ಒಟ್ಟು 1699 ಕಡೆಗಳಲ್ಲಿ , 101 ದಾಸರು , 1219 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹುಚ್ಚು ಹಿಡಿಸಿದೆಯಾಮಾಧವ|ನಿಚ್ಚನಿನ್ನ ಪಾದಾಂಬುಜವ ಭಜಿಪರಿಗೆ ಪಮತ್ತಗಜವೆಂಟು ಸೊಕ್ಕಿಲಿ ಕೊಲ್ವವು |ಕುತ್ತಿಗೆ ಮುರಿವರಾರು ಮಂದಿಯೂ ||ಎತ್ತ ಹೋಯಿತೋ ಬುದ್ಧಿ ಕುಳಿತುಕೊಂಡರೆ ಮೇಲೆ |ಹುತ್ತ ಬೆಳದರೆಚ್ಚರಿಕೆಯಿಲ್ಲದಂಥ 1ದಾರಾಸುತರೆನ್ನದಾರೆಂದು ನೋ |ಡರಾಗಾರ ನಮ್ಮದೆಂದು ಪೋಷಿಸರು ||ಆರಣ್ಯದಲಿ ಮುಸುಕಿಕ್ಕಿ ಧ್ಯಾನಿಸುವರು |ಶಾರೀರದ ಪರವಿಯನ್ನು ಬಿಟ್ಟಹರು 2ಬಿದ್ದು ಯದ್ದ ಕಾಳು ಆದುಕೊಂಡುಂಬರು |ಇದ್ದ ಬದುಕು ಜೋಕೆ ಮಾಡೊಲ್ಲರು ||ಪ್ರದ್ಯುಮ್ನ ಪ್ರಾಣೇಶ ವಿಠಲನೇ ಇಂಥ |ಬುದ್ಧಿಯ ಪ್ರೇರಿಸಿ ನೋಡಿ ಹಿಗ್ಗುವೆನೀ 3
--------------
ಪ್ರಾಣೇಶದಾಸರು
ಹೆಣ್ಣ ನಿಚ್ಛಿಸುವರೆ ಮೂಢ - ಇದನುಕಣ್ಣು - ಮೈ ಮನಗಳಿಂಗಳಿಂ ಸೋಂಕಲು ಬೇಡ ಪ.ತಾಯಾಗಿ ಮೊದಲು ಪಡೆದಿಹುದು - ಮತ್ತೆಬಾಯಯೆಂದನಿಸಿ ಕಾಮದಿ ಕೆಡಹುವುದುಕಾಯದಿ ಜನಿಸುತ ಬಹುದು - ಇಂತುಮಾಯೆಯು ನಿನ್ನ ಬಹು ವಿಧದಿ ಕಾಡುವುದು 1ಹಿತ ಶತ್ರುವಾಗಿ ಹೊಂದುವುದು - ನಿಮಿಷರತಿಗೊಟ್ಟುನಿತ್ಯ ಮುಕ್ತಿಯ ಸೆಳೆಯುವುದುಕ್ಷಿತಿಯ ಪೂಜ್ಯತೆ ಕೆಡಿಸುವುದು - ಮುಂದೆಶತಜನ್ಮಗಳಿಗೆ ಹೊಣೆಯಾಗಿ ನಿಲ್ಲುವುದು2ಬಗೆಯದು ತನುವೆಲುವುನರ - ಖಂಡ - ಅದರೊಳಗೆ ವಾಯುರಂದ್ರ ಕಿಸುಕುಳದ ಉದ್ಧಂಡಭಗವೆಂಬುದು ಮೂತ್ರದಭಾಂಡ - ಆದನೊಗಡಿಸದೆ ನಿಜಸುಖವಿಲ್ಲಕಂಡೆಯ3ವಶನಾದ ವಾಲಿಯ ಕೊಲಿಸಿಹುದು - ಹೀಗೆಹೆಸರು ಮಾತ್ರದಿ ದಶಶಿರನಳಿದಿಹುದುಶಶಿಯಂಗದಲಿ ಕ್ಷಯವಿಹುದು - ಹೀಗೆಹೆಸರು ಪಡೆದ ಕೀಚಕನನಳಿದಿಹುದು 4ಪಶುಪತಿಯ ದೆಸೆಗೆಡಿಸಿಹುದು - ಹೀಗೆವಸುಧೆಯೊಳ ಜೀವರ ಹಸಗೆಡಿಸಿಹುದುವಸುಧೇಶನ ನಾಮ ಮರೆಸುವುದು - ನಮ್ಮಅಸಮ ಪುರಂದರವಿಠಲನ ತೊರೆಸುವುದು 5
--------------
ಪುರಂದರದಾಸರು
ಹೇ ದಯಾಬ್ಧೇ ಪಾಲಿಸೆನ್ನನು | ಶ್ರೀದ ಹನುಮಂತ ಪಭೂಧವಜ ನದಿಯಲ್ಲಿ ನಿಂತಾ ಕಾಳೀಕಾಂತ ವೀತಚಿಂತಾ ಅ.ಪ.ರಾವಣಾನುಜನಂತೆ ಮತ್ತಾ ಶೈಲಸುತನಂತೆ |ದೇವತೆಗಳೀಶನಂತೆ ದೇವತೆಗಳಂತೆ ||ಆವವಿಕ್ರಮಪಾರ್ಥನಂತೆ ಕಾದಿ ಬಿದ್ದಾ ಕಪಿಕುಲದಂತೆ |ತಾವರೆಯಸಖಸೂರ್ಯನಂತೆ ತತ್ಸುತ ಸುಗ್ರೀವನಂತೆ 1ಭೂವರಾಧಿಪ ಧರ್ಮನಂತೆ ದ್ರೌಪದಿಯಂತೆ |ಭೂವಿ ಬುಧಸುತನಂತೆ ರಾಕ್ಷಸಿಯಂತೆ ಫಣಿಯಂತೆ ||ಆ ವಿರಾಟರಾಯನಂತೆ ಪಾರ್ವತಿಯ ನಾಥನಂತೆ |ನೀ ವಿಜಯನಾಗಲು ಸಹಿಸದಲೆ ಕೋಪಿಸಿದ ಧೃತರಾಷ್ಟ್ರನಂತೆ ||ಮೋದದಿಂದ ನಿನ್ನ ಪಡೆದಾ ಮಧ್ಯಗೃಹನಂತೆ |ಆದರದಿ ಹರಿಪೂಜೆ ಮಾಳ್ಪಾಸೂರಿಜನರಂತೆ ||ಆ ದಿನ ಕಡಲಲ್ಲಿ ಮುಳುಗಿ ಪೋಗುತ್ತಿದ್ದಾ ನಾವೆಯಂತೆ |ಪಾದಹಿಡಿದಾ ಕಾಳೀಸರ್ಪನ ಕಾಯ್ದ ಪ್ರಾಣೇಶ ವಿಠ್ಠಲನಂತೆ 3
--------------
ಪ್ರಾಣೇಶದಾಸರು
ಹೊಯ್ಯಾಲೊ ಡಂಗುರವ - ಜಗ - |ದಯ್ಯನಯ್ಯ ಶ್ರೀಹರಿ ಅಲ್ಲದಿಲ್ಲವೆಂದುಪ.ಅಷ್ಟೈಶ್ವರ್ಯದ ಲಕುಮಿಯ ಅರಸೆಂದು |ಸೃಷ್ಟಿ - ಸ್ಥಿತಿ - ಲಯಕರ್ತನೆಂದು ||ಗಟ್ಟಿಯಾಗಿ ತಿಳಿದುಹರಿ ಎನ್ನದವರೆಲ್ಲ |ಭ್ರಷ್ಟರಾದರು ಇಹ - ಪರಕೆ ಬಾಹ್ಯರು ಎಂದು 1ಹರಿಯೆಂಬ ಬಾಲನ ಹರಹರ ಎನ್ನೆಂದು |ಕರುಣವಿಲ್ಲದೆ ಪಿತ ಬಾಧಿಸಲು ||ತರಳನ ಮೊರೆಕೇಳಿ ನರಮೃಗರೂಪದಿ |ಹರಿಯ ನಿಂದಕನ ಸಂಹರಿಸಿದ ಮಹಿಮೆಯ 2ಕರಿ ಆದಿಮೂಲನೆ ಕಾಯೆಂದು ಮೊರೆಯಿಡೆ |ಸುರರನು ಕರೆಯಲು ಬಲ್ಲದಿರೆ ||ಗರುಡನನೇರದೆ ಬಂದು ಮಕರಿಯ ಸೀಳ್ದು |ಕರಿರಾಜನ ಕಾಯ್ದ ಪರದೈವ ಹರಿಯೆಂದು 3ಸುರಪಗೊಲಿದು ಬಲಿಯ ಶಿರವನೊದ್ದಾಗಲೇ |ಸುರಸವು ಉದಿಸೆ ಶ್ರೀ ಹರಿಪಾದದಿ ||ಪರಮೇಷ್ಟಿ ತೊಳೆಯಲು ಪವಿತ್ರೋದಕವೆಂದು |ಹರ ತನ್ನ ಶಿರದಲ್ಲಿ ಧರಿಸಿದ ಮಹಿಮೆಯ 4ಮಾನಸಲಿಂಗಪೂಜೆಗೆ ಮೆಚ್ಚಿ ಶಿವ ಬಂದು |ಬಾಣನ ಬಾಗಿಲ ಕಾಯ್ದಿರಲು |ದಾನವಾಂತಕ ಸಾಸಿರ ತೋಳ ಕಡಿವಾಗ |ಮೌನದಿಂದೊಪ್ಪಿಸಿಕೊಟ್ಟ ಶಿವನು ಎಂದು 5ಭಕ್ತಗೊಲಿದು ಭಸ್ಮಾಸುರಗೆ ಶಿವ ವರವಿತ್ತು |ಭಕ್ತನ ಭಯದಿಂದ ಓಡುತಿರೆ ||ಯುಕ್ತಿಯಿಂದಸುರನ ಸುಟ್ಟು ಶಿವನ ಕಾಯ್ದ |ಶಕನು ಶ್ರೀಹರಿ ಅಲ್ಲದಿಲ್ಲವೆಂದು 6ಗರಳಜ್ವಾಲೆಗೆ ಸಿರಿರಾಮ - ರಾಮನೆಂದು |ಸ್ಮರಿಸುತಿರಲು ಉಮೆಯರಸನಾಗ ||ಕೊರಳು ಶೀತಲವಾಗೆ ಸಿತಿಕಂಠ ತನ್ನಯ |ಗಿರಿಜೆಗೆ - ರಾಮಮಂತ್ರವ ಕೊಟ್ಟ ಮಹಿಮೆಯ 7ಹರಬ್ರಹ್ಮ ಮೊದಲಾದ ಸುರರನುದಶಶಿರ |ಸೆರೆಹಿಡಿದು ಸೇವೆಯ ಕೊಳುತಿರಲು ||ಶರಧಿಯ ದಾಟಿ ರಾವಣನ ಸಂಹರಿಸಿದ |ಸುರರ ಲಜ್ಜೆಯ ಕಾಯ್ದ ಪರದೈವ ಹರಿಯೆಂದು 8ಜಗದುದ್ಧಾರನು ಜಗವ ಪೊರೆವನೀತ |ಜಗ ಬ್ರಹ್ಮಪ್ರಳಯದಿ ಮುಳುಗಲಾಗಿ ||ಮಗುವಾಗಿ ಜಗವನುದ್ಧರಿಸಿ ಪವಡಿಸಿ ಮತ್ತೆ |ಜಗದ ಜನಕಪುರಂದರವಿಠಲನೆಂದು9
--------------
ಪುರಂದರದಾಸರು