ಒಟ್ಟು 7252 ಕಡೆಗಳಲ್ಲಿ , 131 ದಾಸರು , 4420 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯತು ಸೀತಾರಾಮ ರಾಮ ಚರ- ಣಾರವಿಂದದ ಭಕ್ತಿ ದೃಢವಾಗಿ ಕೊಡು ಜಯ ರಾಮ ರಾಮ ಕ್ರೂರಕಾಮಾದಿಗಳ್ಸೂರೆಗೊಂಬರು ಸೀತಾರಾಮ ರಾಮ ರಾವ- ಣಾರಿ ನೀನಲ್ಲದೆ ಯಾರಿಲ್ಲ ಗತಿ ಜಯ ರಾಮ ರಾಮ 1 ಬುದ್ಧಿ ಜ್ಞಾನ ಶಕ್ತಿ ಸಿದ್ಧಿದಾಯಕ ಸೀತಾರಾಮ ರಾಮ ಗುಣ- ವೃದ್ಧಿಕಾರಣ ಭಕ್ತಿಶ್ರದ್ಧೆಯ ಕೊಡು ಜಯ ರಾಮ ರಾಮ ಬಿದ್ದೆನಜ್ಞಾನಸಮುದ್ರಮಧ್ಯದಿ ಸೀತಾರಾಮ ರಾಮ ಎನ್ನ- ನುದ್ಧರಿಸುವರೆ ಪ್ರಸಿದ್ಧ ನೀನೆ ಜಯ ರಾಮ ರಾಮ 2 ನಿನ್ನ ನಾಮವೆ ಪ್ರಸನ್ನ ಪಾವನ ಸೀತಾರಾಮ ರಾಮ ಸ- ರ್ವೋನ್ನತ ಮಹಿಮವರೇಣ್ಯ ಶಾಶ್ವತ ಜಯ ರಾಮ ರಾಮ ನಿನ್ನಾಧೀನವು ನಿಖಿಲ ಜಗವು ಸೀತಾರಾಮ ರಾಮ ಪರಿ- ಪೂರ್ಣಾತ್ಪೂರ್ಣವರೇಣ್ಯ ಶಾಶ್ವತ ಜಯ ರಾಮ ರಾಮ 3 ಸ್ವಾಂತರಂಗಭಕ್ತಿಚಿಂತಾಮಣಿ ಸೀತಾರಾಮ ರಾಮ ಆತ್ಮ- ತಂತ್ರನಿಯಂತ್ರ ಸರ್ವಾಂತರಾತ್ಮಕ ಜಯ ರಾಮ ರಾಮ ಭ್ರಾಂತಿ ತ್ಯಜಿಸುವುದಕೆಂತುಪಾಯವು ಸೀತಾರಾಮ ರಾಮ ಏ- ಕಾಂತಸ್ಮರಣೆಯ ನಿರಂತರ ಕೊಡು ಜಯ ರಾಮ ರಾಮ 4 ಸೀತಾರಾಮ ರಾಮ ದುಷ್ಟ- ರಕ್ಕಸಾಳಿಯ ಸೊಕ್ಕಡಗಿತು ಜಯ ರಾಮ ರಾಮ ಕರ್ಕಶಕಲಿಕಾಲ ಮಿಕ್ಕಿ ಬಂದುದು ಸೀತಾರಾಮ ರಾಮ ಮನ- ಸೊಕ್ಕಿ ಮೋಹದ ಬಲೆಗೆ ಸಿಕ್ಕಿಬಿದ್ದುದು ಜಯ ರಾಮ ರಾಮ 5 ದಾಸಜನರ ಹೃದಯಸ್ಥಿತ ಸೀತಾರಾಮ ರಾಮ ಶ್ರೀನಿ- ವಾಸ ನಿನ್ನವರಭಿಲಾಷೆಯ ಕೊಡು ಜಯ ರಾಮ ರಾಮ ಸೀತಾರಾಮ ರಾಮ ಸಾಧು- ವಾಸಸಂತೋ ಪ್ರಕಾಶವ ಕೊಡು ಜಯ ರಾಮ ರಾಮ 6 ಜ್ಞಾನವಜ್ಞಾನವು ಭಾನುತಿಮಿರ ಸೀತಾರಾಮ ರಾಮ ಸತ್ಯ- ಜ್ಞಾನ ಭಕ್ತಿಭಾಗ್ಯ ನೀನಿತ್ತು ಪೊರೆ ಜಯ ರಾಮ ರಾಮ ಹೀನರೈವರು ಸ್ವಾಧೀನಗೊಂಬರು ಸೀತಾರಾಮ ರಾಮ ಪವ- ಮಾನವಾಹನ ನಿನ್ನ ಧ್ಯಾನವ ಕೊಡು ಜಯ ರಾಮ ರಾಮ 7 ಚಿತ್ತಕೆ ನಿಲವಿಲ್ಲ ಚಿಂತೆ ಹಲವು ಸೀತಾರಾಮ ರಾಮ ತವ ಭೃತ್ಯನಾಗಿರುವ ಸದ್ಭಕ್ತಿಯ ಕೊಡು ಜಯ ರಾಮ ರಾಮ ಸೀತಾರಾಮ ರಾಮ ಪರ- ವಸ್ತುತ್ವದೇಕಾಸಕ್ತಿಯ ಕೊಡು ಜಯ ರಾಮ ರಾಮ 8 ಆಧಿವ್ಯಾಧಿ ಭವಾಂಬೋಧಿಕುಂಭಜ ಸೀತಾರಾಮ ರಾಮ ತವ ಪಾದಾಂಭೋಜಪ್ರಸಾದಪಾಲಿಸು ಜಯ ರಾಮ ರಾಮ ಸಾಧುಸಂಗಸುಖಬೋಧೆಯ ಕೊಡು ಸೀತಾರಾಮ ರಾಮ ಕಲಿ- ಬಾಧೆ ಪರಿಹರಿಪ ಹಾದಿ ತೋರಿಸು ಜಯ ರಾಮ ರಾಮ 9 ಧ್ಯಾನವಿರಲಿ ಎನ್ನ ಮಾನಸದಲಿ ಸೀತಾರಾಮ ರಾಮ ವಿಷ ಯಾನುಭವದಿ ಬಲು ಹಾನಿಯಾದೆನು ಜಯ ರಾಮ ರಾಮ ದೀನಜನರ ಕಾಮದೇನು ರಘುವರ ಸೀತಾರಾಮ ರಾಮ ಖಲ- ದಾನವಾರಣ್ಯಕೃಶಾನು ಮಾನದ ಜಯ ರಾಮ ರಾಮ 10 ದುಷ್ಟರ ಸಂಗದಿಂದೆಷ್ಟೊ ನೊಂದೆನು ಸೀತಾರಾಮ ರಾಮ ಸುವಿ- ಶಿಷ್ಟರ ಸಂಗವ ಕೊಟ್ಟು ಸಲಹೊ ಜಯ ರಾಮ ರಾಮ ಭ್ರಷ್ಟ ಪ್ರಕೃತಿಯನ್ನು ಕುಟ್ಟಿ ಕಳಚು ಸೀತಾರಾಮ ರಾಮ ಪರ- ಮೇಷ್ಟ್ಯಾದಿ ಸುಮನಸರಿಷ್ಟದಾಯಕ ಜಯ ರಾಮ ರಾಮ 11 ತನ್ನ ಕೇಡು ತಾನರಿಯದಾದೆ ಸೀತಾರಾಮ ರಾಮ ಸುಪ್ರ- ಸನ್ನ ನಿನ್ನ ಸ್ಮರಣೆಯನಿತ್ತು ಪೊರೆ ಜಯ ರಾಮ ರಾಮ ಹಣ್ಣೆಂದು ದೀಪವ ತಿನ್ನ ಪೋದೆನು ಸೀತಾರಾಮ ರಾಮ ಹೆಣ್ಣು ಹೊನ್ನಿಗಾಗಿ ಪರವನ್ನು ಮರೆತೆ ಜಯ ರಾಮ ರಾಮ 12 ನಿತ್ಯ ನಿನ್ನ ದಾಸ್ಯವಿತ್ತು ರಕ್ಷಿಸು ಸೀತಾರಾಮ ರಾಮ ಯಾವ- ಚ್ಚಿತ್ತ ತವ ಧ್ಯಾನದಿ ತೃಪ್ತಿಯಾಗಲಿ ಜಯ ರಾಮ ರಾಮ ಸತ್ಯಾತ್ಮರ ಸಂಗಸತ್ವ ವರ್ಧಿಸು ಸೀತಾರಾಮ ರಾಮ ಪರ- ಮಾರ್ಥವಿಚಾರ ಸತ್ತತ್ತ್ವವರುಹು ಜಯ ರಾಮ ರಾಮ 13 ಕರ್ತಾಕಾರಯಿತನು ಭರ್ತಾರನು ಸೀತಾರಾಮ ರಾಮ ಪುರು- ಷಾರ್ಥರೂಪ ತವ ಭಕ್ತಿ ಪ್ರಾರ್ಥನೆ ಜಯ ರಾಮ ರಾಮ ಪ್ರತ್ಯಗಾತ್ಮ ಮನೋವೃತ್ತಿಯೊಳಿರು ಸೀತಾರಾಮ ರಾಮ ಸ್ವಾಮಿ- ಭೃತ್ಯನ್ಯಾಯದಿ ನಿಯಮಿಸುತ್ತ ನಡೆಸು ಜಯ ರಾಮ ರಾಮ 14 ಸೀತಾರಾಮ ರಾಮ ವಾಯು- ಸಖಸ್ಪರ್ಧಾತ್ಮಕ ಸಾಧುಪ್ರಕೃತಿಪಾಲಿಸು ಜಯ ರಾಮ ರಾಮ ಸೀತಾರಾಮ ರಾಮ ಬ್ರಹ್ಮಾ- ದ್ಯಖಿಳ ಚೇತನಾತ್ಮಕ ಸರ್ವೋತ್ತಮ ಜಯ ರಾಮ ರಾಮ 15
--------------
ತುಪಾಕಿ ವೆಂಕಟರಮಣಾಚಾರ್ಯ
ಜಯದೇವ ಜಯದೇವ ಜಯ ಚಿದಾನಂದಜಯ ಜಯತು ಜಯ ಜಯತು ಜಯ ನಿತ್ಯಾನಂದ ಪ ದೃಶ್ಯಾ ದೃಶ್ಯವಿದೂರ ದೂರ ಪರತತ್ವಾಮಿಕ್ಕು ಮೀರಿಹ ತೇಜ ತೇಜ ಮಹತ್ವಾಪೊಕ್ಕು ನೋಡಿಯೆ ಕಂಡು ನಿನ್ನ ನಿಜತ್ವನಕ್ಕು ನಿಜದಲಿ ಮಾಳ್ವೆ ಪಂಚೋಪಚಾರತ್ವ 1 ತಾನೆ ತಾನಾದ ಸುವಸ್ತು ನಿರ್ಲೇಪಧ್ಯಾನ ಮೌನ ಸಮಾಧಿಗೆ ತೋರ್ವರೂಪಏನ ಬಣ್ಣಿಸುವೆನು ಈ ಜಗವ್ಯಾಪಾನಾನರ್ಪಿಸುವೆ ನಿನಗೆ ಗಂಧಾನುಲೇಪ 2 ದುರಿತ ಕುಠಾರ ನೀನೆನಿಪೆಭರ್ಗಾ ಶ್ರೀವತ್ಸ ವೀಥಿಗಳ ರಕ್ಷಿಸುವೆಸರ್ಗಾದಿ ಮಹಾಪುಷ್ಪ ನಿನಗೆ ನಾನರ್ಪಿಸುವೆ3 ವಾಸನಕ್ಷಯದ ನಿರ್ವಾಸನ ಸ್ಪೂರ್ತಿಭಾಸಮಾನದಿ ತೋರುತಿದೆ ನಿನ್ನ ವಾರ್ತೆಈಶ ತಾಪಸರುಗಳು ನಿನ್ನ ಮೂರ್ತಿದೇಶಿ ಕೋತ್ತಮ ನಿನಗರ್ಪಿಸುವೆ ಧೂಪಾರತಿ4 ವಿಶ್ವ ವಿಶ್ವ ಸೂತ್ರ ವಿಖ್ಯಾತವಿಶ್ವ ಪೂರಿತ ತಂತ್ರ ವಿಶ್ವಾತೀತವಿಶ್ವ ಜ್ಯೋತಿಯನರ್ಪಿಸುವೆ ಗುರುನಾಥ 5 ನಿತ್ಯ ಸಂತುಷ್ಟ ಶಿರೋಭಾಗಅತ್ಯಂತ ಆನಂದವಹ ಸದಾಭೋಗಪ್ರತ್ಯಗಾತುಮತರ ಪುಷ್ಪಪರಾಗಅರ್ಥಿಯಲಿ ಅರ್ಪಿಸುವೆ ನೈವೇದ್ಯ ನಾನೀಗ6 ಇಂತುಪಚಾರಪಂಚದ ಪೂಜೆಯನೀಗಅಂತರಂಗದಿ ಚಿದಾನಂದನಿಗೆ ಈಗ ಸಂತಸದಿಂದ ನಾ ಮಾಡುತಲಾಗಎಂತು ಎನಲಿ ತಾನೇ ತಾನಾದ ಬೇಗ7
--------------
ಚಿದಾನಂದ ಅವಧೂತರು
ಜಯದೇವ ಜಯದೇವ ಜಯ ಬಗಳಾ ರಮಣಜಯ ಜಯತು ಜಯ ಜಯತು ಜಯ ನಿರಾವರಣ ಪ ಆಧಾರವ ಹತ್ತಿ ಸ್ವಾಧಿಷ್ಠಾನವ ತೋರಿಭೇದಿಸಿ ಮಣಿಪೂರಕ ಅನಾಹತ ಸಾರಿಶೋಧಿಸಿ ವಿಶುದ್ಧಿ ಆಜ್ಞೇಯವನೇರಿಹರಿದು ತ್ರಿಕೋಣೆಯ ಸಹಸ್ರಾರ ಮೀರಿ1 ಮೂರ್ತಿ ಘುನ ಬ್ರಹ್ಮಾನಂದ 2 ನಿತ್ಯ ನಿರ್ಮಲ ಸಂವಿತ್ತುನವ್ಯ ಕಲ್ಪ ಸಿದ್ಧ ಪರ್ವತ ನಿಜ ಕರ್ತೃದಿವ್ಯ ಚಿದಾನಂದಾವಧೂತ ಬಗಳ ಪರವಸ್ತು 3
--------------
ಚಿದಾನಂದ ಅವಧೂತರು
ಜಯದೇವ ಜಯದೇವ ಜಯ ಸದ್ಗುರುವೆಂದುಜಯವೆಂದು ಬೆಳಗಿದಳು ಬಗಳಾಂಬನಿಂದು ಪ ಬಿಗಿದ ಹೆದೆ ಬೆನ್ನಿಂಗೆ ಧನು ಶರಗಳ ಸೆಕ್ಕಿತಗತಗನೆ ಹೊಳೆಯುತಿಹ ಖಡ್ಗವ ಹೊರಗಿಕ್ಕಿಝಗಝಗನೆ ಆಭರಣ ಹೊಳೆಯಲು ಕಳೆಯುಕ್ಕಿಮಿಗಿಲೆನಿಪ ಆರುತಿಯೊಳ್ ಮುಕ್ತಾಕ್ಷತೆಯನಿಕ್ಕಿ 1 ಹತ್ತು ಕೈಯೊಳು ಹೊತ್ತು ನೆಗೆಹಿದಳು ಚದುರೆರತ್ನಖಚಿತದ ನತ್ತು ಹಣೆಬಟ್ಟು ಬೆದರೆಮತ್ತೆ ಕಿರುಬೆರಳ ಮುತ್ತು ಮುತ್ತುದುರೆಎತ್ತತ್ತಲೂ ಆರತಿಯ ಬಲು ಬೆಳಕು ಚದುರೆ 2 ಎತ್ತಿ ಹಾಡುತ ಒಲಿದು ಬಗಳೆ ಗುರುವಿಂಗೆತಥ್ಥೆಯ್ಯ ತಥ್ಥೆಯ್ಯ ತಥ್ಥೆಯ್ಯ ಕುಣಿದುಎತ್ತಲಾಯಿತೋ ದೇಹ ಪರವಶವದಾಗೆಮತ್ತೆ ಕಂಡಳು ತನ್ನ ಚಿದಾನಂದಾತ್ಮಗೆ 3
--------------
ಚಿದಾನಂದ ಅವಧೂತರು
ಜಯದೇವ ಜಯದೇವ ಜಯದೀನದಯಾಳಾ ಜಯಜಯ ಶ್ರೀಗುರು ಮಹಿಪತಿ ಭವತಾರಕ ಲೀಲಾ ಪ ಮರವಿನ ಕತ್ತಲಿಯೊಳಗೆ ಮುಂದುಗಾಣದಲಿರಲಿ ಅರವಿನದೀಪವ ಹೆಚ್ಚಿ ದೋರುತಲೀ ಸ್ಥಿರವನು ಗೊಳ್ಳದ ಚಿತ್ತವ ಭಜನಿಗೆಲಿಸುತಲಿ ಹರಿಸಿದ ವಿದ್ಯದಗೃಂಥಿಯ ಸಂಶಯ ಬಿಡಿಸುತಲಿ 1 ಪರಿಪರಿಯಿಂದಲಿಗರದು ಬೋಧನಾಮೃತನುಡಿಯಾ ಅರಹಿಸಿಯೋಗದ ಮಾರ್ಗವ ಸಾಂಖ್ಯದನಿಲ್ಲ ಕಡಿಯಾ ಕರಣೀಂದ್ರಿಯಗಳ ವಡದಾಸ್ವಾನಂದದಯಡಿಯಾ ಕರುಣಿಸಿ ವಿಶ್ವಂಭರಿತದ ತೋರಿದೆ ಇತ್ಥಡಿಯಾ 2 ನಿನಗುತ್ತೀರ್ಣವಕಾಣದೇ ತನುವಾರತಿ ಮಾಡೀ ಮನವೇದೀಪವು ಸದ್ಭಾವನೆ ಆಜ್ಯನೀಡಿ ಅನುದಿನ ಬೆಳಗುವ ನಂದನುಮಹಿಮೆಯ ಕೊಂಡಾಡಿ ಚಿನುಮಯಸುಖದೊಳು ಬೆರೆದಾಹಂಭ್ರಮ ಈಡಾಡಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯದೇವ ಜಯದೇವ ಜಯಮಹಾಂಗಿರೀಶಾ ಸ್ವಯಂಜ್ಯೋತಿ ಬೆಳಗುವೆ ಸಚ್ಚಿತ್ಸುಖತೋಷಾ ಪ ಸರ್ವರಲಿ ನೋಡಿದರೂ ನೀನಲ್ಲದೆ ಇಲ್ಲಾ ಉರ್ವಿಯಾಕಾಶ ದಶದಿಕ್ಕುಗಳೆಲ್ಲಾ ಸರ್ವೇಶ್ವರವೆಂಬದು ಸರ್ವಾಂಗದೆÉಲ್ಲಾ ಪಾರ್ವತೀಶ್ವರನೆಂಬುದು ಬಲ್ಲವನೆ ಬಲ್ಲಾ ಜಯದೇವ 1 ಸಕಲ ಸುಖದುಃಖವೆಂಬುದು ನಿನ್ನ ಲೀಲೆ ಅಖಿಲ ಅಂಡಗಳೆಂಬ ಭೋಜನಶಾಲೆ ಭಕುತಿ ಭಾಗ್ಯೆಂಬ ಜ್ಞಾನದ ದೀಪಜ್ವಾಲೆ ಪ್ರಕಟಿಸುವಂತೆ ಎತ್ತುವೆ ನಿನ್ನ ಮೇಲೆ ಜಯದೇವ 2 ಪರಿಶುದ್ಧಾತ್ಮಕದೇವಾ ನಿರುತ ನಿರ್ದೋಶಾ ಸಕಲಜನರ ಹೃದಯಕಮಲ ನಿವಾಸಾ ದುರಿತದಾರಿದ್ರ್ಯ ಭವದುಃಖವಿನಾಶಾ ಗುರು ವಿಮಲಾನಂದ ಶ್ರೀ ಮಹಾಂಗಿರೀಶಾ 3
--------------
ಭಟಕಳ ಅಪ್ಪಯ್ಯ
ಜಯದೇವ ಜಯದೇವ ಜಯರಾಮಲಿಂಗಾ ಜಯಜಯವೆಂದು ಬೆಳಗುವೆ ಆರತಿ ಸುರತುಂಗಾ ಪ ಸ್ವಾನಂದದ ನಿಜಕಾಶೀಪುರದಿಂದ ಅತ್ಯರಳಿ ನಾನಾಸ್ಥಳಗಳ ನೋಡುತ ಬಂದು ನೀತೀರ್ಥದಲಿ ದೀನೋದ್ದಾರ ಕಾಪಾಪನಾಶನಿ ಹರಿಸುತಲಿ ಖೂನವ ತೋರಿದೆ ಓಂಕಾರೇಶ್ವರನೆನಿಸುತಲಿ 1 ಕಾಲ ಕೆರಾಘವಸುಖದರುಕ್ಷಣಲೆಂದು ತಳಿಯೊಳುಖ್ಯಾತಿಗೆ ಬಂದು ರಾಮೇಶ್ವರನೆಂದು ನಲಿದರುಗಿರಿಜಾನಂದಿಸರ್ವದೇವರು ಬಂದು ಸಲುಹುವೆ ಭಕ್ಷರಿಗಿಷ್ಟಾರ್ಥವ ನೀಡುತಲಿಂದು 2 ನಿನ್ನಯ ಮಹಿಮೆಯ ಹೊಗಳಲು ಮನುಜರಿಗಳವಲ್ಲಾ ಮುನ್ನಾಭರಣವ ಆಗಿಹಶಶಿನೇತಾಬಲ್ಲಾ ಎನ್ನೊಳು ಬೀರುತರಕ್ಷಿಸುಘನ ತಾರಕನೊಲ್ಲಾ ಸನ್ನುತ ಮಹಿಪತಿ ನರದನ ಪ್ರಭು ಪಾರ್ವತಿನಲ್ಲಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯದೇವಿ ಜಯದೇವಿ ಜಯ ಪಾವನಗಂಗೇ | ಜಯಜಯ ತ್ರಿಪಥಗಾಮಿನಿ ಜಯ ತುಂಗತರಂಗೇ ಪ ಆದಿಲಿ ಶ್ರೀಹರಿ ಕೋಮಲ ಪದನಖದಿಂದೊಗದು | ಸಾಧಿನಿ ವಾರಿಜಭವನಾ ಕರಪಾತ್ರಕೆ ಬಂದು | ಸಾದರದಿಂದಾಶಿವನ ಕೆಂಜೆಡೆಯೊಳು ನಿಂದು | ಮೇದಿನಿಗಿಳಿದು ನೀಬಂದೆ ಭಗೀರಥನೃಪಗೊಲಿದು 1 ಕಾಶಿಪ್ರಯಾಗದಿ ನಿಂದು ಉದ್ದರಿಸುತ ಕೆಲರಾ | ಆಶೆಯ ಪೂರಿಸಲಾಗಿ ದಕ್ಷಿಣ ದಿಶೆದವರಾ | ರಾಶಿಯ ಕನ್ಯಾ ಮೆಟ್ಟಲು ಸುರಗುರು ಗಂಭೀರಾ | ಭಾಶಿಶಿ ತೋರಿದೆ ಬಂದು ಕೃಷ್ಣವೇಣಿಲಿ ಸದರಾ 2 ಹರಿಹರ ದೇವರು ದ್ರವರೂಪದಿ ಹರಿವುತಲೀ | ನೆರೆನೀಕೂಡಿದ ಸಂಭ್ರಮ ಏನೆಂದುಸುರಲಿ | ದರುಶನ ಮಾತ್ರದಲಾದೆನು ಮುಕ್ತನು ಭವದಲಿ | ಗುರು ಮಹೀಪತಿಸುತ ಎನ್ನನು ರಕ್ಷಿಸು ಕರುಣದಲಿ |3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯದೇವಿ ಜಯದೇವಿ ಜಯ ಬಗಳಾಮುಖಿಯೇಜಯವೆಂದು ಬೆಳಗುವೆನು ಜಯಭಕ್ತ ಸಖಿಯೇ ಪ ನಿತ್ಯ ಪೀತೋಪಚರಣೆಪೀತಕುಂಡಲ ಹಾರಪೀತ ವರ್ಗಾವರಣೆಪೀತಮೂರ್ತಿಯ ನೆನೆವೆ ಪೀತ ಪ್ರಿಯೆ ಸ್ಮರಣೆ 1 ಬತ್ತೀಸಾಯುಧ ಪಿಡಿದೆ ಭಯಂಕರಿ ಉಗ್ರೇಶತ್ರುನಾಶಕಿ ನೀನು ಭಕುತ ಸಾಹಸ್ರೇಮತ್ತೆ ಹುಡುಕುತ್ತಿರುವೆ ದುಷ್ಟರನು ಶೀಘ್ರೆನಿತ್ಯ ನಾ ಭಜಿಸುತಿಹೆ ಮನವ ಏಕಾಗ್ರೇ 2 ಬ್ರಹ್ಮ ಚಿದಾನಂದ ಬಗಳಾಮುಖಿ ರಾಣಿಹಮ್ಮಳಿದ ಮಹಿಮರಾ ಮೆಚ್ಚಿನ ಕಟ್ಟಾಣಿಬ್ರಹ್ಮರಂಧ್ರದೊಳು ವಾಸಿಸುತಿಹ ದಿನಮಣಿಬಿಮ್ಮನೆ ನಮಗೊಲಿಯೆ ಶೀಘ್ರದಿಂ ಕೃಪಾಣಿ 3
--------------
ಚಿದಾನಂದ ಅವಧೂತರು
ಜಯಮಂಗಳಂ ಪ ಬುದ್ಧಿಯನಾಳ್ವಂಗೆ ಸಿದ್ಧಿಯನೀವಂಗೆಉದ್ದನ್ನ ಒಡಲಿಂಗೆ ವಿಘ್ನಗಳ ಕೊಲ್ವಂಗೆಶುದ್ಧ ಹಿಮಗಿರಿಯ ಸುತೆಯ ಮುದ್ದಾದ ಕುವರಂಗೆಜಿದ್ದಿನಲಿ ಶಣ್ಮುಖನ ಗೆದ್ದಂಥ ಜಾಣಂಗೆ 1 ಶಂಕರನ ಕುವರನಿಗೆ ಓಂಕಾರ ರೂಪನಿಗೆಸಂಕಷ್ಟನಾಶನಿಗೆ ಅಂಕುಶಾಯುಧ ಧರಗೆಹೂಂಕರಿಪ ಜನಕುಳ್ಳ ಬಿಂಕವನು ತರಿದವಗೆಕಿಂಕರದ ನಿರುತದಲಿ ಕರುಣದಲಿ ಕಾಯ್ವನಿಗೆ 2 ಶುಭಕಾರ್ಯದಲಿ ಮೊದಲು ಪೂಜೆಗೊಂಬಾತನಿಗೆಅಭಯವನು ತೋರ್ಪನಿಗೆ ಇಭವದನ ಗಣಪಗೆಪ್ರಭುವಾಗಿ ಗಣಗಳಿಗೆ ಜಗದೊಳಗೆ ಮೆರೆವವಗೆವಿಭವದಲಿ ಬಿಡುವಿಲ್ಲದೆ ಭಾರತವ ಬರೆದಂಗೆ 3 ಸೂಕ್ಷ್ಮದಲಿ ಪರಿಕಿಸಲು ಸಣ್ಣ ಕಣ್ಣುಳ್ಳವಗೆಕಾಂಕ್ಷೆಗಳ ಕೇಳಲಿಕೆ ಮರದಗಲ ಕಿವಿಯವಗೆತೀಕ್ಷ್ಣತರ ಮತಿವಿಡಿದ ಘನವಾದ ತಲೆಯವಗೆಸುಕ್ಷೇಮ ಲಾಭಗಳ ಭಕ್ತರಿಗೆ ಕೊಡುವವಗೆ 4 ಇಲಿದೇರ ವೀರನಿಗೆ ಸುಲಿದೇಕದಂತನಿಗೆಎಲರುಣಿಯನುಪವೀತ ಮಾಡಿಕೊಂಡವಗೆನೆಲದೊಳಗೆ ಗದಗುಸಿರಿ ವೀರನಾರಾಯಣನನೊಲಿಸಿ ಕೊಡುವಂಥ ಮಂಗಳ ಮೂರುತಿಗೆ 5
--------------
ವೀರನಾರಾಯಣ
ಜಯಮಂಗಳಂ ಶುಭೋದಯ ಮಂಗಳಂ ಜಯ ಕಕುದ್ಗಿರಿ ಗಂಗಾಧರ ಲಿಂಗಗೆ ಪ ಜಡೆಯುಡುಪತಿಯು ಗಂಗೆಯೊಡಗೂಡ್ದ ಮಸ್ತಕಕೆ ಮಡುಹಿ ಮಾರನ ಭಸಿತದಾಳ್ದ ಪಣೆಗೆ ಪೆಡೆಯೆತ್ತಿ ಗಾನಗೈವಹಿ ಕುಂಡಲಂಗಳಿಗೆ ದೃಢಭಕತರಿಷ್ಟದಾಯಕ ಶಿವನಿಗೆ 1 ಸೋಮಸೂರ್ಯಾಗ್ನಿ ಲೋಚನೆಗೆ ವಿಷದಾಳಿ ಸುರ ಸ್ತೋಮವನು ಕಾಯ್ದ ಶೋಭನ ಕಂಠಕೆ ಭೀಮನಿಗೆ ಭಯಹರಗೆ ಪರಶುಮೃಗ ಹಸ್ತನಿಗೆ ಕಾಮಿತಾರ್ಥದ ವರಾಭಯ ಕರನಿಗೆ 2 ನಾಗಕಂಕಣಧರಗೆ ನಾಗೋತ್ತರೀಯನಿಗೆ ನಾಗಯಜ್ಞೋಪವೀತವ ತಾಳ್ದಗೆ ನಾಗಚರ್ಮಾಂಬರಗೆ ನಗರಾಜ ಚಾಪನಿಗೆ ಗಮನ ಬಾಣಗೆ ಶಿವನಿಗೆ 3 ಗಿರಿಜೆಗರ್ಧಾಂಗವನ್ನಿತ್ತ ಶುಭವಿಗ್ರಹಗೆ ವರ ವೃಷಭವನ್ನೇರಿ ಸಂಚರಿಪಗೆ ಬರೆದುಂಗುಟದಿ ಹೊಳೆದ ಚಕ್ರದಿಂ ದೈತ್ಯಕುಲ ಹರಣ ವರದಾಯಕಗೆ ಸರ್ವೆಶಗೆ 4 ತಿರುಪತಿಯ ವಾಸವನು ದೃಢಗೈದು ಕಕುದ್ಗಿರಿಯ ಪರಮ ಕ್ಷೇತ್ರದಿ ಮಹಿಮೆಗಳ ತೋರ್ಪಗೆ ವರದ ವೆಂಕಟಪತಿಗೆ ಗಂಗಾಧರೇಶ್ವರಗೆ ಶರಣಾಗತರ ಕಾಯ್ವ ಸಾಂಬಶಿವಗೆ 5
--------------
ತಿಮ್ಮಪ್ಪದಾಸರು
ಜಯಮಂಗಳಂ ಶುಭೋದಯ ಮಂಗಳಂ ಭಯಹರಗೆ ತಿರುಪತಿಯ ವೆಂಕಟೇಶ್ವರಗೆ ಪ ಸುರಲೋಕವನು ಪಡೆದ ಶಿರದಮಕುಟದ ಪ್ರಭೆಗೆ ಸ್ಮರಚಾಪವನು ಪೋಲ್ವ ಪುರ್ಬುಗಳ ಚೆಲುವಿಕೆಗೆ ತುಂಬಿ ತುಳುಕುವ ನಯನಗಳಿಗೆ 1 ಕನಕಕುಂಡಲಗಳಿಗೆ ಘನ ನಾಸಿಕದ ಮಣಿಗೆ ಮಿನುಗುತಿಹ ಮುಗುಳುನಗೆಯೊಗುವ ಮುಖಕೆ ಇನಕೋಟಿಪ್ರಭೆಗೆ ಮಿಗಿಲೆನಿಪ ಕೌಸ್ತುಭಮಣಿಗೆ ವನಮಾಲೆಯನು ಧರಿಸಿ ಶೋಭಿಸುವ ಕಂಠಕೆ 2 ಭುಜವೆರಡರಲಿ ಶಂಖಚಕ್ರಗಳನುರೆ ಧರಿಸಿ ಅಜಸುರಾದ್ಯರು ಬಿಡದೆ ಭಜಿಪ ಪದವ ಭಜಿಪರಿಗೆ ಭವಶರಧಿ ಕಟಿಪ್ರಮಾಣವಿದೆಂದು ಅಜಪಿತನು ತೋರುತಿಹ ಕರಚತುಷ್ಟಯಕೆ 3 ಹದಿನಾಲ್ಕು ಲೋಕಕಾಶ್ರಯವಾಗಿ ತೋರುತಿಹ ಪದುಮಭವನನು ಪಡೆದ ನಾಭಿಸಹಿತ ಉದರಮಂಡಲಕೆ ಮತ್ತದರಡಿಯ ಶೋಭಿಸುವ ಹದಿನಾರು ಬಣ್ಣದಪರಂಜಿ ಕಟಿಸೂತ್ರಕೆ 4 ಕಿರಿಘಂಟೆಸರದೊಡನೆ ಹೊಳೆವ ಪೀತಾಂಬರಕೆ ಗರುಡನಂಸದಿ ಮೆರೆವ ಊರುಗಳಿಗೆ ಸುರನದಿಯ ನೆರೆ ಪಡೆದ ಚರಣದುಂಗುಟಗಳಿಗೆತಿರುಪತಿಯ ವೆಂಕಟನ ದಿವ್ಯ ಮೂರುತಿಗೆ 5
--------------
ತಿಮ್ಮಪ್ಪದಾಸರು
ಜಯರಾಘವ ಜಯರಾಘವ ಜಯರಾಘವ ರಾಮಾ| ಶ್ರಯಕಾರಣಸುಖಪೂರಣ ಭವತಾರಣ ನಾಮಾ ಪ ಜಗಪೋಷಣ ಮೃದುಭಾಷಣ ಸುರತೋಷಣಕಾರಿ| ಅಘಶೋಷಣ ಕುಲಭೂಷಣ ಖರದೂಷಣ ಹಾರಿ 1 ಅತಿಸುಂದರ ಗುಣ ಮಂದಿರ ದಶಕಂದರ ಹರಣಾ| ಧೃತಮಂದಿರ ಗಜೇಂದರ ಪ್ರಯಾ ಸಾಂದರ ಕರುಣಾ 2 ಪತಿ ವಾಣೀಪತಿ ದಿವಸಾಪತಿ ಧೇಯ| ಗುರುಮಹೀಪತಿ ಸುತಸಾರಥಿ ಸೀತಾಪತಿರೇಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯರಾಮ ರಘುರಾಮ ಪುರುಷೋತ್ತಮ ಪ ತವನಾಮ ಸುಖಧಾಮ ಅಮೃತೋಪಮಾ ರಾಮಾ ಅ.ಪ ಘನಶ್ಯಾಮ ಅಭಿರಾಮ ಸಕಲಾಗಮ ರಾಮ 1 ಘಣಿ ಭೂಷ ಸಕಲೇಶ ವರದಾಯಕಾ 2 ಪರಮೇಶ ಯಮಪಾಶ ಭವನಾಯಕಾ ಕಮಲೇಶ ಶ್ರೀಶ ಮಾಂಗಿರಿ ನಾಯಕಾ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಜರ ಇನ್ಯಾತಕೆ ಬಂತಮ್ಮಾ ಸಜ್ಜನರಿಗೆಜರ ಇನ್ಯಾತಕೆ ಬಂತಮ್ಮಾ ಸಜ್ಜನರಿಗೆ ಪ ಪರಮೇಷ್ಠಿ ಜನಕಾನೆಪರನೆಂದು ತಿಳಿಸಾದೆ ಪರಗತಿಯ ತೋರದ ಅ.ಪ. ಸ್ನಾನವ ಮಾಡಿಕೊಂಡು ಕುಳಿತು ಬಲುಮೌನದಿಂದಿರಲೀಸಾದೆ ||ಶ್ರೀನಿವಾಸನ ಧ್ಯಾನ ಮಾಡಾದೆ ಮನಸುಶ್ವಾನನೋಪಾದಿಯಲ್ಲಿ ತಾ ಓಡುವಂಥ 1 ಜಪ ಮಾಡುವ ಕಾಲದಲ್ಲಿ ಕರೆಯ ಬರೆವಿಪರೀತವಾಗುವದು ಮನಸು ||ಸ್ವಪನದಂತೆ ಮನಸಿಗೆ ಪೊಳದು ಬಲುಸುಪಥವ ತಪ್ಪಿಸಿ ಅಪಗತಿ ಕೊಡುವಂಥ 2 ಯಜಮಾನನು ಮಾಡಿದ ಪಾಪಂಗಳವ್ರಜವು ಬಿಡದೆ ಅನ್ನದೊಳಗಿಪ್ಪುದ ||ದ್ವಿಜನು ಭುಂಜಿಸಲಾಗಿ ಅವನ ಉದರದೊಳುನಿಜವಾಗಿ ಇಪ್ಪಾವು ಸುಜನಾರು ಲಾಲಿಸಿ 3 ಉದರದೊಳಗೆ ಬಿಚ್ಚದ ಸಾವಿರಾರುವಿಧವಾಗುವದು ಕೇಳು ||ಅದೇ ದೇಹ ಪುಷ್ಟಿ ಮಲ ರೇತಸ್ಸುಅದೇ ಪಾಪಿಗೆ ತಿಳಿಯದೆ ಭುಜಿಸುವಂಥ 4 ಕೆಳಗೆ ಕುಳ್ಳಿರಿಸಿದಾರೆ ಜ್ಞಾನಿ-ಗಳ ಬೊಗಳುವೆ ಕುನ್ನಿಯಂದದಿ ||ಒಳಗೆ ಕರೆದು ಒಯ್ದು ಬೆಳಗಿಲಿಕುಳ್ಳಿರಿಸೆ ಸಾಯಂ ಪ್ರತಿ ಸ್ತುತಿ ಮಾಡುವಾ 5 ಪ್ರಸ್ತದಾ ಮನೆಯೊಳಗೆ ಕರೆಯಾದಲ್ಲಿಗೆಸ್ವಸ್ಥಾದಿ ನೀ ಕುಳಿತುಕೊಂಡು ||ವಿಸ್ತಾರದಿ ಹಾರೈಸಿ ಪ್ರ-ಶಸ್ತವಾಯಿತೆಂದೂ ಮಸ್ತಕ ತಿರುಹುವೆ 6 ಮಾಡಿದ ಮಹಾ ಪುಣ್ಯದ ಓದನಕಾಗಿಕಾಡಿಗೊಪ್ಪಿಸಿ ಪೋದಂತಾಯಿತು ||ಗಾಡಿಕಾರ ಮೋಹನ್ನ ವಿಠಲನಪಾಡಿ ಪೊಗಳಿ ಕೊಂಡಾಡಿಕೊಂಡಿರದಂತೆ 7
--------------
ಮೋಹನದಾಸರು