ಒಟ್ಟು 3267 ಕಡೆಗಳಲ್ಲಿ , 121 ದಾಸರು , 2210 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭೂಷಿತ ವನಮಾಲ | ಶ್ರೀಲೋಲ ಪ ಆಶ್ರಿತ ರಕ್ಷ ಕೃಪಾಲ ವಾಲ ಅ.ಪ. ಮಕರ ಕುಂಡಲಧರ ಪೀತಾಂಬರ | ಧೃತ ಅಕಳಂಕ ಸುಂದರ ಶ್ರೀಮನೋಹರ 1 ಜಲರುಹನಯನ ಜಲನಿಧಿಶಯನ ವನಜಭವಾದಿ ಸಂಸೇವಿತ ಚರಣ 2 ಅನಿಮಿಷ ಪೂಜಿತ ಮುನಿಜನ ವಿನುತ ವನರುಹ ಸಂಭವ ತಾತ ವಿಖ್ಯಾತ 3 ಕಾಮಿತಫಲದ ಸಾಮಜವರದ ಸಾಮನಿಗಮ ಸಂಗೀತ ವಿನೋದ 4 ಮಂದ ಸುಹಾಸ ಮೇಘ ಸಂಕಾಶ ಸುಂದರವದನ ಶ್ರೀ ಕರಿಗಿರೀಶ 5
--------------
ವರಾವಾಣಿರಾಮರಾಯದಾಸರು
ಭೇದವ ಮರೆಸಿದ ನಮ್ಮಯ್ಯ ಸು ಸಾಧನ ತಿಳಿಸಿದ ಪ ಭೇದ ಮರೆಸುತ ವಾದನೀಗಿಸಿ ಪರ ಸಾಧನದ ನಿಜಹಾದಿಗೆ ಹಚ್ಚಿದ ಅ.ಪ ಮಂದಮತಿಯ ತರಿದ ಎನ್ನಯ ಭವ ಬಂಧ ಪರಿಹರಿಸಿದ ಕುಂದುವ ಜಗಮಾಯದಂದುಗ ಗೆಲಿಸಿದ ಕಂದನೆಂದುದ್ಧಾರಗೈದ ತಂದೆ ಸಿಂಧುಶಾಯಿ 1 ಜ್ಞಾನಕೆ ಹಚ್ಚಿದ ಎನ್ನದೆ ನಿಜ ಧ್ಯಾನವ ಪಾಲಿಸಿದ ನಾನಾಯೋನಿಯೊಳು ಜನಿಸಿ ಜನಿಸಿ ಬಹ ಹಾನಿಯಿಂದುಳಿಸಿದ ದಾನವಕುಲಹರ 2 ಏನೆಂದು ಬಣ್ಣಿಸಲಿ ನಮ್ಮಯ್ಯನ ಆನಂದದ ಕೀಲಿ ತಾನೆ ಒಲಿದಿತ್ತೆನ್ನಗಾನಂದಮಯಾಂಬುಧಿ ದೀನಜನಾಪ್ತ ಮಮಪ್ರಾಣ ಶ್ರೀರಾಮಯ್ಯ 3
--------------
ರಾಮದಾಸರು
ಭೋಜನ ಮಾಡೈಯ ಶ್ರೀರಾಮಚಂದ್ರ ಪ ರಾಜೀವಾನಯನ ಸ್ವರಾಜಾನುಜ ಮಹಾ ರಾಜ ವಂದಿತ ರಾಜಾರಾಜ ಸಖಾರ್ಚಿತ ಅ.ಪ ಉಪ್ಪು ಉಪ್ಪಿನಕಾಯಿ ಪಚ್ಚಡಿಗಳು ಗೊಜ್ಜು ಹಪ್ಪಳ ಸಂಡಿಗೆ ಶಾಖಗಳೂ ಒಪ್ಪುವ ರಸ ಕೂಟು ಹುಳಿ ಫಳಿದ್ಯವು ಸೂಪ ತುಪ್ಪ ಶಾಲ್ಯೋದನ ಚಿತ್ರಾನ್ನಗಳನ್ನು 1 ಹೊರೀಗೆ ಶಷ್ಕುಲಿ ಹೋಳಿಗೆ ಕಡುಬು ಮು- ಚ್ಚೋರೆಯು ಅತಿರಸ ಹೊಯಗಡಬೂ ಕೀರುಆಂಬೊಡೆ ಬೋಂಡ ಶಾವೀಗೆ ಹುಳಿದೋಸೆ ಕ್ಷೀರ ಶರ್ಕರ ಜೇನು ತುಪ್ಪವೆ ಮೊದಲಾಗಿ2 ಮಂಡೀಗೆ ಲಾಡು ಚಿರೋಟಿ ಘೀವರು ಪೇಣಿ ಬೆಂಡು ಸೋಮಾಶಿಬತ್ತಾಸು ಫೇಡಾ ಖಂಡ ಶರ್ಖರೆ ಕಬ್ಬು ಖರ್ಜೂರ ದ್ರಾಕ್ಷಿಗ- ಳುಂಡು ತ್ರಿಲೋಕಳುದ್ಧರಿಸುವ ಸ್ವಾಮಿ 3 ಪನಸು ಜಂಬೂ ಕದಳಿನಾರಂಗ ಎಳನೀರು ಪಾನಕ ತಕ್ರಬೆಣ್ಣೆಯು ಮೊಸರೂ ಸ್ವಾದೋದಕ ಮೊದಲಾಗಿ ಶ್ರೀ ಯರ್ಪಿಸುವಳು ಭಕ್ತಿಯಿಂದಾ ಕೈಕೊಂಡು ನೀ 4 ಸತ್ಯತಾಂಬೂಲ ವರ್ಪಿಸಲು ಯಥಾಶಕ್ತಿ ವಿತ್ತಸಮೇತವಾದಿದನು ಕೈಕೊಂಡು ನೀ 5 ಭೋಗದ್ರವ್ಯವು ಮುಕ್ತಚೂರ್ಣ ದಕ್ಷಿಣೆ ಸಹ ಈಗ ತಾಂಬೂಲ ವೊಪ್ಪಿಸಲು ಕೈಕೊಂಡು ನೀ6 ನವ್ಯ ಸುಗಂಧ ಪುನರ್ಧೂಪವರ್ಪಿಸಿ ಸೇವ್ಯಸೇವಕನಾಗಿ ಸೇವೆ ಕೈಕೊಳ್ಳೆಂದು ಭವ್ಯಚರಿತ ನಿನ್ನ ಪೊಗಳುತ್ತ ಕುಣಿವರು 7 ಅವ್ಯಯಾನಂತ ಜಗದ ಬದುಕು ನೀನೆಂದು ಸೇವ್ಯಸೇವಕನಾಗಿರುವೆ ಎಂದು ಭವ್ಯಚರಿತ್ರರು ಪೊಗಳುವರೈ ನಿನ್ನ ಸವ್ಯಸಾಚಿಯ ಸೂತ ಗುರುರಾಮ ವಿಠಲನೆ 8
--------------
ಗುರುರಾಮವಿಠಲ
ಮಕ್ಕಳ ಮಾಣಿಕವೆ ಮೋಹನ್ನ ಬಾ ರಂಗೈಯ್ಯಾ ಮಕ್ಕಳ ಮಾಣಿಕವೆ ಮೋಹನ್ನ ಎನ್ನಕ್ಕರದ ಗುಣನಿಧೆ ಬಾ ರಂಗೈಯ್ಯಾ ಪ. ಅಪ್ಪುತಪ್ಪು ಹೆಜ್ಜೆನಿಕ್ಕುತ ಬಾಯೊಳು ಜೊಲ್ಲು ಸುಪ್ಪಾಣಿಮುತ್ತಂತೆ ಸುರಿಯುತಾ ಬಾರಂಗೈಯ್ಯಾ ನಿನಗೊಪ್ಪುವಾಭರಣ ನೀಡುವೆನೊ ಅದನೊಲ್ಲದಿದ್ದರೆ ತುಪ್ಪಾಕಜ್ಜಾಯ ಕೊಡುವೆನೂ 1 ಅಂದಿಗೆ ಕಿರುಗೆÉಜ್ಜೆ ಅಲಗೊತ್ತು ಕೈಯೊಳಗಿದ್ದು ಬಿಂದುಲಿ ಬಾಜುಬಂದು ತಿರುಹೂತ ಬಾರಂಗೈಯ್ಯಾ ಬಂದೆನ್ನ ಬಿಗಿಯಪ್ಪಿಕೊಳ್ಳಯ್ಯ ಅದನೊಲ್ಲದಿದ್ದರೆ ಅಂದವಾದ ಒಂದು ಮುದ್ದು ತಾರಯ್ಯ 2 ಓಡಿಓಡಿ ಬಾರೋ ವಸುದೇವನಂದನಾ ಕಂದ ನೋಡಿ ನೋಡಿ ನಗುತ ಬಾರೊ ರಂಗಯ್ಯ ಕೋಡಗಲ್ಲವಾಸ ವೆಂಕಟ 3
--------------
ಹೆಳವನಕಟ್ಟೆ ಗಿರಿಯಮ್ಮ
ಮಗನಿಂದೆ ಗತಿಯುಂಟೆ ಜಗದೊಳಗೆನಿಗಮಾರ್ಥ ತತ್ತ್ವವಿಚಾರದಿಂದಲ್ಲದೆ ? ಪ ತ್ರಿಗುಣರಹಿತ ಪರಮಾತ್ಮನ ಧ್ಯಾನದಿಹಗಲಿರುಳು ನಿತ್ಯಾನಂದದಿಂದತೆಗೆದು ಪ್ರಪಂಚವಾಸನೆಯ ಬಿಟ್ಟವರಿಗೆಮಗನಿದ್ದರೇನು ಇಲ್ಲದಿದ್ದರೇನು ?1 ಶೋಣಿತ ಶುಕ್ಲದಿಮಿಳಿತವಾದ ಪಿಂಡ ತನ್ನ ಪೂರ್ವಕರ್ಮದಿಂದನೆಲಕೆ ಬೀಳಲು ಅದು ಸಲಹಿ ರಕ್ಷಿಪುದೆ ? 2 ಪರಮ ದುಷ್ಟನಾಗಿ ಮರೆತು ಸ್ವಧರ್ಮವಗುರು ಹಿರಿಯರ ಸಾಧುಗಳ ನಿಂದಿಸಿಬೆರೆದನ್ಯ ಜಾತಿಯ ಪರನಾರಿಯ ಕೂಡಿಸುರೆ ಕುಡಿದು ಜೂಜಾಡಿ ನರಕಕ್ಕೆ ಬೀಳುವ 3 ಸತ್ಯನೊಬ್ಬ ಮಗ ಶಾಂತನೊಬ್ಬ ಮಗ ದು-ರ್ವೃತ್ತಿ ನಿಗ್ರಹನೊಬ್ಬ ಸಮಚಿತ್ತನೊಬ್ಬನುಉತ್ತಮರೀ ನಾಲ್ಕು ಮಕ್ಕಳಿದ್ದ ಮೇಲೆಹೆತ್ತರೇನು ಇನ್ನು ಹೆರದಿದ್ದರೇನಯ್ಯ ? 4 ಸುತರಿಲ್ಲದವಗೆ ಸದ್ಗತಿ ಇಲ್ಲವೆಂತೆಂಬಕೃತಕ ಶಾಸ್ತ್ರವು ಲೌಕಿಕಭಾವಕೆಕ್ಷಿತಿಯೊಳು ಕಾಗಿನೆಲೆಯಾದಿಕೇಶವ ಜಗ-ತ್ಪತಿಯ ಭಜಿಪಗೆ ಸದ್ಗತಿಯಿರದೆ ಹೋಹುದೆ ? 5
--------------
ಕನಕದಾಸ
ಮಗನೆಂದೆಂಬುವ ಇನ್ನು ಮತ್ತಾವನೊ ಜಗದೊಳಗೆ ನಿನ್ನ ವಿನಾ ಕಾಣೆಯೆಲ್ಲಿ ಪ ರಕ್ತ ಶುಕ್ಲ ಮಿಶ್ರವಾದ ಸಮ್ಮಂಧ ವಿಷ_ ಭುಕ್ತನಾಗಿದ್ದ ಸಂಸಾರದೊಳಗಾ ಸಕ್ತತನದಲಿ ಇಪ್ಪ ಎಂದಿಗೆಂದಿಗೆ ಇವನು ಮುಕ್ತಿ ಕೊಡುವನೇನೊ ಮುಂದೊಲಿದು ಕೊಂಡಾಡೆ1 ಪ್ರಕೃತಿ ಬದ್ಧನಾಗಿ ನಾನಾ ಜನುಮಗಳಲ್ಲಿ ವಿಕೃತಿಯ ಮಾಡುವ ಮದದಿಂದಲೀ ಸುಕೃತವನು ಮರೆದು ದೂರಾಗಿ ಸಂಚರಿಸುವ- ನುಕ್ರ ಮವಂದುಮಾಸ ಜನತೆ ಕ್ಯೆಡೆಯಿರದವ 2 ಪುತ್ರ ಉಳ್ಳರೆ ಅವಗೆ ಕಂಡಕಡೆ ತಿರುಗಿ ಉ- ನ್ಮತ್ತನಾಗಿ ಕೆಟ್ಟ ಗ್ರಾಸವನ್ನು ಹೊತ್ತಹೊತ್ತಿಗೆ ತಂದು ಹಾಕಬೇಕು ಸಾಕಿ ನಿತ್ಯದಲ್ಲಿ ಅವಗಾಗಿ ಕ್ಲೇಶಬಡಲಿ ಬೇಕು 3 ನಾಡೊಳಗೆ ನೀನೆ ಮಗನೆಂದವನ ಭಾಗ್ಯಕ್ಕೆ ಈಡುಗಾಣೆನು ಎಲ್ಲಿ ವಿಚಾರಿಸೆ ಕಾಡಿ ಬೇಡುವೆ ಮುನ್ನೆ ಪರಿಪರಿಬಾಧೆಬಡಿಸಿ ಕೂಡಿರುವೆ ಮುಕ್ತರೊಳು ಮುಕ್ತಿಗಳವಲ್ಲಿದೊ 4 ನಿನ್ನಂಥ ಮಗನ ಪಡದಮ್ಯಾಲೆ ಎನಗೆ ಅನ್ಯಚಿಂತೆಗಳಿಲ್ಲ ಚಿಂತಾಮಣೀ ಘನ್ನಮೂರುತಿ ನಮ್ಮ ವಿಜಯವಿಠ್ಠಲರೇಯ ಅನಂತಕಾಲಕ್ಕೆ ವಹಿಸುವ ದೇವ 5
--------------
ವಿಜಯದಾಸ
ಮಂಗಲಂ ಮಹಾಲಿಂಗ ದೇವನಿಗೆ ಗಂಗೋತ್ತಮಾಂಗಗೆ ಪ. ತುಂಗಬಲ ಭದ್ರಾಂಗ ಸದಯಾ- ಪಾಂಗ ಭಕ್ತಜನಾಂಗರಕ್ಷಗೆ ಅಂಗಜಾರಿ ಕುರಂಗಹಸ್ತಗೆ ಸಂಗೀತ ಪ್ರೇಮಾಂತರಂಗ ನಿಸ್ಸಂಗಗೆ 1 ವಾಮದೇವಗೆ ವಾಸವಾದಿ ಸು- ಧಾಮ ವಿಬುಧಸ್ತೋಮ ವಿನುತಗೆ ವ್ಯೋಮಕೇಶಗೆ ಸೋಮಚೂಡಗೆ ಭೀಮವಿಕ್ರಮಗೆ ಹೈಮವತಿಪತಿಗೆ 2 ಪ್ರಾಣಪತಿ ಲಕ್ಷ್ಮೀನಾರಾಯಣ- ಧ್ಯಾನಪರಗೆ ಪಾವಂಜೆಗ್ರಾಮ ಪ್ರ- ಧಾನಪುರುಷಗೆ ದೀನಜನಸಂ- ತಾನಗೀಶಾನಗೆ ಜ್ಞಾನಿ ಜಗದ್ಗುರುವಿಗೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಮಂಗಳಂ ಕಲ್ಯಾಣ ಸಾಂದ್ರಗೆ ಪ ವಾದೀಂದ್ರ ಗುರುವರ ಕುವರಗೆ ಮಂಗಳ ಮೇದಿನಿ ಸುವಿನುತಗೆ ಮಂಗಳ ಸಾಧಿತ ಸಕಲ ಸುತತ್ವ್ವಗೆ ಮಂಗಳ ವಾದಿ ವಾರಿದ ಚಂಡ ಪವಮಾನಗೆ 1 ವರಹತನಯ ತೀರ ಧರಣಿ ಧರಾಹ್ವಯ ಪುರದಿ ವಿರಾಜಿಸುವಗೆ ಮಂಗಳ ವರದೇಂದ್ರ ಯತಿವರರ ಕಮಲಾರ್ಚಿತ ಚರಣ ಪಂಕೇಜ ಯುಗ್ಮಗೆ ಮಂಗಳ 2 ಸೂರಿಕುಲೋತ್ತಮ ಶ್ರೀ ರಾಘವೇಂದ್ರ ಗುರು ಸದ್ವಂಶ ಜಾತಗೆ ಮಂಗಳ ನಾರದನುತ ಜಗನ್ನಾಥವಿಠಲನ ಕರುಣ ಪಾತ್ರ ಸಂಯಮಿವರಗೆ ಮಂಗಳ 3
--------------
ಜಗನ್ನಾಥದಾಸರು
ಮಂಗಳಂ ಜಯ ಮಂಗಳಂ ರಾಮ ಮುನಿಜನ ಸ್ತೋಮ ಮಂಗಳಂ ಲೋಕಾಭಿರಘುರಾಮ ಸದ್ಗುಣ ಸ್ತೋಮ ಪ ದಶರಥನ ವರಪುತ್ರ ನೀನಾಗಿ ಕೌಶಿಕನ ಯಜ್ಞದಿ ಅಸಮಸಾಹಸ ದೈತ್ಯರನು ಗೆಲಿದಿ ವಸುಧೆಯೊಳು ಗೌತಮನ ಸತಿಯಳನು ಉದ್ಧರಿಸಿ ತಾಟಕಿ ಹೊಸಪರಿಯ ದೈತ್ಯರನು ಸಂಹರಿಸಿ ಎಸೆವ ಮಿಥಿಲಾ ಪುರದಿ ಜಾನಕಿ ಬಿಸಜನೇತ್ರೆಯ ಕೈಪಿಡಿದು ರನ್ನ ಹೊಸ ಪರಿಯ ರಥದೊಳಗೆ ಪೊರಟು ಸತಿಸಹಿತ ಅಯೋಧ್ಯೆಯಲಿ ಮೆರೆದಗೆ1 ದಶರಥನು ಪುತ್ರಗೆ ಪಟ್ಟವನು ಕಟ್ಟುವೆನು ಎನಲು ದಶದಿಕ್ಕಿಗೆ ಪತ್ರವನು ಕಳುಹಿಸಲು ಎಸೆವ ಮಂಗಳ ವಾದ್ಯ ಕೇಳುತಲೆ ಕೈಕೇಯಿ ಬರಲು ಅಸದಳದವರ ಬೇಡಿ ಕಾಡಿಸಲು ವಸುಧೆಗೀಶನ ವನಕೆ ಕಳುಹಲು ಕುಶಲವಿಲ್ಲದೆ ಮರುಗೆ ದಶರಥ ಮಿಸುಣಿಮಣಿ ಸಿಂಹಾಸನ ತ್ಯಜಿ- ಸುತಲಿ ಪಿತೃ ವಾಕ್ಯವ ನಡೆಸಿದಗೆ 2 ಮಡದಿ ಸೀತಾ ಲಕ್ಷ್ಮಣರ ಕೂಡಿ ಬಿಡದೆ ದೈತ್ಯರನೆಲ್ಲ ಕಡಿದಾಡಿ ಒಡತಿ ಸೀತೆಗೆ ಉಂಗುರವ ನೀಡಿ ಹನುಮಂತ ಬರಲು ಕಡುಜವದಿ ಸಾಗರದಿ ಸೇತುವೆಯ ಮಾಡಿ ತಡೆಯದಲೆ ರಾವಣನ ಮೂಲವ ಕಡಿದು ಕಮಲನಾಭ ವಿಠ್ಠಲನು ಮಡದಿಸಹಿತಾಯೋಧ್ಯೆ ಪುರದಲಿ ಸಡಗರದಿ ಸಾಮ್ರಾಜ್ಯವಾಳ್ದಗೆ3
--------------
ನಿಡಗುರುಕಿ ಜೀವೂಬಾಯಿ
ಮಂಗಳ ಮುದ್ದು ಕೃಷ್ಣನಿಗೆ ಜಯ ಮದನ ಜನಕ ಬಾಲ ಹರಿಗೆ ಪ. ಕಡಗೋಲ ನೇಣು ಪಿಡಿದಗೆ ಪಾಲ್ ಗಡಿಗೆ ಒಡೆದು ಇಲ್ಲಿ ಓಡಿ ಬಂದವಗೆ ಕಡಲ ತಡಿಯಲಿ ನಿಂತವಗೆ ಅಷ್ಟ ಮಡದಿಯರರಸನೆಂತೆಂಬ ಪುರುಷಗೆ 1 ಯತಿವರರಿಂದರ್ಚಿತಗೆ ಬಹು ಜತನದಿ ಭಕ್ತವರ್ಗಗಳ ಕಾಯ್ವನಿಗೆ ಯತಿ ಮಧ್ವರಾಯಗೊಲಿದಗೆ ನಿತ್ಯ ಚ್ಯುತ ದೂರವಾದ ಸರ್ವೇಶನೆಂಬುವಗೆ 2 ಗರುಡನ್ನ ಎಡದಿ ನಿಲಿಸಿದಗೆ ಬಲದಿ ಮರುತನ್ನ ನಿಲಿಸಿ ಕೊಂಡ್ಹರುಷಪಡುವನಿಗೆ ಕಿರಿದ್ವಾರದಿ ಮಧ್ವ ಉಳ್ಳವಗೆ ನಮ್ಮ ಸಿರಿಪತಿ ಗೋಪಾಲಕೃಷ್ಣವಿಠ್ಠಲಗೆ 3
--------------
ಅಂಬಾಬಾಯಿ
ಮಂಗಳಂ ರಾಮಕೃಷ್ಣಾರ್ಯ ದಿವ್ಯಮಂಗಳ'ಗ್ರಹ ಸದ್ಗುರುವರ್ಯ ಪವಾದಿ ಜನರ ಮನೋಬಾಧೆಯ ಬಿಡಿಸುತಬೋಧೆಯ ಬಲಿಸಿ ಬ್ರಹ್ಮಾನಂದದಹಾದಿಯ ತೋರಿಸಿಯಾದರಿಸಿಯೆ ಕಾಯ್ವಬೋಧ'ಗ್ರಹ ನಿನ್ನ ಪಾದಪದ್ಮಗಳಿಗೆ 1ಭೂರಿ ಜನ್ಮಗಳೆತ್ತಿ ಸೇರಲು ತಡಿಯನುದಾರಿಗಾಣದೆ ಭವ ವಾರಿಧಿಯಹಾರೈಸಿದವರಿಗೆ ತೋರಿ ಜ್ಞಾನದ ನಾವೆಯೇರಿಸಿ ತಡಿಗೈದಿಸಿದ ಮೂರ್ತಿಗೆ 2ಕರುಣದಿಂ ಧರಣಿಯೊಳವತರಿಸಿಯೆ ಭಕ್ತಪರಿಪಾಲನಾರ್ಥದಿ ಯುಗಯುಗಕೂನರಹರಿ ರಾಮ ಶ್ರೀಕೃಷ್ಣ ರಾಮಕೃಷ್ಣಾರ್ಯತಿರುಪತಿ ವೆಂಕಟರಮಣನಿಗೆ3ಓಂ ಲೀಲಾಮಾನುಷ 'ಗ್ರಹಾಯ ನಮಃ
--------------
ತಿಮ್ಮಪ್ಪದಾಸರು
ಮಂಗಳ ಶ್ರೀ ಸ್ವಾದಿ ನಿಲಯನಿಗೆ ಜಯ ಮಂಗಳ ಶ್ರೀ ಗುರುವಾದಿಗಳರಸನಿಗೆ ಪ ಕವಿ ಮುನಿಗೆ 1 ಅರ್ಥಿಯಿಂದ ಪ್ರತಿ ತೀರ್ಥ ಪ್ರಬಂಧವ ಕೀರ್ತಿಸುವವರ ಅಪ್ರತಿ ತೀರ್ಥನಿಗೆ ಸುತ್ತಮುತ್ತ ಸರ್ವತತ್ವ ಪತಿಗಳಿಗೆ ತಾ ಉತ್ತರ ಹೇಳುವ ಜೀವೋತ್ತುಮನಿಗೆ2 ಕಾಲ ಕಾಲಗಳಿಗೆ ಮಹಕಾಲನಿಯಾಮಕ ಕಲಿ ಮಾರುತಗೆ ಫಾಲವದನ ತಂದೆ-ವರದಗೋಪಾಲವಿಠ್ಠಲನ ಆಳು ಕೃಪಾಳುಗೆ3
--------------
ತಂದೆವರದಗೋಪಾಲವಿಠಲರು
ಮಂಗಳ ಸೋದೆಯ ರಾಜರಿಗೆ | ಜಯಮಂಗಳ ವಾದೀಭ ಮೃಗರಾಜರಿಗೇ ಪ ಬುದ್ಧ ಚಂದ್ರನಿಗೆ 1 ಶ್ರೀ ಮದ್ಹಯ ಮುಖ | ಸ್ವಾಮಿ ಸುಪ್ರೀಯಗೆಕಾಮಿತ ಫಲ ಪ್ರದ | ಕಾಮಧೇನುವಿಗೆ 2 ನಿರತಿ ಶಯನು ಹರಿ | ಸರ್ವಕ್ಕಧಿಕನಾದಗುರು ಗೋವಿಂದ ವಿಠಲ ಭಕ್ತೇಶನಿಗೇ 3
--------------
ಗುರುಗೋವಿಂದವಿಠಲರು
ಮಂಗಳಗಿರಿ ನರಕೇಸರೀ | ಕಾಯೊಶೃಂಗಾರ ಮೂರುತಿ ನರಹರಿ ಪ ಭವ | ಭಂಗವ ಬಿಡಿಸಯ್ಯ ಅ.ಪ. ಮಣವಕನಾಗಿ ಬಲಿಯಾ | ಭೂಮಿದಾನಬೇಡಿ ಶಿರ ತುಳಿದೆಯಾ ||ದೀನ ವತ್ಸಲ ರಂಗ | ಮೌನಿ ಧ್ಯಾನಗಮ್ಯಪಾನಕ ಕುಡಿದು ಸು | ಜ್ಞಾನವ ಪಾಲಿಸು 1 ಕಶಿಪು ಮಾರಕಾ |ಕರ್ತ ನೀನೇ ಎಂಬ | ಉಕ್ತಿ ಸ್ಪುರಿಸಿ ವಿರಕ್ತಿ ಪಾಲಿಸೊ ರಂಗ | ಭಕ್ತರುದ್ಧರಣ2 ಗೋವುಗಳೊಳಗೆ ಉದ್ಗೀಥಾ | ಗುರುಗೋವಿಂದ ವಿಠಲ ವರದಾತಾ |ಜೀವರ ಹೃದಯದೊ | ಳಾವಾಗು ನೆಲಿಸುತ್ತಕಾವನೆಂದೆಂಬರ | ಕಾವಾದೆ ಬಿಡನಯ್ಯಾ 3
--------------
ಗುರುಗೋವಿಂದವಿಠಲರು
ಮಂಗಳದೇವಿಯರರಸಗೆ ತುಂಗಮಹಿಮ ತ್ರಿವಿಕ್ರಮಗೆ ಅಂಗನೆಯರು ಸಿರಿರಂಗಗಾರತಿಯನೆತ್ತಿದರೆ ಪ. ಶ್ರೀರುಕುಮಿಣಿ ಮೊದಲಾದ ನಾರಿಯರೆಲ್ಲರು ನೆರೆದು ವಾರಿಜದಳಲೋಚನಗಾರತಿಯನೆತ್ತಿದರೆ 1 ಮುತ್ತಿನ ಹರಿವಾಣದಲಿ ರತ್ನದ ಸಾಲ್ಗಳ ನೆರಪಿ ಚಿತ್ತಜನಯ್ಯಗೆ ಮುತ್ತ್ತಿನಾರತಿಯನೆತ್ತಿದÀರೆ 2 ಚಿನ್ನದ ಹರಿವಾಣದಲಿ ರನ್ನದ ಸಾಲ್ಗಳ ನೆರಪಿ ಚೆನ್ನಕೇಶವನಿಗೆ ಚಿನ್ನದಾರತಿಯನೆತ್ತಿದರೆ 3 ಹೃದಯದ ತಮವ ಗೆಲುವಗೆ ಸದುಗತಿಪಥವ ತೋರುವಗೆ ಸುದತಿಯರೆಲ್ಲರು ಮಂಗಳಾರತಿಯನೆತ್ತಿದರೆ 4 ಚಂದದ ಭೂಷಣಮಣಿಯೊಳು ನಂದಾದೀಪಗಳೆಲ್ಲ ಹೊಳೆಯೆ ಒಂದನಂತವ ಮಾಡಿಕೊಂಬಗಾರತಿಯನೆತ್ತಿದರೆ 5 ಕಂದರ್ಪಕೋಟಿಲಾವಣ್ಯಗೆ ಸೌಂದರ್ಯವಾದ ಮೂರುತಿಗೆ ಇಂದುಮುಖಿಯರೆಲ್ಲ ಮಂಗಳಾರತಿಯನೆತ್ತಿದರೆ 6 ಅಗಣಿತ ಗುಣಸಾಗರಗೆ ನಿಗಮವಂದಿತ ವೈಭವಗೆ ಅಘಕುಲದೂರಗೆ ಮಂಗಳಾರತಿಯೆನೆತ್ತಿದರೆ 7 ನಳಿತೋಳ್ಗಳ ನಸುನಗೆಯ ಹೊಳೆವ ಕಡಗ ಕಂಕಣದ ಸುಲಲಿತ ಕಾಂತಿಗೆ ಮಂಗಳಾರತಿಯೆತ್ತಿದರೆ 8 ಶೇಷವಂದಿತಪದಗೆ ಸುರೇಖಾದಿಗಳೊಡೆಯನಿಗೆ ಭಾಸುರಸುರಮಯಪೀಠಗಾರತಿಯನೆತ್ತಿದರೆ9 ಶ್ರೀಸತಿಯಪ್ಪಿಕೊಂಡಿಪ್ಪಗೆ ವಾಸುದೇವಾದಿವಿಗ್ರಹಗೆ ಕೇಶವ ನಾರಾಯಣಗಾರತಿಯನೆತ್ತಿದರೆ 10 ನಿಖಿಳ ಖಳರ ಸೀಳ್ದನಿಗೆ ಅಕುತೋಭಯನಿಗೆ ಮಂಗಳಾರತಿಯನೆತ್ತಿದರೆ 11 ಕೂರ್ಮ ವರಾಹನಿಗೆ ಕುತ್ಸಿತರೊಲ್ಲದ ಹರಿಗೆ ಚಿತ್ಸುಖರೂಪಗೆ ಮಂಗಳಾರತಿಯನೆತ್ತಿದರೆ12 ಶಂಕೆಯಿಲ್ಲದ ಹಯವದನಗೆ ಕಿಂಕರವರದ ಶ್ರೀಹರಿಗೆ ಪಂಕಜಮುಖಿಯರು ಮಂಗಳಾರತಿಯೆತ್ತಿದರೆ 13
--------------
ವಾದಿರಾಜ