ಒಟ್ಟು 1946 ಕಡೆಗಳಲ್ಲಿ , 107 ದಾಸರು , 1460 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಚ್ಚರಿಕೆ ಎಚ್ಚರಿಕೆ ಮನವೆ - ನಮ್ಮಅಚ್ಯುತನ ಪಾದಾರವಿಂದ ಧ್ಯಾನದಲಿ ಪ.ಆಶಾಪಾಶದೊಳಗೆ ಸಿಲುಕಿ - ಬಹುಕ್ಲೇಶಪಟ್ಟು ತುಟ್ಟ ಸುಖದ ಮರುಳಿಕ್ಕಿಹೇಸಿ ಸಂಸಾರದಲಿ ಸಿಲ್ಕಿ -ಮಾಯಾಕ್ಲೇಶಅಂಬರಕೇಳಾಗೆ ಮೈಮರೆತು ಸೊಕ್ಕಿ1ಹಣ - ಹೆಣ್ಣು - ಮಣ್ಣಾಸೆ ವ್ಯರ್ಥ - ಈತನುವಿಗೆ ಯಮಪುರ ಪಯಣವೇನಿತ್ಯಮೂರು ಶೃಂಗಾರಗಳುಮಿಥ್ಯ - ಅಂತಕನ ಯಾತನೆಗಳಿಗೆ ಹರಿನಾಮ ಪತ್ಯ 2ತೊಗಲ ಚೀಲ ಒಂಬತ್ತು ಹರುಕು -ನರಬಿಗಿದುಕಟ್ಟಿ ಒಳಗೆ ಎಲುವುಗಳ ಸಿಲುಕುಬಗೆರಕ್ತ - ಮಾಂಸದ ಹುಳುಕು - ಒಳಗೆ ಮಲ - ಕಫ -ವಾತ- ಪಿತ್ತದಸರಕು3ದುಷ್ಟರ ಸಹವಾಸ ಹೀನ - ಬಲುಇಷ್ಟ ಜನಸಂಗವು ಹರಕೆ ಬಹುಮಾನಎಷ್ಟು ಓದಿದರಷ್ಟು ಜ್ಞಾನ - ಆದರಲ್ಲಿಟ್ಟು ಭಕುತಿಯ ತಿಳಿಯಲೊ ಸಾವಧಾನ 4ನಾಲಿಗೆಯ ಹರಿಯ ಬೀಡಬೇಡ - ತಿಂಡಿವಾಳರ ರುಚಿವಾತಗಳನೊರಿಸಬೇಡಹಾಳು ಮಾತು ಗೊಡಬೇಡ -ಶ್ರೀಲೋಲ ಪುರಂದರವಿಠಲನ ಬಿಡಬೇಡ 5
--------------
ಪುರಂದರದಾಸರು
ಎಂತು ವರ್ಣಿಸಲಹುದು ಸಿರಿವರನಸಿರಿನಾರಸಿಂಹನಪಅಂತರಂಗದಿ ಹರಿಯ ಸ್ಮರಣೆಯಸಂತತವು ಬಿಡದಂತೆ ಮಾಡುವಕಂತುಪಿತ ಭಕ್ತರನು ಪೊರೆಯಲುನಿಂತಿರುವ ಸಿರಿಕಾಂತನೆನುತಲಿ ಅಪನಿಷ್ಠೆಯಿಂದಲಿ ಬೆಟ್ಟವೇರುತ್ತಹರಿಭಕುತರೆಲ್ಲರುಕಷ್ಟಗಳ ಪರಿಹರಿಸು ಎಂದೆನುತಮನಮುಟ್ಟಿ ಭಜಿಪರುಸೃಷ್ಟಿಕರ್ತನೆ ರಕ್ಷಿಸೆಂದೆನುತಇಷ್ಟದಾಯಕ ನಿನ್ನ ಮಹಿಮೆಯಎಷ್ಟು ಪೊಗಳುವರಯ್ಯ ಕೇಶವಭಕ್ತರನು ಉದ್ಧರಿಸಲೋಸುಗಬೆಟ್ಟದಲಿ ಉದ್ಭವಿಸಿದಾತನ 1ವಾಸುದೇವನ ಮಹಿಮೆ ಪೊಗಳುತ್ತ ನ-ರಸಿಂಹ ಲಕ್ಷೀ ನಾರಸಿಂಹ ನ-ರಸಿಂಹ ನರಸಿಂಹ ಎಂದೆನುತ ಹರಿ-ದಾಸರೆಲ್ಲರು ಸಾರಸಾಕ್ಷನೆ ನಿನ್ನ ಪೊಗಳುತ್ತದ್ವಾರ ದ್ವಾರದಿ ಪೂಜೆUಷÉೂಳ್ಳುತಮಾರಪಿತ ಮಹಲಕ್ಷೀ ಸಹಿತದಿದೋರ ರಥÀದೆಡೆಯಲ್ಲಿ ನಿಲ್ಲುತತೇರ ನೇರುವ ಶ್ರೀ ರಮೇಶನ 2ಸಾರಪದಕಗಳಿಂದ ಶೋಭಿಸುತ ಝಳಝಳಿಪವಜ್ರದ ತೋರ ಮುತ್ತಿನ ಮಾಲೆಹೊಳೆಯುತ್ತ ಥಳಥÀಳಿಪ ನೊಸಲಲಿಸಾರಕಸ್ತೂರಿ ತಿಲಕ ರಂಜಿಸುತಮಾರಬಿಲ್ಲೆಂತೆಸೆವ ಪುಬ್ಬಿನಚಾರುತರ ಶೃಂಗಾರ ನಯನದವಾರೆ ನೋಟÀದಿ ನೋಡಿ ಭಕುತರ ಅ-ಪಾರದುಃಖಗಳನ್ನ ನೀಗುವರ3ಕೋಟಿಸೂರ್ಯಪ್ರಕಾಶಮಯವಾದನವರತ್ನ ಖಚಿತ ಕಿರೀಟಕುಂಡಲಧರಿಸಿ ಅನುವಾದಎಡಬಲದ ಭುಜದಲಿಮಾಟದ ಭುಜಕೀರ್ತಿ ಸುಲಲಿತದನೋಟಕಾಶ್ಚರ್ಯವನೆ ತೋರುತಶ್ರೀ ಕಳತ್ರನು ರಥದಿ ಮೆರೆಯುತ ದಿ-ವಾಕರನ ಪ್ರಭೆಯಂತೆ ಪೊಳೆಯುವರಮಾ ಮನೋಹರ ರಮೆಯ ರಮಣನ 4ಛತ್ರಿ ಚಾಮರಗಳನೆ ಪಿಡಿದಿಹರು ಎಡಬಲದಿಸ್ತುತಿಸುತ ಎತ್ತಿ ಸ್ವರಗಳ ಗಾನಪಾಡುವರುಚಿತ್ತೈಸುಹರಿಬಾ ಬಾರಿತ್ತಬಾಬಾರೆಂದು ಕರೆಯುವರುಸುತ್ತ ತುಂಬರು ನಾರದರಪರಿನೃತ್ಯಗಾನಗಳಿಂದ ಸ್ತುತಿಪರುಕರ್ತೃ ಕಮಲನಾಭ ವಿಠ್ಠಲರ-ಥೋತ್ಸವದಿ ನಲಿನಲಿವ ದೇವನ 5
--------------
ನಿಡಗುರುಕಿ ಜೀವೂಬಾಯಿ
ಎತ್ತಿರೆಕೋಲಅರ್ಥಿಲೆಕೆಲದೆಯರು ಸತ್ಯ ಕನ್ಯಳೆ ದ್ರೌಪತಿ ಎಂದು ಪ.ಮತ್ತೆ ಅಭಿಮಾನಿಯೆಂದುನಿತ್ಯಉತ್ಪತ್ತಿಯೆಂದುಸತ್ಯ ಕನ್ಯಳೆ ದ್ರೌಪತಿಯೆಂದು 1ಒಂದೇ ಮಂದಿರದಲ್ಲಿ ಪೊಂದಿದ್ದ ಜನರಂತೆಅವರಿಂದ ಹೊರಗಾಗುವಳೆ ಜಾಣೆ 2ಧರ್ಮ ಶ್ಯಾಮಲೆ ಬೆರಿಯೆ ಅಮ್ಮ ದ್ರೌಪತಾದೇವಿಸುಮ್ಮನಿಹಳೇ ಬಾರೆ ನೀರೆ 3ವನಜಾಕ್ಷಿ ಭೀಮ ಬರಲು ತನುಮನ ಸೂರೆಗೊಂಡುಘನಮಹಿಮನ ಬೆರೆಯೋಳೆ4ಅರ್ಜುನ ಶಚಿಯು ಬೆರಿಯೆ ನಿರ್ಜರೋತ್ತಮಳು ತಾನುವರ್ಜಿಸಿ ಸುಖವ ದೂರಾಗಿಹೋಳು 5ಮತ್ತೆ ಸಹದೇವ ನಕುಲ ಪತ್ನಿಯ ಬೆರೆಯಲುಪ್ರತ್ಯಕ್ಷ ಇಹಳು ಚತುರಳು 6ಕಾಂತ ರಮಣನುಕೇಳಿಸಂತೊಷ ಬಡಲು ಭಾಗ್ಯಸಂತಾನ ಕೊಡುವ ರಮಿ ಅರಸು 7
--------------
ಗಲಗಲಿಅವ್ವನವರು
ಎಂಥ ವಿಕ್ರಮಳೆ ನೀನುಎಂಥ ವಿಕ್ರಮಳೆ ನಿನಗೆಣೆ ಯಾರು ಶ್ರೀ ಲಕ್ಷ್ಮೀ-ಕಾಂತ ರೂಪದಿ ಕೊಂದೆ ಮಧುಕೈಟಭರ ದೇವಿಪಹರಿಕಿವಿಯಲಿ ಅವತರಿಸಿ ಮಧು ಕೈಟಭರ-ವರೆನಿಸಿ ಪಡೆಯೆ ವಿಧಿಯಿಂ ವರವಅರಿದುವಿಷ್ಣುವಿನಿಂದ ಮರಣ ಇವರಿಗೆಂದುಸ್ಮರಣೆಯ ಮಾಡಿದ ದೇವಿ ಪಾದಪಂಕಜಪರಮಮಂಗಳ ವಿಷ್ಣು ಎಬ್ಬಿಸು ಈ ಕ್ಷಣಹರಣವನೆ ಕಾಯಲಿ ಮೂರ್ವರು ನಿಮ್ಮಚರಣವ ನಂಬಿರಲಿ ಎತ್ತಿದಳಾಗಅರಳಿದವು ಕಣ್ಣು ಉಸಿರಾಡಿತು ಮೂಗಿನಲಿ1ಎದ್ದವನಚ್ಯುತ ಬ್ರಹ್ಮ ಏಳನೇ ಶರಧಿಯೊಳೆದ್ದ ಬಡಬನಂದದಲಿ ಮೃತ್ಯುವಗೆದ್ದ ಮೃತ್ಯುವಿನಂತಾಗಲು ಸಿಡಿಲಿನಮುದ್ದೆಯಂದದಿ ಕಣ್ಣ ಕಿಡಿಯುಕ್ಕೆ ಔಡಗಿ-ದೆದ್ದು ಚಕ್ರಕೆ ಕೈಯನಿಕ್ಕುತ ಹೊಯ್ದನುಅದ್ದಲು ಆ ಮಧುವ ಕೈಟಭನನ್ನುಒದ್ದು ಹಾಕಿದ ಶಿರವ ಇಬ್ಬರ ಕೂಡೆಬಿದ್ದರು ಮಹಾಹವ ಮೂರ್ವರ ಬಹು-ಯುದ್ಧವ ಹೇಳುವುದೇನು ಆ ಬಹು ರೌದ್ರವ2ಆದುದು ಪಂಚ ಸಹಸ್ರ ವರುಷ ಯುದ್ಧತೊಯ್ದರು ರಕ್ತದಿ ಕ್ರೋಧದುಬ್ಬಟ್ಟೆಯಿಂದಕಾದು ಕರಗಿದುದುಕವು ವಿಷ್ಣು ಬೇಸರ್ತ-ಮದ ಬೇಡಿರಿ ವರವನು ನೀಬೇಡೆನೆ ಕೊಟ್ಟ-ರಾದರೆ ಚಕ್ರದಿ ತಲೆ ಹರಿಯಲೆಂದುಛೇದಿಸಿದನು ಶಿರವ ಮೇಧಸು ಕೊಬ್ಬುಮೇದಿನಿಯಾದಿರವ ಹೊಗಳಿದ ಬ್ರಹ್ಮಮಾಧವನ ಸ್ತೋತ್ರವ ತಾನೆಯಾದಬೋಧಚಿದಾನಂದ ಬಗಳಾ ಚಾರಿತ್ರವ3
--------------
ಚಿದಾನಂದ ಅವಧೂತರು
ಎಂಥಾ ಚಲುವ ಶ್ರೀಹರಿಭಕ್ತರೋದ್ಧಾರಿಎಂಥಾ ಚಲುವ ಶ್ರೀಹರಿಪಎಂಥಾ ಚಲುವ ಲಕ್ಷ್ಮೀಕಾಂತ ಶ್ರೀಭೂಸಹಿತಚಿಂತಿತಾರ್ಥವ ನೀವ ಕಂತುಪಿತನುಹರಿಅಪಚರಣದಂದುಗೆ ಗೆಜ್ಜೆಯು ಘಲುಘಲುರೆಂದುಮೆರೆವ ಪೈಜನರುಳಿಯು ಜರದ ಪೀತಾಂಬರವುನಡುವಿನ ಚಲ್ಲಣವು ಸಡಗರದಿಂದ ನಿಂತಮದನಗೋಪಾಲನು ಹೃದಯದಿ ಹಾರವುಕೌಸ್ತುಭಹೊಳೆಯಲು ವಿಧವಿಧಪದಕಗಳಿಂದಲಿ ಶೋಭಿಪಅದ್ಭುತ ಮಹಿಮನು ವಿಧಿಭವವಂದ್ಯನುಸದಮಲಕಾಯನು ಸಚ್ಚಿದಾನಂದನು 1ಕರದಿ ಕಂಕಣ ಭೂಷಣ ಕರುಣದಿ ಸುರರಪೊರೆವ ವೈಭವ ಕಾರಣಕರವತೋರುತ ತನ್ನಚರಣಸೇವೆಯ ಮಾಳ್ಪಪರಮಭಕ್ತರನೆಲ್ಲ ತ್ವರದಿ ಪಾಲಿಪೆನೆಂದುಸುರವರ ವಂದ್ಯನು ಪರಿಪರಿವರಗಳಕರದು ನೀಡುವಸಿರಿಕರಿರಾಜವರದನುಸರಸಿಜನಾಭಸನ್ಮಂಗಳ ಮಹಿಮನುಉರಗಗಿರಿಯ ಶ್ರೀವರಶ್ರೀನಿವಾಸನು2ಪಟ್ಟೆನಾಮವು ಘಣೆಯೊಳುಕಸ್ತೂರಿ ತಿಲಕ ಒಪ್ಪುತಿರೆ ವ್ಯೆಭವದೊಳುಸರ್ಪಶಯನ ಸರ್ವೋತ್ತಮ ಸಿರದೊಳುರತ್ನಕಿರೀಟನಿಟ್ಟು ಅತ್ಯಂತ ಶೋಭಿಸಲುಸುತ್ತಲ ಚಾಮರವೆತ್ತಿ ಬೀಸುತಿರೆನರ್ತನ ಗಾಯನ ವಿಸ್ತರಿಸಲು ಪುರು-ಷೋತ್ತಮ ತಾನಿರ್ಲಿಪ್ತನಾಗಿ ಸರ್ವಕರ್ತೃಕಮಲನಾಭವಿಠ್ಠಲ ಸರ್ವೋತ್ತಮ3
--------------
ನಿಡಗುರುಕಿ ಜೀವೂಬಾಯಿ
ಎನ್ನ ಪಾಲಿಸು ಪರಮಕಾಯ ರಘುರನ್ನ ರಾಮನ ಪ್ರಿಯ ಗುರುಮಧ್ವರಾಯ ಪ.ಅಂಜನಿ ಆತ್ಮದಲಿ ಬಂದು ರಾಮನಪಾದಕಂಜವಿಡಿದೆ ಕಡಲ ಲಂಘಿಸಿದೆ ಗೋಷ್ಪದದಿಪಂಜು ಬೆಳಗಿದೆ ನಿಶಾಚರನ ಪಟ್ಟಣವಳಿದೆಕಂಜಾಕ್ಷಿಯಳ ತುಷ್ಟಿಗೈದೆ ಗಡಾಸಂಜೀವ ತಂದು ಕಪಿಬಲವ ರಕ್ಷಿಸಿದೆ 1ಕುರುಕುಲಾಧಮನು ಬಲುಸೊಕ್ಕಿ ಸಂಗರಭಟರನೆರಹಿ ಪಾರ್ಥರ ಬಲವ ಗೆಲುವೆನೆಂದವನ ಭರಮುರಿದೆ ಮಹರಥಿಕರೆದೆ ಹರಿದೆ ಅಸಹಾಯ ಶೂರಸರಿಯಾರು ನಿನಗಸಮಧೀರ ಭಾಪುಕರುಣಾಸಾಗರ ಉದಾರ ಅಜಪದದಧಿಕಾರ 2ಏಕವಿಂಶತಿಮಾಯಿ ರಚಿತ ಭಾಷ್ಯವ ಜರಿದೆಶ್ರೀಕಾಂತನ ನಾಮಾಮೃತವ ಭಕ್ತರಿಗೆರೆದೆಭೂಕನಕ ವಧು ವಿಷಯಕಾಂಕ್ಷೆಗಳ ಮೇಲೊದೆದೆಲೋಕಕೊಬ್ಬನೆ ಗುರುವೆ ಮೆರೆದೆ ವಿಶ್ವೇಶ ಪ್ರಸನ್ನವೆಂಕಟೇಶನಂಘ್ರಿವಿಡಿದೆ 3
--------------
ಪ್ರಸನ್ನವೆಂಕಟದಾಸರು
ಎರೆದು ಪೀತಾಂಬರÀವನುಡಿಸಿದಳಾಗವರಗೋಪಿಯು ಬೇಗಪಮುರುಳಿಯನೂದುತ ಪರಿಪರಿ ಗೆಳೆಯರುಪರಮಾತ್ಮನೆ ನಿನ್ನರಸುತಲಿಹರೆಂದು ಅಪಗುರುಳು ಕೂದಲು ಮುಖದಲ್ಲಿ ಹೊಸ ಬೆವರುಥಳಥಳಿಸುತಲಿಹುದುಎಳೆಯ ಶ್ರೀ ತುಳಸಿಯ ವನಮಾಲೆಗಳುಗಳದಲಿ ಶೋಭಿಪುದುಅರಳು ಮಲ್ಲಿಗೆ ಪುಷ್ಪದ ಹಾರಗಳುಮುತ್ತಿನ ಪದಕಗಳುಕೊರಳೊಳು ಮುತ್ತಿನ ಸರಗಳಿಂದೊಪ್ಪುತಮುರುಳಿಯ ನೂದುತ ಸರಸರ ಬಾರೆಂದು 1ಗುರುಳು ಕೂದಲೊಳೊಪ್ಪುವ ಅರಳೆಲೆಯುಸೊಗಸಿನ ನವಿಲ್ಗರಿಯುಬಿಗಿದು ಸುತ್ತಿದ ಸಿರದಲಿ ಕೇಶಗಳುಅತಿ ಶೋಭಿಸುತಿಹವುಚದುರಿದ ಕೇಶದಿ ಕೆಂದೂಳಿಗಳುಮಧುವೈರಿಯ ಕೇಳುವಿಧವಿಧ ರಾಗದಿ ಪಾಡುತ ನಿನ್ನನುಸದನದಿ ಪೂಜಿಸಿ ನೋಡುವೆ ಬಾರೆಂದು 2ನೊಸಲಲ್ಲಿ ಕುಡಿನಾಮವನಿಟ್ಟಿಹಳುನೋಡುತ ಹಿಗ್ಗುವಳುಎಸಳು ಕಣ್ಣಿಗೆ ಕಪ್ಪನೆ ತೀಡುವಳುಬಣ್ಣಿಸಿ ಕರೆಯುವಳುಎಸೆವೊ ಕರ್ಣಕೆ ನೀಲದ ಬಾವುಲಿಯೂರತ್ನದ ಚೌಕಳಿಯುಬಿಸುಜನಾಭ ನಿನ್ನ ಶಶಿಮುಖಿಯರುಗಳುರಸಕಸಿ ಮಾಳ್ಪರು ಹಸನಾಗಿ ಕೂಡೆಂದು 3ಅರಳುಕೆಂದಾವರೆ ಪೋಲುವಚರಣಸ್ಮರಿಸುವರಘಹರಣಸುರರುಕಿನ್ನರರೋಲೈಸುವಚರಣವರಸುಗುಣಾಭರಣಘಲುಘಲುಘಲುರೆಂದೊಪ್ಪುವಚರಣಸಜ್ಜನರಾಭರಣಅಡಿಯಿಡುತಲಿ ಬಾ ಮೃಡಸಖ ನಿನ್ನಯಅಡಿಗೆರಗುವರೈ ತಡೆಯದೆ ಬಾರೆಂದು 4ವರಹಸ್ತದಿ ಬೆಣ್ಣೆಯ ಮುದ್ದೆಯ ಕೊಡುವೆಬಾರೆನ್ನಯ ದೊರೆಯೆಜರದೊಲ್ಲಿಯ ಮುರಳಿಸಹಿತ ನಡುವಿಗೆ ಕಟ್ಟುವೆನುಬಾ ಭಕುತರ ಪೊರೆಯೆಉಗುರಿಂದ ಗಿರಿಯನು ಎತ್ತಿದ ಧಣಿಯೆಸುರಚಿಂತಾಮಣಿಯೆಹಗಲು ಇರಳು ನಿನ್ನಗಲಿರಲಾರೆ ಶ್ರೀ-ಕಮಲನಾಭವಿಠ್ಠಲ ಬೇಗಬಾರೆಂದು 5
--------------
ನಿಡಗುರುಕಿ ಜೀವೂಬಾಯಿ
ಎಷ್ಟು ಸಾಹಸ ಬಟ್ಟಳಮ್ಮ ಧಿಟ್ಟೆ ರುಕ್ಮಿಣಿಇಷ್ಟು ನಾರಿಯರೊಳಗೆಶ್ರೀ ಕೃಷ್ಣ ತನಗೆ ಒಲಿಯಲೆಂದು ಪ.ಮಂಚವಾಗಿ ಮನೆಯು ಆಗಿಪಂಚರತ್ನದ ವಸ್ತಗಳಾಗಿಮಿಂಚುದೀವಿಗೆ ಮಲ್ಲಿಗೆಸಂಪಿಗೆ ಕೆಂಚಿತಾನಾಗಿ 1ಮಂದಗಮನೆ ಸಹವಾಸವಒಂದೂ ಲೆಕ್ಕಿಸದಲೆ ಕೃಷ್ಣಚಂದ್ರ ಸೂರ್ಯರ ಚದುರರನಿರ್ಮಿಸಿ ಚಂದದಿ ತೋರಿದನೆ 2ವಟ ಪತ್ರಳು ತಾನಾಗಿಚಟುಲಚಮತ್ಕಾರಿ ಯಾಗಿಸಟಿಯಿಲ್ಲದೆ ರಾತ್ರಿ ಒಲವುಕುಟಿಲದಿ ತೋರಿದಳೆ 3ದೇಶಕಾಲತಾನಾಗಿ ರಾಮೇಶÀಗೆತೋರಿದಳೆ ಕುಶಲಲೇಸು ಲೆಕ್ಕಿಸದೆಗುಣದ ರಾಶಿ ತೋರಿದಳೆ 4
--------------
ಗಲಗಲಿಅವ್ವನವರು
ಎಷ್ಟೆಂದು ಬಣ್ಣಿಪೆ ಗುರುಸತ್ಯಪೂರ್ಣನದೃಷ್ಟಾಂತವ ಕಾಣೆನಾಶಿಷ್ಟ ಜನರಿಗೆ ಚಿಂತಾಮಣಿ ದೊರಕಿದಂತಿಷ್ಟಾರ್ಥದಾಯಕನಾ ಪ.ಶ್ರೀರಾಮ ವ್ಯಾಸರ ಸೇವೆಗೆ ಪೂರ್ವದಲ್ಲಾರಾಧನೆ ಮಾಡುತಧಾರುಣಿ ಮೇಲವತರಿಸಿದ ದ್ವಿಜಕುಲವಾರಿಧಿಚಂದ್ರನಂತೆ1ವೇದ ವೇದಾಂತ ಸಕಳಶಾಸ್ತ್ರಕ್ಷಿಪ್ರದಿಂದೋದಿ ಶ್ರೀ ಮಧ್ವಶಾಸ್ತ್ರಬೋಧವಕೇಳಿಮಹಾಭಕುತಿಲಿಗುರುಪಾದಾಬ್ಜ ನಂಬಿ ನಿಂತ 2ಬ್ರಹ್ಮಚರ್ಯಾಶ್ರಮ ಮೊದಲಾಗಿ ದಿನ ದಿನನಿರ್ಮಲ ಕಳೆಯನಾಂತಉಮ್ಮಯದಿಂದ ಷಟ್ಕರ್ಮಸಾಧನವಾದದsÀರ್ಮದ ದಾರಿಲಿ ನಿಂತ 3ತಾಯಿ ಮಕ್ಕಳ ಸಾಕಿದಂತೆ ಗುರುಕೃಪಾಪೀಯೂಷವನುಂಡು ತಾಬಾಯೆಂದು ಕರೆಸಿಕೊಂಡಖಿಳಾರ್ಥ ಪಡೆದ ನಿಷ್ಕಾಯನ ತೇಜವಂತ 4ನಿತ್ಯದಿ ಕರ್ಮಕೆ ಕುಂದಾಗಲಿಲ್ಲಗ್ನಿಹೋತ್ರ ಸಹಿತ ಸುವಾನಪ್ರಸ್ಥನಾಗಿ ಭೋಗಾಸಕ್ತಿಯ ತೊರೆದ ವಿರಕ್ತಿಭಾಗ್ಯಾನ್ವಿತನ5ಬಣ್ಣವಿಟ್ಟಿಹ ಚೊಕ್ಕ ಚಿನ್ನನೊ ಅಭ್ರಗೆದ್ಹುಣ್ಣಿಮೆ ಚಂದ್ರಮನೊಉನ್ನತಗುರು ಸತ್ಯಾಭಿನವ ತೀರ್ಥರಪುಣ್ಯವೆ ನೀನೊ ಯತಿರನ್ನನೊ 6ಹೀಗೆಂದು ಸುಜನರು ಹೊಗಳಲು ಶ್ರೀಪಾದಯೋಗಿತಾನೆನಿಸಿದನುಮ್ಯಾಗೆ ಮ್ಯಾಗದ್ಭುತ ಪಾಂಡಿತ್ಯವೆಂಬ ವಲ್ಲಿಗೆ ಹಬ್ಬುಗೆನಿತ್ತನು 7ಗುರುಗಳಭೀಷ್ಟೆ ಪೂರೈಸಿತು ಶ್ರೀರಘುವರನ ಮೂರ್ಧನಿಯಲಿಟ್ಟುಸ್ಥಿರ ಪಟ್ಟಾಭಿಷೇಕವಾಂಗೀಕರಿಸಿ ಜಗದ್ಗುರುವೆ ತಾನಾದಕರ್ತ8ದಿವ್ಯ ನಾಚಾರ ಕ್ಷೇತ್ರದಿ ಹರಿಸ್ಮರಣಿಂದಹವ್ಯಸಾಂಕಿತ ಗುರುಗಳುಆ ವ್ಯಯಾಬ್ದ ಜ್ಯೇಷ್ಠಾಧಿಕ ಶುದ್ಧ ಚತುರ್ದಶಿದಿವಸ ದಿವಿಗೆ ಸಾಗಲು 9ಹರಿಪಾದಯಾತ್ರೆಗೆ ಗುರುಗಳೈದಿದÀ ಮೇಲೆಪರಮದುಃಖಿತಮೌಳಿತ್ವರಿಯದಿ ವೃಂದಾವನ ವಿರಚಿಸಿದ ಮುನಿವರನ ಮಹಿಮೆಯಕೇಳಿ10ಪೃಥ್ವಿಪರಿಂದ ಪೂಜಿಸಿಕೊಂಡುದುರ್ವಾದಿಮೊತ್ತವ ಗೆಲುತಲಿಹಅರ್ಥಿಲಿ ಜಯಪತ್ರವನು ಜಯಿಸುತಗುರುಚಿತ್ತಕರ್ಪಿಸುತಲಿಹ 11ನಿಜಗುರುದಯದಿಂದ ದುರಿತತಮವ ಗೆದ್ದಂಬುಜ ಸಖನಂತೊಪ್ಪುವತ್ರಿಜಗವಂದಿತರಾದ ವೇದ ವ್ಯಾಸಾಂಘ್ರಿಯಭಜನ ಭಾಗ್ಯದೊಳೊಪ್ಪುವ 12ಧ್ಯಾನ ಮೌನ ಸದ್ವ್ಯಾಖ್ಯಾನ ಪೂರ್ಣನುಜ್ಞಾನ ಭಕುತಿಪೂರ್ಣನುಏನೆಂಬುವಿರೊ ಕರುಣಗುಣ ಪೂರ್ಣನುದಾನ ಮುದ್ರಾಪೂರ್ಣನು 13ಗುರುಸತ್ಯಾಭಿನವ ತೀರ್ಥರ ಸತ್ಯಪೂರ್ಣನು*ವರದರಾಜಯತಿಯೊಳು ದಯಾಪೂರ್ಣನುಸರಸೋಕ್ತಿ ಪರಿಪೂರ್ಣನು 14ತಂದೆ ಸತ್ಯಾಭಿನವಾಂಬುಧಿಜಾತ ತತ್ವಾರ್ಥವೃಂದರುಚಿರ ಪೂರ್ಣನುಎಂದು ಪ್ರಸನ್ವೆಂಕಟ ಪ್ರಿಯಾನಿಲಮತಸಿದ್ಗಾಂತದಿ ಪೂರ್ಣನು 15
--------------
ಪ್ರಸನ್ನವೆಂಕಟದಾಸರು
ಏನಮಾಡಿದರೆನ್ನ ಭವಹಿಂಗದು |ದಾನವಾಂತಕ ನಿನ್ನ ದಯವಾಗದನಕ ಪಅರುಣೋದಯಲೆದ್ದು ಅತಿಸ್ನಾನಗಳ ಮಾಡಿ |ಬೆರಳನೆಣಿಸುತ ಸ್ಮರಿಸಿ ನಿಜವರಿಯದೆ ||ಶರಣು ಸಾಷ್ಟಾಂಗವನು ಹಾಕಿದೆನು ಶತಸಹಸ್ರ |ಹರಿನಿನ್ನ ಕರುಣಾ ಕಟಾಕ್ಷವಿರದನಕ1ಶೃತಿಶಾಸ್ತ್ರ ಪುರಾಣಗಳನೋದಿ ಬೆಂಡಾದೆ |ಅತಿ ಶೀಲಗಳನೆಲ್ಲ ಮಾಡಿ ದಣಿದೆ ||ಗತಿಯ ಪಡೆಯುವೆನೆಂದು ಗಯೆ ಕಾಶಿಯ ಮಾಡಿದೆನು |ರತಿಪತಿಯ ಪಿತ ನಿನ್ನ ದಯವಾಗದನಕ 2ದಾನವನು ಮಾಡಿದೆನು ಮೌನವನು ತಾಳಿದೆನು |ಙ್ಞÕನ ಪುರುಷಾರ್ಥಕ್ಕೆ ಮನವೀಯದೆ ||ಶ್ರೀನಾಥ ದಯಪೂರ್ಣ ಪುರಂದರವಿಠಲನ |ಧ್ಯಾನಿಸುವರೊಡನಾಡಿ ನೆಲೆಗೊಳ್ಳದನಕ 3
--------------
ಪುರಂದರದಾಸರು
ಏನು ಕೌತಕ ಕೃಷ್ಣ ತಾನೆ ಕನಸಿನೊಳು |ಮಾನವರ ತೆರನಂತೆ ಮುರುಳಾಡಿಸಿದನೆನ್ನ ಪಹಿಂದೆ ಮಾಡಿದ ಪದವ ಒಂದು ಹೇಳೆಂದೆನುತ |ಮುಂದೆ ಅದರಂದವನು ಎಲ್ಲ ತಾಪೇಳ್ದ ||ಒಂದು ದೋಸೆಯ ತನಗೆ ತಂದುಕೊಡು ಎಂದೆನಲು |ತಿಂದ ಮೀಸಲಕೊಡೆನು ಎಂದು ಹೇಳಿದೆನು 1ಮೋಸಹೋದೆನು ನಾನು ದೋಸೆಯನು ಹರಿಗೆ-ಆ-ಪೋಶನವನಿಕ್ಕದೇ ಪೋಷಿಸಿದೆನು ||ಮಿಸಲಾದರು ಅಹುದು ದೋಷವಿಲ್ಲೆಂದೆನುತ |ಆಸುರದ ಮಾತುಗಳ ವಾಸಿತೋರಿಸಿದನು 2ಎಳೆಯ ಪ್ರಾಯದೊಳಿರುವ ಚೆಲುವೆಯೊರ್ವಳು ಬಂದು |ಹೊಳೆಯೊಳಗೆ ಈಸಾಡಿ ನಲಿವುದನು ನೋಡಿ ||ನಳಿನಮುಖಿಯನು ಮೇಲೆ ಕರೆಸಲಾ ಮೈಲಿಗೆಯ |ತೊಳಕೊಂಡು ಒಳಯಿಂಕೆ ಬಂದುದನು ಕಂಡೆ 3ಈ ರೀತಿ ಸಿರಿಸಹಿತ ವಾರಿಜಾಕ್ಷನು ಕೃಷ್ಣ |ತೋರಿದನು ಸ್ವಪ್ನ ಕಣ್ಣಾರೆ ನೋಡಿದೆನು ||ಹಾರಿಹೋಯಿತು ಕಷ್ಟ ಸೂರೆಗೊಂಡೆನು ಸಿರಿಯ |ಏರಿ ಬಂದುದು ಶುಭದ ವಾರಿಧಿಯು ಮುಂದೆ.................... 4ಈ ಮಹಾಮೂರ್ತಿಯನು ಜಾವಪರ್ಯಂತರದಿ |ಕಾಮಿಸಿಯೆ ನೋಡಿದೆನು ಸೌಮ್ಯನಸ್ಯದಲಿ ||ಆ ಮಹಾ ಹರಿಯು ಪರಧಾಮವನು ಕೈಕೊಂಡು |ಭೂಮಿಪತಿಯಾಗಿರ್ದ ಪುರಂದರವಿಠಲ........................... 5
--------------
ಪುರಂದರದಾಸರು
ಏನು ಗತಿಯೊ ಮುಂದೆನಗೆ ಗೋವಿಂದಶ್ರೀನಿವಾಸ ರಕ್ಷಿಸದಿರೆ ದಯದಿಂದ ಪ.ನಿಶಿದಿನ ಹಸಿವುತೃಷೆಸುಡುವ ಕುಮರಿಯುಮಸಿವರ್ಣ ಮಾಡಿ ಕೇರಿಡಿವ ಮೂರುರಿಯು 1ನಾಚಿಕಿಲ್ಲದ ವಿಷಯಾಸೆಯಸಹ್ಯನೀಚ ದುರುಕ್ತಿಯಸ್ತ್ತ್ರದ ಘನಗಾಯ 2ಮಾಯದ ಕಡಲೊಳು ಕಟ್ಟಿಹ ಕೊರಳುಆಯಾಸ ಬಡುತ ಬಡುತ ಬಿದ್ದಿತುರುಳು 3ಎಳ್ಳನಿತು ಜ್ಞಾನ ಅಹಂಕಾರ ಬಹಳಘಲ್ಲನೆ ತಗಲುವ ಜ್ಞಾನದಶೂಲ4ಮರಹುಮದಗಳೆಂಬ ಮುಸುಕಿದ ಮೆಳೆಯುಪರದಾರ ಪರನಿಂದೆಯಗ್ನಿಯ ಮಳೆಯು 5ಬೇಡಿದ ಬಯಕೆ ಸಾಧ್ಯಾಗದ ನೋವುಮೂಢತನದಿ ದಿನ ನೂಕುವ ಸಾವು 6ಇನ್ನಾರೆ ಸಜ್ಜನ ಸಂಗಕೌಷಧಮುನ್ನ ಕೊಡಿಸೊ ಪ್ರಸನ್ವೆಂಕಟ ಮುಕುಂದ 7
--------------
ಪ್ರಸನ್ನವೆಂಕಟದಾಸರು
ಏನೊ ರಂಗ ನಿನ್ನ ವನಿತೆಯೊಳಪರಾಧಧ್ಯಾನಿಸಲು ದೊರಕೊಂಬುದೆನೀನಗಲಬೇಡ ತರಳೆಗಭಯವ ಕೊಟ್ಟುಮೌನದಲಿ ನಡೆಯೊ ಮನೆಗೆ ಬೇಗ ಪ.ಸ್ಮರನ ದಾಳಿಗೆ ಕಂದಿ ಕುಂದಿ ಬಳ್ಕಡಿಯಿಡುತವಿರಹಾಗ್ನಿಗನ್ನತೊರೆದು ಸ್ಮರಿಸುವಳುನಿರುತ ನಿನ್ನಯ ಗುಣಾವಳಿಗಳನುಕರಿಸೋತರಳೆಯ ಕೂಡೊ ಕೋಪ ಬೇಡೊ ನೋಡೊ 1ಪರಮಪುರುಷ ನೀ ಅವಳ ಜರಿದ ಕಾರಣಸೋಮಕಿರಣ ವಿಷಸಮ ಝಳದಪರಿತೋರಿ ಬಳಲುವಳು ಸಖಿಭೃಂಗ ಕಳಕಕೆತರಳೆ ಕೂಡೊ ಕೋಪ ಬೇಡೊ ನೋಡೊ 2ನಲ್ಲ ನಿನ್ನ ಸಂಗ ಬಯಕೆಗೆ ಕಣ್ಣ ತೇಲಿಸುವಳಲ್ಲೊ ತೊದಲ್ಲು ನುಡಿವಳಲ್ಲೊಮೆಲ್ಲನೆದೆ ನೋಡಿ ಸುಯಿಗರೆವಳು ಖಗಾಂಕಜನಬಿಲ್ಲಿಗೆಬಲಿಕೊಡಲಿ ಬಾರೊ ತೋರೊ3ಪಯನಿಧಿ ಒಡೆಯನ್ಯಾಕೆ ಬಾರನೆಂದವಳು ತನ್ನಯ ಸುದತಿಯರ ಬೈವಳುನಯನಧsರವಿರಸಿ ಕಂಬನಿದುಂಬುವಳು ಗಡಪ್ರಿಯಳರಸೆಜಾರವಿರಸಹರಿಸೊ4ನಿನ್ನ ನಂಬಿದಳಿಗಿಂತಾಗುತಿರೆ ಸುಮ್ಮನಿಹೆಎನ್ನ ಹೇಯ ಬಾರದೆನಲುಉನ್ನತ ಹಯವನೇರಿ ಬಂದವಳ ನೆರೆದ ಪ್ರಸನ್ನ ವೆಂಕಟನಾಯಕರಸಿಕ5
--------------
ಪ್ರಸನ್ನವೆಂಕಟದಾಸರು
ಏಳು ಶ್ರೀ ಗುರುರಾಯ ಬೆಳಗಾಯಿತಿಂದುಧೂಳಿ ದರುಶನ ಕೊಡಿರಿ ಈ ವೇಳೆ ಶಿಷ್ಯರಿಗೆ ಪ.ಏಳುಗುರುರಾಘವೇಂದ್ರ ಏಳು ದಯಾಗುಣಸಾಂದ್ರಏಳು ವೈಷ್ಣವ ಕುಮುದಚಂದ್ರ ಶ್ರೀ ರಾಘವೇಂದ್ರ ಅ.ಪ.ಅಶನವಸನಗಳಿಲ್ಲವೆಂಬವ್ಯಸನಗಳಿಲ್ಲಮುಸುಕ್ಹಾಕಿ ಮೋಸದಲೆ ಮೋಹಿಸಿದೆನೆಲ್ಲಅಸುರಾರಿಯ ಸ್ಮರಿಸದೆ ಪಶುವಿನೊಲು ಈ ದೇಹವಸುಮತಿಯೊಳು ಬಹಳ್ಹಸಗೆಟ್ಟಿತಲ್ಲ 1ನಾನು ನನ್ನದು ಎಂದು ಹೀನಮನಸಿಗೆ ತಂದುಏನು ಮಾಡುವಕರ್ಮನಾನೆ ಅಹುದೆಂದುಸ್ವಾಮಿ ಕರ್ತೃತ್ವವನು ತಿಳಿಯಲಿಲ್ಲ ನಾನೊಂದುನೀನೆ ಉದ್ಧರಿಸಯ್ಯ ದೀನ ದಯಾಸಿಂಧು 2ಅನ್ಯರ ಕೈಯಲ್ಲಿ ನಿನ್ನವರನಿರಿಸುವುದುಅನ್ಯಾಯವಾಯ್ತುಪಾವನ್ನಗುರುರಾಯಎನ್ನ ಮಾತಲ್ಲವಿದು ನಿನ್ನ ಮಾತೇ ಸರಿಮನ್ನಿಸಿ ಆಗು ಪ್ರಸನ್ನ ಗುರುರಾಯ 3ವೇದ ಶಾಸ್ತ್ತ್ರಗಳನ್ನು ಓದಿ ಪೇಳ್ದವನಲ್ಲಭೇದಾಭೇದವನು ತಿಳಿಯಲಿಲ್ಲಸಾಧು ಸಜ್ಜನರ ಸಹವಾಸ ಮೊದಲಿಲ್ಲಹಿಂದಾಗಿಮಾನಮಾರಿಸಿದಿ ಉಳಿಸಲಿಲ್ಲ4ಆಸೆಗೊಳಗಾದೆನೊ ಹೇಸಿ ಮನುಜನು ನಾನುಕ್ಲೇಶಭವಸಾಗರದೊಳೀಸುತಿಹೆನೊಏಸುಜನ್ಮದಿ ಎನ್ನಘಾಸಿಮಾಡಿದೆ ಮುನ್ನದಾಸನಾಗುವೆ ತೋರೊ ಪ್ರಸನ್ನವೆಂಕಟನ 5
--------------
ಪ್ರಸನ್ನವೆಂಕಟದಾಸರು
ಓಡಿ ಬಾರಯ್ಯ ವೈಕುಂಠಪತಿ ನಿನ್ನನೋಡುವೆ ಮನದಣಿಯೆ ಪನೋಡಿ ಮುದ್ದಾಡಿ ಮಾತಾಡಿ ಸಂತೋಷದಿಪಾಡಿ ಪೊಗಳುವೆನುಪರಮಪುರುಷಹರಿಅ.ಪಕೆಂದಾವರೆಯಂತೆ ಪಾದಂಗಳೆರಡುಅಂದುಗೆಕಿರಿಗೆಜ್ಜೆ ಘಲುಘಲುರೆನುತ ||ಚೆಂದದಿ ಪೀತಾಂಬರವಲೆದಾಡುತಕುಂದಣದುಡುದಾರ ಝಣ ಝಣ ಝಣಕುತ 1ಕೋಟಿ ಸೂರ್ಯ ಪ್ರಕಾಶಗಳಿಂದಲಿ ಲ-ಲಾಟದಲ್ಲಿ ಇಟ್ಟ ಕಸ್ತುರಿ ತಿಲಕ ||ಕೂಟದ ಗೋಪಾಂಗನೆಯರ ಕೂಡೆಆಟ ಸಾಕು ಬಾರೋ ಅರವಿಂದ ನಯನ 2ಕಿರುತುರುಬಿನ ಮೇಲೆ ಒಲೆವುತಿರುತಿರೆಮುರುಗು ಮಲ್ಲಿಗೆ ಜಾಜಿ ಶ್ರೀತುಳಸೀ ||ಕರದಲಿ ಪಿಡಿದಾ ಪೊಂಗೊಳಲೂದುತತಿರಿತಿಂದು ಬಾಹೋ ಸಡಗರ ಸಾಕೋ 3ಎಣ್ಣೂರಿಗತಿರಸ ಸದಮಲ ದೋಸೆ ಬೆಣ್ಣೆಅಣ್ಣಯ್ಯ ನಿನಗೆ ಕೊಡುವೆನೋ ಬಾರೋ ||ಕಣ್ಣಮುಚ್ಚಿ ಗೋಪಾಂಗನೆಯರ ಕೂಡಿ |ಬೆಣ್ಣೆಯ ಮೆಲುವುದು ಉಚಿತವೆ ಸಾಕೋ 4ಮಂಗಳಾತ್ಮಕ ಮೋಹನಾಕಾರನೆಸಂಗೀತಲೋಲಸದ್ಗುಣ ಶೀಲ ||ಮಂಗಳೆ ಲಕುಮಿಯ ಸಹಿತವಾಗಿ ಬಂದುಕಂಗಳ ಮುಂದಾಡೊಪುರಂದರವಿಠಲ5
--------------
ಪುರಂದರದಾಸರು