ಒಟ್ಟು 4652 ಕಡೆಗಳಲ್ಲಿ , 111 ದಾಸರು , 2660 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪುರುಷರೈವರು ಕೂಡಿ ಹರುಷದಿ ಬರುತಿರೆ ಸರಸದಿ ಕೃಷ್ಣೆ ಕದವಿಕ್ಕೆ ಸರಸದಿ ಕೃಷ್ಣೆ ಕದವಿಕ್ಕೆ 1 ನಾಗವೇಣಿಯೆ ನೀನು ಸಾಗಿ ಮುಂದಕ್ಕೆ ಬಂದು ಬಾಗಿಲಿಕ್ಕಿದ ಬಗೆ ಪೇಳೆ 2 ಸರ್ಹ್ಯಾಗೆ ತೆಗೆಯಲಿ ಕದವನು ಹ್ಯಾಗೆ ತೆಗೆಯಲಿ ಕದವನು 3 ಹರದಿ ದ್ರೌಪದಿ ಕೇಳೆ ದೊರೆಯು ಧರ್ಮರು ನಾವು ತ್ವರಿತದಿ ಬಂದೆವು ತೆಗೆ ನೀನು 4 ದೊರೆಗಳಾದರೆ ರಾಜ್ಯ ಪರರಿಗೆ ಕೊಟ್ಟು ತಾ- ನಡವಿ ಯಾತಕೆ ತಿರುಗೀರಿ ಅಡವಿ ಯಾತಕೆ ತಿರುಗೀರಿ5 ಪಟ್ಟದರಸನ ಕೂಡ ಇಷ್ಟು ಮಾತುಗಳ್ಯಾಕೆ ಶ್ರೇಷ್ಠ ಭೀಮನು ನಾ ಬಂದೀನೆ ಶ್ರೇಷ್ಠ ಭೀಮನು ನಾ ಬಂದೀನೆ 6 ಶ್ರೇಷ್ಠನಾದರೆ ಕೈಯ್ಯೊಳ್ಹುಟ್ಟು ಹಿಡಿದು ರಾಜ- ಗಟ್ಟ್ಟಿ ಅಡಿಗೆ ಉಣೀಸ್ಹೋಗೋ ರಾಜ- ಗಟ್ಟಿ ಅಡಿಗೆ ಉಣೀಸ್ಹೋಗೋ 7 ಪುಂಡಕೌರವರಿಗೆ ಗಂಡನೆನಿಸುವಂಥ ಗಾಂಡೀವರ್ಜುನ ನಾ ಬಂದೀನೆ ಗಾಂಡೀವರ್ಜುನ ನಾ ಬಂದೀನೆ 8 ದುಂಡು ಹರಡಿನಿಟ್ಟು ಗೊಂಡ್ಯದ್ಹೆರಳನ್ಹಾಕಿ- ಕೊಂಡು ವಿದ್ಯವ ಕಲಿಸ್ಹೋಗೊ ಹಾಕಿ- ಕೊಂಡು ವಿದ್ಯವ ಕಲಿಸ್ಹೋಗೊ 9 ಸಕಲವಿದ್ಯೆಗಳಲ್ಲಿ ಕುಶಲ ಸಂಪನ್ನನಾದ ನಕುಲರಾಯನು ನಾ ಬಂದೀನೆ ನಕುಲರಾಯನು ನಾ ಬಂದೀನೆ 10 ಸಕಲವಿದ್ಯೆಗಳಲ್ಲಿ ಕುಶಲನಾದರೆ ತೇಜಿ ಕೆಲಸ ರಾಯರಿಗೆ ತಿಳಿಸ್ಹೋಗೊ ಕೆಲಸ ರಾಯರಿಗೆ ತಿಳಿಸ್ಹೋಗೊ 11 ಪಾವಕÀತನುಜೆ ಮಾದೇವಹಾರದವೇಣಿ ಸ(ಹ) ದೇವರಾಯನು ನಾ ಬಂದೀನೀಗ ಸ(ಹ)- ದೇವರಾಯನು ನಾ ಬಂದೀನೀಗ 12 ಗೋವ ಕಾಯುತಲಿ ಗೋಪಾಲಕನಾಗಿ ಕೊಳಲೂದಿ ಗೊಲ್ಲರೊಳಾಡಹೋಗೊ ಕೊಳಲೂದಿ ಗೊಲ್ಲರೊಳಾಡಹೋಗೊ 13 ಮಾತುಳಾಂತಕನಲ್ಲಿ ಮಾತು ಕಲಿತು ಬಂದಿ(ಲ್ಲಿ) ಸೋತೆವೆ ನಿನಗೆ ಸುಂದರಾಂಗಿ ಸೋತೆವೆ ನಿನಗೆ ಸುಂದರಾಂಗಿ 14 ಸೋತರೇನಾಯಿತು ದ್ಯೂತಪಗಡೆ ಬಿಟ್ಟು ಅ- ಜ್ಞಾತವಾಸವನೆ ಚರಿಸ್ಹೋಗೊ ಅ- ಜ್ಞಾತವಾಸವನೆ ಚರಿಸ್ಹೋಗೊ15 ತಿರುಗಿ ತಿರುಗಿ ಭಾಳ ಬಳಲಿ ಬಂದೆವೆ ನಾವು ಕರುಣವಿಲ್ಲವೆ ಕಮಲಾಕ್ಷಿ ಕರುಣವಿಲ್ಲವೆ ಕಮಲಾಕ್ಷಿ 16 ಭಾಳ ಬಳಲಿದೆವೆಂದು ಹೇಳಿಕೊಂಡರು ಕರು- ಣಾಳು ನಾನಲ್ಲ ಕರೆಯಲು ಕರು- ಣಾಳು ನಾನಲ್ಲ ಕರೆಯಲು 17 ಕಾಮನಯ್ಯನ ಕರುಣಕ್ಕೆ ಪಾತ್ರರೆ ನಾವು ಸಾಮಜಗಮನೆ ಸರಸ್ಯಾಕೆ ಸಾಮಜಗಮನೆ ಸರಸ್ಯಾಕೆ 18 ಹೇಮಮಾಣಿಕ್ಯದ ಕದವ ತೆಗೆದು ಪತಿಗಳಿಗೆ ಪ್ರೇಮದಿಂದೆರಗಿ ಕರೆದಳು ಪ್ರೇಮದಿಂದೆರಗಿ ಕರೆದಳು 19 ಆದರದಿಂದ ಕರೆಯಲರ್ಜುನ ಭೀಮ ಧರ್ಮ ಸಾದೇವ ನಕುಲ ಸಹಿತಾಗಿ ಸಾದೇವ ನಕುಲ ಸಹಿತಾಗಿ 20 ಪಂಚಪಾಂಡವರು ಬಂದು ಪರಮ ಸಂಭ್ರಮದಿಂದ ಮಂಚದ ಮ್ಯಾಲೆ ಕುಳಿತಾರೊ ಮಂಚದ ಮ್ಯಾಲೆ ಕುಳಿತಾರೊ21 ಥsÀಳಕು ಬೆಳಕಿನಿಂದ ಝಳಕು ಮಿಂಚುಗಳಂತೆ ಬಳುಕುತ ಬಾಳೆಸುಳಿಯಂತೆ ಬಳುಕುತ ಬಾಳೆಸುಳಿಯಂತೆ22 ಗಂಡರೈವರ ಮುಂದೆ ಗರುವಿಲೆ ನಿಂತಳು ದುಂಡುಮಲ್ಲಿಗೆ ಶಿರ ಬಾಗಿ 23 ಕರಕಮಲವ ಪಿಡಿದು ಕರೆದು ಸಾದೇವ ಕೃಷ್ಣೆ- ತುರುವಿಗ್ಹೂಮಾಲೆ ಮುಡಿಸಿದ ಕೃಷ್ಣೆ- ತುರುವಿಗ್ಹೂಮಾಲೆ ಮುಡಿಸಿದ 24 ಮುಖಬೆವರ್ವೊರೆಸುತ ನಕುಲರಾಯನು ಭಾಳ ಸುಖದಿ ಮುದ್ದಿಸಿದ ಮಡದಿಯ ಸುಖದಿ ಮುದ್ದಿಸಿದ ಮಡದಿಯ 25 ಅರ್ಜುನಾಗಲೆ ಮೋಹದಿಂದ ಮುಂಗುರುಳು ತಿದ್ದಿ ವಜ್ರದಾಭರಣನಿಡಿಸಿದ 26 ಭೀಮ ನಗುತ ಬಿಗಿದಪ್ಪಿ ದ್ರೌಪದಿಯ ಧರ್ಮ- ರಾಯನ ತೊಡೆಯಲ್ಲಿರಿಸಿದ ಧರ್ಮ- ರಾಯನ ತೊಡೆಯಲ್ಲಿರಿಸಿದ 27 ಧರ್ಮ ಮುತ್ತಿನ ಹಾರ ಪದಕ ಕೊರಳಿಗೆ ಹಾಕಿ ವರಮೋಹನಾಂಗಿ ಒಲಿಸಿದ ವರಮೋಹನಾಂಗಿ ಒಲಿಸಿದ 28|| ಸಿಂಧುಸುತನ ಮುಖಬಿಂಬ ಸೋಲಿಸುವಂಥ ಚಂದ್ರವದನೆ ಮುನಿಸ್ಯಾಕೆ ಚಂದ್ರವದನೆ ಮುನಿಸ್ಯಾಕೆ 29 ಮಾತಿನರಗಿಳಿಯೆ ನೀ ಜ್ಯೋತಿ ಮುತ್ತಿನ ಗೊಂಬೆ ಪ್ರೀತಿಪತಿಗಳ ನೀ ನೋಡೆ ಪ್ರೀತಿಪತಿಗಳ ನೀ ನೋಡೆ 30 ಪ್ರಾಣಪದಕವೆಂದು ತಿಳದೆವೈವರು ನಿನ್ನ
--------------
ಹರಪನಹಳ್ಳಿಭೀಮವ್ವ
ಪುಷ್ಪಧರಿಸುವ ಉತ್ಸವಗೀತೆ ಪುಷ್ಪವನ್ನುಧರಿಸುವ ಉತ್ಸವ ನೋಡುವ ಬನ್ನಿ ಭಕ್ತವತ್ಸಲನರಾಣಿ ರಂಗನಾಯಕಿಗಿಂದು ಪ. ವೈಶಾಖಮಾಸದಲಿ ಕೃಷ್ಣಪಕ್ಷದಲಿ ಲಕ್ಷ್ಮೀಗೆ ಪುಷ್ಪವನ್ನು ಧರಿಸುವ ಅರ್ತಿಯ ನೋಡುವ ಬನ್ನಿ 1 ವಿಧವಿಧದ ಪುಷ್ಪವ ಮುಡಿಸಿ[ದರು] ಮದನನಮಾತೆಯ ಶಿರಸಿಗೆ 2 ಪಂಕಜನಾಭನರಾಣಿ ಪರಮಕಲ್ಯಾಣಿ ನೀಲವೇಣಿ ಪಂಕಜಪಾಣಿ ಕೀರವಾಣಿ ಸುಶೋಣೀ 3 ಸುರರು ಅಸುರರು ಕೂಡಿ ಶರಧಿಮಥನವ ಮಾಡೆ ಭರದಿಂದ ಉದಿಸಿಬಂದ ವರಲಕ್ಷ್ಮೀದೇವಿಗಿಂದು 4 ಜಯವಿಜಯರಿಗಾಗಿ ಜನಿಸಿ ತಾ ಭೂಮಿಯಲಿ [ಗೆದ್ದ] ಇಂದು 5 ಸೃಷ್ಟಿಭಾರವನಿಳುಹಲೆಂದು ಕೃಷ್ಣಮೂರುತಿ ಜನಿಸಿ [ಒಲಿದ] ಭೀಷ್ಮಕನುದರದಿ ಬಂದ ರುಕ್ಮಿಣೀದೇವಿಗೆ ಇಂದು6 ಮಲ್ಲೆ ಮಲ್ಲಿಗೆ ವಕುಳ ಮಂದಾರ ಪಾರಿಜಾತ[ವ] ಫುಲ್ಲನಾಭನರಾಣಿಗೆ ಲೋಲಾಕ್ಷಿಯರು ಮುಡಿಸಿದರು 7 ತಾಳೆ ಚಂಪಕ ಕಮಲಮಾಲೆ ಸುರಗಿ ಜಾಜಿಯ ನೀಲವರ್ಣನರಾಣಿಗೆ ಲೋಲಾಕ್ಷಿಯರು ಮುಡಿಸಿದರು 8 ಮರುಗ ದವನ ಪಚ್ಚೆತೆನೆಯು ಸುಗಂಧರಾಜವ ಪರಮ ಸುರರು ತಂದು ಮುಡಿಸುವರು 9 ವಸಂತೋತ್ಸವಕೆಂದು ವಸುಧೀಶನರಸಿ ತಾನು ಕುಶಲದಿಂದಲೆ ಬಂ[ದಳಾವ]ಸಂತಮಂಟಪಕಿಂದು 10 ರತ್ನದ ಕೆಂಪಿನ ಕಿರೀಟವಿಟ್ಟು ತಿದ್ದಿದ ಕಸ್ತೂರಿಬಟ್ಟು ಮುತ್ತುಸುತ್ತಿದ ಮೂಗಿನಬಟ್ಟು ಹರಿದ್ರಾವಸ್ತ್ರವನುಟ್ಟು 11 ಕರ್ಪೂರದ ಚೂರ್ಣದಿ ಮಿಂದು ಭಕ್ತರಿಟ್ಟ ನೈವೇದ್ಯವನುಂಡು [ತಾ]ಪೊರಟಳು ಮಿತ್ರೆಯರ ಕೋಲಾಟವ ನೋಡುತ್ತ ತನ್ನರಮನೆಗೆ 12 ಹುಟ್ಟಿದಮನೆ ಕ್ಷೀರಾಬ್ಧಿ ಹೊಕ್ಕಮನೆ ಶ್ರೀವೈಕುಂಠವ ಬಿಟ್ಟು ಭಕ್ತರ ಸಲಹುವೆನೆಂದು ಬಂದ ವೆಂಕಟರಂಗನರಸಿಗೆ 13
--------------
ಯದುಗಿರಿಯಮ್ಮ
ಪೂಜಾನುಷ್ಠಾನವ ಯೋಚಿಸಿ ಮನದೊಳುಪೂಜೆ ಷೋಡಶಗಳ ಮಾಜದೆ ಮಾಡಿರೋ ಪ ಉಷಃ ಕಾಲದಲೆದ್ದು | ಝಷಕೇತು ಪಿತ ನಾಮಉಸುರು ತಿಪ್ಪುದೇ ಪೂಜೆಯೋ 1 ಶೌಚ ಬಾಹ್ಯವು ಮೃತ್ತು ಶೌಚ ಮಾಡಿಕೊಂಡುಶುಚಿಷತ್ತು ನಿನ ನಾಮ ಉಚ್ಚರಿಪುದೆ ಪೂಜೆಯೋ2 ತುಲಸಿ ಮೃತ್ತಿಕೆ ಹಚ್ಚಿ | ತುಲಸಿ ವಂದನೆ ಮಾಡಿಅಲಸಾದೆ ಕೃಷ್ಣನ ವಲಿಸೂವುದೇ ಪೂಜೆಯೋ 3 ಗೋವನೆ ಬಳಸುತ್ತ ಗೋಪುಚ್ಛ ಪಿಡಿಯುತ್ತಗೋವ ವಂದಿಪುದೆಲ್ಲ ಗೋಪಾಲ ನಿನ ಪೂಜೆಯೋ4 ಸ್ನಾನ ಸಂಧ್ಯಾನ ಮೇಣೂಧ್ರ್ವ ಪುಂಡ್ರವ ಧರಿಸಿಭಾನುಗಘ್ರ್ಯವ ನೀಯೆ ಶ್ರೀನಿವಾಸ ಪೂಜೆಯೋ 5 ಪಾದ ತೀರ್ಥ ಸೇವನೆ ಪೂಜೆಯೋ 6 ಅಷ್ಟ ಮಹಾಮಂತ್ರ ಶಿಷ್ಪನಾಗುತ ಹೃದಯಅಷ್ಟ ಕಮಲದಲ್ಲಿ ಧ್ಯಾನ ಮಾಳ್ಪುದೆ ಪೂಜೆಯೋ 7 ಮಂಟಪೋತ್ತಮ ಪೂಜೆ ಸುಷ್ಠು ಕಲಶ ಪೂಜೆಶ್ರೇಷ್ಠ ಪಂಚಾಮೃತ ಪೀಠ ಶಂಖ ಪೂಜೆಯೋ 8 ಘಂಟನಾದಾ ಅಖಂಡ ಶ್ರೇಷ್ಠ ದೀವಿಗೆ ಪೂಜೆಪೀಠಾವರಣ ಹೃತ್ಪೀಠ ಚಿಂತನೆ ಪೂಜೆಯೋ 9 ಮೂರ್ತಿ ಗುರುಮೂತ್ರ್ವೆಕ್ಯವೆ ಪೂಜೆಯೋ || ಚಿಂತಿಸಿ ಸ್ವಾಂತಸ್ಥ ಬಿಂಬನೋಳೈಕ್ಯವಚಿಂತಿಸುತ್ತಾನೇಕ ಗೈವ ವೈಭವ ಪೂಜೆಯೋ 11 ಹೃತ್ಪುಂಡರೀಕಗೆ ಕಲ್ಪ ತರುವನೆ ಬೇಡುತ್ತಪ್ರೀತ್ಯಾದ ಮಾನಸ ಪದಾರ್ಥಗಳ ಪೂಜೆಯೋ 12 ಪೂರ್ಣ ಶೃತಿಯ ಭಾವ ಚೆನ್ನಾಗಿ ಗ್ರಹಿಸುತ್ತಪೂರ್ಣನ ಕಳೆಯೊಂದು ಪ್ರತಿಮಾದಲ್ಲಿರಿಸೋ 13 ನಿಷುಸೀದ ಶ್ರುತಿಯಂತೆ ವಸುದೇವ ಕೃಷ್ಣನೆಅಸಮ ಪೂಜಕ ಪೂಜ್ಯ ಅವನೇವೆ ತಿಳಿಯೊ 14 ಬಾಹ್ಯದರ್ಚನೆಗಳು ಶ್ರೀ ಹಸ್ತದಿಂದಲಿವ್ಯಾಹರಣೆಂಬೋದೆ ಹರಿ ಪೂಜೆಯೋ 15 ಆವಾಹನಭಿಷೇಕ ನೈವೇದ್ಯಾದಿ ಪೂಜೆದೇವಗಾರುತಿ ಶಂಖ ಭ್ರಮಣಾದಿ ಪೂಜೆಯೋ 16 ಸರ್ವವನರ್ಪಿಸಿ ಅಸ್ವಾತಂತ್ರ್ಯವ ಗ್ರಹಿಸಿಶರ್ವಾದಿ ವಂದ್ಯ ಬಿಂಬಗೆ ಸರ್ವ ಪೂಜೆಯೋ 17 ಸರ್ವಾಪರಾಧವ ಸರ್ವೇಶನಲಿ ಪೇಳಿವೈಶ್ವ ದೇವಾದಿಗಳ್ ಸತ್ಕರ್ಮಗಳೆ ಪೂಜೆಯೋ 18 ಯತಿಗಳರ್ಚನೆಯನ್ನು ಮತಿಯಿಂದ ಗೈಯುತ್ತಸುತ ವಿಪ್ರಾದಿಯ ಸಹ ಹುತಶೇಷ ಮೆಲ್ಲೋದೆ ಪೂಜೆಯೋ 19 ಪ್ರಾಣಾಗ್ನಿ ಹೋತ್ರಾನು ಸಂಧಾನದಲಿ ಮದ್ದುಪ್ರಾಣನ ಪ್ರಾಣ ವೈಶ್ವಾನರಗೀಯೋದೆ ಪೂಜೇ 20 ಅಂತರಂಗದ ಪೂಜೆಗೊಲಿದ ಸಂತತ ಹರಿಕಂತು ಪಿತನು ಗುರು ಗೋವಿಂದ ವಿಠಲಾ 21
--------------
ಗುರುಗೋವಿಂದವಿಠಲರು
ಪೂಜಿಸುವೆನೆ ತುಳಸಿ ನಿನ್ನ ಬೇಗ ಸಲಹೆ ನೀ ಪ. ಜಾಜಿ ಮಲ್ಲಿಗೆ ಕುಸುಮದಿಂದ ಪೂಜೆಗೈಯ್ಯವೆ ಅ.ಪ. ಧ್ಯಾನ ಆವಾಹನೆಯಿಂದ ಶ್ರೀ ವರನ ಸಹ ನಾನಾ ಮಂಗಳ ದ್ರವ್ಯದಿ ನಾನು ಪೂಜಿಪೆ 1 ವೃಂದಾವನದಿ ಮೆರೆಯುವವಳೆ ಸುಂದರಾಂಗಿಯೆ ಇಂದು ಕರುಣಿಸೆ 2 ಗೋಪಾಲಕೃಷ್ಣವಿಠ್ಠಲನ ರೂಪ ತೋರೆ ನೀ ಪಾದ ತೋರಿ ಕಾಪಾಡೆ ದೇವಿ 3
--------------
ಅಂಬಾಬಾಯಿ
ಪೂತ ಚರಿತೆ ಭೂಮಿಜಾತೆ ಸೀತಾದೇವಿಯೇ ಪ ಪಾತಕಗಳ ಕಳೆದು ಯಮ್ಮನು ಪಾಲಿಸು ತಾಯೆ ಅ.ಪ ದೇವ ವೈರಿಯ ಕೈಯಲಿ ಸೇರಿ ಭೂವರ ಜನಕರಾಯಗೊಲಿದೌ ಭೂವಿವರದೊಳಿಡಲು ಮಾಯದಿ 1 ವಸುಧೆ ಸುರನಿಂದೋಲೆ ಕಳುಹಿಸಿ ಬಿಸಜಾಕ್ಷ ಕೃಷ್ಣನೊಲಿಸಿ ಕೈಪಿಡಿದೆ 2 ಶರಧಿರಾಜನ ಮಗಳೆ ಚಂದ್ರಸೋ ಗುರುರಾಮ ವಿಠಲನರ್ಧಾಂಗಿಕರುಣಿಸಮ್ಮ ಕೃಪಾ ಪಾಂಗಿ 3
--------------
ಗುರುರಾಮವಿಠಲ
ಪೂರ್ಣರೂಪನೆ ಎನ್ನ ಪೂರ್ಣ ಮನದಲಿ ನಿಂತು ಪೂರ್ಣಗೊಳಿಸಭಿಲಾಷೆಯ ಪ. ಪೂರ್ಣ ಚಂದ್ರನ ಕಾಂತಿ ಪೂರ್ಣಧಿಕ್ಕರಿಸುವೊ ಪೂರ್ಣ ಪ್ರಕಾಶ ಹರಿಯೆ | ನೀ ಪೊರೆಯೊ ದೊರೆಯೆ ಅ.ಪ. ಪೂರ್ಣಕಾಮನೆ ಸ್ವಾಮಿ ಪೂರ್ಣ ಆನಂದ ಸಂ- ಪೂರ್ಣ ಗುಣಗಣನಿಲಯನೆ ಪೂರ್ಣ ಭಕ್ತರದಾತ ಪೂರ್ಣ ಲಕ್ಷ್ಮೀಶಪ್ರೀತ ಪೂರ್ಣಭೋಧರ ವರದನೆ ಪೂರ್ಣ ಪ್ರಕಾಶ ನಿನ್ನ ಕಾಣದೆಲೆ ಕಂಗೆಡುವೆ ಪಾದ ನೀಡೋ 1 ಚಕೋರ ಪೂರ್ಣಚಂದ್ರನೆ ಭಕ್ತಿ ಪೂರ್ಣ ಶರಧಿಗೆ ಚಂದ್ರನೆ ಪೂರ್ಣ ಬಾಧೆಯಪಡುವೆ ಪೂರ್ಣಗೈಸೆನ್ನಭವ ಪೂರ್ಣಚಂದ್ರನೆ ತಾಪಕೆ ಪೂರ್ಣ ನಂಬಿರುವೆನೊ ಪೂರ್ಣದಯವನೆಗರೆಯೊ ಪೂರ್ಣ ಕೃಪೆ ಚಂದ್ರಿಕೆ ಈಗಲೇ | ಬೀರೆನ್ನ ಮೇಲೆ 2 ಪೂರ್ಣಚಂದ್ರನ ವಂಶ ಪಾವನವಗೈಯಲು ಪೂರ್ಣ ಯದುಕುಲದಿ ಜನಿಸಿ ಪೂರ್ಣ ಯುದ್ಧದಲಿ ಗೆಲಿಸಿ ಪೂರ್ಣ ರಾಜ್ಯವನಿತ್ತೆ ಪ್ರಾಣಿ ಹೃದ್ಗುಹವಾಸಿ ಪೂರ್ಣ ಶ್ರೀ ವೆಂಕಟೇಶ | ಶ್ರೀ ಶ್ರೀನಿವಾಸ 3 ಪೂರ್ಣತತ್ವಗಳಿಗೆ ಪೂರ್ಣ ಶಕ್ತಿಯನಿತ್ತು ಪೂರ್ಣಗೊಳಿಸಿದೆ ಸೃಷ್ಟಿಯ ಪೂರ್ಣತತ್ವಾಧಿಪತಿ ಪ್ರಾಣದೇವನ ಪ್ರಿಯ ಪೂರ್ಣ ಭಕ್ತರ ರಕ್ಷಕ ಪೂರ್ಣ ಮನೋರಥದಾತ ಜೀವನಂತರ ವ್ಯಾಪ್ತ ಜ್ಞಾನ ವಿಜ್ಞಾನದಾತ | ಸುಜನರಿಗೆ ಪ್ರೀತ 4 ಪೂರ್ಣ ಭೂಮಂಡಲಕೆ ಪೂರ್ಣ ಪ್ರಭು ನೀನೆಂದು ಪೂರ್ಣಬೋಧರು ನುಡಿವರೊ ಪೂರ್ಣ ದೇವತೆಗಳು ಪೂರ್ಣ ನಿನ್ನನು ಭಜಿಸಿ ಪೂರ್ಣ ಪದ ಪಡೆದಿರುವರೊ ಪೂರ್ಣ ಹರಿ ಗೋಪಾಲಕೃಷ್ಣವಿಠ್ಠಲ ಎನ್ನ ಪೂರ್ಣ ಇಚ್ಛೆಯನೆ ಸಲಿಸೊ | ನೀ ಮನದಿ ನೆಲಸೊ5
--------------
ಅಂಬಾಬಾಯಿ
ಪೂರ್ವ ಜನ್ಮದಲಿ ನಾ ಮಾಡಿದ ಕರ್ಮದಿಂಉರ್ವಿಯೊಳು ಜನಿಸಿದೆನೊ ಕೃಷ್ಣ ಪ ಕಾರುಣ್ಯನಿಧಿ ಎನ್ನ ಕಾಯಬೇಕಯ್ಯ ಹರಿವಾರಿಜನಾಭನೆ ಮುದ್ದುಕೃಷ್ಣಅ ಪುಟ್ಟಿದಂದಿನಾರಭ್ಯ ಸುಖವೆಂಬುವುದನರಿಯೆಕಷ್ಟ ಪಟ್ಟೆನು ಕೇಳೋ ಕೃಷ್ಣತೊಟ್ಟಿಲ ಶಿಶು ತಾಯ್ಗೆ ಬಾಯ್ಬಿಟ್ಟ ತೆರದಿ ಕಂ-ಗೆಟ್ಟು ಶೋಕಿಪೆನೋ ಕೃಷ್ಣಮುಟ್ಟಲಮ್ಮರು ಎನ್ನ ಬಂಧುಗಳು ಕಂಡರೆಅಟ್ಟಿ ಬಡಿವುತಲಿಹರೊ ಕೃಷ್ಣದಟ್ಟ ದಾರಿದ್ರ್ಯವನು ಪರಿಹರಿಸದಿದ್ದರೆಮುಟ್ಟುವುದು ದೂರು ನಿನಗೆ ಕೃಷ್ಣ1 ಕಾಶಿಯಾ ವಾಸವನು ಬಯಸಿ ಬಹು ದಿನದಿಂದಘಾಸಿ ಪಟ್ಟೆನು ನಾನು ಕೃಷ್ಣಈ ಶರೀರವನಾಂತು ಹೀನಾಯಗೊಂಡೆನುನೀ ಸಲಹಬೇಕಯ್ಯ ಕೃಷ್ಣಹೇಸಿಗೆಯ ಸಂಸಾರದಿ ನೀನಿಂತು ಮಾಯಾಪಾಶದೊಳು ಬಿಗಿವರೇ ಕೃಷ್ಣಘಾಸಿ ಮಾಡದೆ ಎನ್ನ ಪಾಪವನು ಪರಿಹರಿಸೊಸಾಸಿರನಾಮದ ಮುದ್ದುಕೃಷ್ಣ 2 ಲೋಕದೊಳು ಎನ್ನಂಥ ಪಾಪಿಗಳು ಉಂಟೆಂದುನೀ ಕೇಳಿ ಬಲ್ಲೆಯಾ ಕೃಷ್ಣಸಾಕೇಳು ಎನಗೊಂದು ಗತಿಯ ತೋರಿಸಿ ಸದ್ವಿವೇಕಿಯನು ಮಾಡಯ್ಯ ಕೃಷ್ಣರಾಕೇಂದು ಮುಖಿ ದ್ರೌಪದಿಯ ಮಾನವನು ಕಾಯ್ದುಆಕೆಗಕ್ಷಯವಿತ್ತೆ ಕೃಷ್ಣನಾ ಕಾಣುವಂದದಲಿ ಉಡುಪಿಯಾದಿಕೇಶವಏಕೆ ದರಶುನವೀಯೆ ಕೃಷ್ಣ 3
--------------
ಕನಕದಾಸ
ಪೆಂಡಿರಿಬ್ಬರನಾಳ್ವಗುಂಟೆ ಸುಖ ಕರುಣಿಸೈ ಪುಂಡರೀಕಾಕ್ಷ ತವ ಭಕ್ತಿವಧು ಒಬ್ಬಳನೆ ಪ ನರ ಬಾ ನೀ ಯೆಂದೆಳೆವಳಾಸೆ ಹೃದಯೇಶನಂ ಬರಸೆಳೆವಳಾ ಲಜ್ಜೆ ತನ್ನ ಕಡೆಗೆ ಹರಿಹರಿ ಡೋಲಾಯಮಾನವಾದುದು ಚಿತ್ತ ಸ್ಥಿರವ ಕರುಣಿಸು ಲಕ್ಷ್ಮಿಯರಸ ಶ್ರೀಕೃಷ್ಣಾ 1 ನಾಲಿಗೆಗೆ ದೈನ್ಯಮಂ ತಹಳಾಶೆ ಆ ಲಜ್ಜೆ ತಾಳಿಗೆಯನೊಣಗಿಸೀ ನುಡಿಯಲೀಯಳೋ ಪೇಳಲೇನುಭಯಸಂಕಟ ಸೀಗೆಯೊಳಗಿರ್ದ ಬಾಳೆಯಾದುದು ಚಿತ್ತ ಪರಿಹರಿಸು ಕೃಷ್ಣಾ 2 ಆಶೆಯಾ ಸವತಿಯಂ ಕೆಡಿಸಬಗೆವಳು ಲಜ್ಜೆ ಆ ಸವತಿಯಂ ಕೆಡಿಸಬಗೆವಳೆಂತೊ ಗಾಸಿಯಾದುದು ಚಿತ್ತವಿಬ್ಬರಿಂ ವೈಕುಂಠ ಕೇಶವಾ ಮನದ ಸಂಸಾರವಂ ಬಿಡಿಸಯ್ಯ 3
--------------
ಬೇಲೂರು ವೈಕುಂಠದಾಸರು
ಪೊರೆ ದೊರೆಯೆ ಪ. ನಿನ್ನ ಮಾಯ ಅ.ಪ. ಎಷ್ಟು ಛಲವೋ ಎನ್ನಿಂದಲಿ ಸೇವೆಯನು ಕೈಕೊಳ್ಳು ಇನ್ನು ಶ್ರೇಷ್ಠರಾದ ಶ್ರೀ ಗುರುಗಳ ಆಜ್ಞೆಯಲಿ ಬಂಧಿಸಿ ಎನ್ನಿಲ್ಲಿ ಮಹ ಮಹಿಮನೊ ನೀನು ಗುಟ್ಟು ಪೇಳಲು ಎನ್ನಿಂದಲಿ ಅಳವೇ ನಿತ್ಯದಿ ನಿನ್ನ ನೆನವೆ 1 ನಾನಾ ರೂಪ ಧ್ಯಾನದಲಿ ಬಂದ್ಯೊ ಎನ್ನಲಿ ನಿಂದ್ಯೊ ಮಾನವ ಜನ್ಮ ಸಾರ್ಥಕವೆನಿಸಿದ್ಯೊ ಶ್ರೀ ಗುರುದಯ ನೀಡ್ದ್ಯೊ ನಿನ್ನ ಪಾದದಲಿ ಮಮತೆ ಸಾನುರಾಗದಿ ಕೊಟ್ಟು ಎನ್ನ ಸಲಹೊ ಬಿಡೆನು ನಿನ್ನೆಲವೊ 2 ಮಚ್ಛಕೂರ್ಮ ಹರಿ ಸ್ವಚ್ಛ ವರಹರೂಪ ನರಹರಿ ಪ್ರತಾಪ ಸ್ವಚ್ಛಮನದಲಿಹ ಬಲಿಯನೆ ಬಂಧಿಸಿದ್ಯೊ ರಾಜರ ಮರ್ಧಿಸಿದ್ಯೊ ಅಚ್ಚ ಜೀವೋತ್ತಮಗಜನ ಪದವನಿತ್ಯೊ ಗೋಪಿಗೆ ಮುದವಿತ್ಯೊ ಬಿಚ್ಚಿ ವಸನವ ಹಯವನೇರಿದ್ಯಲ್ಲಾ ಗೋಪಾಲಕೃಷ್ಣವಿಠಲಾ 3
--------------
ಅಂಬಾಬಾಯಿ
ಪೊರೆಯದಿರುವರೇ _ ಶ್ರೀ ರಮಣಾ ಪ ದುರಿತಗಜಕೆ ನೀ ಪಂಚಾನನಾ ಅ.ಪ. ಸಿರಿಯ ಮದದಿ ನಾನರಿಯದೆ ಪೋದರೆ ಗರುಡಗಮನ ನೀ ಮರೆತುಬಿಡುವರೇ ಕರುಣಶರಧಿ ಸರಿ ಬಿರುದು ಪೊಳ್ಳಾಗದೇ ಚರಣಪಿಡಿವೆ ಪೊರೆ ಮರುತನೊಡೆಯ ಹರಿ1 ಪಾತಕಿ ಎಂಬುವ ನೀತಿಯನುಡಿದೊಡೆ ಪೂತರಮಾಡುವ ಖ್ಯಾತಿಯ ಬಿಡುವೆಯ ನಾಥನೆ ನಂಬಿದೆ ಕಾತರ ಪಡುತಿಹೆ ಪ್ರೀತಿಲಿ ಕಾಣಿಸು ಆರ್ತಿವಿದೂರ 2 ನಡಿಯುವ ಚರಣವು ಎಡುವುದು ಸಹಜವೆ ಮೃಡ ಭೃಗು ಭೀಷ್ಮರು ದುಡುಕಲಿಲ್ಲೆ ದೊರೆ ಮಿಡಕಿ ನಡುಗುತಿಹೆ ನಡೆವುದು ಜಗಬಿಡೆ ಕಡಲಶಯನ ಪಿಡಿ ಬಿಡದೆ ಕೊಡುತ ರತಿ 3 ಸಿರಿವಿಧಿ ಶಿವನುತ ಸ್ವರತ ಸ್ವತಂತ್ರನೆ ಶರಣರ ಪೊರೆಯುವ ವರಗುಣ ಭೂಷಣ ಅರಿಯೆನುಪಾಯವ ಶರಣುಶರಣೈಯ ಪರಮಪುರುಷ ಭಗಸರಸದಿ ನಲಿನಲಿ 4 ಸಾಕುವ ಬಿಂಬನೆ ನೂಕಿದೆ ಯಾತಕೆ ಹಾಕುತ ಮಂಕನು ಏಕಾಯತನ ನಾಕರೊಡೆಯ ಭವನೂಕುತ ಬೇಗನೆ ಸ್ವೀಕರಿಸೆನ್ನನು ಶ್ರೀ ಕೃಷ್ಣವಿಠಲಾ 5
--------------
ಕೃಷ್ಣವಿಠಲದಾಸರು
ಪೋಗದಿರೊ ಗೋಪಿಯರ ಮನೆಗೆ ಬಾ ಬೇಗ ಶ್ರೀ ಕೃಷ್ಣನೆ ನಮ್ಮ ಮನೆಗೆ ಪ. ಜಾಗು ಮಾಡದೆ ಹಿಡಿವರೊ ಕೇಳ್ ಮುನ್ನ ಭೋಗಿಸಿ ನಿನ್ನ ಸೆಳೆವರೊ ಮುನ್ನ 1 ಜಾರ ಚೋರನೆಂದು ಬಹುವಿಧದಿಂದ ನಾರಿಯರೆಲ್ಲ ದೂರುತಲಿಹರು ಮುನ್ನ ಸಾರಸಾಕ್ಷ ಕೃಷ್ಣ ಬಾರೆಲೊ ಮುನ್ನ ಸಾರಿ ಪೋಗಬೇಡವೊ ಏ ಚಿನ್ನ 2 ಹದ್ದಿಲ್ಲದ ಗೋಪೇರ ಗೊಡವ್ಯಾಕೊ ಸುದ್ದಿಯ ತರುವರೊ ನಿನ ಮೇಲೀಗದೂರಿ ಸದ್ದು ಮಾಡದೆ ಬಾ ಮುದ್ದು ಶ್ರೀ ಶ್ರೀನಿವಾಸ 3
--------------
ಸರಸ್ವತಿ ಬಾಯಿ
ಪೋಗುವೆನೆ ರಂಗ ಪೋಗುವೆನೆ ಕೃಷ್ಣ ಈಗ ಕರೆ ಬಂದಿದೆ ಮಧುರಾ ಪುರಕ್ಕೆ ಪ. ಮದಿಸಿದ ಕಂಸನು ಚದುರ ಅಕ್ರೂರನ ಮುದದಿ ಕಳಿಸಿದ ಮಧುರ ವೇಣಿಯೆ ಕೇಳೆ 1 ಬಿಲ್ಲು ಹಬ್ಬವಂತೆ ಮಲ್ಲರ ಗೆಲ್ಲಬೇಕಂತೆ ಸಖಿ ಪುಲ್ಲಲೋಚನ ಕೃಷ್ಣಾ ಇಲ್ಲಿ ನÀಮ್ಮನು ಬಿಟ್ಟು 2 ಕಂಗೊಳಿಸುವ ಬೆಳದಿಂಗಳ ಸೊಗವಿಲಿ ಪೊಂಗೊಳಲೂದೆಮ್ಮಂಗಕೆÉ ಹರುಷವಿತ್ತ3 ನಲಿವಿಲಿ ಮೀಸಲು ಬೆಣ್ಣೆಯನಿಡಲು ನಿಲುಕಿತ ಮೆದ್ದೆಮ್ಮ ಒಲವಿತ್ತುದ್ದರಿಸಿದ 4 ಗೋಕುಲವೇತಕೆ ಆ ಕಮಲಾಕ್ಷನಾ ಕಟಾಕ್ಷವಿಲ್ಲದೀಪರಿ ಸಹಿಪುದೆ 5 ಯಮುನೆಯ ತೀರದೊಳ್ ಎಮ್ಮಯ ವಸ್ತ್ರವ ಕ್ಷಮೆಯಿಂದಿತ್ತ ಕಮಲನಯನ ಕೃಷ್ಣ 6 ರಥಬಂದಿದೆ ನೋಡೆ ಅತುಳ ಮಹಿಮಗೆಂದು ಜತೆಯೊಳು ಬಲರಾಮ ಹಿತದಿ ಅಕ್ರೂರ ಸಹ 7 ಬಿಟ್ಟಿರಲಾರೆವೆ ಪುಟ್ಟ ಕೃಷ್ಣನ ಪಾದ ದಿಟ್ಟ ಶ್ರೀ ಶ್ರೀನಿವಾಸಗಿಷ್ಟವಂತೆ ಕೇಳೆ 8 ಭಕ್ತವತ್ಸಲನೆಮ್ಮ ಭರ್ತನೊಳನುರಾಗವಿತ್ತು ಬಾಳಿರೆಂದು ಇತ್ತು ವಚನವನ್ನು 9
--------------
ಸರಸ್ವತಿ ಬಾಯಿ
ಪೋದರಯ್ಯ ತೆರಳಿ ಪೋದರು | ಸಾಧುನರಸಿಂಹಾರ್ಯರು ಮಾಧವನ ಮಂದಿರಕೆ ಪ ಶ್ರೀಕರ ಕೃಷ್ಣಾತಟದಿ ಐಕೂರು ಗ್ರಾಮದಿ ನೆಲೆಸಿ | ಏಕೋ ಭಾವದಿಂ ಸದಾ ಶ್ರೀಕಾಂತನ್ನ ಧ್ಯಾನಂಗತರು 1 ಭಾಗವತ ಸಾರೋದ್ಧಾರ ಸತ್‍ಶಿಷ್ಯರಿಗೆ ಸಾರುತ ಸದ್ಭಕ್ತಿಜ್ಞಾನ | ವೈರಾಗ್ಯಮಾರ್ಗವ ತೋರಿ 2 ಮಧ್ವಮತದಿ ಸಿದ್ಧಾಂತ ಪದ್ಧತಿಯನುಸರಿಸಿ | ಸದ್ಧರ್ಮದಿ ನಡೆಸುವ ಪ್ರಸಿದ್ಧ ವಿದ್ವಾಂಸರು 3 ವ್ಯಾಸದಾಸಕೂಟ ಮರ್ಮಲೇಸಾಗಿ ಸಜ್ಜನ ತತಿಗೆ ಬ್ಯಾಸರಿಲ್ಲದಲೆ ಪ್ರತಿವಾಸರುಪದೇಶಿಸುವರು 4 ನಿತ್ಯಗೈವ ಕೃತ್ಯಂಗಳು | ತತ್ವೇಶ್ವರ ದ್ವಾರಾ ಹರಿಗೆ ಚಿತ್ತಪೂರ್ವಕರ್ಪಿಸುವ ಸೋತ್ತುಮರೋತ್ತುಮರು ಲೋಕಕೆ 5 ಅಂತರಂಗದಲ್ಲಿ ಲಯದ ಚಿಂತನೆಯಗೈದು ಮುಕ್ತಿ ಪಂಥವನ್ನೆ ಪಿಡಿದು | ಜ್ಞಾನ ಸಂತತಿಯ ಜಗದಿ ನೆಲೆಸಿ 6 ಯಾವ ಸಂಶಯವ್ಯಾಕೆ ಕೋವಿದವರ್ಯರಾದ | ಭಾವಜ್ಷರ ಮುಖದಿಂದ ದೇವಾಂಶರೆನಿಸಿಕೊಂಡವರು 7 ವ್ಯಯ ಸಂವತ್ಸರಂತ್ಯಮಾಸ | ದ್ವಯತಿಥಿ ಸಿತವರ್ಷ ಹಯಸಪ್ರಸುತನ ವಾರದಿ ತ್ರಯ ಝಾವ ರಜನಿಯಲ್ಲಿ 8 ಆಸನಸ್ಥರರಾಗಿ ನಾಸಿಕಾಗ್ರದಲಿಟ್ಟು ಶ್ವಾಸಮಂತ್ರ ಜ ಪಿಸಿ ಬಿಂಬೋಪಾಸನಗೈವ ಬುಧರು 9 ಸಾಗರಶಯನನ ಧ್ಯಾನ ಯೋಗ ಬಲದಿ ತಿಳಿದು ಭುವಿ ಭೋಗ ತೀರಿತೆಂದು ಕೊಯಿಲು ತಾಗಿದ್ದೊಂದೆ ನೆವನದಿಂದ 10 ಆಶೆಕ್ರೋಧಂಗಳನಳಿದು | ಕ್ಲೇಶಮೋದ ಸಮ ತಿಳಿದು | ಭೂಸುರ ವೃಂದಕೆ ಸುಗ್ರಾಸವಿತ್ತು ತೋಷಿಸುವರು 11 ಹರಿಯಪುರಕೆ ಪೋಪ ಸಮಯ ಹರಿಸು ಬಂದು ಕೃಪ್ಣೆ ಇವರ ಚರಿಯ ನರೆÉದ ಜನಕೆ ತೋರಿ 12 ಸ್ವಾಮಿಶಾಮಸುಂದರನ | ನಾಮದ ಸನ್ಮಹಿಮ ಸತತ | ಪಾಮರ ಜನಕೆ ಪೇಳಿ ಪ್ರೇಮದಿಂ ಸಲಹಿದವರು 13
--------------
ಶಾಮಸುಂದರ ವಿಠಲ
ಪ್ರಸನ್ನ ರಾಮಾಯಣ ಸುಂದರಕಾಂಡ ಜಯ ಜಯ ಜಯ ರಾಮಚಂದ್ರ ಜಯ ರಾಮಭದ್ರ ಸರ್ವೇಶ ಜಯ ಜಯ ಜಯ ರಾಮ ಸ್ವರತ ಆಹ ಜಯ ಸೀತಾರಮಣ ನೀ ಭಯಬಂಧ ಮೋಚಕ ಜಲ ಸಂಭವಮುಖ ಸುರಸೇವ್ಯ ನಮೋ ನಮೋ ಪ ಶಾಶ್ವತ ಸುಗುಣಾಬ್ಧಿ ರಾಮ ಸವೇಶ್ವರನೆ ಬಲವೀರ್ಯ ಸಂಪೂರ್ಣಾರ್ಣವ ನಿನ್ನ ನಮಿಸಿ ಆಹ ಶೀಘ್ರ ಆ ಗಿರಿಯೆತ್ತಿ ಹನುಮ ಹಾರಲು ಆಗ ಸಾಗರ ಸರ್ವವು ಕಲಕಿ ಓಡಿತು ಕೂಡ 1 ಹಿಂದೆ ಪರ್ವತಗಳ ಪಕ್ಷ ಹನನ ಕಾಲದಿ ವಾಯು ತನ್ನ ಹಿತದಿ ರಕ್ಷಿಸಿದನು ಎಂದು ಆಹ ಹಿಮಗಿರಿಸುತ ಮೈನಾಕನು ಮೇಲೆ ಬಂದಾಗ ಹನುಮಗೆ ನಮಿಸಿ ವಿಶ್ರಮಿಸಿಕೊಳ್ಳೆಂದ2 ಶ್ರಮರಹಿತನು ಎಂದೂ ಹನುಮ ಶ್ರಮ ನಿವಾರಣ ಅನಪೇಕ್ಷ ಆಶ್ಲೇಷಿಸಿ ನಗವರನ ಆಹ ನಿಸ್ಸೀಮ ಪೌರುಷ ಬಲಯುತ ಹನುಮನು ನಿಲ್ಲದೆ ಮುಂದೆ ತಾ ಸುರಸೆಯೊಳ್ ಹೊಕ್ ಹೊರಟ 3 ಪರೀಕ್ಷಿಸೆ ಸುರಸೆಯ ಸುರರು ಪ್ರೇರಿಸಿ ವರವನ್ನು ಕೊಡಲು ಆಹ ಫಣಿಗಳ ತಾಯಿ ಅವಳು ಬಾಯಿ ತೆರೆಯಲು ಪೊಕ್ಕು ಲೀಲೆಯಿಂ ಹನುಮ ಹೊರಹೊರಟ4 ಸುರರು ಆನಂದದಿ ಆಗ ಸ್ತುತಿಸಿ ಹನುಮನ ಕೊಂಡಾಡಿ ಸುರಿಯಲು ಪುಷ್ಪದ ಮಳೆಯ ಆಹ ಶೀಘ್ರ ಪವನಜನು ಮುಂದೆ ತಾ ಹೋಗುತ್ತ ಸಿಂಹಿಕಾ ರಾಕ್ಷಸಿ ಛಾಯಾಗ್ರಹವ ಕಂಡ 5 ಸರಸಿಜಾಸನ ವರಬಲದಿ ಸಿಂಹಿಕಾ ಲಂಕಾ ಪೋಗುವರ ಸೆಳೆದು ತಾ ನಿಗ್ರಹಿಸುವಳು ಆಹ ಸೆಳೆಯೆ ಆ ರಾಕ್ಷಸಿ ಹನುಮನ ಛಾಯೆಯ ಸೀಳಿದ ಹನುಮ ಅವಳ ಶರೀರದಿ ಪೊಕ್ಕು 6 ತನ್ನ ನಿಸ್ಸೀಮ ಬಲವನು ತೋರಿಸಿ ಈ ರೀತಿ ಹನುಮ ಧುಮುಕಿದ ಲಂಬ ಪರ್ವತದಿ ಆಹ ತೋರ್ಪುದು ಲಂಕಾ ಪ್ರಕಾರದೊಲï ಈ ಗಿರಿ ತನ್ನ ರೂಪವ ಸಣ್ಣ ಹನುಮ ಮಾಡಿದನಾಗ 7 ಆಗಿ ಬಿಡಾಲದೊಲ್ ಸಣ್ಣ ಅಸಿತ ಕಾಲದಿ ಪೋಗೆ ಪುರಿಗೆ ಅಲ್ಲಿದ್ದ ಲಂಕಿಣಿ ತಡೆಯೆ ಆಹ ಅವಳ ಹನುಮ ಮುಷ್ಟಿಯಿಂದ ಕುಟ್ಟಿ ಜಯಿಸಿ ಅನುಮತಿಯಿಂದಲ್ಲೆ ಲಂಕೆಯೊಳ್ ಪೋದ 8 ಶ್ರೀಘ್ರ ಅಶೋಕ ವನದಲಿ ಶಿಂಶುಪಾವೃಕ್ಷ ಮೂಲದಲಿ ಸೀತಾ ಅಕೃತಿಯನು ಕಂಡ ಆಹ ಸೀತೆಗೆ ಏನೇನು ಭೂಷಣ ಉಂಟೋ ಸೀತಾ ಆಕೃತಿಗೂ ಸಹ ಅದರವೊಲಿತ್ತು 9 ಅವನಿಯೋಳು ನಿನ್ನ ವಿಡಂಬ ಅರಿತು ಅನುಸರಿಸಿ ಹನುಮ ಅದರಂತೆ ಪರಿಪಂಥಾವಳಿಗೆ ಆಹ ಅವಶ್ಯ ಮಾತುಗಳಾಡಿ ಅಂಗುಲೀಯಕವೀಯೆ ಚೂಡಾಮಣಿ ನಿನಗೆಂದು ಕೊಟ್ಟಳು 10 ಅರಿಯರು ರಾಕ್ಷಸರಿದನು ಅಮರರು ಕಲಿಮುಖರೆಲ್ಲ ಅವಲೋಕಿಸಿದರು ಈ ಕಾರ್ಯ ಆಹ ಅಮರರು ಲೋಕವಿಡಂಬವಿದೆಂದರಿಯೆ ಅಧಮ ಕಲ್ಯಾದಿಗಳ್ ಮೋಹಿತರಾದರು 11 ಕೃತಕೃತ್ಯವಾಗಿ ತಾ ಹನುಮ ಕೋವಿದೋತ್ತಮ ಬಲವಂತ ಕಾಣಿಸಿಕೊಳ್ಳುವ ಮನದಿ ಕಿಂಚಿತ್ತೂ ಭಯವೇನೂ ಇಲ್ಲದೆ ವನವನು ಕಡಿದು ಧ್ವಂಸವ ಗೈದ ಆ ಶಿಂಶುಪವ ಬಿಟ್ಟು 12 ಕುಜನ ರಾಕ್ಷಸರನು ಕೊಲ್ಲೆ ಕೂಗಿ ಆರ್ಭಟಮಾಡೆ ಹನುಮ ಕೇಳಿ ಚೇಷ್ಟೆಗಳ ರಾವಣನು ಆಹ ಕಪ್ಪು ಕಂಠನ ವರ ಆಯುಧಯುತರು ಕೋಟಿ ಎಂಬತ್ತರ ಮೇಲ್ ಭೃತ್ಯರ ಕಳುಹಿದ 13 ಆರ್ಭಟದಿಂದ ಘೋಷಿಸುತ ಅವರು ಆವರಿಸಿ ಹನುಮನ ಆಯುಧಗಳ ಪ್ರಯೋಗಿಸಲು ಆಹ ಪವನಜ ಮುಷ್ಟಿಪ್ರಹರದಿ ಆ ವೀರರೆಲ್ಲರ ಹಿಟ್ಟು ಮಾಡಿದ ಬೇಗ 14 ಕಡುಕೋಪದಿಂದ ರಾವಣನು ಕಳುಹಿದನು ಏಳು ಮಂತ್ರಿ ಕುವರರ ವರ ಬಲಯುತರ ಆಹ ಖಳರು ಈ ಏಳ್ವರ ಮೆಟ್ಟಿ ಷಿಷ್ಟವ ಮಾಡೆ ಕುಮತಿ ರಾಕ್ಷಸ ಸೈನ್ಯ ತೃತೀಯ ಭಾಗವು ಹೋಯ್ತು 15 ಅನುಪಮ ಬಲಕಾರ್ಯಕೇಳಿ ಅಧಮ ರಾವಣ ತನ್ನ ಸುತನ ಅಕ್ಷನ ಕಳುಹಲು ಹನುಮ ಆಹ ಅಕ್ಷನ ಚಕ್ರಾಕಾರದಿ ಎತ್ತಿ ಸುತ್ತಾಡಿ ಅವನ ಅಪ್ಪಳಿಸಿ ನೆಲದಿ ಚೂರ್ಣ ಮಾಡಿದ 16 ಅತಿ ದುಃಖದಿಂದ ರಾವಣನು ಅಕ್ಷನಗ್ರಜ ಇಂದ್ರಜಿತನ ಒಡಂಪಟ್ಟ ಸ್ವೇಚ್ಛದಿ ಹನುಮ ಬ್ರಹ್ಮಾಸ್ತ್ರಕೆ 17 ರಾವಣನಲಿ ಕೊಂಡು ಪೋಗೆ ರಾವಣ ಪ್ರಶ್ನೆಯ ಮಾಡೆ ರಾಮಗೆ ನಮಿಸಿ ಹನುಮನು ಆಹ ರಘುವರ ರಾಮ ದುರಂತ ವಿಕ್ರಮ ಹರಿ ರಾಕ್ಷಸಾಂತಕ ದೂತ ಮಾರುತಿ ತಾನೆಂದ 18 ರಘುವರ ಪ್ರಿಯೆಯನು ಬೇಗ ರಾಮಗರ್ಪಿಸಲೊಲ್ಲೆ ಎನ್ನೆ ಹನುಮ ಪ್ರಕೋಪದಿ ಅವನ ಆಹ ರಾಜ್ಯ ಮಿತ್ರ ಬಂಧು ಸರ್ವನಾಶ ರಾಘವ ಮಾಡುವನೆಂದು ಪೇಳಿದನು 19 ಅಜ ಶಿವ ಮೊದಲಾದ ಸರ್ವ ಅಮರೇಶ್ವರರು ತಾವು ತಡೆಯ ಆಶಕ್ತರು ರಾಮಬಾಣವನು ಆಹ ಅಂಥ ಬಾಣವ ಅಲ್ಪಶಕ್ತ ರಾವಣ ತಾಳೆ ಅಸಮರ್ಥನೆಂದ ಪ್ರಭಂಜನ ಸುತನು 20 ಪ್ರಭಂಜನ 1 ಸುತ ಮಾತು ಕೇಳಿ ಪ್ರಕುಪಿತನಾಗಿ ರಾವಣನು ಪ್ರಯತ್ನಿಸೆ ಹನುಮನ ಕೊಲ್ಲೆ ಆಹ ಪ್ರಕೃಷ್ಟ ಮನದಿ ವಿಭೀಷಣ ಬುದ್ಧಿ ಪೇಳಲು ಪುಚ್ಛಕ್ಕೆ ಬೆಂಕಿ ಹಚ್ಚೆಂದ ರಾಕ್ಷಸರಾಜ21 ಆತಿಭಾರ ವಸ್ತ್ರ ಕಟ್ಟುಗಳಿಂ ಅಧಮರು ಸುತ್ತಿ ಬಾಲವನು ಅಗ್ನಿಯ ತೀವ್ರದಿ ಹಚ್ಚೆ ಆಹ ಅಗ್ನಿಯ ಪರಸಖ ವಾಯು ಆದುದರಿಂದ ಅಂಜನಾಸುತ ನಿರಾಮಯನ ಸುಡಲೇ ಇಲ್ಲ 22 ಅಧಮ ರಾಕ್ಷಸರ ಚೇಷ್ಟೆಗಳ ಅಸಮ ಬಲಾಢ್ಯನು ಹನುಮ ಅನುಭವಿಸಿ ಕುತೂಹಲದಿ ಆಹ ಅಲ್ಲಲ್ಲಿ ಹಾರಿ ಆ ಲಂಕಾಪುರಿಯ ಸುಟ್ಟು ಅತಿ ಮುದದಲಿ ಗರ್ಜಿಸಿದ ರಾಮದೂತ 23 ಅಧಮ ಸಪುತ್ರ ರಾವಣನ ಅಲ್ಪ ತೃಣೋಪಮ ಮಾಡಿ ಅವರೆದುರಿಗೆ ಪುರಿ ಸುಟ್ಟು ಆಹ ಅಬ್ಧಿಯ ದಾಟೆ ವಾನರರು ಪ್ರಪೂಜಿಸೆ ಉತ್ತಮ ಮಧುವುಂಡು ಪ್ರಭುವೇ ನಿನ್ನಲಿ ಬಂದ 24 ಸಮಸ್ತ ವಾನರ ವರರೊಡನೆ ಸಮರ್ಥ ಹನುಮ ಧೀರ ಬಂದು ಶುಭಸೂಚಕ ಚೂಡಾಮಣಿಯ ಆಹ ಶ್ರೀಶ ನಿನ್ನಯ ಪಾದದ್ವಂದ್ವದಿ ಇಟ್ಟು ತಾ ಸನ್ನಮಿಸಿದ ಭಕ್ತಿಭರಿತ ಸವಾರ್ಂಗದಿ 25 ಭಕ್ತಿ ಸವೈರಾಗ್ಯ ಜ್ಞಾನ ಪ್ರಜ್ಞಾ ಮೇಧಾ ಧೃತಿ ಸ್ಥಿತಿಯು ಪ್ರಾಣ ಯೋಗ ಬಲ ಇಂಥಾ ಆಹ ತುಂಬಿ ಇರುವುವು ಈ ಪ್ರಭಂಜನ ವಾಯು ಹನುಮನಲಿ ಸರ್ವದಾ 26 ಸರ್ವೇಶ ರಾಮ ಅಗಾಧ ಸದ್ಗುಣಾರ್ಣವ ನೀ ಹನುಮನ ಸಂಪೂರ್ಣ ಭಕ್ತಿಗೆ ಮೆಚ್ಚಿ ಆಹ ಸಮ ಯಾವುದೂ ಇಲ್ಲದೆ ನಿನ್ನನ್ನೇ ನೀ ಕೊಟ್ಟೆ ಸುಪ್ರಮೋದದಿ ಹನುಮನ ಆಲಿಂಗನ ಮಾಡಿ27 ನೀ ನಿಂತು ನುಡಿಸಿದೀ ನುಡಿಯು ನಿನ್ನಡಿಗಳಿಗೆ ಅರ್ಪಣೆಯು ನಮ್ಯ ಮಾರುತಿ ಮನೋಗತನೆ ಆಹ ನೀರಜಾಸನ ತಾತ ಪ್ರಸನ್ನ ಶ್ರೀನಿವಾಸ ನಿನಗೆ ಪ್ರೀತಿಯಾಗಲೊ ಸುಹೃದ ಸಂತೃಪ್ತ 28
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಸನ್ನ ಶ್ರೀ ಕಲ್ಕಿ ಅಮಿತ ವಿಕ್ರಮ ಕಲ್ಕಿ ಅನಘ ಲಕ್ಷ್ಮೀರಮಣ ಶರಣು ಮಾಂ ಪಾಹಿ ಕೃಷ್ಣ ನರಹರಿ ಕಪಿಲ ತಿಲಕ ವೇಂಕಟರಮಣ ಪ್ರಾಣ ಹೃದ್‍ವನಜಸ್ಥ ರಕ್ಷಮಾಂ ಸತತ ಪ ಶ್ರೀ ದುರ್ಗಾಭೂರಮಣ ವಿಷ್ಣು ರುದ್ರ ಬ್ರಹ್ಮ ಮಾಯಾ ಜಯಾ ಕೃತಿ ಕೂರ್ಮ 1 ಧನ್ವಂತರಿ ಶರಣು ಅಜಿತ ಸ್ತ್ರೀರೂಪನೇ ಘನಭೂಮಿಧರ ನಾರಸಿಂಹ ವಾಮನ ತ್ರಿಪದ ರೇಣುಕಾತ್ಮಜರಾಮ ವೇಣುಗೋಪಾಲ ನಮೋ ಬುದ್ಧ ಸುಜನಪ್ರಿಯ ಕಲ್ಕಿ 2 ವೃಷಭ ತಾಪಸ ಯಜ್ಞ ದತ್ತ ವಡವಾವಕ್ತರ ಕೃಷ್ಣ ಹರಿನಾರಾಯಣ ವೇದವ್ಯಾಸ ಶಿಂಶುಮಾರ ಸುಗುಣಾರ್ಣವನೆ ಶ್ರೀಶ ಸರ್ವಾಶ್ರಯ ಅನಂತ ಸುಖರೂಪ 3 ಭೂಲೋಕದಲಿ ಮಣಿಮಂತಾದಿ ಅಸುರರು ಶೀಲ ಹರಿಭಕ್ತರನ ಕಂಡು ಸಹಿಸದಲೆ ಬಾಲ ಶಶಿಶೇಖರನ ಸ್ತುತಿಸಿ ವರಗಳ ಪಡೆದು ಇಳೆಯಲಿ ಜನಿಸಿದರು ತತ್ವಜ್ಞಾನಿಗಳ ವೋಲ್ 4 ಸೂತ್ರ ವಿರುದ್ಧ ಭಾಷ್ಯಗಳ್ ಮಾಡಿ ವೇದೋಪನಿಷದ್‍ಗಳಿಗೆ ಅಪ ಅರ್ಥ ಪೇಳಿ ಸಾಧುಗಳ ಮನಕೆಡಿಸೆ ಮಧ್ವಾಖ್ಯ ಸೂರ್ಯನು ಉದಿಸಿ ಸಜ್ಜನರ ಹೃತ್ತಿಮಿರ ಕಳೆಯೆ 5 ಶ್ರೀಪತಿ ವಿಷಯಕ ಜ್ಞಾನ ಮರೆ ಮಾಡುವ ಇಪ್ಪತ್ತು ಮೇಲೊಂದು ಅಪದ್ದ ದುರ್ಭಾಷ್ಯ ಅಪವಿತ್ರ ಅಚರಣೆ ದುಸ್ತರ್ಕ ದುರ್ವಾದ ಈ ಪರಿಸ್ಥಿತಿಯ ನೆಟ್ಟಗೆ ಮಾಡಿದಾ ಮಾಧ್ವ 6 ಇಪ್ಪತ್ತಿ(ತ್ತು) ಎರಡನೇ ಭಾಷ್ಯಾ ಸಿದ್ಧಾಂತವ ಉಪನಿಷದ್ ದಶಕಕೆ ಸರಿಯಾದ ಭಾಷ್ಯಗಳ ಸಪ್ತ ತ್ರಿಂಶತ್ ಒಟ್ಟುಗ್ರಂಥ ಸುರಧೇನುವ ಅಪವರ್ಗಾನಂದ ಒದಗಿಸಿದ ಯೋಗ್ಯರಿಗೆ 7 ಸದ್ಧರ್ಮ ಆಚರಣೆ ಯೋಗ್ಯ ಉಪಾಸನಾ ಭಕ್ತಿ ಸವೈರಾಗ್ಯ ಜ್ಞಾನ ಉನ್ನಾಹ ಅಧಿಕಾರಿಗಳು ಈ ಪರಿಯಲಿ ಸುಖಿಸಲು ಕ್ಷಿತಿಯ ಜನರಿಗೆ ಲಭಿಸಿತು ಕ್ಷೇಮ 8 ಕಾಲವು ಜರುಗಿತು ದೈತ್ಯರು ನೋಡಿದರು ಮೆಲ್ಲಮೆಲ್ಲನೆ ಪುನಃ ವಿಷಮ ಮಾಡಿದರು ಶೀಲರ ಹಿಂಸಿಸಿ ಸದ್ಧರ್ಮ ಕೆಡಿಸಿದರು ಖಳರು ಕ್ರೌರ್ಯವ ವರ್ಧಿಸಿದರು ದಿನ ದಿನದಿ 9 ಮಹಾಭಯಂಕರ ದೈತ್ಯ ಸಮೂಹವ ಸಂಹನನ ಮಾಡಿದಳು ಮಹಾದುರ್ಗಾದೇವಿ ಬ್ರಾಹ್ಮಣಕುಲದಲಿ ಪ್ರಾದುರ್ಭವಿಸಿದ ದೇವಿ ಮಹಾದುರ್ಗಾ ಜಗದಾಂಬಾ ಶರಣು ಮಾಂಪಾಹಿ 10 ಮಾಸ ಋತು ವರುಷಗಳು ಕಾಲ ಪ್ರವಹಿಸಿತು ಜನಗಳು ಕಲಿಯುಗದ ಕಡೇ ಭಾಗ ಬರಲಾಗ ಹೀನ ಕರ್ಮಂಗಳಲಿ ಆಸಕ್ತರಾದರು 11 ಪುರಾಣಂಗಳಲಿ ಕಲಿಯಗದ ಸ್ಥಿತಿಗತಿಯು ವಿವರಿಸಿದಂತೆಯೇ ನೆನೆಯಲೂ ಭೀತಿ - ಕರ ಪಾಪಕರ್ಮದಲಿ ಜನರು ರತರಾಗಿರಲು ನರಪರ ಕ್ರೂರತನ ದಿನ ದಿನ ಹೆಚ್ಚಿತು 12 ಜ್ಞಾನಾದಿ ಸಂಪತ್ತು ಕಳಕೊಂಡ ಜನರು ವಿಷ್ಣು ದ್ವೇಷಿಗಳಾಗಿ ಬಹು ಬಹು ನೀಚ- ತನದಲಿ ಇರುತಿರಲು ದೇವತಾವೃಂದವು ನಿನ್ನ ಬೇಡಿದರು ಪುನಃ ಧರ್ಮಸ್ಥಾಪಿಸಲು 13 ಯದಾಯದಾಹಿ ಸದ್ಧರ್ಮಕ್ಕೆ ಹಾನಿಯು ಅಧರ್ಮಕ್ಕೆ ವೃದ್ಧಿಯು ಆಗುವದೋ ಆಗಾಗ ಸಾಧುಗಳ ರಕ್ಷಣೆಗೆ ಪಾಪಿಗಳ ಹನನಕ್ಕೆ ಸದ್ಧರ್ಮ ಸ್ಥಾಪನೆಗೆ ಅವತಾರ ಮಾಳ್ಪಿ 14 ಭೂಮಿಯಲಿ ಸುಪವಿತ್ರ ಶಂಭಳ ಗ್ರಾಮದಲಿ ಬ್ರಾಹ್ಮಣ ಮಹಾತ್ಮ ವಿಷ್ಣು ಯಶಸ್ ಭವನದಲಿ ಅಮಿತ ಪೌರುಷಜ್ಞಾನ ಆನಂದಮಯ ನೀನು ವಿಮಲ ಕಲ್ಕ್ಯವತಾರ ಮಾಡಿದಿ ಮಹೋಜ 15 ಕ ಎಂದರಾನಂದ ಕಲ್ಕೆಂದರೆ ಜ್ಞಾನ ಆನಂದ ರೂಪ ಶೂಲಿ ವಜ್ರಿಗಳಿಗೆ ಸುಖಜ್ಞಾನ ಬಲ ಕೊಡುವ ಠಲಕನಮೋ ಪಾಪಹರ ಸೌಭಾಗ್ಯದಾತ 16 ಲೋಕವಿಲಕ್ಷಣ ಸುಪ್ರಭಾಶ್ವ ಏರಿ ನಿಖಿಳ ದುರ್ಮತಿ ಭೂಪಾಲ ಚೋರರನ್ನ ಅಖಿಳ ಪಾಪಿಗಳ ಅಧರ್ಮ ಆಚರಿಸುವರ ಶ್ರೀಕಾಂತದ್ವೇಷಿಗಳ ಕತ್ತರಿಸಿ ಕೊಂದಿ 17 ಸತ್ಯವ್ರತ ಸುರವೃಂದ ವಸುಮತಿ ಪ್ರಹ್ಲಾದ ಶತಮಖ ಪ್ರಜೆಗಳು ವಿಭೀಷಣ ಸುಗ್ರೀವ ಪಾರ್ಥಸುಧಾಮ ರಕ್ಷಕನೇ ಸುರಬೋಧಕನೇ ಸತ್ಯಧರ್ಮರ ಕಾಯ್ವ ಕರುಣಾಳು ಕಲ್ಕಿ 18 ಜ್ಞಾನಸುಖ ಭೂಮದಿ ಗುಣಪೂರ್ಣ ನಿರ್ದೋಷ ವಿಷ್ಣು ಪರಮಾತ್ಮ ಹರಿ ಉದ್ದಾಮ ಬ್ರಹ್ಮ ಪೂರ್ಣಪ್ರಜ್ಞಾರ ಹೃಸ್ಥ ವನಜಭವಪಿತ ಕಲ್ಕಿ ಪ್ರಸನ್ನ ಶ್ರೀನಿವಾಸ ಶರಣು ಮಾಂಪಾಹಿ 19 -ಇತಿ ಕಲ್ಕ್ಯಾವತಾರ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು