ಒಟ್ಟು 2545 ಕಡೆಗಳಲ್ಲಿ , 113 ದಾಸರು , 1936 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾನವ ಪ ಸ್ಮರಿಸಿ ಜೀವಿಸು ರಂಗವಲಿದ ದಾಸರ ಪಾದ ಶರಧಿ ಚಂದಿರನಾದ ಮೊರೆ ಹೊಕ್ಕ ಶರಣಘುಕರಿಗೆ ಕೇಸರಿಯಾದ ಪರಮ ಸಾಧು ಸಹ್ಲಾದ ಅ.ಪ ತರಣಿ ತನಯನ ಸೂತ ಪುರಂದರಾರ್ಯರ ಗೃಹದಿ ತರಳನೆಂದೆನಿಸಿದಾತ ಮರುತ ದೇವನ ಪದಕೆ ಬರುವ ಯತಿಗಳ ದೂತ ವರದೇಂದ್ರ ತೀರ್ಥರಿಗೆ ಪ್ರೀತ || ಗುರುಧೇನು ಪಾಲ ವಿಜಯ ದಾಸವರ್ಯರ ಮಮತ ಭರಿತನಾಗುತ ಪೋಗಿ ಹರಿಣಾಂಕ ಭಾಗದಲಿ ತ್ವರಿತ ಸಿರಿ ಜಗನ್ನಾಥ ವಿಠಲಾಂಕಿತ ಪಡೆದಾತ ನಮಗೀತ ಗತಿ ಪ್ರದಾತ 1 ದುರಿತ ವಿದೂರ ಮೂರ್ಹತ್ತು ಶರಯುಗ್ಮ ಗ್ರಂಥಗಳ ಸುವಿಚಾರ ತೋರಿ ಬರುತಿಹ ದಿವ್ಯ ಹರಿಕಥಾಮೃತಸಾರ ಸಾರಿದಂಥ ಸುಧೀರ || ಕಾರುಣ್ಯದಲಿ ಪೊರೆವ ಧರಣಿಸುರ ಪರಿವಾರ ಸುಜನ ಕೋರಿಕೆಯ ಮಂದಾರ ಭೂರುಹದ ತೆರದಿ ಘುನ ಸೂರೆ ಕೊಡುವನುದಾರ ದುರಿತವಿಪಿನ ಕುಠಾರ 2 ಇವರ ಕವನ ಪಠಣ ಶ್ರವಣ ಮನನಗಳಿಂದ ಲವಕೇಶವಾಗದು ಜವನ ಭವನದ ಬಂಧ ಅವಿವೇಕತಮದಿ ವರಚರಿತೆ ತಿಳಿಯದೆ ನಿಂದೆ ಗೈದ ಮನಜ ದಿವಾಂಧ | ಭುವನದೊಳು ಬೆಳಗುತಿಹ ಇವರ ಮಹಿಮಾನಂದ ವಿವರಿಸಲು ಎನಗೊಶವೆ ಅವನಿಯೊಳು ನಾ ಮಂದ ಇವರ ಸನ್ನಿಧಿಯಲ್ಲಿ ಸಕಲ ನದಿಗಳ ವೃಂದ ನೆಲಸಿಹವು ನಲವಿಂದ 3 ಮೆರೆವ ಮಾನವಿ ಪುರದಿ ಇರುವ ಸ್ತಂಭದಿ ಜಾಣ ಎರಡೆರಡು ಸಚ್ಛಾಸ್ತ್ರವರಿತ ಘನ್ನ ಪ್ರವೀಣ ಪರವಾದಿಗಳ ವಾಗ್ಧುರದಿ ಗೆದ್ದ ಧುರೀಣ ಹರಿಗೆ ಪಂಚಪ್ರಾಣ || ಅರುಹಲೇನಿವರ ಚರಣನಂಬಿದ ಸುಜನ ಪರಮಭಾಗವತರೆನಿಸಿ ನಿರುತ ಹರಿಪದ ಧ್ಯಾನ ಪರರಾಗಿ ಮೆಟುತಲಿ ಮುಕುತಿಪಥ ಸೋಪಾನ ಸೇರಿದರು ನಿಜ ಸ್ಥಾನ 4 ಶಾಮಸುಂದರ ವಿಠಲ ಸ್ವಾಮಿಗತಿ ಪ್ರಿಯದಾಸ ಶ್ರೀಮದಕ್ಷತೆ ಗಂಧ ನಾಮದ್ವಾದಶ ಭೂಷ ತಿಮಿರ ದಿನೇಶ ಭೂಮಿ ವಿಬುಧರ ಪೋಷ || ಈ ಮಹಾತ್ಮರ ಚಾರುಧವಲಕೀರ್ತಿಪ್ರಕಾಶ ಸೋಮಸುಪ್ರಭೆಯಂತೆ ಪಸರಿಸುತÀ ಸಕಲದೇಶ ಸುಜನ ಕುಮುದ ವಿಕಾಸ ಗೊಳಿಸಿಗರೆದುದುಲ್ಹಾಸ 5
--------------
ಶಾಮಸುಂದರ ವಿಠಲ
ಮಾನವನಾದ ಮ್ಯಾಲ ತಾನಾರೆಂದರಿಯಬೇಕು ಪ ಅನುಭವಿಗಳ ಕಂಡೆರಗಲಿಬೇಕು | ತನುಮನದಲಿ ನಿಷ್ಠೆಯು ಬಂದಿರಬೇಕು | ತನು ಧನ ಮದದಲಿ ಹೊರತಾಗಿರಬೇಕು | ಉಣಲುಡುವಲಿ ಹರಿಯಚ್ಚರಬೇಕು 1 ಎಲ್ಲಿಂದ ಧರೆಯೊಳು ಜನ್ಮಕ ಬಂದೇ | ಇಲ್ಲ್ಲಿಂದ ಪಯಣವು ಎಲ್ಲಿಗೆ ಮುಂದೇ | ಎಲ್ಲ ವಿಚಾರಿಸು ಗುರು ಮುಖದಿಂದಾ | ಫುಲ್ಲನಾಭನೆ ಸೇರಿ ಬದುಕಬೇಕೆಂದ 2 ತನ್ನ ತಾ ಮರೆದು ನೀ ತಿರುಗಲಿ ಬೇಡಾ | ಅನ್ಯರ ನಿಂದ್ಯಪಸ್ತುತಿ ಮಾಡಬೇಡಾ | ಚನ್ನಾಗಿ ಶಾಂತಿಯ ನೆಲೆಬಲಿ ಬೇಡಾ | ಕಣ್ಣಿದ್ದು ಕುರುಡ ನೀನಾಗಲಿ ಬೇಡಾ 3 ಏನು ತೋರುವದೆಲ್ಲಾ ಹರಿಯಾಜ್ಞೆದೆಂದು | ನಾನೇನು ಕರ್ತನಲ್ಲಿದಕೆಂದು | ಅನುಭವದಲಿ ಸಮದೃಷ್ಠಿಗೆ ಬಂದು | ಘನ ಗುರು ಪಾದಕ ಭಾವದಿ ಹೊಂದು 4 ಹೊತ್ತು ಹೋಗದ ಮಾತ ನಾಡಲೀ ಬೇಡಾ | ಮುತ್ತಿನಂಥಾ ಜನ್ಮ ದೊರಿಯದುಗಡಾ | ಸತ್ಯಜ್ಞಾನಾಮೃತ ನುಂಡವ ಪ್ರೌಢಾ | ಕರ್ತ ಮಹಿಪತಿ ಸುತ ಸುರಿದ ನೋಡಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಾನವಿ ದಾಸರ | ನಿ ಸೇರೋಹೀನ ಮನುಜ ನಿನ್ನಘವನೆ ನೀಗುವ ಪ ಕೃತ ಯುಗದಲಿ ಹಿರಣ್ಯಜನೆನಿಸೀವಿತತ ಮಹಿಮ ಹರಿಯನೆ ಭಜಿಸೀ ||ಸತತದಿ ಸುಜನರ ಸಂತವಿಸಿ ಸಿರಿಪತಿಯ ಸೇವಿಸೆ ಸಹ್ಲಾದ ನೆನಿಸಿದಾ 1 ಎರಡೊಂದ್ಯು ಯುಗದಲಿ ಶಲ್ಯನಾಗಿ ಜನಿಸೀಕುರುಪಗೆ ಋಣರೂಪ ಸೇವೆ ಸಲಿಸಿ ||ಉರುತರ ಭಕುತಿಲಿ ಶೌರಿಯ ನೆನೆಯುತಹರಿಪದ ಸೇರಿದ ನೃಪಕುಲ ಮೌಳೀ 2 ವರಕಲಿಯಲಿ ದ್ವಿಜನಾಗವತರಿಸೀನರಮೃಗಾಖ್ಯಸುತ ಶ್ರೀನಿವಾಸನೆನಿಸೀ ||ವರದೇಂದ್ರ ಯತಿಯಲಿ ತರ್ಕವ ಕಲಿತುದುರುಳರ ಮುರಿದತಿ ಗರ್ವದಿ ಮೆರೆದಾ 3 ಭೃಗ್ವಂಶಜ ವಿಜಯಾಖ್ಯ ದಾಸ ಬಂಧೂಋಗ್ವಿನುತನ ಪ್ರಾಕೃತದೊಳು ಪಾಡೆ ||ದಿಗ್ಗಜ ಗರ್ವದಿ ಗೆಜ್ಜೆಯ ಕಟ್ಟಿದಅಗ್ಗದ ನಟನಿವನೆನುತಲಿ ಜರೆದಾ 4 ದಾಸರ ನಿಂದ್ಯದಿ ಬಂದುದು ಅಪಮೃತ್ಯುದೋಷನೀಗೆ ಗೋಪಾಲರ ಭಜಿಸೆನ್ನ ||ಔಷಧ ಪೇಳಲು ದಾಸರ ನಾಲ್ದಶವರ್ಷಾಯುಷ್ಯವ ಪೊಂದಿದವರನಾ5 ಇಂದು ಭಾಗದಲಾನಂದದಿ ಮೀಯೇಬಂದೊದಗಿತು ಜಗನ್ನಾಥ ನಾಮಾ ||ಪೊಂದುತ ಅಂಕಿತ ಕುಣಿಯುತ ಪಾಡುತಇಂದಿರೆಯರಸನ ಛಂದದಿ ತುತಿಸಿದ 6 ಪಾವನತರ ಹರಿಕಥೆ ಸುಧೆ ರಚಿಸೀಪವನ ಮತದವರನ್ನುತ್ತರಿಸೀ ||ಪವನನ ಹೃತ್ಕಂಜದಿ ನೆಲೆಸಿಹ ಗುರುಗೋವಿಂದ ವಿಠಲ ಪದಾಬ್ಜವ ಸೇರಿದ 7
--------------
ಗುರುಗೋವಿಂದವಿಠಲರು
ಮಾನಸ ಪೂಜೆಯನು ಮಾಡು | ಧ್ಯಾನ ಪೂರ್ವದಿಂದ ಕುಳಿತು ಪ ಜ್ಞಾನ ಭಕುತಿಯ ವಿಡಿದು ಲಕುಮಿ | ಪ್ರಾಣನಾಥನ ಪ್ರೇರಣೆಯಿಂದ ಅ.ಪ ಕಾಮ ಕ್ರೋಧವ ಹಳಿದು ವಿಷಾದವೆಂಬೋ | ಸ್ತೋಮಗಳನು ತೊರೆದು ರಜೋ ಮೊದಲಾದ || ತಾಮಸದ ಬುದ್ಧಿ ಬಿಟ್ಟು ನೇಮನಿತ್ಯ ತೀರಿಸಿಕೊಂಡು | ಈ ಮನಸ್ಸು ಇಟ್ಟು 1 ಹೃದಯ ಪದುಮದೊಳಗೆ ಹರಿಯ ಪದುಮ ಪದಗಳಿಟ್ಟು | ದೇಹ ಕದಲದಂತೆ ಇದ್ದು ಜ್ಞಾನ ಉದಿತವಾದ ದೃಷ್ಟಿಯ || ಹದುಳದಿಂದ ತಿಳಿದು ಅಂತರವೆಲ್ಲವನು ನೋಡಿ | ಕದವ ತೆರೆದು ಕೊಟ್ಟ ಮುದದಿ ದೃಢವ ಸಂಪಾದಿಸಿ2 ನೀಲ ರತುನದಂತೆ ಹೊಳೆವ ಪಾಲಸಾಗರತನುಜೆ | ಮೇಲು ಮಂಗಳರಮಣನಾದ ಮೇಲುಗಿರಿಯ ತಿಮ್ಮನ || ತವಕ ಬೀಳದಲೆ ಪೂಜೆ ವಿಧಾ | ಸಾಲುಗಳನು ತಿಳಿದು ವಿಶಾಲ ಬುದ್ಧಿ ಯುಕುತಿಯಿಂದ 3 ವೇದ ಮಂತ್ರಗಳನು ಪೇಳಿ ಆದಿಯಲ್ಲಿ ಪೀಠಪೂಜೆ- | ಯಾದ ತರುವಾಯ ವಿನೋದದಿಂದಲಾವರಣ || ಆದರಣೆಯಿಂದ ಬಳಿಕ ಮಾಧÀವರಿಗೆ ಸಕಲ ಭೂಷ- | ಣಾದಿಗಳನು ರಚಿಸಿ ಪುಣ್ಯಹಾದಿಯನು ತಪ್ಪದೆ 4 ದೋಷರಾಶಿಗೆ ದ್ವೇಷನಾಗಿ ಈ ಶರೀರವÀ ಘಾಸಿಮಾಡದೆ | ಪಾದ || ಲೇಸಿನಿಂದ ಭಜನೆಗೈದು ವಾಸವಾಗು ಪದದಲ್ಲಿ | ಶ್ರೀಶ ವಿಜಯವಿಠ್ಠಲರನ್ನ ದಾಸ-ದಾಸರ ದಾಸನೆಂದು5
--------------
ವಿಜಯದಾಸ
ಮಾನಿಸರಿಗೊಶವಲ್ಲ ಪೊಗಳಿ ಪೇಳುವುದು ಪ ಮೇಧಾದಿ ಮುನಿ ತನ್ನ ತಪೋಸಿದ್ಧಿಗೆ ಸರ್ವ | ಮೇದಿನಿ ತಿರುಗಿ ಬರುತಲಿ ಇತ್ತಲು | ಸಾಧನಕೆ ಸೌಮ್ಯವಾದ ಭೂಮಿಯನು ನೋಡಿ ಇವ | ಮಣಿ ಮುಕ್ತಿ ತೀರದಲಿ1 ನೆಸಗಿದ ತಪಕೆ ಮೆಚ್ಚಿ ಹರಿ ಒಲಿದ ತೀವ್ರದಲಿ | ಬಿಸಿಜದಳ ಲೋಚನೆ ಲಕುಮಿಯಿಲ್ಲೀ || ಎಸೆವ ಮಂಜರಿ ವೃಕ್ಷದಲಿ ವಾಸವಾಗಿ | ವಸುಧಿಯೊಳು ವಾಸವಾಗಿ ಅಗ್ರದಲಿ ಮೆರೆದನು 2 ಪರಮೇಷ್ಠಿ ಬಂದು ಈ ಕ್ಷೇತ್ರದಲಿ ನಿಂದು ಚ ಪರಮ ಗತಿ ಕೊಡು ಎಂದು ಸ್ತುತಿಸಿದನು ಹರಿಯ3 ಇಲ್ಲಿಗೆ ಬಂದು ಸತ್ಕರ್ಮವನು ಮಾಡಿದಡೆ | ಎಲ್ಲ ಕ್ಷೇತ್ರದಲಿ ಮಾಡಿದ ಫಲಕಿಂತ | ಎಳ್ಳಿನಿತು ಮಿಗಿಲೆನಿಸಿ ಪುಣ್ಯ ತಂ | ದುಣಿಸುವುದು | ಎಲ್ಲೆಲ್ಲಿ ಇದ್ದರು ಸ್ಮರಣೆ ಮಾಡಿರೊ ಜನರು 4 ಸುಗಂಧ ಪರ್ವತವಾಸ ಪುರುಷೋತ್ತಮ | ನಿಗಮಾದಿಗಳಿಗೆ ಅತಿದೂರತರನೋ | ಸುಗುಣನಿಧಿ ವಿಜಯವಿಠ್ಠಲರೇಯ ಸರ್ವದ | ಗಗನದಲಿ ಪೊಳೆವನು ಬ್ರಹ್ಮಾದಿಗಳ ಸಹಿತಾ 5
--------------
ವಿಜಯದಾಸ
ಮಾಯ ಮೋಹಿಗಳಿಗೆಲ್ಲ ಭವಬಂಧಳಿಯುವುದೇ ಕಾಯ ಶುದ್ಧಲ್ಲದವಗೆ ಕರ್ಮಬಂಧ್ಹರಿಯುವುದೇ ಪ ಮುಣುಗು ಕಲಿತಿರುವನು ದಣಿವಿನಿಂ ಮುಕ್ತಹನೆ ಕುಣಿತಕಲಿತಿರುವವ ಮನದಿ ನಾಚುವನೆ ಒನಪು ಕಲಿತಿರುವಗೆ ಮನಸಿಜ ದೂರನೆ ಮನೆಮನೆ ತಿರುಗುವನು ಘನತೆಗೆ ಬಹನೆ 1 ಪಾದ ತಾಡಣೆಯು ತಪ್ಪುವುದೆ ಕೇಡುಗಾರಿಗೆ ಸುಖದ ಜಾಡು ತಿಳಿಯುವುದೆ ಕಾಡಡವಿಲಿರುವವಗೆ ರೂಢಿಯ ಸುದ್ದಿಹುದೆ ನಾಡ ಮಾತಾಡುವಗೆ ಕೇಡು ತಪ್ಪುವುದೆ 2 ನಿಂದಕಗೆ ಮುಂದಿನ್ನು ಹಂದಿಜನ್ಮ ತಪ್ಪುವುದೆ ಛಂದಸ್ಸರಿಯದವಗೆ ಕವಿತದಂದ ತಿಳಿಯುವುದೆ ಮಂದಿಗೋಷ್ಠಿಗ್ಹೋಗುವಗೆ ಕುಂದೊದಗದಿರುತಿಹ್ಯದೆ ತಂದೆತಾಯನ್ಹಳಿಯುವಗೆ ಬಂಧ ತಪ್ಪುವುದೆ 3 ಮೋಸಕಾರಿಗೆಮಶಾಪವು ತಪ್ಪುವುದೆ ಆಶಕಾರಿಗೆ ಮಹನಾಶ ಬಿಡುತಿಹ್ಯದೆ ದೇಶದೇಶ ತಿರುಗುವಗೆ ಘಾಸಿಯು ತಪ್ಪುವುದೆ ದಾಸಜನ ದೂಷಕಗೆ ಈಶನೊಲಿಮಿಹ್ಯದೆ 4 ಸುಗುಡಿಗೆ ಪತಿಸರಸ ಸೊಗಸಾಗಿ ಕಾಣುವುದೆ ಜಗಳಗಂಟಿಗೆ ವ್ರತದ ಬಗೆಯುಶೋಭಿಪುದೆ ಸುಗುಣೆಯರೊಡನಾಟ ಷಂಡನಿಗೆ ಸಲ್ಲುವುದೆ ಸುಗುಣ ಸಂಗಿಲ್ಲದೆ ನರಕ ಭುಗಿಲು ತಪ್ಪುವುದೆ 5 ಕಪಟತ್ವ ನೀಗದೆ ತಪವೃದ್ದಿಯಾಗುವುದೆ ಕೃಪಣತ್ವ ಬಿಡದವಗೆ ತಾಪತ್ರಳಿಯುವುದೆ ಜಪವಿಲ್ಲದೆ ವಿನಾ ಸುಫಲದೊರಕುವುದೆ ಗುಪಿತವನು ತಿಳಿಯದವಗಪರೋಕ್ಷವಿಹ್ಯದೆ 6 ಮಾನವನ ಗುಣರಿಯದೆ ಜ್ಞಾನ ಸ್ಥಿರವಾಹುದೆ ಜ್ಞಾನವಿಲ್ಲದೆ ಬೇರೆ ಧ್ಯಾನ ಸಿದ್ದಿಪುದೆ ದೀನನಾಥ ಮಮ ಪ್ರಾಣೇಶ ಶ್ರೀರಾಮನಡಿ ಖೂನವರಿಯದೆ ಮುಕ್ತಿ ಜಾಣೆ ಸುಖಬಹುದೆ 7
--------------
ರಾಮದಾಸರು
ಮಾಯಾ ಜಯಕೃತಿಗೆ ಮಂಗಳಂ ಶಾಂತಿ ಸ್ವರೂಪಳಿಗೆ ಮಂಗಳಂ ಭಕ್ತರ ಕಂಗಳಿಂದಲಿ ನೋಡಿ ರಂಗನ ಪಾದವ ತೋರ್ವಳಿಗೆ ಪ. ಮಂಗಳಂ ಜಯ ಮಂಗಳಂ ಅ.ಪ. ಅಲ್ಲಿ ವೈಕುಂಠದೊಳಗೆ ಇರಲು ಬಲ್ಲಿದ ಭೃಗು ಋಷಿ ತಾ ಬರಲು ವಲ್ಲಭನ ವಕ್ಷಸ್ಥಳ ಒದೆಯಲು ಹರಿ ಸೊಲ್ಲು ಕೇಳದೆ ಓಡಿ ಬಂದಳಿಗೆ 1 ಕೊಲ್ಲಾಪುರದಲಿ ನಿಂದಳಿಗೆ ಎಲ್ಲರಭೀಷ್ಟವ ಸಲಿಪಳಿಗೆ ಖುಲ್ಲರ ಮರ್ಧಿಪ ಹರಿಯ ವಕ್ಷಸ್ಥಳ ದಲ್ಲಿ ಸದಾ ನೆಲಸಿರ್ಪಳಿಗೆ 2 ಶ್ರೀ ಜಯದೇವಿಗೆ ಶ್ರೀ ಲಕ್ಷ್ಮಿಗೆ ಶ್ರೀ ರುಕ್ಮಿಣೀ ಸತ್ಯಭಾಮಳಿಗೆ ಶ್ರೀ ಪದ್ಮಾವತಿ ನಾಮಕ ನಾನಾರೂಪ ಗುಣಾನ್ವಿತೆಗೆ 3 ಮುಕ್ತಾಮುಕ್ತರಿಗೊಡೆಯಳಿಗೆ ಮುಕ್ತಿಯ ಭಕ್ತರಿಗೀವಳಿಗೆ ಮುಕ್ತಳೆನಿಸಿ ಮುಕ್ತಾಶ್ರಯನಿಗೆ ಆ- ಸಕ್ತಿಯಿಂದ ಸೇವೆ ಮಾಳ್ಪಳಿಗೆ 4 ಗೋಪಾಲಕೃಷ್ಣವಿಠ್ಠಲನ ಆಪಾದ ಮೌಳಿಯ ಗುಣಗಳನು ತಾ ಪರಿಪರಿಯಿಂದ ವರ್ಣಿಸುತ್ತಿದ್ದರು ಅಪಾರವಾಗಿಯೆ ಕಾಂಬಳಿಗೆ 5
--------------
ಅಂಬಾಬಾಯಿ
ಮಾಯೆ ಮುಟ್ಟದಿರೆನ್ನನು ನಿನ್ನಯ ಮೂರುಕಾಯಾಭಿಮಾನವೆನಿಸುವ ಮೈಲಿಗೆಯನು ಹೇಯವಿದೆಂದು ಬಿಟ್ಟರಿಕೆಯ ಮಡಿಯುಟ್ಟೆಬಾಯ ಹೊೈುಸುವೆನಿನ್ನು ತಪ್ಪಿದೆಯಾದರೆ ಪಧೀರತನದಿ ಸದಸದ್ವಿವೇಕವ ತೊಟ್ಟು | ಸಾರಿ ಧನಾದಿ ಭೋಗಗಳ ಬಿಟ್ಟುಸಾರವಲ್ಲೆಂದು ಸ್ವರ್ಗಾದಿ ಸುಖಂಗಳ | ಮೀರಿದ ವಿರತನು ನಾನೆಂದೆನಲ್ಲದೆ ನಿನ್ನನಾರಿಯಬೇಕೆಂದೆನೆ ವಿಷಯವಿ | ಕಾರದೊಳ್ಬಳಿಸಂದೆನೆ ಧ್ಯಾನ ಸಾಧನಕಾರವೆ ಸಾಕೆಂದೆನೆ ಕಲ್ಪಿತವಾದ ಘೋರ ಸಂಸಾರವಸಾರವೆಂದೆನಲ್ಲದೆ 1ಶಮೆುಂದ ಚಿತ್ತ ವಿಕ್ಷೇಪವ ತೊಲಯ | ದಯೆುಂದಿಂದ್ರಿಯಗಳ ತಗ್ಗಿಸಿಕ್ರಮದಿಂ ತಿತಿಕ್ಷೆುಂ ಸಹನವ ಮಾಡಿ | ಯಮಿತೋಪರಮದಲಗ್ಗಳನೆಂದೆನಲ್ಲದೆಸಮತೆುಲ್ಲದೆ ಬಂದೆನೆ ತನು ಭೋಗ | ಮಮತೆಯೊಳಗೆ ನಿಂದೆನೆ ವಿಘ್ನವಿಕ್ರಮಕೊಳಗಾದೆನೆಂದೆನೆ ವೇದಾಂತೋಪಕ್ರಮವೆನ್ನೊಳಾುತೆಂದು ವಿವರಿಸಿದೆನಲ್ಲದೆ 2ದೀಪಿತ ಮೋಕ್ಷೇಚ್ಛೆುಂದ ತೋರುವ ಸಕಲ | ತಾಪತ್ರಯಗಳ ತೊಲಗಿಸಿಈಪರಿ ವೇದಾಂತ ಶ್ರವಣ ಮನನದ ಪ್ರ | ತಾಪದಿಂದರಿಗಳಿಲ್ಲೆನಗೆಂದೆನಲ್ಲದೆನೀ ಪುಸಿಯಲ್ಲೆಂದೆನೆ ಕಲ್ಪಿತ ನಾಮ | ರೂಪವ ನಿಜವೆಂದೆನೆ ತಾದೃಶ್ಯ ವಿಲೋಪಕನಲ್ಲೆಂದೆನೆ ಕೇಳು ಪ್ರತಿಜ್ಞೆಯ | ಗೋಪಾಲಾರ್ಯನೆ ನಾನೆಂದೆನಲ್ಲದೆ3
--------------
ಗೋಪಾಲಾರ್ಯರು
ಮಾರಜನಕ ನಂಬಿದೆ ನಿನ್ನ ಪಾರುಮಾಡೆನ್ನ ಪರಮಪಾವನ್ನ ಪ ಮೀರಿತು ಭವಬಾಧೆ ಸೈರಿಸೆನಿನ್ನು ಸಾರಸಾಕ್ಷನೆ ಪರಿಹರಿಸು ಮೋಹನ್ನ ಅ.ಪ ದುಷ್ಟಸಂಸಾರಸಾಗರದೊಳು ಕೆಟ್ಟ ನಿಂದೆಗಳೆಂಬ ಘನತೆರಿಗಳು ಹುಟ್ಟಿ ಏಳುತಲಿಹವು ಸಾಲಿಗೆ ಸಾಲು ಬೆಟ್ಟದಂತೆ ಮಹ ಭೀಕರದೊಳು ಎಷ್ಟಂತ ಈಸಬೇಕಿನ್ನಿದರೊಳು ಸೃಷ್ಟಿಕರ್ತ ನೀನೆ ಮೊರೆ ದಯದೊಳು 1 ವಾಸನ್ಹಿಡಿದು ಸೆಳೆದುನುಂಗ್ವವೈದಾರು ಮೋಸ ಜಲಚರಗಳ ಮೀರಿದ ತೊಡರು ಆಸೆಯೆಂಬ ಮಹ ಸೆಳವಿನ ಜೋರು ಸುಳಿ ಮಡುವು ಸಾವಿರಾರು ಈಸುವುದು ಮುಂದಕ್ಕೆ ಅಗದು ಮಾರು ಶ್ರೀಶನೆ ಪಿಡಿದೆತ್ತಿ ಕರುಣವ ತೋರು 2 ಇಂತು ಭವದ ಸಾಗರವನ್ನು ಎಂತು ದಾಟಿ ನಾ ಪಾರಾಗುವೆನು ನಿಂತುನೋಡಲು ಅಂಜಿ ಮನಸಿಗೆ ಇನ್ನು ಭ್ರಾಂತಿಬಡುತ ನಿನ್ನ ಮರೆಯ ಹೊಕ್ಕೆನು ಚಿಂತಾಯಕ ಭಕ್ತ ತೀವ್ರಬಂದಿನ್ನು ಸಂತಸದಿಂ ಪೊರೆಯೊ ಶ್ರೀರಾಮ ಎನ್ನನು 3
--------------
ರಾಮದಾಸರು
ಮಾರುತಿ ಪ್ರಾಣ ಮೂರುತಿಪ ಸಾರುವೆ ತವಶ್ರುತಿ ಧೀರ ಭಾರತೀಪತಿ ಅ.ಪ ಭರದಿ ಸಾಗರ ಹಾರಿ ದುರುಳನ ಪುರ ಸೇರಿ ವರಮಾತೆಗುಂಗುರ ತೋರಿ ವನಗೈದಿ ಸೆರೆ ಶೂರ 1 ಸೊಕ್ಕಿನಿಂದ ಮೆರೆವಂಥ ರಕ್ಕಸರನು ಪಂಥ ಇಕ್ಕಿ ನೀ ಗೆಲಿದಂಥ ಅಃಭಾಪುರೆ ಹನುಮಂತ 2 ಸಿರಿಯ ರಾಮನಿಗಿತ್ತ ವರ ಸೀತಾವೃತ್ತಾಂತ ವರ ಸದ್ಭಕ್ತರ ಪ್ರೀತ ಪಾಲಿಸೊ ವಿಖ್ಯಾತ 3
--------------
ರಾಮದಾಸರು
ಮಾರುತೀ ಕೊಡು ಭಕುತಿ ನುಡಿಸು ಕೀರ್ತಿ ಪ ತೋರೊ ನಿನ್ನೊಳು ಇಹ ನಿರ್ಮಲ ಮೂರುತಿಯಅ.ಪ ಶ್ರವಣಮಾಡಲು ಭಕುತಿ ಆವಕಾಲಕು ಇತ್ತು ತವಪದದಾಸರ ದಾಸ್ಯ ಕೊಡಿಸೋ ದೇವ 1 ಕೀರ್ತನದೊಳು ಹರಿಕೀರ್ತಿ ಕೊಂಡಾಡೆ ಸಂ ಕೀರ್ತನ ಭಕುತಿಗೆ ಕರ್ತದಾತ ನೀನೆ2 ಸ್ಮರಣೆಯು ಹರಿಯಲ್ಲಿ ನಿರುತವು ನಿನ್ನಲ್ಲಿ ಕರುಣಿಸಿ ಪೊರೆಯೊ ಗುರುವರ ಸುಂದರ 3 ಪಾದ ಸೇವೆಯ ಕೊಡು ಸಾದರದಿಂದಲಿ ಶ್ರೀಧರನಾ ಕೃಪಾಪಾತ್ರನೆಂದೆನಿಸಯ್ಯ 4 ಅಚ್ಯುತನಿಗೆ ನೀನಚ್ಚುಮೆಚ್ಚಾಗಿಹೆ ನಿಚ್ಚದಿ ಹರಿಪಾದರ್ಚನೆ ಮಾಡಿಸಯ್ಯ 5 ವಂದನಾಭಕುತಿ ಎನ್ನಿಂದ ನೀ ಮಾಡಿಸಿ ನಂದನಂದನಗಾನಂದಪಡಿಸೊ ದೇವ 6 ದಾಸಭಕುತಿ ಭಾಗ್ಯ ಆಶಿಸುವೆನು ನಿನ್ನ ವಾಸುದೇವನ ನಿಜದಾಸನೆ ಸರ್ವದಾ 7 ಸಖ್ಯಭಕುತಿ ಕೊಡೋ ಮುಖ್ಯಪ್ರಾಣೇಶನೆ ಮುಖ್ಯಕಾರಣ ಹರಿಯ ಮುಖ್ಯ ಪ್ರೇಮಪಾತ್ರ 8 ಆತ್ಮನಿವೇದನ ಭಕುತಿಯನ್ನು ಪರ ಮಾತ್ಮನಲ್ಲಿತ್ತು ನಿರ್ಮಲಾತ್ಮನೆಂದೆನಿಸೊ 9 ನವವಿಧ ಭಕುತಿಯ ಕೊಟ್ಟು ಸಲಹೋ ದೇವ ಅವಕಾಲಕು ಪವಮಾನ ನೀನೆ ಗತಿ 10 ಸಂಕಟ ಹರಿಪ ಶ್ರೀ ವೇಂಕಟೇಶನ ದೂತ ಭಂಟನೆಂದೆನಿಸೆನ್ನ ಸಂಕಟ ಹರಿಸಯ್ಯ11
--------------
ಉರಗಾದ್ರಿವಾಸವಿಠಲದಾಸರು
ಮಾರುತೀ ಜ್ಞಾನ ಮೂರುತೀ ಪ ಬಾರಿಬಾರಿಗೆ ಬಹದುರಿತ ಪರಿಹಸಯ್ಯ ಅ.ಪ ಜೀವ ಕೃತಕರ್ಮ ಕ್ರಿಯೆಗಳೂ ಹಗಲಿರುಳೊಳು ಪವಮಾನ ನೀನೆ ನಡೆಸೆ ಸಡೆಸೋರು ತತ್ತ್ವೇಶರು ಭವಬಂಧ ಹರಿಸಿ ಕಾಪಾಡಯ್ಯ ಬೇಡುವೆ ಜೀಯ ತವಪಾದದಾಸ್ಯವ ಕೊಡಿಸಯ್ಯ ಯಾಕೆ ನಿರ್ದಯ 1 ಬಹುಜನುಮವನೆತ್ತಿ ಬಂದೆನೊ ಇಲ್ಲಿ ನಿಂದೆನೊ ಅಹರಹರ ನೀ ನಡೆಸೆ ನಡಿವೆನೊ ನುಡಿಸೆ ನುಡಿವೆನೊ ಇಹಪರ ಸಾಧನ ನಿನ್ನಿಂದ ಎನ್ನ ಕೈಯಿಂದ ಬಹುಪರಿ ಮಾಡಿಸಿ ಭವದಿಂದುದ್ಧರಿಸೆಂದೇ 2 ಪಂಕಜೋದ್ಭವ ಪದವ ಪಡೆವಯ್ಯ ಆರೆಣೆಯಯ್ಯ ಕಿಂಕರರೊಳಗೇಕೆ ನಿರ್ದಯ ನಂಬಿದೆನಯ್ಯ ಶಂಕರಾನತ ಪೂಜಿತಾಂಘ್ರಿಯ ದಯ ತೋರಯ್ಯ ಶ್ರೀ ವೇಂಕಟೇಶನ ಮುಂದೆ ನಿಂದಿಹ ಭಕ್ತಿಯಿಂದಿಹ3
--------------
ಉರಗಾದ್ರಿವಾಸವಿಠಲದಾಸರು
ಮಾವಿನಕೆರೆ 7 ಮಾನಗಿರಿಯು ಹಲವಾಭಿಮಾನ ಗಿರಿಯು ಪ ಮಾನಗರಿ ಭಕ್ತಾಭಿಮಾನ ಮಾಂಗಿರಿಯು ಅ.ಪ ಭಾರತದ ದಕ್ಷಿಣದಿ ನೂರೆಂಟು ತಿರುಪತಿಯೊ ಳೋರಂತೆ ಮಹಿಮೆಗಳ ತೋರಿಸಲೈ ಕಾರುಣ್ಯ ಪರಿಪೂರ್ಣ ಸಿರಿವೆಂಕಟಾದ್ರೀಶ ಏರಿನಿಂದನು ನಮ್ಮ ಮಾಂಗಿರಿಯಲಿ 1 ಕಡುಸುಂದರಾಕೃತಿಯ ಬೆಡಗಿಂಗೆ ಮರುಳಾಗಿ ನಡೆತಂದ ಮಾನವರು ಕುಡಿದೃಷ್ಟಿಬೀರಿ ಪಿಡಿದು ಕೊಂಡೊಯ್ವೆವೆಂದಡಿಯಿಡಲು ರಂಗಯ್ಯ ಅಡಗಿಸಿದ ದೇಹವನು ಒರಳಿನಲ್ಲಿ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಾವಿನಕೆರೆ-2 ಏತಕೆ ಗಿರಿಯಲ್ಲಿ ನೆಲೆಸಿದೆಯೊ | ರಂಗ || ಪ ಭಂಗ ಅ.ಪ ದಾನಿ ನೀನೆನ್ನುತಲಿ ದಿನದಿನವು ಲಕ್ಷಾಳಿ ದೀನ ಮನುಜರು ಬಂದು ಬಾಧಿಸುವರೆಂದೂ ಕಾನನಾಂತರದಲ್ಲಿ ನೆಲೆಸಿದೆಯೊ ನಾಕಾಣೆ ನೀನೆಲ್ಲಿ ಪೋದೊಡಂ ಬಿಡೆನೈಯ ರಂಗ 1 ಜನನಿಬಿಡ ಪುರವೆಂದು ಮನಕೆ ಬೇಸರವಾಗಿ ವನದೊಳಗೆ ಚರಿಸಬೇಕೆನುತಲಿಹೆಯೋ ಮನುಜರ ಅನ್ಯಾಯ ದುಷ್ಕಾರ್ಯಗಳ ನೋಡಿ ಮನಕರಗಿ ಗಿರಿಯನ್ನು ಸೇರಿದೆಯೊ ರಂಗ 2 ದೇಹದಂಡನೆಯಿಂದ ಇಹಪರದ ಸುಖವೆಂಬ ರಹಸ್ಯ ತತ್ವಾರ್ಥವನು ತಿಳಿಸಲಿಹೆಯೋ ಶ್ರೀಹರಿಯೇ ನಿನ್ನ ವೈಚಿತ್ರ್ಯವಸದಳವಯ್ಯ ದೇಹಧಾರಿಗೆ ಅಳವೆ ವರ್ಣಿಸಲು ನಿನ್ನಾ 3 ಬೇವ ಮಾವನು ಗೈದೆ ಮಾವಬೇವನು ಗೈದೆ ಶಿವರೂಪದೆ ನಿಂದು ಕೇಶವನು ಎನಿಸಿದೆ ಭಾವುಕರು ಗೈಯದಾ ದೇವಾಲಯವ ಗೈದೆ ಮಾವಿನಕೆರೆರಂಗ ನಿನಗಾರು ಸಮರೋ 4 ವನಜನಾಭನು ಎಂಬ ಅನುಮತಿಯನೀಯಲ್ಕೆ ಹನುಮದೇವನ ಪೂಜಿಸಿ ಮನವೊಲಿಸಿದೇ ಸನುಮತದಿ ಕಾಯೆನ್ನ ರಾಮದಾಸಾರ್ಚಿತನೆ ಅನುವಿಂದ ನೀನೆನ್ನ ಮನದೊಳಿರು ಹರಿಯೇ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮುಕುತಿ ತಮಸು ಎರಡಿಲ್ಲೆ ಕಂಡ್ಯಾ ಮುಕುತಿ ಬೇರೆ ತಮಸು ಬೇರಿಲ್ಲ ಕಂಡ್ಯಾ ಪ ಗುರುಪಾದ ಒಡಗೊಂಡು ಮರುತ ಶಾಸ್ತ್ರವ ನೋಡಿ ಹರಿಯ ಗುಣಂಗಳ ಕೊಂಡಾಡುತ ಪರಮ ಉತ್ತಮರು ಬರಲು ಬನ್ನಿ ಬನ್ನೆಂದು ಎರಗಿ ತಕ್ಕೈಸಿ ಕೊಂಡುಂಬುವದೆ ಮುಕ್ತಿ 1 ನಾನು ನೀನು ಎಂದು ಜ್ಞಾನವನೆ ತಿಳಿಕೊಂಡು ತಾ ನಿಲ್ಲದಿಲ್ಲೆಂದು ಪೇಳಿಕೊಂಬಾ ಈ ನಾಡಿನೊಳಗಿವ ಹೀನವನು ಎಂಬರ್ಥ ಈ ನುಡಿ ಎನಿಸಿಕೊಂಬುದೆ ತಮಸು 2 ಒಂದರೊಳಾನಂತ ಅನಂತದಲಿ ಒಂದು ಒಂದೊಂದು ಅನಂತ ಹರಿಪ್ರೇರಕ ಎಂದು ಗ್ರಹಿಸಿ ಹರಿಗುರು ಹರಿದ್ವೇಷಿಗಳನ್ನ ನಿಂದಕವಾಗಿ ಬಾಳುವದೆ ಮುಕ್ತಿ 3 ಅನ್ನದಾ ಸಮಯ ಇಲ್ಲದೆ ಕಂಡಲ್ಲಿ ತಿನ್ನಲೋಡಿ ಸಮಯವೆನ್ನದೆ ಅನ್ಯರ ಬದುಕ ಪಹರಿಸುವ ಖಲು ಗನ್ನ ಫಾತಕನೆನಿಸಿಕೊಂಬುವದೆ ತಮಸು 4 ಮೀಸಲಾ ಮನದಲ್ಲಿ ವಾಸುದೇವನ ನಿಜ ವಾಸರದಲ್ಲಿ ಜಾಗರಾ ಮಾಡುವಾ ಆಶೆಬಡಕನಲ್ಲ ದೇಶದೊಳಗೆ ಹರಿ ದಾಸನೆಂದು ಪೇಳುವುದೆ ಮುಕ್ತಿ 5 ವ್ರತವಿಲ್ಲ ವಾವಿಲ್ಲ ಮತಿ ಮೊದಲು ಇಲ್ಲಾ ಕಥಾಶ್ರವಣ ಒಂದು ಕೇಳಲಿಲ್ಲ ಪಿತ ಮಾತರನ್ನ ಬೊಗಳುವ ನಾಯಿ ಕು ತ್ಸಿತನು ಎಂದೆನಿಸುವದೆ ತಮಸು 6 ಗುಣ ಒಳ್ಳೇದು ನೀತಿ ಮನ ಒಳ್ಳೇದು ಅಜ ತೃಣ ಜೀವಾದಿಯ ಭೇದಬಲ್ಲನಿವ ಗಣನೆಮಾಡ ವಿಜಯವಿಠ್ಠಲನಲ್ಲದೆ ಕ್ಷಣ ಹೀಗೆ ಎಂದೆನಿಸುವದೆ ಮುಕ್ತಿ 7
--------------
ವಿಜಯದಾಸ