ಒಟ್ಟು 2997 ಕಡೆಗಳಲ್ಲಿ , 118 ದಾಸರು , 2044 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮರೆವರೇನಯ್ಯಾ ಮಧವ ಮಮತೆ ತೋರಯ್ಯ ಪ ತೊರೆವರೆನೋ ಕರುಣಿ ನೀನು ನಿರುತ ಶರಣರ ಹೃದಯ ಭಾನು ಪೊರೆಯುವ ಬಿರುದನೆ ಅಪಯಶ ಪಡೆವರೆ 1 ದ್ರುವನಂದದಿ ನಾ ತಪವಾಚರಿಸವೆ ಭವಸಾಗರ ದಾಟುವ ಪರಿಯರಿಯದೆ ಸುವಿಮಲ ಮಾನಸದೊಲುಮೆ ಕೊಡೆಂಬನ 2 ಪ್ರಹ್ಲಾದನ ವೊಲು ನಿನ್ನಿರವರಿಯದೆ ಆಹ್ಲಾದವ ನಿತ್ಯನುವಿಂ ಕೊಳ್ಳದೆ ಈ ಕ್ಲೇಶದಿ ತೊಳಲುತ ಹರಿಸೆಂಬನ 3 ಬಲಿಯಂದದಿ ದಾನವ ಕೊಡಲಾರದೆ ಛಲದಿಂ ನಿನ್ನಯ ಪದಯುಗ ಪಿಡಿಯದೆ ಒಲಿಯುತ ತರಳನ ಸಲಹೆಂದೆಂಬನ 4 ಎಲ್ಲವ ಪಡೆಯಲು ಪುಣ್ಯವ ಗಳಿಸಿರೆ ಬಲ್ಲಿದ ನಿನ್ನಯ ಹಂಗಿರಲಿಲ್ಲವು ಎಲ್ಲರ ಬಂಧು ಜಾಜೀಶಾ ಎಂಬನ 5
--------------
ಶಾಮಶರ್ಮರು
ಮಲಗಿದನು ಶ್ರೀರಂಗ ಶ್ರೀರಂಗ ಪ ಕಲಿಜನರ ನೋಡುತಲಿ ಅಳುಕಿದಾಮನದಿಂದ ಅ.ಪ ಜೀವ ಜಗಬಿಂಬನಿಗೆ ಯಾವುದೈ ಆಯಾಸ ಕಾವ ಸಚರಾಚರವ ಶ್ರೀವರನಿಗುಂಟೆ ನಿದ್ರೇ ಸಾರ್ವಭೌಮನಿಗೆ ಕ್ಷುದ್ರಜೀವ ಸಮರೆಂತೆಂಬ ಕೋವಿದಾಭಾಸಗಣ ಸೇವೆಕೊಳ್ಳನು ಎಂದು 1 ವೈದೀಕರೆನ್ನುತಲಿ ವೇದಮರ್ಮವ ತಿರುಚಿ ಬೌದ್ಧಮತವನೆ ಮತ್ತೆ ಬೊಧಿಪರೆ ಈ ಜನರು ಸಾಧು ಸಮ್ಮತ ಮಧ್ವವಾದ ನೋಡದೆ ಬರಿದೆ ಸಾಧು ವೇಷದಿ ತಿರಿಪ ಗರ್ದಭರ ಕಂಡಂಜಿ 2 ನಾಮಜಪವೇನಿಲ್ಲ ನೇಮ ನಿಷ್ಠೆಗಳಿಲ್ಲ ನಾಮ ಹಾಕುವ ದೊಡ್ಡ ನೇಮವಂದೇಯಿಹುದೆ ಹೇಮಗೋಸುಗ ತತ್ವ ಹೋಮಮಾಡುವ ಎಲ್ಲ ಕಾಮ ಕಾಮಿನಿ ಜನರ ವಾಮಗುಣಗಣನೆನೆದು 3 ಅನ್ನದೇವನ ತೊರೆದು ಅನ್ನಕೊಂಬರೆ ಕ್ರಯಕೆ ಅನ್ಯರೆನ್ನದೆ ಹರಿಗೆ ಇನ್ನು ಘಳಿಪರೆ ನಿರಯ ಹುಣ್ಣಂತಮವಿಪರೀತ ಕಣ್ಣಿಂದ ನೊಡದವ ಧನ್ಯಧನ್ಯನು ಎಂದು ಕಣ್ಣುಗಳ ಮುಚ್ಚುತಲಿ 4 ಶ್ರೀಲೊಲ ಮಲಗಿದಡೆ ಏಳುವುದು ಜಗವೆಂತು ವ್ಯಾಳಗುರುಹೃಸ್ಥ “ಶ್ರೀ ಕೃಷ್ನವಿಠಲ”ನೆ ತಾಳಿ ಕೃಪೆ ಹೃದಯದಲಿ ಶೀಲರೂಪವ ತೋರೊ ಕಾಲ ವಾಲಗವ ಕೈಕೊಂಡು 5
--------------
ಕೃಷ್ಣವಿಠಲದಾಸರು
ಮಲ್ಲಮರ್ಧನ ರಾಣಿ - ಮಹ ಲಕ್ಷುಮೀ ಪ ಖುಲ್ಲ ಜನರೆದೆದಲ್ಲಣೆಯೆ | ಕೊಲ್ಲಾಪುರ ನಿಲಯೆ ಅ.ಪ. ಪ್ರಕೃತಿ ಚೇತಾತ್ಮೆ ಜಡ | ಪ್ರಕೃತಿ ದ್ರವ್ಯದ ಕಾರ್ಯವಿಕೃತಿ ಗೊಳಿಸುತ ಮೊದಲು | ವೈಕೃತವು ತದನಂತರಾ |ವ್ಯಕುತಿ ಗೈಯುತ ಲಿಂಗ | ಪ್ರಕೃತಿ ಕಾರ್ಯವ ಮಾಡಿಸುಕೃತ ತ್ರಿವಿಧರ ಸಹಜ | ಪ್ರಕೃತಿ ಶಬ್ದನಿಗೀವೇ 1 ಪರಿಭವ ಕಾರ್ಯನೀ ಮಾಳ್ಪೆ ಪ್ರಜ್ಞಾಂತ | ಪ್ರೇಮ ರೂಪದಲೀಈ ಮಹತ್ತುಪಕಾರ | ಸಾಮಸನ್ನುತ ಹರಿಯನೇಮದಿಂದಲಿ ಗೈವ | ಭಾಮೆಗಾ ನಮಿಪೇ 2 ಹರಿಕಾರ್ಯ ಸತ್ಸಾಧ್ಯೆ | ವಿರಜೆ ರೂಪದಿ ಹರಿಯೆ ||ವರ ಮಂದಿರಾವರಣ | ನೆರೆ ವಿರಚಿಸೀ |ಸರುವ ಸಜ್ಜೀವ ತವ | ಸರಿತದೋಲ್ ಅವಭೃತವವಿರಚಿಸಲು ಜಡ ಪ್ರಕೃತಿ | ಹರಿಸುವೆಯೆ ದಯದೀ 3 ಶ್ರೀ ಸಿತ ದ್ವೀಪಾದಿ | ಆ ಸುರೂಪವ ತಾಳಿವಾಸುದೇವನ ಸೇವೆ | ಆಶೆಯಲಿ ಗೈವೇ |ಈಸು ತವ ಮಹಿಮೆಯನು | ತೋಷದಲಿ ಸ್ತುತಿಪರಭಿಲಾಷೆ ಸಲಿಸುತ ತೋರ್ಪೆ | ವಾಸುದೇವನ ರೂಪ 4 ಸತಿ ಪತಿ ತೋರೇ 5
--------------
ಗುರುಗೋವಿಂದವಿಠಲರು
ಮಹಾಲಕ್ಷ್ಮೀ ಎನ್ನ ಪಾಲಿಸೆ ಇಂದಿರಾದೇವಿ ಜ- ಗನ್ನುತ ಚರಿತೆ ಭಕ್ತ ಸಂಜೀವಿ ಪ ಸನ್ನುತಾಂಗಿಯೆ ದೀನ ಜನರಾಪನ್ನರಕ್ಷಕಳಲ್ಲವೇ ನೀ- ಕೃಪಾ ಕಟಾಕ್ಷದಿ ಅ.ಪ ಕಮಲನಾಭನರಾಣಿ | ಕಲ್ಯಾಣಿ ಪಂಕಜ ಪಾಣಿ ಶಮದಮಾದಿ ಸುಖಂಗಳಿತ್ತೆಮ್ಮಮಿತದುರಿತಗಳೋಡಿಸಿ ಅಹಂ ಕ್ರಮದಿ ತೋರಿಸಿ 1 ಎಷ್ಟೊ ಜನ್ಮಗಳೆತ್ತಿದೆನಮ್ಮಾ | ಬಲು ಕಷ್ಟಕಾಡುತಿಹುದು ಕರ್ಮ ಪೊಟ್ಟೆಗೋಸುಗ ತಿರುಗಿ ತಿರುಗೆಳ್ಳಷ್ಟು ಸುಖವನು ಕಾಣದೆ ಸಂ- ಪರಮೇಷ್ಠಿ ಜನಕನ ಪಟ್ಟದರಸಿಯೆ2 ಸಾಮಜಗಮನೆ ಸದ್ಗುಣರನ್ನೆ | ಕ್ಷೀರ - ಪ್ರಾಣನಾಯಕಿ 3
--------------
ಗುರುರಾಮವಿಠಲ
ಮಹಾಲಕ್ಷ್ಮೀ ಅಷ್ಟಕಂ ಪಂಕಜ ಮಾಲಿನಿಪಾಹಿಮಾಂ ಕರವೀರವಾಸಿನಿ ಪಾಹಿ ರಾಘವ ಕಾಮಿನಿ ಪ ಚಂದ್ರಮಂಡಲ ಹಾಸ ಸನ್ಮುಖ ಮಂದಹಾಸ ಸುಶೋಭಿತೆಸಿಂಧುರೇಂದ್ರ ಕರಾಮೃತೌಘ ಸುಗಂಧ ಬಿಂದು ನಿಷೇಚಿತೆಕುಂದರೋಜ್ವಲ ಇಂದ್ರನೀಲ ಮಣೀಂದ್ರಹಾರ ವಿಲಾಸಿತೇಬಂದ್ರಿರಾಜಸುತೇವ ಸೂನುಮನಾದಿ ಬಂಧ ವಿವರ್ಜಿತೇ 1 ಸಾಂಬ ಸುಶಾಂತಿ ಕಾಂತಿ ಸಹೋದ್ಭವೆ 2 ಚಾರು ಸುರಾಳಿ ಮೌಳಿಗ ಹಸ್ತತೇ 3 ತಪ್ತಕಾಂಚನ ನೂಪುರೋಜ್ವಲ ರಕ್ತಪಾಲ ಸರೋರಹೆಚಿತ್ರಪೇಟ ಪಟೋಲ್ಲ ಸತ್ಕಟೆ ರತ್ನ ಕಾಂಚಿ ಗುಣೋದ್ಭವೇನಿತ್ಯತೃಪ್ತ ನಿರಂಜನೈಸುರ ಮೃತ್ಯುಮೋಹನ ವಿಗ್ರಹೆತತ್‍ಕೃಪೈವಪು ಮೃತ್ಯುಸಾಧನ ಸಪ್ತ ಮೋಡಿಹ ವಿದ್ಮಹೆ 4 ಅಂಬಜಾವಕ ಲಕ್ಷ್ಮೀ ಮೇಷ ಕದಂಬಿನೀನಿಲಯಸ್ಥಿತೆಕಂಬುಕಂಜರ ತಾರಿಬೇಟ ಕರಾಂಬು ಸಂಭವ ಸೇವಿತೆಶಂಭರಾರಿ ಸುತಾಂಘ್ರಿಪಂಕಜೆ ಬಿಂಬರಾಹಿ ಭೂಸುತೆಸಾಂಬಹೀಂಬ ನಿಹಾ ಸುದರ್ಶಯ ಜಂಜವೈರಿನಿ ಸೇವಿತೆ 5 ತಲ್ಪ ಮಂದ ಸೌಭಗ ಶಾಲನಂವಂದ್ಯ ಮಾನ ವಿದೇಂದ್ರ ದೈವತ ವೃಂದ ವೈಭವದಾಯಿನಂಸುಂದರಾಂಗಿಣಿ - ನಿವೇದಗೇಹ ಭವಾಂಧಿ ಪೋಪನೀ ಶೋರ್ಪಣಂ 6 ಜೀವವರ್ಗ ಹೃದಾಲಯ ಸ್ಥಿತ ಭೂವರಾಹಸಹಾನನೇಪಾವನೀತಾಹೇ ವಸೇದ್ರುಮ ಹಾನು ಭಾವ ಶಿಖಾಮಣಿಹಾವಭಾವ ವಿಲಾಸಿನಾಕಿ ಸುವಾಸಿನಿನುತ ಸದ್ಗುಣಿಸೇವಕೇಯ ವಿಭಾವಿತಾಖಿಲ ಭಾವಕಾಯದ ಶಿಕ್ಷಣಿ 7 ಇಂದಿರೇಶ ಸತೀಂದುಮೌಳಿ ಕರಾರವಿಂದ ನಿಷೇವಣೇಚಂದ್ರಮಾರುತರೇಂದು ಸೈಂದವವೀಂದ್ರ ಪೂರ್ವಸು ವಾಹನೇಅಂಧಕೂಪ ಸಮಾನ ದುರ್ಭವ ಬಂಧ ಸೇಘನೀ ಪೋಷಿಣಿನಂದನಂದನ ಮಾಸುದರ್ಶಯ ಬಂಧುರಾಮೃತ ಭಾಷಿಣಿ 8
--------------
ಇಂದಿರೇಶರು
ಮಳೆಯ ಪಾಲಸಯ್ಯ ಮಂಗಳ- ನಿಳಯ ಪಾಲಿಸಮ್ಮ ಪ ಬಿನೆಯೊಳು ಮಳೆಯನು ತಳೆಯದೆ ತೃಣಗಳು ಬೆಳೆಯದ ಗೋವುಗಳಳವುವಯ್ಯ ಅ.ಪ ಗೋವಿಪುರ ಕುಲವ ಕಾಯುವ ದೇವನು ನೀನಲ್ಲವೇ ಮೇವುಗಳಿಲ್ಲದೆ ಗೋವುಗಳೆಲ್ಲವು ಸಾವುವು ನಿನ್ನೊಳಿದಾವನು ಕಾವನು 1 ಕರೆಯೊಳು ನೀರಿಲ್ಲ ಬಾವಿಗ- ಳೊರತೆಯ ಸೋರಿಲ್ಲ ತುರುಗಳು ಜೀವನದಿರವನು ಕಾಣದೆ ಹರಣವ ಬಿಡವುವು ಕರುಣದಿ ಬೇಗನೆ 2 ಬಲರಿಪುಖತಿಯಲಿ ಬಾಧಿಪೆ ಜಲಮಯ ರೀತಿಯಲಿ ಚಲಿಸದೆ ಕೊಡೆವಿಡಿದಳುಹಿದೆ ಕರದೊಳು ಚಲವನು ಗೋವ್ಗಳ ಬಳಗವನೀಗಳು 3 ಜಲನಿಧಿ ಕೃತ ಶಯನ ಶಾರದ ಜಲರುಹದಳನಯನ ಜಲಜರ ಮೂರುತಿ ಜಲಜಕರಗಳು ಜಲದಾಗರದಿಂ 4 ದಾರಿಯ ಜನರೆಲ್ಲ ಬಹು ಬಾ- ಯಾರಿ ಬರುವರಲ್ಲ ದೂರಗಿಂ ತಂದಿಹ ನೀರನು ಲೋಭದಿ ನಾರಿಯರೆಲ್ಲ ವಿಚಾರಿಸುತಿರ್ಪರು 5 ಬೆಳೆದಿಹ ಸತ್ಯಗಳು ಬಿಸಿಲಿನ ಜಳದಲಿ ಬಾಡಿಹುವು ನಡಿನ ನಯನ ನಿನ್ನೊಲುಮೆಯ ತೋರಿಸಿ ಘಳಲನೆ ಪೈರುಗಳಳಿಯುತ ತೆರದೊಳು 6 ಕರುಣಾನಿಧಿಯೆಂದು ನಿನ್ನನು ಶರಖಹೊಕ್ಕೆನಿಂದು ಶರಣಭರಣ ಪುಲಿಗಿರಿಯೊಳು ನೆಲೆಸಿಹ ವರದ ವಿಠಲ ದೊರೆ ವರದ ದಯಾನಿಧೆ 7
--------------
ವೆಂಕಟವರದಾರ್ಯರು
ಮಳೆಯ ಪಾಲಿಸ್ಯಯ್ಯ-ಮಂಗಳ-ನಿಳಯ ಲಾಲಿಸಯ್ಯ ಪ ಗೋವುಗಳಳಿವುವಯ್ಯಾ ಅ.ಪ. ಗೋವಿಪ್ರರ ಕುಲವ-ಕಾಯುವ-ದೇವನು ಸಾವುವುನಿನ್ನುಳಿದಾವನು ಕಾವನು1 ಕೆರೆಯೊಳು ನೀರಿಲ್ಲಾ-ಭಾವಿಗಳೊರತೆಯ ಸೊರಿಲ್ಲಾ ತುರುಗಳು ಜೀವನದಿರವನು ಕಾಣದೆ ಹರಣವ ಬಿಡುವುವು ಕರುಣದಿ ಬೇಗನೆ 2 ಬಲರಿಪುಖಾತಿಯಲಿ ಬಾಧಿಸೆ ಜಲಮಯ ರೀತಿಯಲಿ ಚಲಿಸದೆ ಕರದೊಳಾಚಲವನು ಕೊಡೆವಿಡಿದುಳುಹಿದೆ ಗೋವ್ಗಳ ಬಳಗವ ನೀಗಳುಂ 3 ಜಲನಿಧಿಕೃತ ಶಯನ ಶಾರದ ಜಲರುಹದಳನಯನ ಜಲಧೀದಿತಿ ಜಲಚರಮಾರುತಿ ಜಲಜಕರಗಳಿಂ ಜಲದಾಗರದಿಂ4 ದಾರಿಯಜನರೆಲ್ಲ-ಬಹುಬಾಯಾರಿ ಬರುವರಲ್ಲಾ ವಿಚಾರಿಸುತಿರ್ಪರು 5 ಬೆಳಿದಿಹ ಸಸ್ಯಗಳು ಬಿಸಲಿನ ಝಳದಲಿ ಬಾಡಿಹವು ನಳಿನನಯನ ನಿನ್ನೊಲುಮೆಯ ತೋರಿಸಿ ಘಳಿಲನೆ ಪೈರುಗಳುಳಿಯುವ ತೆರೆದೊಳು6 ಕರುಣಾನಿಧಿಯೆಂದುನಿನ್ನನು ಶರಣುಹೊಕ್ಕೆನಿಂದೂ ಶರಣಾಭರಣ ಪುಲಿಗಿರಿಯೊಳು ನೆಲಸಿಹ ವರದ ವಿಠಲದೊರೆವರದ ದಯಾನಿಧೆ 7
--------------
ಸರಗೂರು ವೆಂಕಟವರದಾರ್ಯರು
ಮಾಡಬಾರದೇ ಸಂಗಾ | ಸಂತರ | ಮಾಡಬಾರದೇ ಸಂಗ | ಕೂಡಿ ಶ್ರವಣವ ಮಾಡಲು ಮನದೊಳು | ಮಾಡಿಬಹುನು ಶ್ರೀರಂಗಾ ಪ ದೇಶ ತಿರುಗುವದ್ಯಾಕ | ಕಾಸಿ ಆರಿದ ಹಾಲವು ಇದರಿಡೇ | ಆ ಶಿವಧ್ಯಾನವು ಬೇಕ 1 ನಾನಾ ಸಾಧನದಿಂದಾ | ಬಾಹು | ದೇನೆಲೋ ಮತಿಮಂದಾ | ಮನಿಯೊಳಗಿನ ಗಿಡ ಸಂಜೀವನಾಗಿರೆ | ಕಾನನ ತಿರುಗುವದೇ ಅಂಧಾ 2 ಲೋಹ ಪರುಷವ ಬಿಟ್ಟು | ಕಾಷ್ಟದ ಲಾಹುದೇ ಚಿನ್ನದ ಗಂಟು | ಮಹಿಪತಿ ನಂದನು ಸಾರಿದ ಸ್ವಹಿತಕ | ಮಹಾನುಭಾವದಾ ನಿಜಗುಟ್ಟು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಾತರಿಶ್ವ ಮಹಾರಾಯಾ ನಿನ್ನ ದೂತನಾದೆನೊ ಪೊರಿ ಜೀಯಾ ಪ ಪುರುಹೂತ ಪ್ರಮುಖ ಸುರ ವ್ರಾತವಿನುತ ಶಿರಿನಾಥನ ನಿನ್ನೊಳು ಪ್ರೀತಿಲಿ ತೋರಿಸಿ ನೀತ ಜ್ಞಾನವಿತ್ತು ಮಾತು ಲಾಲಿಸೊ ಎನ್ನ ಮಾತೆಯ ತೆರದಿ ಅ.ಪ ಪ್ರಾಣಾದಿ ಪಂಚರೂಪಕನೆ ಜಗ ತ್ರಾಣ ಭಾವಿ ವಿರಿಂಚನೆ ಮಾಣದೆ ತವ ರೂಪ ಕಾಣಿಸೊ ಮನದಲ್ಲಿ ಪಾಣಿಯುಗವ ಮುಗಿವೆ ಕ್ಷೀಣಪಾಪನ ಮಾಡೊ ರೇಣು ಭಜನೆಯ ಗೈದು ಸರ್ವದ ವೀಣೆ ಪಿಡಿದತಿ ಗಾನ ಮಾಡುತ ಜಾಣನೆನಿಸಿ ಕ್ಷೋಣಿ ಪಾಲಿಪೆ 1 ಮೂಲರಾಮನ ಪಾದಕಮಲಾ ಯುಗಕೆ ನೀಲಷಟ್ಟದ ವರಬಾಲಾ ವಾಲಿಯಾನುಜ ಕಪಿ ಜಾಲಪಾಲಕನನ್ನು ಆಲಿಸಿ ಭೂಮಿಜ ಲೋಲರಾಮನ ಮೈತ್ರ್ಯ ಪಾಲಿಸೀ ಶರಧಿಯನು ನೀನೆ ಲೀಲೆಯಿಂದಲಿ ದಾಟಿ ಸೀತೆಗೆ ಬಾಲರೂಪದಿ ರಾಮವಾರ್ತೆಂiÀi ಪೇಳಿ ವನವನು ಹಾಳುಮಾಡಿದಿ 2 ಪಾತಕÀ ರಾವಣ ಮಗನಾ ರಣದಿ ಘಾತಿಸಿ ಯಮಗಿತ್ತವನಾ ತಾತಗುರು ಜಗನ್ನಾಥವಿಠಲ ನಿಜ ಪೋತನಾಗಿ ಜಗದಿ ಖÁ್ಯತಿಯ ಪಡೆದಿ ರೀತಿ ಏನಿದು ನಿನ್ನ ಪದಯುಗ ದೂತನಾಲ್ಪರಿವ ಮಾತನು ಯಾತಕೇ ಕಿವಿ ಕೇಳದೋ ಕಪಿ ನಾಥ ಪಾಲಿಸೊ ಎನ್ನ ತಾತಾ 3
--------------
ಗುರುಜಗನ್ನಾಥದಾಸರು
ಮಾತು ಬಿಡಬೇಕು ನೀತಿ ಹಿಡಿಬೇಕು ಪ್ರೀತಿಯಿಂದಧ್ಯಾತ್ಮ ನಿಜಸ್ಥಿತಿಗೂಡಬೇಕು ಧ್ರುವ ಕೋಟಿ ಮಾತಾದೇನು ಕೋಟಿಲಿದ್ದಾವೇನು ನೋಟ ನೆಲೆಗೊಳದ ಶಾಸ್ತ್ರಪಾಠ ಮಾಡಿನ್ನೇನು 1 ಸಂಜೀವ ಗಿಡಮೂಲವ್ಯಾತಕೆ ಸರ್ವ ನಡಿಯು ಙÁ್ಞನವರಿಯದಿಹ ನುಡಿಯಾತಕೆ ಬೀರ್ವ 2 ನಡೆನುಡಿ ಒಂದೇ ಮಾಡಿ ದೃಢ ಭಾವನೆ ಕೂಡಿ ಒಡನೆ ಬಾಹ್ವ ಮಹಿಪತಿ ಒಡಿಯ ಕೈಗೂಡಿ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಾತು ಮನ್ನಿಸೊ ಪರಮಾತಮಾ ಮುದದಿಂದ ಮಾತು ವೈದವನಲವ ಮಾತುರದೊಳು ಗೆದ್ದು ಮಾತಿಯ ಸೆರೆ ಪ್ರೇಮಾತುರ ಭೇದಿಸಿದ ಮಾತುರಪತಿ ಚಿನ್ಮಾತುರ ತೋರೋ ಪ ಸೂಕರ ಘೂಕಾ ಮನಕಾಶಾ ಕಾಕಕಂಕಾ ದನ ಕತ್ತೆ ಮೊದಲಾದ ಜನ ಕಲಿಯುಗದೀ ತನಕೆ ಆದzಕಿನ್ನು ಮನಕಾನಂದವ ಕಾಣೆ ದಿನ ದಿನ ಕಾಂಚನಾಶಿಯಿಂದ ಘನಕಾಮ ಬದ್ಧನಾದೆ ಕನಕಾಂಬುಜ ಭವಜನಕ ಜಗತ್ಪತಿ ಜನ ಕಥೆಯಿಂದ ಭ ವನಕತಿ ಮೋಹಿಸಿ ಧನಕವಿಯೆನಿಸಿದೆ ಎನ್ನ ಕಡೆ ಮೊಗವಾಗು 1 ಸನಕಾದಿ ವಂದ್ಯ ತ್ರಿಭುವನಕಾದಿ ಮೂಲವೆನಿಸಿ ವನಕಾಯಿದ ಕಾರುಣ್ಯರತುನಕಾರ ಪೂರ್ಣನೀತಾ ಘನಕಾಯ ಒಂದಾರೆ ಸಾಧನಕಾಧಾರವಾದೊ ಪಾ ವನ ಕಾಲಾ ತೊರೆದು ಜೀವನ ಕಾದುಕೊಂಡೆನಯ್ಯಾ ಇನಕರ ತೇಜಾ ತುಹಿನಕರ ಚರಣನೆ ಚನ ಕತ್ತಲೆ ನಾಶನ ಕರಿವರದಾ 2 ಜನಕಾ ವನಿಕಾ ನಾಭಾ ಕಾಣಿಸಿದೆ ಮುನಿ ಜನಕಾಶ್ಚರ್ಯರಾಗೆ ವಾಗೆ ಅನನಕಾಮರಿ ತೂಗೆ ವಂ ಚನೆ ಕಾಠಿಣ್ಯ ಪಾಪಕಾನನಕಾನಳನೆ ಜಾ ವನ ಕಾಟ ಬಿಡಿಸಿ ಈಮ್ಮನ ಕಾದಂತಯ್ಯಾ ನನಕೂಡ ಹಾಕು ದುಷ್ಟನದೊಟ್ಟಿ ಸ ಜ್ಜನ ಕರ್ಮದಲಿ ಸೋಭನ ಕಡೆಯಲಿ ಇಡು ಕವನಕೆ ದಾಸನ ಕರವಿಡಿಯೊ 3
--------------
ವಿಜಯದಾಸ
ಮಾಧವ ಗೋ'ಂದ ಬಾರೊದಾಶರಥೆ ದಯಾಸಮುದ್ರ ಬೇಗ ಬಾರೊ 1'ಷ್ಣು ಮಧುಸೂದನ ತ್ರಿ'ಕ್ರಮ ವಾಮನ ಬಾರೋಶಿಷ್ಟಜನರ ತಾುತಂದೆ ಸ್ವಾ'ು ಬಾರೋ 2ಶ್ರೀಧರ ಹೃೀಕೇಶ ಪದ್ಮನಾಭ ಶೌರಿ ಬಾರೊ 3ದಾಮೋಧರ ಸಂಕರ್ಷಣ ವಾಸುದೇವ ಬಾರೊಕಾಮಕಮಲಜ ಕುಶಲವ ಗಂಗಾಜನಕ ಬಾರೊ 4ಪ್ರದ್ಯುಮ್ನ ಅನಿರುದ್ಧ ಪುರುಷೊತ್ತಮ ಬಾರೊಮುದ್ದುಪಾದ ಸೇವೆಕೊಟ್ಟು ಪಾಲಿಸ ಬಾರೊ 5ಅಧೋಕ್ಷಜ ಶ್ರೀನಾರಸಿಂಹ ಅಚ್ಯುತ ಬಾರೊಅಧಮನು ಆರ್ತನು ವಂದಿಪರ ಪತಿತೋದ್ಧಾರ ಬಾರೊ 6ಜನಾರ್ದನ ಉಪೇಂದ್ರ ಹರಿ ಶ್ರೀಕೃಷ್ಣ ಬಾರೊಅನಾಥಪಾಲಕಾಪದ್ಬಾಂಧವ ಅಘಹರ ಬಾರೊ 7ಗುರುವರ ತುಲಸೀರಾಮಸ್ವರೂಪ ಭೂಪ ಬಾರೊಧರರಂಗಸ್ವಾ'ುದಾಸ ಜೀವೋದ್ಧಾರ ಬಾರೋ 8
--------------
ಮಳಿಗೆ ರಂಗಸ್ವಾಮಿದಾಸರು
ಮಾಧವ ಗೋವಿಂದ ಜಯಜಯ ವಿಷ್ಣುವೆ ಮಧುಸೂದನ ತ್ರಿವಿಕ್ರಮಜಯ ವಾಮನ ಜಯ ಶ್ರೀಧರ ಜಯ 1ಜಯ ಜಯ ಹೃೀಕೇಶ ಪದ್ಮನಾಭ ಜಯದಾಮೋದರ ಸಂಕರ್ಷಣ ಜಯಜಯ ವಾಸುದೇವನೆ ಜಯ ಪ್ರದ್ಯುಮ್ನನೆಜಯಾನಿರುದ್ಧ ಪುರುಷೋತ್ತಮ ಜಯ 2ಜಯ ಜಯಾಧೋಕ್ಷಜ ನಾರಸಿಂಹ ಜಯಜಯ ಜಯಾಚ್ಯುತ ಜಯ ಜನಾರ್ದನಜಯ ಜಯೋಪೇಂದ್ರನೆ ಜಯ ಹರೆ ಶ್ರೀ ಕೃಷ್ಣಜಯ ತಿರುಪತಿ ವೆಂಕಟರಮಣ 3ಓಂ ಪೂತನಾಜೀವಿತಹರಾಯ ನಮಃ
--------------
ತಿಮ್ಮಪ್ಪದಾಸರು
ಮಾಧವ ನಮ್ಮ ಹೆ ಜ್ಜಾಜಿಯ ಚೆನ್ನಕೇಶವಾ ಪ ಸಾಜದಿ ಶರಣರಿಗೊಲಿವಾ ಸುರ ಭೂಜನು ಪರವಾಸುದೇವಾ ಅ.ಪ ಮರೆತವರಿಗೆ ಮತ್ತೂ ದೂರನು ಇವ ಮರೆಹೊಕ್ಕವರ ಮುಂದಿರುವನು ದುರಿತಗಳಡಗಿಸಿ ದಾಸರ ಪೊರೆವಾ ಪರಮದಯಾಳುವು ಪ್ರಭು ಶ್ರೀನಿಭವ 1 ನಿರ್ಜರ ಮುನಿಗಣ ಲೋಲಾ ಶೀಲಾ ಸಾರಥಿ ಲೀಲಾ ಪರ್ಜನ್ಯ ಪ್ರಭುಪರಿಪಾಲ ನೀಲಾ ದುರ್ಜನ ವಂಶಕ್ಕೆ ಕಾಲಾ 2 ನಿತ್ಯತಂದೆಯು ತಾಯಿಯು ಶ್ರೀರಂಗಾ ಸತ್ಯಸಹೋದರನು ವೆಂಕಟರಂಗಾ ಸ್ತುತ್ಯ ಬಂಧುವು ತಾನೆ ನರಸಿಂಗಾ ಇವ ಪ್ರತ್ಯಕ್ಷನೊ ಅಂತರಂಗ 3 ವೆಂಕಟವರದನೆ ಸದಯಾ ಗುರು ಸಂಕಟಹರ ಬಹುವಿನಯಾ ರಂಗ ಪಂಕಜಸಂಭವ ತನಯಾ 4 ಯಾದವ ಯದುಶೈಲಶೃಂಗಾ ಸಾಂಗ ಮಣಿ ಉತ್ತಮಾಂಗ [ವೇದ] ವೇದ್ಯನೆ ಗರುಡತುರಂಗಾ ಗಂಗಾ ಬಾದರಾಯಣ ಗೀತೋತ್ತುಂಗ 5 ಸಂಪಿಗೆ ಕಂಪಿನ ಸುಂದರ ಸಂಪೂರ್ಣ ಸಂಪತ್ಕುಮಾರ ಶ್ರೀ ಭೂನೀಳ ರಮಣ ತಂಪಿನ ಹೃದಯದ ಪ್ರಾಣಸೂತ್ರಾದಿ ಪೆಂಪಿನಗುರು ಶ್ರೀನಿವಾಸ ಕಲ್ಯಾಣ6 ರಾಘವಜಯ ಸೀತಾರಾಮಾ ಸ್ವಾಮಿ ರವಿಕುಲ ಸುಂದರಸೋಮ ಯೋಗಿ ಜನಾನಂದ ಧಾಮಾ ಪ್ರೇಮಪ್ರಿಯ ಶ್ರೀಶ್ಯಾಮ ಭಾಗವತಾನಂದಪ್ರಿಯ ಪುಣ್ಯನಾಮಾ ಚತು ಸಾಗರಾಂತ ಸಾರ್ವಭೌಮ 7 ಭಕ್ತಮಂಡಲಿ ಕಾಮಧೇನು ಜೇನು ವಿ ರಕ್ತ ಜನರ ಹೃದಯಭಾನು ಮುಕ್ತಿ ಬಯಸಿ ಬಂದೆ ನಾನು ಪ್ರೇಮಾ ಸಕ್ತಿ ಸಿದ್ದಿಯ ನೀಡು ನೀನು 8 ಸಕಲದೇವರೊಳೆಲ್ಲ ನೀನೇ ಹೆಚ್ಚು ಅಕಳಂಕ ಸಾಧುಗಳ ಸವಿಬೆಲ್ಲದಚ್ಚು ನಿಖಿಳಜೀವರೊಳೆಲ್ಲ ಪರಮಾತ್ಮನಚ್ಚು ಸುಕರದಿ ನೆನೆಯುವ ನನಗೆ ನಿನ್ನಯ ಹುಚ್ಚು 9 ಪರಿಪರಿ ಭವಸಂಸಾರಾ ಸಾರಾ ಹೊರಲಾಲೆ ದೂಡುವೆ ದೂರಾ ಪರಮಾತ್ಮಾ ಪದಗಳ ಸೇರಾ ಸಾರಿ ಕರೆಯಲು ಕರಗಳ ತೋರಾ 10 ರಾಜ ಜನಾರ್ಧನ ದಿವ್ಯಂ ದಿವ್ಯಂ ಜಾಜಿ ತುಲಸೀ ಮಾಲ ಭವ್ಯಂ ಯಾಜಿ ಕಮಂಡಲ ದ್ರವ್ಯಂ ಸ್ತವ್ಯಂ ಜನಗಾನ ಶ್ರೋತವ್ಯಂ 11 ಸರ್ವಲೋಕ ಶರಣ್ಯ ಗಣ್ಯ ಉರ್ವಿ ದೇವ ವರೇಣ್ಯ ಹಿರಣ್ಯ ಸ್ವರ್ಣ ವಿರ್ವತ ದರಶ್ಯಾಮ ಪುಣ್ಯ 12
--------------
ಶಾಮಶರ್ಮರು
ಮಾಧವ ಪ ಕುಣಿಯುವೆ ಮುರಳಿ ಬಾರಿಸೊ ಮಾಧವಅ.ಪ ಭವದ ಸಂತಾಪವು ಕೊನೆಗಾಣಲಿ ಭುವಿಯೊಳು ಜೀವನ ಸವಿಯಾಗಲಿ ನವವಿಧ ಭಕುತಿಯು ಹರಿದಾಡಲಿ ಕಿವಿ ತುಂಬ ಕೇಳಿ ನಾ ನಲಿಯುವೆ ಶ್ರೀಕರ 1 ಅರಿಷಡ್ವರ್ಗಗಳೆಲ್ಲ ಮರೆಯಾಗಲಿ ಹರುಷ ಮಾನಸದಲಿ ಸೆರೆಯಾಗಲಿ ಮುರಳಿಯ ಧ್ವನಿಯು ತಾ ದೊರೆಯಾಗಲಿ ಪರಮ ವೈರಾಗ್ಯವೆ ಸಿರಿಯಾಗಲಿ ದೇವ 2 ಸಾಲೋಕ್ಯ ಸಾರೂಪ್ಯ ಸಾಯುಜ್ಯವು ಈ ಲೋಕದಲ್ಲೀಗ ಈ ಲಾಭವು ಶ್ರೀಲೋಲ ಗೋಪಾಲ ಬಾಲ ಪ್ರಸನ್ನನೆ ಮೇಲಾಯ್ತು ನರಜನ್ಮವಿರಲಿ ಎಂದೆಂದಿಗೂ 3
--------------
ವಿದ್ಯಾಪ್ರಸನ್ನತೀರ್ಥರು