ಒಟ್ಟು 8036 ಕಡೆಗಳಲ್ಲಿ , 131 ದಾಸರು , 4635 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗೌರಿ ಗಜಮುಖನ ಮಾತೆ | ಗುಣಗಣ ಭರಿತೆ ಶೌರಿ ಸಖನಂಗಸಂಗೀ ಸಂಪೂರ್ತೆ ಪ ಶುಭ ತನು ವಾರಿಜನೇತ್ರಳೆ ವೀರಸತಿಯೆ ದಯವಾರಿಧಿ ಪಾಲಿಸು ಅ.ಪ. ತುಂಗ ಮಂಗಳೇ ದೇವಿ | ಕಲಿಗೆ ಭೈರವೀ ರಂಗಾನ ನವವಿಧಿ ಭಕ್ತಿ ಸಂಗ ನೀಡುವಿ ಹಿಂಗದೆ ಪೊರಿಯೆ ತಾಯೇ | ಭಕ್ತ ಸಂಜೀವೆ ತಿಂಗಳ ಮುಖಿವರಗರಿವೆ | ನಮ್ಮ ಶಂಭುವೆ ಭಂಗಬಟ್ಟೇನು ನುಂಗುವ ಭವದೊಳು ಮಂಗಳ ಕರುಣಾಪಾಂಗದಿ ನೋಡೆನ್ನ ಭವ ಭಯ ಗಂಗೆಯ ಧರನಂಘ್ರಿ- ಭೃಂಗಳೆ ಬೋದಯಾಕಂಗಳೆ ಕರುಣಿಸು 1 ಇಂದ್ರಾದಿ ಸುರಗುರುವೆ | ದೇವ ತರುವೆ ಪರಿ ನಿನ್ನ ಬೇಡುವೆ ಕುಂದನೆಣಿಸದಲೆ ಶಿವ ಶಂಕರಿ ಕಾವೆ ಸಂದೇಹ ಕಳಿ ವಿಭುವೆ | ವೀರಜತನುವೆ ನೊಂದವನಾ ಮ್ಯಾಲ್ಹೊಂದಿಸು ಕರುಣವ ಮಂದಸ್ಮಿತೆ ಮುಕುಂದನ ಮನದಲಿ ವಂದಿಸು ಅನಿಮಿತ್ತ ಬಂಧುವೆ ರಕ್ಷಿಸು 2 ಕಸ್ತೂರಿ ಕುಂಕುಮ ಫಾಲೆ | ರನ್ನಾದ ಓಲೆ ವಸ್ತುಗಳಿಟ್ಟ ಹಿಮವಂತನ ಬಾಲೆ ಶಿಸ್ತಿನ ಶುಭ್ರಾಂಬರಧಾರೆ ವನಮಾಲೆ ಮಸ್ತಕದ ಕಿರೀಟ ವದನೆ ತಾಂಬೂಲೆ ಸಿರಿ ಹಸ್ತಗಳಿಟ್ಟೆನ್ನ ದುಸ್ತರದ ಹಾದಿಗಳಸ್ತಮಮಾಳ್ಪುದು ವಿಸ್ತರ ಮಹಿಮ ಜಯೇಶವಿಠಲ ವಸ್ತುವ ನೀಡಮ್ಮ ಹಸ್ತಿಯ ಗಮನೆ 3
--------------
ಜಯೇಶವಿಠಲ
ಘಂಟಾನಾದವ ಕೇಳೋ ಮುಕ್ತಘಂಟಾನಾದವ ಕೇಳೋಘಂಟಾನಾದವು ಘಣ ಘಣವೆನಲುಅಂಟಿ ಕೊಳ್ಳದೆ ಲೌಕಿಕ ಸುಖಕೆ ಪ ಈಷಣ ತ್ರಯಗಳು ಎಲ್ಲವು ಕೆಟ್ಟುಪಾಶವೆಂಟನು ಎಲ್ಲವ ಸುಟ್ಟುವಾಸನೆ ಹದಿನೆಂಟನು ಕಳಚಿಟ್ಟುಕ್ಲೇಷ ಪಂಚಕಗಳು ಹುಡಿಯಿಟ್ಟು 1 ಅರಿಗಳು ಅರುವರ ತಲೆಯನೆ ಹೊಯ್ದುಕರಣ ನಾಲ್ವರ ಕಾಲನೆ ಕೊಯ್ದುಹರಿವಾ ಹತ್ತರ ನೆತ್ತಿಗೆ ಹೊಯ್ದುಮೆರೆವಾವರಣ ಏಳನೆ ಮೇದು 2 ಘಂಟಾನಾದದ ಇಂಪನಾಲಿಸುಎಂಟು ಮೂರ್ತಿಗಳೊಡೆಯನಹೆಕಂಟಕಹರ ಚಿದಾನಂದ ಬ್ರಹ್ಮವುತಾನಾಗಿಯೇ ನೀ ನಿಜ ವಿರುವೆ3
--------------
ಚಿದಾನಂದ ಅವಧೂತರು
ಘನ ಗುರು ನೀನೆನೋ ಎನಗೆ ಸಾಕ್ಷಾತವೋ ಮನಕಾದನಕೂಲವೋ ಧ್ರುವ ಕಣ್ಣಿಲೆ ಕಂಡೆವೋ ಚನ್ನಾಗ್ಹಿಡಿದೆವೋ ಇನ್ನೆಲ್ಲಿಗ್ಹೋದೆಲವೋ ಮುನ್ನಿನ ಪುಣ್ಯವೋ ನಿನ್ನ ನೋಡಿದೆವೋ ಧನ್ಯ ಧನ್ಯವಾದೆವೋ 1 ಸಾಧಿಸಿ ಬಿಡೆವೋ ಭೇದನ ಮಾಡೆವೋ ಸದಮಲ ಸುಖಗೂಡುವೆವೋ ಸಾಧನ ಮಾಡುವೆವೋ ಭೇದಿಸಿ ನೋಡುವೆವೋ ಸದೋದಿತ ಬೆರದಾಡುವೆವೋ 2 ಗುಹ್ಯ ಗುರುತವೋ ಧ್ಯಾನಿಸುವೆವೋ ದಂiÀiಮಾಡಬೇಕೆಲವೋ ಇಹಪರ ನೀನೆವೋಮಹಿಪತಿ ನಿಜವೋ ತಾಯಿತಂದೆ ನೀನೆವೋ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಘನತರ ದೂರದೊಳು ಸಮಮತದೊಳು ವನಜನಾಭನತಿ ಮನಸಿಜಾನ್ವಿತನಾದ ವನಿತೆ ನೀ ದಾರೆಂದಾ ನಿನ್ನೊಳು ಮನಸೋತೆ ಕೇಳೆಂದಾ ಪ ಮತ್ಸ್ಯಗಂಗಳಲಿ ಸ್ವಚ್ಛ ಜಲವು ಯಾಕೆ ಮತ್ಸ್ಯಾವತಾರದ ಉತ್ಸವ ತೋರುವಿ ವನಿತೆ ನೀ ಬಾರೆಂದಾ 1 ಕೂರ್ಮ ಕಠೋರದ ಹೆರಳು ಭಂಗಾರವು ಕೂರ್ಮಾವತಾರದ ಮರ್ಮವ ತೋರುವಿ2 ಸರಸ ಮೌಕ್ತಿಕದ ಮುರವು ನಾಸದೊಳು ವರಹವತಾರದ ಕುರುಹು ತೋರುವಿ 3 ಹರಿಯ ಹಿಡಿಯ ತಂತಿ ಭರದಿ ಬಳುಕುತೆ ನರಸಿಂಹರೂಪದೆ ಸ್ಮರಣೆ ತೋರುವಿ 4 ವಾಮನ ಬಾಲೆ ನೀ ಸಾಮಜೆ ಗಮನೆ ವಾಮನ ರೂಪದ ಸೀಮಾ ತೋರುವಿ 5 ತಾಮಸಗಿಡಗಳ ಕಾಮಿಸಿ ತವಿಸುವಿ ರಾಮನ ಕಾಲದ ನೇಮವ ತೋರುವಿ 6 ಸ್ಮರಶರದಂದದಿ ಕರದಿ ಕೇತಕಿ ಪುಷ್ಪ ಪರಶುರಾಮನ ಅರುಹ ತೋರುವಿ 7 ಎದೆಯೊಳಚಲಸ್ತನ ಮುದದಿ ಧರಿಸಿರುವೆ ಮಾಧವ ತಾರದ ಸದವು ತೋರುವಿ 8 ಅಂಗಜ ಬಾಣದಿಂದಂಗದ ಪರವಿಲ್ಲ ಮಂಗಲ ಬೌದ್ಧನ ರಂಗವ ತೋರುವಿ 9 ಮನಸಿಜಾಶ್ವವೇರಿ ವನಿತೆ ಕಂಗೊಳಿಸುವಿ ಪರಿ ವನಪು ತೋರುವಿ 10 ಕುರುಹು ಅರಿದೆ ನಿನ್ನ ಬೆರದು ಸುಖಿಪರನ್ನೆ ನರಸಿಂಹವಿಠಲನರಸಿ ಬಂದಿರುವೇ 11
--------------
ನರಸಿಂಹವಿಠಲರು
ಘನನಂದನ ರಾಮಚಂದ್ರ ಪ ತಂದೆ ತಾಯಿ ಬಂಧು ನೀನು ಸಂದ ಯೆನ್ನ ಮಿತ್ರನೀನು ಕಂದನಿಗಾನಂದ ಬೀರಿ ಅಂದವಾದ ಪಾದತೋರು1 ಸ್ವಾಮಿ ನಿನ್ನ ನಾಮವನ್ನು ನೇಮದಿಂದ ಧ್ಯಾನಿಪೆನ್ನ ಪ್ರೇಮದಿಂದ ಕ್ಷೇಮ ಕೊಟ್ಟು ಸಾಮಗಾನಗೈಸು ವಿಷ್ಣು 2 ಅಗ್ರಹಾರಪಾಲಾಧೀಶ ಅಗ್ರಪೂಜೆಗೊಂಬ ಶ್ರೀಶ ಸುಗ್ರೀವನ್ನ ಪೊರೆದ ಉಗ್ರದೈತ್ಯನಾಶ ಹೆಜ್ಜಾಜೀಶ 3
--------------
ಶಾಮಶರ್ಮರು
ಘೋರವಿದು ಮಹ ಘೋರವಿದು ಸಂ ಸಾರದ ನೆಲೆ ದಾರಿಗರಿತಿಹ್ಯದು ಪ ತೋರದೆ ಮೂಜಗ ಹಾರೈಸಿದನು ದು:ಖ ವಾರಿಧಿಯೊಳು ಘೋರ ಬಡುತಿಹ್ಯದು ಅ.ಪ ಪರಮೇಷ್ಠಿ ಶಿರವಂದು ತೆಗೆಸಿಹ್ಯದು ಮುರಹರನನು ಸುಡುಗಾಡು ಹೊಗಿಸಿಹ್ಯದು ಸಿರಿವರ ಹರಿಯನು ಪರಿಪರಿ ಜನುಮವ ಧರಿಸುತ ಧರೆಮೇಲೆಳೆಸಿಹ್ಯದು 1 ಚಂದ್ರಗೆ ಕುಂದುರೋಗ್ಹಚ್ಚಿಹ್ಯದೋ ಬಲು ಮೇಂದ್ರ ಸೂರ್ಯನ ಪೊಲ್ಲ ಕಳಚಿಹ್ಯದು ಇಂದ್ರನ ಅಂಗಾಂಗ ಸಂದು ಬಿಡದಲತಿ ರಂಧ್ರಗೊಳಿಸಿ ಹೇಯ ಸುರಿವುವುದು 2 ಕಾಲ ತಂದಿಹ್ಯದು ಪಾ ತಾಳಕೆ ಬಲಿಯನು ಇಳಿಸಿಹ್ಯದು ವಾಲಿಯ ನಿಗ್ರಹ ಮಾಡಿಸಿ ಲಂಕೆಯ ಪಾಲದಶಕಂಠನ ವಧಿಸಿಹ್ಯದು 3 ಪರಮ ಪಾಂಡವರನ್ವನಕೆಳಸಿಹ್ಯದು ಆ ಕುರುಪನ ಕುಲನಾಶ ಮಾಡಿಹ್ಯದು ಪರಮ ತ್ರಿಪುರ ಶಿರಸೆರೆ ಸೂರೆಮಾಡಿಸಿ ಸುರನಿಕರರಿಗ್ಹಂಚಿಕೊಟ್ಟಹ್ಯದೊ 4 ಹಿರಿಯರನೀ ಪಾಡ ಪಡಿಸಿಹ್ಯದು ಈ ಮರುಳ ನರರ ಪಾಡೇನಿಹ್ಯದು ಗುರುವರ ಶ್ರೀರಾಮನೋರ್ವನ ಹೊರತಾಗಿ ಸರುವ ಜಗವ ಗೋಳಾಡಿಸಿಹ್ಯದು 5
--------------
ರಾಮದಾಸರು
ಙÁ್ಞನವಿಲ್ಲದೆ ಬಾಳೂದೊಂದು ಸಾಧನವೆ ಗಾಣದೆತ್ತಿನಂತೆ ಕಾಣದಿಹ್ಯದೊಂದು ಗುಣವೆ ಧ್ರುವ ತನ್ನ ನÀರಿಯಲಿಲ್ಲ ಬನ್ನವಳಿಯಲಿಲ್ಲ ಕಣ್ಣದೆರೆದು ಖೂನಗಾಣಲಿಲ್ಲ ಸಣ್ಣದೊಡ್ಡರೋಳೆನೆಂದು ತಿಳಿಯಲಿಲ್ಲ ಬಣ್ಣ ಬಣ್ಣದ ಶ್ರಮ ಬಿಡುವದುಚಿತವಲ್ಲ 1 ಶಮದಮಗೊಳ್ಳಲಿಲ್ಲ ಕ್ಷಮೆಯು ಪಡೆಯಲಿಲ್ಲ ಸಮದೃಷ್ಟಿಯಲಿ ಜನವರಿಯಲಿಲ್ಲ ಸಮರಸವಾಗಿ ಸದ್ಛನವ ನೋಡಲಿಲ್ಲ ಭ್ರಮೆ ಅಳಿದು ಸದ್ಗುರುಪಾದಕೆರಗಲಿಲ್ಲ2 ಗುರು ಕೃಪೆ ಇಲ್ಲದೆ ಗುರುತಾಗುವದಲ್ಲ ಗುರುತಿಟ್ಟು ನೋಡಿಕೊಂಡವನೇ ಬಲ್ಲ ಗುರು ಭಾನುಕೋಟಿ ತೇಜನಂಘ್ರಿ ಕಂಡವನೆಬಲ್ಲ ತರಳ ಮಹಿಪತಿ ಸ್ವಾಮಿ ಸುಖ ಸೋರ್ಯಾಡುವದೆಲ್ಲ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಚತುರ್ದಶಿಯ ದಿನ (ಹನುಮಂತನನ್ನು ಕುರಿತು) ರಂಭೆ : ಇವನ್ಯಾರೆ ದೂರದಿ ಬರುವವ ಇವನ್ಯಾರೆಪ. ಇವನ್ಯಾರೆ ಮಹಾಶಿವನಂದದಿ ಮಾ- ಧವನ ಪೆಗಲೊಳಾಂತು ತವಕದಿ ಬರುವವ1 ದಾಡೆದಂತಮಸಗೀಡಿರುವದು ಮಹಾ ಕೋಡಗದಂತೆ ಸಗಾಢದಿ ಬರುವವ2 ಕಡಲೊಡೆಯನು ಮೃದುವಡಿಯಡರಿಸಿ ಬಿಡ ದಡಿಗಡಿಗಾಶ್ರೀತರೊಡಗೂಡಿ ಬರುವವ3 ಊರ್ವಶಿ :ನಾರಿ ಕೇಳೆಲೆಗೆ ವೈಯಾರಿ ನೀ ಮುದದಿ ನಾರಾಯಣನಿಗೀತ ಬಂಟನಾದಾದರಿದಿ ವೀರ ರಾಮವತಾರದಿ ಹಿಂದೆ ಹರಿಯ ಚಾರಕನಾಗಿ ಸೇವೆಯ ಗೈದ ಪರಿಯ ಕ್ರೂರ ದಶಾಸ್ಯನ ಗಾರುಗೆಡಿಸಿ ನೃಪ ವೀರನ ಪೆಗಲಿನೊಳೇರಿಸಿ ದೈತ್ಯರ ಭೂರಿವಧೆಗೆ ತಾ ಸಾರಥಿಯಾದವ ಕಾರುಣೀಕ ಮಹಾವೀರ್ಹನುಮಂತ1 ಆಮೇಲೆ ವೀರಾವೇಶದಿ ವಾರಿಧಿಯನು ರಾಮನಪ್ಪಣೆಯಿಂದ ದಾಟಿದನಿವನು ಭೂಮಿಜೆಗುಂಗುರ ಕೊಟ್ಟ ನಂತರದಿ ಕಾಮುಕರನು ಸದೆಬಡಿದನಾ ಕ್ಷಣದಿ ಹೇಮಖಚಿತ ಲಂಕಾಮಹಾನಗರವ ಹೋಮವ ಗೈದು ಸುತ್ರಾಮಾರಿಗಳ ನಿ- ರ್ನಾಮಿಸಿ ಸೀತೆಗೆ ತಾ ಮಣಿಯುತ ಚೂ- ಡಾಮಣಿ ತಂದ ಮಹಾಮಹಿಮನು ಇವ2 ವಾರಿಮುಖಿ ನೀ ಕೇಳಿದರಿಂದ ಬಂದ ವೀರ ಹನುಮಂತನನೇರಿ ಗೋವಿಂದ ಸ್ವಾರಿಗೆ ಪೊರಟ ಚಾತುರ್ದಶಿ ದಿವಸ ಆರತಿಯನು ಕೈಕೊಳ್ಳುವ ಶ್ರೀನಿವಾಸ ಭೇರಿ ಮೃದಂಗ ಮಹಾರವದಿಂದ ಸ- ರೋರುಹನಾಭ ಮುರಾರಿ ಶರಣರು ದ್ಧಾರಣಗೈಯುವ ಕಾರಣದಿಂದ ಪಾ- ದಾರವಿಂದಗಳ ತೋರಿಸಿ ಕೊಡುವ3 ಬಳಿಕ ಪಲ್ಲಂಕಿ ಏರಿದ ಕಾಣೆ ನಾರಿ ನಲವಿಂದ ವೇದಘೋಷವ ಕೇಳ್ವ ಶೌರಿ ಜಲಜಭವಾದಿ ನಿರ್ಜರರಿಗಸಾಧ್ಯ ಸುಲಭನಾದನು ಭಕ್ತಜನಕಿದು ಚೋದ್ಯ ಸುಲಲಿತ ಮಂಟಪದೊಳೊ ನೆಲಸುತ ನಿ- ಶ್ಚಲಿತಾನಂದ ಮಂಗಲದ ಮಹೋತ್ಸವ ಗಳನೆಲ್ಲವ ಕೈಕೊಳುತಲಿ ಭಕ್ತರ ಸಲಹುವ ನಿರುತದಿ ಮಲಯಜಗಂಧಿನಿ4 ಶ್ರೀಕಾಂತ ಬಳಿಕ ಭಕ್ತರ ಒಡಗೂಡಿ ಏಕಾಂತ ಸೇವೆಯಗೊಂಡ ಕೃಪೆಮಾಡಿ ಸಾಕಾರವಾಗಿ ತೋರುವ ಕಾಣೆ ನಮಗೆ ಬೇಕಾದ ಇಷ್ಟವ ಕೊಡುವ ಭಕ್ತರಿಗೆ ಶ್ರೀಕರ ನಾರಾಯಣ ಶ್ರೀನಿವಾಸ ಕೃ- ಪಾಕರ ವಿಬುಧಾನೇಕಾರ್ಚಿತ ರ- ತ್ನಾಕರಶಯನ ಸುಖಾಕರ ಕೋಟಿ ವಿ- ಚಾರಕ ಭಾಸತ್ರಿಲೋಕಾಧಿಪನಿವ5
--------------
ತುಪಾಕಿ ವೆಂಕಟರಮಣಾಚಾರ್ಯ
ಚಂದಲಾ ಪರಮೇಶ್ವರಿ ವಂದಿಸುವೆನು ಚಂದಲಾ ಪರಮೇಶ್ವರಿ ಪ ಚೆಂದಾಗಿ ಮನಸಿಗಾನಂದ ನೀಡುವ ನಿನ್ನಮುಂದೆಯೆ ಕಂದ ತಾ ಬಂದು ನಿಂದಿಹೆನವ್ವ ಅ.ಪ. ಘನದಯಾವಂತೆ ಕಾಯೆ ಇದು ನಿನ್ನಅನುಗ್ರಹವೆಂಬೆ ತಾಯೆಕನಸಿನೊಳಿರಲಿಲ್ಲ ಮನಸಿನೊಳಿರಲಿಲ್ಲಜನನಿ ನೀನೆ ಕರೆಸಿ ದರುಶನವಿತ್ತವ್ವ 1 ಸನಿತೆಯೊಳ್ಬಂದು ನಿಂತು ದಯಾಮೃತವಹನಿಸುವಿ ಜನರಿಂಗಿತುಜನರ ಪಾವನ ಮಾಡಿ ಘನ ಸಂತಸ ನೀಡಿಅನುದಿನ ಜನ ಪಾಡಿ ಕುಣಿಯುವಂತೆ ಕೃಪೆ ಮಾಡೆ 2 ಸದಯಾಮೂರ್ತಿಯು ನೀ ಸತ್ಯ ನಿನ್ನಯ ಪಾದಪದುಮಕೆ ಮಣಿಯುವೆ ನಿತ್ಯಗದುಗಿನ ವೀರನಾರಾಯಣನೆನ್ನಯಹೃದಯದಿ ಸತತ ನಿಲುವಂತೆ ಕರುಣಿಸೌ 3
--------------
ವೀರನಾರಾಯಣ
ಚಂದ್ರಹಾಸನ ಕಥೆ ಸುಜನ ತ್ರೈಭುವನೋದ್ಧಾರ ಕಾರುಣ್ಯನಿಧಿ ಹೆಳವನಕಟ್ಟೆರಂಗಯ್ಯ ನಾರಾಯಣ ಶರಣೆಂಬೆ 1 ಭಕ್ತರ ಭಾಗ್ಯನಿಧಿಯೆ ನುಡಿಸಯ್ಯ ಎನ್ನ ಜಿಹ್ವೆಯಲಿ 2 ಅಜಹರಿಸುರ ವಂದಿತನೆ ನಿಜವಾಗೊ ಮತಿಗೆ ಮಂಗಳವ 3 ಸಂಗೀತಲೋಲೆ ಸುಶೀಲೆ ಹಿಂಗದೆ ನೆಲಸೆನ್ನ ತಾಯೆ 4 ನಿತ್ಯಾನಂದ ರಜತಾಚಲವಾಸನೆ ಭಕ್ತವತ್ಸಲ ಭಾಳನೇತ್ರ ಮುಗಿದು ವಂದಿಸುವೆ 5 ಸೂರ್ಯ ಪತಿಯ ಚರಣವನ್ನು ನೆನೆವೆ ಮಂಗಳವಾಗಲೆಂದು 6 ಒರೆದಂಥ ಜೈಮಿನಿಯೊಳಗೆ ಮಾಡಿ ವರ್ಣಿಸುವೆ 7 ಸಂದೇಹ ಮಾಡುತ್ತಿರಲು ಪೇಳಿದ ಫಲುಗುಣಗೆ 8 ಮುಂದೊತ್ತಿ ರಥವ ಬೆಂಬತ್ತಿ ನಿಂದಿರಿಸಿದ ಚಂದ್ರಹಾಸ 9 ವೈಷ್ಣವಕುಲ ಶಿರೋರನ್ನ ಪರಾಕ್ರಮ ದಿಟ್ಟರಿಗಿದು ನೀತವೆಂದು 10 ನ್ನೊಡೆಯಗೆ ಪೇಳಿದರಾಗ ಕಡುಚಿಂತೆಯಲಿ ಪಾರ್ಥನಿದ್ದ 11 ದಿನಕರ ಪ್ರತಿಬಿಂಬದಂತೆ ವನಜನಾಭ ಕೃಷ್ಣ ಶರಣೆನ್ನುತ ಸುರಮುನಿ ಇಳಿದಂಬರದಿಂದ12 ಉಟ್ಟಿಹ ಕರದಿ ವೇಣುವನು ಶ್ರೇಷ್ಠÀ ಬಂದನು ಇವರೆಡೆಗೆ 13 ಆನಂದದಿಂದ ಕೇಳಿದರು 14 ಎಲ್ಲ ವೃತ್ತಾಂತವನರುಹಿ ಬಲ್ಲಿದ ತುರಗವ ಕಟ್ಟಿದ ಧೀರ ಅಲ್ಲಾರು ಎನುತ ಕೇಳಿದರು15 ಪ್ರಮುಖರಿಲ್ಲ್ಯಾರು ಪೇಳೆನುಲು ಸಮಯವಲ್ಲವು ಪೇಳೆನಲು 16 ವ್ಯಾಸಾಂಬರೀಷ ವಿಭೀಷಣಕ್ರೂರ ಪರಾಶರ ಧ್ರುವ ಪ್ರಹಲ್ಲಾದ ಈಸುಮಂದಿ ಭಕ್ತರಿಗಧಿಕನು ಚಂದ್ರಹಾಸನೆಂಬಾ ಹರಿಭಕ್ತ17 ಹೇಳಬೇಕೆನುತ ಮುನೀಶನೆಂದೆಂಬ ಕೇರಾಳದೇಶದ ರಾಜ್ಯವನು ಪ್ರಧಾನಿಯನು 18 ಭೂತಮೂಲದಲಿ ಪುಟ್ಟಿದನು ತಾತ ಕಾಲವಾಗಿ ಪೋದ 19 ಸಾಯಲಾದಳು ರಾಜಪತ್ನಿ ಸಿರಿ ಪರರಾಯರು ಬಂದು ಕಟ್ಟಿದರು20 ಬಾಲನಿರಲು ಆ ಶಿಶುವೆತ್ತಿ ನಡೆದಳು 21 ಕುಂತಳಪುರಕಾಗಿ ಬಂದು ಆ ಗ್ರಾಮದಲ್ಲಿ 22 ಎರೆದು ಪೋಷಣೆಯ ಮಾಡುವಳು ಮರುಗುತಿರ್ದಳು ಮನದೊಳಗೆ 23 ಹಾಸುವ ವಸ್ತ್ರಗಳಿಲ್ಲ ಬೇಸತ್ತು ಅಳಲುವಳೊಮ್ಮೆ 24 ನೋಡಿ ಹಿಗ್ಗುವಳು ಆಲಂಬದಲ್ಲಿರುತಿಹಳು 25 ಕಂಗಳ ಕುಡಿನೋಟವೆಸೆಯೆ ಮಂಗಳಗಾತ್ರದ ಮುದ್ದುಬಾಲಕನೆಲ್ಲರಂಗಳ- ದೊಳಗಾಡುತಿಹನು 26 ಪರಪುಟ್ಟನಾದುದ ಕಂಡು ಮಡಿಯ ಪೊದಿಸುವರು 27 ಮಾಗಾಯಿ ಮುರವಿಟ್ಟು ಮನ್ನಿಸಿ ಕೆನೆಮೊಸ- ರೋಗರವನ್ನು ಉಣಿಸುವರು ರಾಗಗಾನದಲಿ ಪಾಡುವರು 28 ಎಣ್ಣೂರಿಗೆಯನು ಕೊಡಿಸುವರು ಕೇರಿ ಕೇರಿಗಳೊಳು ಕೊಡುವರೆಲ್ಲರ ಕಾರುಣ್ಯದ ಕಂದನಾಗಿ29 ತಮ್ಮಾಲಯದೊಳು ಕರೆದೊಯ್ದು ಮಾಲೆಯನವಗೆ ಹಾಕುವರು 30 ಮಾವಿನ ಫಲಗಳನು ಮದನನಯ್ಯನ ಕಿಂಕರಗೆ 31 ಸಾಲಿಗ್ರಾಮ ಶಿಲೆಯ ಅಷ್ಟು ಜನರಿಗೆ ತೋರಿಸಿದ 32 ಪುಣ್ಯೋದಯದಿ ಸಾಲಿಗ್ರಾಮ ಶಿಲೆಯು ಲಕ್ಷ್ಮಿನಾರಾಯಣ ಮೂರುತಿಯ 33 ಕೂಡಿದ ಗೆಳೆಯರ ಕೂಡೆ ದೌಡೆಯೊಳಿಟ್ಟು ಕೊಂಡಿಹನು 34 ಮಂಡೆಗಳನು ತಗ್ಗಿಸುವನು 35 ಬೆಚ್ಚುವನಪಹರಿಸುವರೆನುತ ಬಹು ಎಚ್ಚೆತ್ತು ಪಿಡಿದಾಡುವನು ಬಾಯೊಳಗಿಡುವ 36 ಮಂದಿರದಲಿ ವಿಪ್ರರಿಗೆ ಆ- ಬಂದರು ಬುಧಜನರೆಲ್ಲ 37 ಶ್ರೇಷ್ಠರೆಲ್ಲರ ಕುಳ್ಳಿರಿಸಿ 38 ಮಂತ್ರಾಕ್ಷತೆಯನು ಮಂತ್ರಿಗಿತ್ತು ಲಕ್ಷಣವನ್ನೆ ನೋಡಿದರು 39
--------------
ಹೆಳವನಕಟ್ಟೆ ಗಿರಿಯಮ್ಮ
ಚನ್ನಕೇಶವ ಇನ್ನೇನಿನ್ನೇನಿನ್ನು ಯನಗಿನ್ನೇನಿನ್ನೇನಿನ್ನು ಪ. ಚನ್ನಕೇಶವನಿವನನ್ನು ಹೃದಯದೊಳ್ ಚೆನ್ನಾಗಿ ನೆಲಸಿರಲಿನ್ನೇನ ಬೇಡುವೆ 1 ಭುವಿಜಾತೆಯೆನ್ನ ಮಾತೆ - ಭುವಿನಾಥನೆನ್ನ ತಾತ ಇವರೆನ್ನೊಳಿರುತಿರೆ ಭವಕ್ಲೇಶ ಪರಿದಿರೆ 2 ಅಂಡಜವಾಹನಾಖಂಡಲಾರ್ಚಿತನ ಪುಂಡರೀಕಾಕ್ಷನ ಕಂಡು ಕೊಂಡಾಡಿದೆ 3 ಧರೆಯೊಳಧಿಕ ಶೇಷಗಿರಿಯೊಳು ನೆಲಸಿರ್ಪ ವರದ ಶ್ರೀನರಹರಿ ವರದನೆನ್ನೊಳಿರೆ 4
--------------
ನಂಜನಗೂಡು ತಿರುಮಲಾಂಬಾ
ಚಂಪಕನಾಸೇ ವಿರೂಪಾಕ್ಷಜಾಯೆನೋಂಪಿಗೈವೆನಮ್ಮ | ಕರುಣದಿಂದ ಕಾಯೆ ಪ ಇಂಪು ಹರಿಯ ನಾಮ | ಸ್ಮರಣೆ ಕರುಣಿಸುತ್ತಮಾಂ ಪಾಹಿ ಗೌರೀ | ಅನ್ಯ ಬೇಡೆ ದೇವಿ ಅ.ಪ. ಅಂಗನಾಮಣೀ | ನುಡಿಗಭಿಮಾನೀಸಂಗೀತ ಲೋಲೆ | ವಿಸ್ತøತ ಸುಫಾಲೆಕಂಗಳು ವಿಶಾಲೆ | ಕೊರಳೊಳು ಸುಮಾಲೆಅಂಗಜನ ವೈರೀ | ಶಿವ ಮನೋಹರೀ 1 ಧವಳಗಂಗೆ ಪೊತ್ತ | ಶಿವನ ಸ್ಮರಿಸುತ್ತಸವನ ಮೂರು ಕಳೆವ | ಭುವಿ ಪಾಲಿಸುವಭುವಿಧರಭಿಧಶಯೈ | ಕವನ ನುಡಿಸಮ್ಮಶರ್ವಳೆ ನಿನ್ನನು | ಸರ್ವದ ಸ್ಮರಿಸುವೆ 2 ಮಾವಾರಿ ಎನಿಪ | ಗೋವುಗಳ ಪಾಲಗೋವ್ರಜ ಸುಪೋಷ | ಗೋವತ್ಸ ಧ್ವನಿಗೇಧಾವಿಪಂತೆ ಗುರು | ಗೋವಿಂದ ವಿಠಲನತೀವ್ರದುಪಾಸನ | ನೀ ಪಾಲಿಸಮ್ಮ
--------------
ಗುರುಗೋವಿಂದವಿಠಲರು
ಚರಣಕಮಲವನು ನೆನೆವೆ ನಾ ನಿನ್ನ ಪ. ಚರಣಕಮಲವನು ನೆನೆವೆ ನಾ ದುರಿತರಾಶಿಗಳ ಸಂಹರಿಪನ ಅ.ಪ. ಶ್ರುತಿಯನುದ್ಧರಿಸಿದುದಾರನ ಸಿಂಧು- ಮಥನಕೊದಗಿದ ಗಂಭೀರನ ಕ್ಷಿತಿಯನೆತ್ತಿದ ಬಲುಧೀರನ ಶಿಶು ಸ್ತುತಿಸೆ ಕಂಬದಿ ಬಂದ ವೀರನ 1 ಇಂದ್ರನ ಧಾರೆಯ ನಿಲಿಸಿದನ್ನ ತನ್ನ ತÀಂದೆಯ ಮಾತು ಸಲಿಸಿದನ್ನ ಕಂದರದಶನ ಸೋಲಿಸಿದನ್ನ ವ್ರಜ- ದಿಂದುಮುಖಿಯರ ಪಾಲಿಸಿದನ್ನ 2 ವಧುಗಳ ವ್ರತವ ಖಂಡಿಸಿದನ್ನ ದುಷ್ಟ ರುದಿಸಲು ತುದಿಯ ತುಂಡಿಸಿದನ್ನ ಇದಿರಾದ ಖಳರ ಖಂಡಿಸಿದನ್ನ ಹಯ ವದನಪೆಸರ ಕೊಂಡುದಿಸಿದನ್ನ 3
--------------
ವಾದಿರಾಜ
ಚರಣಕೆರಗುವೆ ಕೃಷ್ಣಾ ಪರಿಹರಿಸು ಜನ್ಮವನುಶರಣಜನಬಂಧು ನೀನು ಕೃಷ್ಣಾ ಪಕರುಣನಿಧಿಯಡಿಗೊಮ್ಮೆ ಶಿರವೆರಗಿದವರು ಭವಶರಧಿಯೊಳು ಬೀಳರೆಂದೂ ಕೃಷ್ಣಾ ಅ.ಪಹಲವು ದೇಹಂಗಳಲಿ ಮಾಡಿದಘ ವೃಂದಗಳುಬಲವಂದಡವಕೆ ಲಯವು ಕೃಷ್ಣಾಜಲಜಸಂಭವ ತೊಡಗಿ ಶಲಭಾಂಕದೊಳಗೊಂದನುಳಿಯದೇ ಪ್ರಾಣಿಗಳಲಿ ಕೃಷ್ಣಾತೊಳಲಿ ಬಂದೆನು ನೀನು ನಿರ್ಮಿಸಿದ ಪರಿಯಲ್ಲಿತೊಲಗಿಸಿನ್ನೀ ಭವವನು ಕೃಷ್ಣಾನಳಿನಾಕ್ಷ ನಿನ್ನ ಪ್ರಾದಕ್ಷಿಣವು ಬಳಿಕಾಯ್ತುನಿಲಿಸೆನ್ನ ನಿನ್ನಡಿಯೊಳು ಕೃಷ್ಣಾ 1ಜನನ ಜನನಗಳಲ್ಲಿ ಕಿವಿಮುಚ್ಚಿ ತಲೆವಾಗಿನಿನಗೆರಗಿದವನಾದೆನು ಕೃಷ್ಣಾಗಣನೆುಲ್ಲದ ಜನ್ಮಗಳಲಿನಿತು ನಮಿಸಿದರೆಗಣನೆಗೊಳದಿಪ್ಪುದೇನು ಕೃಷ್ಣಾಅಣು ಮಾತ್ರದವನಾಗಿ ಘನತರದವಿದ್ಯೆಯಲಿಮನಮುಳುಗಿ ಬಹು ನೊಂದೆನೋ ಕೃಷ್ಣಾಯೆಣಿಸದಪರಾಧ ಕೋಟಿಗಳ ಭವ ಭೀತನನುಅನುಪಮನೆ ಕೊಡು ಗತಿಯನು ಕೃಷ್ಣಾ 2ಮರೆಯೊಕ್ಕವರ ಕಾಯ್ವ ಬಿರಿದು ನಿನ್ನದು ದೇವಮರೆಯೊಕ್ಕೆನೆಂದೆನೀಗ ಕೃಷ್ಣಾಮರಳಿ ನುಡಿವರೆ ಗುಣಗಳಡಿಮೆಟ್ಟುತಿವೆ ಬೇಗಸ್ಮರಣೆದೊರಕೊಳ್ಳದಾಗ ಕೃಷ್ಣಾಸೆರೆಯವನ ಬಂಧುಗಳು ಬಿಡಿಸುವರು ಕಂಡಾಗಸೆರೆಯವನಿಗುಂಟೆ ಯೋಗ ಕೃಷ್ಣಾತಿರುಪತಿವಿಹಾರಿ ದುರಿತಾರಿ ವೆಂಕಟರಮಣಕರವಿಡಿಯೆ ಸದ್ಗತಿ ಸರಾಗ ಕೃಷ್ಣಾ 3ಓಂ ವಿದುರಾಕ್ರೂರಾಯ ನಮಃ
--------------
ತಿಮ್ಮಪ್ಪದಾಸರು
ಚರಣಯುಗವ ತೋರೋ ಪ ಶರಣರ ಪೊರೆಯುವ ಕರುಣಿಗಳರಸನೆ ನಿರುತವು ನಿನ್ನನೆ ನೆರೆನಂಬಿದೆ ಹರಿ ಅ.ಪ ದಿಕ್ಕು ನೀನೆ ಎಂದು ನಂಬಿದೆನಕ್ಕರಿಂದ ಬಂದು ತಕ್ಕುದೇನು ಘನ ರಕ್ಕಸವೈರಿಯೆ 1 ಇಷ್ಟದೇವನಾರೋ ಮನಸಾಭೀಷ್ಟವ ಕೊಡುಬಾರೋ ಕೃಷ್ಣಮೂರ್ತಿ ನೀಂ ದೃಷ್ಟಿಸು ನಮ್ಮನು2 ಕೇಣವ್ಯಾಕೋ ಹರಿಯೆ ಕಣ್ಣಲಿ ಕಾಣು ಬಾರೋ ದೊರೆಯೇ ಕಾಣೆನಿನಗೆ ಸರಿ ಜಾಣತನದಿ ಹರಿ 3 ವಾರಿಧಿಕೃತಶಯನ ವಿಕಸಿತ ವಾರಿಜದಳನಯನ ಕ್ಷೀರದೊಳದ್ದುನೀ ನೀರೊಳಗದ್ದು ಕಂ ಸಾರಿ ನಿನ್ನನೆ ಸಾರಿದೆ ನರಹರಿ 4 ಧರೆಯೊಳಧಿಕವಾದ ಶ್ರೀ ಪುಲಿಗಿರಿಯೊಳು ನೆಲೆಯಾದ ವರದವಿಠಲ ದೊರೆ ದಯಾನಿಧೆ 5
--------------
ವೆಂಕಟವರದಾರ್ಯರು