ಒಟ್ಟು 2793 ಕಡೆಗಳಲ್ಲಿ , 119 ದಾಸರು , 2185 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನ್ನಿಸು ಅಪರಾಧ ಮನ್ಮಥ ಜನಕನೆ ಪ ಸನ್ನುತ ಗುಣಸಂಪನ್ನ ಮಹಿಮ ತಾ ರುಣ್ಯ ಪಯೋನಿಧಿ ಬಿನ್ನಪ ಲಾಲಿಸಿ ಅ.ಪ ಅಮರ ಶಿರೋಮಣಿ | ಆಶ್ರಿತ ರಕ್ಷಾಮಣಿ ರಮಣಿ ರುಕ್ಮಿಣಿ ಮುಖಕಮಲ ಗಗನಮಣಿ ನಮಿಪೆ ಭಕ್ತರ ಚಿಂತಾಮಣಿ ತವ ಚರಣಕೆ ಮಣಿಯದೆ ಮೂಢ ಶಿಖಾಮಣಿಯಾದೆನು 1 ಕಾಮಜನಕ ಪರಿಪೂರ್ಣ ಕಾಮ | ಭಕ್ತ ಕಾಮಧೇನು ಕೋಟಿಕಾಮ ಲಾವಣ್ಯನೆ ಶ್ರೀ ಮನೋಹರ ಕೌಸ್ತುಭಮಣಿಹಾರ ನಿ ಮಣಿ ಅಧಿಕವೆ 2 ಶರಣ ಶರಣ್ಯನೆ ಶಾಶ್ವತ ಸುಖದನೆ ಪರಮ ಪುರುಷನೆ ಪಾವನಚರಿತ ಕರಿಗಿರೀಶನೆ ಕರುಣಾಭರಣನೆ ಕರಿವರದನೆ ಕರುಣವ ತೋರಿಸಿ 3
--------------
ವರಾವಾಣಿರಾಮರಾಯದಾಸರು
ಮನ್ನಿಸೆನ್ನ ಮಧುಸೂದನ ಪ. ಮದನನಯ್ಯ ಮೋಹನಕಾಯಉನ್ನತಗುಣನಿಲಯ ಉಡುಪಿನ ಕೃಷ್ಣರಾಯ ಅ.ಪ. ಶ್ರುತಿಗಳ ತಂದೆ ಮುನ್ನ ಸುರಮುನಿಗಳ ಮನ-ಕತಿ ಹರುಷವ ಕೊಟ್ಟೆ ಅಗಣಿತಗುಣರನ್ನಯತಿಗಳ ಪಾಲಿಸಿದೆ ಮುಂದುವರಿವದಿತಿಜರ ಸೋಲಿಸಿದೆ ಈ ಮಹಿಯೊಳುಮತಿವಂತರ ಪೊರೆದೆ ಮಹಿಮೆಯಿಂದ ಮೆರೆದೆ1 ಅಚ್ಚಹಾರಶೋಭಿತ ಕಂಠ ಆಶ್ರಿತರಿಗೆ ನೀ ನಂಟಮೆಚ್ಚಿದ ಪಾರ್ಥನ ಮಿತ್ರನೆನಿಸಿದೆ ಸುಚರಿತ್ರಮೆಚ್ಚಿದ ನಿನ್ನಯ[ಭಕ್ತÀ್ತ]ವೈಕುಂಠದಮುಚ್ಚಳ ತೆಗೆಸಲು ಶಕ್ತ ಅಚ್ಚುತ ನಿನ್ನಅರ್ಚಿಸಿದವ ಕೃತಾರ್ಥ ಅವನೆ ಸರ್ವಸಮರ್ಥ2 ಎಂದೆಂದು ನಿನ್ನವರೊಳು ಎನ್ನ ಕೂಡಿಸೊ ಕೃಪಾಳುವಂದ್ಯ ಗರುಡನ ಸ್ಕಂಧವೇರಿ ಬಹ ಗೋವಿಂದತಂದೆ ನೀನೆ ತಾಯಿ ನೀನೆ ಹಯವದನಬಂಧು ನೀನೆ ಬಳಗ ನೀನೆ ಮತ್ತದರಿಂದಕುಂದುಮಾಡುವುದು ಬಿಡೋ ಕಂಡು ಕರುಣವ ಮಾಡೋ 3
--------------
ವಾದಿರಾಜ
ಮರುತನಾತ್ಮಜ ನಿನ್ನ ಚರಣ ಕಮಲಯುಗ್ಮ ನೆರೆನಂಬಿದವ ಧನ್ಯನೊ ಪ ಧರೆಯೊಳಗೆ ರಘುವರನ ಶೇವಿಸಿ ಶರಣು ಜನರನು ಪೊರೆವುದಕೆ ಭೂಸುರಗಣದಿ ರಾಜಿಸುವ ರಾಯಚೂರ ಪುರದ ಕೋಟೆಯೊಳಿರಲು ಬಂದಿಹ ಅ.ಪ ಬಹುಭರದಿವಾರಿಧಿ ಲಂಘಿಸಿ ಹರಿಭಟನೆಂದು ತಿಳಿಸಿ ತ್ವರದಿ ರಾಮನಿಗರ್ಪಿಸಿ ಧೀರನೆ ಸುರವಿನುತ ತವ ಪರಿಮಳವಿರಚಿಸಿದ ಗುರುವರರ ನೋಡಿದೆ 1 ಗೋವಿಂದನಂಘ್ರಿಯ ಭಜಿಸಿ ಮನದಿ ಭಾವಿಸಿ ನಂದಸುತನಿಗರ್ಪಿಸಿ ಪ್ರಥಮಾಂಗನೆನಿಸಿ ಸಮರ್ಥ ತವಪದ ಕೊಂದಿಸುವೆ ಮನ ಮಂದಿರದಿ ಯದುನಂದನನ ಪದದ್ವಂದ್ವ ತೋರಿಸು 2 ಪುಟ್ಟಿಯತಿರೂಪವನೆಧರಿಸಿ ಕ್ಷಿತಿಯೊಳಗಖಿಲ ದುರ್ಮತಗಳೆಂಬುವ ಮೇಘತತಿಗೆ ಮಾರುತನೆನಿಸಿ ಪ್ರತಿಪಾದ್ಯನೆಂದು ತಿಳಿಸಿ ಸುಖ ತೀರ್ಥರೆನಿಸಿ ಅತಿಹಿತದಿ ಸತ್ಪಥವ ತೋರಿದಿ ಅತುಳ ಮಹಿಮನೆನುತಿಸುವೆನು ಸತತ ಪಾಲಿಸೋ 3 ತನುಮರೆಯಲು ಧುರದಿ ಜೀವನವಿತ್ತಕಾರಣದಿ ವನಜನಾಭನು ದಯದಿ ತನ್ಮೂರ್ತಿ ಸಹಿತದಿ ತಟಿತ್ಕೋಟಿ ಸೇವಕಜನರ ಸಲಹುವಿ ಕೊಳುತಲಿ ಮೆರೆವದೇವನೆ 4 ಶಿರದಿ ಮುಕುಟ ಮಂಡಿತ ಮೂರ್ತಿ ದರುಶನವನೆ ಕೊಳ್ಳುತ ವಿಸ್ತರ ಮಂಟಪದಿರಾಜಿತ ಸುರಪೂಜಿತ ಕÀರುಣ ಶರಧಿಯೆ ಪೊರೆವದೆನ್ನನು ಶರಣು ಜನರಘ ಕರುಣವ ಪಡೆದ ಧೀರನೆ 5
--------------
ಕಾರ್ಪರ ನರಹರಿದಾಸರು
ಮರುಳನಾಗಿ ಬಂದು ತೀರ್ಥಪುರಕೆ ಸೇರಿದೆ ಕರಸಿಕೊಳ್ಳೊ ಮನೆಗೆ ಬೇಗ ಕರುಣವಾರಿಧೆ ಪ. ಸರಸಿಜಾದಿ ವಂದ್ಯ ನಿನ್ನ ಚರಣಕಮಲವ ಮರಳಿ ಮರಳಿ ಬೇಡಿಕೊಳುತ ಮಹಿಮೆ ಕೇಳುತ ಸ್ವರಗಳಿಂದ ಪೊಗಳುತಿರುವ ಸುಖವ ತ್ಯಜಿಸುತ 1 ಮೂಲೆ ನಾಲ್ಕರಲ್ಲಿ ಪುಷ್ಪಮಾಲೆಯಿರಿಸುತ ಮೇಲುಗಟ್ಟು ಬಿಗಿದು ದೀಪಮಾಲೆ ಬೆಳಗುತ ಗಾಳಿದೇವನೆಂದ ತತ್ವಮೂಲ ತಿಳಿವುತ ಶ್ರೀಲಲಾಮ ನಿನ್ನ ಪೂಜೆ ಮಾಡದೇಳುತ 2 ಇಂದಿರೇಶ ಎನ್ನ ತಪ್ಪನೊಂದ ನೋಡದೆ ತಂದೆ ಎನ್ನ ಕರಸಿಕೊಳ್ಳೊ ಹಿಂದೆ ದೂಡದೆ ಚಂದನ ಸ್ವರೂಪ ಪರಾನಂದ ಕಾರಣಾ ಭುಜಗ ಗಿರೀಶ ಭಕ್ತಭೂಷಣ 3
--------------
ತುಪಾಕಿ ವೆಂಕಟರಮಣಾಚಾರ್ಯ
ಮರೆತು ಬಿಡುವರೇ ಸ್ವಾಮಿ ಪ ಕರಪಿಡಿದೆನ್ನನು ಕಾಯೊ ಮಾರುತಿಅ.ಪ. ಸೀತೆಗೋಸುಗ ಪೋಗೀ ಶಿರಧಿಯದಾಟಿ ನೀ ಮೋದ ಪಾತಕಿ ರಾವಣನಾ ಪುರದ ದಹಿಸಿ ಬಂದು ಚೂಡಾಮಣಿಯ ತಂದು ಶ್ರೀ ರಾಮರಿ ಗರ್ಪಿಸಿದೇ 1 ಪರಮಾತ್ಮಾ ಶ್ರೀ ಕೃಷ್ಣಗರ್ಪಣೆ ಮಾಡಿದೆ 2 ಮಧ್ವರಾಯರೆಂಬೊ ಪೆಸರಿನಿಂದಾ ಅದ್ವೈತವಾದಿಗಳ ಖಂಡಿಸಿ ಮೆರೆದೇ ಅದ್ಭುತ ಮಹಿಮ ವೇಂಕಟವಿಠಲನ ಪಾದ ಪದ್ಮಂಗಳ ನಿರುತ ಸೇವಿಸುತಿರಾ 3
--------------
ರಾಧಾಬಾಯಿ
ಮರೆಯದಿರು ಹರಿಯಮರೆವರೆ ಮೂರು ಲೋಕದ ದೊರಿಯ ಪ ಮದಗಜ ಹರಿಯೆಂದು ಕರೆಯಲುಒದಗಿ ಆಕ್ಷಣ ಬಂದುಮುದದಿ ನಕ್ರನ ಕೊಂದು ಸಲ-ಹಿದ ಸದ್ಭಕ್ತರ ಬಂಧುಹದುಳ ಪ್ರಹ್ಲಾದನ ಹೆದರಿಸಿದಸುರನಉದರವ ಬಗೆದಂಥದುಭುತ ಮಹಿಮನ1 ನಾರಿಯು ತನ್ನ ಕರೆದ ಮಾತ್ರದಿಸೀರೆಯ ಮಳೆಗರೆದಕ್ರೂರ ಖಳನ ತರಿದು ಆ ಪಾಂಡವರಆರಣ್ಯದಿ ಪೊರೆದಗಾರಾದಜಮಿಳ ನಾರಗ ಎನಲುಪಾರಗಾಣಿಸಿದಪಾರ ಗುಣನಿಧಿಯ 2 ದುರಿತ ಭವ ಪಾಶಾ - ಅವಗೆಂದೆಂದಿಗಿಲ್ಲ ಕ್ಷೇಶಾತಂದೆ ಕದರುಂಡಲಗಿ ಹನುಮಯ್ಯನೊಡೆಯಚಂದಾದಿಕೇಶವನ ನೆನೆದವರೆಂದಿಗು ಧನ್ಯರು3
--------------
ಕನಕದಾಸ
ಮರೆಯದಿರೆಲೊ ಮನುಜಾ ಮಾಧವನನ್ನು ಮರೆಯದಿರೆಲೋ ಶುದ್ಧ ಮರುಳೆ ಮಾತನು ಕೇಳು ಪರಿಪರಿಯಲಿ ನಮ್ಮ ಪೊರೆವ ಕಾರುಣಿಕನ ಪ. ತನ್ನ ಸೇವೆಗೆ ಸಾಧನವಾಗಿಹ ದೇಹ- ವನ್ನು ಪಾಲಿಸಿದವನ ಯಿನ್ನು ನೀ ತಿಳಿಯದೆ ಅನ್ಯ ದೈವಗಳನ್ನು ಮನ್ನಿಸಿ ಮನದಣಿದನ್ನ ನಾಯಕನನ್ನು 1 ಹಸ್ತ ಪಾದಾದಿಗಳ ಕೊಟ್ಟದರಿಂದ ವಿಸ್ತರಿಸಿರುವಾನಂದ ತೋರುವ ಸುರ ಮಸ್ತಕ ಮಣಿಯನು ಮರೆತು ಮೂಢರ ಸೇರಿ ಬಸ್ತಕನಂತೆ ನಿರಸ್ತನಾಗದೆಯೆಂದು 2 ಮನೆಯಲಿ ನಿಲಿಸಿರುವ ವಾಕ್ಕಾಯಕರ್ಮ ಮನದಲಿ ತುಂಬಿರುವ ನಮ್ಮಯ ಸರ್ವ ವನು ತನಮನ ತಾನೆ ನೆನೆದು ಪಾಲನೆ ಗೈವ ವನಜನಯನ ಲಕ್ಷ್ಮಿಯಿನಿಯನ ಮಹಿಮೆಯ 3 ದುರಿತರಾಶಿಯನರದು ದುರ್ ಹೃದಯರ ತರಿದು ಕಾಲಿಂದಲೊದೆದು ಸಿರಿ ಸಹಿತವಾಗಿ ನಮ್ಮಲ್ಲಿರುವನ ಸರ್ವಾಮಯ ಹರ ಪದದಲ್ಲಿ ಭಾರವಿರಿಸು ವಿಚಾರಿಸು 4 ಬಿಡು ಬಿಡು ಭ್ರಾಂತಿಯನು ಮುರಾಂತಕನ- ಲ್ಲಿಡು ನಿನ್ನ ಚಿಂತೆಯನು ಕಡಿವನು ವೈರಿಗಳ ಕೊಡುವನು ಶುಭಗಳ ಒಡೆಯ ವೆಂಕಟಪತಿ ತಡಿಯ ತೋರುವನೆಂದು 5
--------------
ತುಪಾಕಿ ವೆಂಕಟರಮಣಾಚಾರ್ಯ
ಮಲಗಲೇತಕೆ ಹರಿಯೆ | ಚಲುವ ಚನ್ನಿಗ ದೊರೆಯೆ ಪ ಎಲರುಣೀವರ ಶಯ್ಯ | ಬಳಲಿಕೇಕಯ್ಯಾ ಅ.ಪ. ವೇದ ಕದ್ದನ ಹರನೆ | ಭೂಧಾರಿ ಗಿರಿಧರನೆಭೂದರಿಸಿ ಭೊಮ್ಮನಿಗೆ | ಆದರದಿ ಕೊಟ್ಟವನೇ |ಭಾದಿಸೇ ಭಕ್ತ ಪ್ರ | ಹ್ಲಾದನನ ಕಾಯ್ದವನೆಮೋದದಿಂದಲಿ ಬಲಿಯ | ಪಾದವಾ ಮೆಟ್ಟಿದನೆ 1 ಗಂಡು ಗೊಡಲಿಯ ಪಿಡಿದು | ಭಂಡ ಭೂಭುಜ ತರಿದುಲಂಡ ರಾವಣ ಶಿರ | ಚೆಂಡಾಡಿದ ಧೊರೆಯೇಕಂಡ ಕಂಡವರ ಮನೆ | ಗಂಡಲೆದು ಪಾಲ್ಮೊಸರಉಂಡುಂಡು ಚೆಲ್ಲಾಡಿ | ಭಂಡು ಮಾಡಿದೆ ಕೃಷ್ಣ 2 ಮುಪ್ಪೊರರ ಸತಿಯರನು | ಅಪ್ಪಿ ವ್ರತ ಭಂಗವನುತಪ್ಪದೇ ಮಾಡಿ ಹಯ | ವಪ್ಪಿ ಏರ್ದವನೇಇಪ್ಪರಿಯ ಚರ್ಯ ದಿಂ | ಸೊಪ್ಪಾಗಿ ಮಲಗಿದೆಯೋಗುಪ್ತ ಮಹಿಮನೆ ದೇವ | ಅವ್ವ ಶ್ರೀರಂಗ ಪುರಗ 3 ಕ್ಲೇಶ 4 ಪೂರ್ವ ವಾಹಿನಿ ಎನಿಪ | ಕಾವೇರಿ ತೀರಗನೆಪೂರ್ವದಿವಿಜರ ಹರನೆ | ಸಾರ್ವಭೌಮಾಊರ್ವಿ ಯೊಳ್ಪೆಸರಾದ | ಪಾರ್ವ ಗೌತಮ ವರದಕೋರ್ವೆ ತವ ಚರಣ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಮಲ್ಲಮರ್ಧನ ರಾಣಿ - ಮಹ ಲಕ್ಷುಮೀ ಪ ಖುಲ್ಲ ಜನರೆದೆದಲ್ಲಣೆಯೆ | ಕೊಲ್ಲಾಪುರ ನಿಲಯೆ ಅ.ಪ. ಪ್ರಕೃತಿ ಚೇತಾತ್ಮೆ ಜಡ | ಪ್ರಕೃತಿ ದ್ರವ್ಯದ ಕಾರ್ಯವಿಕೃತಿ ಗೊಳಿಸುತ ಮೊದಲು | ವೈಕೃತವು ತದನಂತರಾ |ವ್ಯಕುತಿ ಗೈಯುತ ಲಿಂಗ | ಪ್ರಕೃತಿ ಕಾರ್ಯವ ಮಾಡಿಸುಕೃತ ತ್ರಿವಿಧರ ಸಹಜ | ಪ್ರಕೃತಿ ಶಬ್ದನಿಗೀವೇ 1 ಪರಿಭವ ಕಾರ್ಯನೀ ಮಾಳ್ಪೆ ಪ್ರಜ್ಞಾಂತ | ಪ್ರೇಮ ರೂಪದಲೀಈ ಮಹತ್ತುಪಕಾರ | ಸಾಮಸನ್ನುತ ಹರಿಯನೇಮದಿಂದಲಿ ಗೈವ | ಭಾಮೆಗಾ ನಮಿಪೇ 2 ಹರಿಕಾರ್ಯ ಸತ್ಸಾಧ್ಯೆ | ವಿರಜೆ ರೂಪದಿ ಹರಿಯೆ ||ವರ ಮಂದಿರಾವರಣ | ನೆರೆ ವಿರಚಿಸೀ |ಸರುವ ಸಜ್ಜೀವ ತವ | ಸರಿತದೋಲ್ ಅವಭೃತವವಿರಚಿಸಲು ಜಡ ಪ್ರಕೃತಿ | ಹರಿಸುವೆಯೆ ದಯದೀ 3 ಶ್ರೀ ಸಿತ ದ್ವೀಪಾದಿ | ಆ ಸುರೂಪವ ತಾಳಿವಾಸುದೇವನ ಸೇವೆ | ಆಶೆಯಲಿ ಗೈವೇ |ಈಸು ತವ ಮಹಿಮೆಯನು | ತೋಷದಲಿ ಸ್ತುತಿಪರಭಿಲಾಷೆ ಸಲಿಸುತ ತೋರ್ಪೆ | ವಾಸುದೇವನ ರೂಪ 4 ಸತಿ ಪತಿ ತೋರೇ 5
--------------
ಗುರುಗೋವಿಂದವಿಠಲರು
ಮಹಾಲಕ್ಷ್ಮಿ ಸ್ತೋತ್ರ ವೆಂಕಟಾದ್ರಿ ನಿಲಯನ ಪಂಕಜನಾಭನ ತೋರವ್ವ ಲಕುಮಿ ಪ ವಸುದೇವ ದೇವಕಿ ಕಂದಾ - ನಮ್ಮಶಶಿಮುಖಿಯರೊಡನೆ ಆನಂದಾಪಶುಗಳ ಕಾಯ್ದ ಗೋವಿಂದ - ನಮ್ಮಬಿಸಜನಾಭ ಮುಕುಂದಾ 1 ಸಾಮಜರಾಜ ವರದಾ - ಬಲುಪ್ರೇಮದಿ ಭಕುತರ ಪೊರೆದಾಆ ಮಹಾ ದಿತಿಜರ ತರಿದಾ - ನಿಸ್ಸೀಮ ಮಹಾಮಹಿಮನಾಗಿ ಮೆರೆದ - ನಮ್ಮ 2 ಉರಗಗಿರಿಯಲಿಪ್ಪ - ಅಂದುಮರುತನ ಹೆಗಲೇರಿ ಬಪ್ಪಶರಣರಿಗೊರವಿತ್ತ ತಪ್ಪಸಿರಿ ಮೋಹನ ವಿಠ್ಠಲ ತಿಮ್ಮಪ್ಪ - ನಮ್ಮಪ್ಪನ 3
--------------
ಮೋಹನದಾಸರು
ಮಹಾಲಕ್ಷ್ಮಿದೇವಿ ಪ ಆಹಾ ನಿನ್ನ ಮಹಿಮೆ ಹೊಗಳಲಳವೆ ಅ.ಪ ಮೂಲ ಪ್ರಕೃತಿ ಮಹಾಮಾಯೆ ನಿನ್ನ ಲೀಲೆಯಲ್ಲವೆ ಸಮಸ್ತವೂ ಸಾಲದೆಂಬುವ ದುಸ್ವಭಾವ ಬಿಡಿಸಮ್ಮ 1 ಕ್ಷೀರಸಾಗರಾತ್ಮಜೇ ಭಜೇ ಅಂ ಭೋರುಹಾಕ್ಷನರ್ಧಾಂಗಿ ಸಾರಸ ವೈರಿಯ ತಂಗಿ ಶುಭಾಂಗಿ 2 ತುತ್ತುಮಾಡಿವುಣಿಸಮ್ಮ ಮತ್ತಾರನು ಕಾಣೆಮ್ಮ ನಮ್ಮಮ್ಮ 3 ತಾನೆ ಶ್ರೇಷ್ಟನೆಂಬ ಹೀನರ ಸಂಗವು ಜ್ಞಾನಿಗಳಿಗೆಯಿದು ಹಾಸ್ಯವಲ್ಲದೆ 4 ನಿನ್ನ ಪತಿಯಾದ ಗುರುರಾಮ ವಿಠಲನ ಘನ್ನ ಚಿತ್ತಗನುಸಾರ ಮನ್ನಿಸಿ ಕಾಯಿ ನೀ ನೆನ್ನನು ನಿಜದೆÉ ಮಹಾಲಕ್ಷ್ಮಿದೇವಿ 5
--------------
ಗುರುರಾಮವಿಠಲ
ಮಹಾಲಕ್ಷ್ಮೀ ಅಷ್ಟಕಂ ಪಂಕಜ ಮಾಲಿನಿಪಾಹಿಮಾಂ ಕರವೀರವಾಸಿನಿ ಪಾಹಿ ರಾಘವ ಕಾಮಿನಿ ಪ ಚಂದ್ರಮಂಡಲ ಹಾಸ ಸನ್ಮುಖ ಮಂದಹಾಸ ಸುಶೋಭಿತೆಸಿಂಧುರೇಂದ್ರ ಕರಾಮೃತೌಘ ಸುಗಂಧ ಬಿಂದು ನಿಷೇಚಿತೆಕುಂದರೋಜ್ವಲ ಇಂದ್ರನೀಲ ಮಣೀಂದ್ರಹಾರ ವಿಲಾಸಿತೇಬಂದ್ರಿರಾಜಸುತೇವ ಸೂನುಮನಾದಿ ಬಂಧ ವಿವರ್ಜಿತೇ 1 ಸಾಂಬ ಸುಶಾಂತಿ ಕಾಂತಿ ಸಹೋದ್ಭವೆ 2 ಚಾರು ಸುರಾಳಿ ಮೌಳಿಗ ಹಸ್ತತೇ 3 ತಪ್ತಕಾಂಚನ ನೂಪುರೋಜ್ವಲ ರಕ್ತಪಾಲ ಸರೋರಹೆಚಿತ್ರಪೇಟ ಪಟೋಲ್ಲ ಸತ್ಕಟೆ ರತ್ನ ಕಾಂಚಿ ಗುಣೋದ್ಭವೇನಿತ್ಯತೃಪ್ತ ನಿರಂಜನೈಸುರ ಮೃತ್ಯುಮೋಹನ ವಿಗ್ರಹೆತತ್‍ಕೃಪೈವಪು ಮೃತ್ಯುಸಾಧನ ಸಪ್ತ ಮೋಡಿಹ ವಿದ್ಮಹೆ 4 ಅಂಬಜಾವಕ ಲಕ್ಷ್ಮೀ ಮೇಷ ಕದಂಬಿನೀನಿಲಯಸ್ಥಿತೆಕಂಬುಕಂಜರ ತಾರಿಬೇಟ ಕರಾಂಬು ಸಂಭವ ಸೇವಿತೆಶಂಭರಾರಿ ಸುತಾಂಘ್ರಿಪಂಕಜೆ ಬಿಂಬರಾಹಿ ಭೂಸುತೆಸಾಂಬಹೀಂಬ ನಿಹಾ ಸುದರ್ಶಯ ಜಂಜವೈರಿನಿ ಸೇವಿತೆ 5 ತಲ್ಪ ಮಂದ ಸೌಭಗ ಶಾಲನಂವಂದ್ಯ ಮಾನ ವಿದೇಂದ್ರ ದೈವತ ವೃಂದ ವೈಭವದಾಯಿನಂಸುಂದರಾಂಗಿಣಿ - ನಿವೇದಗೇಹ ಭವಾಂಧಿ ಪೋಪನೀ ಶೋರ್ಪಣಂ 6 ಜೀವವರ್ಗ ಹೃದಾಲಯ ಸ್ಥಿತ ಭೂವರಾಹಸಹಾನನೇಪಾವನೀತಾಹೇ ವಸೇದ್ರುಮ ಹಾನು ಭಾವ ಶಿಖಾಮಣಿಹಾವಭಾವ ವಿಲಾಸಿನಾಕಿ ಸುವಾಸಿನಿನುತ ಸದ್ಗುಣಿಸೇವಕೇಯ ವಿಭಾವಿತಾಖಿಲ ಭಾವಕಾಯದ ಶಿಕ್ಷಣಿ 7 ಇಂದಿರೇಶ ಸತೀಂದುಮೌಳಿ ಕರಾರವಿಂದ ನಿಷೇವಣೇಚಂದ್ರಮಾರುತರೇಂದು ಸೈಂದವವೀಂದ್ರ ಪೂರ್ವಸು ವಾಹನೇಅಂಧಕೂಪ ಸಮಾನ ದುರ್ಭವ ಬಂಧ ಸೇಘನೀ ಪೋಷಿಣಿನಂದನಂದನ ಮಾಸುದರ್ಶಯ ಬಂಧುರಾಮೃತ ಭಾಷಿಣಿ 8
--------------
ಇಂದಿರೇಶರು
ಮಹಿಮನಿಗೆ ನಮಸ್ಕಾರ ಬ್ರಹ್ಮಾನಂದದಿ ಸಮರಸವಾದ ಸಪ್ರೇಮಿಗೆ ನಮಸ್ಕಾರ ಕಾಮಕ್ರೋಧಗಳೆಂದು ನಿಷ್ಕಾಮದಿ ನೇಮದಲಿಹಗೆ ನಮಸ್ಕಾರ ಶಮೆದಮೆದಲಿ ಸಮದೃಷ್ಟಿಗೂಡಿಹ ಸ್ವಾಮಿ ಸೇವಿಗೆ ನಮಸ್ಕಾರ 1 ಆಶಿ ತಿಳಿದು ನಿರಾಶೆಯೊಳಿಹ ಉದಾಸಿಗೆ ನಮಸ್ಕಾರ ಸುಮಿಲೊಂತಕಗೆ ನಮಸ್ಕಾರ ಸೂಸಿ ತುಳುಕದೆ ಕಾಸಿನಾಶೆಗೆ ಹರಿದಾಸರಿಗೆ ನಮಸ್ಕಾರ 2 ಹೆಚ್ಚು ಕುಂದನೆ ರಚ್ಚಿಗೆ ತಾರದ ಸ್ವಚ್ಛಲಿಹಗೆ ನಮಸ್ಕಾರ ಕಚ್ಚಿ ಕೈ ಬಾಯಿಲಿ ಹುಚ್ಚಾಗದ ನಿಶ್ಚಲೇಂದ್ರಿಗೆ ನಮಸ್ಕಾರ ಮತ್ಸರಳಿದು ನಿರ್ಮತ್ಸರೊಳಿಹ ಸುನಿಶ್ಚಿತನಿಗೆ ನಮಸ್ಕಾರ ಮೆಚ್ಚಿ ಘನದೊಳು ಇಚ್ಛೆಲಿಹ ಮಹಾ ಎಚ್ಚರಿಗೆ ನಮಸ್ಕಾರ 3 ನಾ ನೀನೆಂಬುವ ನುಡಿ ನೀಗಿನ ಅನುಭವಿನಗೆ ನಮಸ್ಕಾರ ಖೂನ ತಿಳಿದಿಹ ಸ್ವಾನುಭವದ ಸುಙÁ್ಞನಿಗೆ ನಮಸ್ಕಾರ ತಾನೆ ತಾನಾಗಿಹ ಘನದೊಳು ನಿರಾಶನಿಗೆ ನಮಸ್ಕಾರ ಮೌನದಲಿ ನಿಜಸ್ಥಾನದಲಿರುವ ಸುದಾನಿಗೆ ನಮಸ್ಕಾರ 4 ಗರ್ವವಳಿದು ಸರ್ವವೇ ನಿಜ ತಿಳಿದ ನಿಗರ್ವಗೆ ನಮಸ್ಕಾರ ತೋರ್ವ ಕರದೊಳು ಅರ್ವನುಭವನಿರ್ವಾಣಿಗೆ ನಮಸ್ಕಾರ ನಿರ್ವಾಹದ ಸುಪರ್ವಾಣಿಯ ಫಲ ಇರ್ವನಿಗೆ ನಮಸ್ಕಾರ ಸರ್ವಸುಖ ಸುರಿಸಿದ ಮಹಿಪತಿ ಶ್ರೀಗುರುವಿಗೆ ನಮಸ್ಕಾರ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಹಿಮೆ ನೋಡಿರೈ ರಾಯರ ಮಹಿಮೆ ಪಾಡಿರೈ ಪ ಜಲಜನಾಭನೊಲುಮೆ ಪಡೆದು ಇಳೆಯೊಳು ಪ್ರಖ್ಯಾತರಾದ ಅ.ಪ ರಾಘವೇಂದ್ರ ಯತಿಗಳೆಂದು ಬಾಗಿ ನಮಿಸುವವರ ಮನದ ರಾಗ ದ್ವೇಷಾದಿಗಳ ಕಳೆದು ನೀಗಿಸುವರೊ ಭವದ ಬಂಧ 1 ತಾಳ ತಂಬೂರಿಪಿಡಿದು ಭೋಗಶಯನನನ್ನು ಭಜಿಸಿ ಕೂಗಿ ಪಾಡುತಿರಲು ನಲಿದು ಬೇಗ ಪಾಲಿಸುತಲಿ ನಲಿವ2 ದೇಶದೇಶದವರು ಬಹಳ ಕ್ಲೇಶಪಡುತ ಬರಲು ಅವರ ಕ್ಲೇಶಗಳನು ಕಳೆದು ಪರಮ ಉ- ಲ್ಲಾಸ ನೀಡಿ ಪೊರೆಯುವಂಥ 3 ಸೀತಾಪತಿಯ ಪೂಜಿಸುತಲಿ ಖ್ಯಾತರಾದ ಯತಿಗಳನ್ನು ಪ್ರೀತಿಯಿಂದ ಸೇವಿಸುವರ ಪಾತಕಗಳ ಕಳೆದು ಪೊರೆವ 4 ಗಳದಿ ಹೊಳೆವ ತುಳಸಿ ಮಾಲೆ ಹೊಳೆವ ನಗೆಯ ಮುಖದ ಭಾವ ಕಮಲನಾಭ ವಿಠ್ಠಲನೊಲಿಸಿ ಹಲವು ವಿಧದಿ ಪೂಜಿಸುವರು5
--------------
ನಿಡಗುರುಕಿ ಜೀವೂಬಾಯಿ
ಮಹಿಮೆ ಸಾಲದೆ, ಇಷ್ಟೇ ಮಹಿಮೆ ಸಾಲದೆ ಪ ಅಹಿಶಯನನ ಒಲುಮೆಯಿಂದಮಹಿಯೊಳೆಮ್ಮ ಶ್ರೀಪಾದರಾಯರ ಅ.ಪ ಮುತ್ತಿನ ಕವಚ ಮೇಲ್ಕುಲಾವಿರತ್ನ ಕೆತ್ತಿದ ಕರ್ಣಕುಂಡಲಕಸ್ತೂರಿ ತಿಲಕ ಶ್ರೀಗಂಧ ಲೇಪನವಿಸ್ತರದಿಂದ ಮೆರೆದು ಬರುವ 1 ವಿಪ್ರ ಹತ್ಯ ದೋಷ ಬರಲುಕ್ಷಿಪ್ರ ಶಂಖೋದಕದಿ ಕಳೆಯೆಅಪ್ರಬುದ್ಧರು ದೂಷಿಸೆ ಗೇರೆಣ್ಣೆಕಪ್ಪು ವಸನ ಶುಭ್ರಮಾಡಿದ2 ಹರಿಗೆ ಸಮರ್ಪಿಸಿದ ನಾನಾಪರಿಯ ಶಾಕಗಳನು ಭುಂಜಿಸೆನರರು ನಗಲು ಶ್ರೀಶಕೃಷ್ಣನಕರುಣದಿಂದಲಿ ಹಸಿಯ ತೋರಿದ3
--------------
ವ್ಯಾಸರಾಯರು