ಒಟ್ಟು 9847 ಕಡೆಗಳಲ್ಲಿ , 135 ದಾಸರು , 5174 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕ್ಲೇಶ ಕಷ್ಟದಿ ಮುಳುಗಿ ಬಳಲಬೇಡ ಪ ಹಿಂದೆ ನಾನಾ ಯೋನಿಯಲ್ಲಿ ಹಡಿಕೆಯೊಳು ಜನಿಸಿ ಜನಿಸಿತಂದೆ ತಾಯಿ ಹೆಂಡಿರೇಸು ಲೆಕ್ಕವಾಯ್ತು ನೋಡಮುಂದೆ ಬಹ ದುಃಖಕೆ ಮುಳುಗಿ ಮುಳುಗಿ ಧೈರ್ಯ ಪಡೆದುಮಂದ ಮತಿಯಾಗಿ ಗುರುವ ಮರೆಯಲಿ ಬೇಡ 1 ದುರ್ಜನರ ಸಂಗ ಮಾಡಿ ದುಷ್ಟ ನಡತೆಯಲ್ಲಿ ನಡೆದುಸಜ್ಜನರ ಸಂಗ ನೀ ಮರೆಯಲಿ ಬೇಡಜಜ್ಜುಗಟ್ಟಿ ಪಾಪಕರ್ಮ ಜರಿದು ಜರಿದುಜೋಕೆಯಲ್ಲಿ ಸದ್ಗುರುನಾಥ ಸ್ಮರಣೆ ಮಾಡು2 ಮನೆಯು ಮಕ್ಕಳೆಂಬ ಧನವು ಪಶುಗಳಲ್ಲಿ ಆಸೆಯಿಟ್ಟುನೆನೆಸಿ ನೆನೆಸಿ ಬಿಕ್ಕಿ ಬಿಕ್ಕಿ ಅಳಲು ಬೇಡಚಿನ್ಮಯ ಚಿದಾನಂದಾವಧೂತನೊಳು ಬೆರೆತುಘನವನೈದಿ ಸದ್ಗುಣಾದಿ ತಿಳಿದು ನೋಡ 3
--------------
ಚಿದಾನಂದ ಅವಧೂತರು
ಕ್ಲೇಶಮಾಡಲಿ ಬೇಡ ಮನವೆ ನೀನೂ ದೇಶದೊಳಗೆ ಕೇಳು ಜ್ಞಾನಿಗಳ ಸಮ್ಮತಾ ಪ ವಸಿಷ್ಠ ಮಹಾಋಷಿಗೆ ನೂರುಮಂದಿ ಸುತರು ಅಸಮಸಾಹಸರು ಬಲು ಶೀಲಜ್ಞರು ಕಾಲ ಮೃತ್ಯುವಿನ ಕೈ ವಶವಾಗಿ ಹೋದರದು ನೋಡು ದು:ಖವ ಬಿಡು 1 ಕೃಷ್ಣ ಸೋದರಮಾವ ಮತ್ತೆ ಭೀಮಸೇನ ಜೇಷ್ಠಪಿತ, ಪಾರ್ಥನು ಪಡೆದ ಶೂರ ಇಷ್ಟು ಜನ ಇರಲಾಗಿ ಅಭಿಮನ್ಯು ದೇಹವನು ಬಿಟ್ಟು ಪೋಗಲು ಒಬ್ಬರಾದರು ಉಳುಹಿದರೆ2 ಇಂಥವರಿಗೀತ್ಯರನು ನಿನಗಾವ ಸ್ವಾತಂತ್ರ್ಯ ಸಂತೋಷವೆ ಬಡು ಧೈರ್ಯದಲ್ಲಿ ಕಂತು ಜನಕ ನಮ್ಮ ವಿಜಯವಿಟ್ಠಲನಂಘ್ರಿ ಅಂತರಂಗದಲಿಡು ಮುಂದಿನಗತಿ ಬೇಡು 3
--------------
ವಿಜಯದಾಸ
ಕ್ಷಣತೋರಿ ಇಲ್ಲದಂತಾಗುವ ವಿಷಮ ಮಹ ಕನಸಿನ ಮೋಹದಿಂ ಕೆಡಬೇಡ ಮನುಜ ಪ ಹಲವು ಜನಮದಿ ಬಿದ್ದು ತಿಳಿಯದೆ ಇಹ್ಯಪರಕೆ ತೊಳಲುತ ಬಳಲುತ ತಿರುತಿರುಗಿ ಗಳಿಸಿದ ನರಜನುಮ ವಿವರಿಸಿ ನೋಡದೆ ಕಳಕೊಂಡು ಬಳಿಕಿನ್ನು ಸುಲಭವಲ್ಲೆಲೆ ಖೋಡಿ 1 ನೀರಮೇಲಣ ಗುರುಳೆಯಂತೆ ಕಾಂಬುವ ಈ ನರಕ ಮೂತ್ರದ ತನುಭಾಂಡವಿದು ಅರಿಯದೆ ಮೋಹಿಸಿ ಪರಿಪರಿ ಕುಣಿಕುಣಿದು ಪರಮ ರೌರವ ನರಕಕ್ಹೋಗ ಬೇಡೆಲೆ ಖೋಡಿ 2 ಜವನÀದೂತರು ಬಂದು ಕವಿದುಕೊಳ್ಳಲು ಆಗ ಕಾಯುವರಾರಿಲ್ಲ ಕೈಪಿಡಿದು ದಿವನಿಶೆಯೆನ್ನದೆ ಭವಹರ ಶ್ರೀರಾಮ ದೇವನ ನೆರೆನಂಬಿ ಭವಮಾಲೆ ಗೆಲಿಯೊ 3
--------------
ರಾಮದಾಸರು
ಕ್ಷಣದಲಿ ಸೌಖ್ಯ ಕ್ಷಣದಲಿ ದುಃಖ ಬಣಗು ಸಂಸಾರದಿ ಎಣಿಸಿದರೆ ಪ ಕೊಟ್ಟರೆ ತಂದರೆ ಸಂತೋಷ ಬಿಟ್ಟರೆ ಕೊಡದಿರೆ ಬಲುರೋಷ 1 ಎರೆಡು ಘಳಿಗೆ ಬಹಳಾಯಾಸ ಏನು ಇಲ್ಲ ಕೊನೆಗೆ ನಿರಾಶ 2 ತಾನೇಕಾದಶಿ ಪಿಕ್ನಿಕ್‍ವೂಟ ಭಾನುವಾರ ಇಸ್ಪೇಟಾಟ3 ಕೋಟುಷರಟು ಜುಬ್ಬ ಇಜಾರು ನೋಟಕೆ ಮೇಲೆ ಕಾರ್ಬಾರು 4 ಕರುಡು ಕುಂಟ ಮೂಕರು ಮಾತ್ರ ಸತ್ಪಾತ್ರ 5 ಅತಿಜಾರಿಗೆ ಕೆಂಪು ಬೆಂಡೋಲೆ 6 ಹಾದರಗಿತ್ತಿಗೆ ದೂದ್‍ಫೇಢ ಸಾಧುಸ್ತ್ರೀಗನ್ನವು ಬೇಡ 7 ಹಿರಿಯರ ಮಾತಿಗೆ ನಾನ್ಸೆನ್ಸು ದುರುಳರ ಬೋಧೆಗೆ ತಾ ಒಳ್ಳೆಮನಸು 8 ಮೋಕ್ಷವಿದ್ಯೆ ಕೆಲಸಕೆ ಬಾರದು ಕುಕ್ಷಿಂಬರ ವಿದ್ಯೆ ಬಲು ದೊಡ್ಡದು 9 ಹರಿಕಥೆ ಕೇಳ್ವುದು ಬೇಜಾರು ಹರಟೆ ಹರಟುವುದು ಬಲು ಜೋರು 10 ಪರರ ನೋಡಿ ನನ್ನಾಚರಣೆ ಗುರುರಾಮ ವಿಠಲನಲಿಲ್ಲ ಸ್ಮರಣೆ 11
--------------
ಗುರುರಾಮವಿಠಲ
ಕ್ಷಮಾ ಪ್ರಾರ್ಥನೆ ಗುರುಹಿರಿಯರೆಡೆಯಲ್ಲಿ ಶಿರಬಾಗಿಸಿನಯದಲಿ ಎರೆವೆನೀಪರಿಯಲ್ಲಿ ಕರವಮುಗಿದು ಯತಿನಿಯಮ ಛಂದಸ್ಸು ಗತಿತಾಳಲಯಬಂಧ ನುತಶಬ್ದ ತತ್ವಾರ್ಥ ಸಂಗತಿಯನು ವರಕವಿಗಳೊರೆದಿರ್ಪ ತರತರದ ಪ್ರಾಸಗಳ ವರಲಕ್ಯಣಲಂಕಾರ ಮೆಂಬ ಪರಿಕರಂಗಳನರಿದು ಪರಿಪರೀಸಿಂಗರಿಸ ಲರಿಯೆ ಕವಿತಾಮಣಿಯ ಪರಿಯನರಿಯೆ ಸರಿಸದೋಳ್‍ನಿಂದೆ ನೆಂದರಿಯ ಬೇಡಿ ಅರಿಯದಾತರಳೆ ರಚಿಸಿದುದನುನೋಡಿ ಹಿರಿಯರೊಳುಗರುವತೋರಿದೆನೆನ್ನ ಬೇಡಿ ಸರಿದೋರಿದಂತೆಸಿಗೆ ಕೃಪೆಮಾಡಿ ಸಮರ್ಪಣೆ ತ್ವದ್ದತ್ತವಾಚಾ ತವಕಿಂಕರೇಣ ತ್ಪತ್ಪ್ರೀತಿ ಕಾಮೇನ ಮಯಾಕೃತೇನ | ಸ್ತೋತ್ರೇಣ ಲಕ್ಷ್ಮೀನೃಹರೇ ಸವಿಷ್ಣುಃ ಪ್ರೀತೋಭವತ್ಪಂ ಕರುಣಾದ್ರ್ರದೃಷ್ಟಿಃ ||
--------------
ನಂಜನಗೂಡು ತಿರುಮಲಾಂಬಾ
ಕ್ಷೀರಾಬ್ಧಿಜಾರಮಣ ಕ್ಷೀರಾಂಬುನಿಧಿಶಯನ ಸದನ ಗರುಡಗಮನ ಕಾಕುತ್ಸ್ಥವಂಶಾಬ್ಧಿ ರಾಕೇಂದು ಗುಣನಿಧೀ ಪಾಕಾರಿಮುಖದೇವ ನಿಕರಜೀವ ನಿಟಿಲಾಕ್ಷನುತನಾಮ ಜಟಾವಲ್ಕಲಧಾಮ ತಾಟಕಾಂತಕರಾಮ ಸಮರಭೀಮ ಇಂದುಸನ್ನಿಭವದನ ಕುಂದಕುಟ್ಮಲರದನ ಇಂದೀವರ ಸುನಯನ ಕನಕವಸನ ಕವಿಜನಮನೋಲ್ಲಾಸ ಶಶಿಸುಹಾಸ ಸೇವ್ಯ ದೇವದೇವ ಭವಭೀತಿಹರ ಶೇಷಶೈಲನಿಲಯ ಸುವಿಮಲಯಶಶ್ಚಂದ್ರ ರಾಘವೇಂದ್ರ
--------------
ನಂಜನಗೂಡು ತಿರುಮಲಾಂಬಾ
ಕ್ಷೇತ್ರ ದರ್ಶನ ಉಡುಪಿಯ ಯಾತ್ರೆಯ ಮಾಡಿ - ಉಡುಪಿಯಾ ಪ ಉಡುಪಿಯ ಯಾತ್ರೆಯನ್ನೆ ಮಾಡಿ | ಭಕ್ತಿಮುಡುಪಿತ್ತು ಪ್ರಮೋದ ಬೇಡಿ | ಆಹನಡುದೇಹ ದೋಳೀಹ | ನಡುನಾಡಿ ಕಮಲದಿಒಡೆಯ ಶ್ರೀ ಕೃಷ್ಣನ್ನ | ಧೃಡ ಭಕ್ತಿಯಿಂ ಭಜಿಸಿ ಅ.ಪ. ಆನಂದ ತೀರಥ ಸರಸಿ | ಯೊಳುಮೀನನಾಗಿ ಬಹು ಈಸಿ | ಹರಿಧ್ಯಾನದಿ ಸ್ನಾನ ಪೊರೈಸಿ | ಮತ್ತೆಮೌನವೆಂಬಾಸನ ಹಾಸಿ | ಆಹಮೂಧ್ರ್ನಿ ಲಲಾಟದೋಳ್ | ಗೋಣು ಮಧ್ಯೋದರಸ್ಥಾನಾದಿಯಲಿ ಹರಿ | ಧ್ಯಾನ ನಾಮವ ಹಚ್ಚಿ 1 ಮಧ್ವ ಕಿಂಕರನೆಂಬೊ ದೊಂದು | ಹರಿವಿದ್ವೇಷಿಗಳ ಬಡಿವೊದೆಂದು | ಮತ್ತೆಸದ್ವೈಷ್ಣವರ ಸೇರ್ವೋದೊಂದು | ಇನ್ನುಬುದ್ಧಿಪೂರ್ವಕ ಹರಿ ಪರನೆಂದು | ಆಹಶ್ರದ್ಧಾಳು ವೆಂದೆನಿಪ | ಮುದ್ದು ಮುದ್ರೆಗಳೈದುತಿದ್ದಿ ವಿಸ್ತರಿಸೂತ | ಕೃದ್ದೋಲ್ಕಾದಿಯನೆನೆ 2 ಸಂಧ್ಯಾ ಮೂಡಿಹುದು ನೀ ನೋಡು | ಕಾಲಮುದ್ಹಿಂದಾಗದಲೆ ನೀ ಮಾಡು | ಯಾವದೊಂದು ಮಂತ್ರಾರ್ಥವ ನೋಡು | ಇನ್ನುಸಂಧ್ಯಾ ನಾಮಕನ ಕೊಂಡಾಡು | ಆಹಛಂದದಿ ನಿನ ಜ್ಞಾನ | ಮುಂದು ಮುಕ್ಕಿಲು ಒಪ್ಪಮಂದೇಹ ದೈತ್ಯರ | ಮಂದಿಯ ಕೊಲ್ಲುತ 3 ಕಂಟಕ ಕಳೆದು ಶರೀರ | ಮಧ್ಯಮಂಟಪ ಚಿಂತಿಸೊ ಧೀರ | ಅದಕೆಎಂಟರ್ಧ ಮತ್ತೊಂದು ದ್ವಾರ | ಕಾಯ್ವಭಂಟ ಮಾರುತನ ವ್ಯಾಪಾರ | ಆಹಎಂಟ್‍ಟಾರು ನಾಲ್ಕು ಸ್ತಂಭ ಮಧ್ಯದಿ ಲಕ್ಷ್ಮಿಮಂಟಪ ಚಿಂತಿಸಿ ಒಂಟಿಯಾಗೊ ಮನದಿ 4 ಕೆಳ ಮುಖಾಬ್ಜವನೇ ನೀ ನೋಡೀ | ಮಂತ್ರಮೂಲದಿಂದ ಮೇಲು ಮಾಡಿ | ಅಲ್ಲಿಇಳೆಯಾಣ್ಮನನ ಚಿಂತೆ ಮಾಡಿ | ಸರ್ವಅಲಂಕಾರ ದಿಂದೊಡಗೂಡೀ | ಆಹನೆಲೆಸೀಹ ಕೃಷ್ಣನ್ನ | ಒಲಿಸೆ ಭಕ್ತಿಯಿಂದಸ್ಥಳ ತನ್ನ ಅರಮನೆ | ಯೊಳು ಕೊಟ್ಟು ಸಲಹುವ 5 ನಿತ್ಯ ಸ್ತವನ | ಆಹಇಂಬಿಟ್ಟು ಸ್ತೋತ್ರದಿ | ಉಂಬುಡುವೋ ಸರ್ವಬಿಂಬನೋಳರ್ಪಿಸಿ | ಸಂಭ್ರಮದಲ್ಲಿರು 6 ಮಧ್ವ ಸರೋವರ ಸ್ನಾನ | ಭಕ್ತಿಶುದ್ಧದಿ ಶ್ರೀಕೃಷ್ಣಧ್ಯಾನ | ಮಾಡೆಹೃದ್ಯನು ಹೃದ್ಯದಿಷ್ಠಾನ | ದಲ್ಲಿಸಿದ್ಧಿಸೂವನು ಗುಣ ಪೂರ್ಣ | ಆಹಮುದ್ದು ಕೃಷ್ಣನು ಗುರು | ಗೋವಿಂದ ವಿಠಲನುಶ್ರದ್ಧೆ ಸತ್ವಕ್ಕೊಲಿವ | ಸಿದ್ಧ ಕನಕನ ನೋಡಿ 7 ತೀರ್ಥ ಕ್ಷೇತ್ರ ಮಾಲಾ 1952 ರಲ್ಲಿ ಇಡೀ ಭರತ ವರ್ಷದಲ್ಲಿ ಪ್ರದಕ್ಷಿಣಾಕಾರವಾಗಿ ಹೊರಟು ಆಸೇತು ಹಿಮಾಚಲ ಪರ್ಯಂತವಿರುವ ಅನಂತ ತೀರ್ಥ ಕ್ಷೇತ್ರಗಳಲ್ಲಿ ಈ ಅಲ್ಪಾಧಿಷ್ಠಾನದ ಯೋಗ್ಯತಾಪ್ರಕಾರ ಬಿಂಬನು ಮಾಡಿ ಮಾಡಿಸಿದ ಯಾತ್ರಾ ಪ್ರಕರಣವೂ, ಮತ್ತೆ, 1954 ರಲ್ಲಿ ಉಡುಪಿ ಇತ್ಯಾದಿ ಪಶ್ಚಿಮ ಕ್ಷೇತಗಳ ಮತ್ತು 1957 ರಲ್ಲಿ ಮಲಖೇಡದಲ್ಲಿ ಬೃಹತೀ ಸಹಸ್ರವಾದಾಗ ಆಕಡೆ ಹೋದಾಗ ನೋಡಿದ ಅನೇಕ ಕ್ಷೇತ್ರಗಳ ಮತ್ತು 1961 ರಲ್ಲಿ ಸ್ವಾದಿ, ದ್ವಾರಕ, ಪುಷ್ಕರ, ಬದರಿ (ದ್ವಿತೀಯಾವರ್ತಿ) ಹೋಗಿ ಬಂದಾಗ ನೋಡಿದ ಯಾತ್ರಾ ಪ್ರಕರಣಗಳ ಜ್ಞಾಪಕಾರ್ಥವಾಗಿ ಈ ತೀರ್ಥಕ್ಷೇತ್ರಮಾಲಾ ಅಸ್ಮದ್ಗುರ್ವಂತರ್ಗತ ಬಿಂಬ ಮೂರುತಿ ಪ್ರೇರಿಸಿದಂತೆ ಬರೆಯಲ್ಪಡುತ್ತೆ :-
--------------
ಗುರುಗೋವಿಂದವಿಠಲರು
ಕ್ಷೇತ್ರದರ್ಶನ ಅ. ಕಂಚಿ ಕರಿಗಿರಿವಾಸ ವರದರಾಜ ಕರಿಗಿರಿವಾಸ ಪ ದುರಿತ ವಿನಾಶನೆ ಸುರಮುನಿ ಪೋಷನೆ ಭವರೋಗ ನಾಶನೆ ಅ.ಪ ರಾಜನೆಂಬೊ ಬಿರುದು ಪೊತ್ತಿಹ ದೇವ 1 ಮಾಯೆಯ ಬಿಡಿಸೊ ನಿನ್ನಲಿ ಎನಗೆ ಮೋಹವ ನಿಲಿಸೊ ಪಾದಧ್ಯಾನವನಿತ್ತು ಕಾಯೊ ವರದರಾಜ 2 ಚತುರಹಸ್ತದಲೀ ಕೈಪಿಡಿದು ದಿವ್ಯವಾದ ಶಂಖಚಕ್ರಗದೆಯಲಿ ನಿಮ್ಮ ಪಾದವ ಸೇರಿಸು ಎನ್ನ ಚಿತ್ತಜಜನಕ 3 ಹಾ ಕೃಷ್ಣ ಎಂದು ದ್ರೌಪದಿ ಕರೆಯೆ ಮನಕೆ ನೀತಂದು ಅಕ್ಷಯ ಮಾಡಿದೆ ಪಕ್ಷಿವಾಹನ ಪಾಂಡವಪಕ್ಷ ಶ್ರೀಕೃಷ್ಣ 4 ಇನ್ನು ನಾ ಜನಿಸಲಾರೆನೊ ಹೀನಜನ್ಮದಿ ಮನ್ನಿಸಿ ರಕ್ಷಿಸೊ ಎನ್ನ ವರದರಾಜ5 ಭವಬಿಸಲಿನಲಿ ಬಳಲಿ ಬಂದೆ ತಾಪತ್ರಯದಲ್ಲಿ ನಿಮ್ಮ ಚರಣ ಪಂಕಜವೆಂಬೊ ಆತಪತ್ರದ ನೆರಳ ತಾಪ ದೂರ ಮಾಡಿಸೊ ದೇವ 6 ನಾಮಾಡಿದಂಥ ಪಾಪಗಳೆಲ್ಲ ಸಾವಿರ [ಅ]ನಂತ ಎಣಿಸಿ ನೋಡಲು ಏನೂ ದಾರಿಯ ಕಾಣೆನು [ಎನ್ನ] ಸರ್ವಾಪರಾಧವ ಕ್ಷಮಿಸಿ ರಕ್ಷಿಸೊ ದೇವ 7 ವಿಂದ್ಯಾರಣ್ಯದಲಿ ಭಕ್ತರು ಕರೆಯೆ ಬಂದೆ ಬೇಗದಲಿ ಇಂದಿರೆ ಸಹಿತಾಲೆ ತೀರ್ಥವ ಗ್ರಹಿಸಿ ಭಕ್ತರ ಕರೆ ತಂದು ಕರಿಗಿರಿಯಲಿನಿಂದ ವರದರಾಜ ಕರಿಗಿರಿವಾಸ 8
--------------
ಯದುಗಿರಿಯಮ್ಮ
ಕ್ಷೇತ್ರವೆಂದರೆ ಉಡುಪಿ ಕ್ಷೇತ್ರ ಪ ಸೂತ್ರಾಂತರಾತ್ಮ ಹರಿ ಯಾತ್ರೆ ಮಾಳ್ಪನಿಗೆ ಅ.ಪ. ವಾಸುದೇವ ಮುನಿಯು ಪುಟ್ಟಿ ಪಾಜಕದಲ್ಲಿವಾಸುದೇವ ಕೃಷ್ಣನ್ನ ನಿಲ್ಲಿಸಿಹರೋ ||ಕಾಸು ವೀಸಕೆ ವರದನಲ್ಲವೊ ಭಕುತಿಪಾಶಗಳಿಗೇ ಒಲಿವ ಶ್ರೀ ಕೃಷ್ಣ ನಿಲಯಾ 1 ವಟುತನ ದೊಳಾಶ್ರಮ ಸ್ವೀಕರಿಸಿ ಸನ್ಯಾಸಿಅಷ್ಟ ಮಠದವರಿಂದ ಇಷ್ಟ ಪೂಜೆಗಳಾ ||ಸೃಷ್ಟಿಯೊಳಗಪ್ರತಿಮ | ಕೃಷ್ಣಕೊಳ್ಳುತ ಮನಮುಟ್ಟಿ ಭಜಿಸುವರ | ಇಷ್ಟಾರ್ಥಗಳ ಕೊಡುವಾ 2 ದಿನಕನೇಕಲಂಕಾರ | ಅನವರತ ಸಂಪೂಜೆಎಣಿಸಲೆನ್ನಳವಲ್ಲ ರುಕುಮಿಣಿಯನಲ್ಲಾ ||ದೀನನಾಥ ನಾಥ ಗುರು | ಗೋವಿಂದ ವಿಠ್ಠಲನಮನದಣಿಯ ನೋಳ್ಪುದಕೆ | ಘನವಾದ ಸದನಾ 3
--------------
ಗುರುಗೋವಿಂದವಿಠಲರು
ಖಗವರನೇ ಪಾಲಿಸೋ ಪ ಪೆಗಲೊಳು ಹರಿಯನು | ಮಿಗೆ ಭಕುತಿಲಿ ಪೊತ್ತುನಗಧರ ಬಿಂಬವ | ನಗುತ ನಖದಿ ನೋಳ್ಪ ಅ.ಪ. ವೇದೋದಿತ ಕ್ರಿಯ | ಕಾದ್ಯಭಿಮಾನಿಯೆವೇದಮಯನೆ ಹರಿ | ಗಾದೆಯೊ ವಾಹನಸಾಧಿಸಿ ಶ್ರೀಹರಿ | ಪಾದಾಂಬುಜಗಳಹಾದಿಯ ತೋರೊ ಅ | ಗಾಧ ಮಹಾತ್ಮಾ 1 ಸಾಸಿರ ಬೃಹತಿಯ | ಸೂಸಿ ನೀ ಪೊಗಳುತಸಾಸಿರ ನಾಮನು | ಕೇಶವ ನೊಲಿಮೆಯಪೋಷಿತ ನಾಗಿಹೆ | ಆಶುಗ ಹೃದಯಾಕಾಶದೊಳಿರುತಿಹ | ಶ್ರೀಶನ ತೋರಿಸಿ 2 ಪಾವಮಾನಿಸುತ | ಪಾವಿಸಿ ಮನ್ಮನಭಾ5¥5 | ಗೋವಿಂದ ವಿಠಲನ |ಪಾವನ ನಾಮ ಸು | ಭಾವನ ಉಣಿಸುತಕೋವಿದ ಸಂಗತಿ | ಈವುದು ನೀ ಸದ 3
--------------
ಗುರುಗೋವಿಂದವಿಠಲರು
ಖರೆ ತವಧ್ಯಾನ ಹರಿ ಬೇಗ ಮಾಡೆನ್ನಗೆ ನಿಜಮನನ ಪ ಬಾಗಿವಂದಿಪೆ ನಾ ನಿಮ್ಮ ಚರಣ ಭವ ರೋಗ ದಯದಿ ಮಾಡು ನಿವಾರಣ ಅ.ಪ ಜಾಗರಮಾಡಿದರಹುದೇನು ನಿತ್ಯ ಭಾಗವತನೋದಿದರಹುದೇನು ಯಾಗಮಾಡಿದರಹುದೇನು ಮಹ ಯೋಗ ಬಲಿಸಿದರಹುದೇನು ಸೋಗು ಹಾಕಿ ಬೈರಾಗಿ ಆಗಿ ಇಳೆಯ ಭೋಗವ ತ್ಯಜಿಸಿದರಹುದೇನು 1 ಸ್ನಾನಮಾಡಿದರಹುದೇನು ಬಹು ದಾನಮಾಡಿದರಹುದೇನು ಮೌನಮಾಡಿದರಹುದೇನು ಕೌ ಪೀಣ ಧರಿಸಿದರಹುದೇನು ಜ್ಞಾನ ಬೋಧಿಸುತ ನಾನಾದೇಶಗಳ ಮಾಣದೆ ತಿರಿಗಿದರಹುದೇನು 2 ಜಪವಮಾಡಿದರಹುದೇನು ಬಲು ಗುಪಿತ ತೋರಿದರಹುದೇನು ತಪವ ಗೈದರಹುದೇನು ಮಹ ವಿಪಿನ ಸೇರಿದರೆ ಅಹುದೇನು ಚಪಲತನದಿ ಸದಾ ಅಪರೋಕ್ಷನುಡಿದು ನಿಪುಣನೆನಿಸಿದರೆ ಅಹುದೇನು 3 ಸಾಧುವೆನಿಸಿದರೆ ಅಹುದೇನು ಚತು ಸ್ಸಾಧನಮಾಡಿದರಹುದೇನು ವೇದ ಪಠಿಸಿದರೆ ಅಹುದೇನು ಅಣಿ ಮಾದಿ ಅಷ್ಟಸಿದ್ಧಿ ಅಹುದೇನು ಓದಿತತ್ತ್ವಪದ ಛೇದಿಸಿ ಬಿಡದೆ ಬೋಧಕನೆನಿಸಿದರೆ ಅಹುದೇನು 4 ಕೋಶನೋಡಿದರೆ ಅಹುದೇನು ಬಹು ದೇಶ ನೋಡಿದರೆ ಅಹುದೇನು ಆಸನಹಾಕಿದರಹುದೇನು ಮಂತ್ರ ಅ ಭ್ಯಾಸ ಮಾಡಿದರೆ ಅಹುದೇನು ದಾಸಪ್ರಿಯ ಭಯನಾಶ ಶ್ರೀರಾಮ ನಿಮ್ಮ ಧ್ಯಾಸವೊಂದಿರೆ ಮುಕ್ತಿ ಸಿಗದೇನು 5
--------------
ರಾಮದಾಸರು
ಖೋಡಿಗುಣ ಜಗದಲ್ಲಿ ಹೂಡಿ ನೀ ನಲಿವಾಗ ನಾಡೆದ್ದು ಕುಣಿಯುವದೊ ನಾಸ್ತಿಕಾದಲ್ಲಿ ಪ ಮಾಡಿ ದುಪ್ಕ್ರಿಯ ಜಾಲ ಮತಿಭ್ರಷ್ಟತನದಲ್ಲಿ ನೋಡರೂ ಸನ್ಮಾರ್ಗ ಗಾಡಿಕಾರನೆ ಹರಿಯೆ ಅ.ಪ ಗತಿಸಿದಾ ತನುಗಳಲಿ ರತಿವಿಷಯಗಳ ಮಾಡಿ ಮತಿ ಮನಸು ದುರ್ಭಾವಗಳಲಿ ನೆಯದು ಮತ್ರ್ಯರನು ನೋಡಲತಿ ಭೀತಿ ಆಹುದೊ ಮನಕೆ 1 ನಾನಾಭಾವವ ಪೊಂದಿ ಹಾನಿವಶರಾಗಿಹರು ಜ್ಞಾನನಿಧಿ ತವಕರುಣಕೆರವಾಗಿ ನಡೆದು ನಾನಾ ದುಃಖದಿ ನರಳಿ ನರಕ ಯಾತನೆಗೊಂಬ ಜ್ಞಾನಹೀನರ ನೋಡಿ ನಡುಗುವೆನೊ ಹರಿಕಾಯೊ 2 ಕ್ವಚಿತು ಸಜ್ಜನ ತಾವು ಶುಚಿ ಮನದಿ ನಿನ್ನಲ್ಲಿ ರುಚಿಗೊಳಲು ಎತ್ತೆನಿಸೆ ಎದೆ ಬಿಚ್ಚುವಂತೆ ಹೆಚ್ಚಿ ಆದಿವ್ಯಾಧಿ ನುಚ್ಚು ಮಾಳ್ಪದೊ ಮನಸು ಸಚ್ಚಿದಾನಂದ ಹರಿ ಸಜ್ಜನಾಧಾರಿ ಧೊರಿ3 ವಿಧಿ ಲಕ್ಷ್ಮಿ ಸನ್ನತ ಮಹಿಮ ಬಂದ ಭಯಗಳು ನಿನ್ನ ಇಚ್ಛೆಯಿಂದ ಬಂದದಲ್ಲದೆ ಬೇರೆ ಒಂದು ಕಾರಣ ಕಾಣೆ ಸಿಂಧು ಕೊಡುವವ ನೀನೆ4 ತಾಮಸರ ವಿಕಾರ ದುಃಖರಸÀ ಸೃಜಿಸುವುದು ಸೌಮ್ಯ ಜನ ಸದ್ಭಾವ ಸುಖಸಾರ ಸೃಷ್ಟಿ ಕಾಮಧೇನು ಜಯೇಶವಿಠಲಯ್ಯ ನಿನ್ನ ಮಹ ನೇಮ ಇಂಥಾದ್ದೆ ಪತಿತ ಪಾವನ ಪಾಹಿ 5
--------------
ಜಯೇಶವಿಠಲ
ಗಂಗಾ ಗಂಗಾ ಎಂದು ನಿನ್ನ ಸಾನ್ನಿಧ್ಯದಲ್ಲಿಯೇಇರುವೆನೋ? ಸುಖದಿ ಗಂಗಾ ಪಧರೆಗೊಪ್ಪುವ ಹಾರ'ದೆಂಬಂದದಿಮೆರೆಯುತ್ತಿರುವಾ ಪರಮಪಾವನೆಯೆ 1ಸುರಲೋಕಕೆ ಹತ್ತುವದನು ಸೂಚಿಸುತಿರುವ ಪತಾಕೆಯ ಪರಿಯಳೊಪ್ಪಿರುವ2ಹರಿಚರಣಾಂಬುಜದಿಂದ ಹೊರಡುತಹರನಶಿರಸ್ಯಂ ಹರಿಯುತಾ ಇರುವ 3ಮುಳುಗಿದವರ ಪಾಪಗಳನೆಲ್ಲವನುತೊಳೆಯುವ ಚಿನ್ಮಯೆ ಕಲಿಮಲಾಪಹರೆ 4
--------------
ಹೊಸಕೆರೆ ಚಿದಂಬರಯ್ಯನವರು
ಗಂಗಾ ಜನಕ ವಿಠಲ | ಅಂಗನೆಯ ಪೊರೆಯೋ ಪ ಮಂಗಳಾಂಗನೆ ದೇವ | ರಂಗ ಭವಹಾರೀ ಅ.ಪ. ವೈರಾಗ್ಯ ಭಾಗ್ಯಗಳ | ಹಾರೈಸುವಂತೆಸಗೋಸಾರಸುಖ ಸಾಂದ್ರ ಹರಿ | ಮಾರಮಣ ದೇವಾ |ಘೋರ ಭವವೆನಿಪ ಕೂ | ಪಾಠ ದಾಟಿಸೊ ಹರಿಯೆಕಾರುಣ್ಯ ಶರಧಿತವ | ಓರೆ ನೋಟದಲೀ1 ಗಣನೆಗೊಳಗಾಗದಿಹ | ಜನನ ಮರಣವು ಬರಲಿತನು ಮನದ ಸಂತಾಪ | ಅಣು ಬೃಹತು ಇರಲೀಗುಣ ಪೂರ್ಣ ಶ್ರೀಹರಿಯೆ | ಗಣನೆಗದು ಸಿಗದ ತೆರಅನನುತನೆ ನಿನ್ನ ಕಾರುಣ್ಯ ಒಂದಿರಲೀ 2 ಅಂಗನೆಗೆ ಸ್ವಪ್ನದಲಿ | ಗಂಗೆ ಮೀಯಿಸಿ ಬಾಲಸಂಗದಲಿ ಧವಳಾಖ್ಯ | ಗಂಗೆ ಸೋಪಾನಾಭಂಗ ವಿಲ್ಲದೆ ಯೇರಿ | ಮಂಗಳಾಂಗೆರ ಕಂಡುಶಿಂಗರದಿ ಪೂಜಿಸಿಹ | ಅಂಗನಾ ಮಣಿಯಾ 3 ಉಚ್ಚ ನೀ ಚಂಗಳನು | ಸ್ವಚ್ಛ ತಿಳಿಸುತ್ತಿವಳಕೃಚ್ಛ್ರಕೇ ಒಲಿಯುತ್ತ | ಲಕ್ಷ್ಮೀ ರಮಣಾಅಚ್ಚ ಭಕುತಿ ಜ್ಞಾನ | ನಿಚ್ಚಳದ ಮನವಿತ್ತುಸಚ್ಚಿದಾನಂದಾತ್ಮ | ಉಚ್ಚಳೆಂದೆನಿಸೋ 4 ವಿಷ್ಣು ಪದಿಧರಸಖನೆ | ದಶರಥಾತ್ಮಜ ಹರಿಯೆಯಶವಂತೆ ಗೃಹಿಣಿ ತವ | ಎಸೆವಪದ ಬಿಸಜವನು ಹಸನು ಸೇರಿಸೊಗುರೂ ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಗಂಗಾ ಭಾಗೀರಥೀ ಮಂಗಳಾಂಗಿ ಅಳಕನಂದನ ನೀ ಮಹಾ ಸುಂದರಾಂಗಿ ಸಿಂಧುರಾಜನ ರಾಣಿ ಸಿರಿಯು ಸಂಪತ್ತು ಕೊಡು ಕಂಗಳಿಂದಲಿ ನೋಡಿ ಕರುಣಿಸೆನ್ನ ಪ ಕಾಶಿ ಪಟ್ಟಣದಲಿ ವಾಸವಾಗಿ ಸರಸ್ವತಿಯನು ಕೂಡಿ ನೀ ಸರಸವಾಗಿ ಸೋಸಿಲಿಂದಲಿ ಸೂರ್ಯಪುತ್ರಿ ಯಮುನೆಯನು ಕೂಡಿ ಉ- ಲ್ಲಾಸದಿದ್ಹರಿದು ವಾರ್ಣಾಸಿಗ್ಹೋಗಿ 1 ಹಾಲಿನಂತೆ ಹರಿವೊ ಗಂಗೆ ನೀನು ನೀಲದಂತಿದ್ದ ಯಮುನೆಯನು ಕೂಡಿ ಲೀಲೆಯಿಂದಲಿ ಸರಸ್ವತಿಯನು ಕೂಡಿ ಓಲ್ಯಾಡುತ ಬಂದೆ ಒಯ್ಯಾರದಿಂದ 2 ಭಗೀರಥನ ಹಿಂದೆ ನೀ ಬಂದೆ ಓಡಿ ಸಗರನ ಸುತರ ಉದ್ಧಾರ ಮಾಡಿ ಜಗವ ಪಾವನ ಮಾಡೋ ಜಾಹ್ನವಿಯೆ ನೀ ಎನ್ನ ಮಗುವೆಂದು ಮುಂದಕೆ ಕರೆಯೆ ತಾಯಿ 3 ಬಿಂದುಮಾಧವ ವೇಣುಮಾಧವನ್ನ ಆ- ನಂದ ಭೈರವ ಕಾಳ ಭೈರವನ್ನ ಚಂದದಿಂದ್ವಿಶ್ವನಾಥನ್ನ ಗುಡಿಮುಂದೆ ಹೊಂದಿ ಹರಿದ್ಹನುಮಂತ ಘಾಟಿನ್ಹಿಂದೆ 4 ಪೊಡವಿ ಮ್ಯಾಲಿಂಥ ಸಡಗರದಿ ಹರಿದು ಕಡಲಶಯನನ್ನ ಕಾಲುಂಗುಷ್ಠದ ಮಗಳು ಕಡಲರಾಣಿಯೆ ಕಯ್ಯ ಪಿಡಿಯೆ ನೀನು 5 ಮರದ ಬಾಗಿಣ ಕುಂಕುಮರಿಷಿಣವು ಗಂಧ ಪರಿಪರಿಯಿಂದ ಪೂಜೆಯಗೊಂಬುವಿ ಸ್ಥಿರವಾದ ಮುತ್ತೈದೆತನ ಜನುಮ ಜನುಮಕ್ಕು ವರವ ಕೊಟ್ಟು ವೈಕುಂಠವನು ತೋರಿಸೆ 6 ಮಧ್ಯಾಹ್ನದಲಿ ಮಲಕರ್ಣಿಕೆಯ ಸ್ನಾನ ಶುದ್ಧವಾಗಿ ಪಂಚಗಂಗೆಯಲಿ ಭವ ಸ- ಮುದ್ರವನು ದಾಟಿಸೆ ಭಾಗೀರಥಿ 7 ಸುಕೃತ ಒದಗಿತೆಂದು ಗಂಗ ಭೆÀಟ್ಟಿಯಾಗೊ ಪುಣ್ಯ ಬಂದಿತಿಂದು ಚಕ್ರತೀರ್ಥದ ಸ್ನಾನ ಸಂಕಲ್ಪದ ಫಲವ ಕೊಟ್ಟು ರಕ್ಷಿಸು ತಾಯಿ ತರಂಗಿಣಿ 8 ಸಾಸಿರ ಮುಖದಿ ಶರಧಿಯನು ಕೂಡಿ ಹೋಗಿ ಬಾ ಊರಿಗೆ ಭಕ್ತಿಮುಕ್ತಿ ನೀಡಿ ನೀನು ಭೀಮೇಶ ಕೃಷ್ಣನಲಿ ಹುಟ್ಟಿದ್ದು ಪಾದವನು ತೋರೆನ್ನ ಪೊರೆಯಬೇಕೆ 9
--------------
ಹರಪನಹಳ್ಳಿಭೀಮವ್ವ