ಒಟ್ಟು 3268 ಕಡೆಗಳಲ್ಲಿ , 117 ದಾಸರು , 2234 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನೆಯ ನಿರ್ಮಲಗೈದು ಮೋದಬಡಿಸುವುದು ವನಜನಾಭನ ಭಕ್ತಿಯಂಬವಳ ಬಿರಿದು ಪ. ಬಾಯಿಮೊದಲಾದೈದು ಬಾಗಿಲುಗಳಲ್ಲಿ ವಾಯುವಂದ್ಯನ ಚರಿತ ವರ್ಣನಾದಿಗಳಾ ಛಾಯಗೊಂಬುವ ತೆರದಿ ಚಿತ್ರಕೃತ್ಯವನೂ ನಿತ್ಯ ನಲಿವುದನು 1 ಬುದ್ಧಿ ದೀಪವನು ಬಹು ಶುದ್ಧಕನು ತಾ ತದ್ದಾರಿ ಮನವ ಮೇಲುದ್ಧರಿಸಿಕೊಳುತಾ ಸಿದ್ಧಗಮ್ಯನ ಪದಕೆ ಸರಿಯಾಗಿಸುತಾ ಬದ್ಧ ಬೊಗಳುತಾ ಜನರ ಬಾಯಿ ಮುಚ್ಚಿಸುತಾ 2 ದೋಷ ದುಷ್ಕøತ ಕೆಸರ ಲೇಶವಿಡಗೊಡಳು ಆಶೆಯೆಂಬುವ ಬಲೆಯ ಕೊೈಸಿ ಬಿಸುಟುವಳು ಈಶ ಮಾನಿತ್ವಕವಕಾಶವೇನಿಡಳು ಕೇಶವನ ಕರತಂದು ಕಾವಲಿರಿಸುವಳು 3 ಇವಳಾಶ್ರಯವ ಪೊಂದಲ್ಯಾರಭಯವಿಲ್ಲ ನವರೂಪಳನ್ನುಸರಿಸಿ ನಲಿವ ಸಿರಿನಲ್ಲ ತವಕದಿಂದಲಿ ತಾನೆ ಓಡಿ ಬಂದೆಲ್ಲಾ ಯುವತಿಯರ ಕೂಡಿ ತಾ ಪಾಡುವರೆ ಬಲ್ಲಾ 4 ಕಂಜನಾಭನ ಕರುಣ ಪಂಜರದೊಳಿರಿಸಿ ಸಂಜೀವನೌಷಧವ ಸುಲಭದೋಳ್ ಕುಡಿಸಿ ಅಂಜಿಕೆಯ ಬಿಡಿಸಿ ರಿಪು ಪುಂಜವನ ಕಡಿಸಿ ಮಂಜುಳಾತ್ಮಕ ಮಾಧವನ ಮುಂದೆ ಕರಿಸಿ 5 ದಾನ ವ್ರತಾದಿಗಳನೇನ ಮಾಡಿದರು ಶ್ರೀನಿವಾಸನ ಕರುಣ ಸಾಧ್ಯವಾಗಿರದು ನೀನೆ ರಕ್ಷಕನೆಂಬ ಧ್ಯಾನದಲಿ ಮೆರದು ಜ್ಞಾನ ಭಕ್ತಿಗಳಿಂದ ನಲಿವುದೇ ಬಿರುದು 6 ಯುಕ್ತಿಯಿಂದಲಿ ನೋಡಲೆಲ್ಲ ಶಾಸ್ತ್ರದಲಿ ಭಕ್ತಿಯೋಗವ ಪೇಳ್ವವೇಕಮತ್ಯದಲಿ ಭುಕ್ತಿ ಮುಕ್ತಿಯ ಶೇಷ ಭೂಧರೇಶನಲಾ ಸಕ್ತಿಯಿರೆ ಸಕಲಾರ್ಥವೀವನುತ್ಸವದಿ 7
--------------
ತುಪಾಕಿ ವೆಂಕಟರಮಣಾಚಾರ್ಯ
ಮನೆಯಲಿ ಸುಖವಾಸಿ ಪ ಕೈಯೊಳರ್ಥವು ಮೊದಲಿಲ್ಲ ಹಾಗಾದರು ಮೈಯೊಳಗೇ ನೇನು ಗುಣ ಕಾಂಬುದಿಲ್ಲ ಧೈರ್ಯಲಕ್ಷ್ಮಿಯ ತುದಿಗಿಲ್ಲ ಪರರ ಕೈಯ ಬೇಡಲು ಕಾಣೆ ಕೊಡುವವರಿಲ್ಲ 1 ಹೊಳೆ ಕೆರೆ ಬಾವಿಯಿದ್ದಲ್ಲಿ ಭಾಗೀರಥಿ ನೆಲೆಸಿ ಕೊಂಡಿಹಳಿಲ್ಲಿ ಮುಳುಗಿ ಮಿಂದರೆ ಭಕ್ತಿಯಲ್ಲಿ ಕಾಶಿ ಯೊಳಗೆ ಗಂಗೆಯ ಮಿಂದ ಫಲ ಬಹುದಿಲ್ಲಿ 2 ಜ್ಞಾನವಿಲ್ಲದೆ ಮೋಕ್ಷವಿಲ್ಲ ಮುಕ್ತಿ ಮಾನಿನಿಯನು ಕೂಡಿ ಸುಖಿಸಲು ಬಲ್ಲ ಜ್ಞಾನಿಗಳಿಗೆ ತೋರ್ಪುದೆಲ್ಲ ಹರಿ ಸೂನು ಕೋಣೆಯ ಲಕ್ಷ್ಮೀರಮಣ ತಾನೆಲ್ಲ 3
--------------
ಕವಿ ಪರಮದೇವದಾಸರು
ಮನ್ನಿಸಿ ಸಲಹಯ್ಯ ಎನ್ನ ತಪ್ಪು ಒಪ್ಪಿಕೊ ಮಹರಾಯ ಪ ಮನ್ನಿಸಿ ಸಲಹಯ್ಯ ಪನ್ನಂಗಶಯನನೆ ನಿನ್ನ ಧ್ಯಾನಾಮೃತವನ್ನು ಕರುಣದಿತ್ತು ಅ.ಪ ನಾನಾಜನುಮ ಸುತ್ತಿ ಮತ್ತೆ ಹೀನ ಜನುಮವೆತ್ತಿ ಜ್ಞಾನವಿನಿತಿಲ್ಲದೆ ನಾನಾಪಾಪಗೈದೆ ದೀನಜನರ ಬಂಧು ನೀನೆ ಕ್ಷಮಿಸು ತಂದೆ 1 ಮರವೆ ದೇಹವೊದ್ದು ಸಂಸಾರ ಮರವೆಯೊಳಗೆ ಬಿದ್ದು ಶರಣ ಸತ್ಪುರುಷರ ನೆರವಿನಿತರಿಯದೆ ಮರುಳನಾದೆ ಹರಿ ಮುರಹರ ಕ್ಷಮಿಸಯ್ಯ 2 ಬರಬಾರದು ಬಂದೆ ಬಲು ವಿಧ ದುರಿತದೊಳು ಬೆಂದೆ ಕರುಣದಿ ಕ್ಷಮೆಮಾಡಿ ಪೊರೆಯೊ ಶ್ರೀರಾಮನೆ 3
--------------
ರಾಮದಾಸರು
ಮನ್ನಿಸೈ ಹರಿ ಪನ್ನಗೇಂದ್ರಶಯನ ಪ ಘನ್ನವಾದ ಪಾಪವನ್ನು ಮಾಡಿ ಜಗದಿ ನಿನ್ನ ನಾಮ ಮರದೆ ಸನ್ನುತಾಂಗ ಸಲಹೊಅ.ಪ ಜ್ಞಾನ ಶೂನ್ಯವಾಗಿ ನಾನಾ ವಿಷಯಗಳಲಿ ನಾನು ನನ್ನದೆಂಬ ಹೀನ ಮಮತೆಯಿಂದ ದಾನವಾರಿ ನಿನ್ನ ಧ್ಯಾನಿಸದಲೆ ಕಾಲ ಸಾನುರಾಗದಿಂದ ಶ್ವಾನನಂತೆ ಕಳೆದೆ 1 ರೋಗಹರನೆ ಭವದ ರೋಗವೈದ್ಯನೆಂದು ಬಾಗಿ ನಿನ್ನನುತಿಪೆ ನಾಗಾರಿವಾಹನ ಯೋಗಿವಂದ್ಯನೆ ಚನ್ನಾಗಿ ನಿನ್ನ ಸ್ತುತಿಪ ಭಾಗವತರ ಸಂಗ ದೇವ ಪಾಲಿಸಯ್ಯ 2 ರಕ್ಷಿಸೆಮ್ಮ ಬಿಡದೆ ಲಕ್ಷ್ಮಿರಮಣದೇವ ಕುಕ್ಷಿಯೊಳಗೆ ಜಗವ ರಕ್ಷಿಸುತ್ತ ಪೊರೆವ ಸೂಕ್ಷ್ಮ ಸ್ಥೂಲದೊಳು ಪ್ರತ್ಯಕ್ಷನಾದ ಹರಿ ಉ- ಪೇಕ್ಷಿಸದಲೆ ಕಾಯೋ ಪಕ್ಷಿವಾಹನ ದೇವ 3 ಕಡಲೊಡೆಯನೆ ದೇವ ಮೃಡನ ಸಖವೆ ಕಾಯೊ ಅಡಿಗಡಿಗೆ ಸ್ತುತಿಸಿ ಬಿಡದೆ ಮುಗಿವೆ ಕಯ್ಯ ಎಡಬಲದಲಿ ಶ್ರೀ ಭೂಮಡದೇರಿಂದ ಮೆರೆವ ಉಡುಪ ಮುಖನೆ ಕಾಯೋ ಕಡಲೊಡೆಯನೆ ರಂಗ 4 ಕಮಲಪತ್ರದಳಾಕ್ಷ ಕಮಲಜೋದ್ಭವೆ ಪ್ರಿಯ ಕಮಲಸಂಭವ ಜನಕ ಕಮನೀಯ ಸ್ವರೂಪ ಕಮಲನೇತ್ರೆರ ರಸಕಮಲಪುಷ್ಪಮಾಲಾ ಹೃ- ತ್ಕಮಲದೋಳು ಶೋಭಿಪ ಕಮಲನಾಭ ವಿಠ್ಠಲ 5
--------------
ನಿಡಗುರುಕಿ ಜೀವೂಬಾಯಿ
ಮನ್ಮಥಪಿತ ವಿಠಲ ನೀನಿವಳ ಸಲಹೊ ಹರಿಯೇಮನ್ಮನೋರಥ ಭಿನ್ನಪವ ಸಲಿಸೋ ಪ ಜನ್ಮಜನ್ಮಾಂತರದ ಪುಣ್ಯ ಸಂಚಯ ಫಲಿಸಿನಿನ್ನ ದಾಸತ್ವದಲಿ ಕಾಂಕ್ಷೆ ಬಹುಯಿರಿಸೆನನ್ನೆಯಿಂದಲಿ ಪೂಜೆ ಪರಿಕರಂಗಳ ಕೊಂಡುಸ್ವಪ್ನ ಸೂಚಕದಂತೆ ನಿನ್ನರ್ಚನೆಯ ಕಾತುರಳ 1 ತರತಮದಿ ಸುಜ್ಞಾನ ಹರಿಗುರೂ ಸದ್ಭಕ್ತಿಪರಮ ವೈರಾಗ್ಯವನು ವಿಷಯಾದಿಗಳಲೀಪರತತ್ವ ಹರಿಯೆಂಬ ವರಮತಿಯ ನೀನಿತ್ತುಗುರುಮಧ್ವ ಮತದಲ್ಲಿ ಪರಮದೀಕ್ಷೆಯನೀಯೋ 2 ಪತಿ ಸುತರು ಹಿತರಲ್ಲಿ | ಗತಿದಾತ ಗುರುವಿನೊಳುಕ್ಷಿತಿರಮಣ ತವವ್ಯಾಪ್ತಿ ಮತಿಯ ಪಾಲಿಸುತಗತಿ ದೋರೊ ಸನ್ಮುಕುತಿ ಪಥವನೀ ಸಲಿಸುತ್ತಹುತವಹಕ್ಷಾಂತರ್ಗತ ಮನದಿ ನೆಲಸುತಲೀ 3 ಸಂಜೀವ ಪಿತನೇ |ನಂಜು ಸಂಸ್ಕøತಿ ಬಂಧ ಮೋಚಕೇಚ್ಛೆಯ ಮಾಡಿಅಂಜಿಕೆಯನೆ ಕಳೆಯೊ | ಕಂಜಾಕ್ಷ ಹರಿಯೇ 4 ಪಾವಮಾನಿಯ ಪ್ರೀಯ ಭಾವುಕಳ ಹೃದ್ಗತನೆನೀವೊಲಿದು ತವಸ್ಮರಣೆ ಸರ್ವದಾ ಸರ್ವತ್ರಈವುದಿವಳಿಗೆ ಎನ್ನ ಬಿನ್ನಪವ ಸಲ್ಲಿಪುದುಗೋವಿದಾಂಪತಿಯೆ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಮರಣ ಕಾಲವ ತಿಳಿಸೋ ಮಧುಸೂದನಾ ಪ ಶರಣು ಬಂದವರ ಭಯಹರಣಾ ಅ.ಪ. ಸ್ನಾನಮಾಡಲಿಬೇಕು ಮೌನದಿಂದಿರಬೇಕು ಹರಿಜ್ಞಾನಪೂರ್ವಕ ಹರಿಯ ಧ್ಯಾನಬೇಕುನಾನಾ ವಿಷಯದ ಚಿಂತೆ ಮಾನಸದಿ ಬಿಡಬೇಕುದಾನ ಧರ್ಮಗಳನು ಮಾನಸದಿ ಮಾಡಬೇಕು 1 ಸುತ್ತಲು ಜನರುಗಳ ಹತ್ತಿರ ಕೂಡುತಲಿನಿತ್ಯ ಭಾಗವತಾದಿ ಶಾಸ್ತ್ರಗಳನುಮೃತ್ಯು ಕಾಲದಿ ಪರಿಸೆ ಶ್ರೋತ್ರದಿಂ ಕೇಳಿ ಯಮ-ಭೃತ್ಯರು ಓಡಲಿಬೇಕು ಎತ್ತಿ ಕಾಲುಗಳು 2 ಮಕ್ಕಳು ಮನೆಗಳಲಿ ಚಿಕ್ಕ ಯುವತಿಗಳಲ್ಲಿಮಿಕ್ಕಾದ ಪಶು ಕೃಷಿ ರೊಕ್ಕಗಳಲ್ಲಿಪೊಕ್ಕಿ ಮನಸಿಲಿ ವಿಷಯ ಸಿಕ್ಕಿ ತೊಡಕೆನೊ ಎನ್ನವಕ್ರವಾ ತೋರಿಸುತ ಮೆಲ್ಲ ಕೈ ಬಿಡಿಸಿನ್ನು 3 ಕಮಲ ಮಂದಹಾಸವ ತೋರೋಸಿಂಧು ಉದ್ಧರನೆ ವೃಂದಾವನೀಯೋ 4 ಸಿಂಧುವಿನ ತಟದಿ ಗೋವೃಂದದೊಳಗೆ ಚಂದದಲಿ ಕೊಳಲೂದೋ ಸುಂದರ ಮುಖ ಕಮಲಒಂದೇ ಮನದಲಿ ನೋಡಾನಂದದಲಿ ಮಾಡೋಇಂದಿರೇಶ ನಿನ್ನ ಮುಂದೆ ನಿಂತಿರುವಾನಾರಂದ ಮುನಿ ಗುರುವರ ಮಂದಸ್ಮøತಿ ನೀಡೋ 5
--------------
ಇಂದಿರೇಶರು
ಮರವೆ ಮುಸುಕಿತುಋಣದ ಬಾಧೆ ಹತ್ತಿತು ರೋಗವಡಸಿತುಜನರ ಪ್ರೀತಿ ತೊಲಗಿತು ಜಾಣ್ಮೆ ತಾನು ಸಡಿಲಿತು... ದಿಯ ವಾಸ'ಲ್ಲವಾಯ್ತು ... ಮರೆ ದೂರವಾಯ್ತು 1ನಿನ್ನ ಸನ್ನಿಧಿಯ 'ುೀರಿ ಪುಣ್ಯವ ಬೇರೆ ಬಯಸಿದೆನೆನಿನ್ನ ಮೂರ್ತಿಯನುಳಿದು ಅನ್ಯರ ನೆನೆದೆರಗಿದೆನೆನಿನ್ನ ಸೇವೆಗಧಿಕವೆಂದನ್ಯದೇವರ ಸೇ'ಸಿಕೊಂಡೆನೆ 2ಸನ್ನಿಕರ್ಷವನಾದರತೆಯನ್ನು ಕೊಡುವದೆದೆಂದೆನೆ ಅರಿವೆನ್ನೊಳುದಿಸಿತೆ ದೂರನಾದೆನೇತಕೆಇನ್ನುದಾಸೀನಗೈದರೆ ಎನ್ನಿಂದಾಹುದೇನು ಬೇರೆಮನ್ನಿಸಿ ನೀನೊಂದಿರೆ ಸೈರಿಸಲಾರೆಂ 3ಪತಿತಪಾವನನು ನೀನು ಪರಮಕರುಣಾನಿಧಿ ನೀನು ಪತಿಕರಿಸಿ ಬಿಡುವದೇ ಪಾಪಿಯೆ ನಾನು ಸತತ ನಿನ್ನ ನೆನೆಯುವೆನು ಸೇವೆಗೆ ಕಾತರಿಸಿಹೆನು ಅತಿಶಯವ ತೋರಿಸು ಆ ನನ್ನನಿಧಿಯೆ ನೋಡಿನ್ನು 4ಕರೆದು ಮೂಢರಜ್ಞತೆಯ ಪರಿದು 'ಜ್ಞಾನ ಸುಧೆಯಎರೆದು ಕಾಯೆ ಚಿಕ್ಕನಾಗಪುರದೊಳು ನೀನೆಗುರುವರ್ಯ ವಾಸುದೇವಾರ್ಯ ಚರಣಕೆರಗಿದೆನಯ್ಯಾನಿರತ ಮಂಗಳಾರತಿಯಸಿರಿಯ ತೋರಿಸೊ ದಮ್ಮಯ್ಯಾ 5
--------------
ವೆಂಕಟದಾಸರು
ಮರವೆ ಮರವೆ ಮಾಡಿತೋಅಂತರಂಗದಲಿ ಭೋರೆಂದು ತುಂಬಿಅಂತು ಅಂತೆನಲು ಕೂಡದು ಪ್ರಣವನಾದ ಪ ಹೊಟ್ಟೆಗುಣ್ಣುವುದನೆ ಮರೆಸಿತು ಈ ಪ್ರಣವನಾದಮುಟ್ಟು ಚಟ್ಟನೆ ಮರೆಸಿತುಕೆಟ್ಟಕೇಡನೇನ ಹೇಳಲಿಉಟ್ಟ ಬಟ್ಟೆಯ ಅರಿವೇ ಇಲ್ಲ 1 ಆಸೆಯೆಂಬುದ ಮರೆಸಿತು ಈ ಪ್ರಣವನಾದದ್ವೇಷವೆಂಬುದು ತೊರೆಸಿತುನಾಶವಾಯಿತು ಜಪತಪವೆಲ್ಲಮೋಸವೆನಗಿಂತು ಮಾಡಿತು2 ಧ್ಯಾನವೆಂಬುದು ಮರೆಸಿತು ಈ ಪ್ರಣವನಾದಓಂಕಾರವೆಂಬುದು ಕಲಿಸಿತುಜ್ಞಾನಮೂರುತಿ ಚಿದಾನಂದತಾನೆ ತಾನೆ ತಾನೆ ಎಂಬ 3
--------------
ಚಿದಾನಂದ ಅವಧೂತರು
ಮರೆತು ಇರುವರೆ ಸರ್ವಜ್ಞನೆನಿಸಿ ಪ ಮರೆತು ಇರುವರೇನೋ ಕರುಣಾ ವಾರಿಧಿ ನರಹರಿಯೆ ಬಾಲನ ದುರುಳತನಗಳೆಣಿಸಿದೊಡೆ ನೀ ಕರೆದು ಮುಂದಕೆ ಪೊರೆವರ್ಯಾರು 1 ಕಲ್ಲು ಕೊಟ್ಟ ಬಿಲ್ಲಿಲಿಟ್ಟ ಕ್ಷುಲ್ಲಕ ಮಾತಾಡಿ ಬಿಟ್ಟ ಕಳ್ಳ ಸುಳ್ಳ ಜಾರನೆಂದ ಗೊಲ್ಲತಿಯರನೆಲ್ಲ ಪೊರೆದಿ 2 ತರಳ ನಿನ್ನ ಪೂಜಿಸಲಾರದೆ ಕರವ ಶಿರದಿ ಇರಿಸೆ ಕೂತು ಕರದಿ ಗುಂಜವಿರಿಸಿ ಸಿರಿಯ ಮರೆತು ಇರುವವರಂತೆ 3 ವರ ಸುಮೌನೀಗಣಕೆ ಬಲ ನಾ ನರಿಯಿರೆಂದು ಬೀರಿ ಚರಣ ಚರಣದರ ಮನೆಯೊಳಿರಿಸಿ ಪೊರೆವಿ ತರಳನ ನೀ ಜರಿವರೇನೊ 4 ಧರಣಿಯೊಳಗೆ ಇರುವ ಕ್ಷೇತ್ರದಿ ವರ ಸುಕ್ಷೇತ್ರವಿದೆಂದು ಅರುಹಿ ಬರುವ ಸಜ್ಜನರನು ಪೊರೆವಿ ಭಾರ ನಾನೊಬ್ಬನೇ ಪೇಳೋ 5 ಶ್ರೀ ನರಹರಿಯೆ ಇನಿತು ಜ್ಞಾನ ಶೂನ್ಯನ ಮಾಡಿ ನಿನ್ನ ಕಾಣಿಸುವರೊಡನೆ ಮಾಧವ 6
--------------
ಪ್ರದ್ಯುಮ್ನತೀರ್ಥರು
ಮರೆಯದಿರುವರೋ ನಿನ್ನ ಸ್ಮರಣೆಯಾ ನೀನು ಪ ಗರಿಯಾ ಚರಿಯಾ ಮರಿಯಾ ನೆರಿಯಾ | ಸೇರಿ ಕ್ರೂರ ಮಾರಿದಾರಿ ಜಾರಿ ದೂರಸಾರದೇ ಅ.ಪ ಕಡಲಶಯನೆಚ್ಚರಾ ಕಳೆದು ಹೊರಿಯಲುದರಾ | ಬಿಡದೋಲೈಸಿ ಘನಮದರಾ | ಕಡಿಯಾ ಕಿಡಿಯಾ ನುಡಿಯಾ ಪಡಿಯಾ | ಬೇಡಿ ಕಾಡಿ ಓಡಿ ಆಡ ಬ್ಯಾಡ ಗಾಢ ಮೂಢನೇ 1 ತರಳ ಪ್ರಾಯ ಮುಪ್ಪಿಂದೆ ತೀರಲಾಯುಷ್ಯ ಬರುದೇ | ಯರಗುವಾಯಮ ತಾ ನಿಲದೇ | ತ್ವರಿಯಾ ಧರಿಯಾ ಕುರಯಾ ಮರಿಯಾ | ವೈರಿ ಮೀರಿ ಹಾರಿ ತೂರಿ ಹೊರುವಂದದಿ 2 ಮಿನಗು ಬೆಳಗ ಘನ ಮಹಿಪತಿ ಸುತ ಪ್ರಿಯನಾ | ಅನುಭದಿಸದಿಹುದೇನಾ | ಅನುವೇ ಮನವೇ ಗುಣವೇ ದನವೇ | ಜ್ಞಾನ ಹೀನ ಮಾನ ದೀನ ಆನನದಲೀ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮರೆಯದೆ ಶ್ರೀಹರಿಯಮನದಲಿ ಸ್ಮರಿಸೊ ಗುರುಹಿರಿಯರ ಅನುಗ್ರಹವನು ಗಳಿಸೊ ಪ ಇಂದಿರೆ ರಮಣನ ಅನುದಿನ ಮಂದರ ಧರನಾ 1 ಬಗೆ ಬಗೆಯಲಿ ಶ್ರೀ ಭಗವಂತನ ಪಾದ ಯುಗವನು ನೆರೆನಂಬಿಯಿ-----ಎಂದೆಂದೂ 2 ಪರಿಪರಿ ನವವಿಧ ಭಕ್ತಿಯು ಸಾಧಿಸಿ ಪರ ಬ್ರಹ್ಮ ಪರಮಾನಂದನ 3 ಶರಧಿಶಯನನ ಶಾಂತ ನಿಧಾನನ ಅರವಿಂದ ನಯನನ ಹರಿಗೋವಿಂದನಾ 4 ದಿನಕರ ಕೋಟಿತೇಜ ವಿಲಾಸನ ಮಾನವ ರಕ್ಷಕನಾ 5 ಚಿತ್ತವು ಚಲಿಸದೆ ಚಿನ್ಮಯ ರೂಪನ ನಿತ್ಯಾನಂದನ ನಿಗಮಗೋಚರನಾ 6 ಭಾವಜನಯ್ಯನ ----- ಭಾವನಕೊಲಿದ ಜನ ಹೃದಯದಿ ಕುಣಿದಾಡುವ ನಾ7 ಜ್ಞಾನಾನಂದನ ಜ್ಞಾನಿಗಳರಸನ ಧೇನು ಪಾಲಕ ಜಗದೀಶನ ಮುಕುಂದನ 8 ಮಾಧವ ಮುನಿ ಗೋವಂದ್ಯನ ಶರಣರ ಪೊರೆವಾ ಬಿರುದಿರುವ ದೇವನಾ 9 ಇನಕುಲ ಭೂಷಣನ ವಿಶ್ವಲೋಕೇಶನ ದನುಜಾಂತಕ ಶ್ರೀ ದಾಮೋದರನಾ 10 ಪಾಂಡವ ಪಕ್ಷಕನ ಪರಮಾಣು ರೂಪ ಬ್ರಹ್ಮಾಂಡನಾಯಕ ಕೋದಂಡಧರನ ಇಂದೂ 11 ವಾರಿಧಿ ಬಂಧನ ವೈದೇಹಿ ತಂದನ ಮೀರಿದ ರಕ್ಕಸರ ಮದಿಸಿದವನಾ 12 ಪನ್ನಗ ಶಯನ `ಹೆನ್ನ ವಿಠ್ಠಲನ ' ಉನ್ನತ ಚರಿತನ ಇನ್ನು ಹರುಷದಲಿ 13
--------------
ಹೆನ್ನೆರಂಗದಾಸರು
ಮರೆಯೊಕ್ಕೆ ನಿನ್ನನು ಮರುಗಿ ರಕ್ಷಿಸಬೇಕು ಶಂಕರೇಶಾಗಿರಿಜೆಯಾಣ್ಮನೆದೇವ ಕೆರೆಗೋಡಿಪುರದೀಶ ಶಂಕರೇಶಾ ಪಮರಳಿ ಮರಳಿ ಗರ್ಭಕುರುಳಿ ನಾನೊಂದೆನುಪರಿಪರಿ ಕರ್ಮದ ಫಲಗಳನುಣಲಾಗಿದುರಿತ ತೊಲಗದೀವರೆಗು ನಾನೇಗೈವೆಕರುಣಾರಸ ನಿನಗೇತಕುದಿಸದಿದೆ 1ಸೂತ್ರಧಾರಕ ನೀನು ಸಕಲಜೀವರಿಗೆಲ್ಲಪಾತ್ರ ಕೃಪೆಗೆ ನಾನು ಪ್ರೇಮದಿಂ ನೋಡಿನ್ನುಗೋತ್ರಾರಾತಿ ವಂದಿತ ಪಾದಕಮಲನೆಸ್ತೋತ್ರವ ಮಾಳ್ಪುದ ಮೊದಲೆ ನಾನರಿಯೆನು2ಮರತಿ ಪುಟ್ಟದು ನಾನಾವಿಧ ಭವಸುಖದಲಿವರೆತರಿತೆನೆನಿಸಿದ ಕರ್ಮದ ಬಲುಹಿನಿಂಬೆರೆತು ಬಯಲ ಮೋಹದಲಿ ಮೋಸಹೋದೆನುಕುರಿತು ಕಾಮ್ಯವ ಭಜಿಸಿದೆನೊ ನಿನ್ನನು3ಉರಿಗಣ್ಣ ದೃಷ್ಟಿಯಿಂ ದುರಿತವ ದಹಿಸಿನ್ನುವರಶಶಿನೇತ್ರದಿಂ ನೋಡಿ ತಾಪವ ಪರಿಹರಿದಶ್ವನೇತ್ರದಿ ಜ್ಞಾನವನರುಹಿಸುಶರಣಾಗತನಪರಾಧವನೆಣಿಸದೆ 4 ಪರಾಕು ಶಂಕರೇಶಾ5
--------------
ತಿಮ್ಮಪ್ಪದಾಸರು
ಮರೆವುದುಚಿತವೆ ರಂಗ ದಾರಿ ತೋರಿ ಪ ಯೆನ್ನ ಕಾವರನ್ಯರಿಲ್ಲ ನೀಲಾಂಗ ಅ.ಪ ಧರೆಯ ವೈಭವ ನಿತ್ಯವೆಂದು ಪರರ ಸಿರಿಯ ಹರಣಗೈದು ನಿರುತ ದುರಿತಕಾರ್ಯಗೈದು ಪರಮ ಪಾಪಿಯಾದೆನೆಂದು 1 ಕರುಣಶರಧಿ ನೀನೆಯೆಂದು ಸ್ಮರಿಸುವವರ ಪೊರೆವನೆಂದು ಶರಣಜನರು ಬಳಿಗೆ ಬಂದು ಕರೆಯದಿಹರೆ ದೀನಬಂಧು 2 ಅಂಗದಿಂದ ಗೈದ ಪಾಪ ಕಂಗಳಿಂದ ಗೈದ ಪಾಪ ಭಂಗಗೈವರಿಲ್ಲ ಭೂಪ ಮಾಂಗಿರೀಶ ಜ್ಞಾನದೀಪ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮರೆವುದೆಂತು ನಿನ್ನ ಪರಮ ದಯವ ಕರುಣಾವಾರಿಧೇ ಪ ಅರಿಯದ ಅಜ್ಞಾನಿ ಎನ್ನ ಹಿರಿಯನೆನಿಸಿ ಪೊರೆದ ಬಗೆಯ ಅ.ಪ ಜ್ಞಾನಿಗೆ ಲಭ್ಯನೆಂದು ನಿನ್ನ ಮಾನತತಿಯು ಪೊಗಳುತಿರಲು ಜ್ಞಾನವೀಯದಿರಲು ನಿನ್ನ ಜ್ಞಾನಿಜನಗಳೇನೆನುವರೋ 1 ರಾಗ ದ್ವೇಷದಿಂದ ಶಿರವ ಬಾಗದಿದ್ದ ಎನ್ನ ದುರಿತ ನೀಗಿ ದಿವ್ಯಯೋಗವೀಯಲು ತ್ಯಾಗ ನಿನ್ನದು ಯೋಗವೆನ್ನದು 2 ಮಡುವಿನಲ್ಲಿ ಬಿದ್ದು ಸುಳಿಯ ಹೊಡೆತದಿಂದ ಮುಳುಗುತಿರಲು ದಡಕೆ ತಂದು ರಕ್ಷಿಸಿದ ಎನ್ನೊಡೆಯ ವರ ಪ್ರಸನ್ನ ಮೂರುತೆ 3
--------------
ವಿದ್ಯಾಪ್ರಸನ್ನತೀರ್ಥರು
ಮಹಾಮಾಯೆ ಗೌರಿ ಮಾಹೇಶ್ವರಿಪ. ವiಹಾದೇವಮನೋಹಾರಿ ಶಂಕರಿ ಮಹಾಪಾಪಧ್ವಂಸಕಾರಿ ಶ್ರೀಕರಿ ಮಾಂ ಪಾಹಿ ಪಾಹಿ ಶೌರಿಸೋದರಿಅ.ಪ. ಕಾಮಕೋಟಿಸುಂದರಿ ಶುಭಕರಿ ಕರಿಕುಂಭಪಯೋಧರಿ ಕಾಮಿತಪ್ರದೆ ಕಂಬುಕಂಧರಿ ಹೇಮಾಲಂಕಾರಿ ಹೈಮವತಿ ಕುವರಿ1 ಭಾನುಕೋಟಿಭಾಸ್ಕರಿ ಭವಹರಿ ಭಜಕಾಮೃತಲಹರಿ ಸ್ಥಾಣುವಲ್ಲಭೆ ದನುಜಸಂಹಾರಿ ಜ್ಞಾನಾಗೋಚರಿ ಜಗತ್ರಯೇಶ್ವರಿ2 ಪೂರ್ವದೇವಭೀಕರಿ ಭ್ರಾಮರಿ ಪುಳಿನಾಖ್ಯ ಪುರೇಶ್ವರಿ ಸರ್ವಲಕ್ಷ್ಮೀನಾರಾಯಣೇಶ್ವರಿ ಸರ್ವಸಹಚರಿ ಶಶಾಂಕಶೇಖರಿ3
--------------
ತುಪಾಕಿ ವೆಂಕಟರಮಣಾಚಾರ್ಯ