟ್ಟುಕೊಂಡು ವಿ-ಸ್ತರವಾದ ತೋಷದಿ ಮೆರದು ನಲಿವ ಕಾಣೆ 2ಊರ್ವಶಿ : ಈತನೀಗ ಕಾಲಭೈರವ ಕೇಳೆಲೆಗೆ ನೀರ ಪ.ಈತನೀಗ ಪೂರ್ವದೊಳಗೆಭೂತನಾಥ ಸೇವೆಯೊಲಿದಓತು ವಿಷ್ಣುಭಕ್ತಿಯಿಂದಪೂತನಾದ ಪುಣ್ಯಪುರುಷ ಅ.ಪ.ಊರು ಇವಗೆ ಮೊದಲು ಗಂಗಾತೀರವಾಯ್ತುವೇಣುತಾ ವಿ-ಚಾರದಿಂದ ಪೊದನೈಉದಾರತನದಿ ರಾಮೇಶ್ವರಕೆಸಾರಗ್ರಹಿತ ಮುಕ್ತಿ ಪಥವನು ಕರುಣದಿಂದತೋರಿಸುವನು ವಿಷ್ಣುವೆಂದೆನುತ ಗಿರಿಯನೇರಿ ಕರುಣ ವಾರಿಧಿಯಪದಾರವಿಂದಸೇವೆಗೈದುಮಾರಪಿತನ ಭಕ್ತಿಯೊಳು ತಾ ಹೇರಿನಲಿವ ಚಾರುಚರಿತ 1ಪರಮಪುರುಷ ಹರುಷದಿಂದೀಪುರಕೆಬರುವಕಾಲದಲ್ಲಿಚರಣವನ್ನು ಬಿಡದೆ ಯಿಲ್ಲಿರುವನೈ ಮಹಾತ್ಮನೀತಸ್ಫುರಿತತೇಜೋಮೂರ್ತಿ ಈತನು ಲೋಕದೊಳಗೆಚರಿಸುವ ತ್ರಿಕಾಲಪ್ರಜÕನು ಇವನ ಗುಣವ-ನರಿವರ್ಯಾರು ಮನುಜಭುಜಂಗರಲಿಮಹತ್‍ಕಾರಣೀಕಪುರುಷನಿವ ಮಹಾ ಬಲಾಢ್ಯಕರುಣವುಳ್ಳ ವಿಷ್ಣುಭಕ್ತ 2ಶ್ರೀನಿವಾಸ ಕರುಣದಿಂಪ್ರಧಾನಿಯೆಂದು ನಡೆಸಿಕೊಡುವಏನಗೈದರೀತ ಮನದಿ ತಾನುತೋಷಪಟ್ಟು ಇರುವಕಾಣಿಕೆಗಳ ತರಿಸಿ ಇರಿಸುವ ಬೇತಾಳಪ್ರೇತನಾನಾ ಉಪದ್ರವಗಳ ಬಿಡಿಸುವ ಧನಿಯ ಆಜೆÕಏನ ದೊರಕಿತದನು ಬೇಗ ತಾನೆಬಂದು ಪೇಳಿ ಜನರಮಾನಿಸುತ ನಿಧಾನಗೊಳಿಸಿಕ್ಷೋಣಿಯೊಳಗೆ ಕೀರ್ತಿಪಟ್ಟ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ತಂದೆ ಪುರಂದರದಾಸರ ಸ್ಮರಿಸುವೆ ಎನ್ನಮಂದಮತಿಗಳೆದು ಹರಿಭಟನೆನಿಸುವೆ ಪ.ಗುರುವ್ಯಾಸರಾಜರ ಚರಣಾಬ್ಜ ಷಟ್ಚರಣನವಿರತಿಭಕುತಿ ಜ್ಞಾನದಾರ್ಣವನವರಉಪನಿಷದ್ವಾರಿನಿಧಿಗೆ ತಿಮಿಂಗಿಲನಹನಧರೆಯ ಕವಿಕುಲ ಶಿಖಾಮಣಿಯೆನಿಪನ 1ದಿನ ದಿನ ಯದೃಚ್ಛಾರ್ಥಲಾಭದಲಿ ತುಷ್ಟನಕನಕಲೋಷ್ಠ ಸಮಾನದೀಕ್ಷಿಸುವನಘನಸಿದ್ಧಿಗಳು ತಾವೆ ಬರಲೊಡಂಬಡದನಹರಿಗುಣಕೀರ್ತನೆಯಲ್ಲಿ ಪರವಶದಿಹನ2ಭವಜಲಧಿ ಗೋಷ್ಪದಕೆ ಸರಿದಾಟಿ ಕಾಮ ಕ್ರೋಧವಮೆಟ್ಟಿ ಭಕ್ತಿಸುಧೆಯುಂಡು ತೇಗಿಭುವಿಯಲ್ಲಿ ನಿಜಕೀರ್ತಿಯನು ಹರಹಿ ಪವನಮತದವರೆನಿಪ ದಾಸರಿಗೆ ತವರೂಪ ತೋರಿದನ 3ಕವನೋಕ್ತಿ ಮಳೆಗರೆದು ಹರಿದಾಸ ಪೈರ್ಗಳಿಗೆಅವಿರಳಾನಂದವಿತ್ತಥಿರ್üಸುವನನವಭಕುತಿ ಮನಗಂಡು ಸವೆಯದಾನಂದಪುರ ಪಥವನು ತೋರಿಸಿದಂಥ ಬಹುಕೃಪಾಕರನ 4ಗೀತ ಠಾಯಿ ಸುಳಾದ್ಯುಗಾಭೋಗ ಪದ್ಯಪದವ್ರಾತಪ್ರಬಂಧ ರಚಿಸಿ ವಿಠಲನಪ್ರೀತಿ ಬಡಿಸಿ ಕಂಡು ನಲಿವ ವೈಷ್ಣವಾಗ್ರನಾಥ ಪ್ರಸನ್ವೆಂಕಟ ಕೃಷ್ಣಪ್ರಿಯನ 5
--------------
ಪ್ರಸನ್ನವೆಂಕಟದಾಸರು
ತಪ್ಪುಗಳೆಲ್ಲವು ಒಪ್ಪುಗೊಳ್ಳಯ್ಯ ಶ್ರೀಚಪ್ಪರ ಶ್ರೀನಿವಾಸ ಪ.ಸರ್ಪರಾಜಗಿರಿಯಪ್ಪ ತಿಮ್ಮಪ್ಪನೆದರ್ಪಕತಾತನೆ ತಾ ಸಜ್ಜನಪ್ರೀತ ಅ.ಪ.ಮಾಧವನಿನ್ನಯ ಮಹಿಮೆ ತಿಳಿಯದಪ-ರಾಧವ ಮಾಡಿದೆ ದಾರಿದ್ರ್ಯದಬಾಧೆಯಿಂದ ತವಪಾದದರುಶನದಗಾದಿಯ ಕಾಣದಾದೆ ನಾ ದ್ರೋಹಿಯಾದೆ 1ತ್ರಾಣವಿರುವಾಗಕಾಣಿಕೆಹಾಕಿದೆದೀನದಾರಿದ್ರ್ಯದ ಹೊತ್ತಿನಲಿಮೇಣದರಿಂದಲಿ ತೆಗೆದು ತೆಗೆದು ಪಂಚಪ್ರಾಣಕ್ಕಾಹುತಿಯ ಕೊಟ್ಟೆ ಅಪರಾಧ ಪಟ್ಟೆ 2ಮಂದವಾರದಿಕ್ಕೊಂದೂಟವ ಸತ್ತ್ವದಿಂದಿರುವಾಗ ನಾ ನೇಮಗೈದೆಮಂದಭಾಗ್ಯ ಜ್ವರದಿಂದ ಪೀಡಿತನಾದ-ರಿಂದೆರಡೂಟವನೂ ಮಾಡಿದೆ ನಾನು 3ಶನಿವಾರಕ್ಕೊಂದಾಣೆಕಾಣಿಕೆಹಾಕುತ್ತಮಿನುಗುವ ಡಬ್ಬಿಯ ನಾ ಮಾಡಿದೆಎನಗೆ ದಾರಿದ್ರ್ಯವ ಕೊಟ್ಟ ಕಾರಣದಿಂದಹಣವೆಲ್ಲಗುಣನುಂಗಿತು ಪಾದಕೆ ಗೊತ್ತು4ದೊಡ್ಡದಾರಿದ್ರ್ಯದ ಗುಡ್ಡೆ ಬಿದ್ದುದರಿಂದದುಡ್ಡೆಲ್ಲ ತೆಗೆದೆ ನಾ ದಡ್ಡನಾಗಿಅಡ್ಡಬಿದ್ದು ಕೈಯೊಡ್ಡಿ ಬೇಡುವೆ ಸ್ವರ್ಣಗುಡ್ಡೆಯ ಮೇಲಿರುವ ಮಹಾನುಭಾವ 5ಭಂಡಾರದ್ರೋಹ ಬ್ರಹ್ಮಾಂಡಪಾಪಾಗ್ನಿಯುಮಂಡೆಯೊಳುರಿವುದು ಖಂಡಿತದಿಪುಂಡರೀಕಾಕ್ಷನೆ ಕರುಣಾಮೃತರಸಕುಂಡದೊಳ್ ಮೀಯಿಸಯ್ಯ ವೆಂಕಟರಾಯ 6ದೃಢಭಕ್ತಿಯನು ಕೊಟ್ಟು ಸಲಹಬೇಕಲ್ಲದೆಕೆಡುಕು ಮಾಡುವುದೇನುಜಡಜನಾಭಕಡಲಶಯನ ಲಕ್ಷ್ಮೀನಾರಾಯಣ ನ-ಮ್ಮೊಡೆಯ ಪಡುತಿರುಪತೀಶ ರವಿಕೋಟಿಭಾಸ 7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ತಾರಮ್ಮಯ್ಯ-ಯದುಕುಲ-ವಾರಿಧಿಚಂದ್ರಮನಪಮಾರಜನಕನ-ಮೋಹನಾಂಗನ-|ಸೇರಿ ಸುಖಿಸೆ ಹಾರೈಸಿ ಬಂದೆವು ಅ.ಪಬಿಲ್ಲು ಹಬ್ಬಗಳಂತೆ_ಅಲ್ಲಿ ಬೀದಿ ಶೃಂಗಾರವಂತೆ ||ಮಲ್ಲಕಾಳಗೆ ಮದ್ದಾನೆಗಳಂತೆ |ಫುಲ್ಲಾಕ್ಷನು ತಾನಲ್ಲಿಗೆ ತೆರಳಿದ 1ಮಧುರಾಪುರವಂತೆ-ಅಲ್ಲಿ-ಮಾವ ಕಂಸನಂತೆ ||ಒದಗಿದ ಮದಗಜತುರಗಸಾಲಿನಲಿ |ಮದನಮೋಹನ ಕೃಷ್ಣ ಮಧುರೆಗೆ ತೆರಳಿದ 2ಅತ್ತೆ ಮಾವನ ಬಿಟ್ಟು-ಬಂದೆವು ಹಿತ್ತಲ ಬಾಗಿಲಿಂದ ||ಭಕ್ತವತ್ಸಲನ ಬಹು ನಂಬಿದ್ದೆವು |ಉತ್ಸಾಹ ಭಂಗವ ಮಾಡಿದನಮ್ಮ 3ರಂಗನ ನೆರೆನಂಬಿ-ಬಂದೆವು-ಸಂಗ ಸುಖವ ಬಯಸಿ ||ಭಂಗಿಸಿ ನಮ್ಮನು ಹಾಗೆ ಪೋದನಮ್ಮ |ಮಂಗಳ ಮೂರುತಿಮದನಗೋಪಾಲನು4ಶೇಷಗಿರಿಯ ಮೇಲೆ-ಹರಿ ತಾ-ವಾಸವಾಗಿಹ ಕಾಣೆ ||ಸಾಸಿರನಾಮದ ಒಡೆಯನೆಂದೆನಿಸಿದ |ಶ್ರೀ ಪುರಂದರವಿಠಲರಾಯನ 5
--------------
ಪುರಂದರದಾಸರು
ತಾಳಬೇಕು - ತಕ್ಕ - ಮೇಳಬೇಕು - ಶ್ರೀ |ಯತಿ ಪ್ರಾಸವಿರಬೇಕು | ಗತಿಗೆ ನಿಲ್ಲಿಸಬೇಕು ||ಶ್ರುತಿಪತಿ ಕೇಳಬೇಕು | ರತಮುಖವಿರಬೇಕು 2ಹರಿದಾಸನಾಗಿರಬೇಕು | ಹರುಷ ಪಡುತಿರಬೇಕು |ಪುರಂದರವಿಠಲನಲಿ | ಸ್ಥಿರಚಿತ್ತವಿರಬೇಕು 3
--------------
ಪುರಂದರದಾಸರು
ತೇರನು ನೀವು ನೋಡಿಲ್ಲ ತಿಳಿಪುವೆ ಸಡಗರವೆಲ್ಲಚಾರುಯೋಗಿಯು ನೋಡಿಲಿದು ಚಲನೆ ಮನುಜರಿಗೆ ಸಲ್ಲದುಪಆರು ಚಕ್ರದ ಆರುನೆಲೆ ಮೂರು ಅವಸ್ಥೆಗಳ ಮೂರುಗಾಲಿಕುಂಡಲಿಎಂಬುದುಕೀಲುಚದುರಿನ ದಳಪಟ್ಟಿ ಮೇಲು1ಸಹಸ್ರಾರವೇ ಕೊನೆಯ ಸ್ಥಾನ ಸ್ವಾಮಿಯ ಸಿಂಹಾಸನಸೋಹಂ ಎಂದೆನಿಸುವ ಶಿಖರ ಸೊಗಸಿಂದಲಿಹುದು ಸುಪ್ರಕಾರ2ಸ್ಥಾನ ಸ್ಥಾನಕೆ ಒಂದು ಬೊಂಬೆ ಸಡಗರ ಏನೆಂಬೆಅನುರಾಗವೇ ಎಂಬ ಫಲವು ಆಶ್ಚರ್ಯ ತೇರಿನ ನಿಲುವು3ಹೇಷೆ ಎಂಬುವೆ ಕೋಟಿ ಚಂದ್ರ ಹೊಡೆವ ನಾದವೆ ವಾದ್ಯಸಾಂದ್ರಬಲುಹು ಆನಂದ ಸಲ್ಲಲಿ ಭಾಪು ಎನಲಿ ಸುಖದಲಿ4ಇಡಾಪಿಂಗಳ ಮಿಣಿಗಳಿಂದ ಎಳೆವುದು ಗುರುದಯದಿಂದಮೂಡಲಿಂದ ಪಶ್ಚಿಮಕ್ಕೆಗುರುಚಿದಾನಂದನ ಸ್ಥಾನಕ್ಕೆ5
--------------
ಚಿದಾನಂದ ಅವಧೂತರು
ತೊಟ್ಟಿಲ ತೂಗುವೆ ಕೃಷ್ಣನ ತೊಟ್ಟಿಲ ತೂಗುವೆಪುಟ್ಟಬಾಲಕರೊಳುಪರಮಶ್ರೇಷ್ಠನಾದನಾಪಮೀನನಾಗಿ ಭಾರಪೊತ್ತು ಬೇರು ಮೆಲ್ಲಿದನಕ್ನೂರರೂಪ ತೋರಿ ಭೂಮಿದಾನ ಬೇಡ್ದನ 1ಭೂಮಿಪರ ಸಂಹರಿಸಿದ ಶ್ರೀರಾಮಚಂದ್ರನಮಾವ ಕಂಸನ ತರಿದ ಬಲರಾಮನನುಜನ 2ಬುದ್ಧರೂಪದಿಂದ ತ್ರಿಪುರರನೊದ್ದ ಧೀರನಮುದ್ದು ತೇಜಿನೇರಿ ಮೆರೆದ ಪದ್ಮನಾಭನ 3ಉಲಿವು ಮಾಡಬೇಡಿರಮ್ಮ ಚಲುವ ಮಲಗುವನಳಿನನಾಭನನ್ನು ಸ್ಮರಿಸಿ ನಲಿದು ಪಾಡುವ 4ಕಮಲಮುಖಿಯರೆಲ್ಲ ಬನ್ನಿ ಕುಣಿದು ಪಾಡುವಕಮಲನಾಭ ವಿಠ್ಠಲನಂಘ್ರಿ ಸ್ಮರಣೆ ಮಾಡುವ 5
--------------
ನಿಡಗುರುಕಿ ಜೀವೂಬಾಯಿ
ದಯಮಾಡು ದಯಮಾಡು ಶ್ರೀನಿವಾಸಭವಭಯ ನಿವಾರಣ ಭಜಕ ಭಕ್ತರಘನಾಶ ಪ.ನೇಮವೆನ್ನಲಿಲ್ಲ ನಾಮದರಿಕೆಯಿಲ್ಲನಾ ಮಹಾಪಾಪಿಯು ಸ್ವಾಮಿ ನೀನೊಲಿದು ಗಡ 1ಸದ್ಧರ್ಮ ಸರಕಿಲ್ಲ ಶುದ್ಧ ಬುದ್ಧಿಯಿಲ್ಲಉದ್ಧರಿಸೆನ್ನನಿರುದ್ಧಹರಿಕರುಣಿ2ಸತ್ಕುಲ ಹೊಂದೇನು ಸತ್ಕರ್ಮ ಮಾರ್ಗಿಲ್ಲಭಕ್ತರಕ್ಷಕ ಪಾಪಮುಕ್ತ ದೇವರ ದೇವ 3ಅವಗುಣದೆಣಿಕೆಯ ವಿವರ ನೋಡದೆ ಅಯ್ಯಜವನ ಬಲೆಯನು ತಪ್ಪಿಸುವ ಸರೀಸೃಪಶಯ್ಯ4ಅಜಾಮಿಳವ್ಯಾಧಆಗಜಅಹಲ್ಯೋದ್ಧರನಿಜ ಪ್ರಸನ್ವೆಂಕಟೇಶಸುಜನಪರಿಪೋಷ5
--------------
ಪ್ರಸನ್ನವೆಂಕಟದಾಸರು
ದಾಟುವೆನೆಂದರೆ ದಾಟು ಹೊಳೆಯುಕೈಟಭಾಂತಕ ಭಟರಿಗೆ ಭವಜಲವು ಪ.ಪೂರ್ವಯಾಮದಿ ಹರಿಗುಣಕರ್ಮನಾಮನಿರ್ವಚನದಿ ಕೀರ್ತನೆ ಮಾಡುವ ಮಹಿಮಉರ್ವಿಯ ಮೇಲಿದ್ದು ಒಲಿಸಿಕೊಂಡನು ಸುರಸಾರ್ವಭೌಮನ ಸೀತಾರಾಮನ 1ಜಲದಲಿ ಮಿಂದೂಧ್ರ್ವ ತಿಲಕಿಟ್ಟು ನಲಿದುತುಲಸಿಕುಸುಮಗಂಧ ಅಗ್ರದ ಜಲದಿನಳಿನೇಶನಂಘ್ರಿಗರ್ಪಿಸಿ ಸಹಸ್ರನಾಮಾವಳಿಯಿಂದ ಧೂಪದೀಪಾರತಿ ಬೆಳಗಿ 2ಪರಮಾನು ಯೋಗಾವಾಹನೆ ವಿಸರ್ಜನೆಯುಸ್ಮರಣೆ ವಂದನೆ ಪ್ರದಕ್ಷಿಣೆ ನರ್ತನವುವರಗೀತಪಠಣೆ ಭಾಗವತಾ ಶ್ರವಣವುತ್ವರಿಯದಿ ಭೂತಕೃಪೆಯಲ್ಲಿ ಮನವು 3ಗುರುಪಾದಪದ್ಮದಿ ಬಲಿದು ವಿಶ್ವಾಸಗುರುಕೃಪೆಯಿಲ್ಲದ ಪುಣ್ಯ ನಿಶ್ಯೇಷಗುರುಬೆನ್ನಟ್ಟಿದ ಕರಿಗಡ್ಡಹಾಸ ಹಾಸಗುರುಗಳ ಮರೆದು ಕಳೆಯನೊಂದುಶ್ವಾಸ4ಈಪರಿಹರಿಪುರ ದಾರಿಯ ತೊಲಗಿಕಾಪುರುಷರುಭವಮಡುವಲಿ ಮುಳುಗಿಆಪತ್ತು ಪಡುವರ ನೋಡಿ ಬೆರಗಾಗಿಶ್ರೀ ಪ್ರಸನ್ವೆಂಕಟಪತಿ ನಕ್ಕನಾಗಿ 5
--------------
ಪ್ರಸನ್ನವೆಂಕಟದಾಸರು
ದಾಸನೆಂತಾಗುವೆನು ಧರೆಯೊಳಗೆ ನಾನು |ವಾಸುದೇವನಲಿ ಲೇಸ ಭಕುತಿಯ ಕಾಣೆ ಪ.ಗೂಟನಾಮವ ಹೊಡೆದು ಗುಂಡು ತಂಬಿಗೆ ಹಿಡಿದು |ಗೋಟಂಚುಧೋತರ ಮುಡಿಯನುಟ್ಟು ||ದಾಟುಗಾಲಿಡುತ ನಾಧರೆಯೊಳಗೆ ಬರಲೆನ್ನ |ಬೂಟಕತನ ನೋಡಿ ಭ್ರಮಿಸದಿರಿ ಜನರೆ 1ಅರ್ಥದಲ್ಲಿಯ ಮನಸು ಆಸಕ್ತವಾಗಿದ್ದು |ವ್ಯರ್ಥವಾಯಿತು ಜನ್ಮ ವಸುಧೆಯೊಳು ||ಅರ್ತಿಯಿಂದಲಿ ಹರಿಯ ಅರ್ಚಿಸಿದ್ದಿಲ್ಲ ನಾ |ಸತ್ಯ - ಶೌಚಗಳರಿಯೆ ಸಜ್ಜನರುಕೇಳಿ2ಇಂದಿರೇಶನ ಪೂಜೆ ಬಂದು ಮಾಡಿದ್ದಿಲ್ಲ |ಸಂಧ್ಯಾನ - ಜಪ - ತಪವೊಂದನರಿಯೆ||ಒಂದು ಸಾಧನ ಕಾಣೆ ಪುರಂದರವಿಠಲನ |ದ್ವಂದ್ವಪಾದವ ನಂಬಿ ಅರಿತು ಭಜಿಸಿದರೆ 3
--------------
ಪುರಂದರದಾಸರು