ಒಟ್ಟು 2531 ಕಡೆಗಳಲ್ಲಿ , 118 ದಾಸರು , 1803 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಾಲಿ ಲಾಲೀ ಲಾಲಿ ಮೊದಲಗಟ್ಟೇಶ ಲಾಲಿ ಲಾಲೀ ಲಾಲಿ ತುಂಗಭದ್ರ ತೀರೇಶಾ ಪ. ಆಂಜನೆಯ ಸುತನಾಗಿ ಅಂಬರಕೆ ಹಾರಿ ಕಂಜಾಕ್ಷ ರಾಮರಂಘ್ರಿಗಳನ್ನು ಸಾರಿ ಮಂಜುಭಾಷಿಣಿಗೆ ಹರಿ ಮುದ್ರಿಕೆಯ ತೋರಿ ಶೌರಿ 1 ಕುರುಕುಲದಿ ಜನಿಸಿದ ಕುಂತೀ ಕುಮಾರ ರಣಧೀರನೆನಿಸಿದ ಕುರುಪ ಸಂಹಾರ ಧರೆಯ ಭಾರವ ಕಳೆದೆ ಗದೆಯಿಂದ ಶೂರ ಧುರಧೀರ ಶ್ರೀ ಕೃಷ್ಣನಂಘ್ರಿ ಪರಿಚಾರ 2 ಅನ್ಯಮತಗಳ ಮುರಿದ ಧನ್ಯಮುನಿವರನೆ ಮಾನ್ಯ ಸುರರಿಂದ ಹರಿಗುನ್ನಂತಪ್ರಿಯನೆ ಭವ ಬನ್ನ ಬಿಡಿಸುವನೆ ಘನ್ನ ಗೋಪಾಲಕೃಷ್ಣವಿಠ್ಠಲನ ಸೂನೆ 3
--------------
ಅಂಬಾಬಾಯಿ
ಲೀಲೆಯೊಳಾಡಿಸೊ ಹರಿ ನಿನ್ನ ಲೀಲೆಯೊಳಾಡಿಸೊ ಪ ಲೀಲೆಯೊಳಾಡಿಸೊ ಕಾಲಕಾಲದಿ ನಿನ್ನ ಶೀಲನಾಮವೆನ್ನ ನಾಲಗ್ಗೆ ಕರುಣಿಸು ಅ.ಪ ಮಂದಮತಿಯ ಹರಿಸೋ ಮನ ಗೋ ವಿಂದನೊಳೊಡಗೊಡಿಸೊ ಎಂದೆಂದಿಗು ಆ ನಂದನ ಕಂದನ ಪಾದ ಮನಮಂದಿರದಿರಿಸೊ 1 ಶೀಲಗುಣವ ಕಲಿಸೊ ಭವಗುಣ ಜಾಲವ ಪರಹರಿಸೊ ಪಾಲಿಸಿ ನಿಮ್ಮ ಧ್ಯಾನಲೋಲನೆನಿಸಿ ಯಮ ದಾಳಿ ನೀಗಿಸಿ ಭವಮಾಲೆಯ ಗೆಲಿಸೊ 2 ಮೋಸ ಮಾಯ ಹರಿಸೊ ವಿಷಯ ದಾಸೆಯ ಪರಿಹರಿಸೊ ಭಾಸುರಕೋಟಿಪ್ರಭೆ ಸಾಸಿರನಾಮದ ಶ್ರೀಶ ಶ್ರೀರಾಮ ನಿಮ್ಮದಾಸೆನಿಸೊ 3
--------------
ರಾಮದಾಸರು
ಲೋಕ ಭರಿತನೊ ರಂಗಾನೇಕಚರಿತನೊ ಪ. ಕಾಕುಜನರ ಮುರಿದು ತನ್ನಏಕಾಂತಭಕ್ತರ ಪೊರೆವ ಕೃಷ್ಣ ಅ.ಪ. ರಾಜಸೂಯ ಯಾಗದಲ್ಲಿ ರಾಜರಾಜರಿರಲು ಧರ್ಮ-ರಾಜಸುತನುಯೀತನೇ ಸಭಾಪೂಜ್ಯನೆಂದು ಮನ್ನಿಸಿದನಾಗ 1 ಮಿಕ್ಕನೃಪರ ಜರಿದು ಅಮಿತವಿಕ್ರಮ ಯದುವರನೆ ತನಗೆತಕ್ಕ ರಮಣನೆಂದು ರುಕ್ಮಿಣಿ ಉಕ್ಕಿ ಮಾಲೆಯಿಕ್ಕಿದಳಾಗ2 ಜ್ಞಾನಶೂನ್ಯನಾಗಿ ಸೊಕ್ಕಿ ತಾನೆ ವಾಸುದೇವನೆನಲುಹೀನ ಪೌಂಡ್ರಕನ ಶಿರವ ಜಾಣರಾಯ ತರಿದನಾಗ 3 ಉತ್ತರೆಯ ಗರ್ಭದಲ್ಲಿ ಸುತ್ತಮುತ್ತಿದಸ್ತ್ರವನ್ನುಒತ್ತಿ ಚಕ್ರದಿಂದ ನಿಜಭಕ್ತ ಪರೀಕ್ಷಿತನ ಕಾಯ್ದ4 ತನ್ನ ಸೇವಕಜನರಿಗೊಲಿದು ಉನ್ನಂತ ಉಡುಪಿಯಲ್ಲಿ ನಿಂತುಘನ್ನಮಂದಿರ ಮಾಡಿಕೊಂಡ ಪ್ರಸನ್ನ ಹಯವದನ ಕೃಷ್ಣ 5
--------------
ವಾದಿರಾಜ
ಲೋಕಕ್ಕೆ ನೀ ತಾಯಿ ಲೋಕಕ್ಕೆ ನೀ ತಂದೆ ಸಾಕುವಾಕೆಯೆ ನೀನು ಲೋಕಕ್ಕೆ ನೀ ತಾಯಿ ಪ ಬೇಸರಿಸಿ ಧರಿಸಿದಳು ಜನನಿ ಎನ್ನನÀು ದಶ- ಮಾಸ ಗರ್ಭದೊಳಿದ್ದು ಬಹಳ ಬಳಲಿದೆನು ಹೇಸಿಕೆಯ ವಿಣ್ಮೂತ್ರ ರಾಶಿಯೊಳುಗುದಿಸಿದರೆ ಆಸುರದಿ ಕೈಯೆತ್ತಿ ಪಿಡಿದು ರಕ್ಷಿಸಿದೆ1 ಮಲ ಮೂತ್ರ ಮೈಲಿಗೆಯ ಮೈಯೊಳಗೆ ಧರಿಸಿದರು ತಿಲ ಮಾತ್ರ ಹೇಸಿದೆಯ ಎನ್ನೊಳಗೆ ನೀನು ಜಲಜಮುಖಿ ಎನ್ ತಾಯಿ ಎಲೆಯ ಓಗರವಿಟ್ಟು ತೊಳೆದ ಹಸ್ತದಿ ಎನಗೆ ಕೊಳೆಯನಿಕ್ಕಿದಳು 2 ಮಗುವೆಂದು ಯೋಚಿಸದೆ ಉಗುಳುತ್ತ ಎಂಜಲನು ಒಗೆದು ಬೀಸಾಡಿದಳು ಎಡದ ಹಸ್ತದಲಿ ಜಗಳವಾಡಲು ಪಿತನು ಮಗನ ಮೋಹದ ಮೇಲೆ ತೆಗೆಯಬಾರದೆ ಮಲವನೆಂದು ಜರೆÀದಪಳು3 ಪಡೆದ ತಾಯ್ತಂದೆಗಳು ಅಡಗಿ ಹೋದರು ಎನ್ನ ಬಿಡದೆ ಸಲಹಿದೆ ನೀನು ಪೊಡವಿ ದೇವತೆಯೆ ಕಡೆಗಾಲದೊಳು ಕೈಯ ಪಿಡಿದು ರಕ್ಷಿಸದೆನ್ನ ಒಡಲ ದುಃಖವ ನೋಡಿ ನುಡಿಯದಿರಬಹುದೆ 4 ಬಲವಾಗಿ ಕೈವಿಡಿದೆ ವರಾಹತಿಮ್ಮಪ್ಪನಿಗೆ ಗೆಲವಿಂದ ಭೂರಮಣನೆನಿಸಿ ಮೆರೆವ ಜಲಜನಾಭನೆ ಎನ್ನ ಪಿತನು ಮಾತೆಯು ನೀನು ಸುಲಭದೊಳು ಮೈದೋರು ಫಲಿತವಹ ಪದವ 5
--------------
ವರಹತಿಮ್ಮಪ್ಪ
ಲೋಕನೀತಿ ಅಚ್ಯುತಾನಂತ ಗೋವಿಂದ ಅಕ್ಷರೊತ್ತಮ ಸದಾನಂದ ಪ. ನಿಶ್ಚಲ ಭಕ್ತಿಯಿಂ ಮೆಚ್ಚಿಸು ಹರಿಯಂ ನಿಶ್ಚಯ ಪೋಪುದು ಭವಬಂಧ ಅ.ಪ. ಆಧಿವ್ಯಾಧಿಹರಣ ಕಾರಣ ಮಧು ಸೂದನ ಸತ್ಯ ಸದ್ಗುಣವೃಂದ ವೇದಗಮ್ಯ ಪ್ರಹ್ಲಾದ ಕ್ಷೇಮದ ಮ- ಹೋದಧಿಶಯನ ಮುಕುಂದ 1 ಶ್ರೀಬ್ರಹ್ಮಾದಿ ದಿವಿಜಕುಲವಂದಿತ ಶೋಭಿತ ಪಾದಾರವಿಂದ ಈ ಭೂಮಿಯೊಳಗೆ ಜನಿಸಿದಕೆ ಸಫಲ ಲಾಭವೆ ಹರಿಕಥಾನಂದ 2 ಪ್ರಾಣನಿಯಾಮಕ ಸರ್ವತ್ರ ವ್ಯಾಪ್ತ ಧ್ಯಾನಿಸದಿರು ನೀ ಬೇರೊಂದ ದೀನವತ್ಸಲ ಸುಮ್ಮಾನದಿ ಕಾವ ಲ- ಕ್ಷ್ಮೀನಾರಾಯಣ ದಯದಿಂದ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಲೋಕನೀತಿ ಇಳೆಯೊಳಗೆ ದೇಹತಾಳಿ ಬಂದೆಲ್ಲಾ ತಮ್ಮಾ ಗಳಸಿ ಮನೆ ಹೆಂಡಿರು ಮಕ್ಕಳಿಟ್ಟಿಲ್ಲಾ ಬಲಿಸಿ ಹಣ ಹೊನ್ನು ಹೂಳಿಟ್ಟಿಲ್ಲಾ ತಮ್ಮಾ ಒಲಿದು ಉಂಡಿ ವಿಷಯ ಸುಖವಾ ಪೇಳಲ್ಲಾ 1 ತೆರಪೀರಾದೆ ಜನಿಸಿದಾವು ಸುತ್ತಲು ಪರಿಪರಿಯ ಸುಖದುಃಖ ಪಗಲಿರುಳು ತಮ್ಮಾ ಇರದೆಯೊದಗಿ ದಣಿಸಿದಾವು ನಿನ್ನ ಮರುಳೆ 2 ಯಮನವರು ಬರುವದು ಮರೆತೇಯ ತಮ್ಮಾ ರಮಣೀ ಮೋಹಾ ಕೇಳಿರು ನೀನರಿಯಾ ಅಮಿತ ಧನ ಬಳಗ ಇನ್ನೆಲ್ಲಯ್ಯಾ ತಮ್ಮಾ ನಮೋ ನರಸಿಂಹವಿಠಲ ಎನ್ನಯ್ಯ 3
--------------
ನರಸಿಂಹವಿಠಲರು
ಲೋಕನೀತಿ ಎಲ್ಲಿಗೇತಕೆ ಪೋಗಿ ತಲ್ಲಣಿಸುವೆಯೊ ಮನವೆ ಇಲ್ಲೆ ಶ್ರೀಹರಿಯಿಲ್ಲವೆ ಪ ಬಲ್ಲವರ ಹೃದಯಗುಹೆಯಲ್ಲಿ ಪ್ರಕಟಿಸುತ ಜನ ತುಂಬಿ ಸೂಸುತಲಿರುವ ಅ.ಪ ಕಾಶಿ ರಾಮೇಶ್ವರ ಬದರಿ ತಿರುಪತಿಯೆಂದು ಘಾಸಿಗÉೂಳ್ಳುವೆ ಏತಕೋ ವಾಸನೆಯ ನೀಗದವನಾಶೆಪಾಶಗಳಿಂದ ಬೇಸತ್ತು ಚರಿಸಲೇಕೋ ಈಶನಾವಾಸವೀಜಗವೆಲ್ಲವಿಲ್ಲಿಲ್ಲ ವಲ್ಲಿರುವನೆಂಬುದೇಕೋ ಶ್ರೀಶ ಶ್ರೀಹರಿಯ ನೀನಿರುವಲ್ಲೆ ಶೋಧಿಸುವ ಆಸೆಯುದಯಿಸಲಿಲ್ಲವೇಕೋ 1 ಅಣುಮಹತುಗಳಲ್ಲಿ ತೃಣಜೀವಕೋಟಿಯಲಿ ಗುಣ ಮಹಿಮನರಿಯ ಬಯಸೋ ಎಣಿಸಲಾಗದನಂತಗುಣನ ಪ್ರಾಣಿ ಸಮೂಹ ಗಣಗಳೊಳು ಕಾಣಬಯಸೋ ಅಣುವಿಗಣುವೆನಿಸಿ ಮಹತಿಗೆ ಮಹತ್ತಹನ ಕಣ್ದಣಿಯೆ ಕಾಣುತ ಭಾವಿಸೊ ಗುಣನಿಧಿಯು ನಿನ್ನ ಶ್ರದ್ಧಾಭಕ್ತಿಗಳಿಗೊಲಿದು ಕ್ಷಣದಿ ಕಾಣಿಸುವನಿದನರಿತು ನೀ ಚರಿಸೋ 2 ವ್ರತನಿಯಮಗಳ ಕಾಮ್ಯ ಫಲದಾಸೆಯಿಂ ಮಾಡೆ ಫಲವೇನು ವ್ಯರ್ಥಶ್ರಮವೋ ಸತತ ನಿನ್ನಯ ವ್ಯಾಪ್ತ ಮಹಿಮೆಯರಿಯದೆ ಪೂಜೆ ಮಾಡಿದರು ವ್ಯರ್ಥಶ್ರಮವೋ ಮತಿವಿಕಳ ಕೋಪ ತಾಪದ ದಾಸನವ ಮಾಳ್ಪ ದಾನವದು ವ್ಯರ್ಥಶ್ರಮವೋ ಅಕಳಂಕಮಹಿಮ ರಘುರಾಮವಿಠ್ಠಲನೆಂದು ನಂಬಿ ನಡೆವುದೆ ಸಾರ್ಥಕವೋ 3
--------------
ರಘುರಾಮವಿಠಲದಾಸರು
ಲೋಕನೀತಿ (ಆ) ಇರುವುದೆಲ್ಲ ಮನೆಯೊಳಗಿದ್ದರೆ ಆಡಿಗೆಗೆ ಯಾತಕ್ಕೆ ತಡವಾಗೋದು | ಪ ತರಬೇಕೇಂದು ನೂರು ತಡವೆ ನಾ ನುಡಿದರು ಅರಿಯದವರ ಪರಿತಿರುಗುತ್ತಲಿರುವದು ಅ.ಪ ಮನೆ ಮನೆಯಲಿವಂದು ಮಾನಾರ್ಧಮಾನಗಳು ಮೆಣಸಿನಪುಡಿ ಉಪ್ಪು ಅಕ್ಕಿ ಸಾಲ ದಿನ ದಿನ ಮಧ್ಯಾಹ್ನ ತಿರುಗಿದ ಮೇಲೆ ಮನೆಗೆ ಬಂದು ಹಸಿವೆನುತ ಪೇಳುವದು 1 ಎಣ್ಣೆವಗ್ಗರಣೆಯಲ್ಲದೆ ಕಾಣೆನಭಿಗಾರ ಮುನ್ನೆ ಪಿತ್ಥ ಹೆಚ್ಚಿ ತಲೆ ನೋಯ್ವುದು ನಿನ್ನೆಮೊನ್ನೆ ಹೇಳಿದುದಕೆ ಹೊಡೆಸಿಕೊಂಡೆ ದೊಣ್ಣೆಪೆಟ್ಟಿನಿಂದ ಬೆನ್ನು ಬಾತಿರುವದು 2 ವರುಷಕ್ಕಾಗುವ ಮಟ್ಟಿಗೆಲ್ಲಾ ಪದಾರ್ಥ ಶೇ- ಖರವ ಮಾಡುವುದು ಈ ಮನೆಯೊಳಿಲ್ಲಾ ಹಿರಿಯರಿಂದ ಬಂದ ಸಂಪ್ರದಾಯವಿದೇನೊ ಇಂಥಾಮನೆಯ ಸೇರಿ ಈ ಸುಖ ಪಡುವೆ 3 ಮದುವೆಯಲ್ಲಿದ್ದದ್ದು ಪ್ರಸ್ತದೊಳಗೆಯಿಲ್ಲ ಬದಲು ಸೀರೆಯು ನಾನುಟ್ಟರಿಯೆ ವಿಧಿಲಿಖಿತವು ತಪ್ಪುವುದೆಯೆಂದಿಗಾದರು ವದರಿ ಕೊಂಡರೆಯೇನು ಇದರೊಳು ಫಲವುಂಟು 4 ಜ್ಞಾನ ಶೂನ್ಯರು ಮನೆಯೊಳಿಹರೆಲ್ಲರು ಈ ನರಜನ್ಮವು ಇಷ್ಟಕ್ಕೆಸಾಕೆಂದು ಧೇನಿಸಿ ಗುರುರಾಮವಿಠಲನ ಬೇಡುವೆ 5
--------------
ಗುರುರಾಮವಿಠಲ
ಲೋಕೈಕ ಬಂಧು ಹೇ ದಯಾಸಿಂಧು ಜೋಕೆಮಾಡಭವ ನೀನೆನ್ನೊಳು ನಿಂದು ಪ ಹೇಯಪ್ರಪಂಚದ ಮಾಯಾಮೋಹದಿ ಎನ್ನ ಕಾವದೇವರು ನೀನೆ ಕೈಯ ಪಿಡಿದು ಸಲಹೊ 1 ದಿವನಿಶಿ ಬಿಡದೊಂದೇಸಮನೆ ಬೆನ್ನ್ಹತ್ತಿ ಮಾಯ ಕವಿದು ವಿಧವಿಧದೆನ್ನ ಸುವಿಚಾರ ಮರೆಸಿ ಭವಭವದೊಳಗೆಳಸಿ ಭವಿಯೆಂದೆನಿಸಿ ಕೆಟ್ಟ ಜವನಿಗೀಡೆನಿಸುವ ಭವಮಾಲೆ ಗೆಲಿಸು 2 ಘನದು:ಖಮಯವಾದ ಜನನಮರಣಬಾಧೆ ರಿಣಭಾದೆ ತನುಭಾದೆಯನು ಪರಿಹರಿಸಿ ತನುತ್ರಯದಲಿ ನಿನ್ನ ನೆನೆವೆನಗೆ ಪಾಲಿಸು ಕನಿಕರದಿಂ ಕಾಯೊ ಜನಕ ಶ್ರೀರಾಮ ಪ್ರಭು 3
--------------
ರಾಮದಾಸರು
ವಂಚನೆಲ್ಲಿಹುದಯ್ಯ ವೈಕುಂಠಪತಿ ಗೊಂಚನೆಲ್ಲಿಹದಯ್ಯ ಪ ವಂಚನೆಲ್ಲಿಹ್ಯದು ವಿರಂಚಿತಾತನಿಗೆ ಕಿಂಚಿತ್ತು ಧ್ಯಾನಕ್ಕಾಗೊಂಚನಿಲ್ಲದೆ ಬಂದ ಅ.ಪ ಚರಣದಾಸರೆಂದು ಪಾಂಡವರ ತುರಗಕಾಯ್ದ ನಿಂದು ನರಗೆ ಬೆಂಬಲನಾಗಿ ತಿರುಗಿದ ಧುರದಲಿ ಜರ ಮರೆಯಾಗದೆ ಪರಮಕರುಣಾಕರ 1 ಜಾಗುಮಾಡುತಲಿವ ಭಕ್ತರ ಯೋಗಕ್ಷೇಮ ತಿಳಿವ ನೀಗದಂಥ ಮಹಾಭೋಗಭಾಗ್ಯವಿತ್ತು ಬಾಗಿಲ ಕಾಯ್ದನು ಸಾಗರನಿಲಯ 2 ಜಾರನೆನಿಸಿಕೊಂಡ ಒಲಿದು ಚೋರನೆನಿಸಿಕೊಂಡ ತೋರಿದವರ ಮನಸಾರ ವರವಿತ್ತು ಭೂ ಭಾರವಿಳುಹಿದ ನಮ್ಮ ಧೀರ ಶ್ರೀಗುರುರಾಮ 3
--------------
ರಾಮದಾಸರು
ವಂದಿಪೆ ಹರಿಹರನೇ | ನಿನಗೆ ನಾ ವೃಂದಾರಕನುತನೇ ಪ. ಬಂದು ಈ ಕ್ಷೇತ್ರದಿ ನಿಂದು ಸದ್ಭಕ್ತರ ಮೂರ್ತಿ ಅ.ಪ. ಚತುರ ಹಸ್ತದಿಂದಾ | ಶೋಭಿಸೆ ಅತಿ ಕೌತುಕದಿಂದಾ ಪಾದ ಕಮಲಜನ ತತಿಗೆ ತೋರದಂತೆ ಕ್ಷಿತಿಯಲಡಗಿದೇ 1 ಸೋಮಶೇಖರವಂದ್ಯಾ | ಆರ್ಧದ ಲಾಮಹ ಹರನಿಂದಾ ಪ್ರೇಮದಿ ಕೂಡಿಕೊಂಡೀ ಮಹಿ ಜನರಿಗೆ ನೀಮೋಹಕ ತೋರುವ ಜಗದ್ವಂದ್ಯಾ 2 ಪಾಪಿಗುಹನವರವಾ| ಕೆಡಿಸಲು ರೂಪಧರಿಸಿ ತಾಮಸರಿಗಂಧಮತಮ ಕೂಪದಿ ಕೆಡಹುವೆ ಶ್ರೀ ಮೋಹಿತ 3 ಅರ್ಧಹರನ ರೂಪಾ| ಕೃತಿಯಲಿ ಶುದ್ಧ ವಿಷ್ಣು ರೂಪಾ ಮುದ್ದು ಸುರಿವ ಭವ್ಯಾಂಗ ಸ್ವರೂಪ ಉದ್ಧರಿಸೆನ್ನನು ಶುದ್ಧ ಬುದ್ಧಿಮತಿಯನಿತ್ತು 4 ಶಂಖಚಕ್ರ ಅಭಯಾ| ತ್ರಿಶೂಲವ ಬಿಂಕದಿ ಧರಿಸಿದೆಯಾ ಪಂಕಹೋದ್ಭವೆ ಪಾರ್ವತಿಯ ಉಭ ಯಾಂಕದಲ್ಲಿ ಪೊಂದಿಹೆ ಶುಭಕಾಯಾ 5 ಅರ್ಧಶಿರದಿ ಮಕುಟಾ| ಆರ್ಧದಿ ಶುದ್ಧಗಂಗೆ ತ್ರಿಜಟಾ ಅರ್ಧಚಂದ್ರ ಶೋಭಿಸುತಿದೆ ಜಗತ್ತಿಗೆ ಅದ್ಭುತ ಅಚ್ಚರಿ ರೂಪಧಾರಕ 6 ಪಣೆಯ ತಿಲಕ ಢಾಳಾ | ಕಂಠಾಭ ರಣಗಳು ಪೂಮಾಲಾ ಮಿನುಗುವವಲ್ಲಿ ಪೀತಾಂಬರನುಟ್ಟಿಹ ಗುಣಗಣ ಪೂರ್ಣನೆ ಹನುಮನಯ್ಯ ಹರಿ7 ಮಾಯಾ | ಕವಿಸದೆ ಇನ್ನು ಕಾಯೊ ಜೀಯಾ ಘನ್ನ ಭಕ್ತಿ ಸುಜ್ಞಾನ ವೈರಾಗ್ಯವ ಮನ್ನಿಸಿ ಕರುಣಿಸಿ ನಿನ್ನ ಪದವಿ ಕೊಡು 8 ಹರನೊಳು ಹರ ಶಬ್ದಾ | ವಾಚ್ಯನೆ ಸಿರಿವರ ನಿರವದ್ಯಾ ಸರ್ವ ಶಬ್ದ ಸುರವಾಚ್ಯ ಈ ಪರಿಯೊಳು ಹರಿಹರ ಕ್ಷೇತ್ರದಿ ವರಗೃಹ ಮಾಡಿದಿ 9 ತುಂಗಭದ್ರ ತೀರಾ | ವಾಸನೆ ರಂಗ ಪಾಪ ದೂರಾ ಮಂಗಳ ಗೋಪಾಲಕೃಷ್ಣವಿಠಲ ಭವಹಿಂಗಿಸಿ ಪೊರೆ ದುಸ್ಸಂಗ ಬಿಡಿಸಿ ಹರಿ 10
--------------
ಅಂಬಾಬಾಯಿ
ವಂದಿಸುವೆನನವರತ ಇಂದಿರೇಶಾ ಪ ನೊಂದು ಬಳಲಿದೆನಯ್ಯ ಸಲಹೋ ಶ್ರೀಶಾ ಅ.ಪ ಇಂದು ನರಜನುಮದೊಳು ನೊಂದೆನಯ್ಯ ಮುಂದಿನಾ ಜನುಮಗಳ ಸಂದಣಿಗಳೊಳು ನಿನ್ನ ಸುಂದರ ಪಾದಾಂಬುಜವನೆಂದೆಂದು ತೋರೆಂದು1 ನರಜನ್ಮ ಹಿರಿದೆಂದು ಅರಿತವರು ಪೇಳುವರು ನರನಾಗಿ ನಾ ಜನಿಸಿ ಗರುವದಿಂದಾ ಸಿರಿಯಾಸೆಯಿಂದ ಮದ ಪರವೈರ ಲೋಭಗಳ ದುರಿತಗಳನಾರ್ಜಿಸಿದೆ ಪೊರೆಯೊ ದೇವ 2 ಕಡುಪಾಪ ಕೂಪದೊಳಗಡಗಿರ್ಪೆನೈ ಹರಿಯೆ ಅಡಿಗಳಿಗೆ ಎಡೆಯಿಲ್ಲ ನುಡಿವರಿಲ್ಲಾ ಪಿಡಿವುದಕೆ ತೃಣವಿಲ್ಲ ದಡಕೆ ದಾರಿಯು ಇಲ್ಲ ತಡವೇಕೆ ಎನ್ನ ಕೈಪಿಡಿಯೊ ಗೋಪಾಲ 3 ಖಗರಾಜ ಪೊತ್ತಿಹನು ಸುಗತಿದಾಯಕನೆಂದು ಹೊಗುಳುವವು ಶೃತಿ ಶಾಸ್ತ್ರ ನಗಧರನೆ ನಿನ್ನತಾ ನಗಪುತ್ರಿ ನುತಿಸಿಹಳು ನಗಬೇಡವೈ ಪಾದಯುಗಗಳನು ತೋರೆಂದು4 ನಿನ್ನ ನಾಮದ ಭಜನೆ ಎನ್ನ ರಸನೆಯೊಳಿರಲಿ ಮುನ್ನಿಗಿಂತೆಂಟುಮಡಿ ಜನುಮ ಬರಲಿ ಮುನ್ನ ನಾವಾರ್ಜಿಸಿದ ಘನಪಾಪನಶಿಸಲಿ ಚೆನ್ನ ಮಾಂಗಿರಿವಾಸ ನನ್ನ ಹೃದಯದೊಳಿರಲಿ5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವಧು ವರರ ಯದ್ಧರಿಸೊ ಉದಧಿಶಯನ ಒದಗಿಸುತಲಾಯುರಾರೋಗ್ಯ ಸುಜ್ಞಾನ ಪ ಯತಿಪೂಜೆ ಕ್ಷಿತಿದೇವ ತತಿಸೇವೆ ತಿಥಿತ್ರಯದ ವೃತನೇಮ ಮೊದಲಾದ ಸತ್ಕಕರ್ಮವ ಮತಿಯಿಂದ ಗೈಯುತಲಿ ಪತಿತಪಾವನ ನಿನ್ನ ಕಥೆಗಳನು ಕೇಳ್ವದಕೆÉ ರತಿಯಿತ್ತು ಪ್ರತಿದಿನದಿ 1 ಹಿರಿಯರಲಿ ವಿಶ್ವಾಸ ಗುರುಮುಖದಿ ಉಪದೇಶ ಮರುತ ಸಚ್ಛ್ಯಾಸ್ತ್ರದಔಯಾಸವ ಸ್ಥಿರವಾದ ಮನವಿತ್ತು ಮರಿಯದಲೆ ಮಾರಮಣ 2 ಸಾಮಗಾನವಿಲೋಲ ಶಾಮಸುಂದರವಿಠಲ ಸ್ವಾಮಿಮನ್ನಿಸಿ ಎನ್ನ ಎನ್ನ ವಿಜ್ಞಾಪನೆ ಯಾಮಯಾಮಕೆ ನಾಮಸುಧೆಯನು ಸವಿಪ ಈ ಮಹಾಸುಖ ಗರೆದು ಪ್ರೇಮದಿಲಿ ಕೈಪಿಡಿದು 3
--------------
ಶಾಮಸುಂದರ ವಿಠಲ
ವನಜಗಂಧಿಯೆ ನಿನ್ನ ಮನದಸಂದೆಗೆವನ್ನು ಸನುಮತದಿ ಪೇಳಿನ್ನು ಮುನಿಸಿದೇನು ಚಾಡಿಮಾತನು ಕೇಳಿ ರೂಢಿಯಿಂ ಖತಿತಾಳಿ ಕಾಡುತಿಹುದೇಂ ಚಾಳಿ ರೌದ್ರಕಾಳಿ ಸೂಚನೆಯ ಕೊಡದಿಂತು ವಾಚನದಿ ಬಿರುಸಾಂತು ರಾಚುತಿರ್ಪೆಯದೇನೆ ನಾಚದಿಂತು ಮಾನವತಿನೀನೆಂದು ನಾನು ನಂಬಿರಲಿಂದು ಏನು ಮಾಡಿದೆನೆಂದು ಜರಿದೆ ಬಂದು ಸಾಕು ಸಾಕೀಬಗೆಯ ಕಠಿಣವಾಕ್ಕು ಕೋಕಿಲಾರವೆ ನಿನ್ನೊಳಿರುವ ಸೊರ್ಕು ಸಾಕುಮಾಡಿಹುದೆನ್ನ ನೋಡು ಮುನ್ನ
--------------
ನಂಜನಗೂಡು ತಿರುಮಲಾಂಬಾ
ವನಜನಾಭನ ಅಡಿಯು ಮನುಜಾನೀಪತಿಯು ಪ ಅನುದಿನದೊಳೈತಂದು ಘನಸಿಂಧುಶಯನನು ಮಿಂದು ದ್ವಾದಶಿಯೊಳಿಂದು ಸನುಮತದಿಯರ್ಪಿಸಿದ ಎಡೆಯನು ಘನತರದ ಸಂಭ್ರಮದಿ ಭುಂಜಿಸಿ ಜನಿಸಿ ಭಕುತಿಯನೆನ್ನ ಮನದಿ ಪ್ರ- ಸನ್ನನಾದನು ಎನಿತು ಪೇಳಲಿ 1 ರಕ್ಕಸರಿಗತಿ ವೈರಿ ಮಿಕ್ಕಾನತರ ಸಹಕಾರಿ ಶ್ರೀಹರಿ ಮುರಾರಿ ತಕ್ಕ ವಿಜಯಗೆ ಸಾರಥ್ಯಾಗಿ ಇಕ್ಕರಿಸಿ ಕುರುಪತೀಯನನ್ವಯ ಅಕ್ಕರದಿ ದ್ರುಪದಸುತೆಯ ಸಲಹಿ ರುಕ್ಮಿಣೀಶನು ರಕ್ಷಿಪನು ಸಲೆ 2 ಕರಿವರದ ಶಿರಿಲೋಲಾ ಪರಮಾತ್ಮ ಶ್ರೀಘನಲೀಲಾ ಜರರಹಿತ ವಿಮಲಾ ನಿರುತದೀಪರಿ ಸ್ಮರಿಪ ನರನಿಗೆ ಕರುಣಸಾಗರನಾಗಿ ಸುರವರ ತ್ವರಿತದೀವನು ಹರಸಿ ವರಗಳ ಹರಗೊಲಿದ ನರಸಿಂಹವಿಠಲಾ 3
--------------
ನರಸಿಂಹವಿಠಲರು