ಒಟ್ಟು 19311 ಕಡೆಗಳಲ್ಲಿ , 135 ದಾಸರು , 7892 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನೆಂದರಿಬೇಕೀ ಆಟಾ ಘನಗುರು ಮಾಡಿದ ಮಾಟ ಅನುಮಾನಳಿಸಿದ ನೋಟ ಅನುಭವಕಾಯಿತು ನೀಟ ಧ್ರುವ ರಂಜಕ ಬಲುಕೊಂಡಿತು ನೋಡಿ ಅಂಜಿಕಿ ಭವಭಯ ಈಡ್ಯಾಡಿ ಪ್ರಾಂಜಲ ಸದ್ಗುರು ದಯಮಾಡಿ ಅಂಜನ ಹಚ್ಚಿದ ದುವುಡಿ 1 ಕಾಣದ ಕಂಡೆವು ಕಣ್ಣಿಲಿ ಖೂನಕ ಬಾರದು ಘನಲೀಲೆ ಜಾಣರು ಬಲ್ಲರು ಮನದಲಿ ನೆನದರು ತಾಂ ವರಿಕಿಲೆ 2 ಆಶ್ವರ್ಯವು ತಾನಾಗ್ಯದೆ ನಿಶ್ಚಯದೋರುತಲ್ಯದೆ ಪಶ್ಚಿಮಕೆ ಭಾಸುತದೆ ಸ್ವಚ್ಛವು ನೋಡಿದರದೆ 3 ರಚ್ಚಿಗೆ ತಾಂ ಬಾಹುದೆಲ್ಲ ಮುಚ್ಚಿಟ್ಟಡೆÉ ಬಾಳು ಸವಿಬೆಲ್ಲ ಅಚ್ಚಳಿಯದ ಭಕ್ತನೆ ಬಲ್ಲ ನೆಚ್ಚಿದ ಮಹಿಪತಿ ಸೊಲ್ಲ4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನೆಂದೀದೇಹ್ಯವನು ನಂಬಿದಿ ಮನವೆ ನೀ ಏನೆಂದೀ ದೇಹ್ಯವನು ನಂಬಿದಿ ಪ ಏನೆಂದು ನಂಬಿದ್ಯೋ ಆನಂದದ್ಹಿಗ್ಗುತ ಕ್ಷೀಣವಾಗೊಂದುದಿನ ಮಣ್ಣು ಗೂಡುವುದರಿತು ಅ.ಪ ತಳಕ್ಹಾಕಿ ಜೋಡಿಸಿ ಹಲವು ನರಗಳಿಂದ ಬಲವಾಗಿಬಿಗಿದ ಈ ಎಲುವಿನ ಹಂದರ 1 ರೋಗಕ್ಕೆ ಇದು ತವರಾಗಿ ಒಂದಿನ ನಾಶ ವಾಗಿ ತಾ ಕೈಬಿಟ್ಟು ಪೋಗುವ ಮಂಟಪ 2 ಹಲವು ವಿಧದಿ ಮಜ್ಜ ಮಲ ಮೂತ್ರ ಬಲುಹೇಯ ಕುಂಡಲ 3 ಬಿಲದ್ವಾರ ಒಂಬತ್ತು ತುಳುಕಿತುಂಬ್ಹರಿಯುತ ತೊಳೆಯದಿರಲು ನಿಮಿಷ ಹೊಲಸಿಕ್ಕಿ ನಾರುವುದು 4 ತಂದೆ ಶ್ರೀರಾಮನಂ ಹೊಂದಿ ಭಜಿಸದೆ ಗಾಢ ಅಂಧಕಾರದಿ ಬಿದ್ದು ನಂದಿಪೋಗುವ ತನು 5
--------------
ರಾಮದಾಸರು
ಏನೆಂದು ಕರೆದರೆ ಬರುವಿ ನಿನ್ನ ಧ್ಯಾನಿಸಿ ಕರೆದರೆ ಬಾರದೆ ಇರುವಿ ಪ ದೀನದಯಾಳು ಶ್ರೀ ಅನಂತ ಮಹಿಮೆಂದು ಗಾನದಿಂ ಪಾಡಲು ಕೇಳದೆ ಇರುವಿಅ.ಪ ಸೊಪ್ಪಮೆದ್ದವನೆಂದೆನಲೆ ನಿನ್ನ ತಿಪ್ಪೆತಿರುಕನೆಂದು ಗೌಪ್ಯದಿಂ ಕರಿಲೇ ಕಪ್ಪುಮೈಯವನೆನ್ನಲೊಪ್ಪಿಕೊಂಡು ಬಂದು ಅಪ್ಪಿಕೊಂಡ್ವರವೀವ್ಯೋ ಮುಪ್ಪುರಾಂತಕನೆ 1 ಏಸುಕಾಲದ ಮುದುಕನೆನಲೇ ನಿನ್ನ ಆಸೆಕಾರನೆಂದು ಆಶಿಸಿ ಕರಿಲೇ ಹಾಸಿಕೆ ಕಾಣದೆ ಶೇಷನಮೇಲೇರಿ ವಾಸಿಸುವಿಯೆನಲು ಪೋಷಿಸುವೆಯೋ ಬಂದು 2 ಬಲುಬಲು ಕಪಟಿಯೆಂದೆನಲೇ ನೀ ಕಳವಿನೋಳ್ ಪ್ರವೀಣನೆಂದು ಕೂಗಲೇ ಕುಲಗೆಟ್ಟು ಭಕ್ತರ ಕಲೆಸಿ ಗುಪ್ತದಿಂದ ಕುಲದಿ ಬಿದ್ದವನೆನಲು ಒಲಿದು ಕಾಯುವೆಯೋ 3 ಆಲಯ ಕಾಣದೆ ಹೋಗಿ ನೀನು ಪಾಲಸಾಗರವಾಸನೆಂದು ಕರಿಲೇ ಬಾಲೆಯರುಡವ ದುಕೂಲ ಚೋರನೆಂದು ಮೇಲಾಕೂಗಲು ಪಾಲಿಸುವೆಯೋ ಒದಗಿ 4 ಅರಣ್ಯವಾಸಿಯೆಂದೆನಲೇ ನೀನು ನಾರಿಯಳ ಕಳಕೊಂಡನೆಂದು ಸಾರಲ್ಯೋ ಕೋರಿದವರ ಮನಸಾರ ವರನ ನೀಡ್ವ ಧೀರ ಶ್ರೀರಾಮನೆಂದ್ಹಾರೈಸಿ ಕರೆಯುವೆ 5
--------------
ರಾಮದಾಸರು
ಏನೆಂದು ಕೊಂಡಾಡಲಿ ಮಾರುತಿರಾಯ ಪಹುಟ್ಟಿದಾಕ್ಷಣ ಕೆಂಪು ಕಿತ್ತಳೆ ಹಣ್ಣೆಂದುಸೂರ್ಯಮಂಡಲಿಕೆ ನೀ ಹಾರಿ 'ಡಿದ 'ೀರಾ 1ಶರಧಿಯ ಜಿಗಿದು ಸೀತೆಗೆ ಮುದ್ರಿಕೆ ಕೊಟ್ಟುಲಂಕಾ ಪಟ್ಟಣ ಸುಟ್ಟು ಜೀವೋತ್ತಮನು ನೀನು 2ಕಪಿವೇಷದಿಂದ ಮೆರೆದ ಗದೆಪಿಡಿದ ಸನ್ಯಾಸಿಭೂಪತಿ'ಠ್ಠಲನ ದಾಸಾಗ್ರೇಸರನು ನೀನು 3ಗಲಗಲಿಯ ಪ್ರಾಣದೇವರು
--------------
ಭೂಪತಿ ವಿಠಲರು
ಏನೆಂದು ಕೊಂಡಾಡಿ ಸುತ್ತಿಸೆಲೊ ನಿನ್ನಾ ಪ ದಾನವಾಂತಕ ಕೃಷ್ಣ ಆನಂದ ಗುಣ ಪೂರ್ಣ ಅ.ಪ. ಮತ್ಸರೂಪಿಯೆ ನಿನ್ನ ಉತ್ಸಹದಿ ಕರೆಯಲಾಕುತ್ಸಿತನ ಸೊಲ್ಲ ನೀನೆತ್ತ ಕೇಳುವಿಯೋ |ಮತ್ಸ್ಯಕೇತನ ಜನಕ | ಮತ್ಸರವ ಕಳೆಯಯ್ಯಸಚ್ಚಿದಾನಂದಾತ್ಮ | ಚಿತ್ಸುಖಪದನೇ 1 ಕೂರ್ಮರೂಪಿಯೆಂದು | ಪೇರ್ಮೆಯಲಿ ಕರೆಯಲಾಭರ್ಮ ಗರ್ಭನ ಪಿತನೆ | ಗಿರಿಯ ಧರಿಸಿರುವೇ |ನಿರ್ಮಲಾತ್ಮಕನೆ ಯೆನಗೆ | ನಿರ್ಮಮತೆ ನೀಡಯ್ಯಾ ಊರ್ಮಿಳಾಪತಿ ಭ್ರಾತೃ | ಪರಮ ಮಂಗಳನೇ 2 ವರಹ ರೂಪಿಯೆ ನಿನ್ನ | ಕರೆಯುವುದು ಹೇಗಯ್ಯಾ ಕೋರೆ ದಾಡಿಯ ಮೇಲೆ | ಧರೆಯೆ ಧರಿಸಿರುವೇ | ವಾರೆ ನೋಟದಿ ಯೆನ್ನ | ಪರಿಕಿಸೀ ಪೊರೆಯಯ್ಯಾಧೀರ ಭೂವರಹ ವರ | ಧರಣಿ ಪರಿಪಾಲಾ 3 ನಾರಸಿಂಹನೆ ನಾನು | ಕರೆಯಲಾಪನೆ ನಿನ್ನಘೋರರೂಪವ ನೋಡಿ | ದೂರ ಸಾರುವರೋವಾರಿಜಾಕ್ಷಿಯು ಬಂದು | ಘೋರ ಪ್ರಹ್ಲಾದನ್ನಚಾರು ತವ ಚರಣದಲಿ | ಇರಿಸಬೇಕಾಯ್ತು 4 ದಧಿ | ವಾಮನನೆ ಬಾರೆಂದುಸಾಮಸನ್ಮುತ ನಿನ್ನ | ನಾಮಗಳ ನೆನೆಯೆಲಾ |ಭೂಮಿ ಬೇಡುವ ನೆವದಿ | ಬಲಿಯ ಭೂಮಿಗೆ ತುಳಿದೆಸೀಮೆ ಮೀರಿದ ಮಹಿಮ | ಮರ್ಮವಿನ್ನೆಷ್ಟೋ | 5 ಪರಶುರಾಮನೆ ನಿನ್ನ | ಕರೆಯಲಾರೆನು ನಾನುದುರುಳ ಕ್ಷತ್ರಿಯರ | ಶಿರಗಳನೆ ತರಿದೂ |ಭಾರಿ ಪರಶುವಿನಿಂದ | ವರಮಾತೆ ಶಿರ ತರಿದಿಸರಿ ಕಾಣೋ ಇದು ನಿನಗೆ | ಪರಮ ಪಾವನ್ನಾ 6 ರಾಮ ರೂಪಿಯೆ ನಿನ್ನ | ಆ ಮಹಾ ಮಹಿಮೆಗಳಸೀಮೆಗಾಣಳು ಲಕುಮಿ | ಪಾಮರನಿಗಳವೇ |ಆ ಮರಾ ಈ ಮರಾನೆಂದ ಆ | ಪಾಮರನ ಪೊರೆದುಆ ಮಹಾತ್ಮನ ಗೈದ | ಪರಿಯೆನ್ನ ಮಾಡೋ 7 ಕೃಷ್ಣ ಕೃಷ್ಣಾ ಎಂದು ಕರೆಯುವೆನೆ ನಾ ನಿನ್ನಕಷ್ಟದೊಳು ಸಿಲುಕಿರುವೆ | ಗಿರಿಯನ್ನೆ ಪೊತ್ತು |ವೃಷ್ಟಿಕುಲ ಸಂಪನ್ನ | ಕೃಷ್ಣ ಮೂರುತಿ ನೀನುಇಷ್ಟ ಭಕುತರ ಮನೋ | ಭೀಷ್ಟ ಸಲಿಸುವಿಯಾ 8 ಬುದ್ಧ ದೇವನೆ ಎನಗೆ ಸ | ದ್ಭುದ್ಧಿ ಕೊಡು ಎಂದುಬುದ್ಧಿ ಪೂರ್ವಕವಾಗಿ ನಿನ್ನ ಕರೆಯಲಾ |ಬುದ್ಧಿಯಿಂದಲಿ ನೀ | ಭೋಧಿಸಿದೆ ದುಶ್ಯಾಸ್ತ್ರಬೌದ್ಧ ನಿನ್ನನು ಪೊದ್ದು | ಬುಧರ ಪಾಡೇನೊ 9 ಕಲ್ಕಿ ಕಲ್ಕೀ ಎಂದೇ ಕರೆಯಲಾಪೆನೆ ದೇವಾಶುಲ್ಕ ಮೇಲಾಗಿಹುದು ಕಲಿಯುಗದೊಳು |ಉಲ್ಕ ಮುಖ ಮೊದಲಾದ | ಕಲ್ಕಿರಾಜರು ನಿನ್ನಕಲ್ಕ್ಯಾತ್ಮ ಸತ್ಯ ತವ | ವ್ರತವ ಮಾಳ್ಪರು ಬಿಡದೆ 10 ಸರ್ವರೂಪಾತ್ಮಕನೆ | ಸರ್ವ ವ್ಯಾಪಕ ಸ್ವಾಮಿಸರ್ವಜಿತು ಸರ್ವಾತ್ಮ ಸರ್ವೇಶನೇ |ಶರ್ವಾರಿ ವಂದ್ಯ ಗುರು | ಗೋವಿಂದ ವಿಠಲನೇಗುರು ಹೃದಂಬರದಲ್ಲಿ | ತೋರಿ ಪೊರೆಯನ್ನ 11
--------------
ಗುರುಗೋವಿಂದವಿಠಲರು
ಏನೆಂದು ನುಡಿವೆ ನಿನ್ನವರಂತೆ ಕೇಡು ಬುದ್ಧಿ ಎನ್ನೊಳಗಿಲ್ಲ - ಗುಣಹೀನರಲ್ಲದ ಈ ನರರ ಪಾಲಿಪ ಬುದ್ಧಿ ನಿನ್ನೊಳಗಿಲ್ಲ ಪ ತರಳ ಪ್ರಹ್ಲಾದನಂದದಿ ನಿನ್ನ ರೂಪನು ಕೆಡಿಸಲಿಲ್ಲನರನಂತೆ ಬಂಡಿಬೋವನ ಮಾಡಿ ನಿನ್ನ ದುಡಿಸಲಿಲ್ಲಪರಾಶರನಂತೆ ನದಿಯೊಳಿದ್ದ ಹೆಣ್ಣ ಕೂಡಲಿಲ್ಲಗರುಡನಂದದಿ ನಿನ್ನ ಪೊತ್ತು ತಿರುಗಲಿಲ್ಲ 1 ಅನುದಿನ ಚರಿಸಲಿಲ್ಲಬಿನಗು ಬೇಡತಿಯಂತೆ ಸವಿದುಂಡ ಹಣ್ಣ ತಿನಿಸಲಿಲ್ಲಇನಕುಲ ಕಪಿಯಂತೆ ವಂಚಿಸಿ ವಾಲಿಯ ಕೊಲಿಸಲಿಲ್ಲಘನ ಪಾತಕದಜಮಿಳನಂತೆ ನಾರಗ ಎನ್ನಲಿಲ್ಲ2 ಕದನದೊಳು ವಿಭೀಷಣನಂತೆ ಅಣ್ಣನ ಕೊಲಿಸಲಿಲ್ಲವಿದುರನ ತೆರನಂತೆ ಸದನವ ಮುರಿದು ನಿನ್ನ ಬೆರೆಯಲಿಲ್ಲಮದಗಜದಂತೆ ಮಕರಿಗೆ ಸಿಲ್ಕಿ ಒರಲಲಿಲ್ಲಗದರಿ ಶಿಶುಪಾಲನಂದದಿ ನಿನ್ನನುಪೇಕ್ಷಿಸಿ ಜರೆಯಲಿಲ್ಲ3 ಬುವಿಯೊಳು ಬಲಿಯಂತೆ ದಾನವ ನೀಡಲಿಲ್ಲಭವನಂತೆ ಶ್ಮಶಾನದಿ ಮನೆಮಾಡಿ ಸ್ಮರಿಸಲಿಲ್ಲತವ ಪುಂಡರೀಕನಂತೆ ಹಲಗೆಯಿಟ್ಟಿಗೆ ಮೇಲೆ ನಿಲಿಸಲಿಲ್ಲಭುವನದೊಡೆಯ ನೆಲೆಯಾದಿಕೇಶವನ ಮರೆಯಲಿಲ್ಲ4
--------------
ಕನಕದಾಸ
ಏನೆಂದು ಬಣ್ಣಿಪೆ ಶ್ರೀನಾಥ ನಿನ್ನಯ ಆನಂದ ಮಹಿಮೆಗಳಾ ಸ್ವಾಮಿ ಆ ನಾಕು ಶೃತಿಗಳು ಮೌನವ ಹಿಡಿದವು ಅನಿರ್ವಚನೀಯಗಳಾ ಸ್ವಾಮಿ 1 ವಾರಿಧಿ ಪಾತ್ರೆಯು ನೀರನೆ ಮಸಿ ಮಾಡಿ ಧಾರುಣಿ ಹಲಗೆಯಲಿ ಸ್ವಾಮಿ ಮೇರು ಲೇಖಣಿಯಿಂದ ಶಾರದೆ ಬರೆಯಲು ಪಾರ ಗಾಣಲಿಲ್ಲೋ ಸ್ವಾಮಿ 2 ಉರಗೇಂದ್ರ ಸಾಸಿರ ವೆರಡ ನಾಲಿಗೆಯಿಂದ ತೆರವಿಲ್ಲ ಹೊಗಳಲಿಕ್ಕೇ ಸ್ವಾಮಿ ಸಾರಥಿ ನಿನ್ನದಾ ಸರಸ್ತುತಿರತಿ ನೀಡೋಸ್ವಾಮಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನೆಂದು ಬಣ್ಣಿಸಲಿ ಎಲೆ ಧನವೆ ನಿನ್ನ ಮಾಣುವ ವಿಷಯಸುಖ ಅಹುದೆನಿಪ ಪರಿಯ ಪ ಏರಿಸುವಿ ಹಿರಿಕುದುರೆ ತೋರಿಸುವಿ ದುರ್ಮದವ ಹಾರಿಸುವಿ ಸುವಿಚಾರ ಮೀರಿಸುವಿ ಸುಪಥ ದೂರಿಸುವಿ ಮಹನೀತಿ ಘೋರಿಸುವಿ ಬಡವರನು ಕಾರಿಸುವಿ ತಿಂದನ್ನ ಧಾರುಣಿಯೊಳು 1 ಮೆರೆಸುವಿ ಅಂದಣದಿ ಸುರಿಸುವಿ ದುರ್ವಚನ ನರಸುವಿ ಎಡಬಲದಿ ಪರಿಪರಿಯ ಜನರ ತರಿಸುವಿ ಸತಿಸುತರ ಇರಿಸುವಿ ಅರಮನೆಯೊಳ್ ಮರೆಸುವಿ ಮಹಿಮರ ಸಂದರುಶನದ ಸುಖವ 2 ವೇದಶಾಸ್ತ್ರಕಿಳಿಸುವಿ ವಾದನುಡಿ ಕಲಿಸುವಿ ನೀ ಸಾಧುಸಜ್ಜನರ ನಿಜಬೋಧ ತೋರಿಸುವಿಯೋ ಭೇದನಿಕ್ಕುತ ವೈರ ಸಾಧಿಸುತ ಪರಲೋಕ ಸಾಧನೆಯ ಕೆಡಿಸ್ಯಮಬಾಧೆಗಾನಿಸುವಿ 3 ತೊಡಿಸುವಿ ವಿಧವಿಧದ ಒಡವೆವಸ್ತ್ರಂಗಳನು ನುಡಿಸುವಿ ಕಡೆತನಕ ಕಡುದುಗುಡ ಬಡಿಸುವಿ ಬಲುಜಂಬ ನಡೆಸುವಿ ದುಷ್ಷಥದಿ ಕೆಡಿಸುವಿಯೋ ಸಲೆ ಪುಣ್ಯಪಡೆದ ನರಜನುಮ 4 ಇನ್ನೆಷ್ಟು ಬಣ್ಣಿಸಲಿ ನಿನ್ನ ಕರುಣದ ಗುಣವ ನಿನ್ನ ನಂಬಲು ಬಿಡದೆ ಕುನ್ನಿಯೆಂದೆನಿಸಿ ಪನ್ನಂಗಶಯನ ಮಮ ಸನ್ನುತಾಂಗ ಶ್ರೀರಾಮ ನುನ್ನತಂಘ್ರಿಯ ಧ್ಯಾನವನ್ನು ಅಗಲಿಸುವಿ 5
--------------
ರಾಮದಾಸರು
ಏನೆಂದು ಬಣ್ಣಿಸಲಿ ಗುರುರಾಯನಾ | ತಾ ನೆನೆದವರ ಧನ್ಯಗೈಸುವನಾ ಮಹಿಮೆ ಪ ಧರಿಯೊಳಜ್ಞಾನ ತಮಹರಣ ಭಾಸ್ಕರ ನೆನಿಪ | ಕರ ಕಮಲದಲಿ ಜನಿಸೀ | ವರಮೂಲ ಮಂತ್ರವನೆ ಗುರು ಮಹಿಪತಿಯಂಬಾ | ನಿರುತ ಖ್ಯಾತಿಯ ನಾಮ ಧರಿಸಿ ಬಂದನ ಮಹಿಮೆ1 ಘನಸಾರ ವಿದ್ಯದಾಕಾರವೋ | ಶುದ್ಧಜ್ಞಾನ ಕಲ್ಪ ದ್ರುಮವಿನಾ | ಮುದ್ದು ಫಲವೋಯನಲು ಸಿದ್ಧ ಸಾಧಕರ ನಡು | ಗದ್ದುಗೆಯೊಳೆಸೆವ ಗುಣ ನದ್ವೀತಿಯನ ಮಹಿಮೆ 2 ಸ್ವಸ್ಥ ಮನದಿಂದ ಭಕುತಿ ಸ್ತವನ ಮಾಡಲಿಕೆ | ಮಸ್ತಕದ ಮ್ಯಾಲಭಯ ಹಸ್ತನೀಡೀ | ಅಸ್ತಿ ಭಾತಿ ಪ್ರಿಯಂ ವಸ್ತು ವಿದೇಶ ಸಕಲ ಹೃದ | ಯಸ್ಥನೆಂದನು ಭವವ ವಿಸ್ತರಿಸುವನ ಮಹಿಮೆ 3 ಆರಿಗಳವಡದಿಹ ನೈರಾಸ್ಯ ವೃತ್ತಿಯಾ | ತಾರದಲಿ ನಡೆದು ಮುನಿ ವೈರಾಗ್ಯದಾ | ಸಿರಿ ಸಂಪದವ ತೋರಿದನು ನೋಡಲಿಕೆ | ಸಾರ ಸಾಂಖ್ಯವು ಯೋಗ ದಾರಿ ಬಲ್ಲನ ಮಹಿಮೆ4 ಹೊಂದಿದ್ದವರ ಚಿದಾನಂದ ಸುಖಸಾಗರದಿ | ನಿಂದು ಲೋಲ್ಯಾಡಿಸಿದ ನಂದಿಗಿಂದು | ತಂದೆ ಮಹಿಪತಿ ತನ್ನ ದ್ವಂದ್ವಪಾದುಕೆಗಳನು | ನಂದನ ಸಿರದಲ್ಲಿಟ್ಟು ಛಂದ ನೋಡುವನ ಮಹಿಮೆ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನೆಂದು ಬಣ್ಣಿಸುವೆನು ಗುರುವಿನ ನಾನು | ತಾನಂದವರಿಗಿನ್ನು ಸ್ವಾನಂದ ಸುಖವ ನೀಡುವಾ ಪ ತಾಯಿಯಂಬೆನೆ ಮೋಹದೀ | ಬಾಲಕ ಧೃವನಾ | ತಾಯಿಗಾಯ್ದಳೆ, ಸ್ನೇಹದಿ ಜನಕನೆಂಬೆÉನೆ | ನ್ಯಾಯದಿ ಪ್ರಲ್ಹಾದನ ಜನಕ ಕಾಯ್ದನೆ ನೋಡಮ್ಮಾ 1 ಬಂಧುಯಂಬೆನೆ ಜಗದೊಳು ವಿಭೀಷಣನ್ನಾ | ಬಂದು ಕಾಯ್ದನೆ, ಇಳೆಯೊಳು ಆಪ್ತನೆಂಬೆÉನೆ | ಸದು ವಿಗ್ರಹದಿ ಗಜೇಂದ್ರರ ನಾಪ್ತರು ಕಾಯ್ದರೇ 2 ಇಂತು ಸಂಬಂಧ ಸ್ನೇಹದಾ | ಸಾಸಿರ ಮಡಿಯಾ | ಸಂತತ ಕೃಪೆಯಾ ಬೀರಿದಾ | ಮಹಿಪತಿ ಕಾಯಾ | ಪಂಥವರಿಯದಾ ಪರಮ ಭ್ರಾಂತನಾನು | ದ್ಧರಿಸಿದ ನೆನ್ನಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನೆಂದು ಬಣ್ಣಿಸುವೆನೊ ನಾನು | ಶ್ರೀನಾಥ ಪ್ರಿಯಳಾದ ಶ್ರೀ ತುಳಸಿ ಮಹಿಮೆಯನು ಪ ಅಮೃತ ಕಲಶ ಬರೆಕಂಡು ಅತಿ | ಜಲಜಾಂಬಕನ ಪ್ರೇಮಾಂಜಲ ಉದರಲು | ಇಳಯೊಳದಿರಿಂದುದಿಸಿ ಬೆಳೆದು ನಿಂದಿರೆ ನೋಡಿ | ಒಲಿದು ಕೋಮಲ ಮುಗುಳು ತಳೆದ ಶ್ರೀಹರಿ ತಾನು 1 ಹರಿಯು ಧರಿಸಿದ ಕಂಡು ಸುರರೆಲ್ಲ ವಂದಿಸುತ | ಶಿರದಲಾಂತರು ಪರಮ ಹರುಷದಿಂದ | ಸಿರಿಸರಸ್ವತಿ ಗಿರಜೆ ನಿರುತ ನಿನ್ನಯ ವ್ರತದಿ | ಧರೆಯೊಳಗೆ ತಮ್ಮ ತಮ್ಮ ಅರಸರೊಲಿಸಿದರೆಂದು 2 ದುರಿತ ಕುಲ ಓಡುವವು ತನುವ ನೀ ಡಾಡಿ ಜಲನೀಡಿ ಕೊಂಡಾಡಿ ನಿಂದು | ಕೂಡೆ ಮೃತ್ತಿಕೆ ಫಣಿಗೆ ತೀಡಿದರೆ ಭಕುತಿಯಲಿ | ಬೇಡಿದಿಷ್ಟಾರ್ಥ ಕೈಗೂಡಬಹುದಿಳೆಯೊಳಗೆ 3 ತುಲಸಿ ಭಕುತಿಲ್ಲದವ ಕಲಿವಂಶದನುಜನವ | ತುಲಸಿ ಧರಿಸಿದ ತನುವು ಸಲೆಮುಕ್ತಿ ಮಂಟಪವು | ತುಲಸಿ ಬೆಳೆಹದಿ ಮನೆಯು ಬಲಿದ ಪುಣ್ಯದ ಖಣಿಯು | ತುಲಸಿ ಇಲ್ಲದ ಗೇಹ ಕಲುಷಾಲಯ 4 ಮೂಲದಲಿ ಬ್ರಹ್ಮ ತಾ ನೀಲಕಂಠನು ನಡುವೆ | ಮೇಲುತುದಿಯಲಿ ವಿಷ್ಣು ಲೋಲಾಡುವಾ | ಸಾಲಕೊಂಬೆಗಳಲಿ ವಿಶಾಲದೇವತೆಗಳಿಹರು | ತಾಳಿ ಪ್ರೇಮವನು ಮಹೀಪತಿ ನಂದನಾಜ್ಞೆಯಲಿ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನೆಂದು ಸ್ತುತಿಸಲಿ ದೇವ ರಂಗಯ್ಯ ನಿನ್ನ ಜಾಣ- ತನವ ನೀನೆ ಬಲ್ಲೆ ಶ್ರೀ ರಂಗಯ್ಯ ಪ. ಮತ್ಸ್ಯನಾಗಿ ಶ್ರುತಿಯ ತಂದೆ ರಂಗಯ್ಯ ನೀನು ಕುತ್ಸಿತ ತಮನ ಕೊಂದೆ ರಂಗಯ್ಯ ಸ್ವಚ್ಛ ಕೂರುಮನಾದೆ ರಂಗಯ್ಯ ಭಕ್ತ ರಿಚ್ಛೆಯ ಪಾಲಿಸಿದೆ ಶ್ರೀ ರಂಗಯ್ಯ1 ಆದಿವರಾಹ ನೀನಾದೆ ರಂಗಯ್ಯ ನೀನು ಪೋದ ಮೇದಿನಿಯ ತಂದೆ ರಂಗಯ್ಯ ಭೇದಿಸಿ ಕಂಬದಿ ಬಂದೆ ರಂಗಯ್ಯ ಪ್ರ- ಹ್ಲಾದನ ಕಾಯ್ದೆ ಶ್ರೀ ರಂಗಯ್ಯ 2 ಬಲಿಯನ್ನು ವಂಚಿಸಿದಂಥ ರಂಗಯ್ಯ ನೀನು ನೆಲವ ಓರಡಿ ಮಾಡ್ದೆ ರಂಗಯ್ಯ ಬಲವಂತ ಭಾರ್ಗವನಾದೆ ರಂಗಯ್ಯ ನೀನು ಛಲದಿ ಕ್ಷತ್ರಿಯರ ಗೆದ್ದೆ ರಂಗಯ್ಯ 3 ಜಲಧಿಯನು ಕಟ್ಟಿದೆ ರಂಗಯ್ಯ ಹತ್ತು- ತಲೆಯವನ ಕುಟ್ಟಿದೆ ರಂಗಯ್ಯ ಮಲೆತ ಮಾವನ ಕೊಂದೆ ರಂಗಯ್ಯ ಯದು- ಕುಲವನುದ್ಧರಿಸಿದೆ ಶ್ರೀ ರಂಗಯ್ಯ 4 ಸತಿಯರ ಮೋಹಿಸಿದೆ ನೀನು ರಂಗಯ್ಯ ಬಲು ಚತುರ ಬೌದ್ಧನಾದೆ ರಂಗಯ್ಯ ಖತಿಯಿಂದ ಹಯವೇರಿದೆ ರಂಗಯ್ಯ ದು- ರ್ಮತಿಯ ಕಲಿಯ ಕೊಂದೆ ಶ್ರೀ ರಂಗಯ್ಯ 5 ತ್ರಿಭುವನದೊಳಧಿಕÀ ರಂಗಯ್ಯ ನೀನು ವಿಭೀಷಣನಿಗೆ ಪ್ರಸನ್ನ ರಂಗಯ್ಯ ನೀ- ನಭಯವಿತ್ತೆನ್ನ ಕಾಯೊ ಶ್ರೀ ರಂಗಯ್ಯ 6 ವಾದಿರಾಜಗೊಲಿದೆ ರಂಗಯ್ಯ ನೀನು ಮೋದಿ ಹಯವದನನಾದೆ ರಂಗಯ್ಯ ಸಾಧಿಸಿ ಖಳರ ಕೊಂದೆ ರಂಗಯ್ಯ ವಿ- ನೋದÀದಿ ವೇದವ ತಂದೆ ಶ್ರೀ ರಂಗಯ್ಯ 7
--------------
ವಾದಿರಾಜ
ಏನೆಂದುಸುರುವೆ ಈ ನವರಾತ್ರಿಯಾ | ಸ್ವಾನಂದ ಸುಖಮಯ ಮಹಿಪತಿ ಚರ್ಯಾ ಪ ಮೊತ್ತ ಜನರು ಕೂಡಿ ಭಿತ್ತಿ ಬಾಗಿಲುಗಳ ಬಣ್ಣದಿ ನಿಚ್ಚಳ | ತೆತ್ತ ಮಾಡಳರವಿ ತಳಿಲು ತೋರಣದಿ | ಮತ್ತೆ ದೇವಾಲಯ ಮಂಡಿತ ಜಗಲಿಯಾ | ಸುತ್ತ ಕದಳೀ ಕಂಭದಿ ಮ್ಯಾಲಿಯ | ಉತ್ತಮ ಮಂಟಪದಿ ತರಗು ತೆಂಗು | ಉತ್ತತ್ತೀ ಬಹು ಓಲವೀ ಕಟ್ಟಿಹ | ವತ್ತೊತ್ತಿ ಥರ ಥರದಿ ನಮ್ಮಯ್ಯಾನಾ 1 ಕಡಲೆ ತಂಡುಲ ಗುಡ ಶರ್ಕರವ ಮತ್ತೆ ಗೂಡಿಹ ಸಮಸ್ತ | ಘೃತ ವಡವೆಯ ತುಂಬಿಹ ಸ್ಟೈಪಾಕ ಮಾಡಲಿ | ತಡೆಯದೆ ಕೊಡುತಿಹರು ಓಡ್ಯಾಡಲು | ಅಡಿಗಡಿಗೊಬ್ಬೊಬ್ಬರು ಆಜ್ಯವ | ಧೃಡ ಭಕ್ತಿಯುಳ್ಳವರು ನಮ್ಮಯ್ಯನಾ 2 ಏಕೋ ಭಾವನೆಯಲಿ ಯಾತ್ರೆಯ ಸದ್ಭೋಧಾಸಕ್ತರು | ಬೇಕಾದಿ ಸಾಕುವದೇವ ದೇವರಾ ಸಾರಿ ಸುಜನ ವಿಂಡು | ಹಾಕಿ ಸಾಷ್ಟಾಂಗದಲಿ ಪರಿ ಲೋಕ ನೆರೆಯುತಿರಲಿ ನಮ್ಮಯ್ಯನಾ 3 ಮೊದಲಿನ ದಿವಸದಿ ಸಂಧ್ಯಾವಂದನಜಪಾನುಷ್ಠಾನಾ | ವಿದಿತ ಬಂಗಾರ ವೆಳಿಯಲಿ ಬರೆದ ಚದುರ | ಝಗ ಝಗ ಅದು ನಕ್ಷತ್ರ ಮಾಲಿ ನಮ್ಮಯ್ಯನಾ 4 ಪಡದಿಯ ಸೋಂಪಿಲಿ ಬಹು ವಿಚಿತ್ರ | ಸಡಗರದಲಿ ದೇವ ಸಂಪುಟ ಮೆರೆವಾ| ವಡೆಯನ ಏನೆಂದ್ಹೇಳಲಿ ನಮ್ಮಯ್ಯಾನಾ 5 ಸನ್ನುತ ಗಂಗೆಯ ಸಲಿಲವು ಮುನ್ನ ಪಂಚಾಮೃತ ದಾಗಲು ಅಭಿಷೇಕ | ಸುಗಂಧವನ್ನು ಅರ್ಪಿಸಿ ಚಲ್ವದಾ ಸಾಲಾದಾ | ಘನ್ನ ದೀಪದೆಡೆ ಬಲದಾ ನಮ್ಮಯ್ಯನಾ 6 ಪರಿಮಳ ದಿಂಡಿಗೆ ಪರಿ ಪುಷ್ಪದಾ ಪಸರಿಕೆ ಬಹುಳವಾ | ತರುವಾರಾ ಧೂ ಬಲವೆಡಾ ಊದುಬತ್ತಿಯ ಗಿಡಾ | ನೆರೆ ಏಕಾರತಿಯಾಗಲಿ ನೈವೇದ್ಯ ಹರಿವಾಣವನು | ಬರಲಿ ಹರಿಗೆ ಪ್ರತ್ಯಕ್ಷದಲೀ ನಮ್ಮಯ್ಯನಾ 7 ವಾದಾ ಪೂಗೀ ಫಲಾ ಹರಿವಾಣ ಆರತಿ ಪೂರಣಾ | ಛಂದ ಭೇದಿಸಿ ಘನತಾಳಾ ಬಲು ಶಂಖ ನಾಮ ಘೋಷದಿತಿಂತ | ರಾದವರು ಪಾಡಲೀ ನೀರಾಂಜನ | ಸಾದಿಪ ಸಮಯದಲಿ ಕಣ್ಣಿನಲಿ ನಮ್ಮಯ್ಯನಾ 8 ಮೆರೆವ ಷೋಡಷದಿಂದ ಹರಿತೀರ್ಥಕೊಳ್ಳಲು ಹರುಷದಿ ಜನಗಳು | ಕರುವೇದ ಘೋಷ ಮಾಡು ಮಾಡಿ ಕುಳ್ಳಿರೆ | ಪರಮಾನ್ನ ಪರಿ ಶಾಕಗಳು ಸೂಪಘೃತ | ಗಿರಿಸಿಹ ದೀಪಗಳು ನಮ್ಮಯ್ಯನಾ 9 ಪ್ರೌಢದಿ ಹರಿ ನಾಮಾ ಆಡಲೇನದು ತೃಪ್ತಿ ಆಯಿತು ಉಂಡು | ನೀಡೆ ವೇದೋಕ್ತದ ನುಡಿ ಆಶೀರ್ವಾದ | ಮಾಡುತ ಬ್ರಾಹ್ಮರು ಮನೆಗೆ ಹೋಗುವರು | ಗಾಡ ಮದ್ದಲೆ ಸದರು ಸಭೆಯೊಳುಗೂಡಿ | ಒಡೆಯನಿದಿರು ಹರಿಯ ಕೊಂಡಾಡಿ ಆರತಿಯತ್ತೀರ ನಮ್ಮಯ್ಯನಾ 10 ಮುಂಚಿಲಿ ನಡೆಯಲು ಅರ್ಚನೆಯಾ ಅರ್ತಿ | ಸಂಭ್ರಮದಲಿ ನೋಡಿ ಸದ್ಗತಿ ಸೂರ್ಯಾಡಿ | ಕೊಂಬರು ಸ್ವಸ್ಥಲ ಕುರಿತು ಆಜ್ಞೆಗಳ | ಇಂದಿಲ್ಲ ಆನಂದದೀ ಈ ಮಹಿ ಮಾಡಂಬರೆನ್ನ ಮುಖದಿ ನುಡಿಸಿದ | ಶಂಭು ಮಹಿಪತಿ ದಯದಿ ನಂದನ | ಬೊಂಬಿ ಸೂತ್ರ ದಂದದಿ ನಮ್ಮಯ್ಯನಾ 11
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನೆಂದ್ಹೇಳಲಿ ತಂಗಿ _ ಏನೆಂದ್ಹೇಳಲಿ ತಂಗಿ _ ಏನೆಂದ್ಹೇಳಲಿ ರಂಗನ ಮಹಿಮೆಯ ಏನೆಂದ್ಹೇಳಲಿ ಪ ಘನ್ನಸಿರಿವಿಧಿ ಧ್ಯಾನಕೆ ನಿಲುಕದ ಅಗಣಿತ ಮಹಿಮೆಯ ಅ ಎಲ್ಲವ ಬಲ್ಲನು ಎಲ್ಲವ ಮಾಡುವ ಎಲ್ಲರ ಒಡೆಯನು ಇಲ್ಲದ ಸ್ಥಳವಿಲ್ಲ ಬಲ್ಲವರಿಲ್ಲವೆ ಫುಲ್ಲನಾಭನ ನಲ್ಲನು ಲಕ್ಷ್ಮಿಗೆ ಗೊಲ್ಲನು ಆದನೆ 1 ಅಂಗನೆ ಲಕ್ಷ್ಮಿಯ ಸೊಗಸಿಗೆ ನಿಲುಕದ ಅಂಗನೆ ಇಲ್ಲದೆ ಮಗನನು ಪಡೆದವ ಹಿಂಗದ ತಾನೆ ಅಂಗನೆ ಯಾದವ ರಂಗನ ಗೋಕುಲ ಹೆಂಗಳ ಕೂಡಿದನೆ2 ತಂದೆಯ ಕೊಂದನು ಕಂದನ ಸಲಹಿದ ಕಂದನ ಕೊಂದನು ತಂದೆಯ ಸಲಹಿದ ಬಂಧುಗಳೆನ್ನದೆ ಕೊಂದನು ವಂಶವ ತಂದೆಯು ಇಲ್ಲದೆ ಕಂದನು ಆಗುವನೇ 3 ದಾನವ ನೀಡಿದ ದಾನಿಯ ತುಳಿದನು ಮಾನವ ತೆಗೆದಾ ಹೀನನ ಸಲಹಿದ ದೀನರ ಸಲಹುವ ದಾನವರಳಿವನು ಜ್ಞಾನಿಗಮ್ಯನು ಮಾನಸ ಹಂಸನ 4 ಹಸಿವೆಯ ಅರಿಯದ ಅಸಮದೇವನು ಸೊಸಿಯು ನೀಡಿದ ಶಾಖವ ತಿಂದನೆ ಪಶುಪತಿ ಋಷಿಯನು ವಶವಾಗಿ ಮಾಡಿದ ಮಾಸದಮಹಿಮನು 5 ನಾಲ್ಮೊಗನಯ್ಯನು ಸುಳ್ಳನು ಹೇಳುತ ಕಳ್ಳನು ಆದನು ಗೊಲ್ಲರ ಭಕ್ತರಿಗೆ ಮೆಲ್ಲನೆ ಕುರುಕುಲ ಎಲ್ಲವ ಸವರಿದ ಬಲ್ಲಿದ ಕೃಷ್ಣಗÉ ಇಲ್ಲವೆ ಸಮರಧಿಕ 6 ಜಗವನು ಮಾಡುವ ಜಗವನು ಪಾಲಿಪ ಜಗವನು ಅಳಿಸುವ ಮಗುವಾಗಿ ಬಂದನೆ ಜಗಜೀವ ಭಿನ್ನನು ಜಗದೊಳು ವ್ಯಾಪ್ತನು ನಗುತಲಿ ಬಾಯಲಿ ಜಗವನು ತೋರಿದನೆ7 ಯಾಗವ ನಡೆಸಿದ ಯಾಗವ ಕೆಡಿಸಿದ ಯೋಗವ ಚರಿಸುತ ಯೋಗವ ಬೋಧಿಪನೆ ಬಾಗುವ ಭಕ್ತರ ನೀಗುವ ಕಲುಷವ ಆಗಮವಂದಿತ ಸಾಗರಶಯನನೆ8 ಹತ್ತವತಾರವ ನೆತ್ತಿದ ಮಹಿಮನು ಉತ್ತಮ ಭಕುತರ ತೆತ್ತಿಗನಾದನೆ ಬತ್ತಲೆ ಶಿಶುವಾಗಿ ಬಿತ್ತಿದ ಮೋಹವ ಬೆಸ್ತರಕುವರಿಗೆ ಆತ್ಮಜನಾದವನೆ9 ಚಕ್ರವಪಿಡಿದವ ನಕ್ರನ ತರಿದವ ಶಕ್ರನಕಾಯ್ದವ ವಕ್ರೆಯ ಕೂಡಿದನೆ ರಕ್ಕಸಯವನನ ಠಕ್ಕಿಲಿ ಅಳಿಸುತ ಭಕ್ತನಪೊರೆದಾ ಯುಕ್ತಗಳೊಡೆಯನೆ 10 ನಾರೆಂದೊದರಿದ ಉರುತರ ಪಾಪಿಯ ಭರದಿಂಪೊರೆಯೊ ಕರುಣಾಸಾಗರನೆ ನರಹರಿದೇವನು ಪರಿಪರಿರೂಪನು ಪರಿಪರಿಲೀಲೆಗೆ ಮೇರೆಯೆ ಇಲ್ಲಾವೇ 11 ವಾರಿಯಲಾಡುವ ಭಾರವ ಹೊರುವಾ ಕೋರೆಯ ತೀಡುವ ಘೋರವ ತೋರುವನೇ ವೀರರತರಿಯುವ ಕ್ರೂರರಸವರುವ ಜಾರನು ಆಗುವ ವೈರಿಗಳ್ವಂಚಿಪ ಏರುವ ತೇಜಿಯನೆ 12 ಅದ್ಬುತ ರೂಪವ ಕದನದಿ ತೋರಿದ ಬದರಿಯನಿಲಯಗೆ ತುದಿಮೊದಲಿಲ್ಲಾವೆ ಉದರದಿ ಮಗುವನು ಮುದದಿಂಸಲಹಿದ ಮುದಮುನಿ ಪ್ರಿಯನು ಹೃದಯದಿ ವಾಸಿಪನೆ 13 ವಿಷವನು ಕುಡಿದಾ ವೃಷಭವಾಹನ ಅಸುರನ ಭಯದಿಂ ಘಾಸಿಲಿ ಓಡುತಿರೇ ಮೋಸದಿ ಯುವತಿಯ ವೇಷವ ಧರಿಸುತ ಪಶುಪತಿ ಸಲಹಿದನೇ 14 ಭರದಿಂ ರಥವೆತ್ತಿ ನರನಂ ಕಾಯ್ದನು ಧರಣಿಯ ಒತ್ತುತ ಕುರುಪನ ಕೆಡಹಿದನೇ ಮರೆಸುತ ರವಿಯನು ಪೊರೆದನು ಚೇಲನ ಸುರವರಪೋಷಕ ಸಿರಿಪತಿ ಚದುರನ 15 ಗಂಗೆಯಪಡೆದ ಮಂಗಳ ಮಹಿಮನು ಹಿಂಗದೆ ಗೋಪರ ಸಂಗಡ ಆಡಿದನೇ ತಿಂಗಳ ಬೆಳಕಲಿ ಶೃಂಗರ ಸೊಬಗನು ಹೆಂಗಳ ಕೂಡುತ ಸಂಗೀತ ಪಾಡಿದನೆ 16 ಕಾಳಿಯ ಫಣೆಯಲಿ ಕಾಳಿಂದೀಶನು ತಾಳಕೆ ಕುಣಿಯುತ ಕೊಳಲನ್ನೂದಿದನೆ ಘೂಳಿಗಳಳಿಯುತ ನೀಲಳತಂದವ ಊಳಿಗ ಮಾಡಿದನೇ 17 ನಾರಿಯು ಮೊರೆಯಿಡೆ ಸೀರೆಯನೀಡಿದ ವಾರಿಜಾಕ್ಷನು ಸೀರೆಯ ಚೋರನೆ ನೀರೊಳು ಮುಳುಗಿದ ಪೋರರಿಗೆಲ್ಲ ತೋರಿದ ಜಗವನು ಸೂರಿಗಳೊಡೆಯನೆ 18 ಗರುಡನ ಏರುವ ಧರಣಿಯ ರಮಣನು ಏರುತಹುಡುಗರ ತುರುಗಳ ಕಾಯ್ದನೆ ಮಾರನಪಡೆದ ಮುರಹರಕೃಷ್ಣನು ಗಿರಿಯನು ಎತ್ತುತ ಹರುಷವ ಬೀರಿದನೇ 19 ಶೃತಿಗಳು ಪೊಗಳುವ ವ್ಯಾಪ್ತನ ನಿತ್ಯನ ಪಾತಕ ಹೋಗುವುದೇ ಅಂತಕ ಗತಿ ಮತಿ ಪ್ರೇರಕ ದಾತನು ಎಂತೆನೆ ಪ್ರೀತಿಲಿ ಸಲಹುವನೆ 20 ಮಜ್ಜಿಗೆ ಕಡೆಯುವ ರಜ್ಜುವಿನಿಂದಲಿ ಮೂರ್ಜಗನಯ್ಯನು ಕಟ್ಟಿಸಿಕೊಂಡಾನೆ ಲಜ್ಜೆಯ ಬಿಡುತಲಿ ಗೆಜ್ಜೆಯ ಕಟ್ಟುತ ಘರ್ಜಿಸಿ ಪಾಡಲು ಹೆಜ್ಜೆಯ ತೋರುವನೆ 21 ದಾಸರ ಪೋಷಿಪ ಶೇಷಗಿರೀಶನ ವಿಶೇಷವೆ ಬಣ್ಣಿಸೆ ಶೇಷಗೆ ಆಗದೆ ದೋಷವು ಇಲ್ಲದ ವಾಸುದೇವನೆ ತೋಷವ ನೀಡುವ ಸಾಸಿರ ನಾಮಕನೆ22 ಜಯಮುನಿ ಅಂತರ ವಾಯುವಿನಲ್ಲಿಹ ಜಯಕೃಷ್ಣವಿಠಲನು ಜೀಯನೆ ಜಗಕೆಲ್ಲ ನಯಭಯದಿಂದಲಿ ಹಯಮುಖನೊಲಿಸಲು ಭಯವನು ಹರಿಸುತ ನ್ಯಾಯದಿ ಪಾಲಿಪನೇ 23
--------------
ಕೃಷ್ಣವಿಠಲದಾಸರು
ಏನೆಂದ್ಹೇಳಲಿ ಸ್ವಾನಂದ ಘನ ಸುಖವು ಧ್ರುವ ಮಾತಿನಂತಲ್ಲ ಜ್ಯೋತಿರ್ಮಯದ ಸುಖ ನೇತಿ ನೆÉೀತಿವೆಂಬುದು ಶ್ರುತಿವಚನ 1 ಹೋಲಿಕೆಯ ಮಾತಿಗಿದು ಕೇಳು ಸಿಲುಕುವುದಿಲ್ಲ ಮೂಲ ತಿಳಿದವನೆ ಬಲ್ಲ ಮ್ಯಾಲೆ ಮಂದಿರದ 2 ಅಂಜನೆ ಇಟ್ಟ ಗುರು ಕೃಪೆಯಿಂದ ನಿಜ ಗುರುತು ಕಂಡವನೆ ಬಲ್ಲ ಹರಿಮಹಿಮೆಯ 3 ಸ್ವಾನುಭವದ ಸುಖಜ್ಞಾನಿಗಳಿಗಲ್ಲದೆ ನೀನು ನಾನೆಂಬವರಿಗೆ ಖೂನ ತಿಳಿಯದು 4 ಮನಕರಿಗಿ ಮಹಿಪತಿ ಘನ ಬೆರೆದ ಗುರುತ ಏನೋ ಎಂತೋ ತಿಳಿ ಮಾತ ಆನಂದಭರಿತ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು