ಒಟ್ಟು 3517 ಕಡೆಗಳಲ್ಲಿ , 124 ದಾಸರು , 2540 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರೋ ಸುಖಸಾರ ತೋರು ಕೃಪೆ ಮುರಹರ ಮೀರಿದ ಸಂಸಾರವಾರಿಧಿ ಮಾಡು ಪಾರ ಪ ಎಂಬತ್ತು ನಾಲ್ಕುಲಕ್ಷಯೋನಿಯೊಳ್ ಬಳಲುತ ಕುಂಭಿನಿಯೊಳು ಬಂದು ನಂಬಿಗಿಲ್ಲದೆ ಕೆಟ್ಟೆ 1 ದಯದಿ ಎನ್ನಯ ದುರ್ಬವಣಿಯ ನೀಗಿ ದಯಮಾಡು ಸುಖಸಂತಸವನೆನ್ನೊಡಲಿಗೆ 2 ಮಸಣಿಸದಸಮ ಸಂಪದವನೆ ಕರುಣಿಸಿ ಶಿಶುವನು ಪೋಷಿಸು ಶ್ರೀಶ ಶ್ರೀರಾಮನೆ 3
--------------
ರಾಮದಾಸರು
ಬಾರೋ ಹೃದಯ ಸದನಾ ಮುಖ್ಯ ಪ್ರಾಣ ಪ ಬಾರೋ ಹೃದಯದೊಳು ವಾರಿಜಾಸನ ಪದಏರುವಾತನೆ ದಿವ್ಯ ಕಾರುಣ್ಯ ಸಾಗರ ಅ.ಪ. ಹರಿಭಕ್ತರೊಳು ನೀನು ಹಿರಿಯನೆಂಬುವ ವಾರ್ತೆಪರಿಪರಿ ಕೇಳುತ ಶರಣು ಬಂದೆನೊ ನಿನ್ನ1 ಮಂದಗಮನೆ ಕೊಟ್ಟ ಇಂದ್ರಮಾಣಿಕ ಮಾಲೆಕಂಧರದೊಳಗಿಟ್ಟ ಇಂದ್ರಶಯನ ಪ್ರೀಯಾ 2 ಕಾಳಿ ರಮಣ ಧರ್ಮನಾಳೆ ಎನಲು ಧನ-ನೀಲ ಮಾಣಿಕ್ಯ ಭೂಷಲೋಲ ಭೂಸುರಗಿತ್ತೆ 3 ಮಾಧವನಾಜ್ಞದಿ ಮೇದಿನಿಯೊಳು ಬಂದುಬಾದರಾಯಣ ಮತ ಸಾಧನೆ ಮಾಡಿದ 4 ಪಾದ ಮುಂದೆ ಸೇವಿಸಿ ನಿತ್ಯಾನಂದತೀರ್ಥರೇ ನೀವು ಸಂದೇಹವಿಲ್ಲದೆ 5
--------------
ಇಂದಿರೇಶರು
ಬಾಲಕ ಕಂಡೆನು ನಿನ್ನ | ಬಾಲಕ ಪ. ಬಾಲಕ ಕಂಡೆನು ನಿನ್ನಾ | ಮುದ್ದು ಬಾಲ ತೊಡಿಗೆ ಇಟ್ಟರನ್ನಾ | ಆಹ ಕಾಲ ಕಾಲದ ಪೂಜೆ ಮೇಲಾಗಿ ಕೈಕೊಂಡು ಪಾಲಿಪ ಸುಜನರ ಅ.ಪ. ವಸುದೇವ ಕಂದ ಗೋವಿಂದ ವಸುಧಿ ಭಾರವನಿಳುಹೆ ಬಂದಾ | ಪುಟ್ಟ ಹಸುಗಳ ಕಾಯ್ವ ಮುಕುಂದ | ರ ಕ್ಕಸರನೆಲ್ಲರ ತಾನೆ ಕೊಂದಾ | ಆಹಾ ಹಸುಮಕ್ಕಳೊಡಗೂಡಿ ಮೊಸರು ಬೆಣ್ಣೆಯ ತಿಂದು ಶಶಿಮುಖಿಯರಮನಕಸಮ ಸಂತಸವಿತ್ತು 1 ವಿಶ್ವವ್ಯಾಪಕನಾದ ಬಾಲಾ | ಸರ್ವ ವಿಶ್ವ ತನ್ನೊಳಗಿಟ್ಟ ಬಾಲಾ | ಸ ರ್ವೇಶ್ವರನೆನಿಸುವ ಬಾಲಾ | ಬ್ರಹ್ಮ ಈಶ್ವರ ಸುರ ಪರಿಪಾಲಾ | ಆಹ ವಿಶ್ವ ಪ್ರದೀಪಕ ವಿಶ್ವನಾಟಕ ಸರ್ವ ವಿಶ್ವಚೇಷ್ಟಕನಾದ 2 ಸಿರಿಗರಿಯದ ಗುಣನೀತಾ | ಮತ್ತೆ ಸಿರಿಯ ತನ್ನೊಳಗಿಟ್ಟಾತಾ | ಆ ಸಿರಿಯಲ್ಲಿ ತಾನಿರುವಾತಾ | ಸೃಷ್ಟಿ ಸಿರಿಯಿಂದ ಮಾಡಿಸುವಾತಾ | ಆಹ ಸಿರಿಯ ಬಿಟ್ಟಗಲದೆ ಸಿರಿಗೆ ಮೋಹಕನಾಗಿ ಸಿರಿ ಸೇವೆ ಕೈಕೊಂಬ ಸಿರಿಕಾಂತ ಶ್ರೀಕೃಷ್ಣ 3 ಪ್ರಳಯಾಂಬುವಟಪತ್ರ ಶಯನಾ | ಥಳ ಥಳಿಸುವ ಪದತಳ ಅರುಣಾ | ವರ್ಣ ಎಳೆಗೂಸಿನಂತಿಹ ಚಿಣ್ಣಾ | ಆರು ತಿಳಿಯಲಾಗದ ಗುಣಪೂರ್ಣ | ಆಹ ನಳಿನಭವನ ಪೊಕ್ಕಳಲಿ ಪಡದು ತನ್ನ ನಿಲಯ ತೋರಿಸಿ ಕಾಯ್ದ ಚಲುವ ಚನ್ನಿಗ ದೇವ4 ಸತಿ ಪ್ರಾಯ ಕೆಡಿಸದೆ ತನ್ನಾ | ಮೈಯ್ಯೋಳ್ ಸುತರ ಪಡೆದಂಥ ಸಂಪನ್ನಾ | ವೇದ ತತಿಗೆ ಶಿಲ್ಕದ ಸುಗುಣಾರ್ಣ | ಅ ದ್ಭುತ ರೂಪ ಜಗದೇಕ ಘನ್ನಾ | ಆಹ ಜಿತಮಾನಿಗಳಿಗೆ ಹಿತಕೃತಿ ಕಲ್ಪಿಸಿ ಜತನದಿ ಜಗಜೀವತತಿಗಳ ಕಾಯೂವ 5 ಸುರತತಿಗಳನೆ ನಿರ್ಮೀಸಿ | ಅವರೊಳ್ ತರತಮ ಭೇದ ಕಲ್ಪಿಸಿ | ತನ್ನ ವರಪುತ್ರನೋಶಕೆ ವಪ್ಪೀಸಿ | ಸೃಷ್ಟಿ ಗರಸನ್ನ ಮಾಡಿ ನೀ ನಿಲಿಸೀ | ಆಹ ಪರಮೇಷ್ಟಿ ಪದವಿತ್ತು ಸರುವ ಜೀವರ ಶ್ವಾಸಕ್ಕರಸನೆಂದೆನಿಸಿದ 6 ಸರಿ ಇಲ್ಲ ವಾಯುಗೆಂದೆನಿಸೀ | ತತ್ವ ಸುರರಿಗಧೀಶನೆಂದೆನಿಸೀ | ತನ್ನ ಶರಣರ ಕಾಯ್ವನೆಂದೆನಿಸೀ | ಅವ ನಿರುವಲ್ಲಿ ತಾ ಸಿದ್ಧನೆನಿಸೀ | ಆಹ ತರಣಿಜಗೊಲಿಯುತ್ತ ಕುರುಕುಲವಳಿಯುತ್ತ ಪರಮತ ಖಂಡಿಸಿ ಕರೆಯೆ ತನ್ನನು ಬಂದಾ 7 ತ್ರಿವಿಧ ಜೀವರಗತಿದಾತಾ | ನಮ್ಮ ಪವನನಂತರ್ಯಾಮಿ ಈತಾ | ಪದ್ಮ ಭವ ರುದ್ರ ತ್ರಿದಶರ ಪ್ರೀತಾ | ಭಕ್ತ ರವಸರಕೊದಗುವ ದಾತಾ ಪವನಜ ಸತಿಭಕ್ತ ನಿವಹ ತಾಪದಿ ಕೂಗೆ ಭುವಿಯಲ್ಲಿ ಪೊರೆದಂಥ 8 ಶೋಣಿತ ನೀಲ ಕಾಯಾ | ದೇವ ಅಕ್ಲೇಶ ಆನಂದಕಾಯಾ | ಯುಗಕೆ ತಕ್ಕಂಥ ವರ್ಣಸುಕಾರ್ಯ | ಮಾಳ್ಪ ರಕ್ಕಸಾಂತಕ ಕವಿಗೇಯಾ | ಆಹ ಪೊಕ್ಕಳ ನಾಡಿಯೊಳ್ ಸಿಕ್ಕುವ ಜ್ಞಾನಿಗೆ ದಕ್ಕುವ ಸುರರಿಗೆ ಠಕ್ಕಿಪ ದನುಜರ 6 ಸಚ್ಚಿದಾನಂದ ಸ್ವರೂಪ | ಭಕ್ತ ರಿಚ್ಛೆ ಸಲ್ಲಿಸಿ ಕಳೆವ ತಾಪಾ | ಶ್ರೀ ಭವ ಕೂಪಾ | ದಲ್ಲಿ ಮುಚ್ಚಿಡ ತನ್ನನ್ನೆ ಸ್ತುತಿಪಾ | ಆಹ ಅಚ್ಚ ಭಾಗವತರ ಮೆಚ್ಚಿ ಕಾಯುತ ಅಘ ಕೊಚ್ಚಿ ತನ್ನುದರದಿ ಬಚ್ಚಿಟ್ಟು ಕಾಯುವ 10 ವಲ್ಲನು ಸಿರಿಸತಿ ಪೂಜೆ | ಮತ್ತೆ ವಲ್ಲನು ಸುರ ಸ್ತುತಿ ಗೋಜೆ | ತಾ ನೊಲ್ಲನು ಮುನಿಗಳ ಓಜೆ | ಹರಿ ವಲ್ಲನು ಋಷಿಯಾಗವ್ಯಾಜೆ | ಆಹ ಬಲ್ಲಿದ ಭಕುತರ ಸೊಲ್ಲಿಗೊದಗಿ ಬಂದು ಚಲ್ವರೂಪದಿ ಹೃದಯದಲ್ಲಿ ನಿಲ್ಲುವ ಕರುಣಿ11 ಅಂಬುದಿಶಯನ ಶ್ರೀಕಾಂತಾ | ಸರ್ವ ಬಿಂಬನಾಗಿಹ ಮಹಶಾಂತ | ತನ್ನ ನಂಬಿದ ಸುಜನರ ಅಂತಾ | ರಂಗ ಅಂಬುಜ ಮಧ್ಯ ಪೊಳೆವಂಥಾ | ಆಹ ಭಂಜನ ಪಶ್ಚಿ- ಮಾಂಬುಧಿ ತಡಿವಾಸ ಶಂಬರಾರೀಪಿತ12 ಸ್ವಪ್ನದಿ ಗೋಪಿಕರ ತಂದು | ಎನ ಗೊಪ್ಪಿಸೆ ತನ್ನ ಕೂಸೆಂದು | ಚಿನ್ನ ದಪ್ಪಾರಭರಣವದೆಂದೂ | ನಾನು ವಪ್ಪದಿರಲು ಎತ್ತೆನೆಂದೂ | ಆಹಾ ತಪ್ಪಿಸಿಕೊಳ್ಳೆ ಮತ್ತೊಪ್ಪಿಸಿ ಪೋದಳು ಅಪ್ಪಿ ಎನ್ನ ತೋಳೊಳೊಪ್ಪಿದ ಶಿಶುರೂಪ 13 ಶ್ರೀ ಮಾಯಾಜಯ ಶಾಂತಿ ರಮಣಾ | ಕೃತಿ ನಾಮಕ ಶಿರಿವರ ಕರುಣಾ | ಪೂರ್ಣ ಹೇಮಾಂಡ ಬಹಿರಾವರ್ಣ | ವ್ಯಾಪ್ತ ಮಾ ಮನೋಹರ ಪ್ರಣವ ವರ್ಣಾ | ಆಹ ಸ್ವಾಮಿ ಸರ್ವೋತ್ತಮ ಧಾಮತ್ರಯದಿ ವಾಸ ಶ್ರೀಮದಾಚಾರ್ಯರ ಪ್ರೇಮ ಮೂರುತಿ ಮುದ್ದು14 ದ್ವಿ ದಳ ಮಧ್ಯದಿ ರಥ ನಿಲಿಸೀ | ಪಾರ್ಥ ನೆದೆಗುಂದೆ ತತ್ವಾರ್ಥ ತಿಳಿಸೀ | ನಿನ್ನ ಅದುಭುತ ರೂಪ ತೋರಿಸೀ | ಸ- ನ್ಮುದವಿತ್ತು ಕುರುಕುಲವರಸಿ | ಆಹ ವಿದುರನ ತಾತ ನಿನ್ನೊಡೆಯ ಬಾಣದಿ ಫಣೆ ಯದುವೀರ ಚಕ್ರ ಹಸ್ತದಿ ಧರಿಸುತ ಬಂದ 15 ನಿತ್ಯನೂತನ ದೇವ ದೇವಾ | ಸರ್ವ ಶಕ್ತ ನಿನ್ಹೊರತಾರು ಕಾವಾ | ಎನ್ನ ಚಿತ್ತದಿ ನೆಲಸು ಪ್ರಭಾವಾ | ಸರ್ವ ಕೃತ್ಯ ನಿನ್ನದೊ ವಿಜಯ ಭಾವಾ | ಆಹಾ ಮುಕ್ತಿ ಪ್ರದಾತನೆ ಮುಕ್ತರಿಗೊಡೆಯನೆ ತತ್ವ ನಿಯಾಮಕ ತತ್ವಾರ್ಥ ತಿಳಿಸೈಯ್ಯಾ 16 ಚರಣತಳಾರುಣ ಪ್ರಭೆಯೂ | ಹತ್ತು ನಖ ಪಂಕ್ತಿಯ ಪರಿಯೂ | ಗೆಜ್ಜೆ ಸರಪಳಿ ಪಾಡಗರುಳಿಯೂ | ಮೇಲೆ ಜರೆಯ ಪೀತಾಂಬರ ನೆರಿಗೆಯೂ | ಆಹ ವರ ಜಾನುಜಂಘೆಯು ಕರಿಸೊಂಡಲಿನ ತೊಡೆ ಸರ ಮಧ್ಯ ಉರುಕಟಿ ಕಿರಿಗೆಜ್ಜೆ ಉಡುದಾರ 17 ಸರಸಿಜೋದ್ಭವ ವರಸೂತ್ರ | ಮೇಲೆ ಮೆರೆವಂಥ ಸಿರಿಯ ಮಂದೀರ | ಹೃದಯ ವರರತ್ನ ಪದಕದ ಹಾರ | ಸ್ವಚ್ಛ ದರ ವರ್ಣ ಪೊಲ್ವ ಕಂಧಾರಾ | ಆಹ ಕರದ್ವಯ ಕಂಕಣುಂಗುರ ತೋಳ ಬಾಪುರಿ ಸುರರಿಗಭಯ ತೋರ್ಪ ಕರಕಮಲದ ಪುಟ್ಟ 18 ಮೊಸರರ್ಧ ಕಡದಿರೆ ಜನನೀ | ಬಂದು ಹಸುಗೂಸು ಮೇಲೆ ಬೇಡೆ ನನ್ನೀ | ಯಿಂದ ಮುಸುಗಿಟ್ಟು ಪಾಲ್ಕುಡಿಯಲು ನೀ | ಒಲೆ ಬಿಸಿ ಹಾಲುಕ್ಕಲು ಪೋಗೆ ಜನನೀ | ಆಹ ಹಸಿವಡಗದ ಕೋಪಕ್ಮಸರ್ಗಡಿಗೆಯ ವಡ- ದೆಸೆವ ಕಡಗೋಲ್ವಡಿದ್ಕೊಸರೋಡಿ ಬಂದ ಹೇ19 ಪದ್ಮ ಮುಖದ ಕಾಂತಿ ಸೊಂಪೂ | ಅಧರ ತಿದ್ದಿ ಮಾಡಿದ ದಂತ ಬಿಳುಪೂ | ತುಂಬಿ ಮುದ್ದು ಸುರಿಸುವ ಗಲ್ಲದಿಂಪೂ | ಕರ್ಣ ಕುಂಡಲ ಕೆಂಪೂ | ಆಹ ಮಧ್ಯ ಮೂಗುತಿ ನಾಸ ಪದ್ಮದಳಾಕ್ಷವು ಸದ್ಭಕ್ತರೇಕ್ಷಣ ಶುದ್ಧಾತ್ಮ ಸುಖಪೂರ್ಣ20 ಕಮಲಸಂಭವ ವಾಯುಚಲನಾ | ಹುಬ್ಬು ವಿಮಲ ಫಣೆ ತಿಲುಕದಹನಾ | ಮೇಲೆ ಭ್ರಮರ ಕುಂತಳ ಕೇಶ ಚನ್ನಾ | ವಜ್ರ ಅಮಿತ ಸುವರ್ಣ ಮುತ್ತೀನಾ | ಆಹ ಕಮನೀಯ ಮಕುಟವು ಸುಮನಸರೊಂದಿತ ಕಮಲ ತುಳಸಿಹಾರ ವಿಮಲಾಂಗ ಸುಂದರ 21 ಅಂತರ ಬಹಿರ ದಿವ್ಯಾಪ್ತಾ | ಸರ್ವ ರಂತರ ಬಲ್ಲ ನೀ ಗುಪ್ತಾ | ಜೀವ ರಂತರಂಗದಿ ವಾಸ ಸುಪ್ತಾ | ದಿಗ ಳಂತಾನೆ ನಡೆಸುವ ಆತ್ತಾ | ಆಹ ಸಂತತ ಚಿಂತಿಪರಂತರಂಗದಿ ನಿಂತು ಕಂತುಪಿತ ಇನಕೋಟಿಕಾಂತಿ ಮೀರಿದ ಪ್ರಭ22 ಎಚ್ಚತ್ತು ಇರುವ ಸರ್ವದಾ | ಕಾಲ ಮುಚ್ಚಿ ಕೊಂಡಿಪ್ಪೊದೆ ಮೋದಾ | ಅಜ ನುಚ್ವಾಸದುತ್ಪತ್ತಿಯಾದ | ಬಾಯ ಪಾದ | ಆಹ ಮುಚ್ಚೆ ಭೂವ್ಯೋಮವು ಹೆಚ್ಚಿನ ಕೋಪವು ಇಚ್ಚಿಪವನವಾಸ ಸ್ವೇಚ್ಛಾ ವಿಹಾರನೇ 23 ಗೊಲ್ಲರೊಡನಾಟ ಬಯಸೀ | ವಸ್ತು ವಲ್ಲದೆ ಪರಸ್ತ್ರೀಯರೊಲಿಸೀ | ಮತ್ತೆ ಚಲ್ವ ಕುದುರೆ ಏರಿ ಚರಿಸೀ | ತಾ ನೆಲ್ಲಿ ನೋಡಲು ಪೂರ್ಣನೆನಿಸೀ | ಆಹ ವಲ್ಲದೆ ದ್ವಾರಕೆ ಇಲ್ಲಿಗೈತಂದು ಮ ತ್ತೆಲ್ಲರ ಕಾಯುವ ಚೆಲ್ವ ಮಧ್ವೇಶ ಶ್ರೀ 24 ಗೋಪಿ ಕಂದನೆ ಮುದ್ದು ಬಾಲಾ | ಚೆಲ್ವ ರೂಪ ಸಜ್ಜನ ಪರಿಪಾಲಾ | ಗುರು ನಿತ್ಯ ನಿರ್ಮಾಲಾ | ದೇವಾ ಗೋಪಾಲಕೃಷ್ಣವಿಠ್ಠಾಲ | ಆಹ ಪರಿ ನಿಂತು ಮ ಕೊಂಡ ಶ್ರೀಪತಿ ಮರುತೇಶ 25
--------------
ಅಂಬಾಬಾಯಿ
ಬಾಲಕನೆಂದೆತ್ತಿಕೊಂಡೆನೆ - ಗೋಪಾಲಕೃಷ್ಣನಬಾಲಕನೆಂದೆತ್ತಿಕೊಂಡೆನೆ ಪ ಬಾಲಕನೆಂದೆತ್ತಿಕೊಂಡರೆ - ವಾರೆ ಮಾಡಿ ಮೋರೆ ನೋಡಿಶ್ರೀಲತಾಂಗಿಯರ ಲೋಲ - ಮಾರನಾಟವಾಡಿ ಪೋದನೆ ಅ ಹೊತ್ತರೆದ್ದು ಮನೆಗೆ ಬಂದನೆ - ಯಶೋದೆ ಕೇಳೆ ಎತ್ತಿಕೊಂಡು ಮುತ್ತುಕೊಟ್ಟೆನೆಎತ್ತಿಕೊಂಡು ಮುತ್ತು ಕೊಟ್ಟರೆಮುತ್ತಿನ್ಹಾರ ಕೊರಳಿಗ್ಹಾಕಿಚಿತ್ತಜಾತ ಕೇಳಿಯಲ್ಲಿಬತ್ತಲೆ ನಿಂದೆತ್ತು ಎಂದನೆ1 ಗಂಡನಂತೆ ಮನೆಗೆ ಬಂದನೆ - ಯಶೋದೆ ಕೇಳೆಮಿಂಡನಂತೆ ಕಣ್ಣು ಹೊಡೆದನೆಪುಂಡಪೋಕರನ್ನು ಮೀರಿದುಂಡು ಕುಚಗಳನ್ನು ಪಿಡಿದುದಿಂಡುರುಳಿಸಿ ಒಂದುಸರಲಿಬಂಡನುಂಡು ಹಾರಿ ಪೋದನೆ 2 ಏಸು ಮೋಸ ಕಲಿತ ಜಾಣನೆ - ಯಶೋದೆ ಕೇಳೆವಾಸುದೇವ ಮಾಯಕಾರನೆಹಾಸುಮಂಚದ ಹಾಸುಗೆಯಲಿತೋಷದಿಂದ ಬಾಚಿ ಸೆಳೆದುಶೇಷನನ್ನು ಪೂಜಿಸೆಂದಶ್ರೀಶ ಬಾಡದಾದಿ ಕೇಶವ 3
--------------
ಕನಕದಾಸ
ಬಾಲಕೃಷ್ಣ ತುರುವು ಕಾಯಲು ಕಳುಹಿದಳು ತನ್ನಬಾಲನ ಗೋಪಿಯು ಮುದ್ದಿಸುತಿಹಳು ಪ ಕರೆದು ಪಾಲನು ಕುಡಿಸುತಿಹಳು ನಿಂಬುಪರಿಮಳುಪ್ಪಿನಕಾಯ ಬುತ್ತಿ ಕಟ್ಟಿದಳುಸುರಭಿಯ ಮೊಸರು ಬೆಣ್ಣೆಯನು ದೋಸೆಸುರುಳಿ ಹೋಳಿಗೆ ಮಂಡಿಗೆಯ ಕಟ್ಟಿದಳುಸಂಡಿಗೆಯ ಕಟ್ಟಿದಳು 1 ಕರುಗಳೆಲ್ಲ ಕೂಡಿಸಿದಳು ನಿನ್ನಪರಿವಾರದವರು ಬಂದಾರೆ ನೋಡುನೀನು ಬಲರಾಮನು ಜೋಡು ಇಲ್ಲೇಯಮುನಾ ತೀರದಲ್ಲಿ ಆಡೋಹತ್ತಿರದಲ್ಲಿ ಆಡೋ 2 ಕೂಸಿಗೆ ಕುಂಚಿ ಹೊಚ್ಚಿದಳು ಬಿದ್ದಕೇಶಗಳೆಲ್ಲವು ತೀಡುತ್ತಲಿಹಳುಭೂಷಣಂಗಳ ಇಡುತಿಹಳುಇಂದಿರೇಶನ ಕೈಯ್ಯಲ್ಲಿ ಕೋಲು ಕೊಟ್ಟಿಹಳು(ಮುರಲಿ) ಕೊಳಲ ಕೊಟ್ಟಿಹಳು 3
--------------
ಇಂದಿರೇಶರು
ಬಾಲಕೃಷ್ಣ ಹರಿ ವಿಠಲ | ಪಾಲಿಸೋ ಇವಳಾ ಪ ಲೀಲಾ ಮನೋರೂಪ | ಕಾಳಿಂದಿ ರಮಣಾ ಅ.ಪ. ಈ ದಾಸತ್ವ ದೀಕ್ಷಾ | ಸಾಧಿಸುವುದತಿ ಕಷ್ಟಸಾಧು ಈ ಕನ್ಯೆ ಬಹು | ಭಕ್ತಿಯಲಪೇಕ್ಷೆಗೈದು ಬೇಡಿಹಳಿವಳು | ಭೋಧಿಸಿಹೆ ಅಂಕಿತವಕಾದುಕೋ ದಯವನಧಿ | ಬಾದರಾಯಣನೇ 1 ಕಾಮಾದಿಗಳ ಕಳೆದು | ನೇಮದಲಿ ಸಾಧನವನೀ ಮಾಡಿ ಮಾಡಿಸೋ | ಕಾಮ ಪಿತ ಹರಿಯೇಸ್ವಾಮಿ ನೀನಲ್ಲದಲೆ | ಅನ್ಯರನು ನಾ ಕಾಣೆಭೀಮ ಭವಾರ್ಣವವ | ದಾಟಿಸಲು ನಾಕಾಣೆ 2 ಭವವನಧಿ ನವ ಪೋತ | ತವನಾಮ ಸ್ಮøತಿಯಿತ್ತುಪವನ ಸದನದಿ ನಿನ್ನ | ನಂದನದಲ್ಲಿರಿಸೋಅವರಿವರ ಮನೆ ವಾರ್ತೆ | ಕಿವಿಗೆ ಕೇಳಿಸಬೇಡಭವನದಲಿ ಸಾಧನವ | ಗೈವಂತೆ ಮಾಡೋ 3 ಸಾಧು ಸಂಗವ ಕೊಟ್ಟು | ನೀ ದಯದಿ ಕಾಪಾಡೋಮೋದ ತೀರ್ಥರ ಮತವ | ಭೋದಿಸೋ ಮುದದೀಮಾಧವನೆ ಕಾಮಿತವ | ಆದರದಿ ಪಾಲಿಸುತಕಾದುಕೋ ಬಿಡದಿವಳ | ಶ್ರೀದ ನರಹರಿಯೇ 4 ಭಾವ ಭಕ್ತಿಯಲಿಂದ ಹಿರಿಯರ ಸೇವಿಸುವಭಾವುಕಳ ಕೈಪಿಡಿದು | ಕಾಪಾಡೊ ಹರಿಯೇಗೋವು ಕರುವಿನ ಮೊರೆಗೇ | ಧಾವಿಸೀ ಬರುವಂತೆನೀವೊಲಿದು ಪೊರೆಯೊ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಬಾಲಗೆ ಪಟ್ಟಗಟ್ಟಿಸು ಪರಿವಾರವ ಬಾಳಿಸು ಮುನ್ನಿನಂದದಲಿ ಸುತನ ಮುಂದಿಟ್ಟು 151 ಇಕ್ಷ್ವಾಕುಕುಲತಿಲಕನೆ ನಿನ್ನ ರಾಜ್ಯವ ಒಪ್ಪಿಸಿಕೊಳಲೆನಗಳವೆ ಪುತ್ರಗೆ ಪಟ್ಟವ ಕಟ್ಟುವುದೇನು ಕಾರಣ ವಿಸ್ತಾರವಾಗಿ ಹೇಳೆಂದ 152 ಕೇಳಿದೆ ಕರ್ಣದಿ ಹೀನದ ವಾಕ್ಯವ ಜಾರತ್ವ ಬಂದಿತಾತ್ಮಜೆಗೆ ಮಾಡುವೆನು 153 ಅಮರಲೋಕಕ್ಕೆ ವಶವಹರು ಭಾಧೆಗೆ ಗುರಿಯಾಗಿ 154 ವ್ಯರ್ಥವಾಯಿತು ಎನ್ನ ಬದುಕು ಮಾಡಿಕೊಂಬೆನೆಂದ 155 ಕಥೆಯ ಕೇಳರಿಯಾ ಕುಂದನೊದ್ದವರಾರು ಜಗದಿ 156 ಮೀರಿದರಾರೊ ಕಲ್ಪನೆಯ 157 ಸರ್ವಾಂಗದಿಂದ ಸುಂದರಿಯು ಸತಿ ಲಾಂಛನೆಯ ತಾಳಿದನು 158 ಸೆರೆತಂದ ತಾರಾದೇವಿಯನು ಪಾಡೇನು ಭೂಪಾಲ 159 ಕುಮಾರತಿಯ ಮಂದಿರಕೆ ಅರುಹಿದರಾರು ನಿನ್ನೊಡನೆ 160 ನಿಲ್ಲಿಸಿದ ಪ್ರಧಾನಿ ನಡೆತಂದ ಸೆಜ್ಜೆವಾಹರಿಗೆ 161 ಮಲಿನವನುಟ್ಟ ಮಾನಿನಿಯ ಸೆಳೆವಿಡಿದೆತ್ತಿದ ರಾಯ 162 ಮಾಜುವದೇಕೆ ಎನ್ನೊಡನೆ ಬ್ರಾಹ್ಮರು ಮೆಚ್ಚುವಂತೆ 163 ಸುರರೊ ನರರೊ ಕಿನ್ನರರೊ ಗಿರಿಜೇಶನಾಣೆ ಹೇಳೆಂದ 164 ವಿಶ್ವಲೋಚನನಂಘ್ರಿಯಾಣೆ 165 ಸರಿಯ ನಾರಿಯರು ಉರಿವ ಪಾವಕನ 166 ಬ್ರಾಹ್ಮರಿಗ್ಯೊಗ್ಯವಹುದೆ ಬರುವುದು ನಿಮ್ಮ ಕುಲಕೆ 167 ಪಾತಕಿಯೆಂದು ತಿಳಿದು ಬರುವುದೆ ಉಚಿತವು 168 ಮುನಿದು ಅರಣ್ಯಕ್ಹೋಗುವರೆ ವರಿಸು ನಿನಗೆ ಉತ್ತುಮವುಳ್ಳ ಪುರಷಗೆ ಧಾರೆಯನೆರೆವೆನು 169 ಪಾತಕ ಬರಿದೆ ನಿಂದ್ಯವನು (ಅ) ಬಂದೊದಗಿದ ಮೇಲೆ 170 ತೂಪಿರಿದು ಮಂತರಿಸಿ ಘೋರ ಕಾನನಕೆ 171 ಗುರಿಮಾಡಿ ನಾರಿ ಕಂಬನಿದುಂಬಿದಳು 172 ವಶವಲ್ಲದಂಥ ಮೂಗುತಿಯ ಬಿಸುಸುಯ್ವದೇತಕೆ ತಾಯೆ 173 ಕುಮಾರಿಯ ಮೇಲೆ ಸ್ನೇಹದಲಿ ವಿಧಿಯೆಂದ್ಹೊರಳಿದಳು 174 ಅಳುವುದೇತಕೆ ತಾಯೆ ನೀನು ಕಲ್ಮಾಡು ನಿನ್ನ ದೇಹವನು 175 ಹೇಳಿದನೇಕಾಂತದಲಿ ಉದಯಕೆ ಬನ್ನಿರೆಂದ 176 ಕರೆಸಿದನಾಗ ಕಿಂಕರರ ಪ್ರಧಾನಿಯು ತರಿಸಿದನೊಜ್ರದಂದಣವ ಬನ್ನಿರಿ ಶೀಘ್ರದಿಂದ 177 ಮಾಡಿರಿಮನಕೆ ಬಂದುದನು ನಾನಿಡುವೆ ರಾಯನ ಮುಂದೆ 178 ಮೇಲೆ ಪನ್ನಂಗ ಕವಿದವು ಶೀಘ್ರದಿ ಪೊತ್ತು ನಡೆದರು 179 ಬಸವಳಿದಳು ಶ್ರೀ ಹರಿಯ ಸ್ತುತಿಸುತಿರ್ದಳೆ ತನ್ನ ಮನದಿ 180 ಕಾಲನ ವಶಕೆÉ ಒಪ್ಪಿಸದೆ ಪಾದಾರವಿಂದೊಳಿರಿಸು 181 ಭಾರವನ್ಹೊತ್ತು ಬಳಲಿ ಬಾಯಾರುತ್ತ ಏರುತ್ತ ಘಟ್ಟ ಬೆಟ್ಟಗಳ ಬಾಲೆಯ ತಂದಿಳುಹಿದರು 182 ಬಾ ಬಳಲಿದೆಯೆನುತ ರಂಭೆಯನುಪಚರಿಸಿದರು 183 ತೊಪ್ಪಲ ಮೇಲ್ಹರಹಿದರು ಕತ್ತಿಗೆ ಮಯ್ಯನಿಕ್ಕಿದಳು 184 ಕಂಬುಚಕ್ರಧಾರಿ ವೈಕುಂಠವಾಸಗೆ ವಂದಿಸಿದಳು ತನ್ನ ಮನದಿ ಸ್ತುತಿಯ ಮಾಡಿದಳು 185 ಅರಣ್ಯದಲ್ಲಿ ತನ್ನ ನೆನೆವ ಕುಮಾರಿಗೆ ಕಾರುಣ್ಯದಿಂದೊದಗಿದನು ನಿದ್ರೆ ಕವಿದವು 186 ಕಾಮಧೇನು ಕಲ್ಪವೃಕ್ಷ ಚಿಂತಾಮಣಿ ಭಕ್ತರಿಗೊಜ್ರಪಂಜರನೆ ದೂತರ ಮನವ 187 ಯೋಚಿಸಿ ತಮ್ಮ ಮನದಿ ಪಾತಕ ಎತ್ತಿದಾಯುಧವನಿಳುಹಿದರು 188 ಒಬ್ಬರೊಬ್ಬರು ಮಾತನಾಡಿ ಉರ್ವೀಶಗೊಯ್ದು ಒಪ್ಪಿಸುವ 189 ವಾರಿಜಗಂಧಿಯ ಬಿಟ್ಟು ರಾಯಗೆ ಗುರುತ ತೋರಿದರು 190 ತಪ್ಪದೆ ರಾಯನೋಲಗಕೆ ಚಿತ್ತೈಸು ಜೀಯವಧಾನ 191 ತಂದೆವು ಮುದ್ರೆಯುಂಗುರವ ಮನದಲಿ ಮರುಗಿದನು 192 ಅಂಜೂರ ಕೊಯ್ದು ಕೊಟ್ಟಂತೆ ಬೆಂದೊಡಲನೆಂತು ಪೊರೆಯಲಿ 193 ಕೆಂಡದೊಳಾಜ್ಯ ಬಿದ್ದಂತೆ ಬೆಂದರು ಶೋಕಾಗ್ನಿಯಿಂದ 194 ಮೇಲೆ ಸ್ನೇಹದಲಿ ತಲೆಯೆತ್ತಿದವಬ್ಜ ಬಂಧುಗಳು 195 ಹಸಿದ ಹೆಬ್ಬುಲಿಗೆ 196 ಬೆದರುವಳು ವ್ಯಾಘ್ರದಟ್ಟುಳಿಗೆ ಮರಳಿ ಧೈರ್ಯವನೆ ಮಾಡುವಳು 197 ಮಾಯಪಾಶಕೆ ಗುರಿಮಾಡಿ ಮುಕ್ತಿ ಸಾಧನವು 198
--------------
ಹೆಳವನಕಟ್ಟೆ ಗಿರಿಯಮ್ಮ
ಬಾಲಚಂದ್ರನ ರೂಪಾ ಭಯನಿವಾರಣ ನೋಡೋ ಬಾಲೆಯರೆಲ್ಲರು ಬಂದು ಕಾದಿರುವಾ ಲೊಲಾನವನ್ನು ಕಂಡು ಹೇಳಲು ನಾ ಬಂದೆ ಆಲಯಕ್ಕೆ ನೀ ಬಾ ಹಸೆಗೇಳೋ ಸೋಬಾನೆ 1 ಪನ್ನಂಗಶಯನ ಬಾರೊ ಚನ್ನಕೇಶವನಲ್ಲ ದಿನ್ನು ಬೇಕಾದ ಹೆಸರನ್ನು ಪಡೆದಿರುವೆ ಕನ್ನೆ ಸೀತೆಗೆ ಕೊಟ್ಟ ಹೊನ್ನವುಂಗರ ಕೊಡುವೆ ಬಿನ್ನಾಣದಿಂದ ಹಸೆಗೇಳೋ ಸೋಬಾನೆ 2 ಸುದತಿಯರೈವರು ಕದಳಿಹುವ್ವಿನ ಪೀಠ ಹದಮಾಡಿ ಕುಂತಿರುವರದೆ ಹೇಳಬಂದೆ ಮದನ ಜನಕ ಹಸೆಗೊದಗಿ ಅಲ್ಲಿನ ದಿವ್ಯ ಚದುರತನವನೋಡೊ ಹಸೆಗೇಳೋ ಸೋಬಾನೆ 3 ಋಷಿಗಳೆಲ್ಲರು ಜ್ಞಾನದೋಯ ಹಾಸನದೊಳೂ ಬಿಸಜಾಕ್ಷಿವರದನೆ ಗುರುವು ತುಲಸಿರಾಮಾ ಪಶುಪತಿಯಾದೆಯಾ ಹಸೆಗೇಳೋ ಸೋಬಾನೆ 4
--------------
ಚನ್ನಪಟ್ಟಣದ ಅಹೋಬಲದಾಸರು
ಬಾಲನೇನೆ ನಿನ್ನ ಮಗನು ಗೋ- ಪಾಲಕೃಷ್ಣನು ಪ. ಬಾಲನೇನೆ ನಿನ್ನಮಗನು ಬಾಲಕಿಯರಾಲಯ ಪೊಕ್ಕು ಶೀಲಗೆಡಿಸಿ ಸಾಲದೆ ಗೋ- ಕುಲವನು ಸೂರೆಮಾಡಿದ ಅ.ಪ. ಕಾಲು ಇಲ್ಲದೆ ನಡೆವನೀತ ಮೇಲುಗಿರಿಯ ಬೆನ್ನಲಾಂತ ಮೂಲಬೇರ ಮೆಲ್ಲುವಾತ ಜ್ವಾಲರೂಪಿ ಸ್ಥೂಲಕಾಯ ಬಾಲನಾಗಿ ಭೂಮಿಬೇಡಿದ ಹಾಲು ಕುಡಿಸಿದ ತಾಯ ಎರವು ಮಾಡಿದ ವಲ್ಕಲವನುಟ್ಟು ಅಡವಿ ಆಲಯವ ತಿರುಗಿದ ಶ್ರೀರಾಮಚಂದ್ರ ವೇಲಾಪುರದ ಸೋರುಮುಡಿಯ ಬಾಲೆಯನು ಸೋಲಿಸಿ ಕಾಲದಲ್ಲಿ ಕಲ್ಕ್ಯನಾದ 1 ಮಡುವಿನಲ್ಲಿ ಅಡಗಿಯಿರುವ ಪೊಡವಿ ದೊಡ್ಡನೆತ್ತಿ ಪೊರೆವ ಅಡವಿಯಲ್ಲಿ ಆಡುತಿರುವ ಕಡುಕ್ರೂರ ಹಿಡಿದ ಹಟವ ಹುಡುಗನಾಗಿ ಪೊಡವಿ ಬೇಡಿದ ಕೊಡಲಿ ಪಿಡಿದು ಕಡಿದು ಕ್ಷತ್ರಿಯರ ಕುಲವ ತರಿದನೆ ರಾವಣಾದಿ ಪಡೆಯನೆಲ್ಲ ಸಂಹರಿಸಿದ ಶ್ರೀರಾಮಚಂದ್ರ ತುಡುಗು ಮಾಡಿ ಗಡಿಗೆ ಪಾಲ ಕುಡಿದು ಕಡಹದಲ್ಲಿ ಅಡಗಿ ಬಿಡದೆ ತ್ರಿಪುರವ್ರತಕೆಡಿಸಿ ಪಿಡಿದು ತೇಜಿಯ ನಡೆಸುತಿಹನು 2 ನೀರಪೊಕ್ಕು ವೇದತಂದು ಭಾರಪೊತ್ತು ಬೆನ್ನಲಿಟ್ಟು ಕೋರೆಹಲ್ಲು ತೋರುವ ಕ್ರೂರವದನ ಅಪಾರ ಮಹಿಮ ಪಾದ ಭೂಮಿ ಬೇಡಿದ ವಿಪ್ರರ ಕರೆಸಿ ಧಾರುಣಿಯನೆ ದಾನ ಮಾಡಿದ ಪರ್ವತಗಳ ತರಿಸಿ ಶರಧಿಯನ್ನು ಸೇತುಕಟ್ಟಿದನೆ ಶ್ರೀರಾಮಚಂದ್ರ ಜಾರ ಚೋರ ಮಾರನಯ್ಯ ನಾರೇರಪ್ಪಿ ಮರುಳುಮಾಡಿ ವಾರಿಜಾಕ್ಷ ಹಯವದನ ಏರಿ ಕುದುರೆ ವೈಹಾಳಿಮಾಡಿದ 3
--------------
ವಾದಿರಾಜ
ಬಾಳೊ ಸುಖದಿ ಬಾಲನೆ ವರಗುಣ ಶೀಲನೆ ಪ ಬಾಳೊ ಸುಖದಿ ಬಹುಕಾಲಶ್ರೀವೇಣು ಗೋ- ಪಾಲನ ದಯದಿ ಸುಶೀಲ ಸತಿಯಳ ಕೂಡಿ 1 ಪಾದ ತೋಯಜ ಸ್ಮರಿಸುತ ಕಾಯದಾರೋಗ್ಯದೀರ್ಘಾಯುತ್ವವ ಪಡೆದು 2 ಕೃದ್ಧನಾಗದೆ ಜ್ಞಾನ ವೃದ್ಧರಸೇವಿಸಿ ಮಧ್ವಮತದ ತತ್ವ ಶ್ರದ್ಧದಿ ಕೇಳುತ 3 ತಂದೆ ತಾಯಿಗಳಲ್ಲಿ ಇಂದಿರೆರಮಣನೆ ನಿಂದು ಪಾಲಿಪನೆಂದು ವಂದನೆ ಪಾಡುತ 4 ಭಕ್ತಿಯಿಂದತಿಥಿಗಳ ನಿತ್ಯದಿ ಸೇವಿಸುತ ಪುತ್ರ ಪೌತ್ರಾದಿ ಸಂಪತ್ತಿಯ ಪಡೆದು 5 ಭೂಸುರರೊಡಗೂಡಿ ತೋಷದಿಕೃತ ಹರಿ ವಾಸರ ವೃತ ಫಲ ಶ್ರೀಶನಿಗರ್ಪಿಸುತ 6 ಧಾರುಣಿಯೊಳು ಕೃಷ್ಣಾತೀರ ಕಾರ್ಪರನಿಲಯ ನಾರಸಿಂಹನ ಪದ ವಾರಿಜ ಸೇವಿಸುತ 7
--------------
ಕಾರ್ಪರ ನರಹರಿದಾಸರು
ಬಿಟ್ಟಿರಲಾರೆ ಬಾ ಗೋವಿಂದಾ ಸೃಷ್ಟಿಶಾನಂದ ಪ ಬಿಟ್ಟಿರಲಾರೆ ಮನಮುಟ್ಟಿ ಭಜಿಪೆನಯ್ಯ ಅಷ್ಟಮಹಿಷೇರ ಸಹಿತ ನಾಟ್ಯವಾಡುತ ಬೇಗ ಬಾ ಅ.ಪ ಗೊಲ್ಲರ ಮನೆ ಪೊಕ್ಕು ಪಾಲ್ಬೆಣ್ಣೆಗಳ ಮೆದ್ದು ಚೆಲ್ವ ಲಲನೇರ ಗಲ್ಲ ಮುದ್ದಾಡುತ ಬೇಗ 1 ಮಂದಗಮನೆಯರ ಮಂದಹಾಸದಿ ಅಪ್ಪಿ ದ್ವಂದ್ವ ಕುಚದಲ್ಲಿಟ್ಟ ನಂದಜ ಕರಗಳಿಂದ 2 ಮಿರಿಮಿರಿ ಮಿಂಚುವ ಕಿರೀಟ ಕುಂಡಲ ಧರಿಸಿ ವಾರೆ ನೋಟದಿ ನಾರೇರ ಮನ ಸೆಳೆವ 3 ಸುಮನಸರೊಂದಿತ ಯಮುನಾ ಪುಳಿನದಿ ವಿಮಲ ವೇಣುಸ್ವರದಿ ಕಮಲಾಕ್ಷಿಯರೊಲಿಸಿದ 4 ಶ್ರೀವತ್ಸ ಕೌತ್ಸುಭ ಪವಳ ಮುತ್ತಿನಹಾರ ನ್ಯಾವಳ ಸರಿಗಿಟ್ಟು ಗೋವಳರೊಡಗೂಡಿ 5 ತುತ್ತೂರಿ ಝಾಂಗಟೆ ಒತ್ತಿ ಪಿಡಿದಿಹ ಕಹಳೆ ಬತ್ತೀಸ ರಾಗದಿ ತತ್ಥೈವಾದ್ಯದೀ 6 ಎತ್ತಿ ಪಿಡಿದಿಹ ಛತ್ರಿ ಸುತ್ತು ಮಾಗಧ ಮಂದಿ ಸ್ತೋತ್ರವ ಮಾಡೆ ನೇತ್ರೋತ್ಸವ ತೋರುತ 7 ದಿವಪನ ಸೋಲಿಪ ನವ ಪೀತಾಂಬರ ಧರಿಸಿ ಭುವನವ ಮೋಹಿಪ ನವ ಸುವಿಶೇಷನೆ 8 ವಿಜಯ ರಾಮಚಂದ್ರವಿಠಲರಾಯನೆ ನಿಜ ಪರಿವಾರದಿಂ ಭಜಕರ ಪಾಲಿಪ 9
--------------
ವಿಜಯ ರಾಮಚಂದ್ರವಿಠಲ
ಬಿಟ್ಟು ಸಿಂಹಾಸನ ಇಟ್ಟು ದ್ವಾರದಿ ಹೆಜ್ಜೆ ಪ. ಅಭಯ ಜನಕೆ ಕೊಟ್ಟು ನಭದ ಸೂರ್ಯನಂತೆ 1 ಸೂರಿ ಮಾಡುತಲಾಗ 2 ಸಾಸಿರ ಅರ್ಬುದ ದ್ರವ್ಯ ಆಸಮಯದಲೆ ಕೊಟ್ಟ 3 ಅಕ್ಷಯ ಲಕ್ಷಕೋಟಿ ದ್ರವ್ಯ ಆಕ್ಷಣದಲಿ ಕೊಟ್ಟ 4 ಬಲುಬಲುದ್ರವ್ಯ ಮೇಲೆ ಮೇಲೆ ಕೊಟ್ಟು 5 ಶ್ರೇಷ್ಠದ ಭೇರಿಯ ಘಟ್ಯಾಗಿ ಹೊಯಿಸುತ 6 ಹಿಂದೆ ಮುದದಿಂದ ಬಂದ ರಾಮೇಶನು ತಂದೆ ಬೊಮ್ಮಗೆ ದುಂದುಭಿ ಹೊಯಿಸುತ 7
--------------
ಗಲಗಲಿಅವ್ವನವರು
ಬಿಟ್ಟೆನಯ್ಯ ಬಿಟ್ಟೆನಯ್ಯ ಪ್ರಪಂಚವಮುಟ್ಟಿದೆನು ಬ್ರಹ್ಮವನು ಮುಕ್ತನಾದೆನುಹುಚ್ಚು ಮೂಳಿ ಹೆಂಡತಿಯ ಪ ಮೆಚ್ಚಿ ನಲಿವ ಮಗನು ಸೊಸೆಯುಉಜ್ಜಿ ಬದುಕನೆಲ್ಲ ನಾನು ಉಡುಗಿ ಕಳೆದೆನು 1 ನೆಂಟರಿಷ್ಟರೆಲ್ಲರನ್ನು ದೂರಮಾಡಿ ಕುಳಿತೆ ನಾನುಹೆಂಟೆಯಂತೆ ಕಂಡೆನಯ್ಯ ಹೇರು ಹೇಮವ 2 ಅಷ್ಟದೇವರನ್ನು ನಾನು ಅಡವಿಗೆಂದು ಅಟ್ಟಿಬಿಟ್ಟೆಕಷ್ಟಪಡಿಪ ಪುರೋಹಿತನ ಕಡೆಗೆ ತಳ್ಳಿದೆ 3 ವಾರವಾರ ನೇಮವನ್ನು ಒಲೆಯನೀಗ ಹೊಗಿಸಿದೆದಾರಿ ಹಚ್ಚಿಸಿದೆನು ಕುಲವ ಶೀಲವ್ರತಗಳ 4 ಮತಗಳೆಂಬ ವಾದವನ್ನು ಮಣ್ಣುಪಾಲು ಮಾಡಿದೆನುಸತತ ಚಿದಾನಂದ ಬ್ರಹ್ಮ ಸಾಕ್ಷಿಯಾದನು 5
--------------
ಚಿದಾನಂದ ಅವಧೂತರು
ಬಿಡದಿರು ಕೈಯ್ಯ ರಂಗ ಒಡೆಯ ಶ್ರೀ ನರಸಿಂಗ ಬಡವನ ಮೇಲಪಾಂಗವಿಡುರಮಾಲಿಂಗಿತಾಂಗ ಪ. ನುಡಿವ ಮಾತುಗಳ ನಿನ್ನಡಿಗಳ ಸ್ತವವೆಂದು ಒಡಂಬಡೊ ನಿಜ ದಾಸ ಭಿಡೆಯ ಮೀರದ ದೇವ 1 ವಾರಿಜನಾಭ ನಿನ್ನ ಪ್ರೇರಣೆಯಿಂದ ಸರ್ವ ಧಾರುಣಿವರರ ದಯಾರಸ ದೊರೆವುದು 2 ಅಂಬುಜಾಲಧರಬಿಂಬಫಲಾಮೃತ ಚುಂಬನಲೋಲ ನೀ ಬೆಂಬಲಾಗಿರು3 ಹರಿ ನಿನ್ನ ಕೃಪಾರಸವಿರಲು ಚತುರ್ವಿಧ ಪುರುಷಾರ್ಥವೆಲ್ಲ ಸೇರಿ ಬರುವದೆಂದರಿದೆನು 4 ದುರಿತರಾಶಿಗಳನ್ನು ತರಿವರೆ ಶಕ್ತನಾದಪರಮಪಾವನ ಶೇಷಗಿರಿವರನೆಂದೆಂದಿಗು 5
--------------
ತುಪಾಕಿ ವೆಂಕಟರಮಣಾಚಾರ್ಯ
ಬಿಡಬೇಡೆಲೆ ಮನಸೆ ಶ್ರೀಹರಿಪಾದ ಹಿಡಿ ಬಿಗಿಯಲೆ ಮನಸೇ ಪ ಹಿಡಕೋ ಕಡಕಿಂ ಕಡಲಕಡಿದಮರರ ಪಾದ ಅ.ಪ ಅನುದಿನ ಸಿರಿಯರೊತ್ತುವ ಪಾದ ಪರತರ ಭಕುತಿಯಿಂ ಸುರರುಪೂಜಿಪ ಪಾದ ನೆರೆದು ಋಷಿಸ್ತೋಮರರಸಿನಲಿಯುವ ಪಾದ ಪರಮನಾರದ ತುಂಬುರರು ಪಾಡುವ ಪಾದ ಪಾದ 1 ನೀಲಬಣ್ಣದಪಾದ ಪಿಡಿದೆತ್ತಿ ಮೂಲೋಕಾಳುವ ಪಾದ ತಾಳಿ ವಿಲಸಿತರೂಪ ಖೂಳನ ಎದೆಮೆಟ್ಟಿ ಸೀಳಿ ಉದರಮಂ ಬಾಲನ್ನಪ್ಪಿಕೊಂಡು ಪಾಲಿಸಿದಂಥ ಮಹ ಮೇಲಾದಮಿತಪಾದ ಸುಜನ ತಲೆಮೇಲೆ ಹೊತ್ತಪಾದ 2 ಬಲಿಯತುಳಿದಪಾದ ಮುನಿಯಾಗ ಒಲಿದು ಕಾಯ್ದಪಾದ ಶಿಲೆಯನೊದೆದಪಾದ ವನಕೆ ಪೋದಪಾದ ಖಳರಥಳಿಸಿ ಮುನಿಕುಲವ ಸಲಹಿದಪಾದ ಜಲಧಿದಾಂಟಿ ಸ್ಥಿರಪಟ್ಟ ಭಕ್ತನಿಗೆ ಸುಲಭದೊದಗಿಕೊಟ್ಟ ಚೆಲುವ ಸುದಯಪಾದ 3 ಪಾದ ಬಹು ಜರಮರಣ ನಿವಾರ ಪಾದ ತರಳಗೆ ಸ್ಥಿರವರ ಕರುಣದಿತ್ತ ಪಾದ ಭರದಿಗರಡನೇರಿ ಸರಸಿಗಿಳಿದ ಪಾದ ತರುಣಿಮಣಿಯರವ್ರತ ಹರಣಗೈದ ಪಾದ ಸಿರಿ ಪಾದ 4 ಪಾದ ಭಕುತರ ಮೊರೆಯ ಕೇಳ್ವ ಪಾದ ದುರುಳ ಕುರುಪನ ಗರುವಕಂಡ ಬುವಿ ವಿಶ್ವ ಪಾದ ಪರಮ ತುರಗವೇರಿ ಮೆರೆವ ವಿಮಲ ಪಾದ ಪಾದ 5
--------------
ರಾಮದಾಸರು