ಒಟ್ಟು 3125 ಕಡೆಗಳಲ್ಲಿ , 116 ದಾಸರು , 2227 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮರಿಯಾದೆ ಅಲ್ಲವೊ ನಿನಗೆ ಮನವೆ ಪ ಸರಿಯಾಗಿ ನಡೆಯದೆ ನೀ ಚಪಲ ಪಡುವದು ಅ.ಪ ಪರಧನ ಪರಕಾಮಿನಿಯರ ನೋಡಿ ಎರಗುತ ತನಗದು ಬೇಕೆಂಬದು 1 ಆಶೆಯಿಂದಲಿ ವೃಥಾಯಾಸವಲ್ಲದೆ ಏನು ಲೇಸು ಕಾಣೆನು ಬಲು ಘಾಸಿಪಡುವೆ 2 ಮಾತು ಮಾತಿಗೆ ನಾನು ನನ್ನದೆಂಬೋದು 3 ನಿಂತಲ್ಲಿ ನಿಲ್ಲದೆ ಸಂತತ ದುರ್ವಿಷಯ ಭ್ರಾಂತಿಯೊಳು ಮುಳುಗಿ ಚಿಂತಿಸುವದು4 ಗುರುರಾಮವಿಠಲನ ಸಿರಿನಾಮದ ರುಚಿ ಸುರಿದು ತೃಪ್ತಿಗೊಳದೆ ಬರಿದೆ ಮರುಗುವೆ5
--------------
ಗುರುರಾಮವಿಠಲ
ಮರುಗದೇ ನಿಂತಿಹುದೆ ಮನವು ನಿನ್ನಾಅರಿಯದಪರಾಧ ತಾನಳಿಸುತಿರಲೆನ್ನ ಪನೆರೆಯವರ ಮೈಸಿರಿಯ ನೋಡಿ 'ರಿಯರ ನಡೆಯಮರೆತು ಧನದಲಿ ಮತಿಯನಳಿದೆಯಾಕರಕೊಂಡು ನರತತಿಯ ಕೆಣಕಿುವರ ಸಹನೆಯಪರಿಪಾಕದಿಂ ನೋಡಿ ಬಂದ ಪೀಡನೆಯ 1'ತವರೆಂಬಂತಿರುವ 'ಂಸೆಯನಾಳೋಚಿಸುತ ಜೊತೆಯೊಳಾರೋಗಿಸುತ ಜಾರಿ ನಿಲ್ಲುತಸತಿ ಸುತಾದ್ಯರ ಭೋಗಸಾಧನವ ಕೆಡಿಸುತ್ತಪತಿತರಿಂದರಸುತ್ತ ಪಿಡಿಸಲು[ಕಾ]ಯುತ 2ಪಾದುಕಾರ್ಚನೆಯನ್ನು ಪಾಲಿಸಿದ ಬಗೆಯನುಬೋಧಿಸುತ ಚಿತ್ತವನು ಬೆದರಿಸುವದೆನೀ ದಯಾಸಾಗರನು ನೀಚರುಪಹತಿಯನುಸಾದರದಿ ಬಿಡಿಸಿನ್ನು ಸಾಕು ಮುನಿಸನು 3ಕಾಲ ದೇಶವ ಕಂಡು ಕಾಪಥವ ಕೈಕೊಂಡುಬಾಳಿದರಳು ಕೂತುಂಡು ಭಕ್ತಿ ಮುಂಕೊಂಡುಊಳಿಗವ ಬೆಸಗೊಂಡು ಊರೊಳಗೆ ತಿರುಕೊಂಡುಬಾಲ ಇರಲರಿದಾಡುಬಡಿಯೆ 'ಡುಕೊಂಡು 4ಮಂಗಳಾರ್ತಿಯ ಸೇವೆ ಮಾಣುತಿಹುದೇಗೈವೆಕಂಗಳಿಗೆ ನೀ 'ಭುವ ಕಾಣಿಸಿದೆ ಸುಖವೆತಿಂಗಳೆನಿತಾದರುವೆ ತಿರಿದೂಳಿಗಕೆ ತರುವೆಸಂಗಿನವರೊಳಗಿರುವೆ ಸತತವೆಲೆ ಗುರುವೆ 5ತಪ್ಪಿಗನುಸಾರವಾಗಿ ತಿಳಿಯೆ ಶಿಕ್ಷಿಪೆಯಾಗಿಒಪ್ಪದ ಪದವ ನೀಗಿಪೊಳಿತಾಗಿತೆಪ್ಪಗೂಳಿಗಕಾಗಿ ತಗುಲಿಸುವೆ ನೀನಾಗಿಸುಪ್ರಸನ್ನತೆಯಾಗಿ ಸುಖಬಡುವರಾಗಿ 6ದುರುಳರಹುದಹುದಿವರು ದೂರಿಗೊಳಗಾದವರುಚರಣಾಬ್ಜ ಸೇವಕರು ಚಾರುಮತಿಯವರುದುರಿತ ಶತವಡಿಸಿದರು ದಾಟುವರು ನಿನ್ನವರುಕರುಣಾಬ್ಧಿ ನೀನಿದಿರುಗಾಣೆ ಸುಖಮಯರು7ಸೆರೆಯ ಪರಿಹರಿಸಿನ್ನು ಸುಖಿಸು ಸದ್ಭಕ್ತರನುಗುರು ಸುತರ ಚರಣವನು ಕಂಡು ಬದುಕುವೆನುಬರಿದೆ ಬೇಡುವೆ ನಾನು ಪಾಲಿಸುವ 'ಭು ನೀನುಶರಣಾಗತಪ್ರಿಯನು ಶಾಂತಿದಾಯಕನು 8ಧರೆಯ ಜನರಜ್ಞತೆಯ ದ'ಸಿ ನಿಜ ಸದ್ಗತಿಯಕರೆದೀವ ಗುರುರಾಯ ವಾಸುದೇವಾರ್ಯಕರುಣ ನಾಗನಗರಿಯ ಸ್ಥಿರಗೈದು ಸುವಸತಿಯಒರೆದೆ ಭವ'ಜಯ ವೇದಾಂತಪದ್ಧತಿಯ 9
--------------
ವೆಂಕಟದಾಸರು
ಮರುತನಾತ್ಮಜ ನಿನ್ನ ಚರಣ ಕಮಲಯುಗ್ಮ ನೆರೆನಂಬಿದವ ಧನ್ಯನೊ ಪ ಧರೆಯೊಳಗೆ ರಘುವರನ ಶೇವಿಸಿ ಶರಣು ಜನರನು ಪೊರೆವುದಕೆ ಭೂಸುರಗಣದಿ ರಾಜಿಸುವ ರಾಯಚೂರ ಪುರದ ಕೋಟೆಯೊಳಿರಲು ಬಂದಿಹ ಅ.ಪ ಬಹುಭರದಿವಾರಿಧಿ ಲಂಘಿಸಿ ಹರಿಭಟನೆಂದು ತಿಳಿಸಿ ತ್ವರದಿ ರಾಮನಿಗರ್ಪಿಸಿ ಧೀರನೆ ಸುರವಿನುತ ತವ ಪರಿಮಳವಿರಚಿಸಿದ ಗುರುವರರ ನೋಡಿದೆ 1 ಗೋವಿಂದನಂಘ್ರಿಯ ಭಜಿಸಿ ಮನದಿ ಭಾವಿಸಿ ನಂದಸುತನಿಗರ್ಪಿಸಿ ಪ್ರಥಮಾಂಗನೆನಿಸಿ ಸಮರ್ಥ ತವಪದ ಕೊಂದಿಸುವೆ ಮನ ಮಂದಿರದಿ ಯದುನಂದನನ ಪದದ್ವಂದ್ವ ತೋರಿಸು 2 ಪುಟ್ಟಿಯತಿರೂಪವನೆಧರಿಸಿ ಕ್ಷಿತಿಯೊಳಗಖಿಲ ದುರ್ಮತಗಳೆಂಬುವ ಮೇಘತತಿಗೆ ಮಾರುತನೆನಿಸಿ ಪ್ರತಿಪಾದ್ಯನೆಂದು ತಿಳಿಸಿ ಸುಖ ತೀರ್ಥರೆನಿಸಿ ಅತಿಹಿತದಿ ಸತ್ಪಥವ ತೋರಿದಿ ಅತುಳ ಮಹಿಮನೆನುತಿಸುವೆನು ಸತತ ಪಾಲಿಸೋ 3 ತನುಮರೆಯಲು ಧುರದಿ ಜೀವನವಿತ್ತಕಾರಣದಿ ವನಜನಾಭನು ದಯದಿ ತನ್ಮೂರ್ತಿ ಸಹಿತದಿ ತಟಿತ್ಕೋಟಿ ಸೇವಕಜನರ ಸಲಹುವಿ ಕೊಳುತಲಿ ಮೆರೆವದೇವನೆ 4 ಶಿರದಿ ಮುಕುಟ ಮಂಡಿತ ಮೂರ್ತಿ ದರುಶನವನೆ ಕೊಳ್ಳುತ ವಿಸ್ತರ ಮಂಟಪದಿರಾಜಿತ ಸುರಪೂಜಿತ ಕÀರುಣ ಶರಧಿಯೆ ಪೊರೆವದೆನ್ನನು ಶರಣು ಜನರಘ ಕರುಣವ ಪಡೆದ ಧೀರನೆ 5
--------------
ಕಾರ್ಪರ ನರಹರಿದಾಸರು
ಮರುಳನಾಗಿ ಬಂದು ತೀರ್ಥಪುರಕೆ ಸೇರಿದೆ ಕರಸಿಕೊಳ್ಳೊ ಮನೆಗೆ ಬೇಗ ಕರುಣವಾರಿಧೆ ಪ. ಸರಸಿಜಾದಿ ವಂದ್ಯ ನಿನ್ನ ಚರಣಕಮಲವ ಮರಳಿ ಮರಳಿ ಬೇಡಿಕೊಳುತ ಮಹಿಮೆ ಕೇಳುತ ಸ್ವರಗಳಿಂದ ಪೊಗಳುತಿರುವ ಸುಖವ ತ್ಯಜಿಸುತ 1 ಮೂಲೆ ನಾಲ್ಕರಲ್ಲಿ ಪುಷ್ಪಮಾಲೆಯಿರಿಸುತ ಮೇಲುಗಟ್ಟು ಬಿಗಿದು ದೀಪಮಾಲೆ ಬೆಳಗುತ ಗಾಳಿದೇವನೆಂದ ತತ್ವಮೂಲ ತಿಳಿವುತ ಶ್ರೀಲಲಾಮ ನಿನ್ನ ಪೂಜೆ ಮಾಡದೇಳುತ 2 ಇಂದಿರೇಶ ಎನ್ನ ತಪ್ಪನೊಂದ ನೋಡದೆ ತಂದೆ ಎನ್ನ ಕರಸಿಕೊಳ್ಳೊ ಹಿಂದೆ ದೂಡದೆ ಚಂದನ ಸ್ವರೂಪ ಪರಾನಂದ ಕಾರಣಾ ಭುಜಗ ಗಿರೀಶ ಭಕ್ತಭೂಷಣ 3
--------------
ತುಪಾಕಿ ವೆಂಕಟರಮಣಾಚಾರ್ಯ
ಮರೆಯದ ಭಾವಗೋಚರವಾುತಯ್ಯಾಕರುಣಿ ವೆಂಕಟದಾಸವರ್ಯ ಸದ್ಗುರುವೆ ಪಸನ್ನಿಕರ್ಷವನಾದರಣ ಹೇತು ಮಾನವರಿಗೆನ್ನುತಾನಂದ ರಸರುಚಿ ದೋರಿಸಿನಿನ್ನನೆ ತೊಳಲಿ ಬಳಲುತ ನಿನ್ನೊಳೆರಗುವಂತುನ್ನತರ ಮಾಡಲಂತರ್ಧಾನವಡೆವೆ 1ಗೋಪಿನಾರಿಯರಿಗಾನಂದ ರೂಪವ ತೋರಿತಾಪಬಡುವಂತಗಲಿ ುದ್ಧವರ ಮುಖದಿಸೋಪಾಯವಚನದಿಂ ತಿಳು'ದರ್ಥವ ನೆನೆಯಲೀ ಪರಿಯ ತೋರಿತೆನಗೆಲೆ ದಯಾನಿಧಿಯೆ 2ನೆರೆಧನ್ಯರಾದೆವಾ'ಲ್ಲ ಸಂದೇಹ ಗುರುವರ ವಾಸುದೇವಾರ್ಯ ಚಿಕನಾಗಪುರದೀಪರತತ್ವವರುಪಿ ವೆಂಕಟದಾಸ ವೇಷದಿಂಮರಳಿ ನಿಜದೊಳು ನಿಂದೆ ಕರುಣಾಸಮುದ್ರಾ 3
--------------
ತಿಮ್ಮಪ್ಪದಾಸರು
ಮರೆಯದೆ ಸಲಹೊ ಮಾರುತೀಶ ಎನ್ನ ಶರಣೆಂಬೆನು ನಿನ್ನ ಪ ಶರಣಾಗತರನು ಬಿಡದೆ ಪೊರೆವ ಫನ್ನ- ಗಿರಿ ಅಂಜನೆತನಯಅ.ಪ ವನನದಿಗಿರಿಗುಹೆಗಳಲಿ ನಿನ್ನ ರೂಪ ತೋರುವುದೈ ಭೂಪ ಶರಧಿ ಲಂಘಿಸಿ ರಾವಣನಿಗೆ ತಾಪ ಪುಟ್ಟಿಸಿದೆಯೊ ರಘುಪ- ನಡಿಗಳ ಬಿಡದೆ ಸೇವಿಸುವರ ಪಾಪ ಮಾಡುವಿ ನಿರ್ಲೇಪ ಸಡಗರದಲಿ ನಿನ್ನೊಡೆಯನ ತೋರಪ್ಪ ಘನಗಿರಿ ಹನುಮಪ್ಪ 1 ಊರಿನಲಿ ಊರ್ಹೊರಗು ನಿನ್ನ ಮೂರ್ತಿ ಎಷ್ಟ್ಹೇಳಲಿ ಕೀರ್ತಿ ಪಾಡುತ ಪೊಗಳ್ವರು ನಿನ್ನಯ ಸತ್ಕೀರ್ತಿ ವರ್ಣಿಸುವುದೆ ಅರ್ಥಿ ಪಾಮರನೊಮ್ಮೆ ಪಾಡಲು ನಿನ್ನ ವಾರ್ತೆ ಪರಿಹಾರವೋ ಭೀತಿ ನಾಡೊಳು ನಿನ್ನ ಭಜಿಸುವವರ ಸಂಗ ನೀಡು ಕೃಪಾಪಾಂಗ2 ಕಡಲ ಶಯನನ ಅಡಿಗಳ ಸೇವಿಸುತ ಕಡುಹರುಷವ ಪಡುತ ಬಿಡದೆ ನಿನ್ನಯ ಸೇವಕರಿವರೆನುತ ಶ್ರೀಶಗೆ ಪೇಳುತ್ತ ಕೊಡಿಸುವಿ ಮುಕ್ತಿಯ ಧೃಡಭಕ್ತರಿಗೆ ಸತತ ರಾಮರ ಸ್ಮರಿಸುತ್ತ ಕಮಲನಾಭ ವಿಠ್ಠಲನನು ಸೇವಿಸುತಭಕ್ತರ ಸಲಹುತ್ತ3
--------------
ನಿಡಗುರುಕಿ ಜೀವೂಬಾಯಿ
ಮರೆವನೇ ಮುರವೈರಿಯು ಸಿರಿಪತಿ ಸತ್ಯಶಾಸನ ಪ ಸುಖದು:ಖಗಳನು ಮನಕೆ ಸೇರಿಸದೆ ಸದಾ ಅಖಿಲ ಕಾರಣ ಹರಿಭಕುತ ಜನರ1 ಅತಿಭಾಗ್ಯ ಬಂದಾಗಲೂ ಚ್ಯುತಿ ಬಂದರೂ ಸ್ಥಿರ ಮತಿಯ ಪೊಂದುತ ಭಜಿಸುವ ಭಕುತನ 2 ಸಿಂಧುಶಯನನನು ವಂದಿಪ ಸುಜನರ ಬಂಧು ಬಳಗ ಜನವೆಂದರಿವನು 3 ಸಂಕಟ ಬಂದಾಗಲು ಶಂಕೆಯ ಮಾಡದ ಪಂಕಜನಾಭನ ಕಿಂಕರನನು 4 ಎನ್ನ ಕರ್ಮಗಳೆಲ್ಲ ನಿನ್ನ ಅಧೀನವೆಂದು ಸಂತತ ಭಜಿಸೆ ಪ್ರಸನ್ನನಾಗದೆ 5
--------------
ವಿದ್ಯಾಪ್ರಸನ್ನತೀರ್ಥರು
ಮರೆವುದೆಂತು ನಿನ್ನ ಪರಮ ದಯವ ಕರುಣಾವಾರಿಧೇ ಪ ಅರಿಯದ ಅಜ್ಞಾನಿ ಎನ್ನ ಹಿರಿಯನೆನಿಸಿ ಪೊರೆದ ಬಗೆಯ ಅ.ಪ ಜ್ಞಾನಿಗೆ ಲಭ್ಯನೆಂದು ನಿನ್ನ ಮಾನತತಿಯು ಪೊಗಳುತಿರಲು ಜ್ಞಾನವೀಯದಿರಲು ನಿನ್ನ ಜ್ಞಾನಿಜನಗಳೇನೆನುವರೋ 1 ರಾಗ ದ್ವೇಷದಿಂದ ಶಿರವ ಬಾಗದಿದ್ದ ಎನ್ನ ದುರಿತ ನೀಗಿ ದಿವ್ಯಯೋಗವೀಯಲು ತ್ಯಾಗ ನಿನ್ನದು ಯೋಗವೆನ್ನದು 2 ಮಡುವಿನಲ್ಲಿ ಬಿದ್ದು ಸುಳಿಯ ಹೊಡೆತದಿಂದ ಮುಳುಗುತಿರಲು ದಡಕೆ ತಂದು ರಕ್ಷಿಸಿದ ಎನ್ನೊಡೆಯ ವರ ಪ್ರಸನ್ನ ಮೂರುತೆ 3
--------------
ವಿದ್ಯಾಪ್ರಸನ್ನತೀರ್ಥರು
ಮರ್ಯಾದಿ ಗುಣ ವಳ್ಹದೋ | ಗುರುವರ್ಯರ ಸೇವೆಲಿ ಬಾಳ್ವೆನೆಂಬನಿಗೆ ಪ ಅರಸುವಲಿದು ಅತಿ ಪ್ರೀತಿ ಮಾಡಿದರೇನು ? ಕರಗಳ ಮುಗಿದು ನಿಂದಿರಬೇಕು ಚರನು 1 ಹಿಂಗದೆ ಭಕುತಿಗೆ ಬೆಜ್ಜರ ವಿಡಿದರ | ಬಂಗಾರಕ ಸುವಾಸನೆಯು ಬಂದಂತೆ 2 ಕುದುರೆಗೆ ಉತ್ತತ್ತಿ ತುಸು ಕೊಟ್ಟರಾರೋಗ್ಯ | ಅದೇ ವಿಶೇಷ ಕೊಡಲು ವಿಪರೀತವೋ 3 ಯೋಗ್ಯವಲ್ಲದ ಅಲಂಕಾರಿಸಿಕೊಂಡರೆ ತನ್ನ | ಶ್ಲಾಘ್ಯವೇ ಜಗದೊಳು ಉಪಹಾಸ್ಯ ಮೂಲಾ 4 ತರಳತನವ ಬಿಟ್ಟೆಚರದಲಿ ನಡಿಬೇಕು | ಗುರು ಮಹಿಪತಿಸುತ ಪ್ರಭು ನೊಲುವಂತೆ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಲಗಿದನು ಶ್ರೀರಂಗ ಶ್ರೀರಂಗ ಪ ಕಲಿಜನರ ನೋಡುತಲಿ ಅಳುಕಿದಾಮನದಿಂದ ಅ.ಪ ಜೀವ ಜಗಬಿಂಬನಿಗೆ ಯಾವುದೈ ಆಯಾಸ ಕಾವ ಸಚರಾಚರವ ಶ್ರೀವರನಿಗುಂಟೆ ನಿದ್ರೇ ಸಾರ್ವಭೌಮನಿಗೆ ಕ್ಷುದ್ರಜೀವ ಸಮರೆಂತೆಂಬ ಕೋವಿದಾಭಾಸಗಣ ಸೇವೆಕೊಳ್ಳನು ಎಂದು 1 ವೈದೀಕರೆನ್ನುತಲಿ ವೇದಮರ್ಮವ ತಿರುಚಿ ಬೌದ್ಧಮತವನೆ ಮತ್ತೆ ಬೊಧಿಪರೆ ಈ ಜನರು ಸಾಧು ಸಮ್ಮತ ಮಧ್ವವಾದ ನೋಡದೆ ಬರಿದೆ ಸಾಧು ವೇಷದಿ ತಿರಿಪ ಗರ್ದಭರ ಕಂಡಂಜಿ 2 ನಾಮಜಪವೇನಿಲ್ಲ ನೇಮ ನಿಷ್ಠೆಗಳಿಲ್ಲ ನಾಮ ಹಾಕುವ ದೊಡ್ಡ ನೇಮವಂದೇಯಿಹುದೆ ಹೇಮಗೋಸುಗ ತತ್ವ ಹೋಮಮಾಡುವ ಎಲ್ಲ ಕಾಮ ಕಾಮಿನಿ ಜನರ ವಾಮಗುಣಗಣನೆನೆದು 3 ಅನ್ನದೇವನ ತೊರೆದು ಅನ್ನಕೊಂಬರೆ ಕ್ರಯಕೆ ಅನ್ಯರೆನ್ನದೆ ಹರಿಗೆ ಇನ್ನು ಘಳಿಪರೆ ನಿರಯ ಹುಣ್ಣಂತಮವಿಪರೀತ ಕಣ್ಣಿಂದ ನೊಡದವ ಧನ್ಯಧನ್ಯನು ಎಂದು ಕಣ್ಣುಗಳ ಮುಚ್ಚುತಲಿ 4 ಶ್ರೀಲೊಲ ಮಲಗಿದಡೆ ಏಳುವುದು ಜಗವೆಂತು ವ್ಯಾಳಗುರುಹೃಸ್ಥ “ಶ್ರೀ ಕೃಷ್ನವಿಠಲ”ನೆ ತಾಳಿ ಕೃಪೆ ಹೃದಯದಲಿ ಶೀಲರೂಪವ ತೋರೊ ಕಾಲ ವಾಲಗವ ಕೈಕೊಂಡು 5
--------------
ಕೃಷ್ಣವಿಠಲದಾಸರು
ಮಹಾಬಲಿಪುರ ಮಹಾಬಲೇಶ್ವರ ಮಾವಳಿಪುರ ಮಿಹಿರಾ ಸುರುಚಿರ ಪರಾತ್ಪರಾ ಪ ಮಹೀಸುರಾರ್ಚಿತ ಸದಾಕೃಪಾಕರ ವಿಹಂಗವಾಹನ ಪೀತಾಂಬರ ಅ.ಪ ಮಧುಸೂದನ ತವಪಾದುಕಾ ಸಾರದ ಮಾಧವಿ ಸುಮದಲಿ ಪೂದತ್ತರುದಿಸಿ ಮೇದಿನಿಯೊಳು ತವಾರಾಧನ ತತ್ವವ ಬೋಧಿಸುವಂತೆ ನೀಗೈದೆ ಕೃಪಾನಿಧೆ 1 ಶ್ರೀಮದನಂತ ದಿವ್ಯಾಸನಮಂಡಿತ ಶ್ರೀಮಹೀಸಂಯುತ ಲೋಕವಿಖ್ಯಾತಾ ಪ್ರೇಮಸುಧಾನ್ವಿತ ಕಾಮಿತದಾತಾ ಶ್ರೀ ಮಾಂಗಿರಿಪತಿ ಶರಣಸಂಪ್ರೀತಾ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಹಾಲಕ್ಷ್ಮಿ ಅಮ್ಮಾ ಲಕುಮಿದೇವಿ ನಿಮ್ಮರಸನ ತೋರೆ ಸುಮ್ಮನೆ ಬಿಡುವದು ಸಮ್ಮತವೇ ನಿನಗೆ ಪ ಹೆತ್ತ ಬಾಲರು ಮಂದಮತಿಗಳಾದರೆ ತಾಯಿ ಸತ್ತು ಹೋಗಲಿ ಎಂದು ಎತ್ತದೆ ಬಿಡುವೊಳೆ 1 ನಿಮ್ಮ ಮಾತಿಗೆ ಹರಿ ಸಮ್ಮತನಾಗುವ ಕುಮತಿಗಳೆಣಿಸದೆ ರಾಮ ಮೂರುತಿ ತೋರೆ2 ಸಿಂಧುತನಯೆ ಎನ್ನ ಬಂಧ ಬಿಡಿಸಿ ಬೇಗ ಪಾದ ಪೊಂದಿರುವಂತೆ ಮಾಡೆ 3 ತತ್ವೇಶರೆಲ್ಲರೂ ನಿತ್ಯಾಧೀನರು ನಿಮಗೆ ಭೃತ್ಯಗೆ ನಿಜ ಹರಿ ಭಕ್ತಿ ಕೊಡುವಂತೆ ಪೇಳೆ 4 ಎನ್ನಲಿರುವ ಹೀನರೋಡಿಸಿ ಬೇಗ ಪನ್ನಗಾಚಲವಾಸ ಶ್ರೀ ನರಹರಿ ತೋರೆ 5
--------------
ಪ್ರದ್ಯುಮ್ನತೀರ್ಥರು
ಮಹಾಲಕ್ಷ್ಮಿ ಇಂದಿರೇ ಪಾಲಿಸು ಕಮಲಮಂದಿರೆ ಪ ಇಂದಿರೆ ಇಂದುನಿಭಾಸ್ಯೆ - ಗುಣ - ವೃಂದ ಶೋಭಿತೆ ಶುಭಗಾತ್ರೆ - ಆಹಾ ಇಂದು ಶೇಖರಸುರವಂದಿತಪಾದ ದ್ವಂದಾರವಿಂದಳೆ ಮಂದಸ್ಮಿತಾನನೆ ಅ.ಪ ಅರುಣದಿಂದೊಪ್ಪುವ ಚರಣ ಯುಗಳಾ - ಭರಣ ಭೂಷಿತ ಯೋಗಿಶರಣಾ ನಿಜ ಶರಣರ್ಗೆ ರನ್ನದರ್ಪಣಾಭವ - ಅರಣತಾರಣಕಾರಣ - ಆಹಾ ಶರಣು ಪೊಕ್ಕೆನು ದೇವಿ ಚರಣಕಮಲಯುಗ ವರಣಿಸಲಳವಲ್ಲ ಕರುಣಿಸು ನೀ ಎನ್ನ 1 ಶ್ರುತಿನುತವಿತತಸÀಚ್ಚರಿಯೆ ಸದಾ- ನತÀರ ಸಂತೈಪೊದಾಶ್ಚರಿಯೆ ನಿನ್ನ ಸ್ತುತಿಸಿದವಗೆ ಮಹಾ ಶಿರಿಯೆ ಮತ್ತೆ ನಿರಯ ಅಹಾ ಸತತ ನಿನ್ನಲಿ ಮನೋರತಿನಿತ್ತು ಶೋಕದ ವ್ರತತಿ ಖಂಡಿಸಿ ಸುಖತತಿಯ ಪಾಲಿಸು ದೇವೀ 2 ಜಗಕೆ ಸೃಷ್ಟಿಸ್ಥಿತಿನಾಶಕಾರಿ ಬಗೆ ಬಗೆ ಭವನದಲ್ಲಿ ಕ್ಲೇಶ-ಹರಸಿ ಸುಗಮದಿಂದ ಪರಿತೋಷ-ಬಡಿಸಿ ನಗಿಸುವಿ ಎನ್ನಭಿಲಾಷಾ ಅಹಾ ನಗೆಮುಖದಲಿ ಗುರು ಜಗನ್ನಾಥ ವಿಠಲನ್ನ ನಿತ್ಯ ಸೊಗಸಾಗಿ ಇರುತಿಪ್ಪಿ 3
--------------
ಗುರುಜಗನ್ನಾಥದಾಸರು
ಮಹಾಲಕ್ಷ್ಮೀ ಅಷ್ಟಕಂ ಪಂಕಜ ಮಾಲಿನಿಪಾಹಿಮಾಂ ಕರವೀರವಾಸಿನಿ ಪಾಹಿ ರಾಘವ ಕಾಮಿನಿ ಪ ಚಂದ್ರಮಂಡಲ ಹಾಸ ಸನ್ಮುಖ ಮಂದಹಾಸ ಸುಶೋಭಿತೆಸಿಂಧುರೇಂದ್ರ ಕರಾಮೃತೌಘ ಸುಗಂಧ ಬಿಂದು ನಿಷೇಚಿತೆಕುಂದರೋಜ್ವಲ ಇಂದ್ರನೀಲ ಮಣೀಂದ್ರಹಾರ ವಿಲಾಸಿತೇಬಂದ್ರಿರಾಜಸುತೇವ ಸೂನುಮನಾದಿ ಬಂಧ ವಿವರ್ಜಿತೇ 1 ಸಾಂಬ ಸುಶಾಂತಿ ಕಾಂತಿ ಸಹೋದ್ಭವೆ 2 ಚಾರು ಸುರಾಳಿ ಮೌಳಿಗ ಹಸ್ತತೇ 3 ತಪ್ತಕಾಂಚನ ನೂಪುರೋಜ್ವಲ ರಕ್ತಪಾಲ ಸರೋರಹೆಚಿತ್ರಪೇಟ ಪಟೋಲ್ಲ ಸತ್ಕಟೆ ರತ್ನ ಕಾಂಚಿ ಗುಣೋದ್ಭವೇನಿತ್ಯತೃಪ್ತ ನಿರಂಜನೈಸುರ ಮೃತ್ಯುಮೋಹನ ವಿಗ್ರಹೆತತ್‍ಕೃಪೈವಪು ಮೃತ್ಯುಸಾಧನ ಸಪ್ತ ಮೋಡಿಹ ವಿದ್ಮಹೆ 4 ಅಂಬಜಾವಕ ಲಕ್ಷ್ಮೀ ಮೇಷ ಕದಂಬಿನೀನಿಲಯಸ್ಥಿತೆಕಂಬುಕಂಜರ ತಾರಿಬೇಟ ಕರಾಂಬು ಸಂಭವ ಸೇವಿತೆಶಂಭರಾರಿ ಸುತಾಂಘ್ರಿಪಂಕಜೆ ಬಿಂಬರಾಹಿ ಭೂಸುತೆಸಾಂಬಹೀಂಬ ನಿಹಾ ಸುದರ್ಶಯ ಜಂಜವೈರಿನಿ ಸೇವಿತೆ 5 ತಲ್ಪ ಮಂದ ಸೌಭಗ ಶಾಲನಂವಂದ್ಯ ಮಾನ ವಿದೇಂದ್ರ ದೈವತ ವೃಂದ ವೈಭವದಾಯಿನಂಸುಂದರಾಂಗಿಣಿ - ನಿವೇದಗೇಹ ಭವಾಂಧಿ ಪೋಪನೀ ಶೋರ್ಪಣಂ 6 ಜೀವವರ್ಗ ಹೃದಾಲಯ ಸ್ಥಿತ ಭೂವರಾಹಸಹಾನನೇಪಾವನೀತಾಹೇ ವಸೇದ್ರುಮ ಹಾನು ಭಾವ ಶಿಖಾಮಣಿಹಾವಭಾವ ವಿಲಾಸಿನಾಕಿ ಸುವಾಸಿನಿನುತ ಸದ್ಗುಣಿಸೇವಕೇಯ ವಿಭಾವಿತಾಖಿಲ ಭಾವಕಾಯದ ಶಿಕ್ಷಣಿ 7 ಇಂದಿರೇಶ ಸತೀಂದುಮೌಳಿ ಕರಾರವಿಂದ ನಿಷೇವಣೇಚಂದ್ರಮಾರುತರೇಂದು ಸೈಂದವವೀಂದ್ರ ಪೂರ್ವಸು ವಾಹನೇಅಂಧಕೂಪ ಸಮಾನ ದುರ್ಭವ ಬಂಧ ಸೇಘನೀ ಪೋಷಿಣಿನಂದನಂದನ ಮಾಸುದರ್ಶಯ ಬಂಧುರಾಮೃತ ಭಾಷಿಣಿ 8
--------------
ಇಂದಿರೇಶರು
ಮಾಡಿದಫಲವನುಭವಿಸಣ್ಣ ನೀ ಒಲ್ಲೆಂದರೆ ಬೆನ್ನ ಬಿಡದಣ್ಣ ದೊರಕುವುದ್ಹ್ಯಾಗಣ್ಣ ಪ ಜತೆಯಿಲ್ಲದೆ ನೀ ಮೊದಲ್ಹುಟ್ಟಿ ಮತ್ತು ಜತೆಯಿಲ್ಲದ್ಹೋಗ್ವುದು ಮರೆತುಬಿಟ್ಟಿ ಸತಿಸುತರ್ಹಿತರೆಂದು ಮತಿಗೆಟ್ಟ ಮಂದ ಮತಿಯಾಗಿ ಸಂಸಾರ ತಿಳಿದಿ ಗಟ್ಟಿ ಗತಿಸುವ ದೇಹದ ಸ್ಥಿತಿ ವಿಚಾರಿಸದೆ ಸತತ ಒದ್ದಾಡಿದಸತ್ಯದೊಳಗೆ ಭ್ರಷ್ಟ 1 ಗಳಿಸಲು ತುಸು ಬೇಸರಲ್ಲದ್ಹೋಗಿ ಕೇಳಿದಳುಕಿ ಅಳುಕಿ ಜನರಿಗೆ ಬಾಗಿ ಅಳಿದುಪೋಗುವ ಕಾಸು ಹಣಕಾಗಿ ಕೆಟ್ಟು ಬಳಲಿಬಳಲಿ ದುಡಿದೆಲೆ ಗೂಗಿ ನಳಿನಾಕ್ಷನ ಪೂಜೆ ಒಮ್ಮೆ ಮಾಡೆನ್ನಲು ಅಳುಮೋರೆ ಮಾಡಿದಿ ತಲೆಬಾಗಿ 2 ಕೆಟ್ಟ ಕೃತ್ಯದಿ ನಿನ್ನ ವಯ ಕಳೆದಿ ಮನೆ ಗಿಷ್ಟಮಿತ್ರರು ಬರಲತಿ ನೊಂದಿ ಕೊಟ್ಟದ್ದು ಕೊಡಲಿಕ್ಕೆ ಸಿಟ್ಟಿಗೆದ್ದಿ ನೀ ಶಿಷ್ಟರ ಸಂಗಕೆ ದೂರಾದಿ ಇಷ್ಟದಾಯಕ ನಮ್ಮ ಶಿಷ್ಟ ಶ್ರೀರಾಮನಡಿ ಗಟ್ಟ್ಯಾಗಿ ಭಜಿಸದೆ ಕೆಟ್ಟ್ಹೋದಿ 3
--------------
ರಾಮದಾಸರು