ಒಟ್ಟು 1715 ಕಡೆಗಳಲ್ಲಿ , 108 ದಾಸರು , 1430 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

139-4ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಗುರುಗಳು ಏಕಾಂತದಲ್ಲಿ ಇತ್ತ ಉಪದೇಶಮರೆಯದೇ ಅನುಸರಿಸಿ ಭೀಮರತಿಯನ್ನುಸೇರಿ ವಿಹಿತದಿ ಸಂಕಲ್ಪಾದಿಗಳ ಮಾಡಿನೀರಲ್ಲಿ ಇಳಿದರು ಶ್ರೀನಿವಾಸಾಚಾರ್ಯ 1ಸರ್ವ ಜಗತ್ಪಾಲ ಶ್ರೀ ಪಾಂಡುರಂಗವಿಠ್ಠಲನುಪ್ರವಾಹ ಸುಳಿಯಿಂದ ಬಡುಗಾತ್ರ ಭಕ್ತನ್ನಕಾಯ್ವುದಕೆ ಗಂಡಾ ಶಿಲಾ ನಿರ್ಮಿಸಿದ ಅಲ್ಲಿದೇವಗುರುಸ್ಮರಣೆಯಿಂ ಇಳಿದರಾಚಾರ್ಯ2ನರಸಿಂಹ ವಿಠ್ಠಲದಾಸರು ತಂದೆಯಗುರುಗಳು ಗೋಪಾಲ ವಿಠ್ಠಲ ದಾಸರಪರಮಗುರುಗಳುವಿಜಯವಿಠ್ಠಲ ದಾಸರಪುರಂದರದಾಸರಾಜರ ಸ್ಮರಿಸಿದರು3ತೀರ್ಥಾಭಿಮಾನಿಗಳ ಭಾರತೀಪತಿಯಪದುಮೆ ಪದ್ಮೇಶ ಫಂಡರಿ ನಾಥ ಹರಿಯಮೋದಚಿನ್ಮಯ ಜಗನ್ನಾಥನ ಸ್ಮರಿಸುತ್ತಉದಕಪ್ರವಾಹದೊಳು ತನುವ ಅದ್ದಿದರು4ಸೀನಪ್ಪ ಶ್ರೀನಿವಾಸ ಶ್ರೀನಿವಾಸಪ್ಪ ಈಶ್ರೀನಿವಾಸಾಚಾರ್ಯ ಒಂದು ಸಲ ಮುಳುಗೇಳೆತನುಗತ ಒಳ ಹೊರಗಿನಕಲುಷಕಳೆದವುಪುನಃ ಮುಳಗೇಳಲು ಸುಪವಿತ್ರರಾದರು 5ಪುನಃ ಮುಳುಗಿ ಎದ್ದು ಅ ಘ್ರ್ಯವ ಅರ್ಪಿಸಲುಇನನ ಮಂಡಲದಿ ವರವಾಯು ಅಧಿಷ್ಠಾನದಲಿಶ್ರೀ ನಾರಾಯಣ ಸರ್ವಜನ ಹಿತಕರನಆನಂದ ಚಿನ್ಮಾತ್ರ ವಪುಷನ್ನ ಸ್ಮರಿಸಿದರು 6ಋಕ್ಸಾಮ ವೇದಗಳಿಂದ ವಾಣೀವಾಯುಸುಖಪೂರ್ಣ ನಾರಾಯಣನ ಸ್ತುತಿಸುವರುಆಕಳಂಕ ಉನ್ನಾಮಸಾಮನಾಮ ಹೀಂಕಾರಶ್ರೀಕೃತಿಪತಿ ಪ್ರದ್ಯುಮ್ನಾದಿ ಸ್ವರೂಪ 7ಸಪ್ತಕಾಲದಿ ಸಪ್ತಸಾಮ ಪ್ರತಿಪಾದ್ಯನುಸಪ್ತಸ್ವರೂಪನು ಆದಿತ್ಯಾಂತಸ್ತಪ್ರದ್ಯುಮ್ನವಾಸುದೇವವರಾಹನಾರಾಯಣಅನಿರುದ್ಧ ನರಸಿಂಹ ಸಂಕರುಷಣ 8ಪರಮಗುರುವಿಜಯದಾಸಾರ್ಯರ ಪ್ರೇರಣೆಯಿಂದಗುರುಗಳು ಗೋಪಾಲದಾಸಾರ್ಯರುಅರುಪಿದಅನುಸಂಧಾನಕ್ರಮದಿಂದಲೇಗುರುತಮ ಸಮೀರನಲಿ ಹರಿಯ ಸ್ಮರಿಸಿದರು 9ಸೂರ್ಯನೊಳಿಪ್ಪಸಮೀರಅಧಿಷ್ಠಾನಸ್ಥಸೂರಿಜನ ಪ್ರಾಪ್ಯ ಋಕ್ ಸಾಮಾದಿಸ್ತುತ್ಯಸೂರ್ಯತೇಜಃ ಪುಂಜ ಸ್ಫೂರ್ತಿದ ಜಗತ್ಕರ್ತ ಶ್ರೀಶ್ರೀನಾರಾಯಣಗಘ್ರ್ಯ ಅರ್ಪಿಸಲು ಒಲಿದ 10ಝಗಝಗಿಪ ತೇಜಸ್ಸು ಶಿರೋಪಕಂಡರುಮೂಗಿನಿಂದೊಂದಡಿ ಶಿರದ ಮೇಲೆಜಗನ್ನಾಥವಿಠ್ಠಲ ಎಂದು ಪ್ರಜ್ವಲಿಸಿತುಹೇಗೆ ವರ್ಣಿಸುವೆ ಆ ಅದ್ಭುತ ದೃಶ್ಯ 11ಸರ್ವ ಜಗದ್ರಕ್ಷಕ ವಿಠ್ಠಲನು ತತ್ಕಾಲಪ್ರವಾಹವ ತಡೆಯಲು ನಿರ್ಮಿಸಿದ ಶಿಲೆಯುಪ್ರಜ್ವಲಿಪ ಈ ದಿವ್ಯ ಹರಿನಾಮ ಅಂಕಿತಕ್ಕೆಐವತ್ತು ಅಂಗುಲ ಹಿಂದೆ ನಿಂತಿತ್ತು 12ಕ್ಷಣಮಾತ್ರದೊಳಗೆ ಈತಟಿತ್ಕೋಟಿನಿಭಜ್ಯೋತಿಫಣೆಮುಂದೆ ನಿಂತಿತು ಆಗ ಆಚಾರ್ಯಚೆನ್ನಾಗಿ ನೋಡಿದರುಹರಿಇಚ್ಛಾಶಕ್ತಿಯಿಂಶ್ರೀನಿವಾಸವಿಜಯಗೋಪಾಲ ವಿಠ್ಠಲನ13ಶ್ರೀ ಶ್ರೀನಿವಾಸನೇವಿಜಯವಿಠ್ಠಲನಾಗಿಶ್ರೀ ಶ್ರೀನಿವಾಸ ಗೋಪಾಲ ವಿಠ್ಠಲನಾಗಿಶ್ರೀ ಶ್ರೀನಿವಾಸ ಶ್ರೀ ಜಗನ್ನಾಥ ವಿಠ್ಠಲನಾಗಿಶಿರಿ ಜಗನ್ನಾಥ ದಾಸಾರ್ಯರು ನೋಡಿದರು 14ಶ್ರೀ ಶ್ರೀನಿವಾಸನೆ ಪ್ರಸನ್ನನು ಆಗಿತೋರಿಹನು ಜಗನ್ನಾಥ ವಿಠಲನೆನಿಸಿತಿರುಪತಿ ಶ್ರೀನಿಧಿಯೇ ಪಂಡರಿ ವಿಠ್ಠಲನುಸೂತ್ರನೋಡಿ ನಸ್ಥಾನ ತೋಪಿ15ಶ್ರೀ ರುಕ್ಮಿಣೀಪತಿ ಪರಂಜ್ಯೋತಿ ಪರಂಬ್ರಹ್ಮಉರುಅಖಿಳಸಚ್ಛಕ್ತ ಜಗನ್ನಾಥ ವಿಠ್ಠಲಶಿರಿ ಜಗನ್ನಾಥದಾಸರ ಹೃದಯ ¥ದ್ಮದೊಳುಸೇರಿದನು ಜ್ವಲಿಸುತಿಹ ಸರ್ವೋತ್ತಮ ಅಲ್ಲಿ 16ಎಂಟುಅಕ್ಷರಮೂಲಮಂತ್ರದಿ ನಾರಾಯಣನವಿಠ್ಠಲ ಹಯಗ್ರೀವ ವೆಂಕಟೇಶಾದಿಷಡಕ್ಷರಿ ವಿಷ್ಣು ರಾಮ ಕೃಷ್ಣಾದಿಗಳಕ್ರೋಡನರಸಿಂಹಾದಿಗಳನು ಜಪಿಸಿದರು17ಗುರುಪರಮಗುರುಪೇಳ್ದ ರೀತಿಯಲಿ ಜಪಚರಿಸಿಶ್ರೀ ರುಕ್ಮಿಣಿ ವಿಠ್ಠಲ ಮಂದಿರಕೆ ಪೋಗಿಪುರಂದರಾರ್ಯರ ನಮಿಸಿಗುರುಪರಮಗುರುಗಳಸ್ಮರಿಸಿ ಒಳಪೊಕ್ಕರು ವಿಠ್ಠಲನ್ನ ನೋಡೆ 18ಶ್ರೀ ಮಧ್ವರಮಣ ನಿನ್ನ ಅದ್ವಿತೀಯ ಮಹಿಮೆಈ ಮಹೋತ್ತಮಕೃತಿಪುರಂದರದಾಸರದುಅಮಲ ಭಕ್ತಿಯಲ್ಲಿದನ್ನ ಅರ್ಥ ಅರಿತು ಪಠಿಸಿಶ್ರೀಮಂದಿರದೊಳು ಪ್ರವೇಶ ಮಾಡಿದರು 19ತ್ರಿಜಗದೀಶನಪಾದಪದ್ಮಗಳ ನೋಡುತ್ತನಿಜಭಕ್ತಿ ಭಾವದಲಿ ಸಾಷ್ಟಾಂಗ ನಮಿಸಿಅಜಭವೇಂದ್ರಾದಿ ಸುರವಂದ್ಯನ್ನ ಕೇಶಾದಿರಾಜೀವಪಾದಾಂತ ದರುಶನ ಮಾಡಿದರು20ಜ್ವಲಿಸುವ ಕಿರೀಟ ಸುಳಿಗುರುಗಳು ಫಣಿಯ ತಿಲಕಬಿಲ್ಲುವೋಲ್ ಸುಂದರ ಭ್ರೂ ಮುಖಕಮಲಜಲಜೇಕ್ಷಣ ಮುಗುಳುನಗೆಯು ತಟಿದಂದಿಪೊಳೆವ ಕುಂಡಲಕರ್ಣ ಕಂಬುಗ್ರೀವ 21ವನಮಾಲೆ ಎಳೆ ತುಳಸಿದಳ ಹಾರ ಕೊರಳಲ್ಲಿಘನಬಾಹು ವಿಸ್ತಾರವಕ್ಷ ಶ್ರೀವತ್ಸಸ್ವರ್ಣಮಣಿ ಗ್ರೈವೇಯಕೌಸ್ತುಭರತ್ನವುಕಣ್ಣಾರ ಕಾಣಲಾನಂದ ಸೌಂದರ್ಯ 22ಮೂರುಗೆರೆ ಉದರದಲಿವನರುಹನಾಭಿಯುಕರಗಳು ಕಟಿಯಲ್ಲಿ ಶಂಖಾರವಿಂದಪುರುಟಮಣಿ ಗಣಸೂತ್ರ ಪೀತಾಂಬರ ಉಡಿಸ್ಫುರದ್ರತ್ನ ನೂಪುರ ಸಮಪಾದದ್ವಯವು 23ತಟಿತ್ಕೋಟಿನಿಭ ತನ್ ಕಾಂತಿಯಲಿ ಜ್ವಲಿಸುವಸಾಟಿಯಿಲ್ಲದ ಸುಂದರಾಂಗ ಶ್ರೀರಮಣವಿಠ್ಠಲ ಕೃಪಾನಿಧಿ ಶರಣಜನ ಪಾಲನ್ನಹಾಡಿ ಸ್ತುತಿಸಿದರು ಜಗನ್ನಾಥ ದಾಸಾರ್ಯ 24ಫಣಿಪಶಾಯಿಯ ಅನಂತ ಪದ್ಮನಾಭನು ತನ್ನಆನಂದಲೀಲೆಯಲಿ ಜಗವ ಪಡೆಯುವನುಆನಂದಲೀಲೆಯಲಿ ಅವತಾರ ರೂಪಗಳತಾನೇ ಪ್ರಕಟಿಸಿ ಸಜ್ಜನರ ಪಾಲಿಸುವ 25ದೇಶಗುಣಕಾಲ ಅಪರಿಚ್ಛಿನ್ನನು ಅನಂತನುಶ್ರೀಶಸರ್ವೇಶ ಚಿನ್ಮಯನುಅನಘಐಶ್ವರ್ಯ ಪೂರ್ಣಜಗದೇಕ ಪಾಲಕನುಅಸಮ ಸರ್ವೋತ್ತಮನು ಸುಖಮಯನು ಸುಖದ 26ಮೀನಕೂರ್ಮಸ್ತ್ರೀ ಅಜಿತ ಧನ್ವಂತರಿಕ್ರೋಢಶ್ರೀನಾರಸಿಂಹ ವಟುಭೃಗು ರಾಮರಾಮಕೃಷ್ಣ ಜಿನಸುತ ಕಲ್ಕಿ ಠಲಕ ವೆಂಕಟರಮಣಆನಂದಚಿತ್ತನು ಅನಂತ ಅವತಾರ 27ದಾಸೋಹಂ ತವ ದಾಸೋಹಂ ಎಂದುದಾಸವರ್ಯರು ಬಿನ್ನೈಸಿ ಸ್ತುತಿಸಿದರುನಸುನಗುತ ವಾತ್ಸಲ್ಯದಿಂದ ವಿಠ್ಠಲನುವಿಶೇಷಾಪರೋಕ್ಷ ಅನುಗ್ರಹಿಸಿದನುದಯದಿ 28ಸೌದಾಮಿನಿಗಮಿತ ವಿದ್ಯುತ್ ಕಾಂತಿಯಿಂದದಿಕ್ಕು ವಿದಿಕ್ಕುಗಳ ರಂಜಿಸುವರೂಪದಿಂದ ಪಾಲ್ಗಡಲಲಿ ಆವಿರ್ಭವಿಸಿದ ಶ್ರೀಇಂದಿರೆಯೆ ರುಕ್ಮಿಣಿ ಸೌಂದರ್ಯಪೂರ್ಣೆ 29ಮಾಯಾಜಯಾಕೃತಿಶಾಂತಿ ಸೀತಾಲಕ್ಷ್ಮಿತೋಯ ಜಾಲಯ ಚಿತ್ಪ್ರಕೃತಿ ಭೂದುರ್ಗಾತೋಜಯಾಕ್ಷಿವೇದವತಿದಕ್ಷಿಣಾ ಶ್ರೀಜಯಂತಿ ಸತ್ಯಾರುಕ್ಮಿಣಿ ಸುಂಧುಕನ್ಯಾ 30ಸರ್ವ ಜಗಜ್ಜನನಿಯು ಸರ್ವ ವಿಧದಲಿ ಹರಿಯಸೇವಿಸುತಿಹಳು ಸದಾ ನಿತ್ಯಾವಿಯೋಗಿನಿದೇವದೇವೋತ್ತಮ ರಾಜರಾಜೇಶ್ವರನು ವಿಠ್ಠಲನುದೇವಿ ಶ್ರೀ ರಾಜರಾಜೇಶ್ವರಿಯು ರುಕ್ಮಿಣಿಯು 31ಜ್ವಲಿಸುವ ಮುತ್ತು ನವರತ್ನದಿ ಕಿರೀಟಒಳ್ಳೆ ಪರಿಮಳ ಹೂವು ಮುಡಿದಂತ ತುರುವುಫಾಲದಲಿ ಶ್ರೇಷ್ಠತಮ ಕಸ್ತೂರಿ ತಿಲಕವುಪೊಳೆವ ಪೂರ್ಣೇಂದು ನಿಭ ಮೂಗುಬೊಟ್ಟು 32ಅಂಬುಜಾಕ್ಷಿ ದಿವ್ಯ ಮುತ್ತಿನ ತೋಡುಗಳುಗಂಭೀರ ಸೌಭಾಗ್ಯದ ಕೃಪಾನೋಟಕಂಬುಕಂಠದಿ ಮಂಗಳಸೂತ್ರಕರಯುಗದಿಅಂಬುಜವರಕೊಡುವಅಭಯಹಸ್ತಗಳು33ಕಂಧರದಲಿ ಪರಿಮಳಕಮಲಮಾಲಾಪೀತಾಂಬರ ದಿವ್ಯ ಕುಪ್ಪಸ ಮೇಲ್ಪಟ್ಟೆವಸ್ತ್ರವು ಸ್ವರ್ಣಸರ್ವಾಭರಣ ಭೂಷಣವುಪಾದಉಂಗುರ ಪೆಂಡೆ ಕಂಡು ನಮಿಸಿದರು34ಜಗನ್ನಾಥ ವಿಠ್ಠಲನೂ ಜಗನ್ಮಾತೆ ರುಕ್ಮಿಣಿಯೂಜಗನ್ನಾಥದಾಸರಿಗೆ ಔತಣ ಮಾಡಿದ್ದುಜಗತ್ತಲ್ಲಿ ಭಕ್ತಜನರೆಲ್ಲ ಪೇಳ್ತಿಹರುಜಗದೀಶ ಪಂಢರೀ ವಿಠ್ಠಲನ ಮಹಿಮೆ 35ಕೇಶವ ನಾರಾಯಣಮಾಧವಗೋವಿಂದಶ್ರೀಶ ವಿಷ್ಣು ಮಧುಸೂದನ ತ್ರಿವಿಕ್ರಮಈಶ ವಾಮನ ಶ್ರೀಧರ ಹೃಷಿಕೇಶರಮೆಯರಸಪದ್ಮನಾಭದಾಮೋದರ36ಸಂಕರುಷಣ ವಾಸುದೆವ ಪ್ರದ್ಯುಮ್ನ ನಮೋಅಕಳಂಕ ಅನಿರುದ್ಧ ಪುರುಷೋತ್ತಮನಿಷ್ಕಳಅಧೋಕ್ಷಜನರಸಿಂಹಅಚ್ಯುತಶ್ರೀಕರ ಜನಾರ್ದನ ಉಪೇಂದ್ರ ಹರಿಕೃಷ್ಣ 37ರಮಾಪತಿ ರಮಾಯುತನು ಶ್ರೀಹರಿಯ ರೂಪಗಳಬ್ರಹ್ಮವಾಯು ವಾಣೀಭಾರತಿ ಉಮೇಶಉಮಾ ತತ್ವದೇವದಿಕ್ಪಾಲಕರು ಗಂಗಾಕರ್ಮಮಾನಿ ಪುಷ್ಕರಾದಿಗಳೊಳ್ ತಿಳಿದರು 38ಭೋಜನ ಪದಾರ್ಥದಲು ತದ್ಗತ ಶಬ್ದಂಗಳಲುಭೋಜ್ಯಗಳ ಬಡುಸುವರಲ್ಲೂ ಕ್ಷೇತ್ರದಲ್ಲೂಭೋಜಭಿಮಾನಿಗತ ಖಂಡಾಖಂಡಗನುಭಜನೀಯ ಸ್ಥೂಲಭುಕ್ ಅವ್ಯಯನ ಕಂಡರು 39ಕರುಣಾಬ್ಧಿ ಶ್ರೀ ಹರಿಯ ಔದಾರ್ಯ ಏನೆಂಬೆಶ್ರೀ ಶ್ರೀನಿವಾಸನು ಅಂದು ತಿರುಪತಿಯಲ್ಲಿಶಿರಿ ವಿಜಯಾರ್ಯರ ರೂಪದಿ ಪ್ರೇರಿಸಿಧಾರೆಯೆರಿಸಿದ ಆಯಸ್ ಗುರುಗಳ ಕೈಯಿಂದ 40ಶ್ರೀ ಶ್ರೀನಿವಾಸನ ಮಹಾದ್ವಾರಕೆದುರಾಗಿಹಾರೆ ಕಲ್ಲುಮಂಟಪ ಆಗ್ನೇಯ ದಿಕ್ಕುಎರಡನೆಯದೋ ಮೂರನೆಯದೋ ಅಂಕಣದ ಖೋಲಿಹರಿದಾಸರು ಇದ್ದ ಮುಖಾಮಿ ಬಿಡಾರ 41ಎಳೆಕೆಂಪು ರೋಜ ಊದಾವರ್ಣದಿ ಅಂಚುಬಿಳಿರೇಷ್ಮೆ ವಸ್ತ್ರವ ಮೇಲ್ ಹೊದ್ದುಕೊಂಡುಮಲಗಿ ಚಲಿಸದೆ ನಿತ್ರಾಣನಾಗಿದ್ದವಗೆಒಲಿದು ಆಯುರ್ದಾನ ಮಾಡಿಸಿದ ಕರುಣಿ 42ಗುರುಗಳು ಗೋಪಾಲದಾಸರ ರೂಪದಿಂದ ಬಂದುಶಿರಿವರನು ತಾನೇನೆ ಅನ್ನಪ್ರಸಾದಕರದಲ್ಲಿ ಇತ್ತನು ಅವನೇವೆಇಂದುಶಿರಿಸಹ ಅಮೃತಾನ್ನ ಔತಣವನ್ನಿತ್ತ 43ಶಿರಿಯ ವಾತ್ಸಲ್ಯ ದಯೆ ಏನೆಂದು ಪೇಳಲಿಚಾರುದೇಷ್ಣಾಹ್ವಯ ತನ್ನಸುತ ಈಗವರಗೋಪಾಲದಾಸರುಅವರಶಿಷ್ಯರಿವರೆಂದು ಪ್ರೀತಿಯಲಿ ಔತಣ ಮಾಡಿಹಳು 44ಈ ರೀತಿ ಹರಿಶಿರಿ ಇತ್ತ ಔತಣ ಮತ್ತುಹರಿಯ ಕೈಯಿಂದ ಹರಿಗರ್ಪಿತ ಮಾಲಾದಿಹರಿಪ್ರಸಾದವ ಕೊಂಡು ಫಂಡರಿಪುರದಿಂದಹೊರಡಲಾದರು ಜಗನ್ನಾಥದಾಸಾರ್ಯ 45ನರಸಿಂಹಾದಾಸಾರ್ಯರಾದ ತನ್ನ ತಂದೆಗೆಗುರುಗಳುಪುರಂದರದಾಸಾರ್ಯರೆಂದುಪರಮಗುರುವಿಜಯದಾಸಾರ್ಯರ ಗುರುಯೆಂದುಚರಣವಂದಿಸಿ ಹೊರಡೆ ಅಪ್ಪಣೆ ಕೊಂಡರು46ಪರಮಗುರು ವಿಜಯದಾಸಾರ್ಯರ ಸ್ಥಳಕೆಸ್ಮರಣೆ ಪೂರ್ವಕ ಮನಸಾ ಪೋಗಿ ಸನ್ನಮಿಸಿಗುರುಗಳಚರಣಆಕಾಂಕ್ಷಿಗಳು ತ್ವರಿತದಿಹೊರಟರು ಶ್ರೀ ಜಗನ್ನಾಥನ್ನ ಸ್ಮರಿಸುತ್ತ 47ವಾರಿಜಾಸನ ಪಿತನು ಪೂರ್ಣ ಪ್ರಜÕರ ಹೃತ್‍ಸ್ಥಶಿರಿ ಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 48- ಇತಿ ಪಂಚಮ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
139-5ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ವಿಠ್ಠಲನ ಮಂದಿರದಿ ತಪ್ಪದೇ ಪ್ರತಿದಿನಪಠಿಸಿ ಅರ್ಪಿಸುತ್ತಿದ್ದವಿಶ್ವವಿಷ್ಣುವಷಟ್ಕಾರ ಮೊದಲಾದ ಸಹಸ್ರನಾಮಗಳದಿಟ ಜ್ಞಾನ ಭಕ್ತಿಯಿಂ ಮಾರ್ಗದಿ ಸ್ಮರಿಸಿದರು 1ತನ್ನ ಹೊರ ಒಳಗೆ ಶ್ರೀಹರಿಯ ತಿಳಿಯುತ್ತಕಾಣುವುದು ಎಲ್ಲವೂ ಅನಘಹರಿ ಆವಾಸ್ಯತನಗೆ ಯದೃಚ್ಛದಿ ಲಭಿಸುವುವು ಹರಿಕೊಡುವುವುಎನ್ನುತ ಅನಪೇಕ್ಷಿ ನಿರ್ಭಯದಿ ನಡೆದರು 2ಮಾರ್ಗಸ್ಥ ಅಕ್ಷೋಭ್ಯ ಜಯಮುನಿಗಳಲಿಪೋಗಿ ಬಾಗಿ ಶಿರಸ್ಸಾಷ್ಠಾಂಗ ನಮಸÀ್ಕರಿಸಿ ಮುಂದುಪೋಗಿ ಕೃಷ್ಣಾ ತೀರ ಹನುಮನ್ನ ವಂದಿಸಿಚೀಕಲಪರಿವಿಗೆ ನಮಿಸಿ ಕರಮುಗಿದರು 3ಗುರುಗುಣಸ್ತವನಾದಿ ಗ್ರಂಥಗಳ ರಚಿಸಿರುವಸೂರಿವಾದೀಂದ್ರರ ನಮಿಸಿ ಅಪ್ಪಣೆಯಿಂಶ್ರೀರಾಘವೇಂದ್ರ ತೀರ್ಥರ ನಮಿಸಿ ಶರಣಾಗಿಸ್ತೋತ್ರ ಅರ್ಪಿಸಿದರು ಕವಿತಾರೂಪದಲಿ 4ಹರಿಶಿರಿ ಹನುಮ ಶಿವಗುರು ಅನುಗ್ರಹಕೊಂಡುದಾರಿಯಲ್ಲಿರುವಂಥ ಕ್ಷೇತ್ರ ಮೂರ್ತಿಗಳದರುಶನ ಮಾಡಿ ಗೋಪಾಲ ದಾಸಾರ್ಯರುಇರುವ ಸ್ಥಳ ಸೇರಿದರು ಜಗನ್ನಾಥದಾಸರು 5ಗುರುಗಳ ನೋಡಿ ಆನಂದ ಬಾಷ್ಪವ ಸುರಿಸಿಚರಣಪದ್ಮಗಳಲ್ಲಿ ನಮಿಸಿ ಶರಣಾಗಿಘೋರವ್ಯಾಧಿಹರಿಸಿ ಅಪಮೃತ್ಯು ತರಿದಂಥಕಾರುಣ್ಯ ನಿಧಿ ಉದ್ಧಾರಕರು ಎಂದರು 6ರಾಜೀವಾಲಯಪತಿವಿಜಯಗೋಪಾಲನುಭಜತರ ರಕ್ಷಿಸುವ ಕರುಣಾಸಮುದ್ರಈ ಜಗನ್ನಾಥನೇ ನಿನಗೆ ಒಲಿದಿಹನುಭುಜಗಾದ್ರಿವಾಸ ಫಂಡರಿ ವಿಠ್ಠಲ 7ನಿಜಭಕ್ತಾಗ್ರಣಿ ಗೋಪಾಲ ದಾಸಾರ್ಯರುನಿಜಭಾವದಲಿ ಈ ರೀತಿಯಲಿ ಹೇಳೆಐಜೀ ಮಹಾತ್ಮರು ಸೂಚಿಸಿದರು ಹರಿಯಭೋಜನ ಜಗನ್ನಾಥದಾಸಗೆ ಮಾಡಿಸಿದ್ದು 8ಜಗನ್ನಾಥದಾಸರು ನಡೆದ ವೃತ್ತಾಂತವಮುಗಿದು ಕರಗದ್ಗದ ಕಂಠದಲಿ ಪೇಳೆಚಕಿತರಾದರು ಅಲ್ಲಿ ನೆರೆದಿದ್ದ ಸಜ್ಜನರುಉದ್ಘೊಷ ಜಯ ಜಯ ಶಬ್ದ ಮಾಡಿದರು 9ಉತ್ತನೂರಿಗೆವೇಣಿಸೋಮಪುರದಿಂ ಪೋಗಿಮತ್ತೂವೇಣಿಸೋಮಪುರವನ್ನು ಯೈದಿಸತ್ತತ್ವ ಬ್ರಹ್ಮ ಜಿಜ್ಞಾಸವೂ ಭಾಗ -ವತ ಧರ್ಮ ಆಚರಿಸಿದರು ಮುದದಿಂದ 10ಗೋಪಾಲಕೃಷ್ಣ ಪ್ರಿಯ ಐಜೀಮಹಂತರುಗೋಪಾಲದಾಸಾರ್ಯ ªರದ ಗುರುತಂಗೋಪಾಲ ದಾಸಾರ್ಯರುಗಳ ಸಮೇತದಿಭೂಪಾಲ ಪ್ರಮುಖರು ಸಾಧುಜನಗುಂಪು 11ಶಿರಿವಾಸುದೇವಪ್ರಿಯವಾಸತತ್ವಜÕರಗುರುಗಳು ಗೋಪಾಲದಾಸರ ಅನುಗ್ರಹದಿವರದ ಗುರುತಂದೆ ಗೋಪಾಲರು ಮತ್ತೆಲ್ಲರಿಗೂಕರಮುಗಿದು ಹೊರಟರು ಅಪ್ಪಣೆಕೊಂಡು 12ಗದ್ವಾಲ ಮಾರ್ಗದಿ ಮಂತ್ರಾಲಯ ಪೋಗಿಮಧ್ವಮತ ದುಗ್ಧಾಬ್ಧಿ ಚಂದ್ರ ಶ್ರೀ ರಾಘವೇಂದ್ರ ವಾದೀಂದ್ರರ ನಮಿಸಿ ಅಲ್ಲಿಂದಯೈದಿಹರು ಪರಮಗುರುಗಳು ಇದ್ದ ಸ್ಥಳವ 13ಪರಮಗುರುಗಳು ವಿಜಯವಿಠ್ಠಲ ದಾಸಾರ್ಯರಚರಣಾರವಿಂದದಿ ಶರಣಾಗಿಅವರಕರದಿಂದ ನರಸಿಂಹ ವಿಜಯವಿಠ್ಠಲನಸುಪ್ರಸಾದವ ಕೊಂಡು ಮಾನವಿಗೆ ಹೋದರು 14ಮನುತೀರ್ಥ ತಟದಲಿ ಮನೆಯಲ್ಲಿ ವಾಸಿಸುತಹನುಮಂತಸ್ಥ ನರಹರಿ ಜಗನ್ನಾಥನ್ನಹನುಮನ್ನ ಪೂಜಿಸುತ ಗುರುಗಳ ಸ್ಮರಿಸುತ್ತಜ್ಞಾನಾರ್ಥಿ ವಿದ್ಯಾರ್ಥಿಗಳಿಗೆ ಒದಗಿಹರು 15ಇಷ್ಟರಲ್ಲೇ ಜಗನ್ನಾಥದಾಸರ ಕೀರ್ತಿಅಷ್ಟದಿಕ್ಕಲ್ಲು ಪ್ರಖ್ಯಾತಿಯ ಹೊಂದಿಇಷ್ಟಾರ್ಥ ಸಿದ್ಧಿಗೆ ಬರುವರಾದರು ಜನರುಕೃಷ್ಣನ ಒಲಿಮೆ ಈ ದಾಸರಲಿ ಪೂರ್ಣ 16ಮಾಧ್ವ ಮೂಲಗ್ರಂಥ ಟೀಕಾಟಿಪ್ಪಣಿಗಳುಸಾಧು ಹರಿದಾಸರ ಕೀರ್ತನೆಗಳುವೇದವ್ಯಾಸೋದಿತ ಪುರಾಣ ಇತಿಹಾಸವಿದ್ಯಾರ್ಥಿಗಳಿಗೆಲ್ಲ ಪಾಠ ಪ್ರವಚನವು 17ಯೋಗಿವರ ಪ್ರಾಣೇಶವಿಠ್ಠಲ ದಾಸಾರ್ಯರುಭಾಗವತವರಶ್ರೀಶ ವಿಠ್ಠಲದಾಸಾರ್ಯನಿಗಮವೇದ್ಯನ ಭಕ್ತಜನರು ಬಹುಮಂದಿಯುಬಾಗಿ ದಾಸಾರ್ಯರಿಗೆ ಶಿಷ್ಯ ಜನರಾದರು 18ಪ್ರಾಣೇಶ ದಾಸರಿಗೆ ಶರಣಾದೆ ಎಂದೆಂದುಪ್ರಾಣದೇವನು ಇವರೊಳ್ ಪ್ರಸನ್ನನಾಗಿಹನುಪ್ರಾಣದೇವಾಂತಸ್ಥ ಶ್ರಿಹರಿ ಕೇಶವನಕಾಣುತ ಭಜಿಸುವ ಭಾಗವತರೆಂದು 19ಜಗನ್ನಾಥದಾಸರ ಶಿಷ್ಯ ಸಜ್ಜನರಿಗೆಭಾಗವತವರಶ್ರೀಶ ಶ್ರೀದವಿಠ್ಠಲಾದಿಭಗವದ್ದಾಸರಿಗೆ ನಮಿಪೆ ಶ್ರೀ ಹರಿವಾಯುಝಗಝಗಿಪ ಇವರುಗಳೊಳ್ ಸಂತತ ಎಂದು 20ನೋಡಬೇಕಾಗಿದ್ದ ಕ್ಷೇತ್ರಗಳಿಗೆ ಪೋಗಿನಾಡಿನಲಿಭಾಗವತಧರ್ಮವ ಬೆಳೆಸೆಬೇಡುವ ಯೋಗ್ಯರಿಗೆ ಉಪದೇಶ ಕೊಡೆ ಶಿಷ್ಯರೊಡಗೂಡಿ ಹೊರಟರು ಜಗನ್ನಾಥದಾಸರು 21ಕರ್ಜಗಿ ಕ್ಷೇತ್ರದಲ್ಲಿ ಇರುವ ವರದಾ ನದಿಯುಸಜ್ಜನ ಸಮೂಹವು ಬಹಳ ಅಲ್ಲುಂಟುಶ್ರೀ ಜಗನ್ನಾಥನ್ನ ಭಜಿಸುತ್ತ ದಾಸರುಕರ್ಜಗಿ ಜಮೀನ್ದಾರ ಮನೆಯಲ್ಲಿ ಕುಳಿತರು 22ಸಾಧ್ವಿ ಶಿರೋಮಣಿ ಆ ಗೃಹಸ್ಥನ ಪತ್ನಿಪಾದನಮಿಸಿ ಪತಿಗೆ ಬಿನ್ನಹ ಮಾಡಿದಳುಇಂದುಲೌಕಿಕ ವಿಷಯಲಾಂಪಟ್ಯ ನಿಲ್ಲಿಸಿವಂದಿಸಿ ದಾಸರಿಗೆ ಪೂಜೆ ನೋಡೆಂದು 23ಅಹರ ಆರಾಧಿಸುವ ಕ್ರಮದಿ ದಾಸಾರ್ಯರುಸಾಯಾಹ್ನ ಸಾಮವಾಪ್ರತಿಪಾದ್ಯ ನರಸಿಂಹನವಿಹಿತದಿ ಅರ್ಚಿಸಿ ಕೀರ್ತನೆಗಳರ್ಪಿಸಿಮಹಾಹರ್ವ ಭಜಿಸುವರು ಶಿಷ್ಯರ ಸಮೇತ 24ಅಂದು ಈ ಗೃಹಸ್ಥನು ಹೆಂಡತಿ ಕೋರಿಕೆಯಂತೆಬಂದು ಕುಳಿತನು ದಾಸಾರ್ಯರ ಮುಂದೆಅಂದೇ ಆ ವಿಪ್ರನ ಅನಿಷ್ಠ ಪ್ರಾರಬ್ಧವುಚಂದದಿ ಪೋಪುವದೆಂದರಿತರು ದಾಸಾರ್ಯ 25ಪೂಜಾ ಆರಂಭ ಆಗಲಿಕೆ ಇರುವಾಗ ಆದ್ವಿಜನ ನೋಡಿ ಪ್ರಾಣೇಶ ದಾಸಾರ್ಯಗರ್ಜಿಸಿದರು ಇನ್ನಾದರೂ ಒಳ್ಳೆಋಜುಮಾರ್ಗ ಹಿಡಿ ಹರಿಯ ಒಲಿಸಿಕೊಳ್ಳೆಂದು 26ವಾಗ್ವಜ್ರಧಾರೆಯು ಪರಿಣಮಿಸಿ ವಿಪ್ರನತೀವ್ರ ಆ ಕ್ಷಣದಲ್ಲೆ ಮನಕಲುಷಕಳೆದುಶ್ರೀವರನ ಪ್ರಿಯತರ ಜಗನ್ನಾಥದಾಸರಿಗೆಸುವಿನಯದಿ ನಮಿಸಿ ಉದ್ಧರಿಸಿ ಎಂದ 27ಪ್ರಾಣೇಶ ದಾಸರಿಗು ಜಗನ್ನಾಥದಾಸರಿಗುತನ್ನ ಕೃತಜÕತೆಯನ್ನು ಚೆನ್ನಾಗಿ ತಿಳಿಸಿಮನ ಶುದ್ಧಿ ಭಕ್ತಿಯಿಂದಲಿ ಪೂಜೆ ನೋಡಲುಹನುಮಂತ ದೇವರು ಕುಳಿತಿದ್ದು ಕಂಡ 28ಶ್ರದ್ಧೆ ಭಕ್ತಿಯಿಂದ ಗೃಹಸ್ಥನುದಾಸರಪಾದಕೆರಗಿ ತನ್ನನ್ನು ಹರಿದಾಸವೃಂದದಲಿ ಸೇರಿಸಬೇಕೆಂದು ಪ್ರಾರ್ಥಿಸಿಶ್ರೀದವಿಠ್ಠಲನಾಮ ಅಂಕಿತವಕೊಂಡ29ಜಗನ್ನಾಥದಾಸಾರ್ಯಪರಮದಯಮಾಡಿಆ ಗೃಹಸ್ಥಗೆ ಶ್ರೀದವಿಠ್ಠಲಾಂಕಿತವುಭಕುತ ಜನರಿಗೆ ಫಲಮಂತ್ರಾಕ್ಷತೆ ಕೊಟ್ಟುಶ್ರೀಕರನ ಸ್ಮರಿಸಿ ಸವಣೂರಿಗೆ ಹೊರಟರು 30ವಾರಿಜಾಸನ ಪಿತನು ಪೂರ್ಣ ಪ್ರಜÕರ ಹೃತ್‍ಸ್ಥಶಿರಿ ಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 31- ಇತಿ ಷಷ್ಠ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
139-6ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಸ್ವರ್ಣಪುರಿಯಲಿ ಜಗತ್ ಪ್ರಖ್ಯಾತ ಸ್ವಾಮಿಗಳುಘನಮಹಿಮ ಸೂರಿವರ ಸತ್ಯಬೋಧಾರ್ಯರಸನ್ನಮಿಸಿ ಈ ಮಹಾಮೂರ್ತಿಗಳಾಹ್ವಾನದಿದಿನ ಕೆಲವು ನಿಂತರು ಜಗನ್ನಾಥ ಆರ್ಯ 1ಮೂರ್ಜಗವು ಅರಿವುದು ಸತ್ಯ ಬೋಧರ ಮಹಿಮೆವಾಜಿಮುಖ ಕೋಡ ನೃಹರಿ ರಾಮಪ್ರಿಯರುಪ್ರಜ್ವಲಿಪ ಸೂರ್ಯನ್ನ ರಾತ್ರಿಯಲಿ ತೋರಿಹರುಭಜಕರಸುರಧೇನುನಿವ್ರ್ಯಾಜ ಕರುಣೆ2ಶಿಷ್ಯರ ಸಹ ಜಗನ್ನಾಥದಾಸರು ತಮ್ಮನಿಯಮಗಳ ತಪ್ಪದೇ ಭಾಗವತಧರ್ಮಕಾಯವಾಙ್ಮನ ಶುದ್ಧಿಯಲಿ ಜ್ಞಾನ ಭಕ್ತಿಸಂಯುತದಿ ಮಾಳ್ಪುದು ಕಂಡರು ಮುನಿಗಳು 3ಹರಿದಾಸವರ ಜಗನ್ನಾಥದಾಸಾರ್ಯರಲಿಹರಿಯ ಒಲಿಮೆ ಅಪರೋಕ್ಷದ ಮಹಿಮೆನೇರಲ್ಲಿ ತಾ ಕಂಡು ಬಹುಪ್ರೀತಿ ಮಾಡಿದರುಹರಿಪ್ರಸಾದದ ಸವಿಯ ಅರಿತ ಆ ಗುರುಗಳು 4ಸ್ವರ್ಣಪುರಿಯಿಂದ ಜಗನ್ನಾಥದಾಸಾರ್ಯರುದಿಗ್ವಿಜಯದಿಂದಲಿ ಶಿಷ್ಯ ಜನಗುಂಪುಸೇವಕರ ಸಹ ಊರು ಊರಿಗೆ ಪೋದರುಆ ಎಲ್ಲ ಕ್ಷೇತ್ರದಲು ಧರ್ಮ ಪ್ರಚಾರ 5ಧರ್ಮ ಪ್ರಚಾರ ಹರಿಭಜನೆ ಪೂಜಾದಿಗಳುನಮಿಸಿ ಬೇಡುವವರ ಅನಿಷ್ಟ ಪರಿಹಾರಕರ್ಮಜ ದಾರಿದ್ರ್ಯಾದಿಗಳ ಕಳೆದು ಸಂಪದವಧರ್ಮ ಆಚರಣೆ ಬುದ್ಧಿಯ ಒದಗಿಸಿದರು 6ಸುರಪುರಾದಿ ಬಹು ಸ್ಥಳದಲ್ಲಿ ಪ್ರಮುಖರುಹರಿಭಕ್ತರು ಮಂಡಲೇಶ್ವರರು ಇವರಚರಣಕೆರಗಿ ಬಹು ಅನುಕೂಲ ಕೊಂಡರುಹರಿವಾಯು ಒಲಿಮೆ ಎಷ್ಟೆಂಬೆ ದಾಸರಲಿ 7ವರಪ್ರದ ವರದಾ ತೀರದಲಿ ಸಶಿಷ್ಯಧೀರೇಂದ್ರ ಯತಿವರ್ಯರ ಕಂಡು ನಮಿಸಿಆ ರಿತ್ತಿ ಕ್ಷೇತ್ರದಲಿ ವಾಸಮಾಡಿಹರುಧೀರೇಂದ್ರ ತೀರ್ಥರ ಅನುಗ್ರಹ ಕೊಂಡು 8ಸೂರಿಕುಲ ತಿಲಕರು ಉದ್ದಾಮ ಪಂಡಿತರುಧೀರೇಂದ್ರ ಗುರುಗಳು ಕಾರುಣ್ಯಶರಧಿಊರೊಳಗೆ ಹನುಮನ ಗುಡಿ ಇಹುದು ಪಾಶ್ರ್ವದಿಇರುವ ರಸ್ತೆಯ ಮೇಲೆ ದಾಸರ ಮನೆಯು 9ಸೋದಾಪುರ ಪೋಗೆ ತ್ರಿವಿಕ್ರಮ ದೇವರಮಂದಿರದ ಧ್ವಜಸ್ತಂಭದಲ್ಲಿವಾದಿರಾಜರು ಹಂಸಾರೂಢರಾಗಿರುವವರ್ಗೆವಂದಿಸಿ ತ್ರಿವಿಕ್ರಮರಾಯಗೆ ನಮಿಸಿದರು 10ಬದರಿಯಿಂದಲಿ ಈ ಸರಥ ತ್ರಿವಿಕ್ರಮನಭೂತರಾಜರ ಕೈಯಿಂದೆತ್ತಿ ತರಿಸಿಸೋದಾಪುರದಲ್ಲಿ ಪ್ರತಿಷ್ಠೆ ಮಾಡಿಹರುವಾದಿರಾಜರು ಭಾವಿಸಮೀರ ಲಾತವ್ಯ 11ಜಗನ್ನಾಥದಾಸರು ತ್ರಿವಿಕ್ರಮಗೆ ವಂದಿಸಿಅಗಾಧ ಸುಪವಿತ್ರೆ ಧವಳಗಂಗಾಸ್ನಾನಭಕುತಿಯಿಂ ಮಾಡಿ ಶಿವಹನುಮ ಕೃಷ್ಣರಿಗೆಬಾಗಿ ಅಶ್ವತ್ಥಸ್ಥರಿಗೆ ನಮಿಸಿದರು 12ಬಯಲಲ್ಲಿ ವೃಂದಾವನಗಳಲಿ ಗುರುಗಳಿಗೆವಿನಯದಿ ವಂದಿಸಿ ಭೂತನಾಥಗೆ ಬಾಗಿಶ್ರೀವ್ಯಾಸ ದೇವನಿಗೆ ಸನ್ನಮಿಸಿ ವೇದವೇದ್ಯರಿಗು ವಾದಿರಾಜರಿಗು ನಮಿಸಿದರು 13ಚತುದ್ರ್ವಾರ ಗೃಹದಲ್ಲಿ ಪಂಚವೃಂದಾವನವುಮಧ್ಯ ವೃಂದಾವನದಿ ಶ್ರೀವಾದಿರಾಜರುವೃಂದಾವನ ಮಹಿಮೆ ಚೆನ್ನಾಗಿ ತಿಳಿಯದಕೆಭಕ್ತಿ ಶ್ರದ್ಧೆಯಲಿ ನೋಡಿ ವೃಂದಾವನಾಖ್ಯಾನ 14ಹರಿಹರ ಕ್ಷೇತ್ರವು ಮದ್ದೂರು ಅಬ್ಬೂರುಪುರುಷೋತ್ತಮ ಬ್ರಹ್ಮಣ್ಯರ ವಂದಿಸಿಶ್ರೀರಂಗನಾಥನಿಗೆ ಎರಗಿ ಮಹಿಷೂರುಗರಳುಂಡ ಈಶ್ವರನ ಕ್ಷೇತ್ರಕ್ಕೆ ಪೋದರು 15ಕೇಶವನ ಪೂಜಿಸುತ ಪರ್ವತ ಗುಹೆಯಲ್ಲಿವಾಸಮಾಡುವ ಮಹಾ ಕರುಣಾಂಬುನಿಧಿಯುದಾಸಜನಪ್ರಿಯ ಶ್ರೀ ಪುರುಷೋತ್ತಮರಂಘ್ರಿಬಿ¸ಜಯುಗಳದಿ ನಾ ಶರಣು ಶರಣಾದೆ 16ಮಹಿಷೂರು ರಾಜ್ಯದ ಸರ್ಕಾರಿನಲ್ಲಿಮಹೋನ್ನತ ಸ್ಥಾನ ವಹಿಸಿದಧಿಕಾರಿಮಹಾಪಂಡಿತರುಗಳ ಸಭೆಯನ್ನು ಕೂಡಿಸಿವಿಹಿತದಿ ದಾಸರ ಪೂಜೆ ಮಾಡಿದನು 18ನಿರ್ಭಯದಿ ದಾಸರು ಘನತತ್ವ ವಿಷಯಗಳಸಭ್ಯರಿಗೆ ತಿಳಿಯದಿದ್ದವು ಸಹ ವಿವರಿಸಿದಸೊಬಗನ್ನು ಕಂಡು ವಿಸ್ಮಿತರು ಆದರು ಆಸಭೆಯಲ್ಲಿ ಕುಳಿತಿದ್ದ ದೊಡ್ಡ ಪಂಡಿತರು 19ಭಾಗವತಧರ್ಮದ ಪದ್ಧತಿ ಅನುಸರಿಸಿಭಗವಂತನ ಭಜನೆ ಸಭ್ಯರ ಮುಂದೆಆಗ ದಾಸರ ಅಪರೋಕ್ಷದ ಮಹಿಮೆರಂಗನೇ ಸಭ್ಯರಿಗೆ ತೋರಿಸಿಹನು 20ದಾಸರು ಶಿಷ್ಯರೊಡೆ ಯಾತ್ರೆ ಮಾಡಿದ್ದುಮೈಸೂರು, ಕೊಂಗು, ಕೇರಳ, ಚೋಳ, ಪಾಂಡ್ಯದೇಶಗಳು ಎಲ್ಲೆಲ್ಲೂ ಮರ್ಯಾದೆ ಸ್ವೀಕರಿಸಿಈಶಾರ್ಪಣೆ ಸರ್ವ ವೈಭವವೆನ್ನುವರು 21ಶ್ರೀಪಾದರಾಜರ ನಮಿಸಿ ವೆಂಕಟಗಿರಿಸುಪವಿತ್ರ ಘಟಿಕಾದ್ರಿ ಶ್ರೀಕಂಚಿಉಡುಪಿಶ್ರೀಪನ ಇಂಥಾ ಕ್ಷೇತ್ರಗಳಿಗೆ ಪೋಗಿಸ್ವಪುರಕ್ಕೆ ತಿರುಗಿದರು ಪೂಜ್ಯ ದಾಸಾರ್ಯ 22ಶ್ರೀಪಾದರಾಜರು ಪವಿತ್ರ ವೃಂದಾವನದಿಶ್ರೀಪತಿ ನರಹರಿ ಶಿಂಶುಮಾರನ್ನರೂಪಗುಣ ಕ್ರಿಯಾಮಹಿಮೆ ಧ್ಯಾನಿಸುತ ಇಹರುತಿರುಪತಿಮಾರ್ಗನರಸಿಂಹ ತೀರ್ಥದಲಿ23ಪುರುಷೋತ್ತಮರ ಸುತ ಬ್ರಹ್ಮಣ್ಯರ ಕುವರಶ್ರೀಕೃಷ್ಣ ಪ್ರಿಯತರ ವ್ಯಾಸಯತಿರಾಜಸೂರಿಕುಲ ಶಿರೋರತ್ನ ಶ್ರೀಪಾದರಾಜರಲಿಭಾರಿವಿದ್ಯೆಕಲಿತು ಪ್ರಖ್ಯಾತರಾದರು24ಹರಿರೂಪ ಗುಣಕ್ರಿಯ ಮಹಿಮೆಗಳ ಚೆನ್ನಾಗಿಪರಿಪರಿ ಸುಸ್ವರ ರಾಗದಲಿ ಕೀರ್ತನೆಸಂರಚಿಸಿ ಪಂಡಿತರು ಪಾಮರರು ಸರ್ವರಿಗುವರಸಾಧು ತತ್ವ ಬೋಧಿಸಿಹರು ದಾಸರು25ವಾರಿಜಾಸನ ಪಿತನು ಪೂರ್ಣ ಪ್ರಜÕರ ಹೃತ್‍ಸ್ಥಶಿರಿ ಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 26- ಇತಿ ಸಪ್ತಮ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
199ಒಂದೆ ಮನದಲಿ ಭಜಿಸು ವಾಗ್ದೇವಿಯ |ಇಂದುಮತಿಕೊಡುವಳು ಶ್ರೀಹರಿಯ ಧ್ಯಾನದೊಳುಪಹಿಂದೆ ಪ್ರಹ್ಲಾದನು ಕಮಲಜನ ಸತಿಗೆರಗಿ |ಬಂದು ಆರಂಭಿಸಲುಹರಿವಿಶ್ವಮಯನೆಂದು ||ಬಂದವಿಪ್ಲವಕಳೆದು ಭಾವಶುದ್ಧಿಯನಿತ್ತು |ಹೊಂದಿಸಿದಳು ಶ್ರೀ ಹರಿಯ ಚರಣವನು || 1ಅಂದು ದಶಮುಖನನುಜ ವಂದಿಸದೆ ವಾಣಿಯನು |ಬಂದು ತಪವನು ಗೈಯೆ ಬಹುಕಾಲಕೆ ||ಅಂದದಿಂದ ಮೆಚ್ಚಿ ವರವಧಿಕ ಬೇಡೆನಲು |ಬಂದು ಜಿಹ್ವೆಯಲಿ ನಿದ್ರೆಯನು ಬೇಡಿಸಿದಳು 2ಅರಿತು ಭಜಿಸಲು ಬಿಡದೆ ಅಜನರಸಿಯ ನಿತ್ಯ|ಉರುತರವಾದ ವಾಕ್ ಶುದ್ಧಿಯನಿತ್ತು ||ನಿರುತ ಶ್ರೀಪುರಂದರವಿಠಲನ ಸೇವೆಯೊಳು |ಪರತತ್ತ್ವದ ಕಥಾಮೃತವನುಣಿಸಿದಳು 3
--------------
ಪುರಂದರದಾಸರು
204ಏನು ಮರುಳಾದೆಯೇ ಎಲೆ ಭಾರತೀ ಪವಾನರಕುಲದೊಳಗೆ ಶ್ರೇಷ್ಠನಾದವಗೆಅ.ಪಕಣ್ಣಿಲ್ಲದವಳ ಗರ್ಭದಲಿ ಜನಿಸಿ ಬಂದುನಿನ್ನ ತೊರೆದು ಬ್ರಹ್ಮಚಾರಿಯಾದ ||ಹೆಣ್ಣಿಗಾಗಿ ಪೋಗಿ ವನವ ಕಿತ್ತಾಡಿ |ಉಣ್ಣ ಕರೆದರೆ ಎಂಜಲೆಡೆಯನೊಯ್ದವಗೆ 1ಹುಟ್ಟಿದನು ಗುರುತಲ್ವಗಾಮಿಯಾ ವಂಶದಲಿ |ನಟ್ಟಿರುಳೊಳೊಬ್ಬ ಅಸುರಿಯಕೂಡಿದ||ಹೊಟ್ಟೆಗೆಂತಲೆ ಹೋಗಿ ಭಿಕ್ಷದನ್ನವನುಂಡು |ಅಟ್ಟ ಹಾಕುವನಾಗಿ ದಿನವ ಕಳೆದವಗೆ 2ಮಂಡೆಬೋಳಾಗಿ ಭೂಮಂಡಲವ ತಿರುಗಿದ |ಕಂಡವರು ಯಾರು ಈತನ ಗುಣಗಳ ||ಪುಂಡರೀಕಾಕ್ಷಶ್ರೀ ಪುರಂದರವಿಠಲನ |ಕೊಂಡಾಡುತಲಿ ಬೋರೆ ಮರದ ಕೆಳಗಿದ್ದವಗೆ 3
--------------
ಪುರಂದರದಾಸರು
3 ಆತ್ಮ ನಿವೇದನೆ190ಅಂಜಿಕ್ಯಾಕೆನಗಂಜಿಕೆಕಂಜನಾಭಶ್ರೀನಿವಾಸನ ದಯವಿರಲುಪ.ಅಶನವಸನವನ್ನು ಕುಳಿತಲ್ಲೆ ನಡೆಸುವನಿಶಿದಿನ ನೀಚರಾಧೀನ ಮಾಡದೆಹಸನಾಗಿ ತನ್ನಂಘ್ರಿ ನೆರಳೊಳು ಬಚ್ಚಿಟ್ಟುಕುಶಲದಿ ಸಾಕುವ ದೊರೆಯ ನಂಬಿದ ಬಳಿಕ 1ಹುಲ್ಲು ಕಚ್ಚಿ ಕಲ್ಲು ಹೊತ್ತು ಧನವನುಳ್ಳಕ್ಷುಲ್ಲ ಜೀವರನೆಲ್ಲ ಕಾಯುವ ಶಕ್ತಿಎಲ್ಲ ವ್ಯವಹಾರವ ಮಾಡುವ ಬಲ ನನಗಿಲ್ಲೆಂದು ಆಯಾಸಬಡಲೀಸದವನಿರೆ 2ಆವಾವ ಕಾಲದಿ ಆವಾವ ದೇಶದಿಸೇವೆಗೆ ನಾ ತಪ್ಪೆ ಕೃಪೆ ತಪ್ಪಿಸಭಾವಿಕರೊಡೆಯ ಪ್ರಸನ್ವೆಂಕಟಾದ್ರೀಶಸಾವು ಕಳೆದು ಜೀವಕಾಶ್ರಯನಾಗಿರೆ 3
--------------
ಪ್ರಸನ್ನವೆಂಕಟದಾಸರು
ಅಂಜಲೇತಕೆ ಮನವೆ ಅನುಗಾಲವುಕಂಜನಾಭನ ಭಕುತಿ ಕೈಕೊಂಡ ಬಳಿಕ ಪನಾರಾಯಣನೆಂಬ ನಾಲ್ಕು ಅಕ್ಷರದಿಂದಘೋರಪಾಪವನೆಲ್ಲ ಕಳೆಯಬಹುದು ||ಶ್ರೀ ರಾಮನಾಮವೆಂಬ ಸಿಂಗಾಡಿ ತಕ್ಕೊಂಡುವೈರಿಷಡ್ವರ್ಗಗಳ ವಧೆ ಮಾಡಬಹುದು 1ಶ್ರೀ ಕೇಶವನೆ ಎಂಬ ಸಿದ್ಧ ಮಂತ್ರಗಳಿಂದಕಾಕುಕರ್ಮಗಳನ್ನು ಕಳೆಯಬಹುದು ||ವೈಕುಂಠಪತಿ ಎಂಬ ವಜ್ರವನೆ ತಕ್ಕೊಂಡುನೂಕಿ ಯಮಬಂಟರನು ನುಗ್ಗು ಮಾಡಲುಬಹುದು 2ಹರಿವಾಸುದೇವನೆಂಬ ಅಮೃತಪಾನಗಳಿಂದಮರಣ ಜನನಗಳೆರಡ ಜಯಿಸಬಹುದು ||ಅರಿತರೆ ಮನದೊಳಗೆ ಪುರಂದರವಿಠಲನಸರಸ ಸದ್ಗತಿಯನ್ನು ಸವಿಗಾಣಬಹುದು 3
--------------
ಪುರಂದರದಾಸರು
ಅಂದುಂಟಿಂದಿಲ್ಲೇಮಾಧವನಿನ್ನ |ಹೊಂದಿದವರ ಭಯ ಕಳೆದು ಪೊರೆವ ದಯೆ ಪಶಂತನು ಭೂಪನರಸಿ ಬಳಲಿ |ಕಂತುಜನಕನೀ ಗತಿಯೆನಲೀ ||ಅಂತರಿಸದೆ ವಿಧವೆರಲಾಕ್ಷಣಸಂತತಿ ನೆಲಸಿದೆ ಮನ್ನಿಸುತಾ ದಯ 1ಕಲಿಯಾಳಿಕೆ ಬಹಳಾಗಿರಲು |ಮಲಿನಯುಕ್ತ ಧರೆಯಾಗಿರಲು ||ತಿಳಿದ ಹದಿನೆಂಟು ಪುರಾಣವ ವಿರಚಿಸಿ |ಸಲಹಿದೆಯುತ್ತಮ ಜೀವರನಾ ದಯೆ 2ತಿಳಿಯದೆ ನಿನ್ನೊಲುಮೆಯವಗೆಂದು |ನಳಿನಾನುಜ ನೀ ಬೇಕೆಂದು ||ಕೊಳಲರಿದರ ಕರದಿತ್ತಾರಣದೊಳು |ಗೆಲಿಸಿದೆ ತೋಂಡನ ಮುದದಿಂದಾ ದಯೆ 3ಪಾದಜಲರಸರ ಬದುಕಿಸಿತು |ಪಾದಪೆಸರೇ ಪತಿತನ ಕಾಯ್ತು ||ಪಾದದಮುಂದು ಕುಬೇರಜರೀರ್ವರ |ಪಾದವೇ ಸದ್ಗತಿಗೈದಿಸಿತಾ ದಯ 4ಆ ಸೈಂಧವನಳಿದರ್ಜುನನ |ಪೋಷಿಸಿದಂತೆ ಮೃತಾತ್ಮಜನಾ ||ಭೂಸರಗಿತ್ತಂತೀ ವಿಪ್ರರ ಪ್ರಾ |ಣೇಶ ವಿಠ್ಠಲ ರಕ್ಷಿಸಬೇಕಾ ದಯೆ 5
--------------
ಪ್ರಾಣೇಶದಾಸರು
ಅವನೆ ಜೀವಾಂಕಿತ ಪ್ರೇತ ನೋಡಿಭುವಿಗೆ ಭಾರನು ಅವನುಹರಿಹಗೆಯನುಪ.ಹರಿಕಥೆಗೆ ಬೇಸತ್ತು ಹರಟೆಯನೆ ಕೇಳುವವಹರಿಯಗುಣ ಹೊಗಳದೊಣಪಂಟ ಬಡಿವವಹರಿಮರೆದು ಮಲಭಾಂಡವನು ತುಂಬಿಕೊಳುವವಹರಿಭಟರ ನಡೆನುಡಿಗೆ ಸೈರಿಸದವ 1ಹರಿಪ್ರಿಯರ ನೆರೆಗಾರದತ್ತತ್ತ ಜಾರುವವಹರಿಯವರಿಗುಣಿಸದೆ ಧನ ಕಳೆವವಹರಿಯಾತ್ರೆಗಂಜಿ ಬಲವನೆ ಕೊಳುವವಹರಿವ್ರತವ ಬಿಟ್ಟಿತರ ವ್ರತ ಕೊಳುವವ 2ಹರಿಪದಾಂಬುಜವಜರಿದುಹಲವು ನೀರ್ಕುಡಿವವಹರಿಲಾಂಛನಿಲ್ಲದ ಚೆಲುವಿಕೆಯವಹರಿಪ್ರಸನ್ವೆಂಕಟೇಶನ ಪಾದಾಬ್ಜವ ಭಜಿಸಿಹರಿಪರದೈವವೆನ್ನದ್ಹೊಲೆಮನದವ3
--------------
ಪ್ರಸನ್ನವೆಂಕಟದಾಸರು
ಆರ ಬಾಲಕನೆ ಜಾರನಿವನಾರ ಬಾಲಕನೆ ಪ.ಗುಂಡಿಗೆ ಬೆಣ್ಣೆ ಕದ್ದುಂಡಸಿಯರ ಕುಚಪುಂಡರೀಕವಿಡಿದು ಭಂಡು ಮಾಡುತಲಿಹ 1ನಿದ್ದೆಯ ಕಾಲಕೆ ಸದ್ದಿಲ್ಲದೆ ಬಂದುಗದ್ದಮುಂಡ್ಯಾಡಪ್ಪಿ ಮುದ್ದು ನೀಡುವ ನೋಡೆ2ಅರ್ತಿಲಿ ಬಾಲನ್ನೆತ್ತಿಕೊಂಡರೇನಮ್ಮಅತ್ತೆ ಮಾವನ ಮುಂದೆ ಬತ್ತಲೆ ಮಾಡುವ 3ಬಲು ಮೋಹ ಬರುತಿರೆ ಎಳೆಯನ ಕಾಣುತಅಳುಕದೆಮ್ಮುಡಿಯೇರಿ ಕಳೆವಕಂಚುಕಇವ4ಹುಸಿಯೇ ಅಳಲು ಅವಚಿ ರಂಬಿಸಿದ ಮೇಲೆಪ್ರಸನ್ವೆಂಕಟ ಕೃಷ್ಣ ನಸುನಗು ನಗುತಾನೆ 5
--------------
ಪ್ರಸನ್ನವೆಂಕಟದಾಸರು
ಆರ ಮಕ್ಕಳಾರ ರಾಣಿ ಆರ ಸಂಪದವಾರಿಜಾಕ್ಷನಿಟ್ಟ ತೆರದಿ ಇರು ಎಲೆಲೆ ಆತ್ಮಾ ಪ.ಬೇಡಿದರೆ ಕೊಡ ದೇವ ಬೇಡದಿದ್ದರೀವ ದೇವನೋಡುತಿಹ ಸುಮ್ಮನೆ ತಾನಾಡಿಪ ಜಗವರೂಢಿಯಲ್ಲಿ ಎಳೆ ಮಕ್ಕಳಾಡುವಂತೆ ಕೊಟ್ಟು ಕಳೆದುಓಡಿಸಾಡುತಿಹ ಯಂತ್ರಾರೂಢನ ಬಳಗಿದೆಲ್ಲ 1ಕಂದನ್ನಿಟ್ಟು ತಂದೆ ತಾಯಿ ತಂದೆ ತಾಯಿ ಮುಂದೆ ಕಂದನಹಿಂದೆ ಮುಂದೊಯ್ಯುವನ್ಯಮ ಸಂಬಂಧರಿಗ್ಹೇಳಿಚಂದದಿ ಜಗಜ್ಜೀವರು ದಂದುಗದಿ ತೊಳಲೆ ಕಂಡುಮಂದಸ್ಮಿತದೊಳಿಪ್ಪ ಮುಕುಂದನ ಮಾಯವಲ್ಲದೆ 2ಹಾವು ಹಾರವಕ್ಕು ಮೃತ ಜೀವರು ಸಂಜೀವರಕ್ಕುಪಾವಕತಂಪಕ್ಕು ವಿಷ ಪೀಯೂಷಮಕ್ಕುಆವಕಾಲದಿ ಶ್ರೀ ಪ್ರಸನ್ವೆಂಕಟೇಶನಂಘ್ರಿಯಭಾವದೊಳರ್ಚಿಸು ಕ್ಷುದ್ರ ಜೀವಿಗಳಾಸೆ ಸಲ್ಲ 3
--------------
ಪ್ರಸನ್ನವೆಂಕಟದಾಸರು
ಆರಿಗೂ ಕೊಟ್ಟು ನಾನ್ಹುಟ್ಟಿಲ್ಲ ಸ್ವಾಮಿಹಾರೈಸಲೆಂತೀಯ್ವಿ ಭಕ್ತಜನ ಪ್ರೇಮಿ ಪವಸನಕಾಣದೆ ಪೋಗಿ ದೆಸೆ ಬತ್ತಲೆ ಬಂದುಬಸವಳಿದು ಬಾಯಾರಿ ದೆಸೆಗೆಟ್ಟು ಬೇಡುವರಕುಶಲಂಗಳರಿಯದೆ ಹಾಸ್ಯಗೈಯುತ ನಕ್ಕೆವಸನನಾಂ ಬಯಸಲೆಂತೊಸೆದು ನೀಂ ಕೊಡುವಿ1ಧನವಂತನಾಗಿ ನಾ ಧನವಿಲ್ಲದವರಿಗೆಶುನಕನಂದದಿ ಕೂಗುತಣಕವಾಡಿದೆನುಕನಸು ಮನಸಿನಲಿ ವಿನುತಧರ್ಮವನರಿಯೆರಿಣಕಳೆದು ಹರಿಯೆನೆ ನಿನಗೆ ಕರುಣೆಂತು 2ಮೂರುದಿನವಾಯಿತು ಘೋರಬಡುವೆನು ತುಸು ಆಹಾರ ಹಾಣದೆ ಕೃಪೆ ದಾರಿಗೆ ಬರದೆನುತಭೋರಿಟ್ಟು ಕೂಗ್ವುದ ಸಾರಿ ಕೇಳುತ ನಾನುದೂರ್ಹೋದೆ ಎನ್ನ ತಪ್ಪು ಕ್ಷಮಿಸು ಶ್ರೀರಾಮ 3
--------------
ರಾಮದಾಸರು
ಇಂದುನಾಳ್ಯೊ ಈಗಾವಾಗೊ ಈಕಾಯಸ್ಥಿರವಲ್ಲಇಂದಿರೇಶ ನಿನ್ನ ನೆನೆವ ಮತಿಯ ನೀಡೊ ಮನ್ನಿಸಿ ನೋಡೊ ಪ.ಕುಚ್ಛಿತ ಕರ್ಮವಾಚರಿಸಿ ಕಶ್ಮಲ ಜನ್ಮನುಭವಿಸಿದುಶ್ಚಿತ್ತದಿ ಬಾಳ್ದೆನಯ್ಯ ದೂರಾದೆ ನಿಮಗೆ ದಮ್ಮ್ಮಯ್ಯಅಚ್ಚುತ ನಿನ್ನಿಚ್ಛೆಯಿಂದೆ ಆದಿವರ್ಣದವನಾದೆಸ್ವಚ್ಛಿತ ಭಕ್ತಿಯನಿಲಯ ಸುಜನಬಂಧು ಸುಗುಣಸಿಂಧು 1ಹೊಟ್ಟೆಯ ಹೋರಟೆಗಾಗಿ ಹೊತ್ತಾರೆದ್ದು ತಿರುಗಿ ತಿರುಗಿಕೆಟ್ಟ ವೃತ್ತಿಯನ್ನು ಹಿಡಿದೆ ಕೀಳುಮನುಜರೊಳಾಡಿದೆಬಿಟ್ಟೆ ನಿಮ್ಮ ಪೂಜೆಯನ್ನು ಬಿದ್ದೆ ಭವಾಂಬುಧಿಯನ್ನುವಿಠ್ಠಲ ಎನ್ನುದ್ಧರಿಸೊ ವಿದ್ವದ್ಹøದ್ಯ ವೇದವೇದ್ಯ 2ವೇದಶಾಸ್ತ್ರಾಭ್ಯಾಸವಿಲ್ಲ ವೇದಜÕರರ್ಚಿಸಲಿಲ್ಲಬೋಧವನು ಕೇಳಲಿಲ್ಲ ಬುದ್ಧಿ ಎನ್ನೊಳು ಚೂರಿಲ್ಲಸಾಧನವ ತಿಳಿಯಲಿಲ್ಲ ಸಾಧುಮಾರ್ಗವ ಕಾಣಲಿಲ್ಲಭೇದಜÕರೊಳ್ ಕೂಡಿಸೆನ್ನ ಭೀಮಪಾಲಾಭಿನವಲೀಲ 3ಕಾಂತೇರ ಕುಚೇಷ್ಟೆಗಳಿಗೆ ಕೀಳುಚ್ಚಾರದ ಮಕ್ಕಳಿಗೆಭ್ರಾಂತನಾಗಿ ಸ್ನೇಹ ತೋರ್ದ ಬಲೆಯೊಳ್ ಸಿಲುಕಿದೆಸಂತರಂಘ್ರಿ ಸಖ್ಯವನೊಲ್ಲೆ ಸತ್ಕಥೆಯನಾಲಿಸಲೊಲ್ಲೆಅಂತು ಮದವನಿಳಿಸಿ ಕಾಯೊಅಂಗಜಪಿತನೆ ಅಘರಹಿತನೆ4ಬಳಲಿಸಿದೆ ತನುವನು ಬಯಸಿ ಖಳರಾರ್ಥವನ್ನುನಳಿನಾಕ್ಷ ನಿನ್ನ ಬೇಡದೆ ನಾಸ್ತಿಕರಿಗೆ ಕೈಯನೊಡ್ಡಿದೆಹೊಳೆವ ಸುರಭಿಯ ಬಿಟ್ಟು ಹುಲಿಪಾಲಿಗಾಯಾಸಬಟ್ಟೆಕಳೆದೆನನಘ್ರ್ಯಾಯುಷ್ಯವ ಕುಚೇಲಮಿತ್ರ ಕರುಣನೇತ್ರ 5ವಿಷ್ಣು ತತ್ವವರಿಯದೆ ಧೀರ ವೈಷ್ಣವನೆನಿಸದೆಭ್ರಷ್ಟಮನವ ತೊಳೆಯದೆ ಬಹಿಛ್ಛಿನ್ನದಲ್ಲೆ ಮೆರೆದೆಶಿಷ್ಯ ಗುರುಗಳ ಜರಿದೆ ಶಠರನು ಅನುಸರಿಸಿದೆದುಷ್ಟವೃತ್ತಿಯನು ಬಿಡಿಸೊ ದುರ್ಗುಣಧಾಮನ ದುರಿತಶಮನ 6ಇಂದ್ರಿಯಗ್ರಾಮ ನಿನ್ನದು ಇಷ್ಟ ಬಳಗವು ನಿನ್ನದುಸೌಂದರ್ಯ ಸುಖ ನಿನ್ನದು ಸ್ವರೂಪ ಸ್ವಾತಂತ್ರ್ಯ್ರನಿನ್ನದುಮಂದಮತಿಯಿಂದ ಅಹಂಮತಿಯಲ್ಲಿ ನೊಂದೆ ಬಹುಕುಂದನೋಡದೆನ್ನ ಸಲಹೊ ಕುಂಜರವರದ ಕುಶಲಪದದ7ನಿನ್ನ ಕಥಾಮೃತವು ಕಿವಿಗೆ ನಿನ್ನ [ಕೀರ್ತನೆ ನಾಲಗೆಗೆ]ನಿನ್ನ ಲಾವಣ್ಯವು ಕಣ್ಣಿಗೆ ನಿನ್ನ ಸೇವೆ ಸರ್ವ ಇಂದ್ರಿಯಕ್ಕೆಎನಗೆ ಬೇಗ ಕರುಣಿಸಿ ಎಲ್ಲ ದುರಿಚ್ಛೆಗಳ ನೂಕುಇನ್ನು ದಾಸದಾಸ್ಯವು ಬೇಕೊ ಋಷಿಕುಲೇಶ ಹೃಷಿಕೇಶ 8ಅಚ್ಯುತಾನಂತಗೋವಿಂದ ಆದಿಪುರುಷ ಮುಕುಂದಸಚ್ಚಿದಾನಂದಸರ್ವೇಶ ಸುಚರಿತ್ರ ಕರಿವರದನೆಚ್ಚಿದೆ ತವ ಪಾದಾಂಬುಜ ನಮೊ ಬೊಮ್ಮಾದ್ಯರ ದೇವನಿಚ್ಚಪ್ರಸನ್ವೆಂಕಟ [ನಿನ್ನ ನೆನೆವ ಮ್ಮತಿಯನೀಡೊಮನ್ನಿಸಿ ನೋಡೊ] 9
--------------
ಪ್ರಸನ್ನವೆಂಕಟದಾಸರು
ಇಂದುನೋಡಿದೆ ಹರಿಹರನ ದೈತ್ಯ |ವೃಂದಕ ಪ್ರಿಯನ ವರವ ಕೊಡುವನಾ ಪಶಾಮವರ್ಣನ ವಿಷ ಹರನ ಪೂರ್ಣ |ಕಾಮನ ಶಿವನ ಕೇಶವನ ಶಂಕರನ ||ಕಾಮಿನಿಯರ ಮೋಹಿಸಿದನ ಚಂದ್ರ |ವ್ಯೋಮನದಿಯು ಮಸ್ತಕದೊಳೊಪ್ಪುವನ 1ಕರಿಬಾಧೆಯನು ಕಳೆದವನ, ಭಸ್ಮ |ಧರನ ಪೀತಾಂಬರ ನಿಭ ಚರ್ಮಾಂಬರನ ||ಅರಿಧರನ ಶೂಲಕರನ ಲಕ್ಷ್ಮೀ |ವರನ, ಗೌರಿಪನ, ರಕ್ಷಕನ, ಶಿಕ್ಷಕನ 2ಸ್ವಾಮಿ ಪ್ರಾಣೇಶ ವಿಠ್ಠಲನ ರಾಮ |ನಾಮವೇ ತಾರಕವೆಂದು ಪೇಳುವನ ||ಶ್ರೀ ಮಧ್ವ ಮುನಿಗೊಲಿದವನ ಪಾರ್ಥ |ಪ್ರೇಮಕೆ ಮೆಚ್ಚಿ ಬಾಣವನು ಕೊಟ್ಟವನ 3
--------------
ಪ್ರಾಣೇಶದಾಸರು
ಇಂದೆ ಕಂಡೆವು ಗುರುರಾಯನ ನಮ್ಮತÀಂದೆ ಸತ್ಯಾಭಿನವತೀರ್ಥನ ಫಲಿಸಬಂದೊದಗಿತು ನಮ್ಮಸುಕೃತಆನಂದರಸಾಬ್ಧಿ ಉಕ್ಕೇರಿತು ಪ.ಇದೀಗೆ ಕಲ್ಪದ್ರುಮ ಕಾಣಿರೈ ಅಹುದಿದೀಗೆ ಚಿಂತಾಮಣಿ ನೋಡಿರೈ ಮತ್ತಿದಿದೀಗೆಸುರಭಿಬಂದಿತೆನ್ನಿರೈ ತಮ್ಮಮುದದಿಂದ ಯತಿರೂಪವಾಯಿತೈ 1ಬಡವರ ದೊರೆ ನಮ್ಮ ಗುರುರಾಯ ಈಪೊಡವಿಲಿ ಯಾಚಕರಾಶ್ರಯ ಆಪ್ತಹಡೆದ ತಾಯಿತಂದೇರ ಮರೆಸಿದ ಎಮ್ಮೊಡೆಯ ಭಕ್ತಿ ಭಾಸವ ಬೆಳೆಸಿದ 2ಭಕ್ತಿ ಪಥವ ನೋಡಿ ನಡೆವನು ಯತಿಮುಕುಟಮಣಿಗೆ ಸರಿಗಾಣೆನು ಜ್ಞಾನಸುಖದ ಬಳ್ಳಿಯ ಬೆಳೆ ಬೆಳೆಸಿದ ಸಲೆಮುಕ್ತಿ ಮಂದಿರ ವಾತ್ರ್ಯರುಹಿಸಿದಒಂದೊಂದು ಗುಣಗಳ ಮಹಿಮೆಯು ಮತ್ತೆಂದಿಗೆ ಹೊಗಳಲಿ ತೀರವುಹಿಂದಾದ ಪೂತರು ಅಹರು ಯತೀಂದ್ರನ ಸಾಮ್ಯಕೆ ಸರಿಯಾರು 4ಗುರುಭಕ್ತಿನೆಲೆಕಳೆಮರೆಯದೆ ಶ್ರೀಧರಜೆ ರಾಘವಪಾದ ಜರಿಯದೆ ದೇವವರವೇದವ್ಯಾಸನ ಸೇವೆಗೆ ಒಂದರಘಳಿಗ್ಯಲಸ ತಾನೆಂದಿಗೆ 5ಹೊನ್ನ ತೃಣದೊಲು ಸೂರ್ಯಾಡಿದ ವಿದ್ಯೋನ್ನತರ ತವರುಮನೆಯಾದಮನ್ನಿಪ ಸುಜನಚಕೋರವ ಹೊರವಪೂರ್ಣ ಚಂದಿರನಂತಲ್ಲೊಪ್ಪುವ 6ತಪ್ತಲಾಂಛನ ತೀರ್ಥವೀವಾಗಭೃತ್ಯರುಪಟಳಕೊಲಿದು ನಲಿವನಾಗಕಪಟವ ಲೇಶಮಾತ್ರರಿಯನು ಇಂಥಗುಪ್ತ ಮಹಿಮಗೆಣೆಗಾಣೆನು 7ಸಕಳ ಪುರಾಣೋಕ್ತ ದಾನವ ಬಿಡದಖಿಳ ಧರ್ಮವನೆಲ್ಲ ಮಾಡುವನಿಖಿಳತತ್ವವನೊರೆದು ಹೇಳುವ ಈಅಕಳಂಕನೆಂದೂ ನಮ್ಮನುಕಾವ8ಕಷ್ಟ ಮೌನದಿ ವಾರಣಾಸಿಯ ಬಹುಶಿಷ್ಟರ ಸಲಹುತ ಯಾತ್ರೆಯ ಮಾಡಿತುಷ್ಟಿಬಡಿಸಿದಲ್ಲಿವಾಸರಬೇಡಿದಿಷ್ಟಾರ್ಥವನೀವನು ದಾಸರ 9ಪ್ರತಿದಿನ ಗುರುಪಾದುಕೆಯನಿಟ್ಟು ಮೇಲೆನೂತನವಸನಹೊನ್ನಾರ್ಚನೆಗಿಟ್ಟು ಮುಂದೆನುತಿಸಿಹಿಗ್ಗುವ ನವಭಕುತಿಂದ ಈವ್ರತಕಾಗಲಿಲ್ಲ ಒಂದಿನಕುಂದು10ಶ್ರೀಭಾಗವತಶಾಸ್ತ್ರ ಟೀಕನುಹರಿಗಾಭರಣವ ಮಾಡಿಟ್ಟನುಈ ಭೂಮಿಲಿಹ ಶಿಷ್ಯ ಜನರನು ತತ್ವಶೋಭಿತರನು ಮಾಡಿ ಹೊರೆದನು 11ಬಲುಹಿಂದ ಯವನನ ಬಲದಲ್ಲಿ ಕೃಷ್ಣಒಳಪೊಕ್ಕು ಸದೆದ ಪರಿಯಲ್ಲಿಕಲಿನೃಪ ಮ್ಲೇಚ್ಛನ ಬಂಧನ ತಪೋಬಲದಿಂದ ಗುರುರಾಯ ಗೆಲಿದನು 12ಭಕ್ತಿವಿರತಿಜ್ಞಾನಪೂರ್ಣನು ಸೇವಕ ಜನರಿಗೆ ಪ್ರಾಣಪ್ರಿಯನುಪ್ರಕಟಿಸಿದನು ನಿಜಕೀರ್ತಿಯನಿತ್ಯಸಕಲ ಸದ್ಗುಣಗಳ ವಾರ್ತೆಯ 13ಈಪರಿಬಹು ಪಟ್ಟವಾಳುತ ದಿವ್ಯಶ್ರೀಪಾದವ್ರತ ಪೂರ್ಣ ತಾಳುತಸ್ಥಾಪಿಸಿದನು ಮಧ್ವಸಿದ್ಧಾಂತ ದುಷ್ಟಕಾಪುರುಷರ ಮೊತ್ತ ಗೆದ್ದಾತ 14ಹರಿಗುಣ ಜಿಜ್ಞಾಸೆಯಿಂದ ಶ್ರೀಹರಿಮೂರ್ತಿ ಧ್ಯಾನ ಚಿಂತನೆಯಿಂದ ಶ್ರೀಹರಿನಾಮ ಸ್ಮರಣಶ್ರವಣದಿಂದ ಶ್ರೀಹರಿಪ್ರೀತಿಬಡಿಸಿದ ನಲವಿಂದ15ನಿರುತ ಉದಯಸ್ನಾನ ಮೌನವ ಶ್ರೀಗುರುಮಧ್ವಶಾಸ್ತ್ರವ್ಯಾಖ್ಯಾನವ ಮಹಾಗೀರ್ವಾಣ ವಾಕ್ಯದಿಂದ ಪೇಳುವ ಆತ್ಮಗುರುಗಳ ಸ್ಮರಣೆಯ ಮಾಡುವ 16ಗುರುಸತ್ಯನಾಥರ ತಂದನು ನಿಜಗುರುಪದವೇ ಗತಿಯೆಂದನು ತನ್ನಸ್ಮರಣೇಲಿ ಇಹರ ಕಾವನು ಬೇಡಿದರೆ ಅಭೀಷ್ಟಾರ್ಥವನೀವನು 17ಗುರುಸತ್ಯನಾಥಾಬ್ಧಿ ಸಂಜಾತ ಸಜ್ಜನರಹೃತ್ಕುಮುದತಾಪಸಂಹರ್ತಸರಸ ಸುಧಾಂಶು ವಾಕ್ಯಾನ್ವಿತ ಸಿತಕರನಹುದಹುದಯ್ಯ ಧರೆಗೀತ 18ಆವ ಪ್ರಾಣಿಯು ಗುರುಮಹಿಮೆಯ ಸದ್ಭಾವದಿ ನೆನೆಯಲು ಸುಖಿಯಾದದೇವ ಪ್ರಸನ್ವೆಂಕಟಾದ್ರೀಶ ಅವಗಾವಗೆ ಪಾಲಿಪ ಮಧ್ವೇಶ 19
--------------
ಪ್ರಸನ್ನವೆಂಕಟದಾಸರು