ಒಟ್ಟು 8509 ಕಡೆಗಳಲ್ಲಿ , 134 ದಾಸರು , 5107 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗಿI. ಲೋಕ ನೀತಿ ಅಮೃತ ಸುರಿದಂತೆ ಸಜ್ಜನರ ಸಂಗ ಅಮೃತ ಸುರಿದಂತೆ ಪ ಅಮೃತುಂಡಿತಿಹ್ಯ ಸಾಮ್ರಾಜ್ಯದಲಿ ಬಂದು ನಮ್ರತೆಯಿಂದಪಮೃತ್ಯು ಗೆಲಿಸುವಂಥ ಅ.ಪ ಮಾಯ ಮುಸುಕು ತೆಗೆಸಿ ನಿರುತ ಕಾಯಕರ್ಮ ಕೆಡಿಸಿ ಭಾವಶುದ್ಧಮಾಡಿ ಸಾವಧಾನವಿತ್ತು ಸಾವು ಹುಟ್ಟಳುಕಿಸಿ ಪಾವನವೆನಿಸುವ ದಿವ್ಯ 1 ಆಶಪಾಶಕಡಿದು ವಿಷಯ ದ್ವಾಸನೆಯನು ತೊಡೆದು ದೋಷರಾಶಿಗಳ ನಾಶಮಾಡಿ ಭವ ಘಾಸಿ ತಪ್ಪಿಸಿ ಮಹ ಶಾಶ್ವತಪದವೀವ2 ಅಡರಿಕೊಂಡು ಬರುವ ಸಂಸಾರ ತೊಡರು ಕಡಿವ ಪೊಡವಿತ್ರಯಂಗಳ ಒಡೆಯ ಶ್ರೀರಾಮನ ಅಡಿದೃಢವಿತ್ತು ಮುಕ್ತಿಗೊಡೆಯನೆನಿಸುವಂಥ 3
--------------
ರಾಮದಾಸರು
ಗಿಣಿಯೆ ನಿನಗೇನು ಬೇಕದನೀವೆ ಹಯವದನ-ನೆನಿಪ ಹರಿಯನು ಕರೆತಾರೆ ಗಿಣಿಯೆಮುನಿ ವಾದಿರಾಜನಿಗೆ ವರವೀವ ದೇವನವನೆನೆವವರ ಬಿಡನೆಲೆ ಗಿಣಿಯೆ ಪ. ವೃಂದಾವನದಿ ಚಂದ್ರನಂತೆಸೆವ ಗೋವಿಂದಚಂದದಿ ನಿನ್ನ ಮಾತ ಮನ್ನಿಸುವನಂದಗೋಪಿಯ ಮುದ್ದುಕಂದನೆನಿಪ ಮುಕುಂದನ-ನಿಂದಿರುಳು ತಂದು ತೋರು ಗಿಣಿಯೆ 1 ಮೂರು ಬಣ್ಣದ ಕೊರಳ ತಿರಿಯುಳ್ಳ ಗಿಣಿ ನೀನುಮೂರು ಬಣ್ಣದ ಚಾರುನಯನಮಾರನನುಚರ ನೀನು ಮಾರನ ಜನಕನವನುಮೀರ ನಿನ್ನ ಬಿನ್ನಪವ ಗಿಣಿಯೆ 2 ಸತತ ಸಿರಿದೇವಿಯರ ಸುತನೆನಿಪ ಕಾಮನಿಗೆರಥವಾಗಿ ಮೆರೆವೆ ನೀ ಗಿಣಿಯೆಕೃತಕೃತ್ಯನಾದರೂ ಅದರಿಂದ ನಿನ್ನ ಮಾತಪ್ರತಿಪಾಲಿಸುವನೆÉಲೆ ಗಿಣಿಯೆ 3 ಎಲ್ಲರು ಭುಂಜಿಸುವ ಮೊದಲೆ ಭುಂಜಿಸುವ ನಮ್ಮಿನಿಯಬಲ್ಲಿದಾತನ ಬಿರುದ ನಿನಗಿತ್ತಚೆಲುವ ಸಸಿಗಳ ತೆನೆಯ ತಂದು ತಂದು ಮೆಲುವೆ ಗಡಸಲುವುದು ಮೋಹನದ ಗಿಣಿಯೆ 4 ಪಚ್ಚೆಯ ಬಣ್ಣದ ಗರಿಯ ಸಿರಿಯುಳ್ಳ ಗಿಣಿ ನೀನುಪಚ್ಚೆಯ ಬಣ್ಣದ ವ್ಯಾಸನವನುಎಚ್ಚರಿಸಿ ಕೊಡುತಿದೆ ನಿನ್ನ ಕಂಡರಾ ಮುನಿಯಮೆಚ್ಚಿದೆ ನಾನವನ ತಂದು ತೋರು ಗಿಣಿಯೆ 5 ಕೆಂದಾವರೆಯ ಪೋಲ್ವ ನಿನ್ನ ಚರಣ ಹರಿಯ ಪದದÀಂದವನು[ತಂದುತೋರು]ಗಿಣಿಯೆಚೆಂದದ ಅವನ ಚೆಂದುಟಿಯಂತೆ ನಿನ್ನ ಚೆಲುವ ಮುಖ ಕೆಂಪುತÀಂದು ಮುಂದಿರಿಸು ನೀ ಗಿಣಿಯೆ6 ಅವನ ವಾಹನನೆನಿಪ ಗರುಡನ ಕುಲದಲುದ್ಭವಿಸಿ-ದವ ನೀನೆಲೆ ಗಿಣಿಯೆಅವನ ಮುದ್ದು ನುಡಿಯ ಬಲ್ಲರೆ ನೀನು ಜಗದೊಳಗೆಸವಿಮಾತುಗಳ ನುಡಿವೆ ಗಿಣಿಯೆ 7 ಗಮನ ನಿನಗೆಸೊಗಸುನುಡಿಯಿಂದವನ ಪದಕೆ ಬಿನ್ನಹ ಮಾಡಿಸುಗುಣನ ಕರೆತಾರೆ ಗಿಣಿಯೆ8 ತಮ್ಮ ತಮ್ಮ ಮನೆಗಳಲ್ಲಿ ರಮೆಯರಸ ಕೃಷ್ಣನ-ನು ಮನದಲ್ಲಿ ಅರ್ಚಿಸಿ [ಪೂಜಿಸುವರು]ಸುಮುಖನೆಂದು ನಿನ್ನ ಮನೆಯ ಚಾವಡಿಯಲಿ ಇಹ-ನ ಮನ್ನಿಪರೆಲೆ ಗಿಣಿಯೆ 9 ಉರದಲ್ಲಿ ಸಿರಿವತ್ಸಯೆಂಬ ಕುರುಹುಂಟವಗೆಕರಗಳಲಿ ಶಂಖಚಕ್ರಗಳು ಕೊರಳಲ್ಲಿ ಕೌಸ್ತುಭಮಣಿಯಿಹ ಹಯವದನ ನ-ಮ್ಮರಸನೆಂದರಿತುಕೊ ಗಿಣಿಯೆ 10
--------------
ವಾದಿರಾಜ
ಗಿರಿಯ ತಿಮ್ಮಪ್ಪ ವಾಹನಗಳೇರಿ ನಿತ್ಯಾ ಮೆರೆದು ಚತುರ ಬೀದಿ ತಿರುಗಿ ಬಪ್ಪುದು ನೋಡೆ ಪ ಸರಸಿಜಭವಾಗ್ರಜರುಳಿದವಾರು ವರ ಸಕಲ ಮನೋಭೀಷ್ಟ ಕೈಕೊಳುತಾ ನೆರೆದು ಸುತ್ತಲು ತಮ್ಮ ಭಕುತಿಯಲಿ ಸೂಸುತ್ತ ಹರುಷ ವಾರಿಧಿಯಾಳು ಮುಳಗಿದಟ್ಟಿಡಿಯಿಂದಾ 1 ಸುತ್ತಲುದರೆ ಬಿಂದುಗಳೊಂದು ಮುತ್ತಿನ ಸೂರ್ಯಪಾನಾ ಪತಾಕೆಗಳು ಬೀ ಸುತ್ತಲಿಪ್ಪದು ಚಾಮರ ಪಂಜುಗಳೆಸೆಯೆ 2 ದಂಡಿಗೆ ತಾಳ ಬೆತ್ತವ ಪಿಡಿದು ನಿಂದು ತಂಡ ತಂಡದಲಿಂದ ಮಹಿಮೆಯನ್ನು ಕೊಂಡಾಡುತ ಮನ ಉಬ್ಬಿ ಮಹೋತ್ಸವದಲ್ಲಿ ತೊಂಡರು ಹರಿದಾಡಿ ಹಾಡಿ ಪಾಡುತಲಿರೆ3 ಪವನ ಗರುಡ ಶೇಷ ಸಿಂಹ ಮಂಟಪ ಮತ್ತೆ ರವಿ ಶಶಿ ತುರಗ ಅಂದಣ ಮಿಕ್ಕಾದ ನವರಾತ್ರಿಯೊಳಗೆಲ್ಲ ವಾಹನನಾದ ಅಂ ದವನಾರು ಬಣ್ಣಿಪರು ಸಕಲ ಭೂಷಿತವಾಗೆ 4 ಚಿನುಮಯ ರೂಪ ವಿಚಿತ್ರ ಮಹಿಮ ದೇವ ನೆನೆದವರ ಹಂಗಿಗೆ ಸಿಲುಕುವಾ ಘನಗಿರಿ ತಿರ್ಮಲ ವಿಜಯವಿಠ್ಠಲರೇಯಾ ದನುಜದಲ್ಲಣನೆಂಬೊ ಬಿರಿದು ಪೊಗಳಿಸುತ್ತ 5
--------------
ವಿಜಯದಾಸ
ಗಿರಿರಾಜ ಗಿರಿರಾಜ ಪ ತರಣಿಶತ ರುಚಿರ ತೇಜ ವೆಂಕಟ ಅ.ಪ. ತ್ರಿಜಗ ವಿ ಕರ ಸಮೀರಾಶನ 1 ಪಿನಾಕಿ ನಿಕರವನಾಳ್ವ ಲೋಕೈಕ ಶರಣ್ಯ 2 ನಂಬಿದ ಭಕುತ ಕುಟುಂಬಿಯೆಂಬದಂಬು ಜಾಂಬಕ ಬಲ್ಲೆ ಕೃಪಾಂಬುಧಿ ಕರುಣಿಸು 3 ಮನಸಿಜಪಿತ ನನ್ನ ಅನುದಿನ ಮಾಡೋ 4 ಸಟೆಯಲ್ಲೀ ನುಡಿ ದಿಟವೆಂಬುದು ಬುಧ ಕಟಕ ಜಗನ್ನಾಥ ವಿಠಲ ವಿಹಂಗಪ 5
--------------
ಜಗನ್ನಾಥದಾಸರು
ಗಿರಿರಾಜ ಚಿತ್ತವುದಾರ ಜೀಯಾ | ನಾ ನಿನ್ನ ಪಾದಕ್ಕೆರಗಿ ಯಾಚಿಸುತಲಿ ಮುಗಿವೆನು ಕೈಯಾ | ನೆರೆ ನಂಬಿದವರನುಎರವು ಮಾಡಲು ನಿನಗೊಳಿತೇನಯ್ಯಾ | ಪಿಡಿ ಬೇಗ ಕೈಯಾ ಪ ಕರುಣಿಗಳರಸನೆ ಕಾಮಿತ ಫಲದನೆ ಕರಿರಾಜನ ಭೀಕರ ಹರ ವಂಕಟ ಅ.ಪ. ಅಪಾರ ಮಹಿಮಾ ಆಪದ್ಬಂಧೂ | ಆಪನ್ನರ ಪಾಲಿಪ ವ್ಯಾಪಾರ ನಿನಗಲ್ಲದೆ ಮತ್ತೊಂದೂ | ನಾ ಕಾಣೆನೊ ಜಗದಿಭೂಪಾನೆ ಭೂಮಾ ಗುಣ ಗಣ ಸಿಂಧೂ | ಸ್ವಾಮಿಯೆ ಸಿರಿಗೆಂದೂ ||ಪಾಪದ ಪಂಕವು ಲೇಪವಾಗದಂ | ತೀ ಪರಿಪಾಲಿಸೊ ಶ್ರೀಪತಿ ಅಂಜನ 1 ತರು ಜಾತಿ ಮೃಗಪಕ್ಷಿಗಳಾಕಾರ | ಮೊದಲಾದ ರೂಪದಿಸುರರೂ ಕಿನ್ನರರೂ ತಮ್ಮ ಪರುವಾರ | ಒಡಗೂಡಿ ನಿನ್ನಾಶರಣರ ಚರಣಾರಾಧನೆಗೆ ವಿಸ್ತಾರ | ಈ ಬಗೆ ಶೃಂಗಾರಾ ||ದೊರೆತನ ಠೀವಿಗೆ ಧರಣಿ ಮಂಡಲದಿ | ಸರಿಗಾಣೆನೊ ಹೇ ತಿರುಪತಿ ವೆಂಕಟ 2 ಫಣಿ 3 ಕಲಿಯುಗದೊಳಗೀ ಪರ್ವತದಲ್ಲಿ | ಸರಿಗಾಣೆನೊ ಎಂದುನೆಲೆಸೀದೆ ನೀನೆ ಈ ಸ್ಥಳದಲ್ಲಿ | ವೈಕುಂಠಕಿಂತನೆಲೆಯಾ ವೆಗ್ಗಳವೆಂದು ನೀ ಬಲ್ಲಿ | ಅದ ಕಾರಣದಲ್ಲಿ ||ಜಲಜ ಭವಾದ್ಯರು ಒಲಿದೊಲಿಯುತ | ತಲೆದೂಗುವರೈ ಭಳಿರೆ ಕಾಂಚನ 4 ಸುವರ್ಣ ಮುಖರಿ ತೀರವಾಸ | ಆ ಬ್ರಹ್ಮೋತ್ಸವನವರಾತ್ರಿಯಲ್ಲಿ ನೋಡಲು ಶ್ರೀಶ | ಸಂ ಪದವಿಯನಿತ್ತುಕಾವನು ಕಲುಷದ ಭಯ ಬರಲೀಸ | ಶ್ರೀ ಶ್ರೀನಿವಾಸ ||ಶ್ರೀವರ ಭೂಧರ ವ್ಯಾಸವಿಠಲ* ಪ | ರಾವರೇಶ ಶ್ರೀ ದೇವನೆ ದೇವಾ 5
--------------
ವ್ಯಾಸವಿಠ್ಠಲರು
ಗಿರಿರಾಜಕುಮಾರಿ ದೇವಿಪರಮ ಮಂಗಳಗೌರಿಪರಮ ಪಾವನೆ ಶ್ರೀಹರಿ ಸೋದರಿಸುರರಿಪು ಮಧುಕೈಟಭ ಸಂಹಾರಿಶ್ರೀಕರಿ ಗೌರಿ ಹಸೆಗೇಳು ಹಸೆಗೇಳು 1 ಕುಂಭಸಂಭವವಿನುತೆ ದೇವೀಶಾಂಭವಿ ಶುಭಚರಿತೆಜಂಭಭೇದಿ ಮುಖ ಸುರವರಪೂಜಿತೆಕಂಬುಕಂಠಿ ಶುಭಗುಣಗಣ ಶೋಭಿತೆಲೋಕೈಕಮಾತೆಹಸೆ2 ಸರಸಿಜದಳನಯನೆ ದೇವಿಸರಸಕುಂದರದನೆಸರ್ವಮಂಗಳೆ ಸರ್ವಾಭರಣೆಸುರಮುನಿ ಪರಿಭಾವಿತೆ ಶುಭಚರಣೆಕರಿರಾಜಗಮನೆ ಹಸೆ 3 ನಿರ್ಜರ ಪರಿವಾರೆಮಣಿಮಯಹಾರೆ ಹಸೆ4 ಪನ್ನಗನಾಭವೇಣಿ ದೇವಿಸುನ್ನತೆ ರುದ್ರಾಣಿ ಕನ್ನಡಿಗದಪಿನ ಶಿವೆ ಶರ್ವಾಣಿಲೋಕೈಕ ಜನನಿ ಹಸೆ 5 ಶುಭ ಲೀಲೆಮೃಗಮದ ತಿಲಕ ವಿರಾಜಿತೆ ಪಾಲೆಕುಂಕುಮನಿಟಿಲೆ ಹಸೆ 6 ಪಂಕಜ ಸಮಪಾಣಿ ಶ್ರೀ ಹರಿ-ಣಾಂಕವದನೆ ವಾಣಿಅಂಕಿತಮಣಿಗಣ ಭೂಷಣ ಭೂಷಣಿಶಂಕರೀ ಕೆಳದಿಪುರವಾಸಿನಿಪಾರ್ವತಿ ಕಲ್ಯಾಣಿ ಹಸೆ 7
--------------
ಕೆಳದಿ ವೆಂಕಣ್ಣ ಕವಿ
ಗುಂಜಾ ನರಸಿಂಹಾ-ಪಾಹಿ ಮಾಂ ಪಾಹಿ ಪ ಅಜಭವ ಫÀಣಿ ದ್ವಿಜರಾಜ ಸುಪೂಜಿತ ತ್ರಿಜಗದೊಡೆಯ ನರಹರಿಯೆ-ದುರಿತ ಹರಾ ಅ.ಪ ಪಟುತರ ಭಾಧೆ ಸಂಕಟಪಡುತಲಿ ಸುರ- ಕಟಕ ನುತಿಸಿ ಕೋಟಿತಟಿತ್ಕಾಯನೆ ಕೋಟಿ ಖಳರೆದೆ ಕುಟ್ಟಿ ಯಮಪುರ ಕಟ್ಟಿ ದಿಟ್ಟತನದಲಿ ನಿಶಾಚರನಳುಹಿದ 1 ಸಿಡಿಲೋಪಮ ಘುಡು ಘುಡಿಸುತ ಕಿಡಿಯ ಕಡೆಗಣ್ಣಿಂದಲಡಿಗಡಿಗುಗುಳುತ ಕೂಡಿನಖಗಳ ನೀಡಿಶಿರವನ- ಲ್ಲಾಡಿಸಿ ಜಡಜಂಗಮರ ನಡುಕ ಬಿಡಿಸಿದೆಯೊ2 ಅಡಿಗಡಿಗೆಡರನು ಪಡುತಿಹ ಹುಡುಗನ ದೃಢತರ ಭಕುತಿಯ ನುಡಿಯುನು ಕೆÉೀಳುತ ನೋಡಿ ಅಭಯವ ನೀಡಿ ನೀ ದಯ ಮಾಡಿ ಬಿಡುಗಣ್ಣರನು ಬಿಡದೆ ಸಲಹಿದೆಯೊ 3 ಕೇಳಿ-ಹರುಷವ ತಾಳಿ-ದನುಜರ ಧೂಳೀಪಟಮಾಡಿ ನಲಿದು ನಿಂದಾಡಿದೆ 4 ಸಿಂಧುಶಯನ ಭವಬಂಧವಿಮೋಚಕ ಇಂದಿರೆಯರಸ ಶ್ರೀ ವೇಂಕಟೇಶ ನೀ ಬಂದೂ ಸ್ತಂಭದಿ ನಿಂದೂ ಭಕುತರ ಬಂಧೂ ಸುರವೃಂದಕೆ ಆನಂದವ ನೀಡಿದ 5 ಕಡಲುಗಳೇಳಡಿಗಡಿಗುಕ್ಕುತ ಪಥ ತಪ್ಪಿ ಬೀಳುತಲಿರೆ ದಾಡಿ ಕುಣಿದಾಡೀ ಸ್ಮಶ್ರುಗಳ ತೀಡಿ ಬಡಬಾನಲಲ್ಲಾಡಿಸಿ ನಿಂದ 6 ಪರಿಪರಿ ಸುರರವಯವಗಳನು ಧರಿಸಿ ಉರುತರ ಕ್ರೀಡೆಯ ಮಾಡಿ ಪ್ರಳಯದಿ ತೋರಿ ಧಿಕ್ಕರಿಸಿ ತಾಳಿ ಹರುಷದಿ ಕೇಳಿಯೊಳು ಉರಗಾದ್ರಿವಾಸವಿಠಲ ನೀ ನಿಂದೆಯೊ 7
--------------
ಉರಗಾದ್ರಿವಾಸವಿಠಲದಾಸರು
ಗುಣವಾರಿಧಿಯೆ ಪ ದಾರಾ ಕೃತಿಯನೀ ತೊರಿಸೆನೆಗೆ 1 ದೃಷ್ಟಿಸುವೆನೊ ಶ್ರೀಕೃಷ್ಣನಿನ್ನನು 2 ಚೆನ್ನಾಗಿ ತೊಳೆಯುವೆ ನಿನ್ನಡಿಗಳ 3 ದಿಂದಾಲಂಕರಿಸುವೆ ಸುಂದರಾಂಗನೆ 4 ಮೂಜಗದೊಡೆಯನನು ಪೂಜಿಸುವೆನೊ5 ದೀಪಂಗಳನು ಬಹುದೀಪಿಸುವೆನು 6 ಘೃತ ಮೇಳೈಸುವೆನು ಶ್ರೀಲೋಲನಿಗೆ 7 ಕರ್ಪೂರದಾರತಿಗಳರ್ಪಿಸುವೆನು 8 ಮನದಣಿಯುವಂದದಿನಾ ಕುಣಿದಾಡುವೆ 9 ಸದನದೊಳಿಂಬಿಟ್ಟು ಮುದಹೊಂದುವೆ 10 ಪುಲಿ-ಗಿರಿ ಧಾಮನೆ 11
--------------
ಸರಗೂರು ವೆಂಕಟವರದಾರ್ಯರು
ಗುರವೆ ಪೊರೆಯೊ ಯನ್ನ | ಆವಗುಣಮರೆದು ರಾಘವೇಂದ್ರಾ ಪ ನೆರೆನಂಬಿದರ ಸುರತರುವೇ ಹೇಪುರಟ ಕಶಿಪುಜ ಗರುಡವಹನ ಪ್ರೀಯ ಅ.ಪ. ಸುಜನ ವತ್ಸಲ | ಗೆಲುವ ಕಾಣೆನೊ ಕರ್ಮನಿರ್ವಹದಿಜಲಜನಾಭನ ಚರಣ ಪುಷ್ಕರ | ಸುಲಭ ಷಟ್ಟದ ಸೆನಿಸೊ ಗುರುವರ 1 ಯತಿಕುಲ ಸಾರ್ವಭೌಮ | ನಿಮ್ಮಯ ನಾಮಾಮೃತವನುಣಿಸಲು ನಿಸ್ಸೀಮಾ ||ಪತಿತ ಪಾವನ ಹರಿಯ | ಸತತದಿ ನುತಿಸುವಮತಿಯಿತ್ತು ಪಾಲಿಸೊ | ಶತಕ್ರತು ಪಿತ ಪಿತನೆ ||ರತಿಪತಿಯ ಪತನೆನಿಸಿದಾತನ | ನತಿಸಿ ನುತಿಸುತ ಕರೆಯುತಲಿ ಗತಿ ಪ್ರದಾಯಕ ಹರಿಯ ವ್ಯಾಪ್ತಿಯ | ಪಿತಗೆ ತೋರಿದ ಅತುಳ ಮಹಿಮಾ 2 ಮಂತ್ರ ನಿಕೇತನನೆ ಯತಿಕುಲರನ್ನ ಮಂತ್ರಾರ್ಥ ರಚಿಸಿದನೇ ||ಗ್ರಂಥೀಯ ಹರಿಸೂವ | ತಂತ್ರವ ತೋರೋ ಅತಂತ್ರವಾಗಿದೆಯನ್ನ | ಮಂತ್ರ ಸಾಧನವೂ || ಪ್ರಾಂತಗಾಣದೆ ಚಿಂತಿಸುವೆ ಸರ್ವಸ್ವ | ತಂತ್ರ ಗುರುಗೋವಿಂದ ವಿಠಲನ ಅಂತರಂಗದಿ ತೋರಿ ಸಲಹೋ | ಕ್ರಾಂತನಾಗುವೆ ನಿಮ್ಮ ಪದಕೇ3
--------------
ಗುರುಗೋವಿಂದವಿಠಲರು
ಗುರು ಅಂತರ್ಯಾಮಿ ಶ್ರೀನಿವಾಸ ಸಿರಿರಮಣ ಶ್ರೀ ಕೃಷ್ಣ ಶ್ರೀನಿಧಿಯೆ ಶ್ರೀಶ ಪ. ಸೃಷ್ಟಿಕರ್ತನೆ ನಿನ್ನ ಲಕ್ಷಿದೇವಿಯು ಸತತ ಶ್ರೇಷ್ಠತನದಲ್ಲಿ ಪೂಜೆ ಮಾಡುತಿಹಳೊ ಅಷ್ಟು ದೇವತೆಗಳು ಆಗಮವನನುಸರಿಸಿ ಶಿಷ್ಟೇಷ್ಟನೆಂತೆಂದು ಪೂಜೆ ಮಾಡುವರೋ 1 ಅಣು ನಾನು ನಿನ್ನ ಅರ್ಚಿಸ ಬಲ್ಲೆನೇ ದೇವ ಘನಮಹಿಮ ಸ್ವೀಕರಿಸೊ ಅಲ್ಪ ಸೇವೆ ಮನ ಮಂದಿರದಿ ನಿಂತು ಅನುಗಾಲ ನಿನ್ನ ದಿವ್ಯ ಘನ ಮೂರ್ತಿಯನೆ ತೋರೋ ಪೂಜೆ ಮಾಡುವೆನೊ 2 ಸರಸಿಜಾಕ್ಷನೆ ನಿನಗೆ ಸರಸದಿಂದ ಗುಲಾಬಿ ಸರದ ಪೂಮಾಲೆಯನು ಕೊರಳಿಗ್ಹಾಕುವೆನೊ ಸುರರ ಪಾಲಿಪ ಹರಿಯೆ ಸುರಹೊನ್ನೆ ಹಾರವನು ಕರ ಚಕ್ರಯುತ ನಿನ್ನ ಕಂಧರದಿ ಧರಿಸೋ 3 ಶ್ಯಾಮವರ್ಣನೆ ರತ್ನಹಾರಗಳು ಹೊಳೆಯುತಿರೆ ಶ್ರೀ ಮನೋಹರ ಮುತ್ತಿನ್ಹಾರ ಪದಕಗಳು ಈ ಮಧ್ಯೆ ದಿವ್ಯ ಶ್ಯಾವಂತಿಗೆ ಸುಮನದಿಂ ಕಾಮಜನಕನೆ ಮಾಲೆಕಟ್ಟಿ ಹಾಕುವೆನೊ 4 ಈ ಜಗವ ಉದರದಲಿ ಧರಿಸಿ ಮೆರೆಯುವ ದೇವ ಜಾಜಿ ಪೂಮಾಲೆಯನು ಕಂಧರದಿ ಧರಿಸೊ ಭೋಜಕುಲ ತಿಲಕನೆ ಕೆಂಡ ಸಂಪಿಗೆ ಸರವ ಮಾಜದೇ ಎನ್ನಿಂದ ಸ್ವೀಕರಿಸೊ ದೇವ 5 ಪಾತಕರಹಿತ ಹರಿ ಪಾವನರೂಪನೆ ಪ್ರೀತಿಯಿಂ ಸ್ವೀಕರಿಸೊ ಕೇತಿಕೆಯ ಸರವ ಶ್ರೀತರುಣಿ ಸತ್ಯಭಾಮೆಯರು ಕದನವಗೈದ ಪ್ರೀತಿ ಪಾರಿಜಾತ ಧರಿಸಯ್ಯ 6 ಮರುಗ ದವನಗಳಿಂದ ಸುರಹೊನ್ನೆಯನೆ ಕಟ್ಟಿ ಇರುವಂತಿಗೆಯ ಹಾರ ಹರಿಯೆ ಅರ್ಪಿಸುವೆ ಪರಿಮಳವ ಬೀರುತಿಹ ಪರಿಪರಿಯ ಮಲ್ಲಿಗೆಯ ಸರಗಳನೆ ಧರಿಸಿನ್ನು ಸಾಕಾರರೂಪ 7 ದುಂಡುಮಲ್ಲಿಗೆಯ ಮೊಗ್ಗು ಪಾಂಡವರ ಪಾಲಕಗೆ ದಂಡೆಯನೆ ಕಟ್ಟಿ ನಾ ಕೊರಳಿಗ್ಹಾಕುವೆನೊ ಚಂಡವಿಕ್ರಮ ಶಂಖ ಚಕ್ರಧಾರಿಯೆ ಪಾದ ಮಂಡೆ ಪರಿಯಂತರದಿ ನೊಡಿ ದಣಿಯುವೆನೊ8 ಸತಿ ನಿನಗಾಗಿ ಕಾಷ್ಟದಳ ಮೃತ್ತಿಕೆಯ ಸೇವಿಸುವ ಜನಕೆ ಇಷ್ಟ ಫಲವನೆ ಇತ್ತು ಕೃಷ್ಣನ್ನ ತೋರಿಸುವ ಶ್ರೇಷ್ಠ ತುಳಸಿಮಾಲೆ ಕಟ್ಟಿ ಹಾಕುವೆನೊ 9 ಕಮಲನಾಭನೆ ಕೃಷ್ಣ ಕಮಲಾಪತಿಯೆ ಸ್ವಾಮಿ ಕಮಲಪಾಣಿಯೆ ದೇವ ಕಮಲಾಕ್ಷನೆ ಕಮಲಮುಖ ನಿನ್ನ ಪದಕಮಲದಲಿ ನಲಿವಂತೆ ಕಮಲದ್ಹಾರವ ಕಟ್ಟಿ ಕೊರಳೀಗ್ಹಾಕುವೆನೋ10 ಈ ಪರಿಯ ಮಾಲೆಗಳ ನೀ ಪ್ರೀತಿಯಿಂ ಧರಿಸಿ ಪಾಪಗಳ ತರಿದೆನ್ನ ಪಾವನವಗೈಯ್ಯೊ ಆಪತ್ತು ಕಳೆವ ಶ್ರೀ ಗುರು ಕಟಾಕ್ಷದಿ ನುಡಿದೆ ಗೋಪಾಲಕೃಷ್ಣವಿಠ್ಠಲನೆ ಕೃಪೆಮಾಡೊ 11
--------------
ಅಂಬಾಬಾಯಿ
ಗುರು ಚರಣವನು ಸಂಸ್ಮರಿಸಿರೋ ಪಗುರು ಲಕ್ಷ್ಮಿ ವರಜಾತ | ಗುರು ಲಕ್ಷ್ಮಿಪ್ರಿಯ ತೀರ್ಥ ಚರಣ ಸರಸಿಜ ಭಜಿಸೆ | ಕರಣದಂತರ ಬಾಹ್ಯ ಪರಿಶುದ್ಧಿಯನೆ ಗೈದು | ಜ್ಞಾನ ಭಕ್ತಿಯನಿತ್ತು ಹರಿ ಪೊರೆವ ಸಂತತದಲಿ ಅ.ಪ. ಪೂರ್ವಾಶ್ರಮಾ ನಾಮ | ಭೂವಿಬುಧ ಕೃಷ್ಣಾಖ್ಯ ದೇವರಾಯನ ದುರ್ಗ | ದಾವ ನರಸೀಪುರದಿಆವಾಸಿಸುತ್ತಿರಲು | ಓರ್ವ ಸಖನಿವರ ಜ್ಞಾನಾನುಸಂಧಾನದಾ |ಭಾವ ತಿಳಿಯುತ ಮನದ | ಯಾವ ದೊಂದಭಿಲಾಷೆನೀವು ಸಲಿಸುವುದೆನ್ನೆ | ಆವುದೆನುತಲಿ ಕೇಳೆಯಾವ ಪನಸದ ಫಲವ | ಆಸ್ವಾದು ಮಧು ಒಡನೆಓವಿ ಕರಡಿಯು ಕಲಸಿದ 1 ಅದರ ಪ್ರಾಪುತಿಗಾಗಿ | ಬದಿವನನೊಂದಿನವುಬೆದರದಲೆ ಪೊಗುತಿರಲು | ಎದುರೊಂದು ಶಿಲೆ ಮೇಲೆವದಗಿ ಕಲಸಿದ ಕಂಡು | ಅದರೊಡನೆ ಮರನೇರೆ ಬಂದಿತದು ಮರಿಗಳೊಡನೆ |ಅದಕು ಇವರಿಂಗಾಯ್ತು | ಕದನವೂ ಕೆಲಕಾಲ ಒದಗೆ ಜಯ ವಿಬುಧರಿಗೆ | ಹದುಳದಲಿ ಗೃಹಸೇರಿಮುದದಿಂದ ಶ್ರೀಹರಿಯ | ಪದ ಸ್ಮರಣೆಯಲ್ಲವರು ದಿನಗಳನೆ ಕಳೆಯುತಿಹರು 2 ಯತಿ ಲಕ್ಷ್ಮಿ ವರರಿಂದ | ಯತಿಗಳಾಶ್ರಮ ಪೊಂದಿಹಿತದಿಂದಲಾ ಬೂದಿ | ನೆತ್ಯಾಖ್ಯ ಗ್ರಾಮದಲಿಸ್ಥಿತರಾಗಿ ಶಿಷ್ಯರಿಗೆ | ಹಿತದ ಉಪದೇಶವ ಪ್ರೀತಿಯಲಿ ಮಾಡುತಿರಲು |ಯತಿಗಳಾಶ್ರಮದಲ್ಲಿ | ಮತಿ ವಂತ ವಿಪ್ರೋರ್ವಕ್ಷಿತಿಯೊಳಾ ನಾಕನಿಭ | ಮಂತ್ರ ಮಂದಿರ ಸೇವೆ ಅತಿಹಿತದಲೆಸಗುತಿರೆ | ಯತಿಗಳಾಶೀರ್ವದಿಸೆ ಪಥವಾಯ್ತು ಪ್ರಿಯರಲ್ಲಿಗೇ 3 ಪತಿ ಸೇವೆ | ಯುಕುತನಾಗಿರಲ್ವೊರೆದು ನಾಲ್ವತ್ತು ದಿನ ಮಿತಿಯಲಿ |ಕಕುಲಾತಿ ತೊರೆದು ನಿಜ | ಭಕುತಿಯಿಂ ಗೈವುತಿರೆಲಕುಮಿ ಪ್ರಿಯರಾಚಾರ | ಉಕುತಿಯಲಿ ದುರ್ಭಾವಪ್ರಕಟವಾಗಲು ಮನದಿ | ಬಂಕಪುರ ಮಾರ್ಗವನೆ ತೆರಳಲನುವಾದನೂ 4 ಮತ್ತೆ ನರಹರಿ ತಾನು | ವ್ಯಕ್ತಯಿಂತೈಜಸನುಒತ್ತಿಪೇಳಲು ಬುಧನು | ಮತ್ತೆ ಗುರುಪದಕೆರಗಿಬಿತ್ತರಿಸೆ ತನ್ನಸ್ವಪ್ನ | ವಾರ್ತೆಗಳ ವಿಶ್ವಮಿತ್ರನ ಭಾವವನೆ ತೋರುತ |ಇತ್ತಲಿಂದೆರಡೊರ್ಷ | ಕಿತ್ತಪೆವು ಆಶ್ರಮವಆರ್ಥಿಯಿಂದಿರುತಿರ್ದು | ಹಸ್ತಿವರದನ ಸೇವೆಉತ್ಸಹದಲೆಸಗುವುದೆ | ನುತ್ತಲಾಶೀರ್ವದಿಸಿ ಚಿಂತಿಸುತ್ತಿರೆ ಹರಿಯನು 5 ಗ್ರಾಮದೊಳಗುಳ್ಳ ಖಲ | ಸ್ತೋಮ ಬಂದಡರುತ್ತಭೂಮಿ ಗೋಸುಗ ಕಲಹ | ಸೀಮೆ ಮೀರುತ ಗೈಯ್ಯೆಅ ಮಹಾಯತಿವರ್ಯ | ಭೂಮಿ ಕೃಷ್ಣಾಂಕಿತವುಕಾಮನೆಯ ಬಿಡಿರೆನುತಲಿ | ನೇಮದಲಿ ಘರ್ಜಿಸಲು |ಆ ಮಹಾ ದುಷ್ಟಜನ ಈ ಮರದ ಸಂಪದವ ಕಾಮಿಸುತ ಮನದಲ್ಲಿನೇಮದಿಂ ಪತ್ರೋರ್ವ | ಪಾಮರನ ಒಡನವರು ಯಾಮ ಸಂಜೆಲಿ ಕಳುಹಲು 6 ಪರಿವಾರ ಜನಕೆಲ್ಲ | ಇರುವ ನೆಲೆ ಬಿತ್ತರಿಸಿಸರಿಯುತಲಿ ಸುಕ್ಷೇಮ | ನೆರೆಯ ಸಾರುವುದೆನುತಒರೆಯಲೂ ಕೆಲವರು | ಮರೆಮಾಡಿ ತೃಣ ಬಣವಿ ನೆರೆ ಬಿಡದೆ ಸಾರುತಿರಲು |ವರನಿಶೀ ಸಮಯದಲಿ | ದುರುಳರೆಲ್ಲರು ಮಠಕೆಬರಬರುತ ಕವಣೆಕಲ್ | ನೆರೆಬೀರ್ವ ಜನಗಳೂಉರಿವ ತೃಣ ಬಣವಿಯಂ | ದುರೆ ಜ್ವಾಲೆ ಪರಿಕ್ರಮಣ ಭಯ ಭ್ರಾಂತಿಯಿಂದಿರುತಿರೆ 7 ಸಿರಿ ಹರಿಯ ನಮಿಸುತಿರಲು 8 ಪರಿ | ಚರರಿಘರಸುತ್ತ ಬಲುಪರಿಯ ಹರಿ ಮಹಿಮೆಗಳ | ಒರೆಯುತಾನಂದಾಶ್ರೂ ಸುರಿಸುತವ ಶೇಷನಿಶಿ | ಹರಿಕರುಣ ಸ್ಮರಣೆಯಲಿ ಸರಿಸಿದರು ಶಿಷ್ಯರೊಡನೇ 9 ಗರ ಮಿಶ್ರ | ಯತಿಗೆ ಬಡಿಸೇ ಜೀರ್ಣಿಸುತ ಪಾಪಿ ವಿಪ್ರರ್ಗೆ | ಗತಿಸಿದವು ಅಕ್ಷಿಗಳು ಮೃತ್ಯಂತಲಂದರಾಗಿ 10 ಗರ ಮಿಶ್ರ | ಸತ್ಯವಾದುದ ಕಂಡು ಪ್ರೋಕ್ಷಿಸಲು ಶಂಖದುದಕ |ವ್ಯಕ್ತವಾಯಿತು ಇವರ | ಉತ್ತುಂಗ ಮಹಿಮೆಗಳುಹಸ್ತಿವರದನು ಭೋಜ್ಯ | ವಸ್ತುಗಳ ಸ್ವೀಕರಿಸಿದತ್ತ ಮಾಡಲು ಪುನಃ | ಮತ್ತೆ ಜೀರ್ಣಿಸಿಕೊಂಡು ಹರಿಯನ್ನೆ ಚಿಂತಿಸುತಲಿ 11 ನೆಲೆಸಿರಲ್ಲಬ್ಬುರೊಳು | ಗಳ ಗ್ರಾಹಕರು ಮತ್ತೆಮಿಳಿತರಾಗುತ ರಾತ್ರಿ | ಛಲವ ಸಾಧಿಸೆ ನಿಶಿತಅಲಗು ಕತ್ತಿಯ ಪಿಡಿದು | ನೆಲಕೆ ಯತಿ ಶಿರವನ್ನು ಇಳಹುವ ಮತಿ ಮಾಡಲೂ |ಒಲವಿನಿಂ ಯತಿಯಕುಲ | ತಿಲಕ ವೃಂದಾವನವ ಬಳಸಿ ನಮಿಸಲು ಸಂಜೆ | ಯಲಿ ಪೇಳ್ದ ಬ್ರಹ್ಮಣ್ಯಒಳ ಪೊಗುತಲಾರಾಮ | ನೆಲೆಸೇರಿ ಮಠಸಾರಿ ಎಂದೆನುತ ಎಚ್ಚರಿಸಿದರ್12 ಮತ್ಸರಿಗಳಿನ್ನೊಮ್ಮೆ | ಕುತ್ಸಿತದ ಬುದ್ಧಿ ಮಹಉತ್ಸವದ ಸಮಯದಲಿ | ಹೆಚ್ಚು ಜನ ಸಂಧಿಸಿರೆನೆಚ್ಚಿದ್ದ ಪಾಚಕರು | ಉಚ್ಚಳಿಸಿ ಕೆಲಸಾರೆ ಕೆಚ್ಚಿದೆಯನೇ ತೋರುತ |ಮುಚ್ಚಿಮಠದ್ವಾರಗಳ | ಹೆಚ್ಚುತಲಿ ಪಲ್ಯಗಳ ಮತ್ಸಕೇತನ ಪಿತನು | ಮೆಚ್ಚುವಂದದಿ ಪಾಕಪೆಚ್ಚಿಸುತಲಿ ಹರಿಯ | ಅರ್ಚನೆಯ ಕೈಕೊಂಡು ಮೆಚ್ಚಸಿದರು ಸುಜನರ 13 ಜ್ವರತಾಪದಿಂದೊಮ್ಮೆ | ನೆರೆ ಬಳಲು ವಂತಿರ್ಪಗುರುವರರ ಕಂಡೋರ್ವ | ವರ ಶಿಷ್ಯ ಪ್ರಶ್ನಿಸಲುನೆರೆ ಬದುಕ ಬೇಕೆಂಬ | ಶರಿರವನೆ ತೊರೆವೆ ನೆಂಬೆರಡುಕ್ತಿ ಸಲ್ಲದಿದಕೊ |ನರರಾಡಿ ಕೊಳದಂತೆ | ವರ ಭಿಷಜ ತಾಕೊಟ್ಟವರಗುಳಿಗೆ ನುಂಗುವೆವು | ಹರಿ ಪೂಜೆ ವಿರುದ್ಧಜ್ವರ ಕುಂಟಿ ಧನ್ವಣತ್ರಿ | ವರಮಂತ್ರ ಕೈ ಸೇರಿ ಪರಿಪರಿ ಮೆರೆಯುತಿರಲು 14 ಯತಿವರರ ಮಹಿಮೆಗಳ | ತುತಿಸಲೆನ್ನಳವಲ್ಲಯುಕ್ತಿಯಲಿ ಅಪವಾದ | ಹೊತ್ತು ಕೊಳದಲೆ ಅವರು ಜಿತ ಇಂದ್ರಿಯತ್ವವನು | ಮತಿಮತಾಂ ಸುಜನಕ್ಕೆ ಪ್ರತಿರಹಿತದಿಂ ತೋರುತ |ಹಿತದಿಂದ ಲಾರಾಮ | ಸೇತು ಯಾತ್ರೆಯ ಗೈದುಕ್ಷಿತಿ ಚರಿಸಿ ಬರಬರುತ | ಹಿತಶಿಷ್ಯ ವ್ಯಾಜದಿಂಸತ್ಯ ಧೀರ್ರನು ಚರರ | ಕೃತ ಬಹಿಷ್ಕರ ಗೆಲ್ದು ಶಾಂತತೆಯನೇ ತೋರ್ದರು 15 ವರಲಕ್ಷ್ಮಿ ಪ್ರಿಯ ತೀರ್ಥ | ಕರಗಳಿಂದರ್ಚಿತವುಪರಿಸರಾರ್ಚಿತ ಯೋಗ | ನರಹರಿಯು ವ್ಯಾಸಮುನಿವರದ ಗೋಪತಿ ಕೃಷ್ಣ | ಸಿರಿವ್ಯಾಸಯತಿ ರಚಿತ ಎರಡೇಳು ರಜತ ಪ್ರತಿಮೆ |ಗುರುವರ ಬ್ರಹ್ಮಣ್ಯ | ವರದ ವಿಠ್ಠಲದೇವಸರ್ವಜ್ಞರರ್ಚಿಸಿದ | ವರ ಶರಣ್ಯ ವಿಠಲನುನಿರುತ ಪೂಜಿತವಾಗಿ | ಶರಿರ ಭೌತಿಕ ಬಿಡುವ ವರ ಸಮಯ ತಾನುಸುರಿರೆ16 ಸಂತೈಸಿ ಇತ್ತರಾಶಿಷವ 17 ನೀಲ ಕಾಲ | ವರುಷವನು ಪೈಂಗಳವು | ಎರಡೊಂದನೇ ಮಾಸವರಶುಕ್ಲ ಹರಿದಿನದಿ | ಸರಿತು ವರ ಕಣ್ವತಟಪರಮ ಸುಕ್ಷೇತ್ರದಲಿ | ವರಯೋಗ ಮಾರ್ಗದಲಿ ದೇಹ ಹರಿಗರ್ಪಿಸಿದರು 18 ಜಯ ಜಯತು ಶುಭಕಾಯ | ಜಯಜಯತು ತಪಶೀಲಜಯ ಶಮೋದಮವಂತ | ಜಯ ಶಾಪನುಗ್ರಹನೆಜಯಲಕ್ಷ್ಮಿ ವರಜಾತ ಜಯಲಕ್ಷ್ಮಿ ಪ್ರಿಯ ತೀರ್ಥ ಜಯ ಜಯತು ವಿಶ್ವಮಿತ್ರ |ಪ್ರಿಯ ಗುರುಗಳಾಂತರ್ಯ | ಜಯ ದೇವ ನೋಳ್ಪರಮಪ್ರಿಯನಾದ ತಂದೆ ಮುದ್ದು | ಮೋಹನ್ನ ವಿಠಲಾತ್ಮಜಯ ಗುರೂ ಗೋವಿಂದ | ವಿಠ್ಠಲನ ಭಜಿಸಿದರೆ ನಯಸುವನು ಪರಮಗತಿಗೆ 19
--------------
ಗುರುಗೋವಿಂದವಿಠಲರು
ಗುರು ನಾರಪ್ಪಯ್ಯನ ಚರಣಕಮಲಯುಗ್ಮ ಮಾನವ ಪ ನಿರುತ ಸ್ಮರಿಸುವ ಶರಣು ಜನರಘ- ತರಿದಭೀಷ್ಠೆಯ ಗರಿಯಲೋಸುಗ ಧರಣಿ ವಲಯದಿ ಮೆರೆವ ವೆಂಕಟ ಗಿರಿಯ ರಮಣನ ಕರೆದು ತಂದಿಹ ಅ.ಪ ಧರೆಸುರರೊಳು ಜನಿಸಿರಲು ಭ್ರಾತ್ರರುನಾನಾ ಪರಿಬಾಧಿಸಲು ಸಹಿಸಿ ಚರಣ ಯಾತ್ರೆಯಲಿಂದ ಗಿರಿಯಕಾಣುತ ಮಲಗಿರಲು ಸ್ವಪ್ನದಿಸೂಚಿಸಿ ಧರಣಿ ದೇವನೆ ನಿನಗೆ ದರುಶನ ಕೊಡಲು ನಾ ಬರುವೆನೆಂದಾಜ್ಞಾಪಿಸಿ ಭಕ್ತನನುಸರಿಸಿ ತುರುಸ್ವರೂಪವ ಧರಿಸಿ ಬರುತಿರೆ ಕುರಿಕಿಹಳ್ಳಿಯ ಗ್ರಾಮದಿಂದಲಿ ತರುವರಾಶ್ವತ್ಥದಲಿ ಸಲೆ ಪಾಲ್ಗರಿದ ದೇವನ ಕರೆದು ತಂದಿಹ 1 ನಾರಾಯಣಾರ್ಯರು ಕಾರ್ಪರಾರಣ್ಯದಿ ಆರಾಧಿಸುತಲಿರುತ ಆರಾರು ಭಕುತರು ಗೋಧನ ಧಾನ್ಯದಿ ಸಾರಾವಸ್ತುಗಳೀಯುತ್ತ ಗೋರಕ್ಷಣವ ಮಾಡಿರೆನುತ ತಮ್ಮಯ ಬಂಧು ಬಾಲಕರಿಗೆ ಪೇಳುತ್ತ ಭಯ ಬ್ಯಾಡಿರೆನುತ ಚಾರು ಶಿಲೆಯೊಳಗೊಂದು ದಿನ ಅಂಗಾರದಲಿ ಶ್ರೀ ಭಾರತೀಶನ ಮೂರುತಿಯ ಬರೆದೀತ ಭಯ ಪರಿ- ಹಾರಕನು ನಿಮಗೆಂದು ಪೇಳಿದ 2 ಧರಣಿ ಪಾಲಕನಿಂದ ನಿರ್ಮಿತಮಾದ ಬಂ- ಧುರ ನಿಲಯದಿ ರಾಜಿತ ತರುಮೂಲದೊಳಗವ- ತರಿಸಿ ಷೋಡಶ ಸಂಖ್ಯ ಕರಗಳಿಂದಲಿ ಶೋಭಿತ ವರ ಕೃಷ್ಣಾ ಜಲದೊಳಗಿರುವ ಪ್ರತಿಮೆಯ ತಂದು ತರು ಬಳಿಯಲಿ ಸ್ಥಾಪಿತ ಶ್ರೀಭೂಸಮೇತ ಮೂರ್ತಿ ನಿರುತ ಪೂಜೆಯಕೊಳುತ ಧರೆಯೊಳು ಶರಣು ಜನರನು ಪೊರೆವ ಕಾರ್ಪರ ನಿಲಯ'ಸಿರಿನರ ಹರಿ'ಯನೊಲಿಸಿದ3
--------------
ಕಾರ್ಪರ ನರಹರಿದಾಸರು
ಗುರು ನಿಮ್ಮ ಬಾಲಕ ನಾನು ನಮ್ಮ ಪಾಲಕ ನೀನು ಧ್ರುವ ತಂದಿ ತಾಯಿ ಬಂಧು ಬಳಗವೆ ನೀನು ಕಂದನಹುದೋ ನಿಮ್ಮ ನಾನು ಎಂದೆಂದಿಗೆ ಒಂದಾಗಿಹÀ ನೀನು ಸಂದಿಸ್ಯಾಡುವ ಮಗ ನಾನು 1 ಬೇಡಿದ್ದು ಕೊಡುವೆ ಎನ್ನೊಡೆಯ ನೀನು ಕಡೆಹುಟ್ಟಿದವ ನಾನು ಬಿಡದೆ ಸಲಹುತಿಹ ಎನ್ನೊಡೆಯನೆ ನೀನು ಪಿಡಿದಿಹೆ ಪಾದವ ನಾನು 2 ಖರೆ ನೀನು ಅತಿ ದೀನನು ನಿಮ್ಮ ನಾನು ಸಥೆಯ ನಡಿಸುವೆ ಮಹಿಪತಿಯ ನೀನು ಹಿತ ಪಾತ್ರನು ನಿಮ್ಮ ನಾನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರು ಪಾಂಡುರಂಗ ವಿಠಲ | ಪರಿಪಾಲಿಸಿವನಾ ಪ ಕರಣ ನೀಯಾಮಕನೆ | ಕರುಣವನೆ ತೋರೀ ಅ.ಪ. ಕರ್ಮ ಸ್ವಾಮಿ | ಎತ್ತಿಕರ ಪಿಡಿಯೋ 1 ಕರ್ಮ ನೆರವಾಗಲಿವನೀಗೆಪರಮ ಪಾವನ ಮೂರ್ತೆ ಹರಿ ಪಾಂಡುರಂಗಾ 2 ಭವ ಕಳೆಯೋ 3 ಪದ್ಧತಿಯ ತಪ್ಪದಲೆ | ಮಧ್ವಮತದಂಗವನುಉದ್ಧರಿಸೊ ಇವನಲ್ಲಿ | ಪದ್ಮನಾಭಾಖ್ಯಾಈ ಧರೆಯ ಸಂಸಾರ | ಬದ್ಧ ಲೌಕೀಕಗಳತಿದ್ದಿ ವೈದಿಕವೆನಿಸೋ | ಹದ್ದು ವಾಹನನೇ4 ಕೃದ್ಧಖಳ ಸಂತತಿಯ | ಒದ್ದು ಕಳೆಯುತ ಹರಿಯೆಹೃದ್ಗುಹದಿ ಮೈದೋರೊ | ಶಬ್ಧಗೋಚರನೇಮಧ್ವಾಂತರಾತ್ಮ ಗುರು | ಗೋವಿಂದ ವಿಠ್ಠಲನೆಮದ್ವಚನ ಸಲಿಸೆಂದು | ಪ್ರಾರ್ಥಿಸುವೆ ಹರಿಯೇ 5
--------------
ಗುರುಗೋವಿಂದವಿಠಲರು
ಗುರು ಪ್ರಸನ್ನ ವಿಠಲ | ಪೊರೆಯ ಬೇಕಿವನಾ ಪ ದುರಿತ ದುಷ್ಕøತ ನಿಚಯ | ಪರಿಹರಿಸಿ ವರ್ಯಾ ಅ.ಪ. ಮಧ್ವ ಮತದಲಿ ಶ್ರದ್ಧೆ | ವೃದ್ಧಿಗೈ ಸಿವನಲ್ಲಿಶ್ರದ್ಧೆ ಪತಿನುತ ಹರಿಯೆ | ಮಧ್ವಾಂತರಾತ್ಮಾಬುದ್ಧಿ ಜೀವಿಯು ಇವನು | ಸಾಧನದಿ ಶಕ್ತನಿಹನಿದ್ರೆಯಿಂದೆಚ್ಚರಿಸಿ | ಉದ್ಧರಿಸೊ ಇವನಾ 1 ಅಂಕಿತದ ಉಪದೇಶ ಕಾಂಕ್ಷಿಸುತ್ತಿಹ ಇವಗೆಬಿಂಕದಲಿ ತೈಜಸನು | ಗುರು ರೂಪಿಲಿಂದಾಲೆಂಕಕನ ಸ್ವೀಕರಿಸಿ | ಆಶಿಷವ ನಿತ್ತಿಹನುಪಂಕಜಾಸನ ವಂದ್ಯ | ಅಂಕಿತವ ನಿತ್ತೇ 2 ಸಂಸಾರ ಕ್ಲೇಶಪದ | ಪಾಂಸು ಭಜಿಪುದರಿಂದೆಸಂಶಯವು ರಹಿತಾಗಿ | ದೂರ ಓಡುವುದೋಕಂಸಾರಿ ನಿನ ಅಂಶಿ | ಅಂಶಾವತಾರಗಳಶಂಸನದಿ ಸಾಧನವ | ಗೈಸೊ ಶ್ರೀಹರಿಯೇ 3 ಭವ ವಂದ್ಯಾ 4 ಯೋಗೀಶ ಶ್ರೀ ಕೃಷ್ಣ | ಯೋಗ ಸಾಧನೆಯಿತ್ತುನೀಗು ಭವವನು ಇವಗೆ | ಭಾಗವತರೊಡೆಯಬಾಗಿ ಬೇಡುವೆ ದಯಾ | ಸಾಗರನೆ ಉದ್ಧರಿಸೊಯೋಗಿ ಜನ ವಂದ್ಯ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು