ಒಟ್ಟು 4643 ಕಡೆಗಳಲ್ಲಿ , 128 ದಾಸರು , 3220 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀ ಸುಮಂಲಿ ವರಗುಣಶೀಲೆ ನೀ ಸುಮಂಗಲಿ ಪ ಸತತ ಮಾತಾ ಪಿತರ ವಚನ ಹಿತದಿ ನೀನು ಆಲಿಸುತ | ಪತಿಯು ಪರದೈವವೆಂದು ನೇಮದಿ ತಿಳಿದು ನೀ ಮಾಡುವುದು ವ್ರತ 1 ನಿರುತ ಗೋವು ಭೂಸುರರ ಸೇವಾ ಹರುಷದಲಿ ಶ್ರೀ ಗೌರಿ ಪೂಜಾ ತರುಣಿ ಗೈದು ಜಗದಿ ನೀನು ಪಾದ ಸುಕುಮಾರ ಪಿತನಪಾದ ಭಜಿಸೆ 2 ಕೋಮಲಾಂಗಿ ಸೋಮವದನೆ ಆ ಮಹಾತ್ಮ ಶೀಲೆ ರಾಧಾ ಭಾಮೆ ತಾರಾಸೀತೆಯಂತೆ ಶಿರಿಶಾಮಸುಂದರ ದಯ ಪಡೆಯೆ ನೀ 3
--------------
ಶಾಮಸುಂದರ ವಿಠಲ
ನೀಚಕೃತ್ಯದ ಮನಸೇ ನಿನಗೆ ತುಸು ನಾಚಿಕಿಲ್ಲಲೆ ಹೊಲಸೆ ಪ ಪ್ರಾಚೀನಹಿರಿಯರ ಯೋಚಿಸಿನೋಡದೆ ನೀಚತನದ ಆಲೋಚನೆಯೊಳು ಬಿದ್ದು ಅ.ಪ ಕುಂತಿಸುತನ ರಥವ ನಡೆಸಿದನು ಅ ತ್ಯಂತ ಕೃಪೆಯಿಂದ ಹರಿಯು ಕಂತುಜನಕ ಭಕ್ತ ಚಿಂತಾಯಕನೆಂದು ಅಂತರಂಗದಿ ಭಜಿಸಿ ಸಂತಸ ಪಡುವಲ್ಲಿ 1 ಅಂಬರೀಷನೆಂಬುವ ನೃಪಗೆ ಮುನಿ ಡೊಂಬೆಯಿಂಬ (?) ಶಾಪಿಸಲು ಅಂಬುಜಾಸನ ಬಂದು ಬೆಂಬಲಿಸಿ ನೃಪನನ್ನು ಇಂಬಿಟ್ಟು ಪೊರೆದದ್ದು ನಂಬಿ ಭಜಿಸವಲ್ಲಿ 2 ಭೂಮಿಪ ಬಲಿಚಕ್ರನ ಬಾಗಿಲ ಕಾಯ್ದ ಪ್ರೇಮದಿಂ ರಮೆಯರಸನು ಪ್ರೇಮದಿಂ ಭಕುತರ ಕಾಮಿತವೀಯಲು ಕಾಮಧೇನೀತನೆಂದು ನೇಮದಿಂದರವಲ್ಲಿ 3 ಗೌತಮ ಮುನಿಸತಿಯು ಪಾಷಾಣವಾಗಿ ಕ್ಷಿತಿಮೇಲೆ ಎರಗಿರಲು ಕ್ಷಿತಿಜಾತೆಪತಿ ತಾನು ಅತಿಹಿತದ ಕೃಪೆಯಿಂದ ಪತಿತಗೈದವನೆಂದು ಸ್ತುತಿಸಿ ಒಲಿಸವಲ್ಲಿ 4 ಹನುಮಂತನೊಡೆಯನಾದ ಜನಕಜೆಪತಿ ವನಜಾಕ್ಷ ಶ್ರೀರಾಮನ ಘನತರಮಹಿಮೆಯ ಅನುದಿನಕೊಂಡಾಡು ಘನಮುಕ್ತಿ ಸಾಮ್ರಾಜ್ಯ ಕನಿಕರದಿಂ ಕೊಡುವ 5
--------------
ರಾಮದಾಸರು
ನೀಚನಲ್ಲವೇ ಇವನು ನೀಚನಲ್ಲವೇ ಪ ಕೀಚಕಾರಿಪ್ರಿಯನ ಗುಣವ ಯೋಚಿಸದಲೆ ಯಾಚಿಸುವÀನು ಅ.ಪ. ಶ್ರೀಕಳತ್ರನಂಘ್ರಿ ಕಮಲವೇಕಚಿತ್ತದಲ್ಲಿ ಮನೋ ವ್ಯಾಕುಲಗಳ ಬಿಟ್ಟು ಸುಖೋದ್ರೇಕದಿಂದ ಭಜಿಸದವನು 1 ಲೋಕವಾರ್ತೆಗಳಲಿ ಏಡ ಮೂಕರೆನಿಸಿ ವಿಷಯಗಳವ ಲೋಕಿಸದಲೆ ಶ್ರೀಶಗಿವು ಪ್ರತೀಕವೆಂದು ತಿಳಿಯದವನು 2 ಜನನಿ ಜನಕರಂತೆ ಜನಾರ್ದನನು ಸಲಹುತಿರಲು ಬಿಟ್ಟು ಧನಿಕರ ಮನೆಮನೆಗಳರಸಿ ಶುನಕನಂತೆ ತಿರುಗುವವನು 3 ಹರಿಕಥಾಮೃತವ ಬಿಟ್ಟು ನರ ಚರಿತ್ರೆಯಿಂದ ದ ರ್ದುರಗಳಂತೆ ಹರಟೆ ದಿವಸ ಬರಿದೆ ಕಳೆಯುತಿಪ್ಪ ಮನುಜ4 ಕರ್ಮ ತೊರೆದು ಪರರ ಗೃಹಗಳಲ್ಲಿ ಸಂಚರಿಸುತ ನಿಂದಿಸುವ ಮನುಜ5 ಬಹಳ ದ್ರವ್ಯದಿಂದ ಗರುಡ ವಾಹನನಂಘ್ರಿ ಭಜಿಸಿ ಅನು ಗ್ರಹವ ಮಾಡು ಎಂದು ಬೇಡಿ ಐಹಿಕಸುಖವ ಬಯಸುವವನು 6 ಕರಣ ಜನ್ಯ ಪುಣ್ಯಪಾಪವೆರಡು ಹರಿಯಧೀನವೆಂದು ಸ್ಮರಿಸುತಲತಿ ಭಕುತಿಯಿಂದ ಹರುಷಪಡದಲಿಪ್ಪ ಮನುಜ 7 ಜೀವನ ಕರ್ತೃತ್ವ ಬಿಟ್ಟು ದೇವನೊಬ್ಬ ಕರ್ತೃ ರಮಾ ದೇವಿ ಮೊದಲುಗೊಂಡು ಹರಿಯ ಸೇವಕರೆಂದರಿಯದವನು 8 ವಾತಜನಕನೆನಿಪ ಜಗನ್ನಾಥವಿಠ್ಠಲನ ಪದಾಬ್ಜ ಭವ ವೈತರಣಿಯ ದಾಟದವನು 9
--------------
ಜಗನ್ನಾಥದಾಸರು
ನೀಚಮತಿ ಎಲೆ ನೀಚಮತಿ ಊಚನೆನಿಸಿಕೊಂಬ ಯೋಚನೆ ಬಿಡುಕಂಡ್ಯ ಪ ತರಿಯದೆ ಕುಟಿಲತ್ವ ಮರೆಯದೆ ದುಶ್ಚಟ ಧರೆಯ ಭೋಗವ ನೆಚ್ಚಿ ಶರಣರ್ವೇಷÀವÀ ತಾಳಿ ಮರವೆ ಮಾಯದಿ ಬಿದ್ದು ಒರಲುವ ನರರಿಗೆ ಬರಿದೆ ಬೋಧಿಪೆನೆಂಬ ಭ್ರಮೆಯಿಂದ ಫಲವೆ 1 ಮಾಯಮೋಹಿಗಳ ಉಪಾಯದಿ ಕೂಡಿಸಿ ಸೇವಿಸದಾಹಾರ ಸೇವಿಸುತನುದಿನ ಕಾಯಬಲಿಸಿ ಕುಣಿವ ಮಾಯಮೋಹಿಯ ಬರಿ ಬಾಯ ಬ್ರಹ್ಮತ್ಯಬಂಧ ಬಯಲಪ್ಪುದೇನೆಲೆ 2 ಧರಿಸಿದ ಲಾಂಛನ ಅರಿಯದೆ ಮೇಲೆ ನೀ ಬರಿದೆ ಕಾವಿಯನ್ಹೊದ್ದು ಕರದಿ ಕಮಂಡಲ ಧರಿಸಿ ಮರುಳರಿಗೆಲ್ಲ ಪರತತ್ತ್ವವರಿಯಲು ಜರೆಮರಣದು:ಖವು ಪರಹಾರಮೆಂತೆಲೆ 3 ಭವಭವದಲಿ ಬಟ್ಟಬವಣೆಯ ಸ್ಮರಿಸಿದೆ ಭವಗೆಲಿಸುವ ಅನುಭವ ತಿಳಿಯದೆ ಸ ದ್ಭವಿಗಳ ನೆರೆಯಿಸಿ ಕವಿತೆ ಬಿಡಿಸಿ ಬಹು ಸವಿಮಾತ್ಹೇಳಲು ಮೂಲಭವಭೀಜಳಿಯುವುದೆ 4 ತನ್ನ ತನ್ನದುಯೆಂಬ ಭಿನ್ನವಿಲ್ಲದೆಸದಾ ತನ್ನ ಸ್ವರೂಪ ಪರರನ್ನು ಬಗೆದು ನಿತ್ಯ ಸನ್ನುತ ಶ್ರೀರಾಮನುನ್ನತಂಘ್ರಿಗೆ ಪೊಂದಿ ಧನ್ಯರಾಗದೆ ನರಕುನ್ನಿಯೆನಿಸುವರೇನೋ5
--------------
ರಾಮದಾಸರು
ನೀನಹುದೊ ನಮ್ಮೊಡಿಯ ಘನ ಗುರು ನಾ ನಿಮ್ಮ ಕಂಡೆ ಅಯ್ಯ ಧ್ರುವ ನಾ ನಿಮ್ಮ ಪರಿವಾರ ನಾ ನಿಮ್ಮ ಕಿಂಕರ ನೀ ನಮ್ಮ ಸಹಕಾರ ಬಡಿವಾರ 1 ನಾ ನಿಮ್ಮ ಬಾಲಕ ನೀ ನಮ್ಮ ಪಾಲಕ ನಾ ನಿಮ್ಮ ಸೇವಕ ನೀ ನಮ್ಮ ರಕ್ಷಕ 2 ನಾ ನಿಮ್ಮ ಉದ್ಧೇಶ ನೀ ನಮ್ಮ ಪ್ರಾಣೇಶ ನಾ ನಿಮ್ಮ ಸಹವಾಸ ನೀ ನಮ್ಮ ಅಭ್ಯಾಸ 3 ನಾ ನಿಮ್ಮ ಅಣುಗ ನೀ ನಮ್ಮ ಸರ್ವಾಂಗ ನಾ ನಿಮ್ಮ ಬಳಗ ನೀ ನಮ್ಮ ಬಳಗ 4 ನಾ ನಿಮ್ಮ ಶರಣ ನೀ ನಮ್ಮ ಕರುಣ ನಾ ನಿಮ್ಮ ನಿರ್ಗುಣ ನೀ ನಮ್ಮ ಭೂಷಣ 5 ನಾ ನಿಮ್ಮ ನಿರ್ಮಿತ ನೀ ನಮ್ಮ ಸಹಿತ ನಾ ನಿಮ್ಮ ಆಶ್ರಿತ ನೀ ನಮ್ಮ ಸುದಾತ 6 ನಾ ನಿಮ್ಮ ಅಂಕಿತವೃತ್ತಿ ನಿಮ್ಮ ನಮ್ಮ ವಸ್ತುಗತಿ ನಾ ನಿಮ್ಮ ಮಹಿಪತಿ ನೀ ನಮ್ಮ ಶ್ರೀಪತಿ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೀನಾಗಿ ನಿನ್ನೊಳಗಿರುತಿರುವನ ಧ್ಯಾನಿಸುತಿರು ಜೀವಾ ಎಲ್ಲ ಅವನ ಸೇವಾ ಪ ಜ್ಞಾನಿಗಳೊಡನಾಡದೆ ಸಂಸಾರದಿ ನಾನೆಕರ್ತನೆಂದು ನರಕ ಪೊಂದುವೆ ಯಾಕೆ ಅ.ಪ ಜಾಗುಮಾಡದೆ ನಿರತಾ ನಾಗಶಯನ ವಿಶ್ವತೈಜ ಪ್ರಾಜ್ಞ ನಾಗಿನಿನಗೆ ಕೊಡುವನು ಎಂದರಿಯೊ 1 ಬಿಂಬನವನು ಪ್ರತಿಬಿಂಬನು ನೀನೆಂದು ಹಂಬಲಿಸುವುದುಚಿತಾ ಅಂಬುಜಾಕ್ಷಗರ್ಪಿಸಿ ಸುಖಿಯಾಗೊ2 ಸ್ವಾಭಾವ್ಯದಿ ಸತತಾ ವಿಭೇದ ಲ- ಕ್ಷ್ಮೀಭೂರಮಣ ಶ್ರೀಗುರುರಾಮವಿಠಲನು 3
--------------
ಗುರುರಾಮವಿಠಲ
ನೀನಾರು ನಾನಾರು ನೀನೆನ್ನೊಳಿರಲು ನಾನಾರು ನೀನಾರು ನಾನಿನ್ನೊಳಿರಲು ಪ ನೀನೇನ ಮಾಡಿಸುವೆ ನಾನದನು ಮಾಡುವೆ ನೀನೇನ ಮಾಡಿದರೂ ನಾನದನು ಮಾಡುವೆ ಅ.ಪ ಎನ್ನದೆಂಬುವುದೆಲ್ಲ ನಿನ್ನದಾಗಿರುವಾಗ ನನ್ನದೇನುಂಟಯ್ಯ ಪನ್ನಗಾಧೀಶಾ ನಿನ್ನವನು ನಾನಯ್ಯ ನನ್ನವನು ನೀನಾದೊ ಡಿನ್ನೇನು ನಾನೀನು ಎನ್ನುವಂತಿಲ್ಲ 1 ಇಂದಿರಾನಂದ ಗೋವಿಂದ ತವಪಾದಾರ ವಿಂದಸೇವೆಯ ಮಾಳ್ಪೆನೆಂದು ಕಾದಿಹೆನೋ ಮುಂದೆನಗೆ ಜನ್ಮಂಗಳೊಂದಾದರೂ ಬೇಡ ತಂದೆ ಮಾಂಗಿರಿರಂಗ ಬಂದುಕಾಯೋ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನೀನೆ ಗುರುವಾಗೆನಗೆ ಕೋನೇರಿವಾಸ ಙÁ್ಞನವಿಲ್ಲದ ಮನುಜ ತಾನಿದ್ದು ಫಲವೇನು ಪ ನಾಳವಿಲ್ಲದ ಘಂಟೆ ಭಾರವಾಗಿದ್ದರೇನು ತೋಳ ಬಲಹಿಲ್ಲದವ ದೊರೆಯಾದರೇನು ಹಾಳು ಭೂಮಿಯು ತನ್ನ ಮೂಲವಾದರೆಯೇನು ಬಾಳಲೀಸದ ಮನೆಯ ಬಲವಂತವೇನು 1 ತಿದ್ದಬಾರದ ತೇಜಿ ಉದ್ದವಾಗಿದ್ದರೇನು ಮೂರ್ತಿ ಮುದ್ದಾದರೇನು ಕದ್ದ ಕಳ್ಳನ ಮಾತು ಬದ್ಧವಾದರೆಯೇನು ಮದ್ದನರಿಯದೆ ಧಾತು ತಿಳಿದಿದ್ದರೇನು 2 ಗೊಡ್ಡು ದನವಿನ ಕ್ರಯವು ಅಡ್ಡವಾದರೆಯೇನು ಬಡ್ಡು ಅರಸಿನ ಬಂಟನೊಡ್ಡೊಕ್ಕರೇನು ಹೆಡ್ಡನಾದವ ಬಹಳ ಗಡ್ಡವಿರಿಸಿದರೇನು ಕಡ್ಡಾಯದಂಗಡಿಯಲಿದ್ದು ಫಲವೇನು3 ಒಕ್ಕಲಿಲ್ಲದ ಊರು ಮಕ್ಕಳಿಲ್ಲದ ಮನೆಯು ಅಕ್ಕರಿಲ್ಲದ ತವರು ಇದ್ದು ಫಲವೇನು ಚೊಕ್ಕ ಹೆಂಡತಿಯವಳ್ಗೆ ತಕ್ಕ ವರನಿಲ್ಲದಿರೆ ಕುಕ್ಕೆ ತುಂಬಿದ ರೊಕ್ಕವಿದ್ದು ಫಲವೇನು 4 ಬಡಿಗೆಯಿಲ್ಲದೆ ಚಿನ್ನ ಕಡಗವಾಗುವುದೇನೊ ಪೊಡವಿ ಕಡಿಯದೆ ಬೆಳೆಯ ನೆಡುವುದೇನೊ ಕಡಗೋಲು ಹೊರತಾಗಿ ಬೆಣ್ಣೆ ತೋರುವುದೇನೊ ತುಡುಬು ಬಡಿಯದೆ ಧ್ವನಿಯ ಕೊಡುವುದೇನೊ 5 ಅಡವಿಯೊಳಗಿಹ ವೇಣು ತಿದ್ದಿದರೆ ಮೈಗೊಟ್ಟು ಕಡುಹುಳ್ಳ ದೊರೆಗಳನು ಹೊರವುತಿಹುದು ಶುಕ ಪಕ್ಷಿಯನು ಅಡಗಿಸಿಯೆ ಹಾಲೆರೆದು ಒಡನೆ ಹೇಳಿದ ನುಡಿಯ ತಾ ನುಡಿವುದು 6 ಬಂಟ ಬಿಡದೆ ಸೇವೆಯ ಮಾಳ್ಪ ಮಡದಿ ತಾ ಚೆಲುವಾಗಿ ಅಡಿಗೆ ಮಾಡುವಳು ಕಡೆಯ ಕಾಲಕೆ ತನ್ನ ದೃಢ ಬುದ್ಧಿ ಹಿಂಗುವುದು ಒಡೆಯನನು ಭಜಿಸಲಿಕೆ ಮನವಿಲ್ಲವು 7 ಗುರುವಾಗು ಇಹಪರಕೆ ಸ್ಥಿರವಾದ ಸೌಖ್ಯವನು ಒರೆದು ಮಾರ್ಗವ ತೋರು ಉರಗಗಿರಿವಾಸ ಗುರುವೆಂದು ಭಾವಿಸಿಯೆ ಕರಮುಗಿದು ಶಿರಬಾಗಿ ಸರಸಿಜಾಂಘ್ರಿಯ ನೆನೆವೆ ವರಾಹತಿಮ್ಮಪ್ಪ 8
--------------
ವರಹತಿಮ್ಮಪ್ಪ
ನೀನೆ ನಮ್ಮ ಕುಲದೈವ ಅನುದಿನಾರಾಧಿಸುವ ಮುನಿಜನರೊಂದಿಸುವ ಘನಗುರು ದೇವಾದಿ ಶ್ರೀದೇವ 1 ಮಾಡಲರಿಯೆ ನಿಮ್ಮ ನಿಜಭಕ್ತಿ ಕೂಡಿಕೊಳ್ಳಯ್ಯ ಸೇವೆ ಶ್ರೀಪತಿ 2 ಮಾತಿಗಿಲ್ಲವೊ ಅನ್ಯಥಾ ಸ್ವಾಮಿ ನೀನೆವೆ ನಮ್ಮ ದೈವತ ಬ್ರಹ್ಮಾದಿಗಳಿಗೆ ಸನ್ನತ 3 ಅಯ್ಯ ನಿಜಬಾಲಕ ನಾ ನಿಮ್ಮ ತಾಯಿತಂದೆಯು ನೀನೆ ನಮ್ಮ ಸಾಹ್ಯಮಾಡುವ ಸರ್ವೋತ್ತಮ 4 ದೈವ ನೀನಹುದೊ ಸಾಕ್ಷಾತ ಕೈವಲ್ಯನಿಧಿಯು ಶ್ರೀನಾಥ ಭಾವಿಸುವರ ಭಾವಪೂರಿತ ಮಹಿಪತಿಯ ಪ್ರಾಣನಾಥ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೀನೆ ನಿಜಗುರುವಾಗುಎನಗೆ ಮಾಧವ ಪ ಮರವೆಯೆಂಬ ಪರದೆ ಹರಿದು ಅರಿವುಯೆಂಬಾಲಯದೊಳಿರಿಸಿ ದುರಿತಪರ್ವತ ತರಿದು ಪೊರೆಯುವ ಚರಣದಾಸರ ಭಾಗ್ಯನಿಧಿಯೆ 1 ಹೀನಸಂಸಾರೆಂಬುವ ಮಹ ಕಾನನದಿ ಬಳಲಿಸದೆ ಅನುದಿನ ಧ್ಯಾನಮೃತ ಪಾನಗೈಸುವ ಧ್ಯಾನಿಪರ ಮಹಪ್ರಾಣದರಸೇ 2 ಆವಕಾಲದಿ ಬಿಡದೆ ನಿಮಿಷ ಜೀವ ಭಕುತರ ಭಾವದ್ವಾಸಿಸಿ ಜಾವ ಜಾವಕೆ ಬುದ್ಧಿ ಕಲಿಸುವ ದೇವದೇವರ ದಿವ್ಯದೇವರೆ 3 ಸಕಲಕೋಟಿಮಂತ್ರಗಳಿಗೆ ನಿಖಿಲ ನೀನೆ ಆಧಾರನಾಗಿ ಅಖಿಲರೂಪದಿ ಜಗವ ಬೆಳಗುವ ಭಕುತಿದಾಯಕ ಸುಖದ ಶರಧಿಯೆ 4 ಸಾರಿ ಭಜಕರ ಭಾರವಹಿಸಿ ಘೋರಭವಸಾಗರವ ಗೆಲಿಸಿ ಧೀರ ಶ್ರೀಗುರುರಾಮ ಪ್ರಭುವೇ 5
--------------
ರಾಮದಾಸರು
ನೀನೆ ಪಾಲಿಸೊ ಎನ್ನ ಮಾರುತಿರಾಯ ಪ ನೀನೆ ಪಾಲಿಸೊ ಮಹಾನುಭಾವನೆ ಸದಾ ಙÁ್ಞನ ಭಕುತಿನಿತ್ತು ಮಾನಾದಿ ನೀ ವೇಗ ಅ.ಪ ನಿನ್ನ ಆಧಾರ ಲೋಕಾ ಜನರು ಸದಾ ನಿನ್ನ ಭಜಿಸುವೊರೇಕಾ ಪ್ರಕಾರದಿ ನಿನ್ನ ಸೇವಿಪರನೀಕಾ ಸಂಗಾವಿತ್ತು ನಿನ್ನ ಧ್ಯಾನಿಪ ವಿವೇಕಾ ಮತಿಯನಿತ್ತು ಮನ್ನಿಸೊ ಮಜ್ಜನಕಾ ನಿನ್ನಾ ಭಜಿಪರಿಗೆ ಅನ್ಯಾಲೋಕಗಳುಂಟೆ ಘನ್ನಾ ಹರಿಯ ಲೋಕವನ್ನೆ ಸೇರುವರಯ್ಯಾ 1 ರಂತರ ದೊಳಗಿಹನು ಎಂದು ನಿನ್ನಾ ನಂತ ರೂಪಗಳನ್ನು ಭಜಿಸುವ ಗಂತು ಜ್ಞಾನವನ್ನು ನೀಡುತ ಜನ ರಂತರದಲಿ ನೀನು ನಿಂತು ಪಾಲಿಸಿ ಜೀವರಂತೆ ಗತಿಯನಿತ್ತು ಕಂತುºರಾದ್ಯರ ಸಂತತಿ ವಂದ್ಯನೆ 2 ಸೀತಾರಾಮನ ಪಾದವಾ ಸೇವಿಸಿ ನಿತ್ಯ ಪಾತಕಾಂಬುಧಿಗೆ ದಾವಾನಂತೆ ಜಗದಿ ಈ ತೆರದಲಿ ಮೆರೆವಾನೆಂದು ಈಗ ಸೋತು ನಾ ಬಂದೆ ದೇವಾ ನೀನೇ ಎನ್ನ ಮಾತು ಲಾಲಿಸೊ ದ್ಯುಧವಾ ಮಾತರಿಶ್ವ ನಿಜ ದೂತಾನು ನಾನಯ್ಯ ನೀತ ಗುರು ಜಗನ್ನಾಥವಿಠಲಪ್ರಿಯ 3
--------------
ಗುರುಜಗನ್ನಾಥದಾಸರು
ನೀನೆನಗೆರವೆ ನಾನಿನ್ನೆಂತಗಲುವೆಬಾ ನನ್ನ ತನುವೆ ಸದ್ಗುರುವಿಗೊಂದಿಸುವರೆ ಪಮೊದಲಿಗಮಿತ ದುಷ್ಟತನುಗಳ ಸಂಗದಿಕುದಿದು ಸಂಸಾರಾಗ್ನಿಯೊಳು ಬಳಲಿದೆನುಅದರಿಂದ ನಿನ್ನ ನಿಗ್ರಹಿಸಿದೆನಲ್ಲದೆಪದರದಿರೆನ್ನೊಳು ಪಡೆಯೆ ನಿನ್ನೊಂದನೂ 1ಗುರುಸೇವೆಗಲಸದೆ ಛಳಿಮಳೆಯೆನ್ನದೆಬರಿಯ ಬಯಲ ಸಂಸಾರ ಭೋಗದಲಿಎರಗದಿರೆನ್ನ ದಾರಿಗೆ ಬಾ ನಿನ್ನಾರೈಕೆುರಲೆನ್ನೊಳಿನ್ನು ತಪಿಸಿ ಕಂಗೆಡಿಪುದಿಲ್ಲ 2ಶ್ರವಣ ಸುಖದಿ ನನ್ನ ಬೆರೆದು ಬೇರಾಗದೆಭವಶರಧಿಯ ದಾಂಟುನಂತೆ ನೀ ಮಾಡುವಿವರಿಸಿ ಹರಿಗುಣ ಕಥೆಗಳನೆಮ್ಮೊಳುಕವಿದಿಪ್ಪ ತಮವ ತೊಲಗಿಸಿಕೊಂಬ ನಾವಿನ್ನು 3ನಿನ್ನಿಂದ ಸಂಸಾರ ವಿಷಯ ಸುಖದ ಲಾಭನಿನ್ನಿಂದ ಕೃಛ್ರಾದಿ ತಪಸಿನ ಲಾಭನಿನ್ನಿಂದ ಸತ್ಕರ್ಮತೀರ್ಥಯಾತ್ರೆಯ ಲಾಭನಿನ್ನಿಂದ ವೈರಾಗ್ಯ ಭಾಗ್ಯದ ಲಾಭ 4ನಿನ್ನೊಳಗಿರುವಿಂದ್ರಿಯಂಗಳಿಂದ್ರಿಯಗಳೊಳುಣ್ಣುವ ಮನ ಮನದೊಳು ಕೂಡ್ವ ಜೀವಎನ್ನುವರೆನ್ನನೆನ್ನಿರವನರಿಯೆನಿದನಿನ್ನಿಂದ ಗುರುಕೃಪೆವಡೆದು ತಿಳಿಯಬೇಕೂ 5ನೆವವಿಲ್ಲದುಪಕಾರಗೈವೆ ನೀನೆನಗಾಗಿವಿವಿಧ ಭೋಗದ ಸುಖವೆನಗೆ ನಿನ್ನಿಂದವಿವರಿಸೆ ನಿನಗೆ ಉಂಟು ಲಾಭವು ಮತ್ತೆನವೆವೆಯಲ್ಲದೆ ವೃದ್ಧಿಯಾಗುವೆಯಾ ಪೇಳು 6ನಿನ್ನಿಂದ ಸುಖಬಟ್ಟು ನಿನ್ನ ಬಾಳಿಸಲಾರದೆನ್ನನುಳುಹುವದೆಂತನ್ಯಾಯ ಸುಖವುಉಣ್ಣುವರಾರಿದನುಂಡು ಬದುಕಿರುವಅಣ್ಣನ ತಿಳಿಯಲು ಗುರುವೆ ಗತಿ ಕಂಡ್ಯಾ 7ವಂದಿಸಿಯೂಳಿಗಗೈವಲ್ಲಿಯಲಸದೆದಂದುಗ ಸುಖಕಾಗಿ ದಾರಿದೆಗೆಯದೆಒಂದಾಗಿ ಯೆನ್ನೊಳಿದ್ದರೆ ನನ್ನ ಸುಖವ ನಾಹೊಂದಲು ನಿನಗಾನಂದವಪ್ಪುದೆ ಕೇಳು 8ಮರುಗಿ ಮನದಿ ನಮ್ಮ ಮರವೆಯಾಟವ ಕಂಡುತಿರುಪತಿ ವೆಂಕಟರಮಣನು ತಾನೆಗುರುವಾಸುದೇವಾರ್ಯನಾಗಿಹನಾತನಚರಣವ ಮರೆಯೊಕ್ಕು ಬದುಕುವ ನಡೆಬೇಗ 9ಕಂ||ಜೀವನ ನುಡಿಯನು ಲಾಲಿಸಿಭಾವದಿ ಸರಿಬಂದ ಬಗೆಯ ಕಾಣದೆ ಗರ್ವದಿತಾವೊಲಿವರೆ ಮನಬಾರದುನೀವೊಬ್ಬನೆ ಸಾಧಿಸೆನೆ ಮನ ಕೆರಳಿ ನುಡಿದುದೂ
--------------
ತಿಮ್ಮಪ್ಪದಾಸರು
ನೀನೇ ಕಾಪಾಡಬೇಕು ನಿರುತವು ಬಿಡದೆಯ- ಜ್ಞಾನಾಬ್ಧಿಯ ದಾಟಿಸು ಸೀ- ಕಮಲ ಭೃಂಗ ಶುಭಾಂಗ 1 ಸುಗ್ರೀವನ ಮಂತ್ರಿವರ ದ- ಶಗ್ರೀವನ ಗುದ್ದಿದವನೆ ಶತ್ರುನಿಕರವಂ ಶೀಘ್ರದಿ ಗೆಲುವಂದದಲಿಯ- ನುಗ್ರಹವ ಮಾಡುತಲೆಮ್ಮ ಕೈಪಿಡಿ ಹನುಮ 2 ತ್ವರಿತವತಿ ನಿಧಾನವಲಸಿಕೆಗಳನು ಬಿಡಿಸಿ ಪಿರಿಯರು ಪೇಳಿದ ಪರಿಯಲಿ ನೆರೆನಡೆವಂದದಲಿ ಸುಮತಿಯನು ಕೊಡು ಹನುಮ3 ಹೊರಗಿನ ಶತ್ರುಗಳಂ ವಾ- ಕ್ಪೌರುಷದಿ ವೋಡಿಸಲುಬಹುದು ಒಳಗಿನ ಕಾಮ್ಯಾ ದ್ಯರ ಗೆಲುವುದಕೆ ಶಾಂತಿಯೆ ಕ್ಷುರವಹುದು ದಯಮಾಡಿ ನೀನೆ ಕರುಣಿಸು ಹನುಮ4 ಕತ್ತಿಯಲಿ ಕಡಿದೆರೆರಡಾ- ಗುತ್ತಿರುವುದು ಜಡವು ವಾಕ್‍ಕತ್ತಿಯ ದೆಸೆಯಲಿ ನೆತ್ತಿಮೊದಲು ಪಾದವರಿಗು ಕತ್ತರಿಸಿದರೀತಿಯಹುದು ಕಾಯೈ ಹನುಮ 5 ಪರಧನ ಪರಾಕಾಮಿನಿಯರಿ ಕೊರಳೊಳರಿವೆಂಬ ರಜ್ಜುವಿಂದಲಿ ವಿರಾಗ ದೊಣ್ಣೆಯನು ಕಟ್ಟಿ ಕೈಪಿಡಿ ಹನುಮ 6 ಸಂಗವು ನಿತ್ಯಾಹ್ನೀಕಕೆ ಭಂಗವು ಬರುತಿಹುದು ಸದ್ವಿಷಯವಾದರದೆ ಬಂಗಾರವು ರತ್ನವು ತಾ ಹಿಂಗದೆ ಸೇರಿಸಿದ ರೀತಿ ಹಿತವೈ ಹನುಮ 7 ನವವಿಧ ಭಕ್ತಿಯ ಕೊಡು ರಾ- ಘವನಂಘ್ರಿಪರಾಗದಲಿ ಕಡು ವಿರತಿಯನು ನೀಂ ತವಕದಲಿ ಪಾಲಿಸುತಲಿ ನಿ- ನ್ನವರಂ ಕೈಪಿಡಿವುದೆಂದಿಗೂ ಬಿಡದೆ ಹನುಮ 8 ತಾನನುದಿನದಿ ಬರುವ ಕಷ್ಟಗಳನು ಪರಿಹರಿಸುತ್ತ ಹಿಂದೆ ತಿರುಗುತಲಿರುವಂ9
--------------
ಗುರುರಾಮವಿಠಲ
ನೀನೇ ಗತಿಯೆನಗಿನ್ನು ದೀನನಾದೆನು ಬಹಳ ನೀನಲ್ಲದಾರು ಬಳಿಕಾ ದೇವಾಏನು ಸಾಧನವುಂಟು ಶ್ರುತ್ಯರ್ಥಗೋಚರವೆ ಧ್ಯಾನಧಾರಣೆ ದೂರವು ದೇವಾ ಪಕಾಣದೇ ನಿನ್ನಂಘ್ರಿಕಮಲವನು ಭವವೆಂಬಕಾನನಕೆ ಗುರಿಯಾದೆನು ದೇವಾಪ್ರಾಣರಕ್ಷಕರಿಲ್ಲದತಿ ಕಷ್ಟಕೊಳಗಾದಏಣ ಕುಣಕನೊಲಾದೆನು ದೇವಾಏನೆಂಬೆ ಮೂಢತ್ವವೇ ಮೌಲ್ಯವೆನಗಾಯ್ತುಜ್ಞಾನ ದೊರಕೊಂಬುದೆಂತು ದೇವಾಜ್ಞಾನವಿಲ್ಲದೆ ಬಂಧ ಪರಿಹರಿಸದೆಂದೀಗಮಾನಸದಿ ಮರಗುತಿಹೆನು ದೇವಾ 1ದುರಿತಕೋಟಿಗಳ ಜನ್ಮಂಗಳಲಿ ಮಾಡಿದರೆದೊರಕಿತದರಿಂದ ಜಡವು ದೇವಾಪರಿಪರಿಯ ಕರ್ಮಗಳು ಜನ್ಮಗಳ ಕೊಡುವದಕೆತರತರದಿ ಕರವಿಡಿದಿವೆ ದೇವಾಗುರಿಯಾದೆನೀ ಪರಿಯ ಕರ್ಮಶರಧಿಯ ತೆರೆಗೆಪರಿಹರವ ಕಾಣೆನಿದಕೆ ದೇವಾಪರಮ ಪಾವನವಾದ ದುರಿತಹರ ನಾಮಕ್ಕೆಕರಗದೋ ನನ್ನ ಕರ್ಮ ದೇವಾ 2ಲೋಕದೊಳಗಿಹ ಪಾತಕರು ತಾವು ಜೊತೆಯಾಗಿಬೇಕೆಂದು ಪಾತಕವನು ದೇವಾಜೋಕೆಯಲಿ ಛಲವಿಡಿದು ಪಾಪರಾಶಿಯ ಮಾಡೆಸಾಕೆ ನಾಮದ ಸೋಂಕಿಗೆ ದೇವಾನೂಕುವುದು ನಿಷ್ಕøತಿಗೆ ಮಲತ ಪಾಪವ ನಾಮಬೇಕೆ ನೆರವೆಂಬುದದಕೆ ದೇವಾಯಾಕೆ ನಾನೊಬ್ಬ ಮಾಡಿದ ಪಾಪರಾಶಿಯನುನೂಕದಿಹ ಬಗೆುದೇನು ದೇವಾ 3ದುರಿತವೆನಗಿಲ್ಲೆಂದು ಸ್ಥಿರಬುದ್ಧಿುಂದೊಮ್ಮೆುರುತಿಹೆನು ಧೈರ್ಯವಿಡಿದು ದೇವಾಅರಿವು ಸಿಕ್ಕದೆ ಮರವೆ ಮುಂದಾಗಿ ನಿಂದಿರಲುಮರುಗಿ ಮತ್ತೊಮ್ಮೆ ಮನದಿ ದೇವಾಅರಿವೆಂತು ಸಿಕ್ಕುವದು ದುರಿತಭರಿತನಿಗೆಂದುಸ್ಥಿರಬುದ್ಧಿ ನಿಲ್ಲದಿಹುದು ದೇವಾಉರುಳುವುದು ಮನವೆಲ್ಲಿ ಪರಿವುತಿಹೆ ನಾನಲ್ಲಿಸ್ಥಿರವೆಂದಿಗೆನಗಪ್ಪುದು ದೇವಾ 4ಏನಾದಡೇನಘವು ಬಹಳವಾಗಿಹುದಿದಕೆಹೀನಬುದ್ಧಿಯೆ ಸಾಕ್ಷಿಯು ದೇವಾನಾನಿನಿತು ದೋಯಾದಡದೇನು ದೋಗಳನೀನೈಸೆ ರಕ್ಷಿಸುವನು ದೇವಾಭಾನುವಿನ ಮುಂಭಾಗದಲಿ ತಿಮಿರ ತಾ ನಿಂದುಏನಾಗಬಲ್ಲುದೈ ದೇವಾದೀನತನವಳಿವಂತೆ ಜ್ಞಾನವನು ಬಳಿಕಿತ್ತುಆನತನ ನೀ ರಕ್ಷಿಸು ದೇವಾ 5ಕಾಲ ಬಂದರೆ ಮೋಕ್ಷ ತಾನೆ ದೊರಕುವದೆಂದುಮೇಲಾಗಿ ಶ್ರುತಿ ನುಡಿಯಲು ದೇವಾಕಾಲವೆಂಬೀ ನದಿಗೆ ಕಡೆುಲ್ಲ ಮೋಕ್ಷಕ್ಕೆಕಾಲ ತಾ ಬಹು ದೂರವು ದೇವಾಕಾಲಕರ್ಮಗಳೆಂಬ ನೇಮವನೆ ದೃಢವಿಡಿಯೆಕಾಲವೇ ಕಲ್ಪಿತವದು ದೇವಾಲೀಲೆುಂ ನಿರ್ಮಿಸಿದ ಸಂಸಾರ ಭಂಜನೆಗೆಕಾಲವದು ನಿನ್ನ ಕೃಪೆಯು ದೇವಾ 6ನನ್ನ ನಂಬಿದವರ್ಗೆ ಸಂಸಾರಗೋಷ್ಪದವುಚೆನ್ನಾಗಿ ನಂಬಿಯೆಂದು ದೇವಾನಿನ್ನ ನುಡಿುಂದ ಗೀತೆಯಲಂದು ಬೋಧಿಸಿದೆಧನ್ಯನಾದನು ಪಾರ್ಥನು ದೇವಾಉನ್ನತದ ಯೋಗಾದಿ ಸಾಧನದಿ ಪರಿಹರವೆನಿನ್ನ ಕೃಪೆಯೇ ಮುಖ್ಯವು ದೇವಾನಿನ್ನ ನಂಬಿದೆನು ತಿರುಪತಿಯ ವೆಂಕಟರಮಣಧನ್ಯ ಧನ್ಯನು ಧನ್ಯನೂ ದೇವಾ 7ಕಂ|| ಬುಧವಾರದರ್ಚನೆಯನಿದಮುದದಿಂ ಸ್ವೀಕರಿಸಿ ನನ್ನ ಮೊರೆಯಂ ಕೇಳ್ದಾಬುಧ ಸಂಗವನಿತ್ತು ನಿನ್ನಪದಸೇವಕನೆನಿಪುದೆಂದು ವೆಂಕಟರಮಣಾಓಂ ಕಾಳೀಯ ಫಣಾಮಾಣಿಕ್ಯರಂಜಿತ ಶ್ರೀಪದಾಂಬುಜಾಯ ನಮಃ
--------------
ತಿಮ್ಮಪ್ಪದಾಸರು
ನೀನೇ ದಯಾಳು ದೊರೆ ಸದ್ಗುರುನಾಥನೀನೇ ದಯಾಳು ದೊರೆ ಪ ಸತಿಸುತ ಮಿತ್ರರ ನೀನೇ ಮರೆಸಿದೆಮತಿಯನೆ ತುಂಬಿದೆ ಸದ್ಗುರುನಾಥ1 ನನ್ನನು ವೈದೆ ನಿನ್ನನು ಮಾಡಿದೆನನ್ನತನವ ಕಳೆದೆ ಸದ್ಗುರುನಾಥ 2 ಭವ ನಿನ್ನನು ಸ್ಮರಿಸೆನೀ ಚಿದಾನಂದರಸೇ ಸದ್ಗುರುನಾಥ 3
--------------
ಚಿದಾನಂದ ಅವಧೂತರು