ಒಟ್ಟು 4058 ಕಡೆಗಳಲ್ಲಿ , 131 ದಾಸರು , 2776 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂದನೇಳೆ ದೇವಿ ರಂಗ ಮನೆಗೇ| ಇಂದು ಮುಖಿ ನಿನ್ನ ಮನದಾ ನಂದ ಕೊಡಲು ಪ ಭಾಗವತ ರೊಡಗೂಡಿ| ಭಕ್ತಿರಂಗದೊಳಾಡಿ ಸುಖವ ಸೂರ್ಯಾಡಿ 1 ಗರುಡವಾಹನ ಪರಾಕೆಂಬ ಶೃತಿ ಭಟರು| ಮೂರಾರು ಸಾಲ ಪಂಜಿನ ಬೆಳಗಿನಿಂದ 2 ಸಕಲ ಸುಂದರ ರಾಶಿಯೆ ಎನಿಪ ಮೋಹನರೂಪ| ಅಕಳಂತಕ ಬ್ರಹ್ಮಾದಿ ಸುರರೊಡೆಯಾ 3 ದುರಿತ ಹರನೆಂಬ| ಬಿರದ ಜಾಂಗಟೆ ಶಂಖ ಕೌಸಾಳರವದಿ 4 ತನ್ನ ಭೃತ್ಯರ, ಭೃತ ಭೃತ್ಯನ ಕರೆದು| ಮನ್ನಿಸುವ ಮಹಿಪತಿ ಸುತಪ್ರಾಣ ಪದಕಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಂದರು ನಾರದರ್ಹರುಷದಲಿ ನಿಂದು ಯಜ್ಞ ನೋಡುತ ಮುದದಿ ಇಂದು ಯಾರಿಗರ್ಪಣೆ ಮಾಡುವಿರೆನೆ ಬಂದಿತು ಸಂಶಯ ಋಷಿಗಳಿಗೆ ಮಂಗಳಂ ಜಯ ಮಂಗಳಂ ಪ ತ್ವರದಿಭೃಗು ಮುನಿಗಳು ಹೊರಡುತಲಿ ಹರಬ್ರಹ್ಮರು ಸರಿಯಲ್ಲೆನುತ ಹರಿವೈಕುಂಠದಿ ಮಲಗಿರೆ ನೋಡುತ ಭರದಿಂದೊದೆಯೆ ವಕ್ಷಸ್ಥಳಕೆ ಮಂಗಳಂ ಜಯ ಮಂಗಳಂ 1 ನೊಂದಿತು ಪಾದವೆಂದುಪಚರಿಸೆ ಇಂದಿರಾದೇವಿ ಕೋಪಿಸಿ ತೆರಳೆ ಬಂದು ಋಷಿಗಳಿಗರುಹಿದರು ಶ್ರೀಗೋ- ವಿಂದಗೆ ಸಮರಿಲ್ಲೆಂದೆನುತಾ ಮಂಗಳಂ ಜಯ ಮಂಗಳಂ 2 ಮಡದಿ ಇಲ್ಲದೆ ಬೇಸರ ಪಡುತಾ ಪೊಡವಿಗಿಳಿದು ಹುತ್ತದೊಳಗಿರಲು ಕೊಡಲಿಯ ಗಾಯಕೌಷಧ ಹುಡುಕುತ ಹರಿ ಅಡವಿಗಳಲಿ ಸಂಚರಿಸಿದಗೆ ಮಂಗಳಂ ಜಯ ಮಂಗಳಂ3 ಭೂಮಿಗೊಡೆಯ ವರಹನನು ನೋಡಿ ಕಾಮಿನಿ ಬಕುಳೆ ಸೇವೆಗೆ ಮಾಡಿ ಕಾಮಜನಕ ಬೇಟೆಗೆ ಹೊರಟನು ಬಹು ಪ್ರೇಮದಿಂದಲಂಕರಿಸಿದ ಹರಿಗೆ ಮಂಗಳಂ ಜಯ ಮಂಗಳಂ4 ವನವನ ಚರಿಸಿ ಸ್ತ್ರೀಯರ ನೋಡಿ ವನಜಾಕ್ಷೇರು ನಡುಗುತ ಭಯದಿ ಘನಮಹಿಮಗೆ ಕಲ್ಲು ಕಲ್ಲೆಸೆಯೆ ಹಯ ವನದಿ ಮೃತಿಸೆ ಗಿರಿ ಏರಿದಗೆÉ ಮಂಗಳಂ ಜಯ ಮಂಗಳಂ 5 ಕಾಮಿನಿ ಬಕುಳೆಗೆಲ್ಲವ ಪೇಳಿ ಕೋಮಲೆ ಕೊರವಿ ರೂಪವ ತಾಳಿ ವ್ಯೋಮರಾಜನ ಪುರದಲಿ ಧರಣಿಗೆ ಸಾಮುದ್ರಿಕೆ ಪೇಳಿದ ಹರಿಗೆ ಮಂಗಳಂ ಜಯ ಮಂಗಳಂ 6 ವಶಿಷ್ಟ ಕಶ್ಯಪರು ಶುಕರುಗಳು ವಿಶಿಷ್ಟ ಬಂಧುಗಳ ಕರೆಸುತಲಿ ಪಟ್ಟದರಸಿ ಲಕುಮಿಯು ಬರೆಹರುಷದಲಿ ಕಟ್ಟಿ ಮಾಂಗಲ್ಯ ಹರಿ ಪದ್ಮಿನಿಗೆ ಮಂಗಳಂ ಜಯ ಮಂಗಳಂ 7 ಜಯ ಜಯ ವೆಂಕಟ ಪದ್ಮಿನಿಗೆ ಜಯ ಜಯ ಪದ್ಮಾವತಿಪ್ರಿಯಗೆ ಜಯ ಜಯ ಕಮಲನಾಭ ವಿಠ್ಠಲಗೆ ಜಯ ಜಯ ಶ್ರೀ ಶ್ರೀನಿವಾಸನಿಗೆಮಂಗಳಂ ಜಯ ಮಂಗಳಂ 8
--------------
ನಿಡಗುರುಕಿ ಜೀವೂಬಾಯಿ
ಬಂದರು ಹರಿಯ ವಾಲಗಕೆ ಭಕ್ತ | ವೃಂದ ಸಹಿತ ಸುರ ಶ್ರೇಷ್ಠ ಮೊದಲಾದವರು ಪ ನಾಗಾರಿ ಸುತ ಬಂದ | ನಾಗಾರಿ ಬಂದಾ | ನಾಗಾನ ಧನು ಬಂದ ನಾಗಪುಂಗವ ಬಂದ | ಗಮನ ಬಂದ | ನಾಗ ಬಂದಾ || 1 ನಾಗಶಯ ಮುಖವಾದ ನಾಗವಾಹನ ಮಿತ್ರ | ನಾಗ ಚರ್ಮಾಂಬರ ಸಖನು ಬಂದಾ | ನಾಗಾರಿ ಸುತೆಯಳನಾಳಿದವನು ಬಂದಾ | ನಾಗಾರಿ ಬಾಂಧವ ಬಂದಾ || 2 ನಾಗದ್ವೇಷಿಕನು ನಾಗಾನಾದನನುಜ | ನಾಗಕೇತನನ ಕೊಂದಗ್ರಜನು ಬಂದಾ | ಸಿರಿ ವಿಜಯವಿಠ್ಠಲರೇಯ | ನಾಗವಾಹನನಾಗಿ ಬರುವ ಸಂಭ್ರಮದೊಳು ||3
--------------
ವಿಜಯದಾಸ
ಬಂದಾನು ಬಂದಾನು ಪ ಬಂದನಾಗ ಗೋವಿಂದ ಯದುಕುಲಾ ನಂದ ಮುಕುಂದನು ಮಂದಹಾಸದಲಿ ಅ.ಪ. ಬೀದಿ ಬೀದಿಯೊಳು ಬಲು ಶೃಂಗಾರ ಬಗೆ ಬಗೆ ತೋರಣದಿಂದಲಂಕಾರ ಕಾದುನಿಂತಿಹ ಜನ ಪರಿವಾರ ಮೋದದಿ ಮಾಡುವ ಜಯ ಜಯಕಾರ ಮೇದಿನಿ ಸುರರಾಮ ಮಂತ್ರದ ಉಚ್ಚಾರ ಸೌಧಗಳಲ್ಲಿಹ ಸ್ತ್ರೀಯರಪಾರ ಸಾಧರದಿಂದೀಕ್ಷಿಸೆ ಜನನಿ ಕರವು ಮೋದವೆ ಬೀರುತ ಯಾದವ ಕುಲಮಣಿ 1 ಸುಂದರಿಯರು ನಲವಿಂದ ನಿಂದಿಹರು ಗಂಧ ಪರಿಮಳದ ಜಲವೆರಚಿಹರು ಅಂದದರಳ ಪುಷÀ್ಪಗಳ ವರ್ಷಿಪರು ಕುಂದಣದಾರತಿಗಳ ಪಿಡಿದಿಹರು ವಂದಿಮಾಗಧರು ಪೊಗಳುತಿಹರು ಚಂದದಿ ಮಣಿಮಯ ಸ್ಯಂದನದಲಿ ಅರ ವಿಂದ ನಯನ ಬಲು ಸುಂದರಾಗನು 2 ಬಂಗಾರದ ರಥವೇರಿ ಬರುತಿಹನು ಕಂಗಳಿಗುತ್ಸವ ತಾ ತರುತಿಹನು ಮಂಗಳಕರ ತಿಲಕವನಿಟ್ಟಿಹನು ಬಂಗಾರದ ಮಕುಟ ಧರಿಸಿಹನು ಶೃಂಗಾರದ ಶಿಸ್ತಲಿ ಶೋಭಿಪನು ಅಂಗಜಕೋಟಿ ನಿಭಾಂಗನಾಗಿಹನು ಮಂಗಳಾಂಗ ಶ್ರೀರಂಗ ಕರಿಗಿರಿ ನೃಸಿಂಗನು ಕರುಣಾಪಾಂಗವ ಬೀರುತ 3
--------------
ವರಾವಾಣಿರಾಮರಾಯದಾಸರು
ಬಂದಾನೊ ನಂದಸುತ ಈ ಮಂದಿರದಿ ಪ ಮುರಳಿಯನೂದುವನು ತುರುಗಳ ಕರೆಯುವನುಸರಸಿಜಾಕ್ಷರೆ ನಮ್ಮ ಶರಣರಂಗಳದೊಳು1 ತುರುಗಳ ಕಾಯುವನು ಸರಗಳ ಮುಡಿದಿಹನುಸರಣೀಯೊಳಗೆ ಮುದ್ದು ಚರಣವನಿಕ್ಕುತ 2 ಅರಳೆಲೆ ತೂಗುವನು ಕೃಷ್ಣ ಅರಗಿಣಿಯಂತಿಹನುಹರುಷವ ಬಡಿಸುತವರ ಇಂದಿರೇಶನು 3
--------------
ಇಂದಿರೇಶರು
ಬಂದಾಳು - ಬಂದಾಳು ಕನ್ನಿಕೆಯಾಗ || ಮೋಹನ್ನ ರೂಪದಿ ಪ ಪತಿ ಸುರವೃಂದ ಪೊರೆಯಲುಮಂದರಧರ ಆನಂದವ ಬೀರುತ ಅ.ಪ. ಪರಿ ಪರಿ ಭಾವದಿ 1 ಘಲು ಘಲ್ಲು ಘಲಿರೆನ್ನಲು ಗೆಜ್ಜೆಯನಾದ | ಅಸುರರಿಗುನ್ಮಾದ |ಕೆಲಸಾರಿ ಕೆಲ ಸಾರೆನ್ನುತಲೀ ನಾದ | ಆಯಿತು ವಿವಾದ ||ಘಳಿಗೆಯೊಳಮೃತದ | ಕಲಶ ಕನ್ನಿಕೆ ಕರತಲದೊಳಗಿರಿಸುತ | ಬಲು ಬಲು ವಂದಿಸೆ 2 ಸಾಲು ಸಾಲಾಗಿ ಕುಳ್ಳಿರಲಾಗ | ಕಣ್ಮುಚ್ಚಿರೆಂದಳಾಗ ಕಾಲಾಲಂದಿಗೆ ಝಣಿ ಝಣಿಸುವ ಸೋಗ | ಹಾಕಿದಳ್ ತಾನಾಗ | ಕೈಲಿ ಕಲಶ ಸೌಟು | ಚಾಲಿಸುತಲಿ ಸುರಪಾಳಯ ಕುಣಿಸುತ | ಜಾಲ ಮಾಡಿದ ಹೆಣ್ಣು3 ದಿವಿಜಾರ ಮಧ್ಯದಿ ರಾಹುವು ತಾನು | ಎತ್ತಲು ತನ ಗೋಣುರವಿಯು ಚಂದ್ರಮರ ಸೂಚನೆಗಳನು | ಅನುಸರಿಸುತ ಪೆಣ್ಣುಹವಣಿಸಿ ಚಕ್ರದಲವನ ಕೊರಳನೂಜವದಿ ಕಡಿಯೆ ಗ್ರಹವೆರಡೇರ್ಪಟ್ಟವು 4 ಸುರರು ಅಸುರರಿಗೇ | ಆದಾವು ಫಲ ಬೇರೊಬ್ಬಬ್ಬರಿಗೆ | ಸ್ವರ್ಯೂಪ್ಯೋಗ್ಯತೆಗೇ ||ವೇದ ವೇದ್ಯ ಗುರು ಗೋವಿಂದ ವಿಠಲನುಸಾಧು ಪೆಣ್ಣು ಸಮ ವೈಷಮ್ಯ ರಹಿತ 5
--------------
ಗುರುಗೋವಿಂದವಿಠಲರು
ಬಂದಿದ್ದನೆ ರಂಗ ಬಂದಿದ್ದನೆ ಕೃಷ್ಣ ಬಂದಿದ್ದನೆ ಪ. ಬಂದಿದ್ದನೆ ನಮ್ಮ ಮಂದಿರದೊಳು ಬೆಳ ದಿಂಗಳ ತೆರದೊಳು ಬಂದಿದ್ದನೆ ಅ.ಪ. ಗೆಜ್ಜೆ ಕಾಲ್ಕಡಗ ಸಜ್ಜಿನಿಂದಿಟ್ಟು ಕರ ಕ್ಷಿತಿ ತಳ ವಂದಿತ ಸತಿ ಪದುಮಾವತಿ ಲಕುಮಿ ಸಹಿತ ಕೃಷ್ಣ 1 ರವಿಯ ಕಾಂತಿ ಕೋಟಿ ಪ್ರಭೆ ಕಿರೀಟವು ವರದ ಮಾಧವನು2 ಚತುರ ಹಸ್ತದಿ ಶಂಖ ಚಕ್ರಗದಾ ಪದ್ಮ ಸತಿ ತುಳಸಿಯ ಮಾಲಧರನೆ ಜತೆ ತನ್ನ ಭಕ್ತರ ಹಿತದ ಪೂಜೆಯಗೊಂಡು ವಿತತ ವೈಭವದಿಂದ 3 ವರಪ್ರದ ವೆಂಕಟ ವರಗಳ ನೀಡುತ ತನ್ನ ಚರಣ ತೋರುತ ಭಕ್ತರಿಗೆ ಕೇಸರಿ ತೀರ್ಥವ ಕರುಣದಿ ತೋರುತ ಕರಿವರದ ಕೃಷ್ಣ 4 ಪಂಚಾಮೃತದಭಿಷೇಕವ ಕಂಡೆನೆ ಎನ್ನ ಸಂಚಿತಾರ್ಥದ ಪುಣ್ಯದ ಫಲದಿ ಮಿಂಚಿದ ಪಾಪವ ಕಳೆದರತಿಹರುಷದಿ ಹಂಚಿ ವರದ ಹಸ್ತ ಕಂಚಿ ವರದ ತೋರೆ ಬಂದಿದ್ದನೆ 5 ಕಂಕಣ ಕೈಯೊಳು ಧರಿಸಿಹನೆ ದಿವ್ಯ ಹೇಮ ಶೋಭಿತನೆ ಕಿಂಕರ ವರದ ಮಾಂಗಲ್ಯ ಕಟ್ಟಿದ ಸತಿ ಶಂಕರಾದಿ ಸ್ತುತ ವೆಂಕಟರಮಣನು 6 ಸುರವರÀ ವಂದ್ಯಗೆ ಆರತಿ ಎತ್ತಲು ಕೇಸರಿ ತೀರ್ಥವ ನೀಡಿದನೆ ವರ ಪ್ರಸಾದದ ಮಹಿಮೆಯ ತೋರುತ ಶರಧಿ ಗಂಭೀರನು 7 ಉರುಟಣಿಯ ಮಾಡಿದ ವರಸತಿ ಜತೆಯಲಿ ವರ ಶೇಷಾಚಲನು ತಾನೆ ಹರುಷವ ಬೀರುತ ವರ ಶೇಷನ ಮೇಲೆ ಮೆರೆವ ಶಯನಗೊಂಡು ಹರುಷದಿ 8 ಗಂಧ ಪುಷ್ಪ ತಾಂಬೂಲವಗೊಂಡನೆ ತಂಡ ತಂಡ ಭಕ್ತರ ವಡೆಯ ಉದ್ದಂಡ ಭಕ್ತರಿಗೆ ಉದ್ದಂಡ ವೆಂಕಟ 9 ನಾಟಕಧಾರಿ ತಾ ವಧೂಟಿ ಭೂಪ ಲಕ್ಷ್ಮಿ ಸಹ ನೋಟಕರಿಗೆ ಆನಂದ ತೋರಿದನೆ ಧಾಟಿಧಾಟಿ ರಾಗದಿ ಭಕ್ತರು ಸ್ತುತಿಸೆ ಸಾಟಿಯಿಲ್ಲದ ವೈಭವವ ತೋರುತ ಕೃಷ್ಣ 10 ಕರವ ಮುಗಿದು ಸ್ತೋತ್ರವ ಮಾಡಿದೆನೆ ಎನ್ನ ಕರೆದಾದರಿಸು ಹರಿಗೆ ನಿರುತ ಎಮ್ಮನು ಹಯನೇರಿದನೆ ಭಯಕೃದ್ಭಯ ಹಾರಿ 11
--------------
ಸರಸ್ವತಿ ಬಾಯಿ
ಬಂದಿರುವೆನು ಭೂಜಾತೆ | ಶರ- ದಿಂದುವದನೆ ವೋ ಸೀತೆ ಪ ಕೂಗುವುದೇತಕೆ ನಿಮ್ಮಯ ಪೆಸರೇ ನೀಗ ತಿಳಿಸಿರೈ ಸ್ವಾಮಿ | ನುಡಿ ಭಾಗವತ ಜನಪ್ರೇಮಿ ಅ.ಪ ಹೀನತಮವ ಮುರಿದಜಗೆ ಶೃತಿಗಳಿತ್ತ ಮೀನಾವತಾರನೆ ನಾನು | ಬಾ ಜಾನಕಿ ಬೇಗನೆ ನೀನು ಮೀನಾದರೆ ನೀರೊಳಗಿರುವುದು ಸರಿ ಮಾನಿನಿಯಲಿ ಕಾರ್ಯವೇನು | ನಡಿ ದೀನ ಜನರ ಸುರಧೇನು 1 ಕಮಲನಯನೆ ನಾ ಪೂರ್ವದಿ | ಗಜ- ಗಮನೆಯೆ ನೋಡನುರಾಗದಿ ಭ್ರಮೆಯಾತಕೆ ಕೇಳ್ ಕಠಿಣಾಂಗಗೆ ನಾ ಸಮಳೆ ನಿನಗೆ ನೀ ನೋಡು | ಸಂ ಭ್ರಮವಿದ್ದಲಿ ನಲಿದಾಡು 2 ವರಹಾರೂಪನೆ ಕಾಮಿನಿ | ಓ ತರುಣಿಯರೊಳಗೆ ಶಿರೋಮಣಿ ವರಾಹನಾದರೆ ಅಡವಿಯ ತಿರುಗುತ- ಲಿರದೇತಕೆ ಇಲ್ಲಿ ಬಂದೆ | ನಡಿ ಪರಿಪರಿ ಮೃಗಗಳ ಹಿಂದೆ 3 ಕರುಳ ಬಗೆದ ನರಸಿಂಹ | ನಾನು ಪರಮ ಪುರಷ ಪರಬ್ರಹ್ಮ ನರಸಿಂಹನು ನೀನಾದರೆ ನಡಿನಡಿ ಗಿರಿಗುಹೆಯೊಳಗಿರು ಹೋಗೈ | ಬಹು ಪರಿನುಡಿಗಳು ನಿನಗೇಕೈ 4 ಭೂಮಿಯ ದಾನವ ಬೇಡಿ ಬಲಿಯ ಗೆದ್ದ ವಾಮನ ನಾನೆಲೆ ನಾರಿ | ಸು ತ್ರಾಮಾದ್ಯರಿಗುಪಕಾರಿ ಬ್ರಾಹ್ಮಣನಾದರೆ ನಮಿಸುವೆ ಚರಣಕೆ ಹೋಮಧ್ಯಾನ ಜಪಮಾಡೈ | ನಿ ಷ್ಕಾಮ ಜನರ ಪಥನೋಡೈ 5 ದುರುಳನೃಪರ ಸಂಹರಿಸವನಿಯ ಭೂ ಸುರರಿಗೆ ಕೊಟ್ಟೆನೆ ದಾನವು | ಕೇಳ್ ಪರಶುರಾಮಾಭಿದಾನವು ವರಮಾತೆಯ ಶಿರವರಿದವ ನೀನಂತೆ ಸರಸವೇತಕೆನ್ನಲ್ಲಿ | ಮನ ಬರುವಲ್ಲಿಗೆ ತೆರಳಲ್ಲಿ 6 ತಾಯನುಡಿಗೆ ತಮ್ಮಗೆ ರಾಜ್ಯವ ಕೊಟ್ಟು ಪ್ರಿಯದಿ ವನದೊಳಗಿದ್ದೆನೆ | ದೈ ತ್ಯೇಯ ನಿಕರವನು ಗೆದ್ದೆನೆ ಸ್ರೀಯರಲ್ಲಿ ಹಿತವೇನು | ಕಮ ಲಾಯತಾಕ್ಷ ನಡಿ ನೀನು 7 ನಾರಿಯರನು ಕೂಡಿ ರಾಸ ಕ್ರೀಡೆಯೊಳ್ ತೋರಿದೆ ಪರಿಪರಿ ಚಿತ್ರವ | ವಿ- ಜಾರ ಪುರಷನಿಗೆ ಹೋಲುವಳಲ್ಲವು ಸಾರ ಪತಿವ್ರತೆ ನಾನು | ಇ- ನ್ನ್ಯಾರು ತಿಳಿಸು ಮತ್ತೆ ನೀನು 8 ಪತಿವ್ರತೆಯರ ಸದ್‍ವ್ರತವ ಕೆಡಿಸಿದಾ ಪ್ರತಿಮ ಬುದ್ಧನೆ ಲತಾಂಗಿ | ಓ ಮತಿವಂತಳೆ ಮೋಹನಾಂಗಿ ಕೃತಕವಾಡದಿರು ಒಲ್ಲೆ | ಕೇ ಳತಿ ಮೋಹಕ ನೀ ಬಲ್ಲೆ 9 ಹಲವು ನುಡಿಗಳೇನು ಕಲಿಯುಗಾಂತದಲಿ ಮಲೆತ ಮನುಜರನು ಕೊಲ್ವೆನೆ | ಓ ಲಲನೆ ನೋಡು ಬಲು ಚೆಲ್ವನೇ ಕಲಿತನವ ತೋರಿಸದಿರು ಈ ಪರಿ ಹಲವು ವೇಷ ನಿನಗೇಕೆ | ಕೇ ಳೆಲವೊ ಸ್ವಾಮಿ ನುಡಿ ಜೋಕೆ 10 ವೇಷವಲ್ಲ ಸರ್ವೇಶ ನಾನು ಪರಿ- ಪೋಷಿಸುವೆನು ನಿಜಭಕ್ತರ | ಸಂ- ತೋಷಿಸುವೆನು ಧರ್ಮಯುಕ್ತರ ಪೋಷಿಸುವನು ನೀನಾದರೆಲ್ಲಿ ನಿನ್ನ ವಾಸಪೇಳು ನಿಜವೀಗಾ | ಪರಿ ಹಾಸವೇಕೆ ನುಡಿಬೇಗ 11 ಪರಮಾತ್ಮನು ನಾ ಕೇಳೆ | ಎನ್ನ ಮರತೆಯೇನೆ ಎಲೆ ಬಾಲೆ ಅರಿತೆನೀಗ ಬಹು ಸಂತಸವಾಯಿತು ಎರಗುವೆ ಚರಣಕೆ ನಾನು | ನಿನ್ನ ಸರಿಯಾರೈ ದೊರೆ ನೀನು 12 ಧರೆಯೊಳಯೋಧ್ಯಾ ಪುರದರಸನ ಮಗ ಗುರುರಾಮವಿಠಲನೆ ನಾನು | ಓ ತರುಣಿ ನಿನಗೊಲಿದು ಬಂದೆನು ಧರಣಿ ತನಯೆ ನಸುನಾಚಿಕೆಯಿಂದಲಿ ಣಗಳನು ತೊಳೆದಳು ಬೇಗ 13
--------------
ಗುರುರಾಮವಿಠಲ
ಬಂದು ಹೃದಯಮಂದಿರದೊಳಗೆಕೂಡೋ ಕೇಶವಮಾಧವ ಪ ತಂದೆಯೆನಾಂ ವಂದಿಪೆನೋ ಕಂದನ ಕುಂದನೆಣಿಸದೆ ಅ.ಪ ಭ್ರಮರ ಕೀಟನ್ಯಾಯದಿ ಬೇಗದಿ ತಾನೆ ತಾ ತನ್ಮಯತೇ ದಿವ್ಯಮಂಗಳ ವಿಗ್ರಹನೇ 1 ನಾಲಗೆಯ ನಡೆಮುಡಿ ಹಾಸುವೆ ಪಾಲ ಸುಮೃದುಪದಾ ಶುಭದ ನೀನೊಲಿಯುತೆ ನಲಿದು 2 ಗಾತ್ರ ಮೂರ್ತಿ ಶ್ರೀಕರ ತಂಗದಿರಾ ಬೆಂಗದಿರಾ ಶಂಕಚಕ್ರ ಚತುರ್ಭುಜ 3 ಸಂಚಿತವೆಂತೋ ಸ್ವಾಮಿ ಹಂಚಿ ನಿನ್ನ ಸೇವೆಯ ಗೈಸುತ 4 ಮುನಿಜನಗಳ ಪೊರೆವುದು ಹೆಚ್ಚೇ ಚಿನುಮಯಾತ್ಮನೇ ಚೆನ್ನಿಗ ಅಣುಗನು ನಾನಜ್ಞಾನಿ ಕನಿಕರದೆನ್ನ ಕಾಯ್ದರೆ ಕೀರ್ತಿ 5 ಮಾಯಮುಚ್ಚಿ ಕಾಯನೆಚ್ಚಿ ನೋಯುತ್ತಿಹೆನೋ ನರಹರಿ ಜೀಯ ಜಾಜೀಶಹರಿ ರಾಮ ರಕ್ಷಿಸು ಶ್ರೇಯ ಕೊಟ್ಟು6
--------------
ಶಾಮಶರ್ಮರು
ಬಂದೆ ಬಂದೆ ಸ್ವಾಮಿಯೆ ಬಂದೆ ಬಂದೆ ಪ. ಬಂದೆ ಬಂದೆ ಗೋವಿಂದ ಗೋವಳ ಬಾಂಧವ ಭಕ್ತವತ್ಸಲಇಂದಿರೇಶ ಶ್ರೀ ವೆಂಕಟ ನಿನ್ನ ಸಂದರುಶದಕೆ ಸಾಗಿ ನಾನಿಲ್ಲಿ ಅ.ಪ. ನಡೆದು ನಡೆಸುತ ನುಡಿದು ನುಡಿಸುತಅಡಿಗಡಿಗೆ ಕಾಪಾಡುತಒಡನೆ ಆಡುತ ಬಿಡದೆ ಕ್ಷಣವನುಸಡಗರದಿ ಕರೆತರಲು ನಾನಿಲ್ಲಿ 1 ಆಪ್ತ ಅನಿಮಿತ್ತ ವ್ಯಾಪ್ತ ಸರ್ವತ್ರಗುಪ್ತ ಗುಣಗಣಪೂರ್ಣನೆಪ್ರಾಪ್ತ ನೀನೆನಗಾಗಬೇಕೆಂದುವ್ಯಾಪ್ತಿ ನಿನ್ನದು ಹುಡುಕುತಲಿ ನಾ2 ಒಂದು ರೂಪದಿ ನಿಂದು ಎನ್ನಲ್ಲಿಚೆಂದದಿಂ ಕರೆತಂದೆ ಇಲ್ಲಿಒಂದರಿಯೆ ನಿನ್ನ ವಂದಿಸುವ ಬಗೆಬಂದೊದಗೊ ನೀನೆನ್ನ ವದನಕೆ 3 ಬಂದೆ ಬಂದೆ ನೀ ಬಂದಂತೆ ಕರ-ತಂದುದಕೆ ಫಲ ನೀನೆ ಬಲ್ಲೆಸಂದರುಶನ ನಿನಗೆ ನೀ ಮಾಳ್ಪಂದವನು ನೋಳ್ಪಾತುರದಿ ನಾ 4 ಏನು ಕೊಡಲಿಲ್ಲ ಏನು ಬೇಡಲಿಲ್ಲಏನು ಪಡೆಯಲೊ ಕರುಣಿಯೆನೀನು ಕೊಟ್ಟ ಸ್ವಾತಂತ್ರ್ಯದ ಫಲನಿನಗೆ ಅರ್ಪಿಸಬೇಕೆನುತ ಇಲ್ಲಿ 5 ರಕ್ಷಶಿಕ್ಷಕ ಮೋಕ್ಷದಾಯಕಸೂಕ್ಷ್ಮ ಘನ ಮಹಾವ್ಯಾಪಕಕುಕ್ಷಿಯೊಳು ಜಗದ್ಭರಿತ ಪೂರಿತಅಕ್ಷಯಫಲದಾಯಕ 6 ನಮೋ ನಮೋ ನಾಗಾರಿವಾಹನನಮೋ ನಮೋ ಸುರಸುಪ್ರಸನ್ನನೆನಮೋ ನಮೋ ಗೋಪಾಲವಿಠಲನಮಿಪ ಭಕ್ತರ ಸಲಹುವನೆಂದು 7
--------------
ಗೋಪಾಲದಾಸರು
ಬಂದೆನಿಲ್ಲಿಗೆ ಸಂದರುಶನಕ್ಕೆ ಬಂದೆನಿಲ್ಲಿಗೆನ್ನ ಮನದಿ ಬಂದು ನಿಲ್ಲೆಂದು ನಿನ್ನ ವಂದಿಸ್ವರವ ಬೇಡುವೆ ನಾ ನಂದನ ಸುಂದರ ಕೃಷ್ಣ ಬಂದೆನಿಲ್ಲಿಗೆ ಪ ಪಾಲಶರಧಿ ಆಲದೆಲೆಯಲ್ಯೋಗನಿದ್ರೆ ಮಾಡಿ ನಿನ್ನ ನಾಭಿಕಮಲನಾಳದಿಂದ ಆಗ ಅಜನ ಪಡೆದ ಹರಿಯೆ 1 ಸಾಗರವ ಬಿಟ್ಟು ನಾಗಶಯನ ಶೂರಸುತನಲ್ಲುದಿಸಿ ಯೋಗಿಗಳ ಹೃದಯಕಮಲ ಆಲಯವ ಮಾಡಿದ್ದ ದೊರೆಯೆ2 ಕಂದನಾಗಿ ಬಂದು ಕಾಳಿಂದಿ ದಾಟಿ ನಂದಗೋಕುಲ ವೃಂದಾವನದಿ ಗೋವುಕಾಯ್ದ ಇಂದಿರೇಶ ಅಜನಪಿತನೆ 3 ಅಷ್ಟಮಠದ ಯತಿಗಳಿಂದ ಮುಟ್ಟಿಪೂಜೆಗೊಂಬುವಂಥ ಶ್ರೇಷ್ಠರೊಳಗೆ ಶ್ರೇಷ್ಠ ನಿನ್ನುತ್ಕøಷ್ಟಮಹಿಮೆ ನೋಡಲೀಗ4 ಧ್ವಜ ವಜ್ರಾಂಕುಶ ರೇಖವುಳ್ಳ ಪದುಮಪಾದ ನೋಡಲೀಗ5 ದೊಡ್ಡ ಮುತ್ತು ವಜ್ರದ್ಹರಳಿನಡ್ಡಿಕೆ ಉಡಿದಾರ ಹೊಳೆಯೆ ಒಡ್ಯಾಣವನೆಯಿಟ್ಟ ಜಂಘÉ ಜಾನುದ್ವಯವ ನೋಡಲೀಗ6 ಉದರದಲ್ಲೀರೇಳುಲೋಕ ಅಡಗಿಸಿದನಂತಶಯನ ಪದುಮ ಪೊಕ್ಕಳಿಂದ ಬ್ರಹ್ಮನ ಪಡೆದ ಪರಮಾತ್ಮನ್ನ ನೋಡ7 ವಂಕಿ ಬಾಹುಪುರಿಗಳಿಂದ ಕಂಕಣ ಭೂಷಣಗಳೊಪ್ಪೆ ಕರವ ನೋಡ8 ನೀಲವರಣ ನಿನ್ನ ಬೆರಳು ಸಾಲು ಮಾಣಿಕ್ಯ ಮುದ್ರಿಕಿಂದ್ಹೊಳೆಯೆ ಲೀಲೆಯಿಂದ ಗಿರಿಯೆತ್ತಿದ ಗೋಪಾಲಕೃಷ್ಣ ನಿನ್ನ ನೋಡ 9 ವೈಜಯಂತಿ ತೋರ ಮುತ್ತಿನೆಳೆÀಗಳ್ಹೊಳೆವೋ ಶ್ರೀದೇವೇರಿಗಾಶ್ರಯವಾಗಿದ್ದಿ ್ವಶಾಲ ವಕ್ಷಸ್ಥಳವ ನೋಡ10 ಪಚ್ಚೆಪದಕ ಪಾರಿಜಾತ ಅಚ್ಚ ಮಲ್ಲಿಗೆ ತುಳಸಿಮಾಲೆ ಶ್ರೀ- ಕೌಸ್ತುಭ ಶೃಂಗಾರ ಕೊರಳ ಸಿರಿಯರಸು ನಿನ್ನ ನೋಡ11 ಮಧ್ವರಾಯರು ಕೈಯ ಬೀಸೆ ಎದ್ದು ಬಂದು ಹಡಗದಿಂದಿ ಲ್ಲಿದ್ದಾನುಡುಪಿಕ್ಷೇತ್ರದಿಯೆಂದು ಮುದ್ದುಕೃಷ್ಣನ ಮುಖವ ನೋಡ12 ಕ್ರೂರಕಂಸನ(ಅ)ಪ್ಪಳಿಸಿ ದ್ವಾರಾವತಿಯಲ್ಲಿದ್ದ ಅಷ್ಟಭಾರ್ಯೇರಿಂದ್ವಿ- ಹಾರ ಮಾಡಿದ್ವಾರಿಜಾಕ್ಷನ್ವದನ ನೋಡ 13 ಚಂದ್ರನಂತೆ ಹೊಳೆವೊ ಮುಖದಿ ದುಂಡು ಮುತ್ತಿನ ಮೂಗುತಿನಿಟ್ಟು ಕುಂದಣದ್ವಜ್ರ ಬಿಗಿದ ಕರ್ಣಕುಂಡಲವನ್ನು ನೋಡಲೀಗ14 ಕೇಸರಿ ಗಂಧ ಕಸ್ತೂರಿಯ ನಾಮ ತಿಲಕ ಒಪ್ಪೋವಜ್ರದರಳೆಲೆ ದೇವಕೀಸುತನ (ನೋಡ) 15 ಬಾಲಭಾಸ್ಕರ ಕೋಟಿಲಾವಣ್ಯರೂಪಗೆಲುವ ಕಾಂತಿ ಸಾಲುದೀವಿಗೆ ಸೊಬಗು ಕಮಲದಳಾಯತಾಕ್ಷ ಹರಿಯ ನೋಡ16 ಕೆಂಪುಹರಳು ಝಗ ಝಗಿಸುವೊ ಪಂಚರತ್ನದ ಕಿರೀಟ ಚಂಚಲಾಕ್ಷ ಹರಿಯ ಶಿರದಿ ಮುಂಚೆ ನೋಡಿ ಮುಗಿವೆ ಕೈಯ17 ಅಸುರರ್ವಂಚಿಸಮೃತ ಬೀರಿ ಪಶುವಾಹನಗೆ ಮೋಹ ತೋರಿ ಮೋಸದಿಂದ ಭಸ್ಮಾಸುರನ ನಾಶಮಾಡಿದ ನಾರಿ ನೋಡ18 ಲವಣಶರಧಿತೀರ ಮಧ್ವ ಸರೋವರದಲಿ ಶುದ್ಧಸ್ನಾನ ಪರಮ ಮಂತ್ರ ಜಪಿಸೋ ನಿನ್ನ ಶರಣು ಸುಜನಜನರ ನೋಡ19 ಉತ್ತಮ ವೈಕುಂಠ ಬಿಟ್ಟೀ ಉಡುಪಿಯಲ್ಲಿ ವಾಸವಾಗಿ ಭಕ್ತಜನರಭೀಷ್ಟಕೊಡುವೋ ನಿತ್ಯಮುಕ್ತ ನಿನ್ನ ನೋಡ20 ಶ್ರೀಶನೊಲಿಸಿದ್ಹನುಮ ಭಾರತೀಶನಾದ ಮಧ್ವರಾಯರ ದಾಸರ ದಾಸತ್ವಕೊಡು ಭೀಮೇಶಕೃಷ್ಣಂದಯದಿ ನೋಡ 21
--------------
ಹರಪನಹಳ್ಳಿಭೀಮವ್ವ
ಬಂದೆನ್ನ ಮನಮಂದಿರದಲಿ ನಿಲ್ಲೊ | ಹೇ ಶ್ರೀನಿವಾಸ ಬಂದೆನ್ನ ಮನಮಂದಿರದಲಿ ನಿಲ್ಲೊ ಪ. ಇಂದಿರೇಶ ವೈಕುಂಠದಿಂದ ನೀ ಬಂದು ಈಗ ಎನ್ನ ಹೃದಯ ಕಮಲದಿ ಅ.ಪ. ಜಗದಂತರಾತ್ಮ ನಿರ್ಮಲಾತ್ಮ | ನಿರ್ಗತ ದುರಿತಾತ್ಮ ನಿಗಮಾದಿಗಳೊಂದ್ಯ ನೀ ನಿತ್ಯಾತ್ಮ | ಜೀವಂತರಾತ್ಮ ಸುಗುಣವಂತ ನಿನ್ನ ಬಗೆ ಬಗೆ ಮಹಿಮೆಯ ಪೊಗಳಬಲ್ಲೆನೆ ನಾ ಖಗವಾಹನನೆ 1 ಅರಿಯೇನೋ ಅನ್ಯರ ಹರಿ ಸರ್ವೇಶ | ಹೃತ್ಕಮಲದಿ ವಾಸ ಪರಿಹಾರಗೈಸೊ ಈ ಭವಕ್ಲೇಶ | ನಂಬಿದೆ ಸರ್ವೇಶ ಅರಘಳಿಗೆ ನಿನ್ನಗಲಿರಲಾರೆನೊ ಸಿರಿಸಹಿತದಿ ನಿನ್ನರಮನೆಯಿಂದಲಿ 2 ಇಂದು | ನೀ ರಕ್ಷಕನೆಂದು ಕರಕರೆಗೊಳಿಪುದು ಧರ್ಮವೆ ನಿಂದು | ನೀ ಕಾಯಲಿಬೇಕಿಂದು ಸರಿಯಲ್ಲವು ಈ ತೆರದಲಿ ತೊರೆವುದು ಶರಣ ರಕ್ಷಕನೆಂಬೊ ಬಿರುದು ಪೊತ್ತಿಲ್ಲವೆ 3 ಎಂತೆಂತು ಸಹಿಸಲಿ ಈ ಭವಕ್ಲೇಶ | ಜೀವಾಂತರವಾಸ ಕಂತುಪಿತ ಎಣಿಪರೆÀ ಎನ್ನಯ ದೋಷ | ಸರಿಯಲ್ಲ ಸುರೇಶ ಇಂತು ನಿನಗೆ ಒಪ್ಪಿಸಿದರೊ ಗುರುಗಳು ಚಿಂತಿತಾರ್ಥ ನಿನಗೆನ್ನ ತರ ತಿಳಿಯದೆ 4 ಬೆಟ್ಟದ ಒಡೆಯ ಬೇಗನೆ ಬಾರೊ | ಹೃತ್ಕಮಲದಿ ತೋರೊ ಶ್ರೇಷ್ಠ ಶ್ರೀ ಗುರುಗಳ ಕರುಣವ ಬೀರೊ | ಸಲಹುವರಿನ್ಯಾರೊ ಮುಟ್ಟಿ ಭಜಿಪೆ ನಿನ್ನ ಶ್ರೇಷ್ಠ ಪದಂಗಳ ಸೃಷ್ಟೀಶ ಗೋಪಾಲಕೃಷ್ಣವಿಠ್ಠಲನೆ 5
--------------
ಅಂಬಾಬಾಯಿ
ಬನ್ನಿರಿ ಬನ್ನಿರಿ ದಾಸರೊಂದಾಗಿ ಚನ್ನ ಕೇಶವನರಮನೆಗೆ ಮುಂದಾಗಿ ಪ ಬನ್ನಿರಿ ಹರುಷದಿ ಪೋಗುವಾ ಬೇಗದಿ ಸನ್ನುತ ತಾತನ ಮೆನೆಯೊಳಗಿರುವಾ ಅ.ಪ. ನಿತ್ಯ ನೀಲಾಂಜನೆ ಪರಮ ಪಾವನನ ಭೃತ್ಯರ ಸಲಹುವ ಬರ ಶ್ರೀಧರನ ಪ್ರತ್ಯುಪಕಾರವ ಬೇಡದೆ ಸಲಹುವ ಸತ್ಯನಾರಾಯಣ ದೇವರ ಗುಡಿಗೆ 1 ನಗಧರ ರಂಗನ ಖಗವಾಹನನ ಜಗದೊಳು ಮೆರೆಯುವ ಗೋವಳ ಹರಿಯ ಅಗಣಿತಮದನನ ಸನಕ ವಂದಿತನ ಭೃಗಕುಲ ಶ್ರೇಷ್ಠನ ದೇವರ ಗುಡಿಗೆ 2 ತರಳರ ಸಲಹುವ ಭಜಕರ ಪೊರೆಯುವ ಪರಿಪರಿ ರೂಪದಿ ಮೆರೆಯುವ ಪರಿಯ ಪರಮಾತ್ಮನನ್ನು ಭಕ್ತಿಯಲಿ ಕೀರ್ತಿಸಲಾಗ ಸರಸದಿ ದಾಸರಿಗೊಲಿವ ಕೇಶವನ 3
--------------
ಕರ್ಕಿ ಕೇಶವದಾಸ
ಬರತಾರಂತ್ಹೇಳೆ ಬಾಲೆಕರೆಯಲು ಬಾಯಿಮಾತಿನಲೆಬರತಾರಂತ್ಹೇಳೆ ಪ. ರಂಗನ ಪಾದಕಮಲ ಭೃಂಗಳೆ ದ್ರೌಪದಿಮಂಗಳಾದೇವಿ ರುಕ್ಮಿಣಿ ಸಖಿಯೆಮಂಗಳಾದೇವಿ ರುಕ್ಮಿಣಿ ಕರೆಯಲು ಅಂಗಳದೊಳಗೆ ಬರುತಾಳೆ ಸಖಿಯೆ 1 ಇಂದಿರೇಶನೆಂಬೊ ಚಂದ್ರಗೆಚಕೋರ ಕುಂದದಂಥವಳ ಸುಭದ್ರಾ ಸಖಿಯೆಕುಂದದಂಥವಳೆ ಸುಭದ್ರೆ ಕರೆಯಲೆ ಬಂದಳು ಭಾಮೆ ಎದುರಲಿ ಸಖಿಯೆ 2 ನಗ ಧರನ ಮುಖವೆಂಬೊ ಮುಗಿಲಿಗೆನವಿಲಸುಗಣಿರೈವರ ಮಡದಿಯರುಸುಗುಣರೈವರ ಮಡದಿಯರು ಕರೆಯಲುಮೂರ್ಜಗದ ಮೋಹನೆಯರು ಬರ್ತಾರೆ ಸಖಿಯೆ3 ಹರಿಯಾಗ್ರಜ ತನ್ನ ಹಿರಿಯರ ಕೂಡಿಕೊಂಡುಬರುವನು ಪರಮ ಹರುಷದಿ ಸಖಿಯೆಬರುವನು ಪರಮ ಹರುಷದಿ ಈ ಮಾತುದೊರೆಗಳಿಗೆ ಹೇಳೆ ವಿನಯದಿ ಸಖಿಯೆ4 ಎಲ್ಲರೂ ಮುತ್ತುರತ್ನ ಝಲ್ಲಿ ವಸ್ತ್ರಗಳಿಟ್ಟುಚಲುವ ಪ್ರದ್ಯುಮ್ನನ ಒಡಗೂಡಿ ಸಖಿಯೆಚಲುವ ಪ್ರದ್ಯುಮ್ನನ ಒಡಗೂಡಿ ಐವರಿಗೆ ಮಲ್ಲಿಗೆ ತೂರಾಡಿ ಕರೆಯಲಿ ಸಖಿಯೆ5 ಅಷ್ಟೂರು ಬಗೆಬಗೆ ಪಟ್ಟಾವಳಿಯನುಟ್ಟುಧಿಟ್ಟ ಸಾಂಬನ ಒಡಗೂಡಿಧಿಟ್ಟ ಸಾಂಬನ ಒಡಗೂಡಿ ಐವರಿಗೆ ಬುಕ್ಕಿಟ್ಟು ತೊರ್ಯಾಡಿ ಕರೆಯಲಿ ಸಖಿಯೆ6 ಮಾನಿನಿ ಮಾನಿನಿ ಸಹಿತಾಗಿ ರಮಿಅರಸುಮಾನದಲಿ ಐವರನ ಕರೆಸುವ ಸಖಿಯೆ7
--------------
ಗಲಗಲಿಅವ್ವನವರು
ಬರದು ಬಂದು ದೂರಬ್ಯಾಡರೇ ನೀವೆಲ್ಲಾ ಹರಿಯಾ ನೆಲೆ ತಿಳಿಯಲು ಅಳವಲ್ಲಾ ದುರಳತನ ನಡಿಗೆಂದು ಇವಸಲ್ಲಾ 1 ಮುನಿನೆಂದು ಗುರುತ ವಿಡ ಬ್ಯಾಡಿರಮ್ಮಾ ಮನುಜರಂತೆ ಲೀಲೆ ದೋರುವ ರೀಗಮ್ಮಾ ಮುನಿಮನೋಹರ ದಾಯಕ ಪರಬೊಮ್ಮ ಘನ ಪುಣ್ಯದಿಂದ ಶಿಶು ವಾದನಮ್ಮ 2 ಹುಟ್ಟುತಲಿ ಸ್ವಹಿತದ ನುಡಿಯಾಡಿ ನೆಟ್ಟ ನೆವೆಯ ಮುನಿಗೆ ಹಾದಿಬೇಡಿ ಮುಟ್ಟಿ ಗೋಕುಲಕ ಬಂದದಯ ಮಾಡಿ ಇಷ್ಟರೊಳು ತಿಳಿಯ ಬಾರದಿನ್ನು ನೋಡಿ 3 ಚಿಕ್ಕತನದಲಿ ಮೊಲೆಗುಡ ಬಂದಾ ರಕ್ಕಸಿಯ ಅಸು ಹೀರಿದಾವ ಕೊಂದಾ ಕಕ್ಕಸದ ಕಾಳಿಂಗ ನೆಳೆದು ತಂದಾ ಮಕ್ಕೂಳಾಟಿಕೆ ಇದೇನು ನೋಡಿಛಂದಾ4 ನಿರುತ ತಮ್ಮಾ ತಮ್ಮ ಮನಿಯೊಳಿಹನೆಂದು ಹರಿಯಗುಣ ಹೇಳುವಿರಿ ಎಲ್ಲ ಬಂದು ಅರಿತು ನೋಡಲು ಒಬ್ಬ ಬಹುರೂಪ ವಿಡಿದು ಚರಿಪಗುರು ಮಹಿಪತಿಸ್ವಾಮಿಯಿಂದ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು