ಒಟ್ಟು 7317 ಕಡೆಗಳಲ್ಲಿ , 130 ದಾಸರು , 4853 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುರಾಜ ನುತ ವಿಠಲ | ಪೊರೆಯ ಬೇಕಿವಳಾ ಪ ಕರುಣ ಪಯೋ ನಿಧಿಯೆ | ಶರಣು ಬಂದವಳಾ ಅ.ಪ. ಮರುತ ಮತದಲ್ಲಿದ್ದು ಗುರು ಹಿರಿಯರಾ ಸೇವೆನಿರುತ ಗೈಯುವ ಮನವ | ಉಳ್ಳವಳೊ ಈಕೇಕರುಣಾ ಪಯೋ ನಿಧಿಯೇ | ಮರುತಾಂತರಾತ್ಮಕನೆಕರಪಿಡಿದು ಪೊರೆಯೋ | ಪ್ರಾರ್ಥಿಸುವೆ ಹರಿಯೇ 1 ಕಂಸಾರಿ ತವನಾಮ | ಅಮೃತವನೆ ಉಣಿಸುತ್ತಸಂಸಾರ ಶರಧಿಗೆ | ಪ್ಲವವೆನಿಸೊ ದೇವಸಂಶಯವು ರಹಿತಾಗಿ | ಹರಿಯೆ ಸರ್ವೋತ್ತಮನೆಶಂಸನದಿ ಮತಿಕೊಟ್ಟು | ಕಾಯೊ ಕಮಲಾಕ್ಷ 2 ಕೋವಿದೋತ್ತಂಸ ಹರಿ | ಗೋವರ್ಧನೋದ್ಧರನೆಗೋವಿದಾಂಪತಿಯೆ ಗುರು | ಗೋವಿಂದ ವಿಠಲಾನೀವೊಲಿಯದಿನ್ನಿಲ್ಲ | ತ್ರೈಭುವನದಿ ದೇವಭಾವುಕಳ ಪೊರೆಯಲ್ಕೆ | ಪ್ರಾರ್ಥಿಸುವೆ ಹರಿಯೇ 3
--------------
ಗುರುಗೋವಿಂದವಿಠಲರು
ಗುರುರಾಜ ವರದ ವಿಠಲ | ಪೊರೆಯ ಬೇಕಿವಳಾ ಪ ಮರುತಂತರಾತ್ಮಕನೆ | ಪ್ರಾರ್ಥಿಸುವೆ ಹರಿಯೇ ಅ.ಪ. ಸೃಷ್ಟಾದಿ ಸತ್ಕರ್ಮ | ಸುಗುಣಮೂರುತಿದೇವಕಷ್ಟಗಳ ಪರಿಹರಿಸಿ ಕಾಪಾಡೋ ಹರಿಯೇಕೃಷ್ಣಮೂರುತಿ ದೇವ | ಅಷ್ಟ ಸೌಭಾಗ್ಯಗಳಕೊಟ್ಟು ಸಂತೈಸುವುದು | ಕಾರುಣ್ಯ ಮೂರ್ತೇ 1 ಆ ಪನ್ನ ಜನಪಾಲ | ಗೋಪಿಜನಪ್ರಿಯತಾಪತ್ರಯ ಕಳೆದು | ಕಾಪಾಡೊ ಹರಿಯೇಶ್ರೀಪತಿ ನೀನಾಗಿ | ಕೋಪಾದಿಗಳ ಕಳೆದುಕೈಪಿಡಿದು ಸಲಹೆಂದು | ಪ್ರಾರ್ಥಿಸುವೆ ಹರಿಯೇ 2 ಪತಿಸುತರು ಹಿತರಲ್ಲಿ | ಹರಿಯುವ್ಯಾಪ್ತನು ಎಂಬಮತಿಯನ್ನೆ ಕರುಣಿಸುತ | ಕಾಪಾಡೊ ಹರಿಯೇಸುಪ್ತಿಜಾಗ್ರತ ಸ್ವಾಪ | ಮಾರವಸ್ಥಾ ಸ್ವಾಮೀಆಪ್ತ ಗುರು ಗೋವಿಂದ | ವಿಠಲೆಂದು ತಿಳಿಸೊ 3
--------------
ಗುರುಗೋವಿಂದವಿಠಲರು
ಗುರುರಾಜರ ನಂಬಿರೋ ಸಾರುವೆ ನಾ ಸಾರುವೆ ನಾ ಸಾರುವೆ ನಾ ಪ ಗುರು ವಾದಿರಾಜರ ಚರಣ ಸ್ಮರಣೆಯಿಂದ ದುರಿತ ರಾಶಿಗಳೆಲ್ಲ ಪರಿಹಾರವಾಗುವುದು ಅ.ಪ ಕರುಣಾಸಾಗರರಿವರು ಸ್ಮರಿಪರಘ ಸ್ಮರಿಸದೆ ಪರತತ್ವವರಿದು ಬಾರಿ ಬಾರಿಗೊದಗಿದಪಾರ ಸಂಶಯ ದೂರಗೈಸಿ ಮುರಾರಿ ಚರಣವ ತೋರ್ಪ ಸುರರಿಗೆ ಮರುತರೆನಿಪರು ಬರುÀವ ಕಲ್ಪಕೆ 1 ಗುರು ವಾದಿರಾಜರೆಂಬ ಸುರತರು ಇರುವುದು ಸೋದಾಪುರದಿ ಅರಿತು ನಿರುತದಿ ಪರಮ ಭಕುತಿಯಲಿ ಸೇರಿ ಸೇವೆಯ ಮಾಳ್ವ ಸುಜನಕೆ ಬೀರುವರು ಪುರುಷಾರ್ಥಗಳನು ಸುರರು ಮಹಿಮೆಯ 2 ಉಪಚಾರವಲ್ಲವಿದು ಶ್ರೀಪತಿಯಾಣೆ ಗುಪಿತದಿಂದಿವರ ಮಂತ್ರ ಜಪಿಸಿ ಭೂತರಾಜರೆಂಬೊರು ತಾಪಹಾರಕರಾಗಿ ಸುಜನಕೆ ತಪವ ಮಾಳ್ವರು ರುದ್ರ ಪದವಿಗೆ ಪಾದ ಇವರಲಿ 3
--------------
ಪ್ರದ್ಯುಮ್ನತೀರ್ಥರು
ಗುರುರಾಯ ನಂಘ್ರಿಯಾ ಹಿಡಿ ಹಿಡಿ ಹಿಡಿ ಪರಮ ಸದ್ಭಾವನೆ ಜಡಿ ಜಡಿ ಜಡಿ ಪ ಎರವಿನಾ ಮನೆಯೊಳು ಸ್ಥಿರವೆಂದು ಮೈಯ್ಯವ | ಮರೆವರೇ ಹರಿನಾಮಾ ನುಡಿ ನುಡಿ ನುಡಿ 1 ಕರವ ಮುಗಿದು ಬಾಗಿ ತರಣೋಪಾಯವ ನಿನ್ನ | ಅರಿತು ಸ್ವಹಿತದಲಿ ನಡಿ ನಡಿ ನಡಿ2 ತಂದೆ ಮಹಿಪತಿ ಕಂದಗೆಚ್ಚರಿಸಿದಾ | ಪಡಿ ಪಡಿ ಪಡಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗುರುರಾಯನ ಕರುಣಾ ಪ ಮರವಿಗೆ ತಾನೇ ಅರವಿಸಿ ಕೊಟ್ಟು | ಗರಿಯಿತು ಘನ ಸ್ಫುರಣಾ 1 ಬೋಧ ಪ್ರತಾಪದಿ ಬಂದು | ದೊರೆಯಿತು ಹರಿಚರಣಾ 2 ನೋಡಲು ಗುರು ಮಹಿಪತಿ ವಲುವಿಂದಾ ಮಾಡಿತು ಉದ್ಧರಣಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗುರುರಾಯನಂಥ ಕರುಣಾಳು ಕಾಣೆನು ಜಗದೊಳಗೆ ಪ ಏನೆಂದರಿಯದ ಪಾಮರ ನಾನು | ತಾನೊಲಿದೀಗೆನ್ನ ನುದ್ಧರಿಸಿದನು1 ತನ್ನನುಭವ ನಿಜ ಮಾತಿನ ಗುಟ್ಟು | ಎನ್ನೊಳುಸುರಿ ಘನ ತೋರಿಸಿ ಕೊಟ್ಟು | ಧನ್ಯನ ಮಾಡಿದಸೇವೆಯಲಿಟ್ಟು 2 ಮಾಡುವ ಘನ ತುಸು ತಪ್ಪನೆ ಹಿಡಿಯಾ | ಬೇಡಿಸಿಕೊಳ್ಳದೆ ನೀಡುತ ಪಡಿಯಾ | ರೂಢಿಗಾದನು ಇಹಪರದೊಡೆಯಾ3 ತನ್ನವನೆನಿಸಿದ ಮಾತಿಗೆ ಕೂಡಿ | ಮನ್ನಣೆಯಿತ್ತನು ಅಭಯವ ನೀಡಿ | ಇನ್ನೇನ ಹೇಳಲಿ ಸುಖ ನೋಡಿ4 ತಂದೆ ತಾಯಿ ಬಂಧು ಬಳಗೆನಗಾಗಿ | ನಿಂದೆ ಸದ್ಗುರು ಮಹೀಪತಿ ಮಹಾಯೋಗಿ | ಕಂದನ ಸಲಹುವ ಲೇಸಾಗಿ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗುರುರಾಯನಾ ಮನಿಯಾ ನಾಯಿ ನಾನು ಪ ಗುರು ಗುರು ಎನುತಲಿ ಇರುವೆ ಬಾಗಿಲದೊಳು | ಗುರುವಿನೆಂಜಲ ನುಂಡು ಸುಖಿಸುವೆ ನಮ್ಮಯ್ಯನಾ 1 ಹರಿ ಶರಣರ ಕಂಡು ಗರುವಿಸಿ ಕೆಲಿಯೆನು | ದುರುಳರ ಬೆನ್ನಟ್ಟಿ ಹೋಗೆನಾ ನಮ್ಮಯ್ಯನಾ 2 ಒಡೆಯನ ಮುಂದೆ ಯನ್ನಾ ಒಡಲವ ತೋರುವೆ | ಬಿಡದೆ ಅಂಗಣದೊಳು ಹೊರಳುವೆ ನಮ್ಮಯ್ಯ ನಾ3 ಹರಿನಾಮದಿಂದ ಭೋಂಕರಿಸಿ ವದರುವೆ | ಬರಗುಡೆ ಹಮ್ಮ ಸ್ವಜಾತಿಯ ನಮ್ಮಯ್ಯ ನಾ 4 ತಂದೆ ಮಹಿಪತಿ ಸ್ವಾಮಿ ಬಂದು ಮೈಯ್ಯಾದಡವಿ | ನಿಂದು ತನ್ನ ಬಿರುದಕ ಹಾಕಿದ ನಮ್ಮಯ್ಯನ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗುರುರಾಯಾ ದೊಡ್ಡವನೈ ಬಲು ಪರೋಪಕಾರಿ | ಪರಿ | ಪರಗತಿಯ ಸಾಧಕರಾಗುವ ಸಹಕಾರಿ | ಬೋಧ ಸುಧೆಯ ಉದಾರಿ | ಯುಕ್ತಿಯ ದೋರುವ ದಾರಿ 1 ಹಲವು ಶಾಸ್ತ್ರದ ಮಾತುಗಳ ಕೇಳಿ ಮುಂಗಾಣದೆ | ತೊಳಲುವ ಮನ ಸಂಶಯವಾ ವಂದು ಮಾತಿನಿಂದೆ | ಕಳೆದನು ದೃಢ ನೆಲೆಗೊಳಿಸಿ ಸ್ವಾನುಭವದಿಂದೆ | ಭವ ತಮ ಮೂಲದಿಂದಲೇ | ಬೆಳಗವ ದೋರುವ ತಂದೇ2 ಮೂಢ ಪಾಮರ ಮಂದಧಿಯನಾನೆಂದರಿಯೆನು | ನೋಡಿ ಕರುಣ ಕಟಾಕ್ಷದಲಿ ಮುಂದಕ ಕರೆದನು | ನೀಡಿ ಅಭಯ ಹಸ್ತವನು ರೂಢಿಯೊಳು ನಂದನೆನಿಸಿದನು | ಮಹಿಪತಿ ತ್ಯಾಜವಿತ್ತನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗುರುವಚನದಲಿ ನಂಬನು ನರಭಾವ ಅವರೊಳು ಕಾಂಬನು ಕರಣ ತ್ರಯದಲಿ ಶುಂಭನು ಗುರು ಭಕ್ತ ನೆನಿಸದರೇನು ಮಾ 1 ಸರ್ವರೊಳು ಹರಿ ನೋಡದೇ ಗರ್ವದ ಗುಣಗಳೀಸಾಡದೆ ನಿಜ | ದರ್ವಿನೊಳು ಮನ ಕೂಡದೇ | ಭಾಗವತರೆನಿಸಿದರೇನು ಮಾ 2 ವಾಸನಿಯ ಬಲ ಕಡಿಯಾ ದೇವೆ | ಆಸೆಯಲಿ ಮನ ಜಡಿಯದೆ ನಿಜ | ದ್ಯಾಸದಂಡವ ಪಿಡಿಯದೆ ಸ | ನ್ಯಾಸಿಯೆನಿಸಿದರೇನು ಮಾ 3 ನುಡಿಯ ಬೀರುತ ಸಂತರಾಜನ | ರೊಡನೆ ಹಾಕುತ ಸಿಂತರಾ ತಮ್ಮ | ನಡತಿ ನೋಡಲು ಭ್ರಾಂತರಾ ತಾ | ಸಂತ ನೆನಿಸಿದರೇನು ಮಾ 4 ತಂದೆ ಮಹಿಪತಿ ಪಾದವಾ ಬೆರೆ | ಭವ | ಬಂಧ ಮಾಡದೇ ವಾತಾ | ಬಂದ ಜನಮಕಿದೇನು ಮಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗುರುವರ ಹರಿ ವಿಠಲ | ಪೊರೆಯ ಬೇಕಿವಳಾ ಪ ಪಾದ | ಸ್ಮರಿಸಿ ಭಜಿಸುವಳಾ ಅ.ಪ. ಪರಿ ಪರಿಯ ಸಂತಸದಿಇರುವ ಈ ಪತಿವ್ರತೆಯ | ದುರಿತಗಳ ಕಳೆದೂ |ಹರಿಯೆ ನಿನ್ನಲಿ ಭಕ್ತಿ | ವರಜ್ಞಾನ ವೃದ್ಧಿಸುತಜರುಗಿಸೋ ಸಾಧನವ | ಕರುಣ ಸಂಪನ್ನಾ 1 ಅಚ್ಯುತ ಮೂರ್ತಿ | ಪ್ರತಿ ರಹಿತ ದೇವಾ 2 ದೇಶ ಕಾಲಾ ತೀತ | ವಾಸುದೇವನೆ ಇವಳಆಶೆ ಪೂರೈಸುತಲಿ | ಹೃದ್ಗುಹದಿ ತೋರೀಮೇಶ ಗುರು ಗೋವಿಂದ | ವಿಠಲ ಪದ ಆನಂದರಾಶಿಯೊಳು ಸುಖಿಪಂತೆ | ಪೋಷಿಸೊ ಇವಳಾ 3
--------------
ಗುರುಗೋವಿಂದವಿಠಲರು
ಗುರುವರÀ ತುಲಸೀರಾಮಯ್ಯಾ ಪೂರ್ವದ್ವಾರಗುರುಸ್ತುತಿ ಮಂಪಾಲಯಾ 'ಜಿತೇಂದ್ರಿಯಾ ಪಪುರಪುರವರ ತವ ತಿರುತಾರೊತ್ಸವನಿರತಸೇವಕೃತನುತ ಜನವೈಭವ 1ಪತಿತಜನಾವನ ಪದ್ಮಸುಲೊಚನಪ್ರಥಮಾಶ್ರಮ ಘನಕೃತಮುಖರಂಜನ 2ವೆಂಕಟಲಕ್ಷಾಂಬ ಸುಗರ್ಭೊದ್ಭವ ಪಂಕಜಭ' ಸಂಪದಯುತಪ್ರಭಾವ 3ಕೇಶವಪದನಿಜ ದಾಸಸ್ವರೂಪಾಆಶಯೇಶಯ ಜಿತವರಪ್ರತಿಭಾ 4ಶುಕಮುನಿ ವಾಗ್ಭರಿಸೂನೃತಚರಿತಸಕಲಪಂಡಿತೊತ್ತಮಜನ'ನುತ 5ಮ'ಸೂರ್ಪುರವರ ಮ'ಪತಿಸಮುಖಅ'ಪತಿರೀತ್ಯಾ ಹರಿಗುಣಕಥಕಾ 6ಚಾಮನೃಪಾಲ ಸುಜ್ಞಾನಬೊಧಿನೀಸಮಾಜಶೇಖರ ಸಾತ್ವಿಕಧೀಮಣಿ 7ಶ್ರೀರಾಮೋತ್ಸವ ಸೇವಾಬ್ದಪ್ರತಿಸಾರ್ಥಶತಂ ನಿಷ್ಕನ್ನಾ ರ್ಕತ 8ಭಗವದಾಂಶ ಸಂಭೂತ ಕೃಪಾಕರಅಗಣಿತ ಸುಗುಣಾಲಂಕೃತಧೀವರ 9ಮಂಗಳಕರ ಗುರುತುಲಸೀರಾಮಾರಂಗಸ್ವಾ'ುದಾಸ ಹೃದಯಸುಧಾಮಾ 10
--------------
ಮಳಿಗೆ ರಂಗಸ್ವಾಮಿದಾಸರು
ಗುರುವರನನು ಭಜಿಪೆ ಶ್ರೀ ಶೃಂಗೇರಿ ಗುರುವರನನು ಭಜಿಪೆ ಪಪರಮ ಪಾವನನಾದ ಗೂಢತತ್ವವನೊರೆವನರಸಿಂಹಭಾರತಿ ಗುರುವರನನು ಭಜಿಪೆ ಅ.ಪಸ್ವರ್ಣಪೀಠದಿ ಕುಳಿತು ಸ್ವರ್ಣಾಂಬರವ ಪೊದ್ದುಚಿನ್ಮುದ್ರೆಯನು ಧರಿಸಿ ಪನ್ನಗಭೂಷಣ ಪರಶಿವನಂದದಿತನ್ನ ಭಕ್ತರ ಕರೆದು ಛಿನ್ನಸಂಶಯರಮಾಳ್ಪ 1ಮಣಿಮಯ ಮಕುಟವ ಮಸ್ತಕದೊಳಗಿಟ್ಟುಮಣಿಮಾಲಿಕೆಯ ಧರಿಸಿ ದಿನಮಣಿಶತತೇಜವನು ಬೆಳಗುತ್ತ ತಾನುಘನ ಶಾಸ್ತ್ರಮಾರ್ಗವನನುವದಿಸುತಲಿಹ 2ಚಂದ್ರಗಾ'ಯನುಟ್ಟು ಚಂದ್ರಮೌಳೀಶ್ವರನಛಂದದಿ ಪೂಜಿಸುತ ಸಿಂಧುಜಾ ಧವನಾದ ತಂದೆ ವೇಂಕಟಪತಿಯಂದದಿ ದಾಸಗಾನಂದವನಿತ್ತು ಪೊರೆವ 3
--------------
ನಾರಾಯಣದಾಸರು
ಗುರುವಿಗೆ ಒಂದು ಶರಣಾರ್ಥಿ ಗುರು ಭಕ್ತರಿಗೊಂದು ಶರಣಾರ್ಥಿ ಪ ಸಾಧನ ನಾಲ್ಕನು ಸಾಧಿಸುತಿರುತಿಹ ಸಾಧಕರಿಗೆ ಒಂದು ಶರಣಾರ್ಥಿವಾದವ ವರ್ಜಿಸಿ ವಸ್ತುವ ಧ್ಯಾನಿಪ ಉತ್ತಮರಿಗೆ ಒಂದು ಶರಣಾರ್ಥಿ1 ಯೋಗಗಳಿಂದಲೆ ಯೋಗ್ಯರಾಗಿಹ ಯೋಗೀಶರಿಗೊಂದು ಶರಣಾರ್ಥಿರಾಗ ಪೋಗಿ ರಂಜಿಸುತಿರುತಿಹ ರಂಜಕರಿಗೆ ಒಂದು ಶರಣಾರ್ಥಿ 2 ದೂಷಣ ಭೂಷಣ ದೂರ ಮಾಡಿಹ ದೃಢವಂತರಿಗೆ ಒಂದು ಶರಣಾರ್ಥಿಆಸೆಗಳೆಂಬ ಅಳಿದು ಇರುತಿಹ ಆನಂದರಿಗೊಂದು ಶರಣಾರ್ಥಿ3 ಪ್ರಪಂಚವೆಲ್ಲವ ಪರಮಾರ್ಥ ಮಾಡಿಹ ಪಂಡಿತರಿಗೆ ಒಂದು ಶರಣಾರ್ಥಿತಾಪವನೀಗಿ ತಮ್ಮನೆ ಮರೆತಿಹ ತಾಪಸರಿಗೆ ಒಂದು ಶರಣಾರ್ಥಿ4 ಜನನ ಮರಣಗಳ ಜಡರನೆ ಕಳೆದಿಹ ಜನಪತಿಗಳಿಗೊಂದು ಶರಣಾರ್ಥಿಚಿನುಮಯಾತ್ಮಕ ಚಿದಾನಂದನ ಬೆರೆದಿಹ ಚಿದ್ರೂಪರಿಗೆ ಒಂದು ಶರಣಾರ್ಥಿ 5
--------------
ಚಿದಾನಂದ ಅವಧೂತರು
ಗುರುವಿಗೆ ನಮಿಸುವೆನು | ಸಲಹುವ ಪ ಭಕ್ತಿಯ ಒಲಿಸೀ | ವಿರಕ್ತಿಯ ಬೆಳೆಸೀ | ಮುಕ್ತಿಗೆ ನಲಿಸೀ | ಯುಕಿಗಳನೇ ಕಳಿಸಿ 1 ಅವಿದ್ಯ ಬಿಡಿಸಿ | ಸುವಿದ್ಯೆವಿಡಿಸಿ | ಭವ ಭಯಗಡಿಸಿ | ವಿವೇಕ ವಡಗೂಡಿಸೀ 2 ಗುರು ಮಹಿಪತಿ | ಶರಣರ ಸಾರ್ಥಿ | ತರಳಗ ಸ್ಫೂರ್ತಿ | ಕರುಣಿಸಿ ಘನಮತಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗುರುವಿಗೆರಗೀ ತರಣೋಪಾಯವನರಿಯಲಿಲ್ಲಾ ಮನವೇ | ಮರುಳನೋ ತರಳನೋ ಬಲು ದುರುಳನು ನಾನರಿಯೇ ಪ ಶ್ರೀನಾಥನಂಘ್ರಿ ಕಮಲಾ ಧ್ಯಾನವಿಲ್ಲ ಮನವೇ | ಮಾನವನಫ ದಾನವನೋ ನೀದನವೇನೋ ನಾನರಿಯೇ 1 ರತಿಯ ಬಿಟ್ಟು ವಿಷಯದಲ್ಲಿ ಗತಿಯಾ ಜರದೀ ಮನವೇ | ಹಿತವೇನೋ ಮಿತವೇನೋ ಉನ್ಮತವೇನೋ ನಾನರಿಯೇ 2 ಪೊಡವಿಯೊಳು ನರದೇಹವ ವಿಡಿದು ಬಂದೆ ಮನವೇ | ನಡಿದೇನೋ ನುಡಿದೇನೋ ಸುಖಪಡಿದೇನೋ ನಾನರಿಯೆ 3 ಭಕ್ತಿ ಜ್ಞಾನಾ ಬಲಿವಾ ಸುವಿರಕ್ತಿ ಇಲ್ಲಾ ಮನವೇ | ಸಕ್ತನೋ ಯುಕ್ತನೋ ಆಯುಕ್ತನೋ ನಾನರಿಯೆ 4 ಗುರು ಮಹಿಪತಿ ಪ್ರಭು ಶರಣರ ಕಾಯ್ದಾ ಮನವೇ | ನರವರನೋ ಸುರವರನೋ ಕಲ್ಪತರು ವರನೋ ನಾನರಿಯೆ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು