ಒಟ್ಟು 2274 ಕಡೆಗಳಲ್ಲಿ , 101 ದಾಸರು , 1388 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಡಗುವದುಘನಅಡಗುವದುತೋರದಡಗದು ದೃಷ್ಟಿಯಲ್ಲಿಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಮಡದಿ ಮಕ್ಕಳು ಮನೆಯ ಬಲ್ಲಿತೊಡಕಿದೆ ಮನ್ಮಥನ ಬಲೆಯಲ್ಲಿ1ನಾನೀನೆಂಬಭಿಮಾನದಲಿಸ್ವಾನುಭವದ ಸುಖ ವ್ಯರ್ಥವೇ ಅಲ್ಲಿ2ದೀಪಕ ಶಂಕರನ ಪ್ರಭೆಯಲ್ಲಿದೀಪ ಕೀಟಕ.................3
--------------
ಜಕ್ಕಪ್ಪಯ್ಯನವರು
ಅನುದಿನಭವಾಬ್ಧಿಯಲ್ಲಿ ಭವತರಂಗ ರಾಶಿಯಲ್ಲಿಮುಳುಗುತಿಹೆ ಕೈಯ ಪಿಡಿಯೊ ಜನಕ ಕೃಷ್ಣಯ್ಯ ಪ.ಶ್ರೀನಿವಾಸ ನಿನ್ನ ಭಕ್ತಿ ಮಾಡದ ಅಘವಂತನೆಂದುಹೀನ ಜನರ್ಪಾಳಕಿಟ್ಟರೇನ ಹೇಳಲೊನೀನು ಪಾಲಿಪ ರಾಜ್ಯದಲ್ಲಜ್ಞಾನಿ ದೇಶಿಗನೊಬ್ಬ ಕೆಡಲುಹಾನಿ ಹೆಚ್ಚಳ ನಿನ್ನದಲ್ಲೆ ದೀನದಯಾಳು 1ಚಿತ್ತವೇಗಕ್ಕವಧಿ ಇಲ್ಲ ಹೊತ್ತುಕೊಂಡು ಕಂಡ ಕಡೆಗೆಸುತ್ತುತಿದೆ ತನ್ನ ದಳವ ಕೂಡಿ ರಂಗಯ್ಯಕರ್ತನಿನ್ನ ಪಾದದೆಡೆಯೆ ಒತ್ತಿ ನೀನಿದನಾಳಬೇಕುಹೆತ್ತ ತಾಯಿ ನೀನೆ ಗಡಾನೆತ್ತಿಕೊಳ್ಳಯ್ಯ 2ಹಳುವಗಳು ದಾರಿಕಾಣೆ ಸೆಳವಿನೊಳಾಶ್ರಯ ಕಾಣೆನಳಿನನೇತ್ರ ನೀನೆ ಕಾಯೊ ಸುಲಭರೊಡೆಯನೆಲೆಯ ತೋರಾತಂಕಹಾರಿ ಒಲಿದು ವರಾಭಯವ ಬೀರಿಒಲಿಯೊ ಪ್ರಸನ್ವೆಂಕಟಾದ್ರಿನಿಲಯ ಉದಾರಿ 3
--------------
ಪ್ರಸನ್ನವೆಂಕಟದಾಸರು
ಅಪರಾಧಿ ನಾನಲ್ಲ ಅಪರಾಧವೆನಗಿಲ್ಲ |ಕಪಟನಾಟಕ ಸೂತ್ರಧಾರಿ ನೀನೆಪನೀನು ಆಡಿಸಲು ಜಡವೊನಕೆ ಅಭಿನಯಬೊಂಬೆಏನು ಬಲ್ಲದು ಬೇರೆ ಕೃತಿಯನೊಂದ ||ನೀನಿಟ್ಟ ಸೂತ್ರದಿಂದಲುಗೆ ಕೈಕಾಲುಗಳು |ನೀನೆ ಮಗ್ಗಿಸಲು ಮಗ್ಗುವ ದೇಹ ತಾನಾಗೆ 1ಒಂದೆಂಟು ಬಾಗಿಲುಗಳುಳ್ಳ ಪಟ್ಟಣಕೆ ತನ-ಗೆಂದು ಇಪ್ಪತ್ತಾರು ಮನೆಯಾಳ್ಗಳ ||ತಂದು ಕಾವಲುನಿಲಿಸಿ ಎನ್ನ ನೀನೊಳಗಿಟ್ಟುಮುಂದೆ ಭವಭವದಿ ದಣಿಪುದು ನಿನ್ನದನ್ಯಾಯ 2ಯಂತ್ರವಾಹಕನೀನೆ ಒಳಗೆ ಇದ್ದೂ ಎನ್ನ-ಸ್ವತಂತ್ರನೆಂದೆನಿಸಿ ಕೊಲಿಸುವರೆ ಹೇಳೊ ||ಕಂತುಪಿತ ಲಕ್ಷ್ಮೀಶ ಎಂತಾದಡಂತಹುದನಂತ ಮೂರುತಿ ನಮ್ಮಪುರಂದರವಿಠಲ3
--------------
ಪುರಂದರದಾಸರು
ಆಚ್ಯುತಾನಂತ ಗೋವಿಂದ-ಹರಿ |ನಾರಾಯಣ ನಿನ್ನ ನಾಮ-ಎನ್ನ |ಮಾಧವಮಂಗಳಗಾತ್ರ-ಸ್ವಾಮಿ |ಗೋವಿಂದ ಗೋಪಾಲ ಬಾಲ-ಸೋಳ |ವಿಷ್ಣುಚಕ್ರವು ಬಂದು ಸುತ್ತಿ-ಮೂರು |ಮಧುಸೂದನ ಮಾರಜನಕ-ನೀನು |ತ್ರಿವಿಕ್ರಮ ತ್ರೈಲೋಕ್ಯನಾಥ-ದೇವ |ವಾಮನರೂಪದಿ ಬಂದು-ಬಲಿಯ |ಶ್ರೀಧರ ಶೃಂಗಾರಾಧಾರ-ದಿವ್ಯ |ಹೃಷೀಕೇಶ ವೃಂದಾವನದಲಿ-ನೀ |ಪದ್ಮನಾಭನೆ ಕೇಳೊ ಮುನ್ನ-ಎನ್ನ |ದಾಮೋದರ ದನುಜಹರಣ-ಹರಿ |ಸಂಕರ್ಷಣ ಸರುವಾಭರಣ-ಇಟ್ಟು |ವಾಸದೇವ ಕೇಳೊ ನಿನ್ನ-ದಿವ್ಯ |ಪ್ರದ್ಯುಮ್ನ ನೀನೆಂದು ಕರೆಯೆ-ದುರ್ |ಅನಿರುದ್ದ ಗೋಕುಲದಲ್ಲಿ-ನೀಪುರುಷೋತ್ತಮಗಾರು ಸಾಟಿ?-ಶ್ರೀ |ಅಧೋಕ್ಷಜಅಸುರಸಂಹಾರಿ-ದೇವ |ನರಸಿಂಹರೂಪವ ತಾಳಿ-ಬಂದೆ |ಅಚ್ಯತ ನೀನಲೆ ಮುದ್ದು-ಗೋಪಿ |ಜನಾರ್ಧನ ಕೇಳೊ ಬನ್ನಪವ-ನೀ |ತೊಲಗಿಸು ಬಂದೆನ್ನ ಮನದ ಕಲುಷವ ||ಉಪೇಂದ್ರನುರಗನ ತುಳಿಯೆ-ಆಗ |ಹರಹರಿ ಎಂದರೆ ಪಾಪ-ರಾಶಿ |ಕೃಷ್ಣ ಕೃಷ್ಣನೆಂಬ ಸೊಲ್ಲ-ಕೇಳಿ |
--------------
ಪುರಂದರದಾಸರು
ಇನ್ನೂ ದಯ ಬಾರದೇ-ದಾಸನ ಮೇಲೆ-ಇನ್ನೂ ದಯ ಬಾರದೇ ಪಮುನ್ನ ಮಾಡಿದ ದುಷ್ಕರ್ಮಗಳೆಲ್ಲವಮನ್ನಿಸಿ ಕಳೆವುದು ಇಂದಿರೆಯ ರಮಣಾ ಅ.ಪನಾನಾ ಜನ್ಮಗಳಲಿ ನಾನಾ ಜಾತಿಗಳಲಿನಾನಾ ಯೋನಿಗಳಲಿ ಜನಸಿ ಜನಿಸಿ ದೇವಾ ||ನಾನು ನನ್ನದು ಎಂದು ನರಕದೊಳಗೆ ಬಿದ್ದುನೀನೆ ಗತಿಯೆಂದು ಸ್ಮರಣೆ ಮಾಡಿದ ಮೇಲೆ 1ಕಾಮಾದಿ ಷಡುವರ್ಗ ಗಾಢಾಂಧಕಾರದಿಪಾಮರನಾಗಿ ಇದ್ದಂಥ ಪಾತಕನ ||ರಮಾಮನೋಹರಹರಿನೀನೇ ಗತಿಯೆಂದುನಾಮಾಮೃತವನು ಪಾನ ಮಾಡಿದ ಮೇಲೆ 2ಏನ ಓದಿದರೇನು ಏನ ಕೇಳಿದರೇನುಈ ನಾಮ ಸ್ಮರಣೆಗೆ ಸರಿಬಾರದು ||ಙ್ಞÕನಹೀನನ ಮೇಲೆ ದಯವಿಟ್ಟು ಪಾಲಿಸುದೀನ ದಯಾಕರಪುರಂದರವಿಠಲನೆ3
--------------
ಪುರಂದರದಾಸರು
ಇವ ಬಲು ಕಳ್ಳ ನಮ್ಮಮಾಧವಬಲು ಸುಳ್ಳನವನವÀ ಗುಣಗಳ ಹಿಡಿಸಿದನ್ಹಳ್ಳ ಪ.ನಿತ್ಯತೃಪ್ತನೆಂಬೊ ಸ್ತುತ್ಯಾರ್ಥ ನಿನ್ನ ಬಿಟ್ಟುಎತ್ತ ಹೋದವಯ್ಯ ನಮಗ್ಹೇಳೊ ಯದುಪತಿಎತ್ತ ಹೋದವಯ್ಯ ನಮಗ್ಹೇಳೊ ಯದುಪತಿತುತ್ತನ್ನ ನಿನಗೆ ಫನವೇನೊ ಯದುಪತಿ 1ಮುನ್ನಶಬರಿ ಎಂಜಲಪನ್ನಿಪಾವನ್ನೊ ನಿನಗೆಅನಸ್ತಾವೆಂಬೊ ಶೃತಿಗಳು ಯದುಪತಿಅನಸ್ತಾವೆಂಬೊ ಶೃತಿಗಳು ಹೊಗಳುತ ನಿನ್ನಲ್ಲೆಹ್ಯಾಂಗ ಇರಬೇಕೊ ಯದುಪತಿ 2ಪಟ್ಟದ ರಾಣಿ ಲಕುಮಿ ಎಷ್ಟು ಗುಣವಂತಳಲ್ಲೊಅಷ್ಟು ಭಾವದಲೆ ಚಲುವಳೊ ಯದುಪತಿಅಷ್ಟು ಭಾವದಲೆ ಚಲುವಳೊಕುಬ್ಜಿಯಂಥಸೊಟ್ಟ ಹೆಣ್ಣಿಗ್ಯಾಕೆ ಮನಸೋತೆÀ್ಯೂ ಯದುಪತಿ 3ಎಷ್ಟು ಸೃಷ್ಟಿಯ ಮಾಡಿಪುಟ್ಟ ಲವಕುಶರ ಪಡೆದಿಸೃಷ್ಟಿ ಮಾಡಿದ್ದು ಮರೆತೆನೊ ಯದುಪತಿಸೃಷ್ಟಿ ಮಾಡಿದ್ದು ಮರೆತೆನೊ ನಾಭಿಯಲ್ಲಿಪುಟ್ಟಿದ ಬೊಮ್ಮನಗುತಾನೊ ಯದುಪತಿ 4ರುದ್ರನ ಭಜನೆ ಮಾಡಿ ಪ್ರದ್ಯುಮ್ನನ ಪಡೆದಿವಿದ್ವಜ್ಜನರೆಲ್ಲ ನಗುತಾರೊ ಯದುಪತಿವಿದ್ವಜ್ಜನರೆಲ್ಲ ನಗುತಾರೊ ಶ್ರೀಧ ಶ್ರೀಧವಿದ್ಯವನೆÀಲ್ಲ ಮರೆತೇನೋ ಯದುಪತಿ 5ಸ್ವರಮಣನೀನೆಂಬೊ ಸ್ವರ ಗೈವ ಶೃತಿಗಳುಹರಿದಾವೇನೊ ಜಲದೊಳುಹರಿದಾವೇನೊ ಜಲದೊಳು ಗೊಲ್ಲತಿಯರ ಬೆರೆದಕಾರಣವ ನಮಗೆ ಹೇಳೊ ಯದುಪತಿ 6ಧೀರ ಗಂಭೀರನೆಂದು ಸಾರುವ ಶೃತಿಗಳುಹಾರಿದವೇನೊ ಮುಗಿಲಿಗೆಹಾರಿದವೇನೊ ಮುಗಿಲಿಗೆ ರಮಿಯರಸುಪೋರತನವೆಂದು ನಗತಾರೊ ಯದುಪತಿ 7
--------------
ಗಲಗಲಿಅವ್ವನವರು
ಈ ಸಮಯಕಲ್ಲದಿನ್ನೆಲ್ಲಿ ಕಾಯೊದೋಷರಹಿತ ವಸುದೇವ ನೀ ಕಾಯೊ ಕೃಷ್ಣ ಪನಿನ್ನಂಘ್ರಿಯನು ಭಜಿಸಿದವರ ಬಾಳ್ವೆಯ ಕಾಯೊ |ಎನ್ನಸತಿಸುತರು ನಿನ್ನವರೆ ಕಾಯೊ ||ನೀನಲ್ಲದನ್ಯರನು ಕಾಣೆ ಕವಳಿಯ ಕಾಯೊ |ಮುನ್ನ ಸ್ಥಿರವಾಗಿ ನೀನೆಂಬೆ ಕಾಯೊ 1ಪರವೆಣ್ಣುಗಳಿಗೆ ಎನ್ನ ಮನಸು ಕಾತರಿ ಕಾಯೊ |ದುರಿತದುಷ್ಕರ್ಮ ಮುಂಚಿಲ್ಲ ಕಾಯೊ ||ಕರೆಕರೆಯ ಸಂಸಾರಕಷ್ಟು ಕಡಲಿಯ ಕಾಯೊ |ದುರಿತಭವಶರಧಿಗೆ ತಾರೆ ಕಾಯೊ2ತ್ರಿವಿಧಪಾಪಂಗಳಿಗೆ ಪದವು ಉದ್ದಿನ ಕಾಯೊ|ಭವಸಾಗರದೊಳೀಸೆಂಬೆ ಕಾಯೊ ||ದಿವಿಜೇಂದ್ರ ಕೃಷ್ಣ ಕೈಪಿಡಿದು ಒಲಿದು ಕಾಯೊ |ನವ ಮುಕ್ತಿಪುರಂದರವಿಠಲ ನೀ ಬಿಡದೆ ಕಾಯೊ3
--------------
ಪುರಂದರದಾಸರು
ಈಗ ಕಾಯೋ ಎನ್ನ ಜೀಯಾ ಪತ್ಯಜಾನೆಗೈಸಿ ಎನ್ನ- ನಿಜಾಮನದಿಪಾದಭಜಾನೆಗೈವಂತೆ - ನಿಜಾಮನವನಿತ್ತು 1ಮರೂಳು ಭವದೊಳು - ಉರೂಳುತೀಪರಿತರಾಳೆ ಸಂಗದಿ ಮನ - ಮರೂಳುಗೊಂಡೆನೊ 2ದಾತಾನೀನೆ ಎನ್ನಾ ಇನ್ನಾತಾತಾಗುರುಜಗನ್ನಾಥಾ ವಿಠಲಪಾದಪಾಥೋಜ ಮನ ನಿಕೇತನದಲಿ ತೋರಿ 3
--------------
ಗುರುಜಗನ್ನಾಥದಾಸರು
ಉರುಗುಣಗಣಶ್ರೇಣಿ ಕರುಣೀ ಪಎರಗಿ ಬಿನೈಪೆ ತಾಯೆ ಸುಖವೀಯೇ ಅ.ಪವನಜಸಂಭವಮುಖ್ಯ ಅನಿಮಿಶೇಷರಸ್ತೋಮಕನಕವೃಷ್ಟಿಯ ಸುರಿದು ಪೊರೆಯೇ ಧ್ವರಿಯೇ 1ಸೃಷ್ಟಿಕಾರಣಿ ನೀನೆ ಕಷ್ಟ ತರಿದು ಕೃಪಾ -ಇಷ್ಟು ವಿಧದಲಿ ಬೇಡಿಕೊಂಬೆ ಅಂಬೆ 2ಖ್ಯಾತಮಹಿಮಳೆ ಎನ್ನ ಮಾತುಲಾಲಿಸುದೇವಿಪೋತನಾನಲ್ಲೆ ನಿನಗೆನಾಥನಾಗಿ ಭಾಗ್ಯಪಡೆದ ಜಸಪಡೆದಾ 3ಬ್ರಹ್ಮದೇವರುಸುಮ್ಮನ ನೀಡುಇಮ್ಮನಮಾಡದೆ
--------------
ಗುರುಜಗನ್ನಾಥದಾಸರು
ಎಚ್ಚರದಲಿ ನಡೆ ಮನವೆ - ನಡೆಮನವೆ - ಮುದ್ದುಅಚ್ಯುತನ ದಾಸರ ಒಡಗೂಡಿ ಬರುವೆ ಪ.ಧರ್ಮವ ಮಾಡುವುದಿಲ್ಲಿ - ಇನ್ನುಬ್ರಹ್ಮನ ಸಭೆಯ ತೋರುವರು ಮುಂದಲ್ಲಿಕರ್ಮಯೋಜನೆಗಳು ಇಲ್ಲಿ - ಬೆನ್ನಚರ್ಮವ ಸುಲಿಸಿ ತಿನ್ನಿಸುವರು ಅಲ್ಲಿ 1ಅನ್ನದಾನವ ಮಾಳ್ಪುದಿಲ್ಲಿ - ಮೃಷ್ಟಾನ್ನವ ತಂದು ಮುಂದಿಡುವರು ಅಲ್ಲಿಅನ್ಯಾಯ ನುಡಿಯುವುದಿಲ್ಲಿ - ಭಿನ್ನಭಿನ್ನವ ಮಾಡಿ ತಿನ್ನಿಸುವರು ಅಲ್ಲಿ 2ಮೋಸವ ಮಾಡುವದಿಲ್ಲಿ - ಸೀಸಕಾಸಿ ಬಾಯೊಳಗೆ ಹೊಯ್ಯುವರಲ್ಲಿದಾಸರ ಪೂಜಿಪುದಿಲ್ಲಿ - ಉರ್ವೀಶಾಧಿಪತಿ ಬಂದನೆಂಬರು ಅಲ್ಲಿ 3ವಂಚನೆ ಮಾಡುವದಿಲ್ಲಿ - ಕಾದಹಂಚಿನ ಪುಡಿಯ ತಿನ್ನಿಸುವರು ಅಲ್ಲಿಪಂಚಾಮೃತದ ಪೂಜೆ ಇಲ್ಲಿ ನಿನಗೆಕಂಚು - ಕಾಳಾಂಜಿಯ ಪಿಡಿದಿಹರಲ್ಲಿ 4ಚಾಡಿಯ ನುಕಿವುದು ಇಲ್ಲಿ ಅದ -ನಾಡಿದ ನಾಲಗೆ ಸೀಳುವರಲ್ಲಿಬೇಡಬಂದರೆ ಬಯ್ವುದಿಲ್ಲಿ ನಿನ್ನ -ಓಡಾಡುವ ಕಾಲು ಕತ್ತರಿಪರಲ್ಲಿ 5ಮದ್ದಿಕ್ಕಿ ಕೊಲ್ಲುವುದಿಲ್ಲಿ ಒದ್ದು -ಹದ್ದು ಕಾಗೆಗಳಿಗೆ ಈಯುವರಲ್ಲಿಕ್ಷುದ್ರ ಬುದ್ಧಿಯ ನಡೆಪುದಿಲ್ಲಿ ದೊಡ್ಡ -ಗುದ್ದಲಿ ಬೆನ್ನೊಳು ಎಳೆಯುವರಲ್ಲಿ 6ಕೊಟ್ಟಭಾಷೆಗೆ ತಪ್ಪುವುದಿಲ್ಲಿ ಕೈಯ -ಕಟ್ಟಿ ಈಟಿಯಿಂದ ಇರಿಯುವರಲ್ಲಿಕೊಟ್ಟ ಧರ್ಮವ ನಡೆಸುವುದಿಲ್ಲಿ ಬಲುಶ್ರೇಷ್ಠ ನೀನೆಂದು ಕೊಂಡಾಡುವರಲ್ಲಿ 7ಆಲಯದಾನವು ಇಲ್ಲಿ ವಿ -ಶಾಲ ವೈಕುಂಠನ ಮಂದಿರವಲ್ಲಿಆಲಯ ಮುರಿಯುವುದಿಲ್ಲಿ ನಿನ್ನ -ಶೂಲದ ಮೇಲೇರಿಸಿ ಕೊಲುವರಲ್ಲಿ 8ತಂದೆ ಮಾತನು ಮೀರುವುದಿಲ್ಲಿ ಹುಲ್ಲು -ದೊಂದೆಯಕಟ್ಟಿ ಸುಡಿಸುವರಲ್ಲಿತಂದೆ ತಾಯ್ಗಳ ಪೂಜೆ ಇಲ್ಲಿ ದೇ -ವೇಂದ್ರನ ಸಭೆಯ ತೋರುವರು ಮುಂದಲ್ಲಿ 9ಗಂಡನ ಬೈಯ್ಯುವುದಿಲ್ಲಿ ಬೆಂಕೆಕೆಂಡವ ತಂದು ಬಾಯಲಿ ತುಂಬುವರಲ್ಲಿಕೊಂಡೆಯ ನಡಿಸುವುದಿಲ್ಲಿ ಬೆಂಕೆಕುಂಡವ ತಂದು ತಲೆಯಲಿಡುವರಲ್ಲಿ 10ಹೊನ್ನು ಹೆಣ್ಣನು ಬಯಸುವುದಿಲ್ಲಿ ನಿನ್ನಕಣ್ಣಿಗೆ ಸುಣ್ಣವ ತುಂಬುವರಲ್ಲಿಕನ್ಯಾದಾನವ ಮಾಳ್ಪುದಿಲ್ಲಿ ನಮ್ಮಚಿನ್ನಪುರಂದರವಿಠಲನೊಲಿವನು ಅಲ್ಲಿ11
--------------
ಪುರಂದರದಾಸರು
ಎಂತಹುದೊ ನಿನ್ನ ಭಕುತಿ ? |ಸಂತತ ನಿನ್ನ ದಾಸರ ಸಂಗವಿರದೆನಗೆ ಪ.ವೃಣವನಾಶಿಪ ಕುರುಡು ನೊಣ ಮೊಸರ ಕಂಡಂತೆ |ಧನಿಕರ ಮನೆಗೆ ಕ್ಷಣಕ್ಷಣಕ್ಕೆ ಪೋಗಿ ||ತನುಬಾಗಿ ತುಟಿಯೊಣಗಿ ಅಣಕನುಡಿ ಕೇಳ್ವ - ಕೃ - |ಪಣ ಮನಕೆ ಎಂತಹದು ನಿನ್ನಯ ಭಕುತಿ 1ಅಡಿಯಾಡಿ ಮುಖಬಾಡಿ ನುಡಿಯಡಗಿ ಬಡವನೆಂದು |ಒಡಲ ತೋರಿಸಿದೆನೊ ಕಡುದೈನ್ಯದಿ ||ಒಡೆಯ ನೀನಹುದೆಂದು ಮಡದಿ - ಮಕ್ಕಳಿಗೆ ಹೆಸ - |ರಿಡುವ ಅವರಡಿಗೆ ಎರಗುವನ ಮನಕೆ 2ಹೋಗಿಬಾರೈ ಎಂದು ಅತಿಗಳೆದರು ತಲೆ - |ಬಾಗಿ ನಿಂತು ಅಲ್ಲಿ ಮೌನವಾಗಿ ||ಓಗರತೆ ಮನೆಮನೆ ತಪ್ಪದೆ ತಿರುಗುವ |ಜೋಗಿಯ ಕೈಯಕೋಡಗದಂಥ ಮನಕೆ 3ಅವನ ತೋರಿ ಬೆಟಿಕಿರಿಯ ಬಾಲವ ಬೀಸಿ |ಕುನ್ನಿ ಸುಳಿದಾಡಿ ಕಾಲ್ಗೆರಗುವ ತರದಿ ||ಹೆಣ್ಣಿನಾಶೆಗೆ ಬಾಯಬಿಡುವ ಸ್ತ್ರೈಣನಪರಿ - |ಘನ್ನವಯ್ಯ ಘನ್ನವಯ್ಯ ಬನ್ನಬಡುವ ಕುನ್ನಿಮನಕೆ 4ವಟುವಾಗಿ ಬಲಿಯ ದಾನವನು ಬೇಡಹೋದ |ಕಟು ಕಷ್ಟಗಳನೆಲ್ಲ ನೀನೆ ಬಲ್ಲೆ ||ವಟಪತ್ರಶಾಯಿ ಶ್ರೀಫಣಿ ವರದಪುರಂದರ - |ವಿಠಲ ನಿನ್ನ ದಾಸರ ಸಂಗಸುಖವಿರದೆ 5
--------------
ಪುರಂದರದಾಸರು
ಎನ್ನ ಕಡೆಹಾಯಿಸುವುದು ನಿನ್ನಭಾರ|ನಿನ್ನ ಸ್ಮರಣೆ ಮಾಡುವುದು ಎನ್ನ ವ್ಯಾಪಾರ ಪಎನ್ನಸತಿಸುತರಿಗೆ ನೀನೆಗತಿ|ನಿನ್ನವರು ಎಂಬುದೇ ಎನ್ನ ನೀತಿ 1ಎನ್ನನಿತ್ಯಸಾಕುವುದು ನಿನ್ನ ಧರ್ಮ |ನಿನ್ನ ಮರೆತು ಬದುಕುವುದು ಎನ್ನಕರ್ಮ2ಎನ್ನ ತಪ್ಪ ಎಣಿಸುವುದು ನಿನಗೆ ಸಲ್ಲ |ನಿನ್ನ ಮರೆತು ತಿರುಗುವುದು ಎನ್ನದಲ್ಲ 3ಎನಗೆ ಪಡಿಯಿಕ್ಕುವುದು ನಿನ್ನಮಾನ|ನಿನ್ನ ಮರೆತು ತಿರುಗುವುದು ಎನ್ನ ಅಪಮಾನ 4ನೀನಲ್ಲದೆ ಇನ್ನಾರಿಗೆ ಮೊರೆ ಇಡುವೆ |ಎನ್ನ ಪುರಂದರವಿಠಲ ನಿನಗೆ ಪೇಳುವೆ 5
--------------
ಪುರಂದರದಾಸರು
ಎನ್ನ ಪಾಲಿಸಯ್ಯಾ ಪನ್ನಗಾಭೂಷಣ |ನಿನ್ನ ನಂಬಿದೇನೋ | ನೀಲಕಂಧರನೇ ಪಕಂಡೆ ನಿನ್ನನೀಗ | ರುಂಡಮಾಲಧಾರಿ |ದಂಡಧರನ ಮುರಿದ | ಮಾರ್ಕಂಡೇಯಪಾಲ 1ಮಾರವೈರಿ ನೀನೆ | ಪಾರ್ವತೀಯ ವರನೇಸಾರಿ ನುತಿಪೆ ನಿನ್ನ ತ್ರಿಪುರಾರಿ ದೇವಾ 2ಚಂದ್ರಶೇಖರನೇ | ಗೋವಿಂದನ ಸಖನೆ |ನಂದಿವಾಹನ£É |ಬಂದು ಮುಖವ ತೋರಿ 3
--------------
ಗೋವಿಂದದಾಸ
ಎನ್ನಬಿನ್ನಪಕೇಳು ಧನ್ವಂತ್ರಿ ದಯಮಾಡು ಸಣ್ಣವನು ಇವ ಕೇವಲಆರೋಗ್ಯ ಆಯುಷ್ಯ ಐಶ್ವರ್ಯವೆಂಬೊ ಈ ಮೂರುವಿಧ ವಸ್ತುಗಳುವಸುಮತಿಯ ಮೇಲಿನ್ನು ಅಸುರ ಜನರೆ ಬಹಳ ವಶವಲ್ಲ ಕಲಿಯ ಬಾಧೆಆದಿವ್ಯಾಧಿಗಳು ಉನ್ಮಾದ ವಿಭ್ರಮ ನಾನಾ ಬಾಧೆಗೌಷಧವು ನೀನೆಅನ್ಯರನು ಭಜಿಸದಲೆ ನಿನ್ನನೆ ಸ್ತುತಿಸುತ ನಿನ್ನ ಚಿಹ್ನೆಗಳ ಧರಿಸಿನಿನ್ನವರಲಿ ಇವಗೆ ಇನ್ನು ರತಿಯನ್ನು ಕೊಟ್ಟು ನಿನ್ನವನೆಂದುಅರಿದು
--------------
ಗೋಪಾಲದಾಸರು
ಎಷ್ಟೋಹರಿಮರುತರ ಕೃಪಿ ನಿನ್ನಲ್ಲಿ |ಕೆಟ್ಟುದೇ ಭೂಷಣವಾಗಿಹುದೋ ಪಾರ್ವತೀ ರಮಣ ಪವಿಷವನ್ನೆ ಭೋಜನ ಮಾಡಿ ಜೀರ್ಣಿಸಿಕೊಂಡಿ |ವಸನಬಿಟ್ಟು ಜಿನಸ್ಥಿ ಭಸ್ಮ ಧರಿಸಿ ||ವೃಷಭವಾಹನನಾಗಿ ಭೂತ ಪ್ರೇತಗಳೊಳು ಸ್ಮ |ರಿಸದ ಭೂಮಿಯೊಳಿರಲು ಪೂಜಿಪರು ಸುರರೆಲ್ಲ 1ತಂದೆ ತಲೆ ಕಡಿದುದಕೆಕುಂದುಹೊಂದದಲಿದ್ದೆ |ನಿಂದಿತನ ಶಿರದ ಮೇಲಿರಿಸಿಯಿದ್ದೆ ||ಒಂದೊಂದೆ ನೀನೆ ಪರದೈವ ಎಂದು ಪೇಳ್ದೆ | ಗೋವಿಂದನಿಂದರ್ಚನೆಯ ಕೊಂಡೆ ಭಳಿ ಭಳಿರೆ ಶಿವ 2ಗುರುವೆನಿಸಿಕೊಂಬೆ ಪ್ರಾಣೇಶ ವಿಠಲನೊಳು | ಮತ್ಸರಿಸುತಿಹ ಖಳರಿಗೆ ಇದಲ್ಪವೇನೊ ||ಸರಿವಬ್ಬರಿಗೆ ಆಹೆನೆಂಬುವನು ಕೆಡುವ ನೀ |ಉರುಗನಂತಾಗಬೇಕೆಂದಾಗಿ ಮೆರೆದೆಲವೊ3
--------------
ಪ್ರಾಣೇಶದಾಸರು