ಒಟ್ಟು 7546 ಕಡೆಗಳಲ್ಲಿ , 133 ದಾಸರು , 4390 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯರಾಯ ಭವಹರಣ ಪಾಲಿಸೆಮ್ಮ ಪ ಜಯದೇವಿಪ್ರತಿ | ರೂಪ ಗುಣಕ್ರಿಯ ರತಯತಿಯೆ ಅ.ಪ. ಅಮರೇಶ ಸ್ವರ್ಗಪದ ತೃಣಮಾಡಿ ಕ್ಷಿತಿಯಲಿ ಪಾದ ಸೇವೆಗಾಗಿ ಅಮಿತ ಭಾಗ್ಯವಿದೆಂದು ಪಶುವಾಗಿ ನೀನಿಂದು ಕಮಲ ಮಧು ಸೇವಿಸಿದೆ 1 ತೃತಿ ಈಶರೆನಿಸುವ ಅಗ್ನಿ ಗರುಡ ಮಹರುದ್ರ ಪ್ರತಿ ಕ್ಷಣದಿ ಅತಿ ಭಕುತಿ ಭಾರದಿಂದ ನತಿಸಿ ಸೇವಿಪ ಪರಮ ಗುರುಚರಣವಾಶ್ರೈಸಿ ದತಿ ಸುಕೃತನಿಧಿ ನಮ್ಮ ಅತಿದಯದಿ ಈಕ್ಷಿಪುದು 2 ಶ್ರೀ ಭೂಮಿ ದುರ್ಗೇಶನ ಮತ ಮಂಗಳ ಮೂರ್ತಿ ಶೋಭನಾಂತ ಗುಣಕ್ರಿಯ ನಿವಹಗಳನು ಅದ್ಭುತದಿ ಧರಿಸಿಹಾ ಮಧ್ವಕೃತ ಗ್ರಂಥಗಳ ಸದ್ಭಕ್ತಿಯಲಿ ಪೊತ್ತೆ ಸೌಭಾಗ್ಯನಿಧಿ ಗುರುವೆ 3 ಪವಮಾನರಾಯನಾ ಕೃಪೆಯೆಷ್ಟೊ ನಿನ್ನಲ್ಲಿ ಅವನಿಯೊಳು ಸಿದ್ಧಾಂತ ಗ್ರಂಥಗಳ ಟೀಕೆ ಕವಿಶ್ರೇಷ್ಠನಿರಲಾಗಿ ನಿನ್ನಿಂದ ರಚಿಸಿದ ತ್ರಿ ಭುವನ ಮಾನ್ಯನೆ ಧನ್ಯ ಧನ್ಯತೆಲಿ ಪೊರೆ ಎಮ್ಮ 4 ಪಾರ್ಥನಾದಂದು ಶ್ರೀ ಯದುಪತಿಯ ಸಖ್ಯವನು ಪೂರ್ತಿಪೊಂದಿದೆ ಸರ್ವ ಪುರುಷಾರ್ಥವೆಂದು ಸ್ವಾರ್ಥಮತಿಯ ಹರಿಯ ಒಲಿಸಿದಾ ಮಹಾನಿಪುಣ ಪಾದ ಪಾಂಶು ರಕ್ಷಿಸಲೆನ್ನ 5 ದೇವಕೀಸುತ ನಿನ್ನ ಸಖನೆಂದು ಪವಮಾನ ದೇವ ನಿನ್ನಲ್ಲಿ ಮಾಡಿದ ಪರಮ ಪ್ರೀತಿ ಪತಿ ದಾಸ್ಯ ಪೂರ್ಣಪ್ರದ ಆರೂಢ ಕೇವಲಾ ಕೃಪೆ ಮಾಡು ಹರಿದಾಸ ಮಣಿಗುರುವೆ 6 ಭಾರತೀಪತಿಗೊಡೆಯ ಜಯೇಶವಿಠಲನ ವೈರಾಗ್ಯ ಸಿದ್ಧಿಯಲಿ ಏಕಾಂತ ಪೊಂದಿ ಭವ ತರಣ ಸತ್ಪಾತ್ರ ವೃಷ್ಟಿ ಹರಿಗುರುಗಳೊಲಿವಂತೆ 7
--------------
ಜಯೇಶವಿಠಲ
ಜಯರಾಯರ ನೋಡಿರೋ ಸಜ್ಜನರೆಲ್ಲ ಜಯರಾಯರ ನೋಡಿರೋ ಪ ಜಯರಾಯರ ನೋಡಿ ಜಪಿಸಿ ಮನದಿ ಪಾಡಿ ಜಯವಾಗುವುದು ನಿಮಗೆ ಭಯನಾಶ ಸಂತತ ಅ.ಪ ದುರುಳಮತವೆಂಬೊ ಕರಿಗೆ ಅಂಕುಶವಿತ್ತು ಸುರಸಾದ ಗ್ರಂಥ ಆನಂದಮುನಿ ವಿರಚಿಸಿ ಇರಲಾಗಿ ಪರಮಭಕ್ತಿಯಿಂದ ವಿ ಸ್ತರ ಮಾಡಿದಾ ಕರದ ಕನ್ನಡಿಯಂತೆ 1 ವಾದಿಗಳನ್ನೆಲ್ಲಾ ಜೈಸಿ ಡಂಗುರ ಹೊಯ್ಸಿ ಭೇದಾರ್ಥಜ್ಞಾನ ಸತ್ಯವೆನಿಸಿ ಈ ಧರಿಯೊಳಗೆ ಹರಿಪರ ದೈವವೆಂದು ಸಾಧಿಸಿ ಉದ್ದಂಡವಾದ ಗುರುತಿಲಕ 2 ಅಕ್ಷೋಭ್ಯತೀರ್ಥರ ಕರದಿಂದ ಜನಿಸಿ ಮೋಕ್ಷಕೆ ಜಯ ಪತ್ರಿಕೆ ಕೊಡಿಸಿ ಸಿರಿ ವಿಜಯವಿಠ್ಠಲನನ್ನ ನೀಕ್ಷಿಸುವದಕೆ ಉಪದೇಶ ಕೊಡುವ ಋಷಿ ಶ್ರೀ ಮಧ್ವೇಶಾರ್ಪಿತವು3
--------------
ವಿಜಯದಾಸ
ಜಯವೆನ್ನಿ ಜನರೆಲ್ಲ ಸ್ವಾಮಿ ಭವರೋಗವ್ಶೆದ್ಯಗೆ ಭಾವಜನಯ್ಯಗೆ ಕುವಲಯಧರಸ್ವಾಮಿಗೆ ನಾರಾಯಣ ಪ. ಆಗಮಚೋರನ ಗೆಲಿದ ರಾಮ ಬೇಗನೆ ಸುರರಿಗೆ ಸುಧೆಯೆರೆದ ಕೃಷ್ಣ ನಾಗಲೋಕವ ಹೊಕ್ಕವನ ಕೊಂದಾಗ ಶಿಶು ಕೂಗೆ ಕಂಬದಿ ಬಂದಗೆ ನಾರಾಯಣ 1 ಭಾಗೀರಥಿಯ ಪಡೆದೆ ರಂಗ ಬಾಗಿಸಿ ತಾಯ ಶಿರವ ಕಡಿದೆ ರಾಮ ನೀಗಿದಶ್ವವಾಹಕಗೆ ನಾರಾಯಣ 2 ಜಲದೊಳಗಾಳ್ದನ ಸೀಳ್ದ ರಾಮ ಅಲಸದೆ ಗಿರಿಯ ಬೆನ್ನಲಿ ತಾಳ್ದ ಕೃಷ್ಣ ನೆಲನ ಕದ್ದೊಯ್ದಸುರನ ಮರ್ದಿಸಿದ ಶಿಶು- ಗೊಲಿದು ಬಲಿಯ ತುಳಿದೆ ನಾರಾಯಣ 3 ಛಲಪದದಿ ರಾಯರ ಕಡಿದೆ ರಾಮ ಬಲು ಬಿಲ್ಲನು ಕರದಲ್ಲಿ ಪಿಡಿದೆ ಕೃಷ್ಣ ಕೋ- ಡುಳ್ಳವ ಕೋಪದ ಮುಖ ದೈನ್ಯದಿ ಬೇಡುವೆ ಕೊಡಲಿಗಾರ ನಾರಾಯಣ 4 ರೂಢಿಯೊಳು ರಾಯರ ಗೆಲಿದ ರಾಮ ಓಡಿ ಹೊಕ್ಕನೆ ದುರ್ಗದ ಜಲ ಕೃಷ್ಣ ನೋಡೆ ನಾರಿಯರ ವ್ರತವಳಿದೆ ಹಯವದನ ರೂಢರಾವುತನಾದ ನಾರಾಯಣ5
--------------
ವಾದಿರಾಜ
ಜಯಾ ಜಯಾ ಪ ಈ ಮುದ್ದುಮುಖವೊ ಮತ್ತೆ ತನುವಿನ ಕಾಂತಿ ಈ ಬಿಲ್ಲು ಈ ಬಾಣ ನಿಂತಭಾವ 1 ಬಂಟ ಈ ಭಾಗ್ಯ ಆವ ದೇವರಿಗುಂಟು ಮೂಲೋಕದೊಳಗೆ 2 ಜಯ ಇನಕುಲೋದ್ಧರಣ ಜಯ ಮುನಿಕೃತ ಶರಣ ಜಯ ದನುಜವಿದಾರಣ ಜಯ ತಮಹರಣ 3 ಧರೆಯೊಳತಿಭಾರವನು ಇಳುಹಿ ಕಮಲಜ ಮುಖ್ಯ ಸುರರ ಮೊರೆಯನು ಕೇಳ್ದು ನರರೂಪ ತಾಳ್ದು 4 ದಶರಥನ ಗರ್ಭದಲಿ ಜನಿಸಿ ಮುನ್ನ ಮುನಿ ಮನೋರಥ ಕಾಯಿದ ಪುಣ್ಯಚರಿತ್ರ5 ಅಸುರರನು ಅಳಿದು ಅಹಲ್ಯಳಿಗಿತ್ತ ವರವಿತ್ತು ಮಿಥಿಳ ಪುರದಿ ಹರನ ಧನುವನುರೆ ಮುರಿದು 6 ಅತುಳ ಬಲದಲಿ ಸೀತೆಯ ಒಲಿಸಿದ ಭಾರ್ಗವ ಮ- ಹಿತÀಳ ಬಲವಂತ ದೇವೋತ್ತುಂಗ ಜಯತು 7 ಭರದಿಂದಲಯೋಧ್ಯಾಪುರವನು ಶೃಂಗರಿಸೆ ಹರುಷತನದಲಿ ರಾಮಗರಸುತನವೆನಲು 8 ಕಿರಿಯ ಮಾತೆಯು ಬಂದು ಭರತನಿಗೆ ಪಟ್ಟವೆನೆ ಸಿರಿಸಹಿತ ಹೊರಹೊಂಟ ಕರುಣಾಳು ಜಯತು 9 ಅನುಜ ಅವನಿಜೆ ಸಹಿತ ವನವಾಸವ ಮಾಡಿ ವನಜಾಕ್ಷ ಪತಿಯಾಗೆಂದು ರಾಕ್ಷಸಿಯು ಬರಲು 10 ಅನುವಾಯಿತೆಂದು ನಾಸಿಕವ ಹರಿದು ಭಂಗಿಸಿದೆ ಬಿನುಗು ಹೊಮ್ಮøಗವೆಚ್ಚ ಘನಮಹಿಮ ಜಯತು 11 ಜಕ್ಕಿದ ವಾಲಿಯನು ಕೊಂದು ಕುಲಸೈನ್ಯ ಸಹವಾಗಿ ನಿಲ್ಲದೆ ಸೇತುವೆಗಟ್ಟಿ ಅಸುರರೊಡಗೂಡಿ 12 ಖುಲ್ಲ ದಾನವ ಕುಂಭಕರ್ಣ ರಣಮುಟ್ಟಿ ಎಲ್ಲರನು ತರಿದಂಥ ಬಲ್ಲಿದನೆ ಜಯತು 13 ದÉೀವಕ್ಕಳು ಹರುಷದಲ್ಲಿ ಪೂಮಳೆಗರೆಯೆ ಭೂಮಿಜೆಯ ಸಹಿತ ಸೌಮಿತ್ರಿಯೊಡಗೂಡಿ 14 ಕ್ಷೇಮದಿಂದಯೋಧ್ಯಪುರದಿ ಸುಖದಲ್ಲಿರ್ದ ಸ್ವಾಮಿ ಶ್ರೀಹಯವದನ ರಘುಕುಲತಿಲಕನಲ್ಲವೆ 15
--------------
ವಾದಿರಾಜ
ಜರ ಇನ್ಯಾತಕೆ ಬಂತಮ್ಮಾ ಸಜ್ಜನರಿಗೆಜರ ಇನ್ಯಾತಕೆ ಬಂತಮ್ಮಾ ಸಜ್ಜನರಿಗೆ ಪ ಪರಮೇಷ್ಠಿ ಜನಕಾನೆಪರನೆಂದು ತಿಳಿಸಾದೆ ಪರಗತಿಯ ತೋರದ ಅ.ಪ. ಸ್ನಾನವ ಮಾಡಿಕೊಂಡು ಕುಳಿತು ಬಲುಮೌನದಿಂದಿರಲೀಸಾದೆ ||ಶ್ರೀನಿವಾಸನ ಧ್ಯಾನ ಮಾಡಾದೆ ಮನಸುಶ್ವಾನನೋಪಾದಿಯಲ್ಲಿ ತಾ ಓಡುವಂಥ 1 ಜಪ ಮಾಡುವ ಕಾಲದಲ್ಲಿ ಕರೆಯ ಬರೆವಿಪರೀತವಾಗುವದು ಮನಸು ||ಸ್ವಪನದಂತೆ ಮನಸಿಗೆ ಪೊಳದು ಬಲುಸುಪಥವ ತಪ್ಪಿಸಿ ಅಪಗತಿ ಕೊಡುವಂಥ 2 ಯಜಮಾನನು ಮಾಡಿದ ಪಾಪಂಗಳವ್ರಜವು ಬಿಡದೆ ಅನ್ನದೊಳಗಿಪ್ಪುದ ||ದ್ವಿಜನು ಭುಂಜಿಸಲಾಗಿ ಅವನ ಉದರದೊಳುನಿಜವಾಗಿ ಇಪ್ಪಾವು ಸುಜನಾರು ಲಾಲಿಸಿ 3 ಉದರದೊಳಗೆ ಬಿಚ್ಚದ ಸಾವಿರಾರುವಿಧವಾಗುವದು ಕೇಳು ||ಅದೇ ದೇಹ ಪುಷ್ಟಿ ಮಲ ರೇತಸ್ಸುಅದೇ ಪಾಪಿಗೆ ತಿಳಿಯದೆ ಭುಜಿಸುವಂಥ 4 ಕೆಳಗೆ ಕುಳ್ಳಿರಿಸಿದಾರೆ ಜ್ಞಾನಿ-ಗಳ ಬೊಗಳುವೆ ಕುನ್ನಿಯಂದದಿ ||ಒಳಗೆ ಕರೆದು ಒಯ್ದು ಬೆಳಗಿಲಿಕುಳ್ಳಿರಿಸೆ ಸಾಯಂ ಪ್ರತಿ ಸ್ತುತಿ ಮಾಡುವಾ 5 ಪ್ರಸ್ತದಾ ಮನೆಯೊಳಗೆ ಕರೆಯಾದಲ್ಲಿಗೆಸ್ವಸ್ಥಾದಿ ನೀ ಕುಳಿತುಕೊಂಡು ||ವಿಸ್ತಾರದಿ ಹಾರೈಸಿ ಪ್ರ-ಶಸ್ತವಾಯಿತೆಂದೂ ಮಸ್ತಕ ತಿರುಹುವೆ 6 ಮಾಡಿದ ಮಹಾ ಪುಣ್ಯದ ಓದನಕಾಗಿಕಾಡಿಗೊಪ್ಪಿಸಿ ಪೋದಂತಾಯಿತು ||ಗಾಡಿಕಾರ ಮೋಹನ್ನ ವಿಠಲನಪಾಡಿ ಪೊಗಳಿ ಕೊಂಡಾಡಿಕೊಂಡಿರದಂತೆ 7
--------------
ಮೋಹನದಾಸರು
ಜಲಜಾಪ್ತ ಸಂಕಾಶ ಲಲಿತ ಸನ್ಮøದುಹಾಸ ಕಲಿಕಲುಷ ವಿಧ್ವಂಸ ಪರಮಹಂಸ ಶರಣಜನ ಸಂರಕ್ಷ ಸುರವಿರೋಧಿ ವಿಪಕ್ಷ ಧರ್ಮರಕ್ಷಣ ದೀಕ್ಷ ಶ್ರೀಕಟಾಕ್ಷ ಸರಸಿಜಾಯತನಯನ ಶರದಿಂದುನಿಭವದನ ದುರುಳ ಮ್ಲೇಂಛನಿಹನನ ತುರಗವದನ ಧುರಧೀರ ಶ್ರುತಿಸಾರ ಸುರುಚಿರಾಂಗದ ಹೀರ ವರಹಾರ ಕಂಧರ ಭಯವಿದೂರ ಕಮಲಾಸನಾದಿ ಸಂಸೇವ್ಯಮಾನ ಅಮರಸಂಕುಲತೋಷ ದಿವ್ಯವೇಷ ವಿಮಲ ಶೇಷಾದ್ರೀಶ ಶ್ರೀನಿವಾಸ
--------------
ನಂಜನಗೂಡು ತಿರುಮಲಾಂಬಾ
ಜಲಧಿ | ನಿಮ್ಮ ಮೊರೆಹೊಕ್ಕವರ ಕಾಯ್ದು ಪೊರೆಯುವಿರಿ ದಯದಿ ಪ. ಅರಿಯರು ಜಗದೊಳಗೆ ನರರು ನಿವಿ್ಮೂ ಮಹಿಮೆ ಕರಕರೆಪಡುತಿಹರು ಭವದೊಳಗೆ ಪರಮ ನಮ್ರತೆಯಿಂದ ಚರಣಕೆರಗಲು ಬಂದು ಉರುತರದ ಕಾರುಣ್ಯದಿಂದ ಪೊರೆಯುವಿರಿ 1 ಇಲ್ಲವೊ ಆಸೆ ಆಡಂಬರದ ದ್ರೌವ್ಯದಲಿ ಎಲ್ಲೆಲ್ಲಿ ನೊಡಲು ತತ್ವಬೋಧೆ ಉಲ್ಲಾಸದಿಂದ ಸಜ್ಜನರಿಗರುಹುತ ಮೋದ ಎಲ್ಲೆ ಕಾಣಿಸದಂಥ ಆನಂದವೀವ ಗುರು 2 ತಂದೆ ಮುದ್ದುಮೋಹನವಿಠ್ಠಲನೆಂದೆಂಬ ಬಹು ಚಂದದ ಅಂಕಿತದಿ ಜಗದಿ ಉದಿಸಿ ಮಂದರಿಗೆ ಸುಜ್ಞಾನ ತಂದು ರಕ್ಷಿಸುವಂಥ ಒಂದೊಂದು ಮಹಿಮೆಗಳ ಪೇಳಲೆನ್ನೊಶವೆ 2 ಅನಾದಿಯಿಂದಲಿ ಹೀನ ದೆಸೆಯೊಳಗಿದ್ದು ನಾನಾ ಜನ್ಮದಿ ಬಂದು ಕರ್ಮದಲಿ ತೊಳಲಿ ದೀನತ್ವವೈದುವ ಮಾನವನ ಕರುಣಿಸಿ ಸಾನುರಾಗದಿ ಹರಿಯ ಪದಕೆ ಸೇರಿಸುವಂಥ 3 ಸೃಷ್ಟಿ ಸ್ಥಿತಿ ಲಯಗಳಿಗೆ ಕರ್ತ ಹರಿ ಎಂತೆಂದು ಶ್ರೇಷ್ಠ ಕನಿಷ್ಠದ ಅರ್ಥ ತತ್ವ ತಿಳಿಸಿ ಕಷ್ಟ ಬಿಡಿಸುವ ಜಗತ್ಕರ್ತ ಒಬ್ಬನೆ ಹರಿಯು ಶ್ರೇಷ್ಠ ಶ್ರೀ ಗೋಪಾಲಕೃಷ್ಣವಿಠ್ಠಲನೆನುವ 5
--------------
ಅಂಬಾಬಾಯಿ
ಜಲಧಿ ಜಾತೆ ಬಾಲೆ ಸಾರಸಾಕ್ಷಿ ಮಂಗಳೆ ಹಾರನೂಪುರಾದಿ ಲೋಲೆ ಬಾರೆ ಕಮಲೆ ನಿರ್ಮಲೆ ಪ ರಾಜ ರಾಜ ಪೂಜಿತಾಂಘ್ರಿ ರಾಜಗೃಹ ನಿವಾಸಿನಿ ರಾಜಕಾಂತಿ ಕೋಮಲಾಂಗಿ ರಜಿಸೌ ಮಹಾತ್ಮಳೆ 1 ಮಂಗಳಾಂಗಿ ಭೃಂಗವೇಣಿ ಅಂಗನಾ ಶಿರೋಮಣಿ ಅಂಗಭವ ಸುಮಾತೆ ಪೊರೆಯೆ ಸಂಗತಾರ್ತಿಹಾರಿಣಿ 2 ದೀನನನ್ನು ನೋಡು ದಯದಿಂ ಸಾನುರಾಗದಿಂದಲಿ ಧೇನುನಗರ ಪಾಲಿನಿ ಶ್ರೀ ಮಾನಿನೀ ಹರಿಪ್ರಿಯೆ 3
--------------
ಬೇಟೆರಾಯ ದೀಕ್ಷಿತರು
ಜಾಗರ ಮಾಡಿದೆನೇ ಪ ಜಾಗರ ಮಾಡಿದೆ ಸಾಗರನಿಲಯನ ನೀಗದಮಹಿಮೆ ಶಿವ ಯೋಗದಿ ತಿಳಿಸೆಂದು ಅ.ಪ ಲಕ್ಷಪತ್ರರ್ಪಿಸಿ ತ್ರಿಜಗದ್ರಕ್ಷ ನಿನಗೆ ನಮಿಸಿ ಲಕ್ಷದಿಂದ ಸತಿಗಕ್ಷಯವಿತ್ತ ಭಕ್ತ ಪಕ್ಷನ ನಾಮ ಎನ್ನ ಕುಕ್ಷಿಗೆ ನೀಡೆಂದು 1 ಮನವನು ಮಡಿಮಾಡಿ ಹರಹರ ನಿನಗೆ ನಾ ಎಡೆಮಾಡಿ ಮನಸಿಜಜನಕನ ಘನಸಚ್ಚರಿತೆಯನ್ನು ಕೊನೆಯ ನಾಲಗೆ ಮೇಲೆ ನೆನವು ಸ್ಥಾಪಿಸೆಂದು 2 ಪ್ರೇಮ ದೃಷ್ಟಿ ತೆರೆದು ಶಂಭು ಎನ್ನ ಕಾಮಿತಗಳ ಕಡಿದು ಭೂಮಿಗಧಿಕ ಮಮಸ್ವಾಮಿ ಶ್ರೀರಾಮನ ಕೋಮಲ ಪಾದವೆನ್ನ ಮಂಡೆಮೇಲ್ಹೊರಿಸೆಂದು 3
--------------
ರಾಮದಾಸರು
ಜಾನಕಿರಾಮ ಜಾನಕಿರಾಮ ಪ ನೃತ್ಯವನಾಡೊ ವರಗಳ ನೀಡೋ 1 ವಾರಿಧಿ ಬಂಧ ವಸುದೇವ ಕಂದ ಸ್ವಾರಸ್ಯ ತಂದ ಸತ್ಕರುಣದಿಂದ 2 ಶಿರಿವಾಸ ಸಿರಿದೇವಿ ತೋಷ ಉದ್ಧವ ಘೋಷ3
--------------
ವಿಜಯದಾಸ
ಜಾಹ್ನವಿ ಜಗತ್ರಯ ಪಾವನಿ ಪ್ರಣತಕಾಮದೆ ಪದ್ಮಜಾಂಡ ಸಂಭೂತೆ ಪ ಸೃಷ್ಟೀಶ ಪದಜಾತೆ ವಿಶ್ವಮಂಗಳ ಮಹೋ ತ್ಕøಷ್ಟ ತೀರ್ಥಗಳೊಳುತ್ತಮಳೆನಿಸುವೇ ಕಷ್ಟವರ್ಜಿತವೆನಿಪ ತ್ರಿಪಥಗಾಮಿನಿ ದಯಾ ದೃಷ್ಟಿಯಿಂದಲಿ ನೋಡು ಪ್ರತಿದಿನದಿ ಎನ್ನಾ 1 ಕರ್ಮ ಸಾಕ್ಷಿಯೆನಿಸುತಿಹ ಅರ್ಕದೇವನು ಬಂದ ಸಮಯದಲ್ಲಿ ಶರ್ಕರಾಹ್ವರು ಸ್ನಾನಗೈಯೆ ದುರಿತಗಳು ಸಂ ಪರ್ಕವಾಗದ ತೆರದಿ ಸಂತೈಪೆ ದಯದಿ 2 ಕಾರುಣಿಕ ಬಹಿರಾವರಣದಿಂದ ನೀ ಪೊರಟು ವಾರಾಹಿಯೊಡಗೂಡಿ ಭಕ್ತಜನರ ಪ್ರಾರಬ್ಧ ಕರ್ಮಗಳನುಣಿಸಿ ಮುಕ್ತರನ ಮಾಳ್ಪೆ ದೂರಗೈಸುವೆ ಸಂಚಿತಾಗಾಮಿಗಳನೂ 3 ನಂದಿನೀ ನಳಿನಿ ಸುಸೀತಾ ಮಲಾಪಹರ ಳೆಂದ ಮಾತ್ರದಿ ಪುನೀತರನು ಮಾಳ್ಪೆ ಸಂದರುಶನ ಸ್ವರುಶನ ಸ್ನಾನಗಳ ಫಲ ಪು ರಂದರಾರ್ಯರೆ ಬಲ್ಲರಲ್ಪರು ಅರಿಯರು 4 ಮಾತೆ ವಿಜ್ಞಾಪಿಸುವೆ ಬಿನ್ನಪವ ಕೇಳು ಸಂ ಪ್ರೀತಿಯಿಂದಲಿ ಕರುಣಿಸೆನಗೆ ಇದನೆ ಶ್ರೋತವ್ಯ ವಕ್ತವ್ಯ ಮಂತವ್ಯ ಸ್ತವ್ಯ | ಜಗ ನ್ನಾಥ ವಿಠ್ಠಲನೊಬ್ಬನೆಂದು ತಿಳಿವಂತೇ5
--------------
ಜಗನ್ನಾಥದಾಸರು
ಜಿತಮನವ ನೀಡೆನಗೆ ಜಿಷ್ಣುಸಖನೆ ರತಿಪತಿಪಿತ ನಿನ್ನ ಹಿತದಿ ಭಜಿಸುವೆನೊ ಪ. ದುಷ್ಟ ಇಂದ್ರಿಯಗಳು ಕೆಟ್ಟ ವಿಷಯಗಳಲ್ಲಿ ಕಟ್ಟ್ಟೆ ಎನ್ನಯ ಮನವ ಸೆಳೆಯುತಿಹವೊ ಕೃಷ್ಣಮೂರುತಿ ನೀನೆ ದೃಷ್ಟಿಯಿಂದಲಿ ನೋಡಿ ಒಟ್ಟುಗೂಡಿಸಿ ನಿನ್ನ ಪಾದದಲ್ಲಿಡಿಸೊ 1 ಎಂಟು ಜನ ದುಷ್ಟರು ಆರು ಜನ ಕಳ್ಳರು ಕಂಟಕರಾಗಿನ್ನು ಕಾಡುತಿಹರೋ ಎಂಟುದಳಗಳಿಪ್ಪ ನೆಂಟರೆನಗಾಗರೊ ಎಂಟೆರಡು ಇಂದ್ರಿಯವ ಬಂಧನದೊಳಿರಿಸೊ 2 ಮೂರು ತಾಪಗಳಿಂದ ಮೂರು ಗುಣದೊಳು ತಿರುಗಿ ಮೂರು ಮಾರ್ಗವ ಕಾಣೆ ಮುರವೈರಿಯೆ ಮೂರು ಅವಸ್ಥೆಗಳ ವಿವರವರಿಯದ ಎನಗೆ ದಾರಿ ತೋರಿ ಸಲಹೊ ಕಾರುಣ್ಯನಿಧಿಯೆ 3 ಡಿಂಬ ಮಧ್ಯದಲಿರುವ ಅಂಬರದಲಿ ನಿನ್ನ ಬಿಂಬರೂಪವ ತೋರೊ ಶಂಭು ಸಖನೆ ಅಂಬುಜನಾಭ ಎಪ್ಪತ್ತೆರಡು ಸಾಹಸ್ರ ತುಂಬಿದ ನಾಡಿಯೊಳು ರೂಪಗಳ ತೋರೊ4 ಮನದಲ್ಲಿ ನೆಲಸಿಹನೆ ಮನುಶಬ್ದವಾಚ್ಯನೆ ಮನದಿಂದ ಭಿನ್ನನೆ ಮನಪ್ರೇರಕ ಮನವ ನಿನ್ನಲಿ ನಿಲಿಸಿ ಅನುಗಾಲ ಸಲಹುವುದು ಚಿನುಮಯನೆ ಗೋಪಾಲಕೃಷ್ಣವಿಠ್ಠಲನೆ 5
--------------
ಅಂಬಾಬಾಯಿ
ಜೀವನ್ಮುಕ್ತನೆ ಇದ ಮಾಡು ನಿನಗುಂಟೆ ಜೋಡುದಿವಸದಿಂದಲಿ ದೃಢನಾಗಿ ಸಾಧಿಸುಕೇವಲ ಶಿವನೀನಾಗುವಿ ಆಗುವಿ ಪ ಏರಿಸು ವಾಯುವನು ಏರಿಸಿದ ಬಳಿಕಪೂರಿಸು ಕುಂಭವನು ಘಳಿಗಿಂತಿರಲಲ್ಲಿಭೇರಿಯ ಕಹಳಾರವ ಮೃದಂಗವಸಾರಿಯೆ ಕೇಳುತ ಶ್ರಮವನು ಹರಿಸುತ 1 ಆರು ನೆಲೆಗೆ ಮುಟ್ಟಿನಿಲ್ಲು ನಿಂತ ಬಳಿಕಕಾರಣ ಮೃಡನಾಳಪೊಕ್ಕು ಮರವೆಂದು ಕಳೆದಿಕ್ಕುವಾರಿಯಮೃತಧಾರೆ ತ್ರಿವೇಣಿಯಸಾರಸನದಿಯಲಿ ಮುಳುಗುತ ಮುಳುಗುತ 2 ಚಂದ್ರಮಂಡಲ ಎದುರಲಿ ಇರಲು ನೋಡುತಲಿಮುಂದೆ ಜೋತಿರ್ಮಯವಿರಲು ಬ್ರಹ್ಮವೆ ತಾನಿರಲುಇಂದ್ರಾದಿಗಳಿಗಳವಡದಿಹ ಸ್ಥಾನವಾನಂದದೆ ಎರೈ ಗುರು ಕೃಪೆಯಿಂದಲಿ 3 ಕರ್ಮ ಅವಿದ್ಯೆಯನುಳಿದುತಾಮರ ಸಾಧಿಪ ನಂದದಿ ಬೆಳಗುತ4 ನಿತ್ಯ ಆಗುವುದು ತಥ್ಯಾಯೋಗಿ ಜನಕೆ ಇದು ಪಥ್ಯಾ ಸತ್ಯವಿದು ಸತ್ಯಭೋಗೈಶ್ವರ್ಯದ ಮುಕ್ತಿಗಧಿಪತಿಯಾಗು ಚಿದಾನಂದ ಗುರು ನೀನಾಗಿಯೆ5
--------------
ಚಿದಾನಂದ ಅವಧೂತರು
ಜೈ ತಿರುಪತಿ ವೆಂಕಟರಮಣ ಕಿಂಕರಜನ ಮಹ ಸಂಕಟಹರ ಜೈ ಪ ಶಂಖಚಕ್ರಧರ ಮಂಕುದಾನವಹರ ಪಂಕಜಪಾಣಿಯಕಳಂಕ ಮಹಿಮ ಜೈ 1 ಸೃಷ್ಟಿಮೇಲೆ ಪ್ರತಿಷ್ಠನಾಗಿ ಮಹ ಬೆಟ್ಟವ ಭೂವೈಕುಂಠವೆನಿಸಿದಿ ಜೈ 2 ತಪ್ಪದೆ ಭಕುತರಿಂ ಕಪ್ಪಗೊಳ್ಳುತ ನೀ ಅಪ್ಪಿಕೊಂಡಿರಿವೀ ಅಪ್ಪ ತಿಮ್ಮಪ್ಪ ಜೈ 3 ಕೋಟಿ ಕೋಟಿ ಮಹತ್ವ ಸಾಟಿಗಾಣದೆ ತೋರಿ ಆಟವಾಡುವಿ ಜಗನಾಟಗಾರನೆ ಜೈ 4 ಕಪ್ಪು ವರ್ಣದಿಂದೊಪ್ಪುವಿ ಸಿರಿಯಿಂ ದಪ್ಪಿಕೋ ದಯದೆನ್ನಪ್ಪ ಮುರಾರಿ ಜೈ 5 ಬೇಡಿದ ವರಗಳ ನೀಡಿದೆ ದಯದಿ ಹರಿ ಗಾಢಮಹಿಮೆ ಇಹ್ಯನಾಡಿಗರುಹಿದಿ ಜೈ 6 ಕೋರಿದವರ ಮನಸಾರ ವರವನೀಡಿ ಧಾರುಣಿಯಾಳಿದ್ಯಪಾರ ಮಹಿಮ ಜೈ 7 ಲಕ್ಷ್ಮೀಸಮೇತನಾಗಿ ಲಕ್ಷ್ಯದಿಂ ಮೂಲೋಕ ಕುಕ್ಷಿಯೋಳ್ ಧರಿಸಿ ನೀ ರಕ್ಷಿಸಿದೆ ಜೈ 8 ಭಕ್ತವತ್ಸಲ ನಿನ್ನ ಭಕ್ತನೆನಿಸಿ ಎನಗೆ ಕರ್ತು ಶ್ರೀರಾಮ ಜೈ 9
--------------
ರಾಮದಾಸರು
ಜೋ ಜೋ ಜೋ ಜೋ ಎನ್ನಿ ನಿರ್ವಿಕಾರಗೆಜೋ ಎಂದು ತೂಗಿರಿ ಚಿದಾನಂದ ದೊರೆಗೆ ಪ ಚಿದ್ಬಯಲಿನೊಳು ಹೃದಯ ತೊಟ್ಟಿಲ ಮಾಡಿಬದ್ಧ ವೇದಾಂತದ ನೇಣ ಬಿಗಿದುಸದ್ಭಾವವೆಂಬ ಹಾಸಿಗೆಯ ಹಾಸಿಶುದ್ಧಾತ್ಮನನು ಭಾವದಿ ತಂದು ನೀಡಿ 1 ಅದ್ವೈತವೆಂಬ ಆಭರಣ ತೊಡಿಸಿಸಿದ್ಧ ಭೂಮಿಕೆ ಎಂಬ ಅಡವನಿಡಿಸಿಬುದ್ಧಿ ನಿರ್ಮಳವಾದ ತಲೆದಿಂಬನಿಡಿಸಿನಿದ್ದೆ ಮಾಡೋ ಬ್ರಹ್ಮಾನಂದ ಬೋಧದಲಿ 2 ಚಿತ್ಪ್ರಭೆಯ ದೀಪವನು ಎಡಬಲದಿ ಹಚ್ಚಿಮೊತ್ತವಹ ದಶನಾದ ಭೇರಿಯರವ ಹಚ್ಚಿಮತ್ತೆ ಓಂಕಾರ ಮಂತ್ರ ಘೋಷದಿ ಮುಚ್ಚಿನಿತ್ಯಾತ್ಮನನು ನೋಡಿ ಹರುಷ ತುಂಬುತಲಿ 3 ವಸ್ತು ಸಾಕ್ಷಾತ್ತೆಂಬ ಮುತ್ತೈದೆಯರೆಲ್ಲಸ್ವಸ್ಥ ಚಿತ್ತೆಂಬುದನೆ ಸಿಂಗರಿಸಿಕೊಂಡುನಿಸ್ಸಂಗನಹ ಆತ್ಮ ಶಿಶುವನೊಡತಂದುಸುಸ್ವರದ ನಾದದಲಿ ಜೋಗುಳವ ಪಾಡುತಲಿ 4 ಜೋ ಜೋ ಕಾಮಸ್ತಂಭವ ಎನ್ನಿ ನರರೆಲ್ಲಜೋ ಜೋ ಕ್ರೋಧ ಸ್ತಂಭನ ಎನ್ನಿ ನರರೆಲ್ಲಜೋ ಜೋ ಮೋಹ ಸ್ತಂಭನ ಎನ್ನಿ ನರರೆಲ್ಲಜೋ ಜೋ ವಿಷಯ ಸ್ತಂಭನ ಎನ್ನಿ ನರರೆಲ್ಲ5 ಜೋ ಜೋ ಯಮನಿಯಮಾಸನ ಅರುಹಿದವನೆಜೋ ಜೋ ಜೋ ಜೋ ಖೇಚರ ಮುದ್ರೆ ನಿಲಿಸಿದವನೆಜೋ ಜೋ ಜೋ ಜೋ ಅವಿದ್ಯೆ ಖಂಡಿಸಿದವನೆಜೋ ಜೋ ಜೋ ಜೋ ಜೀವನ್ಮುಕ್ತಿದಾತನೆ 6 ಜೋ ಜೋ ಪರಮಾರೂಢನೆ ಪರಮೇಶಜೋ ಜೋ ಪರಮ ಪರೇಶನೆ ಪಂಡಿತಜೋ ಜೋ ನಿರುತ ವಸ್ತು ವ್ಯಕ್ತ ಅವ್ಯಕ್ತಜೋ ಜೋ ಶರಣ ರಕ್ಷಕ ರಾಜ ಯೋಗೀಂದ್ರ ಜೋ ಜೋ 7 ಸತ್ಯ ಸನಾಥ ವಿಶ್ವೋತ್ಪತ್ತಿ ಜೋ ಜೋಪ್ರತ್ಯಗಾತುಮ ಪರಬ್ರಹ್ಮನೆ ಜೋ ಜೋನಿತ್ಯ ಸಹಜಾನಂದ ಚಿನ್ಮಾತೃ ಜೋ ಜೋಭಕ್ತರ ಭಂಡಾರಿ ಭಾಗ್ಯನೆ ಜೋ ಜೋ 8 ಮಿಹಿರ ಶತಕಳೆಯೆಂಬ ಮಂತ್ರಪುಷ್ಪವ ಚೆಲ್ಲಿಮಹಾ ಬೆಳಕಿನ ಮಂಗಳಾರತಿಯ ಬೆಳಗುತಲ್ಲಿಅಚಲ ಸಮಾಧಿಯೆ ಆದ ಯೋಗನಿದ್ರೆಯಲಿಮಹಾ ಚಿದಾನಂದಾವಧೂತ ಮಲಗಿರು ಸುಖದಲ್ಲಿ 9
--------------
ಚಿದಾನಂದ ಅವಧೂತರು