ಒಟ್ಟು 2719 ಕಡೆಗಳಲ್ಲಿ , 119 ದಾಸರು , 1944 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲೌಕಿಕ ಸಂದರ್ಭದ ಹಾಡು ಯಾತಕೆ ಹೋದೆವು ದುರುಳನ ಮನೆಗೆ ಪಾತಕಿ ಇವನು ಛೇ ಛೇ ಛೇ ಪ ಏಳು ಬಿಲ್ಲಿಯ ಕೊಡಲಿಕ್ಕೆ ಬಂದ ಖೂಳನಿವನು ಈ ಮನೆಯೊಳಗೆ ತಾಳಲಾರದೆ ಬೀಸಾಟಿ ಬಂದೆನು ಶ್ರೀಲತಾಂಗಿಯ ರಮಣ ಗೋವಿಂದಾ 1 ಗುಂಡಪ್ಪನು ಯಾಗುಂಡಪ್ಪನು ರುಬು ಗುಂಡಪ್ಪನು ನಾನಿವನರಿಯೆ ಮಂಡರಂತೆ ದಿನಗಳಿವುತಲಿ ನಮ ಕಂಡು ಮಾನ್ಯ ಮಾಡದೆ ಹೋದನು 2 ಹರಿಸರ್ವೋತ್ತಮನೆಂದು ಝಾಂUಟಿ ಬಾರಿಪ ದಾಸರು ನಾವ್ ಹೌದು ವರ ಕದರುಂಡಲುಗೀಶನ ಒಡೆಯ ನಮ್ಮ ಪಾಂ- ಡುರಂಗನ ದಾಸನೆಂದು ತಿಳಿಯದಲೆ 3
--------------
ಕದರುಂಡಲಗೀಶರು
ವದನದಲಿ ಮನವೇ ನೆನಿನಾಮ ಶ್ರಿಹರಿಯಾ | ಸದಮಲದಲಿ ಮರೆಯದೆ ಬಾವದಲಿ ಪ ದಾವನು ದಾಸರ ದಾಸರ ಪದರಾ | ಜೀವ ಯುಗಳ ದರುಶನದಲಿ | ತೀವಿಕೊಂಡಿಹ ಬಹುಜನ್ಮದು ಷ್ಕøತ | ಲಾವಡಗುತಿಹವು ನಿಮಿಷದಲಿ 1 ನಾಮದ ಮಹಿಮೆಯ ತಿಳಿಯಲು ಅರಸಲು | ಅಮಹಾನಿಗಮಾಗಮದಲಿ | ವ್ಯೋಮ ಕೇಶನಾರದಾಹನುಮರೆ ಬಲ್ಲ | ನಾಮದ ಸುಖವೆಂತೋ ಭುವನದಲಿ2 ಸರ್ವಧರ್ಮಾನ್ ಪರಿತ್ಯಜ್ಯಂಬ ವಾಕ್ಯವಾ | ಅರ್ವವ ಹಿಡದು ತ್ರಿಕರ್ಣದಲಿ | ಸರ್ವಭಾವದಿ ಗುರು ಮಹಿಪತಿ ಸ್ವಾಮಿಯ | ಮೆರ್ಪಪಾದುಕ ವಿಟ್ಟು ಹೃದಯದಲಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ವಂದಿಸುವೆನು ನಿತ್ಯದೊಳು ವಂದಿಸುವೆನು ಪ ವಂದಿಸುವೆ ಗುರುಮಧ್ವರಾಯನಷ್ಟಾಂಗದೊಳು ನಿಂದಿರ್ದ ವೈಷ್ಣವಮತಚಂದ್ರವಾರಿಧಿಗೆ ಅ.ಪ ಕ್ರೋಧವರ್ಜಿತನಾಗಿ ವೈರಾಗ್ಯವನು ತೊಟ್ಟು ಬಾಧಿಸುವ ಇಂದ್ರಿಯಂಗಳನೆಲ್ಲ ಬಲಿದು ಆಧರಿಸಿ ಕ್ಷಮೆ ದಮೆ ಶಾಂತ ಸದ್ಗುಣದಿಂದ ಮಾಧುರ್ಯದೊಳು ಜನರ ಪ್ರೀತಿಕರನಾದವಗೆ 1 ಭಯವಿವರ್ಜಿತನಾಗಿ ಬಹುಲೋಭವನು ತೊರೆದು ಕ್ಷಯ ಮಾಡಿ ಮೋಹವನು ಹಿಂದುಗಳೆದು ನವವಿಧದ ಜ್ಞಾನವನು ದಶಲಕ್ಷಣಗಳಿಂದ ನಿಯತವತಿ ಕೈಕೊಂಡನಕ್ಷರ ತ್ರಯದೊಳು 2 ಏಳು ಕೋಟಿಯ ಮಹಾ ಮಂತ್ರ ಬಾಹ್ಯದ ಕೋಟೆ ನಾಲಿಗೆ ವಶಮಾಡಿ ನವದ್ವಾರಗಳು ಮೂಲಾಗ್ನಿಯಿಂ ಸುಟ್ಟು ದಶವಾಯುಗಳ ಕದವ ಸಾಲು ನಾದಗಳೆಂಬ ಕಹಳೆವಿಡಿದವಗೆ 3 ದಶವಿಧದ ಘೋಷಗಳ ಬಿಂದು ಪ್ರತಾಪದಿಂ ದಶಮನಾಗಿಯೆ ಮುಂದೆ ಡೆಂಕಣಿಯ ಹಾರಿ ಗಸಣಿಯನು ಬಿಟ್ಟು ಕಳೆಯಿಂದೇಳು ಧಾತುಗಳ ಎಸೆವ ದುರ್ಗಾಂತರಕೆ ತಾಗಲಿಟ್ಟವಗೆ 4 ಒಂದು ಮುಹೂರ್ತದಲಿ ವ್ಯಸನಗಳನು ಹೂಳಿ ಬಂಧಿಸಿಯೆ ಚಂದ್ರಾರ್ಕ ವೀಧಿಗಳ ಪ್ರಣವದೊಳು ಮುಂದೆ ಮೂಲಾಧಾರವೆಂಬ ಅರಮನೆ ಪೊಕ್ಕು ನಿಂದು ನಿಯಮದಿ ಸುಲಿದನದಿಷ್ಠಾನದರಮನೆಯ 5 ಪ್ರತ್ಯಾಹಾರದಿಂ ಮಣಿಹಾರಕದ ಮನೆಯ ಕಿತ್ತು ಕಿಚ್ಚಂ ಹಾಕಿ ಧ್ಯಾನ ಯೋಗದಿ ಬಂದ ಮತ್ತೆ ಸಂಶುದ್ಧ್ದವೆಂಬರಮನೆಯ ಕೋಲಾಹಲದಿ ಉತ್ತಮದ ಅಂಬಿಕಾ ಯೋಗದಿಚ್ಛೆಯೊಳು 6 ಜ್ಞಾನ ಮಂಟಪವೆಂಬ ರಾಜ ಮನೆಯೊಳು ನಿಂತು ಮನದೊಳು ಮೂಲ ಬಂಧದಿ ಆರು ಶಕ್ತಿಗಳ ಹೀನವಾಗಿಹ ಗುಣತ್ರಯವೆಂಬ ಗೊಲ್ಲರನು ವ- ಡ್ಯಾಣ ಬಂಧದಿ ಇರಿವುತಲಿ ಕ್ಷಿಪ್ರದಲಿ 7 ಖೇಚರಿಯ ಯೋಗದಿಂ ಕರಣ ಚತುಷ್ಟಯದ ನೀಚ ಪ್ರಧಾನಿಗಳ ನೆಗಳವನಿಕ್ಕಿ ಕಾಲ ಕರ್ಮದ ಕಣ್ಣುಗಳ ಕಿತ್ತು ಯೋಚನೆಯ ಮಾಡಿದನು ವೀರಾಸನದೊಳು 8 ಮಾಯಾ ಪ್ರಪಂಚವೆಂಬನ್ಯಾಯ ನಾಯಕರ ಕಾಯ ಉಳಿಸದೆ ಸವರಿ ವಾಸ್ತಿಯಿಂದನುಗೈದು- ಪಾಯದಿಂದಾರು ವಿಕಾರಗಳ ಕೈಗಟ್ಟಿ ಬಾಯ ಹೊಯ್ದ ಗುರುವಿಗೆರಗುವೆನು ನಾನು 9 ಇಪ್ಪತ್ತೊಂದು ಸಾವಿರವಾರು ನೂರಾದ ಉತ್ಪವನ ಉಶ್ವಾಸ ನಿಶ್ವಾಸಗಳನೆಲ್ಲ ತಪ್ಪಿಸದೆ ಕುಂಭಕದಿಂದ ಬಂಧಿಸಿಕೊಂಡು ಒಪ್ಪುವನು ಅರೆನೇತ್ರದಿಂದ ಬೆಳಗುವನು 10 ಮುನ್ನೂರ ಅರುವತ್ತು ವ್ಯಾಧಿಗಳ ಲವಳಿಯಿಂ ಬೆನ್ನ ಬೆಳೆಸಿ ಕಪಾಲ ಭೌತಿಯಿಂದಷ್ಟಮದ ವರ್ಣಾಶ್ರಮಂಗಳನು ಏಕವನು ಮಾಡಿಯೆ ನಿರ್ಣಯಿಸಿಕೊಂಡು ತಾ ನೋಡುವವಗೆ 11 ನುತಿಕರ್ಮದಿಂದಷ್ಟ ಆತ್ಮಕರ ಆಸನವ ಜೊತೆಗೂಡಿ ಜಾತ ಮಧ್ಯದ ದೃಷ್ಟಿಯಿಂದ ಅತಿವೇಗದೊಳು ನಡೆವ ಅವಸ್ಥಾತ್ರಯವೆಂಬ ಕೃತಿ ಕುದುರೆಗಳ ಯುಕುತಿಯಲ್ಲಿ ಪಿಡಿದವಗೆ 12 ನಾದದಿಂ ಪಂಚಕ್ಲೇಶ ಪ್ರಭುಗಳನು ಹೊಯ್ದು ಕಾದು ಇರುತಿಹ ಹರಿಗಳಾರು ಬಿಂದುವಿನಿಂ ಸಾಧಿಸುತ ಮಂತ್ರಭ್ರಮಣದಿಂದ ಮಲತ್ರಯದ ಆದಿ ಕರಣಿಕನನ್ನು ಹಿಡಿದವನಿಗೆ13 ದಾತೃತ್ವದಿಂ ಸತ್ಯಲೋಕವನು ತಾ ಕಂಡು ಕಾತರದಿ ಆಕಾರದುರ್ಗವನು ಹತ್ತಿ ಓತಿರುವ ತಿರಿಕೂಟವೆಂಬ ಬಾಗಿಲ ದಾಟಿ ಈ ತೆರದ ಮಹಾದುರ್ಗವನು ಕಂಡವಗೆ 14 ಅಣು ಮಾತ್ರ ಸೂಕ್ಷ್ಮದೊಳು ನೋಡಿ ತಾ ಜ್ಞಾನದೊಳು ಕುಣಿಯೊಳಗೆ ಆ ಪರಂಜ್ಯೋತಿ ಆಗಿರುತಿಪ್ಪ ಗುಣನಿಧಿಯು ವರಾಹತಿಮ್ಮಪ್ಪರಾಯನನು ಕಣು ಮನದಿ ದೃಢವಾಗಿ ನೋಡಿ ಸುಖಿಯಾದವಗೆ 15
--------------
ವರಹತಿಮ್ಮಪ್ಪ
ವಂದಿಸೋ ಎಲೆ ಮಾನವಾ ಮಾಣದೆ ಸದಾ ಒಂದೆ ಮನದಿ ಶ್ರೀವಿದ್ಯಾಮಾನ್ಯ ಮುನೀಂದ್ರರ ಪ ಧರಣಿಯಂದದಿ ಕ್ಷಮಾಭರಿತ ಮಂಗಲದಾತ | ಶರಧಿಯಂದದಿ ದಯಾಗುಣಶೀಲರೋ | ಸುರ ನದಿಯಂದದಿ ದುರಿತಪರಿಹಾರಕರು | ತರಣಿ ಭಾರ ತಿಮಿರನೋಡಿಸುವರೋ 1 ಈಶನಂದದಿ ಜಿತಪೂಶರವರ | ಕಮ | ಲಾ ಸನನಂತೆ ಭೂಸುರ ಶ್ರೇಷ್ಟರು | ಸಾಸಿರ ಮುಖನಂತೆ ಯೋಗಸುಸಾಧಕರು ಭೇಶನಂದದಿ ಸುಧಾಕರರಾಗಿ ತೋರ್ಪರೋ 2 ಶಾಮಸುಂದರವಿಠಲಸ್ವಾಮಿ ಉಪಾಸನೆ | ನೇಮದಿಂದಲಿ ಸತತಗೈಯುತಲಿ ಶ್ರೀಮಧ್ವಾರ್ಯರ ಶಾಸ್ತ್ರ ಸೋಮಪಾನದ ಸುಖ | ಪ್ರೇಮದಿಂದಲಿ ದ್ವಿಜಸ್ತೋಮಕೆಗರೆವರು 3
--------------
ಶಾಮಸುಂದರ ವಿಠಲ
ವನಜನಯನನ ಮನವ ಮಧುಪ ನಂಬುವರೆಮನದೆಗೆದ ಮದನಪಿತ ವಿಠಲರೇಯಾ ಪ ಅರಿಯದ ಬಾಲೇರಿಗೆ ತನ್ನ ಪರಿಯನರುಹಿಸಿ ಮುನ್ನನೆರೆದು ರತಿಪತಿಯ ಸುಖ ನೆರೆದೋರಿದತೊರೆದು ಬದುಕುವೆವೆಂತೋ ರತಿಪತಿಯ ಪಿತನಗಲಿವಿರಹದುರಿ ತಾನಳವಡರಿ ಸುಡುತಿಹುದು 1 ನಡೆ ನಗೆಯ ತುದಿನೋಟ ಬಲೆಯನೆಮ್ಮೊಳು ಬೀಸಿಬಿಡದೆ ಯೆಮ್ಮನು ತನ್ನ ವಶಮಾಡಿದಪಡಿಯಿಲ್ಲದನುಭವದ ಸುಖದ ಸವಿಯನೆ ತೋರಿಮಡದಿ ತಡೆದಳೊ ಮಧುರೆಯಲಿ ನಲ್ಲನ2 ಎಂದೆಂದು ನಿಮ್ಮ ವಶದಲ್ಲಿಹೆನೆಂದಭಯವಿತ್ತುಇಂದುಮುಖಿ ನಾರಿಯರ ನೆರೆ ನಂಬಿಸಿನಂದನಂದನ ನಮ್ಮ ಕಾನನದೊಳೀಡ್ಯಾಡಿಇಂದು ಮಧುರೆಯ ನಾರಿಯರ ನೆಚ್ಚಿದ 3 ಕಪಟ ತಿಳಿಯಲರಿಯದೆ ನಾವುನವ ಹರಿಣಿಯಂತೆ ಮರುಳಾಗಿ ಕೇಳಿವಿವರವರಿಯದೆ ನಾವು ಕಡು ನೊಂದೆವೆಲೊ ಮಧುಪಇವನ ಗುಣವರಿಯದೆ ಕಡುಕರುಣಿ ಎಂಬುವರು 4 ಭವ ಬಂಧನಗಳೆಲ್ಲ ಈಡ್ಯಾಡಿಗತಿ ನಮಗೆ ಅವನೆಂದು ಮನಸೋತೆವೋಕೃತಕವರಿಯದೆ ನಮ್ಮ ವನದೊಳು ನಿಲ್ಲಿಸಿ ಪೋದಪತಿಯೊಡನೆ ಸಂಧಾನವೆಂತೊ ಎಲೊ ಮಧುಪ 5 ಮರುಳುಗಳು ನಾವು ಶ್ರೀಪತಿಯ ಕೂಟವ ಬಯಸಿಇರುಳು ಹಗಲು ಜರಿಜರಿದಳಲುವೆವುಸಿರಿಯವನ ಉಂಗುಟದ ಉಗುರು ಗುಣ ಕಾಣಳೆಲೋಹರಿ ನಮ್ಮ ನೆನೆವುದಚ್ಚರಿಯಲ್ಲವೆ6 ಭೃಂಗ ಮಧುರೆಗೆ ಪೋಗಿರಂಗವಿಠಲನ ತಂದೆಮ್ಮನುಳುಹುವುದೋ 7
--------------
ಶ್ರೀಪಾದರಾಜರು
ವನಿತೆ ನೀನು ಕರೆದು ತಾರೆ ರಾಮೇಶನುಮುನಿಸಿದನೆ ನೀರೆ ಪ ಹಂಬಲಿಸುತಿದೆ ಮನ ಹೇಗೆ ನಾ ತಾಳಲೆರಂಬಿಸಿ ಪೊರೆದವನಕುಂಭ ಕುಚದ ಮೇಲೆ ಕೂರುಗುರಿನ ಬರೆಯಂಬ ಶಶಿಯ ನೇಮಗಾರನ 1 ಎನ್ನ ಮೇಲಿನಿತು ತಪ್ಪನಾದರೆ ತೋರಿಭಿನ್ನವಿಸುವುದು ಆಕನ್ನೆಯೋರ್ವಳ ಕೂಡುತಮುನ್ನಿನ ಲೇಸನು ತೋರದೆ ಎನ್ನ ಮರೆತ2 ಧರೆಯೋಳತ್ಯಧಿಕವೆಂದು ಕೆಳದಿಪುರದರಸುತನದಲೆ ನಿಂದುವರದನದಿಯ ತೀರವಾಸ ಶ್ರೀ ರಾಮೇಶನೆರದುಳುವಿದ ಲೇಸ ನಟನೆಯಿಂದ ಮಹೇಶ 3
--------------
ಕೆಳದಿ ವೆಂಕಣ್ಣ ಕವಿ
ವರದೇಂದ್ರವಿಠಲರ ಹಾಡು ಆಶೆಯ ಬಿಡಿಸಯ್ಯಾ | ಶ್ರೀಶ ಪ್ರಾ |ಣೇಶ ದಾಸರಾಯಾ ||ವಾಸುದೇವನ ಕಥೆ ಸೋಸಿಲಿ ಪಾಡುವ |ಲೇಸು ಭಕುತಿ ನೀಡೋ | ನೋಡೋ ಪ ಹರಿ ಗುರುಗಳ ಪ್ರಿಯಾ ನೆನಿಸೀ |ಮೆರೆದಿಯೊ ಗುರುರಾಯಾ ||ಸರುವದ ಶ್ರೀ ಹರಿ ಸ್ಮರಣೆಯ ಮಾಡುತ |ಧರೆಯೊಳು ಚರಿಸಿದ | ಭರದಿ 1 ಜ್ಞಾನ ಶೂನ್ಯನಾಗೀ ಜಗದಿ |ಮಾನವರಿಗೆ ಬಾಗಿ |ದಾನವಾ ಧ್ಯಾನ ಮಾಡದೇ |ಹೀನನಾದೆನು ನಾನು | ಇನ್ನೇನು 2 ವರದೇಂದ್ರರ ಸದನಾ | ಬಳಿಯಾ |ಇರುತಿಹ್ಯ ಜಿತ ಮದನಾ ||ಮರುತ ಮತದ ಸದ್ಗ್ರಂಥದ ಸಾರವ |ತ್ಪರಿತದಿಂ ಪೇಳ್ದಿ | ಬಾಳ್ದಿ 3 ಕಂದನೆಂದುಯೆನ್ನ | ಕಾಯ್ವದು |ಸುಂದರ ಗುರು ಮುನ್ನಾ ||ನಂದ ಕಂದನ ಅಂದ ಪಾದವಾ |ಚಂದದಿ ತೋರೋ | ಬಾರೋ 4 ಭಾಗವತ ಪದಧೂಳಿಯಲಿ |ಪೊರಳಾಡಿಸೋ ಯಂದೇ | ತಂದೇ 5
--------------
ಶ್ರೀಶಪ್ರಾಣೇಶವಿಠಲರು
ವರದೇಂದ್ರವಿಠಲರ ಹಾಡು ವಾಸುದೇವನ ಪುರ ಪ್ರವೇಶಿಸಿದರು |ಈಶ ಭಜಕ ಶ್ರೀಶ ಪ್ರಾಣೇಶದಾಸಾರ್ಯ ಪ ಉತ್ತಂಕ ಋಷಿಯಂತೆ ಉತ್ತಮ ಗುರುಪಾದ |ಅತ್ಯಂತ ಭಕ್ತಿಯಿಂ ಸ್ತುತಿಸಿ ಯಜಿಸಿ ||ಉತ್ತಮ ಶ್ಲೋಕ ಶ್ರೀ ಪುರುಷೋತ್ತಮನ ಗುಣವ |ನೃತ್ಯ ಗೀತದಿ ಪಾಡಿ ಮೃತ್ಯಲೋಕವ ತ್ಯಜಿಸಿ 1 ವಾಸ ವಾಸರದಲಿ ವಾಸುದೇವನ ಕಥೆಯ |ಭೂಸೂರರಿಗೆ ಪೇಳಿ ತೋಷದಿಂದ ||ವಾಸವಾದ್ಯಮರ ವಂದಿತನ ಪಾದದಿ ಭಕ್ತಿ |ಲೇಸಾಗಿ ತೋರಿ ಭವಕ್ಲೇಶವನು ಪರಿಹರಿಸಿ 2 ಅಬ್ಧನಂದನ ಭಾದ್ರಪದ ತಿಥಿ ಅಷ್ಟಮಿಯ |ಶುದ್ಧ ಭೌಮ್ಯವಾಸರದ ಉಷಃಕಾಲದಿ ||ಮುದ್ದು ಪ್ರಲ್ಹಾದನ್ನ ಪೊರೆದ ನರಹರಿರೂಪ |ಹೃದ್ಗುಹಾದಲಿ ನೋಡಿ ಹರುಷವನು ಬಡುತಲಿ 3 ದಾಸ ಕುಲ ಶ್ರೇಷ್ಠ ಗುರು ಪ್ರಾಣೇಶದಾಸರಿಂ |ಶ್ರೀಶ ಪ್ರಾಣೇಶ ವಿಠಲೆಂಬಂಕಿತಾ ||ಸೋಸಿನಿಂದಲಿ ಪಡೆದು ಶ್ರೀಶ ಮಹಿಮೆ ಉ- |ಲ್ಲಾಸದಿಂದಲಿ ಭಜಿಸಿ ಬೇಸರವನಳಿಯುತಾ 4 ಮರುತನೆ ಪರಮ ಗುರು, ಹರಿಯೆ ಪರದೇವತೆ |ಪುರಂದರರೆ ದಾಸರೆಂದರುಹಿ ಧರೆಗೆ ||ವರದೇಂದ್ರ ವಿಠಲನ ಚರಣವನು ಪೂಜಿಸಿ |ದರಣಿ ಸಾಧನವನ್ನು ತ್ವರಿತದಿಂದಲಿ ಮುಗಿಸಿ 5
--------------
ಶ್ರೀಶಪ್ರಾಣೇಶವಿಠಲರು
ವರದೇಶವಿಠಲರ ಹಾಡು ದಾಸರಾಯರ ದಿವ್ಯ ಚರಣ ಭಜಿಸಿ |ಶ್ರೀಶ ಪ್ರಾಣೇಶ ದಾಸಾರ್ಯ ಗುರುವರ್ಯ ಪ ಪಾದ ಭಜಿಪ ಸದ್ಭಕ್ತರ |ಏಸು ಜನ್ಮದ ಪಾಪರಾಶಿ ಪರಿಹರ ವೋ ||ಶ್ರೀಶನಲಿ ಸದ್ಭಕ್ತಿ ಲೇಸಾಗಿ ಪುಟ್ಟುವದು |ಲೇಶ ಸಂಶಯವಿಲ್ಲ ಆಲಸವು ಸಲ್ಲ 1 ಮರುತ ಮತ ತತ್ವಗಳ ಥೆರೆಗಳಿಂಸೂಸುತ |ಧರಣಿ ದ್ವಿಜರಿಗೆ ರಾಮನಾಮ ಮೃತ ||ನಿರುತ ಭಜಿಸಲು ಜ್ಞಾನ ವೈರಾಗ್ಯ ತರಮಣಿಯ |ಹರಿಭಕುತಿ ಧೇನುವಂ ನೀಡ್ವ ಪಾಲ್ಗಡಲೆನಿಪ 2 ಸುಜ್ಞಾನವೆಂಬಂಥ ಕಿರಣಗಳ ಪಸರಿಸುವ |ಅಜ್ಞಾನ ತಿಮಿರವನು ದೂರೋಡಿಪ |ಸೂಜ್ಞರೆಂಬುವ ತಾವರೆಗಳರಳಿಸುವಂಥ |ಅಜ್ಞ ಕುಮುದಗಳ ಬಾಡಿಸುವ ಭಾಸ್ಕರ ನೆನಿಪ 3 ನಮಿತ ಜನ ಭವತಾಪ ಕಳೆದು ಸದ್ಭಕ್ತಿಯಿಂ |ಬಮಿತ ಆಹ್ಲಾದವನು ಬೀರುವಂಥ ||ಶಮದಮಾದಿಗಳ ಚಂದ್ರಿಕೆಯಿಂದ ಶೋಭಿಸುವ |ವಿಮಲ ಹರಿಜನ ಚಕೋರಕೆ ಚಂದ್ರನೆಂದೆನಿಪ 4 ದಾಸ ಕುಲತಿಲಕ ಪ್ರಾಣೇಶರಾಯರ ಕವನ |ಶ್ರೀಶ ಕಥೆಗಳ ರಾಶಿ ಮೀಸಲಾಗಿರಲು |ಆಸು ಭಕ್ತರಿಗೆ ಸಂತೋಷಗೊಳಿಸಲು ಸರ್ವ |ದೇಶದಲಿ ಮೆರಿಸಿ ಸತ್‍ಕೀರ್ತಿಯನು ಪಡೆದಂಥ 5 ಈ ಗುರುಗಳ ಪಾದಕ್ಕೆರಗಿದ್ದ ಶಿರಧನ್ಯ |ಈ ಗುರುಗಳೀಕ್ಷಿಸಿದ ನೇತ್ರ ಧನ್ಯ ||ಈ ಗುರುಗಳ ವಾಣಿ ಕೇಳಿದ ಕಿವಿಧನ್ಯ |ಈ ಗುರುಗಳನು ಮನದಿ ನೆನೆವ ನರಧನ್ಯ 6 ರಾಗ ದ್ವೇಷಾದಿಗಳ ಗೆದ್ದು ಸದ್ಭಕ್ತಿಯಂ |ಶ್ರೀಗುರು ಪ್ರಾಣೇಶ ಭಜಕರೆನಿಪ |ನಾಗ ಪರ್ಯಂಕ ವರದೇಶ ವಿಠಲನ ಪ್ರಿಯಯೋಗಿ ವರದೇಂದ್ರ ಮುನಿಗಳ ಪಾದಭೃಂಗ 7
--------------
ಶ್ರೀಶಪ್ರಾಣೇಶವಿಠಲರು
ವರ್ಣಿಸಲರಿಯೆ ನಿನ್ನ | ವರ್ಣಿಸಲರಿಯೆ ಗು | ಣಾರ್ಣವ ಹರಿಯೆ ಸೂ | ವರ್ಣ ಗಿರೀಶ ಸು | ಗಮನ ರಂಗಾ ಪ ಕುಂಡಲ ಮಿನುಗುವ ಹಸ್ತ ಕಂಕಣ ಬೆರಳುಂಗರ | ಕೌಸ್ತುಭ ಕಂಬು ಸೂದರು | ಶನ ಭುಜಕೀರ್ತಿ ಭೂ | ಷಣವಾದ ಶಿರ ಉರುವ ಒಪ್ಪಲು ಕಿಂ | ಕಿಣಿ ಕನಕಾಂಬರವ ಪೂಸಿದ ಗಂಧ | ಪುನುಗು ಜವ್ವಾದಿಯಿಂದೆಸೆವ ಸುರತರುವೆ 1 ಕಾಂಚಿದಾಮ ಥಳಿ | ಥಳಿಸುವ ಪದಕ ನ್ಯಾ | ತುಂಬಲು ಸೂಸುತಿರೆ ದಂತಾ | ಮಾತಾರಗಿಳಿಯಂತೆ ಶೋಭಿಸಿ | ಕಪೋಲ ಸುತ್ತಲು ಬೆಳಗುವ ಕಂಗಳ ನಾಸಕಾಂತಿ | ಸಿರಿ ತಿರುವೆಂಗಳಾ2 ಕಟಿ ಕರ ಎರಡೇಳು ಲೋಕ ಜಠರದೊಳಡಗಿರೆ | ಕರಿ ಪಲ್ಲಿನಂತೆ ಸುಂದರ ಜಂಘೆ ಗುಲ್ಫ ವಿ | ಪಾದ ನಖ ಪರಿ ಪರಿ ರೇಖೆಗಳ ಕಾಲಿಂದಿಗೆ | ನಿತ್ಯ ಮಂಗಳಾ 3 ನಿರಯ ತ್ತಮ ಜನ ಮನೋರಥ | ಗಮ ಸಿದ್ಧಾಂತನೆ ವಿ | ಕ್ರಮದಾನವ ಹರ | ಕೋಟಿ ಪ್ರಕಾಶಾ | ವೆಂಕಟೇಶಾ | ಅಪ್ರಾಕೃತ | ಪ್ರಮೆಯಭರಿತನಾದ | ಕುರುವಂಶ ವಿನಾಶಾ 4 ಭೂಗೋಳದೊಳಗಿದರಾಗಮ ತಿಳಿ | ದುರಗ ಗಿರಿ ಯಾತ್ರಿಗೆ | ಭೋಗದಾಶೆಯ ಬಿಟ್ಟು | ವೇಗದಿಂದಲಿ ನಿಜ | ಭವ ಸಾಗಿ ಬರಲು ಚನ್ನಾಗಿ ಜ್ಞಾನವ ನೀವುತ್ತ ಸಾಕುವಂಥ | ಶ್ರೀ ಗುರು ವಿಜಯವಿಠ್ಠಲ ಭಕ್ತರ ದಾತಾ5
--------------
ವಿಜಯದಾಸ
ವಾಣೀ ನೀ ತೋರೆ ವಾರಿಜನಾಭನ, ಮಹಾಲಾಭನ್ನ ನಿತ್ಯ ಸುಲಭನ ಭಾನು ಸನ್ನಿಭನ ಪ ಕ್ಷೋಣೀಯೊಳಗಣ ಪ್ರಾಣಶ್ರೇಷ್ಠ - ಜಗ ತ್ರಾಣನ ತೋರಿಸೆ ಭಾನು ಸನ್ನಿಭಳೆ ಅ. ಪ. ಚೈತನ್ಯರಾಣಿ ಪುಸ್ತಕಪಾಣಿ-ಸುನೀಲವೇಣಿ ಅತ್ಯಂತ ಮಹಿಮೆ ಗುಣಗುಣಶ್ರೇಣಿ ತ್ರಿಲೋಕ ಜನನಿ ಸತ್ಯವ ತೋರುತ ನಿತ್ಯೋಪಾದಿಲಿ ಸತ್ಯ ಸಂಕಲ್ಪಳೆ ನಿತ್ಯದಿ ಪೂಜಿಪೆ ತ್ವತ್ಪಾದಾಂಬುಜವಿತ್ತು ನೀ ಸಲಹೆ1 ನಾಲಿಗೆಯಲ್ಲಿ ಬಂದು ನಿಂದು ದಯದಿಂದ ಇಂದು ಶ್ರೀಲೋಲ ಹರಿಯೆ ದೈವವೆಂದು ಕೊಂಡಾಡೆ ಮುಂದು ಕಾಲ ಹಿಂಗಿಸಿ ವಿ- ಶಾಲ ಮತಿಯ ಕೊಟ್ಟು ಆಳುಗಳೊಡನೆ ಸು- ಶೀಲ ಜ್ಞಾನವಿತ್ತು ಆಲಸ್ಯಮಾಡದೆ ಶೀಲ ಮುಕ್ತಿಗನುಕೂಲವಾಗುವುದಕ್ಕೆ2 ಜನ್ಮ ಬಂದಿದೆ ಕಡೆಗೆ ಮಾಡು ದಯದಿಂದ ನೋಡು ಘನ ಕೀರ್ತಿವಂತೆ ಅಭಯವ ನೀಡು, ನಿನಗಲ್ಲ ಈಡು ಕನಸಿಲಿ ಮನಸಿಲಿ ಮನಸಿಜನೈಯನ ನೆನೆಸುವ ಸೌಭಾಗ್ಯವನುದಿನ ಕೊಟ್ಟು ಘನಪ್ರೇರಣೆಯಿಂದ ವಿಜಯವಿಠ್ಠಲನಂಘ್ರಿ ವನಜವ ತೋರಿ ಸನ್ಮೋದವನೀಯೆ3
--------------
ವಿಜಯದಾಸ
ವಾದಿರಾಜ ಗುರು ಮಾನತೋಸ್ಮಿ ಸತತಂ |ಕಲ್ಯಾದಿ ದೈತ್ಯ ನಿವಾರಣ ನಿಪುಣಂ ಪ ಭವಾರ್ಣವ ತರಣಂ 1 ಹಯಮುಖ ನಿಸ್ಸøತ ಶ್ರುತಿ ಸತ್ಶ್ರ್ಯವಣಂಹಯಮುಖ ಪದ ಸದ್ವನಜ ಸುದಾಸಂ |ಹಯಮುಖ ಪ್ರೀತ್ಯೈ ವಿರಚಿತ ಶಾಸ್ತ್ರಂತ್ರಯಿ ಮುಯಿ ರಸ ಸ್ವಪ್ನಾಖ್ಯಾನಂ 2 ಗುರು ಗೋವಿಂದ ವಿಠ್ಠಲ ವರ ಭಕ್ತೇಶಂಸುರ ಮುಖ ದ್ವಿಜವರ ಸರ್ವ ಸುಸೇವ್ಯಂ |ಪರಮತ ಮದಕರಿ ಪಂಚ ಸುವಕ್ತ್ರಂಪರಿಪಾಲಯ ಮಾಂ ತವ ಭಕ್ತಣುಗಂ 3
--------------
ಗುರುಗೋವಿಂದವಿಠಲರು
ವಾದಿರಾಜ ಪ್ರತಿವಾದಿ ಗಜೇಂದ್ರ ಧ ರಾಧರಾಟ ವಿಬೋಧದಿ ಚಂದ್ರ ಪ ಸಮಯವಿದೆಂದು ಉತ್ಕøಮಣವ ತೊರೆದೆ 1 ಬಂದು ಕರೆಯಲು ಪುರಂದರನಾಳ್ಗಳ ಹಿಂದಟ್ಟಿದೆ ಕರ್ಮಂದಿಗಳರಸ 2 ಆರ್ಥಿಗಳಿಗೆ ಪರಮಾರ್ಥ ಕೊಡುವ ಸ ತ್ತೀರ್ಥ ಪ್ರಬಂಧವ ಕೀರ್ತನೆ ಗೈದೆ 3 ಅದ್ವೈತ ಸಮಿಧಿ ಮಧ್ವ ಸುಸಿದ್ಧಾಂ ತಿಧ್ಮಜಿಂಹದಿ ಪ್ರಧ್ವಂಶಿಸಿದೆ 4 ಪಾವನೀಯ ಸುಮತಾವಲಂಬಿಗಳ ತಾವಕರೆಂದೀವುದು ವರವ 5 ಎಲರುಣಿ ಭಯಕಂಜಿಲಿ ನಿಮ್ಮಾಸನ ಕೆಳಗಿರೆ ಕಂಡದನುಳುಹಿದೆ ಕರುಣಿ 6 ಹಯಮುಖ ಪಾದದ್ವಯ ಭಕ್ತಾಗ್ರನೀ ದಯದಿ ವಿಪ್ರನಿಗೆ ನಯನಗಳಿತ್ತೆ 7 ಭಾಗೀರಥಿಯಂತ್ಯೋಗಿ ವರಗುರು ವಾಗೀಶರ ಕರಾಬ್ಜ ಸಂಭವನೆ 8 ನಮಿಪೆ ತ್ವತ್ಪದಕಮಲಗಳಿಗೆಮ ಧ್ವಮತ ಸರೋರುಹ ದ್ಯುಮಣಿಯೆ ನಿರುತ 9 ಗರಮಿಶ್ರಿತ ನರಹರಿ ನೈವೇದ್ಯವ ನರಿತು ಪೇಳೆ ಉಂಡರಗಿಸಿಕೊಂಡೆ 10 ಪೂತಾತ್ಮ ಜಗನ್ನಾಥವಿಠಲನ ಖ್ಯಾತಿಯ ತುತಿಸುವನಾಥ ಜನಾಪ್ತ 11
--------------
ಜಗನ್ನಾಥದಾಸರು
ವಾದೀಗಳಾಗೆದ್ದು ಸಿದ್ಧಾಂತ ಸ್ಥಾಪಿಸಿ ಮುದ್ದು ಕೃಷನ ತಂದ ವೇದ ವ್ಯಾಸರ ಪ್ರಿಯ ಮಧ್ವರಾಯ ಮಧ್ವರಾಯ ಪ ಬಿದ್ದೆ ನಿಮ್ಮಯ ಚಲುವ ಪಾದಪದ್ಮಂಗಳಿಗೆ ವೇದ ಮಧ್ವರಾಯ ಮಧ್ವರಾಯ ಅ.ಪ ತಂದು ಚೂಡಾಮಣಿ ನಿಂದೆ ರಾಮನ ಮುಂದೆ ಮಧ್ವರಾಯ ಮಧ್ವರಾಯ ಕಂದನು ಎಂತೆಂದು ಮುಂದೆ ಪಾಲಿಸ ಬೇಕು ಮಧ್ವರಾಯ ಮಧ್ವರಾಯ 1 ದ್ವಾಪರ ಯುಗದಲ್ಲಿ ದ್ರೌಪದಿ ಗಂಡನೆನಿಸಿ ಪಾಪಿಗಳಾಕೊಂದು ಪತಿ ಸೇವೆ ಮಾಡ್ದೆ ಮಧ್ವರಾಯ ಮಧ್ವರಾಯ ಕೋಪವು ಮಾಡದೆ ತಾಪಗಳೋಡಿಸಿ ಗೋಪಾಲ ಕೃಷ್ಣನ ಕೃಪೆಯ ಕೊಡಿಸೈಯ ಮಧ್ವರಾಯ ಮಧ್ವರಾಯ 2 ದುರುಳ ಮಾಯಿಗಳೆಲ್ಲ ಹರಿಯ ದೂರುತ್ತಿರಲು ಸುರರ ಮಧ್ವರಾಯ ಮಧ್ವರಾಯ ಭವ ಬಿಡಿಸಿ ವೀರ ವೈಷ್ಣವ ನೆನಿಸಿ ಸಾರಿ ಸಾರಿಸ ಬೇಕು ಹರಿಯ ನಾಮವನ್ನು ಮಧ್ವರಾಯ ಮಧ್ವರಾಯ 3 ಲೋಕದಿ ಸಜ್ಜನರ ಸಾಕಬೇಕು ಎಂದು ಬೇಕೆಂದು ಯತಿಯಾದೆ ಶ್ರೀಕಾಂತ ಪಟ್ಟಪುತ್ರ ಮಧ್ವರಾಯ ಮಧ್ವರಾಯ ನೂಕೋದುರಿತ ರಾಶಿ ಲೋಕಕ್ಕೆಲ್ಲಾ ಗುರು ಮಧ್ವರಾಯ ಮಧ್ವರಾಯ 4 ಸುರರೆಲ್ಲ ಪರಿವಾರ ತಾರತಮ್ಯವ ತೋರ್ದೆ ಮಧ್ವರಾಯ ಮಧ್ವರಾಯ ಸೂರಿಗಳೊಡೆಯನೆ ಭಾರತಿ ಪ್ರಾಣಕಾಂತ ಮಧ್ವರಾಯ ಮಧ್ವರಾಯ5 ಮತ್ತೆ ಹರಿಯಮತದಂತೆ ಬರೆದೆಯೊ ಹೊಸ ಭಾಷ್ಯ ಮಧ್ವರಾಯ ಮಧ್ವರಾಯ ಪೊರೆದೆ ಹರಿಯಪ್ರಧಮಾಂಗ ವೀರ ಮಾರುತಿ ದೇವ ಮಧ್ವರಾಯ ಮಧ್ವರಾಯ 6 ಬೃಹತೀಗೆ ನೀ ಪ್ರತಿಮ ಬಹುರೂಪ ಧಾರಕ ವಹಿಸೊ ಎಮ್ಮೆಯ ಅಹಿ ಭೂಷಣ ಪ್ರಿಯ ಮಧ್ವರಾಯ ಮಧ್ವರಾಯ ದಹಿಸೋ ಸೋಹಂ ಜ್ಞಾನ ಮಹಿಯೊಳು ಅಪ್ರತಿಮ ಮಧ್ವರಾಯ ಮಧ್ವರಾಯ 7 ಜಪ ಬೇರೆ ಬೇರೆ ಮಾಡಿ ಮೂರು ಗತಿಯ ತೋರ್ಪೆ ಮಧ್ವರಾಯ ಮಧ್ವರಾಯ ಭಾರೀಶಕ್ತನು ನೀನು ಆರು ಸರಿಯು ನಿನಗೆ ಮಧ್ವರಾಯ ಮಧ್ವರಾಯ 8 ಆನಂದ ಶಾಸ್ತ್ರವ ಸಾನುರಾಗದಿ ಪೇಳ್ದೆ ಮಧ್ವರಾಯ ಮಧ್ವರಾಯ ಮಾನವ ಜ್ಞಾನಾದಿಗಳ ಕೊಟ್ಟು ಕಾಯ ಬೇಕೋ ಮಧ್ವರಾಯ ಮಧ್ವರಾಯ 9 ಜಗ ಭಾರವ ವಹಿಸಿದೆ ಮೇರೆ ಗಾಣದ ಸತ್ವ ಮಧ್ವರಾಯ ಮಧ್ವರಾಯ ಹರಿಯ ಅರಿವ ಮರ್ಮ ಕರುಣದಿ ಅರುಹೈಯ್ಯ ಮಧ್ವರಾಯ ಮಧ್ವರಾಯ 10 ಅಮರ ವೃಂದಕ್ಕೆಲ್ಲ ಹರಿಯ ತೋರಿಸಿ ಕೊಟ್ಟೆ ಮಧ್ವರಾಯ ಮಧ್ವರಾಯ ಬೊಮ್ಮದೇವಗು ಬಲವ ಕೊಟ್ಟನ್ನ ಕೊಳ್ಳುವೆ ಮಧ್ವರಾಯ ಮಧ್ವರಾಯ 11 ಬಂದು ಮೂವತ್ತೇಳು ಸುಂದರ ಗ್ರಂಥ ಮಾಡ್ದೆ ಮಧ್ವರಾಯ ಮಧ್ವರಾಯ ಶುದ್ದ ಸತ್ವಮೂರ್ತಿ ಬದ್ಧನು ನೀನಲ್ಲ ವದ್ದು ಅವಿದ್ಯೆಯ ತಿದ್ದೊ ಎಮ್ಮೆಯ ಮನ ಮಧ್ವರಾಯ ಮಧ್ವರಾಯ 12 ಅಖಿಳಾಗಮಾವೇತ್ತ ಸುಖದ ಪ್ರಾರಬ್ಧವೋ ಮಧ್ವರಾಯ ಮಧ್ವರಾಯ ಸಕಲ ಲಕ್ಷಣವಂತ ಸಕಲ ತತ್ವರಪತಿ ಮಧ್ವರಾಯ ಮಧ್ವರಾಯ 13 ತತ್ವೇಶ ರೊಳಗೆಲ್ಲ ನಿನ್ನವ್ಯಾಪಾರವು ಉತ್ತಮ ನಿನ್ನಲ್ಲಿ ಹರಿಯ ವ್ಯಾಪಾರವು ಮಧ್ವರಾಯ ಮಧ್ವರಾಯ ನಿತ್ಯ ಕೃಷ್ಣನಕಾಂಬ ಸೂತ್ರನಾಮಕದೊರೆ ಮಧ್ವರಾಯ 14 ಉತ್ತುಮೋತ್ತುಮ ವಿಷ್ಣು ನಿನ್ನ ದ್ವಾರವೆ ವಲಿವ ಮಧ್ವರಾಯ ಮಧ್ವರಾಯ ನಿತ್ಯ ತೃಪ್ತನಿಗೀವೆ ನಿಷ್ಕಾಮ ಭಕ್ತಿ ನಿಧಿ ಮಧ್ವರಾಯ ಮಧ್ವರಾಯ15 ದಿವಿಜಾನಾಯಕ ನೀನು ಪಾದ್ಯ ಹೌದಯ್ಯಮಧ್ವರಾಯ ಮಧ್ವರಾಯ ಸೇವಕರೆನಿಸುವ ಭಾಗ್ಯವಿತ್ತು ಕಾಯೋ ಮಧ್ವರಾಯ ಮಧ್ವರಾಯ 16 ನಾಗಾರಿಶಿವ ಗುರುವೆ ಭವ ಬಿಡಿಸು ಮಧ್ವರಾಯ ಮಧ್ವರಾಯ ನೀಗಿಸು ಇವರ ಬಾಧೆ ಪಂಚ ಕೋಶಗ ಪ್ರಾಣ ಮಧ್ವರಾಯ ಮಧ್ವರಾಯ17 ಶ್ರೀ ಪತಿದಯದಿಂದ ತಾಳ ಹಾಕುವ ಶಕ್ತ ಮಧ್ವರಾಯ ಮಧ್ವರಾಯ ನೀಪಾಲಿಸಿದ ರುಂಟು ಏನೆಂಬೆ ನಿಮ್ಮ ಮಹಿಮೆ ಮಧ್ವರಾಯ ಮಧ್ವರಾಯ18 ಭಾನುಸ್ಥ ಪ್ರಭು ನೀನು ಆಧ್ಯಾತ್ಮಗತನಾಗಿ | ಸಾನುರಾಗದಿ ಜಗ ಜೇಷ್ಟೆಯ ನಡಿಸುವೆ ಮಧ್ವರಾಯ ಮಧ್ವರಾಯ ಶ್ರೀನಿವಾಸನ ಪೂರ್ಣ ಕೃಪೆಗೆ ನೀ ಪಾತ್ರನು | ಪೂರ್ಣ ಭೋದ ಗುರುವೆ ದೀನರೆಮ್ಮನು ಪಿಡಿ ಮಧ್ವರಾಯ ಮಧ್ವರಾಯ19 ಅಣವು ಮಹದ್ ಘನ ಪೂರ್ಣ ಪ್ರಜ್ಞನು ನೀನು | ಅನ್ನಜೀವರು ನಿನಗೆ ಅನ್ನ ಶ್ರೀಶಗೆ ನೀನು ಮಧ್ವರಾಯ ಮಧ್ವರಾಯ ನಿನ್ನ ರೂಪಗಳಲ್ಲಿ ನ್ಯೂನವಿಲ್ಲವು ಗುಣದಿ | ಮಣಿಸದೆ ಚಿತ್ತದಲ್ಲಿ ಉಣಿಸೋ ಹರಿ ಕೀರ್ತನೆ ಮಧ್ವರಾಯ ಮಧ್ವರಾಯ 20 ಭೇದಬೊಧೆಯ ನಿತ್ತು ಉದ್ದಾರ ಮಾಡಿದೆ | ವಾದಿ ಭೀಕರಯತಿ ಶ್ರೆದ್ಧೆ ಮನೋಹರ ಮಧ್ವರಾಯ ಮಧ್ವರಾಯ ಮುದ್ದು ಕೃಷ್ಣನ ತಂದು ತಿದ್ದಿ ಪದ್ದತಿಗಳ | ಶುದ್ಧವೈಷ್ಣವರಿಗೆಲ್ಲ ವೃದ್ಧಿ ಮಾಡಿದೆ ಭಕ್ತಿ ಮಧ್ವರಾಯ ಮಧ್ವರಾಯ 21 ಗುರು ಪ್ರಾಣ ನಾಥನೆ ಹರಿಯ ಮನದಂತೆ | ಪರಿಪರಿಲೀಲೆಯ ನಿರುತ ತೋರುತಲಿಪ್ಪೆ ಮಧ್ವರಾಯ ಮಧ್ವರಾಯ ಭರತ ಪ್ರಭುವೆ ನಿನ್ನ ಚರಣವ ಸಾರಿದೆ | ಗಾರು ಸಂಸಾರದಿ ದಾರಿ ತೋರಲಿ ಬೇಕು ಮಧ್ವರಾಯ ಮಧ್ವರಾಯ 22 ಜಯ ಜಯ ಜಯ ಹನುಮ ಜಯ ಜಯ ಜಯ ಭಿಮ ಮುಖ್ಯಪ್ರಾಣ ಮರಾಮರಾ ಜಯ ಜಯತೀರ್ಥ ವ್ಯಂದ್ಯನೆ ಜಯ ಕೃಷ್ಣವಿಠಲನ ಮಧ್ವರಾಯ ಮಧ್ವರಾಯ 23
--------------
ಕೃಷ್ಣವಿಠಲದಾಸರು
ವಾದೀಂದ್ರ ಗುರುರಾಜ ನಿನ್ನ ಪಾದವ ತೋರಿಸಯ್ಯಾ ವಾದೀಂದ್ರ ಗುರು ನಿನ್ನ ಪಾದವ ನಂಬಿದೆ ಮೋದವÀ ಕೊಡುವುದು ಮದಗಳೋಡಿಸಿ ಪ ಉಪೇಂದ್ರ ಕರಕಮಲಜಾತ ಪಾಪಗಳೋಡಿಸಯ್ಯ ಪಾಪರಾಶಿಯ ಸುಟ್ಟು ದ್ರೌಪದೀವರದನ ಕೃಪೆಯಾಗುವಂತೆ ಮಾಡೋ ಶ್ರೀಪತಿ ಪ್ರಿಯನೆ 1 ಮೂಲರಾಮರ ಪಾದಪದುಮದಿ ಅಳಿಯಂತಿಪ್ಪ ಧೀರ ಶೀಲಾದಿ ಗುಣವಿತ್ತು ಶ್ರೀ ಲೋಲನಂಘ್ರಿಯ ಮಲಿನ ಮನವ ಕಳದು ಪೊಳೆಯುವಂತೆ ಮಾಡೋ2 ನಿತ್ಯ ಭಂಗಗಳೋಡಿಸುವಿ ಶೃಂಗಾರ ತುಳಸಿಯ ಮಂಗಳ್ಹಾರವ ಧರಿಸಿ ತುಂಗಮಹಿಮ ನರಸಿಂಗ ಮೂರುತಿ ತೋರೊ 3
--------------
ಪ್ರದ್ಯುಮ್ನತೀರ್ಥರು