ಒಟ್ಟು 7503 ಕಡೆಗಳಲ್ಲಿ , 128 ದಾಸರು , 4808 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುವೆಂದರವಗೆ ಪರಮಸುಖ ಭವಾರ್ಣವ ದುಃಖ ಧ್ರುವ ಗುರು ಎಂದ್ಹಾಂಗ ಬಾಯಿಲಿ ಅರಿಯಬೇಕು ಮನದಲಿ ದೋರುವದಾನಂದ ಲೀಲಿ ಗುರು ಕೃಪೆಯಲಿ 1 ಅರ್ತರೊಂದೆ ಸಾಕು ಪೂರ್ಣ ಕರ್ತು ಸದ್ಗುರು ಚರಣ ಮತ್ರ್ಯದೊಳಿದೆ ನಿಧಾನ ಸಾರ್ಥಕಗುಣ 2 ನರನೆಂದು ಮರೆದೀಗ ಗುರು ನಿಜಾಗುವ ಬ್ಯಾಗ ಸೆರಗು ಮಹಿಪತಿಗೆ ದೋರಿತು ಈಗ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರುವೇ ಗುರುವೇ ಗುರು ಗುರುವೇ ಮಹಾಗುರು ಗುರುವೇ ಶ್ರೀ ಗುರುವೇ ಪ ನಿರಂಜನ ನಿಷ್ಕಲಂಕ ಗುರುವೇಪ್ರತ್ಯಾಗಾತ್ಮ ಪರಾತ್ಪರಾತ್ಪರ ಪ್ರತ್ಯಯರಹಿತ ಗುರುವೇ 1 ನಿರ್ವಿಕಲ್ಪ ನಿರಾಕಾರ ನಿರ್ಗುಣ ನಿರ್ಮಾಯನೇ ಗುರುವೇನಿರ್ವಿಕಾರ ನಿದ್ರ್ವಂದ್ವ ನಿಜಾಕಾರ ನಿರುಪಮಾತ್ಮ ಗುರುವೇ 2 ಪೂಜ್ಯಮಾನ ಸುರಾಸುರ ಸಿದ್ಧಾಯಿಂ ಪೂಜಾರ್ಪಿತ ಗುರುವೇಈ ಜಗದೇಕ ನಾಥನೆ ಚಿದಾನಂದ ತೇಜಃಪುಂಜ ಗುರುವೇ 3
--------------
ಚಿದಾನಂದ ಅವಧೂತರು
ಗುರುವೇ ನೀ ಕರುಣಿಸದಿರಲಿನ್ಯಾರು ಕರುಣಿಪರೋ ಪ ಕರಿಗಿರಿಪುರ ತಂದೆ ಮುದ್ದು ಮೋಹನ್ನ ಅ.ಪ. ಮೊರೆಹೊಕ್ಕ ಜನರ ಕೈ ಬಿಡುವರೇನೋಚರಣ ಯುಗ್ಮಕೆ ನಿನ್ನ ನಮಿಸುವೆನೋ |ಭಾರ ವಹಿಸಿ ಬೇಗ ಸಲಹಬೇಕೋ |ಜರೆಯು ನುಂಗುವ ಮುನ್ನ ಪೊರೆಯ ಬೇಕೋ 1 ಭವ ರೋಗವ ಕಳೆಯೋಉನ್ನತ ಪದವಿಗೇರುವ ದಾರಿ ತೋರೋ |ಘನ್ನ ಮಹಿಮ ನಿನ್ನ ಹೊರತು ಮತ್ಯಾರೋಎನ್ನ ಅಂಕಿತ ನಾಮ ಹರಿಯನ್ನ ತೋರೋ 2 ಹಂಬಲ ಕೊಡು ಎನಗೆ ಹರಿಪಾದದಲ್ಲೀನಂಬಿ ತುತಿಪೆನಯ್ಯ ತವ ಪಾದದಲ್ಲೀ |ಬಿಂಬ ಗುರು ಗೋವಿಂದ ವಿಠ್ಠಲನಲ್ಲಿಹಂಬಲ ಸ್ಥಿರವಾಗಿ ನಿಲಿಸೋ ನೀನಲ್ಲೀ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಗುರುವೇ ಮಹಾಗುರುವೇ ಚಿದಾನಂದಗುರುವೇ ಕೊಡಿರಿ ಮತಿ ನಮಗೆ ಪ ಅದ್ದಿ ಪಾಪದೊಳು ಸಮೃದ್ಧಿ ನನ್ನದೆಂಬ ಹಮ್ಮುಹೊದ್ದಿ ತುಂಬಿಹುದು ನನಗೆ ದು-ರ್ಬುದ್ಧಿ ನಮಗೆ ಕೊಡಿರಿ ನೀವುಸದ್ಬುದ್ಧಿ ಮಹಾಗುರುವೇ 1 ಅಂತೇ ಸಂಸಾರವು ಸತ್ಯಂತೆ ಇದನು ನಂಬುವನುಕತ್ಯಂತೆ ಮಾಡುವುದೆಲ್ಲ ಭ್ರಾಂತಂತೆ ನಮಗೆ ಕೊಡಿರಿ ಗುರುಚಿಂತೆ ಮಹಾಗುರುವೆ2 ಮಾನ ಉಳಿವುದಿಲ್ಲ ನಿದಾನಾ ಸಂಸಾರವೆ ಬಲುಹೀನ ತೊಳಲಿದೆ ನಾನು ಜನ್ಮನಾನಾ ನಮಗೆ ಕೊಡಿರಿ ಸು-ಜ್ಞಾನ ಮಹಾಗುರುವೇ 3 ಶಕ್ತಿ ಆದರೆಯು ವಿರಕ್ತಿ ಬ್ರಹ್ಮದಲಿ ಆ-ಸಕ್ತಿ ಕೊಡುವುದದು ಬಲುಭಕ್ತಿ ನಮಗೆ ಕೊಡಿರಿ ನೀವುಮುಕ್ತಿ ಮಹಾಗುರುವೇ 4 ಹಾರಿ ಭವದಾರಣ್ಯ ಕುಠಾರಿ ತೋರಿಸುವ ನಿಜದಾರಿ ಸಚ್ಚಿದಾನಂದ ತೋರಿ ನಮಗೆ ಹಿಡಿದು ಕೊ-ಡಿರಿ ಮಹಾಗುರುವೆ5
--------------
ಚಿದಾನಂದ ಅವಧೂತರು
ಗುರುಸುಶೀಲೇಂದ್ರ | ಚರಣವಾರಿಜ ಯುಗ್ಮ ಸ್ಮರಿಸುವ ನರರು ಶ್ರೀಹರಿದಾಸರು ಪ ಹರಿವರ ಸುಮಚಾಬ್ಧಿ | ಹರಿಣಾಂಕರೆನಿಸಿದ ವರಸುವೃತೀಂದ್ರರ ತೀರ್ಥರ ಕರಕಮಲಜ ಅ.ಪ ಮಾಸ ತ್ರಯದಿ ಸಡಗರದಲಿ ಮಹ ಸಭೆ ನಿರ್ಮಿಸಿ ಪೊಡವಿಯೊಳಿದ್ದ ಭೂಸರರಾಜ್ಞ ಪತ್ರ ಬರಮಾಡಿ ವಿದ್ವಾಂಸರ ಒಡಗೂಡಿ | ಮಧ್ವಾಗಮನವನು ನೋಡಿ ಬೆಲೆಯುಳ್ಳವೆಗ್ಗಳ ಒಡವೆ ಉಡುಪಗಳನು ಕರುಣಿಸಿ ಮೃಷ್ಟಾನ್ನ ದ್ವಿಜರಿಗೆ ಕಡು ಸುಪ್ರೇಮದಿ ಸಲಿಸಿ | ಮುದ ಬಡಿಸಿ ಜಡಕುಮಾಯ್ಗಳ | ಗಡಣ ಜಡಧಿಗೆ ವಡೆಯ ತಾನೆನಿಸಿ ಕ್ರೋಢ ಜಾಸ್ಥಿತ | ಒಡೆಯ ಶ್ರೀಗುರು ರಾಘವೇಂದ್ರರ ಅಡಿಗಳಾಬ್ಜಕಾ ರಡಿಯಂತೊಪ್ಪುತ | ಬಿಡದೆ ಸಂತತ ಧೃಢದಿ ಸೇವಿಸಿ ಜಡಜ ಜಾಂಡದಿ ಮೆರೆದ ಅಸ್ಮದ್ 1 ತರಣಿ ಕುಲೇಂದ್ರನ ಕರುಣವೆಷ್ಟಿವರೊಳು ಅರುಹಲಾರೆ ವರಕಾಪ್ಯಾಸನ ಪುರಕೆ ಎರಡಾರು ಯತಿಗಳ ವತಿಯಿಂದ ತಮ್ಮಯ ಶಿಷ್ಯ ತತಿಯಿಂದ ಬಹುವಿಧ ಬಿರುದಾವಳಿಯಿಂದ ತೆರಳಿ ಶಶಿರವಿವರ ಸುವಾದ್ಯಧ್ವಾನ ಮೊಳಗಿಸುತ ‌ಘನ ಭಕ್ತಿ ಪರವಶರಾಗಿ ಸುರಚಿರ ಕನಕಮಣಿ ಧನ ತನುಮನ ತ್ವರಿತ ತೃಣ ಬಗೆಯ ದೇವಕಿ ತರಳ ರುಕ್ಮಿಣಿ ವರ ಮುರಾಂತಕÀ ಚರಣಗರ್ಪಿಸುತ | ಆನಂದಪಡುತ ಸರ್ವಮುನಿ ಜನಗಳಿಗೆ ಬಲು ಉಪಚರಿಸಿ | ಮನ್ನಣೆ ಧರಿಸಿ ಹರುಷದಿ ವರ ಸುಧೀಂದ್ರರ ಕರಜರನು ನೆರೆಸ್ಥಾಪಿಸಿ ಆಶ್ಚÀರ್ಯ ಚರಿತ 2 ಪತಿ ಶೃತಿ ಶಾಸ್ತ್ರಾರ್ಥ ಚತುರ ತನದಿ ಪಡೆದು ವಿತತ ಮಹಿಮನಾದ ಪತಿತ ಪಾವನ ಶಾಮಸುಂದರನ ಸ್ತುತಿಸುತಲಯ ಚಿಂತನೆ ಗೈಯುತ ಶ್ರೀಯುತ ಸಂಸ್ಥಾನಮತಿ ವಿಶಾರದರಾದವರ ಸುವೃತೀಂದ್ರ ತೀರ್ಥರಿಗೆ ಹಿತದಿಂದ ಒಪ್ಪಿಸಿ | ಯತಿ ಧೀರೇಂದ್ರರ ಚಾರುಸ್ಥಳದೊಳಗೆ ತನುವಿತ್ತು | ಹರಿಪುರಪಥವ ಪಿಡಿದೈದಿದರು ಚನ್ನಾಗಿ | ಸೇವಿಪ ಜನರಿಗೆ ಅತಿದಯದಿ ಮನೋರಥವ ನೀಡುತ ಸತತ ಮಾಣದೆ ಪರಮ ಭಕುತಿಲಿ ಪೃಥ್ವಿ ಸುರಕರ ಶತಪತ್ರಗಳಿಂದ ನುತಿಸಿಕೊಳುತಲರ್ಚನೆಗೊಂಬ 3
--------------
ಶಾಮಸುಂದರ ವಿಠಲ
ಗುರುಸೇವೆ ನಿರತರಿಗೆ ನಮೋ ನಮೋ ಪ ಅರಿವು ನಿಲ್ಲಿಸಿ ಪರಸಾಧನದಿರುತಿಹ್ಯ ಪರಮಪಾವನರಿಗೆ ನಮೋ ನಮೋ ಅ.ಪ ತಾಪಸಾರ್ಯರಿಗೆ ನಮೋ ನಮೋ ಮಹ ಪಾಪ ದೂರರಿಗೆ ನಮೋ ನಮೋ ಕೋಪಲೋಪರಿಗೆ ನಮೋ ನಮೋ ಇಹ ವ್ಯಾಪಾರರಿತವರಿಗೆ ನಮೋ ನಮೋ ತಾಪತ್ರಯವ ನೀಗಿ ಶ್ರೀಪತಿ ಚರಣವ ಗೌಪ್ಯದಿ ನೆನೆವರ್ಗೆ ನಮೋ ನಮೋ 1 ವೇದ ಸಂಪನ್ನರಿಗೆ ನಮೋ ನಮೋ ಭವ ಬಾಧೆ ಗೆಲಿದವರಿಗೆ ನಮೋ ನಮೋ ಸಾಧನ ಚತುಷ್ಟರಿಗೆ ನಮೋ ನಮೋ ಮಹ ಸಾಧುಸಂತರಿಗೆ ನಮೋ ನಮೋ ವಾದಿ ಮೂರ್ಖರೊಳು ವಾದಿಸದಂಥ ಸು ಬೋಧ ಗುರುವರಗೆ ನಮೋ ನಮೋ 2 ಭಾಗವತರಿಗೆ ನಮೋ ನಮೋ ಇಹ ಭೋಗನಿರಾಸ್ಯರಿಗೆ ನಮೋ ನಮೋ ಯೋಗಸಾಧಕರಿಗೆ ನಮೋ ನಮೋ ಮಹ ಯೋಗಿ ಮಹಾತ್ಮರಿಗೆ ನಮೋ ನಮೋ ಆಗಯೀಗೆನ್ನದೆ ಸಾಗರನಿಲಯನನ್ನ ಬಾಗಿಭಜಿಪರಿಗೆ ನಮೋ ನಮೋ 3 ಭಕ್ತಜನರಿಗೆ ನಮೋ ನಮೋ ವಿ ರಕ್ತ ಪುರುಷರಿಗೆ ನಮೋ ನಮೋ ಸತ್ಯಶೀಲರಿಗೆ ನಮೋ ನಮೋ ತಮ್ಮ ಗುರ್ತು ಅರ್ತವರಿಗೆ ನಮೋ ನಮೋ ಭಕ್ತಿಯುಕ್ತಿ ವಹಿಸೆತ್ತಗಲದಂಥ ಚಿತ್ತಶುದ್ಧರಿಗೆ ನಮೋ ನಮೋ 4 ನಿತ್ಯ ನಿರ್ಮಲರಿಗೆ ನಮೋ ನಮೋ ಭವ ಮರ್ತ ನಿರ್ತರಿಗೆ ನಮೋ ನಮೋ ತ ತ್ವರ್ಥಿಕರಿಗೆ ನಮೋ ನಮೋ ಮಹ ಮುಕ್ತಿ ಸಾಧ್ಯರಿಗೆ ನಮೋ ನಮೋ ಮೃತ್ಯುವ ಗೆಲಿದು ಕರ್ತ ಶ್ರೀರಾಮನ ಅರ್ತವರಿಗೆ ಬಹು ನಮೋ ನಮೋ 5
--------------
ರಾಮದಾಸರು
ಗುರುಸ್ತುತಿ ಬಾರಯ್ಯ ಗುಣನಿಧಿಯೆ ಗುರುಭಾನುಕೋಟ್ಯುದಯ ಧ್ರುವ ಗುರುವರ ಶಿರೋಮಣಿಯೆ ಕರುಣಾನಂದ ಖಣಿಯೆ ಸುರತರು ಚಿಂತಾಮಣಿಯೆ 1 ಸುಪಥದ ಸಾಧನಿಯೆ ಭಕ್ತಜನಭೂಷಣಿಯೆ ಜಗತ್ರಯ ಜೀವನಿಯೆ 2 ಮಹಾನುಭವದ ಜಾಗ್ರತಿಯೆ ಮಹಿಮರ ಘನ ಸ್ಫೂರುತಿಯೆ ಮಹಿಪತಿ ಸ್ವಾಮಿ ಶ್ರೀಪತಿಯೆ ಸಹಕಾರ ಸುಮೂರುತಿಯೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರುಸ್ತುತಿ ಭೂರಿ ದಯವ ಸತತ ಪ ಧೀರವರೇಣ್ಯ ಸಮೀರ ಸಮಯಗಳ ಸಾರವನರಿಯುವ ದಾರಿಯ ಕಾಣಲು ಅ.ಪ ವ್ಯಾಸರಾಜಗುರು ದಾಸರೆಂದಿನಿಸಿ ಶ್ರೀಶ ಶ್ರೀಕೃಷ್ಣನ ತೋಷಿಸಲು ಸಾಸಿರ ವಿಧದಲಿ ಸಲಿಸಿ ಸೇವೆಗಳ ಭಾಸುರ ಕೀರುತಿ ಪಡೆದ ಯತಿವರ 1 ಅಂದದ ನವಮಣಿ ಮಂದಿರಗಳಲಿ ನಂದಕುಮಾರನ ಕುಳಿÀ್ಳರಿಸಿ ಚಂದದಿ ದಿನ ದಿನ ಪೂಜೆಯ ಗೈದು ಆನಂದಸಾಗರದಿ ಮಿಂದ ಯತಿವರÀ 2 ಘನ್ನ ಮಹಿಮೆ ಸುಖ ಚಿನ್ಮಯ ರೂಪ ಪ್ರಸನ್ನ ಶ್ರೀಕೃಷ್ಣಗೆ ಹರುಷದಲಿ ಚಿನ್ನಮಯದ ತೊಟ್ಟಿಲನ್ನು ಸೇವೆ ಮಾಡಿ ಅನ್ಯರಿಗಲ್ಲದ ಪುಣ್ಯ ಪಡೆದವರ 3
--------------
ವಿದ್ಯಾಪ್ರಸನ್ನತೀರ್ಥರು
ಗುರ್ವಂತರ್ಗತ ಗೋಪಾಲ ಪಾಹಿ ಸರ್ವಪಾಲಕ ಶಿರಿಲೋಲ ಪ ಶರ್ವಸುರಗಂಧರ್ವ ಮುನಿಕುಲ Àಸರ್ವಸೇವಿತ ಗರ್ವರಹಿತನೆ ಅ.ಪ ರಾಮಾಕೃಷ್ಣ ವ್ಯಾಸರೂಪದಿಂದಾ ಮಾಮನೋಹರ ಮಾಡೆಕೃಪಾ ಶ್ರೀಮಧ್ವ ಮೊದಲಾದ ಆ ಮಹಾಮುನಿಗಳ ಸ್ತೋಮಸಂತತ ಮಹಾಪ್ರೇಮಮನದಲಿದ್ದು ಭೂಮಿತಳದೊಳಗಖಿಳಜನರಿಗೆ ಕಾಮಿತಾರ್ಥವ ಸಲಿಸಿ ತಾ ನಿ ಸ್ಸೀಮ ಮಹಿಮೆಯ ತೋರಿ ಇವರಿಗೆ ಆ ಮಹತ್ತರ ಕೀರ್ತಿಕೊಡುತಿಹ 1 ಆವಾವಜನುಮಗಳಲ್ಲಿ ಜಗಕೆ ಜೀವನಪ್ರದನಾಗಿ ಇಲ್ಲೀ ಶ್ರೀವರ ಸರ್ವೇಶ ಜೀವೇಶ ಸುರವಂದ್ಯ ದೇವ ನಿನ್ನಯ ಪಾದಸೇವಾವ ಸಲಿಸೆಂದೆ ಕೋವಿದರ ಕುಲಮಣಿಗಳೊಳಗೆ ಭಾವಿಪುದು ಸನ್ಮನವನಿತ್ತು ಗೋವಿದಾಂಪತೆ ಙÁ್ಞನಗಮ್ಯನೆ ಪಾವನಾತ್ಮಕ ಪರಮ ಪಾಲಿಸೋ 2 ದಾತ ಶ್ರೀ ಗುರುಜಗನ್ನಾಥವಿಠಲ ನೀ ಧಾತನಾಂಡಕೆ ಮುಖ್ಯನಾಥಾ ಧಾತಪ್ರಮುಖಸುರವ್ರಾತಸನ್ನುತಪಾದ ಪಾಥೋಜಯುಗಳ ಸಂಭೂತ ರಜೋದಿಂದ ಧೂತಪಾಪನ ಮಾಡುವದು ಅ ದ್ಭೂತ ಙÁ್ಞನ ವಿರಕುತಿ ಸಂಪ ದ್ಪ್ರಾತ ಪಾಲಿಸೊ ಹೇ ಮಹದ್ಭುತ ದಾತ ಎಂಬೆನೊ ನಮೋ ನಮೋ 3
--------------
ಗುರುಜಗನ್ನಾಥದಾಸರು
ಗುಹ್ಯ ಗುರುತವು ಪೂರ್ಣ ಸುಳ್ಹವುದೋರಿಕೊಡುವ ನಿಜ ಸದ್ಗುರು ಕರುಣ ಧ್ರುವ ಜೀವ ಶಿವ ದಾವ ದೆಂದಿಳಿವ್ಯಾವ ನೋಡಿ ನಾವು ನೀವೆಂದು ಹ್ಯಾವ ಹೆಮ್ಮೆಯ ಹಿಡಿಯ ಬ್ಯಾಡಿ ಮಾವಮಕರ ಗುಣಬಿಟ್ಟು ಭಾವ ಭಕ್ತಿ ಮಾಡಿ ದೇವದೇವೇಶನ ದಿವ್ಯಪಾದಪದ್ಮ ಕೂಡಿ 1 ಬಾಯ್ದೆರೆದು ಬರೆ ಭ್ರಮೆಗೆ ಸಾಯಗೊಂಬುದು ಏನು ನ್ಯಾಯ ಜರೆದು ನೋಯಗೊಂಬುಪಾಯ ನಿನ್ನಾಧೀನ ಮಾಯ ಮರ್ಮಪಾಯವರಿದು ಧ್ಯಾಯಿಸೊ ನಿಧಾನ ಸೋಹ್ಯದೋರುತಿದೆ ನೋಡಿ ಸದ್ಗತಿ ಸಾಧನ 2 ಸಾವಧಾನವೆಂದು ಶ್ರುತಿ ಸಾರುತಿದೆ ನೋಡಿ ಗೋವಿಸುವ ವಿದ್ಯದೊಳು ಸಿಲುಕಿಬೀಳಬ್ಯಾಡಿ ಆವ ಪರಿಯ ಭಾವ ಕಾವ ದೈವ ನೋಡಿ ಜೀವ ಜೀವಾಗಿಹ್ಯ ಮಹಿಪತಿ ನಿಜಗೂಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗೂಳ್ಯಾಗಿ ಮೆರೆಯಣ್ಣ ಶ್ರೀಹರಿ ಗೂಳ್ಯಾಗಿ ಮೆರೆಯಣ್ಣ ಪ ಗೂಳ್ಯಾಗಿ ಮೆರೆಯೆಲೊ ಮೂಳಮಾನವರ ಆಳಾಗಿ ಕೆಡದ್ಯಮದಾಳಿಯ ಗೆಲಿದು ಅ.ಪ ಅದ್ರಿಧರನಡಿಯ ಪ್ರೇಮವೆಂಬ ಮುದ್ರೆಯನ್ನು ಪಡೆಯೋ ಕ್ಷುದ್ರದಾನವ ಹರರುದ್ರಾದಿನುತ ಸ ಮುದ್ರಶಾಯಿಧ್ಯಾನ ಭದ್ರಮಾಡಿಟ್ಟುಕೊಂಡು 1 ಕುಜನರ ಸಂಗ ತಳ್ಳೋ ಸುಸಂಗ ಭುಜವ ಬೆಳೆಸಿಕೊಳ್ಳೋ ಭುಜಗಶಯನನ ನಿಜಚರಣದ ಮಹ ಭಜನೆವೆಂದೆಂಬುವ ಝಾಲ ಧರಿಸಿಕೊಂಡು 2 ತಾಮಸವನ್ನು ನೀಗಿ ಸುಜನರ ಪ್ರೇಮಪಾತ್ರನಾಗಿ ಶಾಮಸುಂದರ ಶ್ರೀರಾಮನಾಮ ತ್ರಿ ಭೂಮಿಗಧಿಕೆಂದು ನಿಸ್ಸೀಮ ಡುರುಕಿ ಹೊಡಿ 3
--------------
ರಾಮದಾಸರು
ಗೆಲವ ನೀಡೆನಗೆ ಇಹ್ಯದ ಗೆಲವ ನೀಡೆನಗೆ ಪ ಗೆಲವ ನೀಡಿಯೆನ್ನ ಮಲಿನಬಿಡಿಸಿ ನಿನ್ನ ವರ ದಿವ್ಯಪಾದನಳಿನದೊಲುಮೆಯಿತ್ತು ಅ.ಪ ಎಡರು ಆವರಿಸಿದ ಕಾಲದಿ ದೈರ್ಯವ ದಯಮಾಡೊ ಸಡಗರಸಿರಿ ಬಂದ ಕಾಲದಿ ಶಾಂತಿ ವಿನಯ ಕೊಡೊ ಕಡುಜವ್ವನದಲಿ ದುಡುಕನುಕೊಡದಿರು ಪಿಡಿದು ನೇಮವನು ಬಿಡದ ಛಲವನಿತ್ತು 1 ಧರಣಿಯ ಸುಖಕಾಗಿ ಎನ್ನಿಂ ಪುಸಿಯ ನುಡಿಸದಿರೋ ಹರಣಪೋದರು ಪರರಿಗೆ ದೇಹಿಯೆನಿಸದಿರೋ ಪರಮಹರುಷದಿಂದ ಹರಿಶರಣರು ಮೆಚ್ಚಿ ಶಿರವದೂಗುವಂಥ ನಿರುತವರ್ತನೆಯಿತ್ತು 2 ಸತತದಿ ಕರ್ಣಕ್ಕೆ ಹರಿಕಥೆ ಕೀರ್ತನೆ ಕರುಣಿಸೊ ಪತಿತಪಾವನವೆನಿಪ ಭಜನಾನಂದವ ಪಾಲಿಸೊ ಕ್ಷಿತಿಯೋಳಧಿಕ ಸದುಗತಿ ಮೋಕ್ಷಾಧಿ ಪತಿ ಶ್ರೀರಾಮ ನಿಮ್ಮ ಪಾದಭಕ್ತಿಯಿತ್ತು 3
--------------
ರಾಮದಾಸರು
ಗೋಪಾಲ ಪಾಲಿಸೊ ನಿನ್ನ ಪಾದಸೇವಕನಿವನೆಂದು ನೀ ಭಾವಿಸಿ ಗೋಪಾಲ ಪಾಲಿಸೊ ಪ ನಾರಿಜನರುಟ್ಟ ಸೀರೆ ಸೆಳೆದು ತಾ ಭಾರಿ ಮರವನ್ನೇರಿ ವಿನೋದವ ತೋರಿದ ಸುರರಿಪು ವೈರಿಯೇ ಎನ್ನಯ ಕೋರಿಕೆ ನಡಸಲಿನ್ಯಾರಿಗೆ ಬೇಡಲೊ 1 ತುಂಗಫಣಿಫಣ ಶೃಂಗದೊಳು ಚರ ಣಂಗಳ ಕುಣಿಸು ಭುಜಂಗಮವರನಿಗೆ ಭಂಗಪಡಿಸಿ ಕೃಪಾಪಾಂಗದಿ ಸಲಹಿದ ಮಂಗಳಮಹಿಮ ರಥಾಂಗಧರ ಬಾಲ 2 ಬಂಧು ಬಳಗ ನೀನೆಂದು ತಿಳಿದು ಮ ತ್ತೊಂದನೆಣಿಸದೆ ಇಂದಿರಾರಮಣನೆ ಎಂದೆಂದಿಗೂ ಸಲಹೆಂದು ನಾ ಬೇಡುವೆ ಸಿರಿ 3 ಖಿನ್ನ ನಿಜ ಜನರನ್ನು ಸಲಹುವ ಪನ್ನಗಶಯನ ಪ್ರಸನ್ನ ಹೃದಯನಾಗಿ ಎನ್ನ ಮನೋರಥವ ಪೂರೈಸುವ ರನ್ಯರು ಯಾರಯ್ಯ ಚಿನ್ಮಯ ಮೂರುತಿ 4 ಕಾಮಜನಕನೆ ನಾಮಗಿರಿ ಸಿರಿ ಸ್ವಾಮಿ ನೃಸಿಂಹನೆ ಕಾಮಿತ ಕೊಡುವಂಥ ಕಾಮಧೇನು ಚಿಂತಾಮಣಿ ಎನ್ನಯೋಗ ಕ್ಷೇಮವು ನಿನ್ನದಯ್ಯ ಸೋಮಕುಲಾಧಿಪ 5
--------------
ವಿದ್ಯಾರತ್ನಾಕರತೀರ್ಥರು
ಗೋಪಾಲ ಹರಿ ವಿಠಲ ನೀ ಪಾಲಿಸಿವಳಾ ಪ ಪಾಪೌಘಗಳ ಕಳೆದು ಸುಪವಿತ್ರಳನೆ ಮಾಡಿಕೈ ಪಿಡಿದು ಪೊರೆಯಿವಳ | ಗೋಪಾಲ ಬಾಲ ಅ.ಪ. ನಿನ್ನ ಸೇವಿಸೆ ದಾಸ | ಘನ್ನ ದೀಕ್ಷೆಯ ಮನದಿಕನ್ಯೆ ಬಹು ಭಕ್ತಿಯಲಿ | ಬಿನ್ನವಿಸಿ ಇಹಳೊಮನ್ಯು ಸೂಕ್ತೋದಿತನೆ | ಚೆನ್ನ ತೈಜಸನಾಗಿಇನ್ನು ಪೇಳ್ದಂಕಿತವ | ಕನ್ಯೆ ಗಿತ್ತಿಹನೋ 1 ಪತಿಸೇವೆ ದೊರಕಿಸುತ | ಪತಿವ್ರತೆಯಳೆಂದೆನಿಸಿಅತುಳ ವೈಭವ ತೋರಿ | ಹಿತದಿಂದ ಪೊರೆಯೋವ್ರತತಿ ಜಾಸನ ಪಿತನೆ | ಗತಿಗೋತ್ರ ನೀನೆನಿಸಿಸುತೆಸಮಳ ಪೊರೆವುದಕೆ | ಮತಿ ಮಾಡೊ ಹರಿಯೇ 2 ತಾರತಮ್ಯ ಜ್ಞಾನ ಮೂರೆರಡು ಭೇದಗಳಸಾರತತ್ವಗಳುರುಹಿ | ಸಾರತಮ ನಿನ್ನಾಪಾರುಗಾಣದ ಮಹಿಮೆ | ಚಾರುಕೀರ್ತಿಸುವಂತೆತೋರೊ ಸನ್ಮಾರ್ಗವನು | ವಾರಿನಿಧಿ ಶಯ್ಯಾ 3 ಹರಿಗುರೂ ಸದ್ಭಕ್ತಿ | ಹಿರಿಯರಲಿ ಆಸಕ್ತಿಸರ್ವ ಕಾರ್ಯವು ಹರಿಯ ವರಸೇವೆಯೆಂಬಾವರಮತಿಯ ಕರುಣಿಸುತ | ಹರಿಯು ತಾನಿತ್ತುದನಹರುಷದಲಿ ಉಂಬಂಥ | ಅರಿವು ಕೊಡು ಸತತ 4 ಭಾವಜಾರಿಯ ತಾತ | ಪಾವಮಾನಿಯ ಪ್ರೀತಕೇವಲಾನಂದಮಯ | ಜೀವ ಪರತಂತ್ರಾಈ ವಿಧವು ಇರಲಾಗಿ | ನೀವೊಲಿಯಲಿನ್ಯಾರುಕಾವರನು ಕಾಣೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಗೋಪಾಲದಾಸರಾಯ ಮಾಂಪಾಲಯ ಪ ಗೋಪಾಲದಾಸರಾಯಾ ಅಪಾರ ಮಹಿಮ ಮ- ತ್ಪಾಪಗಳೋಡಿಸಿ ಕಾಪಾಡೊ ಗುರುರಾಯ ಅ.ಪ ಸುಜನ ವಿಜಯದಾಸರಿಗೆ ನಿಜ ಶಿಷ್ಯರೆನಿಸಿದ 1 ಧನ್ವಂತ್ರಿ ಜಪದಿ ಜಗನ್ನಾಥದಾಸರ ಬನ್ನವ ಬಿಡಿಸಿದ ಘನ್ನ ಮಹಿಮಗುರು 2 ಏನು ಕರುಣವೋ ಶ್ರೀ ಮಾನವಿ ದಾಸರಿಗೆ ಸಾನುರಾಗದಿ ಆಯುರ್ದಾನವ ಮಾಡಿದ 3 ಪದುಮನಾಭನ ಪದಪದುಮ ಮಹಿಮೆಗಳ ವಿಧ ವಿಧ ಪದಸುಳಾದಿಗಳಿಂದ ತುತಿಸಿದ 4 ಶರಣು ಜನಕೆ ಸುರತರುವೆನಿಸಿ ಧರೆಯೊಳು ಮೆರೆವ ' ಕಾರ್ಪರ ನರಹರಿ’ ಯ ನೊಲಿಸಿದಂಥ5
--------------
ಕಾರ್ಪರ ನರಹರಿದಾಸರು