ಒಟ್ಟು 6146 ಕಡೆಗಳಲ್ಲಿ , 128 ದಾಸರು , 3348 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನನ್ನಿಂದ ನಾನೇ ಜನಿಸಿ ಬಂದೆನೆ ದೇವಎನ್ನ ಸ್ವತಂತ್ರವು ಲೇಶವಿದ್ದರು ತೋರು ಪ ನಿನ್ನ ಪ್ರೇರಣೆಯಿಂದ ನಡೆದು ನುಡಿದ ಮೇಲೆನಿನ್ನದು ತಪ್ಪೋ ನನ್ನದು ತಪ್ಪೋ ಪರಮಾತ್ಮಅ ಜನನಿಯ ಜಠರದಲಿ ನವಮಾಸ ಪರಿಯಂತಘನದಿ ನೀ ಪೋಷಿಸುತಿರೆ, ನಾನುಜನಿಸಲಾರೆನು ಎನೆ ಜನಿಸೆಂದಿಕ್ಕಳದಿಂದವನಜಾಕ್ಷ ನೂಕಿದವನು ನೀನಲ್ಲವೆ 1 ಎಲವುಗಳ ಜಂತೆ ಮಾಡಿ ನರಗಳ ಹುರಿಯಿಂಹೊಲಿದು ಚರ್ಮವ ಹೊದಿಸಿ ದೇಹದೊಳುಮಲಮೂತ್ರಕೆ ಹೊರದಾರಿ ನಿರ್ಮಿಸಿ ಹೃದಯದಲಿನೆಲಸಿ ಚೇತನವನಿತ್ತವ ನೀನಲ್ಲವೆ 2 ಜನಿಸಿದಾರಭ್ಯದಿಂದ ಇಂದಿನ ಪರಿಯಂತಘನಘನ ಪಾಪ ಸುಕರ್ಮಂಗಳನುಮನಕೆ ಬೋಧಿಸಿ ಮಾಡಿಸಿ ಮುಂದೆ ಇದನೆಲ್ಲಅನುಭವಿಸುವುದು ಜೀವನೊ ನೀನೊ ದೇವ 3 ಅಂಧಕನ ಕೈಲಿ ಕೋಲಿತ್ತು ಕರೆದೊಯ್ಯುವಾಮುಂದಾಳು ತಪ್ಪಿ ಗುಂಡಿಗೆ ಕೆಡಹಲುಅಂಧಕನ ತಪ್ಪೊ ಅದು ಮುಂದಾಳಿನ ತಪ್ಪೊಹಿಂದಾಡಬೇಡ ಎನ್ನೊಳು ತಪ್ಪಿಲ್ಲವೊ 4 ಕಂದನ ತಾಯಿ ಆಡಿಸುವಾಗ ಅದು ಪೋಗಿಅಂದಿ ಬಾವಿಯ ನೋಡುವುದನು ಕಂಡುಬಂದು ಬೇಗನೆ ಬಾಚಿ ಎತ್ತಿಕೊಳ್ಳದಿದ್ದರದುಕಂದನ ತಪ್ಪೊ ಮಾತೆಯ ತಪ್ಪೊ ಪರಮಾತ್ಮ 5 ಭಾರ ನಿನ್ನದೊ ದೂರು ನಿನ್ನದೊ ಕೃಷ್ಣನಾರಿ ಮಕ್ಕಳು ತನುಮನ ನಿನ್ನದಯ್ಯಕ್ಷೀರದೊಳಗದ್ದು ನೀರೊಳಗದ್ದು ಗೋವಿಂದಹೇರನೊಪ್ಪಿಸಿದ ಮೇಲೆ ಸುಂಕವೆ ದೇವ 6 ನ್ಯಾಯವಾದರೆ ದುಡುಕು ನಿನ್ನದೊ, ರಂಗ, ಮತ್ತ-ನ್ಯಾಯವಾದರೆ ಪೇಳುವರಾರುಮಾಯಾರಹಿತ ಕಾಗಿನೆಲೆಯಾದಿಕೇಶವಕಾಯಯ್ಯ ತಪ್ಪನೆಣಿಸದೆ ದೇವ 7
--------------
ಕನಕದಾಸ
ನಂಬಿ ನೆಚ್ಚದಿರು ನರಲೋಕ ಸುಖವೆಂಬ, ಅಂಬಲಿ ಪರಮಾನ್ನ ಪ ಹಂಬಲಿಸುವುದು ಹರಿಲೋಕಾನಂದವೆಂಬ ಪೀಯೂಷಪಾನ ಅ.ಪ ನೊಣ ಬೆರಸಿದ ಊಟ ಪರಮಭಾಗವತರ ಪದಸಂಗವೆಂಬುದು ಮಸ್ತಕದ ಮಕುಟ ಕೇವಲ ಯಮಕಾಟ ಪರತತ್ವವಾದ ಶ್ರೀಹರಿಯ ತಿಳಿವುದೆ ವೈಕುಂಠಕೆ ಓಟ 1 ಹಾರಿ ಹೋಗುವ ಹೊಟ್ಟು ಇದ್ದಾಗ ದಾನ ಧರ್ಮಂಗಳ ಮಾಡೋಡು ಕೈವಲ್ಯಕೆ ಮೆಟ್ಟು ಹೊದ್ದಿರುವರ ಕಂಡಾಸೆಯಪಟ್ಟರೆ ಹೋಗುವಿ ನೀ ಕೆಟ್ಟು ಬುದ್ಧಿಹೀನರಿಗೆ ಪೇಳದಿರೆಲೊ ತತ್ವಸಾರ ಸುಂದರ ಗುಟ್ಟು 2 ಅಲ್ಪಾವಕಾಶವು ಈ ಶರೀರವು ಗಾಳಿಗೊಡ್ಡಿದ ದೀಪ ನೋಡು ಹಾಲುಸಕ್ಕರೆ ತುಪ್ಪ ಬಲ್ಪಂಥ ಮಾಡದಿರು ಜನ್ಮಜನ್ಮದಲಿ ಬಿಡದೆಲೊ ಸಂತಾಪ ಸ್ವಲ್ಪಕಾಲಾದರೂ ಮಧ್ವಮತವೊಂದು ಭವವೇ ನಿರ್ಲೇಪ3 ಕರ್ಮ ಆವುದಾದರು ಸೂಳೆಗಿಕ್ಕ್ಕಿದ ವಿತ್ತ ಹರಿಗೆ ವಿಶ್ವಾಸದಿ ಅಣುಮಾತ್ರ ಅರ್ಪಿಸೆ ಅವನೆ ನಿರ್ಮಲ ಚಿತ್ತ ನಿರುತಗ್ರಾಸಕೆ ಚಿಂತೆಮಾಡಲು ಒದಗದು ಪುಣ್ಯವು ನಿನಗೆತ್ತ ಅರೆಮನವಿಲ್ಲದೆ ದೃಢಮನದಿಪ್ಪುದೆ ಸಂಪಾದನೆ ಭತ್ಯ4 ಭಾವವಿರಕ್ತಿಯ ವಹಿಸದಿದ್ದರೆ ನಿನಗಾಗುವುದು ಖೇದ ಪರಿಪರಿಯಾಸ್ವಾದ ದೇವಕಿಸುತ ನಮ್ಮ ವಿಜಯವಿಠ್ಠಲನಂಘ್ರಿ ತೀರುಥ ಪ್ರಾಸಾದ ನಿತ್ಯ ನರಕವಾಸ ಎನ್ನತಲಿದೆ ವೇದ 5
--------------
ವಿಜಯದಾಸ
ನಂಬಿ ಬಂದಿಹೆನಯ್ಯಾ ಪ ನಿನ್ನನಾ ಸ್ತುತಿಸಿ ಕೊಂಡಾಡುವೆ 1 ಕುಂದಿದ ಮನದಲಿ ನಿನ್ನನಾ ನೆನೆಯುದೆ ಮುಂದೇನುಗತಿ ಎನಗೆಂದು ತಿಳಿಯದೆ ಇನ್ನಾದರೆನ್ನ ಮನನಿನ್ನಲ್ಲಿ ನಿಲಿಸು 2 ಭೂಮಂಡಲವೆಲ್ಲಾ ತಿರುಗಿದೆ ಪ್ರಭುವೇ ನಿಮ್ಮ ಶರಣು ಬಂದಿಹೆ ನಯ್ಯ ಹೇಗುರುವೇ3 ಇಂದೆನ್ನ ಮೊರೆಕೇಳಿ ಕೇಳಿಸದಂತಿರುವೆಯಾ ಪ್ರಭುವೆ 4 ಪರದೇಶಿಯೆನುತೆನ್ನ ಕೈಬಿಡಬೇಡವೋ ಬಿಡದೆ ನಿನ್ನಡಿಗಳ ಪಿಡಿದಿಹೆನಯ್ಯಾ 5 ದೃಷ್ಟಿಯಿಂಲಿ ನೋಡಿ ರಕ್ಷಿಸು ನಮ್ಮನು | ಘಟ್ಯಾಗಿ ನಿಮ್ಮಪಾದ ಮುಟ್ಟಿ ನಾ ಭಜಿಸುವೆ6 ಸರ್ವಾಪರಾಧವ ಕ್ಷಮಿಸಿ ನೀ ಕಾಯೋ ಕಾಲಮೀರದೆಮ್ಮನು ಪಾಲಿಸಬೇಕಯ್ಯ 7
--------------
ರಾಧಾಬಾಯಿ
ನಂಬಿದೆ ನಿನಪಾದ ಅಂಬುಜಾಕ್ಷನ ಪ್ರಿಯಬೆಂಬಿಡದಲೆ ಯೆನ್ನ | ಕಾಯೋ |ಬೆಂಬಿಡದಲೆ ಯನ್ನ ಕಾಯೆಂದು ನಿನ್ನನುಹಂಬಲಿಸೂವೆ ಮೋಹನ್ನರಾಯಾ ಪ ದೋಷರಾಶಿಯನೀಗಿ | ದಾಸನ್ನ ಮಾಡಿದಋಷ್ಯಂಶರಾಗಿಹ ನಿಮ್ಮಾ |ಋಷ್ಯಂಶರು ವಿಜಯ ದಾಸರ ಪ್ರೇಮಕ್ಕೆಆಶ್ರಯನಾಗಿಪ್ಪ ಮೋಹನ್ನ 1 ಹೆಮ್ಮೆಯ ಪಡುವೆ ನಾ ನಿಮ್ಮವರವನೆಂದುದುರ್ಮಮತೆಯ ನೀಗೋ ಎನ್ನಾ |ದುರ್ಮಮತೆಯು ನೀಗಿ | ಭರ್ಮಗರ್ಭನ ಪಿತನಪೇರ್ಮೆ ದೊರಕಿಸೊ ಎನಗೆ ಮುನ್ನಾ 2 ಅಂಬುಜಾಂಬನಂಘ್ರಿ | ಅಂಬುಜ ತೋರೆಂದುಹಂಬಲಿಸಿ ಬೇಡುವೆ ನಿನಗೆ |ಹಂಬಲಿಸಿ ಬೇಡುವೆ | ಶಂಬರಾರಿಯ ತೇಜನಂಬಿ ಬಂದಿಹೆ ನಿನ್ನ ಅಡಿಗೇ 3 ವಿಷಯಧುಯ್ಯಲಿನಿಂದ | ಕ್ಲೇಶವಧಿಕವಯ್ಯ ವಿಷದಂತೆ ಕಾಣಿಸೊ ಜೀಯ |ವಿಷದಂತೆ ಕಾಣಿಸಿ | ಶೇಷವಿಲ್ಲಾಧಾಂಗೆ |ದೋಷವಳಿಸಿ ಕಾಯೊ ಜೀಯಾ 4 ನಿನ್ನ ವಂಶಜನಾಗಿ | ನಿನ್ನವರವನಾಗಿಉನ್ನಂತ ಮಹಿಮ ಶ್ರೀಹರಿಯಾ |ಉನ್ನಂತ ಮಹಿಮನು | ಅನ್ನಂತನ ಪಾದಕಾಣದಿದ್ದವನಿರೆ ವ್ಯರ್ಥ 5 ಪಂಚಾಶದ್ವತ್ಸರ | ಹಂಚಿಪೋಗುವ ಮುನ್ನಪಂಚರೂಪಾತ್ಮಕ ಹರಿಯಾ |ಪಂಚರೂಪಾತ್ಮ ವಿ | ರಿಂಚಿಪಿತನ ಪಾದಹಂಚಿಕಿಂದಲಿ ತೋರೊ ಮೋಹನ್ನ 6 ಉರುಗಾದ್ರಿವಾಸ ವಿಠಲಾತ್ಮಕನು ಶಿರಿಗುರುಗೋವಿಂದ ವಿಠ್ಠಲನ |ಗುರಗೋವಿಂದ ವಿಠಲನ ಚರಣಾರವಿಂದವತೋರಿ ಪೊರೆ ನಮ್ಮ ಹಿರಿಯಾ 7
--------------
ಗುರುಗೋವಿಂದವಿಠಲರು
ನಂಬಿದೆ ನಿನ್ನ ಪಾದವ ಕಾಣಬೇಕೆಂದು ಹಂಬಲಿಸಿದೆ ಮಾಧವ ಬೆಂಬಲವಾಗು ಪೀತಾಂಬರಧರ ಕುಟುಂಬಿ ಪಾಲಾ ಕಮಲಾಂಬಕ ರಂಗಾ ಪ ಚಂದಿರಹಾಸ ಸರ್ವೇಶ ಚಂಡ ಪ್ರಕಾಶಾ ಇಂದಿರಾ ಮನೋವಿಲಾಸ ವೃಂದಾರಕರ ನಿಜಕೋಶಾ ಮಂದರಧರ ವಸುಂಧರಪತಿ ಪುರಂದರ ವಂದಿತ ಸುಂದರಾಂಗ ಕಂಬು ಇಂದೀಗ ತೊಂದರೆಕಿಡದಿರು 1 ತಂದಿತಾಯಿಗಳವರಾರೊ ತಾವಳಿದು ಸತಿ ನಂದನರೊ ಬಂಧುಬಳಗ ಮತ್ತಾರೊ ಬರಿದೆ ಊರು ಪೊಂದದೆನಲೊ ಇಳಿಜಾರು ಎಂದೆಂದಿಗಿದರ ಗಂಧದೊಳಗೆ ನಾ ಬಂದು ಬಳಲಿ ಸಂ ಬಂಧದೊಳುರಳಿದೆ ಮುಂದಾದರು ದಾರಿ ಒಂದಾದರು ಕಾಣೆ ತಂದೆ ತಾಯಿ ಸರ್ವಂದವು ನೀನೆ 2 ನೊಂದೆನೊ ನಾನಾ ಜೀವಿಲಿ ನೋಡು ನೋವಿನಲಿ ಕುಂದಿದೆ ಎಲ್ಲ ಕಾವಿಲಿ ಬೆಂದೆನೋ ಬಲು ಕೋವಿಲಿ ಅಂದದರ್ಚನೆಯಿಂದ ಮಾಡಿದ ಪಾಪಗೊಂದಿಗೆಳೆದು ಎನ್ನ ಇಂದು ಚರಣರವಿಂದವ ತೋರಿಸುವ ಬಂಧು ವಿಜಯವಿಠ್ಠಲೆಂದಹುದೆಂದು 3
--------------
ವಿಜಯದಾಸ
ನಂಬಿದೆನು ನಿನ್ನ ಅಂಬುಜನಯನ ಬೆಂಬಿಡದೆ ಕಾಯೆನ್ನ ಶಂಬರಾರಿಪಿತನೆ ಪ ಇಂದು ನೀ ಗೆಲಿಸಯ್ಯ ಮಂದರಧರಗೋವಿಂದ ಎರಗುವೆ ಪದಕೆ 1 ಜಡಜಾಕ್ಷ ನಿಮ್ಮಡಿಗೆ ದೃಢದಿಂದ ಬೇಡುವೆನು ತಡೆಯೆನ್ನನು ಕಡೆಹಾಯ್ಸು ದುರಿತದಿಂ 2 ಜಗದೊಳಗೆ ಎನ್ನನು ನಗೆಗೇಡು ಮಾಡದೆ ಮಗನನ್ನ ಸಲಹಯ್ಯ ಖಗಗಮನ ಶ್ರೀರಾಮ 3
--------------
ರಾಮದಾಸರು
ನಂಬಿದೆನೊ ನಿನ್ನ ಅಂಬುಜನಯನ ಕೃ ಪಾಂಬುಧೆ ದೃಢದಲಿ ಪ ಸಂಭ್ರಮದಲಿ ಕಿವಿ ತುಂಬುತಿರುವ ಆ ಡಂಬರ ವಚನಕೆ ಮುಂಬರಗೊಳ್ಳುತ ಅ.ಪ ನವ ಘನ ನಿಭಕಾಯ ನಿನ್ನಯ ಕರುಣಮಯ ಸಹಾಯ ವಿಲ್ಲದೆ ಬಿಗಿಯುತಿರುವ ಮಾಯಾ ಪಾಶವ ತೊರೆಯಲಳವೆ ಜೀಯಾ ನಿನ್ನಯ ದಯವ ಪಡೆದ ಪರಿಯನರುಹುವ ಯತಿವರೇಣ್ಯ ಗುರುಮಧ್ವರಾಯರ ಪರಮ ಸಮಯ ಸಾರಗಳನು ಸಂತತ ಶ್ರವಣ ಮನನ ಧ್ಯಾನಗಳಿಂದ ಪರಿಚಯ ಪಡೆದು ದು ಷ್ಟ ವಿಷಯಗಳಲಿ ಮತಿಯನು ಮುರಿಯುವಂತೆ ಕರುಣಿಸೋ ಸುಗುಣಾಲಯ 1 ನೀರಜದಳ ನೇತ್ರ ವರ ಸುಖ ಚಿನ್ಮಯೈಕ ಗಾತ್ರ ಸುಜನ ಮಿತ್ರ ಸುರವರ ಸರಸಿಜಭವ ಪುತ್ರ ರುಚಿರರ ಮುಕುಟಾಕ್ಷಪಾತ್ರ ನಿನ್ನಯ ವಿವಿಧ ಲೀಲೆಗಳು ಚಿತ್ರವಿಚಿತ್ರವು ಅರಿತೆನೆಂದು ತಿಳಿದು ಮೆರೆಯುತಲಿರುವ ನರರ ಮದವ ಮುರಿದು ದೈನ್ಯದಿಂದಲಿ ಮರೆತೆನೆಂದು ದಿನದಿನದಲಿ ಭಜಿಪರ ಪೊರೆವ ಪರಮ ಕರುಣಾರಸಮಯನೆ 2 ದೀನಭಕುತರನ್ನು ಪೊರೆಯುವ ದಾಸಿಯೆಂದು ನಿನ್ನ ಪೊಗಳುವ ಮಾನತತಿಗಳನ್ನು ಸಂತತ ಧ್ಯಾನ ಮಾಡಿ ಎನ್ನ ಕ್ಲೇಶವ ಮೌನದಿಂದ ಇನ್ನೂ ಸಹಿಸುತ ಜಾನಕೀಶ ತವ ಪಾದಕಮಲದ ರೇಣುವನ್ನು ಶಿರದಿ ಧರಿಸುತಲಿ ಅನು ಮಾನವನ್ನು ತೊರೆದು ಮುದದಿ ಸುವಿಮಲ ಜ್ಞಾನಮೂರ್ತೆ ಜ್ಞಾನಿವರ ಪ್ರಸನ್ನನೆ ನೀನೆ ಎನ್ನ ರಕ್ಷಕನೆಂದರಿಯುತ 3
--------------
ವಿದ್ಯಾಪ್ರಸನ್ನತೀರ್ಥರು
ನಂಬಿದೆನೊ ನಿನ್ನ ಪಾದಾರವಿಂದಾ ಇಂಬು ಈವದು ಎನಗೆ ವೈಕುಂಠಪುರದೊಳಗೆ ಪ ಮಲಭಾಂಡದಲ್ಲಿ ಪೊಕ್ಕು ನೆಲೆಗಾಣದಲೆ ಸಿಕ್ಕು ಸಲೆ ಸೊರಗಿ ತಿರುಗಿದೆನೊ ಬಳಲಿ ಮರುಗಿ ಉಳಿವದಕುಪಾಯವನು ಒಂದರೆ ಕಾಣೆನೊ ಎಲೊ ಬಲುದೈವ ನೀನೆ ದಯಾಳು ಎಂದೂ 1 ಕೈವಲ್ಯ ಕೊಡುವಲ್ಲಿ ಮಂಡಲದೊಳು ಎಣಿಯಾರು ನಿನಗೆ ಭಂಡಕಾಯವ ತೆತ್ತು ಬರಲಾರೆ ನಿನ್ನ ತೊತ್ತು ನಿತ್ಯ ಎಳೆನೋಟದಲಿ ನೋಡು 2 ಯದುಕುಲಲಲಾಮ ಸುರಸಾರ್ವಭೌಮ ಮಹಿಮ ಮದನಪಿತ ಕಾಳಿಂಗಭಂಗ ರಂಗಾ ಮಧುಸೂದನ ವಿಜಯವಿಠ್ಠಲ ಲಕುಮಿನಲ್ಲಾ ಹೃದಯದೊಳು ಪೊಳೆವ ಬಲು ವಿಚಿತ್ರ ಚಲುವಾ 3
--------------
ವಿಜಯದಾಸ
ನಂಬಿದೆನೊ ರಂಗ ಗೋವಿಂದ ರಂಗ ಪ. ಇಳೆಸೃಷ್ಟಿಗಾಧಾರನೆಂಬ ಬಿರುದುಳ್ಳಡೆ ಜಗನ್ಮಯನೆ ಚಿನ್ಮಯರೂಪ ರಂಗ ನೀನಾದ್ಯಯ್ಯ ರಂಗ 1 ಸುಜನಮಂದಾರ ಸರಸಿಜಭವಪಿತ ನಿನ್ನ ಪ್ರಜೆಗಳು ಪೊಗಳುತ್ತಿಹರೆ ರಂಗ ಮುರಹರನೆ ರಂಗ 2 ಸುಜನರೊಳಗೆನ್ನ ಕುಹಕವ ಮಾಡದೆ ನಿನ್ನ ಭಜಕನೆಂದಿರಲಾಗಿ ರಂಗ ಭುಜಗೇಂದ್ರಶಯನ ಶ್ರೀರಂಗ 3 ಧಾತ್ರಿಗಾಧಾರ ಅನಾಥರಕ್ಷಕನೆ ದಯವ್ಯಾತಕೆನ್ನೊಳಿಲ್ಲ ರಂಗ ಕಡೆಹಾಯಿಸೊ ರಂಗ 4 ನೋಡೆ ಶ್ರೀ ಹರಿಯೆ ನೀನಲ್ಲದನ್ಯತ್ರ ದಾತ್ರರಿಲ್ಲವೊ ರಂಗ ಮಹಿಮ ಶ್ರೀರಂಗ 5 ಕೋಪವನು ಬಿಡು ಎನ್ನ ಕುಂದನೆಣಿಸದಿರಯ್ಯ ಆಪತ್ಬಂಧು ಶ್ರೀರಂಗ ಸಲಹಯ್ಯ ರಂಗ 6
--------------
ಹೆಳವನಕಟ್ಟೆ ಗಿರಿಯಮ್ಮ
ನಂಬಿದೇ ಗುರುವರಾ ನಂಬಿದೇಪ ನಂಬಿದೆ ಗುರುಸಾರ್ವಭೌಮಾ ತುಂಟುಮನದೊಳು ಹರಿಭಕ್ತಿ ನಿಸ್ಸೀಮಆಹಾ ಅಂಬುಜೋದ್ಭವಪಿತನ ಕಂಭದಿ ತೋರಿದ ಶಂಬರ ಕುಲದೀಪ ಪ್ರಹ್ಲಾದ ವ್ಯಾಸಮುನಿಯೇ ಅ.ಪ. ದಾಸನೆಂದಡಿಗೆ ಬಿದ್ದೆನೋ ಈಗ ದೋಷ ನಾಶಮಾಡೋ ಎನಗೆ ಬೇಗ ಆಹಾ ವಾಸುಕಿಶಯನನ ಬ್ಯಾಸರದೆ ಸ್ತುತಿಸಿ ಈಶನ ಸರ್ವತ್ರವ್ಯಾಪ್ತಿಯನರುಹಿದ ಭೂಪ 1 ಪಾತಕರೊಳಗೆ ಅಗ್ರೇಸರನಾನು ಪೂತಮಾಡುವರೊಳಗೆ ನಿಸ್ಸೀಮ ನೀನು ಆಹಾ ತಾತನಪ್ಪಣೆಯಂತೆ ವ್ಯಾಸರಾಜಾಎನಿಸಿ ಖ್ಯಾತಿಯಿಂದಲಿ ತರ್ಕತಾಂಡವರಚಿಸಿ ಮೆರೆದೇ 2 ತಾಪಸಶ್ರೇಷ್ಠ ಬ್ರಹ್ಮಣ್ಯಕುವರನಾದೆ ಗೋಪಾಲಕೃಷ್ಣನ್ನ ಕುಣಿಕುಣಿದಾಡಿಸಿ ಭೂಪನ ಕುಹಯೋಗ ಕಳೆದ ಯತಿಕುಲತಿಲಕ 3 ಮಧ್ವಶಾಸ್ತ್ರಗಳ ಮಂದರರಿಯದಿರಲು ಮುದದಿಂದ ಪದಸುಳಾದಿಗಳ ರಚಿಸಿದೆ ನೀನು ಆಹಾ ಆದರದಿಂದಲಿ ಪುರಂದರಕನಕರಿಗೆ ಸದುಪದೇಶವ ಕೊಟ್ಟು ಜಗದುದ್ಧಾರಮಾಡಿದ ಪ್ರಭುವೇ 4 ಮತ್ತೆ ಪುಟ್ಟಿದೆ ವೆಂಕಣ್ಣಭಟ್ಟ ನೆಂದೆನಿಸೀ ಮತ್ತ ಕೇಸರಿಯಂತೆ ಮಧ್ವಶಾಸ್ತ್ರದಿ ಮೆರೆದೇ ಆಹಾ ಕತ್ತಲೆ ಅದ್ವೈತವಾದಗಳಿಗೆಲ್ಲಾ ಕತ್ತಿಎನಿಸಿದ ಪರಿಮಳಾಚಾರ್ಯ ಗುರುವೇ 5 ವಿಪ್ರನು ದಿಟ್ಟತನದಿ ನಿನ್ನ ಗಂಧವ ತೇದುಕೊಡುಎನೆ ಕ್ಷಿಪ್ರದಿ ತೋರಿದೆ ನಿನ್ನ ಮಹಿಮೆಯಜಗಕೇ ಆಹಾ ಅಪ್ಪ ಶ್ರೀರಾಮರ ಪೂಜಿಸಬೇಕೆಂದು ಒಪ್ಪಿಸನ್ಯಾಸವ ರಾಘವೇಂದ್ರನಾದ 6 ಮುದದಿ ದೇಶ ದೇಶವ ಚರಿಸಿದೇ ಸಮಯದಿ ಸುಜನರಕ್ಲೇಶಗಳಳಿದೇ ಆಹಾ ಮೋದಮುನಿಯ ಗ್ರಂಥಗಳಿಗೆಲ್ಲ ಟಿಪ್ಪಣಿ ಮಾಡುತ ಬುಧರಿಗೆ ತತ್ವ ಕನ್ನಡಿ ತೋರ್ದ ಗುಣಗಣನಿಧಿಯೇ7 ಪರಿಪರಿ ಮಹಿಮೆಯ ತೋರುವ ಗುರುವೇ ಸುರತರು ಅಂದದಿ ಹರಕೆ ಗಳೀವೆ ಪ್ರಭುವೇ ಆಹಾ ಮೂರೆರಡು ಒಂದುನೂರು ವರುಷ ಪರಿಯಂತ ಸಾರಿಸಾರಿದವರ ಪೊರೆದು ಮೆರೆಯುವ ದಿವಿಜವಂದಿತ ಗುರು8 ದಯದಿಂದ ನೋಡೆನ್ನ ದೀನೋದ್ಧಾರ ಭವ ಬಿಡಿಸು ಕರುಣಾಸಾರ ಆಹಾ ಜಯತೀರ್ಥವಾಯ್ವಂತರ್ಗತ ಶ್ರೀಕೃಷ್ಣ ವಿಠಲನ ಹೃ- ದಯಮಂದಿರದಿ ತೋರೆನಗೆ ಗುರುಸಾರ್ವಭೌಮ 9
--------------
ಕೃಷ್ಣವಿಠಲದಾಸರು
ನಂಬಿದೇ ನರಹರಿಯೆ ನಾ ಪ ನಂಬಿದೆನೊ ಬ್ರಹ್ಮಾದಿ ವಂದಿತ ಪೂರ್ಣ ಸುಗುಣ ಕಂದಂಬ ನಿರುಪಮ ನಿತ್ಯಮುಕ್ತಾಮುಕ್ತ ಜೀವದ ವಿಶ್ವ ಭಾಸಕ ಮುಕ್ತಿದನೇಕನೆಂಬುದಾ ಅ.ಪ ನೊಂದು ನೊಂದೆನೊ ಭವದಿ ಹಿಂದುಮುಂದನು ಕಾಣೆ ಬಂಧ ನೀಡುವ ನೀನೆ ಬಂಧಾ ಬಿಡಿಸಲುಬೇಕೊ ಸ್ವಾಮಿ ಸಂಶಯವೆಂದು ಪೊಗಳುವೆ ಪೂರ್ಣ ಪೂರ್ಣಾನಂದ ಸಜ್ಜನನಂದ ಕಾಮದ ಸಾಮ ಪೂರ್ಣಚಂದ್ರ ಸುತೇಜಭವಹರ 1 ಕರ್ಮ ಅಡ್ಡಿಯಾಗಿದೆ ಸುಖಕೆ ವಡ್ಡುವೆ ಸರ್ವಸ್ವನಿನಗೆ ದೊಡ್ಡವನು ನೀವಲಿಯೆ ಎನ್ನಯ ದಡ್ಡತನ ನಿನ್ನೇನುಮಾಳ್ಪದು ಸಡ್ಡೆಮಾಡದೆ ದೋಷರಾಶಿಯ ಮಮತೆ ತೊಲಗಿಸಿ ಗುಡ್ಡಹೊತ್ತ ಮಹಾಂತರೊಡೆಯನೇ 2 ಸಿರಿ “ಕೃಷ್ಣವಿಠಲ”ನೆ ನಿನ್ನಾಕರುಣವೆ ತಾರಕ ಇನ್ನುಮುನ್ನು ನಿನ್ನ ನಂಬಿಹೆ ಜ್ಞಾನಮಾನವ ನೀಡ್ವದಾತನೆ ಸಣ್ಣವನ ಪಿಡಿದಿನ್ನು ನೀ ಪ್ರಸನ್ನನಾಗೆಲೊ ದೇವದೇವನೆ ನಿನ್ನದಾಸರ ಭಾಗ್ಯವೊಂದೇ ಸಾಕು ಸಾಕೈಯೆಂದು ಬೇಡುವೆ ಅನ್ಯರೊಳ್‍ರತಿ ಇಲ್ಲದಿರಲೈ ಮಾನ್ಯ ಮಧ್ವರ ಮತದಿ ನಿಲಿಸು 3
--------------
ಕೃಷ್ಣವಿಠಲದಾಸರು
ನಂಬು ಹರಿಯ ಎನ್ನ ಮನವೇ ಪ ಸುರಪತಿ ಮುಳಿಯಲು ಸಕಲ ಗೋವಳರನು| ಹೊರೆದನು ಕರದೆತ್ತಿ ಗಿರಿಯಾ 1 ಭಕುತಿಲಿ ಶರಣು ಬರಲು ಸುದಾಮನು| ಸಕಲ ಸುಖವನಿತ್ತಾ ದೊರೆಯಾ2 ಗುರುಮಹಿಪತಿ ದೀನೋದ್ಧಾರನು| ಮುರ ಅರಿಯಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಮಗೊಬ್ಹಾನೆ ತಾ ಜೀವಜೀವದ ಗೆಳೆಯ ಧ್ರುವ ಸುತ್ತಿ ಸೂಸ್ಯಾಡುತ್ಹಾನೆ ನೆತ್ತಿಯೊಳಗೆ ತುಂಬ್ಯಾನೆ ತುತ್ತುಮಾಡಿ ಉಣಿಸುತ್ಹಾನೆ ಹತ್ತಿಲೆ ತಾ ಹಾನೆ 1 ಹೊಟ್ಟೆಲೆನ್ನ ಹಿಡಿದಾನೆ ಘಟ್ಯಾಗಿ ರಕ್ಷಿಸುತಾನೆ ದೃಷ್ಟಿಸಿ ನೋಡುತ್ಹಾನೆ ಗುಟ್ಟಿನೊಳ್ಹಾನೆ 2 ತಾನೆ ಸೋತು ಬರುತ್ಹಾನೆ ಎನಗುಳ್ಳ ಸದ್ಗುರು ನಾಥ್ಹಾನೆ ಕನಗರಸಿದಾಗೊಮ್ಹಾನೆ ಮನದೊಳು ನಿಂದ್ಹಾನೆ 3 ಮಾಯದ ಸುಖ ಮರಿಸ್ಯಾನೆ ತಾಯಿ ತಂದೆ ತಾನಗ್ಹ್ಯಾನೆ ಸಾಹ್ಯ ಬಲು ಮಾಡುತ್ಹಾನೆ ಭವಭಯ ಬಿಡಿಸ್ಹ್ಯಾನೆ 4 ಮನ್ನಿಸಿ ದಯ ಬೀರುತ್ಹಾನೆ ಧನ್ಯ ಪ್ರಾಣಗೈಸುತ್ಹಾನೆ ಚಿಣ್ಣ ಮಹಿಪತಿಯ ಗುರು ತಾನೆ ಕಣ್ಣಿನೊಳ್ಹಾನೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಮಾಮಿ ತಂದೆಯೇ | ಮುದ್ದುಮೋಹನಾನತೋಸ್ಮಿ ಸಿದ್ಧರೇ | ತ್ವತ್ವದಾಂಬುಜಂ ಪ ಸುಕೃತ ವೆಂಥದೋಗುರುಗಳ್ ನಿಮ್ಮಯಾ | ಕರುಣದೊರಕಿತು 1 ವಿಲಸಿತಾಮಲಾ ನಿ | ಷ್ಕಲ್ಮುಷ ಹೃದಯರೇಆಲವಾ ಬೋಧರಾ | ಒಲವ ಪಡೆದರೇ 2 ಹಲವು ಜನುಮದೀ | ಬಳಲಿ ಬಂದುದಾತಿಳಿದು ನೀವೆನ್ನಾ | ಪಾಲಿಸೀದಿರಿ3 ಕ | ಳಂಕ ವಿಹಿತವೂ 4 ಎಂದು ಕರುಣೆಯಿಂ | ತಂದೆ ವೆಂಕಟನಾಹೊಂದಿ ಭಜಿಪರಾ | ಅಂದು ಪ್ರೇರಿಸೀ5 ಕರೆದು ಎನ್ನನೂ | ತೆರಳು ಎನುತಲೀಒರೆದು ಮತಿಯನೂ | ದಾರಿ ತೊರ್ದಿರೀ 6 ಸೋಮ ಶೇಖರಾ | ಸಮ ಪದಸ್ಥನೇಸಾಮಾಜಾದ್ರಿಲೀ | ಪ್ರಮಾಥಿವತ್ಸರಾ 7 ವದ್ಯ ಫಾಲ್ಗುಣಾ | ಪ್ರತಿಪದಾದಿನಾಆದಿವಾರದೀ | ವಿದಿತ ಮಾರ್ಗದೀ 8 ಗುರು ಗೋವಿಂದನಾ | ನಾಮ ತಾರಕಾಅರುಹೀ ಪ್ರೀತಿಲೀ | ದಾರಿ ತೋರ್ದಿರೀ 9 ಕೋಮಲಾಂಗನೇ | ನಿಮ್ಮ ಮಹಿಮೆಯಾಪಾಮರಾನು ನಾ | ಗಮಿಸಲಾಪನೇ 10 ಗತಿಯೆ ನೀವೆಂದೂ | ಸತತ ತುತಿಸುವೆಅತುಳ ಮಹಿಮರೇ | ಹಿತವ ಮಾಡಿರಿ 11 ತವ ಪದಾರ್ಚನೇ ತ್ರಿ | ಸವನ ಸಂಧ್ಯವೂಹವನ ಹೋಮವೂ | ಭವದ ಶೋಷವೂ 12 ನೀವೆ ಬಂಧುವೂ | ನೀವೆ ಬಳಗವೂನೀವೆ ತಾಯಿಯೂ | ನೀವೆ ತಂದೆಯೂ 13 ನಿಂತು ನೀವೆನ್ನಾ | ಅಂತರಂಗದೀಮಂತವ್ಯ ರಂಗನಾ ಚಿಂತೆ ಪಾಲಿಸೀ 14 ಗುರು ಗೋವಿಂದ ವಿಠಲನಾ | ಸುರಚಿರಾಮಲಾಚರಣ ಪುಷ್ಕರ | ಸ್ಮರಿಪ ಗುರುವರಾ 15|
--------------
ಗುರುಗೋವಿಂದವಿಠಲರು
ನಮಿಪೆ ನದಿ ದೇವತೆಗಳೇ | ನಿಮಗೆ ಪ. ನಮಿಪೆ ನದಿ ದೇವತೆಗಳೇ ನಿಮ್ಮ ಚರಣಕ್ಕೆ ಕಮನೀಯ ಗಾತ್ರೆಯರೆ ಕಂಜದಳ ನೇತ್ರೆಯರೆ ಸುಮನರ ವಂದಿತರೆ ಸುಗುಣ ಸಂಪನ್ನೆಯರೆ ಅಘ ಹರೆಯರೇ ಕಮಲನಾಭನ ಅಂಗೋಪಾಂಗ ಸಂಜಾತೆಯರೇ ಅಮರ ಭೂ ಪಾತಾಳ ಲೋಕ ಸಂಚರೆಯರೆ ನಮಿಸಿ ಸ್ನಾನವಗೈವ ನರರ ಪಾವನಗೊಳಿಪ ಅಮಿತ ಪಾವಿತ್ರತರರೇ 1 ಗಂಗೆ ಗೋದಾವರಿ ಯಮುನೆ ಸರಸ್ವತಿ ಸಿಂಧು ಮಂಗಳಾಂಗೆ ಕೃಷ್ಣ ಭೀಮರಥಿ ಪಲ್ಗುಣಿ ಸಂಗಮ ತ್ರೀವೇಣಿ ಸರಯು ಗಂಡಿಕಿ ಸೀತ ತುಂಗಭದ್ರಾ ನಾಮರೇ ಅಂಗ ಮಾಲಾಪಾರಿ ಕಾವೇರಿ ಕಪಿಲೆ ನರ ರಂಗ ಪಾವನ ಗೈವ ಪುಷ್ಕರಗಳಭಿಮಾನಿ ಅಂಗನೆಯರೆÀಲ್ಲರಿಗೆ ಅಭಿವಂದಿಸುವೆ ಅಘವ ಹಿಂಗಿಸುವುದೆಂದು ಮುದದೀ 2 ಬಂದು ಸ್ವಪ್ನದಿ ಮಾಘ ಶುದ್ಧ ನವಮೀ ಭರಣಿ ಸಂಯೋಗದ ಪರ್ವವೆಂದು ಭದ್ರೆಲಿ ಸ್ವಾನ ವಿಂದು ಗೈದೆವು ಎಂದು ಮುಂದೆ ಕುಳ್ಳಿರೆ ನಾನಾ ನಂದದಿಂ ಕಂಡು ನಿಮ್ಮಾ ಸುಂದರಿಯರೇ ನಿಮ್ಮ ಸಂದರ್ಶನದಿ ಫಲವು ಬಂದುದೆನಗೆಂದು ನಾನಂದ ವಚನಕೆ ನಲಿದು ಒಂದು ಅರಿಯದ ಎನಗೆ ತಂದು ಕೊಟ್ಟಿರಿ ಸ್ನಾನ ದಿಂದ ಬಹು ಪುಣ್ಯ ಫಲವಾ 3 ಹರದಿಯರೆ ಕಂಡೆ ನಿಮ್ಮರವಿಂದ ಮುಖ ಶುಭ್ರ ಸರಿತು ದೇವತೇಗಳೇ ಗುರು ಕೃಪೆಯ ಬಲದಿಂದ ಸಿರಿ ನದಿಗಳೇ ಜಗದಿ ಭರದಿಂದ ಪರಿದು ಸಾಗರವ ಕೂಡುವ ತ್ವರದಿ ಪರಿಪರಿಯ ಜಲ ಜಂತು ಸಂಸಾರಿ ಸಂಗೆಯರೆ ನರರು ಬಣ್ಣಿಸಲಳವೆ ಕರುಣಿ ನಿಮ್ಮಯ ಮಹಿಮೆ ಸಿರಿಕಾಂತ ಪ್ರಿಯಸುತೆಯರೇ 4 ಶ್ರೇಷ್ಟನದಿ ಅಭಿಮಾನಿ ಸತಿಯರೇ ಎನ್ನ ಅಘ ಸುಟ್ಟು ನಿರ್ಮಲ ಭಾವ ಕೊಟ್ಟು ಹೃತ್ಪದದಲಿ ವಿಷ್ಣು ಮೂರ್ತಿಯ ಕಾಂಬ ಶ್ರೇಷ್ಟ ಜ್ಞಾನದ ಮಾರ್ಗ ಕೊಟ್ಟು ಸದ್ಭಕ್ತಿ ಭರದೀ ಚಿಟ್ಟನೇ ಚೀರಿ ದಾಸ್ಯದ ಭಾವದಲಿ ಕುಣಿದು ಶ್ರೇಷ್ಟ ಶ್ರೀ ಗೋಪಾಲಕೃಷ್ಣವಿಠ್ಠಲನ ಪದ ಮುಟ್ಟುವೊ ವಿಜ್ಞಾನ ಪ್ರವಹ ರೂಪದಿ ವಲಿದುದಿಟ್ಟಿಯರ ಸಂತೈಸಿರಿ 5
--------------
ಅಂಬಾಬಾಯಿ