ಒಟ್ಟು 2585 ಕಡೆಗಳಲ್ಲಿ , 119 ದಾಸರು , 1949 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಾಲಿ ಲಾಲಿ ಹನುಮ ಲಾಲಿ ಬಲಭೀಮ ಲಾಲಿ ಲಾಲಿ ಲಾಲಿ ಗುರು ಮಧ್ವನಾಮ ಪ ತ್ರೇತೆಯಲಿ ಸಾಗರವ ದಾಟಿ ನಿಮಿಷದಲಿ ಸೀತೆಗುಂಗರ ಕೊಟ್ಟು ಕುಶಲ ತಿಳಿಸುತಲಿ ದೂತರಾವಣಗೆ ಶೌರ್ಯಗಳ ತೋರುತಲಿ ಸೀತೆಯ ಕ್ಷೇಮ ರಘುನಾಥಗರುಹುತಲಿ 1 ದ್ವಾಪರದಿ ಕೃಷ್ಣನಿಗೆ ಪರಮಾಪ್ತನಾಗಿ ದ್ರೌಪದಿಯ ವಚನವನು ಸಲಿಸಬೇಕಾಗಿ ಕೋಪದಲಿ ಖಳನ ಸೀಳುತ ತೃಪ್ತನಾಗಿ ಈ ಪರಿಯಲಿ ಹರಿಗೆ ಅರ್ಪಿಸುತ ಚನ್ನಾಗಿ2 ಮಧ್ವಮತವನುದ್ಧರಿಸಬೇಕೆನುತ ಶ್ರದ್ಧೆಯಲಿ ಕೃಷ್ಣನ್ನ ಸೇವಿಸುತ ಸತತ ಮುದ್ದು ಕಮಲನಾಭ ವಿಠ್ಠಲನ ಸ್ಮರಿಸುತ್ತಸದ್ಗ್ರಂಥ ರಚಿಸಿ ಬದರಿಯಲಿ ವಾಸಿಸುತ 3
--------------
ನಿಡಗುರುಕಿ ಜೀವೂಬಾಯಿ
ಲಾಲಿ ಲಾಲೀ ಲಾಲಿ ಮೊದಲಗಟ್ಟೇಶ ಲಾಲಿ ಲಾಲೀ ಲಾಲಿ ತುಂಗಭದ್ರ ತೀರೇಶಾ ಪ. ಆಂಜನೆಯ ಸುತನಾಗಿ ಅಂಬರಕೆ ಹಾರಿ ಕಂಜಾಕ್ಷ ರಾಮರಂಘ್ರಿಗಳನ್ನು ಸಾರಿ ಮಂಜುಭಾಷಿಣಿಗೆ ಹರಿ ಮುದ್ರಿಕೆಯ ತೋರಿ ಶೌರಿ 1 ಕುರುಕುಲದಿ ಜನಿಸಿದ ಕುಂತೀ ಕುಮಾರ ರಣಧೀರನೆನಿಸಿದ ಕುರುಪ ಸಂಹಾರ ಧರೆಯ ಭಾರವ ಕಳೆದೆ ಗದೆಯಿಂದ ಶೂರ ಧುರಧೀರ ಶ್ರೀ ಕೃಷ್ಣನಂಘ್ರಿ ಪರಿಚಾರ 2 ಅನ್ಯಮತಗಳ ಮುರಿದ ಧನ್ಯಮುನಿವರನೆ ಮಾನ್ಯ ಸುರರಿಂದ ಹರಿಗುನ್ನಂತಪ್ರಿಯನೆ ಭವ ಬನ್ನ ಬಿಡಿಸುವನೆ ಘನ್ನ ಗೋಪಾಲಕೃಷ್ಣವಿಠ್ಠಲನ ಸೂನೆ 3
--------------
ಅಂಬಾಬಾಯಿ
ಲಾಲಿತ್ರಿ ಗುಣಗಾತ್ರ ಲಕ್ಷ್ಮಿಕಳತ್ರಾ ಲಾಲೀ ಪ ನೀರೊಳಗೆ ಮನೆಯು ಮಾಡಿಓಡ್ಯಾಡೀ | ಕೋರೆಯನೆ ಮಸೆದು ಭೂಮಿಗೆ ಕಡೆದಾಡೀ ಮೋರೆಯನು ಮುಚ್ಚಿಕೈಕಾಲು ತೂಗ್ಯಾಡೀ ಘೋರ ರೂಪವ ಧರಿಸಿ ಬಲಿದಾನವನೆ ಬೇಡೀ 1 ಕೊಡಲಿಯನು ಪಿಡಿದು ಮಾತೆಯ ಶಿರವನೇ ಒಡೆದೂ ಮಡದಿಗೋಸ್ಕರ ದಶಶಿರನ ಶಿರವತರಿದೂ ತುಡುಗ ತನದಿ ಮೊಸರು ಗಡಿಗೆಗಳ ಒಡೆದೂ ಮಡದಿಯರ ವ್ರತಭಂಗ ಮಾಡಿದೆಯೊ ಪಿಡಿದೂ 2 ಹಯವನೇರಿದ ಹರಿಯು ಬಹುಜನರ ಪೊರೆಯೇ ಚೆಲುವ ಮೂರುತಿ ತೊಟ್ಟಿಲೊಳು ಮುದ್ದು ಸುರಿಯೇ ಪರಮ ಪುರುಷ ಸದ್ಭಕ್ತರ ಸಿರಿಯೇ ಪವಡಿಸೋ ನರಸಿಂಹ ವಿಠಲಾ ಧೊರಿಯೇ ಲಾಲೀ 3
--------------
ಓರಬಾಯಿ ಲಕ್ಷ್ಮೀದೇವಮ್ಮ
ಲಾಲಿಸೆನ್ನ ವೃತ್ತಾಂತ ಲಕ್ಷುಮಿಯ ಕಾಂತ ಬಾಲನೊಳಿಂಥಾ ಪಾಂಥ ಬ್ಯಾಡ ಭೃಂಗಾಳ ಕಾಂತ ಪ. ಮಾನವ ನೀನೆ ಕೊಡರೆ ತಡವರು ಸೃಷ್ಟಿಯ ಒಳಗಾರು ಶ್ರೀ ರಮಣ ವಿಠಲ ನಿನಗಿನ್ನು ವಿವರಿಸಿ ಪೇಳ್ವದೇನು ಭ್ರಷ್ಟಗೊಳಿಸದಿರು ಭಯಹರ ಬೇರಿನ್ನಾರು 1 ಏಸು ತಪ್ಪಿದ್ದರೂ ದಾಸ ಬಿಡನೆಂಬ ಲೇಸಿನ ಬಿರುದೆಂತು ಮಾನುವದು ಈ ಸಮಯದೀ ಕರುಣಾ ಸಮುದ್ರನೆ ಎನ್ನ ಘಾಸಿ ಮಾಡದೆ ಗರುಡಾಸನ ಕೃಪೆದೋರು2 ನಡಿಯುವದಳವಲ್ಲ ತಡೆಯುವರೊಶವಲ್ಲ ನಡಿವ ಕಾರ್ಯಗಳೆಲ್ಲ ನುಗ್ಗಿತಲ್ಲ ಬಿಡದೆ ಮಾಡುವ ದಾನ ಧರ್ಮಗಳಿಗೆ ಇಂಥ ತೊಡಕು ಬಂದರೆ ಮುಂದೆ ತಾಳುವದೆಂತೋ ತಂದೆ 3 ಮಾನವರೊಳಗೊಬ್ಬ ಮರುಳುಗೊಂಡಾದರು ತಾನಿಟ್ಟ ತರುವನು ತೆಗಿಯನೆಂಬ ಮಾನಿತ ನುಡಿಯಿದ್ದು ಮೊದಲಿನಿಂದ ನೀನು ಕಾದು ದೀನನ ಬಿಡದಿಂದು ದಯದೋರು ಕೃಪಾಸಿಂಧು 4 ತೋರುವದಿಲ್ಲುಪಾಯ ಭೋರೆನುತಿದೆ ಮಾಯ ಕಾಯ ಕರ ಕರಿಯಾ ಹಾರಿಸು ಹಲಧರನನು ವೆಂಕಟರಾಯ ದೂರು ನಿನ್ನ ಪದಕೆ ಬಾರದಂದದಿ ಜೀಯ 5
--------------
ತುಪಾಕಿ ವೆಂಕಟರಮಣಾಚಾರ್ಯ
ಲೋಕನೀತಿಯ ಪದಗಳು ಕೇಶವನ ದಾಸರಿಗೆ ಘಾಸಿಯುಂಟೆ ವಾಸವನ ವಜ್ರಕೆ ಗಿರಿನಿಕರದಂಜಿPಯೆ ಪ ಇದ್ದಲಿಯನು ಗೊರಲಿ ಮೆದ್ದು ಜೀವಿಪದುಂಟೆ ಮದ್ದಾನೆಗಳಿ ಗಲ್ಪ ನರಿಯ ಭಯವೇ ಅಬ್ದಗಳು ಮರುತನೊಳು ಯುದ್ಧ ಬಯಸುವದುಂಟೆ ಸಿದ್ಧರಿಗೆ ಭವಪಾಶ ಪದ್ಧತಿಯು ಉಂಟೆ 1 ಗುರುಕೃಪೆಯ ಪಡೆದವಗೆ ಪರಸೌಖ್ಯ ತಪ್ಪದೇ ಹರಿಯ ಸ್ಮರಿಸುವ ನರಗೆ ನರಕ ಭಯವೇ ಉರಗ ನಭಚರನೆದುರಲ್ಲಿಪ್ಪದೆ ನರಚಂಡಕರಕರ ಕಂಡು ಅರುಳುವುದೆ ಕುರುಕುಮುದಾ 2 ಮೇರುವಿಗೆ ಛಳಿ ಭಯವೇ ವಾರಿಧಿಗೆ ಮಳಿ ಭಯವೇ ಮಾರನ್ನ ಗೆದ್ದವಗೆ ನಾರಿ ಭಯವೇ ತಾರಕಾ ಪ್ರೀಯ ಶಿರಿಗೋವಿಂದವಿಠಲಗೆ ಸೇರಿರುವ ಶೂರರಿಗೆ ಆವ ಭಯವೈಯ್ಯಾ 3
--------------
ಅಸ್ಕಿಹಾಳ ಗೋವಿಂದ
ಲೋಲನೇಳುವದಕಿನ್ನ ಮುನ್ನ ಪ ತಾಳಮೇಳದವರೆಲ್ಲಿ ಬಂದು ದ್ವಾರ ದೊಳು ಸೇರಿ ಪಾಡುತಿಹರೊ ನಿಂದು 1 ಸುರರು ಸಭೆ ಯಲಿ ಬಂದಾಗಲೆ ಓಲೈಸುತಲಿಹರು 2 ತಡಮಾಡಬೇಡಯ್ಯ ನೀನು ನಿನ್ನ ಒಡೆಯನೆದ್ದು ನಿನ್ನನು ಕೂಗ್ಯಾನೊ 3 ಕಪಿಯಾಗಿ ನೀ ಪುಟ್ಟಬೇಕಂತೆ ತಾನು ವಿಪಿನವಾಸಕಾಗಿ ತೆರಳುವನಂತೆ 4 ಶರಧಿಯ ನೀ ದಾಟಬೇಕಂತೆ ಅಲ್ಲಿ ಸಿರಿಗೆ ಮುದ್ರೆಯ ನೀನೀಯಬೇಕಂತೆ 5 ದುರುಳನ ಪುರವ ನೀನುರುಹಬೇಕಂತೆ ಅವನ ಪರಿವಾರವೆಲ್ಲವ ನೀ ತರಿಯಬೇಕಂತೆ 6 ಕುಂತೀಲಿ ನೀ ಪುಟ್ಟಬೇಕಂತೆ ತಾನು ಕಂತುವಿಗೆ ಪಿತನಾಗುವನಂತೆ 7 ಮಗಧ ಮುಖ್ಯರ ನೀ ಸೀಳಬೇಕಂತೆ ದೇವ ಜಗಕೆ ಮಂಗಳವ ನೀ ಮಾಡಬೇಕಂತೆ 8 ದುರುಳ ದುಶ್ಶಾಸನನ ಇರಿಯಬೇಕಂತೆ ಅವನ ಕರುಳ ನಿನ್ನರಸಿಗೆ ಮುಡಿಸಬೇಕಂತೆ 9 ಮುದ್ದು ಭಾರತಿಯ ನೀ ಬಿಡಬೇಕಂತೆ ನೀನು ಹೊದ್ದು ಕಾವಿಬಟ್ಟೆ ಯತಿಯಾಗಬೇಕಂತೆ 10 ಅದ್ವೈತ ಮತವನು ನೀ ಖಂಡ್ರಿಸಬೇಕಂತೆ ಗುರು ಮಧ್ವಮುನಿಯೆಂದು ನೀ ಮೆರೆಯಬೇಕಂತೆ 11 ಬದರಿಕಾಶ್ರಮಕೆ ಪೋಗಬೇಕಂತೆ ಅಲ್ಲಿ ಬಾದರಾಯಣನಾಗಿ ತಾನಿರ್ಪನಂತೆ 12 ಹಿಂಗದೆ ಶ್ರೀಶನ ನೀ ನುತಿಸಬೇಕಂತೆ ಸಿರಿ ರಂಗೇಶವಿಠಲ ನಿನಗೊಲಿದಿಹನಂತೆ 13
--------------
ರಂಗೇಶವಿಠಲದಾಸರು
ವಂದನೆ ಮಾಡಿರೈ ವ್ಯಾಸ ಮುನೀಂದ್ರರ ಪಾಡಿರೈ ಪ ವಂದಿಸುವರ ಭವಬಂಧವ ಬಿಡಿಸಿ ಆ ನಂದವ ಕೊಡುವ ಕರ್ಮಂದಿವರೇಣ್ಯರ ಅ.ಪ ಸದ್ಗುಣ ಸಾಂದ್ರಾ ಚಂದ್ರಿಕಾದಿ ಪ್ರಬಂಧತ್ರಯ ನಿರ್ಮಿಸಿದಾ ಮತವರ್ಧಿಸಿದಾ ಸತಿ ಮೆಚ್ಚಿಸಿದಾ ಹಿಂದಕೆ ಹರಿಯನು ಸ್ತಂಭದಿ ತೋರಿದ ಕಂದ ಪ್ರಹ್ಲಾದರೆ ಬಂದಿಹರೆನ್ನುತ 1 ಕೃಷ್ಣರಾಯನಿಗೆ ದುಷ್ಟಯೋಗ ಪರಿಹರಿಸಿ ರಾಜ್ಯವಹಿಸಿ ಯ- ಥೇಷ್ಟ ದಾನಫಲಕೊಟ್ಟು ನೃಪನನುಗ್ರಹಿಸಿ ರಾಜ್ಯದೊಳಿರಿಸಿ ಶ್ರೇಷ್ಠವಾದ ಸಿಂಹಾಸನದಲಿ ಕುಳ್ಳಿರಿಸಿ ಆಜ್ಞೆಯ ತಿಳಿಸಿ ಎಷ್ಟು ಮಹಿಮರೆಂದರಿತು ಇವರ ಮನ ಮುಟ್ಟಿ ಭಜಿಪರಿಗ ಭೀಷ್ಟೆಯಗರಿವರ 2 ಸೂರ್ಯಯತಿ ಕುಲ- ವರ್ಯ ಗುರುಮಧ್ವಮ ತದಿಸದ್ವೈಷ್ಣವ ಕುಮುದಕೆ ಭಾರ್ಯಾ ಪಾವನ ಚರ್ಯ ಪರಮಮಹಿಮ ಬ್ರಹ್ಮಣ್ಯ- ತೀರ್ಥರಿಗೆ ತನಯಾ ಕವಿಜನಗೇಯಾ ಶರಣರ ಪೊರಿಯುವ ಶಿರಿಕಾರ್ಪರನರಹರಿಯ ನೊಲಿಸಿರುವ ಪರಮ ಮಹಾತ್ಮರ3
--------------
ಕಾರ್ಪರ ನರಹರಿದಾಸರು
ವಂದನೆಯನು ಮಾಡೋ ನಾಮವ ಛಂದದಿ ನೀ ಪಾಡೋ ಭವ ಬಂಧ ಹರಿವುದು ಮುಂದುವರಿದ ಮನಸೊಂದನು ಬಂಧಿಸಿ ಪ ಕಳೆಯದೆ ಮುದದಿಂದ ಮಾಧವ ಗೋವಿಂದನೆಂದು 1 ನಡೆ ನುಡಿಗೊಮ್ಮೊಮ್ಮೆ ಶ್ರೀ ವಿಷ್ಣು ಮಧುಸೂದನನೆಂದು ಒಡನೆ ತ್ರಿವಿಕ್ರಮ ವಾಮನ ಶ್ರೀಧರ ಬಿಡದೆನ್ನ ಸಲಹೋ ಹೃಷಿಕೇಶನಂದು 2 ಚಿತ್ತ ಶುದ್ಧಿಗಳಿಂದ ಶ್ರೀ ಪದ್ಮನಾಭನೆ ಗತಿಯೆಂದು ಮರುತಸುತನ ಕೋಣೆವಾಸ ಲಕ್ಷ್ಮೀಶಗೆ 3
--------------
ಕವಿ ಪರಮದೇವದಾಸರು
ವಂದಿಪೆ ಮುದದಿಂದಲಿ ನಾನು ವಂದಿಪೆ ಮುದ್ದು ಗಣಪಗೆ ವಂದಿಪೆ ಪ ನಂನಂದನನಾಮ ಮನದೊಳು ಆ- ನಂದದಿ ಭಜಿಸುವ ಚಂದ್ರಶೇಖರಸುತಗೆ ಅ.ಪ. ಆಕಾಶಕಭಿಮಾನಿ ಶ್ರೀಕಂಠವರಪುತ್ರ ರಾಕೇಂದುವದನ ಶ್ರೀಕಾಂತ ನಿಜಭಕ್ತ ಏಕಾಂತದಲಿ ಹರಿ ಆಕಾರತೋರಿಸಿ ನೂಕುತಭವಪಾಶ ಸಾಕು ಸಾಕು ಎಂದು 1 ವರವರದಾಯಕ ಸುರಗಣಪೂಜಿತ ವರಕರಿಮುಖವೇಷ ವರಸರ್ಪಕಟಿಸೂತ್ರ ಸಿರಿಕಾಂತಸೇವೆಗೆ ಬರುವ ವಿಘ್ನಂಗಳೆಲ್ಲ ಭರದಿಂದ ತರಿಯುತ ಕರುಣದಿ ಸಲಹೆಂದು 2 ವೇದವ್ಯಾಸರಶಿಷ್ಯ ಮೋದಕಗಳ ಪ್ರಿಯ ಮದನನಸೋದರ ಮುದವಿದ್ಯೆದಾಯಕ ಮಧ್ವಾಗಮದಲಿ ಅದ್ದುತ ಎಮ್ಮನು ಶುದ್ಧರನು ಮಾಡೋ ಸಿದ್ಧಿ ವಿನಾಯಕನೆಂದು 3 ಏಕದಂತನೆ ವರ ಆಖುವಾಹನ ಭಕ್ತರ ಶೋಕ ಹರಿಸೊ ಬೇಗ ಲೋಕ ವಂದಿತನೆ ರಕ್ತಾಂಬರ ತನು ರಕ್ತಗಂಧಪ್ರಿಯ ವಿ - ರಕ್ತಿನೀಡುತ ಹರಿಭಕ್ತನೆಂದೆನಿಸು ಎಂದು 4 ಪಾಶಾಂಕುಶ ಶಶಿದರ್ಪಭಂಜನ ಶ್ರೀಶನಾಭಿವಾಸ ವಿಶಾಲಕರ್ಣಯುತ ನಾಶಗೈಸುತವಿಷಯ ವಾಸನೆಗಳೆಲ್ಲ ವಿಶ್ವೋಪಾಸಕ ಪ್ರಭು ಶ್ವಾಸಾವೇಶಯುತನೆಂದು 5 ಚಾರುದೇಷ್ಣನೆ ನಿನ್ನ ಚರಣಕ್ಕೆ ಶರಣೆಂಬೆ ಸರಿನೀನು ಧನಪಗೆ ಗುರುಶೇಷಶತರಿಗೆ ತರಿದು ತಾಪತ್ರಯ ವರಜ್ಞಾನ ವೈರಾಗ್ಯ ಹರಿಭಕ್ತಿ ಹರಿ ಧ್ಯಾನ ನಿರುತ ಕೊಡು ಎಂದು 6 ಜಯತೀರ್ಥ ಹೃದಯದಿ ವಾಯುವಿನೊಳಿಪ್ಪ ಸಿರಿ ತಾಂಡವ ಕೃಷ್ಣವಿಠಲ ರಾಯನ ಧ್ಯಾನ ಕಾಯಾ ವಾಚಾ ಮನಸಾ ದಯಮಾಡಿ ಸಲಹೈಯ್ಯ ಜೀಯಾ ಗಣಪನೆಂದು7
--------------
ಕೃಷ್ಣವಿಠಲದಾಸರು
ವಂದಿಪೆ ಶ್ರೀಮನ್ನಾರಾಯಣಗೆ ವಂದಿಪೆ ಅಮ್ಮ ಲಕ್ಷ್ಮೀದೇವಿಗೆ ಪ ವಂದಿಪೆ ವಿಶ್ವಕ್ಸೇನರಿಗೆ ಕುಂದದಿರಲಿ ಎನ್ನ ಸನ್ಮತಿ ಎಂದು ಅ.ಪ ವಂದಿಪೆ ನಾ ಮೊದಲಾಳ್ವಾರರಿಗೆ ಅಂದದಿ ಹರಿಯ ತೋರಿಕೊಟ್ಟರಿಗೆ ಕಂದಮಿಳಲಿ ಸೊಲ್ವ ನುಡಿಗಳಿಗೆ ಪ್ರ- ಬಂಧದಿವ್ಯಗಳ ಬೆಳಗಿಸಿದವರಿಗೆ 1 ವಂದಿಪೆ ವಂದಿಪೆ ಆಚಾರ್ಯರಿಗೆ ಚಂದದಾ ಯತಿತ್ರಯರುಗಳಿಗೆ ಸುಂದರ ಶ್ರೀವೈಷ್ಣವ ತತ್ವಗಳನು ಹೊಂದಿಸಿ ಬಂಧಿಸಿ ಸ್ಥಾಪಿಸಿದವರಿಗೆ 2 ಇನ್ನು ವಂದಿಪೆ ಗುರುಪೀಠಕ್ಕೆ ಚೆನ್ನ ತಿರುನಾರಾಯಣಪುರಕೆ ಉನ್ನತ ರಂಗದಾಸಯತಿವರ್ಯಗೆ ಸನ್ನುತ ಪಿತಾನುಜ ಶಾಮದಾಸರಿಗೆ 3 ಸಾಜದಲೆನ್ನಲಿ ಅರಿವನು ಮೂಡಿಸಿ ಓಜನನಾಗಿಸೆ ಕೇಶವ ನಾಮದಿ ಆರ್ಜಿಸಿ ಉಪಾದಾನದಿ ಬಳಲಿದ ಪೂಜ್ಯಪಿತ ವೆಂಕಟರಂಗಾರ್ಯರಿಗೆ 4 ವಂದಿಪೆ ಕೊನೆ ಮೊದಲಿಲ್ಲದೆ ವಂದಿ- ಪೆಂ ದಾಸನ ಮಾಡಿದ ದೇವನಿಗೆ ತಂದೆ ಜಾಜಿಪುರಾಧೀಶನಿಗೆ ಮುದ- ದಿಂದ ಶ್ರೀ ಚೆನ್ನಕೇಶವಗೆ 5
--------------
ನಾರಾಯಣಶರ್ಮರು
ವಂದಿಪೆ ಹರಿಹರನೇ | ನಿನಗೆ ನಾ ವೃಂದಾರಕನುತನೇ ಪ. ಬಂದು ಈ ಕ್ಷೇತ್ರದಿ ನಿಂದು ಸದ್ಭಕ್ತರ ಮೂರ್ತಿ ಅ.ಪ. ಚತುರ ಹಸ್ತದಿಂದಾ | ಶೋಭಿಸೆ ಅತಿ ಕೌತುಕದಿಂದಾ ಪಾದ ಕಮಲಜನ ತತಿಗೆ ತೋರದಂತೆ ಕ್ಷಿತಿಯಲಡಗಿದೇ 1 ಸೋಮಶೇಖರವಂದ್ಯಾ | ಆರ್ಧದ ಲಾಮಹ ಹರನಿಂದಾ ಪ್ರೇಮದಿ ಕೂಡಿಕೊಂಡೀ ಮಹಿ ಜನರಿಗೆ ನೀಮೋಹಕ ತೋರುವ ಜಗದ್ವಂದ್ಯಾ 2 ಪಾಪಿಗುಹನವರವಾ| ಕೆಡಿಸಲು ರೂಪಧರಿಸಿ ತಾಮಸರಿಗಂಧಮತಮ ಕೂಪದಿ ಕೆಡಹುವೆ ಶ್ರೀ ಮೋಹಿತ 3 ಅರ್ಧಹರನ ರೂಪಾ| ಕೃತಿಯಲಿ ಶುದ್ಧ ವಿಷ್ಣು ರೂಪಾ ಮುದ್ದು ಸುರಿವ ಭವ್ಯಾಂಗ ಸ್ವರೂಪ ಉದ್ಧರಿಸೆನ್ನನು ಶುದ್ಧ ಬುದ್ಧಿಮತಿಯನಿತ್ತು 4 ಶಂಖಚಕ್ರ ಅಭಯಾ| ತ್ರಿಶೂಲವ ಬಿಂಕದಿ ಧರಿಸಿದೆಯಾ ಪಂಕಹೋದ್ಭವೆ ಪಾರ್ವತಿಯ ಉಭ ಯಾಂಕದಲ್ಲಿ ಪೊಂದಿಹೆ ಶುಭಕಾಯಾ 5 ಅರ್ಧಶಿರದಿ ಮಕುಟಾ| ಆರ್ಧದಿ ಶುದ್ಧಗಂಗೆ ತ್ರಿಜಟಾ ಅರ್ಧಚಂದ್ರ ಶೋಭಿಸುತಿದೆ ಜಗತ್ತಿಗೆ ಅದ್ಭುತ ಅಚ್ಚರಿ ರೂಪಧಾರಕ 6 ಪಣೆಯ ತಿಲಕ ಢಾಳಾ | ಕಂಠಾಭ ರಣಗಳು ಪೂಮಾಲಾ ಮಿನುಗುವವಲ್ಲಿ ಪೀತಾಂಬರನುಟ್ಟಿಹ ಗುಣಗಣ ಪೂರ್ಣನೆ ಹನುಮನಯ್ಯ ಹರಿ7 ಮಾಯಾ | ಕವಿಸದೆ ಇನ್ನು ಕಾಯೊ ಜೀಯಾ ಘನ್ನ ಭಕ್ತಿ ಸುಜ್ಞಾನ ವೈರಾಗ್ಯವ ಮನ್ನಿಸಿ ಕರುಣಿಸಿ ನಿನ್ನ ಪದವಿ ಕೊಡು 8 ಹರನೊಳು ಹರ ಶಬ್ದಾ | ವಾಚ್ಯನೆ ಸಿರಿವರ ನಿರವದ್ಯಾ ಸರ್ವ ಶಬ್ದ ಸುರವಾಚ್ಯ ಈ ಪರಿಯೊಳು ಹರಿಹರ ಕ್ಷೇತ್ರದಿ ವರಗೃಹ ಮಾಡಿದಿ 9 ತುಂಗಭದ್ರ ತೀರಾ | ವಾಸನೆ ರಂಗ ಪಾಪ ದೂರಾ ಮಂಗಳ ಗೋಪಾಲಕೃಷ್ಣವಿಠಲ ಭವಹಿಂಗಿಸಿ ಪೊರೆ ದುಸ್ಸಂಗ ಬಿಡಿಸಿ ಹರಿ 10
--------------
ಅಂಬಾಬಾಯಿ
ವಂದಿಸಿ ಬದುಕಿ ತಂದೆ ಮುದ್ದು ಮೋಹನ ಗುರುಗಳ ಪ ಇಂದಿರೆ ಅರಸ ಅಂದ ತಲ್ಪರಂಶರೆಂಬರಾ ಅ.ಪ. ತರಳತನಾರಭ್ಯ ಹರಿಯ | ಪರಮ ಅನುರಾಗದಿಂದ ಪರಿಸರಾನಂದ ತೀರ್ಥ | ಪರಮಮತ ವಿಚಾರದಲ್ಲಿ |ಅರೆಕ್ಷಣವು ಬಿಡದೆ ನಿರತರಾ | ಆತ್ಮ ಜ್ಞಾನದರ್ಶನಾನುಷ್ಠಾನ ಚರಿಸುತಾ | ಭಕ್ತಿಯೇ ಸುಪ್ರಚುರ ಪಂಥವನ್ನೆ ಮಾಡುತಾ | ಯುಕ್ತಿಯಿಂದಚರಿಪ ಸರ್ವವೂ ಶ್ರೀಹರಿಯ | ಪರವು ಎಂದ ಕಡಿದ ಬಂಧ 1 ವ್ಯಾಸ ಗ್ರಂಥ ಸದಾಭ್ಯಾಸಿ | ದಾಸಕೂಟವೆಂಬ ವರಜಲಾಶಯಕೆ ಪರಮ ಅರ್ಥ ತಾ | ರೇಶನ್ನುದಿಸಿ ಭೂಸುರ ಮನೋಲ್ಲಾಸ ಮಾಡಿ ಲೇಸಾಗಿ ಬೆಳಗುತ | ಜ್ಞಾನ ಕಿರಣಸೂಸ್ಯನೇಕಾಂಕಿತಾಗಳ | ಇತ್ತು ಕರ್ಮಹ್ರಾಸ ಮಾಳ್ವ ಬಗೆಯ ತಿಳುಹುತ | ಕವನದಿಂದಸಾಸಿರ ಪುಷ್ಪಮಾಲೆ ಹರಿಗಿತ್ತ ದಯವ ಪೊತ್ತ2 ಕ್ಲೇಶ ಸಂಶಯಾ | ಹರಿಸಿ ಪವನ ಮತದಿ ದೀಕ್ಷೆಯಾನಿರತಿಶಯದ ದಾಸದೀಕ್ಷೆಯ | ಇತ್ತು ಹೃದಯದಲ್ಲಿಹರಿಯ ಮೂರ್ತಿಯನ್ನೆ ನೋಡುವ | ಶಾಸ್ತ್ರ ಸಮ್ಮತಿಕೀರ್ತನೆಗಳ ನುಡಿಸಿದಾ | ಗುರು ಗೋವಿಂದ ವಿಠಲ ಪದಸರೋಜ ರಜವ ಶಿರದೊಳ್ ಧೃತರ | ಕೃಪಾಕರರ 3
--------------
ಗುರುಗೋವಿಂದವಿಠಲರು
ವಂದಿಸುವೆವಿಂದು ಮುದದೆ ಶಾರದೆ ಪ. ವಂದಾರುಮಂದಾರೆ ಎಂದೆಂದಿಗೆಮ್ಮೊಳಿರೆ ಸಂದೇಹವಿಲ್ಲದಂತೇ ಸುಸ್ವಾಂತೀ 1 ಮತ್ತೇರಿ ತಲೆಕೆಟ್ಟು ಕತ್ತಲೆಯೊಳು ಬಿದ್ದು ತತ್ತರಗೊಳ್ವೆವಲ್ಲೇ ಕೋಮಲೆ 2 ಹಾಲಹಲದಂಥ ಆಲಸ್ಯದಿಂದ ಬೀಗಿ ಕಾಲೆತ್ತದಂತೊರಗಿರ್ಪೆನೇ ನೊಂದೆನೇ 3 ಕಂದನ ನುಡಿ ಕೇಳು ಒಂದಿಷ್ಟು ದಯೆ ತಾಳು ಕುಂದುಗಳೆನಿಸದೇ ಪೊರೆ ಶ್ರೀಕರೇ 4 ವರಶೇಷಗಿರೀಶನ ಚರಿತಂಗಳನುದಿನ ಸ್ಮರಿಸಿಕೊಂಡಾಡುವಂತೆ ಮಾಡೆನುತೇ ವಂದಿಸುವೆ5
--------------
ನಂಜನಗೂಡು ತಿರುಮಲಾಂಬಾ
ವಂದೇ ವಂದೇ ವಂದೇ ನಾರಾಯಣ ಗುರುದೇವಾ ವಂದೇ ವಂದೇ ವಂದೇ ಪರಿಪೂರ್ಣ ಬ್ರಹ್ಮರೂಪ ಪರಮಾತ್ಮ ಜ್ಞಾನದೀಪ ತಾಪ ಪರಿಹರಿಪ ಜ್ಞಾನಿ ಭೂಪ ಶಿರವಿಡುವೆ ಚರಣಯುಗದೀ ಗುರುದೇವ ಎನ್ನಮನದಿ ಪರತತ್ವ ತಿಳಿವ ತೆರದಿ ಕರುಣಿಪುದು ನೀನೇ ಮುದದಿ ಜಾಗರಣ ಕನಸು ನಿದ್ರಾ ಆಗುಗಳನರಿಯುತಿರ್ದಾ ಈ ಗತಿಗಳೆಲ್ಲ ಮೀರ್ದಾ ಆ ಘನವೆ ನಿರ್ವಿಕಲ್ಪ ಅದೇ ನೀನು ಎಂದು ಪೇಳ್ದೀ ಇದು ಎಲ್ಲ ಮಿಥ್ಯವೆಂದಿ ಇದೊ ಮರಣಭಯವ ಕಳೆದಿ ನಿಜಬೋಧವಚನ ಬಲದಿ ಮರೆದಿರ್ದ ತತ್ವವಿದನು ಪರತತ್ವ ಶೋಧಕರನು ಬೊಧಿಸುತ ನೀ ನಿಜವನು ತೋರಿಸುತ ಕಾಯುವವನು ವರಜ್ಞಾನ ಜಗದಲೆಲ್ಲಾ ಮರೆದಾಡಿ ತಮವನೆಲ್ಲಾ ಪರಿಹರಿಸಲೆಂದು ನೀನೇ ಗುರುಶಂಕರನಿಗೆ ಪೇಳ್ದೀ ವಂದೇ ಶಂಕರಾ ಗುರುದೇವಾ ವಂದೇ ಶಂಕರ ಗುರುದೇವಾ ಪಾವನಚರಣಾ ತೋರೈ ಕರುಣಾ ಜ್ಞಾನಾಂಬುಧಿ ಪೂರ್ಣಾ ವಂದೇ
--------------
ಶಂಕರಭಟ್ಟ ಅಗ್ನಿಹೋತ್ರಿ
ವಂದೇಹಂ ಕಮಲಾದ್ರಿನಿವಾಸಂ-ಪಲ್ಲವೀಶಂ-ಇಂದೀವರಭಾಸಂಪ ಗಣಾನಂದ ವಿಲಾಸಂ ಅ.ಪ ಪರಿ ಶಿಷ್ಟಶಿಖರಿವಿಹಾರಂ ಅಷ್ಟಮೂರ್ತಿಪರಮೇಷ್ಟಿಸಮರ್ಚಿತ- ಮಷ್ಟಸಿದ್ಧಿದಾತಾರಮುದಾರಂ 1 ಅಂಬುಜಭವಪಿತ ಮಂಬುಜ ಪತ್ರ ವಿಡಂಬಿನಯನ ಯುಗಳಂ ಘಟ ಚರಣಾಂಬುಜಯುಗಳಂ 2 ನಂದ ಗೋಕುಲಾನಂದ ಕಾರಣ ನಂದೋಪವರ ಕರುಣಂ ಮಂದಹಾಸ ವಿಜಿತೇಂದು ಕಿರಣಮತಿ- ಸುಂದರಾಂಗಮಾನಂದ ವಿತರಣಂ 3 ಮೋಹನ ವೇಣುನಿನಾದಂ ಲಲನಾಜನಸಂಮಿಳಿತವಿನೋದಂ 4 ಧರಣೀಭರ ಪರಿಹರಣೋಚಿತವರ ಕರುಣಾಯತನಿಜವೇಷಂ ವಿಠಲಾ ನತಪದ ಶರಣ ಸುಪೋಷಂ 5
--------------
ಸರಗೂರು ವೆಂಕಟವರದಾರ್ಯರು